ರಾಜಕೀಯ
ಬರಿದಾದ ಖಜಾನೆ-ಮೋದಿ ಸರ್ಕಾರದ ಬಳುವಳಿ
- ಮೋದಿ ಸರ್ಕಾರದ ಆಡಳಿತಾವಧಿಯ ಕಡೆಯ ವರ್ಷದಲ್ಲಿ ಪ್ರತ್ಯಕ್ಷ ಮತ್ತು ಅಪ್ರತ್ಯಕ್ಷ ತೆರಿಗೆ ಸಂಗ್ರಹದಲ್ಲಿ ಕಮ್ಮಿಯೆಂದರೂ ರೂ. 1.75 ಲಕ್ಷ ಕೋಟಿಗಳಷ್ಟು ಕೊರತೆ ಉಂಟಾಗಿದೆ. ಇದು ಒಟ್ಟು ಜಿಡಿಪಿಯ ಶೇ. 1 ಕ್ಕೆ ಹತ್ತಿರ ಇದೆ. ಈ ಮೊತ್ತದ ಪ್ರಮಾಣ ಎಷ್ಟೆಂದರೆ ಇದರಿಂದ ಮೋದಿ ಸರಕಾರ ಕೊನೆಯ ಬಜೆಟಿನಲ್ಲಿ ಸಣ್ಣ ರೈತರಿಗೆಂದು ಪ್ರಕಟಿಸಿದ ವಾರ್ಷಿಕ 6000 ರೂ. ಆದಾಯ ಬೆಂಬಲವನ್ನು ಅವರಿಗೆ ಮಾತ್ರವಲ್ಲ ದೇಶದ ಎಲ್ಲ ಕುಟುಂಬಗಳಿಗೂ ಕೊಡಬಹುದು. ಅಥವ 15 ಕೋಟಿ ಕುಟುಂಬಗಳಿಗೆ ಅಂದರೆ ನಮ್ಮ ದೇಶದ ಜನ ಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರಿಗೆ ಪ್ರತಿ ತಿಂಗಳು ರೂ.1000 ದಂತೆ ಒಂದಿಲ್ಲೊಂದು ರೀತಿಯಲ್ಲಿ ಆದಾಯ ಬೆಂಬಲ ಕೊಡಬಹುದಾಗಿತ್ತು ಈ ಹಿನ್ನೆಲೆಯಲ್ಲಿ ದೇಶದ ಮುಂದಿರುವ ಪ್ರಶ್ನೆ- ಮೇ ತಿಂಗಳ ಕೊನೆಯಲ್ಲಿ ಬಲಿಷ್ಟ ಹಿತಾಸಕ್ತಿಗಳನ್ನು ಎದುರಿಸಿ ನಿಲ್ಲಬಲ್ಲ ಮತ್ತು ಜನಪರವಾದ ಪರ್ಯಾಯವನ್ನು ದಿಟ್ಟತನದಿಂದ ಆಯ್ದುಕೊಳ್ಳಬಲ್ಲ ಒಂದು ಮಜಬೂತ್ ಸರಕಾರ ಬರುವುದೇ ಎಂಬುದು.
–ಪ್ರೊ. ಸುರಜಿತ್ ಮಜುಂದಾರ್
1 ಏಪ್ರಿಲ್ 2019 ರಂದು ಹಣಕಾಸು ಸಚಿವಾಲಯ ಮಾರ್ಚ್ 2019 ರ ಜಿಎಸ್ಟಿ ಸಂಗ್ರಹದ ಬಗ್ಗೆ ಹೇಳಿಕೆ ನೀಡಿದ್ದು ಅದು ಪ್ರಸಕ್ತ ಹಣಕಾಸು ವರ್ಷದ ಕಡೆಯ ತಿಂಗಳು ಆಗಿದೆ. ಈ ಹೇಳಿಕೆ ಪ್ರಕಾರ ಮಾರ್ಚ್ ತಿಂಗಳಲ್ಲಿ ಸಂಗ್ರಹವಾದ ರೂ. 1,06,577 ಕೋಟಿ ಜಿಎಸ್ಟಿ ಕಾರ್ಯರೂಪಕ್ಕೆ ಬಂದನಂತರ ಗಳಿಸಿರುವ ಅತ್ಯದಿಕ ಮೊತ್ತವಾಗಿದೆ. ಆದರೆ ಈ ವಿಷಯದಲ್ಲಿ ಮರೆಮಾಚುತ್ತಿರುವ ಸಂಗತಿಯೆಂದರೆ ಫೆಬ್ರುವರಿ 1, 2019 ರಂದು ಮಂಡಿಸಿದ ಬಜೆಟ್ನಲ್ಲಿ ಪರಿಷ್ಕರಿಸಿದ ಜಿಎಸ್ಟಿ ಆದಾಯದ ಪುನರ್ ಅಂದಾಜಿಗಿಂತಲೂ ಬಹಳ ಕಡಿಮೆಯಿದೆ. ವಾಸ್ತವವಾಗಿ ಈ ಪರಿಷ್ಕೃತ ಅಂದಾಜೇ ಕಳೆದ ವರ್ಷದ ಬಜೆಟಿನಲ್ಲಿ ಇರಿಸಿಕೊಂಡಿದ್ದ ಗುರಿಗಿಂತ ಒಂದು ಲಕ್ಷ ಕೋಟಿ ರೂ. ಕಡಿಮೆಯಾಗಿದೆ.
ಕೇಂದ್ರ ಸರ್ಕಾರದ ಕಂಟ್ರೊಲರ್ ಜನರಲ್ ಆಫ್ ಅಕೌಂಟ್ಸ್ ಅವರ ವೆಬ್ಸೈಟ್ನಲ್ಲಿ ಫೆಬುವರಿ 2019 ರ ವರೆಗಿನ ಲೆಕ್ಕದ ವಿವರವನ್ನು ಪ್ರಕಟಿಸಲಾಗಿದೆ. ಇದರಂತೆ ಜಿಎಸ್ಟಿಯ ಎಲ್ಲಾ ಆದಾಯಗಳ ಮೊತ್ತ ಫೆಬ್ರವರಿ ೨೦೧೯ ಕ್ಕೆ ರೂ. 5,26,680 ಕೋಟಿ, ಈ ಬಜೆಟಿನ ಪರಿಷ್ಕೃತ ಅಂದಾಜು ರೂ. 6,43,900 ಕೋಟಿ, ಅಂದರೆ ಆದಾಯ ಗಳಿಕೆಯ ಗುರಿಗಿಂತ ರೂ.1,17,220 ಕೋಟಿ ಕಡಿಮೆ ಮತ್ತು ಕಳೆದ ಬಜೆಟ್ನಲ್ಲಿ ಮಂಡಿಸಿದ ಅಂದಾಜು ರೂ.7,43,900 ಕೋಟಿ.
ಅಂದರೆ ಒಟ್ಟು ಸಂಗ್ರಹವಾಗಿರುವ ಮೊತ್ತ ಪರಿಷ್ಕೃತ ಅಂದಾಜಿನ ಗುರಿ ಮುಟ್ಟಿರುವುದಿಲ್ಲ. ಮಾರ್ಚ್ ತಿಂಗಳಲ್ಲಿ ಸಂಗ್ರಹಿಸಿದ ದಾಖಲೆ ಆದಾಯದಲ್ಲಿ 51,209 ಕೋಟಿ ರೂ. ಗಳನ್ನು ರಾಜ್ಯ ಸರ್ಕಾರಗಳಿಗೆ ನೀಡಬೇಕಿದ್ದು ಮತ್ತು ಉಳಿದ ರೂ. 55,368 ಕೋಟಿ ಯಲ್ಲಿ ಜಿಎಸ್ಟಿ ಪರಿಹಾರಕ್ಕಾಗಿ ಇಟ್ಟಿರುವ ರೂ. 8000 ಕೋಟಿ ಸೇರಿರುತ್ತದೆ. ಈ ಎಲ್ಲವನ್ನೂ ಕೇಂದ್ರದ ಲೆಕ್ಕಕ್ಕೆ ಸೇರಿಸಿದರೂ ಮೊತ್ತ ರೂ5,82,048 ಕೋಟಿ ಆಗುತ್ತದಷ್ಟೇ. ಒಟ್ಟು ಕೇಂದ್ರ ಸರ್ಕಾರದ ಸಂಗ್ರಹಿಸಿರುವ ಜಿಎಸ್ಟಿ ತೆರಿಗೆ ಸಂಗ್ರಹ 5,82,048 ಕೋಟಿಯಾಗಿದ್ದು. ಇದು ಪರಿಷ್ಕೃತ ಬಜೆಟ್ ಅಂದಾಜಿಗಿಂತ ರೂ.61,852 ಕೋಟಿ ಕಡಿಮೆಯಾಗಿದ್ದರೆ, ಮೂಲ ಬಜೆಟ್ಗಿಂತ ರೂ. 1.62 ಲಕ್ಷ ಕೋಟಿ ಕಡಿಮೆಯಾಗಿದೆ.
ಜಿಎಸ್ಟಿ ತೆರಿಗೆ ಸಂಗ್ರಹದಲ್ಲಿನ ತೀವ್ರ ಕೊರತೆ ಕೇಂದ್ರ ಸರ್ಕಾರದ ಅಪ್ರತ್ಯಕ್ಷ ತೆರಿಗೆ ಸಂಗ್ರಹವನ್ನು ತೀವ್ರವಾಗಿ ತಟ್ಟುತ್ತದೆ, ಏಕೆಂದರೆ ಇದು ಅಪ್ರತ್ಯಕ್ಷ ತೆರಿಗೆ ಆದಾಯಗಳ ಬಹುಮುಖ್ಯವಾದ ಭಾಗವಾಗಿದೆ. 2018-19ಪರಿಷ್ಕೃತ ಅಂದಾಜಿನ ಪ್ರಕಾರ ಜಿಎಸ್ಟಿ ಒಟ್ಟು ಅಪ್ರತ್ಯಕ್ಷ ತೆರಿಗೆ ಸಂಪನ್ಮೂಲದ ಶೇ. 60 ಭಾಗವಾಗಿದೆ. ಉಳಿದ ಅಪ್ರತ್ಯಕ್ಷ ತೆರಿಗೆ ಸಂಗ್ರಹವೂ ತೃಪ್ತಿಕರವಾಗಿಲ್ಲವೆಂದು ಕಂಡು ಬರುತ್ತಿದೆ.
ಎಪ್ರಿಲ್ 2018ರಿಂದ-ಫೆಬ್ರುವರಿ 2019ರ ಅಂಕಿಅಂಶಗಳನ್ನು ಗಮನಿಸಿದರೆ ನಾಮಿನಲ್ ಜಿಡಿಪಿ ಹಿಂದಿನ ಸಾಲಿಗಿಂತ ಶೇ. 11.5 ಹೆಚ್ಚಳ ಸಾಧಿಸಿದ್ದರೂ, ಈ 11 ತಿಂಗಳ ಅವಧಿಯಲ್ಲಿ (ಏಪ್ರಿಲ್- ಫೆಬ್ರವರಿ) ಹಿಂದಿನ ಹಣಕಾಸು ವರ್ಷದ ಅದೇ 11ತಿಂಗಳ ಆದಾಯದೊಂದಿಗೆ ಹೋಲಿಸಿದರೆ ಅಪ್ರತ್ಯಕ್ಷ ತೆರಿಗೆ ಹೆಚ್ಚಳ ಕೇವಲ ಶೇ2%ಆಗಿದೆ. ಆದ್ದರಿಂದ ಮಾರ್ಚ್ 2019ರ ಈ ‘ಬೃಹತ್’ ಹೆಚ್ಚಳ ಸಹಾ ಒಟ್ಟಾರೆ ಕೊರತೆಯನ್ನು ಕಡಿಮೆ ಮಾಡುವುದಿಲ್ಲ. ಮಾರ್ಚ್ ತಿಂಗಳಿನಲ್ಲಿ ಅಪ್ರತ್ಯಕ್ಷ ತೆರಿಗೆಗಳ ಸಂಗ್ರಹದಲ್ಲಿ 20% ಆಗಿದ್ದರೂ ಕೂಡ, ಒಟ್ಟಾರೆ ಕೊರತೆ 1 ಲಕ್ಷ ಕೋಟಿ ರೂ. ಮೀರಲಿದೆ ಮತ್ತು ಮೂಲ ಬಜೆಟ್ಗಿಂತ 2 ಲಕ್ಷ ಕೋಟಿಗಳಿಗಿಂತ ಹೆಚ್ಚಾಗಲಿದೆ.
ನಿಚ್ಚಳವಾಗಿ ಜಿಎಸ್ಟಿ ಮೂಲಕ ಅಪ್ರತ್ಯಕ್ಷ ತೆರಿಗೆ ಆದಾಯ ಹೆಚ್ಚುವುದೆಂಬ ಆಶಯ ಕುಸಿಯುತ್ತಿದೆ. ಇದೇ ಸಂದರ್ಭದಲ್ಲಿ ನೇರ ತೆರಿಗೆ ಸಂಗ್ರಹವೂ ಹೆಚ್ಚಾಗಿರುವುದಿಲ್ಲ. ಕಾರ್ಪೋರೇಟ್ ತೆರಿಗೆ ಸಂಗ್ರಹ ಪರಿಷ್ಕೃತ ಬಜೆಟ್ ಅಂದಾಜಿನಂತೆ ಇರಬೇಕಾದರೆ ಮಾರ್ಚ್ 2018 ಗಿಂತ ಮಾರ್ಚ್ 2019 ರಲ್ಲಿ 22.74% ಹೆಚ್ಚಳ ಕಾಣಬೇಕಿದೆ. ಎಪರಿಲ್-ಫೆಬ್ರುವರಿ ಅವಧಿಯಲ್ಲಿ ಕಾಣ ಬಂದಿರುವ ಹೆಚ್ಚಳದ ಪ್ರಮಾಣ ೧೫.೪೩, ಅದಕ್ಕಿಂತ ಹೆಚ್ಚಿನ ಪ್ರಮಾಣದಲ್ಲಿ ಸಂಗ್ರಹಣೆ ಆಗಬೇಕಿದೆ.
ವೈಯುಕ್ತಿಕ ವರಮಾನ ತೆರಿಗೆ ಸಂಗ್ರಹಕ್ಕೆ ಸಂಬಂಧಪಟ್ಟಂತೆ ಕಳೆದ ವರ್ಷದ ಬಜೆಟ್ ಬಹಳ ಆಶಾದಾಯಕ ಅಂದಾಜು ಮಾಡಿತ್ತು, ಇದನ್ನು ಈ ಬಾರಿಯ ಪರಿಷ್ಕೃತ ಅಂದಾಜಿನಲ್ಲೂ ಉಳಿಸಿಕೊಳ್ಳಲಾಗಿದೆ. ಆದರೆ ನೋಟ್ರದ್ಧತಿಯ ನಂತರ ಸತತವಾಗಿ ಎರಡನೇಯ ವರ್ಷವೂ ಈ ಬಾಬ್ತಿನ ಸಂಪನಮೂಲ ಸಂಗ್ರಹ ಮೂಲ ಬಜೆಟ್/ ಪರಿಷ್ಕೃತ ಅಂದಾಜಿನ ಹತ್ತಿರವೂ ಬರುವಂತಿಲ್ಲ. ಎಪ್ರಿಲ್-ಫೆಬ್ರವರಿ 11 ತಿಂಗಳ ಅವಧಿಯಲ್ಲಿನ ಸಂಗ್ರಹವನ್ನು ಗಮನಿಸಿದರೆ, ಕನಿಷ್ಠ ರೂ. 50,000 ಕೋಟಿ ಕೊರತೆ ತೋರಿಸಲಿದೆ. ಇದರ ಫಲಿತಾಂಶವೆಂದರೆ, ಒಟ್ಟು ವರಮಾನ ತೆರಿಗೆ ಜಿಡಿಪಿಯ ಕೇವಲ 2.5% ಮಾತ್ರ ಆಗಬಹುದು. ಅಂದರೆ ಅದೇ ನಿಧಾನಗತಿಯ ಏರಿಕೆ.
ತೆರಿಗೆ ತೆರಬೇಕಾದ ಶ್ರೀಮಂತ ವಿಭಾಗಗಳ ಆದಾಯಗಳಲ್ಲಿ ತ್ವರಿತ ಹೆಚ್ಚಳವಾಗಿದ್ದರೂ, ನೊಟುರದ್ಧತಿಯ ನಂತರವೂ ವರಮಾನ ತೆರಿಗೆಯ ಆದಾಯದ ಸಂಗ್ರಹದ ಏರಿಕೆಯ ಗತಿ ಮಾತ್ರ ಹಿಂದಿನಂತೆಯೇ ನಿಧಾನವಾಗಿಯೇ ಇದೆ.
ನೋಟುರದ್ಧತಿ ಕ್ರಮದಿಂದಾಗಿ ತೆರಿಗೆ ರಿಟರ್ನ್ ಸಲ್ಲಿಸುವರ ಸಂಖ್ಯೆ ಹೆಚ್ಚಾಗಿದೆ ಎಂದು ಸರಕಾರೀ ಪ್ರಚಾರಯಂತ್ರ ಸಾರುತ್ತಿದೆ. ವಾಸ್ತವವಾಗಿ ಈ ಪ್ರವೃತ್ತಿ ನೋಟುರದ್ಧತಿಯ ಮೊದಲೇ ಕಂಡು ಬಂದಿತ್ತು. ಈಗ ಇದೇ ರೀತಿಯ ಕತೆಯನ್ನು ಜಿಎಸ್ಟಿ ಬಗ್ಗೆಯೂ ಹೇಳಲಾಗುತ್ತಿದೆ. ಈ ಅಂಕಿ ಅಂಶಗಳು ಮರೆಮಾಚುತ್ತಿರುವ ಸಂಗತಿಯೆಂದರೆ, ತೆರಿಗೆ ಬಲೆಯಲ್ಲಿನ ಸಂಖ್ಯೆಗಳಿಗೂ ಮತ್ತು ತೆರಿಗೆ ಆದಾಯಕ್ಕೂ ಯಾವುದೇ ನೇರ ಸಂಬಂಧವಿಲ್ಲವೆಂಬುದು.
ವರಮಾನ ತೆರಿಗೆ ರಿಟರ್ನ್ ಸಲ್ಲಿಸುವ ಶೇ. 90 ರಷ್ಟು ಜನ ಯಾವ ತೆರಿಗೆಯನ್ನು ಕಟ್ಟಿರುವುದಿಲ್ಲ ಅಥವಾ ಬಹಳ ಕಡಿಮೆ ತೆರಿಗೆ ಕಟ್ಟುತ್ತಾರೆ ಮತ್ತು 57% ತೆರಿಗೆ ಮೊತ್ತ ಸಂಬಳಗಳ ಮೂಲದಿಂದ ಬರುತ್ತಿದೆ, ವ್ಯಾಪಾರ-ವ್ಯವಹಾರಗಳ ಮೂಲದಿಂದ ಬರುವ ತೆರಿಗೆ ಆದಾಯಗಳ ಪ್ರಮಾಣ ಇದರ ಅರ್ಧದಷ್ಟು ಮಾತ್ರ. ಈ ಅಂಶಗಳನ್ನು ಗಮನಿಸಿ- ಆದಾಯ ತೆರಿಗೆ ಇಲಾಖೆ ಡಿಸೆಂಬರ್ 2018ರ ವರೆಗೆ 37 ಕೋಟಿ ವ್ಯಕ್ತಿಗಳಿಗೆ ವ್ಯಕ್ತಿಗಳಿಗೆ ಪಾನ್ ಕಾರ್ಡ್ ಅಂದರೆ ತೆರಿಗೆದಾರರ ಶಾಶ್ವತ ಅಕೌಂಟ್ ಸಂಖ್ಯೆ ನೀಡಿದೆ.
ಇದು ತೆರಿಗೆ ರಿಟರ್ನ್ ಸಲ್ಲಿಸುವವರ ಸಂಖ್ಯೆಯ 5 ಪಟ್ಟಿಗಿಂತಲೂ ಹೆಚ್ಚು ಮತ್ತು ದೇಶದ ಒಟ್ಟು ದುಡಿಮೆಗಾರರ 75% ದಷ್ಟು!ಆದ್ದರಿಂದ ಮೋದಿ ಸರ್ಕಾರದ ಆಡಳಿತಾವಧಿಯ ಕಡೆಯ ವರ್ಷದಲ್ಲಿ ಪ್ರತ್ಯಕ್ಷ ಮತ್ತು ಅಪ್ರತ್ಯಕ್ಷ ತೆರಿಗೆ ಸಂಗ್ರಹದಲ್ಲಿ ರೂ. 1.5 ಲಕ್ಷ ಕೋಟಿ ಕೊರತೆಯಿರುವುದು ಕೇವಲ ಎರಡು ತಿಂಗಳ ಹಿಂದಿನ ಪರಿಷ್ಕೃತ ಅಂದಾಜಿನಲ್ಲಿ ವ್ಯಕ್ತವಾಗಿದೆ. ಈ ಪರಿಷ್ಕೃತ ಅಂದಾಜು ಈ ಹಣಕಾಸು ವರ್ಷಧ ಆರಂಭದ ಅಂದಾಜಿಗಿಂತ 23,000 ಕೋಟಿ ರೂ.ಗಳಷ್ಟು ಕಡಿಮೆಯಿರುವುದರಿಂದ ಒಟ್ಟು ತೆರಿಗೆ ಆದಾಯ ಸಂಗ್ರಹಣೆಯಲ್ಲಿ ಒಟ್ಟು ಕೊರತೆ ಕಮ್ಮಿಯೆಂದರೂ ರೂ. 1.75 ಲಕ್ಷ ಕೋಟಿಗಳಷ್ಟಾಗುತ್ತದೆ.
ಇದು ಒಟ್ಟು ಜಿಡಿಪಿಯ ಶೇ. 1 ಕ್ಕೆ ಹತ್ತಿರ ಇದೆ. ಈ ಮೊತ್ತದ ಪ್ರಮಾಣ ಎಷ್ಟೆಂದರೆ ಇದರಿಂದ ಮೋದಿ ಸರಕಾರ ಅದರ ಕೊನೆಯ ಬಜೆಟಿನಲ್ಲಿ ಸಣ್ಣ ರೈತರಿಗೆಂದು ಪ್ರಕಟಿಸಿದ ವಾರ್ಷಿಕ 6000 ರೂ. ಆದಾಯ ಬೆಂಬಲವನ್ನು ಅವರಿಗೆ ಮಾತ್ರವಲ್ಲ ದೇಶದ ಎಲ್ಲ ಕುಟುಂಬಗಳಿಗೂ ಕೊಡಬಹುದು. ಇನ್ನೊಂದು ರೀತಿಯಲ್ಲಿ ಹೇಳುವುದಾದರೆ ೧೫ ಕೋಟಿ ಕುಟುಂಬಗಳಿಗೆ ಅಂದರೆ ನಮ್ಮ ದೇಶದ ಜನ ಸಂಖ್ಯೆಯ ಅರ್ಧಕ್ಕಿಂತ ಹೆಚ್ಚು ಜನರಿಗೆ ಪ್ರತಿ ತಿಂಗಳು ರೂ. 1000 ದಂತೆ ಒಂದಿಲ್ಲೊಂದು ರೀತಿಯಲ್ಲಿ ಆದಾಯ ಬೆಂಬಲ ಕೊಡಬಹುದಾಗಿತ್ತು. ಕಡಿಮೆ ತೆರಿಗೆ ಸಂಗ್ರಹದಿಂದ ರಾಜ್ಯಗಳ ಪಾಲು ಸಹಿತ ಕಡಿತಗೊಳ್ಳಲಿದೆ. ಇದರೊಂದಿಗೆ ಜಿಎಸ್ಟಿ ತೆರಿಗೆ ಸಂಗ್ರಹದ ಕೊರತೆ ರಾಜ್ಯ ಸರ್ಕಾರಗಳಿಗೆ ತೀವ್ರ ಹೊಡೆತ ನೀಡಲಿದೆ.
2018-19 ರ ತೆರಿಗೆ ಸಂಗ್ರಹದಲ್ಲಿ ಕೊರತೆ ಉಂಟಾಗಿರುವುದರ ಅರ್ಥ, ವಿತ್ತೀಯ ಕೊರತೆ ಅಂದಾಜಿಗಿಂತ ಬಹಳ ಹೆಚ್ಚಿದೆ ಅಥವಾ ಮಾರ್ಚ್ ತಿಂಗಳಲ್ಲಿ ತೀವ್ರ ವೆಚ್ಚಗಳನ್ನು ತೀವ್ರವಾಗಿ ಕಡಿತ ಮಾಡಲಾಗಿದೆ ಎಂದೇ ಆಗುತ್ತದೆ. ಫೆಬ್ರವರಿ ತಿಂಗಳ ವರೆಗಿನ ಆದಾಯ ಮತ್ತು ಖರ್ಚಿನ ಪ್ರವೃತ್ತಿಯನ್ನು ನೋಡಿದಾಗ, ಹಣಕಾಸು ವರ್ಷ ಮುಗಿಯುವ ಒಂದು ತಿಂಗಳ ಹಿಂದೆಯೇ ಬಜೆಟ್ ಅಂದಾಜಿಗಿಂತ ೩೪% ಹೆಚ್ಚಾಗಿರುವುದು, ಅಥವ ಜಿಡಿಪಿಯ 4.5% ರಷ್ಟು ಆಗಿರುವುದು ಕಂಡು ಬರುತ್ತದೆ.
ಈ ಹಿನ್ನೆಲೆಯಲ್ಲಿ, ಮೇ ತಿಂಗಳ ಕೊನೆಯಲ್ಲಿ ಬರಲಿರುವ ಹೊಸ ಸರ್ಕಾರದ ಮುಂದಿರುವ ಸವಾಲೆಂದರೆ ವಿತ್ತೀಯ ಕೊರತೆಯನ್ನು ಜಿಡಿಪಿಯ 3% ಮಿತಿಯಲ್ಲಿಡಬೇಕು ಎಂಬ ಎಫ್ಆರ್ಬಿಎಂ ಕಾಯ್ದೆ ಹೇರಿರುವ ವಿಚಾರಹೀನ ಗೀಳನ್ನು ತ್ಯಜಿಸುವುದು, ಮತ್ತು ಶ್ರೀಮಂತರಿಂದ, ಸಂಪತ್ತುಳ್ಳವರಿಂದ ಹಾಗೂ ಬೃಹತ್ ಉದ್ದಿಮೆಗಳಿಂದ ಮುಲಾಜಿಲ್ಲದೆ ತೆರಿಗೆ ಸಂಗ್ರಹಿಸುವುದು. ಈ ಮೂಲಕ, ತೆರಿಗೆಗಳ್ಳತನ ತಮ್ಮ ದಿಂಬುಗಳ ಅಡಿಯಲ್ಲಿ ನೋಟಿನ ಕಂತೆಗಳನ್ನು ಬಚ್ಚಿಟ್ಟರಿಗಿಂತ ಹೆಚ್ಚಾಗಿ, ಬಹುಪಾಲು ತೆರಿಗೆ ಬಲೆಯಲ್ಲಿರುವವರಿಂದಲೇ ನಡೆಯುತ್ತಿದೆ ಎಂಬುದನ್ನು ಒಪ್ಪಿಕೊಳ್ಳ ಬೇಕಾಗುತ್ತದೆ. ಆದಾಯ ತೆರಿಗೆ ಮತ್ತು ಜಿಎಸ್ಟ್ ಸಂಗ್ರಹದಲ್ಲಿ ಕಂಡು ಬಂದಿರುವ ಪ್ರವೃತ್ತಿ ಕೂಡ ಇಂತಹುದೇ.
ಇದರ ಬದಲಾಗಿ ಹೊಸ ಸರಕಾರಕ್ಕೆ ಇರುವ ಏಕೈಕ ದಾರಿಯೆಂದರೆ, ಒಂದು ತೀವ್ರತರದ ಮಿತವ್ಯಯ ಎಂದು ಹೇಳುವ ದಾರಿ. ಅಂದರೆ ಜನಸಾಮಾನ್ಯರಿಗಾಗಿ ಮಾಡುವ ವೆಚ್ಚಗಳನ್ನು ಕಡಿತಗೊಳಿಸುವುದು. ಕಳೆದ ಒಂದು ದಶಕದಲ್ಲಿ ಬಂದ ಸರಕಾರಗಳು ಇದನ್ನೇ ಅನುಸರಿಸಿವೆ. ಇದು ಜನಸಾಮಾನ್ಯರ ಬದುಕನ್ನು ನರಕಗೊಳಿಸಿರುವ ದಾರಿ. ಮೋದಿ ಸರ್ಕಾರ ಮತ್ತೆ ಬಂದರೆ ಇದೇ ದಾರಿಯನ್ನು ಮುಂದುವರೆಸುತ್ತದೆ ಎಂಬುದು ಖಡಾಖಂಡಿತ.
ಆದ್ದರಿಂದಲೇ, ಜನಸಾಮಾನ್ಯರ ಮೇಲೆ ಇನ್ನೂ ಹೆಚ್ಚಿನ ದಾಳಿಯನ್ನು ತಪ್ಪಿಸಬೇಕಾದರೆ ಈ ಮೋದಿ ಸರ್ಕಾರವನ್ನು ಸೋಲಿಸುವುದು ಆದ್ಯ ಕರ್ತವ್ಯವಾಗಬೇಕು. ಆದರೆ ಪ್ರಶ್ನೆಯಿರುವುದು-ದೇಶಕ್ಕೆ ಒಂದು ನಿಜವಾಗಿಯೂ ಹೊಸ ಸರ್ಕಾರ ಬರುವುದೇ, ಬಲಿಷ್ಟ ಹಿತಾಸಕ್ತಿಗಳನ್ನು ಎದುರಿಸಿ ನಿಲ್ಲಬಲ್ಲ ಮತ್ತು ಜನಪರವಾದ ಒಂದು ಧೀರ ಪರ್ಯಾಯವನ್ನು ಆಯ್ದುಕೊಳ್ಳಬಲ್ಲ ಒಂದು ಮಜಬೂತ್ ಸರಕಾರ ಬರುವುದೇ ಎಂಬುದು.
(ಕೃಪೆ-ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
–ಅನುವಾದ : ಎಂ.ಜಿ.ವೆಂಕಟೇಶ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್ಲೈನ್ ರಸ್ತೆಯಲ್ಲಿ ನಡೆದಿದೆ.
23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.
ಆದರೆ ರಾಜೀವ್ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.
ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.
ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.
ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.
ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ
ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 5.30 ರವರೆಗೆÉ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಮಾಮಾಸ್ ಜಾಯಿಂಟ್ ರಸ್ತೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ.ಬಿ : ಶಾಬನೂರು ರಸ್ತೆ, ಎಸ್.ಎಸ್. ಲೇಔಟ್, ಎ ಬ್ಲಾಕ್, ಕುವೆಂಪು ನಗರ, ಬಾಟ್ಲಿ ಬಿಲ್ಡಿಂಗ್ ಸುತ್ತ ಮುತ್ತ, ಸಿದ್ದವೀರಪ್ಪ ಬಡಾವಣೆ, 1ನೇ ಅಡ್ಡ ರಸ್ತೆ ಯಿಂದ 7ನೇ ಅಡ್ಡರಸ್ತೆವರೆಗೆ, ಗ್ಲಾಸ್ ಹೌಸ್, ಬಾಪೂಜಿ ಬ್ಯಾಂಕ್ ಸಮುದಾಯ ಭವನದ ಹಿಂಭಾಗದ ಪ್ರದೇಶ , ಬಿ.ಐ.ಇ.ಟಿ. ಕಾಲೇಜು ಹಾಗೂ ಸುತ್ತ ಮುತ್ತ ಪ್ರದೇಶಗಳು.
ಮಂಡಿಪೇಟೆ, ಬೆನ್ನೆ ಕಂಪನಿ ರಸ್ತೆ, ಎಮ್ ಜಿ ರಸ್ತೆ, ಎನ್ ಆರ್ ರಸ್ತೆ, ಬೆಲ್ಲೌಡಿಹಲ್ಲಿ, ಮಹಾವೀರ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಬಿ.ಟಿ.: ಮಂಡಕ್ಕಿ ಬಟ್ಟಿ, 1 ರಿಂದ 10 ನೇ ಕ್ರಾಸ್, ಇಂದಿರಾ ನಗರ, ಸಿದ್ದರಾಮೇಶ್ವರ ಬಡಾವಣೆ, ಕಾರ್ಲ್ ಮಾರ್ಸ್ ನಗರ, ಕೋಳಿ ಚನ್ನಪ್ಪ ಬಡಾವಣೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳು, ಮೌನೇಶ್ವರ : ಹೆಚ್.ಕೆ. ಆರ್. ಸರ್ಕಲ್, ಕೆ.ಇ.ಬಿ ಕಾಲೋನಿ, ನಿಟುವಳ್ಳಿ ಹಾಗು ನಿಟುವಳ್ಳಿ ಹೊಸಬಡಾವಣೆ, ಮೌನೇಶ್ವರ ಬಡಾವಣೆ, ಸೈಯದ್ ಪೀರ್ ಬಡಾವಣೆ, ಐ.ಟಿ.ಐ. ರಿಂಗ್ ರಸ್ತೆ, ಜಯನಗರ, ದುರ್ಗಾಂಬಿಕ ದೇವಸ್ಥಾನ ಸುತ್ತಮುತ್ತ.
ಎಸ್.ಎಸ್. ಹೈಟೆಕ್ ಆಸ್ಪತ್ರೆ ರಸ್ತೆ, ಭಗೀರಥ ಸರ್ಕಲ್, ಕಾಳಿಕಾಂಬ ದೇವಸ್ಥಾನ, ಶಕ್ತಿನಗರ, ಹಾಗು ಇ.ಎಸ್.ಐ ಆಸ್ಪತ್ರೆ ಮತ್ತು ಸುತ್ತ ಮುತ್ತಲಿನ ಪ್ರದೇಶಗಳ, ಪಿ.ಬಿ. ರಸ್ತೆ., ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಕೆಟಿಜೆ: ಶ್ರೀ ಮುರಘ ರಾಜೇಂದ್ರ ಸ್ವಾಮಿಗಳ ಮಠ, ಜಾಧವ್ ಕ್ಲಿನಿಕ್ ಸುತ್ತ ಮುತ್ತ , ಶಿವಪ್ಪ ವೃತ್ತದಿಂದ ಜಯದೇವ ವೃತ್ತದವರೆಗೆ ಹಾಗು ಸುತ್ತಮುತ್ತ ಪ್ರದೇಶಗಳು, ಪಿಜೆ: ಪೋಲೀಸ್ ಕ್ವಾಟ್ರಸ್, ತುಂಗ, ಭದ್ರ, ಸರಸ್ವತಿ, ಕೃಷ್ಣ ಬ್ಲಾಕ್, ಅರುಣಾ ಸರ್ಕಲ್ ಮತ್ತು ಸುತ್ತಮುತ್ತಲಿನ ಪ್ರದೇಶಗಳು, ಸಿಜಿಹೆಚ್: ಎಮ್.ಸಿ.ಸಿ. ಎ ಬ್ಲಾಕ್, ನ್ಯಾಯಾಧೀಶರ ವಸತಿ ಗೃಹಗಳು, ತೊಗಟವೀರ ಕಲ್ಯಾಣ ಮಂದಿರ, ವಿನೋಬ ನಗರ 1ನೇ ಮುಖ್ಯ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳು, ಎಸ್.ಎಸ್. ಬಡಾವಣೆ, ಎ ಬ್ಲಾಕ್, ಶಾಂತಿ ನಗರ, ಕುಂದುವಾಡ ರಸ್ತೆ, ಮಹಾನಗರ ಪಾಲಿಕೆ ಕುಡಿಯುವ ನೀರಿನ ಸ್ಥಾವರ, ಬಸವೇಶ್ವರ ಬಡಾವಣೆ, ಮಹಾಲಕ್ಷ್ಮೀ ಬಡಾವಣೆ, ಬಾಲಾಜಿ ನಗರ, ಕುಂದುವಾಡ ಕೆರೆ ಹಾಗು ಸುತ್ತಮುತ್ತ ಪ್ರದೇಶಗಳು.
ಕರೂರು ಇಂಡಸ್ಟ್ರಿಯಲ್ ಏರಿಯಾ, ಡಿ.ಸಿ. ಕಛೇರಿ, ಜಿ.ಎಂ.ಐ.ಟಿ. ಬಸವೇಶ್ವರ ನಗರ, ರಶ್ಮೀ, ಹರಿಹರ ರಸ್ತೆ, ವಿಜಯ ನಗರ, ಅಶೋಕ ನಗರ, ಆರ್.ಟಿ.ಓ. ಕಛೇರಿ, ಎಸ್.ಪಿ. ಕಛೇರಿ, ರಿಂಗ್ ರಸ್ತೆ, ಶಿಬಾರ, ಎಸ್.ಎಂ.ಕೆ. ನಗರ, ಹಾಗೂ ಚಿತ್ತನಹಳ್ಳಿ, ಕಕ್ಕರಗೊಳ್ಳ, ಆವರಗೊಳ್ಳ, ನೀಲನಹಳ್ಳಿ, ದೇವರಹಟ್ಟಿ, ದೊಡ್ಡಬಾತಿ, ಹಳೆಬಾತಿ, ನಾರಾಯಣ ಕ್ಯಾಂಪ್, ಯರಗುಂಟಾ, ಕೋಡಿಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮಾಗಾನಹಳ್ಳಿ, ಮಾಗಾನಹಳ್ಳಿ ಕ್ಯಾಂಪ್, ಓಬಜ್ಜಿಹಳ್ಳಿ, ಓಬಜ್ಜಿಹಳ್ಳಿ ಕ್ಯಾಂಪ್, ಕಡ್ಲೇಬಾಳು, ಹಳೆಕಡ್ಲೆಬಾಳು, ಮಾಳಗೊಂಡನಹಳ್ಳಿ, ಅರಸಾಪುರ, ಬದುನಾಯಕನತಾಂಡ, ಚಿಕ್ಕಓಬಜ್ಜೀಹಳ್ಳಿ, ದೊಡ್ಡಓಬಜ್ಜೀಹಳ್ಳಿ ಹಾಗೂ ಸುತ್ತಮುತ್ತಲಿನ ಗ್ರಾಮಗಳು, ಮ್ಯಾಸರಹಳ್ಳಿ, ಗುಮ್ಮನೂರು, ಹುಣಸೆಕಟ್ಟೆ, ಮುಡೇನಹಳ್ಳಿ, ಕೆಂಚಮ್ಮನಹಳ್ಳಿ, ಹೊಸಹಳ್ಳಿ, ಕಾಟಿಹಳ್ಳಿ.
ಮಂಡಲೂರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಹನುಮನಹಳ್ಳಿ, ಕೊಗ್ಗÀನೂರು, ಹನುಮನಹಳ್ಳಿ, ಆನಗೋಡು, ಹೆಬ್ಬಾಳು, ನೀರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಿಗಿ, ಚಿನ್ನಸಮುದ್ರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಮತ್ತು ಆರಾಧ್ಯಾ ಕೈಗಾರಿಕೆ, ಅತ್ತಿಗೆರೆ, ಕುರ್ಕಿ, ಬಾಡ, ಕಬ್ಬೂರು, ಹೀರೆತೊಗಲೇರಿ, ಗೊಪಾನಾಳು, ಕಂದ್ಗಲ್, ರಾಮಗೊಂಡನಹಳ್ಳಿ, ಕಾಶೀಪುರ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು ಆರ್.ಎಂ.ಸಿ. ಲಿಂಕ್ ರಸ್ತೆ, ಬಿ.ಟಿ. ಲೇಔಟ್, ಗುಜರಿ ಲೈನ್, ಬಂಬೂ ಬಜಾರ್, ಮಟ್ಟಿಕಲ್, ಬಿಡಿಓ ಕಛೇರಿ, ಇಮಾಮ್ ನಗರ, ಅಮರಪ್ಪನ ತೋಟ.
ಆನೆಕೊಂಡ, ಎಲ್.ಬಿ.ಎಸ್. ನಗರ.ಟಿ.ಸಿ. ಲೇಔಟ್, ಬಿಟಿ ಲೇಔಟ್, ಕೆ.ಆರ್. ರಸ್ತೆ, ಇಮಾಮ್ ನಗರ, ಆನೆಕೊಂಡ, ಐನಳ್ಳಿ ಕಾಂಪೌಂಡ್, ಎಪಿಎಂಸಿ, ಭಾರತ್ ಕಾಲೋನಿ, ಶೇಖ್ರಪ್ಪ ನಗರ ಹೆಚ್.ಕೆ.ಆರ್. ನಗರ, ಕಬ್ಬೂರು ಬಸಾಪುರ ನಗರ, ಆಣ್ಣಾ ನಗರ, ಬಸಾಪುರ ರಸ್ತೆ, ಗೋಶಾಲೆ, ಪಿ.ಬಿ. ರಸ್ತೆ, ರವಿ ಮಿಲ್ ಹಾಗೂ ಆವರಗೆರೆ, ಹೊನ್ನೂರು, ಐಗೂರು, ಮಲ್ಲಶೆಟ್ಟಿಹಳ್ಳಿ, ತೊಳಹುಣಸೆ, ದಾವಣಗೆರೆ ವಿಶ್ವವಿದ್ಯಾಲಯ ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ1 day agoನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್ ಆಹ್ವಾನ
-
ದಿನದ ಸುದ್ದಿ22 hours agoಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ
-
ದಿನದ ಸುದ್ದಿ2 days agoದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು
-
ದಿನದ ಸುದ್ದಿ2 days agoಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್

