Connect with us

ದಿನದ ಸುದ್ದಿ

BTV ನಿರೂಪಕಿಯಿಂದ ‘ಶಿಳ್ಳೇಕ್ಯಾತ’ ಪದಬಳಕೆಗೆ ಶಿಳ್ಳೆಕ್ಯಾತ ರಾಜ್ಯ ನಾಯಕರ ವಿರೋಧ

Published

on

ಸುದ್ದಿದಿನ ಡೆಸ್ಕ್ : ಕನ್ನಡ ಸುದ್ದಿ ವಾಹಿನಿ ‘ಬಿಟಿವಿ ನಿರೂಪಕಿ’ಯಿಂದ ‘ಶಿಳ್ಳೇಕ್ಯಾತ’ ಪದಬಳಕೆಗೆ ಶಿಳ್ಳೆಕ್ಯಾತ ರಾಜ್ಯ ನಾಯಕರು ಭಾರೀ ವಿರೋಧ ವ್ಯಕ್ತ ಪಡಿಸಿದ್ದಾರೆ.

‘ಒಬ್ಬ ತೆಳ್ಳಗಿರುವ, ನಕಲಿ ಪೊಲೀಸ್ ಒಬ್ಬನ ಬಗ್ಗೆ ನೀಡುವ ಸುದ್ದಿಯನ್ನು ಭಿತ್ತರಿಸುವಾಗ BTVಯ ಆ ಆಂಕರ್, “ನೋಡೋಕೆ ಶಿಳ್ಳೆಕ್ಯಾತನಂತಿದ್ರೂ ಥೇಟ್ ಎಸ್ ಐ ವೇಷ ಹಾಕಿಕೊಂಡಿರುವ ಮಹಾಶಯನ ಹೆಸರು…” ಹೀಗೆ ಬರೆದಿರುವ ಸುದ್ದಿಯನ್ನು ಸುದ್ದಿ ನಿರೂಪಕಿ ವಾಚಿಸುತ್ತಾರೆ. “ಹೀಗೆ ಕಳ್ಳರಿಗೆ, ಸಣ್ಣಗೆ ಇರುವವರಿಗೆ, ವಿಕೃತವಾಗಿರುವವರಿಗೆ ಉದಾಹರಣೆಗಳನ್ನು ಕೊಟ್ಟುಕೊಂಡು ಮಾನವೀಯತೆಯಿಂದ ಬದುಕುತ್ತಿರುವ, ಬಹುದೊಡ್ಡ ಇತಿಹಾಸವಿರುವ ತೊಗಲುಗೊಂಬೆ ಆಟದ ನಮ್ಮ ಜನಾಂಗದ ಹೆಸರನ್ನು ಈ ರೀತಿ ಅವಹೇಳನ ಕಾರಿಯಾಗಿ ಬಳಸಿಕೊಳ್ಳುತ್ತಿರುವುದು ಬೇಸರ ತಂದಿದೆ” ಎಂದು ‘ಕರ್ನಾಟಕ ರಾಜ್ಯ ಶಿಳ್ಳೆಕ್ಯಾತ ಜನಾಂಗದ ಅಭಿವೃದ್ಧಿ ವೇದಿಕೆಯ,ರಾಜ್ಯಾಧ್ಯಕ್ಷರಾದ ಡಿ.ಎಚ್.ಮಂಜುನಾಥ್ ಅವರು ‘ಸುದ್ದಿದಿನ’ಕ್ಕೆ ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ಕಾನೂನಾತ್ಮಕ ಹೋರಾಟ ಮಾಡುವುದಾಗಿಯೂ ಹೇಳಿದ್ದಾರೆ.

“ಶಿಳ್ಳೆಕ್ಯಾತ ಸಮುದಾಯದ ಬಗ್ಗೆ ಹಿಂದಿನಿಂದಲೂ ಈ ರೀತಿಯಾದಂದತಹ ಅವಮಾನ ನಡೆಯುತ್ತಲೇ ಇದೆ. ಸುದ್ದಿ ವಾಹಿನಿಗಳಲ್ಲಿ ಕಾರ್ಯನಿರ್ವಹಿಸುವವರು ಶಿಕ್ಷಿತರಿದ್ದಾರೆ, ಅವರೂ ಕೂಡ ಪದಗಳನ್ನು ಬಳಸುವಾಗ ಎಚ್ಚರಿಕೆಯಿಂದ ಬಳಸ ಬೇಕಾಗುತ್ತದೆ. ಹಲವು ಸಿನೆಮಾಗಳಲ್ಲಿಯೂ ಶಿಳ್ಳೆಕ್ಯಾತ ಸಮುದಾಯವನ್ನು ಅವಮಾನ ಮಾಡುವಂತಹ ಹಲವು ದೃಶ್ಯಗಳಿವೆ. ಇನ್ನಾದರೂ ಮಾಧ್ಯಮಗಳು ಸಮುದಾಯದ ಹೆಸರುಗಳನ್ನು ಅವಹೇಳನಕಾರಿಯಾಗಿ ಬಳಸಿಕೊಳ್ಳುವುದನ್ನು ಬಿಡಬೇಕು. ಆರೋಗ್ಯಕರ ಸಮಾಜ ನಿರ್ಮಾಣಕ್ಕಾಗಿ ಕಾರ್ಯನಿವರ್ವಗಿಸ ಬೇಕು” ಎಂದು ಹೇಳಿರುವ ‘ಕರ್ನಾಟಕ ರಾಜ್ಯ ಶಿಳ್ಳೆಕ್ಯಾತ ಜನಾಂಗದ ಅಭಿವೃದ್ಧಿ ವೇದಿಕೆಯ,ಉಪಾಧ್ಯಕ್ಷರಾದ ಸುಭಾಷ್ ಚೌಹಾಣ್ ಈ ಸುದ್ದಿಗೆ ಸಂಬಂಧಿಸಿದಂತೆ ರಾಜ್ಯಾದ್ಯಕ್ಷರೊಂದಿಗೆ ಚರ್ಚಿಸಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಬಿತ್ತರಗೊಂಡ ಸುದ್ದಿಯನ್ನು ಡಿಲೀಟ್ ಮಾಡಿರುವ ಬಿಟಿವಿ. (ಕೆಳಗಿನ ಲಿಂಕ್)

https://m.facebook.com/story.php?story_fbid=2402302569800278&id=798350103528874

ಒಟ್ಟಾರೆ ಒಂದು ಸಮುದಾಯ ಹೆಸರನ್ನು ಅವಹೇಳನಕಾರಿಯಾಗಿ ಬಳಸಿಕೊಳ್ಳುವಾಗ ಮಾಧ್ಯಮಗಳು ಎಚ್ಚರ ವಹಿಸಿಬೇಕಿದೆ.

ಈ‌ ಸುದ್ದಿಗೆ ಸಂಬಂಧಿಸಿದಂತೆ ಪತ್ರಕರ್ತ ಹರ್ಷ ಕುಮಾರ್ ಕುಗ್ವೆ ಅವರು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಖಂಡಿಸಿ ಹೀಗೆ ಬರೆದಿದ್ದಾರೆ.

https://m.facebook.com/story.php?story_fbid=10213177497064147&id=1596920893

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

Published

on

ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ ಯುವತಿಯ ಅಂತ್ಯಸಂಸ್ಕಾರವನ್ನು ಆಕೆಯ ಇಚ್ಛೆಯಂತೆ ಯುವಕನ ಸಮಾಧಿಯ ಪಕ್ಕದಲ್ಲೇ ನೆರವೇರಿಸಲಾಗಿದೆ.

ನಡೆದಿದ್ದೇನು?

ಕಿದೂರು ಕುಂಟಂಗೇರಡ್ಕದ ಪ್ರಫುಲ್ಲ (26) ಮತ್ತು ತಮಿಳುನಾಡು ನಿವಾಸಿಯಾದ ಬ್ಯಾಂಕ್ ನೌಕರ ಮಣಿ ಎಂಬವರಿಗೆ ನಾಲ್ಕು ತಿಂಗಳ ಹಿಂದೆ ಅದ್ಧೂರಿಯಾಗಿ ಮದುವೆ ನಿಶ್ಚಿತಾರ್ಥ ನಡೆದಿತ್ತು. ಇನ್ನೇನು ದಾಂಪತ್ಯ ಜೀವನಕ್ಕೆ ಕಾಲಿಡಬೇಕು ಎನ್ನುವಷ್ಟರಲ್ಲಿ, ಒಂದು ತಿಂಗಳ ಹಿಂದೆ ಸಂಭವಿಸಿದ ಬೈಕ್ ಅಪಘಾತದಲ್ಲಿ ಮಣಿ ಮೃತಪಟ್ಟಿದ್ದರು.

ಡೆತ್ ನೋಟ್‌ನಲ್ಲಿತ್ತು ಕೊನೆಯ ಆಸೆ

ತನ್ನ ಭಾವಿ ಪತಿಯ ಅಗಲಿಕೆಯಿಂದ ತೀವ್ರವಾಗಿ ನೊಂದಿದ್ದ ಪ್ರಫುಲ್ಲ, ಕಳೆದ ಭಾನುವಾರ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದರು. ಸಾವಿಗೂ ಮುನ್ನ ಆಕೆ ಬರೆದಿದ್ದ ಡೆತ್ ನೋಟ್ ಎಲ್ಲರ ಕಣ್ಣಾಲಿಗಳನ್ನು ಒದ್ದೆ ಮಾಡಿದೆ. “ನನ್ನ ಮೃತದೇಹವನ್ನು ಮಣಿಯ ಸಮಾಧಿಯ ಸಮೀಪದಲ್ಲೇ ಅಂತ್ಯಸಂಸ್ಕಾರ ಮಾಡಬೇಕು” ಎಂದು ಆಕೆ ತನ್ನ ಕೊನೆಯ ಆಸೆಯನ್ನು ಬರೆದಿಟ್ಟಿದ್ದರು.

ತಮಿಳುನಾಡಿನಲ್ಲಿ ಅಂತ್ಯಕ್ರಿಯೆ

ಯುವತಿಯ ಆಸೆಯಂತೆ ಉಭಯ ಕುಟುಂಬದವರು ಮಾತುಕತೆ ನಡೆಸಿದರು. ಅದರಂತೆ ನಿನ್ನೆ ಕಾಸರಗೋಡಿನಿಂದ ಪ್ರಫುಲ್ಲರ ಮೃತದೇಹವನ್ನು ತಮಿಳುನಾಡಿನ ತಿರುನಲ್ವೇಲಿ ಜಿಲ್ಲೆಯ ವಳ್ಳಿಯೂರು ಎಂಬಲ್ಲಿಗೆ ಕೊಂಡೊಯ್ಯಲಾಯಿತು. ಅಲ್ಲಿ ಮಣಿಯ ಸಮಾಧಿಯ ಪಕ್ಕದಲ್ಲೇ ಪ್ರಫುಲ್ಲರ ಅಂತ್ಯಸಂಸ್ಕಾರವನ್ನು ನೆರವೇರಿಸುವ ಮೂಲಕ ಪ್ರೇಮಿಗಳಿಬ್ಬರನ್ನು ಸಾವಿನಲ್ಲೂ ಒಂದಾಗಿಸಲಾಯಿತು.

ಅಂತ್ಯಸಂಸ್ಕಾರದ ವೇಳೆ ಎರಡೂ ಕುಟುಂಬದ ಸದಸ್ಯರು ಉಪಸ್ಥಿತರಿದ್ದು, ಮರುಗುವ ಪ್ರೇಮಕಥೆಗೆ ಕಂಬನಿಯ ವಿದಾಯ ಹೇಳಿದರು. ಈ ವಿಡಿಯೋ ಮತ್ತು ಸುದ್ದಿ ಈಗ ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ವೈರಲ್ ಆಗುತ್ತಿದ್ದು, ನೆಟ್ಟಿಗರು ಈ ಜೋಡಿಯ ಆತ್ಮಕ್ಕೆ ಶಾಂತಿ ಕೋರುತ್ತಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್‌; ಪ್ರವೇಶಾತಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ 2026 ರ ಜುಲೈ 01ಕ್ಕೆ ಅನ್ವಯಿಸುವಂತೆ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 23 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ 25 ವರ್ಷ ಮೀರಿರಬಾರದು. ಒಟ್ಟು 39 ಅಭ್ಯರ್ಥಿಗಳನ್ನು (ಪುರುಷ ಮತ್ತು ಮಹಿಳಾ) ಆಯ್ಕೆ ಮಾಡಲಾಗುವುದು. ಆಯ್ಕೆಯಾದ ಪ್ರತಿಯೊಬ್ಬ ವಿದ್ಯಾರ್ಥಿಗೆ ಪ್ರತಿ ತಿಂಗಳು ರೂ. 2,500/- ಗಳ ಶಿಷ್ಯವೇತನ ನೀಡಲಾಗುವುದು., ಎಸ್.ಎಸ್.ಎಲ್.ಸಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಇಂಗ್ಲಿಷ್ ಅನ್ನು ಒಂದು ವಿಷಯವಾಗಿ ಅಭ್ಯಸಿಸಿ ಉತ್ತೀರ್ಣರಾಗಿರಬೇಕು.

ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಡಿಪ್ಲೋಮಾ ಕೋರ್ಸ್‌ಗೆ ನೇರ ಪ್ರವೇಶಕ್ಕೆ https://khtigadag.ac.in/AdmissionForm.pdf ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) https://khtigadag.ac.in/Lateralentryadmissionform.pdf ಈ ಲಿಂಕ್‌ಗಳ ಮೂಲಕ ಡೌನ್‌ಲೋಡ್ ಮಾಡಿಕೊಳ್ಳಬಹುದು. ಭರ್ತಿ ಮಾಡಿದ ಅರ್ಜಿಗಳನ್ನು ಅಗತ್ಯ ದಾಖಲಾತಿಗಳೊಂದಿಗೆ ಮೇ 30 ರೊಳಗೆ ಪ್ರಾಂಶುಪಾಲರು, ಕರ್ನಾಟಕ ಕೈಮಗ್ಗ ತಂತ್ರಜ್ಞಾನ ಸಂಸ್ಥೆ, ನರಸಾಪುರ, ಗದಗ-ಬೆಟಗೇರಿ-582102 ಇವರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಹಾಗೂ ಅರ್ಜಿಗಳಿಗಾಗಿ ಉಪ ನಿರ್ದೇಶಕರು, ಕೈಮಗ್ಗ ಮತ್ತು ಜವಳಿ ಇಲಾಖೆ, ಜಿಲ್ಲಾ ಪಂಚಾಯತ್, ಕಾಲೇಜು ರಸ್ತೆ, ನಿಟ್ಟುವಳ್ಳಿ, ದಾವಣಗೆರೆ ಅಥವಾ ದೂರವಾಣಿ ಸಂಖ್ಯೆ: 08192-262362 ಸಂಪರ್ಕಿಸುವಂತೆ ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

ದಿನದ ಸುದ್ದಿ

ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

Published

on

ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ.

ದಾವಣಗೆರೆಯ ಭೂಮಿಕಾ ನಗರದ ನಿವಾಸಿಯಾಗಿರುವ 52 ವರ್ಷದ ಸರ್ಕಾರಿ ಕಾಲೇಜಿನ ಉಪನ್ಯಾಸಕ ಹಣ ಕಳೆದುಕೊಂಡಿದ್ದಾರೆ.

ಉಪನ್ಯಾಸಕರು ಮೊದಲಿಗೆ ಟೆಲಿಗ್ರಾಂ ಮೂಲಕ ಲಿಂಕ್ ಕ್ಲಿಕ್ ಮಾಡಿದ್ದಾರೆ. ಅಲ್ಲಿ ವಂಚಕರು ಹೇಳಿದಂತೆ ಹಲವು ಲಿಂಕ್​ಗಳನ್ನು ಕ್ಲಿಕ್ ಮಾಡುತ್ತಾ ಹೋಗಿದ್ದು, ಹಂತಹಂತವಾಗಿ ಹಣ ಕಳೆದುಕೊಂಡಿದ್ದಾರೆ.

ಲಾಭದ ನಿರೀಕ್ಷೆಯಲ್ಲಿದ್ದ ಉಪನ್ಯಾಸಕರಿಗೆ ಲಾಭ ಹೋಗಲಿ, ಅಸಲೂ ಬಾರದ ಕಾರಣ ಅನುಮಾನಗೊಂಡು ತಾನು ಹಣ ಕಳೆದುಕೊಂಡಿರುವುದು ದೃಢಪಟ್ಟಿದೆ.‌ ನಂತರ ಸೈಬರ್ ಠಾಣೆಗೆ ತೆರಳಿ ಪ್ರಕರಣ ದಾಖಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ9 hours ago

ಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

ಸುದ್ದಿದಿನ,ಕುಂಬಳೆ: ಪ್ರೀತಿ ಎನ್ನುವುದು ಸಾವಿನ ನಂತರವೂ ಶಾಶ್ವತ ಎಂಬುದಕ್ಕೆ ಕೇರಳದ ಕಾಸರಗೋಡಿನಲ್ಲಿ ನಡೆದ ಈ ಘಟನೆ ಸಾಕ್ಷಿಯಾಗಿದೆ. ನಿಶ್ಚಿತಾರ್ಥವಾಗಿದ್ದ ಯುವಕ ಮೃತಪಟ್ಟ ಬೆನ್ನಲ್ಲೇ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದ...

ದಿನದ ಸುದ್ದಿ18 hours ago

ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನ ಡಿಪ್ಲೋಮಾ ಕೋರ್ಸ್‌; ಪ್ರವೇಶಾತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: 2026-27ನೇ ಶೈಕ್ಷಣಿಕ ಸಾಲಿಗೆ ಕೈಮಗ್ಗ ಮತ್ತು ಜವಳಿ ತಂತ್ರಜ್ಞಾನದಲ್ಲಿನ ಮೂರು ವರ್ಷಗಳ ಡಿಪ್ಲೋಮಾ (ಡಿ.ಹೆಚ್.ಟಿ.ಟಿ) ಹಾಗೂ ಎರಡನೇ ವರ್ಷದ ನೇರ ಪ್ರವೇಶಕ್ಕೆ (Lateral Entry) ಅರ್ಹ...

ದಿನದ ಸುದ್ದಿ1 day ago

ದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ

ಸುದ್ದಿದಿನ,ದಾವಣಗೆರೆ: ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಮಾಡಿದರೆ ಹೆಚ್ಚು ಲಾಭ ಬರುತ್ತದೆ ಎಂಬುದಾಗಿ ಉಪನ್ಯಾಸಕರೊಬ್ಬರಿಗೆ ಆಮಿಷ ತೋರಿಸಿದ ದುಷ್ಕರ್ಮಿಗಳು 14 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಜಿಲ್ಲೆಯಲ್ಲಿ...

ಅಂಕಣ1 day ago

ಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಮುನ್ನೋಟ: ಜೀವನಕ್ರಮವಾಗಿ ಪ್ರಜಾಪ್ರಭುತ್ವ ಪ್ರಜಾಪ್ರಭುತ್ವವು ಕೇವಲ ಐದು ವರ್ಷಕ್ಕೊಮ್ಮೆ ನಡೆಯುವ ಚುನಾವಣಾ ಪ್ರಕ್ರಿಯೆಯಲ್ಲ; ಅದು ಸಮಾಜದ ಪ್ರತಿಯೊಬ್ಬ ವ್ಯಕ್ತಿಯ...

ದಿನದ ಸುದ್ದಿ2 days ago

ಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ

ಸುದ್ದಿದಿನ,ದಾವಣಗೆರೆ:ಎ.ವಿ.ಕೆ. ಕಾಲೇಜು ಹಾಗೂ ಹಳೆ ಬಿಸ್ಲೇರಿ ಸಂಯುಕ್ತ ಆಶ್ರಯದಲ್ಲಿ ನಡೆಯುತ್ತಿರುವ ಎನ್.ಎಸ್.ಎಸ್. ವಿಶೇಷ ಶಿಬಿರದ ನಾಲ್ಕನೇ ದಿನದ ಕಾರ್ಯಕ್ರಮವು ಯಶಸ್ವಿಯಾಗಿ ಜರುಗಿತು. ಕಾರ್ಯಕ್ರಮದಲ್ಲಿ ಅಗ್ನಿಶಾಮಕ ಅಧಿಕಾರಿಗಳಾದ ಉಪ್ಪಾರ...

ದಿನದ ಸುದ್ದಿ2 days ago

ಬದುಕಿನಲ್ಲಿ ಪ್ರಾಮಾಣಿಕತೆ ಮತ್ತು ಪರಿಶ್ರಮವಿದ್ದರೆ ಯಶಸ್ಸು ನಿಶ್ಚಿತ

ಸುದ್ದಿದಿನ,ದಾವಣಗೆರೆ:ಎ.ವಿ.ಕೆ ಮಹಿಳಾ ಕಾಲೇಜು ಹಾಗೂ ಹಳೆಬಿಸಲೇರಿ ಗ್ರಾಮದ ಸಂಯುಕ್ತ ಆಶ್ರಯದಲ್ಲಿ 2025-26 ನೇ ಸಾಲಿನ ವಾರ್ಷಿಕ ವಿಶೇಷ ಶಿಬಿರವನ್ನು ಹಳೆಬಿಸಲೇರಿ ಗ್ರಾಮದಲ್ಲಿ ಆಯೋಜಿಸಲಾದ 5ನೇ ದಿನದ ಸಂಜೆ...

ದಿನದ ಸುದ್ದಿ2 days ago

ದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ

ಸುದ್ದಿದಿನ,ದಾವಣಗೆರೆ:ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು, ದಾವಣಗೆರೆ ವತಿಯಿಂದ 2025–26ನೇ ಸಾಲಿನ ಪಠ್ಯಪೂರಕ ಹಾಗೂ ಪಠ್ಯೇತರ ಚಟುವಟಿಕೆಗಳ ಸಮಾರೋಪ ಸಮಾರಂಭವು ದಿನಾಂಕ 09-05-2026ರಂದು ಬೆಳಿಗ್ಗೆ 11.30 ಗಂಟೆಗೆ...

ದಿನದ ಸುದ್ದಿ2 days ago

2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ಕಾಲೇಜು ಶಿಕ್ಷಣ ಇಲಾಖೆಯ 19 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಐ.ಡಿ.ಪಿ ಅನುದಾನದ ಅಡಿಯಲ್ಲಿ ನಡೆದಿರುವ ರೂ. 2,59,89,250/-ಗಳ ಖರೀದಿ ವ್ಯವಹಾರದಲ್ಲಿ ನಡೆದಿರುವ ಅವ್ಯವಹಾರವನ್ನು ತನಿಖೆಗೆ ಒಳಪಡಿಸಿ,...

ದಿನದ ಸುದ್ದಿ6 days ago

ದಾವಣಗೆರೆ | ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ಬೆಂಕಿ ರಹಿತ ಕುಕಿಂಗ್ ಕಾರ್ಯಕ್ರಮ

ಸುದ್ದಿದಿನ,ದಾವಣಗೆರೆ: ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗಾಗಿ “ಕುಕಿಂಗ್ ವಿಥೌಟ್ ಫೈರ್” ಎಂಬ ಬೆಂಕಿ ರಹಿತ ಆಹಾರ ತಯಾರಿ ಕಾರ್ಯಕ್ರಮವನ್ನು ಇಂದು ಆಯೋಜಿಸಲಾಗಿತ್ತು. ಕಾರ್ಯಕ್ರಮದಲ್ಲಿ...

ದಿನದ ಸುದ್ದಿ6 days ago

ಮಕ್ಕಳ ಆಧಾರ್ ಬಯೋಮೆಟ್ರಿಕ್ ನವೀಕರಣಕ್ಕೆ ಉಚಿತ ಅವಕಾಶ : ಕೂಡಲೇ ಆಧಾರ್ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ

ಸುದ್ದಿದಿನ,ದಾವಣಗೆರೆ: ಜಿಲ್ಲೆಯ 5 ರಿಂದ 7 ವರ್ಷ ಹಾಗೂ 15 ರಿಂದ 17 ವರ್ಷದ ವಯೋಮಿತಿಯ ಮಕ್ಕಳಿಗೆ ಕಡ್ಡಾಯ ಬಯೋಮೆಟ್ರಿಕ್ ಅಪ್‌ಡೇಟ್ (Mandatory Biometric Update) ಮಾಡಿಸಲು...

Trending