ಲೈಫ್ ಸ್ಟೈಲ್
ಪಕ್ಷಿಗಳ ತಾಣ ಈ ‘ಶುಕವನ’ದಲ್ಲೊಂದು ಸುತ್ತು..!
ಮೈಸೂರು ಎಂದರೆ ನಮಗೆ ನೆನಪಿಗೆ ಬರುವುದು ಚಾಮುಂಡಿ ಬೆಟ್ಟ, ಅರಮನೆ,ಕಾರಂಜಿ ಕೆರೆ,ಕುಕ್ಕರಳ್ಳಿ ಕೆರೆ, ಮೃಗಾಲಯ ಹೀಗೆ ಇನ್ನೂ ಹಲವು. ಹಾಗೆ ಇಲ್ಲಿನ ಅವಧೂತ ಪೀಠವು ಕೂಡಾ ಒಂದು. ಈ ಸ್ಥಳವು ಎಷ್ಟೋ ಜನರಿಗೆ ತಿಳಿದಿಲ್ಲ. ಈ ಅವಧೂತ ಪೀಠವು ಚಾಮುಂಡಿ ಬೆಟ್ಟಕ್ಕೆ ಹೋಗುವ ಸಾಲು ಮೆಟ್ಟಿಲುಗಳ ದಾರಿಯಲ್ಲಿದೆ.
ಈ ಅವಧೂತ ಪೀಠದಲ್ಲಿ ಶ್ರೀ ಗಣಪತಿ ಸಚ್ಚಿದಾನಂದ ಸ್ವಾಮೀಜಿಯವರು ನಿರ್ಮಿಸಿರುವ ಒಂದು ಶುಕವನ’ ಮತ್ತು ಬ್ನೊಸಾಯಿ ಉದ್ಯಾನವಿದೆ. ಈ ವನವನ್ನು 2012 ರಲ್ಲಿ ಆರಂಭಿಸಲಾಯಿತು. ಒಂದು ಎಕರೆ ಜಾಗವನ್ನು ಇದಕ್ಕಾಗಿ ಬಳಸಲಾಗಿದೆ .
ಶುಕವನ
‘ಶುಕವನ’ ಆಶ್ರಮದ ಆವರಣದೊಳಗಿನ ಗಿಣಿಗಳ ಉದ್ಯಾನ. ಪಕ್ಷಿಗಳ ಪುನರ್ವಸತಿ ಕೇಂದ್ರ. ಜಗತ್ತಿನಾದ್ಯಂತದ ಅದೆಷ್ಟೋ ಜಾತಿಯ ಬಣ್ಣಬಣ್ಣದ ಗಿಳಿಗಳಿಗೆ ಇಲ್ಲಿ ನೆಲೆಯಾಗಿದೆ. ಗಿಣಿಗಳು ಮಾತ್ರವಲ್ಲದೆ ಬೇರೆ ಬೇರೆ ಜಾತಿಯ ಪಕ್ಷಿಗಳನ್ನೂ ಇಲ್ಲಿ ವಿಶೇಷ ಆರೈಕೆ ನೀಡಿ ಪೋಷಿಸಲಾಗುತ್ತದೆ. ಸ್ವತಃ ಸ್ವಾಮೀಜಿಯವರೇ ಇವುಗಳ ಆರೈಕೆಗೆ ನಿಲ್ಲುತ್ತಾರೆಂಬುದು ವಿಶೇಷ. ಪಕ್ಷಿಗಳ ಸಂಗದಲ್ಲಿ ಗಿಣಿಗಳಿಗೆ ವಿಶೇಷ ಬಗೆಯಲ್ಲಿ ಮಾತನಾಡುವುದನ್ನೂ ಕಲಿಸಿದ ಹೆಗ್ಗಳಿಕೆ ಸ್ವಾಮೀಜಿಯವರದ್ದು.
470ಕ್ಕೂ ಹೆಚ್ಚು ಅಪರೂಪದ ಪ್ರಭೇದದ 2 ಸಾವಿರಕ್ಕೂ ಪಕ್ಷಿಗಳಿಗೆ ಆಶ್ರಯ ಕಲ್ಪಿಸಿರುವ ಶುಕವನ ಗಿನ್ನಿಸ್ ಪುಸ್ತಕದಲ್ಲೂ ದಾಖಲಾಗಿದೆ. ಎಲ್ಲಾ ಹಕ್ಕಿಗಳ ಚಿಲಿಪಿಲಿ, ವಿವಿಧ ರೀತಿಯ ಕೂಗುಗಳು ಕೇಳಲು ಮನಸ್ಸಿಗೆ ತುಂಬ ಸಂತೋಷವನ್ನು ನೀಡುತ್ತದೆ.ಅಲ್ಲಿ ಇರುವ ಎಲ್ಲಾ ಪಕ್ಷಿಗಳಿಗು ಹೆಸರು ಇದೇ. ಕೆಲವೊಂದು ಪಕ್ಷಿಗಳು ನಾವು ಮಾತನಾಡಿಸಿದಾಗ ಪ್ರತಿಕ್ರಿಯೆ ತೋರಿಸುತ್ತವೆ.
ಈ ಜಾಗದಲ್ಲಿ ಸಾಮಾನ್ಯ ಜನಗಳಿಗೆ ಪಕ್ಷಿಗಳ ಜೊತೆ ಬೆರೆತು ಆನಂದವನ್ನು ಹೊಂದಲು ಹಾಗೂ ಪೋಟೋ ತೆಗಿಸಿ ಕೊಳ್ಳಲು ಒಂದು ಅನುಕೂಲ ಮಾಡಿದಾರೆ. ನಮ್ಮ ಕೈಯಲ್ಲಿ ಹಣ್ಣಿನ ಚೂರಿರುವ ತಟ್ಟೆ ಕೊಡುತ್ತಾರೆ,ಅದನ್ನು ಹಿಡಿದು ಒಳ ಹೊಗುತ್ತಿದಂತೆ ಪಕ್ಷಿಗಳು ನಮ್ಮ ಮೇಲೆ ಹಾಗೂ ನಾವು ಹಿಡಿದಿರುವ ತಟ್ಟೆಯ ಮೇಲೆ ಬಂದು ಕುಳಿತ್ತುಕೊಳುತ್ತವೆ. ಆ ಕ್ಷಣ ಎಲ್ಲರಿಗೂ ತುಂಬ ಖುಷಿ ಯನ್ನು ಕೊಡುತ್ತದೆ.
ಮೆಕಾವ್(ಸ್ಕಾರ್ಲೆಟ್ ಮೆಕಾವ್, ಮಿಲಿಟರಿ ಮೆಕಾವ್, ಶಮ್ ರಾಕ್ ಮೆಕಾವ್), ಲಾರಿಕೀಟ್ , ಕಾಂಗೊ ಆಫ್ರಿಕನ್ ಗ್ರೇ ಗಿಳಿ, ಮಿಚೆಲ್ ಕೊಕಾಟೂ…ಇನ್ನೂ ಹಲವು ಬಗೆಯ ಪಕ್ಷಿಗಳು ತಮ್ಮ ಗಾತ್ರ, ವಿವಿಧ ಬಣ್ಣ, ಕೊಕ್ಕು, ಅವು ಮಾಡುವ ಕಲರವ ಎಲ್ಲರ ಗಮನ ಸೆಳೆಯುತ್ತದೆ. ಈ ಗಿಳಿಗಳು ಸಾಮಾನ್ಯವಾಗಿ 25-50 ವರ್ಷಗಳವರೆಗೆ ಬದುಕುತ್ತವೆ. ಇದುವರೆಗೆ ಸತ್ತ ಹಕ್ಕಿಗಳಲ್ಲಿ ಅತ್ಯಂತ ಮುದಿಯಾದ ಹಕ್ಕಿ 83 ವರ್ಷ ಬದುಕಿತ್ತು ಎನ್ನುವ ಮಾಹಿತಿಯು ಇದೆ.
ಪಕ್ಷಿಗಳಿಗೆ ಪ್ರತಿದಿನವೂ ಬೀಜಗಳು, ಕಾಳುಗಳು, ಹಣ್ಣುಗಳನ್ನು ಕೊಡುತ್ತಾರೆ. ಹಗಲಿನಲ್ಲಿ ಹಕ್ಕಿಗಳನ್ನು ಗೂಡಿನಿಂದ ವನದಲ್ಲೆ ಹಾರಾಡಲು ಬಿಡುತ್ತಾರೆ, ಅವು ಹಾರಾಡಿದ ನಂತರ ತಮ್ಮ ಗೂಡಿಗೆ ತಾವಾಗಿಯೇ ಮರಳುತ್ತವೆಂತೆ, ದಾರಿ ತಪ್ಪಿದವುಗಳನ್ನು ಸಿಬ್ಬಂದಿ ಗೂಡಿಗೆ ಮರಳಿಸುತ್ತಾರೆ.
ಬೋನ್ಸಾಯ್ ಉದ್ಯಾನ
ಶುಕವನದ ಪಕ್ಕದಲ್ಲೇ ಕುಬ್ಜವಾಗಿ ಬೆಳೆಸಿದ ಮರಗಳು ಹಾಗೂ ಗಿಡಗಳನ್ನು ಈ ಬೋನ್ಸಾಯ್ ಉದ್ಯಾನದಲ್ಲಿ ನೋಡ ಬಹುದಾಗಿದೆ. ಈ ಉದ್ಯಾನವನ್ನು 2005ರಲ್ಲಿ ತೆರೆಯಲಾಯಿತು. ಇಲ್ಲಿ ಬೆಳೆಸಿರುವ ವಿವಿಧ ಬೋನ್ಸಾಯ್ ಗಿಡಗಳಿಂದ ಈ ಉದ್ಯಾನವನ ಗಿನ್ನಿಸ್ ಪುಸ್ತಕದ ದಾಖಲೆಗಳಲ್ಲಿ ಸೇರಿದೆ.
ಇಲ್ಲಿ ಅಶ್ವತ್ಥ , ವಟವೃಕ್ಷ , ಬಿಲ್ವ, ಅಶೋಕ ವೃಕ್ಷಗಳು, ಸಪೋಟ, ಕಿತ್ತಳೆ, ನಿಂಬೆ, ಸೀತಫಲ, ಇನ್ನೂ ಹಲವು ವೃಕ್ಷ ಹಾಗು ಹಣ್ಣುಗಳ ಕುಬ್ಜ ಗಿಡಗಳನ್ನು ನಾವು ನೋಡ ಬಹುದು. ಸುತ್ತ ಮುತ್ತ ಹಲವು ಕೊಳಗಳು ಹಾಗೂ ಕಾರಂಜಿಗಳು ಇವೇ. ಹಾಗೂ ಜೊತೆಗೆ ಕೆಲವು ಆಲಂಕಾರಿಕ ಮತ್ತು ಔಷಧೀಯ ಗಿಡಗಳನ್ನು ಕಾಣಬಹುದು. ಪ್ಲಾಸ್ಟಿಕ್ ಫ್ರೀ ಜಾಗವಾಗಿದೆ. ಮೈಸೂರಿಗೆ ಹೋದವರು ನೋಡಲೇ ಬೇಕಾದ ಜಾಗವಿದು.
–ಸೌಮ್ಯ ಅಶೋಕ್
ಬೆಂಗಳೂರು
ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ7 days agoದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
-
ದಿನದ ಸುದ್ದಿ4 days agoಚನ್ನಗಿರಿ | ಲವ್ ಮ್ಯಾರೇಜ್ ; ಪೊಲೀಸ್ ಠಾಣೆ ಆವರಣದಲ್ಲೇ ಯುವಕನಿಗೆ ಚಾಕು ಇರಿತ
-
ದಿನದ ಸುದ್ದಿ2 days agoದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು
-
ದಿನದ ಸುದ್ದಿ4 days ago
ಮತದಾರರ ಪಟ್ಟಿ ಪರಿಷ್ಕರಣೆ | ಪ್ರತಿಯೊಬ್ಬರ ಮನೆಬಾಗಿಲಿಗೆ ತಲುಪಲಿವೆ ಫಾರಂಗಳು ; ಸಾರ್ವಜನಿಕರು ಆತಂಕಪಡುವ ಅಗತ್ಯವಿಲ್ಲ
-
ದಿನದ ಸುದ್ದಿ8 hours agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ





