ಬಹಿರಂಗ
ಜಾತಿ ಪದ್ದತಿ : ಎಲ್ಲರೂ ಓದಲೇ ಬೇಕಾದ ಡಾ. ಅಂಬೇಡ್ಕರ್ ಅವರ ಬರಹ..!
ಜಾತಿಪದ್ಧತಿಯ ಸಮರ್ಥನೆಗಾಗಿ ಕೆಲವರು ವಂಶಶುದ್ದಿಯ ತತ್ವವನ್ನು ಬಳಸಿಕೊಂಡಿದ್ದಾರೆ . ಒಂದು ಜನಾಂಗದ ಅಥವಾ ವಂಶದ ಶುದ್ಧತೆಯನ್ನು ಕಾಪಾಡುವುದೇ ಜಾತಿಯ ಉದ್ದೇಶವೆಂದು ವಾದಿಸಲಾಗುತ್ತದೆ . ವಂಶಶಾಸ್ತ್ರಜ್ಞರ ಮೇರೆಗೆ ಜಗತ್ತಿನಲ್ಲಿ ಈಗ ಎಲ್ಲಿಯೂ ಶುದ್ದವಂಶವೆಂಬುದು ಉಳಿದಿಲ್ಲ . ಎಲ್ಲ ಕಡೆಯೂ ವಂಶಗಳು ಸಂಕರವಾಗಿ ಹೋಗಿವೆ . ಭಾರತದಲ್ಲಿ ಈ ಸಂಕರ ವಿಶೇಷವಾಗಿ ನಡೆದಿದೆ.
ಹಿಂದೂ ಜನತೆಯಲ್ಲಿ ಪರಕೀಯ ಅಂಶಗಳು ‘ ಎಂಬ ತಮ್ಮ ಲೇಖನದಲ್ಲಿ ಶ್ರೀ ಡಿ . ಆರ್ . ಭಂಡಾರ್ಕರ್ ಅವರು ಹೀಗೆ ಹೇಳಿದ್ದಾರೆ , “ ಪರಕೀಯ ಅಂಶ ಬೆರೆಯದಂತಹ ಒಂದು ವರ್ಗವಾಗಲಿ , ಜಾತಿಯಾಗಲಿ ಭಾರತದಲ್ಲಿ ಉಳಿದಿಲ್ಲ. ರಜಪೂತ , ಮರಾಠ ಮೊದಲಾದ ಕೃತಿಯ ವರ್ಗಗಳಲ್ಲಿ ಮಾತ್ರವಲ್ಲ ತಾವು ಸಂಪೂರ್ಣ ಶುದ್ದರೆಂದು ಭ್ರಮಿಸಿಕೊಂಡಿರುವ ಬ್ರಾಹ್ಮಣರಲ್ಲೂ ಕೂಡ ಪರಕೀಯ ರಕ್ತಸಂಕರವಾಗಿದೆ ” , ವಂಶ ಸಂಕರವನ್ನು ತಡೆಯುವ ಅಥವಾ ರಕ್ತಶುದ್ದಿಯನ್ನು ರಕ್ಷಿಸಿಕೊಳ್ಳುವ ಮಾರ್ಗವಾಗಿಯೇ ಜಾತಿಪದ್ಧತಿ ಬೆಳೆಯಿತೆಂದು ಹೇಳಲಾಗದು ವಾಸ್ತವವಾಗಿ ನೋಡಿದರೆ ಭಾರತದ ವಿವಿಧ ಜನಾಂಗಗಳಲ್ಲಿ ಪರಸ್ಪರ ರಕ್ತಸಂಬಂಧ ಹಾಗೂ ಸಂಸ 3 ಸಮನ್ವಯ ನಡೆದುಹೋಗಿ ಎಷ್ಟೋ ಕಾಲದ ನಂತರ ಜಾತಿಪದ್ಧತಿ ಹುಟ್ಟಿಕೊಂಡಿತು .
ಜಾತಿ ಭೇದಗಳನ್ನು, ಜನಾಂಗ ಭೇದಗಳೆಂದು ಭ್ರಮಿಸಿ ಹಾಗೆ ನಡೆದುಕೊಳ್ಳುವುದೆಂದರೆ ವಸ್ತುಸ್ಥಿತಿಯ ವಿಪರ್ಯಾಸ. ಪಂಜಾಬ್ ಬ್ರಾಹ್ಮಣನಿಗೂ ಮದ್ರಾಸಿ ಬ್ರಾಹ್ಮಣನಿಗೂ ನಡುವೆ ಯಾವ ವಂಶ ಸಂಬಂಧವಿದೆ ? ಬಂಗಾಳದ ಅಸ ಶನಿಗೆ ಮದ್ರಾಸಿ ಅಸ್ಪಶ್ಯನೊಡನೆ ಯಾವ ವಂಶೀಯ ಸಂಬಂಧವಿದೆ ? ಪಂಜಾಬದ ಬ್ರಾಹ್ಮಣನಿಗೂ ಪಂಜಾಬದ ಚಮಾರನಿಗೂ ಯಾವ ವಂಶೀಯ ಭೇದವಿದೆ ? ಮದ್ರಾಸಿ ಬ್ರಾಹ್ಮಣನಿಗೂ ಮದ್ರಾಸಿ ಚಂಡಾಲನಿಗೂ ಯಾವ ವಂಶಭೇದವಿದೆ ? ಪಂಜಾಬದ ಬ್ರಾಹ್ಮಣ ಹಾಗೂ ಚಮ್ಮಾರ ಇಬ್ಬರೂ ಒಂದೇ ವಂಶಕ್ಕೆ ಸೇರಿದವರು . ಇದೇ ಮಾತು ಮದ್ರಾಸಿಗಳಿಗೂ ಅನ್ವಯಿಸುತ್ತದೆ. ಜಾತಿಪದ್ಧತಿ ವಂಶಭೇದವನ್ನು ಗುರುತಿಸುವುದಿಲ್ಲ . ಒಂದೇ ವಂಶದವರಲ್ಲಿ ಸಾಮಾಜಿಕ ಭೇದಗಳನ್ನು ಮಾತ್ರ ಜಾತಿಪದ್ಧತಿ ಉಂಟುಮಾಡಿದೆ.
ಒಂದು ವೇಳೆ ಜಾತಿಭೇದ ವಂಶಭೇದವೆಂದೇ ಇದ್ದಿತೆಂದು ಭಾವಿಸೋಣ . ಹಾಗಿದ್ದಾಗ ಅಂತರ್ಜಾತೀಯ ವಿವಾಹಗಳ ಮೂಲಕ ವಂಶಗಳು ಸಂಕರವಾದರೆ ತಪ್ಪೇನಾಯಿತು ? ಮನುಷ್ಯರಿಗೂ ಇತರ ಪ್ರಾಣಿಗಳಿಗೂ ಇರುವ ಅಂತರ ತುಂಬ ದೊಡ್ಡದು . ಆದುದರಿಂದ ವಿಜ್ಞಾನಿಗಳು ಮನುಷ್ಯರನ್ನು ಹಾಗೂ ಪ್ರಾಣಿಗಳನ್ನು ಎರಡು ಪ್ರತ್ಯೇಕ ವರ್ಗಗಳಾಗಿ ವಿಂಗಡಿಸಿದ್ದಾರೆ . ಜನಾಂಗದವು ಜೀವಿಗಳ ವರ್ಗಭೇದವೆಂದು ವಿಜ್ಞಾನಿಗಳು ಒಪ್ಪುವುದಿಲ್ಲ . ವಿವಿಧ ಜನಾಂಗಗಳು ಒಂದೇ ವರ್ಗದ ವಿವಿಧ ಶಾಖೆಗಳು ಮಾತ್ರ . ಹೀಗಿರುವುದರಿಂದ ಈ ವಿವಿಧ ಜನಾಂಗಗಳು ರಕ್ತಸಂಬಂಧ ಮಾಡಿದ್ದಲ್ಲಿ ಹುಟ್ಟುವ ಜೀವಿಗಳು ವಂಶಾಭಿವೃದ್ದಿಗೆ ಸಮರ್ಥವಾಗಿ ಇರುವುವಲ್ಲದೆ ನಪುಂಸಕವಾಗಲಾರವು . ಜಾತಿಪದ್ಧತಿಯನ್ನು ಸಮರ್ಥಿಸುವುದಕ್ಕಾಗಿ ವಂಶಪರಂಪರೆ , ಉತ್ತಮ ಸಂತಾನ ಮುಂತಾಗಿ ಹೇರಳವಾದ ಹುಚ್ಚು ಮಾತುಗಳನ್ನು ಆಡಲಾಗುತ್ತಿದೆ . ಜಾತಿಪದ್ಧತಿ ಉತ್ತಮ ಸಂತಾನ ತತ್ವಕ್ಕೆ ಬದ್ದವಾಗಿಯೇ ಇದ್ದ ಪಕ್ಷದಲ್ಲಿ ಅದನ್ನು ಯಾರೂ ವಿರೋಧಿಸಲಾರರು . ಆದರೆ ಜಾತಿಪದ್ಧತಿ ಉತ್ತಮ ಗಂಡು ಹಾಗೂ ಉತ್ತಮ ಹೆಣ್ಣುಗಳ ದಾಂಪತ್ಯಕ್ಕೆ ಸಹಾಯಕವಾಗಿದೆಯೆ ?
ಜಾತಿಪದ್ಧತಿ ನಿಷೇಧಾತ್ಮಕವಾಗಿದೆ, ಅಂತರ್ಜಾತಿಯ ದಾಂಪತ್ಯವನ್ನು ಅದು ಪ್ರತಿಬಂಧಿಸುತ್ತದೆ . ಜಾತಿಯೆಂಬುದು ಉತ್ತಮ ಸಂತಾನ ದೃಷ್ಟಿಯಿಂದ ಹುಟ್ಟಿದ್ದಲ್ಲ . ಜಾತಿ ಜನಾಂಗವೆಂದಾದರೆ , ಉಪಜಾತಿಗಳು ಜನಾಂಗಭೇದಗಳಾಗವು ; ಏಕೆಂದರೆ ಒಂದೇ ಜನಾಂಗದ ಉಪಭೇದಗಳಾದುದರಿಂದ ಅದು ಅದೇ ಜನಾಂಗಕ್ಕೆ ಸೇರಿರುತ್ತದೆ . ಹೀಗಿರುವುದರಿಂದ ಅಂತರ್ಜಾತೀಯ ವಿವಾಹಕ್ಕೆ ಹಾಗೂ ಅಂತರ್ಜಾತೀಯ ಭೋಜನಕ್ಕೆ ಪ್ರತಿಬಂಧವೇಕೆ ? ಜನಾಂಗದ ಅಥವಾ ವಂಶದ ಶುದ್ದಿಯನ್ನು ಕಾಪಾಡುವುದು ಇದರ ಉದ್ದೇಶವಲ್ಲ ಎಂದಾಯಿತು . ಜಾತಿ ಉಪಜಾತಿಗಳ ಸಹಭೋಜನವನ್ನು ಪ್ರತಿಬಂಧಿಸುವ ಉದ್ದೇಶವೇನು ? ಸಹಭೋಜನದಿಂದ ವಂಶ ಹಾಳಾಗಲಾರದು , ಉತ್ತಮವೂ ಆಗಲಾರದು . ಇದನ್ನೆಲ್ಲ ನೋಡಿದಾಗ ಜಾತಿಭೇದ ವೈಜ್ಞಾನಿಕವಲ್ಲವೆಂದು ಸಿದ್ದವಾಗುತ್ತದೆ . ಉತ್ತಮ ಸಂತಾನ ತತ್ವವನ್ನು ಬಳಸಿಕೊಂಡು ಜಾತಿಯನ್ನು ಸಮರ್ಥಿಸುವುದೆಂದರೆ ಅವೈಜ್ಞಾನಿಕ ವಿಷಯಕ್ಕೆ ವೈಜ್ಞಾನಿಕ ಸಮರ್ಥನೆಯನ್ನು ನೀಡಿದಂತೆಯೇ ಸರಿ . ವಂಶದಲ್ಲಿ ಪಿತ್ರಾರ್ಜಿತ ಅಂಶ ಯಾವ ನಿಯಮಗಳನ್ನು ಅನುಸರಿಸುತ್ತದೆಂಬುದು ನಿಖರವಾಗಿ ನಮಗೆ ಇನ್ನೂ ತಿಳಿದಿಲ್ಲ . ಆದುದರಿಂದ ಉತ್ತಮ ಸಂತಾನದ ಯೋಜನೆ ವ್ಯವಹಾರ ಯೋಗ್ಯವೆಂದು ಹೇಳಲಾಗದು .
‘ ಮಂಡಲ್ಲನ ಆನುವಂಶಿಕಾ ತತ್ವಗಳು ‘ ಎಂಬ ಗ್ರಂಥವನ್ನು ಕುರಿತು ಬೇಟ್ಟನ್ ಹೀಗೆನ್ನುತ್ತಾರೆ , “ ಉಚ್ಚ ತರಗತಿಯ ಮಾನಸಿಕ ಗುಣಗಳು ಅನುವಂಶಿಕವಾಗಿ ಬಂದರೆ ಅವು ಯಾವುದೇ ಒಂದು ನಿಯಮಕ್ಕೆ , ಅರ್ಥಕ್ಕೆ , ಕ್ರಮಕ್ಕೆ ಒಳಪಟ್ಟು ಬರುತ್ತವೆ ಎಂದು ತೋರುವುದಿಲ್ಲ . ದೈಹಿಕ ವೈಶಿಷ್ಟ್ಯಗಳೂ ಮಾನಸಿಕ ಗುಣಗಳೂ ಅನೇಕ ಘಟಕಗಳ ಯೋಗಾಯೋಗದಿಂದ ಉತ್ಪನ್ನವಾಗುವುದೇ ಹೊರತಾಗಿ , ಒಂದು ನಿರ್ದಿಷ್ಟ ಸಂತಾನ ಮೂಲದಿಂದಲೇ ಆದುವೆಂದು ಹೇಳಲಾಗದು.
ಜಾತಿಪದ್ಧತಿ ಉತ್ತಮ ಸಂತಾನಶಾಸ್ತ್ರ ದೃಷ್ಟಿಯಿಂದ ನಿರ್ಮಿತವಾಯಿತೆಂದು ಹೇಳಿದರೆ ಇಂದಿನ ವಿಜ್ಞಾನಿಗಳಿಗೆ ಕೂಡ ಇಲ್ಲದ ಜ್ಞಾನವನ್ನು ಈಗಿನ ಹಿಂದೂಗಳ ಪೂರ್ವಜರು ಪಡೆದಿದ್ದರೆಂದು ಹೇಳಿದಂತಾಗುತ್ತದೆ . ಹಣ್ಣುಗಳನ್ನು ನೋಡಿ ಮರದ ಬೆಲೆ ಕಟ್ಟಬೇಕು . ಸಂತಾನಶಾಸ್ತ್ರಕ್ಕನುಸಾರವಾಗಿ ಜಾತಿಪದ್ಧತಿ ಇರುವುದಾಗಿದ್ದರೆ ಅದು ಎಂತಹ ಉತ್ಕೃಷ್ಟ ಜನಾಂಗವನ್ನು ಹುಟ್ಟಿಸಬೇಕಾಗಿತ್ತು ? ವಾಸ್ತವಿಕವಾಗಿ ನೋಡಿದರೆ ಹಿಂದೂಗಳು ಸಿ3 ವರ್ಗಕ್ಕೆ ಸೇರಿದ ಜನರು . ಮೈಕಟ್ಟಿನಲ್ಲಿ ದುರ್ಬಲರಾದ ಮತ್ತು ದೈಹಿಕವಾಗಿ ತ್ರಾಣವಿಲ್ಲದ ಕುಬ್ದರ ವರ್ಗಕ್ಕೆ ಇವರು ಸೇರಿದ್ದಾರೆ . ನೂರಕ್ಕೆ ತೊಂಬತ್ತರಷ್ಟು ಮಂದಿ ಸೈನಿಕ ಸೇವೆಗೆ ಅನರ್ಹರಾದ ಜನರ ರಾಷ್ಟ್ರ ನಮ್ಮದು . ಹೀಗಾದರೆ ಉತ್ತಮ ಸಂತಾನ ತತ್ವ ಎಲ್ಲಿ ಬಂದಿತು ? ಸ್ವಾರ್ಥಿಗಳೂ ದುರಹಂಕಾರಿಗಳೂ ಆದ ಕೆಲವರು ಹಿಂದೂಗಳು ತಮ್ಮ ಸಾಮಾಜಿಕ ಸ್ಥಾನಬಲದಿಂದ ಈ ಜಾತಿಭೇದಗಳನ್ನು ನಿರ್ಮಿಸಿ ದುರ್ಬಲ ವರ್ಗಗಳ ಮೇಲೆ ಅವುಗಳನ್ನು ಒತ್ತಾಯದಿಂದ ಹೇರಿದರು .
-ಡಾ . ಬಾಬಾಸಾಹೇಬ್ ಅಂಬೇಡ್ಕರ್ ಅವರ ಬರಹಗಳು – ಭಾಷಣಗಳು : ಸಂಪುಟ – 1
ಇದನ್ನೂ ಓದಿ
https://suddidina.com/column/bahiranga/the-first-public-speech-made-by-dalit-mother-ramabai-ambedkar/
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ
ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.
ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.
ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್ಷಾ |
|
http://Visit : www.suddidina.com
ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ
ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.
9 ಆನೆಗಳ ತೂಕದ ಆಧಾರದಲ್ಲೇ ಆಹಾರ
ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.
ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.
ಅಂಬಾರಿ ಆನೆ ಯಾರು? ಕುತೂಹಲ
ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.
ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.
ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ
ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.
“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”
– ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್
ದಸರಾ ಗಜಪಡೆಯ ತೂಕದ ವಿವರ
- ಶ್ರೀಕಂಠ: 5,790 ಕೆಜಿ
- ಏಕಲವ್ಯ: 5,600 ಕೆಜಿ
- ಧನಂಜಯ: 5,530 ಕೆಜಿ
- ಮಹೇಂದ್ರ: 5,490 ಕೆಜಿ
- ಪ್ರಶಾಂತ: 5,205 ಕೆಜಿ
- ಗೋಪಿ: 5,170 ಕೆಜಿ
- ಶ್ರೀರಾಮ: 4,820 ಕೆಜಿ
- ಲಕ್ಷ್ಮೀ: 3,990 ಕೆಜಿ
- ಕಾವೇರಿ: 3,075 ಕೆಜಿ

ದಿನದ ಸುದ್ದಿ
ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
ಕೂಡ್ಲುಗೇಟ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ
ಸುದ್ದಿದಿನ,ಬೆಂಗಳೂರು: ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್ನ ಎಸ್ಎನ್ಎನ್ ಎಸ್ಟೇಟ್ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್ಎನ್ಎನ್ ರಾಜ್ ಕಾರ್ಪ್ ಸಂಸ್ಥೆಯು ಎಚ್ಎಸ್ಆರ್ ಲೇಔಟ್ನಲ್ಲಿರುವ ತನ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್ಮೆಂಟ್ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.
₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ
ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ
ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್ಎನ್ಎನ್ ಅಪಾರ್ಟ್ಮೆಂಟ್ ನಿರ್ದೇಶಕ ಅನೂಜ್ ತಿಳಿಸಿದ್ದಾರೆ. ಫ್ಲ್ಯಾಟ್ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.
ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಾಣ
ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್ಗಳು ಮುಂಗಡವಾಗಿ ಬುಕ್ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.
ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

ದಿನದ ಸುದ್ದಿ
ಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.
ಹೈಲೈಟ್ಸ್ |
|
http://Visit : www.suddidina.com
ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್
ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.
3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ
ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.
ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.
ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ
ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡಿಯಲ್ಲಿ ಹೆಚ್ಚಿದ ಕಣ್ಗಾವಲು
ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.
ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

-
ದಿನದ ಸುದ್ದಿ6 days agoಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
-
ದಿನದ ಸುದ್ದಿ6 days agoಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
-
ದಿನದ ಸುದ್ದಿ3 days agoಬಿಜೆಪಿ ರೈತ ಮೋರ್ಚಾದಿಂದ ಬಂದ್ಗೆ ಕರೆ; ಹಲವು ವೃತ್ತಗಳಲ್ಲಿ ಟೈರ್ಗೆ ಬೆಂಕಿ, ಬೆಂಕಿ ನಂದಿಸಿದ ಪೊಲೀಸರು
-
ದಿನದ ಸುದ್ದಿ6 days agoವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್ಗೆ ರಾಜೀನಾಮೆ ಸವಾಲು!
-
ದಿನದ ಸುದ್ದಿ6 days agoTrump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್ನಾ?
-
ದಿನದ ಸುದ್ದಿ6 days agoವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್
-
ದಿನದ ಸುದ್ದಿ6 days agoಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
-
ದಿನದ ಸುದ್ದಿ4 days agoಕುಂದುಕೊರತೆಗಳಿಗೆ ತ್ವರಿತ ಪರಿಹಾರ ನೀಡಲು ಏಕೀಕೃತ ವ್ಯವಸ್ಥೆ; ಶನಿವಾರ ಜನಸಂಪರ್ಕ, ಬುಧವಾರ ಮೂರು ಹಂತದ ಪರಿಶೀಲನೆ


