ದಿನದ ಸುದ್ದಿ
ಕರ್ನಾಟಕ ಬಸವಣ್ಣ, ಸರ್ವಜ್ಞ, ಕನಕದಾರಸ ಪುಣ್ಯನೆಲ, ಇಲ್ಲಿ ಕೋಮುವಾದಿಗಳು ಬೇರೂರಲು ಬಿಡಬೇಡಿ : ಸಿದ್ದರಾಮಯ್ಯ ಮನವಿ
ಸುದ್ದಿದಿನ, ಬಾಗಲಕೋಟೆ : ಕೋಮುಗಲಭೆ ಸೃಷ್ಟಿಸುವವರಿಗೆ, ದಲಿತ ವಿರೋಧಿಗಳಿಗೆ, ಬಾಂಬು ಹಾಕಿ ಅಮಾಯಕರನ್ನು ಕೊಲ್ಲುವವರಿಗೆ ಬಿಜೆಪಿ ಟಿಕೆಟ್ ಸಿಗುತ್ತದೆ ಎಂಬುದು ಮತ್ತೆ ಸಾಬೀತಾಗಿದೆ. ಮಾಲೆಗಾಂವ್ ಸ್ಪೋಟದ ಪ್ರಮುಖ ಆರೋಪಿಗೆ ಬಿಜೆಪಿ ಟಿಕೆಟ್ ನೀಡಿರುವುದರ ಹಿಂದಿನ ಉದ್ದೇಶವಾದರೂ ಏನು? ಇದರಿಂದ ಸಮಾಜಕ್ಕೆ ಅವರು ನೀಡುವ ಸಂದೇಶವಾದರೂ ಏನು? ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದರು.
ಭಾನುವಾರ ಬಾಗಲಕೋಟೆ ಲೋಕಸಭಾ ಕ್ಷೇತ್ರದ ಹುನಗುಂದದಲ್ಲಿ ಆಯೋಜಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಭಾಗವಹಿಸಿ, ವೀಣಾ ಕಾಶಪ್ಪನವರ್ ಅವರಿಗೆ ಮತ ನೀಡುವಂತೆ ಕೋರಿದ ಅವರು, ಕರ್ನಾಟಕ ಬಸವಣ್ಣ, ಸರ್ವಜ್ಞ, ಕನಕದಾಸರಂತಹ ಪುಣ್ಯಪುರುಷರ ನೆಲ. ಸೌಹಾರ್ದತೆಯ ಈ ನಾಡಿನಲ್ಲಿ ಕೋಮುವಾದಿಗಳನ್ನು ಬೇರೂರಲು ಬಿಡಬೇಡಿ ಎಂದು ಜನರಲ್ಲಿ ಮನವಿ ಮಾಡುತ್ತೇನೆ ಎಂದರು.
ಬಿಜೆಪಿಯವರು ಸಾಮಾಜಿಕ ನ್ಯಾಯದ ವಿರೋಧಿಗಳು. ಅವರ ‘ಸಬ್ ಕಾ ಸಾಥ್ ಸಬ್ ಕ ವಿಕಾಸ್’ ಬರಿ ಘೋಷಣೆಗಷ್ಟೇ ಸೀಮಿತ. ಅವರಿಗೆ ಸರ್ವರ ಅಭಿವೃದ್ಧಿಯ ನಿಜಕಾಳಜಿ ಇದ್ದಿದ್ದರೆ ಕರ್ನಾಟಕದಲ್ಲಿ ಒಬ್ಬನೇ ಒಬ್ಬ ಹಿಂದುಳಿದ ವರ್ಗದ ಅಥವಾ ಅಲ್ಪಸಂಖ್ಯಾತ ಸಮುದಾಯದ ವ್ಯಕ್ತಿಗೆ ಟಿಕೆಟ್ ನೀಡುತ್ತಿರಲಿಲ್ಲವೇ? ಕೇವಲ ಘೋಷಣೆಗಳಿಂದ ಈ ಸಮುದಾಯ ಅಭಿವೃದ್ಧಿ ಸಾಧ್ಯವೇ? ಎಂದು ಪ್ರಶ್ನಿಸಿದರು.
ಕೇಂದ್ರದಲ್ಲಿ ಅವರದೇ ಬಿಜೆಪಿ ಸರ್ಕಾರ ಕೊನೆಯ ದಿನಗಳನ್ನು ಎಣಿಸುತ್ತಿದೆ, ಇತ್ತ ರಾಜ್ಯ ಬಿಜೆಪಿ ನಾಯಕರು ಕರ್ನಾಟಕದಲ್ಲಿ ಸರ್ಕಾರ ರಚಿಸುವ ಭ್ರಮೆಯಲ್ಲಿದ್ದಾರೆ. ನರೇಂದ್ರ ಮೋದಿಯವರು ತಮ್ಮ ರಾಜಕೀಯ ವಿರೋಧಿಗಳ ಮೇಲೆ ಐಟಿ ದಾಳಿ ಮಾಡಿಸುವ ಬದಲು, ಶಾಸಕರ ಖರೀದಿಗೆ ಕಾದು ಕುಳಿತಿರುವ ರಾಜ್ಯ ಬಿಜೆಪಿ ನಾಯಕರ ಮನೆ ಮೇಲೆ ದಾಳಿ ಮಾಡಿಸಲಿ ಎಂದು ಸವಾಲು ಹಾಕಿದರು.
ರಾಹುಲ್ ಗಾಂಧಿಯವರು ನುಡಿದಂತೆ ನಡೆದು 5 ರಾಜ್ಯಗಳ ರೈತರ ಸಾಲ ಮನ್ನಾ ಮಾಡಿದ್ದಾರೆ. ನಮ್ಮ ಗರೀಬಿ ಹಠಾವೋ ಘೋಷಣೆ ಭಾಷಣಕ್ಕಷ್ಟೇ ಸೀಮಿತವಲ್ಲ. ನುಡಿದಂತೆ ನಡೆಯುವವರು ನಾವು. ಕೇಂದ್ರದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ ಪ್ರತಿ ಬಡಕುಟುಂಬಕ್ಕೆ ವಾರ್ಷಿಕ ರೂ.72,000 ನೀಡುತ್ತೇವೆ. ಇದರಿಂದ ದೇಶದ ಬಡತನವೂ ನಿರ್ಮೂಲನೆಯಾಗಲಿದೆ ಎಂದು ವಿಶ್ವಾಸ ನೀಡಿದರು.
ಜಿಲ್ಲೆಗೆ ಬೆಂಕಿ ಹಚ್ಚುತ್ತೇನೆ ಎನ್ನುವವರು, ಪೊಲೀಸ್ ಬ್ಯಾರಿಕೇಡ್ ಮುರಿಯುವವರು, ಹುತಾತ್ಮ ಪೊಲೀಸರನ್ನು ಅವಮಾನಿಸುವವರನ್ನು ಇಟ್ಟುಕೊಂಡು ಬಿಜೆಪಿ ದೇಶ ಪ್ರೇಮದ ನಾಟಕವಾಡುತ್ತಿದೆ. ಹಾಗಾಗಿ ಜನತೆ ವಿವೇಚನೆಯಿಂದ ಮತ ಚಲಾಯಿಸಬೇಕು. ದುಷ್ಟರ ಕೈಯಲ್ಲಿ ಅಧಿಕಾರ ಕೊಟ್ಟು ಪರಿತಪಿಸುವ ಬದಲು, ರಾಷ್ಟ್ರ ಕಟ್ಟುವ ಕಾಂಗ್ರೆಸ್ ಕೈಯನ್ನು ಬೆಂಬಲಿಸಿ ಎಂದು ಕರೆ ಕೊಟ್ಟರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ ನಡೆದ ಕೊಲೆಗಳೆಷ್ಟು ? ಅತ್ಯಾಚಾರಗಳೆಷ್ಟು ಗೊತ್ತಾ?
ಸುದ್ದಿದಿನ ಡೆಸ್ಕ್ : ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಹಾದಿ ಬೀದಿಯಲ್ಲಿ ಹತ್ಯೆಗಳು ಆಗುತ್ತಿವೆ. ಬೆಂಗಳೂರು ನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ.
ಕಳೆದ ನಾಲ್ಕು ತಿಂಗಳಲ್ಲಿ ರಾಜ್ಯದಲ್ಲಿ 430 ಹತ್ಯೆಗಳು ಮತ್ತು 198ಅತ್ಯಾಚಾರ ಪ್ರಕರಣಗಳು ವರದಿಯಾಗಿವೆ. ರಾಜ್ಯಗೃಹ ಇಲಾಖೆ ಕಾರ್ಯನಿರ್ವಹಿಸುತ್ತಿದೆಯೋ ಅಥವಾ ನಿದ್ದೆ ಮಾಡುತ್ತಿದೆಯೋ ? ಎಂದು ಸಾಮಾಜಿಕ ಜಾಲತಾಣದಲ್ಲಿ ಜೆಡಿಎಸ್ ಪ್ರಶ್ನಿಸಿದೆ.ಇದೇ ವೇಳೆ, ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಹದಗೆಟ್ಟಿದ್ದು, ಅಪರಾಧ ಪ್ರಮಾಣ ಹೆಚ್ಚಳವಾಗಿರುವುದರಿಂದ ಕೂಡಲೇ ಈ ಬಗ್ಗೆ ಕ್ರಮವಹಿಸಬೇಕೆಂದು ಆಗ್ರಹಿಸಿ, ರಾಜ್ಯ ಪೊಲೀಸ್ ಮಹಾ ನಿರ್ದೇಶಕರಿಗೆ ಬಿಜೆಪಿ ನಿಯೋಗ ದೂರು ನೀಡಿದೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿದೆ. ಹಾದಿಬೀದಿಯಲ್ಲಿ ಕೊಲೆಗಳಾಗುತ್ತಿವೆ. ರಾಜ್ಯವು ಅತ್ಯಾಚಾರಿಗಳ ಆಡಂಬೋಲವಾಗಿದೆ. ಬೆಂಗಳೂರು ಮಹಾನಗರದಲ್ಲಿ ಮಾದಕ ವಸ್ತುಗಳ ದಂಧೆ ಅವ್ಯಾಹತವಾಗಿದೆ. ಕೇವಲ 4 ತಿಂಗಳಲ್ಲಿ ಇಷ್ಟೆಲ್ಲಾ ನಡೆದಿದೆ!! 1/2#ಜನರಿಗಿಲ್ಲ_ನೆಮ್ಮದಿಯ_ಗ್ಯಾರಂಟಿ pic.twitter.com/iu3tqqEYZ3
— Janata Dal Secular (@JanataDal_S) May 18, 2024
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ : ಗೃಹ ಸಚಿವ ಡಾ. ಜಿ.ಪರಮೇಶ್ವರ್
ಸುದ್ದಿದಿನ, ತುಮಕೂರು : ರಾಜ್ಯದಲ್ಲಿ ಜನರು ಶಾಂತಿ ಮತ್ತು ನೆಮ್ಮದಿಯಿಂದ ಬದುಕಲು ಯಾವುದೇ ಕ್ರಮ ತೆಗೆದುಕೊಳ್ಳಲು ಸಿದ್ಧ. ಬಿಜೆಪಿ ಆರೋಪದಂತೆ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದರು.
ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿಯವರು ಶಾಂತಿಯನ್ನು ಕದಡಲು ಎಷ್ಟು ಪ್ರಯತ್ನ ನಡೆಸಿದರೂ ಅದನ್ನು ನಿಯಂತ್ರಿಸುವ ಶಕ್ತಿ ನಮ್ಮ ಸರ್ಕಾರಕ್ಕಿದೆ ಎಂದು ತಿರುಗೇಟು ನೀಡಿದರು. ರಾಜ್ಯದಲ್ಲಿ ಅಪರಾಧ ಪ್ರಕರಣ ಹೆಚ್ಚಳವಾಗುತ್ತಿರುವ ಬಗ್ಗೆ ಪೊಲೀಸ್ ಅಧಿಕಾರಿಗಳೊಂದಿಗೆ ಕೂಲಂಕುಷವಾಗಿ ಚರ್ಚಿಸಿ, ಅಪರಾಧ ಪ್ರಕರಣಗಳ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಡಾ. ಜಿ. ಪರಮೇಶ್ವರ್ ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243
ದಿನದ ಸುದ್ದಿ
ವಿಧಾನ ಪರಿಷತ್ ಚುನಾವಣೆ ; 91 ನಾಮಪತ್ರಗಳು ಪುರಸ್ಕೃತ
ಸುದ್ದಿದಿನ ಡೆಸ್ಕ್ : ಕರ್ನಾಟಕ ವಿಧಾನ ಪರಿಷತ್ನ ಚುನಾವಣೆಗೆ ಸಂಬಂಧಪಟ್ಟಂತೆ ಒಟ್ಟು 91ನಾಮಪತ್ರಗಳು ಪುರಸ್ಕೃತಗೊಂಡಿವೆ. ಈಶಾನ್ಯ ಪದವಿಧರ ಕ್ಷೇತ್ರಕ್ಕೆ ಒಟ್ಟು 26 ನಾಮಪತ್ರಗಳು ಪುರಸ್ಕೃತಗೊಂಡಿದೆ.
ಅದೇ ರೀತಿ ಕರ್ನಾಟಕದ ಆಗ್ನೇಯಾ ಶಿಕ್ಷಕರ ಕ್ಷೇತ್ರಕ್ಕೆ 15, ಬೆಂಗಳೂರು ಪದವೀಧರರ ಕ್ಷೇತ್ರಕ್ಕೆ 16, ಕರ್ನಾಟಕ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ 9, ಕನಾಟಕ ನೈಋತ್ಯ ಪದವೀಧರ ಕ್ಷೇತ್ರಕ್ಕೆ12 ಹಾಗೂ ಕರ್ನಾಟಕ ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಒಟ್ಟು 13 ನಾಮಪತ್ರಗಳು ಪುರಸ್ಕೃತಗೊಂಡಿವೆ ಎಂದು ಚುನಾವಣಾ ಆಯೋಗದ ಪ್ರಕಟಣೆ ತಿಳಿಸಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243
-
ದಿನದ ಸುದ್ದಿ7 days ago
ಆತ್ಮಕತೆ | ಕೋರಿನ ತೋಟ ಮತ್ತು ನಮ್ಮೂರ ದೇವರ ಗುಡಿಯಲ್ಲಿ ಪಂಚಾಯ್ತಿ
-
ದಿನದ ಸುದ್ದಿ3 days ago
ವಿಧಾನಪರಿಷತ್ ಚುನಾವಣೆ ; ಇಂದು ನಾಮಪತ್ರ ಸಲ್ಲಿಕೆಗೆ ಕಡೆಯ ದಿನ
-
ದಿನದ ಸುದ್ದಿ3 days ago
ಪೌರತ್ವ ಪ್ರಮಾಣಪತ್ರ ಹಸ್ತಾಂತರ
-
ದಿನದ ಸುದ್ದಿ2 days ago
ಸಂಗೀತಗಾರರ ಹುದ್ದೆಗಳಿಗೆ ನೇಮಕಾತಿ
-
ದಿನದ ಸುದ್ದಿ3 days ago
ದಾವಣಗೆರೆ | ಶಿಕ್ಷಕರ ಹುದ್ದೆಗೆ ನೇರ ಸಂದರ್ಶನ
-
ದಿನದ ಸುದ್ದಿ3 days ago
ಮೊರಾರ್ಜಿ ದೇಸಾಯಿ ವಿಜ್ಞಾನ ಕಾಲೇಜು ; ಪಿಯುಸಿ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days ago
ಪ್ರಜ್ವಲ್ ಪೆನ್ಡ್ರೈವ್ ಪ್ರಕರಣ | ಎಸ್ಐಟಿ ಸೂಕ್ತ ತನಿಖೆ ನಡೆಸುತ್ತಿಲ್ಲ : ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ
-
ದಿನದ ಸುದ್ದಿ4 days ago
ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ ದಾಖಲಾತಿ ಪ್ರಾರಂಭ