Connect with us

ಅಂತರಂಗ

ಕೃಷಿ ಬಿಕ್ಕಟ್ಟಿನ ನಿರ್ಲಕ್ಷ್ಯ ಮೋದಿ ಸೋಲಿಸೀತೆ? : ಮಂಡ್ಯದ ವಳಗೆರೆಹಳ್ಳಿಯ ರೈತ ಆತ್ಮಹತ್ಯೆಗಳ ‘ಪೋಸ್ಟ್ ಮಾರ್ಟಂ’

Published

on

  • ಮಂಡ್ಯದ ವಳೆಗೆರೆಹಳ್ಳಿಯ ಆತ್ಮಹತ್ಯೆ ಮಾಡಿಕೊಂಡ ಐವರು ರೈತರ ಆತ್ಮಹತ್ಯೆಗಳನ್ನು ‘ರಾಜಕೀಯ-ಆರ್ಥಿಕ ಪೋಸ್ಟ್ ಮಾರ್ಟಂ’ ಮೂಲಕ ಕೃಷಿ ಸಂಕಟದ ಆಳ ಅಗಲಗಳನ್ನು ಇಲ್ಲಿ ಅಳೆಯಲಾಗಿದೆ. ಮಂಡ್ಯ ಮತ್ತು ಕೊಪ್ಪಳದ ಕೃಷಿ ಸಂಕಟಗಳನ್ನು ಕುರಿತು ಸಂಶೋಧನೆ ಮಾಡುತ್ತಿರುವ ದೀಪಾ ಕುರುಪ್ ಅದರ ಬೆಳಕಿನಲ್ಲಿ ಕಳೆದ ಐದು ವರ್ಷಗಳಲ್ಲಿ ಈ ಕುರಿತು ಮೋದಿ ಸರಕಾರದ ಘೋಷಣೆ ಮತ್ತು ‘ಸಾಧನೆ’ಗಳ ನಡುವಿನ ಕಂದಕವನ್ನು ತೆರೆದಿಡುತ್ತಾರೆ. ಅದಕ್ಕೆ ಪ್ರತಿಕ್ರಿಯೆಯಾಗಿ ಬಂದಿರುವ ರೈತರ ಚಳುವಳಿಯ ಬಗೆಗೂ ಬರೆಯುತ್ತಾರೆ. ಲೋಕಸಭಾ ಚುನಾವಣೆಗಳ ಹಿನ್ನೆಲೆಯಲ್ಲಿ ಕೃಷಿ ಸಂಕಟಗಳ ತೀವ್ರ ನಿರ್ಲಕ್ಷ ಮೋದಿಯನ್ನು ಸೋಲಿಸಬಲ್ಲದು ಎಂದು ಅಂತರ್ರಾಷ್ಟ್ರೀಯ ಓದುಗರಿಗೆ ತಿಳಿಸುವ ಈ ಲೇಖನ ‘ಅಲ್ ಜಜೀರಾ’ (https://www.aljazeera.com/news/2019/04/india-elections-farm-crisis-pm-narendra-modi-190418191725241.html)ವೆಬ್ ಮ್ಯಾಗಜೀನ್ ನಲ್ಲಿ ಪ್ರಕಟವಾಗಿದೆ. ಇಲ್ಲಿ ಬರುವ ಕೃಷಿ ಸಂಕಟದ ಹಲವು ಆಯಾಮಗಳ ಬಗ್ಗೆ ಈ ಪತ್ರಿಕೆಯಲ್ಲಿ ಹಲವು ಬರಹಗಳು ಪ್ರಕಟವಾಗಿದ್ದರೂ, ಕ್ಷೇತ್ರ ಸಮೀಕ್ಷೆಯ ಪ್ರಕರಣಗಳ ಆಧಾರವಿರುವುದರಿಂದ ಈ ಲೇಖನವನ್ನು ಇಡಿಯಾಗಿ ಪ್ರಕಟಿಸಲಾಗುತ್ತಿದೆ. ಇದನ್ನು ಈ ಕ್ಷೇತ್ರ ಸಮಿಕ್ಷೆಯಲ್ಲಿ ಭಾಗವಹಿಸಿದ ಕರ್ನಾಟಕ ಪ್ರಾಂತ ರೈತ ಸಂಘದ ನಾಯಕ ಟಿ. ಯಶವಂತ ಅನುವಾದಿಸಿದ್ದಾರೆ.

“ಮಂಡ್ಯದಲ್ಲಿ ಏಕೆ ರೈತರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ”ಎಂದು ಮುಜಗರದಿಂದಲೇ ವಳೆಗೆರಹಳ್ಳಿ ಗ್ರಾಮಸ್ಥರನ್ನು ಪ್ರಶ್ನಿಸಿದೆ. ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿಗೆ ಸೇರಿರುವ ವಳೆಗೆರೆಹಳ್ಳಿ ಗ್ರಾಮದ ಬಹಳಷ್ಟು ಜನರಿಗೆ 2015 ಹಾಗೂ 2017 ರ ನಡುವಿನ ಎರಡು ವರ್ಷದಲ್ಲಿ ತನ್ನ ಗ್ರಾಮದ ಐವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬುದು ಆಶ್ಚರ್ಯವನ್ನೇನೂ ಹುಟ್ಟಿಸಲಿಲ್ಲ.

ಆದರೆ ಏಪ್ರಿಲ್ 1ರಂದು ನಡೆದ ಶ್ರೀನಿವಾಸ್ ರವರ ಆತ್ಮಹತ್ಯೆ ಅವರ ಮನಸ್ಸಿನಲ್ಲಿ ಹಸಿರಾಗಿದೆ. 45 ವರ್ಷ ವಯಸ್ಸಿನ ರೈತ ಸುಮಾರು ಐದು ಲಕ್ಷ ರೂ ನಷ್ಟಿದ್ದ ಸಾಲದಿಂದ ಮುಕ್ತನಾಗದೆ ವೃದ್ದೆ ತಾಯಿ, ಪತ್ನಿ ಮತ್ತು ಮಗನನ್ನು ಬಿಟ್ಟು ಅಗಲಿದ್ದಾರೆ. ಕಳೆದ ವರ್ಷವಷ್ಟೇ ಬಂಧು, ಸ್ನೇಹಿತರು ಹಾಗೂ ಗ್ರಾಮದ ಲೇವಾದೇವಿದಾರರಿಂದ ಮಗಳ ಮದುವೆ ವೆಚ್ಚ ಭರಿಸಲು ಸಾಲ ಪಡೆದಿದ್ದರು. ಮತ್ತೇ ಈ ವರ್ಷ ತನ್ನ ಒಂದು ಎಕರೆ ಜಮೀನಿನಲ್ಲಿ ಭತ್ತ ಬೆಳೆಯಲು ಮತ್ತಷ್ಟು ಸಾಲ ಮಾಡಿದ್ದರು. ಹಾಕಿದ್ದ ಬಂಡವಾಳಕ್ಕಿಂತ ಸಾಕಷ್ಟು ಕಡಿಮೆ ಬೆಲೆಗೆ ಭತ್ತ ಮಾರಾಟ ಆಗಿದ್ದು, ಸಾಲ ತೀರಿಸುವ ಅವನ ನಿರೀಕ್ಷೆಯನ್ನು ಮಣ್ಣುಪಾಲು ಮಾಡಿತು.

ಆದರೆ ಶ್ರೀನಿವಾಸ್ ರವರ ಸಾವು ರೈತ ಆತ್ಮಹತ್ಯೆ ಯ ಕೃಷಿ ಇಲಾಖೆ ಅಂಕಿ ಸಂಖ್ಯೆ ಪಟ್ಟಿಯಲ್ಲಿ ಸೇರ್ಪಡೆ ಆಗಿಲ್ಲ. ಲೆಕ್ಕಕ್ಕೆ ಹಾಗೂ ಪರಿಹಾರ ಸೌಲಭ್ಯಗಳ ಕ್ರಮಕ್ಕೆ ಒಳಪಡಬೇಕಾದರೆ, ಮರಣೋತ್ತರ ಪರೀಕ್ಷೆ ಮಾಡಿಸಬೇಕು. ಅವರ ಕುಟುಂಬದಂತೆ ಬಹಳಷ್ಟು ಇತರರು ಸಾಂಸ್ಕೃತಿಕ ಮತ್ತು ಭಾವನಾತ್ಮಕ ಕಾರಣಗಳಿಗಾಗಿ ಇಂತಹ ಪ್ರಕ್ರಿಯೆಯನ್ನು ನಿರಾಕರಿಸಿರುತ್ತಾರೆ. ಶ್ರೀನಿವಾಸ್ ರವರ ರೀತಿ ಎಣಿಕೆಗೆ ಪರಿಗಣಿಸದ ಆತ್ಮಹತ್ಯೆಗಳು ವಾರ್ಷಿಕವಾಗಿ ರಾಷ್ಟ್ರೀಯ ಅಪರಾಧ ರೆಕಾಡ್ರ್ಸ್ ಬ್ಯೂರೋ (ಓಅಖಃ) ಪ್ರಕಟಿಸುವ ರೈತ ಆತ್ಮಹತ್ಯೆಗಳ ಸಂಖ್ಯೆಗಿಂತ ವಾಸ್ತವವಾಗಿ ಜರುಗುತ್ತಿರುವ ಅತ್ಮಹತ್ಯೆಗಳು ಹೆಚ್ಚಿರುವುದನ್ನು ತೋರಿಸುತ್ತದೆ.

ನಿಖರವಲ್ಲದಿದ್ದರೂ 2016ರ ತನಕ ಸಾಮಾಜಿಕ ಕಾರ್ಯಕರ್ತರು ಹಾಗೂ ನೀತಿ ನಿರೂಪಕರು ಉಲ್ಲೇಖಿಸಬಹುದಾಗಿದ್ದು ಓಅಖಃ ದತ್ತಾಂಶ ಮಾತ್ರವಾಗಿತ್ತು. ಆ ನಂತರದಿಂದ ಬಿಜೆಪಿ ಸರ್ಕಾರ ಆತ್ಮಹತ್ಯೆ ಅಂಕಿಸಂಖ್ಯೆಗಳನ್ನು ಪ್ರಕಟಿಸಲು ನಿರಾಕರಿಸಿದೆ. ಅದರ ಒಟ್ಟು ರಾಜಕೀಯ ಕಥನಕ್ಕೆ ಅನುಕೂಲವಾಗುವಂv,É ನಿರುದ್ಯೋಗ ಮಟ್ಟ ಅಥವಾ ಆರ್ಥಿಕ ಬೆಳವಣಿಗೆಗೆ ಸಂಬಂಧಿಸಿದ ತನಗೆ `ಮುಜುಗರ ಉಂಟುಮಾಡುವ’ ಅಂಕಿ ಸಂಖ್ಯೆಗಳನ್ನು ಮರೆಮಾಚುವ ಇಲ್ಲವೆ ತಿರುಚುವ ಕಾರ್ಯತಂತ್ರದ ಭಾಗವಾಗಿಯೇ ಇದನ್ನು ಮಾಡಲಾಗಿದೆ.

ಜನಸಂಖ್ಯೆಯ ಶೇಕಡಾ 69 ರಷ್ಟು ಅಂದರೆ 83 ಕೋಟಿ ಜನ ಇರುವ ಗ್ರಾಮೀಣ ಪ್ರದೇಶದ ಸಂಕಷ್ಟ ಅಳೆಯುವ ಸೂಚಕವಿದು. ಓಅಖಃ ಪ್ರಕಾರ 2015 ರ ಹಿಂದಿನ ಎರಡು ದಶಕಗಳಲ್ಲಿ ಕನಿಷ್ಠ 3.21 ಲಕ್ಷ ರೈತರು ತಮ್ಮ ಪ್ರಾಣ ಕಳೆದುಕೊಂಡಿದ್ದಾರೆ. ಬಿಜೆಪಿ ಆಡಳಿತದ ಹಿಂದೆಯೂ ಬಿಕ್ಕಟ್ಟು ಇರುವ ಬಗ್ಗೆ ಕೂಡ ಓಅಖಃ ಬೆಳಕು ಚೆಲ್ಲುತ್ತಿದೆ. 2014 ರಲ್ಲಿ ಗ್ರಾಮೀಣ ಪ್ರದೇಶಗಳಲ್ಲಿ `ಕ್ರಾಂತಿ’ ಮಾಡುವುದಾಗಿ ರೈತ-ಕೃಷಿ ಕೂಲಿಕಾರರನ್ನು ನಂಬಿಸಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದಿದ್ದರೂ ಗ್ರಾಮೀಣ ಬಿಕ್ಕಟ್ಟು ಮಾತ್ರ ಮತ್ತಷ್ಟು ಉಲ್ಬಣಿಸಿದೆ.

2014 ರ ಬಿಜೆಪಿ ಪ್ರಣಾಳಿಕೆ ರೈತರಿಗೆ ಉತ್ಪಾದನಾ ವೆಚ್ಚದ ಶೇಕಡಾ 50 ರಷ್ಟು ಲಾಭಾಂಶದ ಭರವಸೆ ನೀಡಿತ್ತು. ಮತ್ತೊಂದು ಅವಧಿಗೆ ಅಧಿಕಾರ ನಿರೀಕ್ಷಿಸುತ್ತಿರುವ ಮೋದಿ, 2019ರ ಬಿಜೆಪಿ ಪ್ರಣಾಳಿಕೆಯಲ್ಲಿ ಪುನುರುಚ್ಚರಿಸಿರುವ ಕೃಷಿ ಆದಾಯವನ್ನು ದುಪ್ಪಟ್ಟುಗೊಳಿಸಲು 2022 ರವರೆಗೆ ಅವಕಾಶ ನೀಡುವಂತೆ ಮತದಾರರನ್ನು ಕೇಳುತ್ತಿದ್ದಾರೆ. ಆದರೆ ಕೃಷಿ ಕ್ಷೇತ್ರದ ಒಟ್ಟಾರೆ ಚಿತ್ರಣ ಈ ಭರವಸೆಯ ವಿರುದ್ದ ದಿಕ್ಕಿನಲ್ಲಿದೆ.

ಕೃಷಿ ಕ್ಷೇತ್ರದ ಆರ್ಥಿಕ ಚಟುವಟಿಕೆಯ ಮಾಪಕವಾದ ಒಟ್ಟು ಮೌಲ್ಯ ವರ್ದನೆಯು(ಉಗಿಂ)2014-19 ರ ಪ್ರಸ್ತುತ ಬಿಜೆಪಿ ನೇತೃತ್ವದ ಎನ್.ಡಿ.ಎ. ಅವಧಿಯ ಸ್ಥಿರ ದರದಲ್ಲಿ ಸರಾಸರಿ ಶೇಕಡಾ 2.8 ರಷ್ಟು ಬೆಳವಣಿಗೆ ಕಂಡಿದೆ. ಹಿಂದಿನ ನಿರಂತರ ಎರಡು ಅವಧಿಯ ಕಾಂಗ್ರೆಸ್ ನೇತೃತ್ವದ ಸರ್ಕಾರಗಳಾದ ಯುಪಿಎ-1 (2004-09) ಹಾಗೂ ಯುಪಿಎ-2 (2009-14) ಗಳಿಗೆ ಹೋಲಿಸಿದರೆ ಇದು ಗಮನಾರ್ಹವಾಗಿ ಕಡಿಮೆ. ಇತ್ತೀಚಿನ ವರ್ಷಗಳಲ್ಲಿ ಕೃಷಿಯಲ್ಲಿ ತೊಡಗಿರುವ ಪುರುಷ ಹಾಗೂ ಮಹಿಳೆಯರ ಗ್ರಾಮೀಣ ಕೂಲಿಯ ಪ್ರಮಾಣ ಸಹ ಕುಂಠಿತಗೊಂಡಿದೆ.

ವಳೆಗೆರಹಳ್ಳಿ ಆತ್ಮಹತ್ಯೆಗಳು

ಗ್ರಾಮಗಳಲ್ಲಿನ ಬಿಕ್ಕಟ್ಟಿನ ಲಕ್ಷಣಗಳು ಹಾಗೂ ಹೊರಬಿದ್ದಿರುವ ಅಂಕಿಸಂಖ್ಯೆಗಳು, ಬಿಜೆಪಿಯ ಭರವಸೆಗಳಿಗೂ ‘ಸಾಧನೆ’ಗಳಿಗ ಇರುವ ಕಂದಕವನ್ನು ತೋರಿಸುತ್ತಿವೆ. ಬಿಜೆಪಿ ಗ್ರಾಮೀಣ ಬಿಕ್ಕಟ್ಟನ್ನು ಒಂದು ರಚನಾತ್ಮಕ ಬಿಕ್ಕಟ್ಟು ಎಂದು ಗ್ರಹಿಸುವುದಿಲ್ಲ. ಬಹುತೇಕ ಕೃಷಿ ಭೂಮಿಗೆ ಕಾಲುವೆ ನೀರಾವರಿ ಹೊಂದಿರುವ ಹಾಗೂ ಭತ್ತ, ಕಬ್ಬು, ರೇಷ್ಮೆ ಬೆಳೆಯುವ ವಳೆಗೆರಹಳ್ಳಿಯಲ್ಲಿನ ಪರಿಸ್ಥಿತಿ ಇದಕ್ಕೆ ಕನ್ನಡಿಯಾಗಿದೆ. 2015 ಮತ್ತು 2017 ರ ನಡುವೆ ಆತ್ಮಹತ್ಯೆ ಮಾಡಿಕೊಂಡಿರುವ ಐದು ಕುಟುಂಬಗಳ ಜೊತೆಗಿನ ಸಂವಾದವು ಗ್ರಾಮೀಣ ಭಾರತದ ರಾಜಕೀಯ ಆರ್ಥಿಕತೆಯಲ್ಲಿನ ಬಿಕ್ಕಟ್ಟಿಗೆ ಸಾಕ್ಷಿ ಒದಗಿಸುವ ಮಾನವ ದುರಂತವನ್ನು ಅನಾವರಣಗೊಳಿಸಿದೆ.

ಜಯರಾಮು ಎಂ.(36), ಮಧುಕರ್ (40), ನಾಥಪ್ಪ,(46), ಸಿ.ಎಂ.ಸಂಪತ್(37) ಮತ್ತು ಮರಿಗೌಡ (50) – ಆತ್ಮಹತ್ಯೆ ಮಾಡಿಕೊಂಡ ಈ ಐವರ ಕುಟುಂಬಗಳು ಎರಡು ಎಕರೆಗಿಂತ ಕಡಿಮೆ ಹಿಡುವಳಿ ಹೊಂದಿದ್ದು, ಕೃಷಿ ಕೂಲಿಗಾರರಾಗಿಯೂ ಸಹ ಕೆಲಸ ಮಾಡುತ್ತಿದ್ದರು. ರಾಷ್ಟ್ರೀಯ ಸರಾಸರಿ ಹಿಡುವಳಿ 2.7 ಎಕರೆ. ಈ ಎಲ್ಲಾ ಐದು ರೈತರು ಲಾಭಗಳಿಸುವಲ್ಲಿ ವಿಫಲರಾಗಿದ್ದು ಕುತ್ತಿಗೆಮಟ್ಟ ಸಾಲದಲ್ಲಿ ಮುಳುಗಿದವರು. ಅನಾರೋಗ್ಯ, ಮದುವೆ, ಕೃಷಿ ಲಾಗುವಾಡು ಮತ್ತಿತರೆ ವೆಚ್ಚ ನಿಭಾಯಿಸುವ ಕಾರಣದಿಂದಾಗಿ ಸಾಲಗಾರರಾಗಿದ್ದರು.

ಈ ಸಾಲದ ಗಣನೀಯ ಮೊತ್ತವನ್ನು ಸ್ಥಳೀಯ ಲೇವಾದೇವಿದಾರರಿಂದ ಪಡೆಯಲಾಗಿತ್ತೇ ವಿನಃ ಬ್ಯಾಂಕ್ನಿಂದಲ್ಲ. ಮಾಸಿಕ ಶೇಕಡಾ 5 ರ ದುಬಾರಿ ಬಡ್ಡಿ ದರ. ಜುಲೈ 2015 ರಲ್ಲಿ ಆತ್ಮಹತ್ಯೆಗೀಡಾದ ಜಯರಾಮು ತಾಯಿ 58 ವರ್ಷದ ಸಣ್ಣಮ್ಮ, ರಾಜ್ಯ ಸರ್ಕಾರ ಕೊಟ್ಟ ಪರಿಹಾರ ಧನ ಅವಳ ಮಗನ ಸುಸ್ಥಿ ಸಾಲದ ಬಡ್ಡಿಗೆ ಸರಿ ಹೋಯಿತು ಎಂದು ನಿಟ್ಟುಸಿರು ಬಿಟ್ಟರು.

ಮಧುಕರ್, ಒಬ್ಬ ದಲಿತ ರೈತ, ಸುಮಾರು ಶೇಕಡಾ 9 ರಷ್ಟು ಮಾಸಿಕ ದುಬಾರಿ ಬಡ್ಡಿ ದರದ ಸಾಲಗಾರ. ಆಗಷ್ಟೇ ಗುತ್ತಿಗೆ ಪಡೆದಿದ್ದ ಒಂದು ಎಕರೆ ಭೂಮಿಗೆ ಬಾಡಿಗೆ ಪಾವತಿಸಲು ಸಾಲ ಮಾಡಿದ್ದ. ಲೇವಾದೇವಿದಾರರು ತಮ್ಮ ಹಣದ ಸುರಕ್ಷತೆಗಾಗಿ ಸಾಮಾನ್ಯವಾಗಿ ದಲಿತರನ್ನು ಹಾಗೂ ಇತರೆ ಭೂ ಹೀನ ಬಡವರನ್ನು, ಅವರ ಹತ್ತಿರ ಈ ಸಣ್ಣ ಮೊತ್ತಕ್ಕೆ ಗ್ಯಾರಂಟಿ ನೀಡಬಹುದಾದ ಯಾವುದೇ ಆಸ್ತಿ ಇರದೇ ಇರುವುದರಿಂದ, ಹೆಚ್ಚಿನ ನಷ್ಟ ಉಂಟು ಮಾಡಬಹುದಾದ ಸಾಲಗಾರರೆಂದು ಪರಿಗಣಿಸುತ್ತಾರೆ.

ಮಧುಕರ್ ಆತ್ಮಹತ್ಯೆ ಮಾಡಿಕೊಂಡ ಮೇಲೆ ಆತನ ವಿಧವೆ ಪತ್ನಿ, ಸುನಂದಾ (30),ಸಾಲ ತೀರಿಸಲು ಇದ್ದ ಅರ್ಧ ಎಕರೆ ಜಮೀನು ಮಾರಾಟ ಮಾಡಿದ್ದಾಗಿ ಹೇಳಿದರು. ಈಗ ಈ ಕುಟುಂಬಕ್ಕೆ ಯಾವುದೇ ಭೂಮಿ ಇಲ್ಲ. ಕುಟುಂಬ ನಿರ್ವಹಣೆಗಾಗಿ ಗಾಮೆರ್ಂಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದಾರೆ.

ಕೃಷಿ ಇಲಾಖೆ, ಆತ್ಮಹತ್ಯೆಗೀಡಾದ ವಳೆಗೆರಹಳ್ಳಿ ರೈತರನ್ನು ಸಣ್ಣ ಮತ್ತು ಅಂಚಿನ ರೈತರೆಂದು ವರ್ಗೀಕರಿಸಿದೆ. ಇಂತಹವರ ಪ್ರಮಾಣ ದೇಶದಲ್ಲಿ ಶೇಕಡಾ 86 ರಷ್ಷಿದ್ದರೂ, ಗಣತಿ ಪ್ರಕಾರ ಕೇವಲ ಶೇಕಡಾ 47 ರಷ್ಟು ಕೃಷಿ ಭೂಮಿ ಹೊಂದಿದ್ದಾರೆ. ಈ ಶೇಕಡಾ 86 ಜನರೇ ಭಾರತದ ಕೃಷಿ ಬಿಕ್ಕಟ್ಟಿನ ಬಹು ಭಾರ ಹೊತ್ತಿರುವವರು. ಕೃಷಿ ಸಂಕಟವು ಭಾರತೀಯ ರೈತರನ್ನು ತಲೆಮಾರಿನಿಂದ ತಲೆಮಾರಿಗೆ ಹೆಚ್ಚು ಹೆಚ್ಚು ತುಂಡು ಹಿಡುವಳಿದಾರರನ್ನಾಗಿಸುತ್ತಿದೆ. ಭೂ ಹಂಚಿಕೆಯ ಅಸಮಾನತೆ ಕೂಡ ತೀವ್ರಗೊಂಡಿದೆ.

ಬರಗಾಲ, ಬೆಳೆ ವಿಮೆ ಇತ್ಯಾದಿ

ಮಂಡ್ಯವೂ ಸೇರಿದಂತೆ ಭಾರತದ ಬಹುತೇಕ ಭಾಗ 2014 ರಿಂದ ಸತತ ಎರಡು ವರ್ಷಗಳ ಬರಗಾಲವನ್ನು ಅನುಭವಿಸಿದ್ದರೂ, ಈ ಯಾವ ಕುಟುಂಬಗಳು ಕೇಂದ್ರ ಸರ್ಕಾರದಿಂದ ಬರ ಪರಿಹಾರ ಪಡೆದಿಲ್ಲ. ಅಸಮರ್ಪಕ ಭೂ ದಾಖಲಾತಿ ಅಥವಾ ಆಧಾರ್ ಜೊತೆ ಬ್ಯಾಂಕ್ ಖಾತೆ ಜೋಡಣೆ ಆಗದಿರುವ ಕಾರಣದಿಂದ ಬರ ಪರಿಹಾರ ಪಟ್ಟಿಯಿಂದ ಅವರು ಹೊರಗುಳಿದಿದ್ದರು ಎಂದು ವಳೆಗೆರಹಳ್ಳಿ ಗ್ರಾಮ ಲೆಕ್ಕಾಧಿಕಾರಿ ಆರೋಪಿಸಿದರು.

ರೈತನ ಜೊತೆ ಪ್ರಿಮಿಯಂ ನ ಒಂದು ಭಾಗವನ್ನು ರಾಜ್ಯ ಹಾಗೂ ಕೇಂದ್ರ ಸರ್ಕಾರಗಳು ಪಾವತಿಸುವ, ಮೋದಿ ಸರ್ಕಾರದ ಮಹತ್ವಕಾಂಕ್ಷಿ ಬೆಳೆ ವಿಮೆ ಯೋಜನೆಯಾದ ಪ್ರಧಾನ ಮಂತ್ರಿ ಫಸಲ್ ಬಿಮಾ ಯೋಜನೆಯೂ, ಅವರನ್ನು ಒಳಗೊಂಡಿಲ್ಲ. ಇಡೀ ಊರಿನ ಎಲ್ಲಾ ಬೆಳೆಗಳು ನಾಶವಾದರೆ ಮಾತ್ರ ವಿಮೆ ದಾವೆಗೆ ಅವಕಾಶ ಇರುವ ಈ ಯೋಜನೆ ಉಪಯೋಗಿಯಾಗಿಲ್ಲ ಎಂದು ವಳೆಗೆರಹಳ್ಳಿ ರೈತರು ತಿಳಿಸಿದರು. ಮಿಗಿಲಾಗಿ ವಾಣಿಜ್ಯ ಬೆಳೆಗಳನ್ನು ಈ ವಿಮೆ ಯೋಜನೆ ಒಳಗೊಂಡಿಲ್ಲವಾದ್ದರಿಂದ ಕಬ್ಬು ಬೆಳೆಯುವ ಎಲ್ಲರನ್ನೂ ಹೊರಗಿಟ್ಟಿದೆ.

ಸತತ ಎರಡು ವರ್ಷಗಳ ಬೆಳೆ ವಿಫಲತೆ ಕಾರಣದಿಂದ ತನ್ನ ಹೊಲದಲ್ಲಿ ಸಣ್ಣಮ್ಮನ 30 ವರ್ಷದ ಮಗ ಜಯರಾಮು 2015 ರಲ್ಲಿ ಆತ್ಮಹತ್ಯೆಗೀಡಾದರು. ಆದರೆ ಆತನಿಗೆ ಬೆಳೆ ವಿಮೆ ಸಹಾಯಕ್ಕೆ ಬಂದಿಲ್ಲ. ಈ ಯೋಜನೆ ಮೋದಿರವರ 2018-19 ರ ಕೃಷಿ ಬಜೆಟ್ ನ ಕಾಲು ಭಾಗದಷ್ಟು ಅಂದರೆ 57,600 ಕೋಟಿ ರೂಗಳ ಅನುದಾನವನ್ನು ಪಡೆದಿದ್ದರೂ, ಹೇಗೆ ಸರ್ಕಾರಿ ವೆಚ್ಚದ ಹೆಚ್ಚಳ ಅಂತಿಮವಾಗಿ ಕಾರ್ಪೋರೆಟ್ ಗಳಿಗೆ ಅನುಕೂಲವಾಗುತ್ತದೆ ಎಂಬುದಕ್ಕೆ ಇದು ಒಂದು ಉದಾಹರಣೆ. ಈ ಯೋಜನೆಯ ಅಡಿಯಲ್ಲಿ ಬರುವ 18 ವಿಮಾ ಕಂಪನಿಗಳಲ್ಲಿ 13 ಖಾಸಗಿಯಾಗಿದ್ದು, ಈ ಎಲ್ಲವೂ ರಿಲಯನ್ಸ್ ಗ್ರೂಪ್, ಟಾಟಾ ಸನ್ಸ್, ಬಜಾಜ್ ಗ್ರೂಪ್ ಹಾಗೂ ಭಾರತಿ ಎಂಟರ್ಪ್ರೈಸಸ್ ನಂತಹ ಭಾರತದ ದೈತ್ಯ ಕಾರ್ಪೊರೇಟ್ ಉಧ್ಯಮಗಳ ಒಡೆತನಕ್ಕೆ ಒಳಪಟ್ಟಂತಹವು.

ಬಿಜೆಪಿ ಯೇತರ ನೇತೃತ್ವದ ರಾಜ್ಯ ಸರ್ಕಾರಗಳು ಬರಪರಿಹಾರದಲ್ಲಿ ಕೇಂದ್ರ ರಾಜಕೀಯ ಮಾಡುತ್ತಿದೆ ಎಂದು ಆರೋಪಿಸಿವೆ. “2018-19 ರಲ್ಲಿ ಬರ ಪರಿಹಾರವಾಗಿ ಬಿಜೆಪಿ ಅಧಿಕಾರದಲ್ಲಿದ್ದ ಮಹಾರಾಷ್ಟ್ರ ವು 4700 ಕೋಟಿ ರೂ ಅನುದಾನ ಪಡೆದಿದೆ. ಆದರೆ ಕರ್ನಾಟಕ ಅತ್ಯಂತ ತೀವ್ರ ಹಾಗೂ ವಿಶಾಲ ವ್ಯಾಪ್ತಿಯಲ್ಲಿ ಬರಗಾಲದ ಬವಣೆಯಲ್ಲಿದ್ದರೂ ಕೇವಲ 949 ಕೋಟಿ ರೂ ಮಾತ್ರ ಪಡೆಯಿತು. ಇದು ಕಣ್ಣಿಗೆ ರಾಚುವ ತಾರತಮ್ಯ. ಬರಪರಿಹಾರದಲ್ಲಿ ರಾಜಕೀಯ ಮಾಡುವುದು ಅಮಾನವೀಯ” ಎನ್ನುತ್ತಾರೆ ಗ್ರಾಮೀಣಾಭಿವೃದ್ದಿ ಮಂತ್ರಿ ಹಾಗೂ ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಕೃಷ್ಣ ಭೈರೇಗೌಡ.

ಬಿಜೆಪಿ ಯ ಡಿ.ವಿ.ಸದಾನಂದ ಗೌಡ ಕೇಂದ್ರ ಸರ್ಕಾರದ ಸಾಂಖ್ಯಿಕ ಹಾಗೂ ಯೋಜನೆ ಮಂತ್ರಿಗಳು ಮತ್ತು ಮಾಜಿ ಮುಖ್ಯಮಂತ್ರಿ ಗಳು “ಇದೂಂದು ಸುಳ್ಳಿನ ಕಂತೆ. ಕಳೆದ ಐದು ವರ್ಷಗಳಲ್ಲಿ ಕೇಂದ್ರ ಸರ್ಕಾರ ಕರ್ನಾಟಕಕ್ಕೆ 2.4 ಲಕ್ಷ ಕೋಟಿ ಕೊಟ್ಟಿದೆ. ಇದು ಕಾಂಗ್ರೆಸ್ ಕೊಟ್ಟಿದ್ದಕ್ಕಿಂತ ಮೂರು ಪಟ್ಟು ಹೆಚ್ಚು “ಎಂದು ಆರೋಪಗಳನ್ನು ಅಲ್ಲಗಳೆಯುತ್ತಾರೆ.

ಬೆಲೆಗಳ ಸಮಸ್ಯೆ

ರೈತರ ಪ್ರಕಾರ ಇತ್ತೀಚಿನ ವರ್ಷಗಳಲ್ಲಿ ತಾವು ಪಡೆಯುವ ಕೃಷಿ ಉತ್ಪನ್ನಗಳ ದರದಲ್ಲಿ ಯಾವುದೇ ಬದಲಾವಣೆ ಇಲ್ಲ. ರೈತರಿಗೆ ಸಿಗುವ ಬೆಲೆಯ ಮಾಪಕವಾದ ಪ್ರಾಥಮಿಕ ಆಹಾರ ಸರಕಿನ ಸಗಟು ದರ ಸೂಚ್ಯಂಕ (WPI) ದ ಪ್ರಕಾರ 2013 -2014 ರಿಂದ ಸಗಟು ದರ ಸೂಚ್ಯಂಕ ಇಳಿಕೆ ಅಥವಾ ನಿಶ್ಚಲ ಸ್ಥಿತಿಯಲ್ಲಿದೆ. ಬೆಲೆಗಳ ಸಮಸ್ಯೆಗೆ ರಾಜಕಾರಣಿಗಳು ಆಗ್ಗಾಗ್ಗೆ ಆರೋಪಿಸುವಂತೆ ಮಳೆ ಕಾರಣ ಎನ್ನುತ್ತಿದ್ದರೆ, ಕರ್ನಾಟಕದ ಮಂಡ್ಯ, ಕೊಪ್ಪಳ ಹಾಗೂ ಕೋಲಾರ ಜಿಲ್ಲೆಗಳ ರೈತರ ಪ್ರಕಾರ ಕೃಷಿ ಬಿಕ್ಕಟ್ಟಿನ ಮೂಲ ಬೆಲೆಗಳಲ್ಲಿದೆ. ರೈತರು ಪಡೆಯುವ ದರ ವಿರಳವಾಗಿ ಲಾಭದಾಯಕವಾಗಿದ್ದು, ಅದರ ಏರಿಳಿತವು ರೈತರ ಜೀವನವನ್ನು ಹೆಚ್ಚು ಅನಿಶ್ಚಿತೆಗೊಳಿಸಿದೆ.

ಭತ್ತದ ಗದ್ದೆಯಲ್ಲಿ ಆತ್ಮಹತ್ಯೆಗೀಡಾದ ಮರೀಗೌಡ (50)ರ ಪತ್ನಿ ಚಿಕ್ಕತಾಯಮ್ಮ (42) “ಆಗಾಗ್ಗೆ ನಾವು ಹಲವು ಬರಗಳನ್ನು ಎದುರಿಸಿದ್ದೇವೆ. ಇದು ಪ್ರಕೃತಿಯಲ್ಲಿ ಸಾಮಾನ್ಯ. ಆದರೆ ಭತ್ತ ಮಾರಿದ್ದರಿಂದ ಬಂದ ಹಣ ಆ ವರ್ಷದ ರಸಗೊಬ್ಬರದ ಖರ್ಚಿಗೂ ಸಾಲದೇ ಇರುವುದನ್ನು ನನ್ನ ಗಂಡ ಎದುರಿಸಲಾರದೇ ಹೋದ” ಎಂದು ದುಃಖಿಸಿದಳು.

ಮರೀಗೌಡ ತೀರಿ ಹೋದ ನಂತರ ಅವಳು ಮತ್ತು ಅವಳ ಮಗ ತನ್ನ ಎರಡು ಎಕರೆ ಜಮೀನಿನ ಬೆಳೆಯನ್ನು ಕಬ್ಬು ಬೆಳೆಗೆ ಬದಲಾಯಿಸಿದರು. ಇತ್ತೀಚಿನ ಬೆಳೆಯನ್ನು ಟನ್ ಗೆ 2400 ರೂಗೆ ಮಾರಿದ್ದಾರೆ. ಕಡ್ಡಾಯವಾಗಿ ರೈತರಿಗೆ ಪಾವತಿಸಬೇಕಾದ, ಸರ್ಕಾರ ನಿಗದಿಪಡಿಸಿದ ನ್ಯಾಯ ಮತ್ತು ಲಾಭದಾಯಕ ಬೆಲೆ (ಈಖP) ಗಿಂತ ಇದು 350 ರೂ ಕಡಿಮೆ. ಕಾರ್ಖಾನೆಯು ಈ ಪಾವತಿಯನ್ನೂ ನಾಲ್ಕು ತಿಂಗಳು ವಿಳಂಬ ಮಾಡಿದೆ. “ಈ ಹಣ ಬರುವಷ್ಟರಲ್ಲಿ ಬೆಳೆ ಸಾಲದ ಬಡ್ಡಿ ಬೆಳೆದಿತ್ತು. ಬೆಳೆ ಖರ್ಚಿಗಿಂತ ಈಖP ದರವೇ ಕಡಿಮೆ ಇರುವಾಗ, ನಾವು ಈಖP ಗಿಂತ ಕಡಿಮೆ ದರಕ್ಕೆ ಮಾರಾಟ ಮಾಡಿದ್ದೇವೆ” ಎಂದು ಚಿಕ್ಕತಾಯಮ್ಮ ವಿವರಿಸಿದರು.

ಕಬ್ಬು ಬೆಳೆ ಖರ್ಚಿನ ಶೇಕಡಾ 77 ರಷ್ಟು ಸೇರಿಸಿ ಈಖP ನಿಗದಿಪಡಿಸಿದ್ದೇವೆ ಎಂಬ ಕೇಂದ್ರ ಸರ್ಕಾರದ ವಾದವನ್ನು ಸಂದರ್ಶಿಸಿದ ಪ್ರತಿ ಕಬ್ಬು ಬೆಳೆಗಾರರು ನಿರಾಕರಿಸಿದರು. ಜಿಲ್ಲೆಯಲ್ಲಿದ್ದ ಏಕೈಕ ಸಾರ್ವಜನಿಕ ಕಾರ್ಖಾನೆಯನ್ನು 2013 ರಲ್ಲಿ ಮುಚ್ಚುವ ಮೂಲಕ ಸರ್ಕಾರ ಖರೀದಿಯಿಂದ ಅಧಿಕೃತವಾಗಿ ದೂರ ಉಳಿಯಿತು.

2017 ಮತ್ತು 2018 ರ ಕಬ್ಬು ಅರೆಯುವ ಅವಧಿಯಲ್ಲಿ ಕರ್ನಾಟಕ, ಉತ್ತರ ಪ್ರದೇಶ, ಮಹಾರಾಷ್ಟ್ರ ಹಾಗೂ ಪಂಜಾಬ್ ನ ರೈತರು ದೊಡ್ಡ ಸಂಖ್ಯೆಯಲ್ಲಿ ಬೀದಿಗಿಳಿದರು. ಬಹುತೇಕ ಸಕ್ಕರೆ ಕಾರ್ಖಾನೆಗಳು ರಾಜಕಾರಣಿಗಳ ಒಡೆತನ ಅಥವಾ ನಿಯಂತ್ರಣದಲ್ಲಿರುವುದರಿಂದ ಸಕ್ಕರೆ ಕಾರ್ಖಾನೆಗಳ ಲಾಬಿಗೆ ಸರ್ಕಾರಗಳು ತೀವ್ರವಾಗಿ ಸ್ಪಂದಿಸುತ್ತವೆ. ಜಾಗತಿಕ ಮಾರುಕಟ್ಟೆಯಲ್ಲಿ ಸಕ್ಕರೆ ದರ ಕುಸಿತಕ್ಕೆ ಒಳಗಾದಾಗ ವಿಶ್ವದ ಎರಡನೇ ಅತಿದೊಡ್ಡ ಉತ್ಪಾದಕ ದೇಶ ಭಾರತ ಸಕ್ಕರೆ ಮೇಲಿನ ರಪ್ತು ತೆರಿಗೆಯನ್ನು ತೆಗೆದುಹಾಕಿತು. ಈ ವರ್ಷದ ಮೊದಲು ಸಕ್ಕರೆ ಕಾರ್ಖಾನೆಗಳಿಗೆ 10,500 ಕೋಟಿ ರೂ. ಉತ್ತೇಜಕ ಸಾಲದ ನೆರವು ನೀಡಿತ್ತು

ಕನಿಷ್ಠ ಬೆಂಬಲ ಬೆಲೆ ನೀಡುವುದಾಗಿ ಬಿಜೆಪಿ ಪುನಃ ಭರವಸೆ ನೀಡಿದೆ. 2015 ರಲ್ಲಿ ಅಧಿಕೃತವಾಗಿ ಬಿಜೆಪಿ ಸರ್ಕಾರ ವೇ ಸುಪ್ರೀಂ ಕೋರ್ಟ್ ಗೆ “ಉತ್ಪಾದನೆ ವೆಚ್ಚಕ್ಕೂ, ಕನಿಷ್ಠ ಬೆಂಬಲ ಬೆಲೆಗೂ ಯಾಂತ್ರಿಕ ಸಂಬಂಧ ಕಲ್ಪಿಸುವುದು ಉತ್ಪಾದನೆಯನ್ನು ನಿರುತ್ಸಾಹಗೊಳಿಸಲಿದೆ ಮತ್ತು ಮಾರುಕಟ್ಟೆಯನ್ನು ವಿಕೃತಿಗೊಳಿಸಲಿದೆ” ಎಂದು ಅಪಿಡವೆಟ್ ಸಲ್ಲಿಸಿ ತನ್ನ ಅಧಿಕೃತ ಧೋರಣೆಯನ್ನು ಪ್ರಕಟಪಡಿಸಿತ್ತು.

ಕನಿಷ್ಟ ಬೆಂಬಲ ಬೆಲೆಯಲ್ಲಿ `ಐತಿಹಾಸಿಕ` ಹೆಚ್ಚಳ ಎಂದು ಮೋದಿ ರವರು ಬಣ್ಣಿಸಿ ರೈತರ ಉತ್ಪನ್ನಗಳಿಗೆ ಶೇಕಡಾ 50 ರಷ್ಟು ಲಾಭಾಂಶ ನೀಡುವ ಚುನಾವಣಾ ಭರವಸೆ ಈಡೇರಿದಂತಾಗಿದೆ ಎಂಬುದನ್ನು 2018 ರ ತನಕವೂ ಪ್ರಕಟಿಸಿರಲಿಲ್ಲ. ಆದರೆ ಈ ಹೆಚ್ಚಳ ನಾಲ್ಕು ವರ್ಷಗಳಷ್ಟೂ ತುಂಬಾ ವಿಳಂಬ ಮಾತ್ರವೇ ಅಲ್ಲ ಜೊತೆಗೆ ಭೂ ಬಾಡಿಗೆಯನ್ನು ಪರಿಗಣಿಸದೆ ಅಸಮರ್ಪಕವಾಗಿತ್ತು. ಗೇಣಿ ಭೂಮಿಯಲ್ಲಿ ಬೇಸಾಯ ಮಾಡುವ ದೊಡ್ಡ ಸಂಖ್ಯೆಯ ರೈತರನ್ನು ಒಳಗೊಂಡಿರಲಿಲ್ಲ. ಹಲವಾರು ವರದಿಗಳು ಹೇಳುವಂತೆ ಸರ್ಕಾರ ಖರೀದಿಯಲ್ಲಿ ವಿಳಂಬ ಹಾಗೂ ನಿರಾಸಕ್ತಿ ವಹಿಸಿದ್ದರಿಂದ ಬೆಲೆಗಳ ಮೇಲೆ ಪರಿಣಾಮ ಬೀರಲು ಕನಿಷ್ಠ ಬೆಂಬಲ ಬೆಲೆ ಸಂಪೂರ್ಣ ವಿಫಲವಾಯಿತು.

ಕಟಾವು ಮುಗಿದ 45 ದಿನಗಳ ನಂತರವಷ್ಟೇ ಸರ್ಕಾರಿ ಖರೀದಿ ವ್ಯವಸ್ಥೆ ಪ್ರಾರಂಭವಾಯಿತು ಎಂದು ಮಂಡ್ಯ ಹಾಗೂ ಕೊಪ್ಪಳ ಜಿಲ್ಲೆಯ ಭತ್ತ ಬೆಳೆಗಾರರು ತಿಳಿಸಿದ್ದಾರೆ. ಹಣ ಪಾವತಿ ತಿಂಗಳುಗಟ್ಟಲೆ ವಿಳಂಬ ಆಗುವುದರಿಂದ ಸರ್ಕಾರಿ ಖರೀದಿ ಕೇಂದ್ರಕ್ಕೆ ಮಾರುವುದಿಲ್ಲ ಎಂದು ಸಣ್ಣ ರೈತರು ಅತೃಪ್ತಿ ವ್ಯಕ್ತಪಡಿಸಿದರು. ಹೀಗೆ ಇವರಿಗೆ ಒSP ಯ ಮೂರನೇ ಒಂದರಷ್ಟು ಕಡಿಮೆ ಬೆಲೆಗೆ ಖಾಸಗಿ ವ್ಯಾಪಾರಿಗಳಿಗೆ ಮಾರುವುದನ್ನು ಹೊರತುಪಡಿಸಿ ಬೇರೆ ದಾರಿ ಇಲ್ಲ.

ಜಾಗತಿಕ ಮಾರುಕಟ್ಟೆಯ ಏರಿಳಿತಗಳು
ಉದಾರೀಕರಣಗೊಂಡ ವ್ಯಾಪಾರಿ ದೋರಣೆಗಳು ಈ ಬಿಕ್ಕಟ್ಟನ್ನು ಹೆಚ್ಚಿಸಿವೆ. ಗೋಧಿ, ದ್ವಿದಳ ಧಾನ್ಯಗಳು ಹಾಗೂ ಹಾಲು ಉತ್ಪನ್ನಗಳು ಮುಂತಾದ ಸರಕುಗಳ ಅನಿಯಂತ್ರಿತ ಅಮದು ಬೆಲೆಗಳ ಅನಿಶ್ಚಿತತೆಗೆ ಕೊಡುಗೆ ನೀಡಿದೆ. ವಳೆಗೆರಹಳ್ಳಿ ಯಲ್ಲಿ ರೇಷ್ಮೆ ಕೃಷಿಕರು ಜಾಗತಿಕ ಮಾರುಕಟ್ಟೆಯ ಏರಿಳಿತಗಳಿಗೆ ನೇರವಾಗಿ ಜೋಡಿಸಲ್ಪಟ್ಟಿದ್ದಾರೆ.

2015 ರಲ್ಲಿ ಕಚ್ಚಾ ರೇಷ್ಮೆಯ ಅಮದು ಸುಂಕವನ್ನು ಸರ್ಕಾರ ಕಡಿತಗೊಳಿಸಿದಾಗ ಸರಸಮ್ಮನ ಪ್ರಪಂಚ ತಲೆಕೆಳಗಾಯಿತು. ಜನವರಿ 2016 ರಲ್ಲಿ ಆಕೆಯ ಗಂಡ ನಾಥಪ್ಪ ರೇಷ್ಮೆ ಗೂಡನ್ನು ಪ್ರತಿ ಕೆಜಿಗೆ 80 ರೂನಂತೆ ಮಾರಾಟ ಮಾಡಿದ. ಇದು ಆತ ಸಾಮಾನ್ಯವಾಗಿ ಮಾರಾಟ ಮಾಡುತ್ತಿದ್ದ ದರದ ಕಾಲು ಭಾಗ. “ಇದಾದ ಒಂದು ವಾರದಲ್ಲೇ ಅವರು ಆತ್ಮಹತ್ಯೆಗೀಡಾದರು” ಎಂದು 37 ವರ್ಷದ ವಿಧವೆ ಕಣ್ಣು ಒರೆಸಿಕೊಂಡರು.

ನೋಟು ರದ್ದಿನ ಮರ್ಮಘಾತ

ಭಾರತೀಯ ಆರ್ಥಿಕತೆಗೆ ಹಣಕಾಸು ಆಘಾತಕಾರಿಯಾಗಿ ಎರಗಿದ ಮೋದಿ ರವರ ನವೆಂಬರ್ 2016 ನೋಟು ರದ್ದು ಸತತ ಬರಗಾಲದಿಂದ ತತ್ತರಿಸಿ ತೆವಳುತ್ತಾ ಚೇತರಿಸಿಕೊಳ್ಳುತ್ತಿದ್ದ ಗ್ರಾಮೀಣ ಭಾರತಕ್ಕೆ ಆದ ಮರ್ಮಘಾತ. ನೋಟು ರದ್ದು ಕೃಷಿ ಮಾರುಕಟ್ಟೆಯನ್ನು ಹಾಳುಗೆಡುವಿದೆ ಎಂದು ಎರಡು ವರ್ಷದ ನಂತರ ಕೇಂದ್ರ ಸರ್ಕಾರದ ಕೃಷಿ ಮಂತ್ರಾಲಯ ಸಂಸದೀಯ ಸಮಿತಿ ಮುಂದೆ ಹೇಳಿಕೊಂಡಿದೆ. ನೋಟು ರದ್ದು ಕೆಟ್ಟ ಕಾಲದಲ್ಲಿ ಬಂದ ಮತ್ತೊಂದು ದುರ್ಘಟನೆ ಮಾತ್ರವೇ ಅಲ್ಲ. ಮುಂಗಾರು
ಬೆಳೆ(ಖಾರೀಪ್)ಮಾರಬೇಕಿತ್ತು ಅಥವಾ ಹಿಂಗಾರು (ರಾಬಿ)ಬೆಳೆಗೆ ಬೇಕಾದ ಸಾಮಗ್ರಿ ಖರೀದಿಸಬೇಕಿತ್ತು. ನಗದು ಕೊರತೆ ಈ ಎರಡು ಚಟುವಟಿಕೆಗಳನ್ನು ಸ್ಥಭ್ದಗೊಳಿಸಿತ್ತು.

ನೋಟು ರದ್ದು ಪರಿಣಾಮಕಾರಿಯಾಗಿ ಕೃಷಿ ಪೂರೈಕೆ ಸರಪಳಿಯನ್ನು ಹಾಳುಗೆಡುವಿತು. ಸರ್ಕಾರವು ಒಂದು ವಾರದಲ್ಲೇ ತನ್ನ ಅಂದಾಜಿನಿಂದ ಹಿಂದೆ ಸರಿದು ನೋಟು ರದ್ದು “ಕೃಷಿ ರಂಗವನ್ನು ಔಪಚಾರಿಕಗೊಳಿಸುತ್ತಿದೆ” ಎಂದು ಹೊಗಳಿ ಹೊಸ ವರದಿಯನ್ನು ತಯಾರಿಸಿತು. ಸಂದರ್ಶಿಸಿದ ಪ್ರತಿಯೊಬ್ಬ ರೈತನ ಬಳಿಯೂ ನೋಟು ರದ್ದು ಸಮಯದಲ್ಲಿ ಅವನು ಅನುಭವಿಸಿದ ಸಂಕಟದ ಕಥೆ ಇದ್ದು, ಸರ್ಕಾರದ ವಾದವನ್ನು ಅಲ್ಲಗಳೆಯುತ್ತವೆ. ಕೃಷಿ ಕೂಲಿಕಾರರು ಸಹ ಸಂಕಟಕ್ಕೀಡಾದರು. ಕೂಲಿಕಾರರಿಗೆ ಪಾವತಿಸಲು ರೈತರ ಬಳಿ ಹಣವೇ ಇರಲಿಲ್ಲವಾದ್ದರಿಂದ ಕೆಲಸಕ್ಕಾಗಿ ಪರಿತಪಿಸಬೇಕಾಯಿತು. ಹಳ್ಳಿಗಳಲ್ಲಿ ಕೆಲಸದ ಅವಕಾಶ ಕ್ಷೀಣಿಸಿದಾಗ ಕಟ್ಟಡ ನಿರ್ಮಾಣ ಚಟುವಟಿಕೆಗಳಲ್ಲಿ ಕೆಲಸ ಅರಸಿ ನಗರ, ಪಟ್ಟಣಗಳಿಗೆ ಸಾಮಾನ್ಯವಾಗಿ ಕೂಲಿಕಾರರು ವಲಸೆ ಹೋಗುತ್ತಾರೆ. ಭಾರತದ ಬೆಳೆಯುತ್ತಿರುವ ಕಟ್ಟಡ ನಿರ್ಮಾಣ ವಲಯದಲ್ಲಿ ಅಷೊತ್ತಿಗಾಗಲೇ ಐದು ಕೋಟಿ ಜನ ಉದ್ಯೋಗ ಕಂಡು ಕೊಂಡಿದ್ದರು. ಆದರೆ ನೋಟು ರದ್ದತಿ ಹಾಗೂ 2017 ರಿಂದ ಜಾರಿಗೆ ಬಂದ ಜಿ.ಎಸ್.ಟಿ. ಕಟ್ಟಡ ನಿರ್ಮಾಣ ವಲಯದ ಚಟುವಟಿಕೆಗಳನ್ನು ನಿಧಾನಗೊಳಿಸಿತು. ಉತ್ತರ ಕರ್ನಾಟಕದ ಕೊಪ್ಪಳ ದಲ್ಲಿ ನೂರಾರು ಜನ ತಮ್ಮ ಗ್ರಾಮಕ್ಕೆ ಮರಳಿದ್ದರು.

ಕೊಪ್ಪಳದ ಕುಷ್ಟಗಿಯ ಭೂ ಹೀನ ಕೂಲಿಕಾರ ಮಾಲಕ್ ಸಾಬ್ (37) “ರೈತರು ಯಂತ್ರಗಳನ್ನು ಬಳಸುತ್ತಿರುವುದು ಮತ್ತು ಕಡಿಮೆ ಬೆಳೆ ಬೆಳೆಯುತ್ತಿರುವುದರಿಂದ ಗ್ರಾಮದಲ್ಲಿ ಕೆಲಸ ಸಿಗುವುದು ಕಷ್ಟವಾಗಿದೆ. ಇದು ಗಾಯದ ಮೇಲೆ ಉಪ್ಪು ಸವರಿದಂತೆ. ಕಟ್ಟಡ ಕಾಮಗಾರಿ ಕೆಲಸಕ್ಕೆ ವಾಪಸ್ಸಾಗಲು ಇನ್ನು ಆರು ತಿಂಗಳು ಬೇಕು” ಎನ್ನುತ್ತಾ ನಿಟ್ಟುಸಿರು ಬಿಟ್ಟರು.

ತನ್ನ ಮಹತ್ವಾಕಾಂಕ್ಷಿ ಯೋಜನೆ ಉದ್ಯೋಗ ಖಾತರಿ ಯೋಜನೆಯನ್ನು ಅನುಷ್ಠಾನಕ್ಕೆ ತರಲು ಸರ್ಕಾರ ವಿಫಲವಾಗಿದೆ. ಪ್ರತಿ ಸಾರಿಯೂ ವೇತನ ಪಾವತಿಯನ್ನು ವಿಳಂಬಿಸಲಾಗುತ್ತಿದೆ. ಜನ ಜೀವನ ನಿಸ್ತೇಜಗೊಂಡು ವ್ಯಾಪಕವಾಗಿ ಕುಸಿದಿರುವ ಹಿನ್ನೆಲೆಯಲ್ಲಿ ಈ ರೀತಿಯ ಅನುಷ್ಠಾನ ಗ್ರಾಮೀಣ ಬಡವರ ಬದುಕಿನಲ್ಲಿ ಮತ್ಯಾವ ಪರಿಣಾಮ ಬೀರಲು ಸಾಧ್ಯ.

ರೈತ ಚಳುವಳಿಗಳು

ಇತ್ತೀಚಿನ ವರ್ಷಗಳಲ್ಲಿ ರೈತರು ಹೆಚ್ಚಿನ ಪ್ರತಿಭಟನೆ ವ್ಯಕ್ತಪಡಿಸುತ್ತಿದ್ದಾರೆ. ಗ್ರಾಮೀಣ ಭಾರತದ ಬಿಕ್ಕಟ್ಟು ನಗರದ ರಸ್ತೆಗಳಲ್ಲಿ ಅಭಿವ್ಯಕ್ತಿಗೊಳ್ಳುತ್ತಿದೆ. ಬೆಲೆ ಕುಸಿತ ಖಂಡಿಸಿ ತಮ್ಮ ಉತ್ಪನ್ನಗಳನ್ನು ರಸ್ತೆಯಲ್ಲಿ ಸುರಿದು ಅಥವಾ ಸುಟ್ಟು ಪ್ರತಿಭಟಿಸುತ್ತಿರುವ ದೃಶ್ಯಗಳು ಕರುಣಾಜನಕವಾಗಿವೆ.

ಕಾರ್ಷಿಕ ಬಿಕ್ಕಟ್ಟಿನ ಕಾರಣದಿಂದ ರೈತ ಆತ್ಮಹತ್ಯೆಗಳು 2015 ರಲ್ಲಿ 2683 ವರದಿಯಾಗಿದ್ದು ಇದು ಹಿಂದಿನ ವರ್ಷದ ಸಂಖ್ಯೆ 628 ಕ್ಕೆ ಹೋಲಿಸಿದರೆ ನಾಲ್ಕು ಪಟ್ಟು ಹೆಚ್ಚು. ರಾಷ್ಟ್ರೀಯ ಅಪರಾಧ ಅಂಕಿಸಂಖ್ಯೆಗಳು ಲಭ್ಯವಿರುವ ಕೊನೆ ವರ್ಷ 2016 ರಲ್ಲಿ ಈ ಹಿಂದಿನ ವರ್ಷಕ್ಕೆ ಹೋಲಿಸಿದರೆ ಎರಡು ಪಟ್ಟು ಹೆಚ್ಚು.

ಆದರೆ, ಪ್ರತಿಭಟನೆಯೂ ಹೆಚ್ಚು ಸುಸಂಘಟಿತಗೊಳ್ಳುತ್ತಿದೆ. 2017 ರ ವರೆಗೂ ರೈತ ಸಂಘಟನೆಗಳು ತಮ್ಮ ತಮ್ಮ ರಾಜ್ಯಗಳ ರಾಜಧಾನಿಗಳಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿಗಳನ್ನು ನಡೆಸುತ್ತಿದ್ದವು. ನೋಟು ರದ್ದು ಮತ್ತು ತೀವ್ರ ಬೆಲೆ ಕುಸಿತದಲ್ಲಿ ವ್ಯಕ್ತವಾಗುತ್ತಿರುವ ತೀವ್ರಗೊಂಡ ಬಿಕ್ಕಟ್ಟು ರೈತ ಸಂಘಟನೆಗಳು ಕೇಂದ್ರ ಸರ್ಕಾರದ ಮೇಲೆ ಗಮನ ಕೇಂದ್ರೀಕರಿಸುವಂತೆ ಮಾಡಿವೆ.

ಆ ವರ್ಷ ಲಾಭದಾಯಕ ಬೆಲೆ ಹಾಗೂ ಸಾಲ ಮನ್ನಾ ಬೇಡಿಕೆಗಳ ಆಧಾರದಲ್ಲಿ ಸುಮಾರು 150 ರೈತಾಪಿ ಸಂಘಟನೆಗಳು ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ರಚಿಸಿಕೊಂಡವು. 2018 ರಲ್ಲಿ ,ವಿವಿದೆಡೆಗಳಿಂದ ಬಂದ ನಾಲ್ಕು ಬೃಹತ್ ರ್ಯಾಲಿಗಳು ದೇಶದ ರಾಜಧಾನಿ ನವ ದೆಹಲಿಯಲ್ಲಿ ಸಮಾವೇಶಗೊಂಡು ಪ್ರತಿಭಟನಾ ಅಲೆಯನ್ನೇ ಎಬ್ಬಿಸಿದವು.

ವ್ಯಾಪಕ ಸಾಮಾಜಿಕ ಸಂಯೋಜನೆ ಒಳಗೊಂಡ ಕಾರಣದಿಂದ ಸಹ ಈ ಕಾರ್ಷಿಕ ಪ್ರತಿಭಟನೆ ಪ್ರಾಮುಖ್ಯತೆ ಪಡೆದಿದೆ. “ಗ್ರಾಮೀಣ ಸಮಾಜದ ವಿವಿಧ ಸ್ತರಗಳ ರೈತಾಪಿ ಸಮೂಹವನ್ನು ಒಟ್ಟಾಗಿ ಸೆಳೆದಿರುವುದರಿಂದ ನಮ್ಮ ಈ ಪ್ರತಿಭಟನೆ ಅತ್ಯಂತ ಮಹತ್ವಪೂರ್ಣವಾದುದ್ದಾಗಿದೆ” ಎಂದು 1.5 ಕೋಟಿ ಸದಸ್ಯತ್ವದ ಅಖಿಲ ಭಾರತ ಕಿಸಾನ್ ಸಭಾ ದ ಜಂಟಿ ಕಾರ್ಯದರ್ಶಿ ವಿಜು ಕೃಷ್ಣನ್ ಅಭಿಪ್ರಾಯ ಪಡುತ್ತಾರೆ

ಗ್ರಾಮೀಣ ಮತ

2018 ರಲ್ಲಿ ಮೂರು ಮುಖ್ಯ ರಾಜ್ಯಗಳ ಬಿಜೆಪಿ ಸೋಲಿಗೆ ಗ್ರಾಮೀಣ ಮತವೇ ಕಾರಣ ಎಂದು ವ್ಯಾಪಕವಾಗಿ ಆರೋಪಿಸಲಾಗುತ್ತಿದೆ. ಅಂದಿನಿಂದ ಎಲ್ಲ ರಾಜಕೀಯ ಪಕ್ಷಗಳು ಸಾಲ ಮನ್ನಾ ಮತ್ತು ರೈತರ ಖಾತೆಗೆ ಹಣ ಹಾಕುವ ಯೋಜನೆ ಪ್ರಕಟಿಸುತ್ತಿವೆ.ಈ ವರ್ಷದ ಫೆÉಬ್ರವರಿ ಯಲ್ಲಿ ಸಣ್ಣ ಹಾಗೂ ಅತಿ ಸಣ್ಣ ರೈತರಿಗೆ ವಾರ್ಷಿಕ 6000 ರೂ. ಹಣ ನೀಡುವ ರಾಷ್ಟ್ರೀಯ ನಗದು ವರ್ಗಾವಣೆ ಯೋಜನೆಯನ್ನು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಪ್ರಕಟಿಸಿತು. ಕಾಂಗ್ರೆಸ್ ಪ್ರಣಾಳಿಕೆ ಐದು ಕೋಟಿ ಕಡು ಬಡವರಿಗೆ ಅಷ್ಟೇ ಮೊತ್ತವನ್ನು ಪ್ರತಿ ತಿಂಗಳು ನೀಡುವುದಾಗಿ ಘೋಷಿಸಿದೆ.

ರಾಷ್ಟ್ರೀಯ ಹಾಗೂ ಪ್ರಾದೇಶಿಕ ಪಕ್ಷಗಳು ರೈತ ಭರವಸೆಗಳನ್ನು ಒಳಗೊಂಡ ಪ್ರಣಾಳಿಕೆ ಬಿಡುಗಡೆ ಮಾಡಿವೆ. ಬಿಜೆಪಿ ಕೂಡ ಒಂದು ಲಕ್ಷ ರೂ ವರೆಗೆ ಬಡ್ಡಿ ರಹಿತ ಸಾಲ ನೀಡುವುದಾಗಿ ಹೇಳಿದರೆ, ಕಾಂಗ್ರೆಸ್ ರೈತರ ಸಂಪೂರ್ಣ ಸಾಲ ಮನ್ನಾ ಮಾಡುವ ಹಾಗೂ ಪ್ರತ್ಯೇಕ ಕೃಷಿ ಬಜೆಟ್ ಮಾಡುವುದಾಗಿ ಭರವಸೆ ನೀಡಿದೆ. ದಶಕಗಳಿಂದ ವ್ರಣಗೊಂಡು ಉಲ್ಬಣವಾಗಿರುವ ಬಿಕ್ಕಟ್ಟನ್ನು ಈ ರಾಜಕೀಯ ಪಕ್ಷಗಳು ಹೇಗೆ ನಿಭಾಯಿಸಲಿವೆ ಎಂಬುದನ್ನು ಮುಂದೆ ನೋಡಬೇಕಿದೆ. ಆದರೆ ಈಗ ವಳೆಗೆರಹಳ್ಳಿ ಯ ಎಲ್ಲ ರೈತರು ಈ ಭರವಸೆಗಳನ್ನು ನಂಬುತ್ತಿಲ್ಲ.

“ಬೆಲೆ ಬಗ್ಗೆ ಏನು? ಮತ್ತೊಮ್ಮೆ ನಮ್ಮ ಬೆಳೆ ಮಾರುವಾಗ ಈ ಹಣ ಹಾಕುವ ಯೋಜನೆ ಹೇಗೆ ಖಾತರಿ ನೀಡುತ್ತದೆ, ಇವೆಲ್ಲವನ್ನೂ ನಾವು ಹೇಗೆ ತಿಳಿಯುವುದು, ನೀವು ಮತ್ತೇ ಇಲ್ಲಿಗೆ ಬರುವ ಹೊತ್ತಿಗೆ ನಾವು ಇದ್ದವೂ ಇಲ್ಲವೋ, ನಮ್ಮ ಕುಟುಂಬದವರನ್ನು ನೀವು ಮಾತನಾಡಿಸುವುದಿಲ್ಲ ಎಂದು ನಾನು ಹೇಗೆ ಹೇಳಲಿ?”ಎಂದು , ತನ್ನ ಗ್ರಾಮದ ಮತ್ತೊಬ್ಬರನ್ನು ಕಳೆದುಕೊಂಡು ದುಃಖತಪ್ತನಾದ 32 ವರ್ಷದ ರೈತ ಉಮೇಶ್ ಕೇಳುತ್ತಾನೆ. ಇವರ ಪ್ರಕಾರ ಇದು ಒಂದು ಮುಗಿಯದ ಮಾನವ ನಿರ್ಮಿತ ದುರಂತ.

– ದೀಪಾ ಕುರುಪ್ (ಕನ್ನಡಕ್ಕೆ : ಟಿ.ಯಶವಂತ)
ಕೃಪೆ: ಅಲ್ ಜಜೀರಾ

ಮೂಲ ಲೇಖನ ಓದಲು ಲಿಂಕ್ ಮೇಲೆ ಕ್ಲಿಕ್ ಮಾಡಿ

https://www.aljazeera.com/news/2019/04/india-elections-farm-crisis-pm-narendra-modi-190418191725241.html

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಕತೆ | ಮಾಯಮ್ಮ

Published

on

~ತೆಲುಗು ಮೂಲ: ಡಾ.ವೇಂಪಲ್ಲಿ ಗಂಗಾಧರ್,ಕನ್ನಡಕ್ಕೆ: ಡಾ.ಶಿವಕುಮಾರ್ ಕಂಪ್ಲಿ

ʼಆಗಸದ ತುಂಬಾ ಕಪ್ಪನೆಯ ದಟ್ಟ ಮೋಡಗಳು ಕವಿದುಕೊಂಡಿವೆ. ಮೋಡ ಮೋಡಗಳು ಬಸೆದುಕೊಂಡು ಗುಡುಗು ರ‍್ಜಿಸುತ್ತಿದೆ. ಗುಡುಗು ಗುಡುಗುಗಳನ್ನು ಹೊತ್ತಿಕೊಂಡು ಮಿಂಚುಗಳು ಮಿನುಗುತ್ತಿವೆ. ಮಿಂಚು ಮಿಂಚುಗಳು ಹೊಸೆದುಕೊಂಡು ಬೆಂಕಿಸುರಿಸುತ್ತಿವೆ.ಆ ಸೆಕೆಗೆ ಕಪ್ಪುಮೋಡ ಕದಲಿಹೋಗುತ್ತಿದೆ. ಹೊಡೆದುಕೊಂಡು ಹೋಗುತ್ತಿದೆ. ಹೊಗೆಯನ್ನು ತಗಲಿಸಿಕೊಂಡು ಬೋಂಕನೆ ಸರಿಯುತ್ತಿದೆ. ನಕ್ಕನ್‌ ಕರೇಮೋಡ. ಈ ಗಡ್ಡೆಮ್ಯಾಕೆ ಸುರಿಬೇಕಂದರೆ ಈ ಮಾಡಗಳಿಗೆ ಏನು ಮಾಡಬೇಕೋ. ನಮ್ಮ ನೆತ್ತಿಯ ಮೇಲೆ ಬರವನ್ನು ಹಾಕಿ ಎಲ್ಲಿಗೋ ಮಳೆಗಳನ್ನ ಓಡಿಸಿಬಿಡುತ್ತವೆ. ಈ ಮಾಡಗಳಿಗೆ ಅದೇಟು ತೀಟಿ…” ವೀರಶಿವ ಬೈದುಕೊಳ್ಳುತಿದ್ದಾನೆ ಮಾಯಮ್ಮನ ಗುಡಿಯ ಪಡಸಾಲೆಯೊಳಗೆ ಉದ್ದಕೆ ಮಲಗಿಕೊಂಡು.
ಕಪ್ಪನೆಯ ಶರೀರ. ಮಾಸಿದ ಗಡ್ಡ. ಹರಿದುಹೋಗಿರುವ ಬಟ್ಟೆಗಳು. ಕೈಯೊಳಗೊಂದು ಬಿದುರು ಕೋಲು. ಹೆಗಲ ಮೇಲೊಂದು ಜೋಳಿಗೆ. ಧೂಳ ಕಾಲಿನ ಮೇಲೊಂದು ಕುರ ಅದಕ್ಕೆ ಮುತ್ತಿಕೊಳ್ಳುತ್ತಿರುವ ನೊಣದ ಹಿಂಡು, ಇವು ತಿಕ್ಕ ಶಿವನ ಆಕಾರ. ಯಾವಾಗಲೂ ಮಾಯವ್ವನ ಗುಡಿಯ ಹತ್ತಿರವೇ ಇರುತಾನೆ. ಹೊಟ್ಟೆ ಹಸಿದಾಗ ಮಾತ್ರವೇ ಎದ್ದು ಹಳ್ಳಿಗಳ ಒಳಗೆ ಬಂದು ಯಾರೋ ಒಬ್ಬರ ಮನಿಯೊಳಗೆ ಕುಂತು ಅಷ್ಟು ಜೋಳಿಗಿಯೊಳಗೆ ಹಾಕಿಸಿಕೊಂಡು ಹೋಗಿ ಆ ಗುಡಿಯ ಒಳಗೇ ಕುಂತು ತಿನ್ನುತ್ತಾನೆ. ಕಾಲುವೆಯೊಳಗೆ ಹರಿವ ನೀರನ್ನು ಬಾಯಿಗಚ್ಚಿಕೊಂಡೇ ಕುಡಿತಾನೆ. ಹಂಗೇ ಆತನ ಬದುಕೆಲ್ಲಾ ಕಳೆದು ಹೋಗುತ್ತಿದೆ.

ಆಕಾಶವೆಂದರೆ ಕೋಪ. ಮೋಡಗಳೆಂದರೆ ಕೋಪ. ಬೆಳೆಗಳೆಂದರೆ ಕೋಪ. ವ್ಯವಸಾಯವೆಂದರೆ ಕೋಪ. ನಂಬಿಕೊಂಡ ದೇವರೆಂದರೆ ಕೋಪ. ಅದುಕ್ಕೇ ಮಾಯವ್ವ ತಾಯಿಗೆ ಅರಿಷಿಣ ಕುಂಕುಮದ ಬದಲು ಮಸಿಬಳಿಯುತ್ತಾನೆ. ಆ ಗುಡಿ ಹತ್ರ ಆ ತಾಯಿಗೆ ಪೂಜೆಗಳಿಲ್ಲ ಪುನಸ್ಕಾರಗಳಿಲ್ಲ. ದೇವರ ವಿಗ್ರಹವೂ ಕೊಂಚ ಮುಕ್ಕಾಗಿದೆ. ಬಾವಲಿಗಳು ಸೇರಿಕೊಂಡಿವೆ. ಹೊಲಸು ನಾತ ಹೊಡೆಯುತ್ತದೆ. ಅಂತಹ ಗುಡಿಯಲ್ಲೇ ತಿಕ್ಕ ಶಿವಪ್ಪ. ಆ ತಾಯಿಗೆ ಬಾಯಿಗೆ ಬಂದಂಗೆ ಬೈಯುತ್ತಾ ಇರುತ್ತಾನೆ.
ತಿಕ್ಕ ಶಿವಪ್ಪನೆಂದರೆ ನಮ್ಮ ಹಳ್ಳಿಯೊಳಗೆ ಎಲ್ಲರಿಗೂ ಅಭಿಮಾನ. ದೊಡ್ಡ ದೊಡ್ಡವರೆಲ್ಲಾ ಕೈಯೆತ್ತಿ ಮುಗಿಯುತ್ತಾರೆ.

ಆತ್ಮೀಯತೆಯಿಂದ ಆದರಿಸುತ್ತಾರೆ. ಅತ ಬಂದು ಕೇಳಬೇಕೇ ವಿನಃ ಆಸ್ತಿಗಳನ್ನಾದರೂ ಕೊಟ್ಟುಬಿಡುತ್ತಾರೆ. ಆತನಿಗಿರುವ ಹೆಸರು ಅಂತಾದ್ದು. ತಿಕ್ಕ ಶಿವನೆನ್ನೋ ಹೆಸರು ಕೂಡಾ ಅಮಾಯಕವಾಗಿ ಮಕ್ಕಳು ಮಾತಾಡಿಕೊಳ್ಳೋದು. ʼವೀರ ಶಿವʼ ಅಂತಾ ಬಾಯತುಂಬಾ ಕರೆಯಬೇಕೆಂದರೆ ಎಲ್ಲರಿಗೂ ಪರಮಾನ್ನ ತಿನ್ನುವಷ್ಟು ಇಷ್ಟ. ಆಗ… ಆಗ್ಯಾವಾಗಲೋ.. ನಾನು ಸಣ್ಣವನಿದ್ದಾಗಿನ ದಿನದೊಳಗೆ ವೀರ ಶಿವನ ಸಾಹಸಗಳ ಕುರಿತು ಕತೆ ಕತೆಗಳಾಗಿ ಹೇಳುತಿದ್ದರು. ಆ ಕಥೆಗಳೆಲ್ಲವೂ ಜ್ಞಾಪಕಕ್ಕೆಬರುತ್ತಿವೆ…
***
ದಿನಾ ರಾತ್ರಿ ಹೊತ್ತಿಗೆ ದೊಡ್ಡ ಹುಲಿ ಬರುತಾತೆಂದು ಹಳ್ಳಿಯ ಜನ ಭಯಬೀಳುತಿದ್ದರೆ ಆ ವಿಷಯವು ಚಿಕ್ಕ ವೀರಶಿವನಿಗೆ ಒಂದು ದಿನ ತನ್ನ ಜೊತೆಗಾರರನ್ನು ಹಿಂದಾಕಿಕೊಂಡು ಬೆಟ್ಟದ ಮಲ್ಲಪ್ಪನ ಗುಡ್ಡದ ಬಯಲಿಗೆ ಹೊಂಟನು. ಕಣವಿಹಳ್ಳಿ ಅಡವಿಯೊಳಗಿಂದ ದಾಟಿಕೊಂಡು ಕುಮಾರನ ಹಳ್ಳಿ ದಿಕ್ಕಿಗೆ ತಿರುಗಿದನು.ಏಳು ಮೆಟ್ಟಿನ ಹುಲಿಬೇಟೆಗೆಂದು ತಿಳಿದರೆ ಯಾರೂ ಹಿಂದೆ ಬರಲಾರರೆಂದು ಮೊಲದ ಬೇಟಿಗೆ ಹೋಗಾನ ರ‍್ರಿ ಅಂತ ನಂಬಿಸಿದ್ದನು. ನಡು ರಾತ್ರಿತಂಕಾ ಮಲ್ಲಪ್ಪನ ಗುಡ್ಡಕ್ಕೆ ಸೇರಿಕೊಂಡು ಅಲ್ಲಿಂದ ಅಡ್ಡದಾರಿಗುಂಟಾ ಮಲ್ಲಪ್ಪನ ಗುಡ್ಡದ ಬಯಲ ಕಡೆಗೆ ಸೇರಿದರು.
ಕೈಯೊಳಗಿನ ನಾಡ ಬಂದೂಕು ಹಸಿದ ಕಣ್ಣು ಬಿಡುತ್ತಿದೆ. ಬಂಡೆಗಲ್ಲಿನ ಮೇಲೇರಿ ಕೆಳಗೆ ನೋಡುತಿದ್ದಾನೆ ವೀರಶಿವ. ಸಣ್ಣಗೆ ಪೊದೆಯೊಳಗಿನ ಎಲೆಗಳು ಅಲುಗಿದಂಗಾಯಿತು. ಜೊತೆಗಾರರು ಬೆದರಿ ಗುಡ್ಡದ ಮೇಲಕ್ಕೆ ಏರತೊಡಗಿದರು. ವೀರ ಶಿವ ತುಪಾಕಿಯನ್ನು ಸರಿಮಾಡಿಕೊಂಡನು. ಗುರಿ ಕುದುರಿತು. ನೋಟದೊಳಗೆ ಏನೋ ಅನುಮಾನ ಕಾಣಿಸಿತು. ತಡೆದನು. ಲಾಟೀನಿನ ಬುಡ್ಡಿ ದೀಪವನ್ನ ಸ್ವಲ್ಪ ಮೇಲೆತ್ತಿರೆಂದು ಹಿಡಿದುಕೊಳ್ಳಿರೆಂದು ಹೇಳಿದನು. ಪರೀಕ್ಷೆಯಿಂದ ಮರದ ಕಡೆಗೆ ನೋಡಿದನು. ಬಂಡೆ ಇಳಿಯಲು ಪ್ರಾರಂಭಿಸಿದನು. ಎಲ್ಲರೂ ಬ್ಯಾಡಾ ಅಂದರು. ಆದರೂ ಕೇಳದಂತೆ ಹೆಜ್ಜೆಯ ಸಪ್ಪಳ ಕೇಳದಂತೆ ಮರಗಳ ಕೆಳಗೆ ಹೋಗಿ ಸ್ವಲ್ಪ ಬಗ್ಗಿಕೊಂಡು ಎರಡು ಕೈಗಳಿಂದ ಅವಚಿಕೊಂಡನು. ದಾರಿ ಬಳಿ ಜಿಂಕೆ ಮರಿ ಕೊಸರಾಡುತ್ತಿದೆ. ಆಕಡಿಗೆ ಈ ಕಡಿಗೆ ಅದು ತಪ್ಪಿಸಿಕೊಳ್ಳಬೇಕೆಂದು ಕೊಸರಾಡುವುದನ್ನು ನೋಡಿ ಕೈಯೊಳಗಿದ್ದ ಹಗ್ಗದಿಂದ ಅದರ ಎರಡು ಕಾಲು ಕಟ್ಟಿ ಅಲ್ಲೇ ವಗೆದನು. ಅದು ಅರಚುತ್ತಲೇ ಇದೆ. ಅಲ್ಲಿಂದ ಚಕ ಚಕನೇ ಗುಡ್ಡದ ಬಂಡೆಯನ್ನೇರಿದನು. ನಾಡ ಬಂದೂಕನ್ನು ಕೈಯೊಳಗೆ ತೆಗೆದುಕೊಂಡನು. ಜಿಂಕೆ ಮರಿಯ ಕಡೆಗೆ ಗುರಿ ಇಟ್ಟುಕೊಂಡು ಹೊಂಚಿಕೊಂಡು ಕುಳಿತನು. ಆ ಜಿಂಕೆ ಮರಿ ಅಡವಿಯೆಲ್ಲಾ ಅದುರುವಂತೆ ಮೊರೆಯುತ್ತಲೇ ಇದೆ.

ಲಾಟೀನು ಬುಡ್ಡಿಯ ಬೆಳಕನ್ನು ಇಳಿಸಿದನು. ಜೊತೆಗೆ ಬಂದವರೆಲ್ಲಾ ಬೆದರಿ ಮುದುರಿಕೊಂಡು ಏನು ನಡೆಯುತ್ತಿದಿಯೋ ಏನೋ ಎಂದು ನೋಡುತಿದ್ದಾರೆ. ಬಂದೂಕು ಜಿಂಕೆ ಮರಿಯ ಕಡೆಗೇ ಇದೆ. ಜಿಂಕೆಯ ಕೂಗು ಹೆಚ್ಚಾಯಿತು. ಒಂದೇ ಸಾರಿಗೆ ಸಾವಿನ ಕೂಗು ಕೂಗಿತು. ವೀರಶಿವನ ಕೈಯೊಳಗಿನ ಬಂದೂಕು ರ‍್ಜಿಸಿತು. ತೋಟ ತೂರಿ ನುಗ್ಗಿಹೊರಟಿತು. ಹುಲಿ ಎಗರಿಬಿತ್ತು. ಹುಲಿ…ಹುಲಿ… ಜಿಂಕೆಗಾಗಿ ಬಂದಿತ್ತು. ವೀರಶಿವನ ಗುರಿ ಗೆದ್ದಿತು. ಆ ಕ್ಷಣದಲ್ಲೇ ಹಗ್ಗದ ಮೊಲಕು ಬಿಡಿಸಿಕೊಂಡ ಜಿಂಕೆ ಅಷ್ಟೇ ಹೆದರಿಕೆಯಲ್ಲಿ ಜಿಗಿದು ಹಾರಿ ಪೊದೆಯೊಳಗೆ ತೂರಿಹೋಯಿತು. ಗುಡ್ಡ ನಾಲ್ಕು ಹೆಜ್ಜೆ ಇಳಿದು ಮತ್ತೆ ಬಂದೂಕನ್ನು ಸರಿಪಡಿಸಿಕೊಂಡು ಕೆಳಗೆ ಬಿದ್ದು ವಿಲವಿಲನೇ ವದ್ದಾಡುತಿದ್ದ ಹುಲಿಯನ್ನು ಗುರಿಯಿಟ್ಟು ಮತ್ತೆ ಹೊಡೆದನು. ಅದು ರ‍್ಜಿಸುತ್ತಾ ವದ್ದಾಡಿ ಸತ್ತಿತು. ಇದನ್ನೆಲ್ಲಾ ಗದಗದನೇ ನಡುಗುತ್ತಾ ನೋಡುತಿದ್ದ ಜೊತೆಗಾರರೆಲ್ಲಾ ಅಂಗೇ ಕೇಕೆ ಹಾಕಿದರು. ಇದು ಪರಶಿವನ ಬೇಟೆಯ ಕಥೆ.
ಹುಲಿಯನ್ನು ಹೊಡೆದನೆಂದು ಊರೆಲ್ಲಾ ತಿಳಿದಮೇಲೆ ಎತ್ತನ ಬಂಡಿಯಮೇಲೆ ಸತ್ತ ಹುಲಿಯನ್ನೂ, ವೀರ ಶಿವನನ್ನೂ ಕೂರಿಸಿ ಮೆರವಣಿಗೆ ಮಾಡಿದರು ಊರಜನ. ಸುತ್ತು ಮುತ್ತಲ ಅರವತ್ತು ಹಳ್ಳಿಗಳವರೂ ಬಂದು ಹಬ್ಬ ಮಾಡಿದರು.ಆ ಹುಲಿ ರ‍್ಮ ತೆಗೆದು ರ‍್ಪದಿಂದ ಪರಶಿವನ ಮನೆಗೆ ನೇತು ಹಾಕಿದರು.ಹುಲಿಯುಗುರು ತೆಗೆದು ಬಂಗಾರದ ಸರಕ್ಕೆ ಹಾಕಿಕೊಂಡರು.
***
ಪರಶಿವನ ವಿವಾಹ ನಿಶ್ಚಯವಾಯಿತು. ಕರವಾಗಿ ಮಾವನಿಗೆ ಕೊಮಾರನ ಹಳ್ಳಿ ತಾಂಡಾದ ಬಳಿಯ ಬೆದ್ದಲು ಭೂಮಿಯನ್ನು ನೀಡಿದನು. ವಿವಾಹದ ದಿನ ವಧು ಪರ‍್ವತಿಗೆ ಏಳು ಗಜದ ರೇಷಿಮೆ ಸೀರಿ,ಝರಿ ರವಿಕೆ, ಬಂಗಾರದ ಬಳೆಗಳು,ಮೂಗು ನತ್ತು,ಬುಗುಡಿ,ಬೆಂಡೋಲಿ,ತೀಕಿ,ನಾಗರ,ಬೆಳ್ಳಿ ಡಾಬು, ಏಳುವರಹದ ವಡವೆಗಳು ಎಲ್ಲಾ ಪರಶಿವನೇ ಕನ್ನೆಗೆ ಇತ್ತನು.
“ ಬರಗಾಲವು ಕಿತ್ತು ತಿನ್ನುವಾಗ ಇದೇನಪೋ ಮದುವಿ” ಎಂದರು ಸರೀಕರು.
“ ನಮ್ಮೂರ ಗೌಡಪ್ಪನ ಮದುವಿ ನಾವು ಘನವಾಗೇ ಮಾಡಿಕೊಳ್ಳತೀವಿ” ಅಂದು ಆಕಾಸದಂಗ ಹಂದರ ಹಾಕಿ,ಊರೆಲ್ಲಾ ರಂಗೋಲಿ ಬಿಟ್ಟು,ದೊಡ್ಡ ಊರ ಹಬ್ಬದಂತೆ ಹನ್ನೆರಡು ದಿನಗಳ ಮದುವಿ ಮಾಡಿದರು. ಸುತ್ತು ಹಳ್ಳಿಗಳೂ ಸಂಭ್ರಮದಿಂದ ಕುಣಿದವು.
ಮದುವಿ ಹೆಣ್ಣು ಪರ‍್ವತಿ ಅದೆಷ್ಟು ಅದೃಷ್ಟವಂತಳೋ..!? ಎಂದು ಊರೆಲ್ಲಾ ಗಲಗಲನೇ ಅಂದುಕೊಂಡರು. ಅದೇನು ಗಾಚಾರನೋ…ಆಯಮ್ಮನು ಊರೊಳಗೆ ಕಾಲಿಟ್ಟೊಡನೆಯೇ ಬರವು ಬೆನ್ನುಬಿದ್ದಿತು. ಮನಿ ಮನಿಗೆ ಅರಿಷ್ಟವು ಬಡಿಯಿತು. ಬಾವಿಗಳೆಲ್ಲಾ ಒಣಗಿ ಹೋಗಿ, ಹಳ್ಳಗಳೆಲ್ಲಾ ಇಂಗಿ ಹೋಗಿ, ಊರು ನಂಬಿದ ಚಿನ್ನದ ಹಗರಿ ಎಂಬ ಕಿರು ನದಿಯು ಒಣಗಲು ಶುರುವಾಗಿದೆ. ಅವ್ವನ ಜಾತ್ರೆಯ ದಿನ ಮಾಯವ್ವನಿಗೆ ಬೋನಗಳ ಎಡೆ ಇಟ್ಟರು,ಅಂಗಳದಲ್ಲಿ ಕುರಿಕೋಣ,ಆಡು ಕೋಳಿಗಳೆಂಬೋ ನೂರಾರು ಜೀವಿಗಳ ರಕ್ತದ ಮುಖಗಳನ್ನ ಚಲ್ಲಿ, ಬಂಡಿಗಳ ಕಟ್ಟಿ, ಸಿಡಿಗೆ ತೋರಣಗಳನ್ನು ಕಟ್ಟಿಸಿದ್ದಾರೆ. ಗುಡಿಯಲ್ಲಿ ತಾಯಿಮರ‍್ತಿಗೆ ಬೆಳ್ಳಿಯ ಮುಖ,ಕಣ್ಣು,ಕೋರೆಗಳ ಮಾಡಿ ಇಟ್ಟಿದ್ದಾರೆ. ಜಾತ್ರಿಯ ಪೂಜಿ ಜೋರಾಗಿ ನಡೆಯುತ್ತಿದ್ದಾಗಲೇ ತಳವಾರ ಲಕ್ಷ್ಮಿಯ ಮೈಮ್ಯಾಲೆ ಆ ಮಾಯವ್ವ ತಾಯಿ ಮೈದುಂಬಿ ಬಂದಳು…
“ಅಲಲಲಲ ಮಕ್ಕಳೇ…ನಾನು ಯಾರು!?
ಈ ಭೂಮಿ ಆಕಾಶ ಹುಟ್ಟಿದಾಗಿಂದಲೂ…
ಮಹಾಶಕ್ತಿ; ಲೋಕ ಮಾತೆ
ಆದಿಶಕ್ತಿ ; ಲೋಕ ಮಾತೆ
ಕಾಲ ಮೀರಿದವಳು ಗುಡುಗು,ಸಿಡಿಲು,ಗಾಳಿ,ಮಳೆ,ಮುಗಿಲು..
ಈಗ ಒಂದು ಪಕ್ಷಿಯಾಗಿ ಹುಟ್ಟಿ…
ಕೂರಬೇಕೆಂಬ ತಾವು ಸಿಗದಾಗಿ…..
ಕಲ ಕಲನೆ ಗಾಳಿ ಗಾಳಿಯಾಗಿ ಅಂತರ ಅಂತರವಾಗಿ ಆಡುತ್ತಾ…
ಮಹಾ ಬಲಿದಾನವನ್ನ ಕೋರುತ್ತಿದೆ….” ಎಂದು ಹೇಳಿ ದೇವಾಲಯದ ಸುತ್ತಾ ಕಾರ ಮತ್ತು ಮಣ್ಣು ಚಲ್ಲುತ್ತಾ ತಿರುಗಿದಳು. ಜಾತರೆಯು ಪರ‍್ತಿಯಾಯಿತು. ಆದರೆ ಆ ತಾಯಿ ಶಾಂತಿಯಾಗಲಿಲ್ಲವೆಂದು ತಿಳಿದುಹೋಯಿತು.

ಹಸಿರು ಮರಗಿಡಗಳು ಒಣಗಿ ಹೋಗಿವೆ. ಎಲ್ಲಿಯೂ ಕೂಡಾ ಹನಿ ನೀರಿರದ ಪರಿಸ್ಥಿತಿ. ಬರಗಾಲ …ಬರಗಾಲಕ್ಕೆ ಕಾರಣ ಆಯಮ್ಮ ಪರ‍್ವತಿಯೇ…
“ಎಲ್ಲಿಂದಲೋ ಇಲ್ಲಿಗೆ ಸೊಸೆಯಾಗಿ ಬಂದಳು.ಇದೆಲ್ಲವೂ ಆಯಮ್ಮನ ಕಾಲ್ಗುಣವೇ ಎಂದು ಕೆಲವರು ಹೇಳಿದರೆ, ಅದೇನಿಲ್ಲ ಬರಕ್ಕೆ ಕಾರಣ ಆಯಮ್ಮನದೇಗಾಗುತ್ತದೆ ಎಂದು ಕೆಲವರು ಹೇಳಿದರು. ಅದೇನಲ್ಲ ಆಕೆ ಅರಿಷ್ಟ ಊರಿಗೆ ಶಾಪವಾಗಿದ್ದಾಳೆ ಎನ್ನಲು ಪ್ರಾರಂಭಿಸಿದರು. ಆಕೆಯ ಇಂತಹ ಮುಳ್ಳು ಮೊನೆಯ ಮಾತುಗಳನ್ನು ಭರಿಸದಾದಳು.ತನ್ನೊಳಗೆ ತಾನು ಕುಗ್ಗಿ ಕುಗ್ಗಿ ಅಳತೊಡಗಿದಳು. ತನ್ನ ಅರಿಷ್ಟದ ಕಾರಣದಿಂದಾಗಿಯೇ ಊರು ಬಂಜರು ನೆಲವಾಗುತ್ತಿದೆ ಎಂದು ಅಂದುಕೊಂಡಳು.
ಪರಶಿವನು ಸಮಾಧಾನಿಸಿದರೂ ಕೇಳಲಿಲ್ಲ.
ಗಂಡ ಹೊಲದ ಕಡೆಗೆ ಹೋದಾಗ ಆ ನಡು ಮದ್ಯಾನ್ಹದಲ್ಲಿ ಕಣಗಿಲೆಯ ಹೂಗಳನ್ನು ಬಟ್ಟಲತುಂಬಾ ಬಿಡಿಸಿಕೊಂಡು ಬಂದು ಅರೆದು ಮನಸಿನೊಳಗೆ ಆ ಮಾಯಮ್ಮ ತಾಯಿಗೆ ಅಡ್ಡ ಬಿದ್ದು ಹರಕೆ ಮಾಡಿಕೊಂಡಳು. “ ಊರು ಜನರ ಕಷ್ಟಗಳು ಕೊನಿಯಾಗಲಿ,ಕಣ್ಣೀರು ಬತ್ತಿ ಹೋಗಲಿ, ನೀರು ನೀರ ಸೆಲೆ ಹರಿದುಬರಲಿ…ಮಳೆ ಸುರಿದು ಸುರಿದೂ ನೆಲವೆಲ್ಲಾ ತೊಯ್ದು ಹಸಿರಾಗಲಿ. ಕರೆಗಳೆಲ್ಲಾ ತುಂಬಿಕೊಳ್ಳಲಿ…ಬೆಳೆ ಬೆಳೆದು ಸುಗ್ಗಿಯಾಗಲಿ… ಬರಗಾಲ ಹೋಗಲಿ… ಚಿನ್ನದ ಹಗರಿ ನದಿ ಮತ್ತೆ ಹರಿದಾಡಲಿ…. ತಾಯಿ ನನ್ನ ಆತ್ಮ ಬಲಿದಾನವನ್ನು ತೆಗೆದುಕೋ. ತಗೆದು ಕೋ ತಾಯಿ. ಎಂದು ಬಟ್ಟಲನ್ನು ಎತ್ತಿಕೊಂಡು ಗಟ ಗಟನೆ ಗಂಟಲಿಗೆ ಹಾಕಿಕೊಂಡಳು. ಕುಡಿದ ಕೆಲವೇ ಕ್ಷಣಗಳಲ್ಲಿ ಉಸಿರು ನಿಂತಿತು. ಕಾಲು ಕೈಗಳು ತಣ್ಣಗಾದವು.
ಚೆಂಜೆಗೆ ವೀರಶಿವನು ಬಂದು ನೋಡೋ ವೇಳೆಗೆ ಆಯಮ್ಮನ ಶರೀರವು ಕಪ್ಪಾಗಿ ಹೋಗಿತ್ತು.ಇನ್ನ ಯಾರೇನು ಮಾಡುತ್ತಾರೆ? ಪರಶಿವನ ದುಃಖವನ್ನು ಪದಗಳು ಹಿಡಿಯಲಾಗಲಿಲ್ಲ. ಬಿದ್ದು ಬಿದ್ದು ಅತ್ತನು. ಬಂಗಾರದಂತಹ ಹುಡುಗಿ ಮದುವಿ ಆಗಿ ಆರು ತಿಂಗಳು ಕಳೆಯಲಿಲ್ಲವಲ್ಲೋ…ಊರಿಗಾಗಿ ಪ್ರಾಣವನ್ನೇ ಕಳಕೊಂಡಳು ಎಂದು ಜನರೆಲ್ಲರೂ ಅಂದುಕೊಂಡರು. ಆಕೆಯನ್ನು ಚಿನ್ನದ ಹಗರಿ ನದಿ ದಡದಲ್ಲೇ ಹೂತರು. ಇನ್ನ ಆ ದಿನದಿಂದಲೇ ವೀರ ಶಿವನು ಆ ಮನೆಗೆ ಹೋಗದೆ ತೋಟದ ಬಳಿಯೇ ಇರತೊಡಗಿದನು. ಮನೆ ಬಳಿಗೆ ಹೋದರೆ ತನ್ನ ಪರ‍್ವತಿಯೇ ಗರ‍್ತಿಗೆ ಬರುತ್ತಾಳೆಂದು ಹೋಗುವುದನ್ನು ಬಿಟ್ಟು ಬಿಟ್ಟನು. ಮತ್ತೆ ಮದುವೆ ಮಾಡಿಕೊ ಎಂದು ಯಾರೇಳಿದರೂ ಕೇಳದಾದನು.
ನೀರಿನ ಪರಿಸ್ಥಿತಿ ಇನ್ನಾ ಅದ್ವಾನವಾಯಿತು. ಎಲ್ಲೆಲ್ಲಿಂದಲೋ ಗುಂಡೆಯೊಳಗಿನ ಗಬ್ಬು ನೀರನ್ನು ಕೂಡಾ ದೇವಿಕೊಂಡು ತರುತಿದ್ದಾರೆ.
***
ದಿನಗಳು ಕಳೆದು ಹೋಗುತ್ತಿದ್ದಂತೆ ಊರಿಗೆ ಪರ‍್ಲಬ್ಬವು ಬಂದಿತು.ಊರಿನೊಳಗೆ ಯಾವ ಸಂಭ್ರಮವೂ ಇಲ್ಲ. ಆಗ ಪರಶಿವನೇ ಮುಂದೆ ಬಂದು ಚಾವಡಿಯ ಬಳಿ ಸಮಾವೇಶ ನಡೆಸಿದನು. ನಾವಿರುವ ಊರೊಳಗೆ ಬರಗಾಲ ಹೋಗಬೇಕೆಂದರೆ ಅಲಾಯಿ ಹಬ್ಬವನ್ನು ಮಾಡಬೇಕು. ಬರಗಾಲ ಹೋಗಲು, ಮಳೆಹನಿ ಸುರಿಯಲು,ನಾವು ಊರಲ್ಲಿ ಪೀರ ದೇವರ ಅಲೆಗುಣಿ ತೋಡಬೇಕು.ಪೀರಲು ದೇವರನ್ನು ಕೂಡಿಸಿ, ಕತ್ತಲ ರಾತ್ರಿಯ ಅಲೆ ಕುಣಿಯ ಕೆಂಡದ ಕರ‍್ಯವು ಜರುಗಿಸಬೇಕು ಎಂದನು. ರ‍್ಮಕ್ಕಾಗಿ ಬಲಿದಾನವಾದ ಹಸನ ಹುಸೇನರಂತೆ ನಮ್ಮೂರಿನ ಒಳ್ಳೇದಕ್ಕಾಗಿಯೇ ಬಲಿದಾನವಾದ ಊರ ಪರ‍್ವತವ್ವನನ್ನು ನೆನೆದು ಯಾರಿಂದಲಾದರೂ ಊರಿಗೆ ಒಳ್ಳೆಯದಾದರೆ ಸಾಕು ಎಂದು ಊರಿನ ಹಿರಿಯರು ಹಾಗೇ ಆಗಲಿ ಎಂದು ಒಪ್ಪಿಕೊಂಡರು.

ಅಮಾಸಿ ಆದ ಮರುದಿನ ಅಲೆ ಕುಣಿ ತೋಡಿದರು. ಸುತ್ತಿಟ್ಟ ಪಂಜಾ ದೇವರುಗಳನ್ನು ಪೂಜೆಗಿಟ್ಟರು. ಹುಲಿಗಳು ಊರತುಂಬಾ ಕುಣಿಯತೊಡಗಿದವು. ಅಳ್ಳಳ್ಳಿ ಬುವ್ವಗಳು ಸೊಂಟಕ್ಕೆ ಗಂಟೆಯ ಪಟಗಾಣಿ ಕಟ್ಟಿಕೊಂಡು ಚಡ್ಡು ಹಿಡಿದು ಹೊರಟರು. ಮಸೂತಿಗೆ ಜನ ಬಂದು ಬಂದು ಸಕ್ಕರಿ ಓದಕಿ ಓದಿಸಿ ಸಿಹಿ ಪಡೆದು ಲಾಡಿ ಕಟ್ಟಿಕೊಂಡು ಹೊರಟರು.ಮಸೂತಿ ದೇವರುಗಳು ಊರೊಳಗೆ ಹೊರಟು ಎಲ್ಲಾ ದೇವರುಗಳನ್ನು ಬೇಟಿ ಮಾಡತೊಡಗಿದವು. ತಂಗಿ ಮಯಮ್ಮನ ಗುಡಿ ಹತ್ತಿರ ಬಂದು ಎರಡೂ ದೈವಗಳು ಅಪ್ಪಿಕೊಂಡು ಅತ್ತವು. ಬಿಡಿಸಿಕೊಂಡು ಬಿಡು ಊರಿಗೆ ಒಳಿತಾಗಲಿ ಎಂದು ಬಿಡಿಸಿಕೊಂಡು ಎರಡು ದಿಕ್ಕಿಗೆ ತಿರುಗಿದವು. ಕತ್ತಲ ರಾತ್ರಿಯ ದಿನ ಕಡಿದು ತಂದ ಮರದ ಬಡ್ಡೆಗಳು ಹೊತ್ತಿಕೊಂಡವು. ಕೆಂಪನೆಯ ಕೆಂಡದ ಕೆನ್ನಾಲಿಗೆಗಳು ಎದ್ದವು. ಜನ ಉಪ್ಪು ಹಿಡಿದು ಕಟ್ಟಿಗೆಗಳನ್ನು ಹೊತ್ತು ತಂದು ಕ್ವಾವ್‌ ಸೇನ್‌ ಬಾವ್‌ ಸೇನ್‌ ಎಂದು ಕುಣಿಗೆ ಹಾಕಿ ಉರಿ ಹೆಚ್ಚು ಮಾಡಿ ಸುತ್ತಿ ಸುತ್ತಿ ಹೊರಟರು.ಅಲೆ ಕುಣಿಯ ಕೆಂಡದ ಹಾಸಿಗೆಯೇನೋ ತಯಾರಾಯಿತು ಆದರೆ ಅದರಲ್ಲಿ ನಡೆಯುವವರು ಯಾರು? ಯಾವಾಗಲೂ ನಡೆಯೋ ಪೀರಣ್ಣ ಮಾವ ಮಂಚ ಹಿಡಿದಿದ್ದಾನೆ. ಮಗ ಜಮಾಲ ಕಮ್ಮಾರ ಹುಡುಗಿ ಕಾಂತಮ್ಮನನ್ನು ಎಬಿಸಿಗೊಂಡು ಊರು ಬಿಟ್ಟು ಓಡಿದ್ದಾನೆ.

ಕುಣಿ ಉರಿಯುತ್ತಲೇ ಇದೆ. ಆಗ ಪರಶಿವನೇ ಮುಂದಕ್ಕೆ ಬಂದನು. ಕೈಯೊಳಗೆ ದೊಡ್ಡ ಪೀರದೇವರ ಪಂಜಾವನ್ನು ಹಿಡಿದುಕೊಂಡು ಕುಣಿಯೊಳಗೆ ಹೆಜ್ಜೆ ಇಟ್ಟನು. ಹೆಜ್ಜೆ ಕದಲಲು ಕೆಂಡಗಳು ಹೂತು ಬಿಡುವಂತೆ ಎಗರಿ ಎಗರಿ ಬೀಳುತ್ತಿವೆ.ಅಲೆ ಕುಣಿಯ ತುಂಬಾ ಜನ…ತಾಗಿ ಕೊಳ್ಳುತ್ತಾ…ದಬ್ಬಿಕೊಳ್ಳುತ್ತಾ ನೋಡಲಿಕ್ಕೆ ಮೇಲೆ ಮೇಲೆ ಬೀಳುತಿದ್ದಾರೆ.
ಆ ಕಡೆಯಿಂದ ಈ ಕಡೆಗೆ , ಈ ಕಡೆಯಿಂದ ಆ ಕಡೆಗೆ ಮೂರು ಸಲ ಕೆಂಡದೊಳಗೆ ನಡೆದು ಪೀರದೇವರನ್ನು ಗದ್ದುಗೆ ಮೇಲಿಟ್ಟು ಕಣ್ಣು ತಿರುಗಿ ಕುಸಿದು ಬಿದ್ದನು ಪರಶಿವ.
“ ಅಭ್ಯಾಸವಿಲ್ಲದ ಕೆಲಸವನ್ನು ಯಾಕೆ ಮಾಡಬೇಕಪ್ಪಾ ಸ್ವಾಮಿ” ಎಂದನು ಪಕ್ಕದಲ್ಲಿದ್ದ ಹಿರಿಯ ಕತ್ಲಪ್ಪ.
“ ಈ ಬರಗಾಲ ನೋಡಲಾಗದೇ ಬಂದೆ ಕಣಜ್ಜೋ..” ಎಂದನು ವೀರ ಶಿವ ಬಿಗಿದ ಪಾದಗಳನ್ನು ನೋಡಿಕೊಳ್ಳುತ್ತಾ.
ಆದರೂ ಮಳೆರಾಯ ತಿರುಗಿ ನೋಡುತ್ತಿಲ್ಲ. ಹನಿ ಬೀಳುತ್ತಿಲ್ಲ. ಮಾಡಗಳೆಲ್ಲಾ ಮೊಂಡು ಬಿದ್ದುಬಿಟ್ಟಂಗದೆ.
ಅಲೆ ಕುಣಿಯ ಕೆಂಡ ಚೆಲ್ಲಾಡಿ ದೇವರು ಹೊರಟ ಬಳಿಕ ಆ ಬೂದಿಯನ್ನು ವಿಭೂತಿಯಾಗಿ ಬಳಸಲಿಕ್ಕೆ ,ಆಧಾರವಾಗಿ ಇಟ್ಟುಕೊಳ್ಳಲಿಕ್ಕೆ ಜನರು ಪೈಪೋಟಿಗೆ ಬಿದ್ದಿದ್ದಾರೆ. ಆ ಬೂದಿ ಇದ್ದರೆ ಮನೆಯೊಳಗೆ ದೆವ್ವಗಳ ಕಾಟ ಬರೋದಿಲ್ಲ. ಹತ್ತಿರ ಸುಳಿಯಲಾರವು ಎಂಬುದು ಅವರ ನಂಬಿಕೆ. ಉಳಿದ ಬೂದಿಯನ್ನ ಜನರು ಆಕಾಶಕ್ಕೆ ತೂರಿದರು. ಮಳೆರಾಯನಿಗೆ ಬಾರಪ್ಪೋ ಸ್ವಾಮಿ ಎಂದು ಕೈ ಮುಗಿದರು. ಆದರೂ ಆಕಾಶರಾಯ ಕರಗಲಿಲ್ಲ.
ಜನ ಗುಳೇ ಹೋಗಲು ಶುರು ಮಾಡಿದರು. ನೀರಿಲ್ಲದ ಊರಲ್ಲಿ ಬಿದ್ದು ಸಾಯುವುದಕ್ಕಿಂತಾ ಎಲ್ಯಾನ ಕಾಡಲ್ಲಾದರೂ ಗಡ್ಡೆ ಗೆಣಸು ತಿಂದು ಇರೋದೇ ಪಾಡೆಂದು ಊರ ಜನರು ಮನೆಗಳ ತೊರೆದು ಹೋಗುತಿದ್ದಾರೆ. ಇಷ್ಟು ಕಾಲ ನಂಬಿಕೊಂಡಿದ್ದ ನೆಲವನ್ನು ಬಿಟ್ಟು ಕೊಟ್ಟು ದೇಸಾಂತರ ಹೋಗುತ್ತಿರುವವರ ನೋಡಿದಾಗ ಪರಶಿವನಿಗೆ ನೋವಾಗುತ್ತಿದೆ.
ಆದರೂ ಪಾಪ ಆತನೇನು ಮಾಡುತ್ತಾನೆ. ಕರುಣ ರಸವನ್ನು ಹೊಮ್ಮಿಸುವ ಭಕ್ತ ಕುಮಾರವ್ಯಾಸನ ಕಥೆ ಹೇಳಿಸಿದರೆ ಆ ಮಾಡಗಳು ಕರಗಿ ಕರುಣಿಸುತ್ತವೆಂದು ಯಾರೋ ಹಿರಿಯ ಹೇಳಿದರೆ ಆಗಲಿ ಬಿಡೆಂದು ಶಿವಮೊಗ್ಗದ ಕಡೆಯಿಂದ ಕಲಾ ಕಾರರನ್ನು ಕರೆಕಳಿಸಿದನು. ರಾತ್ರಿಯೆಲ್ಲಾ ಮಾಯವ್ವ ತಾಯಿಗೆ ಕಾವ್ಯದ ರಸವನ್ನು ಉಣಿಸತೊಡಗಿದನು.
ಅಳಿದುಳಿದವರು ಕೂಡಿ ಮಳೆಯ ಹಾಡುಗಳ ಹಾಡುತಿದ್ದಾರೆ.
“ ಯಾತಕ್ಕೆ ಮಳೆ ಹೋದವೋ ಶಿವ ಶಿವಾ
ಲೋಕ ತಲ್ಲಣಿಸುತಾವೋ ಶಿವ ಶಿವಾ…
ಬೇಕಿಲ್ಲಾದಿದ್ದರೆ ಬೆಂಕಿಯ ಮಳೆ ಸುರಿದು
ಉರಿಸಿ ಕೊಲ್ಲಲು ಬಾರದೇ.
ಹೊಟ್ಟೆಗೆ ಅನ್ನ ಇಲ್ಲದಲೆ
ನಡೆದರೆ ಜೋಲಿ ಹೊಡೆಯುತಲೆ
ಪಟ್ಟದಾನೆಯಂತ ಸ್ತ್ರೀಯಾರು ಸೊರಗಿ
ಸೀರೆ ನಿಲ್ಲೋದಿಲ್ಲ ಸೊಂಟಾದ ಮೇಲೆ.
ಹಸುಗೂಸು ಹಸುವಿಗೆ ತಾಲದೆಲೆ
ಅಳುತಾವೆ ರೊಟ್ಟಿ ಕೇಳುತಲೇ
ಹಡೆದ ಬಾಣಂತಿಗೆ ಅನ್ನವು ಇಲ್ಲದಲೆ
ಏರುತಾವೆ ಮೊಳಕೈಗೆ ಬಳೆ.
ಒಕ್ಕಾಲು ಮಕ್ಕಳಂತೆ
ಅವರಿನ್ನು ಮಕ್ಕಳನು ಮಾರುಂಡರು
ಮಕ್ಕಳನು ಮಾರುಂಡು ರೊಕ್ಕವನು ಮಾಡುತಾರೆ
ಮುಕ್ಕಣ್ಣ ಮಳೆ ಕರುಣಿಸೋ..
ಸ್ತ್ರೀಯರು ಅಳುತ್ತಿದ್ದಾರೆ. ಹಳ್ಳಿ ಜನರು ಮುತ್ತಿಕೊಳ್ಳುತಿದ್ದಾರೆ. ಬಂಗಾರದಂತ ಮಕ್ಕಳನ್ನು ಮಾರುವುದೇಗೆ ಎಂದು , ಅಂತ ಘಳಿಗೆ ತಂದ ಮಳೆರಾಯನಿಗೆ ತಾಯಂದಿರು ಬರಕ್ಕೆ ಶಪಿಸುತಿದ್ದಾರೆ. ಇದನ್ನು ಕಂಡ ಪರಶಿವನಿಗೆ ಬಾಯಿ ಕಟ್ಟಿತು. ಕಾಲು, ಕೈಗಳು ಬಿಗಿಯಲಾರಂಭಿಸಿದವು. ನಾಟಿ ವೈದ್ಯರು ಬಂದು ಹಸಿರು ಸೊಪ್ಪಿನ ರಸ ಹಿಂಡಿ ಕೂಡಿಸಿದರು. ಹಾಡು ಕಾವ್ಯಗಳು ಮಧ್ಯದಲ್ಲೇ ನಿಂತು ಹೋದವು.
ಆ ದಿನ ಮೊದ ಮೊದಲು ಪರಶಿವನಿಗೆ ಸ್ವಲ್ಪ ಸ್ವಲ್ಪ ಮತಿ ತಪ್ಪುವುದು ಶುರುವಾಯಿತು. ಹುಚ್ಚು ಹುಚ್ಚಾಗಿ ಮಾತಾಡುವುದು…. ವಿಚಿತ್ರವಾಗಿ ನಗುವುದು..ಅಳುವುದು….ಆಕಾಶಕ್ಕೆ ತಿರುಗಿ ಉಗಿವುದು… ಈ ರ‍್ತನೆಯನ್ನು ನೋಡಿದವರಿಗೆ ಮನವೆಲ್ಲಾ ನೊಂದಿತು.
ಬಂಗಾರದಂತಹ ಮನೆಯ ನಡುಗಂಬ ಕುಸಿದು ಬಿದ್ದಾಗ, ಭೂಮಿಗಳೆಲ್ಲಾ ಪಾಳು ಬಿದ್ದಾಗ ವೀರಶಿವನನ್ನು ನೋಡಿಕೊಳ್ಳರ‍್ಯಾರೂ ಇಲ್ಲದಾದರು. ಕಾಲದೊಂದಿಗೆ ಆತನ ವಯಸ್ಸೂ ಕರಗಿ ಹೋಗುತ್ತಿದೆ. ಪ್ರಾಯ ಹಾರಿ ಹೋಗಿದೆ.
ಮನುಷ್ಯನೇನೂ ಕುಗ್ಗಲಿಲ್ಲ ಆದರೂ ಆಗಾಗ ಬಿದಿರುಕೋಲು ಹಿಡಕೊಂಡು ಊರೊಳಗೆ ಕಾಣಿಸುತಿರುತ್ತಲೇ ಇರುತ್ತಾನೆ. ಆದರೂ ಆ ಮನುಷ್ಯ ಸುಮ್ಮನಿರುತಾನಾ…
***
ಬೆಳಗಾದಗಿಂದಲೂ ಬೆಳ್ಳನೆಯ ಮೋಡಗಳನ್ನು ಬೈಯುತ್ತಲೇ ಇದ್ದವನು ಈಗ ಹೊರಟಿದ್ದಾನೆ.ವೀರಾಪುರದ ಬಳಿಯ ಕಾಕಿ ಚಣ್ಣದ ಎಲ್ಲಜ್ಜನನ್ನು ಕಲೆತು ಅಂಜನ ಹಾಕಿ ನೋಡು ಎಂದನು. ಚಿನ್ನದ ಹಗರಿ ನದಿ ಕತೆಯೇನೋ. ಆತ ನೋಡಿ ಹೇಳಿದನು.” ನೆಲದ ಕೆಳಗಿನಿಂದ ಆಕಾಶದ ಮೋಡದ ತನಕ ಅರಿಷ್ಟವು ಸುತ್ತಿಕೊಂಡಿದೆ. ದೊಡ್ಡ ಬಲಿದಾನ ನಡೆಯದ ಹೊರತು ಇದು ಹೋಗದು. “ ಹೌದೌದು. ಹುಣ್ಣಿಮೆ ದಿನವೂ ಮಾಯವ್ವ ತಾಯಿ ಮೈದುಂಬಿ ಇದೇ ಮಾತೇಳಿದಳು.” ಎನ್ನುತ್ತಾ ಜೋರು ಜೋರಾಗಿ ನಡೆದು ಮಾಯಮ್ಮ ದೇವಿ ಗುಡಿಯ ಬಳಿಗೆ ಬಂದನು. ವಿಗ್ರಹಕ್ಕೆ ಹತ್ತಿದ ಮಸಿಗುಡ್ಡೆಯನ್ನು ತೆಗೆದು ಹಾಕಿದನು. ಹರಿಷಿಣ ಕುಂಕುಮಗಳನ್ನು ಹಚ್ಚಿ ಹೂಗಳನ್ನು ಏರಿಸಿ ಪೂಜೆಗಳನ್ನು ಮಾಡಿದನು. ಗುಡಿಯೊಳಗೆ ಸೇರಿಕೊಂಡ ಬಾವಲಿಗಳನ್ನು ಓಡಿಸಿದನು. ಕಸಕಡ್ಡಿ ,ಮಲಿನಗಳನ್ನೆಲ್ಲಾ ತೆಗೆದು ದಿಬ್ಬದ ಮೇಲೆ ಒಗೆದನು. ಬಾಯಿಗೆ ಬಂದ ಮಂತ್ರಗಳೇನೋ ಆ ತಾಯಿಯ ಮುಂದೆ ಕೂತು ಹೇಳಿದನು. ಹಾಡಿದನು. ಸಾಷ್ಟಾಂಗ ನಮಸ್ಕಾರಗಳನ್ನು ಮಾಡಿದನು. ಅತ್ತನು. ರಾತ್ರಿಯೆಲ್ಲಾ ಆ ತಾಯಿಯ ವಿಗ್ರಹದ ಬಳಿಯೇ ಕೂತು ಪ್ರರ‍್ಥಿಸಿದನು. ಬೆಳ್ಳಿ ಮೂಡುವ ವೇಳೆಗೆ ಯಾವುದೋ ರಹಸ್ಯವನ್ನು ಕಂಡು ಹಿಡಿದವನಂತೆ ಪರಶಿವನ ಸಂಭ್ರಮದಿಂದ ಊರಿನೊಳಗೆ ಬಂದನು.
“ ಇನ್ನ ಇರಲ್ಲ ಬಿಡು… ಈ ಬರಗಾಲವನ್ನ ಅವ್ನವೌನ್‌ ಅದರ ಹೆಣ ನೋಡ್ತಾನಿ” ಎಂದು ಊರೆಲ್ಲಾ ತಿರುಗುತ್ತಾ ಹೇಳಿದನು. ಜನರೆಲ್ಲಾ ಈ ಹುಚ್ಚು ಮಾತುಗಳನ್ನ ಆಶ್ರ‍್ಯದಿಂದ ಕೇಳಿದರು.
ಬಿದಿರು ಕೋಲನ್ನು ಪಕ್ಕಕ್ಕೆ ಬಿಸಾಕಿ ಮಾಯಮ್ಮ ತಾಯಿ ದೇವರ ಗುಡಿ ಮುಂದೆ ಆ ದೇವಿಗೆ ಧಿಡನಮಸ್ಕಾರ ಮಾಡಿದನು. ಅಂಗೇ ಹೊರ ಹೊಂಟನು… ಎಲ್ಲಿಗೆ ಸಿದ್ದಯ್ಯನ ಗುಡ್ಡದ ಮೇಲಕ್ಕೆ. ರ‍್ಮಾನುಷವಾಗಿ ಒಣಗಿ ಬೀಳು ಬಿದ್ದಿರುವ ಭೂಮಿಗಳು. ಕೆಂಪು ಧೂಳಿನಿಂದ ಸುತ್ತೂ ತಿರುಗಿ ಬರುತ್ತಲಿದೆ. ಏನು ಧೂಳಿನ ದೆವ್ವ ಗಾಳಿ. ಹಾಗೇ ಮುಂದಕ್ಕೆ ಸಾಗಿದನು. ಒಣಗಿದ ಕೆರೆಯ ಬಳಿ ನಿಂತು ಸುತ್ತೂ ಮಾಯಮ್ಮ ತಾಯಿಯನ್ನ ಬಿಡದಂತೆ ಕಂಡನು. ದುಃಖಿಸಿದನು. ದೂರದಲ್ಲಿ ಊರ ಜನರು ಓಡುತ್ತಾ ಇತ್ತ ಕಡೆಗೇ ಬರುತಿದ್ದಾರೆ.
ರಾತ್ರಿಯೆಲ್ಲಾ ಕುಳಿತು ಮಸೆದು ಇಟ್ಟ ರ‍್ಧಚಂದ್ರಾಕಾರದ ಗಂಡು ಗೊಡಲಿಗೆ ಮುತ್ತಿಟ್ಟನು. ನೆಲದ ಮಣ್ಣನ್ನು ತೆಗೆದುಕೊಂಡು ಕಣ್ಣಿಗೆ ತೀಡಿಕೊಂಡನು. “ ನಮಗೇಕೆ ತಾಯಿ ಈ ನರಕ. ಆ ಕಡಿಗೆ ಎಲ್ಲರನ್ನ ಸಾಯಿಸಾದರೂ ಸಾಯಿಸು. ಇಲ್ಲದಿದ್ದರೆ ಎಲ್ಲರಿಗನ್ನಾ ಹೊಟ್ಟೆತುಂಬಿಸು. ನಡುವಿನ ಈ ಬರಗಾಲವೇಕೆ” ಕೈಯೊಳಗೆ ಉಳಿದ ಮಣ್ಣನ್ನು ನೆಲಕ್ಕೆ ಹಾಕಿದನು.
“ ನನ್ನ ಪ್ರಾಣ ತಗಂಡನ್ನಾ ಶಾಂತವಾಗಿ ನಾಲ್ಕು ಚುಕ್ಕೆಗಳ ಕಣ್ಣೀರ ಹನಿಸು… ಎನ್ನುತ್ತಾ ಕೈಯೊಳಗಿನ ಗಂಡಗೊಡಲಿಯನ್ನ ಬಲವಾಗಿ ಗಿರ ಗಿರನೇ ತಿರುಗಿಸಿ ಮುಗಿಲ ಕಡೆಗೆ ಎಸೆದನು ಅದು ತಿರುಗುತ್ತಾ ತಿರುಗುತ್ತಾ ಕೆಳಕ್ಕೆ ಬರುತ್ತಿದೆ…ಬರುತ್ತಿದೆ..ಬರೋ ಕಡೆಗೇ ಶಿರ ಬಾಗಿಸಿದನು ವೀರ ಶಿವ. ತಲೆ ಬಾಗಿಸಿದವನನ್ನ ಪಕ್ಕಕ್ಕೆ ಎಳೆದುಕೊಂಡರು ಊರ ಜನರು.
“ ಬಿಡ್ರೋ… ಬಿಡ್ರೋ…” ಅಂತ ಬಿಡಿಸಿಕೊಂಡನು ವೀರಶಿವ.
ಮೇಲಿಂದ ಬೀಳುತಿದ್ದ ಗಂಡು ಗೊಡಲಿ ನೆಲದ ಮಣ್ಣಲ್ಲಿ ನಾಟಿಕೊಂಡಿತು.
“ ಏನು ಸ್ವಾಮಿ ಹಿಂಗ ಮಾಡಿದಿರಿ” ಜನರೊಳಗಿನ ಯಾರೋ ಕೇಳಿದರು.
“ ಸಾಯಲು ಬಿಡ್ರಿ ನನ್ನನ್ನು ಸಾಯಲು ಬಿಡ್ರಿ” ನಿಮಗೆ ಮಳೆ ರ‍್ತಾವು. ನೀವು ಸುಖವಾಗಿರುತ್ತೀರಿ..” ದುಃಖದಿಂದಲೇ ಹೇಳುತಿದ್ದಾನೆ.
“ ಸತ್ತರೇ ಮಳೆ ಬರುತಾದ ಅಂದ್ರ ದಿನಕ್ಕೊಬ್ಬರು ಸಾಯುತಿಲ್ಲವೇ ಸ್ವಾಮಿ. ಸಾವೇ ಸಮಾಧಾನವಾ…” ಎಂದು ಹೇಳಿದ ಜನರೊಳಗಿನ ಹಿರೀಕ.
“ ಮಾಯಮ್ಮ ತಾಯಿಗೆ ಕರುಣೆ ಹುಟ್ಟಿದರೆ ಈಗಲೇ ಮಳೆ ಬರುತ್ತದೆ. ನಾವ್ಯಾಕೆ ಪ್ರಾಣ ಕಳಕೋ ಬೇಕು. ಯಾರದೋ ಹೆಣ್ಣು ಧ್ವನಿ ಕೇಳುತ್ತಿದೆ.
ಓ… ತನೇನು ಮಾಡುತಿದ್ದೇನೆ. ಯಾಕೆ ಹೀಗೆ ರ‍್ತಿಸುತಿದ್ದೇನೆ. ಇಲ್ಲ. ನಾನು ಜನರಿಗಾಗಿ ವೀರಶಿವನಾಗಿಯೇ ಬದುಕಬೇಕು. ಜನರಿಗಾಗಿ ಬದುಕಬೇಕು. ಊರಿಗಾಗಿ ಬದುಕಬೇಕು. ಕಾಲ ಕೆಳಗೆ ತಣ್ಣನೆಯ ತಂಪು…ತಣ್ಣಗೆ ತಂಪಾದ ಸಣ್ಣನೆಯ ಅನುಭವ… ನೀರ ತೇವ…ಭೂಮಿ ಬಿರಿಯಿತು. ಭೂಮಿ ಉರಿಯಿತು. ಮುಗಿಲು ಬೆದರಿತು.
ಕವಿದುಕೊಂಡ ಕಪ್ಪು ಮೋಡಗಳು ಒಂದಕ್ಕೊಂದು ತಿವಿದುಕೊಂಡು ಅಪ್ಪಳಿಸಿದವು. ಮಿಂಚು ಮಿಂಚು ಹೆಣೆದುಕೊಂಡು ಬೆಂಕಿ ಬೆಳಗಿದವು. ಗುಡುಗು ಸಿಡಿಲು ಸಿಡಿದುಕೊಂಡು ಬೆಂಕಿ ಉಗಿದವು. ಆ ಬಿಸಿಗೆ ಕಪ್ಪು ಮೋಡಗಳು ಕದಲಿ ಕೆಳಗಿಳಿದವು. ಎಲ್ಲಿದ್ದವೋ ಅಲ್ಲೇ. ಎಲ್ಲಿ ನಿಂತ ಮೋಡ ಅಲ್ಲೇ ಹೃದಯವನ್ನು ತೆರೆದು ಕಣ್ಣೀರು ಸುರಿಸಿದಂತಹ ಹನಿಗಳು.
ಒಂದರ ನಂತರ ಒಂದು ನೆಲಕ್ಕೆ ಹಾರಿ ಹಾರಿ ಬರುತ್ತಲಿವೆ ಮಳೆ…ಮಳೆ..ಸುರಿಯುತ್ತಲೇ ಹೋಯಿತು. ಹಗಲೂ ಇರುಳು. ಹೊಳೆಗಳು ತುಂಬಿ ಹೊರಳತೊಡಗಿದವು.
ತಗ್ಗು ಹಳ್ಳ ದಿನ್ನೆಗಳೆಲ್ಲಾ ನೀರು…ನೀರು …ನೀರು.
ಎತ್ತ ನೋಡಿದರೂ ನೀರು… ಕರೆ ಕೋಡಿ ಬೀಳುತ್ತಿದೆ.
ತಾಯಿ ಮಹಾತಾಯಿ.ಮಾಯಮ್ಮ ತಾಯಿ ಹರಿಯುತ್ತಿದ್ದಾಳೆ.
ಚಿನ್ನದ ಹಗರಿಯಾಗಿ ಹರಿಯುತಿದ್ದಾಳೆ. ಪ್ರವಾಹವಾಗಿ ಉಕ್ಕುತಿದ್ದಾಳೆ.
ಹಸಿರಾಗಿ ನಗುತ್ತಾ ಹಾಡುತಿದ್ದಾಳೆ.
ಒಣಗಿದ ಬೇರುಗಳಿಗೆ ಉಸಿರು ಬಂದಿತು.
ಬಾಡಿದ ಎಲೆಗಳಿಗೆ ಪ್ರಾಣ ಬಂದಿದೆ… ಬಂದಿದೆ …ಬಂದಿದೆ.
ಊರಿಗೆ ಉಸಿರು ಬಂದಿದೆ. ಊರು ಹಸಿರ ಮರವಾಗಿದೆ.
ಪಕ್ಷಿಗಳ ಗೂಡಾಗಿದೆ…ಸುಗ್ಗಿಯ ನೆಲವಾಗಿದೆ… ಹಾಡುಗಳ ಕಣವಾಗಿದೆ…ಜಾತ್ರೆಯ ನದಿಯಾಗಿದೆ….ಮಾಯಮ್ಮ ತಾಯಿಯ ಬೆಳ್ಳಿ ಮುಖವಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಆತ್ಮಕತೆ | ಕೃಷ್ಣಪ್ಪನವರ ನಿಧನ : (09.06.1938 – 30.04.1997)

Published

on

~ ರುದ್ರಪ್ಪ ಹನಗವಾಡಿ

ದ್ರಾವತಿಯಿಂದ ಬೆಂಗಳೂರಿಗೆ ಬಂದ ಕೃಷ್ಣಪ್ಪನವರು ಬಹುಜನ ಸಮಾಜ ಪಕ್ಷದ ಕೆಲಸ ನಿರ್ವಹಿಸುತ್ತಿದ್ದರೂ ಅವರ ರಕ್ತಮಾಂಸ ಬಸಿದು ಕಟ್ಟಿದ ಮೂಲಸಂಘಟನೆ ಡಿಎಸ್‌ಎಸ್ ಹಲವು ಗುಂಪುಗಳಾಗಿ ಒಬ್ಬರಿಗೊಬ್ಬರು ಅನುಮಾನಗಳಿಂದ ದೂರದೂರವಾಗಿದ್ದರು. ಇವರ ಜೊತೆ ಆತ್ಮೀಯ ಹೋರಾಟಗಾರರಾಗಿದ್ದ ಅನೇಕರು ಮಾತಿಲ್ಲದೆ ಅವರವರೇ ಕೊರಗುತ್ತಿದ್ದರು.

ಶಿವಮೊಗ್ಗ ಭದ್ರಾವತಿಯಲ್ಲಿ ಕೃಷ್ಣಪ್ಪನವರಿಗೆ ಎಲ್ಲಾ ಜಾತಿಯ, ಸಾಹಿತ್ಯ ಮತ್ತು ಸಾಂಸ್ಕೃತಿಕ ನಾಯಕರ ಬೆಂಬಲ, ಡಿಎಸ್‌ಎಸ್ ನ ಎಲ್ಲ ಹೋರಾಟಗಾರರಿಗೂ ಸಿಗುತ್ತಿತ್ತು. ಬೆಂಗಳೂರಿಗೆ ಬಂದ ನಂತರ ಆದ ಬೆಳವಣಿಗೆಗಳ ಬಗ್ಗೆ ಒಂದು ರೀತಿಯ ವಿಷಾದ ತುಂಬಿದ ಭಾವ ಕೃಷ್ಣಪ್ಪನವರಲ್ಲಿ ತುಂಬಿತ್ತು. ಆದರೂ ಅವರು ಮತ್ತೆ ಇದನ್ನು ಪುನಶ್ಚೇತನಗೊಳಿಸುವ ಕರ‍್ಯದಲ್ಲಿ ಹಗಲು ರಾತ್ರಿ ರಾಜ್ಯದ ವಿವಿಧೆಡೆಗೆ ಪ್ರಯಾಣ ಮಾಡುತ್ತ ವಿವಿಧ ಜಿಲ್ಲೆಗಳಿಗೆ ಹೋಗಿ ಡಿಎಸ್ ಎಸ್ ಸಂಘಟನೆಯ ಕರ‍್ಯಕ್ರಮಗಳಲ್ಲಿ ಭಾಗವಹಿಸುತ್ತಿದ್ದರು. ಅವರು ಡಿಎಸ್‌ಎಸ್ ಸಂಘಟನೆಯಲ್ಲಿನ ಬೆಳವಣಿಗೆಗಳ ಬಗ್ಗೆ ಮಾಡಿದ ನಿರಾಶಾ ಕಾಲದಲ್ಲಿಯೇ ಛಲಬಿಡದ ವಿಕ್ರಮನಂತೆ ದಲಿತರನ್ನೆಲ್ಲ ಪುನಃ ಸಂಘಟಿಸಿ ಪುನಶ್ಚೇತನ ಗೊಳಿಸುವ ಬಗ್ಗೆ ಅವರ ಸಹಪಾಠಿ ಆರ್. ನಾಗರಾಜ್, ಅರ್ಕೇಶ್ ಮತ್ತು ನಾನು ಅವರ ಮನೆಯಲ್ಲಿ ಸೇರಿದಾಗ ಚರ್ಚಿಸುತ್ತಿದ್ದರು. ಮೈಸೂರಿನ ಮಹಾದೇವ ಬೆಂಗಳೂರಿನ ಸಿದ್ಧಲಿಂಗಯ್ಯ ಇವರುಗಳ ಸಂಬಂಧ ಬಹಳ ದೂರ ಸರಿದಿತ್ತು. ಅದನ್ನು ಪುನಃ ಪುನಶ್ಚೇತನಗೊಳಿಸುವುದಕ್ಕೆ ಬೇಕಾದ ಶ್ರಮ ಹಾಕಲು ಮಹಾದೇವನಿಗಾಗಲೀ, ಸಿದ್ಧಲಿಂಗಯ್ಯನಿಗಾಗಲೀ ಇರಲಿಲ್ಲ. ಹಾಗಾಗಿ ಮತ್ತೆ ಏಕಾಂಗಿಯಾಗಿಯೇ ಎಲ್ಲಾಕಡೆ ಇವರೊಬ್ಬರೇ ತಿರುಗಾಡಿ ಸಂಘಟಿಸಲು ಶ್ರಮಿಸುತ್ತಿದ್ದರು.

ಈ ಯೋಜನೆಯ ಭಾಗವಾಗಿ ಆಯೋಜಿಸಿದ್ದ ಅಂಬೇಡ್ಕರ್ ರ‍್ಯಾಲಿಯಲ್ಲಿ ಭಾಗವಹಿಸಲು, ಗದಗ ಜಿಲ್ಲಾ ಕೇಂದ್ರದಲ್ಲಿ ವ್ಯವಸ್ಥೆಗೊಳಿಸಿದ ಸಭೆಗೆ ಹೋಗಿದ್ದರು. ನಾನು ಯಲಹಂಕ ಆಫೀಸಿನ ಕೆಲಸ ಮುಗಿಸಿ ಮಧ್ಯಾಹ್ನ ಊಟಕ್ಕೆ ಅವರ ಮನೆಗೆ ಹೋದಾಗ ಮೇಷ್ಟರು ಗದಗ್‌ಗೆ ಹೋದ ಸುದ್ದಿ ತಿಳಿದಿತ್ತು. ಗದಗ್‌ನಲ್ಲಿ ಕೃಷ್ಣಪ್ಪನವರ ತಂಗಿಯ ಮಗಳು ಮೈತ್ರ‍್ರಾ ಕೂಡಾ ಇದ್ದುದು, ಮೈತ್ರಾಳ ಗಂಡ ಬ್ಯಾಂಕ್‌ವೊಂದರಲ್ಲಿ ಉದ್ಯೋಗಿಯಾಗಿದ್ದು, ಸಂಘಟನೆಯ ಜೊತೆ ಅವರನ್ನೆಲ್ಲಾ ನೋಡಿಕೊಂಡು ಬರುವರೆಂದು ಮಾತಾಡಿಕೊಂಡು ನಾನು ಮಧ್ಯಾಹ್ನ ಊಟ ಮುಗಿಸಿಕೊಂಡು ಮತ್ತೆ ಆಫೀಸಿಗೆ ಹೋಗಿದ್ದೆ. ಆದರೆ ಸಂಜೆ 5ರ ವೇಳೆಗೆ ಕೃಷ್ಣಪ್ಪನವರು ಗದಗ್‌ನಲ್ಲಿ ಹುಷಾರಿಲ್ಲದೆ ಆಸ್ಪತ್ರೆಯಲ್ಲಿರುವುದಾಗಿಯೂ ಗದಗ್‌ನಿಂದ ಫೋನ್ ಬಂದಿರುವುದಾಗಿಯೂ ನನ್ನ ಆಫೀಸಿಗೆ ಮಗಳು ಶಾಲಿನಿ ಫೋನ್ ಮಾಡಿದ್ದಳು. ಇಂದಿರಾ ಆಫೀಸ್ ಮುಗಿಸಿ ಮನೆಗೆ ಬರುವ ವೇಳೆಗೆ ನನ್ನ ಹೆಂಡತಿ ಗಾಯತ್ರಿಗೂ ಫೋನ್ ಮಾಡಿ ತಿಳಿಸಿದೆ. ಅರ್ಜೆಂಟಾಗಿ ನಾವು ಎಲ್ಲರೂ ಗದಗ್‌ಗೆ ಹೋಗಿ ಮೇಷ್ಟçರನ್ನ ಕರೆದುಕೊಂಡು ಬಂದು ಇಲ್ಲಿಯೇ ಶುಶ್ರೂಷೆ ಕೊಡಿಸುವ ಎಂದು ಮಾತಾಡಿಕೊಂಡು ರಾತ್ರಿಯೇ ಬೆಂಗಳೂರಿನಿಂದ ಹೊರಟು ಮಧ್ಯೆ ರಾತ್ರಿ ನಮ್ಮೂರ ಬಳಿ ನಿಂತು ನಮ್ಮ ಊರಿನವರಿಗೂ ವಿಷಯ ತಿಳಿಸಿ ಬೆಳಿಗ್ಗೆ 7 ಘಂಟೆಗೆ ಗದಗ ತಲುಪಿದೆವು.

ಬೆಂಗಳೂರು ಬಿಟ್ಟು ಹೊರಟಾಗ ಅವರ ಆರೋಗ್ಯದಲ್ಲಿನ ಸಮಸ್ಯೆ ಸ್ಪಷ್ಟವಾಗಿ ಏನೆಂದು ತಿಳಿಯದಿದ್ದರೂ-ಅವರ ಬಿಡುವಿಲ್ಲದ ತಿರುಗಾಟಕ್ಕೆ ತಡೆಹಾಕಿ ಆರೋಗ್ಯದ ಕಡೆ ಗಮನ ನೀಡಲು ಏನೆಲ್ಲ ಕ್ರಮ ಜರುಗಿಸಬೇಕೆಂದು ನನ್ನ ಹೆಂಡತಿ ಗಾಯತ್ರಿ ಇಂದಿರಾಗೆ ಸಲಹೆ ನೀಡುತ್ತಿದ್ದಳು. ಕೃಷ್ಣಪ್ಪನವರ ಆರೋಗ್ಯ ಕೆಡಿಸುವಂತಹ ಅಭ್ಯಾಸಗಳು ಅವರಿಗೆ ಮೊದಲಿನಿಂದಲೂ ಇರಲಿಲ್ಲ. ಡಿಎಸ್‌ಎಸ್‌ನ ಸಮಾವೇಶಗಳಲ್ಲೂ ಕೂಡ ಎಲ್ಲರಿಗೂ ಸ್ವಚ್ಛತೆ, ವ್ಯಾಯಾಮ ಮತ್ತು ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸಲು ಪ್ರಭಾವಿಸುತ್ತಿದ್ದರು. ಕೊಳಕುತನ, ಸೋಮಾರಿತನ ಬಾಲ್ಯದಿಂದಲೂ ಕೃಷ್ಣಪ್ಪನವರ ಬಳಿ ಸುಳಿದಿರಲಿಲ್ಲ. ಊಟ ಉಪಚಾರಗಳಲ್ಲೂ ಶಿಸ್ತುಬದ್ದರಾಗಿದ್ದು ಅವರಿಗೆ ಅನಾರೋಗ್ಯ ಎಂಬ ಮಾತು ಕೇಳಿರಲಿಲ್ಲ. ಈ ಕಾರಣದಿಂದ ಏನಾದರೂ ಆಗಿರಲಿ ಬಂದ ನಂತರ ಅವರನ್ನು ಹೆಚ್ಚು ತಿರುಗಾಡಲು ಬಿಡಬಾರದೆಂಬ ತೀರ್ಮಾನ ಮಾಡಿಕೊಂಡು ನಾವೆಲ್ಲ ಗದಗ್ ಕಡೆ ಹೊರಟಿದ್ದೆವು.

ಹೋದಾಕ್ಷಣ ಅವರನ್ನು ಐಸಿಯುನಲ್ಲಿ ನಾವು ಮೂವರೂ ಹೋಗಿ ನೋಡಿದೆವು. ಕಣ್ಣು ಬಿಟ್ಟು ನೋಡಿದ್ದನ್ನು ಬಿಟ್ಟರೆ ಬೇರೇನೂ ಮಾತಾಡಲಿಲ್ಲ. ಇಂತಹ ಪರಿಸ್ಥಿತಿಯನ್ನು ನಾವ್ಯಾರು ನಿರೀಕ್ಷಿಸಿರಲಿಲ್ಲ. ದಾರಿಯುದ್ದಕ್ಕೂ ಯೋಚಿಸಿಕೊಂಡು ಬಂದದ್ದಕ್ಕೂ ಇಲ್ಲಿನ ಪರಿಸ್ಥಿತಿ ನೋಡಿ ನಾವೆಲ್ಲಾ ಗರಬಡಿದಂತಾಗಿ ಕೂತಿದ್ದೆವು. ಗಾಯತ್ರಿ, ಇಂದಿರಾ ಮಾತಾಡದೆ ಉಸಿರಾಡುತ್ತಿದ್ದರು. ಮತ್ತೆ 10-15 ನಿಮಿಷಗಳಲ್ಲಿ ಪರಿಸ್ಥಿತಿ ಹದಗೆಡುತ್ತಿದೆ ಎಂದು ವಾರ್ಡ್ ಬಾಯ್ ಹೇಳಿದಾಗ ನಾವೆಲ್ಲ ಒಳಗೆ ಹೋದೆವು. ಬಂದ ಡಾಕ್ಟರ್ ನಮ್ಮನ್ನೆಲ್ಲ ಮತ್ತೆ ಹೊರಹೋಗಲು ಹೇಳಿ ಶುಶ್ರೂಷೆ ಮಾಡುತ್ತಿದ್ದರು. ಏನಾಯಿತು, ಹೇಗಾಯಿತು ಎಂದು ನಾವುಗಳೆಲ್ಲ ಸಾವರಿಸಿಕೊಳ್ಳುತ್ತಿರುವಾಗಲೇ ಮೇಷ್ಟರು ಕೊನೆಯುಸಿರೆಳೆದಿದ್ದರು. ಅಂದು ದಿನಾಂಕ 30-4-1997 ಬೆಳಗಿನ 8.30 ಇರಬಹುದು. ನಾವು ಬಂದು ನೋಡಿ ನಂತರ ಫ್ರೆಶ್ ಆಗಿ ನಂತರ ಏನು ಮಾಡುವುದು ಎಂದು ಯೋಚಿಸುವ ಮುನ್ನ ಇದೆಲ್ಲ ಆಗಿ ಹೋಗಿತ್ತು.

ಈಚೆ ಬಂದ ನನಗೆ ಸಾವನ್ನ ಹೀಗೆ ನೇರವಾಗಿ ಎದುರಿಸಿದ ಸಂದರ್ಭಗಳು ಇರಲಿಲ್ಲ. ಮುಂದಿನ ವಿಚಾರವನ್ನು ಯೋಚನೆ ಮಾಡುತ್ತಲೇ ಹತ್ತಿರದಲ್ಲಿದ್ದ ಟೆಲಿಫೋನ್ ಬೂತ್‌ನಿಂದ ಮೈಸೂರಿನಲ್ಲಿದ್ದ ಮಗಳು ಸೀಮಾ ಮತ್ತು ಬೆಂಗಳೂರಿನಲ್ಲಿದ್ದ ಶಾಲುಗೆ ಹಾಗೂ ಬೆಂಗಳೂರಿನ ವಿಧಾನಸೌಧದಲ್ಲಿ ಪಿಎಸ್ ಆಗಿದ್ದ ಬಸವಣ್ಯಪ್ಪನಿಗೆ ತಿಳಿಸಿ ಎಲ್ಲಾ ಡಿಎಸ್‌ಎಸ್ ಸ್ನೇಹಿತರಿಗೆ ತಿಳಿಸಲು ಹೇಳಿದೆ. ಹರಿಹರದಲ್ಲಿನ ಮೇಷ್ಟರ ತಮ್ಮಂದಿರಿಗೆ ಸುದ್ದಿ ತಿಳಿಸಿ ಬಂದೆ. ಸಿರಸಿಯಲ್ಲಿದ್ದ ಮೇಷ್ಟರ ಇನ್ನೊಬ್ಬ ತಮ್ಮ ಮಾರುತಿಗೆ ತಿಳಿಸಿ ಮೇಷ್ಟರ ಪಾರ್ಥಿವ ಶರೀರವನ್ನು ಹರಿಹರಕ್ಕೆ ತೆಗೆದುಕೊಂಡು ಹೋಗುವ ಬಗ್ಗೆ ವ್ಯವಸ್ಥೆ ಮಾಡಿದೆ. ಆಸ್ಪತ್ರೆಯ ರೀತಿನೀತಿಗಳನ್ನು ಮುಗಿಸಿ-ಸಮಾಧಿಯಾಗುವುದು ಇನ್ನೂ ಒಂದು ದಿನ ತಡವಾಗುವುದರಿಂದ ದೇಹಕ್ಕೆ ಬೇಕಾದ ರೀತಿಯಲ್ಲಿ ಇಂಜೆಕ್ಷನ್ ಕೊಡಿಸಿ ಸುಮಾರು 3-4 ಗಂಟೆಗೆ ಗದಗ ಬಿಟ್ಟು ಹರಿಹರ ಟೌನ್‌ನಲ್ಲಿದ್ದ ಮೇಷ್ಟರ ಮನೆಗೆ ಸಂಜೆ 7 ಗಂಟೆಯ ಸಮಯಕ್ಕೆ ತಲುಪಿದ್ದೆವು.

ರಾತ್ರಿ ಭಜನೆ ಮಾಡಲು ವ್ಯವಸ್ಥೆ ಮಾಡಿ ನಂತರ ಮೇಷ್ಟರ ಸಂಸ್ಕಾರ ಎಲ್ಲಿ ಏನು ಎಂದು ಅವರ ತಮ್ಮಂದಿರು ತಂಗಿಯರ ಜೊತೆ ಮಾತಾಡಿದಾಗ ಅದೆಲ್ಲ ತುಂಗಭದ್ರಾ ನದಿಯ ದಡದಲ್ಲಿ ಮಾಡುವುದು ಎಂದು ತಿಳಿಸಿದರು. ಈ ಬಗ್ಗೆ ದುಃಖದಲ್ಲಿ ಮುಳುಗಿದ್ದ ಇಂದಿರಾ ಜೊತೆ ಏನೂ ಮಾತಾಡುವ ಸ್ಥಿತಿಯಲ್ಲಿರಲಿಲ್ಲ. ಇದೇ ಚಿಂತೆಯಲ್ಲಿ ನಾನು ಮೂರು ಕಿ.ಮೀ. ದೂರದ ನಮ್ಮ ಊರಿಗೆ ಬಂದಿಳಿದೆ. ರಾತ್ರಿಯಲ್ಲಿ ನಿದ್ದೆ ಬಾರದೆ ಒದ್ದಾಡಿದೆ. ಹರಿಹರ ತುಂಗಾ ನದಿ ದಡದಲ್ಲಿ ಸಂಸ್ಕಾರ ಮಾಡುವ ಅವರ ನಿರ್ಧಾರವನ್ನು ತಿಳಿದು ಮನಸ್ಸಿಗೆ ಒಂದು ಚಿಂತೆಯಾಯಿತು. ಇಷ್ಟೊಂದು ಹೋರಾಟದ ಜೀವನ ನಡೆಸಿದ ಮನುಷ್ಯನ ನೆನಪು ನಾಳೆಗೆ ಭೌತಿಕವಾಗಿ ಕೊನೆಯಾಗುವ ಬಗ್ಗೆ ಚಿಂತೆಯಾಯಿತು. ನಾನು ನಮ್ಮ ಅಣ್ಣ ಅವ್ವ ಇವರ ಜೊತೆ ಚರ್ಚಿಸಿ-ನಮ್ಮ ತೋಟದ ಜಮೀನಿನಲ್ಲಿ ಸಮಾಧಿ ಮಾಡಿದರೆ ಹೇಗೆ ಎಂದು ಯೋಚಿಸಿ, ಬೆಳಿಗ್ಗೆ ಈ ನನ್ನ ಯೋಚನೆಯನ್ನು ಮೇಷ್ಟರ ತಮ್ಮ ಮಾರುತಿ ಬಳಿ ಚರ್ಚಿಸಿ ನಂತರ ಎಲ್ಲ ಅವರ ಸಂಬಂಧಿಗಳಿಗೂ ವಿಚಾರಿಸಿದೆ. ಅವರೆಲ್ಲರೂ ನನ್ನ ಸಲಹೆಗೆ ಒಪ್ಪಿದರು. ಅದರಂತೆ ಎಲ್ಲಾ ಡಿಎಸ್‌ಎಸ್‌ನ ಕರ‍್ಯಕರ್ತರಿಗೆ, ಅಧ್ಯಾಪಕರಿಗೆ, ರಾಜಕಾರಣಿಗಳಿಗೆ ತಿಳಿಸಿದೆವು. ಹರಿಹರದಿಂದ ನಮ್ಮೂರಿನಿಂದಲೇ ತರಿಸಿದ್ದ ಟ್ರಾಕ್ಟರ್‌ನಲ್ಲಿ ನಮ್ಮ ತೋಟದಲ್ಲಿ ಸುಮಾರು 4 ಗಂಟೆಯ ಸಮಯಕ್ಕೆ 1-5-1997ರಂದು ಕೃಷ್ಣಪ್ಪನವರ ಅಂತಿಮ ಕಾರ್ಯವನ್ನು ಮಾಡಿದೆವು. ಅಂತಿಮ ದರ್ಶನ ಪಡೆಯಲು ರಾಜ್ಯದಾದ್ಯಂತ ಪ್ರಗತಿಪರರು, ಡಿಎಸ್‌ಎಸ್ ಕರ‍್ಯಕರ್ತರು, ರಾಜಕಾರಣಿಗಳ ದಂಡೇ ಆಗಮಿಸಿತ್ತು. ಸಮಾಧಿಯಾದ ನಂತರ ಡಿಎಸ್‌ಎಸ್‌ನ ಎಲ್ಲಾ ಬಣಗಳ ಕರ‍್ಯಕರ್ತರೂ ಕೃಷ್ಣಪ್ಪನವರ ಹೋರಾಟದ ಆಶಯಗಳನ್ನು ಈಡೇರಿಸಲು ಅಂದು ಪ್ರಮಾಣ ಮಾಡುವ ಪ್ರತಿಜ್ಞೆ ಮಾಡಿ ನಿರ್ಗಮಿಸಿದ್ದರು.

1997ರಲ್ಲಿ ಕೃಷ್ಣಪ್ಪನವರ ನಿರ್ಗಮನದ ನಂತರ ಕರ್ನಾಟಕದ ದಲಿತ ಹೋರಾಟದ ಸಮಗ್ರ ಚಿತ್ರಣ ಹಲವು ಟಿಸಿಲುಗಳಾಗಿ ಹೊರಹೊಮ್ಮಿದ್ದವು. ನನ್ನ ಸರ್ಕಾರಿ ನೌಕರಿಯ ಜೊತೆ ಎಲ್ಲ ಬಣಗಳಲ್ಲಿ ನನಗೆ ಬಲ್ಲವರಿದ್ದರೂ ಯಾರೊಡನೆ ಒಡನಾಡುವುದು ಎಂಬ ಪ್ರಶ್ನೆ ಮೂಡುತ್ತಿತ್ತು. ಆದರೂ ಯಾರು ಏನೇ ಕರ‍್ಯಕ್ರಮ ಮಾಡುವಾಗ ಸಹಕಾರ ನೀಡಲು ಕೋರಿದರೆ ಮುಕ್ತ ಮನಸ್ಸಿನಿಂದ ಸಹಾಯ ಮಾಡುತ್ತಿದ್ದೆ.

ಕೃಷ್ಣಪ್ಪನವರ ನಿಧನಾನಂತರ ಬಿಎಸ್‌ಪಿಯ ರಾಷ್ಟ್ರೀಯ ಅಧ್ಯಕ್ಷರಾಗಿದ್ದ ಕಾನ್ಷಿರಾಮ್ ಅವರು ಯಲಹಂಕದಲ್ಲಿದ್ದ ಕೃಷ್ಣಪ್ಪನವರ ಮನಗೆ ಬಂದು ಇಂದಿರಾ ಮತ್ತು ಅವರ ಇಬ್ಬರು ಮಕ್ಕಳು ಶಾಲಿನಿ, ಸೀಮಾ ಅವರಿಗೆ ಸಾಂತ್ವನ ಹೇಳಿದರು. ತಕ್ಷಣದ ಅಗತ್ಯಗಳಿಗೆ ಎಂಬ ಕಾರಣದಿಂದಲೋ ಏನೋ ಎರಡು ಲಕ್ಷ ರೂಪಾಯಿಗಳನ್ನು ಇಂದಿರಾ ಅವರ ಕುಟುಂಬಕ್ಕೆ ನೀಡಿದ್ದರು. ಆದರೆ ಇಂದಿರಾ ಅವರು ನನಗೀಗ ಸರ್ಕಾರಿ ನೌಕರಿ ಇರುವ ಕಾರಣ ನೀಡಿ, ಅದನ್ನು ಕೃಷ್ಣಪ್ಪನವರ ಹೆಸರಿನಲ್ಲಿ ಮುಂದೆ ಸ್ಥಾಪಿಸಿದ ಟ್ರಸ್ಟ್ನ ಹೆಸರಿನಲ್ಲಿ ನಡೆಸುವ ಕರ‍್ಯಕ್ರಮಗಳಿಗೆ ಬಳಸಿಕೊಳ್ಳಲಾಗುವುದು ಎಂದು ಹೇಳಿ ಆ ಹಣವನ್ನು ಒಪ್ಪಿಕೊಂಡಿದ್ದರು. ಅದರಂತೆ ಕಾನ್ಷಿರಾಮ್ ಅವರು ನೀಡಿದ ಹಣ, 1997ರಲ್ಲಿ ಸ್ಥಾಪಿಸಿದ ಪ್ರೊ.ಬಿ. ಕೃಷ್ಣಪ್ಪ ಟ್ರಸ್ಟ್ನಲ್ಲಿ ಮೂಲಧನವಾಗಿ ಉಳಿದಿದೆ. ಕೃಷ್ಣಪ್ಪನವರ ಆಶಯದಂತೆ ಕರ‍್ಯಕ್ರಮಗಳನ್ನು ನಿರ್ವಹಿಸಿಕೊಂಡು ಕಳೆದ 24 ವರ್ಷಗಳಿಂದ ಬರುತ್ತಿದ್ದೇವೆ.

ಕೃಷ್ಣಪ್ಪನವರು ಕಾಲವಾದ ಎರಡು ತಿಂಗಳಲ್ಲಿ ಡಿಎಸ್‌ಎಸ್‌ನ ಅವರ ಅನುಯಾಯಿಗಳಲ್ಲಿ ನಾನು ಮತ್ತು ಇಂದಿರಾ ಮನವಿ ಮಾಡಿ ಕೃಷ್ಣಪ್ಪನವರ ಹೆಸರಿನಲ್ಲಿ ಟ್ರಸ್ಟ್ ಸ್ಥಾಪಿಸುವ ಬಗ್ಗೆ ಬೆಂಗಳೂರಿನಲ್ಲಿ ಪೂರ್ವಭಾವಿ ಸಭೆಯನ್ನು ಅರ್ಕೇಶ್ ಇದ್ದ ಸಿಆರ್‌ಪಿಎಫ್‌ನಲ್ಲಿನ ಒಂದು ಸಭಾಂಗಣದಲ್ಲಿ ಕರೆದಿದ್ದೆವು. ಆ ಸಭೆಗೆ ಸಾಕಷ್ಟು ಜನ ಬಾರದಿದ್ದರಿಂದ ಮತ್ತೊಂದು ಬಾರಿ ಎಲ್ಲರಿಗೂ ತಿಳಿಹೇಳಿ 9 ಅಥವಾ 11 ಜನರಿರುವ ಒಂದು ಟ್ರಸ್ಟ್ ಸ್ಥಾಪಿಸುವ ಬಗ್ಗೆ ಮತ್ತೆ ಸಭೆ ಕರೆದೆವು. ಎರಡನೇ ಸಭೆಯಲ್ಲಿ ಬಂದವರ ಅಭಿಪ್ರಾಯ ಪಡೆದು 11 ಜನರಲ್ಲಿ ದಲಿತ ಹೋರಾಟಗಾರರು, ಕೃಷ್ಣಪ್ಪನವರ ಕುಟುಂಬ ಮತ್ತು ಅವರ ಸಹಪಾಠಿಗಳನ್ನು ಸೇರಿದಂತೆ ಟ್ರಸ್ಟ್ ಸದಸ್ಯರ ಹೆಸರುಗಳನ್ನು ಅಂತಿಮಗೊಳಿಸಿದೆವು.

ನಾನು ಮತ್ತು ಇಂದಿರಾ ಮ್ಯಾನೇಜಿಂಗ್ ಟ್ರಸ್ಟಿಗಳು. ಕೃಷ್ಣಪ್ಪನವರ ಸಹಪಾಠಿಗಳಾಗಿದ್ದ ಆರ್. ನಾಗರಾಜ್ ಮತ್ತು ಕೃಷ್ಣಪ್ಪನವರ ಕಿರಿಯ ಸಹೋದರ ಬಿ. ಮಾರುತಿ, ನಮ್ಮ ಸಹೋದರ ಸಿ. ತಿಪ್ಪಣ್ಣ ಮತ್ತು ಉಳಿದಂತೆ ಡಿಎಸ್‌ಎಸ್‌ನಲ್ಲ್ಲಿದ್ದ ಕೃಷ್ಣಪ್ಪನವರ ಅನುಯಾಯಿಗಳಾದ ಚಿತ್ರದುರ್ಗದ ಜಯಣ್ಣ, ಶ್ರೀಧರ ಕಲಿವೀರ, ಮಾವಳ್ಳಿ ಶಂಕರ್, ಬಿಎಸ್‌ಪಿಯಲ್ಲಿದ್ದ ಮಾರಸಂದ್ರದ ಮುನಿಯಪ್ಪನವರ ಹೆಸರುಗಳನ್ನು ಅಂತಿಮಗೊಳಿಸಿದ್ದೆವು. ಎರಡು ಬಾರಿ ಎಲ್ಲರೂ ಸೇರಿ ನೋಂದಾಯಿಸಲು ಸಬ್ ರಿಜಿಸ್ಟಾçರ್ ಆಫೀಸಿಗೆ ಬರುವಂತೆ ದಿನಾಂಕ ನಿಗದಿ ಮಾಡಿದ್ದರೂ ಕೆಲವರು ಕೊನೆಯವರೆಗೂ ಬಾರದ ಕಾರಣ ಬಂದವರಲ್ಲಿ ಏಳು ಜನರಿರುವ ಟ್ರಸ್ಟ್ವೊಂದನ್ನು ದಿನಾಂಕ 28-11-97ರಲ್ಲಿ ಸ್ಥಾಪಿಸಿದೆವು. ಕೃಷ್ಣಪ್ಪನವರ ಆಶಯಗಳನ್ನು ಟ್ರಸ್ಟಿನ ಧ್ಯೇಯೋದ್ದೇಶಗಳಲ್ಲಿ ಉಲ್ಲೇಖಿಸಿ ನೊಂದಾಯಿಸಿದೆವು. ಅಂದಿನಿಂದ ಇಂದಿನವರೆಗೆ ಸುಮಾರು 24 ವರ್ಷಗಳಲ್ಲಿ ರಾಜ್ಯದಾದ್ಯಂತ ದಲಿತ ಹೋರಾಟಗಳಿಗೆ ಒತ್ತಾಸೆಯಾಗಿ, ಸಮಾನತೆ ಸಹೋದರತೆ ಸಾರುವ ಮಾನವೀಯ ಹೋರಾಟಗಳಲ್ಲಿ ಭಾಗವಹಿಸುತ್ತಾ, ಅಂತರ್ಜಾತಿ-ಅಂತರ್‌ಮತೀಯ ಮತ್ತು ಸರಳ ಮದುವೆಗಳನ್ನು ಮಾಡುತ್ತಾ ಜೊತೆಗೆ, ಕೃಷ್ಣಪ್ಪನವರು ಬರೆದಿದ್ದ ಹೋರಾಟದ ಕವನ ಮತ್ತು ವೈಚಾರಿಕ ಲೇಖನಗಳನ್ನು ಪ್ರಕಟಿಸಿ ಜನರಿಗೆ ತಲುಪಿಸುತ್ತಾ ಇಂದಿಗೂ ಜನಪರ ಚಳುವಳಿಗಳಲ್ಲಿ ಕೃಷ್ಣಪ್ಪ ಟ್ರಸ್ಟ್ ಸಕ್ರಿಯವಾಗಿದೆ. ಟ್ರಸ್ಟ್ನ ಕರ‍್ಯಕ್ರಮಗಳ ಭಾಗವಾದ ಕೃಷ್ಣಪ್ಪ ಸಮಾಧಿ ಸ್ಥಳ ಉದ್ಘಾಟನೆಗೆ ಬಿಎಸ್‌ಪಿಯ ಕಾನ್ಷಿರಾಮ್ ಅವರು ಹಿರಿಯ ನ್ಯಾಯವಾದಿ ಮತ್ತು ಮಾಜಿಮಂತ್ರಿಗಳಾಗಿದ್ದ ಎಲ್.ಜಿ. ಹಾವನೂರ ಅವರು, ಮಾಜಿಮಂತ್ರಿಗಳಾಗಿದ್ದ ಕಾಗೋಡು ತಿಮ್ಮಪ್ಪ ಅವರು 1997ರಲ್ಲಿ ಬಂದು ಉದ್ಘಾಟಿಸಿದ್ದರು. ಅಂದಿನಿಂದ ಇಂದಿನವರೆಗೆ ನೂರಾರು ಸಾಹಿತ್ಯ, ಸಂಸ್ಕೃತಿ, ನಾಟಕ, ಹೋರಾಟಗಳ ಸಭೆ ಸಮಾರಂಭಗಳನ್ನು ಕೃಷ್ಣಪ್ಪ ಸಮಾಧಿ ಸ್ಥಳದಲ್ಲಿ ಸಂಘಟಿಸುತ್ತಾ ಬಂದಿದೆ. ಮಂತ್ರಿಗಳು, ಮುಖ್ಯಮಂತ್ರಿಗಳು, ರಾಜ್ಯಪಾಲರಾದಿಯಾಗಿ ಜೊತೆಗೆ ನೂರಾರು ದಲಿತ ಹೋರಾಟಗಾರರು, ರಾಜಕಾರಣಿಗಳು ಅನೇಕ ಪ್ರಗತಿಪರರು, ರೈತ ಹೋರಾಟಗಾರರು ಗ್ರಾಮೀಣ ಜನರು ಸಮಾಧಿ ಸ್ಥಳದಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಿರುತ್ತಾರೆ.

2017ರಲ್ಲಿ ಸಮಾಧಿ ಸ್ಥಳದಲ್ಲಿ ಸರ್ಕಾರದ ಸಹಾಯದಿಂದ ಕೃಷ್ಣಪ್ಪ ಸ್ಮಾರಕ ಭವನ ನಿರ್ಮಿಸಿದ್ದು, ಅಲ್ಲಿ ಲೈಬ್ರರಿ ಮತ್ತು ಸ್ಮರಣಲೋಕವನ್ನು ಕೃಷ್ಣಪ್ಪನವರ ಹೋರಾಟದ ವಿವರಗಳನ್ನು ಒಳಗೊಂಡಂತೆ ಕಲೆ ಹಾಕಿದೆ. ಅನೇಕ ಪ್ರಗತಿಪರ ಕರ‍್ಯಕ್ರಮಗಳು ಜನಪರ ಗ್ರಾಮೀಣ ಜನರು ಅದರ ಸದುಪಯೋಗ ಪಡೆಯುತ್ತಿರುವುದು ಸಂತೋಷದ ಸಂಗತಿಯಾಗಿದೆ.

ಕೃಷ್ಣಪ್ಪನವರು ತೀರಿದ ಎರಡು ತಿಂಗಳಲ್ಲಿ ಯಲಹಂಕದಲ್ಲಿನ ಪ್ರಗತಿಪರರೊಡನೆ ಜೊತೆಗೂಡಿ ಕೃಷ್ಣಪ್ಪನವರ ಸ್ಮರಣ ಕರ‍್ಯಕ್ರಮ ಆಯೋಜಿಸಿದ್ದೆವು. ಆ ಸಭೆಗೆ ನಮ್ಮ ನಗರಸಭೆಯ ಸದಸ್ಯರು ಮತ್ತು ಅನೇಕ ಪ್ರಗತಿಪರರು ಕೈಜೋಡಿಸಿದ್ದರು. ಸಭೆಗೆ ಡಿಎಸ್‌ಎಸ್ ನಾಯಕರು ಮತ್ತು ಅಂದಿನ ವಿಧಾನಸಭಾ ಅಧ್ಯಕ್ಷರಾಗಿದ್ದ ಡಿ. ಮಂಜುನಾಥ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿ ಕೃಷ್ಣಪ್ಪನವರ ಹೋರಾಟ ಮತ್ತು ತ್ಯಾಗಗಳ ಬಗ್ಗೆ ನುಡಿನಮನ ಸಲ್ಲಿಸಿದ್ದರು.

ನಮ್ಮ ಊರಿನಿಂದ ಒಂದು ದೊಡ್ಡ ದಂಡೇ ಬ್ಯಾಂಡ್‌ಸೆಟ್ ಜೊತೆಗೆ ಬಂದಿದ್ದರು. ಈ ಸಂದರ್ಭದಲ್ಲಿ ಬಸವಲಿಂಗಪ್ಪನವರ ಸಮಾಧಿ ಸ್ಥಳದಿಂದ ಯಲಹಂಕದಲ್ಲಿ ನಡೆಸುತ್ತಿದ್ದ ಕೃಷ್ಣಪ್ಪನವರ ಸ್ಮರಣ ಸಮಾರಂಭದವರೆಗೆ ಮೆರವಣಿಗೆ ಮಾಡಿಕೊಂಡು ಬಂದು ಕೃಷ್ಣಪ್ಪನವರ ಬದುಕು, ಹೋರಾಟ, ಡಿಎಸ್‌ಎಸ್ ಸಂಘಟನೆಯನ್ನು ಸ್ಥಾಪಿಸಿ ಹೋರಾಟ ಮಾಡಿದ ವಿವಿಧ ವಿಷಯಗಳ ಬಗ್ಗೆ ಅಂದಿನ ಸಭೆಯಲ್ಲಿ ಭಾಗವಹಿಸಿದವರೆಲ್ಲರೂ ಮಾತನಾಡಿ ಕೃಷ್ಣಪ್ಪನವರ ಅಗಲಿಕೆಗೆ ಸಂತಾಪ ವ್ಯಕ್ತಪಡಿಸಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಸಿದ್ಧಾಂತ ಮತ್ತು ಪತ್ರಿಕೋದ್ಯಮ

Published

on

  • ಹರ್ಷಕುಮಾರ್‌ ಕುಗ್ವೆ, ಪತ್ರಕರ್ತ ಮತ್ತು ಆಕ್ಟಿವಿಸ್ಟ್

ಇದು ಸುಮಾರು 2002-03ರ ಸಂದರ್ಭ. ಶಿವಮೊಗ್ಗದಲ್ಲಿ ನಾವು ಹೋರಾಟಗಳಲ್ಲಿ ಸಕ್ರಿಯವಾಗಿದ್ದ ಕಾಲ. ಒಬ್ಬ ಪತ್ರಕರ್ತ ಮಿತ್ರರೊಂದಿಗೆ ಹೀಗೇ ಚರ್ಚೆ ನಡೆಯುತ್ತಿತ್ತು. ಅವರು ಪತ್ರಿಕೋದ್ಯಮದ ನ್ಯೂಟ್ರಾಲಿಟಿ ಕುರಿತು ಮಾತಾಡುತ್ತಾ, ʼನಾವು ಪತ್ರಕರ್ತರು ನಿಮ್ಮ ರೀತಿ ಯೋಚನೆ ಮಾಡೋದಕ್ಕೆ ಆಗಲ್ಲ. ನಾವು ಯಾವತ್ತೂ ಯಾವುದೇ ಸಿದ್ಧಾಂತಕ್ಕೆ ವಾಲಿಕೊಳ್ಳದೇ ತಟಸ್ಥತೆ ಕಾಪಾಡಬೇಕಾಗುತ್ತದೆʼ ಎಂದು ಹೇಳಿದರು. ʼಅವರ ಜೊತೆ ನಾನು ವಾದಿಸಿದೆ.

ಸರ್, ಸುಳ್ಳನ್ನೇ ಬಂಡವಾಳ ಮಾಡಿಕೊಂಡ ಸಿದ್ಧಾಂತಗಳು ರಾರಾಜಿಸುವಾಗ ಸತ್ಯವನ್ನು ಹುಡುಕಲು ಸಹ ಸಿದ್ಧಾಂತದ ಸಹಾಯ ಬೇಕಾಗುತ್ತದೆ. ಯಾವ ವ್ಯಕ್ತಿಯೂ ಸಿದ್ಧಾಂತದ ಹೊರಗಾಗಿ ಇರಲು ಸಾಧ್ಯವಿಲ್ಲ. ನನಗೆ ಸಿದ್ದಾಂತವೇ ಇಲ್ಲ ಎನ್ನುವ ವ್ಯಕ್ತಿಯನ್ನು ಕೂಡಾ ಅವನಿಗೆ ತಿಳಿದೋ ತಿಳಿಯದೆಯೋ ಒಂದಲ್ಲಾ ಒಂದು ಸಿದ್ದಾಂತ ಇಲ್ಲವೇ ಹಲವು ಸಿದ್ಧಾಂತಗಳು ನಿರ್ದೇಶಿಸುತ್ತಿರುತ್ತವಲ್ಲ.. ʼ ಎಂದ ನನ್ನ ಮಾತಿಗೆ ನಮಗೆ ಪತ್ರಕರ್ತರಿಗೆ ಹಾಗೆ ಯೋಚಿಸಲು ಬರುವುದಿಲ್ಲ. ನೀವು ಎಡ ಪಂಥ ಅಂತೀರಿ, ಅವರು ಬಲಪಂಥ ಅಂತಾರೆ, ನಾವು ಇವೆರಡರ ನಡುವೆ ಸತ್ಯ ಹುಡುಕ್ತೀವಿʼ ಎಂದೆಲ್ಲಾ ಹೇಳಿದರು. ಕೊನೆಗೆ ಯಾರೂ ರಾಜಿಯಾಗಲಿಲ್ಲ.

ಇದಾಗಿ ಹದಿನೈದು ವರ್ಷಗಳ ನಂತರ, 2019ರಲ್ಲಿ ಅದೇ ಪತ್ರಕರ್ತ ಸ್ನೇಹಿತರು ನಮ್ಮ ಜೊತೆ ಕೆಲಸ ಮಾಡುತ್ತಿದ್ದರು. ಅವರು ನರೇಂದ್ರ ಮೋದಿ ಸರ್ಕಾರದ ಆರ್ಥಿಕ ವಂಚನೆಗಳನ್ನು ಅದ್ಭುತ ರೀತಿಯಲ್ಲಿ ಅಂಕಿಅಂಶಗಳ ಸಮೇತ ಬಯಲು ಮಾಡುತ್ತಿದ್ದುದು ಕಂಡು ನನಗೆ ಅಚ್ಚರಿ ಮತ್ತು ಸಂತೋಷವಾಗಿತ್ತು. ಅಂದು ಅವರು ನಿಜಕ್ಕೂ ಸತ್ಯದ ಪರವಾಗಿದ್ದರು. ಆದರೆ ಅವರ ಬರೆಹಗಳನ್ನು ಯಾರಾದರೂ ಬಲಪಂಥೀಯರು ಓದಿದರೆ ಅವರಿಗೆ ಖಂಡಿತಾ ಇವರು ʼಎಡಪಂಥೀಯ ಸಿದ್ಧಾಂತಿʼ, ʼನಗರ ನಕ್ಸಲ್ʼ ಎಂದೆಲ್ಲಾ ಸುಲಭವಾಗಿ ಹಣೆಪಟ್ಟಿ ಕಟ್ಟಬಹುದಿತ್ತು. ಆದರೆ ಆ ಪತ್ರಕರ್ತ ಸ್ನೇಹಿತರು ನಿಜಕ್ಕೂ ಈ ದೇಶದ ಭವಿಷ್ಯದ ಬಗ್ಗೆ ತುಂಬಾ ಆತಂಕಗೊಂಡು, ಕಾಳಜಿಯಿಂದ ಕೆಲಸ ಮಾಡುತ್ತಿದ್ದರು. ಕೊನೆಗೆ ಅವರಿಗೂ ಸಹ ಅವರು ಹಿಂದೆ ಹೇಳಿದ್ದ ರೀತಿಯಲ್ಲಿ ತಟಸ್ಥವಾಗಿ ಪತ್ರಿಕೋದ್ಯಮ ನಡೆಸುವುದು ಸಾಧ್ಯವಿಲ್ಲ ಎಂಬ ಅರಿವಾಗಿರಬಹುದು ಎಂದುಕೊಂಡೆ. ಹೌದು ಪತ್ರಕತ್ರರಾದವರು ಮಾಡಲು ಇರುವ ಬಹಳ ಕೆಲಸಗಳ ನಡುವೆಯೂ ಅವರು ಅದ್ಯತೆಯನ್ನು ಗುರುತಿಸಿಕೊಂಡಿದ್ದರು.

ಪತ್ರಿಕೋದ್ಯಮದ ಬಗ್ಗೆ ಮಾತಾಡುವಾಗ ನಾವು ಒಂದು ಪ್ರಾಥಮಿಕ ಸಂಗತಿಯನ್ನು ತಿಳಿದುಕೊಳ್ಳಬೇಕು. ನಮ್ಮ ದೇಶದಲ್ಲಿ ಪತ್ರಿಕೋದ್ಯಮ ಆರಂಭವಾದ ಸಂದರ್ಭದಲ್ಲಿ ಯಾವೆಲ್ಲಾ ಭಾರತೀಯರು ಪತ್ರಿಕೆಗಳನ್ನು ಹೊರತರುತ್ತಿದ್ದರೋ ಅವರೆಲ್ಲರೂ ಕಟು ಸಿದ್ಧಾಂತಿಗಳಾಗಿದ್ದರು. ಸಾಮ್ರಾಜ್ಯವಾದದ ವಿರುದ್ಧದ ಸಿದ್ದಾಂತ ಅವರೆಲ್ಲರನ್ನು ಮುನ್ನಡೆಸುತ್ತಿತ್ತು. ಬಹುತೇಕ ಅವರೆಲ್ಲರೂ ಸ್ವಾತಂತ್ರ್ಯ ಹೋರಾಟಗಾರರು ಇಲ್ಲವೇ ಸ್ವಾಭಿಮಾನ ಚಳವಳಿಯ ಹೋರಾಟಗಾರರು, ನಾಯಕರು ಆಗಿದ್ದರು. ಅಂತಹ ಸ್ಪಷ್ಟ ಸೈದ್ಧಾಂತಿಕ ಬುನಾದಿಯಿಟ್ಟುಕೊಂಡು ಅವರೆಲ್ಲಾ ಬ್ರಿಟಿಷರ ವಿರುದ್ಧ ಪತ್ರಿಕೋದ್ಯಮ ನಡೆಸದಿದ್ದರೆ ಈ ದೇಶದ ಪತ್ರಿಕೋದ್ಯಮದ ಇತಿಹಾಸ ಅತ್ಯಂತ ಟೊಳ್ಳಾದ, ಬೂಸಾ ಇತಿಹಾಸವಾಗುತ್ತಿತ್ತು.

ಕೆಲ ಬ್ರಿಟಿಷ್ ಪತ್ರಕರ್ತರು ಹೇಗೆ ಬ್ರಿಟಿಷ್ ಅಧಿಕಾರಿಗಳ ಬೆಡ್ ರೂಮ್ ಸ್ಟೋರಿಗಳನ್ನು ಚಪ್ಪರಿಸಿಕೊಂಡು ಅದನ್ನೇ ಪತ್ರಿಕೋದ್ಯಮ ಎಂದು ಬೀಗುತ್ತಿದ್ದರೋ ಅಷ್ಟರಲ್ಲೇ ಭಾರತೀಯ ಪತ್ರಿಕೋದ್ಯಮ ಉಳಿದುಬಿಡುತ್ತಿತ್ತು. ಆದರೆ ಹೀಗೆ ಆಗಲು ಬಿಡದೇ ಉದಾತ್ತ ಧ್ಯೇಯಗಳ ಮೂಲಕ ದೇಶದ ಪತ್ರಿಕೋದ್ಯಮ ಬೆಳೆಸಿದ 19ನೆಯ ಶತಮಾನದ ಅಂತಹ ಧೀಮಂತ ಪತ್ರಕರ್ತರು ಹಲವರು. ಸುರೇಂದ್ರ ನಾಥ್ ಬ್ಯಾನರ್ಜಿ (ಬೆಂಗಾಲಿ ಪತ್ರಿಕೆ- 1879) ಪತ್ರಕರ್ತರಾಗಿ ಕೆಲಸ ಮಾಡುತ್ತಲೇ ಸತ್ಯ ಹೇಳಿದ ಕಾರಣಕ್ಕೆ ಬ್ರಿಟಿಷ್ ಸರ್ಕಾರ ಅವರನ್ನು ವರ್ನಾಕ್ಯುಲರ್ ಪ್ರೆಸ್ ಕಾಯ್ದೆಯ ಅಡಿ ಜೈಲಿಗಟ್ಟಿತ್ತು. ಸಂವಾದ ಕೌಮುದಿ ಎಂಬ ಪತ್ರಿಕೆ ನಡೆಸುತ್ತಿದ್ದ ರಾಜಾರಾಮ ಮೋಹನ್ ರಾಯ್ ಒಬ್ಬ ಸ್ಪಷ್ಟ ವಿಚಾರವಾದಿಯಾಗಿದ್ದರು.

ಅವರು ಈ ದೇಶದ ಅನಿಷ್ಟಗಳ ಕುರಿತೇ ತಮ್ಮ ಪತ್ರಿಕೆಯಲ್ಲಿ ಬರೆಯುತ್ತಾ ಹೋದರು. ಇದೇ ಕೆಲಸವನ್ನು ಮಹಾರಾಷ್ಟ್ರದಲ್ಲಿ ಮರಾಠಿ ಪತ್ರಿಕೆ ಆರಂಭಿಸಿದ ಜಂಬೇಕರ್ ಮಾಡಿದರು, ಅವರು ತಮ್ಮ ದರ್ಪಣ್ ಪತ್ರಿಕೆಯ ಮೂಲಕ ಸಾಮಾಜಿಕ ಅನಿಷ್ಟಗಳು ಕುರಿತು ಜಾಗೃತಿ ಮೂಡಿಸಿದರು- ಇವರನ್ನು ಮರಾಠಿ ಪತ್ರಿಕೋದ್ಯಮದ ಪಿತಾಮಹ ಎಂದು ಕರೆಯಲಾಗುತ್ತದೆ. ಬಂಗಾಳದಲ್ಲಿ ಹರೀಶ್ಚಂದ್ರ ರಾಯ್ ಎಂಬುವವರು ಬಂಗದರ್ಶನ್ ಎಂಬ ಪತ್ರಿಕೆ ತಂದರು; ಗುಜರಾತಿಯಲ್ಲಿ ʼಬಾಂಬೆ ಸಮಾಚಾರ್ʼ ಪತ್ರಿಕೆ ಆರಂಭಿಸಿದ ಫರ್ದುನ್ಜಿ ಮರ್ಜ್ ಬಾನ್ ಎಂಬುವವರು ಸಹ ಪತ್ರಿಕೆಯ ಮೂಲಕ ಸಮಾಜ ಸುಧಾರಣೆಗೆ ಒತ್ತು ಕೊಟ್ಟರು. ಇನ್ನು ಸ್ವಾತಂತ್ರ್ಯ ಹೋರಾಟಗಾರರಲ್ಲಿ ಬಾಲಗಂಗಾಧರ ತಿಲಕ್ ಕೇಸರಿ ಮತ್ತು ಮರಾಟಾ ಪತ್ರಿಕೆ ಹೊರಡಿಸುತ್ತಿದ್ದರು, ಗಾಂದೀಜಿಯವರು ಆಫ್ರಿಕಾದಲ್ಲಿದ್ದಾಗಲೇ ಇಂಡಿಯನ್ ಒಪಿನಿಯನ್ ಪತ್ರಿಕೆ ನಡೆಸುತ್ತಿದ್ದರೆ, ಭಾರತಕ್ಕೆ ಬಂದ ಮೇಲೆ ಯಂಗ್ ಇಂಡಿಯಾ ಮತ್ತು ಹರಿಜನ್ ಎಂಬ ಪತ್ರಿಕೆಗಳನ್ನು ಹೊರತಂದರು,

ಸುಭಾಷ್ ಚಂದ್ರ ಬೋಸ್ ಅವರು ಸ್ವರಾಜ್ ಪತ್ರಿಕೆಯ ಸಂಪಾದಕರಾಗಿದ್ದರು, ಲಾಲಾ ಲಜಪತ್ ರಾಯ್ ಅವರು ದ ಟ್ರಿಬ್ಯೂನ್ ಎಂಬ ಇಂಗ್ಲಿಷ್ ಪತ್ರಿಕೆ ತಂದರು, ಜೊತೆಗೆ ವಂದೆ ಮಾತರಂ ಎಂಬ ಉರ್ದು ಪತ್ರಿಕೆಯನ್ನೂ ಪ್ರಕಟಿಸುತ್ತಿದ್ದರು- ಇವುಗಳ ಮೂಲಕ ಸ್ವದೇಶಿ ಚಿಂತನೆಯನ್ನು ಅಥವಾ ಸಿದ್ಧಾಂತವನ್ನು ಪ್ರಚುರಪಡಿಸಿದರು, ಹೋಂರೂಲ್ ಚಳವಳಿಯ ಮುಂದಾಳು ಅನಿಬೆಸೆಂಟ್ ಅವರು ನ್ಯೂ ಇಂಡಿಯಾ ಪತ್ರಿಕೆ ತಂದರು, ಇನ್ನು ಮದನ್ ಮೋಹನ್ ಮಾಳವೀಯ ಅವರು ಮೋತಿಲಾಲ್ ನೆಹರೂ ಜೊತೆ ಸೇರಿಕೊಂಡು ದ ಲೀಡರ್ ಎಂಬ ಪತ್ರಿಕೆ ತಂದರೆ, ನಂತರ ಹಿಂದೂಸ್ತಾನ್ ಟೈಮ್ಸ್ ಪತ್ರಿಕೆಯನ್ನೂ ಪುನರುಜ್ಜೀವಗೊಳಿಸಿದರು. ಇನ್ನು ಡಾ. ಬಿ.ಆರ್. ಅಂಬೇಡ್ಕರ್ ಅವರು ʼಅಸ್ಪೃಶ್ಯರಿಗೆ ಈ ದೇಶದಲ್ಲಿ ಪತ್ರಿಕೆಯಿಲ್ಲʼ ಎಂದು ಘೋಷಿಸಿ ಮೊದಲಿಗೆ ಶಾಹು ಮಹಾರಾಜರ ಬೆಂಬಲದಿಂದ ಮೂಕನಾಯಕ ಪತ್ರಿಕೆ (1920) ತಂದರು; ನಂತರ ಬಹಿಷ್ಕೃತ ಭಾರತ (1927), ನಂತರ ಸಮತಾ (1928), ನಂತರ ಜನತಾ (1930) ಹಾಗೂ ಪ್ರಬುದ್ಧ ಭಾರತ (1956) ಪತ್ರಿಕೆಗಳನ್ನು ಹೊರಡಿಸಿ ನಿರಂತರವಾಗಿ ಅವುಗಳಲ್ಲಿ ಬರೆಯುತ್ತಾ ತಾವೊಬ್ಬ ಧೀಮಂತ ಪತ್ರಕರ್ತ ಎಂಬುದನ್ನೂ ನಿರೂಪಿಸಿದ್ದರು.

ಇವರನ್ನೆಲ್ಲಾ ಹೊರಗಿಟ್ಟು ಕೇವಲ ಬ್ರಿಟಿಷರು ತಂದ ಬೆಂಗಾಲ್ ಗೆಜೆಟ್ ನಂತವುಗಳನ್ನು ಮಾತ್ರವೇ ಭಾರತದ ಪತ್ರಿಕೋದ್ಯಮದ ಇತಿಹಾಸ ಎಂದು ಹೇಳಲು ಬರುತ್ತದೆಯೇ? ಈ ದೇಶದ ಪತ್ರಿಕೋದ್ಯಮದ ಇತಿಹಾಸದ ಸೈದ್ಧಾಂತಿಕ ಅಡಿಪಾಯ ಅತ್ಯಂತ ಭದ್ರವಾಗಿತ್ತು ಎಂಬುದಕ್ಕೆ ಇವೆಲ್ಲಾ ಸಾಕ್ಷಿಯಲ್ಲವೆ? ಅಲ್ಲಿ ಎಡಬಿಡಂಗಿತನಕ್ಕೆ, ಸೊ ಕಾಲ್ಡ್ ತಟಸ್ಥತೆಗೆ ಯಾವುದೇ ಅವಕಾಶವಿರಲಿಲ್ಲ. ಈ ದೇಶವನ್ನು ಕಾಡುತ್ತಿದ್ದ ಸಾಮ್ರಾಜ್ಯಶಾಹಿ ಮತ್ತು ಬ್ರಾಹ್ಮಣಶಾಹಿ ಶಕ್ತಿಗಳನ್ನು ನೇರವಾಗಿ ಎದುರಿಸಿಯೇ ಭಾರತದ ಪತ್ರಿಕೋದ್ಯಮ ನಡೆದುಕೊಂಡುಬಂದಿದೆ ಎಂಬುದಕ್ಕೆ ಮೇಲಿನ ಉದಾಹರಣೆಗಳೇ ಸಾಕ್ಷಿ.

ಸ್ವಾತಂತ್ರ್ಯಾನಂತರದಲ್ಲಿ, ನಮ್ಮ ಕರ್ನಾಟಕದಲ್ಲೇ ನಾವು ಯಾರನ್ನೆಲ್ಲಾ ಇಂದು ಧೀಮಂತ ಪತ್ರಕರ್ತರೆಂದು ಪರಿಗಣಿಸಿದ್ದೇವೆಯೋ, ಯಾರನ್ನೆಲ್ಲಾ ಆದರ್ಶ ಎಂದು ನೋಡುತ್ತೇವೆಯೋ ಅವರೆಲ್ಲರೂ ಅತ್ಯಂತ ಸ್ಪಷ್ಟ ಮತ್ತು ದೃಢವಾದ ಸಿದ್ಧಾಂತಿಗಳೇ ಆಗಿದ್ದರು ಎಂಬುದನ್ನು ಮರೆಯಬಾರದು. ಕರ್ನಾಟಕದ ಪತ್ರಿಕೋದ್ಯಮಕ್ಕೇ ಹೊಸ ಮೆರಗು ತಂದು ಸಂಚಲನ ಮೂಡಿಸಿದ ಪಿ. ಲಂಕೇಶ್ ಅವರು ಕಡಿಮೆ ಸಿದ್ಧಾಂತಿಯೇ? ಸ್ಪಷ್ಟ ಸೈದ್ಧಾಂತಿಕ ತಳಹದಿಯ ಪತ್ರಿಕೋದ್ಯಮವೇ ಅವರ ಆಕ್ಟಿವಿಸಂ ಆಗಿತ್ತು ಮಾತ್ರವಲ್ಲ ಪತ್ರಿಕೋದ್ಯಮದ ಮೂಲಕ ಸಾಮಾಜಿಕ ರಾಜಕೀಯ ಬದಲಾವಣೆಯನ್ನೂ ಮಾಡಲು ಸಾಧ್ಯ ಎಂದು ಪಿ ಲಂಕೇಶ್ ಒಂದು ಮಾದರಿಯನ್ನೇ ಸೃಷ್ಟಿಸಿದರು. ಅದು ಸಾಧ್ಯವಾಗಿದ್ದೇ ಅವರ ಕಟಿಬದ್ಧ ಸೈದ್ಧಾಂತಿಕ ನಿಲುವಿನಿಂದ.

ನಾಡು ಕಂಡ ಮತ್ತೊಬ್ಬ ಧೀಮಂತ ಪತ್ರಕರ್ತ ವಡ್ಡರ್ಸೆ ರಘುರಾಮ್ ಶೆಟ್ಟಿ ಕೂಡಾ ಗಟ್ಟಿ ತಾತ್ವಿಕ ನಿಲುವುಗಳ ಮೂಲಕ ನಾಡಿನ ಜನರನ್ನು ತಲುಪಿದರು. ಇನ್ನು 70-80ರ ದಶಕಗಳಲ್ಲಿ ಭಾರತೀಯ ಪತ್ರಿಕೋದ್ಯಮದ ಧೀಮಂತ ಪರಂಪರೆಯಲ್ಲಿ ಸಾಗಿದ ಹಲವಾರು ಕನ್ನಡ ಪತ್ರಿಕೆಗಳಿದ್ದವು- ಸುದ್ದಿ ಸಂಗಾತಿ, ಶೂದ್ರ, ಪಂಚಮ, ಸಮುದಾಯ, ಸಂಕ್ರಮಣ ಮುಂತಾದ ನಿಯತಕಾಲಿಕೆಗಳು ಕನ್ನಡಿಗರ ಅರಿವಿನ ವಿಸ್ತರಣೆಯಲ್ಲಿ ಕಡಿಮೆ ಕೆಲಸ ಮಾಡಿವೆಯೇ? ಹಾಗಾದರೆ ಇವೆಲ್ಲವೂ ಖಚಿತ ಸೈದ್ದಾಂತಿಕತೆಯಿಂದಲೇ ನಡೆಯಲಿಲ್ಲವೇ?

ಇನ್ನು ಕಳೆದ ಕೆಲವು ದಶಕಗಳಲ್ಲಿ, ಅಗ್ನಿ, ಹಾಯ್ ಬೆಂಗಳೂರು, ಗೌರಿ ಲಂಕೇಶ್ ವಾರಪತ್ರಿಗಳೂ ತಮ್ಮ ಛಾಪು ಮೂಡಿಸಿದವು. ಪಿ ಲಂಕೇಶರ ಸ್ಪೂರ್ತಿಯಲ್ಲೇ ದೊಡ್ಡ ದೊಡ್ಡ ಭ್ರಷ್ಟಾಚಾರ ಪ್ರಕರಣಗಳನ್ನು ಅನಾವರಣಗೊಳಿಸಿದವು. ಇದ್ದುದರಲ್ಲಿ ರವಿ ಬೆಳಗರೆ ಎಡಬಿಡಂಗಿಯಾಗಿ ಕ್ರೈಂ, ಸೆಕ್ಸ್ ಗಳನ್ನ ಅಸ್ತ್ರವಾಗಿಸಿಕೊಂಡು ಟ್ಯಾಬ್ಲಾಯ್ಡ್ ಪತ್ರಿಕೋದ್ಯಮವನ್ನು ಹಳ್ಳ ಹಿಡಿಸಿದರೂ ಹಾಯ್ ಬೆಂಗಳೂರು ಸಹ ಅನೇಕ ಬ್ರಷ್ಟಾಚಾರ ಹಗರಣಗಳನ್ನು ಬಯಲು ಮಾಡಿದ್ದು ಸತ್ಯ.

ಯಾವನ್ನು ನಾವು ದಿನಪತ್ರಿಕೆಗಳು ಅಥವಾ ವೃತ್ತ ಪತ್ರಿಕೆಗಳು ಎನ್ನುತ್ತೇವೆಯೋ ಇವುಗಳ ಆದ್ಯತೆ ದಿನನಿತ್ಯದ ಸುದ್ದಿಗಳನ್ನು ಜನರಿಗೆ ತಲುಪುವುದು ಮಾತ್ರವಾಗಿದ್ದ ಕಾರಣ ಬಹಳ ಪತ್ರಿಕೆಗಳಲ್ಲಿ ಸೈದ್ಧಾಂತಿಕತೆ ದೊಡ್ಡ ವಿಷಯವಾಗಲಿಲ್ಲ. ಆದರೆ ಅಂತಹ ಕಡೆಗಳಲ್ಲಿ ಸಹ ದೊಡ್ಡ ದೊಡ್ಡ ಸಿದ್ಧಾಂತಿಗಳು ಹತ್ತಾರು ವರ್ಷಗಳ ಕಾಲ ಕೆಲಸ ಮಾಡಿದ್ದರು ಮತ್ತು ತಮ್ಮ ಖಚಿತ ಅಭಿಪ್ರಾಯಗಳನ್ನು ಆ ವೇದಿಕೆಗಳ ಮೂಲಕ ಜನರಿಗೆ ತಲುಪಿಸುತ್ತಾ ಬಂದಿದ್ದರೆಂಬುದನ್ನು ನಾವು ಮರೆಯಕೂಡದು.

ಈಗ ಹೇಳಿ, ನಮ್ಮ ಪತ್ರಿಕೋದ್ಯಮಕ್ಕೆ ಸಿದ್ಧಾಂತ ಬೇಡವೆ, ಪತ್ರಕರ್ತರಾಗಿರುವವರು ಸೈದ್ಧಾಂತಿಕ ಸ್ಪಷ್ಟತೆ ಹೊಂದಿರಬಾರದೆ? ಆಕ್ಟಿವಿಸ್ಟುಗಳು ಪತ್ರಕರ್ತರಾಗುವುದು ಅಪರಾಧವೆ? ಪತ್ರಿಕೋದ್ಯಮ ಆಕ್ಟಿವಿಸಂಗೆ ಪೂರಕವಾಗಿರಬಾರದೆ? ಇಂದು ಬ್ರಾಹ್ಮಣ್ಯದ ದಿಗ್ವಿಜಯ ಮತ್ತೊಮ್ಮೆ ನಿಜವಾಗುವ ಕರಾಳ ಛಾಯೆ ಇಡೀ ದೇಶವನ್ನು ಆವರಿಸಿಕೊಂಡಿರುವಾಗ, ಬಾಬಾಸಾಹೇಬರು ಎಚ್ಚರಿಸಿದ್ದ ಆ ʼಪ್ರತಿಕ್ರಾಂತಿʼ ತನ್ನ ಕಬಂಧಬಾಹುಗಳನ್ನು ಚಾಚಿಕೊಂಡ ಎಲ್ಲವನ್ನೂ ನೊಣೆಯುತ್ತಿರುವಾಗ, ಅಪರಾಧವೇ ಅಧಿಕಾರವಾಗಿ ದೇಶದ ಪ್ರಮುಖ ಸಂಸ್ಥೆಗಳೆಲ್ಲವನ್ನೂ ನುಂಗಿ ನೀರುಕುಡಿದು ತಮ್ಮ ಅಂಕೆಯಲ್ಲಿ ತಂದುಕೊಂಡು ಇಡೀ ದೇಶದ ಜನರಿಗೆ ಕರಾಳತೆ ದರ್ಶನ ಮಾಡುತ್ತಾ ಭ್ರಷ್ಟಾಚಾರದ ವ್ಯಾಖ್ಯಾನವನ್ನೇ ತಿರುಗುಮರುಗು ಮಾಡುತ್ತಿರುವಾಗ ಸೊ ಕಾಲ್ಡ್ ತಟಸ್ಥತೆಯ ಬದನೇಕಾಯಿಯನ್ನು ನೆಚ್ಚಿಕೊಳ್ಳದೇ ನಿರ್ಧಾರಿತ ಜನಾಂದೋಲನಗಳಿಗೆ ಪೂರಕವಾಗಿ ಪತ್ರಿಕೋದ್ಯಮ ಮತ್ತು ಪತ್ರಕರ್ತರಾದವರು ಜೊತೆಗೂಡುವುದು ಬೇಡವೇ?

‘ಬೇಡ’ ಎಂಬ ಅಭಿಪ್ರಾಯ ನಿಮ್ಮದಾಗಿದ್ದರೆ ನಿಮ್ಮ ಬಳಿ ಹೇಳಲು ನನಗೆ ಏನೂ ಉಳಿದಿಲ್ಲ. ನೀವು ನಿಮ್ಮದೇ ಸುಖಾಸನದಲ್ಲಿ ನೆಮ್ಮದಿಯಾಗಿ ಪವಡಿಸಬಹುದು, ನನಗೇನೂ ಅಭ್ಯಂತರವಿಲ್ಲ. (ಬರಹ- ಹರ್ಷಕುಮಾರ್‌ ಕುಗ್ವೆ, ಪತ್ರಕರ್ತ ಮತ್ತು ಆಕ್ಟಿವಿಸ್ಟ್)

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ಮಾನವ ಸಂಪನ್ಮೂಲ ನೀತಿ ಗುತ್ತಿಗೆ ನೌಕರರಿಗೆ ಮಾರಕ | ನೀತಿ ರದ್ದುಗೊಳಿಸಲು ಶಾಸಕ ಜೆ.ಎಸ್.ಬಸವಂತಪ್ಪಗೆ ಮನವಿ

ಸುದ್ದಿದಿನ,ದಾವಣಗೆರೆ: ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿಗಳ ಪ್ರಸ್ತಾವನೆ ಎನ್ಎಚ್ ಎಂ ಸಿಬ್ಬಂದಿಗಳಲ್ಲಿ ಆತಂಕ ಮೂಡಿಸಿದ್ದು, ಮುಖ್ಯಮಂತ್ರಿಗಳು ಹಾಗೂ ಆರೋಗ್ಯ ಸಚಿವರು ಮಧ್ಯಸ್ತಿಕೆ ವಹಿಸಿ ಸರಿಪಡಿಸಲು ಶಿಪಾರಸ್ಸು ಮಾಡಬೇಕು....

ದಿನದ ಸುದ್ದಿ2 days ago

ದಾವಣಗೆರೆ | ಕನ್ನಡ ಚಳವಳಿ ಸಮಿತಿಯಿಂದ ಇಮ್ಮಡಿ ಪುಲಕೇಶಿ ಜಯಂತಿ ಆಚರಣೆ

ಸುದ್ದಿದಿನ,ದಾವಣಗೆರೆ:ನಗರದ ಜಯದೇವ ವೃತ್ತದಲ್ಲಿರುವ ಅಖಿಲ ಕರ್ನಾಟಕ ಕನ್ನಡ ಚಳವಳಿ ಕೇಂದ್ರ ಸಮಿತಿಯಿಂದ ಗುರುವಾರ (ಡಿಸೆಂಬರ್.4) ಕನ್ನಡ ಚಳವಳಿಯ ಕಚೇರಿಯ ಆವರಣದಲ್ಲಿ ಹಮ್ಮಿಕೊಂಡಿದ್ದ ಸಮಾರಂಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಟಿ...

ದಿನದ ಸುದ್ದಿ3 days ago

ದಾವಣಗೆರೆ | ಕಿತ್ತೂರು ರಾಣಿ ಚೆನ್ನಮ್ಮ ಪ್ರಶಸ್ತಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮಹಿಳೆಯರ ಸರ್ವತೋಮುಖ ಅಭಿವೃದ್ಧಿಗಾಗಿ ಕ್ರಮಿಸುತ್ತಿರುವ ಅರ್ಹ ಸಂಘ, ಸಂಸ್ಥೆಗಳಿಗೆ ಮತ್ತು ವ್ಯಕ್ತಿಗಳನ್ನೊಳಗೊಂಡಂತೆ ಕ್ರೀಡೆ, ಕಲೆ, ಸಾಹಿತ್ಯ...

ದಿನದ ಸುದ್ದಿ4 days ago

ದಾವಣಗೆರೆ | ಜಿಲ್ಲಾ ಪಂಚಾಯಿತಿ ಸಿ.ಇ.ಒ ಗಿತ್ತೆ ಮಾಧವ್ ವಿಠ್ಠಲ್ ರಾವ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:2023-24ನೇ ಸಾಲಿನಲ್ಲಿ ಚನ್ನಗಿರಿ ತಾಲ್ಲೂಕಿನಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ತನಿಖೆಗೆ ಒಳಪಡಿಸುವಂತೆ ಕೋರಿ ಅರ್ಜಿ ಸಲ್ಲಿಸಿ 5 ತಿಂಗಳು...

ದಿನದ ಸುದ್ದಿ5 days ago

ಜಿಎಂ ವಿಶ್ವವಿದ್ಯಾಲಯ ರಂಗೋತ್ಸವ -2025 | ವಿದ್ಯಾರ್ಥಿಗಳ ಪ್ರತಿಭೆ ಅನಾವರಣ : ಸ್ಪರ್ಧೆಯಲ್ಲಿ ರಂಗ ಪ್ರೇಮ, ನಟನಾ ಚತುರತೆ ಬೆರಗು

ಸುದ್ದಿದಿನ,ದಾವಣಗೆರೆ:ನಗರದ ಜಿಎಂ ವಿಶ್ವವಿದ್ಯಾನಿಲಯದ ಜಿಎಂ ಹಾಲಮ್ಮ ಸಭಾಂಗಣದಲ್ಲಿ 1.12 2025 ರಂದು ರಂಗೋತ್ಸವ -2025 ರ ಅಂತಿಮ ಸುತ್ತು ಗ್ರ್ಯಾಂಡ್ ಫಿನಾಲೆಯನ್ನು ಏರ್ಪಡಿಸಲಾಗಿತ್ತು. ಜಿಎಂ ವಿಶ್ವವಿದ್ಯಾಲಯದ ಎಲ್ಲಾ...

ದಿನದ ಸುದ್ದಿ5 days ago

ಉಳಿಕೆ ಸರ್ಕಾರಿ ನಿವೇಶನ ಇಲಾಖೆಗಳ ವಿವಿಧ ಉದ್ದೇಶಿತ ಕಟ್ಟಡಗಳಿಗೆ ಹಂಚಿಕೆ: ಡಿಸಿ ಜಿ.ಎಂ.ಗಂಗಾಧರಸ್ವಾಮಿ

ಸುದ್ದಿದಿನ,ದಾವಣಗೆರೆ: ದಾವಣಗೆರೆಯಲ್ಲಿ ಸರ್ಕಾರಿ ನಿವೇಶನಗಳು ಖಾಲಿ ಇದ್ದರೆ ಅವುಗಳನ್ನು ಕೂಡಲೇ ಸರ್ಕಾರಿ ಕಚೇರಿಗಳ ಉಪಯೋಗಕ್ಕೆ ನೀಡಬೇಕೆಂದು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಸೂಚಿಸಿದರು. ಮಂಗಳವಾರ(ಡಿ.2) ರಂದು ಜಿಲ್ಲಾಧಿಕಾರಿಗಳ ಕಚೇರಿ...

ದಿನದ ಸುದ್ದಿ5 days ago

ದುಡಿಯುವ ವರ್ಗಕ್ಕೆ ಸ್ಥಳದಲ್ಲೇ ಉಚಿತ ಚಿಕಿತ್ಸೆ : ಶಾಸಕ ಕೆ.ಎಸ್.ಬಸವಂತಪ್ಪ ‘ಸಂಚಾರಿ ಆರೋಗ್ಯ ಘಟಕ’ಕ್ಕೆ ಚಾಲನೆ

ಸುದ್ದಿದಿನ,ದಾವಣಗೆರೆ:ಕಾರ್ಮಿಕರಿಗೆ ತ್ವರಿತವಾಗಿ, ಕೆಲಸದ ಸ್ಥಳಗಳಲ್ಲೇ ವೈದ್ಯಕೀಯ ಸೇವೆ ಸಿಗಬೇಕು ಎಂಬ ಉದ್ದೇಶದಿಂದ ‘ಸಂಚಾರಿ ಆರೋಗ್ಯ ಘಟಕ’ (ಮೊಬೈಲ್ ಮೆಡಿಕಲ್ ಯುನಿಟ್) ಯೋಜನೆಯನ್ನು ಸರ್ಕಾರ ಜಾರಿಗೊಳಿಸಿದೆ. ಕಾರ್ಮಿಕರು ಇದರ...

ದಿನದ ಸುದ್ದಿ5 days ago

ಸಹಾಯಧನಕ್ಕಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿನ ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ ಧರ್ತಿ ಅಭಾ ಜನ ಜಾತಿಯ ಗ್ರಾಮ ಉತ್ಕರ್ಷ ಅಭಿಯಾನದಡಿ ಮೀನುಮಾರಾಟಗಾರರಿಂದ ಸಹಾಯಧನ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ....

ದಿನದ ಸುದ್ದಿ1 week ago

ಎಂನರೇಗಾ ಯೋಜನೆ : ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಹರಿಹರ ತಾಲೂಕಿನ ತೋಟಗಾರಿಕೆ ಇಲಾಖೆ ವತಿಯಿಂದ ಪ್ರಸಕ್ತ ಸಾಲಿಗೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಹೊಸದಾಗಿ ತೋಟಗಾರಿಕೆ ಬೆಳೆಗಳನ್ನು ಬೆಳೆಯಲು ಇಚ್ಛಿಸುವ ರೈತರಿಂದ...

ದಿನದ ಸುದ್ದಿ2 weeks ago

ಅಡ್ಡ ಬಂದ ನಾಯಿ ಉಳಿಸಲು ಹೋಗಿ ಕಾರು ಪಲ್ಟಿ : ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ನಿಧನ

ಸುದ್ದಿದಿನಡೆಸ್ಕ್:ಕರ್ನಾಟಕ ರಾಜ್ಯ ಖನಿಜ ನಿಗಮದ ವ್ಯವಸ್ಥಾಪಕ ನಿರ್ದೇಶಕ ಹಿರಿಯ ಐಎಎಸ್ ಅಧಿಕಾರಿ ಮಹಾಂತೇಶ್ ಬೀಳಗಿ ಕಾರು ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ. ಸಂಬಂಧಿಕರ ಮದುವೆಗೆಂದು ವಿಜಯಪುರಿಂದ ಕಲಬುರಗಿಗೆ ತೆರಳುತ್ತಿದ್ದ ವೇಳೆ...

Trending