Connect with us

ನೆಲದನಿ

ಮೇ 4-5, ಗದಗ | 6ನೇ ಮೇ ಸಾಹಿತ್ಯ ಮೇಳದಲ್ಲಿ ತೆಲುಗಿನ ಜನಪ್ರಿಯ ಕವಿ ‘ಗೋರೆಟಿ ವೆಂಕನ್ನ’

Published

on

ತೆಲುಗಿನ ಜನಪ್ರಿಯ ಕವಿ, ಹಾಡುಗಾರ, ಚಲನಚಿತ್ರ ಗೀತರಚನಕಾರ, ಹೋರಾಟಗಾರ ಗೋರೆಟಿ ವೆಂಕನ್ನ (1963).‘ಹಾಡುಕವಿ’ಯೆಂದೇ ಖ್ಯಾತರಾಗಿರುವ ಅವರು ಈಗ ತೆಲಂಗಾಣ ರಾಜ್ಯದ ಭಾಗವಾಗಿರುವ ಮಹಬೂಬನಗರ ಜಿಲ್ಲೆಯ ಗೋರೆಟಿ ಈರಮ್ಮ-ನರಸಿಂಹ ದಂಪತಿಗಳ ಮಗನಾಗಿ ಗೌರಾರಾಮ ಹಳ್ಳಿಯಲ್ಲಿ ಜನಿಸಿದರು.

ಬಾಲ್ಯದಿಂದಲೂ ರೈತರ, ಕೂಲಿಕಾರರ ನಡುವೆ ಸ್ಥಳೀಯ, ಜನಪದ ಹಾಡುಗಳನ್ನು ಹಾಡುತ್ತ ಬೆಳೆದರು. ಕ್ರಮೇಣ ಜನಹೋರಾಟಗಳ ಹಿನ್ನೆಲೆಯಲ್ಲಿ ಸ್ವಂತ ರಚನೆಗಳನ್ನು ರಚಿಸಿ ಅವನ್ನು ಹಾಡಲು ಮೊದಲು ಮಾಡಿದರು. ಅವರ ರಚನೆಗಳ ಮೇಲೆ ದೇವುಲಪಲ್ಲಿ ಕೃಷ್ಣ ಶಾಸ್ತ್ರಿ, ನಂದೂರಿ ಸುಬ್ಬರಾವ್, ಕೊಣಕಲ್ಲ ವೆಂಕಟರತ್ನಂ ಅವರ ಪ್ರಭಾವ ಇದೆಯೆಂದು ಗುರುತಿಸಲಾಗುತ್ತದೆ.

ಪ್ರಕೃತಿ ಮತ್ತು ಜನರೇ ಅವರ ಹಾಡುಗಳಲ್ಲಿ ತುಂಬಿದ್ದಾರೆ. ನೆಲದ ಚೆಲುವು, ಗ್ರಾಮಜೀವನದ ಸೊಬಗು, ತೆಲಂಗಾಣ ಸಂಸ್ಕೃತಿ ವೈಶಿಷ್ಟ್ಯಗಳು ಅವರ ಹಾಡಿನಲ್ಲಿವೆ. ಎಂದೇ ಅವರ ಹಾಡುಗಳು ಜನ ಸಾಮಾನ್ಯರ ಮೆಚ್ಚಿಗೆಗೆ ಪಾತ್ರವಾಗಿ ಪ್ರಸಿದ್ಧವಾದವು. ಅವರ ಖ್ಯಾತಿ ಸಿನಿಮಾ ರಂಗವನ್ನೂ ಸೆಳೆದು ಹಲವು ತೆಲುಗು ಚಲನಚಿತ್ರಗಳಿಗೆ ಗೀತರಚನೆ ಮಾಡಿದರು. ಅಲ್ಲದೆ ರೇಲಾ ರೆ ರೇಲಾ ಎಂಬ ಟಿವಿ ಜನಪದ ಗೀತೆಗಳ ಸರಣಿ ಕಾರ್ಯಕ್ರಮದ ತೀರ್ಪುಗಾರರಾಗುವ ಮೂಲಕ ನಾಡಿನಾದ್ಯಂತ ಜನಪ್ರಿಯತೆ ಗಳಿಸಿದರು. ತೆಲಂಗಾಣ ಪ್ರತ್ಯೇಕ ರಾಜ್ಯ ಹೋರಾಟದ ಸಮಯದಲ್ಲಿ ಅದನ್ನು ಬೆಂಬಲಿಸಿ ಅನೇಕ ಹೋರಾಟಗೀತೆಗಳನ್ನು ಅವರು ರಚಿಸಿದರು.

ಏಕು ನಾದಂ ಮೋತ, ರೇಲ ಪೂತಲು, ಅಲಸಂದ್ರ ವಂಕ, ರಾವಿನೀಡ, ಪೂಸಿನ ಪುನ್ನಂ ಮೊದಲಾದ ಕವನಸಂಗ್ರಹಗಳು ಪ್ರಕಟವಾಗಿವೆ. ಹಲವು ಹಾಡಿನ ಸಂಗ್ರಹಗಳೂ ಹೊರಬಂದು ಜನಪ್ರಿಯವಾಗಿವೆ.

ಇದೇ ಮೇ 4-5ರಂದು ಗದಗದ ಅಂಬೇಡ್ಕರ್ ಭವನದಲ್ಲಿ ನಡೆಯಲಿರುವ 6ನೇ ಮೇ ಸಾಹಿತ್ಯ ಮೇಳದ ‘ಅಭಿವೃದ್ಧಿ ಭಾರತ: ಕವಲುದಾರಿಗಳ ಮುಖಾಮುಖಿ’ ಸಂವಾದ ಗೋಷ್ಠಿಯ ಸಮಾರೋಪ ಸಮಾರಂಭದಲ್ಲಿ ಮೇ 5ರಂದು ವೆಂಕನ್ನ ಹಾಡಲಿದ್ದಾರೆ, ಆಡಲಿದ್ದಾರೆ. ಇರಲೇಬೇಕು ನೀವು ಅಂದು ಅವರೊಡನೆ, ನಮ್ಮೊಡನೆ ಹೆಜ್ಜೆ-ದನಿಗೂಡಿಸಲಿಕ್ಕೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಆತ್ಮಕತೆ | ಕೇಂದ್ರದಲ್ಲಿ ಮೂಡಿ ಮಡಿದವರು

Published

on

  • ರುದ್ರಪ್ಪ ಹನಗವಾಡಿ

ಮನಸ್ಸಿನಲ್ಲಿ ಉಳಿದು ಹೋದ ಆರೋಗ್ಯವಂತ ವಿದ್ಯಾರ್ಥಿಗಳ ಕಿರುಚಿತ್ರಣ

ಯಶೋದ

ಈಗ್ಗೆ ಸುಮಾರು 8 ವರ್ಷಗಳಿಂದ ಅಧ್ಯಾಪಕ ವೃತ್ತಿಯನ್ನು ಮಾಡಿಕೊಂಡು ಬರುತ್ತಿದ್ದೇನೆ. ಈ ಅವಧಿಯಲ್ಲಿ ನಾವು ಸಂಪರ್ಕಿಸಿದ ವಿದ್ಯಾರ್ಥಿಗಳು ಹಲವು ನೂರು ಸಂಖ್ಯೆಗಳಿಗೆ ಮೀರಬಹುದು. ಹಲ ಕೆಲವರು ನಮ್ಮಿಂದ ಕಲಿತವರಿದ್ದರೆ, ಮತ್ತೆ ಕೆಲವರು ಇವರದೇನು ಎಂಬ ಮಾತಿರಬಹುದು. ಹೀಗೆ ಪ್ರತಿವರ್ಷವೂ ಬಂದು ಹೋಗುವ, ಹಲವು ಹತ್ತಾರು ವಿದ್ಯಾರ್ಥಿಗಳಲ್ಲಿ ಕೆಲವು ವಿದ್ಯಾರ್ಥಿಗಳು ಅವರ ವಿಶೇಷ ಗುಣಗಳಿಗೆ, ಸಾಮರ್ಥ್ಯಕ್ಕೆ ಹೆಸರಾಗಿ ಹಲವರು ಮನಸ್ಸಲ್ಲಿ ಚಿರಸ್ಥಾಯಿಯಾಗಿ ಉಳಿಯುತ್ತಾರೆ. ಹಾಗೆ ಉಳಿದು ನಿಜ ಬದುಕಿನಲ್ಲಿ ಅಳಿದು ಹೋದ ಕೆಲವು ವಿದ್ಯಾರ್ಥಿಗಳ ನೆನಪು ಮಾಡಿಕೊಳ್ಳುವುದೇ ಈ ಲೇಖನದ ಉದ್ದೇಶ.

1981ನೇ ವರ್ಷ ನನ್ನ ಬದುಕಿನಲ್ಲಿ ಅನೇಕ ಘಟನಾವಳಿಗಳಿಂದ ಕೂಡಿದ ವರ್ಷ. ಮೇ ತಿಂಗಳಲ್ಲೊಂದು ದಿನ ನಮ್ಮ ಊರಿಗೆ ಹೋಗಿ, ಅಲ್ಲಿನ ತರಲೆಗಳನ್ನೆಲ್ಲ ತಲೆಯಲ್ಲಿ ತುಂಬಿಕೊAಡು ಅವ್ವ ಕೊಟ್ಟ ಸಣ್ಣಪುಟ್ಟ ಸಾಮಾನುಗಳನ್ನು ಕಟ್ಟಿಕೊಂಡು ಮೂರು ಮೈಲು ನಡೆದು. ಶಿವಮೊಗ್ಗದ ಬಸ್ಸು ಹಿಡಿದು ಪ್ರಾಜೆಕ್ಟ್ ತಲುಪುವ ವೇಳೆಗೆ ನನಗೆ ಸಾಕೋ ಸಾಕಾಗಿ ಹೋಗಿತ್ತು. ಹಲವು ಆತಂಕಗಳನ್ನು ಪಾರುಮಾಡಿಕೊಂಡು ನಮಗಾಗಿದ್ದ ಮಗ, ಹೆಂಡತಿಯನ್ನು ನೋಡೋ ಕಾತರದಲ್ಲಿ ದಣಿವು ಕರಗುತ್ತಿತ್ತು. ಮನೆಯೊಳಗೆ ಕಾಲಿಡುತ್ತಿದ್ದಂತೆ ಮಗನ ಆಟ-ಪಾಟ, ತನ್ನ ನೌಕರಿ ವಿಷಯ ಹೇಳುತ್ತಿದ್ದೆ.

ನನ್ನಾಕೆ `ಶಿವಮೊಗ್ಗದಲ್ಲೇನಾದರು ಕಾಫಿ ಕುಡಿದಿದ್ದೀರಾ?’ ಎಂದು ಕೇಳಿದಳು. ನನಗೆ ಅದ್ಯಾವ ದೊಡ್ಡ ಪ್ರಶ್ನೆ ಎಂದು ಉತ್ತರಿಸುವ ಗೋಜಿಗೆ ಹೋಗದೆ ಆರಾಮವಾಗಿ ಕೂರುವ ಹಂಚಿಕೆಯಲ್ಲಿದ್ದೆ. ಇಪ್ಪತ್ನಾಲ್ಕು ಗಂಟೆಗಳೂ ತಾನೊಬ್ಬಳೇ ಸಹಿಸಿಕೊಂಡು ಹಿಂಸೆಪಟ್ಟುದನ್ನು ಒಮ್ಮೆಲೆ ಕಣ್ಣೀರ ಕೋಡಿಯಲ್ಲಿ ಉಸುರಿದಳು. `ಯಶೋದÀ ಬೆಂಗಳೂರಲ್ಲಿ ತೀರಿ ಹೋದಳಂತೆ, ನಿಮಗೆ ಫೋನ್ ಮಾಡಿದ್ದರು’ ಎಂದಾಗ ನನಗೆ ಅಸಾಧ್ಯ ಸಂಕಟದೊಡನೆ ದಿಗ್ಭçಮೆಯಾಯಿತು. ಹತ್ತಿರದ ಮನೆಯವರಿಂದ ಸೈಕಲ್ ಪಡೆದು ಅವಳ ಶವ ತಂದ ಹಳ್ಳಿಯ ಕಡೆಗೆ ವೇಗವಾಗಿ ಹೊರಟೆ.

1977-78ರ ಈ ಕೇಂದ್ರದ ಪ್ರಾರಂಭದ ದಿನಗಳಲ್ಲಿ ಅಭಿನಯಿಸಲಾದ ಅನೇಕ ನಾಟಕಗಳಲ್ಲಿ ಸ್ಫೂರ್ತಿಯನ್ನು ವೈವಿಧ್ಯತೆಯನ್ನು ತಂದು ಕೊಟ್ಟ ಇವಳು ಅಭಿನಯ ಕಲೆಯಲ್ಲಿ ನಿಷ್ಣಾತಳಾಗಿದ್ದಳು. ಅರ್ಥಶಾಸ್ತçದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣಳಾಗಿ ಕರ್ನಾಟಕದ ಮುಖ್ಯ ಸಂಶೋಧನ ಕೇಂದ್ರದಲ್ಲಿ ಸಂಶೋಧನೆ ಮಾಡುತ್ತಿದ್ದ ಇವಳ ಸಾವು, ನಮ್ಮ ಕೇಂದ್ರದಿAದ ಹಾರಿಬಿಟ್ಟ ಹಕ್ಕಿಯ ರೆಕ್ಕೆ ಮುರಿದು ಬೆಂಕಿಗೆ ಬಿದ್ದಷ್ಟು ನೋವು ತಂದಿತ್ತು.

ವಿದ್ಯಾರ್ಥಿ ದೆಸೆಯಿಂದಲೂ ಉದಾತ್ತ ಗುಣಗಳನ್ನು ಬೆಳೆಸಿಕೊಂಡಿದ್ದ ಯಶೋದ ನ್ಯಾಯಕ್ಕಾಗಿ ಯಾರ ನಿಷ್ಠುರವನ್ನೂ ಲೆಕ್ಕಿಸದ, ನೇರ ಮನಸ್ಸಿನ ಸರಳ ಸುಂದರ ಹುಡುಗಿ. ನಮ್ಮ ಅನೇಕ ಹುಡುಗ-ಹುಡುಗಿಯರಲ್ಲಿ ಕಾಣಸಿಗದ, ಆರೋಗ್ಯಕರ ಮನಸ್ಸಿನ ಈ ಹುಡುಗಿಗೆ ಅನಾರೋಗ್ಯವು ಇಷ್ಟು ಬೇಗ ಸಾವು ತರುವುದೆಂದು ಯಾರು ತಾನೆ ಊಹಿಸಿದ್ದರು? ನನ್ನ ಮಗನನ್ನು ನೋಡಲು ಬರುವೆ ಎಂದು ಕಾಗದ ಬರೆದಿದ್ದು, ಇವಳು ಕೊನೆಗೆ ಮಾಂಸದ ಮುದ್ದೆಯಾಗಿ ಅವಳ ಊರಲ್ಲಿ ನೋಡಿ, ನನ್ನ ವಿದ್ಯಾರ್ಥಿನಿಯಾಗಿ ಓಡಾಡುತ್ತಿದ್ದವಳು ಇವಳೇ ಎಂದು ಯೋಚನೆಯಲ್ಲಿ ಮುಳುಗುವಂತೆ ಮಾಡಿ ಮರೆಯಾದಳು.

ಬಷೀರ್ ಅಹಮದ್

ಬಷೀರ್ ಅಹಮದ್ ಎಂಬ ವಿದ್ಯಾರ್ಥಿ ಓದು ಮುಗಿಸಿ ಹೋದ ನಂತರ, ಆತನ ಶಿಸ್ತನ್ನು ಹೋಲುವ ವಿದ್ಯಾರ್ಥಿಗಳು ನಮ್ಮ ಕೇಂದ್ರಕ್ಕೆ ಬಂದಿಲ್ಲವೆಂದೇ ಹೇಳಬೇಕು. ವಿನಯ ವಿದ್ಯಾಭ್ಯಾಸದ ಲಕ್ಷಣ ಎನ್ನುವ ರೀತಿಯಂತೆ ಈತನ ನಡವಳಿಕೆ.

ಕನ್ನಡವನ್ನು ಸರಾಗವಾಗಿ ಮಾತನಾಡಲಾರದವನಾಗಿದ್ದ ಈತ ನನ್ನನ್ನು ಹಲವು ಬಾರಿ ಕಾಡಿ ಕನ್ನಡವನ್ನು ಕಲಿತದ್ದುಂಟು. ಅವನ ಮಧುರವಾದ ಕಂಠದಿಂದ ಕನ್ನಡ ಹಾಡುಗಳನ್ನು ಹಾಡಿಸಲು ನಾನು ಕನ್ನಡ ಪದ್ಯಗಳನ್ನು ವಿವರಿಸಿ ಬರೆದುಕೊಡುತ್ತಿದ್ದೆ. ಅವನಿಗೆ ಇದ್ದ ಅಪಾರ ಶ್ರದ್ಧೆಯಿಂದಾಗಿ ಸುಲಲಿತವಾಗಿ ಕನ್ನಡ ಮಾತಾಡುವುದರ ಜೊತೆಗೆ, ಕನ್ನಡ ಹಾಡುಗಳನ್ನು ಹಾಡಿ ನಮ್ಮ ಕೇಂದ್ರದ ಮತ್ತು ನಮ್ಮ ಈ ಪರಿಸರದ ಜನರ ಹೃದಯದಲ್ಲಿ ಈಗಲೂ ಗುಂಯ್‌ಗುಡುತ್ತಿದ್ದಾನೆ.

ಕೇಂದ್ರದಿಂದ ಎಂ.ಎ., ಪಾಸು ಮಾಡಿಕೊಂಡು ಹೋದ ಮೇಲೆ ಬೆಂಗಳೂರಿನಲ್ಲಿ ಉಪಾಧ್ಯಾಯನಾಗಿ ಕೆಲಸ ಮಾಡುತ್ತಿರುವಾಗ ಮತ್ತೆ ಪ್ರಾಜೆಕ್ಟ್ಗೆ ಬಂದಿದ್ದನು. ಆತನ ಕಂಠ ಮಾಧರ‍್ಯವನ್ನು ಸವಿಯಲು, ಮನೆಗೆ ತಿಂಡಿ ತಿನ್ನಲು ಬನ್ನಿ ಎಂದು ಆಹ್ವಾನಿಸಿದೆ. ಆತ, ತಿಂಡಿ ತಿನ್ನಲು ಬೇರೊಬ್ಬ ಅಧ್ಯಾಪಕರು ಕರೆದಿದ್ದಾರೆ, ನಿಮ್ಮ ಮನೆಗೆ ಊಟಕ್ಕೇನೆ ಬರುವೆ ಸಾರ್, ಅಂದಾಗ ಸಂತೋಷದಿAದ ಕರೆದೊಯ್ದೆ. ಜೊತೆಗೆ ಮಾತುಕತೆ ಹೀಗೆ ನಡೆದಿತ್ತು. ಪುಳಿಚಾರು ಊಟ ಕಣಯ್ಯಾ ಎಂದಾಗ, ಮುಂದಿನ ಸಾರಿ ನಾನೆ ಬಂದು ಬಿರಿಯಾನಿ ಮಾಡುವೆ ಎಂದು ಹೇಳಿದ. ಬಿರಿಯಾನಿ ಮಾಡಿ ಉಣ್ಣುವ ದಿನ ಬರುವ ಮುನ್ನವೇ ಜಾಂಡೀಸ್ ಬಂದು ಬಷೀರ್ ಇನ್ನಿಲ್ಲವಾದ. ಸತ್ತ ಹಲವು ದಿನಗಳ ನಂತರ ಬಂದ ಪತ್ರದಿಂದ ಸಂಕಟವಾಯಿತು.

ಈಗ ಯಾವ ಸಭೆ ಸಮಾರಂಭಗಳಲ್ಲಿ ಯಾರು ಹಾಡು ಹೇಳಿದರೂ ಬಷೀರ್‌ನ ನೆನಪು ಬಂದು ಕಣ್ಣು ತೇವವಾಗುತ್ತದೆ. ಕಡುಬಡತನದಿಂದ ಬಂದು ಅಪಾರ ಸ್ವಾಭಿಮಾನಿಯಾಗಿ ಬೆಳೆದು ಅಧ್ಯಾಪಕರೆಲ್ಲರ ವಿಶ್ವಾಸ ಗಳಿಸಿ ನಿಗರ್ವಿಯಾಗಿದ್ದ ಬಷೀರ್ ಅಹಮದ್ ಹಲವು ಆಸೆಗಳನ್ನಿಟ್ಟುಕೊಂಡು ಹಗಲಿರುಳು ದುಡಿಯುತ್ತಿದ್ದ. ಸಾಮಾನ್ಯ ರೋಗವೊಂದು ಅವನ ಆಸೆಗಳಿಗೆ, ಅವನ ಸಾಮರ್ಥ್ಯಗಳಿಗೆ ಇತಿಶ್ರೀ ಹಾಡುವುದೆಂದು ಯಾರು ತಾನೆ ನಂಬಿದ್ದರು?

ಗೋಪಾಲಸ್ವಾಮಿ

ಈತ ನಮ್ಮ ಕೇಂದ್ರಕ್ಕೆ ಬಂದಾಗಲೇ ನನಗೆ, ಹೊಸ ಶಕ್ತಿಯುಳ್ಳ ಯುವಕನೊಬ್ಬ ಬಂದಿದ್ದಾನೆ ಎಂಬ ಆಸೆ ಹುಟ್ಟಿತ್ತು, ಗೋಪಾಲಸ್ವಾಮಿ ನೋಡಲು ಪೀಚಲು. ಇವನೆಂತಹ ಹುಡುಗ ಎಂದು ಯಾರಾದರೂ ಕಡೆಗಣಿಸಬಹುದಾಗಿದ್ದ ಈತ ಮನದೊಳಗೆ ಅಗಾಧ ಬಾಂಬನ್ನೇ ಇಟ್ಟುಕೊಂಡಿದ್ದು ಸಿಡಿಸಲಾಗುವ ಮುನ್ನವೇ ನೆನಪಾಗಿ ಹೋದನು.

ಕನ್ನಡ ಎಂ.ಎ., ಗೆ ಬಂದು ಸೇರಿದಾಗ ಸಂಘಟನೆ, ಬಂಡಾಯ ಎಂದು ಹಲವು ಹತ್ತು ರೀತಿಯ ಹೋರಾಟದಲ್ಲಿ ಹಲವು ಬಾರಿ ಪೋಲೀಸ್ ಏಟು ತಿಂದು ಈ ದೇಶದ ಜಡ್ಡುಗಟ್ಟಿದ ಸಮಾಜದ ನಿರ್ಲಜ್ಜ ಅಸಮಾನತೆಯನ್ನು ಧಿಕ್ಕರಿಸಿದ ಈತನಿಗೆ ಸ್ವಂತ ಆಸೆಗಳು ದೂರ. ಈತ ನಮ್ಮ ಕೇಂದ್ರಕ್ಕೆ ಬಂದಾಗಲೇ ನನಗೆ, ಹೊಸ ಶಕ್ತಿಯುಳ್ಳ ಯುವಕನೊಬ್ಬ ಬಂದಿದ್ದಾನೆ ಎಂಬ ಆಸೆ ಹುಟ್ಟಿತ್ತು. ಆದರೆ ಅದು ಬಹಳ ದಿನ ಉಳಿಯಲಿಲ್ಲ.

ಸಾಮಾನ್ಯ ಖಾಯಿಲೆಯೆಂದು ಮೆಗ್ಗಾನ್ ಆಸ್ಪತ್ರೆ ಸೇರಿದ. ಈತನ ಹಣಕಾಸಿನ ಸಮಸ್ಯೆಗೆ ವಿದ್ಯಾರ್ಥಿಗಳು ಅಧ್ಯಾಪಕರು ಹಣ ಸೇರಿಸಿಕೊಟ್ಟರು. ವಿದ್ಯಾರ್ಥಿ ಜೀವನದುದ್ದಕ್ಕೂ ಹೋರಾಟದ ಬದುಕಿನಲ್ಲಿ ಏಟು ತಿಂದು ಅಪರೂಪದ ವ್ಯಕ್ತಿಯ ಬದುಕು ಬೆಳಗುವ ಮುನ್ನವೇ ನಂದಿಹೋಯಿತು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆತ್ಮಕತೆ | ಮಗು : ಆತಂಕದ ಕ್ಷಣಗಳು

Published

on

ಪತ್ನಿ ಗಾಯತ್ರಿ ಹಾಗೂ ಮಗ ಶಿಶಿರನೊಂದಿಗೆ ಲೇಖಕ ರುದ್ರಪ್ಪ ಹನಗವಾಡಿ
  • ರುದ್ರಪ್ಪ ಹನಗವಾಡಿ

ದುವೆಯಾಗಿ 1-2 ವರ‍್ಷ ಮಕ್ಕಳ ಕನಸು ಬೇಡ ಎಂದು ಯೋಚಿಸಿದ್ದರೂ ಅದೇನು ಸಫಲವಾಗದೆ ನನ್ನ ಮಗ ಶಿಶಿರ ಆಗಮಿಸಿದ್ದ.

ಭದ್ರಾವತಿಯಲ್ಲಿ ಇಂದಿರಾ ಅವರ ಮನೆಗೆ ಹೋಗಿ ಅಲ್ಲಿಂದ ಲೇಡಿ ಡಾಕ್ಟರ್ ಬಳಿ ಹೋಗಿ ತಪಾಸಣೆ ಮಾಡಿಸಿದೆವು. ನಮ್ಮಿಬ್ಬರ ರಕ್ತದ ಗುಂಪು ಆರ್‌ಹೆಚ್ ಪಾಸಿಟಿವ್ ನೆಗೆಟಿವ್‌ಗಳಾಗಿದ್ದು ನೀವು ರ‍್ಭಿಣಿ ಆಗಲು ಸಾಧ್ಯವಿಲ್ಲ. ಇದೆಲ್ಲ ಹೇಗಾಯಿತೆಂಬ ಅಭಿಪ್ರಾಯ ತಿಳಿಸಿ, ನಮಗೆ ದಿಗಿಲು ಬೀಳುವಂತೆ ವಿವರಿಸಿದ್ದಳು. ನಮಗಾರಿಗೂ ಬೇರೆ ಡಾಕ್ಟರ್ ಪರಿಚಯವಿಲ್ಲದೆ ಇರುವಾಗ ಡಾ. ಹೆಚ್. ಶಿವರಾಂ ಅವರು ಮೆಗ್ಗಾನ್ ಹಾಸ್ಪಿಟಲ್‌ನಲ್ಲಿ ಜನರಲ್ ಫಿಜಿಸಿಯನ್ ಆಗಿ ಇರುವುದು ತಿಳಿಯಿತು.

ಶಿವರಾಂ ಡಾಕ್ಟರ್ ನಮಗೆ ಮೈಸೂರಿನಲ್ಲಿರುವಾಗ ಎಸ್‌ವೈಎಸ್ ರ‍್ಯಕ್ರಮಗಳ ಹುಡುಗರ ಆರೋಗ್ಯ ಸಮಸ್ಯೆ ಬಂದಾಗ ಉಪಚರಿಸುತ್ತಿದ್ದರು. ಡಾ. ಶಿವರಾಂ ಅವರು ಹಾಸನ ಜಿಲ್ಲೆಯ ಸಕಲೇಶಪುರದ ಹಾನಬಾಳ್ ಗ್ರಾಮದವರು. ಶಿವರಾಂ ಅವರಿಗೆ ರ‍್ಣಚಂದ್ರ ತೇಜಸ್ವಿ, ಕಡಿದಾಳ್ ಶಾಮಣ್ಣ, ಸುಂದರೇಶ್, ರವರ‍್ಮಕುಮಾರ್ ಇವರೆಲ್ಲ ಪರಿಚಯವಿದ್ದವರು. ಮತ್ತು ನನಗೆ ಮೈಸೂರಿನಲ್ಲಿ ಓದುವಾಗಲೇ ಪರಿಚಯವಾಗಿದ್ದರು. ನಾನು ಮೈಸೂರು ಮಹಾರಾಜಾ ಕಾಲೇಜಿನಿಂದ ಬಿಆರ್‌ಪಿಗೆ ಬಂದದ್ದು, ನಂತರ ಮದುವೆಯಾದದ್ದು ಈಗ ನನ್ನ ಹೆಂಡತಿ ಗರ‍್ಭಿಣಿ ಆಗಿರುವ ಸುದ್ದಿ ತಿಳಿದು ಸಂತೋಷಗೊಂಡರು. ನಂತರ ಗಾಯತ್ರಿ ಭದ್ರಾವತಿಯ ಲೇಡಿ ಡಾಕ್ಟರ್ ಹೇಳಿದ ವಿಚಾರ ತಿಳಿಸಿದೆ.

ಅವರು ತಪಾಸಣೆ ನಡೆಸಿ ಇದೆಲ್ಲ ಏನೂ ಇಲ್ಲ ಇಡೀ ಏಶಿಯಾ ಖಂಡದಲ್ಲಿ ಶೇ 15ರಷ್ಟು ಜನರು ಆರ್‌ಹೆಚ್ ಪಾಸಿಟಿವ್ ನೆಗಟಿವ್ ಸಮಸ್ಯೆ ಇರುವವರು, ಅದಕ್ಕಾಗಿ ನೀವು ಚಿಂತಿಸಬೇಕಾಗಿಲ್ಲ ಎಂದು ಹೇಳಿ ಆಗ ಗೈನಾಕಾಲಜಿಸ್ಟ್ ಆಗಿದ್ದ ಡಾ. ಮುರುಗೇಂದ್ರಪ್ಪ ಅವರಿಗೆ ರೆಫರ್ ಮಾಡಿ ತಪಾಸಣೆ ನಡೆಸಿದ ನಂತರ ಕೆಲವು ಸಲಹೆ ನೀಡಿದರು. ಕೆಲವು ದಿನ ವಿಶ್ರಾಂತಿ ತೆಗೆದುಕೊಳ್ಳಲು ಸೂಚಿಸಿದ ಮೇರೆಗೆ ನಾವಿಬ್ಬರೂ ಮೆಗ್ಗಾನ್ ಆಸ್ಪತ್ರೆಯಲ್ಲಿ ಇರಬೇಕಾಗಿ ಬಂತು. ಈ ಸಮಯದಲ್ಲಿ ಗಾಯತ್ರಿಗೆ ಹಾಲು ಮೆತ್ತನೆ ಅನ್ನ ಬಿಟ್ಟರೆ ಬೇರೇನೂ ಪಥ್ಯ ಹೇಳಿರಲಿಲ್ಲ. ನಾವು ಅದಕ್ಕಾಗಿ ಒಂದು ಸ್ಟವ್ ತಂದು ಅನ್ನ ಮತ್ತು ಹಾಲನ್ನು ನಮಗೆ ನೀಡಿದ ರೂಂನಲ್ಲಿಯೇ ವ್ಯವಸ್ಥೆ ಮಾಡಿಕೊಳ್ಳುತ್ತಿದ್ದೆವು. ನನಗೆ ಇಂದಿರಾ ಮತ್ತವರ ಸ್ನೇಹಿತರಾದ ಸಾಕಮ್ಮ ಹಾಗೂ ಎಂ.ಬಿ. ನಟರಾಜ್ ಅವರ ಪತ್ನಿ ಲಕ್ಷ್ಮಿ ಇವರುಗಳ ಮನೆಯಿಂದ ಚೆನ್ನಾಗಿರುವ ಊಟ ಬರುತ್ತಿತ್ತು. ಜೊತೆಗೆ ಶಿವರಾಂ ಅವರ ನಿವಾಸ ಕೂಡ ಆಸ್ಪತ್ರೆ ಹತ್ತಿರವಿತ್ತು. ನನಗೆ ಅವರ ಮನೆಗೆ ಹೋಗಿ ಊಟ ಮಾಡಿಕೊಂಡು ಬರಲು ಶಿವರಾಂ ಡಾಕ್ಟರ್ ಹೇಳುತ್ತಿದ್ದರು.

ಶಿವರಾಂ ಅವರ ಶ್ರೀಮತಿ ಆಶಾ, ಅತ್ತೆ ಶಾರದಮ್ಮ ಮತ್ತವರ ತಾಯಿ ತಂದೆ ಕೂಡ ಮನೆಯಲ್ಲೇ ಇದ್ದರು. ಅವರಿಗೆ ಇಬ್ಬರು ಮುದ್ದಾದ ಹೆಣ್ಣು ಮಕ್ಕಳು ಇದ್ದರು. ಶಿವರಾಂ ಅವರ ಮಾವ ಸ್ವಾತಂತ್ರ್ಯ ಹೋರಾಟಗಾರರು. ರೈತ ಸಂಘದಲ್ಲಿ ಸಕ್ರಿಯ ನಾಯಕರಾಗಿದ್ದರು. ಈ ಎಲ್ಲರ ಪರಿಚಯದಿಂದಾಗಿ ನನಗೆ ಮೆಗ್ಗಾನ್ ಆಸ್ಪತ್ರೆಯಲ್ಲಿ ಗಾಯತ್ರಿಯ ಆರೋಗ್ಯ ತಪಾಸಣೆ ಸಮಯದಲ್ಲಿ ಇದ್ದ ಆತಂಕ ದೂರವಾಗಿತ್ತು. ಪ್ರಭು ಜೊತೆಗೆ, ದಿವಾಕರ ಹೆಗ್ಗಡೆ ಆಗ ತಾನೆ ತನ್ನ ಪುಸ್ತಕದ ಅಂಗಡಿ ತೆರೆದುಕೊಂಡಿದ್ದರು. ಜೊತೆಗೆ ಲಂಕೇಶ್ ಪತ್ರಿಕೆಯ ವರದಿಗಾರನೂ ಆಗಿ ಶಿವಮೊಗ್ಗದಲ್ಲಿದ್ದರು. ನಾನು ಬಿಆರ್‌ಪಿಯಿಂದ ಊರಿಗೆ ಬರುವಾಗಲೆಲ್ಲ ನನ್ನ ಲಗ್ಗೇಜನ್ನು ಹೆಗ್ಗಡೆ ಬುಕ್ ಸ್ಟಾಲ್‌ನಲ್ಲಿಟ್ಟು ಪ್ರಭು ಜೊತೆ ಮಾತಾಡಿಕೊಂಡು ರಾತ್ರಿ ಬಿಆರ್‌ಪಿಗೆ ಹೋಗುತ್ತಿದ್ದೆ. ಹಾಗಾಗಿ ಶಿವಮೊಗ್ಗದಲ್ಲಿದ್ದ ಪ್ರಭು, ಮಂಜಪ್ಪ, ದಿವಾಕರ, ಹೆಗ್ಗಡೆ, ಡಾ. ಶಿವರಾಂ, ಎಂ.ಬಿ. ನಟರಾಜ್ ಇವರೆಲ್ಲರ ಒಡನಾಟದಿಂದ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಯಲ್ಲಿ ಗಾಯತ್ರಿ ವಿಶ್ರಾಂತಿಯಲ್ಲಿದ್ದಾಗ, ನನಗಿದ್ದ ಗೆಳೆಯರ ಸಹಾಯದಿಂದ ನಾವು ನಾವೇ ನಿಭಾಯಿಸಿಕೊಂಡೆವು. ಇಂತಹ ಸರ‍್ಭಗಳಲ್ಲಿ ಹೆಣ್ಣು ಮಕ್ಕಳಿಗೆ ಏಕಾಂಗಿತನ ಮತ್ತು ತೌರ ಮನೆ ಕಾಡುತ್ತದೆ. ಆದರೆ ಎರಡೂ ಕಡೆಯಿಂದ ನಮಗೆ ಸಾನ್ನಿಧ್ಯದ ಅನುಕೂಲ ಪಡೆಯುವ ಅವಕಾಶವಾಗಲಿಲ್ಲ. ಇದ್ದ ಸ್ನೇಹ ಬಳಗವೇ ಈ ಎಲ್ಲ ಕೊರತೆಯನ್ನು ನಮಗೆ ಪೂರೈಸಿತ್ತು.

ಆ ನಂತರ ಪ್ರತಿ ತಿಂಗಳೂ ತಪಾಸಣೆ ಮತ್ತು ಶುಶ್ರೂಷೆಯ ನಂತರ 3-4 ದಿನ ಮುಂಚಿತವಾಗಿ ಹೆರಿಗೆಗೆ ಬರಬೇಕೆಂದು ಸೂಚಿಸಿದ್ದರು. ಅದರಂತೆ ಹೋಗಿ ಆಸ್ಪತ್ರೆ ಸೇರಿದ್ದೆವು. ನಾವು ಆಸ್ಪತ್ರೆಯಲ್ಲಿ ಇದ್ದಾಗ ಡಾ. ಶಿವರಾಂ ಅವರು ನಮ್ಮಿಬ್ಬರನ್ನು ಸಂಜೆ ಊಟಕ್ಕೆ ಮನೆಗೆ ಆಹ್ವಾನಿಸಿದ್ದರು. ಅವರದು ತುಂಬಿದ ಮನೆಯಾಗಿತ್ತು. ಬಸುರಿ ಹೆಂಗಸೆAದು ಡಾ. ಶಿವರಾಂ ಅವರ ಹೆಂಡತಿ ಆಶಾ ಮತ್ತು ಅವರ ತಾಯಿ ಶಾರದಮ್ಮನವರು ವಿಶೇಷ ಅಡುಗೆ ಮಾಡಿ ಅಕ್ಕರೆಯಿಂದ ಆದರಿಸುತ್ತಿದ್ದರು. ಅಂದು ಸಂಜೆ ಅವಳಿನ್ನೂ ರ‍್ತಿ ಊಟ ಮುಗಿಸುವ ಮುಂಚೆಯೇ ಹೆರಿಗೆ ನೋವು ಕಾಣಸಿಕೊಂಡಿತು. ತಕ್ಷಣ ಆಸ್ಪತ್ರೆಗೆ ಡಾ. ಶಿವರಾಂ ಅವರು ದಾಖಲು ಮಾಡಿಸಿದರು. ಇಡೀ ರಾತ್ರಿ ಹೆರಿಗೆ ರ‍್ಡ್ ಒಳಗೆ ಇದ್ದ ಗಾಯತ್ರಿಗೆ ಮಾರನೆ ದಿನ ಮಧ್ಯಾಹ್ನವಾದರೂ ಹೆರಿಗೆ ಆಗಿರಲಿಲ್ಲ. ನಾನು ಹೊರಗಡೆ ಇದ್ದ ಬೆಂಚ್ ಮೇಲೆ ಕೂತು ಕಾಯುತ್ತಿದ್ದೆ. ಪ್ರಭು ಫ್ರೆಂಡ್ ಶಶಿ ಮೂಲಕ ಭದ್ರಾವತಿಗೆ ಹೋಗಿ ಇಂದಿರಾ ಅವರನ್ನು ಕರೆದುಕೊಂಡು ಬರಲು ಕಳಿಸಿದ್ದೆ. ಅವರು ಆಫೀಸಿಗೆ ರಜೆ ಹಾಕಿ ಬರುವ ಸಮಯಕ್ಕಾಗಲೇ ಗಾಯತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದಳು. ದಿನಾಂಕ 11-03-81ಸಂಜೆ 4ಗಂಟೆ ಸುಮಾರಿಗೆ ಗಂಡು ಮಗು ಜನನವಾಗಿತ್ತು. ಡಾ. ಶಿವರಾಂ ಮನೆಯ ಇಬ್ಬರು ಮಕ್ಕಳು ಸೇರಿದಂತೆ ಎಲ್ಲರೂ ಬಂದು ನೋಡಿ ಸಂತಸಪಟ್ಟರು. ಮಗುವಿನ ಬೆಳವಣಿಗೆ ಹೆಚ್ಚಾಗಿದ್ದ ಕಾರಣ ಈoಡಿಛಿeಠಿs ಮುಖಾಂತರ ಮಗುವನ್ನು ಹೊರತೆಗೆಯಬೇಕಾಯಿತು ಎಂದು ಡಾಕ್ಟರ್ ಹೇಳಿದರು. ಭದ್ರಾವತಿಯಿಂದ ಬಂದ ಇಂದಿರಾ ಕೂಡಲೆ ರ‍್ಣ ಜವಾಬ್ದಾರಿ ತೆಗೆದುಕೊಂಡು, ಅಲ್ಲಿಂದ ಅವರ ಮನೆಗೆ ಕರೆದುಕೊಂಡು ಹೋಗಿ ಒಂದು ತಿಂಗಳ ಕಾಲ ಬಾಣಂತನ ಮಾಡಿ ಬಿ.ಆರ್.ಪಿಗೆ ನಾವು ಬರುವವರೆಗೆ ಮಗು ಬಾಣಂತಿಯನ್ನು ನೋಡಿಕೊಂಡದ್ದು ಮರೆಯಲಾಗದ ಘಟನೆಯಾಗಿ ಉಳಿದಿದೆ.

ಭದ್ರಾವತಿಗೆ ಮಗು ಬಾಣಂತಿ ಕೃಷ್ಣಪ್ಪನವರ ಮನೆಗೆ ಹೋಗಿ ಉಳಿದಿದ್ದೆವು. ಮಗುವಿನ ಬಾಣಂತನ ಆರೈಕೆಯನ್ನು ಮಾಡಲು ಶಿವಮೊಗ್ಗ ಮುನೀರ್ ಅವರ ತಾಯಿ ಬಚ್ಚಿಮ್ಮ ಅವರು ರ‍್ಕಾರಿ ಆಸ್ಟತ್ರೆಯಲ್ಲಿ ರ‍್ಸ ಆಗಿದ್ದವರು. ಅವರು ಬೆಳಿಗ್ಗೆ ಮತ್ತು ಸಂಜೆ ಬಂದು ಸಹಾಯ ಮಾಡುತ್ತಿದ್ದರು. ಇಂದಿರಾ ಬೆಳಿಗ್ಗೆ ಬಾಣಂತಿಗೆ ಮತ್ತು ಮತ್ತೆಲ್ಲರಿಗೂ ಅಡುಗೆ ಮಾಡಿಟ್ಟು ಆಫೀಸಿಗೆ ಹೋಗುತ್ತಿದ್ದರು. ಗಾಯತ್ರಿ ಮೌಖಿಕವಾಗಿ ಅವಳೇನು ಹೇಳದಿದ್ದರೂ ಭಾವನಾತ್ಮಕವಾಗಿ ಅವಳಿಗೆ ಬಹಳ ಕಷ್ಟದ ದಿನಗಳಾಗಿದ್ದವು. ಅವನ್ನೆಲ್ಲ ಮಗುವಿನ ಮುಖ ನೋಡಿಕೊಂಡು ಬಚ್ಚಿಮ್ಮನ ಶುಶ್ರೂಷೆಯಲ್ಲಿ ಕಾಲ ಹಾಕುತ್ತಿದ್ದಳು. ನಾನು ಕೂಡ ಮಗುವಿಗೆ ಎಣ್ಣೆ ಹಚ್ಚಿ ಬಿಸಿನೀರ ಸ್ನಾನ ಮಾಡಿಸುವುದನ್ನು ಬಚ್ಚಿಮ್ಮನಿಂದ ವಿಶೇಷವಾಗಿ ತಿಳಿದುಕೊಳ್ಳಲು ಪ್ರಯತ್ನಿಸುತ್ತಿದ್ದೆ. ಒಂದು ತಿಂಗಳ ನಂತರ ಬಿಆರ್‌ಪಿಯ ಮನೆಗೆ ಬಂದಿದ್ದೆವು. ಈ ನಡುವೆ ಮಾಧ್ಯಮಿಕ ತರಗತಿಯಲ್ಲಿ ಓದುತ್ತಿದ್ದ ನನ್ನ ತಂಗಿಯನ್ನು ಕರೆತಂದು ಬಿಆರ್‌ಪಿಯಲ್ಲಿ ಶಾಲೆಗೆ ಸೇರಿಸಿದ್ದೆ. ನಾವು ಬಿಆರ್‌ಪಿಗೆ ಬಂದ ಮೇಲೆ ಊರಿನಿಂದ ಅವ್ವ ಕೂಡ ಬಂದು ಸ್ವಲ್ಪ ದಿನ ಬಾಣಂತನ ಮಾಡುವ ಶಾಸ್ತ್ರ ಮಾಡಿದ್ದಳು.

ಆ ನಂತರ ಮೂರು ತಿಂಗಳಲ್ಲಿ ಮಗುವಿಗೆ ನಾಮಕರಣ ಮಾಡುವ ಸಣ್ಣ ಸಮಾರಂಭವನ್ನು ರ‍್ಪಡಿಸಿದ್ದೆವು. ಆಗ ಇಂದಿರಾ – ಕೃಷ್ಣಪ್ಪನವರು ಸೇರಿದಂತೆ ಬಿಆರ್‌ಪಿಯಲ್ಲಿನ ಕೇಶವರ‍್ತಿ, ಪ್ರಭು, ಗ್ರಂಥಪಾಲಕರಾಗಿದ್ದ ರಾಮಕೃಷ್ಣಗೌಡ ಇನ್ನೂ ಅನೇಕರು ಭಾಗವಹಿಸಿ ಶಿಶಿರ ಎಂದು ಹೆಸರಿಟ್ಟು ಸಂಭ್ರಮ ಪಟ್ಟೆವು. ಮಗುವಿಗೆ 3 ತಿಂಗಳು ಮುಗಿದ ನಂತರ ನಮ್ಮ ಮನೆ ಹತ್ತಿರದಲ್ಲೇ ಇದ್ದ ಅರವಿಂದ ಆಶ್ರಮದವರು ನಡೆಸುತ್ತಿದ್ದ ಪ್ರಾಥಮಿಕ ಶಾಲೆಗೆ ಗಾಯತ್ರಿ ಟೀಚರ್ ಆಗಿ ಸೇರಿಕೊಂಡಳು. ಶಿಶಿರನನ್ನು ಬೆಳಿಗ್ಗೆ ಸ್ನಾನ ಮಾಡಿಸಿ ತಿಂಡಿ ತಿನಿಸಿದ್ದು ಬಿಟ್ಟರೆ ಅವನನ್ನು ನಮ್ಮ ಇಡೀ ಬೀದಿಯಲ್ಲಿರುವವರು ಎತ್ತಿಕೊಂಡು ಹೋಗಿ ಊಟ ನಿದ್ದೆ ಮಾಡಿಸಿಕೊಂಡು ಸಂಜೆಗೆ ಮನೆಗೆ ತಂದು ಬಿಡುತ್ತಿದ್ದರು. ಅವನ ಆಗಮನದಿಂದ ನಮಗಿದ್ದ ಪ್ರತ್ಯೇಕತೆ ಕಳೆದು ಎಲ್ಲರೂ ನಮ್ಮನ್ನು `ಬುಡ್ಲ್ಲಿ’ ಅಪ್ಪ ಅಮ್ಮ ಎಂದು ಮಕ್ಕಳು, ದೊಡ್ಡವರು ಹೊರಗಡೆ ಹೋದಾಗ ಗುರುತಿಸಿ ಮಾತಾಡುವಂತಾಗಿತ್ತು. ನಮಗಿಂತಲೂ `ಬುಡ್ಲಿ’ಗೆ ಹೆಚ್ಚು ಪರಿಚಯದ ಹುಡುಗರ ದಂಡು ಸೃಷ್ಟಿಯಾಗಿತ್ತು. ಇನ್ನು ಇವಳು ಟೀಚರ್ ಕೆಲಸದಿಂದ ನನ್ನ ರ‍್ಥಿಕ ಸಂಕಷ್ಟಗಳು ಸ್ವಲ್ಪ ಮಟ್ಟಿಗೆ ಕಡಿಮೆಯಾದವು. ನಾನು ಮಾಡಿಕೊಂಡಿದ್ದ 15 ಸಾವಿರ ಸಾಲಕ್ಕೂ ನನಗೆ ವಿಶ್ವವಿದ್ಯಾಲಯದಿಂದ ಬರಬೇಕಾಗಿದ್ದ ಅರರ‍್ಸ್ ಬಂದು ನನ್ನ ಎಲ್ಲ ಸಾಲವನ್ನು ತೀರಿಸಿ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿತ್ತು.

ನಾನು ಕೆಪಿಎಸ್‌ಸಿ ಪರೀಕ್ಷೆ ತೆಗೆದುಕೊಂಡದ್ದು ಮೊದಲೇ ಹೇಳಿದ್ದೇನೆ. ಅದರ ಪರೀಕ್ಷೆ ಬರೆಯಲು ಮೈಸೂರನ್ನು ಕೇಂದ್ರವಾಗಿ ಆಯ್ಕೆ ಮಾಡಿಕೊಂಡಿದ್ದ ಕಾರಣ 1981ರಲ್ಲೇ ಮೈಸೂರಿಗೆ ಹೋಗಿ ಸುಮಾರು 15 ದಿನಗಳ ರಜೆ ಹಾಕಿ ಪರೀಕ್ಷೆ ಬರೆದೆ. ಆ ಸಮಯದಲ್ಲಿ ರೊಟ್ಟಿ, ಚಟ್ನಿ ಪುಡಿ, ಪುಳಿಯೋಗರೆ ವಾರಕ್ಕೂ ಹೆಚ್ಚು ಆಗುವಷ್ಟನ್ನು ಮಾಡಿಕೊಂಡು ಗಂಗೋತ್ರಿಯಲ್ಲಿರುವ ವಿಶ್ವವಿದ್ಯಾಲಯದ ಅತಿಥಿ ಗೃಹದಲ್ಲಿ ನಾವು ಮೂವರೂ ಉಳಿಯುತ್ತಿದ್ದೆವು. ನಾನು ಪರೀಕ್ಷೆಗೆ ಹೋದಾಗ ಗಾಯತ್ರಿ ಶಿಶಿರ ಇಬ್ಬರೇ ಅಲ್ಲಿರುವ ಗಿಡಮರಗಳನ್ನು ನೋಡುತ್ತಾ ಇರುತ್ತಿದ್ದರು.

ಈ ಸಮಯದಲ್ಲಿ ದೇವಯ್ಯ ಹರವೆ ಮೈಸೂರಿನಲ್ಲಿ ಮಾನಸ ಗಂಗೋತ್ರಿಯಲ್ಲಿ ಕನ್ನಡ ಅಧ್ಯಾಪಕನಾಗಿದ್ದು, ಡಿ.ಎಸ್.ಎಸ್. ಸ್ಥಾಪಕ ಸದಸ್ಯರುಗಳ ಜೊತೆ ಗಟ್ಟಿ ದನಿಯಾಗಿದ್ದರು. ನಾನು ಇರುವ ಸುದ್ದಿ ತಿಳಿದು ನಮ್ಮ ಗೆಸ್ಟ್ಹೌಸ್‌ಗೆ ಬಂದು ಪುಳಿಯೋಗರೆ ತಿಂದು `ಗಾಯತ್ರಮ್ಮ, ಎಲ್ಲಾ ಪುಳಿಯೋಗರೆ ನನಗೆ ಕೊಡಿ ರುದ್ರಣ್ಣನಿಗೆ ನಾನು ಬಿಸಿ ಮಾಂಸದೂಟ ಮಾಡಿಸುವೆ’ ಎಂದು ಹೇಳಿ ನಮ್ಮೆಲ್ಲರನ್ನು ತನ್ನ ಮನೆಗೂ ಕರೆದುಕೊಂಡು ಹೋಗಿದ್ದ. ದೇವಯ್ಯ ಹರವೆ ಮತ್ತು ಪುಷ್ಪ ನಮಗೆ ಆಗ ಪರಿಚಯವಾಗಿ ನಂತರದ ದಿನಗಳಲ್ಲಿ ಅವರ ಮನೆಗೆ ಪುಳಿಯೋಗರೆಯೊಡನೆ ಆಗಾಗ ಹೋಗಿ ಬರುತ್ತಿದ್ದೆವು.
ಬುಡ್ಲಿಯನ್ನು ನೋಡುವ ನೆಪದಲ್ಲಿ ವಿಶಾಖಪಟ್ಟಣದಲ್ಲಿದ್ದ ಗಾಯತ್ರಿಯ ದೊಡ್ಡ ಅಕ್ಕ ಶಕುಂತಲಾರ‍್ತಿ ಮತ್ತು ಅವರ ಹಿರಿಯ ಮಗಳಾದ ಮೀನಾ ಬಿಆರ್‌ಪಿಗೆ ಬಂದು ಒಂದು ದಿನ ಉಳಿದು ನಂತರ ನರಸಿಂಹರಾಜಪುರಕ್ಕೆ ಹೋಗಿದ್ದರು. ಆಗ ಅವರಿಂದ ಗಾಯತ್ರಿ ತಂದೆ ತಾಯಿ ಇಬ್ಬರಿಗೂ ನಾವಿಬ್ಬರು ಮತ್ತು `ಬುಡ್ಲಿ’ ಆರಾಮವಾಗಿ ಇರುವುದಾಗಿಯೂ ಮತ್ತು ಅವರಿವರು ತೇಲಿ ಬಿಡುತ್ತಿದ್ದ ಸುಳ್ಳಿನ ಸುದ್ದಿಗಳಲ್ಲಿ ಸತ್ಯಾಂಶವಿಲ್ಲವೆAದು ತಿಳಿಸಿ, ಅವರಿಗೆ ನಮ್ಮ ಮದುವೆಯ ಘಟನೆಯ ನಂತರ ಸ್ವಲ್ಪಮಟ್ಟಿನ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿತ್ತು.

ಕೃಷ್ಣಪ್ಪನವರು ಎಸ್‌ವೈಎಸ್ ಸಂಘಟನೆಯಲ್ಲಿ 1970ರ ದಶಕದ ಪ್ರಾರಂಭದಿAದ ಇದ್ದರೂ, ಕ್ರಮೇಣ ದಲಿತರ ಸಮಸ್ಯೆಗಳಿಗೆ ಪ್ರತ್ಯೇಕ ಸಂಘಟನೆಯ ಅವಶ್ಯಕತೆ ಕಂಡುಕೊAಡು ಭದ್ರಾವತಿಯಲ್ಲಿ ರಾಜ್ಯ ಮಟ್ಟದ ಜಾತಿ ವಿನಾಶ ಸಮ್ಮೇಳನ ಆಯೋಜಿಸಿದ್ದರು. ಭದ್ರಾವತಿಯಲ್ಲಿ ಆಗಿನ ಕೃಷ್ಣಪ್ಪನವರ ತಂಡದಲ್ಲಿ, ಎನ್. ಗಿರಿಯಪ್ಪ, ಟಿ. ರಾಜಣ್ಣ, ಹಾಲಯ್ಯ, ನರಸಿಂಹಯ್ಯ, ಚನ್ನಕೇಶವ, ಗಂಗಣ್ಣ, ಶಿವಲಿಂಗ, ಚಂದ್ರನ್, ಅತ್ತಿಗುಂದ ಕರಿಯಪ್ಪ, ಮಹಾಲಿಂಗರ‍್ತಿ ಜಿ., ಎಂಪಿಎಂನ ಕೃಷ್ಣರ‍್ತಿ ಇವರೆಲ್ಲ ಆಪ್ತ ವಲಯದಲ್ಲಿದ್ದು ಏನೇ ಹೋರಾಟದ ಕರೆ ಕೊಟ್ಟಾಗ ಬಂದು ಸೇರುತ್ತಿದ್ದರು.

ಇತರ ಮಿತ್ರ ಪಡೆ ಭದ್ರಾವತಿಯಲ್ಲಿ ದೊಡ್ಡದಿತ್ತು. ವಕೀಲ ನಾಗೇಂದ್ರರಾವ್, ಪ್ರೊ. ಚಂದ್ರಶೇಖರಯ್ಯ, ಬಿ. ರಾಜಣ್ಣ, ಶಿವಮೊಗ್ಗದ ಮುನೀರ್, ಸಾಸ್ವೆಹಳ್ಳಿ ಹಾಲಪ್ಪ, ಎಂ.ಎಲ್. ನಾಗಭೂಷಣ, ವೈ.ಎನ್. ಆಚಾರ್, ಶಿವಪ್ರಸಾದ್ (ವಿಐಎಸ್‌ಎಲ್), ಚಂದ್ರಪ್ರಸಾದ್ ತ್ಯಾಗಿ, ನಿಸಾರ್ ಅಹಮದ್, ರಾಚಪ್ಪ ಹೆಚ್, ವಾಗೀಶ್, ರಾಘವೇಂದ್ರ ರಾವ್ (ದಲಿತರ ಪರ ವಕೀಲರಾಗಿ ಮೊಕದ್ದಮೆಗಳನ್ನು ನಡೆಸುತ್ತಿದ್ದರು) ಇದ್ದರು. ಮಾದೇವ, ಸಿದ್ದಲಿಂಗಯ್ಯ, ವೆಂಕಟಸ್ವಾಮಿ, ಮುನಿವೆಂಕಟಪ್ಪ, ನಾರಾಯಣಸ್ವಾಮಿ, ದಿವಾಕರ ಹೆಗ್ಗಡೆ, ಎಂ.ಬಿ. ನಟರಾಜ್, ಸತ್ಯನಾರಾಯಣರಾವ್ ಅಣತಿ, ಚನ್ನಣ್ಣ ವಾಲೀಕಾರ, ದೇವಯ್ಯ ಹರವೆ ಇನ್ನು ಅನೇಕರು ರಾಜ್ಯದಾದ್ಯಂತ ಚೆದುರಿದ್ದ ಕೃಷ್ಣಪ್ಪನವರ ಹೋರಾಟದ ಸಂಗಾತಿಗಳಾಗಿದ್ದರು.

ಇವರೆಲ್ಲರ ಸಮಾಗಮವೆಂಬಂತೆ ಬಿಆರ್‌ಪಿಯಲ್ಲಿರುವ ವೆಂಕಟರಮಣ ಸ್ವಾಮಿ ದೇವಸ್ಥಾನದಲ್ಲಿ ಎರಡು ದಿನಗಳ ದಲಿತ ಸರ‍್ಷ ಸಮಿತಿಯ ತರಬೇತಿ ಶಿಬಿರವನ್ನು ಆಯೋಜಿಸಿದ್ದರು. ಆಗ ಬಂದ ಸಂಘಟಕರಿಗೆ ಊಟ ವಸತಿ ಮತ್ತು ಬಸ್ ರ‍್ಜ್ ಹೊಂದಿಸುವಲ್ಲಿ ಕೃಷ್ಣಪ್ಪನವರು ಪಡುತ್ತಿದ್ದ ಪಾಡನ್ನು ಬೇರೆ ಯಾವ ದಲಿತ ಸಂಘಟಕರು ಅನುಭವಿಸಿಲ್ಲ. ನಾನು ಮತ್ತು ನಮ್ಮಲ್ಲಿನ ಪ್ರಗತಿಪರ ಅಧ್ಯಾಪಕರು, ಸಹೋದ್ಯೋಗಿಗಳು ಸೇರಿ ಸ್ವಲ್ಪ ಹಣ ಸಂಗ್ರಹಿಸಿಕೊಟ್ಟಿದ್ದೆವು. ಅಲ್ಲಲ್ಲೆ ಪ್ರಗತಿಪರವಾಗಿ ಬರೆದುಕೊಂಡು ಹೋರಾಟಗಳನ್ನು ಮಾಡುತ್ತಿದ್ದ ದಲಿತರು ಅಂಬೇಡ್ಕರ್ ಸಿದ್ಧಾಂತದ ಗಟ್ಟಿ ನೆಲೆಯಲ್ಲಿ ಆತ್ಮೀಯ ಸಂಬಂಧಿಕರಂತೆ ಕೃಷ್ಣಪ್ಪನವರ ಸುತ್ತ ಒಟ್ಟುಗೂಡಿ ಇಂತಹ ಸಮಾವೇಶಗಳಲ್ಲಿ ಭಾಗವಹಿಸಿ ರ‍್ಚಿಸುತ್ತಿದ್ದರು.

ಬುಡ್ಲಿ ಬಂದ ನಂತರ, ಟೀಚರ್ ಕೆಲಸ ಸೇರಿದ ಗಾಯತ್ರಿ ಮನೆಯ ಹಿಂದೆ ಮುಂದೆ ಇದ್ದ ಜಾಗದಲ್ಲಿ ತರಕಾರಿ ಜೊತೆಗೆ ಇದ್ದ ಮಾವಿನ ಮರ ಮತ್ತು ದೊಡ್ಡ ನುಗ್ಗೆಮರ, ಸೀತಾಫಲದ ಮರಗಳನ್ನು ಸಂರಕ್ಷಿಸಿಕೊಂಡು ಸಾಕಷ್ಟು ಫಲ ಪಡೆಯುತ್ತಿದ್ದೆವು. ಬಂದ ಸಂಬಳದಲ್ಲಿ ಹತ್ತಿರದಲ್ಲಿದ್ದ ಲಕ್ಕವಳ್ಳಿಯಲ್ಲಿ ನಡೆಯುವ ಸಂತೆಗೆ ಹೋಗಿ ಅಗತ್ಯ ವಸ್ತುಗಳನ್ನು ವಾರಕ್ಕೊಮ್ಮೆ ಕೊಂಡು ಬರುತ್ತಿದ್ದೆವು. ಬಂದ ಎಲ್ಲ ಸಂಬಳದಲ್ಲಿ ದುಂದಾಗಿ ರ‍್ಚು ಮಾಡುತ್ತಾ ಉಳಿತಾಯ ಮತ್ತು ಅಚ್ಚುಕಟ್ಟುತನವಿಲ್ಲದೆ ಸ್ವಚ್ಛಂದವಾಗಿದ್ದ ನನಗೆ ಮದುವೆ ನಂತರ ಮಗು ಶಿಶಿರ ಬಂದು ಸಂಸಾರ ಜೀವನದ ಹೊಸ ಜೀವನಾನುಭವವನ್ನು ನೀಡಿತೆಂದೇ ಹೇಳಬೇಕು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆತ್ಮಕತೆ | ಸರಳ ಹಾಗೂ ಒಲವಿನ ಮದುವೆಗಳ ಸಾಲುಸಾಲು

Published

on

  • ರುದ್ರಪ್ಪ ಹನಗವಾಡಿ

ನಾನು ಮದುವೆಯಾದ ಮೇಲೆ ನಮ್ಮೂರಿನಲ್ಲಿಯೇ 3-4 ಅಂತರ್ಜಾತಿ ಮದುವೆಗಳಾದವು. ಮೈಸೂರಿನಲ್ಲಿ ನಮ್ಮ ಜೊತೆಗಿದ್ದ ಪ್ರೊ. ಗೊಟ್ಟಿಗೆರೆ ಶಿವರಾಜು ಚನ್ನರಾಯ ಪಟ್ಟಣದಲ್ಲಿ ರಾಜ್ಯಶಾಸ್ತçದ ಅಧ್ಯಾಪಕನಾಗಿದ್ದ. ಅವನ ಸಹೋದ್ಯೋಗಿಗಳಾಗಿದ್ದ ನರಸಿಂಹಾಚಾರ್ ಇಂಗ್ಲಿಷ್ ಅಧ್ಯಾಪಕ ಮತ್ತು ಪ್ರೊ. ಸುಮತಿ ಎನ್. ಗೌಡ ಅಧ್ಯಾಪಕರಾಗಿದ್ದ ಅವರು ಪರಸ್ಪರ ಪ್ರೀತಿಸುತ್ತಿದ್ದರು.

ಅವರನ್ನು ನೇರ ಬಿಆರ್‌ಪಿಗೆ ಕರೆತಂದು, ಮದುವೆಯ ಬಗ್ಗೆ ಪ್ರಸ್ತಾಪ ಮಾಡಿದನು. ನಾನು ಅವರಿಗೆ ಉಳಿದುಕೊಳ್ಳಲು ವ್ಯವಸ್ಥೆ ಮಾಡಿ ಕೃಷ್ಣಪ್ಪನವರಿಗೆ ಸುದ್ದಿ ಮುಟ್ಟಿಸಿ, ಮದುವೆಯ ಏರ್ಪಾಡು ಮಾಡಿದೆ. ಹುಡುಗಿ ಒಕ್ಕಲಿಗ ಜಾತಿ, ಹುಡುಗ ಬ್ರಾಹ್ಮಣನಾಗಿದ್ದ. ಸಹೋದ್ಯೋಗಿಗಳ ಪ್ರೀತಿಯ ಮದುವೆ ಮಾಡಿದ ಪ್ರೊ. ಜಿ.ಬಿ. ಶಿವರಾಜು ನಂತರ ದಿನಗಳಲ್ಲಿ ಗೌಡ ಜಾತಿಗೆ ಸೇರಿದ ಸಂಬಂಧಿಕರಿಂದ ಅನೇಕ ರೀತಿಯ ಕಿರುಕುಳಕ್ಕೂ ಒಳಗಾಗಬೇಕಾಯಿತು. ಆದರೆ ಈ ದಂಪತಿಗಳು ಶಿವರಾಜು ಪರ ಇರಬೇಕಾದವರು ನಂತರದ ದಿನಗಳಲ್ಲಿ ಇವರುಗಳಿಂದಲೇ ಕಿರುಕುಳ ಅನುಭವಿಸುವಂತೆ ಆದುದು ವಿಪರ್ಯಾಸವೇ ಸರಿ. ಮಾಡಿದ ಉಪಕಾರ ಸ್ಮರಣೆ ನಮ್ಮ ವ್ಯಕ್ತಿತ್ವದಲ್ಲಿ ಇರದಿದ್ದರೆ, ಮನುಷ್ಯನಿಂದ ಮತ್ತಿನ್ನೇನನ್ನು ಮಾಡಲು ಸಾಧ್ಯ?

ಈ ಸರಣಿಯಲ್ಲಿ ಇಲ್ಲಿಯೇ ಇನ್ನೊಬ್ಬನ ಕಥೆ ಹೇಳಿ ಮುಗಿಸುವೆ. ಬಳ್ಳಾರಿ ಮೂಲದ ಒಬ್ಬ ಡಾಕ್ಟರ್ ಮತ್ತು ಅವರ ಕೈಕೆಳಗೆ ಇದ್ದ ನರ್ಸ್ ಇಬ್ಬರೂ ಪ್ರೀತಿಸಿದ್ದು, ಮದುವೆಯಾಗುವ ತಯಾರಿಯಲ್ಲಿದ್ದರು. ಶಿವಮೊಗ್ಗದ ಕಡೆಯ ಗೆಳೆಯರೊಬ್ಬರ ಮೂಲಕ ನನ್ನಲ್ಲಿಗೆ ಬಂದರು. ಇಬ್ಬರೂ ಮದುವೆಗೆ ಅರ್ಹ ವಯಸ್ಸಿನವರಾಗಿದ್ದು, ಬೇರೆ ಬೇರೆ ಜಾತಿಯವರಾದ ಕಾರಣ, ಹುಡುಗಿಗೆ ನನ್ನದೇ ಮನೆ ವಿಳಾಸಕೊಟ್ಟು ಮದುವೆ ಮಾಡಿಸಿ ಕಳಿಸಿಕೊಟ್ಟೆವು. ನಾನಾಗ ಪ್ರೊಬೆಷನರಿ ತಹಸೀಲ್ದಾರ್‌ನಾಗಿ ತರೀಕೆರೆಯಲ್ಲಿದ್ದೆ. ಅಲ್ಲಿನ ಸಬ್ ರಿಜಿಸ್ಟ್ರಾರ್ ಚಳಗೇರಿ ಎನ್ನುವವರ ಜೊತೆ ಮಾತಾಡಿ ರಿಜಿಸ್ಟ್ರೇಷನ್ ಮುಗಿಸಿ ಕಳಿಸಿದೆ.

ಇದೆಲ್ಲ ಆಗಿ ಒಂದು ವಾರದಲ್ಲಿ ಹುಡುಗನ ಕಡೆಯ ನಿವೃತ್ತ ಸೇನಾ ಅಧಿಕಾರಿ ಬಂದು ಗಾಯತ್ರಿಯೊಬ್ಬಳೇ ಮನೆಯಲ್ಲಿದ್ದಾಗ ನನ್ನ ಬಗ್ಗೆ ಆಕ್ಷೇಪಿಸಿ ನಾನು ಮಾಜಿ ಮುಖ್ಯಮಂತ್ರಿ ಎಸ್. ನಿಜಲಿಂಗಪ್ಪನವರ ಸಂಬಂಧಿ, ನಿನ್ನ ಗಂಡನ ಕೆಲಸ ಕೂಡ ಕಳೆದುಕೊಳ್ಳುವಂತೆ ಮಾಡುತ್ತೇನೆ’ ಎಂದೆಲ್ಲ ಕೂಗಾಡಿ ಹೋಗಿದ್ದ. ನಾನು ತರೀಕೆರೆಯಿಂದ ಬಂದಾಕ್ಷಣ ಇವಳು ಆತಂಕದಿAದ `ನಾವೇನೋ ಮದುವೆಯಾಗಿದ್ದೇವೆ. ಬೇರೆಯವರ ಮದುವೆ ಮಾಡಲು ಹೋಗಿ ಯಾಕೆ ತೊಂದರೆಗೊಳಗಾಗಬೇಕೆಂದು’ ಅಲವತ್ತುಕೊಂಡಳು.

ನಾನು ಈ ರೀತಿ ಮದುವೆಗಳ ಬಗ್ಗೆ ಖಚಿತ ತಿಳುವಳಿಕೆಯುಳ್ಳವನಾಗಿದ್ದು, ಈ ಬಗ್ಗೆ ರಾಜ್ಯದಲ್ಲಿ ನಡೆದಿದ್ದ ಶಿವರಾಮ ಕಾರಂತ, ಅನಂತಮೂರ್ತಿ, ಪೂರ್ಣಚಂದ್ರ ತೇಜಸ್ವಿ, ಕೆ. ರಾಮದಾಸ್, ಕೃಷ್ಣಪ್ಪ, ಪ್ರೊ. ಎಂ. ನಂಜುಂಡಸ್ವಾಮಿ, ಪ್ರೊ. ರವಿವರ್ಮಕುಮಾರ್, ಹೀಗೆ ಮದುವೆಯಾದವರ ಬಗ್ಗೆ ಸಾಲು ಸಾಲು ಹೆಸರುಗಳನ್ನು ತಿಳಿಸಿ ಗಾಯತ್ರಿಗೆ ಸಮಾಧಾನ ಮಾಡುತ್ತಿದ್ದೆ.

ನಾವು ಮದುವೆಯಾಗಿ ಆರು ತಿಂಗಳು ಆಗಿರಲಿಲ್ಲ, ನಮ್ಮ ವಿದ್ಯಾರ್ಥಿಯೊಬ್ಬರ ಅಕ್ಕ ಪ್ಲಾರಿ ಬಿಆರ್‌ಪಿ ಹತ್ತಿರವಿರುವ ಜಂಕ್ಷನ್‌ನಿಂದ ಭದ್ರಾವತಿಗೆ ಸ್ಟೆಫೆಂಡಿಯರಿ ಗ್ರಾಜ್ಯುಯೇಟ್ ಸ್ಕೀಂನಲ್ಲಿ ತಾಲ್ಲೂಕು ಕಛೇರಿಯಲ್ಲಿ ಕೆಲಸ ಮಾಡುತ್ತಿದ್ದರು. ಹುಡುಗ ಸಿದ್ದಯ್ಯ ಭದ್ರಾವತಿ ಬ್ಯಾಂಕ್‌ವೊಂದರಲ್ಲಿ ಕೆಲಸ ಮಾಡುತ್ತಿದ್ದ. ಆತ ಬಿಆರ್‌ಪಿ ಹತ್ತಿರದ ಶಾಂತಿನಗರದಿಂದ ದಿನವೂ ಬಸ್‌ನಲ್ಲಿ ಓಡಾಡುತ್ತಿರುವಾಗ ಪರಿಚಯವಾಗಿ ಪ್ರೀತಿಯ ಸೆಳೆತದಲ್ಲಿದ್ದರು. ಒಂದು ದಿನ ಬೆಳಗಿನ ಜಾವ ಹುಡುಗನ ಅಣ್ಣ ಬಂದು ಅವರಿಬ್ಬರ ಪ್ರೀತಿಗೆ ತಮ್ಮ ಒಪ್ಪಿಗೆ ಇದ್ದು ಹುಡುಗಿ ಕಡೆಯವರು ಒಪ್ಪುವುದಿಲ್ಲ, ಮದುವೆ ಮಾಡಿಸಬೇಕಾಗಿ ಕೋರಿದ.

ಹುಡುಗಿಯ ತಮ್ಮ ನನ್ನ ವಿಭಾಗದಲ್ಲಿಯೇ ನೇರ ವಿದ್ಯಾರ್ಥಿಯಾಗಿದ್ದ. ಈಗಾಗಲೇ ನಮ್ಮ ವಿಭಾಗದಲ್ಲಿ ಇವರು ಬರೀ ಇಂತದೇ ಕೆಲಸ ಮಾಡುತ್ತಿರುತ್ತಾನೆಂದು ಅಪಪ್ರಚಾರ ಬೇರೆ ಮಾಡುತ್ತಿದ್ದರು. ಆದರೂ ಎಲ್ಲ ಸೇರಿಕೊಂಡು ಇಂದಿರಾ ಕೃಷ್ಣಪ್ಪನವರಿಗೆ ತಿಳಿಸಿ ಭದ್ರಾವತಿಯಲ್ಲಿ ಮದುವೆ ನಡೆಸಲಾಯಿತು. ಮದುವೆಯಾದ ನಂತರ ಹೆಣ್ಣಿನ ಕಡೆಯವರು ನನ್ನನ್ನು ಹೊಡೆಯಲು ಜಂಕ್ಷನ್ ಎಂಬಲ್ಲಿ ಕಾಯುತ್ತಿದ್ದಾರೆ, ಇಲ್ಲಿ ಕಾಯುತ್ತಿದ್ದಾರೆ ಎಂದು ಪುಕಾರು ಹಬ್ಬಿಸುತ್ತಿದ್ದರು. ಆದರೆ ದಿನಗಳೆದಂತೆ ಹುಡುಗ-ಹುಡುಗಿಯ ಮದುವೆಯನ್ನು ಈರ್ವರ ಕಡೆಯವರು ಒಪ್ಪಿ ನಂತರ ನಮ್ಮ ಕಡೆಗೆ ದೂರುವುದನ್ನು ನಿಲ್ಲಿಸಿದರು. ಈಗ ಇಬ್ಬರೂ ತಮ್ಮ ವೃತ್ತಿಯಲ್ಲಿ ಮುಂದುವರಿದು ಮಕ್ಕಳೊಂದಿಗೆ ಆರೋಗ್ಯಕರ ಜೀವನ ಸಾಗಿಸುತ್ತಿದ್ದಾರೆ.

ಹೀಗೆ ಶಿವಮೊಗ್ಗ, ಭದ್ರಾವತಿಯಲ್ಲಿ ಕೃಷ್ಣಪ್ಪನವರು ಪ್ರಾರಂಭಿಸಿದ ಒಲವಿನ ಸರಳ ಮದುವೆಗಳು ಸಾಲು ಸಾಲಾಗಿ ನಡೆಯುತ್ತಾ, ಡಿ.ಎಸ್.ಎಸ್. ಮತ್ತು ರೈತ ಸಂಘದ ಅನೇಕ ಕಾರ್ಯಕರ್ತರು ತಮ್ಮ ಕಾರ್ಯಸೂಚಿಯಲ್ಲಿ ಕಾರ್ಯಗತ ಮಾಡಬೇಕಾದ ಜವಾಬ್ದಾರಿ ಎಂಬಂತೆ ಸರಳ ಅಂತರ್‌ಜಾತಿ ಮದುವೆಗಳನ್ನು ನಡೆಸುವಂತಾಯಿತು. ಅದು ಇಂದಿಗೂ ಕರ್ನಾಟಕದಲ್ಲಿ ನಡೆದುಕೊಂಡು ಬರುತ್ತಿರುವುದು ಸಂತೋಷದ ಸಂಗತಿಯಾಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ15 hours ago

ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ರಾಜ್ಯದ ಎಲ್ಲ ಪರಿಶ್ಟಿಷ್ಟ ವರ್ಗದ ವಸತಿ ಶಾಲೆಗಳಿಗೆ ರಾಯಚೂರು ವಿಶ್ವವಿದ್ಯಾಲಯಕ್ಕೆ ಮಹರ್ಷಿ ವಾಲ್ಮೀಕಿ ಹೆಸರು ನಾಮಕರಣ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ವಿಧಾನಸೌಧ ಮುಂಭಾಗದಲ್ಲಿರುವ ವಾಲ್ಮೀಕಿ...

ದಿನದ ಸುದ್ದಿ20 hours ago

ಕರ್ನಾಟಕದಲ್ಲಿ ವಿವಿಧ ಕ್ಷೇತ್ರಗಳ ಐವರು ಸಾಧಕರಿಗೆ ಮಹರ್ಷಿ ವಾಲ್ಮೀಕಿ ಪ್ರಶಸ್ತಿ ಪ್ರದಾನ

ಸುದ್ದಿದಿನಡೆಸ್ಕ್:ರಾಮಾಯಣದ ಕರ್ತೃ ಮಹರ್ಷಿ ವಾಲ್ಮೀಕಿ ಜಯಂತಿ ಇಂದು. ಈ ಹಿನ್ನೆಲೆಯಲ್ಲಿ ವಿವಿಧೆಡೆ ವಾಲ್ಮೀಕಿ ಜಯಂತಿಯನ್ನು ಆಚರಿಸಲಾಗುತ್ತಿದೆ. ಮಹರ್ಷಿ ವಾಲ್ಮೀಕಿಯನ್ನು ’ಆದಿ ಕವಿ’ ಅಥವಾ ಸಂಸ್ಕೃತ ಭಾಷೆಯ ಮೊದಲ...

ದಿನದ ಸುದ್ದಿ2 days ago

ಜಾತಿ ಪ್ರಮಾಣಪತ್ರ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಸುದ್ದಿದಿನಡೆಸ್ಕ್:ಜಾತಿ ಪ್ರಮಾಣ ಪತ್ರದ ಬಗೆಗಿನ ಗೊಂದಲ ನಿವಾರಿಸಲು ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ಮಾತನಾಡಿದ ಅವರು ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ...

ದಿನದ ಸುದ್ದಿ2 days ago

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ

ಸುದ್ದಿದಿನಡೆಸ್ಕ್:ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ದೆಹಲಿಯಲ್ಲಿಂದು ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಸುದ್ದಿಗೋಷ್ಠಿ ನಡೆಸಿ ಶಿಗ್ಗಾಂವಿ, ಚನ್ನಪಟ್ಟಣ ಮತ್ತು ಸಂಡೂರು ವಿಧಾನಸಭಾ...

ದಿನದ ಸುದ್ದಿ4 days ago

ಅಕ್ಟೋಬರ್ 20 ರಂದು ಬೃಹತ್ ಉದ್ಯೋಗ ಮೇಳ

ಸುದ್ದಿದಿನ,ದಾವಣಗೆರೆ:ಎನ್‍ಐಇಎಲ್‍ಟಿ ಮತ್ತು ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಸಹಕಾರದೊಂದಿಗೆ ಅಕ್ಟೋಬರ್ 20 ರಂದು ಬೆಂಗಳೂರು ನಗರ ಜಿಲ್ಲೆಯ ಕೆಎಲ್‍ಎಫ್ ಸಂಸ್ಥೆಯ ಎಸ್.ನಿಜಲಿಂಗಪ್ಪ ಮಹಾವಿದ್ಯಾಲಯ, #1040, 28ನೇ ಕ್ರಾಸ್...

ದಿನದ ಸುದ್ದಿ5 days ago

ಯಲ್ಲಮ್ಮನ ಸವದತ್ತಿ ಕ್ಷೇತ್ರಾಭಿವೃದ್ಧಿಗೆ ಆದ್ಯತೆ : ಸಿಎಂ ಸಿದ್ದರಾಮಯ್ಯ ಭರವಸೆ

ಸುದ್ದಿದಿನಡೆಸ್ಕ್:ಯಲ್ಲಮ್ಮನ ಗುಡ್ಡವಿರುವ ಸವದತ್ತಿ ಕ್ಷೇತ್ರಕ್ಕೆ ಪ್ರತಿವರ್ಷ ಕೋಟ್ಯಾಂತರ ಭಕ್ತಾದಿಗಳು ಭೇಟಿ ನೀಡುತ್ತಾರೆ. ಅವರಿಗೆ ಉತ್ತಮ ವಸತಿ ಹಾಗೂ ಸುಗಮ ದರ್ಶನಕ್ಕೆ ಅಗತ್ಯ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಮುಖ್ಯಮಂತ್ರಿ...

ದಿನದ ಸುದ್ದಿ6 days ago

ತೆರಿಗೆ ಹಂಚಿಕೆಯಲ್ಲಿ ಕೇಂದ್ರದ ತಾರತಮ್ಯ ನೀತಿ ವಿರುದ್ಧ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ : ಡಿಸಿಎಂ ಡಿ.ಕೆ.ಶಿವಕುಮಾರ್

ಸುದ್ದಿದಿನ,ಬೆಂಗಳೂರು:ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ತಾರತಮ್ಯವಾಗಿದ್ದು ತೆರಿಗೆ ತಾರತಮ್ಯ ಖಂಡಿಸಿ “ನಮ್ಮ ತೆರಿಗೆ ನಮ್ಮ ಹಕ್ಕು” ಎಂದು ಪ್ರತಿಭಟನೆ ನಡೆಸಲಾಗುವುದು ಎಂದು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ...

ದಿನದ ಸುದ್ದಿ6 days ago

ಮೈಸೂರು ದಸರಾ | ಅಂಬಾರಿ ಹೊತ್ತ ಅಭಿಮನ್ಯು ಜಂಬೂ ಸವಾರಿ

ಸುದ್ದಿದಿನಡೆಸ್ಕ್:ಮೈಸೂರು ದಸರಾ ಅಂಗವಾಗಿ ಶನಿವಾರ ವಿಜಯದಶಮಿಯಂದು ಅದ್ಧೂರಿ ಜಂಬೂ ಸವಾರಿ ನಡೆಯಿತು. ಅಕ್ಟೋಬರ್ 3 ರಂದು ದಸರಾ ಉದ್ಘಾಟನೆಯಾದಾಗಿನಿಂದ ಮೈಸೂರು ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಿದೆ. ಮೈಸೂರಿನ ಜಂಬೂಸವಾರಿಯಲ್ಲಿ...

ದಿನದ ಸುದ್ದಿ6 days ago

ಇಂದಿನಿಂದ ಒಂದು ವಾರ ರಾಜ್ಯದಲ್ಲಿ ಭಾರೀ‌ ಮಳೆ

ಸುದ್ದಿದಿನಡೆಸ್ಕ್:ಕರ್ನಾಟಕದಲ್ಲಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಂದಿನ ಒಂದು ವಾರ ವ್ಯಾಪಕ ಮಳೆಯಾಗಲಿದೆ. ಇಂದು ಮಧ್ಯಾಹ್ನದಿಂದಲೇ ನಗರದ ಹಲವೆಡೆ ಜಿಟಿಜಿಟಿ ಮಳೆ ಶುರುವಾಗಿದೆ. ಜೊತೆಗೆ ಮುಂದಿನ 7...

ದಿನದ ಸುದ್ದಿ7 days ago

ನಾಡಿನೆಲ್ಲೆಡೆ ಆಯುಧಪೂಜೆ ಸಡಗರ; ಮೈಸೂರು ಅರಮನೆಯಲ್ಲಿ ಪಟ್ಟದ ಹಸು, ಆನೆ, ಆಯುಧಗಳಿಗೆ ಯದುವೀರ್ ಒಡೆಯರ್ ಪೂಜೆ

ಸುದ್ದಿದಿನಡೆಸ್ಕ್:ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ಹಬ್ಬದ ಸಂಭ್ರಮ ಕಳೆಗಟ್ಟಿದೆ. ಮೈಸೂರು ಅರಮನೆಯಲ್ಲಿ ಶರನ್ನವರಾತ್ರಿಯ 9ನೇ ದಿನವಾದ ಇಂದು ಸಾಂಪ್ರದಾಯಿಕವಾಗಿ ಆಯುಧಪೂಜೆ ನೆರವೇರಿತು ಮಹಾರಾಜ ಯದುವೀರ್ ಕೃಷ್ಣದತ್ತ ಚಾಮರಾಜ...

Trending