Connect with us

ಸಿನಿ ಸುದ್ದಿ

‘ಉರಿ – ಸರ್ಜಿಕಲ್ ಸ್ಟೈಕ್’ ಎಂಬ ಸೈನಿಕರ ಅದ್ಬುತ ಕಾರ್ಯಾಚರಣೆ..!

Published

on

ಭಾರತೀಯ ಸೇನಾ ಕಾರ್ಯಾಚರಣೆ ಸಂಬಂಧಿತ ಭಾರತೀಯ ಸಿನಿಮಾರಂಗದಲ್ಲಿ ಈವರೆಗೂ ಅನೇಕ ಚಿತ್ರಗಳು ಬಂದಿದೆ. ಹಿಂದಿ ಜತೆಗೆ ಪ್ರಾದೇಶಿಕ ಭಾಷೆಗಳಲ್ಲಿಯೂ ಸೈನಿಕರ ವೀರತೆ ಪ್ರದರ್ಶಿಸುವ ಕಥಾ ಚಿತ್ರಗಳು ವೀಕ್ಷಕರ ಗಮನ ಸೆಳೆದಿದೆ. ಕಾರ್ಗಿಲ್ ವಿಷಾಯಾಧರಿಸಿ ಹತ್ತಕ್ಕೂ ಅಧಿಕ ಸಿನಿಮಾಗಳು ತೆರೆಕಂಡಿದೆ. ಕಾರ್ಗಿಲ್ ಸಮರವನ್ನೇ ಮುಖ್ಯಕಥೆಯಾಗಿರಿಸಿಕೊಂಡ ಚಿತ್ರಗಳು ಹಣ ಗಳಿಸುವಲ್ಲಿ ಯಶಸ್ಸು ಕಂಡಿದೆ. ಈ ಮೂಲಕ ಸೈನಿಕರು, ಸೈನ್ಯದ ಕಥೆಯನ್ನು ಹೊಂದಿದ ಚಿತ್ರಗಳು ಪ್ರೇಕ್ಷಕರ ಮನಸ್ಸು ಗೆಲ್ಲುತ್ತದೆ ಎಂಬುದು ಸಾಬೀತಾಗಿದೆ.

ಆದರೆ, ಇದೀಗ ಮತ್ತೊಂದು ಇತಿಹಾಸ ಸೖಷ್ಟಿಯಾಗಿದೆ. 2016 ರ ಸರ್ಜಿಕಲ್ ಸ್ಟೈಕ್ ಆಧರಿಸಿ ಉರಿ ಎಂಬ ಹೆಸರಿನ ಚಿತ್ರ ತೆರೆಕಂಡು ದೇಶ ಮಾತ್ರವಲ್ಲದೇ ವಿದೇಶಗಳಲ್ಲಿಯೂ ಸದ್ದು ಮಾಡುತ್ತಿದೆ.

ಕಾಶ್ಮೀರ ಗಡಿಯಲ್ಲಿನ ಉರಿ ಎಂಬ ಗ್ರಾಮದ ಸೇನಾ ಶಿಬಿರದ ಮೇಲೆ ಬೆಳ್ಳಂಬೆಳಗ್ಗೆ ಪಾಕ್ ಭಯೋತ್ಪಾದಕರು ನುಸುಳಿ ಭಾರತದ ಹೆಮ್ಮೆಯ 19 ಯೋಧರನ್ನು ಬಲಿ ಪಡೆದಿದ್ದರು. ಈ ಭಯೋತ್ಪಾದಕರ ಕಾರ್ಯಾಚರಣೆ ಭಾರತೀಯರನ್ನು ರೊಚ್ಚಿಗೆಬ್ಬಿಸಿತ್ತು. ಅದರಲ್ಲಿಯೂ ಸೈನ್ಯದ ಅತ್ಯಂತ ಪರಾಕ್ರಮಿ ಯೋಧರೇ ಭಯೋತ್ಪಾದಕರಿಗೆ ಸುಲಭವಾಗಿ ಬಲಿಯಾಗಿದ್ದರು. ಭಾರತದ ಸೈನ್ಯದ ಪ್ರತಿಷ್ಟೆಗೂ ಈ ಘಟನೆ ಮಸಿ ಬಳಿದಿತ್ತು. ಸೈನ್ಯದ ಮರ್ಯಾದೆಯೂ ಪ್ರಶ್ನೆಯಾಗಿತ್ತು.

ಪ್ರಧಾನಿ, ರಕ್ಷಣಾ ಸಚಿವರೂ ಸೇರಿದಂತೆ ಎಲ್ಲರೂ ಹುತಾತ್ಮರ ಬಲಿದಾನಕ್ಕೆ ಮಮ್ಮಲ ಮರುಗಿದರು. ತಮ್ಮವರನ್ನು ವಂಚಿಸಿ ಬಲಿತೆಗೆದುಕೊಂಡದ್ದು ಭಾರತೀಯ ಸೈನಿಕರ ರಕ್ತ ಕುದಿಯುವಂತೆ ಮಾಡಿತ್ತು. ಪ್ರತಿಕಾರ ತೀರಿಸಿಯೇ ಸಿದ್ದ ಎಂದು ಸೈನಿಕರು ಯೋಜನೆ ರೂಪಿಸುತ್ತಿದ್ದರು.

ಇಂಥ ಸೈನಿಕರ ಚಿಂತನೆಗೆ ಬೆಂಬಲವಾಗಿ ನಿಂತದ್ದೇ ಕೇಂದ್ರ ರಕ್ಷಣಾ ಸಚಿವಾಲಯ. ಸೇನಾ ಪಡೆಗೆ ಎಲ್ಲಾ ರೀತಿಯ ನೆರವು ನೀಡಿ ಮುನ್ನುಗ್ಗಿ, ಪಾಕ್ ನೆಲೆಗೆ ನುಗ್ಗಿ ಅಲ್ಲಿ ಅವಿತಿಟ್ಟುಕೊಂಡಿರುವ ಭಯೋತ್ಪಾದಕರನ್ನು ಬಗ್ಗು ಬಡಿಯಿರಿ ಎಂದು ಆದೇಶ ನೀಡಿಯೇ ಬಿಟ್ಟಿತ್ತು. ಈ ಆದೇಶವನ್ನೇ ಕಾಯುತ್ತಿದ್ದ ಭಾರತೀಯ ಸೈನಿಕರಿಗೆ ಅಷ್ಟೇ ಸಾಕಿತ್ತು. ಯಾವ ರೀತಿ ರಾತ್ರೋರಾತ್ರಿ ಪಾಕ್ ನೆಲೆಗೆ ನುಗ್ಗಿ ಭಯೋತ್ಪಾದಕರ ಹುಟ್ಟಡಗಿಸಿದ್ದಲ್ಲದೇ ತಾವೂ ಸುರಕ್ಷಿತವಾಗಿ ಮರಳಿ ಭಾರತಕ್ಕೆ ಮರಳುತ್ತಾರೆ.

ಉರಿ ಸರ್ಜಿಕಲ್ ಸ್ಟೈಕ್ ಗೆ ಕೇವಲ 11 ದಿನಗಳಲ್ಲಿ ನಮ್ಮ ಸೇನಾ ಪಡೆ ಎಲ್ಲಾ ರೀತಿಯಲ್ಲಿಯೂ ಸಜ್ಜಾಗುವುದೇ ಅತ್ಯಂತ ರೋಮಾಂಚಕ. ಸೈನಿಕರ ಮನೋಸ್ಥೆರ್ಯ, ಜತೆಗೆ ಗರುಡ ಎಂಬ ಅತ್ಯಾಧುನಿಕ ಹದ್ದಿನ ದ್ರೋಣ್ ಕ್ಯಾಮರ ಕಾರ್ಯಾಚರಣೆಯೂ ಕುತೂಹಲಕಾರಿ.

ಭಾರತೀಯ ಸೇನಾ ಪಡೆ ಯಾವೆಲ್ಲಾ ರೀತಿಯಲ್ಲಿ ತಯಾರಿ ನಡೆಸಿ ಭಯೋತ್ಪಾದಕರ ಹುಟ್ಟಡಗಿಸಿಸುತ್ತಾರೆ ಎಂಬ ಅದ್ಬುತ ಕಥೆಯನ್ನು ಯುವ ನಿರ್ದೇಶಕರ ಆದಿತ್ಯ ಧರ್ ತನ್ನ ಮೊದಲ ಚಿತ್ರದಲ್ಲಿ ಮನಮುಟ್ಟುವಂತೆ ನಿರ್ದೇಶಿಸಿದ್ದಾರೆ. ಕಾಶ್ಮೀರ – ಪಾಕ್ ಗಡಿಯ ನೈಜತೆಯನ್ನು ಸೈಬ್ರಿಯಾ ದೇಶದ ಕಾಡಿನಲ್ಲಿ ಚಿತ್ರಿಸಲಾಗಿದೆ. ವಿಕ್ಕಿ ಕೌಷಲ್ ಎಂಬ ನಟ ಸೇನಾಧಿಕಾರಿ ವಿಹಾನ್ ಸಿಂಗ್ ಪಾತ್ರದಲ್ಲಿ ನಟಿಸಿದ ರೀತಿಯೂ ಮೆಚ್ಚುಗೆಯಾಗುತ್ತದೆ. ಪ್ರಧಾನಿ ಮೋದಿ, ರಕ್ಷಣಾ ಸಚಿವ ಪರಿಕ್ಕರ್ ಸೇರಿದಂತೆ ಎಲ್ಲರ ಪಾತ್ರಗಳಲ್ಲಿಯೂ ನೈಜತೆಯಿದೆ. ನಿಜ ಘಟನೆಯೊಂದನ್ನು ಹೀಗೂ ಚಿತ್ರವಾಗಿಸಬಹುದು ಎಂಬುದಕ್ಕೆ ಉರಿ ಸಿನಿಮಾ ಸಾಕ್ಷಿಯಾಗುತ್ತದೆ.

ಸಾಮಾನ್ಯವಾಗಿ ಉರಿ ಸರ್ಜಿಕಲ್ ಸ್ಟೈಕ್ ನಂಥ ವಿಷಯವನ್ನು ಹೇಳುವಾಗ ಬಹಳಷ್ಟು ಸಂಗತಿಗಳಿಗೆ ಸೇನಾಡಳಿತ ಅನುಮತಿ ನೀಡುವುದಿಲ್ಲ. ಆದರೆ, ಈ ಚಿತ್ರದ ಮಟ್ಟಿಗೆ ಹಲವು ಸಂಗತಿಗಳನ್ನು ಪ್ರಸ್ತಾಪಿಸಲು ಅವಕಾಶ ನೀಡುವ ಮೂಲಕ ಬಾರತೀಯರಿಗೆ ಸೇನಾಕಾರ್ಯಾಚರಣೆಯ ವಿಷಯಗಳ ಮಾಹಿತಿ ನೀಡುವಲ್ಲಿ ಸಫಲವಾಗಿದೆ. ದೇಶಪ್ರೇಮವನ್ನು ಬಡಿದೆಬ್ಬಿಸುವ ಪ್ರಯತ್ನಕ್ಕೂ ಉರಿ ಚಿತ್ರ ನೆರವಾಗಿದೆ. ಈ ಮೂಲಕ ಸೈನ್ಯದ ಉದ್ದೇಶವೂ ಸಫಲವಾಗಿದೆ.

ಎಲ್ಲಿಯೂ ವಿಷಾಯಾಂತರಗೊಳ್ಳದೇ, ಉತ್ಪೇಕ್ಷೆಗೆಗೊಳಗಾಗದೇ ಸೀದಾಸಾದಾ ರೀತಿಯಲ್ಲಿಯೇ ಕಥೆ ಹೇಳುತ್ತಾ ಸಾಗುವ ಚಿತ್ರ ಅಂತಿಮವಾಗಿಯೂ ಬಹುಪರಾಕ್ ಎನಿಸಿಕೊಳ್ಳದೇ ದಿಡೀರ್ ಅಂತ್ಯಗೊಳ್ಳುತ್ತದೆ. ಇನ್ನೂ ಬೇಕಿತ್ತು ಎನಿಸುವಾಗಲೇ ಚಿತ್ರ ಮುಗಿಯುತ್ತದೆ. ಈ ಮೂಲಕ ಚಿತ್ರ ಮನಸ್ಸಿನಲ್ಲಿ ಹಲವು ದಿನಗಳ ಕನವರಿಕೆಗೆ ಕಾರಣವಾಗುತ್ತದೆ.

ರಾಜಕೀಯಕ್ಕಾಗಿನ ಚಿತ್ರವೇ?

ಇದು ಮೋದಿಗೆ ವೋಟ್ ತಂದುಕೊಡಲು ನೆರವಾಗುತ್ತದೆ. ಚಿತ್ರ ಹಣ ಮಾಡಲೆಂದೇ ನಿರ್ಮಿತವಾಗಿವೆ. ಇದೇನ್ ಮಹಾ ಎಂದೆಲ್ಲಾ ಕೆಲವರು ಬಾಲಿಶವಾದ ಹೇಳಿಕೆ ನೀಡುತ್ತಿದ್ದಾರೆ. ಇಂಥ ಹೇಳಿಕೆಗಳು ಬದಿಗಿರಲಿ.

ಪ್ರದಾನಿಯಾಗಿದ್ದ ವ್ಯಕ್ತಿ ಸೈನಿಕರಿಗೆ ಮುನ್ನುಗ್ಗಿ, ಸೋಲು ನನಗಿರಲಿ, ಗೆಲವು ನಿಮ್ಮದಾಗಿರಲಿ ಎಂದು ಹುರಿದುಂಬಿಸಿ ರಾತ್ರಿಯಿಡಿ ಜಾಗರಣೆ ಕುಳಿತು ಭಾರತೀಯ ಸೈನಿಕರ ಸ್ಥಿತಿ ಕಾರ್ಯಾಚರಣೆ ಸಂದರ್ಭ ಹೇಗಿದೆಯೋ ಎಂದು ತಲೆಕೆಡಿಸಿಕೊಳ್ಳುತ್ತಾರೆ ಎಂದರೆ ಅಂಥ ಪ್ರಧಾನಿ ಬಗ್ಗೆಯೂ ಗೌರವ ಬಾರದಿದ್ದರೆ ಹೇಗೆ? ಚುನಾವಣೆಯಲ್ಲಿ ಮತಗಳನ್ನು ಯಾರಿಗೆ ಹಾಕುತ್ತೇವೆಯೋ ಅದು ಅವರವರಿಗೆ ಬಿಟ್ಟದ್ದು. ಆದರೆ, ಸೈನಿಕರೇ ಭಯೋತ್ಪಾದಕರ ಹುಟ್ಟಡಗಿಸಿ ಬನ್ನಿ ಎಂದು ಧೈರ್ಯ, ಸ್ಥೆರ್ಯ, ಆಧುನಿಕ ಶಸ್ತ್ರಾಸ್ತಗಳನ್ನು ನೀಡಿದ ಆ ಪ್ರಧಾನಿಗೆ ಮೆಚ್ಚುಗೆ ಸೂಚಿಸದಿದ್ದರೆ ಹೇಗೆ?

ಇದೇ ಅನುಮತಿ ಮೊದಲೇ ಸಿಕ್ಕಿದ್ದರೇ?

ಕೆಲವು ದಶಕಗಳ ಹಿಂದೆ, ನನಗೆ 24 ಗಂಟೆಗಳ ಕಾಲಾವಕಾಶ ನೀಡಿ ಪಾಕಿಸ್ತಾನಿಗಳ ಹುಟ್ಟಡಗಿಸಿ ಬರುತ್ತೇನೆ ಎಂದಿದ್ದ ಕೊಡಗಿನ ಹೆಮ್ಮೆಯ ಜನರಲ್ ತಿಮ್ಮಯ್ಯ ಅವರಿಗೂ ಆ ಸಂದರ್ಭ ಸರ್ಜಿಕಲ್ ಸ್ಟೈಕ್ ಗೆ ಅನುಮತಿ ನೀಡಿದ್ದರೆ, ಕಾಶ್ಮೀರಕ್ಕೆ ಇಂದಿನ ದುರ್ಗತಿ ಬರುತ್ತಿರಲಿಲ್ಲವೇನೋ.

ಅದೇನೇ ಇರಲಿ.. ಉರಿ ಎಂಬ ಅಪರೂಪದ ಸಿನಿಮಾ ವೀಕ್ಷಿಸುವ ಮೂಲಕ ಸೈನಿಕ ಕಾರ್ಯಾಚರಣೆ ಹೇಗಿರುತ್ತೆ.. ಸೈನಿಕರ ಜೀವನ ಎಷ್ಟೊಂದು ಸಾಹಸಮಯ, ಯಾತನಾಮಯವಾಗಿರುತ್ತೆ ಎಂದು ತಿಳಿದುಕೊಳ್ಳುವ ಅಪೂರ್ವ ಅವಕಾಶವನ್ನು ಉರಿ ಎಂಬ ಚಿತ್ರ ನೀಡಿದೆ. ನಾನು ಸಿನಿಮಾಗಳನ್ನು ನೋಡೇದೇ ಇಲ್ಲ ಎಂಬ ಧೋರಣೆ ಬದಿಗಿಟ್ಟು ಭಾರತದ ಗಡಿಯನ್ನು ತಮ್ಮ ಪ್ರಾಣ ಒತ್ತೆಯಿಟ್ಟು ಕಾಯುತ್ತಿರುವ ಸೈನಿಕರಿಗಾಗಿಯಾದರೂ ಒಮ್ಮೆ ನೋಡಿ.

ಅಂದ ಹಾಗೆ, ಈವರೆಗೂ ನಾವು ನೀವೆಲ್ಲಾ ಹೆಮ್ಮೆಯಿಂದ ಹೇಳಿಕೊಳ್ಳುತ್ತಿದ್ದ ಬಾಹುಬಲಿ -2 ಎಂಬ ಚಿತ್ರದ ಎಲ್ಲಾ ದಾಖಲೆಗಳನ್ನು ಉರಿ ಚಿತ್ರ ಪುಡಿಗಟ್ಟಿದೆ. ಕೇವಲ 23 ದಿನಗಳಲ್ಲಿ ಉರಿ ಚಿತ್ರ 200 ಕೋಟಿ ರು ಸಂಗ್ರಹಿಸಿ 500 ಕೋಟಿ ಸಂಗ್ರಹದತ್ತ ಮುನ್ನುಗ್ಗಿ ದೇಶದ ಇತಿಹಾಸದಲ್ಲಿಯೇ ಮಹೋನ್ನತ ದಾಖಲೆಗೆ ದಾಪುಗಾಲಿಡುತ್ತಿದೆ.

ಉರಿ ಎಂಬ ಚಿತ್ರವನ್ನು ನೋಡುತ್ತಿದ್ದಾಗ ಕೇಳಿಬರುತ್ತಿದ್ದ ಸೈನಿಕರ ಪರ ಘೋಷಣೆಗಳು, ವಂದೇ ಮಾತರಂ ಎಂಬ ಉದ್ಗೋಷ. ಚಪ್ಪಾಳೆಯ ಮಾರ್ಧನಿ. ಭಾರತದ ಸೇನಾ ಪಡೆಯ ಬಗ್ಗೆ ಭಾರತೀಯರಿಗೆ ಇರುವ ಹೆಮ್ಮೆಯ ದ್ಯೋತಕ ಎನ್ನಿಸಿತು. ಸೈನಿಕರ ವೀರಸಾಹಸವನ್ನು ಚಿತ್ರ ರೂಪದಲ್ಲಿ ವೀಕ್ಷಿಸಿದರರ ಸಂತೋಷದ ಕಂಬನಿ ನಮ್ಮ ಸೈನಿಕರಿಗೆ ತುಡಿಯುವ ಮನಸ್ಸುಗಳು ಇನ್ನೂ ಜೀವಂತವಿದೆ ಎಂಬ ಭಾವನೆಗೆ ಕಾರಣವಾಯಿತು. ಅವರವರ ಅಭಿಮಾನಿ ನಾಯಕರಿಗೆ ಪ್ರೇಕ್ಷಕರು ಥಿಯೇಟರ್ ಸೂರು ಹಾರಿಹೋಗುವಂತೆ ಚಪ್ಪಾಳೆ ತಟ್ಟಿ , ಶಿಳ್ಳೆ ಹೊಡೆದು ಸಂಭ್ರಮಿಸಿದ್ದನ್ನು ನೋಡಿದ್ದೇನೆ.

ಆದರೆ, ಚಿತ್ರವೊಂದನ್ನು ವೀಕ್ಷಿಸುತ್ತಲೇ ಕಣ್ಣೀರುಗರೆಯುತ್ತಾ, ಆ ವೀರ ಸೈನಿಕರಿಗೆ ಭಾಷ್ಪಾಂಜಲಿ ಹಾಕುತ್ತಿದ್ದ ಬಹಳ ಅಪರೂಪದ ಸನ್ನಿವೇಶವನ್ನೂ ನಾನು ನೋಡಿದೆ. ಅದೇ ಉರಿ ಎಂಬ ಸರ್ಜಿಕಲ್ ಸ್ಟ್ಕೈಕ್ ನ ಸಾರ್ಥಕತೆ.

(ಗಮನಿಸಿ – ಮಡಿಕೇರಿಯ ಕಾವೇರಿ ಚಿತ್ರಮಂದಿರ ಶ್ರ10, 2, 6 ಮತ್ತು 9 ಗಂಟೆ ಪ್ರದಶ೯ನ ಹಾಗೂ ಕುಶಾಲನಗರದ ಕೂರ್ಗ್ ಸಿನಿಫ್ಲೆಕ್ಸ್ ( 11, 2,5 ಮತ್ತು 8 ಗಂಟೆ ಪ್ರದಶ೯ನ) ಗಳಲ್ಲಿ ಗುರುವಾರದವರೆಗೆ ಉರಿ ಚಿತ್ರ ವೀಕ್ಷಿಸಬಹುದು.)

ಸೈನಿಕರಾಗಲಿಲ್ಲ, ಪರವಾಗಿಲ್ಲ. ಸೈನಿಕರ ಧೀರ ಕಾರ್ಯಾಚರಣೆಯನ್ನು 2.10 ಗಂಟೆ ಸಿನಿಮಾದಲ್ಲಿ ವೀಕ್ಷಿಸಿ ಅಭಿನಂದಿಸುವ ಅವಕಾಶ ಮಿಸ್ ಮಾಡಿಕೊಳ್ಳಬೇಡಿ.

– ಅನಿಲ್ ಎಚ್.ಟಿ
ಪತ್ರಕರ್ತ
ಮಡಿಕೇರಿ

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ನಟ ದರ್ಶನ್‌ಗೆ ರಾಜಾತಿಥ್ಯ ; ಏಳು ಮಂದಿ ಜೈಲು ಅಧಿಕಾರಿ, ಸಿಬ್ಬಂದಿ ಅಮಾನತು

Published

on

ಸುದ್ದಿದಿನಡೆಸ್ಕ್:ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ನಟ ದರ್ಶನ್‌ಗೆ ರಾಜಾತಿಥ್ಯ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಏಳುಮಂದಿ ಜೈಲು ಅಧಿಕಾರಿ, ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ ಎಂದು ಗೃಹ ಸಚಿವ ಡಾ. ಜಿ. ಪರಮೇಶ್ವರ್ ತಿಳಿಸಿದರು.

ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೈಲರ್ ಶರಣಬಸವ ಅಮೀನಗಢ, ಸಹಾಯಕ ಜೈಲರ್ ಪುಟ್ಟಸ್ವಾಮಿ, ಜೈಲ್ ಹೆಡ್ ವಾರ್ಡರ್‌ಗಳಾದ ವೆಂಕಪ್ಪ, ಸಂಪತ್, ವಾರ್ಡರ್‌ಗಳಾದ ಬಸಪ್ಪ, ಪ್ರಭು, ಶ್ರೀಕಾಂತ್ ಅವರನ್ನು ಅಮಾನತು ಮಾಡಲಾಗಿದೆ ಎಂದು ಮಾಹಿತಿ ನೀಡಿದರು.

ಘಟನೆ ಹಿನ್ನೆಲೆಯಲ್ಲಿ ಹಿರಿಯ ಅಧಿಕಾರಿಗಳ ವಿರುದ್ಧವೂ ಸಹ ತನಿಖೆ ನಡೆಯುತ್ತಿದೆ. ಮುಂದೆ ಇಂತಹ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದರು.

ಇನ್ನೊಂದೆಡೆ, ಜೈಲಿನಲ್ಲಿ ನಟ ದರ್ಶನ್ ಹಾಗೂ ಮತ್ತಿತರರಿಗೆ ರಾಜಾತಿಥ್ಯ ಒದಗಿಸುತ್ತಿರುವ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ದರ್ಶನ್ ಮತ್ತು ಇತರರನ್ನು ಕೂಡಲೇ ಬೇರೆ ಬೇರೆ ಕಾರಾಗೃಹಗಳಿಗೆ ಸ್ಥಳಾಂತರ ಮಾಡುವಂತೆ ನಿರ್ದೇಶಿಸಿದ್ದಾರೆ. ಅಲ್ಲದೆ, ಪ್ರಕರಣದ ಬಗ್ಗೆ ಸಂಪೂರ್ಣ ವರದಿ ನೀಡುವಂತೆ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಸೂಚಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕನ್ನಡದ ಖ್ಯಾತ ನಿರೂಪಕಿ ಅಪರ್ಣಾ ಇನ್ನಿಲ್ಲ..!

Published

on

ಸುದ್ದಿದಿನ,ಬೆಂಗಳೂರು: ನಟಿ ಹಾಗೂ ಖ್ಯಾತ ನಿರೂಪಕಿ ಅಪರ್ಣ (57) ನಿಧನರಾಗಿದ್ದಾರೆ.ಸ್ಪಷ್ಟ ಕನ್ನಡದ ಮೂಲಕ ನಿರೂಪಣೆ ಮಾಡಿ ಕನ್ನಡಿಗರ ಮನೆಗದ್ದ ಅವರು ಕ್ಯಾನ್ಸರ್‌ನಿಂದ ಬಳಲುತ್ತಿದ್ದರು. ಅಪರ್ಣ ಅವರು ಇಂದು ಸಂಜೆ ಅಪರ್ಣ ಬನಶಂಕರಿ ಸೆಕೆಂಡ್ ಸ್ಟೇಜ್‌ನಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳಿದ್ದಾರೆ.

ಹಲವು ಸಿನೆಮಾಗಳಲ್ಲಿ ನಟಿಸಿದ್ದ ಅವರು ಮಜಾಟಾಕೀಸ್ ಮೂಲಕ ಮನೆಮಾತಾಗಿದ್ದರು. ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭ್ರಷ್ಟಾಚಾರದ ವಿರುದ್ಧ ಶಂಕರ್ ಇನ್ನೊಂದು ಹೋರಾಟ!

Published

on

  • ಚೇತನ್ ನಾಡಿಗೇರ್

ಣಿರತ್ನಂ ಏನೇ ಮಾಡಲಿ, ಯಾವುದೇ ಚಿತ್ರ ತೆಗೆಯಲಿ, ಅದರ ಮೂಲ ಸೆಲೆ ಪ್ರೀತಿಯಾಗಿರುತ್ತದೆ. ಪ್ರೀತಿಯ ಬೇರೆಬೇರೆ ವ್ಯಾಖ್ಯಾನಗಳನ್ನು, ಬೇರೆಬೇರೆ ಹಿನ್ನೆಲೆಯಲ್ಲಿ ಮಣಿರತ್ನಂ ಪ್ರತಿಚಿತ್ರದಲ್ಲೂ ಹೇಳುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ. ಅದೇ ರೀತಿ, ರಾಮ್‍ಗೋಪಾಲ್‍ ವರ್ಮ ಏನೇ ಚಿತ್ರ ಮಾಡಿದರೂ, ಕ್ರೈಮ್‍ ಹಿನ್ನೆಲೆಯಲ್ಲೇ ಮಾಡುತ್ತಾರೆ. ಹೀಗೆ ಬೇರೆಬೇರೆ ನಿರ್ದೇಶಕರು ಒಂದೇ ವಿಷಯವನ್ನಿಟ್ಟುಕೊಂಡು ಬೇರೆಬೇರೆ ರೀತಿ ವ್ಯಾಖ್ಯಾನಿಸುವ ಪ್ರಯತ್ನ ಮಾಡುತ್ತಲೇ ಇರುತ್ತಾರೆ.

ಈಗ್ಯಾಕಪ್ಪಾ ಈ ಮಾತು ಎಂದರೆ, ಶಂಕರ್ ನಿರ್ದೇಶನದ ‘ಇಂಡಿಯನ್‍ 2’ ನಾಳೆ ಜಗತ್ತಿನಾದ್ಯಂತ ಬಿಡುಗಡೆಯಾಗುತ್ತಿದೆ. ತಮ್ಮದೇ ಯಶಸ್ವಿ ಚಿತ್ರ ‘ಇಂಡಿಯನ್‍’ನ ಮುಂದುವರೆದ ಭಾಗ ಇದು. ಆ ಚಿತ್ರ ಬಿಡುಗಡೆಯಾಗಿ 26 ವರ್ಷಗಳ ನಂತರ ‘ಇಂಡಿಯನ್‍ 2’ ಬಿಡುಗಡೆಯಾಗುತ್ತಿದೆ. ಅಷ್ಟೇ ಅಲ್ಲ, ಭ್ರಷ್ಟಾಚಾರದ ವಿಷಯವನ್ನಿಟ್ಟುಕೊಂಡು ಶಂಕರ್‍ ನಿರ್ದೇಶಿಸುತ್ತಿರುವ ಏಳನೇ ಚಿತ್ರ ಇದು.

ಶಂಕರ್‍ ಚಿತ್ರಗಳೆಂದರೆ ಅದ್ಧೂರಿತನ, ಹಿಟ್‍ ಹಾಡುಗಳು, ದೊಡ್ಡ ಕ್ಯಾನ್ವಾಸ್‍, ಮಾಸ್ ಅಂಶಗಳು ಇವೆಲ್ಲವೂ ಕಾಣುತ್ತದೆ. ಅದೇ ರೀತಿ ಗಮನಸೆಳೆಯುವ ಒಂದು ವಿಷಯವೆಂದರೆ, ಅದು ಭ್ರಷ್ಟಾಚಾರದ ವಿರುದ್ಧ ಶಂಕರ್‍ ನಿರಂತರ ಹೋರಾಟ. ತಮ್ಮ ನಿರ್ದೇಶನದ ಮೊದಲ ಚಿತ್ರದಿಂದಲೂ ಶಂಕರ್‍ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಲೇ ಇದ್ದಾರೆ. ಶಂಕರ್‍ ಈ 31 ವರ್ಷಗಳಲ್ಲಿ ನಿರ್ದೇಶಿಸಿರುವುದು ಕೇವಲ 14 ಚಿತ್ರಗಳನ್ನು. ಆ ಪೈಕಿ ಏಳು ಚಿತ್ರಗಳು ಭ್ರಷ್ಟಾಚಾರ ಎಂಬ ವಿಷಯವನ್ನಿಟ್ಟುಕೊಂಡು ಮೂಲವಾಗಿಟ್ಟುಕೊಂಡು ಮಾಡಲಾಗಿದೆ.

ಈ ಪ್ರಯಾಣ ಶುರುವಾಗಿದ್ದು 1993ರಲ್ಲಿ ಬಿಡುಗಡೆಯಾದ ‘ಜಂಟಲ್‍ಮ್ಯಾನ್’ ಚಿತ್ರದಲ್ಲಿ ಶಿಕ್ಷಣ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರದ ಕುರಿತು ಕಥೆ ಮಾಡಿದ್ದರು. ಶಿಕ್ಷಣ ವ್ಯವಸ್ಥೆಯಲ್ಲಿನ ಭ್ರಷ್ಟಾಚಾರ ಮತ್ತು ಲಂಚಾವತಾರದಿಂದ ಹೇಗೆ ಪ್ರತಿಭಾವಂತ ಯುವಕರು ಅವಕಾಶವಂಚಿತರಾಗುತ್ತಿದ್ದಾರೆ ಎಂದು ಹೇಳಿದರು. ಒಬ್ಬ ಸಾಮಾನ್ಯ ಮನುಷ್ಯ ಹೇಗೆ ಈ ವ್ಯವಸ್ಥೆಯ ವಿರುದ್ಧ ಹೋರಾಡುತ್ತಾನೆ ಎಂದು ತೋರಿಸಿದ್ದರು. ಆ ನಂತರ ‘ಇಂಡಿಯನ್‍’, ‘ಮುದಲ್ವನ್‍’, ‘ಅನ್ನಿಯನ್‍’, ‘ಶಿವಾಜಿ: ದಿ ಬಾಸ್‍’ ಮತ್ತು ‘ಇಂಡಿಯನ್‍ 2’ ಚಿತ್ರಗಳ ಮೂಲಕ ಅವರು ಇದೇ ವಿಷಯವನ್ನು ಹೇಳುವ ಪ್ರಯತ್ನವನ್ನು ಮಾಡಿದ್ದಾರೆ.

ವಿಷಯ ಅದೇ ಭ್ರಷ್ಟಾಚಾರ ಅಥವಾ ಲಂಚಾವತಾರವಿರಬಹುದು. ಅದೇ ವಿಷಯವನ್ನಿಟ್ಟುಕೊಂಡು ಶಂಕರ್‍ ಬೇರೆಬೇರೆ ರೀತಿಯಲ್ಲಿ ಕಮರ್ಷಿಯಲ್‍ ಆಗಿ ಚಿತ್ರಗಳನ್ನು ರೂಪಿಸಿರುವುದಿದೆಯಲ್ಲಾ ಅದು ವಿಶೇಷ ಎನಿಸುತ್ತದೆ. ‘ಇಂಡಿಯನ್‍’ನಲ್ಲಿ ಸ್ವಾತಂತ್ರ್ಯ ಹೋರಾಟಗಾರನೊಬ್ಬ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಾನೆ. ತನ್ನ ಮಗನೇ ದೊಡ್ಡ ಭ್ರಷ್ಟ ಎಂದು ಗೊತ್ತಾದಾಗ ಅವನನ್ನೇ ಸಾಯಿಸುತ್ತಾನೆ. ‘ಮುದಲ್ವನ್’ ಎಂಬ ಚಿತ್ರದಲ್ಲಿ ಒಬ್ಬ ಸಾಮಾನ್ಯ ಮನುಷ್ಯ ಒಂದು ದಿನದ ಮುಖ್ಯಮಂತ್ರಿಯಾಗಿ ಭ್ರಷ್ಟಾಚಾರ ತಡೆಯುವ ಪ್ರಯತ್ನವನ್ನು ತನ್ನದೇ ಶೈಲಿಯಲ್ಲಿ ಮಾಡುತ್ತಾನೆ. ‘ಅನ್ನಿಯನ್‍’ನಲ್ಲಿ ಭ್ರಷ್ಟಾಚಾರ, Multiple Personality Disorder ಮತ್ತು ಗರುಡ ಪುರಾಣವನ್ನು ಶಂಕರ್‍ ಸೇರಿಸಿ ಕಥೆ ಮಾಡಿರುವ ರೀತಿಯೇ ವಿಶಿಷ್ಟ. ‘ಶಿವಾಜಿ’ಯಲ್ಲಿ ನೂರಾರು ಕೋಟಿ ಆಸ್ತಿ ಇರುವ ಶ್ರೀಮಂತನೊಬ್ಬ ಈ ವ್ಯವಸ್ಥೆಯಿಂದ ಬೇಸತ್ತು ಹೋರಾಟಕ್ಕೆ ಇಳಿಯುತ್ತಾನೆ. ಈಗ ‘ಇಂಡಿಯನ್‍ 2’ ಚಿತ್ರದಲ್ಲಂತೂ ಭ್ರಷ್ಟಾಚಾರದ ವಿರುದ್ಧ ಹೋರಾಟವನ್ನು ಎಂದು Second War of Independence ಬಣ್ಣಿಸಿದ್ದಾರೆ. ಅಲ್ಲಿಗೆ ಭ್ರಷ್ಟಾಚಾರದ ವಿರುದ್ಧ ಶಂಕರ್‍ ಮತ್ತೊಂದು ಹೋರಾಟ ಶುರು ಮಾಡಿದ್ದಾರೆ.

ಇಷ್ಟಕ್ಕೂ ಶಂಕರ್‍ ಯಾಕೆ ಈ ವಿಷಯದ ಮೇಲೆ ಮೇಲಿಂದ ಮೇಲೆ ಸಿನಿಮಾ ಮಾಡುತ್ತಾರೆ? ಈ ಕುರಿತು ಸಂದರ್ಶನವೊಂದರಲ್ಲಿ ಮಾತನಾಡಿರುವ ಅವರು, ‘ಯಾವುದೇ ವಿಷಯ ನನ್ನನ್ನು ಕಾಡಿದರೂ, ಆ ಕುರಿತು ಕಥೆ ಮಾಡುವುದಕ್ಕೆ ಪ್ರಯತ್ನ ಮಾಡುತ್ತೇನೆ. ಈ ಭ್ರಷ್ಟಾಚಾರ ನನ್ನನ್ನು ಪದೇಪದೇ ಕಾಡಿದೆ. ಅದನ್ನು ಕಮರ್ಷಿಯಲ್‍ ರೂಪದಲ್ಲಿ, ಮನರಂಜನಾತ್ಮಕವಾಗಿ ಹೇಳುವ ಪ್ರಯತ್ನ ಮಾಡುತ್ತಾ ಬಂದಿದ್ದೇನೆ. ಒಂದು ವಿಷಯ ಸ್ಪಷ್ಟವಾದ ಮೇಲೆ, ಅದನ್ನು ಹೇಗೆ ತರಬೇಕು ಎಂದು ಯೋಚಿಸುತ್ತೇನೆ. ಪ್ರೇಕ್ಷಕರ ದೃಷ್ಟಿಕೋನದಿಂದ ಯೋಚಿಸುವುದಕ್ಕೆ ಪ್ರಯತ್ನಿಸುತ್ತೇನೆ. ಅವರಿಗೆ ಬೋರ್‍ ಆಗಬಾರದು ಎಂಬ ಅಂಶವನ್ನು ಗಮನದಲ್ಲಿಟ್ಟುಕೊಂಡು ಚಿತ್ರಕಥೆ ಮಾಡುತ್ತಾ ಹೋಗುತ್ತೇನೆ’ ಎಂದು ಹೇಳಿಕೊಂಡಿದ್ದಾರೆ ಶಂಕರ್.

ಬಹುಶಃ ಅದೇ ಅವರ ಯಶಸ್ಸು ಎನ್ನಬಹುದೇನೋ? ಶಂಕರ್‍ ಒಂದು ಚಿತ್ರದ ಕಥೆಗೆ ಎಷ್ಟು ಪ್ರಾಮುಖ್ಯತೆ ಕೊಡುತ್ತಾರೋ, ಮನರಂಜನಾತ್ಮಕ ಅಂಶಗಳಿಗೂ ಅಷ್ಟೇ ಪ್ರಾಮುಖ್ಯತೆ ಕೊಡುತ್ತಾರೆ. ಕೆಲವೊಮ್ಮೆ ಶಂಕರ್‍ ಪಾತ್ರಗಳು Larger than life ಎಂದನಿಸಬಹುದು. ಕೆಲವೊಮ್ಮೆ ತುಂಬಾ exaggeration ಅಂತನಿಸಬಹುದು. ಒಂದು ದಿನಕ್ಕೆ ಮುಖ್ಯಮಂತ್ರಿ ಆಗುವುದಕ್ಕೆ ಸಾಧ್ಯವಾ? ಪಾರ್ಥಸಾರಥಿ ರಾಮಾನುಜ ಅಯ್ಯಂಗಾರ್‍ಗೆ ಅನ್ನಿಯನ್‍ ಆಗುವುದಕ್ಕೆ ಸಾಧ್ಯವಾ? 78ರ ವೃದ್ಧನೊಬ್ಬ ಸೇನಾಪತಿಯಾಗಿ ಹಾಗೆ ಹೊಡೆದಾಡುವುದಕ್ಕೆ ಸಾಧ್ಯವೇ? ಈ ಪ್ರಶ್ನೆಗಳು ಬರಬಹುದು. ತಾರ್ಕಿಕವಾಗಿ ನೋಡಿದರೆ ಇದು ಕಷ್ಟ. ಆದರೆ, ಶಂಕರ್ ಲಾಜಿಕ್‍ಗಿಂತ ಮ್ಯಾಜಿಕ್‍ನಲ್ಲಿ ನಂಬಿಕೆ ಇಟ್ಟವರು. ಏನೇನೋ ಮ್ಯಾಜಿಕ್‍ ಮಾಡಿ ಪ್ರೇಕ್ಷಕರನ್ನು ನಂಬಿಸುತ್ತಾರೆ. ತಮ್ಮ ಪ್ರಪಂಚದಲ್ಲಿ ಎಳೆದುಕೊಳ್ಳುತ್ತಾರೆ.

ಈಗೆಲ್ಲಾ Cinematic Universeಗಳ ಕಾಲ. ಯಶ್‍ರಾಜ್‍ ಸ್ಪೈ ಯೂನಿವರ್ಸ್‍, ಲೋಕೇಶ್‍ ಕನಕರಾಜ್‍ ಯೂನಿವರ್ಸ್, ರೋಹಿತ್‍ ಶೆಟ್ಟಿ ಪೊಲೀಸ್‍ ಯೂನಿವರ್ಸ್‍ಗಳು ಹೆಚ್ಚು ಸದ್ದು ಮಾಡುತ್ತಿವೆ. ಆದರೆ, ಕೆಲವು ವರ್ಷಗಳ ಹಿಂದೆಯೇ ‘ಇಂಡಿಯನ್‍’ನ ಸೇತುಪತಿ, ‘ಶಿವಾಜಿ: ದಿ ಬಾಸ್‍’ನ ಶಿವಾಜಿ ಮತ್ತು ‘ಮುದಲ್ವನ್‍’ನ ಪುಗಳೇಂದಿಯನ್ನಿಟ್ಟುಕೊಂಡು ಏಕೆ ಒಂದು ಚಿತ್ರ ಮಾಡಬಾರದು ಎಂದು ಅವರು ಕೆಲವು ವರ್ಷಗಳ ಹಿಂದೆಯೇ ಯೋಚಿಸಿದ್ದರಂತೆ. ಆದರೆ, ಸೂಕ್ತ ಪ್ರೋತ್ಸಾಹ ಸಿಗದ ಕಾರಣ ಸುಮ್ಮನಾದರಂತೆ.

ಈ ಕುರಿತು ಮಾತನಾಡಿರುವ ಅವರು, ‘2008ರಲ್ಲಿ ‘ಎಂದಿರನ್‍’ ಚಿತ್ರ ಮಾಡುವಾಗ, ಯಾಕೆ ನಾನೇ ಸೃಷ್ಟಿಸಿದ ಮೂರು ಪಾತ್ರಗಳನ್ನು ಒಂದೇ ಚಿತ್ರದಲ್ಲಿ ಯಾಕೆ ತರಬಾರದು ಎಂದನಿಸಿತು. ಒಂದು ಕ್ಷಣ ರೋಮಾಂಚನವಾಯ್ತು. ಖುಷಿಯಿಂದ ನನ್ನ ಸಹಾಯಕ ನಿರ್ದೇಕರನ್ನು ಕರೆದು ಐಡಿಯಾ ಹೇಳಿದೆ. ಅವರೆಲ್ಲರೂ ಇದು ಸಾಧ್ಯವಾ? ಎಂದು ಅನುಮಾನದಿಂದ ನೋಡಿದರು. ನಂತರ ಕೆಲವು ಹಿರಿಯ ತಂತ್ರಜ್ಞರಿಗೆ ಮತ್ತು ನನ್ನ ಸ್ನೇಹಿತರಿಗೆ ಹೇಳಿದೆ. ನನ್ನ ಮನಸ್ಸಿಗೆ ನೋವಾಗಬಹುದು ಎಂದು ಚೆನ್ನಾಗಿದೆ ಎಂದಷ್ಟೇ ಹೇಳಿ ಹೊರಟು ಹೋದರು. ಬಹುಶಃ ನನಗೆ ಆಗ ಪ್ರೋತ್ಸಾಹ ಸಿಕ್ಕಿದ್ದರೆ ಚಿತ್ರ ಮಾಡಿಬಿಟ್ಟಿರುತ್ತಿದ್ದೆನೇನೋ? ಕೆಲವು ವರ್ಷಗಳ ನಂತರ ‘ಅವೆಂಜರ್ಸ್’ ಚಿತ್ರ ನೋಡಿದಾಗ, ಅದು ಸಹ Marvel Cinematic Universeನ ಒಂದು ಭಾಗ ಆಗಿತ್ತು. ಒಂದು ಒಳ್ಳೆಯ ಐಡಿಯಾ ಇದ್ದರೆ, ತಕ್ಷಣವೇ ಅದನ್ನು ಕಾರ್ಯರೂಪಕ್ಕೆ ಇಳಿಸಬೇಕು ಎಂದು ನನಗೆ ಆಗ ಅರ್ಥವಾಯ್ತು. ಏಕೆಂದರೆ, ನಮ್ಮ ತರಹವೇ ಜಗತ್ತಿನಾದ್ಯಂತ ಹಲವರು ಹೊಸ ವಿಷಯಗಳ ಬಗ್ಗೆ ಯೋಚಿಸುತ್ತಿರುತ್ತಾರೆ. ಅವರು ಅದನ್ನು ಕಾರ್ಯರೂಪಕ್ಕೆ ತರುವ ಮುನ್ನ, ಮೊದಲು ನಾವು ಆ ಕೆಲಸ ಮಾಡಬೇಕು’ ಎಂದು ಹೇಳಿಕೊಂಡಿದ್ದಾರೆ ಶಂಕರ್‍.

Shankar Cinematic Universe ಯಾವತ್ತು ಕಾರ್ಯರೂಪಕ್ಕೆ ಬರುತ್ತದೋ ಗೊತ್ತಿಲ್ಲ. ಸೇತುಪತಿ, ಶಿವಾಜಿ ಮತ್ತು ಪುಗಳೇಂದಿಯನ್ನು ಒಟ್ಟಿಗೆ ಮುಂದಿಟ್ಟುಕೊಂಡು ಯಾವಾಗ ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಾರೋ ಗೊತ್ತಿಲ್ಲ. ಆದರೆ, ಸದ್ಯಕ್ಕಂತೂ ಭ್ರಷ್ಟಾಚಾರದ ವಿರುದ್ಧ ಶಂಕರ್ ತಮ್ಮ ಹೋರಾಟ ಮುಂದುವರೆಸಿದ್ದಾರೆ. ‘ಇಂಡಿಯನ್‍ 2’ ಬಿಡುಗಡೆಯಾಗಿ ಆರು ತಿಂಗಳಲ್ಲೇ ಅದೇ ಸೇತುಪತಿ, ‘ಇಂಡಿಯನ್‍ 3’ ಆಗಿ ಮತ್ತೆ ಬರಲಿದ್ದಾರೆ. ಅದಾಗಿ ಸ್ವಲ್ಪ ದಿನಗಳಿಗೆ ‘ಗೇಮ್‍ ಚೇಂಜರ್‍’ ಎಂಬ ರಾಮ್‍ಚರಣ್‍ ತೇಜ ಅಭಿನಯದ ಇನ್ನೊಂದು ಚಿತ್ರದಲ್ಲಿ ಭ್ರಷ್ಟಾಚಾರದ ವಿರುದ್ಧ ಹೋರಾಟ ಮುಂದುವರೆಸಲಿದ್ದಾರೆ. ಪಾತ್ರಗಳು ಬದಲಾಗಬಹುದು, ಶಂಕರ್‍ ಹೋರಾಟ ಮಾತ್ರ ನಿರಂತರವಾಗಿ ಮುಂದುವರೆಯುತ್ತಿರುವುದು ವಿಶೇಷ. (ಬರಹ : ಚೇತನ್ ನಾಡಿಗೇರ್, ಫೇಸ್‌ಬುಕ್‌ ಬರಹ)ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ9 hours ago

ಭಾನುವಾರವೂ ಕ್ಯಾಶ್ ಕೌಟರ್ ಓಪನ್ ; ವಿದ್ಯುತ್ ಬಿಲ್ ಬಾಕಿ ಪಾವತಿಸಿ : ಬೆಸ್ಕಾಂ

ಸುದ್ದಿದಿನಡೆಸ್ಕ್:ವಿದ್ಯುತ್ ಬಿಲ್ ಬಾಕಿ ಉಳಿಸಿಕೊಂಡಿರುವ ಗ್ರಾಹಕರು ವಿದ್ಯುತ್ ಸಂಪರ್ಕದ ಕಡಿತದಿಂದ ತೊಂದರೆಗೊಳಗಾಗದಂತೆ ನಾಳೆ ಮತ್ತು ಇದೇ 15ರ ಭಾನುವಾರವೂ ಬೆಸ್ಕಾಂ ಉಪ ವಿಭಾಗಗಳ ಕ್ಯಾಶ್ ಕೌಂಟರ್‌ಗಳು ತೆರೆದಿರಲಿವೆ...

ದಿನದ ಸುದ್ದಿ9 hours ago

ಹತ್ತು ವರ್ಷಗಳ ಬಳಿಕ ಕಲಬುರಗಿಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧಾರ

ಸುದ್ದಿದಿನಡೆಸ್ಕ್:ಹತ್ತು ವರ್ಷಗಳ ಬಳಿಕ ಕಲಬುರಗಿ ಜಿಲ್ಲೆಯಲ್ಲಿ ರಾಜ್ಯ ಸಚಿವ ಸಂಪುಟ ಸಭೆ ನಡೆಸಲು ಸರ್ಕಾರ ನಿರ್ಧರಿಸಿದೆ. ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಕುರಿತಂತೆ ಚರ್ಚೆ ನಡೆಸಿ, ನಿರ್ಣಯ...

ದಿನದ ಸುದ್ದಿ17 hours ago

ಇಂದು ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ

ಸುದ್ದಿದಿನಡೆಸ್ಕ್:ಇಂದು ಗಣೇಶ ಚತುರ್ಥಿ, ದೇಶ ಸೇರಿ ನಾಡಿನದ್ಯಂತ ಹಿಂದೂ ಸಂಪ್ರದಾಯದಲ್ಲಿ ನಾಡಿನ ಜನತೆ ತಮ್ಮ ಒಳಿತಿಗಾಗಿ, ಜ್ಞಾನ ಸಮೃದ್ಧಿಗಾಗಿ ಶಿವನ ಪುತ್ರ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಿ...

ದಿನದ ಸುದ್ದಿ1 day ago

ಸರ್ಕಾರಿ ಐಟಿಐ ಪ್ರವೇಶಕ್ಕೆ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನಲ್ಲಿ ನಗರದ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಎಂ.ಎಂ.ಟಿ.ಎಂ 1, ಡಿಎಂಎಂ 20, ಸಿಒಪಿಎ 20, ವೆಲ್ಡರ್ 34 ಹಾಗೂ ರೋಬೊಟಿಕ್ಸ 12 ಖಾಲಿ ಇರುವ...

ದಿನದ ಸುದ್ದಿ1 day ago

ಪರಿಶಿಷ್ಟ ಜಾತಿ ಯುವಕ , ಯುವತಿಯರಿಗೆ ಜಿಮ್ ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪರಿಶಿಷ್ಟ ಜಾತಿ ಯುವಕ , ಯುವತಿಯರಿಗೆ ಯುವಜನರನ್ನು ಸ್ವಾವಲಂಭಿಯಾಗಿ ಉತ್ತೇಜಿಸುವ ದೃಷ್ಠಿಯಿಂದ ಜಿಮ್ ಫಿಟ್ನೆಸ್, ಬ್ಯೂಟೀಷಿಯನ್, ಚಾಟ್ಸ್ ತಯಾರಿಕೆ ತರಬೇತಿಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತಿ ಇರುವ ಪರಿಶಿಷ್ಟ...

ದಿನದ ಸುದ್ದಿ2 days ago

ರಾಯಚೂರು | ಶಾಲಾ ಬಸ್ ಅಪಘಾತ ; ಇಬ್ಬರು ವಿದ್ಯಾರ್ಥಿಗಳು ಸಾವು

ಸುದ್ದಿದಿನಡೆಸ್ಕ್:ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಕಪಗಲ್ ಬಳಿ ಶಾಲಾ ಬಸ್ ಮತ್ತು ಸರ್ಕಾರಿ ಬಸ್ ನಡುವೆ ಗುರುವಾರ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಮಕ್ಕಳು ಮೃತಪಟ್ಟು, ಹಲವು...

ದಿನದ ಸುದ್ದಿ4 days ago

ಪೌತಿ ಖಾತೆ ಆಂದೋಲನ ; ಸಚಿವ ಕೃಷ್ಣ ಬೈರೇಗೌಡ

ಸುದ್ದಿದಿನಡೆಸ್ಕ್:ಬಹು ಮಾಲೀಕತ್ವ ಹೊಂದಿರುವ ಖಾಸಗಿ ಜಮೀನುಗಳ ಪೋಡಿ ಕಾರ್ಯ, ಸರ್ಕಾರಿ ಮತ್ತು ಖಾಸಗಿ ಸಹಭಾಗಿತ್ವದಲ್ಲಿನ ದರಾಖಾಸ್ತು ಪೋಡಿ ಕಾರ್ಯ ಹಾಗೂ ಜಮೀನು ಮಾಲೀಕತ್ವವನ್ನು ವಾರಸುದಾರರಿಗೆ ಮಾಡಿಕೊಡುವ ಪೋತಿ...

ದಿನದ ಸುದ್ದಿ5 days ago

ಮುಡಾ ಪ್ರಕರಣ ; ಅರ್ಜಿ ವಿಚಾರಣೆ ಮುಂದೂಡಿಕೆ

ಸುದ್ದಿದಿನಡೆಸ್ಕ್:ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯಪಾಲರು ವಿಚಾರಣೆಗೆ ಅನುಮತಿ ನೀಡಿರುವ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಉಚ್ಛ ನ್ಯಾಯಾಲಯ ಮುಂದೂಡಿದೆ. ಅಡ್ವೊಕೇಟ್ ಜನರಲ್ ಶಶಿಕಿರಣ್ ಶೆಟ್ಟಿ...

ದಿನದ ಸುದ್ದಿ5 days ago

KPSC | 2 ತಿಂಗಳೊಳಗೆ ಮರು ಪರೀಕ್ಷೆ

ಸುದ್ದಿದಿನಡೆಸ್ಕ್:ಇತ್ತೀಚಿನ ಕೆ.ಪಿ.ಎಸ್.ಸಿ. ಗಜೆಟೆಡ್ ಪ್ರೊಬೆಷನರಿ ಹುದ್ದೆಗಳ ಪರೀಕ್ಷೆಯಲ್ಲಿ, ಅಸಮರ್ಪಕ ಕನ್ನಡಾನುವಾದ ಹಿನ್ನೆಲೆ, ಎಲ್ಲ ಅಭ್ಯರ್ಥಿಗಳಿಗೆ ನ್ಯಾಯ ಸಿಗುವಂತೆ, 2 ತಿಂಗಳೊಳಗೆ ಮರು ಪರೀಕ್ಷೆ ನಡೆಸುವಂತೆ, ಕರ್ನಾಟಕ ಲೋಕ...

ದಿನದ ಸುದ್ದಿ5 days ago

ADITYA-L1 | ಇಸ್ರೋ ಆದಿತ್ಯ ಎಲ್-1 ನೌಕೆ ಉಡಾವಣೆಗೆ ಒಂದು ವರ್ಷ; ಸೂರ್ಯನ ಅಧ್ಯಯನದಲ್ಲಿ ಮಹತ್ವದ ಪ್ರಗತಿ

ಸುದ್ದಿದಿನಡೆಸ್ಕ್:ಇಸ್ರೋದಿಂದ ಆದಿತ್ಯ ಎಲ್-1 ನೌಕೆ ಯಶಸ್ವಿ ಉಡಾವಣೆಗೊಂಡು ಇಂದಿಗೆ ಒಂದು ವರ್ಷ ಪೂರೈಸಿದೆ. 2023ರ ಸೆಪ್ಟೆಂಬರ್ 2 ರಂದು ಉಡಾವಣೆಗೊಂಡಿರುವ ಎಲ್-1ನೌಕೆ ಕಕ್ಷೆ ತಲುಪಿದ್ದು, ಭೂಮಿಯಿಂದ ಸುಮಾರು...

Trending