Connect with us

ಅಂತರಂಗ

ಪರೀಕ್ಷೆಗೆ ಪರಿಣಾಮಕಾರಿ ಓದು

Published

on

 

ವಿದ್ಯಾ ನಾಮನರಸ್ಯ ರೂಪಮಧಿಕಂ ಪ್ರಚ್ಛನ್ನ ಗುಪ್ತ ಧನಂ
ವಿದ್ಯಾಭೋಗಕರೀ ಯಶಃ ಸುಖಕರೀ ವಿದ್ಯಾ ಗುರುಣಾಂ ಗುರುಃ ||
ವಿದ್ಯಾಬಂಧು ಜನೋ ವಿದೇಶಗಮತೀ ವಿದ್ಯಾಪರಂ ದೈವತಂ |
ವಿದ್ಯಾ ರಾಜಸು ಪೂಜ್ಯತೀ ನಹಿ ಧನಂ ವಿದ್ಯಾವಿಹೀನಃ ಪಶುಃ ||

ವಿದ್ಯೆಯು ಮನುಷ್ಯನಿಗೆ, ಸ್ತ್ರೀಗೆ ಸೌಂದರ್ಯವಾಗಿದೆ. ಅದೊಂದು ದೊಡ್ಡ ಸಂಪತ್ತು, ಆದರೆ ಅದು ಹೊರಗೆ ಕಾಣಿಸದು. ವಿದ್ಯೆಯ ಬಲದಿಂದ ನಾವು ನಾನಾ ಬಗೆಯ ಸುಖ ಅನುಭವಿಸಬಹುದು. ಅದು ಯಶಸ್ವಿಗೆ ಮೂಲ ಕಾರಣವು. ಗುರುಗಳಲ್ಲಿ ಅದು ಶ್ರೇಷ್ಠ ಗುರು ಎನಿಸಿರುವುದು. ಪರ ನಾಡಿನಲ್ಲಿ ವಿದ್ಯೆಯೇ ಶ್ರೇಷ್ಠ ಗೆಳೆಯ. ವಿದ್ಯೆಯು ಶ್ರೇಷ್ಠ ದೇವತೆ. ರಾಜ ಮಹಾರಾಜರ ಸನ್ನಿಧಾನದಲ್ಲಿ ಸಂಪತ್ತಿಗೆ ಬೆಲೆಯಿಲ್ಲ. ಆದರೆ ಅದೇ ವಿದ್ಯೆ ದೊಡ್ಡ ಗುಣವಾಗಿ ಪರಿಣಮಿಸುವುದು.

ಹೀಗೆ ಪರಿಣಾಮಕಾರಿಯಾಗಿ ರೂಪಿಸಿಕೊಳ್ಳಬೇಕು.‌ಅತೀ ಹೆಚ್ಚು ಅಂಕ ಪಡೆಯುವ ದಿಸೆಯಲ್ಲಿ ಪರಿಣಾಮಕಾರಿ ಓದುವುದು ಬಹಳ ಮುಖ್ಯವಾದುದು. ಓದು ಶಿಕ್ಷಣದ ಹಾಗೂ ವ್ಯಕ್ತಿತ್ವ ರೂಪಿಸುವ ಅವಿಭಾಜ್ಯ ಅಂಗ. ವಿದ್ಯಾರ್ಥಿಯಾದವನು/ಆದವಳು ಸದಾ ಪುಸ್ತಕವನ್ನು ಓದುವ ಹವ್ಯಾಸ ಬೆಳೆಸಿಕೊಂಡಿರಬೇಕು. ಬಲವಂತ, ಕಷ್ಟಪಟ್ಟು ಹಾಗೂ ಒತ್ತಾಯಕ್ಕೆ ಓದುವುದು ಸಮಂಜಸವಲ್ಲ. ಇಷ್ಟಪಟ್ಟು ಓದಿದಾಗ ವಿಷಯವನ್ನು ಬೇಗ ಅರ್ಥಮಾಡಿಕೊಳ್ಳಬಹುದು.ಓದಿನಲ್ಲೂ ಸಂಪೂರ್ಣ ಮನಸ್ಸಿಟ್ಟು ಹೆಚ್ಚಿನ ಏಕಾಗ್ರತೆಯಿಂದ ಓದುವ ಅಭ್ಯಾಸವನ್ನು ಚಿಕ್ಕ ವಯೋಮಾನದಿಂದಲೇ ಬೆಳೆಸಿಕೊಳ್ಳಬೇಕು.

ವಿದ್ಯಾರ್ಥಿಗಳು ಗಮನಿಸಬೇಕಾದ ಅಂಶಗಳು

  1. ನೀವು ಓದುವ ಕೊಠಡಿ ಸಾಕಷ್ಟು ಗಾಳಿ, ಬೆಳಕಿನಿಂದ ಕೂಡಿರಲಿ. ಬಿಳಿಯ ಬೆಳಕು ಅವಶ್ಯಕ.
  2. ಮನಸ್ಸನ್ನು ಉದ್ರೇಕಿಸುವ ಭಾವಚಿತ್ರಗಳು ಬೇಡ.
  3. ವಿವಿಧ ವಿಷಯಕ್ಕೆ ಸಂಬಂಧಿಸಿದ ಚಾರ್ಟ್‍ಗಳಿರಲಿ. ಮನೆಯಲ್ಲಿ ಹಾಗೂ ಶಾಲೆಯಲ್ಲಿ ಅನುಸರಿಸಬೇಕಾದ ನಿರ್ವಹಣೆ ಪಟ್ಟಿ, ವೇಳಾ ಪಟ್ಟಿ ಇರಲಿ.
  4. ಪುಸ್ತಕಗಳನ್ನು ಕ್ರಮಬದ್ಧವಾಗಿ ಜೋಡಿಸಿಡಬೇಕು. ಎಲ್ಲಾ ಪುಸ್ತಕಗಳನ್ನು ಹರಡಿಕೊಂಡು ಓದುವುದು ಸೂಕ್ತವಲ್ಲ.
  5. ಓದಲು ಕುಳಿತುಕೊಳ್ಳುವ ಜಾಗ ಸ್ಥಿರವಾಗಿರಲಿ, ಪದೇ ಪದೇ ಬದಲಾಯಿಸುವುದು ಬೇಡ.
  6. ಓದುವ ಕೊಠಡಿಯಲ್ಲಿ ಟಿ.ವಿ., ರೇಡಿಯೋ, ಮೊಬೈಲ್, ಟೇಪ್‍ರೆಕಾರ್ಡರ್, ಫೋನ್ ಇವುಗಳಿಂದ ದೂರವಿರಿ.
  7. ನೀವು ಓದುವಾಗ ಬೇರೆ ಕೊಠಡಿಯಲ್ಲಿರುವ ಟಿ.ವಿ. ಅಥವಾ ರೇಡಿಯೋ, ಮೊಬೈಲ್ ಶಬ್ದ ಕೇಳದಂತೆ ಎಚ್ಚರವಹಿಸಿರಿ.
  8. ಕುಳಿತುಕೊಂಡು ಓದುವುದು ಸೂಕ್ತ. ಮಲಗಿ ಓದುವುದರಿಂದ ಬಹುಬೇಗ ನಿದ್ರೆಗೆ ಜಾರುತ್ತೀರಿ.
  9. ಬೆಳಗಿನ ಜಾವದ ಸಮಯದಲ್ಲಿ ಹೆಚ್ಚು ಓದುವುದು ಒಳ್ಳೆಯ ಅಭ್ಯಾಸ ಹಾಗೂ ವಿಷಯವನ್ನು ಬಹುಬೇಗ ಗ್ರಹಿಸಬಹುದು.
  10. ಒಮ್ಮೆ ಓದುವುದಕ್ಕೆ ಕುಳಿತರೆ ಕನಿಷ್ಠ ಅರ್ಧ ಗಂಟೆ/ ಒಂದು ಗಂಟೆ ಏಳದಂತೆ ಓದುವ ಅಭ್ಯಾಸ ಬೆಳೆಸಿಕೊಳ್ಳುವುದು ಸೂಕ್ತ.
  11. ತರಗತಿಯಲ್ಲಿ ಆದ ಪಾಠಗಳನ್ನು ಅಂದಿನ ದಿನದಂದೆ ಓದಿ ಬರೆಯಿರಿ.
  12. ಅರ್ಥವಾಗದೇ ಇರುವ ವಿಷಯಗಳನ್ನು ನಿಮ್ಮ ಗೆಳೆಯರ ಅಥವಾ ಶಿಕ್ಷಕರ ಜೊತೆ ಚರ್ಚಿಸಿ ತಿಳಿದುಕೊಳ್ಳಿ.
  13. ಯಾವ ವಿಷಯವೂ ಕಠಿಣವಲ್ಲ ಎಂಬುದಕ್ಕೆ ಮನವರಿಕೆ ಮಾಡಿಕೊಳ್ಳಿ.
  14. ಕಡಿಮೆ ಅಂಕ ಬಂದಿರುವ ವಿಷಯಗಳ ಮೇಲೆ ಹೆಚ್ಚು ಹೆಚ್ಚು ಏಕಾಗ್ರತೆಯಿಂದ ಓದಿ ಬರೆದು ಅಭ್ಯಾಸ ಮಾಡಿ.
  15. ಓದುವಾಗ ಆ ವಿಷಯಕ್ಕೆ ಸಂಬಂಧಿಸಿದಂತೆ ಸಣ್ಣ ಸಣ್ಣ ಟಿಪ್ಪಣಿ ಮಾಡಿಕೊಳ್ಳಿ.
  16. ಓದಬೇಕಾದ ದಿನಚರಿ, ಕಾಲ ನಿರ್ವಹಣಾ ಪಟ್ಟಿ ಹಬ್ಬ, ರಜಾ ದಿನವೂ ಅನುಸರಿಸಲ್ಪಡುವಂತೆ ಎಚ್ಚರಿಕೆ ವಹಿಸಿ. ಆ ದಿನ ಹಿಂದಿನ ವಾರದಲ್ಲಿ ಕಲಿಯುವಿಕೆಯಲ್ಲಿ ಆಗಿರಬಹುದಾದ ಕೊರತೆಯನ್ನು ಭರಿಸುವ ದಿನ ಎಂಬುದಾಗಿ ಭಾವಿಸುತ್ತ ಓದಿ ಬರೆಯುವ ಪರಿಪಾಠ ಬೆಳೆಸಿಕೊಳ್ಳಿ.
  17. ಕೀಳು ಅಭಿರುಚಿ, ಕಾಡು ಹರಟೆಯಲ್ಲಿ ತೊಡಗಬೇಡಿ
  18. ಪದ್ಯ, ಸೂತ್ರ, ಸಮೀಕರಣ ಇತ್ಯಾದಿಗಳನ್ನು ಬಾಯಿಪಾಠ ಅಥವಾ ಕಂಠಪಾಠ ಮಾಡಿ.

ಪರೀಕ್ಷೆ

ಪರೀಕ್ಷೆಗಳು ವಿದ್ಯಾಭ್ಯಾಸದ ಒಂದು ಭಾಗವೇ ಆಗಿದೆ. ಟೆಸ್ಟುಗಳು, ಚಿಕ್ಕ ಪರೀಕ್ಷೆಗಳು, ಅರ್ಧವಾರ್ಷಿಕ ಪರೀಕ್ಷೆಗಳು ಅಣಕು ಪರೀಕ್ಷೆಗಳು,ಫೈನಲ್ ಪರೀಕ್ಷೆಗಳು ಹೀಗೆ.. ವಿದ್ಯಾರ್ಥಿ ಅನೇಕ ಪರೀಕ್ಷೆಗಳನ್ನು ಎದುರಿಸಬೇಕು.

ಪಬ್ಲಿಕ್ ಪರೀಕ್ಷೆಯಿರುವ 10ನೇ ತರಗತಿ, ಪಿಯುಸಿ ವಿದ್ಯಾರ್ಥಿಗಳು ಮತ್ತು ಪೋಷಕರು ಅತೀ ಹೆಚ್ಚು ಕಾಳಜಿ ವಹಿಸುವ ಪ್ರಯತ್ನದಲ್ಲಿರುತ್ತಾರೆ. ಏಕೆಂದರೆ ಇದು ವಿದ್ಯಾರ್ಥಿಯ ದೆಶೆಯಲ್ಲಿ

ನೂರಕ್ಕೊಬ್ಬರು ವಿದ್ಯಾರ್ಥಿಗಳು ಪರೀಕ್ಷೆಗೆ ಒಂದೆರಡು ತಿಂಗಳು ಅಧ್ಯಯನ ಮಾಡಿ ಒಳ್ಳೆಯ ಅಂಕಗಳನ್ನು ಗಳಿಸಬಲ್ಲರು. ಆದರೆ ಉಳಿದ 98 ಸ್ಲೋ ಅಂಡ್ ಸ್ಟಡಿ, ವಿನ್ ದಿ ರೇಸ್ ನಿಧಾನವಾಗಿ ಅವಸರ ಮಾಡಿಕೊಳ್ಳದೆ, ಕ್ರಮಬದ್ಧವಾಗಿ ಅಧ್ಯಯನ ಮಾಡಿ, ಯಶಸ್ಸನ್ನು ಸಾಧಿಸಬಹುದು ಪ್ರಾರಂಭದಿಂದಲೇ ಓದಿದರೆ ಸಿದ್ಧತೆ ಮಾಡಿದರೆ, ಸಾಕಷ್ಟು ಸಮಯ ಸಿಗುತ್ತದೆ. ರಿಕಾಲ್ ಮತ್ತು ರಿಹರ್ಸಲ್ ಮಾಡಲು ಕಾಲಾವಕಾಶವಿರುತ್ತದೆ. ಮಾನಸಿಕ ಒತ್ತಡ ಕಂಡುಬರುವುದಿಲ್ಲ. ಮಧ್ಯೆ ಮಧ್ಯೆ ವಿಶ್ರಾಂತಿ ಮಾಡಲು ಸಮಯ ಸಿಗುತ್ತದೆ. ತಮ್ಮ ನಿರೀಕ್ಷಿತ ಗುರಿ ತಲುಪಲು ಸಹಾಯಕವಾಗುತ್ತದೆ. ಇಂತಹ ವಿಚಾರಗಳನ್ನು ಶಿಕ್ಷಕರು ಪಾಲಕರಿಗೆ ಪೋಷಕರು ವರ್ಗದವರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿ ತಿಳಿಸಬೇಕು. ಪ್ರತಿ ತಿಂಗಳಿಗೊಮ್ಮೆ ಶಿಕ್ಷಕರು ಪೋಷಕರ ಸಭೆ ಕರೆದು ತಮ್ಮ ಯೋಜನೆ, ಗುರಿ ಉದ್ದೇಶವನ್ನು ತಿಳಿಸುವುದು ಸೂಕ್ತ.

ಆಸಕ್ತಿಯಿಂದ ಪಾಠ ಕೇಳುವುದು

ವಿದ್ಯಾರ್ಥಿಗಳು ಒತ್ತಾಯಕ್ಕೆ ತರಗತಿಗಳಿಗೆ ಹೋಗಬಾರದು. ಶಿಕ್ಷಕರು ಹೇಳುವಂತಹ ಪಾಠವನ್ನು ಶ್ರದ್ಧೆಯಿಂದ ಆಲಿಸಿಕೊಳ್ಳಬೇಕು. ಅಲ್ಲದೆ ಅನುಮಾನದ ಅರ್ಥವಾಗದಂತಹ ವಿಷಯಗಳನ್ನು ಮುಕ್ತವಾಗಿ ಚರ್ಚಿಸಿ ಪರಿಹಾರವನ್ನು ಕಂಡುಕೊಳ್ಳಬೇಕು.ನುರಿತ ಶಿಕ್ಷಕರು ವಿದ್ಯಾರ್ಥಿಗಳಿಗೆ ವಿಭಿನ್ನ ಆಯಾಮಗಳಿಂದ, ಸರಳವಾಗಿ, ಆಕರ್ಷಕವಾಗಿ ಭೋದನೆ ಮಾಡಿ ಆಸಕ್ತಿಯನ್ನು ಕೆರಳಿಸುವಂತಿದ್ದರೆ. ಆದ್ದರಿಂದ ವಿದ್ಯಾರ್ಥಿಗಳು ಕಡ್ಡಾಯವಾಗಿ ತರಗತಿಗಳಿಗೆ ಹಾಜರಾಗುವುದರಿಂದ ಧನಾತ್ಮಕವಾದ ಅಂಶಗಳು ಹೆಚ್ಚುತ್ತವೆ.

ತರಗತಿಯಲ್ಲಿರುವಾಗ ನಮ್ಮ ಮನಸ್ಸು ಹಿಡಿದು ಏಕಾಗ್ರತೆಯಿಂದ ಪಾಠ, ಪ್ರವಚನದ ಕಡೆ ಸಾಗಬೇಕು. ಹಸಿವಿನಿಂದ ಪಾಠ ಕೇಳುವುದು ಕಲಿಕೆಗೆ ಭಂಗ ತರುತ್ತವೆ. ಅಲ್ಲದೆ ಅತೀ ಹೆಚ್ಚು ಊಟ ಮಾಡಿದರೆ ನಿದ್ರೆಗೆ ಜಾರುತ್ತಾರೆ. ಊಟ, ತಿಂಡಿ ಸಮ ಪ್ರಮಾಣದಲ್ಲಿ ಸೇವಿಸಿದಾಗ ಮನಸ್ಸು ಹತೋಟಿಯಲ್ಲಿದ್ದು ಕಲಿಕೆಗೆ ಪೂರಕವಾದ ಅಂಶಗಳನ್ನು ಒದಗಿಸುತ್ತದೆ. ಶಾಲಾ ಅಥವಾ ಕಾಲೇಜಿನಿಂದ ಮನೆಗೆ ಬಂದ ಮೇಲೆ ಮುಖ ತೊಳಿದು ದೈಹಿಕ ಶ್ರಮವಾಗುವಂತಹ ಆಟಗಳನ್ನು ಆಟವಾಡಿದಾಗ ಮನಸ್ಸು ಹಗುರವಾಗುತ್ತದೆ.

ನಂತರ ದೈನಂದಿನ ಪಾಠ ಪ್ರವಚನಗಳನ್ನು ನೆನಪು ಮಾಡಿಕೊಳ್ಳಿ. ಇಲ್ಲಿ ನೆನಪಾಗುವ ವಿಷಯವನ್ನು ಒಂದು ಕಡೆ ಬರೆಯಿರಿ. ಅಲ್ಲದೆ ನೆನಪಾಗದ ವಿಷಯವನ್ನು ಪಟ್ಟಿ ಮಾಡಿಕೊಂಡು ಅದಕ್ಕೆ ಸಂಬಂಧಿಸಿದ ನೋಟ್ಸ್ ಮತ್ತು ಪುಸ್ತಕಗಳಿಂದ ನೋಡಿ, ಪುನಃ ನೆನಪು ಮಾಡಿಕೊಳ್ಳಿ. ಅರ್ಥವಾಗದ ವಿಷಯವನ್ನು ಗುರುತು ಮಾಡಿಕೊಂಡು ನಿಮ್ಮ ಮಿತ್ರರು ಅಥವಾ ಶಿಕ್ಷಕರಿಂದ ಪರಿಹಾರ ಕಂಡುಕೊಂಡರೆ ಶಾಶ್ವತವಾಗಿ ಸ್ಮೃತಿಪಟಲದಲ್ಲಿ ಉಳಿಯುತ್ತದೆ. ಇದನ್ನು ದಿನನಿತ್ಯವೂ ಅಭ್ಯಾಸ ಮಾಡಿಕೊಳ್ಳುವುದು ಉತ್ತಮ.

ಮನೆಯ ಅಭ್ಯಾಸ

ಗೇಮ್ಸ್, ರೇಡಿಯೋ, ಟಿ.ವಿ.,ಮೊಬೈಲ್, ವೀಡಿಯೋ ಇವುಗಳಲ್ಲಿ ಹೆಚ್ಚು ಸಮಯವನ್ನು ವ್ಯರ್ಥ ಮಾಡದೆ ಇವುಗಳಿಂದ ದೂರವಿರುವುದು ಸೂಕ್ತ.

ಮನೆಯಲ್ಲಿ ಸೂಕ್ತವಾದ ಸ್ಥಳವನ್ನು ಆಯ್ಕೆ ಮಾಡಿಕೊಂಡು ಓದಿಗೆ ಭಂಗತರದಂತಹ ಸ್ಥಳದಲ್ಲ್ಲಿ ಕುಳಿತುಕೊಳ್ಳುವುದು ಸಹಾಯವಾಗುತ್ತದೆ. ಪದೇ ಪದೇ ಓದುವ ಸ್ಥಳವನ್ನು ಬದಲಾವಣೆ ಮಾಡಬಾರದು. ಆದರೆ ಓದುವ ಸಮಯ ಯಾವುದು ಪರಿಣಾಮಕಾರಿ, ಯಾವುದು ಅತ್ಯುತ್ತಮವೆಂದು ತುಂಬಾ ಪೋಷಕರು ಶಿಕ್ಷಕರನ್ನು ಕೇಳುವ ಪ್ರಶ್ನೆಯಾಗಿದೆ. ಆದರೆ ಯಾವುದು ಪರಿಣಾಮಕಾರಿ ಎಂದು ಯಾವಾಗ ಏಕಾಗ್ರತೆಯಿಂದ ಓದುತ್ತಾರೆಯೋ ಅದೇ ಸೂಕ್ತ ಸಮಯ. ನೀವು ಕುಳಿತುಕೊಳ್ಳುವ ಸಮಯ. ನಿತ್ಯ ಕುಳಿತುಕೊಳ್ಳುವ ಜಾಗ, ಪ್ರಶಾಂತವಾದ ಸ್ಥಳ, ಆಕರ್ಷಣೆಗೊಳ್ಳುವ ಮುಕ್ತವಾದ ಪ್ರದೇಶ, ಸಾಕಷ್ಟು ಗಾಳಿ, ಬೆಳಕು ಇರುವ ಪ್ರದೇಶವನ್ನು ಆಯ್ಕೆ ಮಾಡಿಕೊಂಡು ಅಭ್ಯಾಸ ಮಾಡಿ.

ಓದಿನ ವಿಧಾನ

ಏಕಾಗ್ರತೆಯಿಂದ ಓದಿ ಅರ್ಥವಾಗುವಂತೆ ಓದಿ, ಮನನ ಮಾಡಿಕೊಳ್ಳಿ. ಗಟ್ಟಿಯಾಗಿ ಅಥವಾ ಮನಸ್ಸಿನಲ್ಲಿಯೋ ಓದುತ್ತೀರೋ ಅದು ಓದುಗರಿಗೆ ಬಿಟ್ಟ ವಿಚಾರ. ಆದರೆ ಗಟ್ಟಿಯಾಗಿ ಓದಿದರೆ ಬಹು ಬೇಗ ಆಯಾಸವಾಗುವುದು ಸಹಜ. ಆದರೆ ಬಾಯಿಪಾಠ ಕಲಿಯುವುದರಿಂದ ಅಲ್ಪಾವಧಿ ನೆನಪಿನಲ್ಲಿ ಅದು ಉಳಿದು ಒಂದೆರಡು ದಿನಗಳಲ್ಲಿ ಮರೆಯುವುದು ಸಾಧ್ಯವಾಗುತ್ತದೆ. ಅರ್ಥ ಮಾಡಿಕೊಂಡು ಓದಿದಾಗ ದೀರ್ಘಾವಧಿ ನೆನಪಿನ ಸಂಗ್ರಹಕ್ಕೆ ಸೇರುತ್ತದೆ.

ಗುಂಪು ಅಧ್ಯಯನ

ಕೆಲವು ವಿದ್ಯಾರ್ಥಿಗಳು ಒಟ್ಟಿಗೆ ಸೇರಿ ಅಧ್ಯಯನ ಮಾಡಲು ಇಷ್ಟಪಡುತ್ತಾರೆ. ಇಬ್ಬರು, ಮೂವರು ಅಥವಾ ನಾಲ್ಕೈದು ಜನ ಸೇರಿ ಶಾಲೆ, ಮನೆ,ಟೆರಸ್‍ನಲ್ಲಿ ಅಧ್ಯಯನ ಮಾಡುತ್ತಾರೆ. ಒಬ್ಬರು ಗಟ್ಟಿಯಾಗಿ ಓದುವುದು, ಉಳಿದವರು ಕೇಳಿಸಿಕೊಳ್ಳುವುದು, ಒಬ್ಬರು ಅಧ್ಯಯನ ಮಾಡಿ ಭೋದಿಸುವುದು, ಪ್ರಶ್ನೆಗಳಿಗೆ ಉತ್ತರವನ್ನು ಕಂಡುಕೊಳ್ಳುವುದು, ಅರ್ಥವಾಗದ ವಿಷಯ ಚರ್ಚೆ ಮಾಡುವುದು.

ಅನುಕೂಲಗಳು

  • ಒಬ್ಬರು ಇನ್ನೊಬ್ಬರಿಗೆ ಪ್ರೇರಣೆಯಾಗುತ್ತಾರೆ.
  • ಕ್ರಮಬದ್ಧ ಅಧ್ಯಯನಕ್ಕೆ ಸಹಾಯಕಾರಿ
  • ಏಕಾಗ್ರತೆ ಹೆಚ್ಚಿಸುವುದು.
  • ಉತ್ಸಾಹದ ವಾತಾವರಣ ನಿರ್ಮಿಸುತ್ತದೆ.
  • ಕಲಿಕೆ ಮತ್ತು ನೆನಪು ಉತ್ತಮಗೊಳ್ಳುತ್ತವೆ.
  • ಪರಿಣಾಮಕಾರಿ ಕಲಿಕೆಗೆ ಈ ವಿಧಾನ ಅನುಸರಿಸಿ ಅನುಷ್ಠಾನಗೊಳಿಸಿ.
  • ಓದಲು ಸೂಕ್ತ ಸಮಯ ಮತ್ತು ಸ್ಥಳ ಆಯ್ಕೆ ಮಾಡಿ
  • ಏಕಾಗ್ರತೆಯಿಂದ 30 ನಿಮಿಷ ಓದಿ, ಓದಿದ್ದನ್ನು ಅರ್ಥ ಮಾಡಿಕೊಳ್ಳಿ.
  • ಏನನ್ನು ಓದಿದ್ದೇನೆ ಎಂಬುದರ ಸಾರಾಂಶವನ್ನು ಬರೆದುಕೊಳ್ಳಿ.
  • ಓದಿದ್ದನ್ನು ಮನಸ್ಸಿನಲ್ಲಿ ಮನನ ಮಾಡಿಕೊಳ್ಳಿ. ಓದಿದ ವಿಷಯವನ್ನು ಪ್ರತಿದಿನ, ಒಂದು ವಾರ ನಂತರ ತಿಂಗಳ ನಂತರ ಯಾವುದು ಮನಸ್ಸಿಗೆ ಬರುತ್ತಿದೆ ಹಾಗೂ ಯಾವುದೂ ಮನಸ್ಸಿನಲ್ಲಿ ಬರುವುದಿಲ್ಲವೆಂದು ಪಟ್ಟಿ ಮಾಡಿಕೊಂಡು ಪುನಃ ಅಧ್ಯಯನ ಮಾಡುವುದು.
  • ಪ್ರಶ್ನೆಗೆ ಸಂಬಂಧಿಸಿದಂತೆ ಮನೆಯಲ್ಲಿ ಕಾಲಮಿತಿಯಲ್ಲಿ ಉತ್ತರಿಸುವ ಅಭ್ಯಾಸ ಮಾಡಿ. ಇದರಲ್ಲಿ ಕಂಡು ಬರುವ ದೋಷಗಳನ್ನು ಸರಿಪಡಿಸಿಕೊಂಡರೆ ಗುಣಮಟ್ಟವನ್ನು ಹೆಚ್ಚಿಸಿಕೊಳ್ಳಬಹುದು.
  • ಶ್ರದ್ಧೆ, ಶ್ರಮ, ಕ್ರಮಬದ್ಧ ಅಧ್ಯಯನ ನಿರಂತರವಾಗಿರಲಿ.
  • ಆರೋಗ್ಯದ ಸುಧಾರಣೆ ಸಮಯಕ್ಕೆ ಸರಿಯಾಗಿ ಆಹಾರ, ನಿದ್ರೆ, ಯೋಗ, ಧ್ಯಾನದ ಅಭ್ಯಾಸವಿಟ್ಟುಕೊಳ್ಳುವುದು.

ಪರೀಕ್ಷಾ ಭಯ

  • ಪರೀಕ್ಷೆ ಹತ್ತಿರ ಬರುತ್ತಿದ್ದಂತೆ ಅನೇಕ ವಿದ್ಯಾರ್ಥಿಗಳಲ್ಲಿ ಆತಂಕ, ಭಯ ಪ್ರಾರಂಭವಾಗುತ್ತಿದೆ.
  • ನನ್ನ ಪರೀಕ್ಷಾ ಸಿದ್ಧತೆಗಳು ಕಡಿಮೆಯಾದವು ಎಂಬುದರ ಚಿಂತೆ
  • ನನ್ನಿಂದ ಬೇಗ ಕಲಿಯುವುದಕ್ಕೆ ಸಾಧ್ಯವಾಗುತ್ತಿಲ್ಲ. ಪರೀಕ್ಷಾ ಸಂದರ್ಭದಲ್ಲೂ ಎಲ್ಲಾ ವಿಷಯಗಳನ್ನು ಅಥವಾ ಪಾಠಗಳನ್ನು ಮುಗಿಸಲಿಕ್ಕೆ ಆಗುತ್ತೋ ಇಲ್ಲವೋ ಎಂಬುದರ ಭಯ.
  • ನನಗೆ ಪರೀಕ್ಷೆಗೆ ಪ್ರಶ್ನೆಗಳಿಗೆ ಪೂರ್ಣ ಉತ್ತರವನ್ನು ಬರೆಯಲಿಕ್ಕೆ ಆಗುತ್ತೋ ಅಥವಾ ಇಲ್ಲವೋ ಎನ್ನುವ ಆತಂಕ ಅಲ್ಲದೇ ಮೌಲ್ಯಮಾಪಕರು ಪೂರ್ತಿ ಅಂಕ ಕೊಡುತ್ತಾರೋ ಇಲ್ಲವೋ ಎಂಬುದು.
  • ನಾನು ಫೇಲಾದರೆ ಎಷ್ಟು ಅವಮಾನ ಅಲ್ಲದೆ ನನಗೆ ಯಾರೂ ಗೌರವ ಕೊಡುವುದಿಲ್ಲವೆಂಬುದು.
  • ನನ್ನ ಸ್ನೇಹಿತರು ಒಳ್ಳೆಯ ಕೋರ್ಸಿಗೆ ಸೀಟು ಪಡೆಯುತ್ತಾರೆ. ನನ್ನಿಂದ ಇದು ಸಾಧ್ಯನಾ ನಾನು ಹಿಂದೆ ಬೀಳುತ್ತೇನಾ ಎಂಬುದು.
  • ನನಗೆ ಭವಿಷ್ಯವಿಲ್ಲ ನನ್ನ ಪಾಲಕರಿಗೆ ನೋವು- ನಿರಾಶೆ ಇಂತಹ ನಕಾರಾತ್ಮಕ ಚಿಂತನೆಗಳು ಸದಾ ಕಿವಿಯಲ್ಲಿ ಗುನುಗುಡುತ್ತಿರುತ್ತವೆ. ಆಗ ಭಯ ಶುರುವಾಗುತ್ತವೆ.
  • ಮನಸ್ಸು ಸ್ಥಿರವಾಗಿರುವುದಿಲ್ಲ. ಹೃದಯದ ಬಡಿತ ಶುರುವಾಗುತ್ತದೆ.
  • ಹಸಿವು ಹೆಚ್ಚಾಗುವುದಿಲ್ಲ. ಆಹಾರವು ರುಚಿಕರ ಅನ್ನಿಸುವುದಿಲ್ಲ.
  • ನಿದ್ರೆಯಲ್ಲೂ ವ್ಯತ್ಯಾಸ ಕಂಡು ಬರುವುದು ಅಲ್ಲದೇ ಮಂಕು ಆವರಿಸುವುದು.
  • ಆತ್ಮವಿಶ್ವಾಸ ಕಡಿಮೆಯಾಗುತ್ತದೆ.
  • ಪದೇ ಪದೇ ಬಾತ್‍ರೂಂಗೆ ಹೋಗುವ ಮನಸ್ಸು.
  • ಜ್ವರ ಆವರಿಸಬಹುದು.
  • ಕೋಪ, ಸಿಟ್ಟು, ಜಗಳ ಪ್ರಾರಂಭವಾಗಬಹುದು.
  • ಹತಾಶ ಮನಸ್ಥಿತಿ ತಲುಪಬಹುದು.
  • ಒಂಟಿತನ ಇರಲು ಇಷ್ಟಪಡುವುದು.

ಇಂತಹ ಸಂಗತಿಗಳನ್ನು ಪರೀಕ್ಷೆಯ ಹಿಂದಿನ ದಿನದಲ್ಲೂ ಅತಿ ಹೆಚ್ಚು ಕಾಣಬಹುದು.ಆದ್ದರಿಂದ ಪೋಷಕರು, ಶಿಕ್ಷಕರು ಮಾರ್ಗದರ್ಶನ ಹಾಗೂ ಧೈರ್ಯ ತುಂಬಬೇಕಾಗುತ್ತದೆ.

  • ಪ್ರೇರೇಪಣೆ ನೀಡುವುದು

    ನೀನೊಬ್ಬ ಉತ್ತಮ ವಿದ್ಯಾರ್ಥಿ ಹಾಗೂ ನಿರಂತರ ಓದಿ ಅಭ್ಯಾಸ ಮಾಡಿದ್ದೀಯಾ ವರ್ಷಪೂರ್ತಿ ಓದಿದ್ದೀಯಾ ಅದ್ದರಿಂದ ಓದಿದಂತಹ ಪ್ರಶ್ನೆಗಳೇ ಪರೀಕ್ಷೆಯಲ್ಲಿ ಬರುತ್ತವೆಂಬುದನ್ನು ತಿಳಿಸುವುದು.

  • ಪರೀಕ್ಷೆ ಬರೆಯುವ ಮುನ್ನ ಫಲಿತಾಂಶದ ಬಗ್ಗೆ ತಲೆಕೆಡಿಸಿಕೊಳ್ಳಬಾರದು. ಸಮಾಧಾನ ಚಿತ್ತದಿಂದ ಪರೀಕ್ಷೆ ಎದುರಿಸು. ನಿನಗೆ ಯಶಸ್ಸು ಸಿಗುತ್ತದೆ.
  • ಕನಿಷ್ಠ ಆರು ತಾಸು ನಿದ್ರೆ
  • ಕರಿದ ಪದಾರ್ಥಗಳಿಂದ ದೂರವಿರುವುದು, ಮಾಂಸಹಾರ ಬೇಡ.
  • ಹಸಿ ತರಕಾರಿಗಳನ್ನು ಸೇವಿಸುವುದು.
  • ಪಾಯಸ, ಗಂಜಿ,ಖೀರು ಉತ್ತಮ
  • ಓದುವಾಗ ಆಗಾಗ್ಗೆ ತಣ್ಣೀರು / ಬಿಸಿನೀರು ಮುಖ ತೊಳೆದುಕೊಳ್ಳಿ.

ಪರೀಕ್ಷಾ ದಿನ

  • ಕನಿಷ್ಠ ಆರು ಗಂಟೆ ನಿದ್ರೆಯ ನಂತರ ಎದ್ದುಸ್ನಾನ ಮಾಡಿ ಪ್ರಾರ್ಥನೆ ಸಲ್ಲಿಸುವುದು. ತಂದೆ-ತಾಯಿಗಳ ಆಶೀರ್ವಾದ ಪಡೆದುಕೊಳ್ಳಿ.

    ಪರೀಕ್ಷೆ ಸಲಕರಣೆಗಳನ್ನು ಜೋಡಿಸಿಕೊಳ್ಳಿ.

  • ಹಾಲ್‍ಟಿಕೆಟ್, ಒಳ್ಳೆಯ ಗುಣಮಟ್ಟದ ಎರಡು ಹಗುರವಾದ ಉಪಹಾರ ಇತ್ಯಾದಿ ಮಾಡುವುದು
  • ಪರೀಕ್ಷಾ ಹಾಲ್‍ನಲ್ಲಿ ಅರ್ಧಗಂಟೆ ಮುಂಚಿತವಾಗಿ ಕುಳಿತುಕೊಳ್ಳುವುದು.
  • ಪರೀಕ್ಷಾ ಕೇಂದ್ರಕ್ಕೆ ಹೋಗಿ ಸ್ಥಳವನ್ನು ಗುರುತು ಮಾಡಿಕೊಳ್ಳುವುದು.
  • ವಿಷಯದ ಬಗ್ಗೆ ಚರ್ಚೆ ಬೇಡ ಮನಸ್ಸು ಪ್ರಶಾಂತವಾಗಿರಲಿ.
  • ಪರೀಕ್ಷಾ ಕೇಂದ್ರದಲ್ಲಿ ಅಭ್ಯಾಸ ಬೇಡ
  • ತಮ್ಮ ಜೇಬುಗಳಲ್ಲಿ ಯಾವುದೇ ಚೀಟಿ, ಮೊಬೈಲ್ ಇರಬಾರದು.
  • ಪರೀಕ್ಷೆಗೆ ಹೋಗುವ ಮುನ್ನ ಮೂತ್ರ ವಿಸರ್ಜನೆ ಮಾಡುವುದು.
  • ನಿಮ್ಮ ಸೀಟಿನಲ್ಲಿ ಕುಳಿತುಕೊಳ್ಳಿ. ಉಸಿರಾಟ ನಿಧಾನಗತಿಯಿರಲಿ.
  • ಪ್ರಶ್ನೆ ಪತ್ರಿಕೆ ಬಂದಾಗ ನಿಧಾನವಾಗಿ ಎಲ್ಲಾ ಪ್ರಶ್ನೆಗಳನ್ನು ನಿಧಾನವಾಗಿ ಒಂದೊಂದೇ ಅರ್ಥ ಮಾಡಿಕೊಳ್ಳುತ್ತಾ ಹೋಗಿ.
  • ಎಲ್ಲಾ ಪ್ರಶ್ನೆಗಳಿಗೂ ಉತ್ತರಿಸಲು ಪ್ರಯತ್ನಿಸಿ.
  • ಪ್ರಶ್ನೆ ಪತ್ರಿಕೆ ಕೊಟ್ಟಾಗ ಕೆಲವು ಪ್ರಶ್ನೆಗಳನ್ನು ನಿರೀಕ್ಷೆಯಿರುವುದಿಲ್ಲ ಅಂತಹ ಸಂದರ್ಭದಲ್ಲಿ ಗಾಬರಿ ಪಡಬೇಡಿ.
  • ಮೊದಲು ಸಂಪೂರ್ಣವಾಗಿ ಉತ್ತರ ಗೊತ್ತಿರುವ ಪ್ರಶ್ನೆಗಳಿಗೆ ಉತ್ತರ ಬರೆಯಿರಿ.
  • ಒಂದು ಪ್ರಶ್ನೆಗೆ ಉತ್ತರ ಬರೆದ ನಂತರ ಪೆನ್ಸಿಲ್‍ನಲ್ಲಿ ಒಂದು ಅಡ್ಡಲಾಗಿ ಗೆರೆ ಹಾಕುವುದು.
  • ಅಕ್ಷರ ಸ್ಫುಟವಾಗಿರಲಿ, ಯೋಚಿಸಿ ಬರೆಯಿರಿ.
  • ಒಂದು ಸಾಲಿಗೂ ಇನ್ನೊಂದು ಸಾಲಿಗೂ ಅಂತರವಿರಲಿ.
  • ಅಲ್ಪ ಸ್ವಲ್ಪ ಉತ್ತರ ಗೊತ್ತಿರುವ ಪ್ರಶ್ನೆಗಳನ್ನು ಕೊನೆಗೆ ಪ್ರಯತ್ನಿಸಿ, ಗೊತ್ತಿರುವ ಅಲ್ಪಸ್ವಲ್ಪ ಉತ್ತರ ಬರೆಯಿರಿ.

ಸಮಯ ಪಾಲನೆ ಮಾಡುವುದು

  • ಯಾವುದೇ ಪ್ರಶ್ನೆಗೆ ಉತ್ತರ ಬರೆಯಲು ಅವಶ್ಯಕತೆಗಿಂತ ಹೆಚ್ಚು ಸಮಯವನ್ನು ತೆಗೆದುಕೊಳ್ಳಬಾರದು.
  • ಕಡೆಯ ಹತ್ತು ನಿಮಿಷಯದಲ್ಲಿ ಪುನರಾವಲೋಕನ ಮಾಡುವುದು.
  • ಪ್ರಶ್ನೆಗಳ ಸಂಖ್ಯೆಯನ್ನು ಸರಿಯಾಗಿ ನಮೂದಿಸುವುದು.
  • ರಿಜಿಸ್ಟರ್ ನಂಬರ್ ಉತ್ತರ ಪತ್ರಿಕೆಗಳ ಕ್ರಮ ಸಂಖ್ಯೆಯನ್ನು ಹಾಕುವುದು.
  • ಇತರರು ಏನು ಮಾಡುತ್ತಿದ್ದಾರೆಂಬುದನ್ನು ಗಮನವಿರಬಾರದು.
  • ಪೂರ್ಣ ಬರೆಯುವವರಿಗೂ ಮುಗಿಯುವವರೆಗೂ ಏಕಾಗ್ರತೆಯಿಂದ ಉತ್ತರಿಸಬೇಕು.
  • ಹೊರ ಬಂದ ನಂತರ ಚರ್ಚೆ ಬೇಡ
  • ಮನೆಗೆ ಹೋಗಿ ವಿರಾಮವನ್ನು ತೆಗೆದುಕೊಳ್ಳುವುದು.

ಲೇಖಕರು : ಹಾಲೇಶ್ ಹೆಚ್.ಎಸ್., ಎಂ.ಎ., ಎಂ.ಇಡಿ, ಎಂ.ಸಿ.ಜೆ. ಡಿ.ಆರ್.ಆರ್. ಹೆಚ್.ಎಸ್., ಪಿ.ಬಿ. ರಸ್ತೆ, ದಾವಣಗೆರೆ 

 

 

 

 

 

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ದೇವರ ಹೂವು

Published

on

~ ಡಾ. ಸಿ.ಬಿ.ಐನಳ್ಳಿ

ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ

ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ

ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ

ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ

ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading
Advertisement

Title

ದಿನದ ಸುದ್ದಿ4 hours ago

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು. ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್...

ದಿನದ ಸುದ್ದಿ1 day ago

ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ...

ದಿನದ ಸುದ್ದಿ3 days ago

ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ

ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ...

ದಿನದ ಸುದ್ದಿ7 days ago

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO)...

ದಿನದ ಸುದ್ದಿ1 week ago

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು...

ದಿನದ ಸುದ್ದಿ1 week ago

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7...

ದಿನದ ಸುದ್ದಿ1 week ago

ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ...

ದಿನದ ಸುದ್ದಿ2 weeks ago

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,...

ದಿನದ ಸುದ್ದಿ2 weeks ago

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ....

ದಿನದ ಸುದ್ದಿ2 weeks ago

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು...

Trending