ರಾಜಕೀಯ
ವಿದ್ಯಾವಂತರಾದ ನಾವು ಬಹುಜನ ಚಳವಳಿಗೆ ಮಾಡುತ್ತಿರುವುದಾದರೂ ಏನು?
ಮಾನ್ಯ ಚಾಮರಾಜನಗರ ಲೋಕಸಭಾ ವ್ಯಾಪ್ತಿಯ ಬಂಧುಗಳೇ ಇತ್ತೀಚಿನ ವರದಿಯಂತೆ ಕರ್ನಾಟಕ ರಾಜ್ಯದಲ್ಲಿ ಬಹುಜನ ಸಮಾಜ ಪಕ್ಷದ ಬಲವರ್ಧನೆಯು ಸಮೃದ್ಧವಾಗಿದೆ. ಈ ನಿಟ್ಟಿನಲ್ಲಿ ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಆನೆ ಸದ್ದಿಲ್ಲದೆ ಘೀಳಿಟ್ಟಿದೆ.
ಈ ಚುನಾವಣೆಯಲ್ಲಿ ಆನೆಯ ಮೇಲೆ ರಾಜ್ಯಧಿಕಾರವನ್ನು ಏರಲು ಮುನ್ನುಗುತ್ತಿರುವವರು ಯುವಕರ ಕಣ್ಮಣಿ, ನಾಡಿನ ಖ್ಯಾತ ಹೆಸರಾಂತ ಕನ್ನಡ ವಿದ್ವಾಂಸರು, ಪ್ರಗತಿಪರ ಚಿಂತಕರು ಹಾಗು ಎರಡನೇ ತಲೆಮಾರಿನ ಫುಲೆ-ಅಂಬೇಡ್ಕರ್ವಾದವನ್ನು ನಾಡಿನಾದ್ಯಂತ ಪಸರಿಸುತ್ತಿರುವ ಡಾ. ಶಿವಕುಮಾರರವರು. ಇವರು ಬಹುಜನ ಸಮಾಜ ಪಾರ್ಟಿ ಚಾಮರಾಜನಗರ ಲೋಕಸಬಾ ಕ್ಷೇತ್ರ (ಮೀಸಲು)ದಿಂದ ಸ್ಪರ್ಧಿಸಿದ್ದಾರೆ. ನಾಡಿನಾದ್ಯಂತ ಅಪಾರ ಅಭಿಮಾನಿಗಳನ್ನು ಹೊಂದಿರುವ ಇವರು ೨೦೧೯ರ ಚುನಾವಣೆಯಲ್ಲಿ ಜಯಭೇರಿ ಬಾರಿಸಲು ಮುನ್ನುಗುತ್ತಿದ್ದಾರೆ. ಕ್ಷೇತ್ರದ ಎಲ್ಲಾ ಧರ್ಮಿಯ, ಜಾತಿಯ ಜನರು ಕಾಂಗ್ರೆಸ್, ಬಿಜೆಪಿ ಆಡಳಿತದಿಂದ ಬೇಸತ್ತು ಹೊಸ ಮುಖದತ್ತ ಒಲವು ತೋರುತ್ತಿದ್ದಾರೆ.ಈ ಸಮಯದಲ್ಲಿ ಬಹುಜನ ಚಳವಳಿಯ ಯುವಕರು, ನೌಕರರರು ಪ್ರಗತಿಪರರು ಡಾ. ಶಿವಕುಮಾರರವರನ್ನು ತಮ್ಮ ತನು-ಮನ-ಧನವನ್ನು ಉದಾರ ಮನೋಭಾವದಿಂದ ಅರ್ಪಿಸಿ ಇವರ ಬೆನ್ನೆಲುಬಾಗಿ ನಿಲ್ಲಬೇಕಿದೆ.
ಬಂಧುಗಳೇ ನಾವೆಲ್ಲ ಒಂದಲ್ಲ ಒಂದು ರೀತಿಯಲ್ಲಿ ಕರ್ನಾಟಕದಲ್ಲಿ ಕಳೆದ 20 ವರ್ಷಗಳಿಂದ ಚಳವಳಿಯ ಒಂದು ಭಾಗವಾಗಿ ಸೇವೆ ಸಲ್ಲಿಸುತ್ತಿದ್ದೇವೆ. ಲಕ್ಷಾಂತರ ವಿದ್ಯಾರ್ಥಿಗಳು ಸಾವಿರಾರು ನೌಕರರು, ಕೆಲವು ಜನಪ್ರತಿನಿಧಿಗಳು, ಕಲಾವಿದರು ಚಳವಳಿಯಿಂದ ಸೃಷ್ಠಿಯಾಗಿದ್ದಾರೆ. ನಾವೆಲ್ಲರೂ ಸೇರಿ ವರ್ಷಪೂರ್ತಿ ಚಳವಳಿಯ ರಥವನ್ನು ಎಳೆದು ಚುನಾವಣೆಗಳು ಬಂದಾಗ ಎಷ್ಟು ಜನರು ನಿಷ್ಕ್ರೀಯರಾಗುವುದು ಅಥವ ಕೆಲಸವನ್ನು ಚುರುಕುಗೊಳಿಸದಿರುವುದು ಅಥವ ತಮ್ಮ ತಮ್ಮ ಬೂತುಗಳಲ್ಲಿ ಮತಬ್ಯಾಂಕ್ ಭದ್ರಪಡಿಸದಿರುವುದು ನಾನಾ ಕಾರಣಗಳಿಂದ ರಾಜಕಾರಣ ಮಾಡದಿರುವ ಕಾರಣ ಗಾಂಧಿವಾದಿ ಕಾಂಗ್ರೆಸ್, ಕೋಮುವಾದಿ ಬಿಜೆಪಿ, ಬಂಡವಾಳಶಾಹಿ ಜೆ.ಡಿ.ಎಸ್ ಪಕ್ಷಗಳು ದೇಶದಲ್ಲಿ ರಾರಾಜಿಸುತ್ತಿವೆ. ಇಂತಹ ಸಂಧಿಗ್ಧ ಪರಿಸ್ಥಿತಿಯಲ್ಲಿ ಚುನಾವಣೆ ಫಲಿತಾಂಶ ಕಾಣುವವರೆಗೂ ಮೈಮರೆಯದೆ ಕೆಲಸ ಮಾಡಬೇಕಿದೆ.
ಮತ್ತೊಂದು ವಿಷಯವನ್ನು ತಮ್ಮ ಗಮನಕ್ಕೆ ತಿಳಿಯಪಡಿಸಿಸುವುದೇನೆಂದರೆ ಈ 5 ವರ್ಷಗಳ ಅವಧಿಯಲ್ಲಿ ಶೈಕ್ಷಣಿಕ ವಲಯದಲ್ಲಿ ನಡೆಯುತ್ತಿರುವ ಅನ್ಯಾಯವನ್ನು ಹೆಚ್ಚಾಗಿ ಪ್ರಶ್ನಿಸುತ್ತಿರುವವರು ವಿಶ್ವವಿದ್ಯಾನಿಲಯದ ವಿದ್ಯಾರ್ಥಿಗಳು ಹಾಗು ವಿದ್ಯಾರ್ಥಿ ಸಂಘಟನೆಗಳು. ಉದಾಹರಣೆಗೆ ರೋಹಿತ್ ವೇಮುಲ ಆತ್ಮಹತ್ಯೆ ಪ್ರಕರಣ, ದಲಿತ ಹೆಣ್ಣು ಮಕ್ಕಳಾದ ದಾನಮ್ಮ ಪ್ರಕರಣ, ಅನಿತಾಳ ಆತ್ಮಹತ್ಯೆ ಪ್ರಕರಣ, ಎಸ್.ಸಿ/ಎಸ್.ಟಿ ತಿದ್ದುಪಡಿ ವಿಧೇಯಕ, ಊನಾ ದೌರ್ಜನ್ಯ ಪ್ರಕರಣ, ಮುಸ್ಲಿಂ ವಿದ್ಯಾರ್ಥಿ ನಜೀಬ್ ನಾಪತ್ತೆ, ಬ್ಯಾಕ್ಲಾಗ್ ಭರ್ತಿ ಮಾಡಿ, ನಿರುದ್ಯೋಗ ನಿವಾರಿಸಿ ಎಂಬ ಹೋರಾಟ, ಆರ್.ಎಸ್.ಎಸ್ ಬಂಧುತ್ವದ ವಿರೋಧಧ ಹೋರಾಟ, ಸಂಶೋಧನಾ ವಿದ್ಯಾರ್ಥಿಗಳ ಫೆಲೋಷಿಪ್ ಗಾಗಿ, ಕೆಲವು ಸಚಿವರನ್ನು ವಜಾಗೊಳಿಸಿದಾಗ ಅವರ ಪರವಾಗಿ ಬೀದಿಗಿಳಿದಿದ್ದು, ಸಂವಿಧಾನವನ್ನು ಬದಲಾಯಿಸಬೇಕೆಂದಾಗ ಪ್ರಜಾಪ್ರಭುತ್ವವಾದಿಗಳಿಗೆ ಅಪ್ಪ-ಅಮ್ಮ ಇಲ್ಲ ಎಂದು ಚೀಡಿಸಿದಾಗ ಹೋರಾಟ ರೂಪಿಸಿದ್ದು, ಇಂತಹ ೧೦ ಹಲವು ಹೋರಾಟಗಳನ್ನು ವಿದ್ಯಾವಂತರಾದ ನಾವು ರೂಪಿಸಿದ್ದು ಯಾರ ವಿರುದ್ಧ? ಯಾವ ಸರ್ಕಾರದ ವಿರುದ್ಧ?
ವಿದ್ಯಾವಂತ ಬಂಧುಗಳೇ ದಯಮಾಡಿ ಒಮ್ಮೆ ಸೂಕ್ಷ್ಮಮತಿಯರಾಗಿ ಯೋಚಿಸಿ. ಇಂತಹ ಸಾವಿರಾರು ಹೋರಾಟಗಳನ್ನು ಮಾಡಿದ್ದು ಕೇಂದ್ರದ ಬಿಜೆಪಿ ಮತ್ತು ರಾಜ್ಯ ಕಾಂಗ್ರೆಸ್ ಮತ್ತು ಜೆ.ಡಿಎಸ್ ಸರ್ಕಾರದ ವಿರುದ್ಧವಲ್ಲವೇ? ಜಾಗೃತರಾಗಿ. ದಾದಾಸಾಹೇಬ್ ಕಾನ್ಷಿರಾಮ್ಜೀ ಹೇಳುವ ಹಾಗೆ ಅನ್ಯಾಯ, ದೌರ್ಜನ್ಯ-ದಬ್ಬಾಳಿಕೆಗಳು ಆಳುವ ವರ್ಗದ ಮೇಲೆ ನಡೆಯುವುದಿಲ್ಲ. ಬದಲಾಗಿ ಗುಲಾಮರ ಮೇಲೆ ನಡೆಯುತ್ತಿದೆ. ಈ ಮಾತು ಈ ಸಂದರ್ಭದಲ್ಲಿ ನಾವು ನೆನೆಯಬೇಕಲ್ಲವೇ? ನಾವೆಲ್ಲ ಇಷ್ಟೊಂದು ದೊಡ್ಡ ಪ್ರತಿಭಟನೆ, ಹೋರಾಟ, ಉಪವಾಸಗಳನ್ನು 5 ವರ್ಷಗಳ ಕಾಲ ಕಾಂಗ್ರೆಸ್ ಬಿಜೆಪಿ ಸರ್ಕಾರಗಳ ವಿರುದ್ಧ ತೊಡೆ ತಟ್ಟಿ ನಿಂತು ನಮ್ಮಗಳ ಬುದ್ಧಿಶಕ್ತಿಯನ್ನು ವರ್ಷವಿಡಿ ಇಂತಹ ಹೋರಾಟಗಳಿಗೆ ವ್ಯಯಿಸಿ, ಚುನಾವಣೆ ಇನ್ನೂ (ಏಪ್ರಿಲ್) ಒಂದು ತಿಂಗಳು ಇದ್ದು, ಈ ಸಮಯದಲ್ಲಿ ಕಾಂಗ್ರೆಸ್-ಬಿಜೆಪಿಯ ಪರವಾಗಿ ಕೆಲಸ ಮಾಡುವುದು ನ್ಯಾಯವೇ? ಇದು ಅನ್ಯಾಯವಲ್ಲದೇ ಮತ್ತೇನು? ಮಾನ್ಯ ಶೈಕ್ಷಣಿಕ ಮಿತ್ರರೇ ನಮ್ಮಗಳ ವಿರೋಧಾಭಾಸವನ್ನು ಕಾಂಗ್ರೆಸ್ ಬಿಜೆಪಿ ಮಿತ್ರರಿಗೆ ತಿಳಿಸಿ ಜಾಗೃತಗೊಳಿಸಿ ಅವರೆಲ್ಲರನ್ನು ಬಾಬಾಸಾಹೇಬ್ ಅಂಬೇಡ್ಕರ್ರವರ ಚಳವಳಿಯ ರಥದಲ್ಲಿ ತೊಡಗಿಸಿಕೊಳ್ಳುವಂತೆ ಮಾಡಿ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾದ ಡಾ.ಶಿವಕುಮಾರರವರನ್ನು ಜಯಶೀಲರನ್ನಾಗಿಸುವುದು ನಮ್ಮ ನಿಮ್ಮೇಲರ ಆದ್ಯ ಕರ್ತವ್ಯವವಲ್ಲವೇ? ಚಿಂತಿಸಿ.
ಜೈ ಭೀಮ್ ಜೈ ಭಾರತ್
–ಡಾ. ನವೀನ್ ಮೌರ್ಯ
ಸಂಶೋಧಕರು, ಮೈಸೂರು ವಿಶ್ವವಿದ್ಯಾನಿಲಯ
ಸುದ್ದಿದಿನ.ಕಾಂ|ವಾಟ್ಸಾಪ್|9986715401

ದಿನದ ಸುದ್ದಿ
ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ
ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.
ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ
ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.
ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.
ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
ಸುದ್ದಿದಿನ,ದಾವಣಗೆರೆ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.
ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.
ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.
ದಾವಣಗೆರೆ ತಾಲ್ಲೂಕು ತಹಶೀಲ್ದಾರ್ ರಾಜೇಶ್ ಕುಮಾರ್ ಸಿ ಅವರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ
-
ದಿನದ ಸುದ್ದಿ6 days agoನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ
-
ದಿನದ ಸುದ್ದಿ5 days agoಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

