Connect with us

ರಾಜಕೀಯ

ಚುನಾವಣಾ ರಾಜಕಾರಣ : ಆಶಾದಾಯಕ ಅವಕಾಶಗಳು

Published

on

Photo courtesy : LAW.COM

ದೇಶ ಮತ್ತೊಂದು ಮಹಾಚುನಾವಣೆಯ ಹೊಸಿಲಲ್ಲಿದೆ. ಯಾರು ಅಧಿಕಾರ ಅಲಂಕರಿಸಬಹುದು ಎಂಬ ಸಹಜ ಕುತೂಹಲ ಎಲ್ಲೆಡೆಯಲ್ಲಿಯೂ ಇದೆ. ಇದಕ್ಕೆ ಪ್ರತಿಯಾಗಿ ರಾಜಕೀಯ ಅಖಾಡ ಸನ್ನದ್ಧವಾಗಿದೆ. ಲೋಕಸಭೆ ಚುನಾವಣೆ ಎಂದಾಕ್ಷಣ ಮುಂದಿನ ನಾಯಕ ಯಾರು ಎಂಬ ನಿರೀಕ್ಷೆ ಸಹಜವಾಗಿಯೇ ಗರಿಗೆದರುತ್ತದೆ. ಈ ಕುತೂಹಲಕ್ಕನುಗುಣವಾದ ನಿರೀಕ್ಷೆಯನ್ನು ಭಾರತದ ರಾಜಕಾರಣ ಹೇಗೆ ಈಡೇರಿಸುತ್ತದೆ ಎನ್ನುವುದರ ಮೇಲೆ ಭವಿಷ್ಯದ ಹೆಜ್ಜೆಗಳು ನಿರ್ಣಯಿಸಲ್ಪಡುತ್ತವೆ. ಜನಮನ್ನಣೆಯ ಗೆಲುವು ದಕ್ಕಿಸಿಕೊಳ್ಳಲು ರಾಜಕಾರಣಕ್ಕೆ ಎರಡು ಬಗೆಯ ಅವಕಾಶಗಳಿರುತ್ತವೆ. ಸಕಾರಾತ್ಮಕ ಆಲೋಚನೆಗಳ ಬಲದಲ್ಲಿ ದಾರ್ಶನಿಕ ನಾಯಕತ್ವ ಸಾಬೀತುಪಡಿಸುವ ಬದ್ಧತೆಯ ನಡೆಯೊಂದಿಗೆ ಮೊದಲ ಅವಕಾಶದ ಸಾಧ್ಯತೆ ಇರುತ್ತದೆ. ಇಡೀ ದೇಶವನ್ನು ಹಿಂದಕ್ಕೆಳೆಸುವ ಸಂಕುಚಿತ ಕಾರ್ಯಸೂಚಿಯೊಂದಿಗೆ ಜನರ ಜಡತೆಯನ್ನು ಮತ್ತಷ್ಟು ಸ್ಥಾಯಿಗೊಳಿಸುವ ಪ್ರಯತ್ನಗಳೊಂದಿಗಿನ ಅವಕಾಶ ಮತ್ತೊಂದು. ಭಾರತದ ರಾಜಕಾರಣವು ಇಂಥ ಸೀಮಿತ ದೃಷ್ಟಿಕೋನದ ಅವಕಾಶವಾದಿ ತಂತ್ರಗಾರಿಕೆಯನ್ನೇ ನೆಚ್ಚಿಕೊಂಡು ಸಾಗುತ್ತಿದೆ ಎಂಬುದಕ್ಕೆ ಹಲವು ನಿದರ್ಶನಗಳು ಇತಿಹಾಸದ ಪುಟಗಳಲ್ಲಿ ಲಭ್ಯವಾಗುತ್ತವೆ. ಸ್ವಾತಂತ್ರ್ಯೋತ್ತರ ಅವಧಿ, ಜಾಗತೀಕರಣದ ತದನಂತರದ ಕಾಲಘಟ್ಟ ಮತ್ತು ಹೊಸ ಶತಮಾನದ ಸ್ಥಿತ್ಯಂತರಗಳ ಅವಧಿಯನ್ನು ದೃಷ್ಟಿಯಲ್ಲಿರಿಸಿಕೊಂಡು ಈ ಚರ್ಚೆಯನ್ನು ವಿಸ್ತರಿಸಬಹುದು.

ಜಡತೆಯಿಂದ ಗೆಲುವಿನ ಲಾಭ!

ಅಧಿಕಾರಕ್ಕ ಬಂದ ಕ್ಷಣದಿಂದಲೇ ಮುಂದಿನ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡು ಪ್ರದರ್ಶಿತವಾಗುವ ಎಚ್ಚರದ ರಾಜಕೀಯ ನಡೆ ಇಲ್ಲಿಯ ಸಾಮಾನ್ಯ ಗುಣಲಕ್ಷಣ. ಇದಕ್ಕೆ ಹೊಸ ಬಗೆಯ ತೀವ್ರತೆ ಸಿಕ್ಕಿದ್ದು ಹಿಂದಿನ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ. ಆಗಿನ ಚುನಾವಣಾ ಪೂರ್ವ ಮತ್ತು ಚುನಾವಣೋತ್ತರ ಘಟನಾವಳಿಗಳನ್ನು ಸೂಕ್ಷ್ಮವಾಗಿ ಅವಲೋಕಿಸಿದರೆ ಭಾರತೀಯ ರಾಜಕಾರಣ ಚಾಣಾಕ್ಷ ತಂತ್ರಗಾರಿಕೆಯ ತೀವ್ರತರ ತಿರುವಿನ ಘಟ್ಟ ತಲುಪಿದ್ದು ಸ್ಪಷ್ಟವಾಗುತ್ತದೆ. ಅಧಿಕಾರ ಪಡೆಯುವ ಏಕೈಕ ಕಾರ್ಯಸೂಚಿಯನ್ನಷ್ಟೇ ನೆಚ್ಚಿಕೊಂಡು ರಾಜಕೀಯ ಪಕ್ಷಗಳು ಕಾರ್ಯೋನ್ಮುಖವಾಗುವುದು, ಅದಕ್ಕಾಗಿ ಚಾಣಾಕ್ಷ ತಂತ್ರಗಾರಿಕೆಯ ನೆರವು ಪಡೆಯುವುದು, ಆ ಮೂಲಕ ಗೆಲುವು ಸಾಧ್ಯವಾಗಿಸಿಕೊಳ್ಳುವುದು – ಇವೆಲ್ಲವೂ ಗೊತ್ತಿರುವ ಸಂಗತಿಗಳೇ. ಆದರೆ, 2014ರ ಚುನಾವಣೆಯು ಈ ದೇಶದಲ್ಲಿ ಸ್ಥಾವರವಾಗಿ ಉಳಿದುಕೊಂಡಿದ್ದ ಜಡತೆಯ ನಿರ್ಲಿಪ್ತ ಮನಸ್ಥಿತಿಯನ್ನು ಬೇರೊಂದು ರೀತಿಯಲ್ಲಿ ಬಳಸಿಕೊಂಡು ಗೆಲುವು ತಂದುಕೊಳ್ಳುವ ಅವಕಾಶವನ್ನು ದಯಪಾಲಿಸಿತು. ಇದನ್ನು ಅತ್ಯಂತ ಚಾಣಾಕ್ಷಯುತವಾಗಿ ಬಳಸಿಕೊಂಡವರು ಗೆಲುವಿನ ನಗೆ ಬೀರಿದರು.

ಹಳೆ ಆಲದ ಮರಕ್ಕೆ ಜೋತುಬೀಳುವಿಕೆ

ಹಿಂದೆ ಬಹಳ ವರ್ಷಗಳ ಕಾಲ ಆಡಳಿತ ಚುಕ್ಕಾಣಿ ಹಿಡಿದಿದ್ದವರು ಅನುಸರಿಸಿದ ಹಾದಿಯನ್ನೇ ಬೇರೊಂದು ಬಗೆಯಲ್ಲಿ ಮಾದರಿಯಾಗಿಸಿಕೊಂಡ ಕಾರಣಕ್ಕಾಗಿಯೇ ಆ ಗೆಲುವು ಸಾಧಿಸಲು ಸಾಧ್ಯವಾಯಿತು. ಹಿಂದಿನವರದ್ದು ಹಳೆಯ ಆಲದ ಮರಕ್ಕೆ ಜೋತುಬೀಳುವ ಪ್ರವೃತ್ತಿಯ ರಾಜಕಾರಣವೇ ಆಗಿತ್ತು. ಹಳೆಯ ಸಾಧನೆಯನ್ನು ನೆನಪಿಸಿಕೊಂಡು ಮತ್ತೆ ಮತ್ತೆ ಅದರ ಜಪಗೈದು ಜನರನ್ನು ಸೆಳೆದುಕೊಳ್ಳುವ ತಂತ್ರಗಾರಿಕೆಯ ಕಡೆಗೇ ಅದರ ಆದ್ಯತೆ ಇತ್ತು. ಗೆಲುವು ಸಾಧಿಸುವ ಹುಮ್ಮಸ್ಸಿನೊಂದಿಗೆ ಚುನಾವಣಾ ಅಖಾಡಕ್ಕಿಳಿದಿದ್ದವರು ಹಳೆಯದ್ದರ ಆಧಾರದಲ್ಲಿ ಹೊಸದೊಂದು ರಾಜಕೀಯ ಸಂಸ್ಕøತಿಯನ್ನು ರೂಪಿಸುವ ಹೊಣೆಗಾರಿಕೆ ನಿರ್ವಹಿಸುವ ಅವಕಾಶವನ್ನು ಉದ್ದೇಶಪೂರ್ವಕವಾಗಿ ಬಿಟ್ಟುಕೊಟ್ಟರು. ಹೀಗಾಗಿ ‘ಹಳೆಯ ಬೇರು, ಹೊಸ ಚಿಗುರು’ ಎಂಬ ಪ್ರಯೋಗಶೀಲ ದೃಷ್ಟಿಕೋನ ಸೋಲನ್ನು ಅನುಭವಿಸಿತು. ಹಳೆಯ ಬೇರುಗಳೊಂದಿಗೆ ನಂಟು ಉಳಿಸಿಕೊಂಡು ಹೊಸದಾದ ಹೆಜ್ಜೆಗಳೊಂದಿಗೆ ಬದಲಾವಣೆಯ ಅಲೆಯನ್ನು ಮೂಡಿಸುವುದರ ಕಡೆಗಿನ ವ್ಯಾಪಕ ಸಾಧ್ಯತೆಗಳು ಮೊಟಕುಗೊಂಡವು.

ನಕಾರಾತ್ಮಕತೆಯ ಪುನರಾವರ್ತನೆ

ಪ್ರಶ್ನಿಸುವ ತಾರ್ಕಿಕತೆಯನ್ನು ಚಾಣಾಕ್ಷಯುತವಾಗಿ ಹತ್ತಿಕ್ಕುವ ಆಡಳಿತಾರೂಢ ಪ್ರಾಬಲ್ಯವು ಸ್ವಾತಂತ್ರ್ಯೋತ್ತರ ರಾಜಕೀಯ ವಲಯದ ಮೊದಲ ಆದ್ಯತೆಯಾಗಿ ಪ್ರಾಮುಖ್ಯತೆ ಪಡೆದುಕೊಂಡಿತು. ಇದನ್ನು ಹಿನ್ನೆಲೆಗೆ ಸರಿಸುವ ಪರ್ಯಾಯ ರಾಜಕಾರಣದ ತಾತ್ವಿಕ ಮಾದರಿಗಳು ವಿವಿಧ ದಶಕಗಳಲ್ಲಿ ಕಾಣಿಸಿಕೊಂಡರೂ ಜನಜನಿತವಾದ ರಾಜಕೀಯ ಪಕ್ಷಗಳ ಮುಂಚೂಣಿ ನಾಯಕರ ವ್ಯಕ್ತಿಗತ ಪ್ರತಿಷ್ಠೆ ಮತ್ತು ಆರಾಧನಾ ಮನೋಭಾವಕ್ಕೇ ಹೆಚ್ಚಿನ ಆದ್ಯತೆ ಸಿಕ್ಕಿತು. ಇದು ಐದು ವರ್ಷಗಳ ಅಧಿಕಾರಾವಧಿಯ ಪ್ರತಿ ಹಂತದಲ್ಲೂ ನುಸುಳಿಕೊಳ್ಳತೊಡಗಿತು. ಈಗ ಅದೇ ನಕಾರಾತ್ಮಕತೆ ಬೇರೆ ರೀತಿಯಲ್ಲಿ ಪುನರಾವರ್ತಿತವಾಗಿದೆ.

ವೈರುಧ್ಯದ ರಾಜಕೀಯ ನಡೆ

ಚುನಾವಣಾ ರಾಜಕಾರಣವು ಸಂಕುಚಿತ ಅಜೆಂಡಾ ಆಧಾರದಲ್ಲಿ ಅಭಿವ್ಯಕ್ತವಾದರೆ ಏನೇನಾಗುತ್ತದೆ ಎನ್ನುವುದನ್ನು ಸ್ವಾತಂತ್ರ್ಯೋತ್ತರ ಭಾರತದ ರಾಜಕೀಯ ಚರಿತ್ರೆಯ ಮೂಲಕ ತಿಳಿದುಕೊಳ್ಳಬಹುದು. ಇದರ ಅಧ್ಯಯನ ಮತ್ತು ಸೂಕ್ಷ್ಮ ಅವಲೋಕನದಿಂದ ಇಲ್ಲಿಯ ವೈರುಧ್ಯಗಳು ಸ್ಪಷ್ಟವಾಗಿ ಗೋಚರಿಸುತ್ತವೆ. ಜೀವಪರ ಸಂವೇದನೆಯ ಮೌಲಿಕ ಆಲೋಚನೆ ಮತ್ತು ವಾದಗಳನ್ನು ಮುನ್ನೆಲೆಗೆ ತಂದು ಅದಕ್ಕನುಗುಣವಾದ ಸರ್ಕಾರ ಅಸ್ತಿತ್ವಕ್ಕೆ ಬರಬೇಕು ಎಂಬ ಪ್ರತಿಪಾದನೆಯ ನೆರವಿನೊಂದಿಗೆ ಅಧಿಕಾರಕ್ಕೆ ಬಂದವರು ಮತ್ತು ಉದಾತ್ತವಾದ ಧಾರ್ಮಿಕ ಅಂಶಗಳನ್ನು ಸಂಕುಚಿತಗೊಳಿಸಿ ಸಂಘರ್ಷ ಮೂಡಿಸಿ ಅಧಿಕಾರಕ್ಕೆ ಹತ್ತಿರಾಗುವ ಜಾಯಮಾನದ ರಾಜಕೀಯ ವರ್ತನೆಗಳವರ ದಿಗ್ವಿಜಯದ ಜೊತೆಗೆ ಇಂಥ ವೈರುಧ್ಯಗಳಿವೆ. ಎರಡೂ ವಲಯಗಳು ಅಧಿಕಾರರೂಢ ಮತ್ತು ವಿರೋಧ ಪಕ್ಷ ಎಂಬ ನೆಲೆಗಳಲ್ಲಿ ವಿಂಗಡಣೆಯಾಗಿ ವಾದಗಳನ್ನು ಮುಂದಿಡುತ್ತಾ ಜನಬೆಂಬಲ ಗಿಟ್ಟಿಸಿಕೊಳ್ಳುವ ಪ್ರಯತ್ನದಲ್ಲಿ ಯಶಸ್ಸು ಕಂಡಿವೆ.

Rajadharma a column by Dr.N k padmanabh

ಒಮ್ಮೆ ಅವರಿಗೆ, ಮತ್ತೊಮ್ಮೆ ಇವರಿಗೆ ಎನ್ನುವ ಹಾಗೆ ಅಧಿಕಾರದ ಅವಕಾಶ ಪ್ರಾಪ್ತವಾಗಿದೆ. ಆದರೆ, ಅಧಿಕಾರಕ್ಕೆ ಬಂದ ಮೇಲೆ ಈ ಎರಡೂ ವಲಯಗಳ ರಾಜಕೀಯ ನಡೆ ಯಾವ ಬಗೆಯ ಉದಾತ್ತತೆಯೊಂದಿಗಿತ್ತು ಎಂಬುದನ್ನು ಪರಿಶೀಲಿಸಿದರೆ ಇಡೀ ಭಾರತದ ರಾಜಕಾರಣದ ಬಹುದೊಡ್ಡ ಮಿತಿಗಳು ಎದ್ದುಕಾಣುತ್ತವೆ. ಅಧಿಕಾರಕ್ಕೆ ಬರುವವರೆಗೆ ಪ್ರತಿಪಾದಿಸಿದ ವಿಶಾಲವಾದ ಮೌಲಿಕ ಆಲೋಚನೆಗಳನ್ನೇ ಅಧಿಕಾರಕ್ಕೆ ಬಂದ ನಂತರ ಮರೆಯುವ ಜಾಣ್ಮೆಯನ್ನು ಸ್ಥಾಯಿಯಾಗಿಸಿಕೊಂಡ ಪಕ್ಷ ರಾಜಕಾರಣವೊಂದರ ವಿಕಲಾಂಗ ಲಕ್ಷಣವು ಪಕ್ಷಾತೀತ ನೆಲೆಯಲ್ಲಿ ಸರ್ವವ್ಯಾಪಿಯಾಯಿತು. ಇಂಥ ದ್ವಂದ್ವವನ್ನು ಪ್ರಶ್ನಿಸುತ್ತಲೇ ಧರ್ಮಕ್ಕೆ ಸಂಬಂಧಿಸಿದ ಸೂಕ್ಷ್ಮ ಸಂಗತಿಗಳನ್ನು ರಾಜಕೀಯ ಲಾಭದ ಆಕಾಂಕ್ಷೆಯಲ್ಲಿ ತಪ್ಪಾಗಿ ವಿಶ್ಲೇಷಿಸಿ ಅಧಿಕಾರಕ್ಕೇರಿದವರೂ ಮತ್ತದೇ ಹಾದಿ ಹಿಡಿದರು. ಹೀಗಾಗಿಯೇ ರಾಜಕೀಯ ಪಕ್ಷಗಳ ಕೆಳಹಂತದ ಯುವ ಕಾರ್ಯಕರ್ತರಿಗೆ ಉದಾತ್ತವಾದ ನಾಯಕತ್ವದ ಮಾದರಿಯೇ ಇಲ್ಲದಂತಾಯಿತು.

ಬಹುಮತ ಪ್ರಾಶಸ್ತ್ಯದ ಮತ್ತೊಂದು ಮುಖ

ಈ ಹಂತದಲ್ಲಿಯೇ ಪ್ರಶ್ನಿಸುವ ಧ್ವನಿಗಳೊಂದಿಗೆ ಇರುವವರನ್ನೇ ದ್ವಂದ್ವಕ್ಕೆ ಸಿಲುಕಿಸುವ ವಿತಂಡವಾದಿ ದೃಷ್ಟಿಕೋನಗಳು ಕಳೆದ 2014 ಚುನಾವಣೆಯ ಸಂದರ್ಭದಲ್ಲಿ ವೈಭವೀಕೃತವಾದವು. ಇವರನ್ನು ಪ್ರಶ್ನೆ ಮಾಡುತ್ತೀರಿ. ಮತ್ತಿನ್ಯಾರನ್ನು ಆಯ್ಕೆ ಮಾಡುತ್ತೀರಿ? ಇಷ್ಟು ವರ್ಷಗಳ ಕಾಲ ಆಳಿದವರು ಏನು ಸಾಧಿಸಿದರು? ಎಂಬ ಮರುಪ್ರಶ್ನೆ ಎಸೆದು ಚರ್ಚೆ ಒಳಗೊಳ್ಳಬಹುದಾದ ವಿಶಾಲ ಆವರಣವನ್ನೇ ಒಡೆದುಬಿಡುವ ಪ್ರವೃತ್ತಿ ಮುಂದುವರೆಯಿತು. ಇದೇ ಪ್ರವೃತ್ತಿಯನ್ನೇ ಮುಖ್ಯವಾಗಿಸಿಕೊಂಡು ಸಾಮಾಜಿಕ ಜಾಲತಾಣಗಳನ್ನು ಪಕ್ಷದ ಪರವಾದ ಅಲೆ ಮೂಡಿಸುವ ಉದ್ದೇಶಕ್ಕೆ ಬಳಸಿಕೊಳ್ಳುವ ರಹಸ್ಯ ಕಾರ್ಯಸೂಚಿ ಯಶಸ್ಸು ಕಂಡಿತು. ಹಿಂದಿನವರ ಮೌನಕ್ಕಿಂತ ಈಗಿನವರ ಮಾತು ಹೆಚ್ಚು ಆಪ್ತ ಎಂಬ ಕಾರಣಕ್ಕಾಗಿ ಮತನೀಡುವ ಅಪೇಕ್ಷೆ ಸಾಮೂಹಿಕವಾಗಿ ಅಭಿವ್ಯಕ್ತವಾಯಿತು. ಸಮಸ್ಯೆಗಳನ್ನು ಅಸಹಾಯಕ ಮೌನ ಮತ್ತು ದಿವ್ಯ ನಿರ್ಲಿಪ್ತತೆಯೊಂದಿಗೆ ನಿರ್ಲಕ್ಷಿಸಿದವರಿಗಿಂತಲೂ ಅವೇ ಸಮಸ್ಯೆಗಳಿಗೆ ಪರಿಹಾರ ಸಾಧ್ಯ ಎಂಬುದನ್ನು ಭಾಷಿಕ ಪ್ರೌಢಿಮೆಯಲ್ಲಿ ಮನಗಾಣಿಸಿದವರು ಮುಖ್ಯ ಎಂಬ ಭಾವನೆಯೇ ಸಾರ್ವತ್ರಿಕವಾಗಿ ಹೊಸಬರಿಗೆ ಭಾರೀ ಬಹುಮತದ ಪ್ರಾಶಸ್ತ್ಯ ದೊರಕಿ ಅಧಿಕಾರದ ಅವಕಾಶ ಲಭ್ಯವಾಯಿತು.

ದಿಕ್ಕುತಪ್ಪಿಸುವ ಹುನ್ನಾರಗಳು

ಈಗ 2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲೂ ಇದೇ ಬಗೆಯ ಇತಿಹಾಸ ಪುನರಾವರ್ತಿತಗೊಳ್ಳುವ ಎಲ್ಲ ವಿದ್ಯಮಾನಗಳಿಗೆ ನಾವೀಗ ಸಾಕ್ಷಿಯಾಗುತ್ತಲೇ ಇದ್ದೇವೆ. ಒಂದು ದೇಶದ ವಿರುದ್ಧ ಯುದ್ಧ ಆಗಬೇಕು ಎಂಬ ಅಗ್ರೆಸ್ಸಿವ್ ಪ್ರತಿಪಾದನೆಯು ಪೀಳಿಗೆಯೊಂದರ ರಾಜಕೀಯ ಆದ್ಯತೆಯನ್ನೇ ಸಂಕುಚಿತಗೊಳಿಸಿ ಬಹುಮತ ಗಿಟ್ಟಿಸಿಕೊಳ್ಳುವ ಮಟ್ಟಿಗೆ ಪ್ರಭಾವೀ ಎಂಬುದನ್ನು ಸಾಬೀತುಪಡಿಸುವ ನಿದರ್ಶನಗಳು ಕಣ್ಣಮುಂದೆಯೇ ಇವೆ. ಸುಳ್ಳುಗಳ ತರಹೇವಾರಿ ವಿವರಗಳು ಬಗೆಬಗೆಯ ಬಣ್ಣಗಳನ್ನು ಪಡೆದು ಜನರ ನಿರ್ಧಾರಾತ್ಮಕ ಶಕ್ತಿಯ ಮೇಲೆ ಪ್ರಭಾವ ಬೀರುತ್ತಿರುವ ವಾಸ್ತವವನ್ನು ಅಷ್ಟು ಸುಲಭವಾಗಿ ನಿರಾಕರಿಸುವಂತಿಲ್ಲ. ರಾಜಕಾರಣಿಗಳ ಹೇಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಿದಾಗಲಂತೂ ಭಾರತೀಯ ಪ್ರಜಾಪ್ರಭುತ್ವದ ದಿಕ್ಕುತಪ್ಪಿಸುವ ಹುನ್ನಾರಗಳು ಯಾವ ಸ್ವರೂಪದ್ದವು ಎಂಬುದು ಸ್ಪಷ್ಟವಾಗುತ್ತದೆ. ಇಡೀ ದೇಶದಲ್ಲಿ ಆಗಬೇಕಿದ್ದ ಚರ್ಚೆಗಳ ಬದಲು ಅನಗತ್ಯ ವಿವರಗಳೇ ಪ್ರಾಮುಖ್ಯತೆ ಪಡೆದುಕೊಂಡು ಯಾರಿಗೆ ಲಾಭವಾಗುತ್ತದೆ ಎಂಬ ಸೂಕ್ಷ್ಮತೆ ಗೊತ್ತಾಗುತ್ತದೆ.

ಪ್ರಚೋದನಾತ್ಮಕ ಒಮ್ಮತದ ಉತ್ಪನ್ನ

ವಿಧವೆ ಎಂಬ ಕಾರಣಕ್ಕಾಗಿ ಮಹಿಳೆಯ ರಾಜಕೀಯ ಪ್ರವೇಶಕ್ಕೆ ವ್ಯಕ್ತವಾಗುವ ಪ್ರತಿರೋಧ, ರಾಜಕೀಯ ನಾಯಕಿಯ ತಂದೆ ಯಾರೆಂಬುದೇ ಗೊತ್ತಿಲ್ಲ ಎಂಬುದನ್ನೇ ಚಿತ್ರಿಸಿ ಇಂಥವರ ಆಯ್ಕೆ ಸಮರ್ಥನೀಯವಲ್ಲ ಎಂಬ ವಾದ, ಸಂಘರ್ಷವನ್ನು ಸಮರ್ಥಿಸುವ ನುಡಿಗಳನ್ನಾಡಿದಾಗಲೇ ಪರವಾದ ಅಲೆಯನ್ನು ಸೃಷ್ಟಿಸಿಕೊಳ್ಳಬಹುದೆಂಬ ತಪ್ಪುಕಲ್ಪನೆ, ಜನಪ್ರಿಯ ತಾರೆಯನ್ನು ರಾಜಕೀಯಕ್ಕೆ ಕರೆತಂದು ಜನರನ್ನು ಸೆಳೆದುಕೊಳ್ಳುವ ಪ್ರಯತ್ನ, ಸುದ್ದಿಮಾಧ್ಯಮಗಳನ್ನು ಕೊಂಡುಕೊಂಡು ತಮ್ಮ ಮೂಗಿನ ನೇರಕ್ಕೆ ಬಳಸಿಕೊಳ್ಳುವ ಚಾಣಾಕ್ಷತೆ, ಹಿಂದೆಂದಿಗಿಂತಲೂ ಹೆಚ್ಚು ವಿಸ್ತಾರವಾದ ಸುದ್ದಿಮಾಧ್ಯಮ ಮುಖ್ಯಸ್ಥರು ಮತ್ತು ರಾಜಕೀಯ ಪಕ್ಷಗಳ ನಡುವಿನ ಅಸಂವಿಧಾನಿಕ ನಂಟು, ಅದರ ವಿಸ್ತರಣೆ ಎಂಬಂತೆ ಸಾಮಾಜಿಕ ಜಾಲತಾಣಗಳ ದುರ್ಬಳಕೆ, ಬರೀ ವಿವಾದಕ್ಕೆಳೆಸುವ ಮಾತುಗಳ ಸುತ್ತಲೇ ಗಿರಕಿ ಹೊಡೆಯುತ್ತಿರುವ ಸುದ್ದಿಮಾಧ್ಯಮ ಪ್ರಜ್ಞೆ – ಇವೆಲ್ಲವೂ ಸದ್ಯದ ಚುನಾವಣಾ ರಾಜಕಾರಣದ ಒಳಸುಳಿಗಳನ್ನು ಅರ್ಥೈಸಿಕೊಳ್ಳುವುದಕ್ಕೆ ಸಹಾಯಕವಾಗುತ್ತವೆ. ಭಾವನೆಗಳನ್ನು ಪ್ರಚೋದಿಸಿ ಒಮ್ಮತವನ್ನು ಉತ್ಪಾದಿಸಿಕೊಳ್ಳುವ ತಂತ್ರಗಾರಿಕೆಯು ಭಾರತದಲ್ಲಿ ಅತ್ಯಂತ ಜಾಗರೂಕತೆಯಿಂದ ಪ್ರಯೋಗಿಸಲ್ಪಡುತ್ತಿರುವುದಕ್ಕೆ ಸಾಕ್ಷ್ಯ ಒದಗಿಸುತ್ತವೆ.

ಭಾವನಾತ್ಮಕ ಪ್ರಚೋದನೆಯ ನೆರವಿನೊಂದಿಗೆ ಪೂರಕವಾದ ಒಮ್ಮತವನ್ನು ಸೃಷ್ಟಿಸಿಕೊಳ್ಳುವ ತಂತ್ರಗಾರಿಕೆಯು ಭಾರತೀಯ ರಾಜಕಾರಣಕ್ಕೆ ಹೊಸದೇನೂ ಅಲ್ಲ. ಅಸಮಾನತೆಯ ಕಾರಣಕ್ಕಾಗಿಯೇ ಭಾರತದಲ್ಲಿ ಬೇರೂರಿರುವ ತಾರತಮ್ಯದ ದೃಷ್ಟಿಕೋನಗಳನ್ನು ಒಡೆದುಹಾಕುವ ಅಪ್ಪಟ ವೈಚಾರಿಕ ಆಂದೋಲನಗಳು ನಡೆದರೂ ತಾರ್ಕಿಕ ಅಂತ್ಯ ಕಂಡುಕೊಳ್ಳುವವರೆಗೆ ಅವುಗಳ ಚಲನೆ ನಿರಂತರವಾಗುಳಿಯಲಿಲ್ಲ. ಇಂಥ ವೈಚಾರಿಕ ಆಂದೋಲನಗಳನ್ನು ರಾಜಕೀಯ ಅಸ್ಮಿತೆಯ ಸಶಕ್ತತೆಗೆ ಬಳಸಿಕೊಳ್ಳುವ ಜಾಣ್ಮೆಯ ರಾಜಕಾರಣದ ಬದಲು ಅವುಗಳನ್ನು ಭಾವುಕ ನೆಲೆಯಲ್ಲಿ ಗ್ರಹಿಸುವ ಒತ್ತಡ ಸೃಷ್ಟಿಸಿ ಪ್ರಬಲರು ಮತ್ತು ದುರ್ಬಲರ ನಡುವಿನ ಕಂದರ ಹೆಚ್ಚಿಸುವ ಪ್ರಯತ್ನಗಳಾದವು. ಈ ಹಂತದಲ್ಲಿ ಭಿನ್ನಾಭಿಪ್ರಾಯಗಳುಂಟಾದವು. ಗುಂಪುಗಳಾದವು.

ಹೀಗೆ ವೈಚಾರಿಕ ಆಂದೋಲನಗಳನ್ನು ಕಟ್ಟಬೇಕಾದ ವಲಯವೇ ಒಡೆದುಹೋಯಿತು.
ಸಮಸ್ಯೆಯ ಮೂಲಪತ್ತೆಯ ಅನಿವಾರ್ಯತೆ
ಅವುಗಳು ಎತ್ತಿದ ಪ್ರಶ್ನೆಗಳನ್ನೇ ಮುಂದಿಟ್ಟು ಚುನಾವಣೆಗಳನ್ನು ಎದುರಿಸಿದ ಪಕ್ಷ ರಾಜಕಾರಣವು ಅಧಿಕಾರ ಪಡೆಯುವಲ್ಲಿ ಯಶಸ್ಸು ಸಾಧಿಸಿತು. ಅಧಿಕಾರ ಪಡೆದ ನಂತರ ಈ ವೈಚಾರಿಕ ಆಂದೋಲನ ಎತ್ತಿದ್ದ ಪ್ರಶ್ನೆಗಳ ಹಿಂದಿದ್ದ ಸಂಕಟಗಳನ್ನು ಪರಿಹರಿಸುವುದರ ಕಡೆಗೆ ರಚನಾತ್ಮಕ ಪ್ರಯತ್ನವನ್ನು ನಡೆಸಲೇ ಇಲ್ಲ. ಅಷ್ಟೇ ಅಲ್ಲ, ಭಾವುಕ ವ್ಯಾಪ್ತಿಯಲ್ಲಿ ಅಗ್ರಸ್ಥಾನ ಪಡೆದು ಚರ್ಚೆಗೊಳಗಾಗುವ ದೇವರು, ಧರ್ಮಕ್ಕೆ ಸಂಬಂಧಿಸಿದ ಚರ್ಚೆಯನ್ನು ವಿವೇಚನೆ ಎತ್ತರಿಸುವ ಸಂವಾದ ರೂಪಿಸುವ ಆಡಳಿತಾತ್ಮಕ ಹೊಣೆಗಾರಿಕೆಗಳನ್ನೂ ನಿಭಾಯಿಸಲಿಲ್ಲ. ಈ ಸ್ಪೇಸ್‍ಅನ್ನು ಮೂಲಭೂತವಾದಿ ದೃಷ್ಟಿಕೋನದ ರಾಜಕಾರಣ ಸಕಾಲಿಕವಾಗಿ ಬಳಸಿಕೊಂಡು ಅಧಿಕಾರದ ನಿರ್ಣಾಯಕ ಆವರಣವನ್ನು ಪ್ರವೇಶಿಸುವ ಪ್ರಯತ್ನದಲ್ಲಿ ಯಶಸ್ಸು ಕಂಡಿತು. ಸಮಸ್ಯೆಯ ಈ ಮೂಲವನ್ನು ಗೊತ್ತುಮಾಡಿಕೊಳ್ಳದೇ ನಾವು ಸದ್ಯದಲ್ಲಿ ಇದಕ್ಕಿಂದ ಭಿನ್ನವಾದ ಹೊಸದೊಂದು ಪರ್ಯಾಯ ರಾಜಕಾರಣದ ಆಕೃತಿಗಳನ್ನು ಕಂಡುಕೊಳ್ಳಲು ಸಾಧ್ಯವಿಲ್ಲ.

ಅಪೂರ್ವ ಅವಕಾಶ ಬಿಟ್ಟುಕೊಡುವ ಚಾಳಿ

ಈಗ ಸುದ್ದಿಮಾಧ್ಯಮಗಳು ಅತ್ಯುತ್ಸಾಹದಲ್ಲಿ ಇಂತಿಷ್ಟು ಹೊಸ ಮತದಾರರು ಈ ಚುನಾವಣೆಯಲ್ಲಿ ರಾಜಕೀಯ ಪಕ್ಷಗಳ ಭವಿಷ್ಯ ನಿರ್ಧರಿಸಲಿದ್ದಾರೆ ಎಂದು ಬಿಂಬಿಸುತ್ತಿವೆ. ಹೀಗೆ ಬಿಂಬಿಸುತ್ತಲೇ ಯುವಶಕ್ತಿ ಯಾರ ಪರ ನಿಲ್ಲಬೇಕು ಎಂಬರ್ಥದ ವಿಶ್ಲೇಷಣೆಗಳನ್ನು ಪರೋಕ್ಷವಾಗಿ ಮುಂದಿಡುತ್ತಿವೆ. ಸೈನಿಕರ ಮೇಲೆ ದಾಳಿ ನಡೆದಾಗ ಯುದ್ಧದ ಮೂಲಕವೇ ಪರಿಹಾರ ಸಾಧ್ಯ ಎಂಬ ಬಿಂಬಗಳನ್ನು ಕಟ್ಟಿಕೊಟ್ಟು ಒಂದು ನಿರ್ದಿಷ್ಟ ರಾಜಕೀಯ ಪಕ್ಷ ಅಧಿಕಾರಕ್ಕೆ ಬಂದರೆ ಮಾತ್ರ ನೆರೆಯ ರಾಷ್ಟ್ರಕ್ಕೆ ಬುದ್ಧಿ ಕಲಿಸಬಹುದು ಎಂಬ ಪರೋಕ್ಷ ಸಂದೇಶವನ್ನು ರವಾನಿಸುತ್ತಿವೆ. ಇನ್ನೂ ಕೆಲವು ಮಾಧ್ಯಮಗಳು ಮುಖ್ಯವಾಗಿ ಉಗ್ರರ ವಿರುದ್ಧದ ರಚನಾತ್ಮಕ ಕಾರ್ಯಾಚರಣೆ ಮತ್ತು ಪಾಕಿಸ್ತಾನದೊಂದಿಗಿನ ಸೌಹಾರ್ದಯುತ ಮಾತುಕತೆಯ ಹಾದಿ ಅನುಸರಣೆಯ ಅಗತ್ಯತೆಯನ್ನು ಪ್ರತಿಪಾದಿಸುತ್ತಿವೆ. ಈ ಚರ್ಚೆಯ ಲಾಭವನ್ನು ಪಡೆಯುವ ಹವಣಿಕೆಯನ್ನು ಪಕ್ಷಗಳು ತೋರುತ್ತಿವೆ. ಇವೆಲ್ಲದ್ದರ ಮಧ್ಯೆ ಚುನಾವಣಾ ಅಖಾಡದಲ್ಲಿ ಪ್ರಜಾಪ್ರಭುತ್ವವಾದಿ ರಾಷ್ಟ್ರವೊಂದು ಮುಂಚೂಣಿಗೆ ತಂದುಕೊಳ್ಳಲೇಬೇಕಾದ ಸಂಗತಿಗಳು ಪ್ರಾತಿನಿಧ್ಯವನ್ನೇ ಪಡೆಯುತ್ತಿಲ್ಲ. ಇಂಥ ಅಪೂರ್ವ ಅವಕಾಶವನ್ನು ರಾಜಕೀಯ ಪಕ್ಷಗಳು ಉದ್ದೇಶಪೂರ್ವಕವಾಗಿ ಬಿಟ್ಟುಕೊಡುತ್ತಿವೆ.

ಸವಾಲುಗಳ ನಿರ್ವಹಣೆಯ ಚಾಣಾಕ್ಷತೆಯ ಅಗತ್ಯತೆ

ಸಮಸ್ಯೆಗಳ ಪ್ರಮಾಣ ವ್ಯಾಪಕವಾಗಿದ್ದಾಗ ಅವುಗಳಿಗೆ ಪರಿಹಾರ ಕಂಡುಕೊಳ್ಳುವ ಸವಾಲಿನ ನಿರ್ವಹಣೆಯ ಚಾಕಚಕ್ಯತೆ ಪ್ರದರ್ಶಿಸಬೇಕಾಗುತ್ತದೆ. ಇಂಥ ಚಾಕಚಕ್ಯತೆಯೊಂದಿಗಿನ ನಿರ್ವಹಣೆಯ ಸವಾಲನ್ನು ಅತ್ಯಂತ ಶ್ರದ್ಧೆಯಿಂದ ಭಾರತೀಯ ರಾಜಕಾರಣ ಸ್ವೀಕರಿಸಲಿಲ್ಲ. ಸ್ವೀಕರಿಸುವುದನ್ನು ಪ್ರಾಥಮಿಕ ಆದ್ಯತೆಯ ಭಾಗವನ್ನಾಗಿ ಪರಿಗಣಿಸಲಿಲ್ಲ. ಬದಲಾಗಿ ಅದು ಜನರ ದೌರ್ಬಲ್ಯಗಳನ್ನೇ ಬಂಡವಾಳವಾಗಿಸಿಕೊಂಡು ಅದರ ಮೇಲೆ ಮತದ ಫಸಲು ಪಡೆಯುವ ಆಸೆಗಳನ್ನು ಈಡೇರಿಸುವುದರ ಕಡೆಗೆ ಹುಮ್ಮಸ್ಸನ್ನು ಮೀಸಲಾಗಿರಿಸಿಕೊಂಡಿತು. ಸಮಾಜವಾದಿ, ಜಾತ್ಯಾತೀತತೆ, ಬಂಡಾಯ ಮನೋಧರ್ಮದ ಚಳುವಳಿಗಳಿಂದ ಹೊಸ ಅಲೆ ಸೃಷ್ಟಿಸುವ ಪ್ರಯತ್ನಗಳಾದವು. ಆದರೆ ಅವುಗಳ ಪ್ರಭಾವವನ್ನು ವಿಸ್ತರಿಸುವುದಕ್ಕೆ ಇಲ್ಲಿಯ ರಾಜಕಾರಣ ಅವಕಾಶ ನೀಡಲಿಲ್ಲ. ಅವುಗಳನ್ನು ಸದೆಬಡೆಯುವ ಪ್ರತಿತಂತ್ರಗಳನ್ನು ಹೆಣೆದು ಸಾಂಪ್ರದಾಯಿಕ ಜಡತೆಯೊಂದಿಗಿನ ಜನರ ಮನೋಧರ್ಮದ ಮಿತಿಗಳನ್ನೇ ತನ್ನ ಗೆಲುವಿನ ತಂತ್ರಗಳಿಗಾಗಿ ಬಳಸಿಕೊಂಡಿತು. ಇದರ ಕಾರಣಕ್ಕಾಗಿಯೇ ಈಗ ಹೊಸ ವಿತಂಡವಾದಿ ದೃಷ್ಟಿಕೋನಗಳು ಜನಪ್ರಿಯ ಎಂಬ ಭಾವ ಮೂಡಿಸಲಾಗುತ್ತಿದೆ.

ಉಜ್ವಲ ಭವಿಷ್ಯದ ಸಾಧ್ಯತೆಗಳು

ಬುದ್ಧಿ ಮತ್ತು ಜೀವ – ಇವೆರಡೂ ಅಸಂಗತ ಎಂಬ ವೈರುಧ್ಯದ ನಿಲುವುಗಳು ಪ್ರಾಮುಖ್ಯತೆ ಪಡೆಯುತ್ತಿವೆ. ಬುದ್ಧಿಜೀವದ ವಿವೇಚನಾಪೂರ್ಣ ಅಸ್ತಿತ್ವ ಅಪಾಯಕಾರಿ ಎಂದು ನಂಬಿಸಲಾಗುತ್ತಿದೆ. ಆದರೆ, ವಾಸ್ತವದಲ್ಲಿ ಬುದ್ಧಿಜೀವವು ಧರ್ಮಾಧಾರಿತ ಭಾರತೀಯ ಸಾಮಾಜಿಕತೆಯನ್ನು ಭಿನ್ನವಾಗಿ ಮರುರೂಪಿಸುವುದಕ್ಕೆ ಅತ್ಯಾವಶಕ ಎಂಬ ತಾತ್ವಿಕತೆಯನ್ನು ರಾಜಕಾರಣ ಅರ್ಥೈಸಿಕೊಳ್ಳುತ್ತಿಲ್ಲ. ಧರ್ಮ, ದೇವರು, ಸಮಾಜ, ರಾಜಕಾರಣ, ಆರ್ಥಿಕತೆ – ಇವೆಲ್ಲವನ್ನೂ ಬುದ್ಧಿಜೀವದ ಜೀವಂತಿಕೆಯ ಬೆಂಬಲದೊಂದಿಗೆ ವಿವೇಕಪೂರ್ಣ ಪ್ರಜ್ಞೆಯೊಂದಿಗೆ ಅರ್ಥೈಸಿಕೊಳ್ಳಬೇಕು ಎಂಬ ಸ್ವಯಂಸಂವಿಧಾನವು ರೂಪುಗೊಳ್ಳಬೇಕಾಗಿದೆ. ಅದಕ್ಕಾಗಿ ರಾಜಕಾರಣವು ದಾರ್ಶನಿಕ ನಾಯಕತ್ವದ ಸತ್ವದೊಂದಿಗೆ ಗುರುತಿಸಿಕೊಳ್ಳಬೇಕು. ಇಂಥ ಸತ್ವವನ್ನು ಮುನ್ನೆಲೆಗೆ ತರುವುದಕ್ಕೆ ಚುನಾವಣೆಯ ಅಖಾಡವನ್ನು ಪೂರಕವಾಗಿಸಿಕೊಳ್ಳಬೇಕು. ಅಂಥ ಹೆಜ್ಜೆಗಳೊಂದಿಗೇ ಭಾರತದ ಉಜ್ವಲ ಭವಿಷ್ಯ ಅಡಗಿದೆ ಎಂಬುದನ್ನು ಬಹುಬೇಗ ಗೊತ್ತುಮಾಡಿಕೊಳ್ಳಬೇಕು.

-ಡಾ.ಎನ್.ಕೆ.ಪದ್ಮನಾಭ

ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

Published

on

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು. ಈ ಬಗ್ಗೆ ಬೆಳಗಾವಿಯ ಚಳಿಗಾಲ ಅಧಿವೇಶನದಲ್ಲಿ ಪ್ರಸ್ತಾಪ ಮಾಡಬೇಕೆಂದು ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಪದಾಧಿಕಾರಿಗಳು ಮಾಯಕೊಂಡ ಶಾಸಕ ಕೆ.ಎಸ್.ಬಸವಂತಪ್ಪ ಅವರಿಗೆ ಶನಿವಾರ ಮನವಿ ಸಲ್ಲಿಸಿದರು.

ರಾಷ್ಟ್ರೀಯ ಆರೋಗ್ಯ ಅಭಿಯಾನ ಅಡಿಯಲ್ಲಿ ಗುತ್ತಿಗೆ ಆಧಾರದ ಮೇಲೆ ಸುಮಾರು 30 ಸಾವಿರ ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದು, ಈ ಸಿಬ್ಬಂದಿಗಳಿಗೆ ನೇಮಕಾತಿ ಮತ್ತು ವರ್ಗಾವಣೆ ಒಳಗೊಂಡು ಮಾನವ ಸಂಪನ್ಮೂಲ (HR Policy) ನೀತಿಯನ್ನು ಜಾರಿಗೊಳಿಸುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳು ಕಳೆದ ಅ.28ರಂದು ಆದೇಶ ಹೊರಡಿಸಿ, ಅಭಿಯಾನ ನಿರ್ದೇಶಕರು, ಮುಖ್ಯ ಆಡಳಿತಾಧಿಕಾರಿಗಳು ಹಾಗೂ ಮುಖ್ಯ ಆರ್ಥಿಕ ಅಧಿಕಾರಿಗಳಿಗೆ ವರದಿ ನೀಡಲು ಸೂಚನೆ ನೀಡಿದ್ದಾರೆ.

ಈ ವಿಷಯದ ಬಗ್ಗೆ ಈಗಾಗಲೇ ಅಭಿಯಾನ ನಿರ್ದೇಶಕರ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಎಲ್ಲಾ ಗುತ್ತಿಗೆ ನೌಕರರ ವೃಂದವಾರು ಸಂಘಟನೆಗಳ ಅಭಿಪ್ರಾಯ ನೀಡಲಾಗಿದೆ. ಎಲ್ಲಾ ಸಂಘಟನೆಗಳು ಈ ಒಂದು ಹೊಸ ಸಿಬ್ಬಂದಿಗಳಿಗೆ ಮಾರಕ ಇರುವಂತಹ ಮಾನವ ಸಂಪನ್ಮೂಲ ನೀತಿಯನ್ನು ಜಾರಿಗೊಳಿಸಲು ವಿರೋಧ ವ್ಯಕ್ತಪಡಿಸಿವೆ.

ಸರ್ಕಾರ ಈಗ ನೀಡುತ್ತಿರುವ ಕಡಿಮೆ ವೇತನದಲ್ಲಿ ಈ ಸಿಬ್ಬಂದಿಗಳು ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಈ ಸಿಬ್ಬಂದಿಗಳಿಗೆ ಖಾಯಂ ಸಿಬ್ಬಂದಿಗಳಂತೆ ಕಡ್ಡಾಯ ವರ್ಗಾವಣೆ ಮಾಡಿದರೆ ಈ ಕಡಿಮೆ ವೇತನದಲ್ಲಿ ಕುಟುಂಬ ನಿರ್ವಹಣೆ ಹೇಗೆ ಸಾಧ್ಯ? ಮೂರು ಮೂರು ತಿಂಗಳಿಗೊಮ್ಮೆ ವೇತನ ಆಗುತ್ತಿದ್ದು ಬೇರೆ ಜಿಲ್ಲೆಗೆ ಕಡ್ಡಾಯ ವರ್ಗಾವಣೆ ಮಾಡಿದ್ದರೆ ಮನೆ ಬಾಡಿಗೆ ಕಟ್ಟಲಾಗದೇ ಬೀದಿಗೆ ಬರಬೇಕಿದೆ ಎಂದು ಶಾಸಕರಿಗೆ ಮನವರಿಕೆ ಮಾಡಿದರು.

ಒಂದು ವೇಳೆ ಇಂತಹ ಕ್ರಮ ಕೈಗೊಂಡರೆ ಖಾಯಂ ಸಿಬ್ಬಂದಿಗಳಿಗೆ ನೀಡಿದಂತೆ ಎಲ್ಲಾ ಸೌಕರ್ಯ ಹಾಗೂ ಖಾಯಂ ಸೇರಿದಂತೆ ವೇತನ ಹೆಚ್ಚಳ ಮಾಡಿ, ಟಿಎ, ಡಿಎ, ಎಚ್ ಆರ್ ಎ ನೀಡಿ ಇಂತಹ ಆದೇಶ ಮಾಡಬೇಕು. ಸಿಬ್ಬಂದಿಗಳಿಗೆ ಬೆನ್ನು ತಟ್ಟಿ ಕೆಲಸ ಮಾಡಿಸಿಕೊಳ್ಳಬೇಕು.ಅದು ಬಿಟ್ಟು ಹೊಟ್ಟೆ ಮೇಲೆ ಹೊಡೆಯುವಂತಹ ಯಾವುದೇ ಆದೇಶ ಹೊರಡಿಸುವುದು ಎಷ್ಟು ಸರಿ ಎಂದು ಸಿಬ್ಬಂದಿಗಳು ಪ್ರಶ್ನೆ ಮಾಡಿದ್ದಾರೆ.

ಪ್ರಧಾನ ಕಾರ್ಯದರ್ಶಿಗಳ ಈ ಒಂದು ಪತ್ರ 30 ಸಾವಿರ ನೌಕರರಿಗೆ ಆತಂಕ ಸೃಷ್ಟಿ ಮಾಡಿದೆ. ಇದು ಈ ವರ್ಷದಲ್ಲಿ ಮೊದಲ ಸಾರಿ ಅಲ್ಲದೆ ಇದೇ ವರ್ಷ ಸಾಕಷ್ಟು ಮಾನಸಿಕ ಒತ್ತಡ ಹೆಚ್ಚಳವಾಗಿರುವ ಅನೇಕ ಆದೇಶ ಮಾಡಿದ್ದಾರೆ.

ಪ್ರತಿ ವರ್ಷ ಏಪ್ರಿಲ್ ಒಂದನೇ ತಾರೀಖು ಎಲ್ಲಾ ನೌಕರರಿಗೆ ಒಂದು ದಿವಸ ವಿರಾಮ ನೀಡಿ ಮುಂದುವರೆಸುತ್ತಿದ್ದು 2005 ರಿಂದ ಸುಮಾರು 20 ವರ್ಷಗಳವರೆಗೆ ಈ ಪದ್ಧತಿ ನಡೆದುಕೊಂಡು ಬಂದಿದೆ. ಆದರೆ ಈ ವರ್ಷ ಏಕಾಏಕಿ ಕೇವಲ 15 ದಿವಸ ವಿಸ್ತರಣೆ ನೀಡಿ, ತದನಂತರ ಒಂದು ತಿಂಗಳು ವಿಸ್ತರಣೆ ನೀಡಿ ಆಮೇಲೆ ಮೂರು ತಿಂಗಳ ವಿಸ್ತರಣೆ ನೀಡಿ ತದನಂತರ ಸಿಬ್ಬಂದಿಗಳಿಗೆ ಕರ್ತವ್ಯದಿಂದ ವಿಮುಕ್ತಿಗೊಳಿಸುವ ಆದೇಶ ನೀಡಿದ್ದು ನಮ್ಮ ಸಂಘಟನೆಯಿಂದ ಕೋರ್ಟ್ ನಲ್ಲಿ ದಾವೆ ಹೂಡಿದ್ದು ಇದೆ, ಕಳೆದ 8 ತಿಂಗಳಲ್ಲಿ ವೇತನ ಪಡೆಯಲು ಸರಿಯಾಗಿ ಅನುದಾನ ಬಿಡುಗಡೆ ಆಗದೇ ಸಿಬ್ಬಂದಿಗಳು ಪರದಾಡುವಂತಾಗಿದೆ. ಈ ಬಗ್ಗೆ ಸದನದಲ್ಲಿ ಗಮನ ಸೆಳೆದು ನಮಗೆ ನ್ಯಾಯ ಕೊಡಿಸಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಸಂಘದ ಜಿಲ್ಲಾಧ್ಯಕ್ಷ ಹಾಲಸ್ವಾಮಿ, ಪ್ರಧಾನ ಕಾರ್ಯದರ್ಶಿ ಡಾ.ಮಂಜುನಾಥ್, ಸುನೀಲ್, ಸುರೇಶ್, ಮಹಾಲಿಂಗಪ್ಪ, ಬಸವರಾಜ್, ದೊಡ್ಡಮನಿ, ಡಾ.ರೇಣುಕಾ, ಇನ್ನಿತರರಿದ್ದರು‌.”

  • ಪ್ರಧಾನ ಕಾರ್ಯದರ್ಶಿಗಳ ಆದೇಶ ರದ್ದುಗೊಳಿಸಲು ಎನ್ ಎಚ್ ಎಂ ಸಿಬ್ಬಂದಿಗಳು ಆಗ್ರಹ
  • ಈ ಬಗ್ಗೆ ಬೆಳಗಾವಿ ಚಳಿಗಾಲ ಅಧಿವೇಶನದಲ್ಲಿ ಚರ್ಚಿಸಲು ಶಾಸಕ ಕೆ.ಎಸ್.ಬಸವಂತಪ್ಪಗೆ ಸಿಬ್ಬಂದಿಗಳ ಮನವಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:2023-24ನೇ ಸಾಲಿನಲ್ಲಿ ಚನ್ನಗಿರಿ ತಾಲ್ಲೂಕಿನಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ತನಿಖೆಗೆ ಒಳಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿ 5 ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ದಾವಣಗೆರೆ ಜಿಲ್ಲಾ ಪಂಚಾಯಿತಿಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್, ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳೇಶ್ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿಗೆ 2023-24ನೇ ಸಾಲಿನಲ್ಲಿ ಉಂಟಾದ ಮಳೆಯ ಅಭಾವ ಮತ್ತು ಬರದ ಕಾರಣದಿಂದ ಕೋಟ್ಯಾಂತರ ರೂಪಾಯಿಗಳನ್ನು ಕುಡಿಯುವ ನೀರಿಗಾಗಿ ಸರ್ಕಾರ ಬಿಡುಗಡೆ ಮಾಡಿರುತ್ತದೆ. ಆದರೆ ಕೆಲವು ಅಧಿಕಾರಿಗಳು ತುರ್ತು ಕುಡಿಯುವ ನೀರಿನ ಅನುದಾನವನ್ನು ದುರುಪಯೋಗಪಡಿಸಿಕೊಂಡ ಮಾಹಿತಿ ತಿಳಿದು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಉಪ ವಿಭಾಗ, ಚನ್ನಗಿರಿ ಇವರಿಂದ ಮಾಹಿತಿಹಕ್ಕು ಅಡಿಯಲ್ಲಿ ದಾಖಲೆ ಪಡೆಯಲಾಗಿದೆ.

ದಾಖಲೆಗಳನ್ನು ಪರಿಶೀಲನೆ ಮಾಡಿದಾಗ ಸಾಕಷ್ಟು ಅವ್ಯವಹಾರ ನಡೆದಿರುವುದು ಕಂಡುಬಂದ ಕಾರಣ ಸೂಕ್ತ ದಾಖಲೆಗಳೊಂದಿಗೆ ದಿನಾಂಕ: 05-07-2025 ರಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು, ಜಿಲ್ಲಾ ಪಂಚಾಯಿತಿ, ದಾವಣಗೆರೆ ಇವರಿಗೆ ದೂರು ನೀಡಿ, ತನಿಖೆಗೆ ಒಳಪಡಿಸುವಂತೆ ಕೋರಿದ್ದರು. ದೂರು ನೀಡಿ 3 ತಿಂಗಳು ಕಳೆದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ತನಿಖೆಯನ್ನು ಕೈಗೊಂಡ ಬಗ್ಗೆ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ದಿನಾಂಕ: 29-10-2025 ರಂದು ಜ್ಞಾಪನವನ್ನು ಸಹ ನೀಡಲಾಗಿತ್ತು.

ಆದರೆ ನಾವು ಜ್ಞಾಪನ ನೀಡಿ ಒಂದು ತಿಂಗಳು ಕಳೆದರೂ ಯಾವುದೇ ತನಿಖೆ ನಡೆಸದೆ ನಿರ್ಲಕ್ಷ್ಯ ತೋರಿದ ದಾವಣಗೆರೆ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಗಿತ್ತೆ ಮಾಧವ್ ವಿಠ್ಠಲ್ ರಾವ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳೇಶ್ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆಯಲ್ಲಿ ಸರ್ಕಾರಿ ನಿವೇಶನಗಳು ಖಾಲಿ ಇದ್ದರೆ ಅವುಗಳನ್ನು ಕೂಡಲೇ ಸರ್ಕಾರಿ ಕಚೇರಿಗಳ ಉಪಯೋಗಕ್ಕೆ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು.

ಮಂಗಳವಾರ(ಡಿ.2) ರಂದು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿದ್ಯಾರ್ಥಿಗಳಿಗೆ ಹಾಸ್ಟೆಲ್ ಕೊರತೆಯಾಗಬಾರದು. 100 ವಿದ್ಯಾರ್ಥಿಗಳು ವಾಸಿಸುವ ಕಟ್ಟಡಕ್ಕೆ ಬದಲಾಗಿ 400 ವಿದ್ಯಾರ್ಥಿಗಳು ವಾಸ ಮಾಡುವ ಕಟ್ಟಡವನ್ನು ನಿರ್ಮಿಸಬೇಕು ಎಂದರು. ಖಬರಸ್ಥಾನಕ್ಕೆ ಮತ್ತು ಸ್ಮಶಾನಕ್ಕೆ ಜಾಗದ ಅವಶ್ಯಕತೆ ಇದ್ದರೆ ನೀಡಲಾಗುತ್ತದೆ ಎಂದು ಭರವಸೆ ನೀಡಿದರು.

ಅಂಗನವಾಡಿ ಕೇಂದ್ರಗಳನ್ನು ಅಲ್ಪಸಂಖ್ಯಾತರ ಸಮುದಾಯದ ಜನರು ಅಧಿಕವಾಗಿ ವಾಸಿಸುತ್ತಿರುವ ತಾಲ್ಲೂಕುಗಳು ಮತ್ತು ಗ್ರಾಮಗಳಲ್ಲಿ ತೆರೆಯುವುದು, ಇದರಿಂದಾಗಿ ಯೋಜನೆಯ ಪ್ರಯೋಜನೆಗಳು ಅವರುಗಳಿಗೆ ನೇರವಾಗಿ ಸಿಗುತ್ತವೆ. ಬಾಡಿಗೆ ಕಟ್ಟಡದಲ್ಲಿ ನಡೆಯುತ್ತಿರುವ ಶಾಲೆ, ಕಾಲೇಜು ಹಾಗೂ ಅಂಗನವಾಡಿಗಳಿಗೆ ವಕ್ಫ್ ಬೋರ್ಡ್ ಅಥವಾ ಯಾವುದೇ ಇಲಾಖೆಯ ಅಧೀನದಲ್ಲಿನ ನಿವೇಶನವಿದ್ದರೂ ಗುರುತಿಸಿ ಶಾಲೆ, ಕಾಲೇಜುಗಳ ಕಟ್ಟಡ ನಿರ್ಮಿಸಬೇಕು. ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಹೆಚ್ಚಾಗಿ ವಾಸಿಸುತ್ತಿರುವ ಅಲ್ಪಸಂಖ್ಯಾತ ಸಮುದಾಯಗಳಿಗೆ ಇಲಾಖೆಗಳಲ್ಲಿನ ಯೋಜನೆಗಳನ್ನು ಸಮರ್ಪಕವಾಗಿ ಒದಗಿಸುವ ಮೂಲಕ ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಆಧ್ಯತೆ ನೀಡಬೇಕು.

ವಿವಿಧ ಇಲಾಖೆಯ ಅನುಪಾಲನಾ ವರದಿಯನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧಿಕಾರಿ ಭಕ್ತಮಾರ್ಕಡೇಶ್ವರ ಜಿಲ್ಲಾಧಿಕಾರಿಯವರಿಗೆ ಸಲ್ಲಿಸಿದರು.

ಸಮಾಜದ ಧಾರ್ಮಿಕ ಮುಖಂಡರು ಅಲ್ಪಸಂಖ್ಯಾತ ವಿದ್ಯಾರ್ಥಿಗಳನ್ನು ವಸತಿ ಶಾಲೆಗೆ ಸೇರಿಸುವಂತಾಗಲು ಪ್ರೇರೇಪಿಸಬೇಕು. ವಸತಿ ಶಾಲೆಯಲ್ಲಿ ಗುಣಮಟ್ಟದ ಶಿಕ್ಷಣ ದೊರೆಯುವುದರ ಜೊತೆಗೆ ಅಗತ್ಯ ಸೌಲಭ್ಯ ಇರುವ ಬಗ್ಗೆ ತಿಳಿಸಬೇಕು ಎಂದರು.

ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಮಮತ ಹೊಸಗೌಡ್ರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ರಾಜಾನಾಯ್ಕ, ಡಿಡಿಪಿಐ ಕೊಟ್ರೇಶ್, ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿರುವರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ1 day ago

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು....

ದಿನದ ಸುದ್ದಿ2 days ago

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ...

ದಿನದ ಸುದ್ದಿ3 days ago

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ...

ದಿನದ ಸುದ್ದಿ4 days ago

ದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:2023-24ನೇ ಸಾಲಿನಲ್ಲಿ ಚನ್ನಗಿರಿ ತಾಲ್ಲೂಕಿನಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ತನಿಖೆಗೆ ಒಳಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿ 5 ತಿಂಗಳು...

ದಿನದ ಸುದ್ದಿ5 days ago

ಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು

ಸುದ್ದಿದಿನ,ದಾವಣಗೆರೆ:ನಗರದ ಜಿಎಂ ವಿಶ್ವವಿದ್ಯಾನಿಲಯದ ಜಿಎಂ ಹಾಲಮ್ಮ ಸಭಾಂಗಣದಲ್ಲಿ 1.12 2025 ರಂದು ರಂಗೋತ್ಸವ -2025 ರ ಅಂತಿಮ ಸುತ್ತು ಗ್ರ್ಯಾಂಡ್ ಫಿನಾಲೆಯನ್ನು ಏರ್ಪಡಿಸಲಾಗಿತ್ತು. ಜಿಎಂ ವಿಶ್ವವಿದ್ಯಾಲಯದ ಎಲ್ಲಾ...

ದಿನದ ಸುದ್ದಿ5 days ago

ಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ

ಸುದ್ದಿದಿನ,ದಾವಣಗೆರೆ: ದಾವಣಗೆರೆಯಲ್ಲಿ ಸರ್ಕಾರಿ ನಿವೇಶನಗಳು ಖಾಲಿ ಇದ್ದರೆ ಅವುಗಳನ್ನು ಕೂಡಲೇ ಸರ್ಕಾರಿ ಕಚೇರಿಗಳ ಉಪಯೋಗಕ್ಕೆ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು. ಮಂಗಳವಾರ(ಡಿ.2) ರಂದು ಜಿಲ್ಲಾಧಿಕಾರಿಗಳ ಕಚೇರಿ...

ದಿನದ ಸುದ್ದಿ5 days ago

ದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ

ಸುದ್ದಿದಿನ,ದಾವಣಗೆರೆ:ಕಾರ್ಮಿಕರಿಗೆ ತ್ವರಿತವಾಗಿ, ಕೆಲಸದ ಸ್ಥಳಗಳಲ್ಲೇ ವೈದ್ಯಕೀಯ ಸೇವೆ ಸಿಗಬೇಕು ಎಂಬ ಉದ್ದೇಶದಿಂದ ‘ಸಂಚಾರಿ ಆರೋಗ್ಯ ಘಟಕ’ (ಮೊಬೈಲ್ ಮೆಡಿಕಲ್ ಯುನಿಟ್) ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಕಾರ್ಮಿಕರು ಇದರ...

ದಿನದ ಸುದ್ದಿ5 days ago

ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಧರ್ತಿ ಅಭಾ ಜನ ಜಾತಿಯ ಗ್ರಾಮ ಉತ್ಕರ್ಷ ಅಭಿಯಾನದಡಿ ಮೀನುಮಾರಾಟಗಾರರಿಂದ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ1 week ago

ಎಂನರೇಗಾ ಯೋಜನೆ : ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಹರಿಹರ ತಾಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಇಚ್ಛಿಸುವ ರೈತರಿಂದ...

ದಿನದ ಸುದ್ದಿ2 weeks ago

ಅಡ್ಡ ಬಂದ ನಾಯಿ ಉಳಿಸಲು ಹೋಗಿ ಕಾರು ಪಲ್ಟಿ : ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ

ಸುದ್ದಿದಿನಡೆಸ್ಕ್:ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸಂಬಂಧಿಕರ ಮದುವೆಗೆಂದು ವಿಜಯಪುರಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ...

Trending