ರಾಜಕೀಯ
ಸಾಮಾಜಿಕ ಜಾಲತಾಣ ಅಭಿಯಾನ | ‘ನನ್ನ ಸಿಎಂ ಸತೀಶ ಜಾರಕಿಹೊಳಿ’
ಸುದ್ದಿದಿನ, ದಾವಣಗೆರೆ : ಮಾಜಿ ಸಿಎಂ ಸಿದ್ದರಾಮಯ್ಯ ಪರ ಅವರ ಬೆಂಬಲಿಗರು ಕಾಂಗ್ರೆಸ್ ಶಾಸಕರು ಸಚಿವರು ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂಬ ಹೇಳಿಕೆಗಳ ಬೆನ್ನಲ್ಲೇ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಕೆಲವರು ನಮ್ಮ ಸಿಎಂ ಸಿದ್ದರಾಮಯ್ಯ ಎಂದು ಬರೆದು ಹರಿಬಿಡುತ್ತಿದ್ದಾರೆ.
ಅದೇರೀತಿ ಈಗ ರಾಜ್ಯದ ಮತ್ತೋರ್ವ ಪ್ರಭಾವಿ ಸಚಿವ ಹಾಗೂ ಅಹಿಂದ ನಾಯಕರಾದ ಸತೀಶ್ಜಾರಕಿಹೊಳಿ ಅಭಿಮಾನಿಗಳು ನಮ್ಮ ಸಿಎಂ ಸತೀಶ್ಜಾರಕಿಹೊಳಿ ಎಂದು ಫೇಸ್ಬುಕ್ ಪುಟಗಳಲ್ಲಿ ಬರೆದುಕೊಂಡು ಹರಿಬಿಟ್ಟು, ಜಾರಕಿಹೊಳಿ ಅಭಿಮಾನಿಗಳು ಸಹ ಮುಖ್ಯಮಂತ್ರಿ ಅಭ್ಯರ್ಥಿಗಳಿದ್ದೇವೆ ಎಂಬ ಸಂದೇಹ ರವಾನಿಸಿದ್ದಾರೆ.
ಪ್ರಸ್ತುತ ಜೆಡಿಎಸ್ ಕಾಂಗ್ರೆಸ್ ದೋಸ್ತಿ ಸರ್ಕಾರದಲ್ಲಿ ಪ್ರಬಲ ನಾಯಕರಾಗಿರುವ ಮಾಜಿ ಸಿಎಂ ಸಿದ್ದರಾಮಯ್ಯ ಪರ ಅವರ ಬೆಂಬಲಿಗರು ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ಎಂದು ಬಹಿರಂಗವಾಗಿ ಸಾರುತ್ತಿದ್ದು, ಪರೋಕ್ಷವಾಗಿ ಹೆಚ್.ಡಿ. ಕುಮಾರಸ್ವಾಮಿ ವಿರುದ್ದ ಸಮರ ಸಾರುತ್ತಿದ್ದಾರೆ.
https://m.facebook.com/story.php?story_fbid=424351171636910&id=100021860916158
ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಹೊಗಳಿದರೆ ತಪ್ಪೇನು? ಎಂಬ ವಾದವನ್ನು ಕಾಂಗ್ರೆಸ್ ನಾಯಕರು ಮಾಡುತ್ತಿದ್ದಾರೆ. ಇದು ದಕ್ಷಿಣ ಕರ್ನಾಟಕದ ರಾಜಕೀಯ ನಾಯಕರ ಕಿತ್ತಾಟವಾದರೆ, ಉತ್ತರ ಕರ್ನಾಟಕದ ಜನತೆಯ ಸಂದೇಶವೇ ಭಿನ್ನವಾಗಿದೆ.
ಮಾಜಿ ಸಿಎಂ ಸಿದ್ದರಾಮಯ್ಯ ಅವರ ಆಪ್ತ ರಕ್ಷಕ ಎಂದೇ ಕರೆಸಿಕೊಳ್ಳುವ ಬೆಳಗಾವಿ ಸಾಹುಕಾರ್, ಸದ್ಯ ದೋಸ್ತಿ ಸರ್ಕಾರದ ಅರಣ್ಯ ಸಚಿವ ಸತೀಶ್ಜಾರಕಿಹೊಳಿ ಬೆಂಬಲಿಗರು ಸತೀಶ್ ಜಾರಕಿಹೊಳಿ ನನ್ನ ಸಿಎಂ ಎಂದು ಫೆಸ್ಬುಕ್ನಲ್ಲಿ ಬರೆದುಕೊಳ್ಳುತ್ತಿದ್ದಾರೆ.
https://m.facebook.com/story.php?story_fbid=105148150612593&id=100033522243207
ಈ ಮೂಲಕ ಉತ್ತರ ಕರ್ನಾಟಕದವರು ಮುಖ್ಯಮಂತ್ರಿ ಅಭ್ಯರ್ಥಿಗಳಿದ್ದಾರೆ ಎಂಬ ಖಡಕ್ ಸಂದೇಶವನ್ನು ಸಾಮಾಜಿಕ ಜಾಲತಾಣಗಳಲ್ಲಿ ರವಾನಿಸಿದ್ದಾರೆ.
ಸಚಿವ ಸತೀಶ್ಜಾರಕಿಹೊಳಿ ಮುಖ್ಯಮಂತ್ರಿ ಅಭ್ಯರ್ಥಿ ಎಂಬ ವಿಷಯದ ಮೇಲೆ ಕೆಲ ದಿನಗಳ ಹಿಂದೆ ಚರ್ಚೆ ನಡೆದಾಗ ನಾನಿನ್ನು 10 ವರ್ಷಗಳ ನಂತರ ಮುಖ್ಯಮಂತ್ರಿ ಅಭ್ಯರ್ಥಿ ಆಕಾಂಕ್ಷಿ ಎಂದು ಸ್ವತಃ ಸಚಿವರೇ ಸ್ಪಷ್ಟಪಡಿಸಿದ್ದರು.
ಇತ್ತೀಚಿಗಷ್ಟೇ ಮಾಜಿ ಸಿಎಂ ಸಿದ್ದರಾಮಯ್ಯ ಕೂಡಾ ಸಮಾರಂಭವೊಂದರಲ್ಲಿ ಅಧಿಕಾರ ಎಲ್ಲರಿಗೂ ಸಿಗಬೇಕು, ಸತೀಶ್ ಕೂಡಾ ಸಿಎಂ ಆಗಬೇಕು ಎಂದು ಹೇಳಿದ್ದರು. ಈ ಹಿಂದೆ ನನ್ನ ಸಹೋದರ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಆಗುವವರೆಗೂ ವಿರಮಿಸುವುದಿಲ್ಲ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಹೇಳಿಕೆ ನೀಡುವ ಮೂಲಕ ಸುದ್ದಿಯಾಗಿದ್ದರು.
https://m.facebook.com/story.php?story_fbid=1912640958861486&id=100003468012703
ಅಧಿಕಾರಕ್ಕೆ ಬಂದ ಎಲ್ಲ ಸರ್ಕಾರಗಳು ಉತ್ತರ ಕರ್ನಾಟಕಕ್ಕೆ ಮಲತಾಯಿ ಧೋರಣೆ ಅನುಸರಿಸುತ್ತಿವೆ ಎಂಬ ಆರೋಪವಿದೆ. ಆದ್ದರಿಂದ ಪ್ರತ್ಯೇಕ ರಾಜ್ಯದ ಕೂಗು ಕೂಡಾ ಕೇಳಿ ಬರುತ್ತಿದೆ. ದಕ್ಷಿಣ ಕರ್ನಾಟಕದ ರಾಜಕೀಯ ನಾಯಕರ ಕಿತ್ತಾಟಕ್ಕೆ ಉತ್ತರ ಕರ್ನಾಟಕದವರು ನನ್ನ ಸಿಎಂ ಸತೀಶ್ ಜಾರಕಿಹೊಳಿ ಎಂದು ಹೇಳುವ ಮೂಲಕ ನಮಗೂ ಒಂದು ಅವಕಾಶ ನೀಡಬೇಕೆಂಬ ಸಂದೇಶ ರವಾನಿಸಿದ್ದಾರೆ.
ನಾನು ಮುಖ್ಯಮಂತ್ರಿ ಆಗೋದಿಕ್ಕೆ ನಮ್ಮ ಪಕ್ಷ ಬೆಂಬಲವಿದೆ#ನಮ್ಮ ಸಿ.ಎಂ ಸತೀಶ್ ಜಾರಕಿಹೊಳಿನಮ್ಮ ಸಿ, ಎಂ "ಸತೀಶ್ ಜಾರಕಿಹೊಳಿ"…
Posted by ಕರ್ನಾಟಕ ಸತೀಶ್ ಜಾರಕಿಹೊಳಿ ಯುವ ಸೈನ್ಯ on Sunday, 3 February 2019
ಪೊಲಿಟಿಕಲ್ ಕಿಂಗ್ ಮೇಕರ್ ಹಾಗೂ ಮಾಸ್ಟರ್ ಮೈಂಡ್ ಎಂದೇ ತಮ್ಮ ನಡೆಯಿಂದ ಕರೆಸಿಕೊಳ್ಳುವ ಸತೀಶ್ ಜಾರಕಿಹೊಳಿ ಇಡೀ ರಾಜ್ಯದ ತುಂಬಾ ತಮ್ಮ ಬೆಂಬಲಿಗರನ್ನು ಹೊಂದಿದ್ದಾರೆ. ರಾಜ್ಯದ ಸಾಕಷ್ಟು ಮತಕ್ಷೇತ್ರಗಳಲ್ಲಿ ಇವರೇ ನಿರ್ಣಯಕ. ಎಲ್ಲಾ ಸಮುದಾಯಗಳ ಪರ ನಿಲ್ಲುವ ಅದರಲ್ಲಿಯೂ ವಾಲ್ಮೀಕಿ ನಾಯಕ ಸಮುದಾಯದ ಪ್ರಶ್ನಾತೀತ ನಾಯಕ ಎಂದರೆ ತಪ್ಪಾಗಲಾರದು. ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸಚಿವರ ಅಭಿಮಾನಿಗಳಿದ್ದು, ನಮ್ಮ ಸಿಎಂ ಸತೀಶ್ಜಾರಕಿಹೊಳಿ ಎಂಬ ಅಭಿಯಾನದ ಕೂಗು ಹೆಚ್ಚಾಗಿ ತೀವ್ರ ಸ್ವರೂಪ ಪಡೆದುಕೊಂಡರು ಅಚ್ಚರಿಪಡಬೇಕಿಲ್ಲ.
https://m.facebook.com/story.php?story_fbid=2249690161910902&id=100006098199391
“ಸತೀಶ್ ಜಾರಕಿಹೊಳಿ ಸ್ಥಾಪಿಸಿರುವ ಮಾನವ ಬಂಧುತ್ವ ವೇದಿಕೆಯ ಕಾರ್ಯಕರ್ತರು ರಾಜ್ಯಾದ್ಯಂತ ಇದ್ದೇವೆ. ಮಾಜಿ ಸಿಎಂ ಸಿದ್ದರಾಮಯ್ಯ ಅವರಂತೆ ಸಚಿವರು ಸಹ ಅಹಿಂದ ನಾಯಕರಿದ್ದಾರೆ. ಅಲ್ಲದೆ ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ಎಲ್ಲಾ ವರ್ಗದವರು ಮುಖ್ಯಮಂತ್ರಿ ಸ್ಥಾನಕ್ಕೇರಿದ್ದಾರೆ. ಅದರಂತೆ ಸಚಿವ ಸತೀಶ್ ಜಾರಕಿಹೊಳಿ ಅವರಿಗೂ ಮುಖ್ಯಮಂತ್ರಿ ಪಟ್ಟಾ ಸಿಗಬೇಕಿದೆ ಎಂಬುದು ಅವರೆಲ್ಲ ಅಭಿಮಾನಿಗಳ ಬಯಕೆ. ಪ್ರತಿಬಾರಿ ಅಸಮಾಧಾನಗೊಂಡಾಗಲೆಲ್ಲ ಮೂಗಿಗೆ ತುಪ್ಪ ಸವರುವ ಕೆಲಸ ಆಗುತ್ತಿದೆ. ತಕ್ಷಣಕ್ಕೆ ಮುಖ್ಯಮಂತ್ರಿ ಬದಲಾವಣೆ ಆಗಬೇಕೆಂಬುದು ನಮ್ಮ ಅಭಿಪ್ರಾಯವಲ್ಲ. ಮುಂದಿನ ದಿನಗಳಲ್ಲಿ ಸತೀಶ್ ಜಾರಕಿಹೊಳಿ ಅವರಿಗೆ ಮೊದಲ ಆದ್ಯತೆ ನೀಡಬೇಕಿದೆ”.
|ರಾಘುದೊಡ್ಮನಿ,ಸಂಚಾಲಕರು, ಮಾನವ ಬಂಧುತ್ವ ವೇದಿಕೆ, ದಾವಣಗೆರೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ಬಿಎಲ್ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.
ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್ಒಗಳನ್ನು ಅಥವಾ ಚುನಾವಣಾ ವೆಬ್ಸೈಟ್ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್ವೈಸರ್ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.
ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.
1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.
ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.
ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು ತಿಳಿಸಿದ್ದಾರೆ.
ಅಂತ್ಯಕ್ರಿಯೆಯನ್ನು ನಾಳೆ (ಸೋಮವಾರ) ಮಧ್ಯಾಹ್ನ 4:00 ಗಂಟೆಗೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆ ಮುಕ್ತಿದಾಮದಲ್ಲಿ ನೆರವೇರಿಸಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ
-
ಅಂಕಣ6 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ5 days agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
-
ದಿನದ ಸುದ್ದಿ3 days agoಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
-
ದಿನದ ಸುದ್ದಿ18 hours agoಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ



