Connect with us

ದಿನದ ಸುದ್ದಿ

ಮಂಗನಕಾಯಿಲೆ : ಮಂಕುಬೂದಿ ಎರಚುವ ತಂತ್ರ ಯಾರ ರಕ್ಷಣೆಗಾಗಿ?

Published

on

ಮಂಗನಕಾಯಿಲೆ ಇದೀಗ ಜಿಲ್ಲೆಯಾದ್ಯಂತ ವ್ಯಾಪಿಸಿರುವುದು ಅಧಿಕೃತವಾಗಿದೆ.ಈ ಹಿಂದೆ ಯಾವುದೋ ಒಂದು ಗ್ರಾಮ, ಪಂಚಾಯ್ತಿ ವ್ಯಾಪ್ತಿಯಲ್ಲಿ ರೋಗ ಕಾಣಿಸಿಕೊಳ್ಳುತ್ತಲೇ ಆರೋಗ್ಯ, ಅರಣ್ಯ ಮುಂತಾದ ಸಂಬಂಧಪಟ್ಟ ಇಲಾಖೆ ಸಿಬ್ಬಂದಿಗೆ ಸೂಕ್ತ ಮಾರ್ಗದರ್ಶನ ನೀಡಿ ಅಗತ್ಯ ಮುಂಜಾಗ್ರತಾ ಕ್ರಮಗಳೊಂದಿಗೆ ರೋಗ ತಡೆಯಲಾಗುತ್ತಿತ್ತು. ಅಂತಹ ಹೊಣೆಗಾರಿಕೆಯನ್ನು ಜಿಲ್ಲಾಡಳಿತ ಸಕಾಲದಲ್ಲಿ ನಿರ್ವಹಿಸುವ ಮೂಲಕ ಜೀವಹಾನಿ ತಡೆಯಲಾಗುತ್ತಿತ್ತು.

ಆದರೆ ಈ ಬಾರಿ ಕಳೆದ ಸರಿಸುಮಾರು ಮೂರು ತಿಂಗಳಿನಿಂದ ರೋಗ ತಡೆರಹಿತವಾಗಿ ಹಬ್ಬುತ್ತಲೇ ಇದೆ. ಇತ್ತೀಚಿನ ವರ್ಷಗಳಲ್ಲಿ ಕಂಡರಿಯದ ಪ್ರಮಾಣದಲ್ಲಿ ಸಾವು ಸಂಭವಿಸಿವೆ. ಈಗಲೂ ದಿನಂಪ್ರತಿ ಹತ್ತಾರು ಜನರು ಗಂಭೀರ ಸ್ಥಿತಿಯಲ್ಲಿ ಮಣಿಪಾಲ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ನೂರಾರು ಮಂದಿ ವಿವಿಧ ಸ್ಥಳೀಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಅಂದರೆ ರೋಗ ತಡೆ ಮತ್ತು ಮುಂಜಾಗ್ರತಾ ಕ್ರಮಗಳಲ್ಲಿ ಗಂಭೀರ ಲೋಪಗಳಾಗಿವೆ. ಆರಂಭದಲ್ಲಿ ಎಲ್ಲಾ ಇಲಾಖೆಗಳೂ ರೋಗವನ್ನು ನಿರ್ಲಕ್ಷಿಸಿದ್ದರೂ ಆರು ಸಾವುಗಳ ಬಳಿಕ ಸಾರ್ವಜನಿಕ ಒತ್ತಡದ ಹಿನ್ನೆಲೆಯಲ್ಲಿ ಸ್ಥಳೀಯ ಪಂಚಾಯ್ತಿಗಳ ಕಾಳಜಿಯ ಕಾರಣದಿಂದ ಇದೀಗ ಸ್ಥಳೀಯ ಸಿಬ್ಬಂದಿ ಸಾಕಷ್ಟು ಸಕ್ರಿಯರಾಗಿ ಕೆಲಸ ಮಾಡುತ್ತಿದ್ದಾರೆ.

ಆದರೆ ಆರಂಭದಲ್ಲಿ ಪದ್ಮಾ ಕೋಮರಾಜ್(ಮೊದಲ ಪ್ರಕರಣ) ಸೇರಿದಂತೆ ಶ್ವೇತಾ ಜೈನ್ ಅವರ ಪ್ರಕರಣಗಳಲ್ಲಿ ಸಂಪೂರ್ಣ ಲೋಪ ಅಗಿರುವುದು ತಾಲೂಕು ಆಸ್ಪತ್ರೆ ಮತ್ತು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗಳಲ್ಲಿ. ಆಸ್ಪತ್ರೆಗಳಲ್ಲಿ ಅದು ಮಂಗನಕಾಯಿಲೆ ಎಂಬುದು ದೃಢಪಟ್ಟ ಬಳಿಕ ಕೂಡ ಅಗತ್ಯ ಚಿಕಿತ್ಸೆ ಮತ್ತು ಕಾಳಜಿ ತೋರುವಲ್ಲಿ ಗಂಭೀರ ಲೋಪವಾಗಿ ಅಮೂಲ್ಯ ಜೀವಗಳು ಬಲಿಯಾದವು.

ಪತ್ರಿಕಾ ವರದಿ

ಈ ಆಸ್ಪತ್ರೆಗಳಲ್ಲಿ; ಸಾಗರ ಸಾರ್ವಜನಿಕ ಆಸ್ಪತ್ರೆ ಆಡಳಿತ ಹೊಣೆಗಾರಿಕೆ ಅಲ್ಲಿನ ವೈದ್ಯಾಧಿಕಾರಿ ಡಾ ಬೋಸ್ಲೆ ಅವರದ್ದಾದರೆ, ಮೆಗ್ಗಾನ್ ಆಸ್ಪತ್ರೆಯ ಹೊಣೆಗಾರಿಕೆ ನೇರವಾಗಿ ಅದರ ನಿರ್ದೇಶಕ ಡಾ ಲೇಪಾಕ್ಷಿ ಅವರದ್ದು. ಅಂತಿಮವಾಗಿ ಈ ಎರಡೂ ಆಸ್ಪತ್ರೆಗಳು ಜಿಲ್ಲಾಧಿಕಾರಿಗಳ ಅಧಿಕಾರ ವ್ಯಾಪ್ತಿಯಲ್ಲೇ ಇವೆ.

ಅಲ್ಲದೆ ಶ್ವೇತಾ ಜೈನ್ ಸಾವು ಸಂಭವಿಸುವವರೆಗೂ, ಅರಳಗೋಡು ಜನ ಆಕೆಯ ಶವ ಇಟ್ಟುಕೊಂಡು ಪ್ರತಿಭಟನೆ ನಡೆಸುವವರೆಗೂ ಸ್ವತಃ ಜಿಲ್ಲಾಧಿಕಾರಿಗಳೇ, ಮಂಗನಕಾಯಿಲೆ ಚಿಕಿತ್ಸೆಗೆ ಖಾಸಗಿ ಆಸ್ಪತ್ರೆಗಳಿಗೆ ಹೋಗದಂತೆ ಮತ್ತು ಮೆಗ್ಗಾನ್ ಸೇರಿದಂತೆ ಸರ್ಕಾರಿ ಅಸ್ಪತ್ರೆಗಳಲ್ಲೇ ದಾಖಲಾಗುವಂತೆ ಬಹಿರಂಗ ಸೂಚನೆ ನೀಡಿದ್ದರು.

ಹಾಗಾದರೆ, ನಿರ್ಲಕ್ಷ್ಯ, ಹೊಣೆಗೇಡಿತನದಿಂದಾಗಿ ಸಂಭವಿಸಿರುವ ಸರಣಿ ಸಾವುಗಳ ಹೊಣೆಗಾರಿಕೆ ಹೊರಬೇಕಾದವರು ಸಾಗರದ ತಾಲೂಕು, ಮೆಗ್ಗಾನ್ ಆಸ್ಪತ್ರೆಗಳ ಆಡಳಿತಾಧಿಕಾರಿಗಳು ಮತ್ತು ಅಂತಿಮವಾಗಿ ಜಿಲ್ಲಾಧಿಕಾರಿಗಳೇ ಅಲ್ಲವಾ?

ಆದರೆ ಆರೋಗ್ಯ ಇಲಾಖೆ ಡಿಎಚ್ಒ ಮತ್ತು ಕೆಎಫ್ಡಿ ವಿಭಾಗದ ವೈದ್ಯರ ತಲೆದಂಡ ನೀಡಿ ತಿಪ್ಪೆಸಾರಿಸುವ ಪ್ರಯತ್ನ ಮಾಡಿದೆ. ನಿಜವಾದ ತಪ್ಪಿತಸ್ಥರನ್ನು ರಕ್ಷಿಸುವ ಮತ್ತು ಅದೇ ಹೊತ್ತಿಗೆ ಜನರಕಣ್ಣಿಗೆ ಮಂಕುಬೂದಿ ಎರಚಿ ಜನರನ್ನು ಮಂಗಮಾಡುವ ಪ್ರಯತ್ನಗಳನ್ನು ಅರ್ಥಮಾಡಿಕೊಳ್ಳಬೇಕಿದೆ.

ಶಶಿ ಸಂಪಳ್ಳಿ

(ಇವರ ಗಮನಕ್ಕೆ : ಕೆಎಫ್ ಡಿ ಜನಜಾಗೃತಿ ಒಕ್ಕೂಟ,Chief Minister of Karnataka chief secretary of Karnataka, NHRCB, Bjp Shivamogga KPCCPresident, Kpcc Dinesh Gundu Rao)

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ವಸತಿ ಯೋಜನೆಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ.

ಈ ಯೋಜನೆಯಡಿ ಸೌಲಭ್ಯ ಒದಗಿಸಲು ನಿಗಧಿತ ಅರ್ಜಿ ನಮೂನೆಯಲ್ಲಿ ಅವಶ್ಯಕ ದಾಖಲಾತಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು ಗ್ರೇಡ್-1ರವರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಚನ್ನಗಿರಿ ಕಚೇರಿಯನ್ನು ಸಂಪರ್ಕಿಸಬಹುದೆಂದು ಇಲಾಖೆಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ ಕೃಷಿ ಮತ್ತು ರೈತರ ಕಲ್ಯಾಣ ಇಲಾಖೆಯ ಕೇಂದ್ರ ಪುರಷ್ಕೃತ ಕೃಷಿಯೋನ್ನತಿ ಯೋಜನೆಯಡಿ ‘’ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು’’ (National Mission on Edible Oil – Oilseeds (NMEO-OS) ಯೋಜನೆಯನ್ನು ಅನುಷ್ಠಾನ ಮಾಡಲಾಗುತ್ತಿದೆ.

ಎಣ್ಣೆಕಾಳು ಬೆಳೆಗಾರರು ಮತ್ತು ಮೌಲ್ಯ ಸರಪಳಿ ಪಾಲುದಾರರನ್ನು (Value Chain Partners) ಸಂಸ್ಕರಣಾದಾರರೊಂದಿಗೆ ಸಂಪರ್ಕಿಸಲು ಮತ್ತು ಅವರಿಗೆ ಮಾರುಕಟ್ಟೆ ಕಲ್ಪಿಸುವುದರೊಂದಿಗೆ ಉತ್ತಮ ಲಾಭವನ್ನು ಪಡೆಯುವಂತೆ ಖಾತ್ರಿಪಡಿಸುವುದು ಯೋಜನೆಯ ಗುರಿಗಳಲ್ಲಿ ಒಂದಾಗಿದೆ.

ಸದರಿ ಯೋಜನೆಯಡಿ ಸ್ಥಳೀಯವಾಗಿ ಉದ್ಯೋಗಾವಕಾಶ ಕಲ್ಪಿಸಲು ಹಾಗೂ ಶುದ್ಧ ಖಾದ್ಯ ತೈಲ ಉಪಯೋಗಿಸಲು ಅನುಕೂಲವಾಗುವಂತೆ ಪ್ರೇರೇಪಿಸಲು ಸೂಕ್ತವಾಗುವಂತೆ ಹಾಗೂ ಮೌಲ್ಯ ಸರಪಳಿಯನ್ನು ಉತ್ತೇಜಿಸಲು, ಸಂಸ್ಕರಣಾ ಘಟಕಗಳಿಗೆ ಅವಶ್ಯವಿರುವ ಯಂತ್ರೋಪಕರಣಗಳನ್ನು ಪಡೆಯಲು/ಪ್ರಾಥಮಿಕ ಮತ್ತು ದ್ವಿತೀಯ ಎಣ್ಣೆಕಾಳು ಕೊಯ್ಲೋತ್ತರ ಮೂಲ ಸೌಕರ್ಯ ಸೌಲಭ್ಯ ಪಡೆಯಲು ಗರಿಷ್ಠ ಯೋಜನಾ ವರದಿಯ ಶೇ.33 ರಷ್ಟು ಅಥವಾ ರೂ.9.99 ಲಕ್ಷಕ್ಕೆ ಮೀರದಂತೆ ಅನುದಾನವನ್ನು ನೀಡಲಾಗುವುದು. ಸದರಿ ಯೋಜನೆಯ ಘಟಕದಡಿ ಕಟ್ಟಡ ವೆಚ್ಚ ಮತ್ತು ಭೂಮಿ ಬಾಡಿಗೆಯನ್ನು ಪರಿಗಣಿಸಲಾಗುವುದಿಲ್ಲ.

ಸದರಿ ಯೋಜನೆಯಡಿ ಸೌಲಭ್ಯ ಪಡೆಯಲು ಸರ್ಕಾರ / ಸರ್ಕಾರೇತರ ಸಂಸ್ಥೆಗಳು, FPOs ಗಳು ಜುಲೈ 04 ರೊಳಗಾಗಿ ಅರ್ಜಿ ಸಲ್ಲಿಸಬಹುದಾಗಿರುತ್ತದೆ. ಯೋಜನೆಯ ಮಾರ್ಗಸೂಚಿಯನ್ವಯ ಜಿಲ್ಲಾ ಕಾರ್ಯಕಾರಿ ಸಮಿತಿಯಲ್ಲಿ ಫಲಾನುಭವಿ ಆಯ್ಕೆ ನಡೆಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಛೇರಿ, ಉಪ ಕೃಷಿ ನಿರ್ದೇಶಕರ ಕಛೇರಿ ಅಥವಾ ಸಹಾಯಕ ಕೃಷಿ ನಿರ್ದೇಶಕರ ಕಛೇರಿಗಳನ್ನು ಸಂಪರ್ಕಿಸುವಂತೆ ಜಂಟಿ ಕೃಷಿ ನಿರ್ದೇಶಕರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading
Advertisement

Title

ದಿನದ ಸುದ್ದಿ1 day ago

ವಸತಿ ಯೋಜನೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ. ಈ...

ದಿನದ ಸುದ್ದಿ2 days ago

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ...

ದಿನದ ಸುದ್ದಿ2 days ago

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ...

ದಿನದ ಸುದ್ದಿ2 days ago

ಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ 12 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ....

ದಿನದ ಸುದ್ದಿ2 days ago

ಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕೃಷಿ ಇಲಾಖೆ ಹಾಗೂ ಆತ್ಮ (ATMA) ಯೋಜನೆಯಡಿ 2026-27ನೇ ಸಾಲಿನ ವಿವಿಧ ಕೃಷಿ ಪ್ರಶಸ್ತಿಗಳಿಗಾಗಿ ದಾವಣಗೆರೆ ಜಿಲ್ಲೆಯ ಅರ್ಹ ಹಾಗೂ ಆಸಕ್ತ ರೈತ ಮತ್ತು ರೈತ...

ಅಂಕಣ4 days ago

ಕವಿತೆ | ದೇವರ ಹೂವು

~ ಡಾ. ಸಿ.ಬಿ.ಐನಳ್ಳಿ ಊಟ ಮಾಟ ವೇಷ ಭಾಷೆ ಪ್ರಾರ್ಥನೆ ಬೇರೆ ಬೇರೆ ಪವಿತ್ರಪಠ್ಯ ಅವನದೊಂದು ನನ್ನದಿನ್ನೊಂದಂತೆ ನದಿ ದಂಡೆಯ ಮೇಲೆ ನೋಟ ಬೆರೆತು ಮಾತು ಮರೆತು...

ದಿನದ ಸುದ್ದಿ4 days ago

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ...

ದಿನದ ಸುದ್ದಿ4 days ago

ಆಶ್ರಯ ಯೋಜನೆ – ಆವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30...

ದಿನದ ಸುದ್ದಿ6 days ago

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

ಗಿರೀಶ್ ಮುತ್ತು ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು...

ದಿನದ ಸುದ್ದಿ7 days ago

ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ

ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ...

Trending