ಲೈಫ್ ಸ್ಟೈಲ್
ಕೊಬ್ಬು ಕರಗಿಸೋ ‘ಬೆಟ್ಟದ ನೆಲ್ಲಿಕಾಯಿ’ ಬಗ್ಗೆ ನಿಮಗೆಷ್ಟು ಗೊತ್ತು..?
ಸುದ್ದಿದಿನ ಡೆಸ್ಕ್ : ಬೆಟ್ಟದ ನೆಲ್ಲಿಕಾಯಿ ಎಂದರೆ ಎಲ್ಲರಿಗೂ ಬಾಯಲ್ಲಿ ನೀರು ಬರುತ್ತದೆ. ಆಯುರ್ವೇದದಲ್ಲಿ ಅದು ಇರಲೇ ಬೇಕು. ಅದರಲ್ಲಿ ಇರೋ ವಿಟಮಿನ್-ಸಿ, ಕಬ್ಬಿಣ, ಹೆಚ್ಚಿನ ನಾರಿನಾಂಶ ಮತ್ತು ಕ್ಯಾಲ್ಸಿಯಂ ಅದನ್ನು ಎಲ್ಲಾ ಔಷಧಗಳಲ್ಲಿ ಬಳಸುವಂತೆ ಮಾಡಿದೆ. ಇದನ್ನು ಹೇಗೆಲ್ಲ ಉಪಯೋಗ ಮಾಡಬಹುದು ತಿಳಿಯೋಣ ಮುಂದೆ.
ಉಪಯೋಗಗಳು
- ಮೂರು ಚಮಚ ನೆಲ್ಲಿಕಾಯಿ ರಸರೊಂದಿಗೆ ಮೂರು ಚಮಚ ಜೇನುತುಪ್ಪವನ್ನು ಬೆರೆಸಿ ಸೇವಿಸಿದರೆ ಮೆದುಳಿನ ಖಾಯಿಲೆಯು ನಿವಾರಣೆಯಾಗುತ್ತದೆ.
- ಬೆಲ್ಲದೊಂದಿಗೆ ನೆಲ್ಲಿಕಾಯಿ ರಸವನ್ನು ಕುಡಿಯುವುದರಿಂದ ಹೊಟ್ಟೆ ನೋವು ನಿವಾರಣೆಯಾಗುತ್ತದೆ.
- ನೆಲ್ಲಿಕಾಯಿಯ ಎಲೆಗಳಿಂದ ಕಷಾಯ ತಯಾರಿಸಿ ಬಾಯಿ ಮುಕ್ಕಳಿಸಿದರೆ ಬಾಯಿ ಹುಣ್ಣು ಮಾಯವಾಗುತ್ತದೆ.
- ಕಿರುನಲ್ಲಿಕಾಯಿಯನ್ನು ಉಪ್ಪಸಹಿತ ತಿಂದರೆ ತಲೆಸುತ್ತುವಿಕೆ, ಅಜೀರ್ಣ ನಿವಾರಣೆಯಾಗುತ್ತದೆ.
- ಬೆಟ್ಟದ ನೆಲ್ಲಿಕಾಯಿಯ ರಸವನ್ನು ಅಂಗೈಗೆ ಹಚ್ಚಿಕೊಂಡರೆ ಅತಿ ಬೆವರು ವಸರುವುದು ಸ್ಥಗಿತಗೊಳ್ಳುವುದು.
- ಬೆಟ್ಟದ ನೆಲ್ಲಿಕಾಯಿಯ ಚೂರ್ಣವನ್ನು ಮಜ್ಜಿಗೆಯಲ್ಲಿ ಕದಡಿ ಕುಡಿದರೆ ಆಸನಾಗ್ರದಲ್ಲಿ ಆಗುವ ಉರಿ ನಿಂತುಹೋಗುವುದು.
- ಬಲಿತ ನೆಲ್ಲಿಕಾಯಿಯ ಚೂರ್ಣವನ್ನು ಬಿಸಿನೀರಿನಲ್ಲಿ ಚೆನ್ನಾಗಿ ಕಿವುಚಿ ಅದಕ್ಕೆ ಸಕ್ಕರೆಯನ್ನು ಸೇರಿಸಿ ಶೋಧಿಸಿದ ನಂತರ ಸೇವಿಸಿದರೆ ಬಾಯಿ, ಮೂಗು ಮತ್ತು ಗುದದ್ವಾರದಿಂದ ಹೊರ ಬೀಳುವ ರಕ್ತ ಗಟ್ಟಿ ನಿಂತುಹೋಗುವುದು.
- ಒಂದು ಊಟದ ಚಮಚ ನೆಲ್ಲಿಕಾಯಿ ರಸವನ್ನು ಅಷ್ಟೇ ಪ್ರಮಾಣದ ಜೇನುತುಪ್ಪವನ್ನು ಪ್ರತಿದಿನ ಬೆಳಗಿನ ಸಮಯದಲ್ಲಿ ಸೇವಿಸುವುದರಿಂದ ರೋಗವೂ ಸಹ ಸಂಪೂರ್ಣವಾಗಿ ಗುಣವಾಗುತ್ತದೆ
- ನಿರಂತರವಾಗಿ ನೆಲ್ಲಿಕಾಯಿಯ ರಸವನ್ನು ಸೇವಿಸಿದರೆ ಕಣ್ಣಿನ ದೋಷಗಳು ದೂರವಾಗುವುದು.
- ಅಧಿಕ ರಕ್ತ ಸ್ರಾವವಗಿರುವವರು ನೆಲ್ಲಿಕಾಯಿಯ ರಸವನ್ನು ಜೇನುತುಪ್ಪವನ್ನು ಬೆರೆಸಿ ಕುಡಿದರೆ ಹೆಚ್ಚು ಚೈತನ್ಯ ಉಂಟಾಗುತ್ತದೆ.
- ನುಣ್ಣಗೆ ಅರೆದ ನೆಲ್ಲಿಕಾಯಿಯೊಡನೆ ಬೆಲ್ಲ ಸೇರಿಸಿ ತಿಂದರೆ ಸಿಹಿಮೂತ್ರ ರೋಗಿಗಳ ರೋಗ ಸ್ವಲ್ಪ ಮಟ್ಟಿಗೆ ಹತೋಟಿಗೆ ಬರುತ್ತದೆ.
- ಮಧುಮೇಹ ರೋಗಿಗಳು, ಕೂದಲು ಉದುರುವವರು ನೆಲ್ಲಿಕಾಯಿಯನ್ನು ಹೆಚ್ಚು ಉಪಯೋಗಿಸಿದರೆ ದೋಷಗಳು ನಿವಾರಣೆಯಾಗುತ್ತದೆ.
- ನೆಲ್ಲಿಕಾಯಿಯನ್ನು ತೈಲದೊಡನೆ ಬೆರೆಸಿ ತಲೆಗೆ ಹಚ್ಚಿಕೊಂಡರೆ ಕೂದಲು ನೆರೆಯುವುದಿಲ್ಲ. ಕೇಶದ ಬೆಳವಣಿಗೆಗೆ ಹೆಚ್ಚು ಸಹಾಯಕವಾಗುತ್ತದೆ.
- ನೆಲ್ಲಿಕಾಯಿಯ ಮೊರಬ್ಬ, ಚಟ್ನಿ ಮಾಡಿಕೊಂಡು ಕ್ರಮವಾಗಿ ತಿನ್ನುವುದರಿಂದ ನೆಗಡಿ, ಉಬ್ಬಸ , ಕ್ಷಯ, ಅಕಾಲ ಮುಪ್ಪು ಮುಂತಾದ ರೋಗಗಳಿಂದ ಗುಣವಾಗುತ್ತದೆ.
- ನೆಲ್ಲಿಕಾಯಿಯನ್ನು ಹೆಚ್ಚು ಬಳಸುವುದರಿಂದ ಕೊಲೆಸ್ಟ್ರಾಲ್ ಕಮ್ಮಿ ಮಾಡಿ ಗಾಲ್ ಬ್ಲಾಡರ್ ನಲ್ಲಿ ಕಲ್ಲು ಕರಗಿಸುತ್ತದೆ.
- ಊಟದ ನಂತರ ನೆಲ್ಲಿಕಾಯಿ ಚೂರ್ಣ ತಿನ್ನುವುದರಿಂದ ಅಲ್ಸರ್ ಕಡಿಮೆ ಆಗುವುದು.
- ನೆಲ್ಲಿಕಾಯಿಯಲ್ಲಿ ಆಂಟಿಆಕ್ಸಿಡೆಂಟ್ ಮತ್ತು ವಿಟಮಿನ್ ಗಳು ಇರುವ ಕಾರಣ ಅದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
- ನೆಲ್ಲಿಕಾಯಿಯ ರಸ ಅಥವಾ ನೆಲ್ಲಿಕಾಯಿಯ ಪುಡಿಯನ್ನು ಸ್ವಲ್ಪ ಬಿಸಿ ನೀರಿನಲ್ಲಿ ಬೆರೆಸಿ ಸೇವಿಸುವುದರಿಂದ ಬ್ಲಡ್ ಶುಗರ್ ಕಡಿಮೆ ಮಾಡುತ್ತದೆ.
- ಮೂತ್ರ ಮತ್ತು ಮೂತ್ರಪಿಂಡ ಸಂಬಂಧಿಸಿದ ರೋಗಗಳನ್ನು ಈ ನೆಲ್ಲಿಕಾಯಿ ಸೇವನೆಯಿಂದ ಮೂತ್ರದ ಮೂಲಕ ದೇಹದಲ್ಲಿನ ಹೆಚ್ಚಿನ ಉಪ್ಪಿನಾಂಶ ಮತ್ತು ಅವಶ್ಯಕವಾದ ಟಾಕ್ಸಿನ್, ಯೂರಿಕ್ ಆಸಿಡ್ ಅನ್ನು ಹೊರಹಾಕುತ್ತದೆ.
- ನೆಲ್ಲಿಕಾಯಿಯ ಸೇವನೆಯಿಂದ ಹೃದಯದಲ್ಲಿ ಆಗೋ ಹೋಲ್ ಮತ್ತು ಹೃದಯ ಸಂಬಂಧಿಸಿದ ಕಾಯಿಲೆಯನ್ನು ಕಡಿಮೆ ಮಾಡುತ್ತದೆ.
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್ ಸಂಜೀವ್ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.
ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.
ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್, ಸೋಷಿಯಲ್ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.
ಜೊತೆಗೆ ಒಂದು ಮೊಬೈಲ್ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್
ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ ಹೊಂದಲು ಬಾಪೂಜಿ ಮಹಾವಿದ್ಯಾಲಯ ಉಪ ಪ್ರಾಚಾರ್ಯರಾದ ಎಚ್ ಎನ್ ಶಿವಕುಮಾರ್ ನುಡಿದರು.
ಅವರು ಸ್ಥಳೀಯ ಬಿಎಜೆಎಸ್ಎಸ್ ಪ್ರಥಮ ದರ್ಜೆ ಕಾಲೇಜಿನ ಪ್ರತಿಭಾ ಪುರಸ್ಕಾರ, ಬಿಳ್ಕೋಡಿಗೆ ಕಾರ್ಯಕ್ರಮ ಮತ್ತು ವಿದ್ಯಾರ್ಥಿ ಒಕ್ಕೂಟದ, ಎನ್ ಎಸ್ ಎಸ್ ಚಟುವಟಿಕೆ, ಯುವ ರೆಡ್ ಕ್ರಾಸ್ ಘಟಕದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಮಾತನಾಡಿದರು.
ವಿಶೇಷ ಅತಿಥಿಗಳಾಗಿ ಉಪಸ್ಥಿತರಿದ್ದ ಬಿಎ ಜೆಎಸ್ಎಸ್ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಅಧಿಕಾರಿಗಳು ಡಾ.ಆರ್ ಎಂ ಕುಬೇರಪ್ಪ ಮಾತನಾಡಿ ವಿದ್ಯೆಯನ್ನು ವಿನಯದಿಂದ ವಿದ್ಯೆಕಲಿಯಬೇಕು ಸಂಸ್ಕಾರವಂತರಾಗ ಬೇಕು, ಸಂಸ್ಕಾರ ಹೊಂದಿರುವ ವ್ಯಕ್ತಿಗಳು ಪುರಸ್ಕಾರ ಪಡೆದರೆ ಸಂಸ್ಕಾರ ಇಲ್ಲದವರು ಸಮಾಜದಲ್ಲಿ ತಿರಸ್ಕಾರಕ್ಕೆ ಒಳಗಾಗುವರು.ನಿಮ್ಮ ಬದುಕನ್ನು ನೀವೆ ಕಟ್ಟಿಕೊಳ್ಳುವ ನೆಲೆಯಲ್ಲಿ ಪ್ರಯತ್ನಿಸಬೇಕು ಎಂದು ನುಡಿದರು.
ಪ್ರಾಚಾರ್ಯರಾದ ಪ್ರಕಾಶ್ ಬಸಪ್ಪನವರ್ ಅಧ್ಯಕ್ಷತೆಯಲ್ಲಿ ನಡೆದ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿದ್ದ ಎಚ್ ಎನ್ ಭೀಕ್ಷಾವರ್ತಿಮಠ ಹಾಗೂ ಕೆ ಕೆ ಹಾವಿನಾಳ ರವರು ವಿದ್ಯಾರ್ಥಿಗಳಿಗೆ ಹಿತವಚನ ನುಡಿದರು.ಆರಂಭದಲ್ಲಿಪ್ರೋ.ಎಂ ಡಿ ಹೊನ್ನಮ್ಮನವರ ಸ್ವಾಗತಿಸಿದರು.ಪ್ರೋ.ಶ್ರೀಕಾಂತ ಕುಂಚೂರ, ಪ್ರಾಸ್ತಾವಿಕ ಮಾತನಾಡಿ ವಾರ್ಷಿಕ ವರದಿ ವಾಚಿಸಿದರು.
ಕೊನೆಯಲ್ಲಿ ಪ್ರೋ.ಪುಷ್ಟಾ ಕಬ್ಬಿನಾಲೆ ವಂದಿಸಿದರು.ಇದೆ ಸಮಾರಂಭದಲ್ಲಿ ಕ್ರೀಡೆ, ಸಾಂಸ್ಕೃತಿಕ, ಸಾಮಾಜಿಕ ಸೇವೆಗಳಲ್ಲಿವಿದ್ಯಾರ್ಥಿಗಳ ಸಾಧನೆ ಗುರುತಿಸಿ ಪುರಸ್ಕಾರ ಮಾಡಲಾಯಿತು.ವರ್ಷದ ಮಹಾವಿದ್ಯಾಲಯ ಉತ್ತಮ ವಿದ್ಯಾರ್ಥಿಗಳನ್ನು ಗುರುತಿಸಿ ಪುರಸ್ಕಾರ ಪ್ರದಾನ ಮಾಡಲಾಯಿತು.ವಿವಿಧ ವಿಷಯದ ಉಪನ್ಯಾಸಕರು, ವಿದ್ಯಾರ್ಥಿಗಳು, ಸಿಬ್ಬಂದಿ ಭಾಗವಹಿಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ14 hours agoನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
-
ದಿನದ ಸುದ್ದಿ1 day agoಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್
-
ದಿನದ ಸುದ್ದಿ11 hours agoಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
ದಿನದ ಸುದ್ದಿ1 day agoದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

