ರಾಜಕೀಯ
ದಾವಣಗೆರೆ ಮತದಾರ ಹೊಸ ಮುಖ ಬಯಸಿದ್ರೆ ‘ಹೊನ್ನಾಳಿ ಹೊಡೆತ’ ಗ್ಯಾರೆಂಟಿ.. !
ಸುದ್ದಿದಿನ,ದಾವಣಗೆರೆ: ನಿರಂತರ ಮೂರು ಸೋಲು, ಮೂರು ಗೆಲುವಿಗೆ ವೇದಿಕೆಯಾದ ದಾವಣಗೆರೆ ಲೋಕಸಭಾ ಕ್ಷೇತ್ರ, ಇದೀಗ ಹೊಸ ಮುಖ ಬಯಸಿದರೆ ರಾಜ್ಯದ ಜನತೆಗೆ ‘ಹೊನ್ನಾಳಿ ಹೊಡೆತ’ ಇನ್ನಷ್ಟು ಮುನ್ನೆಲೆಗೆ ಬರುವ ಸಾಧ್ಯತೆ ಇದೆ.
ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ ಹ್ಯಾಟ್ರಿಕ್ ಸಾಧಿಸಿದ್ದು, ಇದೀಗ ನಾಲ್ಕನೇ ಬಾರಿಗೆ ಆಯ್ಕೆ ಬಯಸಿರುವ ಜಿಎಂ ಸಿದ್ದೇಶ್ವರ್ ಅವರಿಗೆ ಸಾಂಪ್ರದಾಯಿಕ ಎದುರಾಳಿ ಎಸ್ ಎಸ್ ಮಲ್ಲಿಕಾರ್ಜನ್ ಕಣದಲ್ಲಿ ಇಲ್ಲ. ಕಳೆದ ಮೂರು ಭಾರಿ ಆಯ್ಕೆಯಲ್ಲೂ ಅಲೆಗಳ ಮೇಲೆ ಗೆದ್ದವರು ಎನ್ನುವುದು ಜನಜನಿತ. ಒಮ್ಮೆ ತಂದೆಯ ಸಾವಿನ ಅನುಕಂಪದ ಅಲೆ, ಇನ್ನೊಮ್ಮೆ ಬಿಜೆಪಿ ರಾಜ್ಯಾಧ್ಯಕ್ಷ ಯಡ್ಡಿಯೂಪ್ಪ ಅವರ ಅಲೆ ಹಾಗೂ ಮೂರನೇ ಬಾರಿ ಪ್ರಧಾನಿ ಮೋದಿಯವರ ಅಬ್ಬರದ ಅಲೆಯಲ್ಲಿ ಹ್ಯಾಟ್ರಿಕ್ ಮಾಡಿದರು. ಅಲ್ಲದೆ ಕೇಂದ್ರ ಸಚಿವರು ಆಗಿದ್ದರು. ಅಷ್ಟೇ ಬೇಗ ಸ್ಥಾನವನ್ನೂ ಕಳೆದುಕೊಂಡರು ಎನ್ನುವುದು ಈಗ ಇತಿಹಾಸ. ಆದರೆ, ಇದೀಗ ನಾಲ್ಕನೇ ಬಾರಿಯೂ ಜನ ಕೈ ಹಿಡಿಯುವ ಸಾಧ್ಯತೆ ಕಡಿಮೆ ಎನ್ನುವ ಉದ್ದೇಶದಿಂದ ಹಳ್ಳಿ ಸುತ್ತಿದ್ದಾರೆ. ಅಬ್ಬರದ ಪ್ರಚಾರವೂ ಕೈಗೊಂಡಿದ್ದಾರೆ.
ಎಸ್. ಎಸ್. ಮಲ್ಲಿಕಾರ್ಜುನ್ ಕಣದಿಂದ ಹಿಂದಕ್ಕೆ
ಮೂರು ಬಾರಿ ಹ್ಯಾಟ್ರಿಕ್ ಸೋಲಿಂದ ಧೃತಿಗೆಡದೆ ಕೊನೆ ಪ್ರಯತ್ನಕ್ಕೆ ಮುಂದಾದ ಎಸ್ ಎಸ್ ಎಂ ಕೊನೆ ಕ್ಷಣದಲ್ಲಿ ಕಾಂಗ್ರೆಸ್ ಪಕ್ಷದ ಜಿಲ್ಲಾಧ್ಯಕ್ಷ, ಅವರ ಆಪ್ತ ಎಚ್ ಬಿ ಮಂಜಪ್ಪ ಅವರನ್ನು ಕಣಕ್ಕೆ ಇಳಿಸುವಲ್ಲಿ ಯಶಸ್ವಿಯಾಗಿದ್ದಾರೆ. ಆದರೆ, ಇತ್ತ ಸಿದ್ದೇಶ್ವರ್ ನನಗೆ ಪೈಪೋಟಿ ನೀಡುವ ಎದುರಾಳಿ ಇಲ್ಲ, ಎಸ್ ಎಸ್ ಎಂ ಎದುರಾಳಿಯಾಗಬಹುದು ಎನ್ನುವ ನಿರೀಕ್ಷೆಯಲ್ಲಿ ಊರು ಸುತ್ತಿದ್ದು ನಷ್ಟವಾಯಿತು ಎನ್ನುವಂತ ಸ್ಥಿತಿಗೆ ಬಂದಿದ್ದು ಸುಳ್ಳಲ್ಲ.
ಹೊನ್ನಾಳಿ ಹೊಡೆತ ?
ಅತಿಯಾದ ಆತ್ಮವಿಶ್ವಾಸದಿಂದ ಒಂದು ಹಂತದಲ್ಲಿ ಸುತ್ತಾಟ ಕಡಿಮೆ ಮಾಡಿದ ಬಿಜೆಪಿ ಅಭ್ಯರ್ಥಿಗೆ ಎಚ್ ಬಿ ಮಂಜಪ್ಪ ಸುತ್ತಾಟ, ಅವರ ತಂತ್ರ, ಮೈತ್ರಿ ಧರ್ಮ, ಅಹಿಂದ ಸಂಘಟನೆ ರಾಜಕೀಯ ವಿಶ್ಲೇಷಕರು, ಇಂಟಲಿಜೆನ್ಸ್ ವರದಿಗಳು ಹೊನ್ನಾಳಿ ಹೊಡೆತದ ಸೂಚನೆ ನೀಡಿದ್ದು ಮತ್ತೆ ಪ್ರಚಾರ ಚುರುಕುಗೊಳಿಸುವಂತೆ ಮಾಡಿದೆ.
ಮಂಜಪ್ಪ ಕಡಿಮೆ ಅವಧಿಯಲ್ಲಿ ಜಿಲ್ಲಾದ್ಯಂತ ಪ್ರವಾಸ ಮಾಡುವುದನ್ನೆ ಸವಾಲಾಗಿ ಸ್ವೀಕರಿದ್ದಾರೆ. ಇನ್ನು ಟಿಕೆಟ್ ಘೋಷಣೆ ಆರಂಭದಿಂದಲೇ ಹಣ ಬಲದ ವಿರುದ್ಧ ಬಡವನ ಹೋರಾಟ, ಅಹಿಂದ, ಮೈತ್ರಿ ತಂತ್ರದಡಿ ಅಲ್ಪಸಂಖ್ಯಾತ, ಹಿಂದುಳಿದ ದಲಿತ ಸಮುದಾಯಗಳ ವಿಶ್ವಾಸಕ್ಕೆ ಪಡೆಯುವ ನಿರಂತರ ಪ್ರಯತ್ನ ನಡೆಸುತ್ತಿದ್ದಾರೆ.
ಹರಿಹರದಲ್ಲಿ ಮಾಜಿ ಶಾಸಕ ಎಚ್ ಎಸ್ ಶಿವಶಂಕರ್, ಹಾಲಿ ಶಾಸಕ ರಾಮಪ್ಪ ಒಂದೇ ವೇದಿಕೆಯಲ್ಲಿ ಸುತ್ತಾಡುತ್ತಿದ್ದಾರೆ. ಹರಪನಹಳ್ಳಿಯಲ್ಲಿ ಜೆಡಿಎಸ್ ಮುಖಂಡ ಕೊಟ್ರೇಶ್, ದಿ. ಎಂಪಿ ರವೀಂದ್ರ ಅಭಿಮಾನಿಗಳು, ಜಗಳೂರಲ್ಲಿ ಎಚ್ ಪಿ ರಾಜೇಶ್, ಮೈತ್ರಿ ಟೀಮ್, ಚನ್ನಗಿರಿಯಲ್ಲಿ ವದ್ದಿಗೆರೆ ರಮೇಶ್, ವಡ್ನಾಳ್ ರಾಜಣ್ಣ, ಮಯಕೊಂಡದಲ್ಲಿ ಬಸವಂತಪ್ಪ, ಹೊನ್ನಾಳಿಯಲ್ಲಿ ಶಾಂತನಗೌಡ್ರು ಹಾಗೂ ಮೈತ್ರಿ ಟೀಮ್ ಹಾಗೂ ಸ್ಥಳೀಯ ಎನ್ನುವ ತಂತ್ರ ಪ್ರಯೋಗ ಮಾಡಲಾಗುತ್ತಿದೆ. ಸಿದ್ದೇಶ್ವರ್ ಹೊರಗಿನವರು, ಮಂಜಪ್ಪ ಸ್ಥಳೀಯ ಎನ್ನುವ ವಿಷಯ ಮುನ್ನೆಲೆಗೆ ಬಂದಿದೆ. ಸಿದ್ದೇಶ್ವರ್ ಗೆ ೧೫ ವರ್ಷ ಅಧಿಕಾರ ಕೊಟ್ಟಿದ್ದೀರಿ. ಈ ಬಾರಿ ಸ್ಥಳೀಯ ಮಂಜಪ್ಪನಿಗೆ ಅವಕಾಶ ಮಾಡಿಕೊಡುವಂತೆ ಒತ್ತಿ ಒತ್ತಿ ಪ್ರಚಾರ ಮಾಡಲಾಗುತ್ತಿದೆ.
ಮಂಜಪ್ಪ ಸಹಿತ ಮೈತ್ರಿ ತಂಡ ತಾಲೂಕುವಾರು ಸುತ್ತಾಟ ಮಾಡುತ್ತಿದ್ದರೆ, ಇತ್ತ ಎಸ್ ಎಸ್ ಎಂ, ಎಸ್ಎಸ್ ದಾವಣಗೆರೆ ನಗರದಲ್ಲಿ ಆಯ್ದ ಗ್ರಾಮಗಳಲ್ಲೂ ರೋಡ್ ಶೋ ಮಾಡುತ್ತಿದ್ದಾರೆ. ಕಾರ್ಮಿಕ ಮುಖಂಡ ಎಚ್ ಕೆ ರಾಮಚಂದ್ರಪ್ಪ, ಜೆಡಿಎಸ್ ಗುಡ್ಡಪ್ಪ, ಅಲ್ಪಸಂಖ್ಯಾತ ಸಮುದಾಯದ ಮುಖಂಡರು, ಅಹಿಂದ ಮುಖಂಡರು ಪ್ರಚಾರದಲ್ಲಿ ತೊಡಗಿದ್ದಾರೆ. ಇನ್ನು ದಾವಣಗೆರೆ ಮಹಾನಗರ ಪಾಲಿಕೆ ಸದಸ್ಯರು ವಾರ್ಡವಾರು, ತಮ್ಮ ಭೂತ್ ಮಟ್ಟದಲ್ಲಿ ಸಕ್ರಿಯವಾಗಿರುವುದು ಎದುರಾಳಿ ನಿದ್ದೆ ಕೆಡಿಸುವಂತಾಗಿದೆ.
ಮತದಾರರೇ ಹಣ ಕೊಟ್ರು…!
ಮಂಜಪ್ಪ ಊರು ಸುತ್ತಲು ವಾಹನ ವ್ಯವಸ್ಥೆ, ಚುನಾವಣಾ ಖರ್ಚಿಗೆ ಮತದಾರರೇ ಹಣ ನೀಡುತ್ತಿರುವುದು ಇನ್ನೊಂದು ವಿಶೇಷವಾಗಿದ್ದು, ಬಿಜೆಪಿಯಲ್ಲಿ ಹಣದ ಕೊರತೆ ಇಲ್ಲ, ಆದರೆ, ದೂರವಿದ್ದ ನಾಯಕರು ಮುನ್ನೆಲೆಗೆ ಬಂದಿದ್ದಾರೆ. ಮಂಜಪ್ಪ ಅಭ್ಯರ್ಥಿ ಆದ ಕೂಡಲೇ ಅದೇ ಸಮಾಜ ಹಾಗೂ ಅಹಿಂದ ಮುಖಂಡರಾದ ಬಿ ಎಂ ಸತೀಶ್, ಜಯಪ್ರಕಾಶ್, ಲಿಂಗರಾಜ್, ಶಿವಕುಮಾರ್ ರಂಥ ಆನೇಕರು ಮುನ್ನೆಲೆಗೆ ಬರುತ್ತಿದ್ದಾರೆ. ಒಟ್ಟಾರೆ ಏಕಮುಖವಾದ ಕಣ ಇದೀಗ ನೇರ ಹಣಾಹಣಿಯಾಗಿದೆ. ಬಿಜೆಪಿ, ಕಾಂಗ್ರೆಸ್ ಯಾರೇ ಗೆದ್ದರೂ ಅಲ್ಪ ಅಂತರವಷ್ಟೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ
ಸುದ್ದಿದಿನಡೆಸ್ಕ್:ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರು ಪರಿಶೀಲಿಸುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್ ಮೇಘವಾಲ್ ಸ್ಪಷ್ಟಪಡಿಸಿದ್ದಾರೆ.
ಭಾರತೀಯ ದಂಡ ಸಂಹಿತೆ 1860, ಭಾರತೀಯ ಸಾಕ್ಷ್ಯ ಕಾಯ್ದೆ 1872 ಮತ್ತು ಅಪರಾಧ ಪ್ರಕ್ರಿಯಾ ಸಂಹಿತೆ 1973 ಅನ್ನು ಬದಲಿಸುವ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ಅವರು ಹೇಳಿದ್ದಾರೆ. ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೊಸ ಕ್ರಿಮಿನಲ್ ಕಾನೂನುಗಳು ಜುಲೈ 1 ರಿಂದ ಜಾರಿಗೆ ಬರಲಿವೆ ಎಂದು ತಿಳಿಸಿದ್ದಾರೆ.
“ಐಪಿಸಿ, ಸಿಆರ್ಪಿಸಿ ಹಾಗೂ ಭಾರತೀಯ ಸಾಕ್ಷ್ಯ ಕಾಯ್ದೆಗಳು ಬದಲಾಗುತ್ತಿವೆ. ಸೂಕ್ತ ಸಮಾಲೋಚನೆ ಪ್ರಕ್ರಿಯೆ ಅನುಸರಣೆ ಹಾಗೂ ಕಾನೂನು ಆಯೋಗದ ವರದಿಗಳನ್ನು ಗಮನದಲ್ಲಿಟ್ಟುಕೊಂಡು ಈ ಮೂರು ಕಾನೂನುಗಳನ್ನು ಬದಲಾಯಿಸಲಾಗಿದೆ” ಎಂದು ಮೇಘವಾಲ್ ತಿಳಿಸಿದರು.”
ಈ ಮೂರು ಕಾನೂನುಗಳನ್ನು ಜುಲೈ 1 ರಿಂದ ಭಾರತೀಯ ನ್ಯಾಯ್ ಸಂಹಿತಾ, ಭಾರತೀಯ ಸುರಕ್ಷಾ ಸಂಹಿತಾ ಮತ್ತು ಭಾರತೀಯ ಸಾಕ್ಷ್ಯ ಅಧಿನಿಯಮ್ ಎಂಬ ಹೆಸರಿನಲ್ಲಿ ಜಾರಿಗೆ ತರಲಾಗುವುದು. ಮೂರು ಹೊಸ ಕಾನೂನುಗಳ ತರಬೇತಿ ಸೌಲಭ್ಯಗಳನ್ನು ಎಲ್ಲಾ ರಾಜ್ಯಗಳಿಗೂ ಒದಗಿಸಲಾಗುತ್ತಿದೆ” ಎಂದು ಮೇಘವಾಲ್ ವಿವರಿಸಿದ್ದಾರೆ.”
ನಮ್ಮ ನ್ಯಾಯಾಂಗ ಅಕಾಡೆಮಿಗಳು, ರಾಷ್ಟ್ರೀಯ ಕಾನೂನು ವಿಶ್ವವಿದ್ಯಾಲಯಗಳು ಸಹ ಈ ಬಗ್ಗೆ ತರಬೇತಿ ನೀಡುತ್ತಿವೆ. ಎಲ್ಲವೂ ಜೊತೆಜೊತೆಯಾಗಿ ಸಾಗುತ್ತಿದೆ ಮತ್ತು ಜುಲೈ 1 ರಿಂದ, ಕ್ರಿಮಿನಲ್ ನ್ಯಾಯ ವ್ಯವಸ್ಥೆಗೆ ನಿರ್ಣಾಯಕವಾದ ಈ ಎಲ್ಲಾ ಮೂರು ಕಾನೂನುಗಳನ್ನು ದೇಶದಲ್ಲಿ ಜಾರಿಗೆ ತರಲಾಗುವುದು” ಎಂದು ಅವರು ಸ್ಪಷ್ಟಪಡಿಸಿದರು.
ದೇಶದಲ್ಲಿ ಅಪರಾಧ ನ್ಯಾಯ ಸುಧಾರಣೆಯು ದೇಶದ ನ್ಯಾಯದಾನ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಯನ್ನು ಇದು ಸೂಚಿಸುತ್ತದೆ. ಮಹಿಳೆಯರು, ಮಕ್ಕಳು ಮತ್ತು ರಾಷ್ಟ್ರದ ವಿರುದ್ಧದ ಅಪರಾಧಗಳನ್ನು ಇದು ಮುಂಚೂಣಿಯಲ್ಲಿರಿಸುತ್ತದೆ. ಅಲ್ಲದೆ ಇದು ವಸಾಹತುಶಾಹಿ ಯುಗದ ಕಾನೂನುಗಳಿಗೆ ಸಂಪೂರ್ಣವಾಗಿ ವಿರುದ್ಧವಾಗಿದೆ ಎಂದು ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ; ವ್ಯಾಪಕ ಟೀಕೆ
ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ.
ರಾಜ್ಯ ಸರ್ಕಾರ ಮೊನ್ನೆಯಿಂದ ಜಾರಿಗೆ ಬರುವಂತೆ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಮಾರಾಟ ತೆರಿಗೆಯನ್ನು ಹೆಚ್ಚಿಸಿದ ನಂತರ ರಾಜ್ಯದಲ್ಲಿ ಪ್ರತಿ ಲೀಟರ್ ಪೆಟ್ರೋಲ್ ದರ 3 ರೂಪಾಯಿ ಹಾಗೂ ಡೀಸೆಲ್ 3.5 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ. ಪ್ರತಿ ಕುಟುಂಬದ ಮಹಿಳೆಗೆ ತಿಂಗಳಿಗೆ 8 ಸಾವಿರದ 500 ರೂಪಾಯಿಗಳನ್ನು ವರ್ಗಾವಣೆ ಮಾಡುವ ಭರವಸೆಯನ್ನು ಈಡೇರಿಸುವ ಬದಲು, ಕಾಂಗ್ರೆಸ್ ಆಡಳಿತದ ಕರ್ನಾಟಕ ಸರ್ಕಾರವು, ರಾಜ್ಯದ ಜನರಿಗೆ ಹೊರೆಯಾಗಿದೆ ಎಂದು ಹರ್ದೀಪ್ ಸಿಂಗ್ ಪುರಿ ಸಾಮಾಜಿಕ ಜಾಲತಾಣದಲ್ಲಿ ದೂರಿದ್ದಾರೆ. ಇಂತಹ ನಿರ್ಧಾರ ಹಣದುಬ್ಬರದ ಬಗ್ಗೆ ಮಾತನಾಡುವ ಕಾಂಗ್ರೆಸ್ನ ಬೂಟಾಟಿಕೆ ಬಹಿರಂಗಪಡಿಸುತ್ತದೆ. ಆದರೆ ಬಿಜೆಪಿ ಆಡಳಿತವಿರುವ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದ ಕಾಂಗ್ರೆಸ್ ಸರ್ಕಾರ ಪ್ರತಿ ಲೀಟರ್ಗೆ ಸುಮಾರು 8 ರೂಪಾಯಿಗಳಿಂದ 12 ರೂಪಾಯಿಗಳಷ್ಟು ಹೆಚ್ಚುವರಿ ವ್ಯಾಟ್ ಅನ್ನು ವಿಧಿಸುತ್ತಿದೆ ಎಂದು ಸಚಿವರು ಆರೋಪಿಸಿದ್ದಾರೆ.
ಈ ವಿಚಾರದ ಕುರಿತು ಪ್ರತಿಕ್ರಿಯಿಸಿರುವ ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರಗಳ ಖಾತೆ ಸಚಿವ ಪ್ರಲ್ಹಾದ್ ಜೋಶಿ, ರಾಜ್ಯ ಸರ್ಕಾರ ಮುಂದಾಲೋಚನೆ ಇಲ್ಲದೇ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದು, ಈಗ ಆರ್ಥಿಕ ಹೊರೆ ತಡೆಯಲು ಪೆಟ್ರೋಲ್ ಡಿಸೇಲ್ ಬೆಲೆ ಏರಿಕೆ ಮಾಡಿದೆ ಎಂದು ಹುಬ್ಬಳ್ಳಿಯಲ್ಲಿ ಆರೋಪಿಸಿದ್ದಾರೆ.
ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯಿಂದ ಬಸ್ ದರ, ಹಾಲಿನ ದರ, ಅಗತ್ಯ ವಸ್ತುಗಳ ದರ ಹೆಚ್ಚಲಿದೆ ಎಂದು ಕಳವಳ ವ್ಯಕ್ತಪಡಿಸಿದ್ದಾರೆ. ರಾಜ್ಯದಲ್ಲಿ ಆಡಳಿತದ ವ್ಯವಸ್ಥೆ ಕುಸಿದುಹೋಗಿದೆ ಎಂದು ದೂರಿದ ಅವರು, ಕಾಂಗ್ರೆಸ್ ಸರ್ಕಾರದ ವಿರುದ್ಧ ತೀವ್ರ ಹೋರಾಟ ನಡೆಸಲಾಗುವುದು ಎಂದು ಪ್ರಲ್ಹಾದ್ ಜೋಶಿ ಎಚ್ಚರಿಕೆ ನೀಡಿದ್ದಾರೆ.
ಮತ್ತೊಂದೆಡೆ, ರಾಜ್ಯದಲ್ಲಿ ಪೆಟ್ರೋಲ್, ಡಿಸೇಲ್ ದರ ಏರಿಕೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮರ್ಥಿಸಿಕೊಂಡಿದ್ದಾರೆ. ವ್ಯಾಟ್ ಹೆಚ್ಚಳ ಬಳಿಕ ದಕ್ಷಿಣ ಭಾರತದ ರಾಜ್ಯಗಳಿಗಿಂತ ಕರ್ನಾಟಕದಲ್ಲಿಯೇ ದರ ಕಡಿಮೆ ಇದೆ. ಆರ್ಥಿಕವಾಗಿ ಬಲಿಷ್ಠವಾಗಿರುವ ಮಹಾರಾಷ್ಟ್ರಕ್ಕಿಂತಲ್ಲೂ ಹಾಗೂ ಗುಜರಾತ್ ಮತ್ತು ಮಧ್ಯಪ್ರದೇಶಕ್ಕಿಂತಲ್ಲೂ ನಮ್ಮ ರಾಜ್ಯದಲ್ಲಿ ದರ ಕಡಿಮೆ ಇದೆ ಎಂದು ಹೇಳಿದ್ದಾರೆ.
ಈ ಹಿಂದಿನ ಬಿಜೆಪಿ ಸರ್ಕಾರ ತೆರಿಗೆ ಕಡಿಮೆ ಮಾಡಿದ್ದರೂ, ಕೇಂದ್ರ ಸರ್ಕಾರ ಪದೇ ಪದೆ ವ್ಯಾಟ್ ಹೆಚ್ಚಳ ಮಾಡಿತ್ತು ಎಂದು ಆರೋಪಿಸಿದ್ದಾರೆ. ರಾಜ್ಯದ ತೆರಿಗೆ ಹೆಚ್ಚಳದಿಂದ ಅಭಿವೃದ್ಧಿ ಕೆಲಸಗಳಿಗೆ ಹೆಚ್ಚು ಒತ್ತು ನೀಡಲಾಗುವುದು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ನೀಟ್ ಪರೀಕ್ಷೆಯಲ್ಲಿ ಕೃಪಾಂಕ ನೀಡಿಕೆ ನಿಲ್ಲಬೇಕು : ಸಿಎಂ ಸಿದ್ದರಾಮಯ್ಯ ಒತ್ತಾಯ
ಸುದ್ದಿದಿನಡೆಸ್ಕ್:ಈ ಬಾರಿ ನಡೆದ ನೀಟ್ ಪರೀಕ್ಷೆಯಲ್ಲಿ ಕೃಪಾಂಕಗಳನ್ನು ನೀಡುವ ಮೂಲಕ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದೆ. ಕೃಪಾಂಕ ನೀಡಿಕೆ ಪದ್ಧತಿಯನ್ನು ನಿಲ್ಲಿಸಿ ವಿದ್ಯಾರ್ಥಿಗಳಿಗೆ ನ್ಯಾಯ ದೊರಕಿಸಿಕೊಡಬೇಕಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಮೈಸೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಕುರಿತು ಕೇಂದ್ರ ಸರ್ಕಾರಕ್ಕೆ ಈಗಾಗಲೇ ಪತ್ರ ಬರೆಯಲಾಗಿದೆ ಎಂದರು. ರಾಜ್ಯದಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿಗಳ ಪ್ರವೇಶ ಶುಲ್ಕ ಕಡಿಮೆಗೊಳಿಸುವ ಚಿಂತನೆ ನಡೆಸಲಾಗುತ್ತಿದೆ ಎಂದು ಅವರು ಹೇಳಿದರು. ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ವೇದಿಕೆ ಸಜ್ಜಾಗಿದ್ದು, ಸದ್ಯದಲ್ಲೇ ಚುನಾವಣೆ ನಡೆಸಲಾಗುವುದೆಂದು ಮುಖ್ಯಮಂತ್ರಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ6 days ago
ಕೊಲೆ ಕೇಸ್ ; ನಾಳೆ ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಪ್ರತಿಭಟನೆ
-
ದಿನದ ಸುದ್ದಿ7 days ago
ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ7 days ago
ಮಸ್ಕಿ | ಬಿಜೆಪಿ ಕಚೇರಿಯಲ್ಲಿ ಆತ್ಮಾವಲೋಕನ ಸಭೆ
-
ದಿನದ ಸುದ್ದಿ6 days ago
ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್ ಇನ್ನಿಲ್ಲ
-
ದಿನದ ಸುದ್ದಿ6 days ago
ಭಾರೀ ಮಳೆ ; ಡ್ಯಾಂಗಳಿಗೆ ಹರಿದು ಬಂದ ನೀರೆಷ್ಟು..? ಇಲ್ಲಿದೆ ಸಂಪೂರ್ಣ ಮಾಹಿತಿ
-
ಅಂತರಂಗ5 days ago
ದಾವಣಗೆರೆ | ಪ್ರೊ. ಎಸ್.ಬಿ. ರಂಗನಾಥ್ ಅವರಿಗೆ ಕೇಂದ್ರ ಕ ಸಾ ಪ ದತ್ತಿ ಪ್ರಶಸ್ತಿ ಪ್ರದಾನ
-
ದಿನದ ಸುದ್ದಿ5 days ago
ನಕಲಿ ವೈದ್ಯರ ಹಾವಳಿಗೆ ಬ್ರೇಕ್ ಹಾಕಲು ಸರ್ಕಾರ ಕಟ್ಟುನಿಟ್ಟಿನ ಕ್ರಮ
-
ದಿನದ ಸುದ್ದಿ7 days ago
SC – ST | ಕುರಿ,ಮೇಕೆ ಹಾಗೂ ಕೋಳಿ ಸಾಕಾಣಿಕೆ ತರಬೇತಿ