Connect with us

ಬಹಿರಂಗ

ಚುನಾವಣಾ ಅಕ್ರಮದ ಮೂಲಕ ಸೋಲಿಸಲ್ಪಟ್ಟ ‘ಪ್ರಜಾಪ್ರಭುತ್ವದ ಪಿತ’

Published

on

1951-52 ಡಿಸೆಂಬರ್-ಜನವರಿ ತಿಂಗಳಲ್ಲಿ ಈ ದೇಶದಲ್ಲಿ ಫ್ರಥಮ ಲೋಕಸಭಾ ಚುನಾವಣೆ ನಡೆಯಿತು. 1952ರ ಜನವರಿ 3 ರಂದು ಮತದಾನ ನಡೆದ ಆ ಚುನಾವಣೆಯಲ್ಲಿ ಅಂಬೇಡ್ಕರರು ಬಾಂಬೆ(ಇಂದಿನ ಮುಂಬೈ) ನಗರ ಉತ್ತರ ಕ್ಷೇತ್ರದಿಂದ ಸ್ಪರ್ಧಿಸಿದ್ದರು. ಬಾಂಬೆ ನಗರ ಉತ್ತರ ಕ್ಷೇತ್ರ, ಅಂದಿನ ಜನಪ್ರತಿನಿಧಿ ಕಾಯ್ದೆಯ ಪ್ರಕಾರ ದ್ವಿಸದಸ್ಯ ಕ್ಷೇತ್ರವಾಗಿತ್ತು. ಅಂದರೆ ಆ ಕ್ಷೇತ್ರದಿಂದ ಓರ್ವ ಸಾಮಾನ್ಯ ವರ್ಗದ ಸದಸ್ಯ ಮತÀ್ತು ಓರ್ವ ಪರಿಶಿಷ್ಟಜಾತಿಯ ಸದಸ್ಯ ಹೀಗೆ ಇಬ್ಬರೂ ಆಯ್ಕೆಯಾಗಬೇಕಿತ್ತು.

ಈ ಪ್ರಕಾರ ಅಲ್ಲಿ ಚುನಾವಣೆ ಘೋಷಣೆಯಾಗಿ 11ಜನ ನಾಮಪತ್ರ ಸಲ್ಲಿಸಿ ಮೂವರು ನಾಮಪತ್ರ ವಾಪಸ್ ಪಡೆದು ಕಣದಲ್ಲಿ 8ಜನ ಅಭ್ಯರ್ಥಿಗಳು ಉಳಿದರು. ಅಂದಹಾಗೆ ಆ 8ಜನ ಅಭ್ಯರ್ಥಿಗಳಲ್ಲಿ ಪರಿಶಿಷ್ಟಜಾತಿಯ ಅಭ್ಯರ್ಥಿಗಳೂ ಇದ್ದರು ಮತ್ತು ಸಾಮಾನ್ಯ ಅಭ್ಯರ್ಥಿಗಳೂ ಇದ್ದರು ಮತ್ತು ಯಾಕೆ ಹೀಗೆ ಇಬ್ಬರನ್ನೂ ಒಟ್ಟಿಗೆ ಮಾಡಲಾಗಿತ್ತೆಂದರೆ ಪರಿಶಿಷ್ಟರು, ಸಾಮಾನ್ಯ ಕ್ಷೇತ್ರಕ್ಕೆ ಸ್ಪರ್ಧಿಸಲು ಅವರೂ ಅರ್ಹರಾದುದರಿಂದ ಸಾಮಾನ್ಯ ಕ್ಷೇತ್ರ ಮತ್ತು ಪರಿಶಿಷ್ಟರ ಕ್ಷೇತ್ರ ಹೀಗೆ ಎರಡನ್ನೂ ಒಟ್ಟಿಗೆ ಮಿಶ್ರ ಮಾಡಲಾಗಿತ್ತು. ಅಂದಹಾಗೆ ಈ ಮಿಶ್ರ ದ್ವಿಸದಸ್ಯ ಕ್ಷೇತ್ರದಲ್ಲಿ ಮೊದಲ ಸ್ಥಾನವನ್ನು ಪರಿಶಿಷ್ಟ ಅಭ್ಯರ್ಥಿಯೇ ಪಡೆದಿದ್ದರೆ ಸಾಮಾನ್ಯ ಅಭ್ಯರ್ಥಿಯಾಗಿ ಪರಿಶಿಷ್ಟಜಾತಿಯ ಅಭ್ಯರ್ಥಿಯೇ ಆಯ್ಕೆಯಾಗಬಹುದಿತ್ತು ಮತ್ತು ಯಥಾಪ್ರಕಾರ ಮೀಸಲು ಕ್ಷೇತ್ರದಿಂದಲೂ ಮತ್ತೋರ್ವ ಪರಿಶಿಷ್ಟ ಆಯ್ಕೆಯಾಗುತ್ತಿದ್ದ. ಅಕಸ್ಮಾತ್ ಮೊದಲ ಸ್ಥಾನದಲ್ಲಿ ಸಾಮಾನ್ಯ ಅಭ್ಯರ್ಥಿಯೇ ಇದ್ದರೆ ಸಹಜವಾಗಿ ಆತ ಸಾಮಾನ್ಯ ಕ್ಷೇತ್ರದ ಅಭ್ಯರ್ಥಿಯಾಗಿ ಆಯ್ಕೆಯಾಗುತ್ತಿದ್ದ ಮತ್ತು ಉಳಿದ ಪರಿಶಿಷ್ಟಜಾತಿಯ ಸ್ಥಾನಕ್ಕೆ ಪರಿಶಿಷ್ಟ ಅಭ್ಯರ್ಥಿಗಳಲ್ಲಿ ಯಾರು ಹೆಚ್ಚು ಮತ ಪಡೆದಿರುತ್ತಾರೋ ಅವರು ಆಯ್ಕೆಯಾಗುತ್ತಿದ್ದರು. ಒಟ್ಟಾರೆ ದ್ವಿಸದಸ್ಯ ಸ್ಥಾನದ ಆಯ್ಕೆಯ ಈ ಪ್ರಕ್ರಿಯೆ ಗೊಂದಲಮಯವಾಗೇನು ಇರಲಿಲ್ಲ.

ದ್ವಿಸದಸ್ಯ ಈ ಕ್ಷೇತ್ರದಲ್ಲಿ ಮತದಾನ ಪ್ರಕ್ರಿಯೆ ಹೇಗಿತ್ತೆಂದರೆ ಕಣದಲ್ಲಿ ಅಭ್ಯರ್ಥಿಗಳು 8 ಮಂದಿ ಇದ್ದುದರಿಂದ ಪ್ರತೀ ಮತದಾನ ಕೇಂದ್ರದಲ್ಲಿಯೂ ಪ್ರತೀ ಅಭ್ಯರ್ಥಿಗೆ ಒಂದರಂತೆ 8 ಮತ ಪಟ್ಟಿಗೆಗಳನ್ನು(ಬೂತ್‍ಗಳನ್ನು) ಇಡಲಾಗಿತ್ತು. ಮತದಾರನಿಗೆ ಸಾಮಾನ್ಯ ಕ್ಷೇತ್ರಕ್ಕೊಂದು ಮತ್ತು ಮೀಸಲು ಕ್ಷೇತ್ರಕ್ಕೊಂದು ಹೀಗೆ ಎರಡು ಬೇರೆ ಬೇರೆ ಬಣ್ಣದ ಮತ ಪತ್ರಗಳನ್ನು ನೀಡಲಾಗಿತ್ತು. ಸಾಮಾನ್ಯ ಕ್ಷೇತ್ರದ ಮತಪತ್ರದಲ್ಲಿ ಪರಿಶಿಷ್ಟ ಅಭ್ಯರ್ಥಿಗಳನ್ನೂ ಒಳಗೊಂಡಂತೆ ಎಲ್ಲಾ ಎಂಟು ಅಭ್ಯರ್ಥಿಗಳ ಹೆಸರು ಮತ್ತು ಚಿಹ್ನೆಗಳಿದ್ದವು. ಪರಿಶಿಷ್ಟರ ಮೀಸಲಿನ ಮತಪತ್ರದಲ್ಲಿ ಕೇವಲ ಪರಿಶಿಷ್ಟ ಅಭ್ಯರ್ಥಿಗಳ ಹೆಸರು ಮತ್ತು ಚಿಹ್ನೆಗಳು ಮಾತ್ರ ಇದ್ದವು. ಮತದಾರ ಆ ಎರಡೂ ಮತಪತ್ರಗಳನ್ನು ಪಡೆದು ಎರಡರಲ್ಲೂ ತನಗೆ ಇಷ್ಟವಾದ ಅಭ್ಯರ್ಥಿಗಳ ಚಿಹ್ನೆಗಳಿಗೆ ಮುದ್ರೆಯೊತ್ತಿ ಸಹಿ ಮಾಡಿ ಸಂಬಂಧಿಸಿದ ಆ ಅಭ್ಯರ್ಥಿಗಳ ಮತಪೆಟ್ಟಿಗೆಗಳಲ್ಲಿ ಮಾತ್ರ ಹಾಕಬೇಕಿತ್ತು.

ಈ ಹಿನ್ನೆಲೆಯಲ್ಲಿ ಮತದಾರನೋರ್ವ ಅಭ್ಯರ್ಥಿಯೊಬ್ಬರಿಗೆ ತಾನು ನೀಡಿದ ಮತವನ್ನು, ಸಂಬಂಧಿತ ಮತಪತ್ರವನ್ನು ಅದೇ ಅಭ್ಯರ್ಥಿಯ ಮತಪೆಟ್ಟಿಗೆಯಲ್ಲಿ ಹಾಕದೆ ಬೇರೆ ಅಭ್ಯರ್ಥಿಯ ಮತಪೆಟ್ಟಿಗೆಗೆ ಹಾಕಿದರೆ ಅದು ಕುಲಗೆಟ್ಟ ಮತವಾಗುತ್ತಿತ್ತು. ಗಮನಾರ್ಹವೆಂದರೆ ಮತದಾರ ತನಗೆ ನೀಡಲಾದ ಎರಡೂ ಮತಪತ್ರಗಳನ್ನು ತನ್ನಿಷ್ಟದ ಒಂದೇ ಅಭ್ಯರ್ಥಿಯ ಮತಪೆಟ್ಟಿಗೆಗೆ ಹಾಕಿದರೂ ಅದರಲ್ಲಿ ಒಂದು ಮತ ಕುಲಗೆಡುತ್ತಿತ್ತು ಈ ನಿಟ್ಟಿನಲ್ಲಿ ಇದನ್ನು ‘ಹಾಗೆ ಮಾಡುವುದು ಅಕ್ರಮ’ ಎಂದು ಅಂದಿನ ಜನಪ್ರತಿನಿಧಿ ಕಾಯಿದೆ ಸ್ಪಷ್ಟವಾಗೇ ಘೋಷಿಸಿತ್ತು. ಇದಲ್ಲದೆ ಮತದಾರ ತನಗೆ ಕೇವಲ ಒಂದು ಓಟು ಹಾಕುವ ಮಾತ್ರ ಇಚ್ಚೆ ಇದೆ, ಇನ್ನೊಂದು ಓಟು ಹಾಕುವ ಇಚ್ಚೆ ಇಲ್ಲ ಎಂದರೆ ಆತ ತನ್ನಿಷ್ಟದ ಆ ಒಂದು ಓಟನ್ನು ಮಾತ್ರ ಹಾಕಿ ಉಳಿದ ಒಂದು ಮತಪತ್ರವನ್ನು ವಾಪಸ್ ಮತಗಟ್ಟೆಯ ಅಧಿಕಾರಿಗೆ ನೀಡುವ ಅವಕಾಶವೂ ದ್ವಿಸದಸ್ಯ ಆ ಕ್ಷೇತ್ರದಲ್ಲಿ ಇತ್ತು.

ಈ ಪ್ರಕಾರ ಅಂಬೇಡ್ಕರರು ಸ್ಪರ್ಧಿಸಿದ್ದ ಬಾಂಬೆ ನಗರ ಉತ್ತರ ಆ ಕ್ಷೇತ್ರಕ್ಕೆ 1952 ಜನವರಿ 3 ರಂದು ಚುನಾವಣೆ ನಡೆದು ಜನವರಿ 7ರಂದು ಮತಎಣಿಕೆ ಪ್ರಾರಂಭವಾಗಿ ಜನವರಿ 11ಕ್ಕೆ ಎಣಿಕೆ ಮುಕ್ತಾಯವಾಯಿತು. ಫಲಿತಾಂಶವನ್ನು ಕ್ರಮಸಂಖ್ಯೆ, ಪಡೆದ ಮತಗಳು ಮತ್ತು ಆ ಅಭ್ಯರ್ಥಿಗಳ ಮತಪೆಟ್ಟಿಗೆಗಳಲ್ಲಿ ಬಿದ್ದ ಬೇರೆ ಅಭ್ಯರ್ಥಿಗಳ ಮತಗಳು ಅರ್ಥಾತ್ ಕುಲಗೆಟ್ಟ ಮತಗಳ ಪ್ರಕಾರ ಪಟ್ಟಿಮಾಡಿ ದಾಖಲಿಸುವುದಾದರೆ..

ಅಭ್ಯರ್ಥಿ ಪಡೆದ ಮತ @ ಕುಲಗೆಟ್ಟ ಮತ

1. ಡಾ.ಅಂಬೇಡ್ಕರ್ * 1,23,576 @ 2921
2. ಅಶೋಕ್ ಆರ್.ಮೆಹ್ತಾ * 1,39,741 @ 5,597
3. ಎಸ್.ಎ.ಡಾಂಗೆ * 96,755 @ 39,165
4. ಗೋಪಾಲ್ ವಿ.ದೇಶ್‍ಮುಖ್ * 40,786 @ 6,634
5. ವಿಠಲ್ ಬಿ.ಗಾಂಧಿ * 1,49,138 @ 10,881
6. ಕೇಶವ ಬಿ.ಜೋಶಿ * 15,195 @ 1,168
7. ನಾರಾಯಣ್ ಎಸ್.ಕಜ್ರೋಳ್ಕರ್ * 1,38,137 @ 6,892
8. ನೀಲಕಾಂತ್ ಬಿ.ಪಾರುಯೇಕರ್ * 12,560 @ 1,025

ಈ ಪಟ್ಟಿಯ ಪ್ರಕಾರ ಎರಡು ಸ್ಥಾನ ಇದ್ದ ಈ ಕ್ಷೇತ್ರದಲ್ಲಿ ಸಾಮಾನ್ಯ ಕ್ಷೇತ್ರದಿಂದ ಸಾಮಾನ್ಯ ಅಭ್ಯರ್ಥಿಯಾಗಿ ಅತಿ ಹೆಚ್ಚು ಮತ ಪಡೆದ(1,49,138) ವಿಠಲ್ ಬಿ.ಗಾಂಧಿ ಆಯ್ಕೆಯಾದರೆ ಪರಿಶಿಷ್ಟ ಮೀಸಲು ಕ್ಷೇತ್ರದಿಂದ ನಾರಾಯಣ್ ಎಸ್.ಕಜ್ರೋಳ್ಕರ್ 1,38,137 ಮತ ಪಡೆದು ಆಯ್ಕೆಯಾದರು. 1,23,576 ಮತ ಪಡೆದ ಅಂಬೇಡ್ಕರರು ಮೀಸಲು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕಜ್ರೋಳ್ಕರ್ ವಿರುದ್ಧ 14,561 ಮತಗಳ ಅಂತರದಿಂದ ಸೋತರೆ ಸಾಮಾನ್ಯ ಕ್ಷೇತ್ರದಲ್ಲಿ ಅಂಬೇಡ್ಕರರ ಎಸ್‍ಸಿಎಫ್(ಷೆಡ್ಯೂಲ್ಡ್ ಕ್ಯಾಸ್ಟ್ ಫೆಡರೇಷನ್) ಪಕ್ಷದ ಜೊತೆ ಹೊಂದಾಣಿಕೆ ಮಾಡಿಕೊಂಡಿದ್ದ ಸೋಷಿಯಲಿಸ್ಟ್ ಪಾರ್ಟಿಯ ಅಶೋಕ್ ಆರ್.ಮೆಹ್ತಾ 1,39,741 ಮತ ಪಡೆದು ಅದೇ ಕಾಂಗ್ರೆಸ್‍ನ ವಿಠಲ್ ಬಿ.ಗಾಂಧಿಯವರ ಎದುರು 9,397 ಮತಗಳ ಅಂತರದಿಂದ ಪರಾಭವಗೊಂಡಿದ್ದರು.

ಅಂದಹಾಗೆ ಇಲ್ಲಿ ವ್ಯಾಪಕವಾಗಿ ದಾಖಲಿಸಲ್ಪಟ್ಟ ಕುಲಗೆಟ್ಟ ಮತಗಳು? ಅಂಬೇಡ್ಕರರು ಸೋತಿದ್ದೇ ಅಥವಾ ಸೋಲಿಸಲ್ಪಟ್ಟಿದ್ದೇ ಕುಲಗೆಡಿಸಲ್ಪಟ್ಟ ಈ ಮತಗಳ ಕಾರಣಕ್ಕಾಗಿ! ಸೋತ ನಂತರ ಸ್ವತಃ ಅಂಬೇಡ್ಕರರು ಈ ಸಂಬಂಧ 1952 ಏಪ್ರಿಲ್ 21ರಂದು ಅಂದಿನ ಚುನಾವಣಾ ಆಯೋಗಕ್ಕೆ ದೂರು ದಾಖಲಿಸುತ್ತಾರೆ ಮತ್ತು ತಮ್ಮ ಆ ದೂರಿನಲ್ಲಿ ಬಾಬಾಸಾಹೇಬರು ಅತಿ ಹೆಚ್ಚು ಕುಲಗೆಟ್ಟ ಮತಗಳನ್ನು ‘ಪಡೆದ’ ಕಮ್ಯೂನಿಸ್ಟ್ ಪಕ್ಷದ ನಾಯಕ ಶ್ರೀಪಾದ ಅಮೃತ ಡಾಂಗೆ ಮತ್ತು ಪಕ್ಷೇತರ ಅಭ್ಯರ್ಥಿ ಗೋಪಾಲ್ ವಿ.ದೇಶ್‍ಮುಖ್, ಈ ಇಬ್ಬರೂ ಅಭ್ಯರ್ಥಿಗಳು ನಡೆಸಿದ ಅಕ್ರಮಗಳನ್ನು ಹೂಡಿದ ವಾಮಮಾರ್ಗಗಳನ್ನು ಹೇಳುತ್ತಾ ಹೋಗುತ್ತಾರೆ. (ಅಂಬೇಡ್ಕರ್ ಬರಹಗಳು, ಇಂಗ್ಲಿಷ್ ಸಂ.17, ಭಾಗ.1, ಪು.411).

ಅಂಬೇಡ್ಕರರ ಆ ದೂರಿನ ಮುಖ್ಯಾಂಶಗಳನ್ನು ಪ್ರಸ್ತಾಪಿಸುವುದಾದರೆ, ಮೊದಲೇ ಹೇಳಿದ ಹಾಗೆ ಒಬ್ಬ ಮತದಾರ ತನ್ನ ಎರಡೂ ಓಟುಗಳನ್ನು ಒಬ್ಬನೇ ಅಭ್ಯರ್ಥಿಯ ಮತಪೆಟ್ಟಿಗೆಗೆ ಹಾಕುವುದು ತಪ್ಪು, ಅದು ಕುಲಗೆಡುತ್ತದೆ. ಆದರೆ ಆಶ್ಚರ್ಯವೆಂದರೆ ಹಾಗೆ ಮತಗಳನ್ನು ಕುಲಗೆಡಿಸಲೆಂದೇ ಮೇಲ್ಕಂಡ ಈ ಇಬ್ಬರು ಅಭ್ಯರ್ಥಿಗಳು ಚುನಾವಣೆಯಲ್ಲಿ ಭರಪೂರ ಪ್ರಚಾರ ನಡೆಸಿದ್ದರು. ಹೀಗೆ ಮತಗಳನ್ನು ಕುಲಗೆಡಿಸುವುದರಿಂದ ತಾವು ಗೆಲ್ಲಲಾಗುವುದಿಲ್ಲ ಎಂದು ಈ ಇಬ್ಬರೂ ಅಭ್ಯರ್ಥಿಗಳಿಗೂ ಗೊತ್ತಿತ್ತು. ಆದರೆ ಅವರ ಅಂತಹ ನಡೆಯ ಒಟ್ಟಾರೆ ಉದ್ದೇಶ? ಅಂಬೇಡ್ಕರರನ್ನು ಸೋಲಿಸುವುದಾಗಿತ್ತು!

ಈ ಹಿನ್ನೆಲೆಯಲ್ಲಿ ಅತಿ ಹೆಚ್ಚು ಅಂದರೆ 39,165 ಕುಲಗೆಟ್ಟ ಮತಗಳನ್ನು ಪಡೆದ ಕಮ್ಯೂನಿಸ್ಟ್ ನಾಯಕ ಎಸ್.ಎ.ಡಾಂಗೆ ಪ್ರಚಾರದ ಸಮಯದಲ್ಲಿ ಹೊರಡಿಸಿದ್ದ ಒಂದು ಕರಪತ್ರದಲ್ಲಿ ಕಣದಲ್ಲಿರುವ ಪ್ರಚಂಡ ಅಭ್ಯರ್ಥಿ ತಾನಾಗಿದ್ದು ಮತದಾರರು ‘ತಮ್ಮೆರಡು ಓಟುಗಳನ್ನು’ ನನಗೇ ನೀಡಬೇಕು ಎಂದು ಆಗ್ರಹಿಸಿದ್ದರು! ಅಲ್ಲದೆ ಅದೇ ಡಾಂಗೆಯವರು ತಮ್ಮ ಪಕ್ಷ ಕಮ್ಯೂನಿಸ್ಟ್ ಪಕ್ಷದ ಮುಖವಾಣಿ ‘ಯುಗಾಂತರ’ ಎಂಬ ಮರಾಠಿ ವಾರಪತ್ರಿಕೆಯಲ್ಲಿ ಹೊರಡಿಸಿದ್ದ ಜಾಹೀರಾತಿನಲ್ಲಿ ‘ಮತದಾರರು ತಮ್ಮ ಎರಡೂ ಓಟುಗಳನ್ನು’ ತಮ್ಮ ಒಂದೇ ಡಬ್ಬಕ್ಕೆ ಹಾಕಬೇಕು ಎಂದು ತಮ್ಮ ಗುರುತಾದ ‘ಇಂಜಿನ್’ ಚಿತ್ರ ಸಮೇತ ಕೋರಿದ್ದರು! ಡಾಂಗೆಯವರ ಒಟ್ಟಾರೆ ಉದ್ದೇಶ ಸ್ಪಷ್ಟ ಇತ್ತು ಅಂದರೆ ಅದು ತನಗೆ ಲಾಭವಾಗಬೇಕು ಎಂದಲ್ಲ, ಬದಲಿಗೆ ಅಂಬೇಡ್ಕರರಿಗೆ ನಷ್ಟವಾಗಬೇಕು ಎಂದು!

ಈ ಸಂಬಂಧ ಕರಪತ್ರವೊಂದರಲ್ಲಿ ಕುದ್ದು ಅಂಬೇಡ್ಕರರ ಹೆಸರನ್ನೇ ಉಲ್ಲೇಖಿಸಿದ್ದ ಸದರಿ ಡಾಂಗೆ “ಪರಿಶಿಷ್ಟ ಜಾತಿಗೆ ಸೇರಿದ್ದ ಅಂಬೇಡ್ಕರರು ದ್ವಿಸದಸ್ಯ ಈ ಕ್ಷೇತ್ರದಲ್ಲಿ ಸಾಮಾನ್ಯ ಅಭ್ಯರ್ಥಿ ಮತ್ತು ಪರಿಶಿಷ್ಟ ಜಾತಿಯ ಅಭ್ಯರ್ಥಿ ಹೀಗೆ ಎರಡೂ ಸ್ಥಾನಗಳ ಅಭ್ಯರ್ಥಿಯಾಗುವ ಅವಕಾಶ ಹೊಂದಿದ್ದಾರೆ. ಆದುದರಿಂದ ಪರಿಶಿಷ್ಟಜಾತಿಗೆ ಸೇರಿಲ್ಲದ ಮತದಾರರು ಪರಿಶಿಷ್ಟಜಾತಿಯ ಅಂಬೇಡ್ಕರರಿಗೆ ಓಟು ಕೊಟ್ಟರೆ ಅದು ಪರಿಶಿಷ್ಟರ ಮತ ಹಕ್ಕನ್ನು ಕಸಿದುಕೊಂಡಂತೆ ಆಗುತ್ತದೆ. ಆದ್ದರಿಂದ ಮತದಾರರು ತಮ್ಮ ಎರಡೂ ಮತಗಳನ್ನು ನನ್ನ ‘ಇಂಜಿನ್’ ಗುರುತಿಗೇ ನೀಡಿ”!

ಅಬ್ಬಾ! ಎಂತಹ ತಂತ್ರ! ಸಾಮಾನ್ಯ ಕ್ಷೇತ್ರ ಆಗಿದ್ದ ಆ ಬಾಂಬೆ ಉತ್ತರ ಕ್ಷೇತ್ರದಿಂದ ಅಂಬೇಡ್ಕರ್ ಕೇವಲ ಪರಿಶಿಷ್ಟರ ಓಟುಗಳಿಂದ ಮಾತ್ರ ಗೆಲ್ಲಬೇಕಂತೆ, ಪರಿಶಿಷ್ಟಜಾತಿಗೆ ಸೇರಿಲ್ಲದ ಮತದಾರರು ಅಂಬೇಡ್ಕರರಿಗೆ ಮತ ಹಾಕಿದರೆ ಅದು ಪರಿಶಿಷ್ಟರ ಹಕ್ಕನ್ನು ಕಸಿದುಕೊಂಡಂತೆಯಂತೆ. ಆ ಕಾರಣಕ್ಕಾಗಿ ಮತದಾರ ಎರಡೂ ಓಟುಗಳನ್ನು ಒಬ್ಬ ವ್ಯಕ್ತಿಯ ಡಬ್ಬಕ್ಕೇ ಹಾಕಿ ತನ್ನ ಮತವನ್ನು ಕುಲಗೆಡಿಸಿಕೊಳ್ಳಬೇಕಂತೆ! ಈ ನಿಟ್ಟಿನಲ್ಲಿ ಈ ಚುನಾವಣೆಯಲ್ಲಿ ಡಾಂಗೆಯವರು ತಮ್ಮ ಕುಯುಕ್ತಿಯ ಇಂಥ ನಡೆಯಿಂದ ಮತದಾರರನ್ನು ಎಷ್ಟು ದಿಕ್ಕುತಪ್ಪಿಸುವುದು ಸಾಧ್ಯವೋ ಅಷ್ಟೂ ದಿಕ್ಕುತಪ್ಪಿಸಿದರು ತನ್ಮೂಲಕ ಅಂಬೇಡ್ಕರರು ಚುನಾವಣೆಯಲ್ಲಿ ಸೋಲುವಂತೆ ನೋಡಿಕೊಳ್ಳುವಲ್ಲಿ ಯಶಸ್ವಿಯಾದರು! ಹೇಗೆಂದರೆ ಕುಲಗೆಟ್ಟ ಒಟ್ಟು ಮತಗಳು 74,333. ಅದರಲ್ಲಿ ಡಾಂಗೆಯವರ ಇಂತಹ ಅಪಪ್ರಚಾರದಿಂದ ಬರೋಬ್ಬರಿ ಅವರೊಬ್ಬರಿಗೇ ಬಿದ್ದ ಕುಲಗೆಟ್ಟ ಮತಗಳೇ 39,165! ಅಂದಹಾಗೆ ಅಂಬೇಡ್ಕರ್ ಸೋತದ್ದು? 14,561 ಮತಗಳಿಂದ! ಈ ಹಿನ್ನೆಲೆಯಲ್ಲಿ ಅಂಬೇಡ್ಕರರ ಸೋಲಿನ ಅಂತರಕ್ಕಿಂತ ಮೂರು ಪಟ್ಟು ಹೆಚ್ಚು ಮತ ಕುಲಗೆಡಿಸುವಲ್ಲಿ ಡಾಂಗೆ ಯಶಸ್ವಿಯಾಗಿದ್ದರು. ಡಾಂಗೆಯವರ ಇಂತಹ ಹೀನ ತಂತ್ರವನ್ನು ತಮ್ಮ ಆ ಚುನಾವಣಾ ದೂರಿನಲ್ಲಿ ಅಂಬೇಡ್ಕರರು ಸಾಕ್ಷಿ ಸಮೇತ, ಅಂದರೆ ಕರಪತ್ರ ಪ್ರತಿ, ಪೇಪರ್ ಕಟಿಂಗ್‍ಗಳನ್ನು ಲಗತ್ತಿಸುವುದರ ಜೊತೆ ಕ್ರಮ ಕೈಗೊಳ್ಳಬೇಕೆಂದು ಆಯೋಗಕ್ಕೆ ಅರುಹಿದ್ದರು.

ಮುಂದುವರಿದು ಅಂಬೇಡ್ಕರರು ಮತ್ತೋರ್ವ ಅಭ್ಯರ್ಥಿಯ ಅಪಪ್ರಚಾರವನ್ನು ಸಾಕ್ಷಿ ಸಮೇತ ದಾಖಲಿಸಿದ್ದರು. ಅದು ಪಕ್ಷೇತರ ಅಭ್ಯರ್ಥಿ ಹಿಂದುತ್ವವಾದಿ ಗೋಪಾಲ್ ವಿ.ದೇಶ್‍ಮುಖ್‍ರವರಿಗೆ ಸಂಬಂಧಿಸಿದ್ದು. ಸದರಿ ದೇಶ್‍ಮುಖ್ ‘ವಿವಿಧ ವೃತ್ತಾ’ ಎಂಬ ಪತ್ರಿಕೆಯಲ್ಲಿ ಡಿಸೆಂಬರ್ 31, 1951ರಲ್ಲಿ ಹೊರಡಿಸಿದ್ದ ಪತ್ರಿಕಾ ಹೇಳಿಕೆಯಲ್ಲಿ “ಬಾಂಬೆ ಉತ್ತರ ಕ್ಷೇತ್ರವು ದ್ವಿಸದಸ್ಯ ಸಾಮಾನ್ಯ ಕ್ಷೇತ್ರವಾಗಿದ್ದು ಇಲ್ಲಿ ಎರಡೂ ಸ್ಥಾನಗಳನ್ನು ಪರಿಶಿಷ್ಟರೇ ಗೆಲ್ಲುವಂತಹ ತಂತ್ರವನ್ನು ಅಂಬೇಡ್ಕರರು ರೂಪಿಸಿದ್ದಾರೆ. ಆ ಕಾರಣದಿಂದ ಮತದಾರರು ಅಂಬೇಡ್ಕರರ ಇಂತಹ ತಂತ್ರವನ್ನು ಸೋಲಿಸಲು ತಮ್ಮ ಎರಡೂ ಓಟುಗಳನ್ನು ಅಂಬೇಡ್ಕರರನ್ನು ಹೊರತು ಪಡಿಸಿ ಇತರರಿಗೆ ನೀಡಿ. ಆ ಮೂಲಕ ಪರಿಶಿಷ್ಟೇತರರೂ ಆಯ್ಕೆಯಾಗುವಂತೆ ಮಾಡಿ” ಎಂದಿದ್ದರು. ಮುಂದುವರಿದು ಅದೇ ದೇಶ್‍ಮುಖ್ ಅದೇ ‘ವಿವಿಧ ವೃತ್ತಾ’ ಪತ್ರಿಕೆಯಲ್ಲಿ “ಮತದಾರನೋರ್ವ ಹಿಂದೂ ಅಭ್ಯರ್ಥಿಯ ಪೆಟ್ಟಿಗೆಯಲ್ಲಿ ಮಾತ್ರ ತನ್ನ ಎರಡೂ ಮತಗಳನ್ನು ಹಾಕಬೇಕು ಮತ್ತು ಅದು ಯಾವುದೇ ರೀತಿಯಲ್ಲೂ ಕಾನೂನಿಗೆ ವಿರುದ್ಧವಲ್ಲ” ಎಂಬ ಹೇಳಿಕೆ ನೀಡಿ ಕೋಮುಭಾವವನ್ನು ಬಹಿರಂಗವಾಗೇ ಬಡಿದೆಬ್ಬಿಸಿದ್ದರು! (ಇಲ್ಲಿ ದೇಶ್‍ಮುಖ್‍ರ ‘ಹಿಂದೂ ಅಭ್ಯರ್ಥಿಗೆ ಮಾತ್ರ’ ಎಂಬ ಪದವನ್ನು ಗಮನಿಸಬೇಕು! ಅಂದರೆ ಅಂಬೇಡ್ಕರರು ಒಟ್ಟಾರೆ ಪರಿಶಿಷ್ಟರು ಹಿಂದೂಗಳಲ್ಲ ಎಂಬುದು ಆ ಕಾಲದಲ್ಲೇ 1952ರಲ್ಲೇ ಸ್ಪಷ್ಟ.) ಈ ಸಂಬಂಧ ದೇಶ್‍ಮುಖ್‍ರ ಇಂತಹ ಕೋಮುಭಾವದ ಪತ್ರಿಕಾ ಹೇಳಿಕೆಯ ವರದಿಯ ತುಣುಕನ್ನೂ ಸಹ ಅಂಬೇಡ್ಕರರು ತಮ್ಮ ಆ ಚುನಾವಣಾ ತಕರಾರು ಅರ್ಜಿಯ ಜೊತೆ ಲಗತ್ತಿಸಿದ್ದರು.

ಒಟ್ಟಾರೆ ಹೇಳುವುದಾದರೆ ಕಮ್ಯೂನಿಸ್ಟ್ ನಾಯಕ ಶ್ರೀಪಾದ ಅಮೃತ ಡಾಂಗೆ, ಹಿಂದುತ್ವವಾದಿ ನಾಯಕ ಗೋಪಾಲ್ .ವಿ.ದೇಶ್‍ಮುಖ್ ಇಬ್ಬರೂ “ವಯಕ್ತಿಕವಾಗಿ ಅವರಿಬ್ಬರಿಗು ಯಾವುದೇ ಲಾಭವಾಗದಿದ್ದರೂ ಅಂಬೇಡ್ಕರರ ಗೆಲುವಿನ ಸಂಭವವನ್ನು ತಪ್ಪಿಸುವ ಏಕೈಕ ಉದ್ದೇಶ ಇಟ್ಟುಕೊಂಡು ಎರಡೂ ಓಟುಗಳನ್ನು ತಮಗೆ ಹಾಕಿ” ಎಂಬ ಚುನಾವಣಾ ಹೀನ ತಂತ್ರ ಹೆಣೆದು, ಮತದಾರರನ್ನು ಗೊಂದಲಗೊಳಿಸುವಲ್ಲಿ ಯಶಸ್ವಿಯಾದರು. ಇದನ್ನು ಉಲ್ಲೇಖಿಸುತ್ತಾ ಅಂಬೇಡ್ಕರರು ತಮ್ಮ ಆ ಚುನಾವಣಾ ದೂರಿನಲ್ಲಿ ಸದರಿ ಬಾಂಬೆ ಸಿಟಿ ಉತ್ತರ ಲೋಕಸಭಾ ಕ್ಷೇತ್ರದ ಚುನಾವಣೆಯನ್ನು ಈ ಇಬ್ಬರು ಅಭ್ಯರ್ಥಿಗಳ ಇಂತಹ ಚುನಾವಣಾ ಅಕ್ರಮದ ಹಿನ್ನೆಲೆಯಲ್ಲಿ ಅನೂರ್ಜಿತಗೊಳಿಸಿ ಮರುಚುನಾವಣೆ ನಡೆಸಬೇಕು ಎಂದು ಕೋರಿದರು.

ಅಂತೆಯೇ ಅಂಬೇಡ್ಕರರು ಸಲ್ಲಿಸಿದ ಆ ಚುನಾವಣಾ ದೂರಿನ ವಿಚಾರಣೆ ಶ್ರೀ ಎನ್.ಜೆ.ವಾಡಿಯಾ, ಶ್ರೀ ಎಂ.ಕೆ.ಲಲ್ಕಾಕ, ಶ್ರೀ ಜಿ.ಪಿ.ಮುರುಡೇಶ್ವರ್ ರವರನ್ನೊಳಗೊಂಡ ಚುನಾವಣಾ ಟ್ರಿಬ್ಯೂನಲ್‍ನಲ್ಲಿ ನಡೆಯುತ್ತದೆ ಮತ್ತು ಸ್ವತಃ ಅಂಬೇಡ್ಕರರೇ ಆ ಟ್ರಿಬ್ಯೂನಲ್ ಮುಂದೆ ವಿಚಾರಣೆಗೆ ಹಾಜರಾಗಿ ಜನಪ್ರತಿನಿಧಿಗಳ ಕಾಯ್ದೆ ಸೆಕ್ಷನ್ 123(2)ರ ಅಡಿಯಲ್ಲಿ ಚುನಾವಣೆಯಲ್ಲಿ ಮತದಾರರ ಮೇಲೆ ‘ಅಕ್ರಮ ಪ್ರಭಾವ’ ಬೀರಿದ ಆ ಇಬ್ಬರು ಅಭ್ಯರ್ಥಿಗಳ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವಂತೆ, ಸೆಕ್ಷನ್ 100ರ ಪ್ರಕಾರ “ಭಾರಿ ಅಕ್ರಮದ ಆಧಾರದಲ್ಲಿ ಸದರಿ ಚುನಾವಣೆಯನ್ನು ರದ್ದುಪಡಿಸುವಂತೆ””ಪ್ರಬಲ ವಾದ ಮಂಡಿಸುತ್ತಾರೆ. ಅಂದಹಾಗೆ ಜನಪ್ರತಿನಿಧಿ ಕಾಯ್ದೆ ಅಂದಿನ ನಿಯಮ 25(1)ರ ಪ್ರಕಾರವೇ ‘ಮತದಾರನೊಬ್ಬ ತನ್ನ ಎರಡೂ ಮತವನ್ನೂ ಒಂದೇ ಬ್ಯಾಲಟ್ ಬಾಕ್ಸ್‍ನಲ್ಲಿ ಹಾಕುವುದು ಕಾನೂನಿಗೆ ವಿರುದ್ಧ’.

ಹೀಗಿರುವಾಗ ಸ್ಪರ್ಧಿಸಿದ್ದ ಅಭ್ಯರ್ಥಿಗಳೇ ಕಾನೂನಿಗೆ ವಿರುದ್ಧವಾದ ಇಂತಹ ಕ್ರಿಯೆ ನಡೆಸಿ ಎಂದು ಮತದಾರರಿಗೆ ಬಹಿರಂಗವಾಗಿ ಪತ್ರಿಕಾ ಪ್ರಕಟಣೆಗಳ ಮೂಲಕ ಆಗ್ರಹಿಸುತ್ತಾರೆ ಎಂದರೆ ಇದು ಚುನಾವಣಾ ಅಕ್ರಮದ ಉದ್ದೇಶಪೂರ್ವಕ ಆಚರಣೆಯಲ್ಲದೆ ಮತ್ತೇನು? ಮತ್ತು ಅದು ನ್ಯಾಯಬದ್ಧ ಚುನಾವಣೆ ಹೇಗಾಗುತ್ತದೆ? ಮುಂದುವರಿದು ಅಂಬೇಡ್ಕರರು “ನಾನು ನನ್ನ ಸ್ಥಾನವನ್ನು 13000 ಓಟುಗಳಿಂದ ಕಳೆದುಕೊಂಡೆ. ಡಾ.ದೇಶ್‍ಮುಖ್ ಮತ್ತು ಶ್ರೀ ಡಾಂಗೆ ಇಂತಹ ನೀಚ ತಂತ್ರಗೈಯದಿದ್ದರೆ ಕೇವಲ ಶ್ರೀ ಡಾಂಗೆಯವರು ಕುಲಗೆಡಿಸಿದ ಆ 39000 ಓಟುಗಳಲ್ಲೇ ಖಂಡಿತ ನಾನು ಬಹುಸಂಖ್ಯೆಯ ಓಟುಗಳನ್ನು ಪಡೆಯುತ್ತಿದ್ದೆ. (ಆ ಮೂಲಕ ಆಯ್ಕೆಯಾಗುತ್ತಿದ್ದೆ). ಈ ನಿಟ್ಟಿನಲ್ಲಿ ಮತದಾರರ ಮೇಲೆ ಹೀಗೆ ಶ್ರೀ ಡಾಂಗೆ ಮತ್ತು ಶ್ರೀ ದೇಶ್‍ಮುಖ್ ಅಕ್ರಮ ಪ್ರಭಾವ ಬೀರಿದ್ದಕ್ಕೆ ಸಾಕ್ಷಿಯಾಗಿ ಭಾರೀ ಸಂಖ್ಯೆಯ ಕುಲಗೆಟ್ಟ ಮತಗಳು(73,333) ನ್ಯಾಯಾಲಯದ ಮುಂದಿದೆ.

ನ್ಯಾಯಾಲಯ ಈ ವ್ಯಾಪಕ ಅಕ್ರಮವನ್ನು ಗಣನೆಗೆ ತೆಗೆದುಕೊಳ್ಳಬೇಕು. ಇದರ ಆಧಾರದ ಮೇಲೆ ಬಾಂಬೆ ನಗರ ಉತ್ತರ ಆ ಕ್ಷೇತ್ರದಲ್ಲಿ ವ್ಯಾಪಕ ಪ್ರಮಾಣದ ಚುನಾವಣಾ ಭ್ರಷ್ಟ ಆಚರಣೆಗಳು ನಡೆದಿರುವುದರಿಂದ ಜನಪ್ರತಿನಿಧಿ ಕಾಯ್ದೆ ಸೆಕ್ಷನ್ 100ರ ಅಡಿಯಲ್ಲಿ ಆ ಚುನಾವಣೆಯನ್ನು ಅನೂರ್ಜಿತಗೊಳಿಸಬೇಕು” ಎಂದು ವಿಚಾರಣಾ ನ್ಯಾಯಾಲಯದ ಮುಂದೆ ತಮ್ಮ ನಿಖರ ವಾದ ಮಂಡಿಸುತ್ತಾರೆ.

ಅಂಬೇಡ್ಕರರ ಈ ವಾದಕ್ಕೇ ಜಯ ಸಿಕ್ಕಿತೆ? ಖಂಡಿತ ಇಲ್ಲ. ಎಲ್ಲ ಚುನಾವಣಾ ವಿಚಾರಣೆಗಳಂತೆ ಇದೂ ಕೂಡ ‘ಹಿಯರಿಂಗ್ ಮುಂದಕ್ಕೆ’ ಎಂಬಂತೆ ಮುಂದೆ ಹೋಯಿತು. ಅಂಬೇಡ್ಕರರಿಗೆ ನ್ಯಾಯ ಧಕ್ಕಲಿಲ್ಲ. ಆದರೆ ಸತ್ಯ? ಅಂದರೆ ಅಂಬೇಡ್ಕರರನ್ನು ಈ ದೇಶದ ಪ್ರಥಮ ಲೋಕಸಭಾ ಚುನಾವಣೆಯಲ್ಲಿ ತಂತ್ರಗೈದು ಸೋಲಿಸಿದ ಸತ್ಯ? ಅವರೇ ಸಲ್ಲಿಸಿರುವ ಚುನಾವಣಾ ತಕರಾರು ಅರ್ಜಿಯ ರೂಪದಲ್ಲಿ ಸದ್ಯ ನಮ್ಮ ಮುಂದೆ ಇದೆ. ಖಂಡಿತ, ಹೆಂಡ, ಬಾಡು, ದುಡ್ಡಿಗೆ ಚುನಾವಣೆ ಗೆಲ್ಲುತ್ತಿರುವ ಈ ಕಾಲದಲ್ಲಿ, ಹಾಗೆಯೇ ವಿವಿಧ ಜಾತಿಗಳನ್ನು ಎತ್ತಿಕಟ್ಟಿ, ಅಭ್ಯರ್ಥಿಗಳ ಮೂಲಕ ನಾನಾ ಅಪಪ್ರಚಾರ ನಡೆಸುವ ಈ ಕಾಲದಲ್ಲಿ ಅಂಬೇಡ್ಕರರ ಅಂದಿನ ಸೋಲು ಕೂಡ ಅಂತಹ ‘ಕಾಲದ’ ಕಹಿ ವಾಸ್ತವವಾಗುತ್ತದೆ.

ಯಾಕೆಂದರೆ ‘ವಿಕಿಪಿಡಿಯಾ ಅಂತರ್ಜಾಲ’ ತಾಣದಲ್ಲಿ ದಾಖಲಾಗಿರುವಂತೆ 1952ರ ಭಾರತದ ಪ್ರಥಮ ಲೋಕಸಭಾ ಚುನಾವಣೆಯ ಅತಿ ಪ್ರಮುಖ ಸೋಲು ಡಾ.ಅಂಬೇಡ್ಕರರದ್ದು! ಇಲ್ಲಿ ಪ್ರತ್ಯೇಕ ಮತದಾನ ಪದ್ಧತಿಯ ಅನಿವಾರ್ಯತೆಯನ್ನು ಕೂಡ ದಾಖಲಿಸಬೇಕಾಗುತ್ತದೆ. 1932ರಲ್ಲಿ ಅಂಬೇಡ್ಕರರು ಒತ್ತಾಯಿಸಿದ ಈ ಮತದಾನ ಪದ್ಧತಿ ಜಾರಿಯಾಗಿದಿದ್ದರೆ 1952ರಲ್ಲಿ ಅವರು ಖಂಡಿತ ಸೋಲುತ್ತಿರಲಿಲ್ಲ. ಜಿ.ವಿ.ದೇಶ್‍ಮುಖ್‍ರಂಥ ಹಿಂದೂ ಕೋಮುವಾದಿ ಅದೆಷ್ಟೇ ಕೋಮು ಪ್ರಚೋದನೆ ನಡೆಸಿದ್ದರೂ ‘ಪ್ರತ್ಯೇಕ ಮತದಾನ’ದ ಪರಿಶಿಷ್ಟರೇ ಪರಿಶಿಷ್ಟರಿಗೆ ಮಾತ್ರ ಮತ ಹಾಕುವ ಆ ಪದ್ಧತಿಯಲ್ಲಿ ಬಾಬಾಸಾಹೇಬರು ಸ್ಪಷ್ಟವಾಗಿ ಆಯ್ಕೆಯಾಗಿರುತ್ತಿದ್ದರು. ಆದರೆ ಅಂಬೇಡ್ಕರರ ಆ ಮಹತ್ವದ ಬೇಡಿಕೆಯನ್ನು ಮಹಾತ್ಮ ಗಾಂಧಿ ‘ಅರ್ಥಮಾಡಿಕೊಂಡು’ ಜಾರಿಯಾಗದಂತೆ ತಡೆದರು. ಆ ಮೂಲಕ ಅಂಬೇಡ್ಕರರ ಸೋಲಿಗೆ 1932ರಲ್ಲೇ ಗಾಂಧಿ ಮುನ್ನುಡಿ ಬರೆದಿದ್ದರು.

ಒಟ್ಟಾರೆ ಗಾಂಧಿಯವರ ಮುನ್ನುಡಿ ಮತ್ತು ಅದಕ್ಕೆ ಪೂರಕವಾಗಿ ಡಾಂಗೆ ಮತ್ತು ದೇಶ್‍ಮುಖ್‍ರ ಇಂತಹ ಚುನಾವಣಾ ಅಕ್ರಮದ ಬೆನ್ನುಡಿ ಈ ದೇಶದ ಜನರಿಗೆ ಓಟುಹಾಕುವ ಹಕ್ಕುಗಳಿಸಿಕೊಟ್ಟ ‘ಭಾರತದ ಪ್ರಜಾಪ್ರಭುತ್ವದ ಪಿತ’ ಅಂಬೇಡ್ಕರರ ಸೋಲಿಗೆ ಕಾರಣವಾದವು ಎಂಬುದು ಪ್ರಜಾಪ್ರಭುತ್ವದ ವ್ಯಂಗ್ಯವೆನಿಸಿದರೂ ಘಟಿಸಿರುವುದಂತೂ ಸತ್ಯ.

 –ರಘೋತ್ತಮ ಹೊ.ಬ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!

Published

on

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

  • ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ
  • ಇಂಡಿಯಾ ಗೇಟ್‌ನಿಂದ ಪೊಲೀಸ್ ಕೇಂದ್ರ ಕಚೇರಿವರೆಗೆ ಮೆರವಣಿಗೆ
  • NEET ಅಭ್ಯರ್ಥಿಗಳ ಕುಟುಂಬಸ್ಥರು, ಪೊಲೀಸ್ ದೌರ್ಜನ್ಯ ಸಂತ್ರಸ್ತರು ಮುಂಚೂಣಿಯಲ್ಲಿ
  • “ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ” ಎಂದ CJP 

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಸುದ್ದಿದಿನ,ನವದೆಹಲಿ: ದೇಶದ ಯುವಜನರಿಗೆ ನೀಡಿರುವ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (CJP) ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿದೆ. ಜುಲೈ 25ರಂದು ಸಾರ್ವಜನಿಕವಾಗಿ ನೀಡಲಾಗಿದ್ದ ಭರವಸೆಗಳಿಗೆ ಒಂದು ತಿಂಗಳು ಕಳೆದರೂ ಅವುಗಳ ಅನುಷ್ಠಾನಕ್ಕೆ ಸ್ಪಷ್ಟ ಕ್ರಮಗಳು ಗೋಚರಿಸುತ್ತಿಲ್ಲ ಎಂಬುದು CJPಯ ಪ್ರಮುಖ ಆರೋಪವಾಗಿದೆ.

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಹಾಗೂ ಬಿಜೆಪಿ-ಎನ್‌ಡಿಎ ಆಡಳಿತದ ರಾಜ್ಯಗಳು ಯುವಜನರಿಗೆ ನೀಡಿದ್ದ ಭರವಸೆಗಳ ಅನುಷ್ಠಾನವನ್ನು ಪರಿಶೀಲಿಸಿದ ಬಳಿಕ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.

http://Visit : www.suddidina.com

ಇಂಡಿಯಾ ಗೇಟ್‌ನಿಂದ ಮೆರವಣಿಗೆ

ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ನವದೆಹಲಿ ಪೊಲೀಸ್ ಕೇಂದ್ರ ಕಚೇರಿಯತ್ತ ಸಾಗಲಿದೆ. ಮೃತ NEET ಅಭ್ಯರ್ಥಿಗಳ ಕುಟುಂಬಸ್ಥರು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಲಿದ್ದಾರೆ ಎಂದು CJP ಹೇಳಿದೆ.

ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಯುವ ಸಂಘಟನೆಗಳ ಪ್ರತಿನಿಧಿಗಳು ಮತ್ತು ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸರ್ಕಾರ ನೀಡಿದ್ದ ಭರವಸೆಗಳನ್ನು ಜಾರಿಗೆ ತರಬೇಕು ಎಂಬ ಒಂದೇ ಪ್ರಮುಖ ಬೇಡಿಕೆಯೊಂದಿಗೆ ಯುವಜನರು ಶಾಂತಿಯುತವಾಗಿ ಧ್ವನಿ ಎತ್ತಲಿದ್ದಾರೆ ಎಂದು ಪಕ್ಷ ಹೇಳಿದೆ.

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

‘ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’

ಜುಲೈ 25ರಂದು ನೀಡಿದ ಭರವಸೆಗಳನ್ನು ನಂಬಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆಗಳನ್ನು ಯುವಜನರು ಉತ್ತಮ ನಂಬಿಕೆಯಿಂದ ಹಿಂಪಡೆದಿದ್ದರು. ಆದರೆ, ಭರವಸೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದು ಯುವಜನರಲ್ಲಿ ಮತ್ತೆ ಅಸಮಾಧಾನ ಮೂಡಿಸಿದೆ ಎಂದು CJP ಆರೋಪಿಸಿದೆ.

“ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ. ನಮ್ಮ ಸದುದ್ದೇಶವನ್ನು ಸರ್ಕಾರ ಯುವಜನರಿಗೆ ದ್ರೋಹ ಮಾಡುವ ಅವಕಾಶವಾಗಿ ಬಳಸಿಕೊಳ್ಳಬಾರದು” ಎಂದು CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಎಚ್ಚರಿಕೆ ನೀಡಿದೆ.

“ಭರವಸೆಗಳನ್ನು ಜಾರಿಗೆ ತರುವ ಬದಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ” 

  • CJP ಆರೋಪ

ಮಾತಿನಿಂದ ಹಿಂದೆ ಸರಿಯಲು ಸಾಧ್ಯವಿಲ್ಲ

ಜುಲೈ 25ರಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕವಾಗಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು ಎಂಬುದು CJPಯ ಆಗ್ರಹ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರ ನೋವಿನ ನಡುವೆ ನಡೆಯಲಿರುವ ಈ ಮೆರವಣಿಗೆ, ಯುವಜನರ ವಿಶ್ವಾಸ ಮತ್ತು ಸರ್ಕಾರದ ಹೊಣೆಗಾರಿಕೆಯ ಪ್ರಶ್ನೆಯನ್ನು ಮುನ್ನೆಲೆಗೆ ತರುವ ಪ್ರಯತ್ನವಾಗಿದೆ.

ಕೇಂದ್ರ ಸರ್ಕಾರ ಭರವಸೆಗಳನ್ನು ಜಾರಿಗೆ ತರುವ ಬದಲು ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ ಎಂದು CJP ಆರೋಪಿಸಿದೆ.

ಸೆಪ್ಟೆಂಬರ್ 5ರಂದು ಹೆಚ್ಚಿನ ಸಂಖ್ಯೆಯಲ್ಲಿ ಇಂಡಿಯಾ ಗೇಟ್‌ನಲ್ಲಿ ಸೇರಿ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಯುವಜನರು, ವಿದ್ಯಾರ್ಥಿಗಳು ಹಾಗೂ ಯುವ ಸಂಘಟನೆಗಳಿಗೆ CJP ಮನವಿ ಮಾಡಿದೆ. ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯಲಿದೆ ಎಂದು ಅದು ಪುನರುಚ್ಚರಿಸಿದೆ.

Continue Reading

ದಿನದ ಸುದ್ದಿ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

Published

on

KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ
KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

  • 329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್

  • 658 OMR ಕಾರ್ಬನ್ ಶೀಟ್‌ಗಳು FSLಗೆ

  • IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ED ಗಂಭೀರ ಆರೋಪ

  • ₹70–80 ಲಕ್ಷ ಲಂಚದ ಆರೋಪವೂ ತನಿಖೆಯಲ್ಲಿದೆ

  • ಪ್ರಶ್ನೆಪತ್ರ ಸಿದ್ಧತೆ, ಮುದ್ರಣದ CCTV ದೃಶ್ಯಗಳ ಬಗ್ಗೆಯೂ ಅನುಮಾನ 

ಸುದ್ದಿದಿನ,ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಈಗಾಗಲೇ ಜಾರಿ ನಿರ್ದೇಶನಾಲಯ (ED) ರಾಜ್ಯದ ವಿವಿಧೆಡೆ 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಅದರ ಬೆನ್ನಲ್ಲೇ ಅಪರಾಧ ತನಿಖಾ ಇಲಾಖೆ (CID) ಎಲ್ಲಾ 329 ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

http://Visit : www.suddidina.com

329 ಅಭ್ಯರ್ಥಿಗಳಿಗೆ ನೋಟಿಸ್ ಏಕೆ?

ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಈಗಾಗಲೇ 658 OMR ಕಾರ್ಬನ್ ಶೀಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಅವುಗಳನ್ನು ಮೂಲ OMR ಉತ್ತರ ಪತ್ರಿಕೆಗಳೊಂದಿಗೆ ಹೋಲಿಕೆ ಮಾಡಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದೆ. ಅಭ್ಯರ್ಥಿಗಳು ಗುರುತಿಸಿದ್ದ ಉತ್ತರಗಳ ಕಾರ್ಬನ್ ಪ್ರತಿಯಲ್ಲಿ ಮತ್ತು ಮೂಲ OMRನಲ್ಲಿ ವ್ಯತ್ಯಾಸವಿದೆಯೇ ಎಂಬುದನ್ನು ಪರಿಶೀಲಿಸುವುದು ತನಿಖೆಯ ಪ್ರಮುಖ ಭಾಗವಾಗಿದೆ.

ಇದೀಗ 329 ಅಭ್ಯರ್ಥಿಗಳನ್ನೂ ವಿಚಾರಣೆಗೆ ಒಳಪಡಿಸುವ CID ಕ್ರಮ ಪ್ರಕರಣದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದೆ. ಈ ವಿಚಾರಣೆಯ ಮೂಲಕ ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿದೆಯೇ, ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಅಥವಾ ಉತ್ತರಗಳ ಮಾಹಿತಿ ಮುಂಚಿತವಾಗಿ ಸಿಕ್ಕಿತೇ, OMR ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ನಡೆದಿದೆಯೇ ಎಂಬುದರ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

IAS ಅಧಿಕಾರಿಯತ್ತ ತನಿಖೆಯ ಚಿತ್ತ

ಈ ಪ್ರಕರಣದಲ್ಲಿ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಅವರು ಫೆಬ್ರವರಿ 2024ರಿಂದ ಮಾರ್ಚ್ 2026ರವರೆಗೆ KPSCಯ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ MSME ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಬೆಂಗಳೂರಿನ ನಿವಾಸ ಸೇರಿದಂತೆ ಉತ್ತರ ಪ್ರದೇಶದ ಬರೇಲಿಯಲ್ಲಿರುವ ನಿವಾಸದ ಮೇಲೂ ED ಶೋಧ ನಡೆಸಿದೆ.

ED ಆರೋಪದ ಪ್ರಕಾರ, ಗಂಗ್ವಾರ್ ಅವರು ತಮ್ಮ ಇಬ್ಬರು ಪುತ್ರರಿಗೆ KPSC ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ದೊರಕಿಸಿಕೊಡಲು ವ್ಯಕ್ತಿಯೊಬ್ಬರಿಂದ ಸುಮಾರು ₹1.1 ಕೋಟಿ ಪಡೆದಿದ್ದಾರೆ ಎನ್ನಲಾಗಿದೆ. ಈ ಆರೋಪ ಇನ್ನೂ ತನಿಖೆಯ ಹಂತದಲ್ಲಿದ್ದು, ಆರೋಪ ಸಾಬೀತಾಗಿಲ್ಲ.

ಪ್ರಶ್ನೆಪತ್ರಿಕೆ ಸಿದ್ಧತೆಯಲ್ಲೂ ಅನುಮಾನ

ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಮತ್ತು ಮುದ್ರಿಸುವ ಪ್ರಕ್ರಿಯೆಗೆ ಸಂಬಂಧಿಸಿದ CCTV ದೃಶ್ಯಾವಳಿಗಳ ಅನುಪಸ್ಥಿತಿಯನ್ನೂ ED ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಇಂತಹ ಪ್ರಕ್ರಿಯೆಯಲ್ಲಿ CCTV ದಾಖಲೆಗಳು ಪ್ರಮುಖ ಭದ್ರತಾ ಕ್ರಮವಾಗಿರುವುದರಿಂದ, ಅವುಗಳ ಲಭ್ಯತೆ ಮತ್ತು ನಿರ್ವಹಣೆಯೂ ತನಿಖೆಯ ಪ್ರಮುಖ ಅಂಶವಾಗಿದೆ.

ಇದರ ಜೊತೆಗೆ, ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ ₹70–80 ಲಕ್ಷದವರೆಗೆ ಲಂಚ ಕೇಳಲಾಗಿದೆ ಎಂಬ ಆರೋಪಗಳೂ ತನಿಖೆಯಲ್ಲಿವೆ. ಪ್ರಶ್ನೆಪತ್ರಿಕೆ ಸೋರಿಕೆ, OMR ತಿದ್ದುಪಡಿ ಮತ್ತು ನೇಮಕಾತಿ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಿದ ಆರೋಪಗಳ ಕುರಿತು ತನಿಖೆ ಮುಂದುವರಿದಿದೆ.

KPSCಯಂತಹ ನೇಮಕಾತಿ ಸಂಸ್ಥೆಯ ಮೇಲಿನ ವಿಶ್ವಾಸಕ್ಕೆ ಧಕ್ಕೆ ತರುವ ಆರೋಪಗಳಾಗಿರುವುದರಿಂದ, CID ಮತ್ತು ED ತನಿಖೆಯ ಮುಂದಿನ ಹಂತಗಳು ಮಹತ್ವ ಪಡೆದುಕೊಂಡಿವೆ. 329 ಅಭ್ಯರ್ಥಿಗಳ ವಿಚಾರಣೆ, OMR ಕಾರ್ಬನ್ ಶೀಟ್‌ಗಳ FSL ವರದಿ ಹಾಗೂ ಹಣಕಾಸು ವ್ಯವಹಾರಗಳ ಪರಿಶೀಲನೆಯ ಬಳಿಕ ಪ್ರಕರಣದ ನಿಜವಾದ ಚಿತ್ರಣ ಇನ್ನಷ್ಟು ಸ್ಪಷ್ಟವಾಗುವ ನಿರೀಕ್ಷೆಯಿದೆ.

ಮೇಲಿನ ಹಣ, ಅಕ್ರಮ ಮತ್ತು ಅಧಿಕಾರಿಯ ವಿರುದ್ಧದ ಆರೋಪಗಳು ತನಿಖಾ ಸಂಸ್ಥೆಗಳು ಮುಂದಿಟ್ಟಿರುವ ಆರೋಪಗಳಾಗಿದ್ದು, ನ್ಯಾಯಾಲಯದಲ್ಲಿ ಸಾಬೀತಾಗುವವರೆಗೆ ಆರೋಪಗಳೆಂದೇ ಪರಿಗಣಿಸಬೇಕೆಂದು ಕೋರ್ಟ್ ತಿಳಿಸಿದೆ.

 

Continue Reading

ದಿನದ ಸುದ್ದಿ

₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ

Published

on

₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
ಅನಧಿಕೃತ ನಿರ್ಮಾಣಕ್ಕೆ ಬಿಡಿಎ ‘ಬುಲ್ಡೋಜರ್’ ಆ್ಯಕ್ಷನ್: ₹25 ಕೋಟಿ ಮೌಲ್ಯದ ಆಸ್ತಿ ವಶ!

ರಾಜಾಜಿನಗರದಲ್ಲಿ ಬಿಡಿಎ ಭರ್ಜರಿ ಕಾರ್ಯಾಚರಣೆ: 13,000 ಚದರ ಅಡಿ ಜಾಗ ವಶಕ್ಕೆ

  • 13,000 ಚದರ ಅಡಿ ಪ್ರದೇಶ ತೆರವು; ಪೊಲೀಸ್ ಭದ್ರತೆಯಲ್ಲಿ ಬಿಡಿಎ ಕಾರ್ಯಾಚರಣೆ
    ನಿವೇಶನ 13 ಮತ್ತು 17ರಲ್ಲಿ ಅನಧಿಕೃತ ನಿರ್ಮಾಣ ತೆರವು; ಪೊಲೀಸ್ ಸಹಕಾರದಲ್ಲಿ ಕಾರ್ಯಾಚರಣೆ

ಸುದ್ದಿದಿನ,ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ) ಅನಧಿಕೃತ ನಿರ್ಮಾಣಗಳ ವಿರುದ್ಧದ ತನ್ನ ಕಾರ್ಯಾಚರಣೆಯನ್ನು ಮತ್ತಷ್ಟು ಚುರುಕುಗೊಳಿಸಿದ್ದು, ರಾಜಾಜಿನಗರ ಬಡಾವಣೆಯ ಇಂಡಸ್ಟ್ರೀಯಲ್ ಸಬರ್ಬ್ 2ನೇ ಹಂತದಲ್ಲಿ ಮಹತ್ವದ ತೆರವು ಕಾರ್ಯಾಚರಣೆ ನಡೆಸಿದೆ. ಕಾರ್ಯಾಚರಣೆಯಲ್ಲಿ ಸುಮಾರು ₹25 ಕೋಟಿ ಮೌಲ್ಯದ ಆಸ್ತಿಯನ್ನು ಪ್ರಾಧಿಕಾರ ತನ್ನ ಸುಪರ್ದಿಗೆ ಪಡೆದುಕೊಂಡಿದೆ.

ಬೆಂಗಳೂರು ಉತ್ತರ ತಾಲ್ಲೂಕಿನ ಯಶವಂತಪುರ ಹೋಬಳಿಯ ಪೀಣ್ಯ ಗ್ರಾಮದ ಸರ್ವೆ ನಂಬರ್ 79 ಮತ್ತು 70ರಲ್ಲಿ ಬರುವ ಇಂಡಸ್ಟ್ರೀಯಲ್ ಸಬರ್ಬ್, 2ನೇ ಹಂತ, ರಾಜಾಜಿನಗರ ಬಡಾವಣೆಯ ನಿವೇಶನ ಸಂಖ್ಯೆ 13 ಮತ್ತು 17ರಲ್ಲಿ ಈ ಕಾರ್ಯಾಚರಣೆ ನಡೆದಿದೆ. ಸುಮಾರು 13,000 ಚದರ ಅಡಿ ವಿಸ್ತೀರ್ಣದ ಪ್ರದೇಶದಲ್ಲಿ ನಿರ್ಮಿಸಲಾಗಿದ್ದ ಅನಧಿಕೃತ ಕಟ್ಟಡ ಹಾಗೂ ನಿರ್ಮಾಣಗಳನ್ನು ತೆರವುಗೊಳಿಸಿ, ಜಾಗವನ್ನು ಬಿಡಿಎ ವಶಕ್ಕೆ ಪಡೆದುಕೊಂಡಿದೆ.

‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ!

http://Visit : www.suddidina.com

ಅನಧಿಕೃತ ನಿರ್ಮಾಣಕ್ಕೆ ಬಿಡಿಎ ಬ್ರೇಕ್:

ಬಿಡಿಎಗೆ ಸೇರಿದ ಅಥವಾ ಪ್ರಾಧಿಕಾರದ ವ್ಯಾಪ್ತಿಯಲ್ಲಿರುವ ಜಾಗಗಳಲ್ಲಿ ನಿಯಮಬಾಹಿರವಾಗಿ ನಿರ್ಮಾಣವಾಗುತ್ತಿರುವ ಕಟ್ಟಡಗಳ ವಿರುದ್ಧ ಕ್ರಮ ಕೈಗೊಳ್ಳುವ ಭಾಗವಾಗಿ ಈ ಕಾರ್ಯಾಚರಣೆ ನಡೆಸಲಾಗಿದೆ. ತೆರವು ಕಾರ್ಯಾಚರಣೆಯ ಬಳಿಕ ಆಸ್ತಿಯನ್ನು ಪ್ರಾಧಿಕಾರದ ನೇರ ಸುಪರ್ದಿಗೆ ತೆಗೆದುಕೊಳ್ಳಲಾಗಿದ್ದು, ಸಾರ್ವಜನಿಕ ಹಾಗೂ ಸರ್ಕಾರಿ ಆಸ್ತಿಗಳ ಸಂರಕ್ಷಣೆಗೆ ಬಿಡಿಎ ಕೈಗೊಳ್ಳುತ್ತಿರುವ ಕ್ರಮಕ್ಕೆ ಇದು ಮತ್ತೊಂದು ಉದಾಹರಣೆಯಾಗಿದೆ.

ಸುಮಾರು ₹25 ಕೋಟಿ ಮೌಲ್ಯದ ಆಸ್ತಿ ಇರುವುದರಿಂದ, ಈ ಕಾರ್ಯಾಚರಣೆ ನಗರದ ಆಸ್ತಿ ಸಂರಕ್ಷಣೆ ಹಾಗೂ ಅನಧಿಕೃತ ನಿರ್ಮಾಣಗಳ ನಿಯಂತ್ರಣದ ದೃಷ್ಟಿಯಿಂದ ಮಹತ್ವ ಪಡೆದುಕೊಂಡಿದೆ. ದೊಡ್ಡ ಪ್ರಮಾಣದ ಭೂಮಿಯಲ್ಲಿ ನಿಯಮ ಉಲ್ಲಂಘಿಸಿ ನಿರ್ಮಾಣ ನಡೆಸಿದರೆ ಯಾವುದೇ ಕಾರಣಕ್ಕೂ ಅದನ್ನು ಮುಂದುವರಿಸಲು ಅವಕಾಶ ನೀಡುವುದಿಲ್ಲ ಎಂಬ ಸಂದೇಶವನ್ನು ಈ ಕ್ರಮ ನೀಡಿದೆ.

https://x.com/BDAOfficialGok/status/2092121239175512436?s=20

ಬಹು ಇಲಾಖೆಗಳ ಸಮನ್ವಯದಲ್ಲಿ ಕಾರ್ಯಾಚರಣೆ:

ತೆರವು ಕಾರ್ಯಾಚರಣೆಯನ್ನು ಬಿಡಿಎಯ ವಲಯ ಆಯುಕ್ತರು, ಆರಕ್ಷಕ ಅಧೀಕ್ಷಕರು, ಅಭಿಯಂತರ ಅಧಿಕಾರಿ-1, ಕಾರ್ಯನಿರತ ಆರಕ್ಷಕ ಪಡೆ, ಪಶ್ಚಿಮ ವಿಭಾಗದ ಅಭಿಯಂತರರು ಹಾಗೂ ಸರ್ವೆಯರ್‌ಗಳು ಒಳಗೊಂಡ ತಂಡ ಕೈಗೊಂಡಿತು. ಸ್ಥಳೀಯ ಪೊಲೀಸ್ ಇಲಾಖೆಯ ಸಹಕಾರದೊಂದಿಗೆ ಕಾರ್ಯಾಚರಣೆ ನಡೆಸಲಾಗಿದ್ದು, ಯಾವುದೇ ಅಡಚಣೆ ಉಂಟಾಗದಂತೆ ಅಗತ್ಯ ಭದ್ರತಾ ವ್ಯವಸ್ಥೆ ಮಾಡಲಾಗಿತ್ತು.

ಸ್ಥಳ ಪರಿಶೀಲನೆ, ನಿರ್ಮಾಣ ತೆರವು ಹಾಗೂ ಜಾಗದ ಸ್ವಾಧೀನ ಪ್ರಕ್ರಿಯೆಯನ್ನು ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯದಿಂದ ಪೂರ್ಣಗೊಳಿಸಿದರು. ಕಾರ್ಯಾಚರಣೆ ಬಳಿಕ ತೆರವುಗೊಳಿಸಲಾದ ಪ್ರದೇಶವನ್ನು ಬಿಡಿಎ ತನ್ನ ನಿಯಂತ್ರಣಕ್ಕೆ ತೆಗೆದುಕೊಂಡಿದೆ.

ನಗರದ ಭೂ ಸಂಪತ್ತಿನ ರಕ್ಷಣೆಗೆ ಕಠಿಣ ಹೆಜ್ಜೆ

ಬೆಂಗಳೂರು ವೇಗವಾಗಿ ವಿಸ್ತರಿಸುತ್ತಿರುವ ಸಂದರ್ಭದಲ್ಲಿ ಸರ್ಕಾರಿ ಹಾಗೂ ಪ್ರಾಧಿಕಾರಕ್ಕೆ ಸೇರಿದ ಜಾಗಗಳ ಮೇಲೆ ಅಕ್ರಮ ನಿರ್ಮಾಣಗಳು ನಡೆಯದಂತೆ ನಿಗಾ ವಹಿಸುವುದು ಪ್ರಮುಖ ಸವಾಲಾಗಿದೆ. ಈ ಹಿನ್ನೆಲೆಯಲ್ಲಿ ಬಿಡಿಎ ಕೈಗೊಂಡಿರುವ ₹25 ಕೋಟಿ ಮೌಲ್ಯದ ಆಸ್ತಿ ವಶಪಡಿಸಿಕೊಳ್ಳುವ ಕ್ರಮ, ಅನಧಿಕೃತ ನಿರ್ಮಾಣಗಳ ವಿರುದ್ಧದ ಕಾರ್ಯಾಚರಣೆಗೆ ಮತ್ತಷ್ಟು ಬಲ ನೀಡಿದೆ.

ಬೆಂಗಳೂರು ನಗರದ ಭೂ ಸಂಪತ್ತನ್ನು ಕಾಪಾಡುವ ನಿಟ್ಟಿನಲ್ಲಿ ಬಿಡಿಎಯ ಈ ತೆರವು ಕಾರ್ಯಾಚರಣೆ, ನಿಯಮ ಉಲ್ಲಂಘಿಸುವವರಿಗೆ ಎಚ್ಚರಿಕೆಯ ಸಂದೇಶವಾಗಿದ್ದು, ಮುಂದಿನ ದಿನಗಳಲ್ಲೂ ಇಂತಹ ಕಾರ್ಯಾಚರಣೆಗಳು ಮುಂದುವರಿಯುವ ಸಾಧ್ಯತೆ ಇದೆ.

Continue Reading
Advertisement

Title

ದಿನದ ಸುದ್ದಿ17 hours ago

ಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ವಿವಿಧ ಯೋಜನೆಗಳಾದ ಸಾಫ್ಟ್ ಸೀಡ್ ಕ್ಯಾಪಿಟಲ್, ಶೇ.60 ರಷ್ಟು ಸಹಾಯಧನ ಸಾಲ ಶುಲ್ಕ ಮರುಪಾವತಿ ಮತ್ತು ವಿದ್ಯುಚ್ಚಕ್ತಿ ಸಹಾಯಧನ...

ದಿನದ ಸುದ್ದಿ17 hours ago

ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ ಇಂಡಿಯಾ ಗೇಟ್‌ನಿಂದ ಪೊಲೀಸ್ ಕೇಂದ್ರ...

KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ
ದಿನದ ಸುದ್ದಿ17 hours ago

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ 329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್ 658 OMR ಕಾರ್ಬನ್...

ದಿನದ ಸುದ್ದಿ18 hours ago

ರಿಲೀಸ್‌ಗೂ ಮುನ್ನ ಧರ್ಮಸ್ಥಳದತ್ತ ರಾಕಿಂಗ್‌ ಸ್ಟಾರ್‌ ಯಶ್‌; ‘ಟಾಕ್ಸಿಕ್‌’ ಗೆಲುವಿಗಾಗಿ ವಿಶೇಷ ಪೂಜೆ

ಚೆನ್ನೈ ಪ್ರೀ-ರಿಲೀಸ್‌ ಕಾರ್ಯಕ್ರಮದ ಬಳಿಕ ನೇರವಾಗಿ ಧರ್ಮಸ್ಥಳಕ್ಕೆ ಆಗಮಿಸಿದ ಯಶ್‌; ಕೆಜಿಎಫ್‌-2 ಬಳಿಕ ಮತ್ತೊಮ್ಮೆ ಹಳೆಯ ಸಂಪ್ರದಾಯ ಮುಂದುವರಿಕೆ ಟಾಕ್ಸಿಕ್‌ ರಿಲೀಸ್‌ಗೂ ಮುನ್ನ ಧರ್ಮಸ್ಥಳದಲ್ಲಿ ಯಶ್‌! ಮಂಜುನಾಥನ...

₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ ₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
ದಿನದ ಸುದ್ದಿ18 hours ago

₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ

ರಾಜಾಜಿನಗರದಲ್ಲಿ ಬಿಡಿಎ ಭರ್ಜರಿ ಕಾರ್ಯಾಚರಣೆ: 13,000 ಚದರ ಅಡಿ ಜಾಗ ವಶಕ್ಕೆ 13,000 ಚದರ ಅಡಿ ಪ್ರದೇಶ ತೆರವು; ಪೊಲೀಸ್ ಭದ್ರತೆಯಲ್ಲಿ ಬಿಡಿಎ ಕಾರ್ಯಾಚರಣೆ ನಿವೇಶನ 13...

‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ! ‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ!
ದಿನದ ಸುದ್ದಿ18 hours ago

ಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!

‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ! ಗಡುವು ಮುಕ್ತಾಯ, ಇನ್ನು ಬಿ-ಖಾತೆಯಿಂದ ಎ-ಖಾತೆಗೆ...

ಇ-ಕಾಮರ್ಸ್‌ ತಾಣಗಳಲ್ಲಿ ದತ್ತೂರಿ ಹಣ್ಣು, ಬೀಜ ಮಾರಾಟಕ್ಕೆ ಕಡಿವಾಣ! ಇ-ಕಾಮರ್ಸ್‌ ತಾಣಗಳಲ್ಲಿ ದತ್ತೂರಿ ಹಣ್ಣು, ಬೀಜ ಮಾರಾಟಕ್ಕೆ ಕಡಿವಾಣ!
ದಿನದ ಸುದ್ದಿ19 hours ago

ಆನ್‌ಲೈನ್‌ನಲ್ಲಿ ಮಾರಾಟವಾಗ್ತಿತ್ತು ‘ವಿಷದ ಹಣ್ಣು’! ಇ-ಕಾಮರ್ಸ್‌ ದೈತ್ಯರಿಗೆ ನೋಟಿಸ್‌

ಇ-ಕಾಮರ್ಸ್‌ ತಾಣಗಳಲ್ಲಿ ದತ್ತೂರಿ ಹಣ್ಣು, ಬೀಜ ಮಾರಾಟಕ್ಕೆ ಕಡಿವಾಣ! ಆನ್‌ಲೈನ್‌ನಲ್ಲಿ ‘ವಿಷದ ಹಣ್ಣು’ ಮಾರಾಟ ಅಮೆಜಾನ್‌, ಫ್ಲಿಪ್‌ಕಾರ್ಟ್‌, ಮಿನಿಟ್ಸ್‌ಗೆ ಸರ್ಕಾರದೊಂದ ನೋಟಿಸ್‌ ಈ ಹಣ್ಣು ಖರೀದಿಸಿದ್ರೆ ಅಪಾಯ,...

‘24 ಗಂಟೆ ನೀರು’ ಕನಸಿಗೆ ಬರದ ಬಿಸಿ: ತುಂಗಭದ್ರಾ ನೀರಿನ ಹರಿವು ಕುಸಿತ, ಹರಿಹರದಲ್ಲಿ ಕುಡಿಯುವ ನೀರಿನ ಆತಂಕ ‘24 ಗಂಟೆ ನೀರು’ ಕನಸಿಗೆ ಬರದ ಬಿಸಿ: ತುಂಗಭದ್ರಾ ನೀರಿನ ಹರಿವು ಕುಸಿತ, ಹರಿಹರದಲ್ಲಿ ಕುಡಿಯುವ ನೀರಿನ ಆತಂಕ
ದಿನದ ಸುದ್ದಿ20 hours ago

ತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ

ಮಳೆ ಕೈಕೊಟ್ಟಿತು, ತುಂಗಭದ್ರಾ ಹರಿವು ಕುಸಿಯಿತು: ಹರಿಹರದ ‘ಜಲಸಿರಿ’ಗೆ ನೀರಿನ ಬಿಕ್ಕಟ್ಟಿನ ಬಿಸಿ ಜಾಕ್‌ವೆಲ್ ಬಳಿ ತಾತ್ಕಾಲಿಕ ಕಲ್ಲಿನ ತಡೆಗೋಡೆ ನಿರ್ಮಾಣ ಮಳೆ ಮತ್ತಷ್ಟು ತಡವಾದರೆ ಸಂಪೂರ್ಣ...

ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ ! ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !
ದಿನದ ಸುದ್ದಿ21 hours ago

ಶಾಸಕ ಸಮರ್ಥ್ ಶಾಮನೂರು ಪ್ರಯಾಣಿಸುತ್ತಿದ್ದ ಕಾರು ಅಪಘಾತ: ಅಡ್ಡಬಂದ ವಾಹನ ತಪ್ಪಿಸಲು ಹೋಗಿ ಅವಘಡ !

ಹಿರಿಯೂರು/ದಾವಣಗೆರೆ: ದಾವಣಗೆರೆ ದಕ್ಷಿಣ ಕ್ಷೇತ್ರದ ಶಾಸಕ ಸಮರ್ಥ್ ಶಾಮನೂರು ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬೆಂಗಳೂರಿನಿಂದ ದಾವಣಗೆರೆಗೆ ಪ್ರಯಾಣಿಸುತ್ತಿದ್ದ ವೇಳೆ, ಕೆ.ಆರ್....

ಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ ಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ
ದಿನದ ಸುದ್ದಿ21 hours ago

ಭದ್ರಾ ಡ್ಯಾಂ ನೀರು ಹರಿಸುವಂತೆ ಆಗ್ರಹಿಸಿ ಕರೆ ನೀಡಿದ್ದ ದಾವಣಗೆರೆ ಬಂದ್ ನೀರಸ

ದಾವಣಗೆರೆ: ಭದ್ರಾ ಡ್ಯಾಂ ನೀರು ಹರಿಸಬೇಕು ಎಂದು ಒತ್ತಾಯಿಸಿ ಭಾರತೀಯ ರೈತ ಒಕ್ಕೂಟ ಕರೆ ನೀಡಿದ್ದ ದಾವಣಗೆರೆ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ. ಜನಜೀವನ ಎಂದಿನಂತೆ...

Trending