ದಿನದ ಸುದ್ದಿ
ಸರಳ ತರಳಬಾಳು ಹುಣ್ಣಿಮೆಯಂದು ಗೋಶಾಲೆ ಪುಣ್ಯಕೋಟಿಗೆ ಅರ್ಪಣೆ
ಸುದ್ದಿದಿನ,ಸಿರಿಗೆರೆ: ಉತ್ಸವಗಳಿಂದ ಸಮಾಜದ ಅಭಿವೃದ್ಧಿ ಮಾಡುವುದಕ್ಕಿಂತ ಉತ್ಸವಗಳ ಸಾರ್ಥಕತೆಯ ನೆನಪಿಗೆ ಸಮಾಜದ ಅಭ್ಯುದಯಕ್ಕೆ ಶ್ರಮಿಸುವ ವಿಶೇಷ ಆಶಯ ಹೊಂದಿ ಆ ಕಾರ್ಯದಲ್ಲಿ ಯಶಸ್ಸು ಗಳಿಸಿದ ಕೀರ್ತಿ ತರಳಬಾಳು ಶ್ರೀ ಜಗದ್ಗುರುವರ್ಯರದು.
ಪರಂಪರೆಗೆ ಮತ್ತು ಅಪಾರ ಶಿಷ್ಯಬಳಗದ ಮನಸ್ಸಿಗೆ ಘಾಸಿ ಮಾಡದಂತೆ ಎಲ್ಲರಿಗೂ ಅನುಕೂಲ ತರುವ ಸರ್ವರೂ ಒಪ್ಟಲೇಬೇಕಾದ ಕಾರ್ಯಕ್ರಮಗಳನ್ನು ಜಾರಿಯ ಅನುಷ್ಠಾನದ ಅಪರೂಪದ ವ್ಯಕ್ತಿತ್ವ ಚಿಂತಕ ಶ್ರೇಷ್ಠರಾದ ಶ್ರೀ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳವರದು.
ನಾಡಿನ ಧಾರ್ಮಿಕ ಸಮಾರಂಭಗಳಿಗೆ ತರಳಬಾಳು ಹುಣ್ಣಿಮೆ ಮಹೋತ್ಸವಕ್ಕೆ ಮಾತೃಸ್ವರೂಪದಂತಹ ಸ್ಥಾನವಿದೆ. ಸಮಾರಂಭದ ಸಾರ್ಥಕತಗೆ ನೂರಾರು ಸಮಾಜ ಮುಖಿ ಕಾರ್ಯಗಳು ಸಾಕ್ಷಿಯಾಗಿವೆ. ಅಂತಹ ಜನಮುಖಿ ಕಾರ್ಯಗಳಲ್ಲಿ ಸಾವಿರಾರು ಕೋಟಿಗಳ ವೆಚ್ಚದಲ್ಲಿ ನೂರಾರು ಕೆರೆಗಳಿಗಳ ಒಡಲಿಗೆ ಗಂಗೆ ಹರಿದು ರೈತರ ನೆಮ್ಮದಿಗೆ ಕಾರಣವಾಗಿರುವುದು ಪ್ರಮುಖವಾದುದು. ಆರು ದಶಕಗಳಿಂದಲೂ ಸರ್ವರ ಜನಾಧರಣೆಯ ಸಮಾರಂಭವಾಗಿ ಆಯಾ ಕಾಲದ ಸಮಸ್ಯೆಗಳಿಗೆ ಸ್ಪಂದಿಸುವ ಮಾನವೀಯತೆಯ ಮಹೋತ್ಸವವಾಗಿದೆ.
ಈ ವರ್ಷದ ತರಳಬಾಳು ಹುಣ್ಣಿಮೆ ಮಹೋತ್ಸವ ಹೊಯ್ಸಳರ ನಾಡಾದ ಹಳೇಬೀಡಿನಲ್ಲಿ ಆಚರಿಸುವ ಶ್ರೀಗಳ ಆಶಯಕ್ಕೆ ಆ ಭಾಗದ ಭಕ್ತರು ತುದಿಗಾಲಲ್ಲಿ ನಿಂತಿದ್ದರು.
ಭೀಕರ ಬರಗಾಲದ ಛಾಯೆಯನ್ನು ಮನಗಂಡು
ಕಾರ್ಯಕ್ರಮಗಳಿಗೆ ಆ ಭಾಗದ ಜ್ವಲಂತ ಸಮಸ್ಯೆಗಳಿಗೆ ತರಳಬಾಳು ಹುಣ್ಣಿಮೆ ಮಹೋತ್ಸವದ ಮೂಲಕ ಉತ್ತರ ಕಂಡುಕೊಳ್ಳುವ ನಿಟ್ಟಿನಲ್ಲಿ ಶ್ರೀಗಳು ಹಳೇಬೀಡು ವ್ಯಾಪ್ತಿಯ ಕೆರೆಗಳಿಗೆ ಶಾಶ್ವತವಾಗಿ ನೀರು ತುಂಬಿಸುವ ಯೋಜನೆ ಕಾರ್ಯಪಾಲನೆಯ ನಂತರ ಹುಣ್ಣಿಮೆ ಮಹೋತ್ಸವ ಆಚರಿಸುವ ಅರ್ಥಪೂರ್ಣ ನಿರ್ಧಾರ ಕೈಗೊಂಡು ಆ ನಿಟ್ಟಿನಲ್ಲಿ ಹೆಜ್ಜೆ ಹಾಕಿದರು.
ಪರಂಪರೆಯಂತೆ ಸಾಂಕೇತಿಕವಾಗಿ ಸರಳವಾಗಿ 2019ರ ಫೆಬ್ರುವರಿ 19ರಂದು ಸಿರಿಗೆರೆಯಲ್ಲಿ ತರಳಬಾಳು ಹುಣ್ಣಿಮೆ ಮಹೋತ್ಸವ ಆಚರಣೆಯ ಜೊತೆಗೆ ನಾಡಿನ ಗೋವುಗಳ ಪಾಲನೆಗೆ ಅಂದೇ ಗೋಶಾಲೆಯ ಉದ್ಘಾಟಿನೆಯ ಕೈಂಕರ್ಯಕ್ಕೆ ಶ್ರೀ ಜಗದ್ಗುವರ್ಯರು ಮನಸ್ಸು ಮಾಡಿರುವುದು ಅತ್ಯಂತ ಸಂದರ್ಭೋಚಿತವಾದುದಾಗಿದೆ.
ಸದಾ ಜನಮುಖಿ ಕಾರ್ಯಗಳಲ್ಲಿ ಸಂತೃಪ್ತಿ ಕಾಣುವ, ನಿತ್ಯವೂ ರೈತಬಂಧುಗಳ ಉನ್ನತಿಗೆ ಶ್ರಮಿಸುವ ಕನ್ನಡ ನಾಡಿನ ಅಪರೂಪದ ವಿದ್ವತ್ಪೂರ್ಣ, ಸಂತಶ್ರೇಷ್ಟರಾಗಿ ,ರೈತ ಮೆಚ್ಚಿದ ಮಹಾಗುರುವೆಂದೇ ಸುಪ್ರಸಿದ್ಧಿಯಾದ ಪರಮ ಪೂಜನೀಯ ಶ್ರೀ ತರಳಬಾಳು ಜಗದ್ಗುರು ಡಾ.ಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳವರ ನೂರಾರು ಸಮಾಜಮುಖಿ ಸಾಧನೆಗಳಿಗೆ ಮತ್ತೊಂದು ಸೇರ್ಪಡೆ ಎನ್ನುವಂತೆ ತರಳಬಾಳು ಶ್ರೀ ಮಠದ ಸಾವಿರಾರು ಎಕರೆ ಭೂಮಿಯಲ್ಲಿ ಸಕಲ ಸೌಲಭ್ಯಗಳಿಂದ ಕೂಡಿದ ಗೋಶಾಲೆಯ ನಿರ್ಮಾಣದ ತಯಾರಿ ಭರದಿಂದ ಸಾಗಿದೆ.
ಅಕ್ಷರ,ಅನ್ನ,ಆಸರೆ,ಶಿಕ್ಷಣ,
ಉದ್ಯೋಗ,ನ್ಯಾಯದಾನ, ಕನ್ನಡ ಜಾನಪದ ಕಲೆಗಳ ಪುನರುಜ್ಜೀವನ , ಸಾಮಾಜಿಕ ಕಾಳಜಿ,ಪರಿಸರ ರಕ್ಷಣೆ, ಶರಣ ಸಂಸ್ಕೃತಿಯನ್ನು ವಿಶ್ವಕ್ಕೆ ದರ್ಶಸಿದ ಗಣಕ ಋಷಿ ಎಂದೇ ನಾಮದೇಯರಾಗಿರುವ ಶ್ರೀ ಗುರುವರ್ಯರ ಸಾಧನೆಗಳ ಕುರಿತು ಬರೆಯುವುದೆಂದರೆ ಅದು ಸೂರ್ಯನನ್ನು ಕನ್ನಡಯಲ್ಲಿ ಹಿಡಿದಂತೆ..!
ಶ್ರೀಗಳ ದೂರದರ್ಶಿತ್ವ ಹೇಗಿದೆ ಎಂದರೆ. ಈ ವರ್ಷ ಬರದ ಮುನ್ಸೂಚನೆ ಅರಿತ ಶ್ರೀಗಳವರು ಪುಣ್ಯಕೋಟಿ ಉಳಿಸುವ ಅಭಿದಾನಕ್ಕೆ ಕೈ ಹಾಕಿ ಆರು ತಿಂಗಳಿಂದ ಕರ್ತವ್ಯ ಮಗ್ನರಾಗಿ ನೂರಾರು ಲೋಡ್ ಮೇವನ್ನು ಭಕ್ತರ ಮೂಲಕ ಸಂಗ್ರಹಿಸಿ ಕಾಮಧೇನುಗಳ ಸ್ವಾಗತಕ್ಕೆ ಕಾದು ಕುಳಿತಿದ್ದಾರೆ. ಸಿರಿಗೆರೆ ಸಮೀಪದ ಮೇಗಳಹಳ್ಳಿ ಬಳಿ ದೊಡ್ಡ ಕಾವಲೆಂದೇ ಕಲೆಯಲ್ಪಡುವ ಶ್ರೀ ಮಠದ ಒಡೆತನದ ಸಾವಿರಾರು ಎಕರೆ ಭೂ ಪ್ರದೇಶವನ್ನು ಶಿವಕುಮಾರ ವನವನ್ನಾಗಿಸಿ ಹತ್ತಾರು ವನ್ಯಜೀವಿಗಳಿಗೆ ಆಶ್ರಯ ತಾಣವಾಗಿರುವ ಪ್ರದೇಶದಲ್ಲಿ ತರಳಬಾಳು ಗೋಶಾಲೆ ನಿರ್ಮಾಣವಾಗುತ್ತಿದೆ.
ಹೇಗಿರುತ್ತದೆ ಗೋಶಾಲೆ..?
ಕರ್ನಾಟಕದ ಅನೇಕ ಪ್ರದೇಶಗಳು ಪದೇ ಪದೇ ಬರಗಾಲಕ್ಕೆ ತುತ್ತಾಗುವ ಸ್ಥಿತಿ ಇದೆ. ಮನುಷ್ಯರು ಹೇಗಾದರೂ ಬದುಕಿಕೊಳ್ಳುತ್ತಾರೆ. ಆದರೆ ದನಕರುಗಳು ಮೇವು ನೀರಿಲ್ಲದೆ ಕಂಗಾಲಾಗುತ್ತವೆ.
ಚಾಮರಾಜ ನಗರದ ಬಳಿ ಮೇವು ನೀರಿಲ್ಲದೆ ಎಲ್ಲೆಂದರಲ್ಲಿ ದನಕರುಗಳು ಸತ್ತಿರುವ ವರದಿಗಳು ದುಃಖದಾಯಕ ವರದಿಗೆ ಮನನೊಂದ ಶ್ರೀಗಳು
ಸಿರಿಗೆರೆ ಸಮೀಪ ಇರುವ ಶಿವಕುಮಾರ ವನದ1000 ಎಕರೆ ಅರಣ್ಯ ಪ್ರದೇಶದಲ್ಲಿ ಬೃಹತ್ ಗೋಶಾಲೆಯನ್ನು ಆರಂಭಿಸುವ ಯೋಜನೆಯನ್ನು ಶ್ರೀ ತರಳಬಾಳು ಜಗದ್ಗುರು ಡಾ ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿಯವರು ಸಂಕಲ್ಪಿಸಿದರು.
ಇದೊಂದು ಖಾಯಂ ವ್ಯವಸ್ಥೆಯಾಗಿದ್ದು, ಈ ಕಾರ್ಯಕ್ಕಾಗಿ 2 ಕೋಟಿ ರೂಗಳನ್ನು ಮೀಸಲಿರಿಸಲಾಗಿದೆ. ಈ ಕಾಡಿನಲ್ಲಿ ಹರಿಯುವ ಹಳ್ಳಕ್ಕೆ ಚೆಕ್ ಡ್ಯಾಂ ನಿರ್ಮಾಣ ಮಾಡಿ ಜಾನುವಾರುಗಳಿಗೆ ನೀರನ್ನು ಒದಗಿಸಲಾಗುವುದಲ್ಲದೆ ಆಧುನಿಕ ತಂತ್ರಜ್ಞಾನವನ್ನು ಬಳಸಿ ಮೇವನ್ನು ಬೆಳೆಸಲಾಗುವುದು. ನೀರನ್ನು ಪಂಪ್ ಮಾಡಲು ಸೋಲಾರ್ ವಿದ್ಯತ್ ಉತ್ಪಾದನೆಯ ಬಗ್ಗೆಯೂ ಚಿಂತಿಸಲಾಗುತ್ತಿದೆ. ಕಾಡಿನಲ್ಲಿರುವ ಮೃಗಗಳಿಂದ ಜಾನುವಾರುಗಳಿಗೆ ತೊಂದರೆ ಆಗದಂತೆ ಬೇಲಿಯನ್ನು ನಿರ್ಮಿಸಲಾಗುವುದು. ರಾಜ್ಯದ ಯಾವುದೇ ಭಾಗದ ರೈತರೂ ಇದರ ಪ್ರಯೋಜನ ಪಡೆಯಬಹುದು.
ರೈತರು ಬಯಸಿದರೆ ಜಾನುವಾರುಗಳನ್ನು ಗೋಶಾಲೆಗೆ ತರಲು ಮಠದಿಂದ ಲಾರಿಯನ್ನು ಕಳುಹಿಸುವ ವ್ಯವಸ್ಥೆ ಮಾಡಲಾಗುವುದು. ಬರ ಪ್ರದೇಶದ ರೈತರು ಇಲ್ಲಿಗೆ ದನಕರುಗಳನ್ನು ತಂದು ಮಳೆಗಾಲ ಬರುವ ತನಕ ಮೇವು ಮತ್ತು ನೀರನ್ನು ಪಡೆದು ಸಾಕಬಹುದು.* *ರಾಸುಗಳೊಂದಿಗೆ ಬರುವ ರೈತರಿಗೂ ಮಠದಿಂದ ಆಹಾರ ಮತ್ತು ವಸತಿಯನ್ನು ನೀಡಲಾಗುವುದು.
ತಮ್ಮ ಭಾಗದಲ್ಲಿ ಮಳೆ ಆರಂಭವಾಗಿ ಮೇವು ನೀರು ದೊರೆಯುವವರೆಗೂ ರೈತರು ಶಿವಕುಮಾರ ವನದಲ್ಲಿ ತನ್ನ ರಾಸುಗಳನ್ನು ಸಾಕಿಕೊಂಡು ಹೋಗಲು ಅನುವು ಮಾಡಿಕೊಡುವುದಾಗಿ ಇಂದು ಗೋಶಾಲೆಯ ಕೆಲಸ ಕಾರ್ಯಗಳನ್ನು ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ನೀಡಿದ ಶ್ರೀ ಜಗದ್ಗುರುವರ್ಯರು ತಿಳಿಸಿದರು.
ಬರಹ : ಬಸವರಾಜ ಸಿರಿಗೆರೆ
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ5 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ4 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

