Connect with us

ಸಿನಿ ಸುದ್ದಿ

‘ಉರಿ – ಸರ್ಜಿಕಲ್ ಸ್ಟೈಕ್’ ಎಂಬ ಸೈನಿಕರ ಅದ್ಬುತ ಕಾರ್ಯಾಚರಣೆ..!

Published

on

ಭಾರತೀಯ ಸೇನಾ ಕಾರ್ಯಾಚರಣೆ ಸಂಬಂಧಿತ ಭಾರತೀಯ ಸಿನಿಮಾರಂಗದಲ್ಲಿ ಈವರೆಗೂ ಅನೇಕ ಚಿತ್ರಗಳು ಬಂದಿದೆ. ಹಿಂದಿ ಜತೆಗೆ ಪ್ರಾದೇಶಿಕ ಭಾಷೆಗಳಲ್ಲಿಯೂ ಸೈನಿಕರ ವೀರತೆ ಪ್ರದರ್ಶಿಸುವ ಕಥಾ ಚಿತ್ರಗಳು ವೀಕ್ಷಕರ ಗಮನ ಸೆಳೆದಿದೆ. ಕಾರ್ಗಿಲ್ ವಿಷಾಯಾಧರಿಸಿ ಹತ್ತಕ್ಕೂ ಅಧಿಕ ಸಿನಿಮಾಗಳು ತೆರೆಕಂಡಿದೆ. ಕಾರ್ಗಿಲ್ ಸಮರವನ್ನೇ ಮುಖ್ಯಕಥೆಯಾಗಿರಿಸಿಕೊಂಡ ಚಿತ್ರಗಳು ಹಣ ಗಳಿಸುವಲ್ಲಿ ಯಶಸ್ಸು ಕಂಡಿದೆ. ಈ ಮೂಲಕ ಸೈನಿಕರು, ಸೈನ್ಯದ ಕಥೆಯನ್ನು ಹೊಂದಿದ ಚಿತ್ರಗಳು ಪ್ರೇಕ್ಷಕರ ಮನಸ್ಸು ಗೆಲ್ಲುತ್ತದೆ ಎಂಬುದು ಸಾಬೀತಾಗಿದೆ.

ಆದರೆ, ಇದೀಗ ಮತ್ತೊಂದು ಇತಿಹಾಸ ಸೖಷ್ಟಿಯಾಗಿದೆ. 2016 ರ ಸರ್ಜಿಕಲ್ ಸ್ಟೈಕ್ ಆಧರಿಸಿ ಉರಿ ಎಂಬ ಹೆಸರಿನ ಚಿತ್ರ ತೆರೆಕಂಡು ದೇಶ ಮಾತ್ರವಲ್ಲದೇ ವಿದೇಶಗಳಲ್ಲಿಯೂ ಸದ್ದು ಮಾಡುತ್ತಿದೆ.

ಕಾಶ್ಮೀರ ಗಡಿಯಲ್ಲಿನ ಉರಿ ಎಂಬ ಗ್ರಾಮದ ಸೇನಾ ಶಿಬಿರದ ಮೇಲೆ ಬೆಳ್ಳಂಬೆಳಗ್ಗೆ ಪಾಕ್ ಭಯೋತ್ಪಾದಕರು ನುಸುಳಿ ಭಾರತದ ಹೆಮ್ಮೆಯ 19 ಯೋಧರನ್ನು ಬಲಿ ಪಡೆದಿದ್ದರು. ಈ ಭಯೋತ್ಪಾದಕರ ಕಾರ್ಯಾಚರಣೆ ಭಾರತೀಯರನ್ನು ರೊಚ್ಚಿಗೆಬ್ಬಿಸಿತ್ತು. ಅದರಲ್ಲಿಯೂ ಸೈನ್ಯದ ಅತ್ಯಂತ ಪರಾಕ್ರಮಿ ಯೋಧರೇ ಭಯೋತ್ಪಾದಕರಿಗೆ ಸುಲಭವಾಗಿ ಬಲಿಯಾಗಿದ್ದರು. ಭಾರತದ ಸೈನ್ಯದ ಪ್ರತಿಷ್ಟೆಗೂ ಈ ಘಟನೆ ಮಸಿ ಬಳಿದಿತ್ತು. ಸೈನ್ಯದ ಮರ್ಯಾದೆಯೂ ಪ್ರಶ್ನೆಯಾಗಿತ್ತು.

ಪ್ರಧಾನಿ, ರಕ್ಷಣಾ ಸಚಿವರೂ ಸೇರಿದಂತೆ ಎಲ್ಲರೂ ಹುತಾತ್ಮರ ಬಲಿದಾನಕ್ಕೆ ಮಮ್ಮಲ ಮರುಗಿದರು. ತಮ್ಮವರನ್ನು ವಂಚಿಸಿ ಬಲಿತೆಗೆದುಕೊಂಡದ್ದು ಭಾರತೀಯ ಸೈನಿಕರ ರಕ್ತ ಕುದಿಯುವಂತೆ ಮಾಡಿತ್ತು. ಪ್ರತಿಕಾರ ತೀರಿಸಿಯೇ ಸಿದ್ದ ಎಂದು ಸೈನಿಕರು ಯೋಜನೆ ರೂಪಿಸುತ್ತಿದ್ದರು.

ಇಂಥ ಸೈನಿಕರ ಚಿಂತನೆಗೆ ಬೆಂಬಲವಾಗಿ ನಿಂತದ್ದೇ ಕೇಂದ್ರ ರಕ್ಷಣಾ ಸಚಿವಾಲಯ. ಸೇನಾ ಪಡೆಗೆ ಎಲ್ಲಾ ರೀತಿಯ ನೆರವು ನೀಡಿ ಮುನ್ನುಗ್ಗಿ, ಪಾಕ್ ನೆಲೆಗೆ ನುಗ್ಗಿ ಅಲ್ಲಿ ಅವಿತಿಟ್ಟುಕೊಂಡಿರುವ ಭಯೋತ್ಪಾದಕರನ್ನು ಬಗ್ಗು ಬಡಿಯಿರಿ ಎಂದು ಆದೇಶ ನೀಡಿಯೇ ಬಿಟ್ಟಿತ್ತು. ಈ ಆದೇಶವನ್ನೇ ಕಾಯುತ್ತಿದ್ದ ಭಾರತೀಯ ಸೈನಿಕರಿಗೆ ಅಷ್ಟೇ ಸಾಕಿತ್ತು. ಯಾವ ರೀತಿ ರಾತ್ರೋರಾತ್ರಿ ಪಾಕ್ ನೆಲೆಗೆ ನುಗ್ಗಿ ಭಯೋತ್ಪಾದಕರ ಹುಟ್ಟಡಗಿಸಿದ್ದಲ್ಲದೇ ತಾವೂ ಸುರಕ್ಷಿತವಾಗಿ ಮರಳಿ ಭಾರತಕ್ಕೆ ಮರಳುತ್ತಾರೆ.

ಉರಿ ಸರ್ಜಿಕಲ್ ಸ್ಟೈಕ್ ಗೆ ಕೇವಲ 11 ದಿನಗಳಲ್ಲಿ ನಮ್ಮ ಸೇನಾ ಪಡೆ ಎಲ್ಲಾ ರೀತಿಯಲ್ಲಿಯೂ ಸಜ್ಜಾಗುವುದೇ ಅತ್ಯಂತ ರೋಮಾಂಚಕ. ಸೈನಿಕರ ಮನೋಸ್ಥೆರ್ಯ, ಜತೆಗೆ ಗರುಡ ಎಂಬ ಅತ್ಯಾಧುನಿಕ ಹದ್ದಿನ ದ್ರೋಣ್ ಕ್ಯಾಮರ ಕಾರ್ಯಾಚರಣೆಯೂ ಕುತೂಹಲಕಾರಿ.

ಭಾರತೀಯ ಸೇನಾ ಪಡೆ ಯಾವೆಲ್ಲಾ ರೀತಿಯಲ್ಲಿ ತಯಾರಿ ನಡೆಸಿ ಭಯೋತ್ಪಾದಕರ ಹುಟ್ಟಡಗಿಸಿಸುತ್ತಾರೆ ಎಂಬ ಅದ್ಬುತ ಕಥೆಯನ್ನು ಯುವ ನಿರ್ದೇಶಕರ ಆದಿತ್ಯ ಧರ್ ತನ್ನ ಮೊದಲ ಚಿತ್ರದಲ್ಲಿ ಮನಮುಟ್ಟುವಂತೆ ನಿರ್ದೇಶಿಸಿದ್ದಾರೆ. ಕಾಶ್ಮೀರ – ಪಾಕ್ ಗಡಿಯ ನೈಜತೆಯನ್ನು ಸೈಬ್ರಿಯಾ ದೇಶದ ಕಾಡಿನಲ್ಲಿ ಚಿತ್ರಿಸಲಾಗಿದೆ. ವಿಕ್ಕಿ ಕೌಷಲ್ ಎಂಬ ನಟ ಸೇನಾಧಿಕಾರಿ ವಿಹಾನ್ ಸಿಂಗ್ ಪಾತ್ರದಲ್ಲಿ ನಟಿಸಿದ ರೀತಿಯೂ ಮೆಚ್ಚುಗೆಯಾಗುತ್ತದೆ. ಪ್ರಧಾನಿ ಮೋದಿ, ರಕ್ಷಣಾ ಸಚಿವ ಪರಿಕ್ಕರ್ ಸೇರಿದಂತೆ ಎಲ್ಲರ ಪಾತ್ರಗಳಲ್ಲಿಯೂ ನೈಜತೆಯಿದೆ. ನಿಜ ಘಟನೆಯೊಂದನ್ನು ಹೀಗೂ ಚಿತ್ರವಾಗಿಸಬಹುದು ಎಂಬುದಕ್ಕೆ ಉರಿ ಸಿನಿಮಾ ಸಾಕ್ಷಿಯಾಗುತ್ತದೆ.

ಸಾಮಾನ್ಯವಾಗಿ ಉರಿ ಸರ್ಜಿಕಲ್ ಸ್ಟೈಕ್ ನಂಥ ವಿಷಯವನ್ನು ಹೇಳುವಾಗ ಬಹಳಷ್ಟು ಸಂಗತಿಗಳಿಗೆ ಸೇನಾಡಳಿತ ಅನುಮತಿ ನೀಡುವುದಿಲ್ಲ. ಆದರೆ, ಈ ಚಿತ್ರದ ಮಟ್ಟಿಗೆ ಹಲವು ಸಂಗತಿಗಳನ್ನು ಪ್ರಸ್ತಾಪಿಸಲು ಅವಕಾಶ ನೀಡುವ ಮೂಲಕ ಬಾರತೀಯರಿಗೆ ಸೇನಾಕಾರ್ಯಾಚರಣೆಯ ವಿಷಯಗಳ ಮಾಹಿತಿ ನೀಡುವಲ್ಲಿ ಸಫಲವಾಗಿದೆ. ದೇಶಪ್ರೇಮವನ್ನು ಬಡಿದೆಬ್ಬಿಸುವ ಪ್ರಯತ್ನಕ್ಕೂ ಉರಿ ಚಿತ್ರ ನೆರವಾಗಿದೆ. ಈ ಮೂಲಕ ಸೈನ್ಯದ ಉದ್ದೇಶವೂ ಸಫಲವಾಗಿದೆ.

ಎಲ್ಲಿಯೂ ವಿಷಾಯಾಂತರಗೊಳ್ಳದೇ, ಉತ್ಪೇಕ್ಷೆಗೆಗೊಳಗಾಗದೇ ಸೀದಾಸಾದಾ ರೀತಿಯಲ್ಲಿಯೇ ಕಥೆ ಹೇಳುತ್ತಾ ಸಾಗುವ ಚಿತ್ರ ಅಂತಿಮವಾಗಿಯೂ ಬಹುಪರಾಕ್ ಎನಿಸಿಕೊಳ್ಳದೇ ದಿಡೀರ್ ಅಂತ್ಯಗೊಳ್ಳುತ್ತದೆ. ಇನ್ನೂ ಬೇಕಿತ್ತು ಎನಿಸುವಾಗಲೇ ಚಿತ್ರ ಮುಗಿಯುತ್ತದೆ. ಈ ಮೂಲಕ ಚಿತ್ರ ಮನಸ್ಸಿನಲ್ಲಿ ಹಲವು ದಿನಗಳ ಕನವರಿಕೆಗೆ ಕಾರಣವಾಗುತ್ತದೆ.

ರಾಜಕೀಯಕ್ಕಾಗಿನ ಚಿತ್ರವೇ?

ಇದು ಮೋದಿಗೆ ವೋಟ್ ತಂದುಕೊಡಲು ನೆರವಾಗುತ್ತದೆ. ಚಿತ್ರ ಹಣ ಮಾಡಲೆಂದೇ ನಿರ್ಮಿತವಾಗಿವೆ. ಇದೇನ್ ಮಹಾ ಎಂದೆಲ್ಲಾ ಕೆಲವರು ಬಾಲಿಶವಾದ ಹೇಳಿಕೆ ನೀಡುತ್ತಿದ್ದಾರೆ. ಇಂಥ ಹೇಳಿಕೆಗಳು ಬದಿಗಿರಲಿ.

ಪ್ರದಾನಿಯಾಗಿದ್ದ ವ್ಯಕ್ತಿ ಸೈನಿಕರಿಗೆ ಮುನ್ನುಗ್ಗಿ, ಸೋಲು ನನಗಿರಲಿ, ಗೆಲವು ನಿಮ್ಮದಾಗಿರಲಿ ಎಂದು ಹುರಿದುಂಬಿಸಿ ರಾತ್ರಿಯಿಡಿ ಜಾಗರಣೆ ಕುಳಿತು ಭಾರತೀಯ ಸೈನಿಕರ ಸ್ಥಿತಿ ಕಾರ್ಯಾಚರಣೆ ಸಂದರ್ಭ ಹೇಗಿದೆಯೋ ಎಂದು ತಲೆಕೆಡಿಸಿಕೊಳ್ಳುತ್ತಾರೆ ಎಂದರೆ ಅಂಥ ಪ್ರಧಾನಿ ಬಗ್ಗೆಯೂ ಗೌರವ ಬಾರದಿದ್ದರೆ ಹೇಗೆ? ಚುನಾವಣೆಯಲ್ಲಿ ಮತಗಳನ್ನು ಯಾರಿಗೆ ಹಾಕುತ್ತೇವೆಯೋ ಅದು ಅವರವರಿಗೆ ಬಿಟ್ಟದ್ದು. ಆದರೆ, ಸೈನಿಕರೇ ಭಯೋತ್ಪಾದಕರ ಹುಟ್ಟಡಗಿಸಿ ಬನ್ನಿ ಎಂದು ಧೈರ್ಯ, ಸ್ಥೆರ್ಯ, ಆಧುನಿಕ ಶಸ್ತ್ರಾಸ್ತಗಳನ್ನು ನೀಡಿದ ಆ ಪ್ರಧಾನಿಗೆ ಮೆಚ್ಚುಗೆ ಸೂಚಿಸದಿದ್ದರೆ ಹೇಗೆ?

ಇದೇ ಅನುಮತಿ ಮೊದಲೇ ಸಿಕ್ಕಿದ್ದರೇ?

ಕೆಲವು ದಶಕಗಳ ಹಿಂದೆ, ನನಗೆ 24 ಗಂಟೆಗಳ ಕಾಲಾವಕಾಶ ನೀಡಿ ಪಾಕಿಸ್ತಾನಿಗಳ ಹುಟ್ಟಡಗಿಸಿ ಬರುತ್ತೇನೆ ಎಂದಿದ್ದ ಕೊಡಗಿನ ಹೆಮ್ಮೆಯ ಜನರಲ್ ತಿಮ್ಮಯ್ಯ ಅವರಿಗೂ ಆ ಸಂದರ್ಭ ಸರ್ಜಿಕಲ್ ಸ್ಟೈಕ್ ಗೆ ಅನುಮತಿ ನೀಡಿದ್ದರೆ, ಕಾಶ್ಮೀರಕ್ಕೆ ಇಂದಿನ ದುರ್ಗತಿ ಬರುತ್ತಿರಲಿಲ್ಲವೇನೋ.

ಅದೇನೇ ಇರಲಿ.. ಉರಿ ಎಂಬ ಅಪರೂಪದ ಸಿನಿಮಾ ವೀಕ್ಷಿಸುವ ಮೂಲಕ ಸೈನಿಕ ಕಾರ್ಯಾಚರಣೆ ಹೇಗಿರುತ್ತೆ.. ಸೈನಿಕರ ಜೀವನ ಎಷ್ಟೊಂದು ಸಾಹಸಮಯ, ಯಾತನಾಮಯವಾಗಿರುತ್ತೆ ಎಂದು ತಿಳಿದುಕೊಳ್ಳುವ ಅಪೂರ್ವ ಅವಕಾಶವನ್ನು ಉರಿ ಎಂಬ ಚಿತ್ರ ನೀಡಿದೆ. ನಾನು ಸಿನಿಮಾಗಳನ್ನು ನೋಡೇದೇ ಇಲ್ಲ ಎಂಬ ಧೋರಣೆ ಬದಿಗಿಟ್ಟು ಭಾರತದ ಗಡಿಯನ್ನು ತಮ್ಮ ಪ್ರಾಣ ಒತ್ತೆಯಿಟ್ಟು ಕಾಯುತ್ತಿರುವ ಸೈನಿಕರಿಗಾಗಿಯಾದರೂ ಒಮ್ಮೆ ನೋಡಿ.

ಅಂದ ಹಾಗೆ, ಈವರೆಗೂ ನಾವು ನೀವೆಲ್ಲಾ ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದ ಬಾಹುಬಲಿ -2 ಎಂಬ ಚಿತ್ರದ ಎಲ್ಲಾ ದಾಖಲೆಗಳನ್ನು ಉರಿ ಚಿತ್ರ ಪುಡಿಗಟ್ಟಿದೆ. ಕೇವಲ 23 ದಿನಗಳಲ್ಲಿ ಉರಿ ಚಿತ್ರ 200 ಕೋಟಿ ರು ಸಂಗ್ರಹಿಸಿ 500 ಕೋಟಿ ಸಂಗ್ರಹದತ್ತ ಮುನ್ನುಗ್ಗಿ ದೇಶದ ಇತಿಹಾಸದಲ್ಲಿಯೇ ಮಹೋನ್ನತ ದಾಖಲೆಗೆ ದಾಪುಗಾಲಿಡುತ್ತಿದೆ.

ಉರಿ ಎಂಬ ಚಿತ್ರವನ್ನು ನೋಡುತ್ತಿದ್ದಾಗ ಕೇಳಿಬರುತ್ತಿದ್ದ ಸೈನಿಕರ ಪರ ಘೋಷಣೆಗಳು, ವಂದೇ ಮಾತರಂ ಎಂಬ ಉದ್ಗೋಷ. ಚಪ್ಪಾಳೆಯ ಮಾರ್ಧನಿ. ಭಾರತದ ಸೇನಾ ಪಡೆಯ ಬಗ್ಗೆ ಭಾರತೀಯರಿಗೆ ಇರುವ ಹೆಮ್ಮೆಯ ದ್ಯೋತಕ ಎನ್ನಿಸಿತು. ಸೈನಿಕರ ವೀರಸಾಹಸವನ್ನು ಚಿತ್ರ ರೂಪದಲ್ಲಿ ವೀಕ್ಷಿಸಿದರರ ಸಂತೋಷದ ಕಂಬನಿ ನಮ್ಮ ಸೈನಿಕರಿಗೆ ತುಡಿಯುವ ಮನಸ್ಸುಗಳು ಇನ್ನೂ ಜೀವಂತವಿದೆ ಎಂಬ ಭಾವನೆಗೆ ಕಾರಣವಾಯಿತು. ಅವರವರ ಅಭಿಮಾನಿ ನಾಯಕರಿಗೆ ಪ್ರೇಕ್ಷಕರು ಥಿಯೇಟರ್ ಸೂರು ಹಾರಿಹೋಗುವಂತೆ ಚಪ್ಪಾಳೆ ತಟ್ಟಿ , ಶಿಳ್ಳೆ ಹೊಡೆದು ಸಂಭ್ರಮಿಸಿದ್ದನ್ನು ನೋಡಿದ್ದೇನೆ.

ಆದರೆ, ಚಿತ್ರವೊಂದನ್ನು ವೀಕ್ಷಿಸುತ್ತಲೇ ಕಣ್ಣೀರುಗರೆಯುತ್ತಾ, ಆ ವೀರ ಸೈನಿಕರಿಗೆ ಭಾಷ್ಪಾಂಜಲಿ ಹಾಕುತ್ತಿದ್ದ ಬಹಳ ಅಪರೂಪದ ಸನ್ನಿವೇಶವನ್ನೂ ನಾನು ನೋಡಿದೆ. ಅದೇ ಉರಿ ಎಂಬ ಸರ್ಜಿಕಲ್ ಸ್ಟ್ಕೈಕ್ ನ ಸಾರ್ಥಕತೆ.

(ಗಮನಿಸಿ – ಮಡಿಕೇರಿಯ ಕಾವೇರಿ ಚಿತ್ರಮಂದಿರ ಶ್ರ10, 2, 6 ಮತ್ತು 9 ಗಂಟೆ ಪ್ರದಶ೯ನ ಹಾಗೂ ಕುಶಾಲನಗರದ ಕೂರ್ಗ್ ಸಿನಿಫ್ಲೆಕ್ಸ್ ( 11, 2,5 ಮತ್ತು 8 ಗಂಟೆ ಪ್ರದಶ೯ನ) ಗಳಲ್ಲಿ ಗುರುವಾರದವರೆಗೆ ಉರಿ ಚಿತ್ರ ವೀಕ್ಷಿಸಬಹುದು.)

ಸೈನಿಕರಾಗಲಿಲ್ಲ, ಪರವಾಗಿಲ್ಲ. ಸೈನಿಕರ ಧೀರ ಕಾರ್ಯಾಚರಣೆಯನ್ನು 2.10 ಗಂಟೆ ಸಿನಿಮಾದಲ್ಲಿ ವೀಕ್ಷಿಸಿ ಅಭಿನಂದಿಸುವ ಅವಕಾಶ ಮಿಸ್ ಮಾಡಿಕೊಳ್ಳಬೇಡಿ.

– ಅನಿಲ್ ಎಚ್.ಟಿ
ಪತ್ರಕರ್ತ
ಮಡಿಕೇರಿ

ಸುದ್ದಿದಿನ.ಕಾಂ|ವಾಟ್ಸಾಪ್|9986715401

ಅಂಕಣ

ಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ

Published

on

ವಿದ್ಯಾನಾಯ್ಕ್ ಅರೇಹಳ್ಳಿ

ಸುದ್ದಿದಿನ,ದಾವಣಗೆರೆ:ಬಂಜಾರ ಸಮುದಾಯದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕರಾದ ಅರ್ಜುನ್ ಚೌಹಾಣ್ ನಟನೆಯ ಕುಚುಕು ಚಿತ್ರ ದಾವಣಗೆರೆ ನಗರದ ತ್ರಿಶುಲ್ ಚಿತ್ರಮಂದಿರದಲ್ಲಿ ಇಂದಿನಿಂದ ಪ್ರದರ್ಶನ ಕಾಣಲಿದೆ.

ಮುಖ್ಯ ಪಾತ್ರದಲ್ಲಿ ಅರ್ಜುನ್ ಚೌಹಾಣ್, ಬಸವರಾಜ್ ಕುಮಾರ್, ಪ್ರಿಯದರ್ಶಿನಿ, ಶಂಕರ್ ಅಶ್ವತ್ಥ್ ಮತ್ತು ಇತರರು ಕಾಣಿಸಿಕೊಂಡಿದ್ದು, ಮೈಸೂರು ರಾಜು ಅವರು ಕಥೆ, ಚಿತ್ರಕಥೆ, ನೃತ್ಯ, ನಿರ್ದೇಶನದಲ್ಲಿ ಚಿತ್ರ ಅಚ್ಚುಕಟ್ಟಾಗಿ ಮೂಡಿಬಂದಿದೆ.
ನಾಗರತ್ನಮ್ಮ ಚಿತ್ರದ ನಿರ್ಮಾಪಕರು ಆಗಿದ್ದು, ಲಕ್ಷ್ಮಿ ಅವರು ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಇನ್ನು ಎ. ಟಿ. ರವೀಶ್ ಸಂಗೀತ ಪ್ರೇಕ್ಷಕರನ್ನ ಹಿಡಿದಿಟ್ಟುಕೊಳ್ಳಲಿದೆ, ಅರವಿಂದ್ ರಾಜ್ ಅವರ ಸಂಕಲನ, ರಾಮನಾಥ್ ರಾಜ್ ಛಾಯಾಗ್ರಹಣಾವಿದೆ ಎನ್ನುತ್ತಾರೆ ಚಿತ್ರದ ನಾಯಕ ಅರ್ಜುನ್ ಚೌಹಾಣ್.

ಅರ್ಜುನ್ ಚೌಹಾಣ್ ಕೇವಲ ಸಿನಿಮಾಗಳಲ್ಲದೆ, ಬಂಜಾರ ಸಮುದಾಯದ ಸಂಸ್ಕೃತಿಯನ್ನು ಬಿಂಬಿಸುವ ಮತ್ತು ಯುವ ಪ್ರತಿಭೆಗಳಿಗೆ ವೇದಿಕೆ ಕಲ್ಪಿಸುವ ನಿಟ್ಟಿನಲ್ಲಿ ಬಂಜಾರ ಹವೇಲಿ ಎಂಬ ರಿಯಾಲಿಟಿ ಶೋ ಅನ್ನು ಕೂಡ ಯಶಸ್ವಿಯಾಗಿ ನಡೆಸಿ, ನಿರ್ದೇಶಿಸಿದ್ದಾರೆ. ಅದಲ್ಲದೆ ಈ ಹಿಂದೆ ರುದ್ರಾಕ್ಷಿಪುರ, ಸ್ವಚ್ಛ ಕರ್ನಾಟಕ, ಉತ್ತರ, ನಾಕುತಂತಿ, ಇತ್ಯಾದಿ ಚಿತ್ರಗಳಲ್ಲಿ ನಟಿಸಿದ್ದು, ಉತ್ತರ ಮತ್ತು ನಾಕುತಂತಿ ರಿಲೀಸ್ ಆಗಬೇಕಿದೆ.

ಕನ್ನಡ ಚಿತ್ರರಂಗದಲ್ಲಿ ನಾಯಕ ನಟನಾಗಿ ಗುರುತಿಸಿಕೊಳ್ಳುತ್ತಿರುವ ಅರ್ಜುನ್ ಚೌಹಾಣ್ ಚಿಕ್ಕ ವಯಸ್ಸಿನಿಂದಲೇ ಬೆಳ್ಳಿಪರದೆಯ ಮೇಲೆ ಹೀರೊ ಆಗಬೇಕೆಂಬ ದೊಡ್ಡ ಕನಸನ್ನು ಹೊತ್ತು ಸಿನಿರಂಗಕ್ಕೆ ಬಂದ ಬಂಜಾರ ಸಮುದಾಯದ ಪ್ರತಿಭೆ. ತಾವೊಬ್ಬ ನಟನಾಗಬೇಕು ಎಂಬ ಹಂಬಲದಿಂದ ಚಿತ್ರರಂಗ ಪ್ರವೇಶಿಸಿದ ಇವರು ತಮ್ಮದೇ ಆದ ಶೈಲಿಯಲ್ಲಿ ಹೆಜ್ಜೆ ಇಡುತ್ತಿದ್ದಾರೆ.

ನಾಯಕ ನಟನಾಗಿ ​ರುದ್ರಾಕ್ಷಿಪುರ ಚಿತ್ರದ ಮೂಲಕ ಬೆಳ್ಳಿಪರದೆಗೆ ಕಾಲಿಟ್ಟ ಇವರು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾದ ಮೂಲಕ ಅವರು ಪ್ರೇಕ್ಷಕರ ಗಮನ ಸೆಳೆದಿದ್ದರು.

ಇನ್ನು 2022ರಲ್ಲಿ ​ಸ್ವಚ್ಛ ಕರ್ನಾಟಕ ಎಂಬ ಸಾಮಾಜಿಕ ಸಂದೇಶವುಳ್ಳ ಸಿನಿಮಾದಲ್ಲಿ ಹಿರಿಯ ಸಾಹಿತಿ ಡಾ. ದೊಡ್ಡರಂಗೇಗೌಡ ಅವರಂತಹ ಗಣ್ಯರೊಂದಿಗೆ ಕೆಲಸ ಮಾಡುವ ಅವಕಾಶ ಪಡೆದದ್ದು ಇವರ ಪ್ರತಿಭೆಗೆ ರಹದಾರಿ ಸೃಷ್ಟಿಸಿದಂತಾಗಿತ್ತು. ಇದೀಗ ​ಕುಚುಕು ಚಿತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಪರಿಶ್ರಮ ಮತ್ತು ಫಿಟ್ನೆಸ್

ಪರಿಶ್ರಮ ಮತ್ತು ಫಿಟ್ನೆಸ್ ಗೆ ಮಹತ್ವ ಕೊಡುವ ಅರ್ಜುನ್ ಸಿನಿಮಾಗಳಲ್ಲಿ ಹೀರೊ ಆಗಲು ಬೇಕಾದ ದೈಹಿಕ ಕಸರತ್ತು, ಸಿಕ್ಸ್ ಪ್ಯಾಕ್ ಬಾಡಿ ಟ್ರಾನ್ಸ್‌ಫಾರ್ಮೇಶನ್ ಮತ್ತು ನಟನಾ ಕೌಶಲಗಳಿಗಾಗಿ ಇವರು ಸಾಕಷ್ಟು ಶ್ರಮವಹಿಸಿದ್ದಾರೆ.

ಆಲ್ಬಮ್ ಸಾಂಗ್ಸ್ ಮತ್ತು ಶಾರ್ಟ್ ಫಿಲ್ಮ್ಸ್

ಕುಚುಕು ನಾಯಕ ನಟ ಚೌಹಾಣ್

ಕೇವಲ ಬೆಳ್ಳಿಪರದೆ ಮಾತ್ರವಲ್ಲದೆ, ಇನ್ಸ್ಟಾಗ್ರಾಮ್ ಹಾಗೂ ಯೂಟ್ಯೂಬ್ ಮೂಲಕ ‘ಸೇ ನೋ ಟು ಗಾಂಜಾ’ದಂತಹ ಜಾಗೃತಿ ಮೂಡಿಸುವ ಆಲ್ಬಮ್ ಹಾಡುಗಳು ಮತ್ತು ಕಿರುಚಿತ್ರಗಳಲ್ಲೂ ಭಾಗಿಯಾಗಿದ್ದಾರೆ.
​ಕನ್ನಡ ಚಿತ್ರರಂಗದಲ್ಲಿ ಹೊಸಬರಾಗಿ ಬಂದು, ತಮ್ಮ ಕನಸನ್ನು ನನಸು ಮಾಡಿಕೊಳ್ಳಲು ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ.

ಸಿದ್ದಗಂಗಾ ಶಾಲೆಯಲ್ಲಿ ಅರಳಿದ ಪ್ರತಿಭೆ

ಸಿದ್ದಗಂಗಾ ಶಾಲೆಯಲ್ಲಿ ತಮ್ಮ ನಟನೆಯ ಅಡಿಪಾಯವನ್ನು ಗಟ್ಟಿಗೊಳಿಸಿಕೊಂಡ ಬಗ್ಗೆ ಸಂತಸ ವ್ಯಕ್ತಪಡಿಸುತ್ತಾರೆ ಅರ್ಜುನ್ ಚೌಹಾಣ್. ಶಾಲೆಯಲ್ಲಿ ಓದುತ್ತಿರುವ ಶನಿವಾರ ಮತ್ತು ಭಾನುವಾರ ರಜಾ ದಿನಗಳಲ್ಲಿ ಕಥೆ, ಕವನ ನಾಟಕ ಇತ್ಯಾದಿ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹ ನೀಡಲಾಗುತ್ತಿತ್ತು. ಇದು ನಮಗೆ ವರದಾನವಾಗಿ ನಮ್ಮ ಸ್ನೇಹಿತರೆಲ್ಲ ಸೇರಿ ನಾವೇ ನಾಟಕ, ಕಥೆ ಕವನ ರಚಿಸಿ ಪ್ರದರ್ಶನ ಮಾಡುತ್ತಿದ್ದೆವು ಎಂದು ತಮ್ಮ ಶಾಲಾ ದಿನಗಳನ್ನು ನೆನಪಿಸಿಕೊಂಡರು.

ಬಂಜಾರ ಹವೇಲಿಯ ಹರಿಕಾರ

ಬಂಜಾರ ಹವೇಲಿ ಅನ್ನೋದು ಬಂಜಾರ (ಲಂಬಾಣಿ) ಸಮುದಾಯದ ಇತಿಹಾಸದಲ್ಲೇ ಅತ್ಯಂತ ದೊಡ್ಡ ಮತ್ತು ಮೊದಲ ರಿಯಾಲಿಟಿ ಶೋ. ಇದು ಬಿಗ್ ಬಾಸ್ ಮಾದರಿಯ ರಿಯಾಲಿಟಿ ಶೋ ಆಗಿದ್ದು, ವಿವಿಧ ಕ್ಷೇತ್ರಗಳ (ಸಿನಿಮಾ, ಟಿವಿ ಮತ್ತು ಸಾಮಾನ್ಯ ಜೀವನ) ಸ್ಪರ್ಧಿಗಳು ಒಂದೇ ಸೂರಿನಡಿ ವಾಸಿಸುತ್ತಾ ವಿವಿಧ ಆಟಗಳು ಮತ್ತು ಸವಾಲುಗಳಲ್ಲಿ ಸ್ಪರ್ಧಿಸುತ್ತಾರೆ.

​ಬಂಜಾರ ಸಂಸ್ಕೃತಿ, ಆಚಾರ-ವಿಚಾರಗಳು ಮತ್ತು ಪ್ರತಿಭೆಗಳನ್ನು ಜಾಗತಿಕ ಮಟ್ಟದಲ್ಲಿ ಪರಿಚಯಿಸುವುದು ಈ ಶೋನ ಮುಖ್ಯ ಉದ್ದೇಶವಾಗಿದೆ.

ಒಟ್ಟಾರೆಯಾಗಿ ಹಲವು ಅಡೆತಡೆಗಳನ್ನು ತಮ್ಮ ಜೀವನದಲ್ಲಿ ಎದುರಿಸಿ ತಾನು ಕಂಡ ಕನಸನ್ನು ನನಸು ಮಾಡಿಕೊಂಡು ತನ್ನೊಟ್ಟಿಗೆ ಇತರರನ್ನು ಬೆಳೆಸುವ ನಿಟ್ಟಿನಲ್ಲಿ ಹೆಜ್ಜೆ ಇಡುತ್ತಿರುವ ಬಂಜಾರ ಸಮುದಾಯದ ಅರ್ಜುನ್ ಚೌಹಾಣ್ ಅವರಿಗೆ ಪ್ರೇಕ್ಷಕರ ಬೆಂಬಲ ಮತ್ತು ಆಶೀರ್ವಾದ ಸಿಗಲಿ ಎನ್ನುವುದು ಸುದ್ದಿದಿನ ಪತ್ರಿಕೆಯ ಹಾರೈಕೆ ಆಗಿದೆ. ಕುಟುಂಬ ಪರಿಹಾರ ಸಮೇತ ಚಿತ್ರಮಂದಿರಕ್ಕೆ ಬಂದು ಹಾರೈಸಿ ಎಂದು ವಿನಂತಿದ್ದಾರೆ ಕುಚುಕು ಚಿತ್ರದ ನಾಯಕ ನಟ ಅರ್ಜುನ್ ಚೌಹಾಣ್.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು

Published

on

ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು.

ಚಲನಚಿತ್ರ ರಂಗ – 2005ರಲ್ಲಿ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ಎಂಟ್ರಿ ಕೊಟ್ಟ ಅವರು, 2007ರಲ್ಲಿ ಪುನೀತ್ ರಾಜ್‌ಕುಮಾರ್ ಅವರ ‘ಮಿಲನ’ ಚಿತ್ರದಲ್ಲಿ ಹೇಮಂತ್ ಎಂಬ ವಿಲನ್ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದರು.

ಇತ್ತೀಚಿನ ಜನಪ್ರಿಯತೆ – ‘ಲವ್ ಮಾಕ್ಟೇಲ್’ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟ-ನಿರ್ಮಾಪಕರಾಗಿ ದೊಡ್ಡ ಹೆಸರು ಮಾಡಿದ್ದರು.

ದಿಲೀಪ್ ರಾಜ್ ಅವರ ಸಾವು ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಚಿತ್ರರಂಗಕ್ಕೆ ದೊಡ್ಡ ನಷ್ಟ. ಇವರ ಈ ಹಠಾತ್ ನಿಧನವು ಒತ್ತಡದ ಜೀವನಶೈಲಿ ಮತ್ತು ಆರೋಗ್ಯದ ಕಡೆಗೆ ನಾವು ನೀಡಬೇಕಾದ ಹೆಚ್ಚಿನ ಗಮನದ ಬಗ್ಗೆ ಎಚ್ಚರಿಕೆ ನೀಡುವಂತಿದೆ.

Continue Reading

ದಿನದ ಸುದ್ದಿ

ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು

Published

on

ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್‌ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!

ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್‌ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;

ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್‌ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.

ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್‌ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.

ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್‌ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್‌ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

‘ಮತದಾರ ದೇವರು’ ಎಂದ‌ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಘನತೆವೆತ್ತ ರಾಜ್ಯಪಾಲರಿಗೆ ನೀಡಿ ಬಂದಿದ್ದೇನೆ. ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ. ಶೀಘ್ರದಲ್ಲಿಯೇ ನೂತನ ಮುಖ್ಯಮಂತ್ರಿಯನ್ನು ರಾಜ್ಯದ...

ದಿನದ ಸುದ್ದಿ2 days ago

ಫಸಲ್ ಭೀಮಾ ಯೋಜನೆಯಲ್ಲಿ ಅಕ್ರಮ | ಗ್ರಾಮ ಆಡಳಿತಾಧಿಕಾರಿ ಕೆ.ಸುರೇಶ ಸೇರಿ 8 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ವಿಜಯನಗರ ಜಿಲ್ಲೆ ಹರಪನಹಳ್ಳಿ ತಾಲ್ಲೂಕು ಹಾರಕನಾಳು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬಹು ಗ್ರಾಮಗಳಲ್ಲಿ ಪ್ರಧಾನಮತ್ರಿ ಫಸಲ್ ಭೀಮಾ ಯೋಜನೆಯ ಅಡಿಯಲ್ಲಿ ನಡೆದಿರುವ ಬಹುಕೋಟಿ ಹಗರಣವನ್ನು ತನಿಖೆಗೆ ಒಳಪಡಿಸಿ,...

ದಿನದ ಸುದ್ದಿ3 days ago

ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜಿನ ಭವ್ಯ ‘ವಜ್ರ ಮಹೋತ್ಸವ’ ಆಚರಣೆ; ಉಪರಾಷ್ಟ್ರಪತಿ ಹಾಗೂ ಮುಖ್ಯಮಂತ್ರಿಗಳ ಆಗಮನ

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಪ್ರತಿಷ್ಠಿತ ವಿಶ್ವವಿದ್ಯಾಲಯ ಯು.ಬಿ.ಡಿ.ಟಿ. ಇಂಜಿನಿಯರಿಂಗ್ ಕಾಲೇಜು ತನ್ನ 75 ವರ್ಷಗಳ ಅತ್ಯುತ್ತಮ ಶೈಕ್ಷಣಿಕ ಸೇವೆಯ ನೆನಪಿಗಾಗಿ (1951-2026) ಹಮ್ಮಿಕೊಂಡಿರುವ ಭವ್ಯ “ವಜ್ರ ಮಹೋತ್ಸವ ಕಾರ್ಯಕ್ರಮವು...

ದಿನದ ಸುದ್ದಿ4 days ago

ವಂಚನೆ | ಗಜೇಂದ್ರಗಡ ಶ್ರೀ ಅನ್ನದಾನೇಶ್ವರ ಐ.ಟಿ.ಐ ಕಾಲೇಜು ಪ್ರಾಂಶುಪಾಲ ಅಮರಪ್ಪ ಗಾಣಿಗೇರ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ : ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ 2006 ರಿಂದ 2025ರ ಅವಧಿಯಲ್ಲಿ ಅಧ್ಯಯನ ಮಾಡಿರುವ ಎಸ್ಸಿ/ಎಸ್ಟಿ ಹಾಗೂ ಹಿಂದುಳಿದ ವರ್ಗಗಳ...

ದಿನದ ಸುದ್ದಿ4 days ago

ದಾವಣಗೆರೆ | ಇಂದು ಕರೆಂಟ್ ಇರಲ್ಲ

ಸುದ್ದಿದಿನ,ದಾವಣಗೆರೆ:ಬೆಸ್ಕಾಂ ಜಗಳೂರು ಉಪವಿಭಾಗದ ವ್ಯಾಪ್ತಿಯಲ್ಲಿ ತುರ್ತು ಜಂಗಲ್ ಕಟಿಂಗ್ ಮತ್ತು ಫೀಡರ್‌ಗಳ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಮೇ 26 ರಂದು ಬೆಳಿಗ್ಗೆ 09-00 ರಿಂದ ಸಂಜೆ 05-00...

ದಿನದ ಸುದ್ದಿ7 days ago

ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ದೂರು ನೀಡಿ ನಿಗಧಿತ ಅವಧಿ...

ದಿನದ ಸುದ್ದಿ1 week ago

ಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?

ಗಿರೀಶ್ ಬಳ್ಳಾರಿ ಸುದ್ದಿದಿನ,ಬಳ್ಳಾರಿ:ನಗರದ ಗಾಂಧಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯ ನಂತರ ಕೊಂಡಯ್ಯ ಫ್ಯಾಕ್ಟರಿಯ ಹುಸೇನ್ ನಗರದ ಜಾಲಿ ಬೇಲಿಯ ಒಳಭಾಗದಲ್ಲಿ ಅಕ್ರಮವಾಗಿ...

ದಿನದ ಸುದ್ದಿ1 week ago

ಪಂಚಪಾಡಿ ಪದ್ಧತಿಯಲ್ಲಿ ವಿದ್ಯಾಭ್ಯಾಸ | ತ್ಯಾವಣಿಗೆಯ ಮಂದಾರ ಶಾಲೆಯಲ್ಲಿ ಪ್ರವೇಶ ಪ್ರಾರಂಭ

~ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ:ಚನ್ನಗಿರಿ ತಾಲೂಕು ವ್ಯಾಪ್ತಿಯ ತ್ಯಾವಣಿಗೆ ಗ್ರಾಮದಲ್ಲಿ ಪಂಚಪಾಡಿ ಮತ್ತು ಆಧುನಿಕ ಪದ್ಧತಿಯಲ್ಲಿ ಮಕ್ಕಳಿಗೆ ವಿದ್ಯಾಭ್ಯಾಸ ನೀಡುವ ಒಂದು ವಿನೂತನ ಕಾರ್ಯಕ್ಕೆ ಮುಂದಡಿ ಇಟ್ಟಿದ್ದಾರೆ. ಪಂಚಪಾಡಿ...

ಅಂಕಣ1 week ago

ಗೆಳೆತನದ ಮಹತ್ವ ಸಾರುವ ಕುಚುಕು ಇಂದಿನಿಂದ ಅಮೋಘ ಪ್ರಾರಂಭ ; ದಾವಣಗೆರೆ ಹುಡುಗ ಅರ್ಜುನ್ ಚೌಹಾಣ್ ಅವರ ಮೂರನೇ ಚಿತ್ರ ತೆರೆಗೆ

ವಿದ್ಯಾನಾಯ್ಕ್ ಅರೇಹಳ್ಳಿ ಸುದ್ದಿದಿನ,ದಾವಣಗೆರೆ:ಬಂಜಾರ ಸಮುದಾಯದ ಪ್ರತಿಭಾನ್ವಿತ ನಟ ಹಾಗೂ ನಿರ್ದೇಶಕರಾದ ಅರ್ಜುನ್ ಚೌಹಾಣ್ ನಟನೆಯ ಕುಚುಕು ಚಿತ್ರ ದಾವಣಗೆರೆ ನಗರದ ತ್ರಿಶುಲ್ ಚಿತ್ರಮಂದಿರದಲ್ಲಿ ಇಂದಿನಿಂದ ಪ್ರದರ್ಶನ ಕಾಣಲಿದೆ....

ದಿನದ ಸುದ್ದಿ1 week ago

ಕೀಲು ಮತ್ತು ಮೂಳೆ ಚಿಕಿತ್ಸೆ ; ರೋಬೋಟಿಕ್ ಮತ್ತು ಮಿನಿಮಲಿ ಇನ್ನೇಸಿವ್ ಸರ್ಜರಿಗಳಲ್ಲಿ‌ ಮಹತ್ವದ ಬದಲಾವಣೆ : ಡಾ.ಲೋಕೇಶ್ ಎ. ವೀರಪ್ಪ

ಸುದ್ದಿದಿನ,ದಾವಣಗೆರೆ:ವಯೋಸಹಜವಾಗಿ ಕಂಡುಬರುವ ಮೊಣಕಾಲು, ಸೊಂಟ, ಭುಜ ಮತ್ತು ಕ್ರೀಡಾ ಸಂಬಂಧಿತ ಸಂಧಿ ಸಮಸ್ಯೆಗಳಿಗೆ ಸಮಯೋಚಿತ ಚಿಕಿತ್ಸೆ ಮತ್ತು ನೂತನ ಶಸ್ತ್ರಚಿಕಿತ್ಸಾ ತಂತ್ರಜ್ಞಾನಗಳು ಹೇಗೆ ಸಹಾಯವಾಗುತ್ತಿವೆ ಹಾಗೂ ಈ...

Trending