Connect with us

ಬಹಿರಂಗ

ಸಂವಿಧಾನ ಸಭೆಯಲ್ಲಿ ಅಂಬೇಡ್ಕರರು ಮಾಡಿದ ಸಮಾರೋಪ ಭಾಷಣ

Published

on

ಭಾರತದ ಸ್ವಾತಂತ್ರ್ಯಕ್ಕೆ ಏನಾಗಲಿದೆ? 26ನೇ ಜನವರಿ 1950ರಂದು, ಭಾರತವು ಸಂಪೂರ್ಣ ಸ್ವತಂತ್ರ ರಾಷ್ಟ್ರವಾಗಲಿದೆ. ಆದರೆ ಅದರ ಸ್ವಾತಂತ್ರ್ಯಕ್ಕೆ ಏನಾಗಲಿದೆ? ಅದು ತನ್ನ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳಲಿದೆಯೇ? ಅಥವಾ ಅದು ತನ್ನ ಸ್ವಾತಂತ್ರ್ಯವನ್ನು ಮತ್ತೊಮ್ಮೆ ಕಳೆದುಕೊಳ್ಳಲಿದೆಯೇ? ಇದು ನನ್ನ ಮನಸ್ಸಿನಲ್ಲಿ ಮೂಡಿದ ಮೊದಲ ವಿಷಯವಾಗಿರುತ್ತದೆ.

ಭಾರತವು ಹಿಂದೆಂದೂ ಸ್ವತಂತ್ರವಾಗಿರಲಿಲ್ಲವೆಂದು ಇದರ ಅರ್ಥವಲ್ಲ. ಅದು ತನ್ನ ಸ್ವಾತಂತ್ರ್ಯವನ್ನು ಮಧ್ಯೆ ಕಳೆದುಕೊಂಡಿತ್ತು. ಅದು ಎರಡನೆಯ ಬಾರಿಗೆ ತನ್ನ ಸ್ವಾತಂತ್ರ್ಯವನ್ನು ಕಳೆದುಕೊಳ್ಳುತ್ತದೆಯೇ?
ಈ ಆಲೋಚನೆಯೇ ಭವಿಷ್ಯದ ಬಗ್ಗೆ ನನ್ನನ್ನು ಕಳವಳಗೊಳ್ಳು ವಂತೆ ಮಾಡಿದೆ. ಭಾರತವು ತನ್ನ ಸ್ವಾತಂತ್ರ್ಯವನ್ನು ಹಿಂದೊಮ್ಮೆ ಕಳೆದುಕೊಂಡಿತ್ತೆಂಬ ಸಂಗತಿಯು ನನ್ನ ಮನಸ್ಸಿನ ಕ್ಷೋಭೆಗೆ ಕಾರಣ. ತನ್ನವರದೇ ಆದ ವಿಶ್ವಾಸಘಾತುಕದಿಂದ ಹಾಗೂ ದೇಶದ್ರೋಹಿಗಳಿಂದ ಸ್ವಾತಂತ್ರ್ಯವನ್ನು ಕಳೆದುಕೊಂಡಿತು ಎಂಬುವುದು ನನ್ನ ಮನಸ್ಸಿನ ಕ್ಷೋಭೆಗೆ ಮುಖ್ಯ ಕಾರಣವಾಗಿದೆ.

ಸಿಂಧ್ ಪ್ರಾಂತ್ಯದ ಮೇಲೆ ಮೊಹಮ್ಮದ್ ಬಿನ್ ಖಾಸಿಂ ದಂಡೆತ್ತಿ ಬಂದಾಗ ಅವನ ವಿರುದ್ಧ ಯುದ್ಧ ಘೋಷಣೆ ಮಾಡಬೇಕಿದ್ದ ಧಾರ್ ಅರಸನ ಸೈನಿಕ ಕಮಾಂಡರುಗಳು ಮೊಹಮದ್ ಬಿನ್ ಖಾಸಿಂ ಕಡೆಯ ಏಜೆಂಟರುಗಳು ಕೊಟ್ಟ ಲಂಚವನ್ನು ಸ್ವೀಕರಿಸಿ ರಾಜನ ಪರವಾಗಿ ಯುದ್ಧ ಮಾಡದೆ ಹೋದ ಉದಾಹರಣೆ ನನ್ನ ಮುಂದೆ ಇದೆ. ಭಾರತದ ಮೇಲೆ ಯುದ್ಧ ಮಾಡಲು ಮೊಹಮ್ಮದ್ ಘೋರಿ ಯನ್ನು ಭಾರತೀಯನೇ ಆಗಿದ್ದ ಜೈಚಂದರ್ ಎಂಬುವವನು ಸ್ವಾಗತಿ ಸಿದ್ದು, ಮತ್ತು ಪೃಥ್ವಿರಾಜನ ವಿರುದ್ಧ ಯುದ್ಧ ಮಾಡುವಂತೆ ಪ್ರೇರೇಪಿ ಸಿದ್ದು ಮತ್ತು ಆ ಯುದ್ಧದಲ್ಲಿ ತಾನು ಹಾಗೂ ಸೋಲಂಕಿಯ ರಾಜರು ಗಳು ಸಹಾಯ ಮಾಡುವುದಾಗಿ ಹೇಳಿದಂತಹ ಉದಾಹರಣೆಗಳು ನನ್ನ ಮುಂದೆ ಇವೆ.

ಶಿವಾಜಿ ಮಹಾರಾಜನು ಹಿಂದೂಗಳ ವಿಮೋಚನೆ ಗಾಗಿ ಯುದ್ಧ ಮಾಡುತ್ತಿದ್ದಾಗ, ಇತರೆ ಮರಾಠಾ ರಾಜರುಗಳು ಮತ್ತು ರಜಪೂತ್ ರಾಜರುಗಳು ಮೊಘಲ್ ಚಕ್ರವರ್ತಿಗಳ ಪರವಾಗಿ ಯುದ್ಧ ಮಾಡುತ್ತಿದ್ದರು. ಬ್ರಿಟಿಷರು ಸಿಖ್ ರಾಜರುಗಳ ಆಡಳಿತವನ್ನು ಧ್ವಂಸ ಮಾಡಬೇಕೆಂದು ಪ್ರಯತ್ನಿಸುತ್ತಿದ್ದಾಗ, ಸಿಖ್ ರಾಜರುಗಳ ಸೇನೆಯ ಮುಖ್ಯ ಕಮಾಂಡರ್ ಆದ ಗುಲಾಬ್‍ಸಿಂಗನು ಪ್ರೇಕ್ಷಕನಂತೆ ಮೌನ ವಹಿಸಿ ಕುಳಿತಿದ್ದನು. ಅವನು ಸಿಖ್ ಸಾಮ್ರಾಜ್ಯದ ರಕ್ಷಣೆಗಾಗಿ ಕಿಂಚಿತ್ತೂ ಸಹಾಯ ಮಾಡಲಿಲ್ಲ.

1857ರಲ್ಲಿ ಭಾರತದಾದ್ಯಂತ, ಬ್ರಿಟೀಷರ ವಿರುದ್ಧ, ಸ್ವಾತಂತ್ರ್ಯಕ್ಕಾಗಿ ಯುದ್ಧವನ್ನು ಘೋಸಿದಾಗ, ಸಿಖ್ ಸಮುದಾಯ ಆ ಘಟನೆಯನ್ನು ಕೇವಲ ಪ್ರೇಕ್ಷಕರಂತೆ ನಿಂತು ನೋಡಿದ ಉದಾಹರಣೆ ನನ್ನ ಮುಂದೆ ಇದೆ.

ಇತಿಹಾಸ ಮರುಕಳಿಸುತ್ತದೆಯೇ? ಈ ವಿಷಯವೇ ನನ್ನ ಕಳವಳಕ್ಕೆ ಮುಖ್ಯ ಕಾರಣವಾಗಿದೆ. ನಮ್ಮ ಹಿಂದಿನ ವೈರಿಗಳಾದ ಜಾತಿ-ಪಂಗಡ ಗಳ ಜೊತೆಗೆ ಇನ್ನು ಮುಂದೆ ರಾಜಕೀಯ ಪಕ್ಷಗಳು ಮತ್ತು ರಾಜಕೀಯ ಪಂಗಡಗಳು ಸೇರಿಕೊಳ್ಳಲಿವೆ. ಭಾರತೀಯರು ತಮ್ಮ ಜಾತಿ, ಪಂಗಡಗ ಳನ್ನು ಬದಿಗೊತ್ತಿ ರಾಷ್ಟ್ರ ಮುಖ್ಯ ಎನ್ನುವರೋ, ಅಥವಾ ರಾಷ್ಟ್ರವನ್ನು ಬದಿಗೊತ್ತಿ ಜಾತಿ-ಪಂಗಡಗಳು ಮುಖ್ಯ ಎನ್ನುವರೋ, ನನಗೆ ಗೊತ್ತಿಲ್ಲ. ಆದರೆ ಇಷ್ಟಂತೂ ಸತ್ಯ. ದೇಶದಲ್ಲಿನ ರಾಜಕೀಯ ಪಕ್ಷಗಳು ಜಾತಿ ಪಂಗಡಗಳನ್ನೇ ಪ್ರಧಾನವಾಗಿ ಮಾಡಿಕೊಂಡರೆ ದೇಶದ ಸ್ವಾತಂತ್ರ್ಯಕ್ಕೆ ಗಂಡಾಂತರ ಒದಗುತ್ತದೆ ಮತ್ತು ನಮ್ಮ ಸ್ವಾತಂತ್ರ್ಯವನ್ನು ಎರಡನೆಯ ಬಾರಿಗೆ ಮತ್ತು ಶಾಶ್ವತವಾಗಿ ಕಳೆದುಕೊಳ್ಳುವ ಪ್ರಸಂಗ ಒದಗಬಹುದು.

ಇಂತಹ ಸಂಭಾವ್ಯ ಘಟನೆಯ ವಿರುದ್ಧ ನಾವು ದೃಢಸಂಕಲ್ಪದಿಂದ ಎಚ್ಚರ ವಹಿಸಬೇಕು. ನಮ್ಮ ಕಟ್ಟ ಕಡೆಯ ರಕ್ತದ ತೊಟ್ಟನ್ನು ಹರಿಸಿಯಾ ದರೂ, ದೇಶದ ಸ್ವಾತಂತ್ರ್ಯವನ್ನು ರಕ್ಷಿಸುತ್ತೇವೆ, ಎಂದು ನಾವು ಪ್ರತಿಜ್ಞೆಯನ್ನು ಕೈಗೊಳ್ಳಬೇಕಿದೆ.
26 ನೇ ಜನವರಿ 1950ರಂದು ಭಾರತವು ಸ್ವತಂತ್ರ ಗಣರಾಜ್ಯ ವಾಗಲಿದೆ. ಅಂದರೆ ಅದರ ಅರ್ಥ, ಆ ದಿನದಿಂದ ಭಾರತವು ತನ್ನ ಜನತೆುಂದ, ತನ್ನ ಜನರಿಗಾಗಿ, ತನ್ನ ಜನರಿಗೋಸ್ಕರ ಸರ್ಕಾರವನ್ನು ರೂಪಿಸಿಕೊಳ್ಳಲಿದೆ. ಇದೇ ವಿಷಯ ಮತ್ತೊಮ್ಮೆ ನನ್ನ ಮನಸ್ಸಿಗೆ ಬರುತ್ತಿದೆ. ಸಂವಿಧಾನವು ತನ್ನ ಪ್ರಜಾಸತ್ತಾತ್ಮಕ ಲಕ್ಷಣಗಳನ್ನು ಉಳಿಸಿ ಕೊಳ್ಳುತ್ತದೆಯೇ? ಅದು ಉಳಿಸಿಕೊಳ್ಳುತ್ತದೆಯೇ ಅಥವಾ ಮತ್ತೊಮ್ಮೆ ಕಳೆದುಕೊಳ್ಳುತ್ತದೆಯೇ? ಈ ಎರಡನೆಯ ವಿಚಾರವು ನನ್ನ ಮೊದಲನೆಯ ಪ್ರಶ್ನೆಯಷ್ಟೇ ನನಗೆ ಕಳವಳಕಾರಿಯಾಗಿದೆ.

ಭಾರತಕ್ಕೆ `ಪ್ರಜಾಪ್ರಭುತ್ವ’ ಎಂದರೆ ಏನು ಎಂಬುದು ತಿಳಿದಿರಲಿಲ್ಲ ಎಂದು ಹೇಳಲು ಬರುವುದಿಲ್ಲ. ಭಾರತವು ಒಂದಾನೊಂದು ಕಾಲಕ್ಕೆ ಅನೇಕ ಗಣರಾಜ್ಯಗಳನ್ನು ಹಾಗೂ ಅನೇಕ ರಾಜ-ಮಹಾರಾಜರುಗಳನ್ನು ಹೊಂದಿತ್ತು. ಇಂತಹ ಮಹಾರಾಜರುಗಳಲ್ಲಿ ಕೆಲವರು ಚುನಾಯಿತರಾಗು ತ್ತಿದ್ದರು ಅಥವಾ ಅವರು ಸೀಮಿತ ಅಧಿಕಾರ ಹೊಂದಿರುತ್ತಿದ್ದರು. ಆದರೆ ಅವರು ಎಂದೂ ನಿರಂಕುಶ ಪ್ರಭುಗಳಾಗಿರಲಿಲ್ಲ. ಭಾರತಕ್ಕೆ ಸಂಸತ್ತುಗಳು ಅಥವಾ ಸಂಸತ್ತುಗಳಲ್ಲಿ ನಡೆಯಬೇಕಾದ ವಿಧಿ ವಿಧಾನ ಗಳು ತಿಳಿದಿರಲಿಲ್ಲ ಎಂದಲ್ಲ.

ಬೌದ್ಧ ಭಿಕ್ಷು ಸಂಘಗಳ ರಚನೆಯನ್ನು ಅಧ್ಯಯನ ಮಾಡಿದರೆ, ನಮ್ಮಲ್ಲಿ ಸಂಘಗಳಿಗೆ ಪರ್ಯಾಯವಾಗಿ ಸಂಸತ್ತುಗಳು ಇದ್ದವು ಮತ್ತು ಅಂತಹ ಸಂಘಗಳು ಎಂದರೆ ಸಂಸತ್ತುಗಳೇ ಅಲ್ಲದೆ ಬೇರೆ ಏನೂ ಅಲ್ಲ ಎಂಬುದು ವೇದ್ಯವಾಗುತ್ತದೆ. ಅಂತಹ ಸಂಘಗಳು ಆಧುನಿಕ ಯುಗದಲ್ಲಿನ ಸಂಸತ್ತುಗಳು ಯಾವ ವಿಧಿ-ವಿಧಾನಗಳನ್ನು ಅನುಸರಿಸಿಕೊಂಡು ರಚನೆಯಾಗಿವೆಯೋ ಅಂತಹ ವಿಧಿ-ವಿಧಾನಗಳ ಮೇಲೆ ಸಂಘಗಳು ಕಾರ್ಯ ನಿರ್ವಹಿಸುತ್ತಿದ್ದವು. ಅವುಗಳಲ್ಲಿ ಆಸನಗಳ ಏರ್ಪಾಡು, ನಿರ್ಣಯಗಳನ್ನು ಕೈಗೊಳ್ಳಲು ಇದ್ದ ನಿಯಮಗಳು, ಕೋರಮ್, ಸಚೇತಕರು, ಮತಗಳ ಎಣಿಕೆ, ಮತ ಚೀಟಿಗಳ ಮೂಲಕ ಮತದಾನ, ಛೀಮಾರಿ ನಿರ್ಣಯ, ನಿಯಂತ್ರಿ ಸುವ ವಿಧಾನ, ಪೂರ್ವ ನ್ಯಾಯ ಇತ್ಯಾದಿ ಇದ್ದುದನ್ನು ನೋಡ ಬಹುದು. ಬುದ್ಧನು ಸಂಘಗಳ ಸಭೆಗಳ ನಿರ್ವಹಣೆಗಾಗಿ ಅನುಸರಿಸುತ್ತಿದ್ದ ಈ ಸಂಸದೀಯ ವಿಧಿ ವಿಧಾನಗಳನ್ನು, ತನ್ನ ಕಾಲಕ್ಕೆ ತನ್ನ ದೇಶದಲ್ಲಿದ್ದ ರಾಜಕೀಯ ಸಭೆಗಳಿಂದ ಅಥವಾ ರಾಜಕೀಯ ಪರಿಷತ್‍ಗಳಿಂದ, ತೆಗೆದುಕೊಂಡಿರಬೇಕೆಂದು ಕಂಡುಬರುತ್ತದೆ.

ಈ ಪ್ರಜಾಪ್ರಭುತ್ವ ಪದ್ದತಿಯನ್ನು ಭಾರತವು ಕಳೆದುಕೊಂಡಿತು. ಅದು ಎರಡನೇ ಬಾರಿಗೆ ಕಳೆದುಕೊಳ್ಳಲಿದೆಯೇ? ನನಗೆ ಗೊತ್ತಿಲ್ಲ. ಆದರೆ ಭಾರತದಂತಹ ದೇಶದಲ್ಲಿ ಪ್ರಜಾಪ್ರಭುತ್ವ ಪದ್ಧತಿಯು ಬಹಳ ಕಾಲದಿಂದ ಬಳಕೆಯಲ್ಲಿ ಇಲ್ಲದಿದ್ದ ಕಾರಣ ಈ ಪ್ರಜಾಪ್ರಭುತ್ವ ವ್ಯವಸ್ಥೆ ಹೊಸದೆನಿಸಬಹುದು ಮತ್ತು ಪ್ರಜಾಪ್ರಭುತ್ವ ಮರೆಯಾಗಿ ಸರ್ವಾಧಿಕಾರಕ್ಕೆ ಎಡೆ ಮಾಡಿಕೊಡುವ ಅಪಾಯವುಂಟು. ಈಗ ಹೊಸದಾಗಿ ಜನ್ಮ ತಳೆದ ಪ್ರಜಾಪ್ರಭುತ್ವ ತನ್ನ ಸ್ವರೂಪವನ್ನು ಉಳಿಸಿಕೊಳ್ಳದೇ ಅದರ ಜಾಗದಲ್ಲಿ ಸರ್ವಾಧಿಕಾರಕ್ಕೆ ಅವಕಾಶ ಮಾಡಿಕೊಡುವ ಸಂಭವ ವುಂಟು. ರಾಜಕೀಯದಲ್ಲಿ ಇಂಥÀ ಭೂಕಂಪವೇನಾದರೂ ನಡೆದಿದ್ದೆಯಾ ದರೆ ನನ್ನ ಎರಡನೇ ಅನುಮಾನವು ವಾಸ್ತವವಾಗುವ ಸಾಧ್ಯತೆಯುಂಟು.

ಪ್ರಜಾಪ್ರಭುತ್ವವನ್ನು ಅದರ ಸ್ವರೂಪವನ್ನಷ್ಟೇ ಅಲ್ಕದೆ, ಅದರ ತತ್ವವನ್ನು ಉಳಿಸಿಕೊಳ್ಳಬೇಕಾದರೆ ನಾವು ಏನು ಮಾಡಬೇಕು? ನನ್ನ ಅಭಿಪ್ರಾಯದ ಪ್ರಕಾರ, ನಮ್ಮ ಸಾಮಾಜಿಕ ಮತ್ತು ಆರ್ಥಿಕ ಉದ್ದೇಶಗ ಳನ್ನು ಈಡೇರಿಸಿಕೊಳ್ಳಲು ಸಂವಿಧಾನದ ವಿಧಾನಗಳನ್ನೇ ಅನುಸರಿಸ ಬೇಕಾಗುತ್ತದೆ. ಅಂದರೆ ನಾವು ಕ್ರಾಂತೀಯ ರಕ್ತಪಾತ ಮಾರ್ಗವನ್ನು ಕೈಬಿಡಬೇಕಾಗುತ್ತದೆ. ಅಂದರೆ ನಾವು ಶಿಸ್ತುಭಂಗ, ಅಸಹಕಾರ ಮತ್ತು ಸತ್ಯಾಗ್ರಹ ಈ ಮಾರ್ಗಗಳನ್ನು ಬಿಡಬೇಕಾಗುತ್ತದೆ. ಸಾಮಾಜಿಕ ಮತ್ತು ಆರ್ಥಿಕ ಉದ್ದೇಶಗಳ ಈಡೇರಿಕೆಗೆ ಸಂವಿಧಾನ ಸಮ್ಮತ ಮಾರ್ಗಗಳ ಅವಕಾಶವಿಲ್ಲದಿದ್ದ ಸಂದರ್ಭದಲ್ಲಿ ಸಂವಿಧಾನ ಬಾಹಿರವಾದ ಮಾರ್ಗ ಗಳನ್ನು ಅನುಸರಿಸುವುದು ಬಹಳಷ್ಟು ಸಮರ್ಥನೀಯವಾಗಿತ್ತು.

ಆದರೆ ಎಲ್ಲಿ ಸಂವಿಧಾನದ ಸಮ್ಮತ ಮಾರ್ಗಗಳಿಗೆ ಅವಕಾಶವಿರುತ್ತದೆಯೋ, ಅಲ್ಲಿ ಸಂವಿಧಾನ ಬಾಹಿರವಾದ ಮಾರ್ಗಗಳಿಗೆ ಸಮರ್ಥನೆ ಇರುವು ದಿಲ್ಲ. ಈ ಮಾರ್ಗಗಳು ಅರಾಜಕತೆಯ ಧರ್ಮಗ್ರಂಥದ ನೀತಿ ಸೂತ್ರ ಗಳಾಗಿದ್ದು, ಇವುಗಳನ್ನು ಎಷ್ಟು ಬೇಗ ತೊರೆಯುತ್ತೇವೆಯೋ, ರಾಷ್ಟ್ರಕ್ಕೆ ಅಷ್ಟೂ ಕ್ಷೇಮ.
ಎರಡನೆಯದಾಗಿ ಜಾನ್ ಸ್ಪೋರಟ್ ಮಿಲ್ ಪ್ರಜಾಪ್ರಭುತ್ವವನ್ನು ಕುರಿತು ಹೇಳಿದ್ದ ಎಚ್ಚರಿಕೆ ಮಾತನ್ನು ಪ್ರಜಾಪ್ರಭುತ್ವದ ರಕ್ಷಣೆಯಲ್ಲಿ ಇರುವವರೆಲ್ಲರೂ ಗಮನಿಸಬೇಕಾಗುತ್ತದೆ. ಅಂದರೆ “ಎಂತಹ ಮಹಾನ್ ವ್ಯಕ್ತಿಯೇ ಆಗಿದ್ದರೂ ಅವನ ಪಾದದಡಿಯಲ್ಲಿ ತಮ್ಮ ಸ್ವಾತಂತ್ರ್ಯವನ್ನು ಎಸೆಯಬಾರದು. ಅಥವಾ ತಮ್ಮ ಯಾವುದೇ ಸಂಸ್ಥೆಗಳನ್ನು ಬುಡ ಮೇಲು ಮಾಡಲು ಅನುಕೂಲವಾಗುವ ಹಾಗೆ, ಅವರಿಗೆ ಅಧಿಕಾರವನ್ನು ಕೊಡಲೂಬಾರದು” ದೇಶಕ್ಕೆ ಜೀವಮಾನವೆಲ್ಲಾ ಸೇವೆ ಸಲ್ಲಿಸಿದ ಯಾವುದೇ ಮಹಾನ್ ವ್ಯಕ್ತಿಗೆ ಋಣಿಯಾಗಿರುವುದರಲ್ಲಿ ತಪ್ಪೇನೂ ಇಲ್ಲ, ಆದರೆ ಋಣಿಯಾಗಿರುವುದಕ್ಕೂ ಕೆಲವು ಮಿತಿಗಳಿರುತ್ತವೆ.

ಐರಿಷ್ ರಾಷ್ಟ್ರಪ್ರೇಮಿಯಾದ ಡೇನಿಲ್ ಓ ಕನ್ನೋಲ್ ಎಂಬುವವನು ಹೇಳಿ ದಂತೆ, “ಯಾವೊಬ್ಬ ವ್ಯಕ್ತಿಯು ತನ್ನ ಗೌರವವನ್ನು ಕಳೆದು ಕೊಂಡು ಮತ್ತೊಬ್ಬನಿಗೆ ಋಣಿ ಯಾಗಿರಬಾರದು. ಯಾವೊಬ್ಬ ಮಹಿಳೆಯು ತನ್ನ ಪಾವಿತ್ರ್ಯತೆ ಯನ್ನು ಬಲಿಗೊಟ್ಟು ಕೃತಜ್ಞತೆಯನ್ನು ತೋರಿಸಬೇಕಿಲ್ಲ. ಅದೇ ರೀತಿಯಲ್ಲಿ ಯಾವ ರಾಷ್ಟ್ರವೂ ತನ್ನ ಸ್ವಾತಂತ್ರ್ಯವನ್ನು ಬಲಿಗೊಟ್ಟು ಕೃತಜ್ಞವಾಗಿರ ಬೇಕಿಲ್ಲ”. ಈ ಎಚ್ಚರಿಕೆಯ ಮಾತು, ಇತರೆ ಯಾವುದೇ ದೇಶಕ್ಕಿಂತ ಭಾರತದ ಸಂದರ್ಭದಲ್ಲಿ ಹೆಚ್ಚು ಅಗತ್ಯವಾಗಿರುತ್ತದೆ.

ಭಾರತದಲ್ಲಿ ಭಕ್ತಿಪಂಥ ಅಥವಾ ವ್ಯಕ್ತಿಪೂಜೆ ರಾಜಕೀಯದಲ್ಲಿ ಮಹತ್ವದ ಪಾತ್ರಗಳನ್ನು ವಹಿಸುತ್ತಿವೆ. ಈ ವಿಷಯದಲ್ಲಿ ಪ್ರಪಂಚದ ಯಾವುದೇ ರಾಷ್ಟ್ರವು ಇದಕ್ಕೆ ಸರಿಸಾಟಿಯಾಗಲಾರದು. ಧಾರ್ಮಿಕವಾಗಿ ಭಕ್ತಿಯು ಆತ್ಮದ ಮೋಕ್ಷಕ್ಕೆ ದಾರಿ ಮಾಡಿಕೊಡಬಹುದು. ಆದರೆ ರಾಜಕೀಯದಲ್ಲಿನ ಭಕ್ತಿ ಅಥವಾ ವ್ಯಕ್ತಿ ಪೂಜೆಯು, ಖಂಡಿತವಾಗಿಯೂ, ಅವನತಿಗೆ ಮತ್ತು ನಿರಂಕುಶ ಪ್ರಭುತ್ವದ ಉದಯಕ್ಕೆ, ದಾರಿ ಮಾಡಿ ಕೊಡುತ್ತದೆ.

ಮೂರನೆಯದಾಗಿ ನಾವು ಮಾಡಬೇಕಾದುದು ಎಂದರೆ, ಕೇವಲ ರಾಜಕೀಯ ಪ್ರಜಾಪ್ರಭುತ್ವದಿಂದ ತೃಪ್ತಿ ಹೊಂದಿ ಸಮ್ಮನಾಗ ಬಾರದು. ನಾವು ನಮಗೆ ದೊರೆತ ಈ ರಾಜಕೀಯ ಪ್ರಜಾಪ್ರಭುತ್ವವನ್ನು ಸಾಮಾ ಜಿಕ ಪ್ರಜಾಪ್ರಭುತ್ವವನ್ನಾಗಿಯೂ ಮಾಡಬೇಕು. ರಾಜಕೀಯ ಪ್ರಜಾಪ್ರಭು ತ್ವಕ್ಕೆ ಸಾಮಾಜಿಕ ಪ್ರಜಾಪ್ರಭುತ್ವವು ಬುನಾದಿಯಾಗಿರದಿದ್ದರೆ ರಾಜಕೀಯ ಪ್ರಭುತ್ವಕ್ಕೆ ಉಳಿಗಾಲವಿಲ್ಲ. ಹಾಗಾದರೆ, ಸಾಮಾಜಿಕ ಪ್ರಜಾಪ್ರಭುತ್ವ ಎಂದರೆ ಏನು? ಸಾಮಾಜಿಕ ಪ್ರಜಾಪ್ರಭುತ್ವ ಎಂದರೆ ಅದೊಂದು ಜೀವನ ಪದ್ಧತಿ. ಸ್ವಾತಂತ್ರ್ಯ, ಸಮಾನತೆ ಮತ್ತು ಬ್ರಾತೃತ್ವ ಆದ ಈ ತ್ರಿವಳಿಗಳಲ್ಲಿ ಒಂದೊಂದನ್ನು ಪ್ರತ್ಯೇಕವೆಂದು ಪರಿಗಣಿಸು ವಂತಿಲ್ಲ. ಅವು ಒಂದಕ್ಕೊಂದು ಪೂರಕವಾಗಿರುತ್ತವೆ. ಅವುಗಳನ್ನು ಪ್ರತ್ಯೇಕಿಸುವು ದೆಂದರೆ ಪ್ರಜಾಪ್ರಭುತ್ವದ ಉದ್ದೇಶವು ವಿಫಲವಾಗುತ್ತದೆ.

ಸ್ವಾತಂತ್ರ್ಯ ವನ್ನು, ಸಮಾನತೆಯಿಂದ ಪ್ರತ್ಯೇಕಿಸಲು ಬರುವುದಿಲ್ಲ. ಸಮಾನತೆಯನ್ನು ಸ್ವಾತಂತ್ರ್ಯದಿಂದ ಪ್ರತ್ಯೇಕಿಸಲು ಬರುವುದಿಲ್ಲ. ಹಾಗೆಯೇ ಸ್ವಾತಂತ್ರ್ಯ ಮತ್ತು ಸಮಾನತೆಯನ್ನು, ಭ್ರಾತೃತ್ವದಿಂದ ಪ್ರತ್ಯೇಕಿಸಲೂ ಬರುವುದಿಲ್ಲ. ಸ್ವಾತಂತ್ರ್ಯತೆ ಇಲ್ಲದ ಸಮಾನತೆಯು ವ್ಯಕ್ತಿಗತ ಸ್ವಾತಂತ್ರ್ಯವನ್ನು ನಾಶ ಗೊಳಿಸುತ್ತದೆ.
ಭ್ರಾತೃತ್ವವಿಲ್ಲದೆ ಸ್ವಾತಂತ್ರ್ಯ ಮತ್ತು ಸಮಾನತೆಗಳು ಸುಸೂತ್ರವಾಗಿ ನಡೆಯುವಂತಿಲ್ಲ. ಇವುಗಳನ್ನು ಜಾರಿಗೆ ತರಲು ಬಲಪ್ರಯೋಗ ಅಗತ್ಯವಾದೀತು! ಭಾರತೀಯ ಸಮಾಜದಲ್ಲಿ ಈ ಎರಡೂ ಸಂಗತಿಗಳು ಸಂಪೂರ್ಣ ಅಭಾವವಿದೆ ಎಂಬ ವಾಸ್ತವವನ್ನು ನಾವು ಒಪ್ಪಿಕೊಳ್ಳ ಬೇಕು. ಅಂತಹ ಎರಡು ಸಂಗತಿಗಳಲ್ಲಿ ಸಮಾನತೆ ಎಂಬುವುದೂ ಒಂದು. ಸಾಮಾಜಿಕ ಸ್ಥರದ ಮಟ್ಟಿಗೆ ಹೇಳಬೇಕಾದರೆ, ಭಾರತದಲ್ಲಿ ಸಾಮಾಜಿಕ ವ್ಯವಸ್ಥೆಯು ಅಸಮಾನತೆಯ ಶ್ರೇಣಿಗಳ ಮೇಲೆ ನಿಂತಿದೆ. ಅಂದರೆ ಕೆಲವರು ಮೇಲು ಮತ್ತು ಕೆಲವರು ಕೀಳು ಎಂಬ ಅರ್ಥದಲ್ಲಿ. ಆರ್ಥಿಕ ಸ್ಥರದಲ್ಲಿ ಹೇಳಬೇಕೆಂದರೆ, ನಮ್ಮ ಸಮಾಜದಲ್ಲಿ ಹೆಚ್ಚಿನ ಜನ ಕಡು ಬಡತನದಲ್ಲಿದ್ದರೆ, ಕೆಲವರಲ್ಲಿ ಮಾತ್ರ ಶ್ರೀಮಂತಿಕೆ ತುಂಬಿದೆ.

ಜನೆವರಿ 26, 1950ರಂದು ನಾವು ಇಂತಹ ಪರಸ್ಪರ ವೈರುಧ್ಯಗಳಿರುವ ಒಂದು ಹೊಸ ವ್ಯವಸ್ಥೆಗೆ ಪ್ರವೇಶಿಸುತ್ತಿದ್ದೇವೆ. ರಾಜ ಕೀಯ ಜೀವನದಲ್ಲಿ ನಾವು ಸಮಾನತೆಯನ್ನು ಹೊಂದಿದ್ದೇವೆ. ಆದರೆ, ಸಾಮಾಜಿಕ ಮತ್ತು ಆರ್ಥಿಕ ಕ್ಷೇತ್ರದಲ್ಲಿ ನಾವು ಅಸಮಾನತೆಯನ್ನು ಹೊಂದಲಿದ್ದೇವೆ. ರಾಜಕೀಯದಲ್ಲಿ ಒಬ್ಬ ವ್ಯಕ್ತಿಗೆ ಒಂದು ಮತ ಮತ್ತು ಒಂದು ಮತದ ಮೌಲ್ಯ ಒಂದು ಎಂಬ ತತ್ವವನ್ನು ಸ್ವೀಕರಿಸಿದ್ದೇವೆ. ಆದರೆ ಸಾಮಾಜಿಕ ಮತ್ತು ಆರ್ಥಿಕ ಜೀವನದಲ್ಲಿ ಸಾಮಾಜಿಕ ಮತ್ತು ಆರ್ಥಿಕ ವ್ಯವಸ್ಥೆುಂದಾಗಿ ಪ್ರತಿಯೊಬ್ಬ ವ್ಯಕ್ತಿಗೂ ಒಂದು ಮತ, ಒಂದು ಮೌಲ್ಯ ಎಂಬ ತತ್ವವನ್ನು ನಿರಾಕರಿಸಿದ್ದೇವೆ.

ಸಮಾಜದಲ್ಲಿ ಇಂತಹ ವೈರುಧ್ಯಗಳನ್ನು ಒಳಗೊಂಡ ಜೀವನವನ್ನು ನಾವು ಎಲ್ಲಿಯ ವರೆಗೆ ಮುಂದುವರೆಸಲು ಸಾಧ್ಯ? ನಮ್ಮ ಸಾಮಾಜಿಕ ಮತ್ತು ಆರ್ಥಿಕ ಜೀವನದಲ್ಲಿ ಎಲ್ಲಿಯ ವರೆಗೂ ನಾವು ಸಮಾನತೆಯನ್ನು ನಿರಾಕರಿಸಲು ಸಾಧ್ಯ? ನಾವು ಈ ನಿರಾಕರಣೆಯನ್ನು ಹೀಗೆಯೇ ಮುಂದುವರೆಸಿದ್ದಾ ದರೆ ನಾವು ನಮ್ಮ ರಾಜಕೀಯ ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ಒಡ್ಡಿದಂತಾಗುತ್ತದೆ. ನಾವು ಈ ವೈರುಧ್ಯಗಳನ್ನು ಆದಷ್ಟು ಬೇಗ ನಿವಾರಿಸಬೇಕಿರುತ್ತದೆ. ಇಲ್ಲವಾದರೆ ಯಾರು ಅಸಮಾನತೆಯಿಂದ ನರಳುತ್ತಿರುವರೋ ಅವರು, ಯಾವ ಪ್ರಜಾಪ್ರಭುತ್ವಕ್ಕಾಗಿ ಈ ಸಂವಿಧಾನ ಸಭೆ ಪ್ರಯತ್ನಿಸಿತೋ, ಆ ರಾಜಕೀಯ ಪ್ರಜಾಪ್ರಭುತ್ವದ ಕಟ್ಟಡವನ್ನೇ ಧ್ವಂಸಗೊಳಿಸುತ್ತಾರೆ.

ನಾವು ಸಾಮಾಜಿಕವಾಗಿ ಮತ್ತು ಮಾನಸಿಕವಾಗಿ ಒಂದು ರಾಷ್ಟ್ರವಾಗಿಲ್ಲ ಎಂಬುದನ್ನು ಎಷ್ಟು ಬೇಗ ಅರ್ಥ ಮಾಡಿಕೊಳ್ಳು ತ್ತೇವೆಯೋ ಅಷ್ಟೂ ಒಳ್ಳೆಯದು. ಆಗ ಮಾತ್ರ ನಾವು ರಾಷ್ಟ್ರವಾಗುವ ಅಗತ್ಯತೆಯನ್ನು ಕಂಡುಕೊಳ್ಳುತ್ತೇವೆ ಹಾಗೂ ಅಂತಹ ಒಂದು ಉದ್ದೇಶದ ಈಡೇರಿಕೆಗಾಗಿ ನಾವು ಮಾರ್ಗೋಪಾಯಗಳನ್ನು ಕಂಡುಕೊಳ್ಳಲು ಗಂಭೀರವಾಗಿ ಯೋಚಿಸುತ್ತೇವೆ. ಈ ಗುರಿಯ ಈಡೇರಿಕೆಯು ಅಷ್ಟು ಸುಲಭದ್ದಾಗಿರುವುದಿಲ್ಲ. ಅಮೇರಿಕಾ ಸಂಸ್ಥಾನಕ್ಕಿಂತ ಭಾರತದಲ್ಲಿ ಅಸಂಖ್ಯಾತ ಜಾತಿಗಳು ಇವೆ. ಜಾತಿಗಳು ರಾಷ್ಟ್ರದ ಕಲ್ಪನೆಗೆ ವಿರೋಧ ವಾದವುಗಳು. ಮೊದಲನೆಯದಾಗಿ ಸಾಮಾಜಿಕ ಜೀವನದಲ್ಲಿ ಇವು ಪ್ರತ್ಯೇಕತೆಯನ್ನು ತರುತ್ತವೆ. ಇವು ರಾಷ್ಟ್ರ ವಿರೋಧಿಗಳೂ ಕೂಡ. ಯಾಕೆಂದರೆ ಜಾತಿ ಮತ್ತು ಜಾತಿಗಳ ನಡುವೆ ಅಸೂಯೆ ಮತ್ತು ದ್ವೇಷ ಭಾವನೆಗಳನ್ನು ಉಂಟು ಮಾಡುತ್ತವೆ.

ನಾವು ವಾಸ್ತವವಾಗಿ ಒಂದು ರಾಷ್ಟ್ರವಾಗಬೇಕೆಂದು ಬಯಸುವುದಾದರೆ ಈ ಎಲ್ಲಾ ತೊಂದರೆಗಳನ್ನು ನಿವಾರಿಸಿಕೊಳ್ಳಬೇಕಾಗುತ್ತದೆ. ಯಾಕೆಂದರೆ, ಒಂದು ರಾಷ್ಟ್ರ ಎಂಬುದು ಅಸ್ತಿತ್ವದಲ್ಲಿದ್ದರೆ, ಭ್ರಾತೃತ್ವವು ವಾಸ್ತವವಾಗುತ್ತದೆ. ಭ್ರಾತೃತ್ವವಿಲ್ಲದೆ ಸಮಾನತೆ ಮತ್ತು ಸ್ವಾತಂತ್ರ್ಯ ಎಂಬುವುದು ಕೇವಲ ಬಣ್ಣ ಬಳಿದಂತೆಯೇ.

ನಮ್ಮ ಮುಂದಿರುವ ಕರ್ತವ್ಯಗಳ ಸಂಬಂಧದಲ್ಲಿ ಇವು ನನ್ನ ಚಿಂತನೆಗಳಾಗಿರುತ್ತವೆ ಅಷ್ಟೇ. ಕೆಲವರಿಗೆ, ಇವಾವು ಸಂತೋಷವನ್ನು ಉಂಟು ಮಾಡಿರಲಿಕ್ಕಿಲ್ಲ. ಆದರೆ ನಮ್ಮ ದೇಶದಲ್ಲಿ ರಾಜಕೀಯ ಅಧಿಕಾರ ಬಹಳ ಕಾಲದಿಂದ ಕೆಲವರ ಸ್ವತ್ತಾಗಿದ್ದು ಬಹುಸಂಖ್ಯಾತರು ಪ್ರಾಣಿಗಳಂತೆ ಹಾಗೂ ಪಶುಗಳಂತೆ ಜೀವಿಸುತ್ತಿದ್ದಾರೆ ಎಂಬುವುದನ್ನು ಒತ್ತಿ ಹೇಳಬೇಕಿಲ್ಲ. ಅಧಿಕಾರವು ಕೆಲವೇ ಕೆಲವರ ಸ್ವತ್ತಾಗಿರುವ ಕಾರಣ ಬಹು ಸಂಖ್ಯಾತರಿಗೆ ಪರಿಸ್ಥಿತಿಯನ್ನು ಸುಧಾರಿಸಿಕೊಳ್ಳುವ ಅವಕಾಶವು ಇಲ್ಲದಂತಾಗಿದೆ. ಇಷ್ಟೇ ಅಲ್ಲದೇ ಜೀವನದ ಮಹತ್ವದ ಬಗೆಗಿನ ಅವರ ಆಸಕ್ತಿಯು ಉಡುಗಿ ಹೋಗುವಂತಾಗಿದೆ.

ತುಳಿತಕ್ಕೆ ಒಳಗಾದ ಈ ಜನರು ಇವರ ಆಡಳಿತಕ್ಕೆ ಬೇಸತ್ತಿದ್ದಾರೆ ಮತ್ತು ತಮ್ಮನ್ನು ತಾವೇ ಆಳಿಕೊಳ್ಳುವ ತವಕದಲ್ಲಿದ್ದಾರೆ. ದಲಿತ ವರ್ಗಗಳಲ್ಲಿ ಆತ್ಮಾವಲೋಕನದ ಸಲುವಾಗಿ ಉಮ್ಮಳಿಸುತ್ತಿರುವ ಉತ್ಕಟವಾದ ಆಕಾಂಕ್ಷೆಯು ವರ್ಗ ಸಂಘರ್ಷದಲ್ಲಿ ಪರಿಣಮಿಸದಂತೆ ನಾವು ಎಚ್ಚರ ವಹಿಸಬೇಕಾಗುತ್ತದೆ. ಹಾಗೇನಾದರೂ ಆಗಿದ್ದೆ ಆದರೆ, ರಾಷ್ಟ್ರ ಇಬ್ಬಾಗವಾದಂತೆಯೇ. ಅಂತಹದೊಂದು ದಿನ ಬಂದಿದ್ದೇ ಆದರೆ ಅದು ಘೋರ ದುರಂತ ದಿನವಾಗುತ್ತದೆ. ಯಾಕೆಂದರೆ ಅಬ್ರಹಾಂ ಲಿಂಕನ್ ಹೇಳಿರುವ ಹಾಗೆ ಯಾವ ಮನೆ ಇಬ್ಭಾಗವಾಗುತ್ತದೋ ಆ ಮನೆಗೆ ಉಳಿಗಾಲವಿಲ್ಲ.

ಸ್ವಾತಂತ್ರ್ಯವು ವಾಸ್ತವಾಗಿ ಸಂತೋಷ ಉಂಟು ಮಾಡುವ ಸಂಗತಿ. ಆದರೆ ಈ ಸ್ವಾತಂತ್ರ್ಯವು ನಮ್ಮ ಮೇಲೆ ಹೆಚ್ಚು ಜವಾಬ್ದಾರಿಗ ಳನ್ನು ಹೊರೆಸಿದೆ ಎಂಬುವುದನ್ನು ಮರೆಯದಿರೋಣ. ಸ್ವಾತಂತ್ರ್ಯದ ಮೂಲಕ, ಪ್ರತಿಯೊಂದು ತಪ್ಪು ಎಸಗಿದಾಗ ಬ್ರಿಟೀಷರ ಕಡೆಗೆ ಬೆರಳು ಮಾಡಿ ತೋರಿಸುತ್ತಿದ್ದಂತಹ ಅವಕಾಶವನ್ನು ಕಳೆದುಕೊಂಡಿದ್ದೇವೆ. ಇನ್ನು ಮುಂದೆ ಏನಾದರೂ ತಪ್ಪಾದಾಗ ನಾವು ನಮ್ಮನ್ನು ಬಿಟ್ಟು ಬೇರೆ ಯಾರನ್ನೂ ಆಪಾದಿಸಿ ಹೇಳುವಂತಿಲ್ಲ. ತಪ್ಪುಗಳು ಸಂಭವಿಸುವ ಬಹು ದೊಡ್ಡ ಅಪಾಯವಿದೆ.

ಡಾ. ಬಿ.ಆರ್.ಅಂಬೇಡ್ಕರ್

(ಸಂವಿಧಾನ ಸಭೆಯಲ್ಲಿ ಡಾ. ಅಂಬೇಡ್ಕರರು ಮಾಡಿದ ಸಮಾರೋಪ ಭಾಷಣದ ಆಯ್ದ ಭಾಗ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!

Published

on

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

  • ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ
  • ಇಂಡಿಯಾ ಗೇಟ್‌ನಿಂದ ಪೊಲೀಸ್ ಕೇಂದ್ರ ಕಚೇರಿವರೆಗೆ ಮೆರವಣಿಗೆ
  • NEET ಅಭ್ಯರ್ಥಿಗಳ ಕುಟುಂಬಸ್ಥರು, ಪೊಲೀಸ್ ದೌರ್ಜನ್ಯ ಸಂತ್ರಸ್ತರು ಮುಂಚೂಣಿಯಲ್ಲಿ
  • “ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ” ಎಂದ CJP 

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಸುದ್ದಿದಿನ,ನವದೆಹಲಿ: ದೇಶದ ಯುವಜನರಿಗೆ ನೀಡಿರುವ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (CJP) ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿದೆ. ಜುಲೈ 25ರಂದು ಸಾರ್ವಜನಿಕವಾಗಿ ನೀಡಲಾಗಿದ್ದ ಭರವಸೆಗಳಿಗೆ ಒಂದು ತಿಂಗಳು ಕಳೆದರೂ ಅವುಗಳ ಅನುಷ್ಠಾನಕ್ಕೆ ಸ್ಪಷ್ಟ ಕ್ರಮಗಳು ಗೋಚರಿಸುತ್ತಿಲ್ಲ ಎಂಬುದು CJPಯ ಪ್ರಮುಖ ಆರೋಪವಾಗಿದೆ.

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಹಾಗೂ ಬಿಜೆಪಿ-ಎನ್‌ಡಿಎ ಆಡಳಿತದ ರಾಜ್ಯಗಳು ಯುವಜನರಿಗೆ ನೀಡಿದ್ದ ಭರವಸೆಗಳ ಅನುಷ್ಠಾನವನ್ನು ಪರಿಶೀಲಿಸಿದ ಬಳಿಕ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.

http://Visit : www.suddidina.com

ಇಂಡಿಯಾ ಗೇಟ್‌ನಿಂದ ಮೆರವಣಿಗೆ

ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ನವದೆಹಲಿ ಪೊಲೀಸ್ ಕೇಂದ್ರ ಕಚೇರಿಯತ್ತ ಸಾಗಲಿದೆ. ಮೃತ NEET ಅಭ್ಯರ್ಥಿಗಳ ಕುಟುಂಬಸ್ಥರು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಲಿದ್ದಾರೆ ಎಂದು CJP ಹೇಳಿದೆ.

ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಯುವ ಸಂಘಟನೆಗಳ ಪ್ರತಿನಿಧಿಗಳು ಮತ್ತು ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸರ್ಕಾರ ನೀಡಿದ್ದ ಭರವಸೆಗಳನ್ನು ಜಾರಿಗೆ ತರಬೇಕು ಎಂಬ ಒಂದೇ ಪ್ರಮುಖ ಬೇಡಿಕೆಯೊಂದಿಗೆ ಯುವಜನರು ಶಾಂತಿಯುತವಾಗಿ ಧ್ವನಿ ಎತ್ತಲಿದ್ದಾರೆ ಎಂದು ಪಕ್ಷ ಹೇಳಿದೆ.

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

‘ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’

ಜುಲೈ 25ರಂದು ನೀಡಿದ ಭರವಸೆಗಳನ್ನು ನಂಬಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆಗಳನ್ನು ಯುವಜನರು ಉತ್ತಮ ನಂಬಿಕೆಯಿಂದ ಹಿಂಪಡೆದಿದ್ದರು. ಆದರೆ, ಭರವಸೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದು ಯುವಜನರಲ್ಲಿ ಮತ್ತೆ ಅಸಮಾಧಾನ ಮೂಡಿಸಿದೆ ಎಂದು CJP ಆರೋಪಿಸಿದೆ.

“ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ. ನಮ್ಮ ಸದುದ್ದೇಶವನ್ನು ಸರ್ಕಾರ ಯುವಜನರಿಗೆ ದ್ರೋಹ ಮಾಡುವ ಅವಕಾಶವಾಗಿ ಬಳಸಿಕೊಳ್ಳಬಾರದು” ಎಂದು CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಎಚ್ಚರಿಕೆ ನೀಡಿದೆ.

“ಭರವಸೆಗಳನ್ನು ಜಾರಿಗೆ ತರುವ ಬದಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ” 

  • CJP ಆರೋಪ

ಮಾತಿನಿಂದ ಹಿಂದೆ ಸರಿಯಲು ಸಾಧ್ಯವಿಲ್ಲ

ಜುಲೈ 25ರಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕವಾಗಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು ಎಂಬುದು CJPಯ ಆಗ್ರಹ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರ ನೋವಿನ ನಡುವೆ ನಡೆಯಲಿರುವ ಈ ಮೆರವಣಿಗೆ, ಯುವಜನರ ವಿಶ್ವಾಸ ಮತ್ತು ಸರ್ಕಾರದ ಹೊಣೆಗಾರಿಕೆಯ ಪ್ರಶ್ನೆಯನ್ನು ಮುನ್ನೆಲೆಗೆ ತರುವ ಪ್ರಯತ್ನವಾಗಿದೆ.

ಕೇಂದ್ರ ಸರ್ಕಾರ ಭರವಸೆಗಳನ್ನು ಜಾರಿಗೆ ತರುವ ಬದಲು ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ ಎಂದು CJP ಆರೋಪಿಸಿದೆ.

ಸೆಪ್ಟೆಂಬರ್ 5ರಂದು ಹೆಚ್ಚಿನ ಸಂಖ್ಯೆಯಲ್ಲಿ ಇಂಡಿಯಾ ಗೇಟ್‌ನಲ್ಲಿ ಸೇರಿ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಯುವಜನರು, ವಿದ್ಯಾರ್ಥಿಗಳು ಹಾಗೂ ಯುವ ಸಂಘಟನೆಗಳಿಗೆ CJP ಮನವಿ ಮಾಡಿದೆ. ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯಲಿದೆ ಎಂದು ಅದು ಪುನರುಚ್ಚರಿಸಿದೆ.

Continue Reading

ದಿನದ ಸುದ್ದಿ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

Published

on

KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ
KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

  • 329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್

  • 658 OMR ಕಾರ್ಬನ್ ಶೀಟ್‌ಗಳು FSLಗೆ

  • IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ED ಗಂಭೀರ ಆರೋಪ

  • ₹70–80 ಲಕ್ಷ ಲಂಚದ ಆರೋಪವೂ ತನಿಖೆಯಲ್ಲಿದೆ

  • ಪ್ರಶ್ನೆಪತ್ರ ಸಿದ್ಧತೆ, ಮುದ್ರಣದ CCTV ದೃಶ್ಯಗಳ ಬಗ್ಗೆಯೂ ಅನುಮಾನ 

ಸುದ್ದಿದಿನ,ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಈಗಾಗಲೇ ಜಾರಿ ನಿರ್ದೇಶನಾಲಯ (ED) ರಾಜ್ಯದ ವಿವಿಧೆಡೆ 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಅದರ ಬೆನ್ನಲ್ಲೇ ಅಪರಾಧ ತನಿಖಾ ಇಲಾಖೆ (CID) ಎಲ್ಲಾ 329 ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

http://Visit : www.suddidina.com

329 ಅಭ್ಯರ್ಥಿಗಳಿಗೆ ನೋಟಿಸ್ ಏಕೆ?

ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಈಗಾಗಲೇ 658 OMR ಕಾರ್ಬನ್ ಶೀಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಅವುಗಳನ್ನು ಮೂಲ OMR ಉತ್ತರ ಪತ್ರಿಕೆಗಳೊಂದಿಗೆ ಹೋಲಿಕೆ ಮಾಡಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದೆ. ಅಭ್ಯರ್ಥಿಗಳು ಗುರುತಿಸಿದ್ದ ಉತ್ತರಗಳ ಕಾರ್ಬನ್ ಪ್ರತಿಯಲ್ಲಿ ಮತ್ತು ಮೂಲ OMRನಲ್ಲಿ ವ್ಯತ್ಯಾಸವಿದೆಯೇ ಎಂಬುದನ್ನು ಪರಿಶೀಲಿಸುವುದು ತನಿಖೆಯ ಪ್ರಮುಖ ಭಾಗವಾಗಿದೆ.

ಇದೀಗ 329 ಅಭ್ಯರ್ಥಿಗಳನ್ನೂ ವಿಚಾರಣೆಗೆ ಒಳಪಡಿಸುವ CID ಕ್ರಮ ಪ್ರಕರಣದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದೆ. ಈ ವಿಚಾರಣೆಯ ಮೂಲಕ ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿದೆಯೇ, ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಅಥವಾ ಉತ್ತರಗಳ ಮಾಹಿತಿ ಮುಂಚಿತವಾಗಿ ಸಿಕ್ಕಿತೇ, OMR ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ನಡೆದಿದೆಯೇ ಎಂಬುದರ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

IAS ಅಧಿಕಾರಿಯತ್ತ ತನಿಖೆಯ ಚಿತ್ತ

ಈ ಪ್ರಕರಣದಲ್ಲಿ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಅವರು ಫೆಬ್ರವರಿ 2024ರಿಂದ ಮಾರ್ಚ್ 2026ರವರೆಗೆ KPSCಯ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ MSME ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಬೆಂಗಳೂರಿನ ನಿವಾಸ ಸೇರಿದಂತೆ ಉತ್ತರ ಪ್ರದೇಶದ ಬರೇಲಿಯಲ್ಲಿರುವ ನಿವಾಸದ ಮೇಲೂ ED ಶೋಧ ನಡೆಸಿದೆ.

ED ಆರೋಪದ ಪ್ರಕಾರ, ಗಂಗ್ವಾರ್ ಅವರು ತಮ್ಮ ಇಬ್ಬರು ಪುತ್ರರಿಗೆ KPSC ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ದೊರಕಿಸಿಕೊಡಲು ವ್ಯಕ್ತಿಯೊಬ್ಬರಿಂದ ಸುಮಾರು ₹1.1 ಕೋಟಿ ಪಡೆದಿದ್ದಾರೆ ಎನ್ನಲಾಗಿದೆ. ಈ ಆರೋಪ ಇನ್ನೂ ತನಿಖೆಯ ಹಂತದಲ್ಲಿದ್ದು, ಆರೋಪ ಸಾಬೀತಾಗಿಲ್ಲ.

ಪ್ರಶ್ನೆಪತ್ರಿಕೆ ಸಿದ್ಧತೆಯಲ್ಲೂ ಅನುಮಾನ

ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಮತ್ತು ಮುದ್ರಿಸುವ ಪ್ರಕ್ರಿಯೆಗೆ ಸಂಬಂಧಿಸಿದ CCTV ದೃಶ್ಯಾವಳಿಗಳ ಅನುಪಸ್ಥಿತಿಯನ್ನೂ ED ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಇಂತಹ ಪ್ರಕ್ರಿಯೆಯಲ್ಲಿ CCTV ದಾಖಲೆಗಳು ಪ್ರಮುಖ ಭದ್ರತಾ ಕ್ರಮವಾಗಿರುವುದರಿಂದ, ಅವುಗಳ ಲಭ್ಯತೆ ಮತ್ತು ನಿರ್ವಹಣೆಯೂ ತನಿಖೆಯ ಪ್ರಮುಖ ಅಂಶವಾಗಿದೆ.

ಇದರ ಜೊತೆಗೆ, ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ ₹70–80 ಲಕ್ಷದವರೆಗೆ ಲಂಚ ಕೇಳಲಾಗಿದೆ ಎಂಬ ಆರೋಪಗಳೂ ತನಿಖೆಯಲ್ಲಿವೆ. ಪ್ರಶ್ನೆಪತ್ರಿಕೆ ಸೋರಿಕೆ, OMR ತಿದ್ದುಪಡಿ ಮತ್ತು ನೇಮಕಾತಿ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಿದ ಆರೋಪಗಳ ಕುರಿತು ತನಿಖೆ ಮುಂದುವರಿದಿದೆ.

KPSCಯಂತಹ ನೇಮಕಾತಿ ಸಂಸ್ಥೆಯ ಮೇಲಿನ ವಿಶ್ವಾಸಕ್ಕೆ ಧಕ್ಕೆ ತರುವ ಆರೋಪಗಳಾಗಿರುವುದರಿಂದ, CID ಮತ್ತು ED ತನಿಖೆಯ ಮುಂದಿನ ಹಂತಗಳು ಮಹತ್ವ ಪಡೆದುಕೊಂಡಿವೆ. 329 ಅಭ್ಯರ್ಥಿಗಳ ವಿಚಾರಣೆ, OMR ಕಾರ್ಬನ್ ಶೀಟ್‌ಗಳ FSL ವರದಿ ಹಾಗೂ ಹಣಕಾಸು ವ್ಯವಹಾರಗಳ ಪರಿಶೀಲನೆಯ ಬಳಿಕ ಪ್ರಕರಣದ ನಿಜವಾದ ಚಿತ್ರಣ ಇನ್ನಷ್ಟು ಸ್ಪಷ್ಟವಾಗುವ ನಿರೀಕ್ಷೆಯಿದೆ.

ಮೇಲಿನ ಹಣ, ಅಕ್ರಮ ಮತ್ತು ಅಧಿಕಾರಿಯ ವಿರುದ್ಧದ ಆರೋಪಗಳು ತನಿಖಾ ಸಂಸ್ಥೆಗಳು ಮುಂದಿಟ್ಟಿರುವ ಆರೋಪಗಳಾಗಿದ್ದು, ನ್ಯಾಯಾಲಯದಲ್ಲಿ ಸಾಬೀತಾಗುವವರೆಗೆ ಆರೋಪಗಳೆಂದೇ ಪರಿಗಣಿಸಬೇಕೆಂದು ಕೋರ್ಟ್ ತಿಳಿಸಿದೆ.

 

Continue Reading

ದಿನದ ಸುದ್ದಿ

₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ

Published

on

₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
ಅನಧಿಕೃತ ನಿರ್ಮಾಣಕ್ಕೆ ಬಿಡಿಎ ‘ಬುಲ್ಡೋಜರ್’ ಆ್ಯಕ್ಷನ್: ₹25 ಕೋಟಿ ಮೌಲ್ಯದ ಆಸ್ತಿ ವಶ!

ರಾಜಾಜಿನಗರದಲ್ಲಿ ಬಿಡಿಎ ಭರ್ಜರಿ ಕಾರ್ಯಾಚರಣೆ: 13,000 ಚದರ ಅಡಿ ಜಾಗ ವಶಕ್ಕೆ

  • 13,000 ಚದರ ಅಡಿ ಪ್ರದೇಶ ತೆರವು; ಪೊಲೀಸ್ ಭದ್ರತೆಯಲ್ಲಿ ಬಿಡಿಎ ಕಾರ್ಯಾಚರಣೆ
    ನಿವೇಶನ 13 ಮತ್ತು 17ರಲ್ಲಿ ಅನಧಿಕೃತ ನಿರ್ಮಾಣ ತೆರವು; ಪೊಲೀಸ್ ಸಹಕಾರದಲ್ಲಿ ಕಾರ್ಯಾಚರಣೆ

ಸುದ್ದಿದಿನ,ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅನಧಿಕೃತ ನಿರ್ಮಾಣಗಳ ವಿರುದ್ಧದ ತನ್ನ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ರಾಜಾಜಿನಗರ ಬಡಾವಣೆಯ ಇಂಡಸ್ಟ್ರೀಯಲ್ ಸಬರ್ಬ್ 2ನೇ ಹಂತದಲ್ಲಿ ಮಹತ್ವದ ತೆರವು ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಸುಮಾರು ₹25 ಕೋಟಿ ಮೌಲ್ಯದ ಆಸ್ತಿಯನ್ನು ಪ್ರಾಧಿಕಾರ ತನ್ನ ಸುಪರ್ದಿಗೆ ಪಡೆದುಕೊಂಡಿದೆ.

ಬೆಂಗಳೂರು ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿಯ ಪೀಣ್ಯ ಗ್ರಾಮದ ಸರ್ವೆ ನಂಬರ್ 79 ಮತ್ತು 70ರಲ್ಲಿ ಬರುವ ಇಂಡಸ್ಟ್ರೀಯಲ್ ಸಬರ್ಬ್, 2ನೇ ಹಂತ, ರಾಜಾಜಿನಗರ ಬಡಾವಣೆಯ ನಿವೇಶನ ಸಂಖ್ಯೆ 13 ಮತ್ತು 17ರಲ್ಲಿ ಈ ಕಾರ್ಯಾಚರಣೆ ನಡೆದಿದೆ. ಸುಮಾರು 13,000 ಚದರ ಅಡಿ ವಿಸ್ತೀರ್ಣದ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಕಟ್ಟಡ ಹಾಗೂ ನಿರ್ಮಾಣಗಳನ್ನು ತೆರವುಗೊಳಿಸಿ, ಜಾಗವನ್ನು ಬಿಡಿಎ ವಶಕ್ಕೆ ಪಡೆದುಕೊಂಡಿದೆ.

‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ!

http://Visit : www.suddidina.com

ಅನಧಿಕೃತ ನಿರ್ಮಾಣಕ್ಕೆ ಬಿಡಿಎ ಬ್ರೇಕ್:

ಬಿಡಿಎಗೆ ಸೇರಿದ ಅಥವಾ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಜಾಗಗಳಲ್ಲಿ ನಿಯಮಬಾಹಿರವಾಗಿ ನಿರ್ಮಾಣವಾಗುತ್ತಿರುವ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳುವ ಭಾಗವಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ. ತೆರವು ಕಾರ್ಯಾಚರಣೆಯ ಬಳಿಕ ಆಸ್ತಿಯನ್ನು ಪ್ರಾಧಿಕಾರದ ನೇರ ಸುಪರ್ದಿಗೆ ತೆಗೆದುಕೊಳ್ಳಲಾಗಿದ್ದು, ಸಾರ್ವಜನಿಕ ಹಾಗೂ ಸರ್ಕಾರಿ ಆಸ್ತಿಗಳ ಸಂರಕ್ಷಣೆಗೆ ಬಿಡಿಎ ಕೈಗೊಳ್ಳುತ್ತಿರುವ ಕ್ರಮಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ.

ಸುಮಾರು ₹25 ಕೋಟಿ ಮೌಲ್ಯದ ಆಸ್ತಿ ಇರುವುದರಿಂದ, ಈ ಕಾರ್ಯಾಚರಣೆ ನಗರದ ಆಸ್ತಿ ಸಂರಕ್ಷಣೆ ಹಾಗೂ ಅನಧಿಕೃತ ನಿರ್ಮಾಣಗಳ ನಿಯಂತ್ರಣದ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ. ದೊಡ್ಡ ಪ್ರಮಾಣದ ಭೂಮಿಯಲ್ಲಿ ನಿಯಮ ಉಲ್ಲಂಘಿಸಿ ನಿರ್ಮಾಣ ನಡೆಸಿದರೆ ಯಾವುದೇ ಕಾರಣಕ್ಕೂ ಅದನ್ನು ಮುಂದುವರಿಸಲು ಅವಕಾಶ ನೀಡುವುದಿಲ್ಲ ಎಂಬ ಸಂದೇಶವನ್ನು ಈ ಕ್ರಮ ನೀಡಿದೆ.

https://x.com/BDAOfficialGok/status/2092121239175512436?s=20

ಬಹು ಇಲಾಖೆಗಳ ಸಮನ್ವಯದಲ್ಲಿ ಕಾರ್ಯಾಚರಣೆ:

ತೆರವು ಕಾರ್ಯಾಚರಣೆಯನ್ನು ಬಿಡಿಎಯ ವಲಯ ಆಯುಕ್ತರು, ಆರಕ್ಷಕ ಅಧೀಕ್ಷಕರು, ಅಭಿಯಂತರ ಅಧಿಕಾರಿ-1, ಕಾರ್ಯನಿರತ ಆರಕ್ಷಕ ಪಡೆ, ಪಶ್ಚಿಮ ವಿಭಾಗದ ಅಭಿಯಂತರರು ಹಾಗೂ ಸರ್ವೆಯರ್‌ಗಳು ಒಳಗೊಂಡ ತಂಡ ಕೈಗೊಂಡಿತು. ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಗಿದ್ದು, ಯಾವುದೇ ಅಡಚಣೆ ಉಂಟಾಗದಂತೆ ಅಗತ್ಯ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು.

ಸ್ಥಳ ಪರಿಶೀಲನೆ, ನಿರ್ಮಾಣ ತೆರವು ಹಾಗೂ ಜಾಗದ ಸ್ವಾಧೀನ ಪ್ರಕ್ರಿಯೆಯನ್ನು ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯದಿಂದ ಪೂರ್ಣಗೊಳಿಸಿದರು. ಕಾರ್ಯಾಚರಣೆ ಬಳಿಕ ತೆರವುಗೊಳಿಸಲಾದ ಪ್ರದೇಶವನ್ನು ಬಿಡಿಎ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ.

ನಗರದ ಭೂ ಸಂಪತ್ತಿನ ರಕ್ಷಣೆಗೆ ಕಠಿಣ ಹೆಜ್ಜೆ

ಬೆಂಗಳೂರು ವೇಗವಾಗಿ ವಿಸ್ತರಿಸುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಹಾಗೂ ಪ್ರಾಧಿಕಾರಕ್ಕೆ ಸೇರಿದ ಜಾಗಗಳ ಮೇಲೆ ಅಕ್ರಮ ನಿರ್ಮಾಣಗಳು ನಡೆಯದಂತೆ ನಿಗಾ ವಹಿಸುವುದು ಪ್ರಮುಖ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಬಿಡಿಎ ಕೈಗೊಂಡಿರುವ ₹25 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಳ್ಳುವ ಕ್ರಮ, ಅನಧಿಕೃತ ನಿರ್ಮಾಣಗಳ ವಿರುದ್ಧದ ಕಾರ್ಯಾಚರಣೆಗೆ ಮತ್ತಷ್ಟು ಬಲ ನೀಡಿದೆ.

ಬೆಂಗಳೂರು ನಗರದ ಭೂ ಸಂಪತ್ತನ್ನು ಕಾಪಾಡುವ ನಿಟ್ಟಿನಲ್ಲಿ ಬಿಡಿಎಯ ಈ ತೆರವು ಕಾರ್ಯಾಚರಣೆ, ನಿಯಮ ಉಲ್ಲಂಘಿಸುವವರಿಗೆ ಎಚ್ಚರಿಕೆಯ ಸಂದೇಶವಾಗಿದ್ದು, ಮುಂದಿನ ದಿನಗಳಲ್ಲೂ ಇಂತಹ ಕಾರ್ಯಾಚರಣೆಗಳು ಮುಂದುವರಿಯುವ ಸಾಧ್ಯತೆ ಇದೆ.

Continue Reading
Advertisement

Title

ದಿನದ ಸುದ್ದಿ17 hours ago

ಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ವಿವಿಧ ಯೋಜನೆಗಳಾದ ಸಾಫ್ಟ್ ಸೀಡ್ ಕ್ಯಾಪಿಟಲ್, ಶೇ.60 ರಷ್ಟು ಸಹಾಯಧನ ಸಾಲ ಶುಲ್ಕ ಮರುಪಾವತಿ ಮತ್ತು ವಿದ್ಯುಚ್ಚಕ್ತಿ ಸಹಾಯಧನ...

ದಿನದ ಸುದ್ದಿ17 hours ago

ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ ಇಂಡಿಯಾ ಗೇಟ್‌ನಿಂದ ಪೊಲೀಸ್ ಕೇಂದ್ರ...

KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ
ದಿನದ ಸುದ್ದಿ17 hours ago

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ 329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್ 658 OMR ಕಾರ್ಬನ್...

ದಿನದ ಸುದ್ದಿ18 hours ago

ರಿಲೀಸ್‌ಗೂ ಮುನ್ನ ಧರ್ಮಸ್ಥಳದತ್ತ ರಾಕಿಂಗ್‌ ಸ್ಟಾರ್‌ ಯಶ್‌; ‘ಟಾಕ್ಸಿಕ್‌’ ಗೆಲುವಿಗಾಗಿ ವಿಶೇಷ ಪೂಜೆ

ಚೆನ್ನೈ ಪ್ರೀ-ರಿಲೀಸ್‌ ಕಾರ್ಯಕ್ರಮದ ಬಳಿಕ ನೇರವಾಗಿ ಧರ್ಮಸ್ಥಳಕ್ಕೆ ಆಗಮಿಸಿದ ಯಶ್‌; ಕೆಜಿಎಫ್‌-2 ಬಳಿಕ ಮತ್ತೊಮ್ಮೆ ಹಳೆಯ ಸಂಪ್ರದಾಯ ಮುಂದುವರಿಕೆ ಟಾಕ್ಸಿಕ್‌ ರಿಲೀಸ್‌ಗೂ ಮುನ್ನ ಧರ್ಮಸ್ಥಳದಲ್ಲಿ ಯಶ್‌! ಮಂಜುನಾಥನ...

₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ ₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
ದಿನದ ಸುದ್ದಿ18 hours ago

₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ

ರಾಜಾಜಿನಗರದಲ್ಲಿ ಬಿಡಿಎ ಭರ್ಜರಿ ಕಾರ್ಯಾಚರಣೆ: 13,000 ಚದರ ಅಡಿ ಜಾಗ ವಶಕ್ಕೆ 13,000 ಚದರ ಅಡಿ ಪ್ರದೇಶ ತೆರವು; ಪೊಲೀಸ್ ಭದ್ರತೆಯಲ್ಲಿ ಬಿಡಿಎ ಕಾರ್ಯಾಚರಣೆ ನಿವೇಶನ 13...

‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ! ‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ!
ದಿನದ ಸುದ್ದಿ18 hours ago

ಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!

‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ! ಗಡುವು ಮುಕ್ತಾಯ, ಇನ್ನು ಬಿ-ಖಾತೆಯಿಂದ ಎ-ಖಾತೆಗೆ...

ಇ-ಕಾಮರ್ಸ್‌ ತಾಣಗಳಲ್ಲಿ ದತ್ತೂರಿ ಹಣ್ಣು, ಬೀಜ ಮಾರಾಟಕ್ಕೆ ಕಡಿವಾಣ! ಇ-ಕಾಮರ್ಸ್‌ ತಾಣಗಳಲ್ಲಿ ದತ್ತೂರಿ ಹಣ್ಣು, ಬೀಜ ಮಾರಾಟಕ್ಕೆ ಕಡಿವಾಣ!
ದಿನದ ಸುದ್ದಿ19 hours ago

ಆನ್‌ಲೈನ್‌ನಲ್ಲಿ ಮಾರಾಟವಾಗ್ತಿತ್ತು ‘ವಿಷದ ಹಣ್ಣು’! ಇ-ಕಾಮರ್ಸ್‌ ದೈತ್ಯರಿಗೆ ನೋಟಿಸ್‌

ಇ-ಕಾಮರ್ಸ್‌ ತಾಣಗಳಲ್ಲಿ ದತ್ತೂರಿ ಹಣ್ಣು, ಬೀಜ ಮಾರಾಟಕ್ಕೆ ಕಡಿವಾಣ! ಆನ್‌ಲೈನ್‌ನಲ್ಲಿ ‘ವಿಷದ ಹಣ್ಣು’ ಮಾರಾಟ ಅಮೆಜಾನ್‌, ಫ್ಲಿಪ್‌ಕಾರ್ಟ್‌, ಮಿನಿಟ್ಸ್‌ಗೆ ಸರ್ಕಾರದೊಂದ ನೋಟಿಸ್‌ ಈ ಹಣ್ಣು ಖರೀದಿಸಿದ್ರೆ ಅಪಾಯ,...

‘24 ಗಂಟೆ ನೀರು’ ಕನಸಿಗೆ ಬರದ ಬಿಸಿ: ತುಂಗಭದ್ರಾ ನೀರಿನ ಹರಿವು ಕುಸಿತ, ಹರಿಹರದಲ್ಲಿ ಕುಡಿಯುವ ನೀರಿನ ಆತಂಕ ‘24 ಗಂಟೆ ನೀರು’ ಕನಸಿಗೆ ಬರದ ಬಿಸಿ: ತುಂಗಭದ್ರಾ ನೀರಿನ ಹರಿವು ಕುಸಿತ, ಹರಿಹರದಲ್ಲಿ ಕುಡಿಯುವ ನೀರಿನ ಆತಂಕ
ದಿನದ ಸುದ್ದಿ20 hours ago

ತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ

ಮಳೆ ಕೈಕೊಟ್ಟಿತು, ತುಂಗಭದ್ರಾ ಹರಿವು ಕುಸಿಯಿತು: ಹರಿಹರದ ‘ಜಲಸಿರಿ’ಗೆ ನೀರಿನ ಬಿಕ್ಕಟ್ಟಿನ ಬಿಸಿ ಜಾಕ್‌ವೆಲ್ ಬಳಿ ತಾತ್ಕಾಲಿಕ ಕಲ್ಲಿನ ತಡೆಗೋಡೆ ನಿರ್ಮಾಣ ಮಳೆ ಮತ್ತಷ್ಟು ತಡವಾದರೆ ಸಂಪೂರ್ಣ...

ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ ! ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !
ದಿನದ ಸುದ್ದಿ21 hours ago

ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !

ಹಿರಿಯೂರು/ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ್ ಶಾಮನೂರು ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ದಾವಣಗೆರೆಗೆ ಪ್ರಯಾಣಿಸುತ್ತಿದ್ದ ವೇಳೆ, ಕೆ.ಆರ್....

ಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ ಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
ದಿನದ ಸುದ್ದಿ21 hours ago

ಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ

ದಾವಣಗೆರೆ: ಭದ್ರಾ ಡ್ಯಾಂ ನೀರು ಹರಿಸಬೇಕು ಎಂದು ಒತ್ತಾಯಿಸಿ ಭಾರತೀಯ ರೈತ ಒಕ್ಕೂಟ ಕರೆ ನೀಡಿದ್ದ ದಾವಣಗೆರೆ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಜೀವನ ಎಂದಿನಂತೆ...

Trending