Connect with us

ದಿನದ ಸುದ್ದಿ

ಪ್ರಸಕ್ತ ಸಂದರ್ಭದಲ್ಲಿ ಬಡವಿಭಾಗಗಳಿಗೆ ಹಣ ವರ್ಗಾವಣೆ ಯೋಜನೆಗಳು

Published

on

ಈಗ ಪ್ರಸ್ತಾಪಿಸಲಾಗುತ್ತಿರುವ ನಗದು ವರ್ಗಾವಣೆಯು, ಮೋದಿ ಸರಕಾರದ ಪಿಎಂ-ಕಿಸಾನ್ ಆಗಲಿ,ಅಥವ ಕಾಂಗ್ರೆಸಿನ “ನ್ಯಾಯ್” ಅಗಲಿ, ನವ ಉದಾರ ಬಂಡವಾಳಶಾಹಿಯು ಬಿಕ್ಕಟ್ಟಿಗೆ ಒಳಗಾಗಿರುವ ಅಂಶವನ್ನು ಸೂಚಿಸುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ನವ-ಉದಾರವಾದಿಬಂಡವಾಳಶಾಹಿಯ ಆಚೆಗೆ ನೋಡಲಾರದ ರಾಜಕೀಯ ಪಡೆಗಳಲ್ಲಿ ಒಂದು ಸನ್ನಿಗೆ ಒಳಗಾದ ರೀತಿಯಲ್ಲಿ ಕೋಮು ಭಾವನೆಗಳನ್ನು ಕೆಣಕಿ ವೋಟು ಬಾಚಿಕೊಳ್ಳುವ ಸನ್ನಾಹದಲ್ಲಿ ತೊಡಗಿದ್ದರೆ, ಇನ್ನೊಂದು, ಜಾತ್ಯಾತೀತ ಮನೋಭಾವ ಹೊಂದಿರುವ ರಾಜಕೀಯ ಪಡೆಯು ನವ ಉದಾರ ಬಂಡವಾಳಶಾಹಿಗೆ ಒಂದು “ಮಾನವೀಯ ಮುಖ” ತೊಡಿಸುವ ಆಶ್ವಾಸನೆ ಕೊಡುತ್ತಿದೆ.

ಇಂತಹನೆರವೇರಲಾರದಆಶ್ವಾಸನೆಗಳನ್ನುಎಡಪಂಥಿಯರುಬೆಂಬಲಿಸಬೇಕೇ? ಬಡವರಿಗೆ ಪರಿಹಾರ ದೊರಕಿಸುವ ಆಶ್ವಾಸನೆಯಿಂದ ಕೂಡಿದ ಕ್ರಮಗಳಿಗೆ ಈ ರಾಜಕೀಯ ಪಡೆಗಳು ಮುಂದಾದಾಗ ಎಡ ಪಂಥೀಯರು ಅದನ್ನು ಸ್ವಾಗತಿಸಬೇಕುಎನ್ನುತ್ತಾರೆಪ್ರೊ. ಪ್ರಭಾತ್ಪಟ್ನಾಯಕ್. . ಏಕೆಂದರೆ, ನವ ಉದಾರವಾದದ ತರ್ಕ ಮತ್ತು ಚಾಳಿಯಿಂದಾಗಿ ಒಂದೋ ಈ ಆಶ್ವಾಸನೆ ಕೊಟ್ಟವರು ಅದನ್ನು ಮುರಿಯುತ್ತಾರೆ, ಆಗ ಎಡ ಶಕ್ತಿಗಳು ಅದನ್ನು ಎತ್ತಿ ತೋರಿಸಿ ಅದರ ವಿರುದ್ಧ ಹೋರಾಡಬೇಕಾಗುತ್ತದೆ, ಇಲ್ಲವೇ ನವ ಉದಾರ ವ್ಯವಸ್ಥೆಯನ್ನೇ ಮೀರಲು ಆರಂಭಗೊಳ್ಳುವ ಒಂದು ಗತಿತಾರ್ಕಿಕ ಪ್ರಕ್ರಿಯೆಯನ್ನು ಎಡ ಶಕ್ತಿಗಳು ಉದ್ದೀಪಿಸಬಹುದು.

ಮೊದಲು ಮೋದಿ ಸರ್ಕಾರವು ತನ್ನ ಕೊನೆಯ ಬಜೆಟ್‌ನಲ್ಲಿ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾಯಿಸುವ ಒಂದು ಯೋಜನೆಯ ಘೋಷಣೆ ಮಾಡಿತು. ಈ ಯೋಜನೆಯ ಪ್ರಕಾರ, ಅತಿ ಸಣ್ಣ ರೈತ ಕುಟುಂಬವೊಂದಕ್ಕೆ ವಾರ್ಷಿಕ 12,000 ರೂಗಳನ್ನು ಅವರ ಬ್ಯಾಂಕ್ ಖಾತೆಗೆ ಸರ್ಕಾರವೇ ನೇರವಾಗಿ ವರ್ಗಾಯಿಸುತ್ತದೆ. ಈ ಯೋಜನೆಯು ಸುಮಾರು 12 ಕೋಟಿ ಮಂದಿಗೆ ಅನುಕೂಲ ಕಲ್ಪಿಸುತ್ತದೆ ಎಂದು ಅವರು ಹೇಳುವಾಗ ಚುನಾವಣೆಗಳಲ್ಲಿ ವೋಟು ಬಾಚಿಕೊಳ್ಳುವುದಷ್ಟೇ ಅವರ ಉದ್ದೇಶ. ಆದರೆ, ಅವರು ಘೋಷಣೆ ಮಾಡಿರುವ ಹಣದ ಮೊತ್ತವು ಅದೆಷ್ಟು ಜುಜುಬಿ ಎಂದರೆ, ಅದರ ಬಗ್ಗೆ ಮೋದಿ ಕೂಡ ತಮ್ಮ ಚುನಾವಣಾ ಭಾಷಣಗಳಲ್ಲಿ ತುತ್ತೂರಿ ಊದುವುದನ್ನೇ ನಿಲ್ಲಿಸಿದ್ದಾರೆ. ಬದಲಿಗೆ, ಬಿಜೆಪಿಯು ಪ್ರಜ್ಞಾ ಠಾಕುರ್ ಅಂತಹ ಭಯೋತ್ಪಾದನೆ ಆರೋಪಿಯನ್ನು ಕಣಕ್ಕಿಳಿಸಿ ಕೋಮು ಭಾವನೆಗಳನ್ನು ಕೆಣಕಿ ವೋಟು ಬಾಚಿಕೊಳ್ಳುವ ತನ್ನ ಹಳೆಯ ಚಾಳಿಗೆ ಮರಳಿದೆ.

ಈಗ ಕಾಂಗ್ರೆಸ್‌ನ ಸರದಿ. ಅದು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ “ನ್ಯಾಯ್” ಎಂಬ ಹೆಸರಿನ ಒಂದು ಹೆಚ್ಚು ಮಹತ್ವಾಕಾಂಕ್ಷೆಯ ಯೋಜನೆಯನ್ನು ಘೋಷಿಸಿದೆ. ಅದರ ಪ್ರಕಾರ, ಸುಮಾರು ಐದು ಕೋಟಿ ಅತ್ಯಂತ ಬಡ ಕುಟುಂಬಗಳಿಗೆ ತಿಂಗಳಿಗೆ 6000 ರೂಗಳನ್ನು ಅವರ ಖಾತೆಗೆ ವರ್ಗಾಯಿಸಲಾಗುವುದು.
ಈ ಯೋಜನೆಗೆ ವಾರ್ಷಿಕ 3.6 ಲಕ್ಷ ಕೋಟಿ ರೂ ವೆಚ್ಚ ತಗಲುತ್ತದೆ. (ಮೋದಿ ಸರ್ಕಾರದ ಯೋಜನೆಗೆ ತಗಲುವ ವೆಚ್ಚ ವಾರ್ಷಿಕ 72,000 ಕೋಟಿ ರೂಗಳು). ಕಾಂಗ್ರೆಸ್‌ನ ಈ ಯೋಜನೆಗೆ ಹಣ ಒದಗಿಸಿಕೊಳ್ಳುವ ಬಗ್ಗೆ ವಿವರಗಳು ಇನ್ನೂ ಲಭ್ಯವಿಲ್ಲವಾದರೂ ಈ ಯೋಜನೆ ಗಂಭೀರತೆಯಿಂದ ಕೂಡಿದೆ ಎಂಬ ಭಾವನೆ ಇದೆ.

ಬಡವರಿಗೆನೆರವಿನ “ಔದಾರ್ಯ”

ಬಡವರಿಗೆ ಈ ದೇಶದಲ್ಲಿ ದೊರೆಯುವ ಯಾವುದೇ ರೀತಿಯ ನೆರವು ಸ್ವಾಗತಾರ್ಹವೇ. “ನ್ಯಾಯ್”ಯೋಜನೆಯಲ್ಲಿ ಎರಡು ಸಮಸ್ಯೆಗಳು ಎದ್ದು ಕಾಣುತ್ತವೆ. ಮೊದಲನೆಯ ಸಮಸ್ಯೆ ಎಂದರೆ, ಇದೊಂದು ನಗದು ಹಣ ವರ್ಗಾವಣೆಯ ಯೋಜನೆ. ಹಾಲಿ ಇರುವ ಕಲ್ಯಾಣ ಕಾರ್ಯಕ್ರಮಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಮತ್ತು ಅಧಿಕವಾಗಿ ಈ ಯೋಜನೆ ಸೇರಿಕೊಳ್ಳುತ್ತದೆ ಎಂದು ಭಾವಿಸಿಕೊಂಡರೂ ಸಹ, ಬಡವರಿಗೆ ಒಂದಿಷ್ಟು ಹಣ ಕೊಟ್ಟು ಸರ್ಕಾರ ಕೈ ತೊಳೆದುಕೊಳ್ಳುತ್ತದೆ, ಅಷ್ಟೆ. ಶಿಕ್ಷಣ ಮತ್ತು ಆರೋಗ್ಯ ಇಂತಹ ಸಾರ್ವತ್ರಿಕ ಅಗತ್ಯ ಸೇವೆಗಳನ್ನು ಒದಗಿಸುವ ತನ್ನ ಜವಾಬ್ದಾರಿಯಿಂದ ಸರ್ಕಾರ ನುಣುಚಿಕೊಳ್ಳುತ್ತದೆ. ಹಾಗಾಗಿ, ಇಂತಹ ಅಗತ್ಯ ಸೇವೆಗಳನ್ನು ಖಾಸಗಿಯಾಗಿ ಒದಗಿಸುವವರು ತಮ್ಮ ಸೇವೆಗಳ ಬೆಲೆ ಏರಿಸಿ ಬಡವರಿಗೆ ವರ್ಗಾವಣೆಯಾದ ಈ ಹಣವನ್ನು ತಮ್ಮ ಜೇಬಿಗೆ ಇಳಿಸಿಕೊಳ್ಳುತ್ತಾರೆ.

ಎರಡನೆಯ ಸಮಸ್ಯೆ ಎಂದರೆ, ಈ ಯೋಜನೆಯು ಕೆಲವೇ ಮಂದಿಗೆ ಮಾತ್ರ ಫಲ ದೊರಕಿಸುವ ಗುರಿ ಹೊಂದಿದೆ. ಹಾಗಾಗಿ, ಅನೇಕ ಮಂದಿ ಈ ಯೋಜನೆಯಿಂದ ಹೊರಗುಳಿಯುತ್ತಾರೆ. ಮೇಲಾಗಿ, ಫಲಾನುಭವಿಗಳ ಆಯ್ಕೆ ಮನಸೋ ಇಚ್ಛೆಯಾಗಿರುತ್ತದೆ. ಉದಾಹರಣೆಗೆ, ಒಂದು ನಿಗದಿಪಡಿಸಿದ ವರಮಾನ ಮಿತಿಯೊಳಗಿರುವ ಒಂದು ಕುಟುಂಬಕ್ಕೆ ತಿಂಗಳಿಗೆ 6000 ರೂ ದೊರೆಯುವಾಗ, ಆ ಮಿತಿಗಿಂತ ಒಂದು ರೂ ಹೆಚ್ಚಿನ ವರಮಾನವಿರುವ ಕುಟುಂಬಕ್ಕೆ ಏನೂ ಸಿಗುವುದಿಲ್ಲ. ಇದು ಬಡ ಜನತೆಯ ನಡುವೆ ವಿರಸ ಸೃಷ್ಠಿಸುತ್ತದೆ.

ಯಾವುದೇ ಸೀಮಿತ ಫಲಾನುಭವಿ ಯೋಜನೆಯು ಸರ್ಕಾರದ ಔದಾರ್ಯಪೂರ್ಣ ಬಕ್ಷೀಸು ಎನಿಸುತ್ತದೆ. ಇದನ್ನು ಪಡೆಯಲು ಒಬ್ಬ ವ್ಯಕ್ತಿಯು ದೈನ್ಯತೆಯಿಂದ ಕೋರಿಕೆ ಸಲ್ಲಿಸಬೇಕಾಗುತ್ತದೆ. ಇದು, ಮೂಲಭೂತವಾಗಿ ಪ್ರಜಾಪ್ರಭುತ್ವ-ವಿರೋಧಿ ನಡೆಯಾಗುತ್ತದೆ.ಕೆಲವು ವಸ್ತುಗಳು ಮತ್ತು ಸೇವೆಗಳನ್ನುಒಂದು ಸಾರ್ವತ್ರಿಕವಾಗಿ ಹಕ್ಕು ಆಗಿ ಪ್ರತಿ ಪ್ರಜೆಗೂ ಒದಗಿಸಬೇಕಾದ ಸರ್ಕಾರವು, ಅದರ ಬದಲಿಗೆ ಅವನ್ನು ದಾನವೋ ಭಿಕ್ಷೆಯೋ ಎಂಬಂತೆ ಕೊಡುವಂತಾಗುತ್ತದೆ. ಆದ್ದರಿಂದ, ಕೆಲವು ಆರ್ಥಿಕ ಹಕ್ಕುಗಳು ಸಾರ್ವತ್ರಿಕವಾಗಿ ಜಾರಿಯಾದಾಗ ಮಾತ್ರ ಇಂತಹ ಸೀಮಿತ ಫಲಾನುಭವಿ ಯೋಜನೆಗಳು ಬಡ ಜನತೆಯ ನಡುವೆ ಸೃಷ್ಠಿಸುವ ವಿರಸ ನಿವಾರಣೆಯಾಗುತ್ತದೆ.

ವರ್ಗಾವಣೆಯ ವಿಷಯವನ್ನು ಈಗಏಕೆ ಎತ್ತಲಾಗಿದೆ?

ಇಂತಹ ಯೋಜನೆಗಳ ಬಗ್ಗೆ ಅನಿಸಿಕೆಗಳನ್ನು ಬದಿಗೆ ಸರಿಸಿ, ಒಂದು ಪ್ರಶ್ನೆ ಕೇಳಬೇಕಿದೆ: ಇದ್ದಕ್ಕಿದ್ದಂತೆಯೇ ಇಂತಹ ವರ್ಗಾವಣೆಯ ವಿಷಯವನ್ನು ಏಕೆ ಎತ್ತಲಾಗಿದೆ? ಅಭಿವೃದ್ಧಿಯ ಬಗ್ಗೆ ಮಾತನಾಡಿಯೇ ಮೋದಿ 2014ರ ಚುನಾವಣೆ ಗೆದ್ದರು. ಅದಕ್ಕೂ ಹಿಂದೆ, ಜಿಡಿಪಿಯ ಬೆಳವಣಿಗೆ ದರ, ಭಾರತ ಒಂದು ಬಲಿಷ್ಠ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುವ ಬಗ್ಗೆ, ಪ್ರಕಾಶಮಾನ ಭಾರತ ಮುಂತಾದ ವಿಷಯಗಳ ಬಗ್ಗೆ ಚರ್ಚೆಯಾಗುತ್ತಿತ್ತೇ ವಿನಃ, ಯಾವತ್ತೂ ಬಡವರಿಗೆ ಹಣ ವರ್ಗಾಯಿಸುವ ಚರ್ಚೆ ಇರಲೇ ಇಲ್ಲ. ಯುಪಿಎ-1 ಸರ್ಕಾರ ಜಾರಿಗೆ ತಂದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಬಗ್ಗೆ 2014 ರ ಚುನಾವಣೆಯ ಸಂದರ್ಭದಲ್ಲಿಯೂ ಸಹ ಚರ್ಚೆಯಾಗಲಿಲ್ಲ. ಈ ಎಲ್ಲ ಅಂಶಗಳನ್ನು ಇನ್ನೊಂದು ರೀತಿಯಲ್ಲಿ ಹೇಳುವುದಾದರೆ, ಜಿಡಿಪಿ ಉನ್ನತವಾಗಿ ಬೆಳೆಯುತ್ತದೆ ಮತ್ತು ಅದರಿಂದಾಗಿಯೇ ಎಲ್ಲರ ಏಳಿಗೆಯಾಗುತ್ತದೆ ಎಂಬುದಾಗಿ ಎಲ್ಲರೂ ನಂಬಿದ್ದರು. ಆದರೆ, ಈಗ ಇಂತಹ ಬೊಗಳೆಯ ಮಾತುಗಳಿಗೆ ಮತದಾರರು ಮರುಳಾಗುತ್ತಿಲ್ಲ.

ಈಗ ಪ್ರಸ್ತಾಪಿಸಲಾಗುತ್ತಿರುವ ನೇರ ವರ್ಗಾವಣೆಯು, ಸಂಕ್ಷಿಪ್ತವಾಗಿ ಹೇಳುವುದಾದರೆ, ನವ ಉದಾರ ಬಂಡವಾಳಶಾಹಿಯು ಬಿಕ್ಕಟ್ಟಿಗೆ ಒಳಗಾಗಿರುವ ಅಂಶವನ್ನು ಸೂಚಿಸುತ್ತದೆ. ನವ ಉದಾರ ಬಂಡವಾಳಶಾಹಿಯು ಉತ್ಪಾದಕ ಶಕ್ತಿಗಳನ್ನು ವೇಗವಾಗಿ ಬೆಳೆಸುವುದರಿಂದ ಜಿಡಿಪಿ ಉನ್ನತವಾಗಿ ಬೆಳೆಯುತ್ತದೆ. ಅದರಿಂದ ಎಲ್ಲರೂ ಪ್ರಯೋಜನ ಪಡೆಯುತ್ತಾರೆ ಎಂದು ಪ್ರಚುರಪಡಿಸುತ್ತಿದ್ದ ಅದರ ಸಿದ್ದಾಂತವು ಈಗ ವಿಶ್ವಾಸಾರ್ಹತೆ ಕಳೆದುಕೊಂಡಿದೆ.
ಈ ಸಂಗತಿ ಬಿಜೆಪಿಯು ಹುಚ್ಚು ಹಿಡಿದ ರೀತಿಯಲ್ಲಿ ಪ್ರಚೋದನಾಕಾರಿ ಕೋಮು ಪ್ರಚಾರಕ್ಕೆ ಮರಳಿರುವ ಅಂಶದಲ್ಲಿಯೂ ಕಾಣ ಬರುತ್ತದೆ. ಹಿಂದೆ ಅಭಿವೃದ್ಧಿಯ ಬಗ್ಗೆ ಅವರು ಕೊಟ್ಟ ಭರವಸೆಗಳು ಈಗ ಟೊಳ್ಳು ಶಬ್ದಗಳಾಗಿ ಕೇಳಿಸುತ್ತಿವೆ, ಅವುಗಳನ್ನು ಈಗ ಪುನರಾವರ್ತಿಸುವಂತಿಲ್ಲ. ಸಧ್ಯದ ಪರಿಸ್ಥಿತಿಯಲ್ಲಿ, ಅಂದರೆ, ಬಂಡವಾಳಶಾಹಿಯ ಬಿಕ್ಕಟ್ಟಿನ ಸಂರ್ಭದಲ್ಲಿ, “ಅಭಿವೃದ್ಧಿ” ಘೋಷಣೆಯ ಮೂಲಕ ಎಳ್ಳಷ್ಟೂ ಪರಿಹಾರ ಸಿಗುವುದಿಲ್ಲ ಎಂಬುದು ಜನತೆಗೆ ಅನುಭವದ ಮೂಲಕವೇ ತಿಳಿದಿದೆ.

ಈ ವಿದ್ಯಮಾನಗಳನ್ನು ಇನ್ನೊಂದು ರೀತಿಯಲ್ಲಿ ಹೇಳುವುದಾದರೆ, ನವ ಉದಾರ ಬಂಡವಾಳಶಾಹಿಯು ಇಂದು ಬಿಕ್ಕಟ್ಟಿಗೆ ಒಳಗಾಗಿರುವ ಪರಿಸ್ಥಿತಿಯಲ್ಲಿ ಅದಕ್ಕೆ ಬದ್ಧವಾಗಿರುವ ಒಂದು ರಾಜಕೀಯ ಪಡೆ ಸನ್ನಿಗೆ ಒಳಗಾದ ರೀತಿಯಲ್ಲಿ ಕೋಮು ಭಾವನೆಗಳನ್ನು ಕೆಣಕಿ ವೋಟು ಬಾಚಿಕೊಳ್ಳುವ ಸನ್ನಾಹದಲ್ಲಿ ತೊಡಗಿದೆ. ಅದೇ ಸಮಯದಲ್ಲಿ, ಇನ್ನೊಂದು ರಾಜಕೀಯ ಪಡೆ ಇನ್ನೊಂದು ರೀತಿಯಲ್ಲಿ ಕಾರ್ಯಮಗ್ನವಾಗಿದೆ. ವಿಶಾಲ ಜಾತ್ಯಾತೀತ ಮನೋಭಾವ ಹೊಂದಿರುವ ಈ ಪಡೆಯು ನವ ಉದಾರ ಬಂಡವಾಳಶಾಹಿಗೆ ಒಂದು ಮಾನವೀಯ ಮುಖ ತೊಡಿಸಿ, ಸಮಾಜದ ತಳಸ್ತರದದಲ್ಲಿವ ಒಟ್ಟು ಜನಸಂಖ್ಯೆಯ ಐದನೇ ಒಂದು ಭಾಗದಷ್ಟು ಮಂದಿಗೆ ನೇರ ಹಣ ವರ್ಗಾವಣೆಯ ಮೂಲಕ ನವ ಉದಾರ ಬಂಡವಾಳಶಾಹಿಯ ದಿಕ್ಪಥವನ್ನು ಪರಿಷ್ಕರಿಸುವ ಆಶ್ವಾಸನೆ ಕೊಡುತ್ತಿದೆ.

ನಿಜ, ಇಂತಹ ನೇರ ಹಣ ವರ್ಗಾವಣೆ ಯೋಜನೆ ಕಾರ್ಯಸಾಧ್ಯ, ಅವಕ್ಕೆ ಹಣ ಹೊಂದಿಸಿಕೊಳ್ಳುವುದು ಸಾಧ್ಯವಿದೆ. ಅದಕ್ಕೆ ತಗಲುವ ವೆಚ್ಚವು ಜಿಡಿಪಿಯ ಸುಮಾರು ಶೇ.2 ರಷ್ಟಾಗುತ್ತದೆ. ಆದರೆ, ನವ ಉದಾರ ಬಂಡವಾಳಶಾಹಿಯ ಅಂತರ್ಗತ ತರ್ಕವೇ ಇಂತಹ ವರ್ಗಾವಣೆಗೆ ಅಡ್ಡಿಯಾಗುತ್ತದೆ. ಜಿಡಿಪಿಯ ಸುಮಾರು ಶೇ.2 ರಷ್ಟಾಗುವ ಈ ಮೊತ್ತವನ್ನು ಬಂಡವಾಳದಾರರ ಮೇಲೆ ತೆರಿಗೆ ಹಾಕಿಯೋ ಅಥವಾ ಸಮಾಜದ ಶ್ರೀಮಂತ ವಿಭಾಗಗಳ ಮೇಲೆ ತೆರಿಗೆ ಹಾಕುವ ಮೂಲಕವೋ ಹೊಂದಿಸಿಕೊಳ್ಳಬಹುದು. ಅಥವಾ, ವಿತ್ತೀಯ ಕೊರತೆಯ ಗಾತ್ರವನ್ನು ಹೆಚ್ಚಿಸಿಕೊಳ್ಳುವ ಮೂಲಕ, ಅಥವಾ ಈ ಎರಡೂ ವಿಧಾನಗಳ ಸಂಯೋಜನೆಯ ಮೂಲಕವೂ ಹೊಂದಿಸಿಕೊಳ್ಳಬಹುದು.

ಆದರೆ ಸಂಪನ್ಮೂಲಗಳನ್ನು ಹೊಂದಿಸಿಕೊಳ್ಳುವ ಈ ಎರಡೂ ವಿಧಾನಗಳನ್ನು ಜಾಗತೀಕರಣಗೊಂಡ ಹಣಕಾಸು ಬಂಡವಾಳವು ಅನಿಷ್ಟವೆಂದೇ ಬಗೆಯುತ್ತದೆ. ಈ ಕಾರಣದಿಂದಾಗಿ, ನೇರ ಹಣ ವರ್ಗಾವಣೆಯ ಯೋಜನೆಯನ್ನು ಜಾರಿಗೊಳಿಸ ಬಯಸುವ ಯಾವುದೇ ಸರ್ಕಾರವು ನವ ಉದಾರವಾದದ ಏರ್ಪಾಡಿನಲ್ಲಿ ಕೆಲವು ಬದಲಾವಣೆ ಮಾಡಬೇಕಾಗುತ್ತದೆ (ಆಗ, ಈ ಬದಲಾವಣೆಯ ಕ್ರಿಯೆಯು ತನ್ನದೇ ಒಂದು ಗತಿ ತಾರ್ಕಿಕ ಚಲನೆಯನ್ನು ಹೊಮ್ಮಿಸುತ್ತದೆ). ಇದು ಸಾಧ್ಯವಾಗದಿದ್ದಲ್ಲಿ, ಹಾಲಿ ಕಲ್ಯಾಣ ಕಾರ್ಯಕ್ರಮಗಳನ್ನು ನಿಲ್ಲಿಸುವ ಮೂಲಕ ವರ್ಗಾವಣೆ ಯೋಜನೆಗೆ ಹಣ ಹೊಂದಿಸಿಕೊಳ್ಳಬೇಕಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ ವರ್ಗಾವಣೆಯ ಉದ್ದೇಶವೇ ವಿಫಲವಾಗುತ್ತದೆ.

ಕಲ್ಯಾಣವೆಚ್ಚಗಳನ್ನುಸ್ವಾಗತಿಸುವುದುಪರಿಷ್ಕರಣವಾದವೇ?

ಬಂಡವಾಳಶಾಹಿ ವ್ಯವಸ್ಥೆಯು ತನ್ನನ್ನು ತಾನು ಸಮರ್ಥಿಸಿಕೊಳ್ಳುವ ಸಲುವಾಗಿಯೇ ಸ್ವಲ್ಪ ಮಟ್ಟಿನ ನೆರವನ್ನು ಬಡವರಿಗೆ ಒದಗಿಸಬಲ್ಲದು, ಮತ್ತು ಒದಗಿಸುತ್ತದೆ, ಇಂತಹ ವರ್ಗಾವಣೆ ಯೋಜನೆಗಳನ್ನು, ಅಥವ ಒಟ್ಟಾರೆಯಾಗಿ ಕಲ್ಯಾಣ ವೆಚ್ಚಗಳನ್ನು ಸ್ವಾಗತಿಸುವುದು ಪರಿಷ್ಕರಣವಾದ ಆಗುತ್ತದಷ್ಟೇ ಎಂಬುದಾಗಿ ವಾದಿಸುವ ಪ್ರವೃತ್ತಿ ಕೆಲವು ಎಡ ಪಂಥೀಯ ವಲಯಗಳಲ್ಲಿದೆ. ನೇರ ಹಣ ವರ್ಗಾವಣೆ ಅಥವಾ ಕಲ್ಯಾಣ ಕಾರ್ಯಕ್ರಮಗಳು ವ್ಯವಸ್ಥೆಯಲ್ಲಿ ಕಾರ್ಯಸಾಧ್ಯವಾದ ಕೇವಲ ಸುಧಾರಣಾ ಕ್ರಮಗಳು. ಅದಕ್ಕೆ ಪ್ರಶಂಸೆಯ ಅಗತ್ಯವಿಲ್ಲ ಎನ್ನುತ್ತಾರೆ ಅವರು.

ವ್ಯಂಗ್ಯದ ಸಂಗತಿಯೆಂದರೆ ಬಡವರಿಗೆ ನೆರವು ಒದಗಿಸುವ ಬಗ್ಗೆ ನವ ಉದಾರ ಬಂಡವಾಳಶಾಹಿಯ ಸಮರ್ಥಕರು ಹೊಂದಿರುವ ಅಭಿಪ್ರಾಯವೂ ಇದೇ ರೀತಿಯಲ್ಲಿದೆ. ಬಡವರಿಗೆ ನೆರವು ಒದಗಿಸಬಹುದಾದಷ್ಟು ಹೊಂದಿಕೆಯನ್ನು ಅದು ಮಾಡಿಕೊಳ್ಳಬಲ್ಲದು, ಅದರ ಅಂತರ್ಗತ ತರ್ಕವು ಇಂತಹ ನೆರವಿಗೆ ಅಡ್ಡಿಯಾಗುವುದಿಲ್ಲ ಎಂದು ಅವರು ವಾದಿಸುತ್ತಾರೆ.

ಶ್ರೀಮಂತರಿಗೆ ಮತ್ತು ಕಾರ್ಪೊರೇಟ್‌ಗಳಿಗೆ ತೆರಿಗೆ ಕಡಿತ ಮಾಡಿದರೆ ಅದರ ಫಲವು ಕೆಳಕ್ಕೆ ಜಿನುಗಿ ತಳಸ್ತರಗಳಿಗೂ ಪ್ರಯೋಜನ ಸಿಗುತ್ತದೆ ಎಂಬ ಜಿನುಗು ಸಿದ್ಧಾಂತವು ಅಪಹಾಸ್ಯಗೊಳಗಾಗಿದ್ದ ಸಂದರ್ಭದಲ್ಲಿ ನವ ಉದಾರ ಬಂಡವಾಳಶಾಹಿಯ ಹೊಸ ಸಮರ್ಥನೆಯಾಗಿ, ಹನ್ನೊಂದನೇ ಪಂಚವಾರ್ಷಿಕ ಯೋಜನೆಯ ದಸ್ತಾವೇಜಿನಲ್ಲಿ, ಜಿಡಿಪಿ ಉನ್ನತವಾಗಿ ಬೆಳೆದಾಗ ಮಾತ್ರ ಸರ್ಕಾರದ ಆದಾಯವೂ ವೇಗವಾಗಿ ಬೆಳೆದು ಬಡತನ ತೊಡೆದು ಹಾಕುವ ಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚು ಹಣ ದೊರೆಯುತ್ತದೆ ಎಂಬುದಾಗಿ ಹೇಳಲಾಗಿತ್ತು. ಇದೊಂದು ಸೋಗು. ಬಡತನ ನಿವಾರಿಸುವ ಸಲುವಾಗಿ ಅಗತ್ಯ ಸಂಪನ್ಮೂಲಗಳ ಕ್ರೋಢೀಕರಣಕ್ಕೆ ನವ ಉದಾರ ಆಳ್ವಿಕೆಯು ಅಡ್ಡಿಪಡಿಸುವುದಿಲ್ಲ ಎಂದು ತೋರಿಸಲು ಈ ರೀತಿಯ ಸೋಗು ಹಾಕಲಾಗಿತ್ತು.

ಸರ್ಕಾರದ ಈ ಅಭಿಪ್ರಾಯ ಸರಿಯೇ ಇದ್ದರೆ, ನವ ಉದಾರ ಆಳ್ವಿಕೆಯಲ್ಲಿ ಉನ್ನತವಾಗಿ ಜಿಡಿಪಿ ಬೆಳೆದದ್ದರ ಜೊತೆಯಲ್ಲೇ ಬಡತನವೂ ಅಗಾಧವಾಗಿ ಬೆಳೆಯುತ್ತಿರಲಿಲ್ಲ. ಹಸಿವೆಯ ಹಾಹಾಕಾರ ತೀವ್ರಗೊಳ್ಳುತ್ತಿರಲಿಲ್ಲ. ನಿರುದ್ಯೋಗ ಬೃಹದಾಕಾರವಾಗಿ ಬೆಳೆಯುತ್ತಿರಲಿಲ್ಲ. ದುಡಿಯುವ ಜನತೆಯ ತಲಾ ವರಮಾನವು ಉದಾರೀಕರಣ ಪೂರ್ವದಲ್ಲಿ ಇದ್ದುದಕ್ಕಿಂತಲೂ ಕೆಳಗೆ ಇಳಿಯುವ ಮಟ್ಟಿಗೆ ಅವರನ್ನು ಹಿಂಡುತ್ತಿರಲಿಲ್ಲ. ಇವೆಲ್ಲವೂ ಅಲ್ಲಗಳೆಯಲಾಗದ ವಾಸ್ತವ ಸಂಗತಿಗಳು.

ಸ್ವಲ್ಪವೂ ಜಗ್ಗದ ನವ ಉದಾರ ಬಂಡವಾಳಶಾಹಿಯ ವರ್ತನೆಯಿಂದಾಗಿಯೇ ಇವೆಲ್ಲವೂ ಘಟಿಸಿವೆ. ಜೊತೆಯಲ್ಲಿ, ಅದರ ಅಂತರ್ಗತ ತರ್ಕದ ಅಗತ್ಯವಾಗಿ ಒಂದು ಧೃವದಲ್ಲಿ ಬೆಳೆಯುತ್ತಲೇ ಹೋಗುವ ಐಶ್ವರ್ಯವನ್ನೂ, ಇನ್ನೊಂದು ಧೃವದಲ್ಲಿ ಹೆಚ್ಚುತ್ತಲೇ ಹೋಗುವ ಬಡತನವನ್ನೂ ಹುಟ್ಟಿಸಿದೆ. ಇಂತಹ ಒಂದು ವ್ಯವಸ್ಥೆಯೊಳಗೆ ಬಡತನ ನಿವಾರಣೆ ಸಾಧ್ಯವೇ ಇಲ್ಲ. ಬಡತನ ನಿವಾರಣೆ ಸಾಧ್ಯವಾಗಬೇಕು ಎಂದಾದರೆ ನವ ಉದಾರ ಆಳ್ವಿಕೆಯ ಏರ್ಪಾಡನ್ನು ಮೀರಲೇಬೇಕಾಗುತ್ತದೆ.

ಕರಾರುವಾಕ್ಕಾಗಿ ಇದೇ ಕಾರಣದಿಂದಾಗಿ, ಬಡವರಿಗೆ ಪರಿಹಾರ ದೊರಕಿಸುವ ಆಶ್ವಾಸನೆಯಿಂದ ಕೂಡಿದ ಕ್ರಮಗಳನ್ನು ಕೈಗೊಳ್ಳಲು ನವ ಉದಾರವಾದದಿಂದ ಆಚೆ ನೋಡಲಾಗದ ರಾಜಕೀಯ ಪಡೆಗಳು ಮುಂದಾದಾಗ ಎಡ ಪಂಥೀಯರು ಅದನ್ನು ಸ್ವಾಗತಿಸಬೇಕು. ಏಕೆಂದರೆ, ನವ ಉದಾರವಾದದ ತರ್ಕ ಮತ್ತು ಚಾಳಿಯಿಂದಾಗಿ ಒಂದೋ ಈ ಆಶ್ವಾಸನೆ ಕೊಟ್ಟವರು ಅದನ್ನು ಮುರಿಯುತ್ತಾರೆ, ಆಗ ಎಡ ಶಕ್ತಿಗಳು ಅದನ್ನು ಎತ್ತಿ ತೋರಿಸಿ ಅದರ ವಿರುದ್ಧ ಹೋರಾಡಬೇಕಾಗುತ್ತದೆ, ಇಲ್ಲವೇ ನವ ಉದಾರ ವ್ಯವಸ್ಥೆಯನ್ನು ಮೀರಲು ಆರಂಭಗೊಳ್ಳುವ ಒಂದು ಗತಿತಾರ್ಕಿಕ ಪ್ರಕ್ರಿಯೆಯನ್ನು ಎಡ ಶಕ್ತಿಗಳು ಉದ್ದೀಪಿಸಬಹುದು.

ನವ ಉದಾರವಾದಿ ಬಂಡವಾಳಶಾಹಿಯ ಬಿಕ್ಕಟ್ಟಿನ ಸಮಯದಲ್ಲಿ ಮತ್ತು ಅದರ ಪರಿಣಾಮವಾಗಿ ಜನತೆ ಜರ್ಜರಿತರಾಗಿದ್ದಾರೆ. ಅವರ ಆಕ್ರೋಶವನ್ನು ಬೇರೆಡೆಗೆ ತಿರುಗಿಸುವ ಉದ್ದೇಶದಿಂದ ಕಾರ್ಪೊರೇಟ್-ಹಣಕಾಸು ಕುಳಗಳು ಕೋಮುವಾದಿ ಮತ್ತು ಛಿದ್ರಕಾರಿ ಅಜೆಂಡಾ ಹೊಂದಿರುವ ಶಕ್ತಿಗಳನ್ನು ಪ್ರೋತ್ಸಾಹಿಸುವ ಪ್ರವೃತ್ತಿ ಬೆಳೆಸಿಕೊಂಡಿರುವ ಸನ್ನಿವೇಶದಲ್ಲಿ, ಜನ ಜೀವನದ ದೈಹಿಕ ಸ್ಥಿತಿ-ಗತಿಗಳ ಬಗ್ಗೆ ಗಮನವನ್ನು ಕೇಂದ್ರೀಕರಿಸಿ ಅವರ ಸ್ಥಿತಿ-ಗತಿಗಳನ್ನು ಸುಧಾರಿಸುವ ಯಾವುದೇ ಕಾರ್ಯಕ್ರಮವು ಆ ಕಾರಣದಿಂದಾಗಿಯೇ ಕಾರ್ಪೊರೇಟ್-ಕೋಮುವಾದಿ ಮೈತ್ರಿಗೆ ಎದುರಾಗುವ ಒಂದು ಪ್ರಗತಿಪರ ಪ್ರತಿ-ಶಕ್ತಿಯಾಗುತ್ತದೆ. ಜನರ ಜೀವನ, ಅವರ ಸ್ಥಿತಿ-ಗತಿಗಳನ್ನು ಸುಧಾರಿಸುವ ಕಾರ್ಯಕ್ರಮ ಮತ್ತು ನವ ಉದಾರವಾದಿ ಬಂಡವಾಳಶಾಹಿಯ ತರ್ಕ ಇವುಗಳ ನಡುವೆ ಇರುವ ವೈರುಧ್ಯದ ಅರಿವಿಲ್ಲದ ಬೂರ್ಜ್ವಾ ರಾಜಕೀಯ ಪಡೆಗಳು ಜನರ ಸ್ಥಿತಿ-ಗತಿಗಳು ಸುಧಾರಿಸಬೇಕೆಂದು ಸಮರ್ಥಿಸುವುದು ಅಷ್ಟರಮಟ್ಟಿಗೆ ಒಳ್ಳೆಯದೇ.

-ಪ್ರೊ. ಪ್ರಭಾತ್ಪಟ್ನಾಯಕ್
ಅನು: ಕೆ.ಎಂ.ನಾಗರಾಜ್

( ಈ ವಾರದ ಜನಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ಲೇಖನ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

Published

on

ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರುಗಳಿಗೆ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಸೂಚನೆ ನೀಡಿದರು.

ಅವರು (ಏ.15) ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಹಾಗೂ ಮುಂಬರುವ ಬೇಸಿಗೆಯ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಜಿಲ್ಲೆಯ ಒಟ್ಟು 533 ಕೆರೆಗಳ ಪೈಕಿ ಇನ್ನೂ 20 ಕೆರೆಗಳ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಚನ್ನಗಿರಿ ತಾಲ್ಲೂಕಿನ 5 ಕೆರೆಗಳಾದ ಹರೇಗಂಗೂರು, ಸಾಗರಪೇಟೆ, ದಾಗಿನಕಟ್ಟೆ, ತ್ಯಾವಣಿಗ ಮತ್ತು ಸೂಳೆಕೆರೆ; ಹರಿಹರ ತಾಲ್ಲೂಕಿನ 7 ಕೆರೆಗಳಾದ ಹಿಂಡಸಗಟ್ಟ, ಜಿಗಳಿ, ಹಾಲಿವಾಣ, ಕಮಲಾಪುರ, ಗುಡ್ಡದತುಮ್ಮಿನಕಟ್ಟೆ, ಕುಂಬಳೂರು, ಯಲವಟ್ಟಿ; ದಾವಣಗೆರೆ ತಾಲ್ಲೂಕಿನ ಹೊನ್ನೂರು, ಹದಡಿ, ಮಾಳಗೊಂಡನಹಳ್ಳಿಯ 3 ಕೆರೆಗಳು ಹಾಗೂ ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ, ಬನ್ನಿಕೊಡು, ಕುಂಬಳೂರು, ಸಾಸ್ವೆಹಳ್ಳಿ ಮತ್ತು ಬಲಮುರಿ ಕೆರೆಗಳನ್ನು ಶೀಘ್ರವಾಗಿ ಗುರುತಿಸಿ ತೆರವುಗೊಳಿಸಲು ಕ್ರಮವಹಿಸಬೇಕು. ತೆರವು ಕಾರ್ಯಾಚರಣೆಯನ್ನು ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣದೊಂದಿಗೆ ಪಾರದರ್ಶಕವಾಗಿ ನಡೆಸಿ ಗ್ರಾಮ ಪಂಚಾಯತಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಬೇಕು ಎಂದು ತಿಳಿಸಿದರು.

ಚನ್ನಗಿರಿ ಹಾಗೂ ದಾವಣಗೆರೆ ತಾಲ್ಲೂಕಿನ ಹಲವು ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವ ಕೆರೆಗಳ ನೀರಿನ ಮಾದರಿಯನ್ನು ಪ್ರತಿ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷಿಸಿ ವರದಿ ಸಲ್ಲಿಸಬೇಕು. ಯೋಗ್ಯವಾಗಿದ್ದರೆ ಮಾತ್ರ ಕುಡಿಯಲು ಬಳಸಬೇಕು ಎಂದರು.

ಕೆರೆಗಳಲ್ಲಿ ಹೂಳೆತ್ತುವ ಕಾರ್ಯವನ್ನು ಕೇವಲ ರೈತರಿಗೆ ಮಾತ್ರ ಸೀಮಿತಗೊಳಿಸಬೇಕು. ಅಕ್ರಮ ಮಣ್ಣು ಸಾಗಾಟಕ್ಕೆ ಆಸ್ಪದ ನೀಡದಂತೆ ಭೂ-ವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಮಣ್ಣಿನ ಮೂಲ ಪದರ ಹಾನಿಯಾಗದಂತೆ ಕ್ರಮವಹಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಕೆರೆಗಳನ್ನು ಒತ್ತುವರಿಯಿಂದ ಶಾಶ್ವತವಾಗಿ ಮುಕ್ತಗೊಳಿಸಲು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕೆರೆಗಳ ಬಫರ್ ವಲಯದಲ್ಲಿ ಸಸಿಗಳನ್ನು ನೆಟ್ಟು ಜೈವಿಕ ಬೇಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಮುಂಬರುವ ಮಳೆಗಾಲದ ವೇಳೆಗೆ ಸಸಿಗಳನ್ನು ನೆಡಲು ಸಿದ್ಧತೆ ಮಾಡಿಕೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯ ವ್ಯಾಪ್ತಿಯಲ್ಲಿ ಕೆರೆಗಳ ನೀರಿನ ಸಂಗ್ರಹಣಾ ಮಟ್ಟದ ಕುರಿತು ವಿವರ (ಮಾರ್ಚ್ 31 ಅಂತ್ಯಕ್ಕೆ)

ಪೂರ್ಣ ತುಂಬಿದ ಕೆರೆಗಳು: ಜಿಲ್ಲೆಯ ಒಟ್ಟು 08 ಕೆರೆಗಳು ಶೇ. 100 ರಷ್ಟು ಭರ್ತಿಯಾಗಿವೆ.

ಶೇ. 51 ರಿಂದ ಶೇ. 99 ರಷ್ಟು: ಒಟ್ಟು 47 ಕೆರೆಗಳಲ್ಲಿ ಉತ್ತಮ ನೀರಿನ ಸಂಗ್ರಹವಿದೆ.

ಶೇ. 31 ರಿಂದ ಶೇ. 50 ರಷ್ಟು: ಸುಮಾರು 164 ಕೆರೆಗಳು ಅರ್ಧದಷ್ಟು ನೀರಿನ ಮಟ್ಟವನ್ನು ಹೊಂದಿವೆ.

ಶೇ. 1 ರಿಂದ ಶೇ. 30 ರಷ್ಟು: ಜಿಲ್ಲೆಯ ಗರಿಷ್ಠ ಅಂದರೆ 250 ಕೆರೆಗಳಲ್ಲಿ ಕನಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದೆ.

ಶೂನ್ಯ ಮಟ್ಟ (ತುಂಬಿರದ ಕೆರೆಗಳು): ಪ್ರಸ್ತುತ ಜಿಲ್ಲೆಯ 64 ಕೆರೆಗಳಲ್ಲಿ ನೀರಿನ ಸಂಗ್ರಹವಿಲ್ಲದೆ ಖಾಲಿಯಾಗಿವೆ.

ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣನವರ್‌, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್‌, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರುಗಳು, ಬೃಹತ್‌ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ

Published

on

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ವಯೋವೃದ್ಧರ ಕುರಿತು ಬುಧವಾರ ಸಾಮಾಜಿಕ ಸಮೀಕ್ಷೆ ನಡೆಸಿದರು.

ನಗರದ ತರಳಬಾಳು ಬಡಾವಣೆಯ ಆಯೂಷ್ ಚಾರಿಟೇಬಲ್ ಟ್ರಸ್ಟ್ ನ ಆರೈಕೆ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಅಧ್ಯಯನ ನಡೆಸಿದರು. ಸಂದರ್ಶನದ ವೇಳೆ ವೃದ್ಧರ ಸಮಸ್ಯೆಗಳನ್ನು ಆಲಿಸಿದ ಕೆಲ ವಿದ್ಯಾರ್ಥಿಗಳು ಭಾವುಕರಾದರು.

ಈ ಸಂದರ್ಭದಲ್ಲಿ ವಿಭಾಗದ ಅಧ್ಯಾಪಕರುಗಳಾದ ಡಾ. ಶಿವಣ್ಣ ಹೆಚ್. ಎಸ್, ಡಾ. ಸುರೇಶ್ ಹೆಚ್. ಎನ್, ಡಾ. ಮಾದನಾಯ್ಕ ಹೆಚ್ ಇವರು ಮಾರ್ಗದರ್ಶನ ನೀಡಿದ್ದು, ಪ್ರಾಂಶುಪಾಲರಾದ ಬಸವರಾಜ್ ಬಿ ತಹಸೀಲ್ದಾರ್ ಮತ್ತು ಆಶ್ರಮದ ಅರ್ಜುನ್, ವಿರೇಶ್ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

Published

on

ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ಅಭಿಪ್ರಾಯಪಟ್ಟರು.

ಅವರು ಇಂದು (ಎ.14) ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ದಾವಣಗೆರೆ ಮಹಾನಗರ ಪಾಲಿಕೆ , ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಇವರ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆ ಕಾರ್ಯಕ್ರಮ ಉದ್ಪಾಟಿಸಿ ನಂತರ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ಅವರು ಮಾತನಾಡಿದರು.

3000 ವರ್ಷಗಳ ಇತಿಹಾಸವಿರುವ ನಮ್ಮ ಸಮಾಜದಲ್ಲಿ, ಬ್ರಿಟಿಷರ ಆಳ್ವಿಕೆಯ ನಂತರವೂ ದೇಶದ ಸಮಗ್ರ ಜನತೆಗೆ ಸಮಾನತೆಯನ್ನು ಕಲಿಸಿಕೊಟ್ಟವರು ಬಾಬಾಸಾಹೇಬ್ ಅಂಬೇಡ್ಕರ್. ಮನುಷ್ಯನಿಗೆ ಮೆದುಳು ಮತ್ತು ಆತ್ಮ ಎಷ್ಟು ಮುಖ್ಯವೋ, ದೇಶಕ್ಕೆ ಸಂವಿಧಾನವು ಅಷ್ಟೇ ಮುಖ್ಯ. ವಿಶೇಷವಾಗಿ 32ನೇ ವಿಧಿಯು ಸಂವಿಧಾನದ ಆತ್ಮವಿದ್ದಂತೆ ,ಅಂಬೇಡ್ಕರ್ ಅವರು ಲಂಡನ್ ಸ್ಕೂಲ್ ಆಫ್ ಎಕನಾಮಿಕ್ಸ್ ಮತ್ತು ಕೊಲಂಬಿಯಾ ವಿಶ್ವವಿದ್ಯಾಲಯದಂತಹ ಪ್ರತಿಷ್ಠಿತ ಸಂಸ್ಥೆಗಳಲ್ಲಿ ಶಿಕ್ಷಣ ಪಡೆದಿದ್ದು, ಅವರ ಬೌದ್ಧಿಕ ಸಾಮರ್ಥ್ಯವೇ ಇಂದಿನ ಸಂವಿಧಾನಕ್ಕೆ ಬಲ ತುಂಬಿದೆ ಎಂದು ಅವರು ವಿವರಿಸಿದರು.

ವಿದ್ಯಾರ್ಥಿಗಳು ಕೇವಲ ಪರೀಕ್ಷೆಗಳಲ್ಲಿ ಉತ್ತೀರ್ಣರಾಗುವುದಕ್ಕಷ್ಟೇ ಶಿಕ್ಷಣ ಪಡೆಯಬಾರದು. ಬದಲಾಗಿ, ಸ್ವತಂತ್ರ ಆಲೋಚನೆ ಮತ್ತು ಸಮಾಜದ ಹಕ್ಕುಗಳನ್ನು ಕಾಪಾಡಿಕೊಳ್ಳುವ ಬದ್ಧತೆಯನ್ನು ಬೆಳೆಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಅಂಬೇಡ್ಕರ್ ಮತ್ತು ಅಬ್ದುಲ್ ಕಲಾಂ ಅವರಂತಹ ಮಹನೀಯರು ನಮಗೆ ಪ್ರೇರಣೆಯಾಗಬೇಕು. ಬದ್ಧತೆ ಮತ್ತು ಪ್ರಯತ್ನವಿದ್ದರೆ ಯಾರೂ ಏನನ್ನು ಬೇಕಾದರೂ ಸಾಧಿಸಬಹುದು ಎಂದು ತಿಳಿಸಿದರು.

ನಾವೆಲ್ಲರು ಸಂವಿಧಾನವನ್ನು ಕಡ್ಡಾಯವಾಗಿ ಓದಿ ತಿಳಿದುಕೊಳ್ಳಬೇಕು, ಕನಿಷ್ಠ 12 ರಿಂದ 18 ರವರೆಗಿನ ಪರಿಚ್ಛೇದಗಳನ್ನು ಕಡ್ಡಾಯವಾಗಿ ತಿಳಿದುಕೊಂಡಿರಬೇಕು. ಹಿಂದೆ ವಚನಕಾರರು ರಚಿಸಿದ ವಚನೆಗಳೆ ಸಂವಿಧಾನದ ಆಶಯಗಳು ಆಗಿವೆ, ವಿದೇಶಗಳಲ್ಲಿ ಮಹಿಳೆಯರಿಗೆ ಸಮಾನ ಅವಕಾಶ ಇಲ್ಲ, ಆದರೆ ಭಾರತದಲ್ಲಿ ಸ್ವಾತಂತ್ರ್ಯ ನಂತರ ಮಹಿಳೆಯರಿಗೆ ಸಮಾನತೆಯನ್ನು ಕಲ್ಪಿಸಲಾಗಿದೆ, ಜಿಲ್ಲೆಯ ಹಾಸ್ಟೆಲ್‌ಗಳಲ್ಲಿ ವಿದ್ಯಾರ್ಥಿಗಳಿಗೆ ವೈಚಾರಿಕ ಜಾಗೃತಿ ಮೂಡಿಸಲು ಅಂಬೇಡ್ಕರ್, ಬಸವಣ್ಣ ಮತ್ತು ಗಾಂಧೀಜಿಯವರ ತತ್ವಗಳ ಬಗ್ಗೆ ಉಪನ್ಯಾಸಗಳನ್ನು ಹಮ್ಮಿಕೊಳ್ಳಲು ಕ್ರಿಯಾ ಯೋಜನೆ ರೂಪಿಸಲಾಗಿದೆ ಎಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲ್ ರಾವ್ ಅವರು “ಶಿಕ್ಷಣವು ಸಮಾಜದ ಪ್ರಗತಿಗೆ ಪ್ರಮುಖ ಅಸ್ತ್ರ”. ಕಡು ಬಡತನ ಮತ್ತು ಸಾಮಾಜಿಕ ಅಸಮಾನತೆಯ ನಡುವೆಯೂ ಅಂಬೇಡ್ಕರ್ ಅವರು ಉನ್ನತ ಶಿಕ್ಷಣ ಪಡೆದು ಸಮಾಜದಲ್ಲಿ ಬದಲಾವಣೆ ತಂದರು. ವಿಶ್ವದ ಅತ್ಯುತ್ತಮ ಸಂವಿಧಾನಗಳಲ್ಲಿ ಒಂದಾದ ಭಾರತದ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರ ಶ್ರಮವನ್ನು ನಾವು ಮರೆಯುವಂತಿಲ್ಲ, ಸಂವಿಧಾನವು ಕೇವಲ ಕಾನೂನಿನ ದಾಖಲೆಯಲ್ಲ, ಅದು ಪ್ರತಿಯೊಬ್ಬ ನಾಗರಿಕನ ಬದುಕಿನ ಸ್ಫೂರ್ತಿ ಎಂದರು.

ಸಮಾಜದಲ್ಲಿನ ಜಾತಿ ಪದ್ಧತಿ ಮತ್ತು ಅಸ್ಪೃಶ್ಯತೆಯನ್ನು ನಿರ್ಮೂಲನೆ ಮಾಡಲು ಬಾಬಾಸಾಹೇಬರು ಪಟ್ಟ ಶ್ರಮ ಹಾಗೂ ಅವರು ಬರೆದ ‘ಜಾತಿ ವಿನಾಶ’ ಕೃತಿಯ ಮಹತ್ವದ ಬಗ್ಗೆ ತಿಳಿಸಿದರು. ಹುಲಿ ಹಾಲಿನ್ನು ಕುಡಿದವನು ಎಷ್ಟು ಬಲಶಾಲಿಯಾಗಿರುತ್ತೇನೋ ಶಿಕ್ಷಣ ಪಡೆದವನು ಅಷ್ಟೇ ಬಲಶಾಲಿಯಾಗುತ್ತಾನೆ. ಪ್ರತಿಯೊಬ್ಬರೂ ಶಿಕ್ಷಣಕ್ಕೆ ಒತ್ತು ನೀಡಿ, ಬಡ ಮಕ್ಕಳ ಶಿಕ್ಷಣಕ್ಕೆ ನೆರವಾಗುವಂತೆ ಕರೆ ನೀಡಿದರು.

ಚುನಾವಣೆ ನೀತಿ ಸಂಹಿಗೆ ಜಾರಿಯಲ್ಲಿರುವ ಹಿನ್ನೆಲೆಯ್ಲಲಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು, ಇದೇ ಸಂದರ್ಭದಲ್ಲಿ ಸಂವಿಧಾನ ಪೀಠಿಕೆಯನ್ನು ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಅವರು ಬೋದಿಸಿದರು.

ಕಾರ್ಯಕ್ರಮಕ್ಕೂ ಮುನ್ನ ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿರುವ ಬಾಬಾ ಸಾಹೇಬರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಬೆಳ್ಳಿರಥಕ್ಕೆ ಚಾಲನೆ ನೀಡಿದರು. ಬೆಳ್ಳಿ ರಥವು ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಿಂದ ಗಾಂಧಿವೃತ್ತ ಜಯದೇವ ವೃತ್ತದ ಮೂಲಕ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಶೇಖರ್ ಹೆಚ್.ಟಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಮತ್ತು ಉಪಕಾರ್ಯದರ್ಶಿ ಮಮತ ಗೌಡರ್, ಯೋಜನಾ ನಿರ್ದೇಶಕಿ ರೇಷ್ಮಾ ಕೌಸರ್ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಸಿದ್ದಲಿಂಗೇಶ್, ಜಿಲ್ಲಾ ಮಟ್ಟದ ಅಧಿಕಾರಿಗಳು ವಿವಿಧ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ18 hours ago

ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ...

ದಿನದ ಸುದ್ದಿ19 hours ago

ವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ

ಸುದ್ದಿದಿನ,ದಾವಣಗೆರೆ:ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿಗಳು ವಯೋವೃದ್ಧರ ಕುರಿತು ಬುಧವಾರ ಸಾಮಾಜಿಕ ಸಮೀಕ್ಷೆ ನಡೆಸಿದರು. ನಗರದ ತರಳಬಾಳು ಬಡಾವಣೆಯ ಆಯೂಷ್ ಚಾರಿಟೇಬಲ್ ಟ್ರಸ್ಟ್...

ದಿನದ ಸುದ್ದಿ2 days ago

ಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ

ಸುದ್ದಿದಿನ,ದಾವಣಗೆರೆ:ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರು ನೀಡಿದ ಸಂವಿಧಾನವು ದೇಶದ ಪ್ರತಿಯೊಬ್ಬ ನಾಗರಿಕನಿಗೂ ಸಮಾನತೆ ಮತ್ತು ಸ್ವಾತಂತ್ರ್ಯವನ್ನು ಕಲ್ಪಿಸಿಕೊಟ್ಟಿರುವ ಮಹಾನ್ ಶಕ್ತಿ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ...

ಅಂಕಣ3 days ago

ಇತಿಹಾಸ ಕಥನಶಾಸ್ತ್ರ: ಅಂಬೇಡ್ಕರ್ ಅವರ ಚಿಂತನೆಯ ಹಾದಿ

~ಮೇಟಿ ಮಲ್ಲಿಕಾರ್ಜುನ, ಪ್ರಾಧ್ಯಾಪಕರು, ಸಹ್ಯಾದ್ರಿ ಕಾಲೇಜು, ಶಿವಮೊಗ್ಗ ಅಂಬೇಡ್ಕರ್ ಅವರು ಭಾರತದ ಚರಿತ್ರೆಗಳ ರಚನೆಗೆ ಪ್ರಾಯೋಗಿಕ ಉಪಕರಣಗಳನ್ನು (ಎಂಪರಿಕಲ್ ಟೂಲ್ಸ್) ಬಳಸಿರುತ್ತಾರೆ. ಆದರೆ ಈ ಎಲ್ಲ ಉಪಕರಣಗಳು...

ದಿನದ ಸುದ್ದಿ3 days ago

ಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ...

ದಿನದ ಸುದ್ದಿ3 days ago

ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ...

ದಿನದ ಸುದ್ದಿ4 days ago

ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ

ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್‌ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ,...

ದಿನದ ಸುದ್ದಿ6 days ago

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು...

ದಿನದ ಸುದ್ದಿ7 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ....

ದಿನದ ಸುದ್ದಿ7 days ago

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ. ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು...

Trending