Connect with us

ದಿನದ ಸುದ್ದಿ

ಪ್ರಸಕ್ತ ಸಂದರ್ಭದಲ್ಲಿ ಬಡವಿಭಾಗಗಳಿಗೆ ಹಣ ವರ್ಗಾವಣೆ ಯೋಜನೆಗಳು

Published

on

ಈಗ ಪ್ರಸ್ತಾಪಿಸಲಾಗುತ್ತಿರುವ ನಗದು ವರ್ಗಾವಣೆಯು, ಮೋದಿ ಸರಕಾರದ ಪಿಎಂ-ಕಿಸಾನ್ ಆಗಲಿ,ಅಥವ ಕಾಂಗ್ರೆಸಿನ “ನ್ಯಾಯ್” ಅಗಲಿ, ನವ ಉದಾರ ಬಂಡವಾಳಶಾಹಿಯು ಬಿಕ್ಕಟ್ಟಿಗೆ ಒಳಗಾಗಿರುವ ಅಂಶವನ್ನು ಸೂಚಿಸುತ್ತದೆ. ಇಂತಹ ಪರಿಸ್ಥಿತಿಯಲ್ಲಿ, ನವ-ಉದಾರವಾದಿಬಂಡವಾಳಶಾಹಿಯ ಆಚೆಗೆ ನೋಡಲಾರದ ರಾಜಕೀಯ ಪಡೆಗಳಲ್ಲಿ ಒಂದು ಸನ್ನಿಗೆ ಒಳಗಾದ ರೀತಿಯಲ್ಲಿ ಕೋಮು ಭಾವನೆಗಳನ್ನು ಕೆಣಕಿ ವೋಟು ಬಾಚಿಕೊಳ್ಳುವ ಸನ್ನಾಹದಲ್ಲಿ ತೊಡಗಿದ್ದರೆ, ಇನ್ನೊಂದು, ಜಾತ್ಯಾತೀತ ಮನೋಭಾವ ಹೊಂದಿರುವ ರಾಜಕೀಯ ಪಡೆಯು ನವ ಉದಾರ ಬಂಡವಾಳಶಾಹಿಗೆ ಒಂದು “ಮಾನವೀಯ ಮುಖ” ತೊಡಿಸುವ ಆಶ್ವಾಸನೆ ಕೊಡುತ್ತಿದೆ.

ಇಂತಹನೆರವೇರಲಾರದಆಶ್ವಾಸನೆಗಳನ್ನುಎಡಪಂಥಿಯರುಬೆಂಬಲಿಸಬೇಕೇ? ಬಡವರಿಗೆ ಪರಿಹಾರ ದೊರಕಿಸುವ ಆಶ್ವಾಸನೆಯಿಂದ ಕೂಡಿದ ಕ್ರಮಗಳಿಗೆ ಈ ರಾಜಕೀಯ ಪಡೆಗಳು ಮುಂದಾದಾಗ ಎಡ ಪಂಥೀಯರು ಅದನ್ನು ಸ್ವಾಗತಿಸಬೇಕುಎನ್ನುತ್ತಾರೆಪ್ರೊ. ಪ್ರಭಾತ್ಪಟ್ನಾಯಕ್. . ಏಕೆಂದರೆ, ನವ ಉದಾರವಾದದ ತರ್ಕ ಮತ್ತು ಚಾಳಿಯಿಂದಾಗಿ ಒಂದೋ ಈ ಆಶ್ವಾಸನೆ ಕೊಟ್ಟವರು ಅದನ್ನು ಮುರಿಯುತ್ತಾರೆ, ಆಗ ಎಡ ಶಕ್ತಿಗಳು ಅದನ್ನು ಎತ್ತಿ ತೋರಿಸಿ ಅದರ ವಿರುದ್ಧ ಹೋರಾಡಬೇಕಾಗುತ್ತದೆ, ಇಲ್ಲವೇ ನವ ಉದಾರ ವ್ಯವಸ್ಥೆಯನ್ನೇ ಮೀರಲು ಆರಂಭಗೊಳ್ಳುವ ಒಂದು ಗತಿತಾರ್ಕಿಕ ಪ್ರಕ್ರಿಯೆಯನ್ನು ಎಡ ಶಕ್ತಿಗಳು ಉದ್ದೀಪಿಸಬಹುದು.

ಮೊದಲು ಮೋದಿ ಸರ್ಕಾರವು ತನ್ನ ಕೊನೆಯ ಬಜೆಟ್‌ನಲ್ಲಿ ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಹಣ ವರ್ಗಾಯಿಸುವ ಒಂದು ಯೋಜನೆಯ ಘೋಷಣೆ ಮಾಡಿತು. ಈ ಯೋಜನೆಯ ಪ್ರಕಾರ, ಅತಿ ಸಣ್ಣ ರೈತ ಕುಟುಂಬವೊಂದಕ್ಕೆ ವಾರ್ಷಿಕ 12,000 ರೂಗಳನ್ನು ಅವರ ಬ್ಯಾಂಕ್ ಖಾತೆಗೆ ಸರ್ಕಾರವೇ ನೇರವಾಗಿ ವರ್ಗಾಯಿಸುತ್ತದೆ. ಈ ಯೋಜನೆಯು ಸುಮಾರು 12 ಕೋಟಿ ಮಂದಿಗೆ ಅನುಕೂಲ ಕಲ್ಪಿಸುತ್ತದೆ ಎಂದು ಅವರು ಹೇಳುವಾಗ ಚುನಾವಣೆಗಳಲ್ಲಿ ವೋಟು ಬಾಚಿಕೊಳ್ಳುವುದಷ್ಟೇ ಅವರ ಉದ್ದೇಶ. ಆದರೆ, ಅವರು ಘೋಷಣೆ ಮಾಡಿರುವ ಹಣದ ಮೊತ್ತವು ಅದೆಷ್ಟು ಜುಜುಬಿ ಎಂದರೆ, ಅದರ ಬಗ್ಗೆ ಮೋದಿ ಕೂಡ ತಮ್ಮ ಚುನಾವಣಾ ಭಾಷಣಗಳಲ್ಲಿ ತುತ್ತೂರಿ ಊದುವುದನ್ನೇ ನಿಲ್ಲಿಸಿದ್ದಾರೆ. ಬದಲಿಗೆ, ಬಿಜೆಪಿಯು ಪ್ರಜ್ಞಾ ಠಾಕುರ್ ಅಂತಹ ಭಯೋತ್ಪಾದನೆ ಆರೋಪಿಯನ್ನು ಕಣಕ್ಕಿಳಿಸಿ ಕೋಮು ಭಾವನೆಗಳನ್ನು ಕೆಣಕಿ ವೋಟು ಬಾಚಿಕೊಳ್ಳುವ ತನ್ನ ಹಳೆಯ ಚಾಳಿಗೆ ಮರಳಿದೆ.

ಈಗ ಕಾಂಗ್ರೆಸ್‌ನ ಸರದಿ. ಅದು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ “ನ್ಯಾಯ್” ಎಂಬ ಹೆಸರಿನ ಒಂದು ಹೆಚ್ಚು ಮಹತ್ವಾಕಾಂಕ್ಷೆಯ ಯೋಜನೆಯನ್ನು ಘೋಷಿಸಿದೆ. ಅದರ ಪ್ರಕಾರ, ಸುಮಾರು ಐದು ಕೋಟಿ ಅತ್ಯಂತ ಬಡ ಕುಟುಂಬಗಳಿಗೆ ತಿಂಗಳಿಗೆ 6000 ರೂಗಳನ್ನು ಅವರ ಖಾತೆಗೆ ವರ್ಗಾಯಿಸಲಾಗುವುದು.
ಈ ಯೋಜನೆಗೆ ವಾರ್ಷಿಕ 3.6 ಲಕ್ಷ ಕೋಟಿ ರೂ ವೆಚ್ಚ ತಗಲುತ್ತದೆ. (ಮೋದಿ ಸರ್ಕಾರದ ಯೋಜನೆಗೆ ತಗಲುವ ವೆಚ್ಚ ವಾರ್ಷಿಕ 72,000 ಕೋಟಿ ರೂಗಳು). ಕಾಂಗ್ರೆಸ್‌ನ ಈ ಯೋಜನೆಗೆ ಹಣ ಒದಗಿಸಿಕೊಳ್ಳುವ ಬಗ್ಗೆ ವಿವರಗಳು ಇನ್ನೂ ಲಭ್ಯವಿಲ್ಲವಾದರೂ ಈ ಯೋಜನೆ ಗಂಭೀರತೆಯಿಂದ ಕೂಡಿದೆ ಎಂಬ ಭಾವನೆ ಇದೆ.

ಬಡವರಿಗೆನೆರವಿನ “ಔದಾರ್ಯ”

ಬಡವರಿಗೆ ಈ ದೇಶದಲ್ಲಿ ದೊರೆಯುವ ಯಾವುದೇ ರೀತಿಯ ನೆರವು ಸ್ವಾಗತಾರ್ಹವೇ. “ನ್ಯಾಯ್”ಯೋಜನೆಯಲ್ಲಿ ಎರಡು ಸಮಸ್ಯೆಗಳು ಎದ್ದು ಕಾಣುತ್ತವೆ. ಮೊದಲನೆಯ ಸಮಸ್ಯೆ ಎಂದರೆ, ಇದೊಂದು ನಗದು ಹಣ ವರ್ಗಾವಣೆಯ ಯೋಜನೆ. ಹಾಲಿ ಇರುವ ಕಲ್ಯಾಣ ಕಾರ್ಯಕ್ರಮಗಳಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ ಮತ್ತು ಅಧಿಕವಾಗಿ ಈ ಯೋಜನೆ ಸೇರಿಕೊಳ್ಳುತ್ತದೆ ಎಂದು ಭಾವಿಸಿಕೊಂಡರೂ ಸಹ, ಬಡವರಿಗೆ ಒಂದಿಷ್ಟು ಹಣ ಕೊಟ್ಟು ಸರ್ಕಾರ ಕೈ ತೊಳೆದುಕೊಳ್ಳುತ್ತದೆ, ಅಷ್ಟೆ. ಶಿಕ್ಷಣ ಮತ್ತು ಆರೋಗ್ಯ ಇಂತಹ ಸಾರ್ವತ್ರಿಕ ಅಗತ್ಯ ಸೇವೆಗಳನ್ನು ಒದಗಿಸುವ ತನ್ನ ಜವಾಬ್ದಾರಿಯಿಂದ ಸರ್ಕಾರ ನುಣುಚಿಕೊಳ್ಳುತ್ತದೆ. ಹಾಗಾಗಿ, ಇಂತಹ ಅಗತ್ಯ ಸೇವೆಗಳನ್ನು ಖಾಸಗಿಯಾಗಿ ಒದಗಿಸುವವರು ತಮ್ಮ ಸೇವೆಗಳ ಬೆಲೆ ಏರಿಸಿ ಬಡವರಿಗೆ ವರ್ಗಾವಣೆಯಾದ ಈ ಹಣವನ್ನು ತಮ್ಮ ಜೇಬಿಗೆ ಇಳಿಸಿಕೊಳ್ಳುತ್ತಾರೆ.

ಎರಡನೆಯ ಸಮಸ್ಯೆ ಎಂದರೆ, ಈ ಯೋಜನೆಯು ಕೆಲವೇ ಮಂದಿಗೆ ಮಾತ್ರ ಫಲ ದೊರಕಿಸುವ ಗುರಿ ಹೊಂದಿದೆ. ಹಾಗಾಗಿ, ಅನೇಕ ಮಂದಿ ಈ ಯೋಜನೆಯಿಂದ ಹೊರಗುಳಿಯುತ್ತಾರೆ. ಮೇಲಾಗಿ, ಫಲಾನುಭವಿಗಳ ಆಯ್ಕೆ ಮನಸೋ ಇಚ್ಛೆಯಾಗಿರುತ್ತದೆ. ಉದಾಹರಣೆಗೆ, ಒಂದು ನಿಗದಿಪಡಿಸಿದ ವರಮಾನ ಮಿತಿಯೊಳಗಿರುವ ಒಂದು ಕುಟುಂಬಕ್ಕೆ ತಿಂಗಳಿಗೆ 6000 ರೂ ದೊರೆಯುವಾಗ, ಆ ಮಿತಿಗಿಂತ ಒಂದು ರೂ ಹೆಚ್ಚಿನ ವರಮಾನವಿರುವ ಕುಟುಂಬಕ್ಕೆ ಏನೂ ಸಿಗುವುದಿಲ್ಲ. ಇದು ಬಡ ಜನತೆಯ ನಡುವೆ ವಿರಸ ಸೃಷ್ಠಿಸುತ್ತದೆ.

ಯಾವುದೇ ಸೀಮಿತ ಫಲಾನುಭವಿ ಯೋಜನೆಯು ಸರ್ಕಾರದ ಔದಾರ್ಯಪೂರ್ಣ ಬಕ್ಷೀಸು ಎನಿಸುತ್ತದೆ. ಇದನ್ನು ಪಡೆಯಲು ಒಬ್ಬ ವ್ಯಕ್ತಿಯು ದೈನ್ಯತೆಯಿಂದ ಕೋರಿಕೆ ಸಲ್ಲಿಸಬೇಕಾಗುತ್ತದೆ. ಇದು, ಮೂಲಭೂತವಾಗಿ ಪ್ರಜಾಪ್ರಭುತ್ವ-ವಿರೋಧಿ ನಡೆಯಾಗುತ್ತದೆ.ಕೆಲವು ವಸ್ತುಗಳು ಮತ್ತು ಸೇವೆಗಳನ್ನುಒಂದು ಸಾರ್ವತ್ರಿಕವಾಗಿ ಹಕ್ಕು ಆಗಿ ಪ್ರತಿ ಪ್ರಜೆಗೂ ಒದಗಿಸಬೇಕಾದ ಸರ್ಕಾರವು, ಅದರ ಬದಲಿಗೆ ಅವನ್ನು ದಾನವೋ ಭಿಕ್ಷೆಯೋ ಎಂಬಂತೆ ಕೊಡುವಂತಾಗುತ್ತದೆ. ಆದ್ದರಿಂದ, ಕೆಲವು ಆರ್ಥಿಕ ಹಕ್ಕುಗಳು ಸಾರ್ವತ್ರಿಕವಾಗಿ ಜಾರಿಯಾದಾಗ ಮಾತ್ರ ಇಂತಹ ಸೀಮಿತ ಫಲಾನುಭವಿ ಯೋಜನೆಗಳು ಬಡ ಜನತೆಯ ನಡುವೆ ಸೃಷ್ಠಿಸುವ ವಿರಸ ನಿವಾರಣೆಯಾಗುತ್ತದೆ.

ವರ್ಗಾವಣೆಯ ವಿಷಯವನ್ನು ಈಗಏಕೆ ಎತ್ತಲಾಗಿದೆ?

ಇಂತಹ ಯೋಜನೆಗಳ ಬಗ್ಗೆ ಅನಿಸಿಕೆಗಳನ್ನು ಬದಿಗೆ ಸರಿಸಿ, ಒಂದು ಪ್ರಶ್ನೆ ಕೇಳಬೇಕಿದೆ: ಇದ್ದಕ್ಕಿದ್ದಂತೆಯೇ ಇಂತಹ ವರ್ಗಾವಣೆಯ ವಿಷಯವನ್ನು ಏಕೆ ಎತ್ತಲಾಗಿದೆ? ಅಭಿವೃದ್ಧಿಯ ಬಗ್ಗೆ ಮಾತನಾಡಿಯೇ ಮೋದಿ 2014ರ ಚುನಾವಣೆ ಗೆದ್ದರು. ಅದಕ್ಕೂ ಹಿಂದೆ, ಜಿಡಿಪಿಯ ಬೆಳವಣಿಗೆ ದರ, ಭಾರತ ಒಂದು ಬಲಿಷ್ಠ ಆರ್ಥಿಕ ಶಕ್ತಿಯಾಗಿ ಹೊರಹೊಮ್ಮುವ ಬಗ್ಗೆ, ಪ್ರಕಾಶಮಾನ ಭಾರತ ಮುಂತಾದ ವಿಷಯಗಳ ಬಗ್ಗೆ ಚರ್ಚೆಯಾಗುತ್ತಿತ್ತೇ ವಿನಃ, ಯಾವತ್ತೂ ಬಡವರಿಗೆ ಹಣ ವರ್ಗಾಯಿಸುವ ಚರ್ಚೆ ಇರಲೇ ಇಲ್ಲ. ಯುಪಿಎ-1 ಸರ್ಕಾರ ಜಾರಿಗೆ ತಂದ ಮಹಾತ್ಮಾ ಗಾಂಧಿ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಬಗ್ಗೆ 2014 ರ ಚುನಾವಣೆಯ ಸಂದರ್ಭದಲ್ಲಿಯೂ ಸಹ ಚರ್ಚೆಯಾಗಲಿಲ್ಲ. ಈ ಎಲ್ಲ ಅಂಶಗಳನ್ನು ಇನ್ನೊಂದು ರೀತಿಯಲ್ಲಿ ಹೇಳುವುದಾದರೆ, ಜಿಡಿಪಿ ಉನ್ನತವಾಗಿ ಬೆಳೆಯುತ್ತದೆ ಮತ್ತು ಅದರಿಂದಾಗಿಯೇ ಎಲ್ಲರ ಏಳಿಗೆಯಾಗುತ್ತದೆ ಎಂಬುದಾಗಿ ಎಲ್ಲರೂ ನಂಬಿದ್ದರು. ಆದರೆ, ಈಗ ಇಂತಹ ಬೊಗಳೆಯ ಮಾತುಗಳಿಗೆ ಮತದಾರರು ಮರುಳಾಗುತ್ತಿಲ್ಲ.

ಈಗ ಪ್ರಸ್ತಾಪಿಸಲಾಗುತ್ತಿರುವ ನೇರ ವರ್ಗಾವಣೆಯು, ಸಂಕ್ಷಿಪ್ತವಾಗಿ ಹೇಳುವುದಾದರೆ, ನವ ಉದಾರ ಬಂಡವಾಳಶಾಹಿಯು ಬಿಕ್ಕಟ್ಟಿಗೆ ಒಳಗಾಗಿರುವ ಅಂಶವನ್ನು ಸೂಚಿಸುತ್ತದೆ. ನವ ಉದಾರ ಬಂಡವಾಳಶಾಹಿಯು ಉತ್ಪಾದಕ ಶಕ್ತಿಗಳನ್ನು ವೇಗವಾಗಿ ಬೆಳೆಸುವುದರಿಂದ ಜಿಡಿಪಿ ಉನ್ನತವಾಗಿ ಬೆಳೆಯುತ್ತದೆ. ಅದರಿಂದ ಎಲ್ಲರೂ ಪ್ರಯೋಜನ ಪಡೆಯುತ್ತಾರೆ ಎಂದು ಪ್ರಚುರಪಡಿಸುತ್ತಿದ್ದ ಅದರ ಸಿದ್ದಾಂತವು ಈಗ ವಿಶ್ವಾಸಾರ್ಹತೆ ಕಳೆದುಕೊಂಡಿದೆ.
ಈ ಸಂಗತಿ ಬಿಜೆಪಿಯು ಹುಚ್ಚು ಹಿಡಿದ ರೀತಿಯಲ್ಲಿ ಪ್ರಚೋದನಾಕಾರಿ ಕೋಮು ಪ್ರಚಾರಕ್ಕೆ ಮರಳಿರುವ ಅಂಶದಲ್ಲಿಯೂ ಕಾಣ ಬರುತ್ತದೆ. ಹಿಂದೆ ಅಭಿವೃದ್ಧಿಯ ಬಗ್ಗೆ ಅವರು ಕೊಟ್ಟ ಭರವಸೆಗಳು ಈಗ ಟೊಳ್ಳು ಶಬ್ದಗಳಾಗಿ ಕೇಳಿಸುತ್ತಿವೆ, ಅವುಗಳನ್ನು ಈಗ ಪುನರಾವರ್ತಿಸುವಂತಿಲ್ಲ. ಸಧ್ಯದ ಪರಿಸ್ಥಿತಿಯಲ್ಲಿ, ಅಂದರೆ, ಬಂಡವಾಳಶಾಹಿಯ ಬಿಕ್ಕಟ್ಟಿನ ಸಂರ್ಭದಲ್ಲಿ, “ಅಭಿವೃದ್ಧಿ” ಘೋಷಣೆಯ ಮೂಲಕ ಎಳ್ಳಷ್ಟೂ ಪರಿಹಾರ ಸಿಗುವುದಿಲ್ಲ ಎಂಬುದು ಜನತೆಗೆ ಅನುಭವದ ಮೂಲಕವೇ ತಿಳಿದಿದೆ.

ಈ ವಿದ್ಯಮಾನಗಳನ್ನು ಇನ್ನೊಂದು ರೀತಿಯಲ್ಲಿ ಹೇಳುವುದಾದರೆ, ನವ ಉದಾರ ಬಂಡವಾಳಶಾಹಿಯು ಇಂದು ಬಿಕ್ಕಟ್ಟಿಗೆ ಒಳಗಾಗಿರುವ ಪರಿಸ್ಥಿತಿಯಲ್ಲಿ ಅದಕ್ಕೆ ಬದ್ಧವಾಗಿರುವ ಒಂದು ರಾಜಕೀಯ ಪಡೆ ಸನ್ನಿಗೆ ಒಳಗಾದ ರೀತಿಯಲ್ಲಿ ಕೋಮು ಭಾವನೆಗಳನ್ನು ಕೆಣಕಿ ವೋಟು ಬಾಚಿಕೊಳ್ಳುವ ಸನ್ನಾಹದಲ್ಲಿ ತೊಡಗಿದೆ. ಅದೇ ಸಮಯದಲ್ಲಿ, ಇನ್ನೊಂದು ರಾಜಕೀಯ ಪಡೆ ಇನ್ನೊಂದು ರೀತಿಯಲ್ಲಿ ಕಾರ್ಯಮಗ್ನವಾಗಿದೆ. ವಿಶಾಲ ಜಾತ್ಯಾತೀತ ಮನೋಭಾವ ಹೊಂದಿರುವ ಈ ಪಡೆಯು ನವ ಉದಾರ ಬಂಡವಾಳಶಾಹಿಗೆ ಒಂದು ಮಾನವೀಯ ಮುಖ ತೊಡಿಸಿ, ಸಮಾಜದ ತಳಸ್ತರದದಲ್ಲಿವ ಒಟ್ಟು ಜನಸಂಖ್ಯೆಯ ಐದನೇ ಒಂದು ಭಾಗದಷ್ಟು ಮಂದಿಗೆ ನೇರ ಹಣ ವರ್ಗಾವಣೆಯ ಮೂಲಕ ನವ ಉದಾರ ಬಂಡವಾಳಶಾಹಿಯ ದಿಕ್ಪಥವನ್ನು ಪರಿಷ್ಕರಿಸುವ ಆಶ್ವಾಸನೆ ಕೊಡುತ್ತಿದೆ.

ನಿಜ, ಇಂತಹ ನೇರ ಹಣ ವರ್ಗಾವಣೆ ಯೋಜನೆ ಕಾರ್ಯಸಾಧ್ಯ, ಅವಕ್ಕೆ ಹಣ ಹೊಂದಿಸಿಕೊಳ್ಳುವುದು ಸಾಧ್ಯವಿದೆ. ಅದಕ್ಕೆ ತಗಲುವ ವೆಚ್ಚವು ಜಿಡಿಪಿಯ ಸುಮಾರು ಶೇ.2 ರಷ್ಟಾಗುತ್ತದೆ. ಆದರೆ, ನವ ಉದಾರ ಬಂಡವಾಳಶಾಹಿಯ ಅಂತರ್ಗತ ತರ್ಕವೇ ಇಂತಹ ವರ್ಗಾವಣೆಗೆ ಅಡ್ಡಿಯಾಗುತ್ತದೆ. ಜಿಡಿಪಿಯ ಸುಮಾರು ಶೇ.2 ರಷ್ಟಾಗುವ ಈ ಮೊತ್ತವನ್ನು ಬಂಡವಾಳದಾರರ ಮೇಲೆ ತೆರಿಗೆ ಹಾಕಿಯೋ ಅಥವಾ ಸಮಾಜದ ಶ್ರೀಮಂತ ವಿಭಾಗಗಳ ಮೇಲೆ ತೆರಿಗೆ ಹಾಕುವ ಮೂಲಕವೋ ಹೊಂದಿಸಿಕೊಳ್ಳಬಹುದು. ಅಥವಾ, ವಿತ್ತೀಯ ಕೊರತೆಯ ಗಾತ್ರವನ್ನು ಹೆಚ್ಚಿಸಿಕೊಳ್ಳುವ ಮೂಲಕ, ಅಥವಾ ಈ ಎರಡೂ ವಿಧಾನಗಳ ಸಂಯೋಜನೆಯ ಮೂಲಕವೂ ಹೊಂದಿಸಿಕೊಳ್ಳಬಹುದು.

ಆದರೆ ಸಂಪನ್ಮೂಲಗಳನ್ನು ಹೊಂದಿಸಿಕೊಳ್ಳುವ ಈ ಎರಡೂ ವಿಧಾನಗಳನ್ನು ಜಾಗತೀಕರಣಗೊಂಡ ಹಣಕಾಸು ಬಂಡವಾಳವು ಅನಿಷ್ಟವೆಂದೇ ಬಗೆಯುತ್ತದೆ. ಈ ಕಾರಣದಿಂದಾಗಿ, ನೇರ ಹಣ ವರ್ಗಾವಣೆಯ ಯೋಜನೆಯನ್ನು ಜಾರಿಗೊಳಿಸ ಬಯಸುವ ಯಾವುದೇ ಸರ್ಕಾರವು ನವ ಉದಾರವಾದದ ಏರ್ಪಾಡಿನಲ್ಲಿ ಕೆಲವು ಬದಲಾವಣೆ ಮಾಡಬೇಕಾಗುತ್ತದೆ (ಆಗ, ಈ ಬದಲಾವಣೆಯ ಕ್ರಿಯೆಯು ತನ್ನದೇ ಒಂದು ಗತಿ ತಾರ್ಕಿಕ ಚಲನೆಯನ್ನು ಹೊಮ್ಮಿಸುತ್ತದೆ). ಇದು ಸಾಧ್ಯವಾಗದಿದ್ದಲ್ಲಿ, ಹಾಲಿ ಕಲ್ಯಾಣ ಕಾರ್ಯಕ್ರಮಗಳನ್ನು ನಿಲ್ಲಿಸುವ ಮೂಲಕ ವರ್ಗಾವಣೆ ಯೋಜನೆಗೆ ಹಣ ಹೊಂದಿಸಿಕೊಳ್ಳಬೇಕಾಗುತ್ತದೆ. ಅಂತಹ ಪರಿಸ್ಥಿತಿಯಲ್ಲಿ ವರ್ಗಾವಣೆಯ ಉದ್ದೇಶವೇ ವಿಫಲವಾಗುತ್ತದೆ.

ಕಲ್ಯಾಣವೆಚ್ಚಗಳನ್ನುಸ್ವಾಗತಿಸುವುದುಪರಿಷ್ಕರಣವಾದವೇ?

ಬಂಡವಾಳಶಾಹಿ ವ್ಯವಸ್ಥೆಯು ತನ್ನನ್ನು ತಾನು ಸಮರ್ಥಿಸಿಕೊಳ್ಳುವ ಸಲುವಾಗಿಯೇ ಸ್ವಲ್ಪ ಮಟ್ಟಿನ ನೆರವನ್ನು ಬಡವರಿಗೆ ಒದಗಿಸಬಲ್ಲದು, ಮತ್ತು ಒದಗಿಸುತ್ತದೆ, ಇಂತಹ ವರ್ಗಾವಣೆ ಯೋಜನೆಗಳನ್ನು, ಅಥವ ಒಟ್ಟಾರೆಯಾಗಿ ಕಲ್ಯಾಣ ವೆಚ್ಚಗಳನ್ನು ಸ್ವಾಗತಿಸುವುದು ಪರಿಷ್ಕರಣವಾದ ಆಗುತ್ತದಷ್ಟೇ ಎಂಬುದಾಗಿ ವಾದಿಸುವ ಪ್ರವೃತ್ತಿ ಕೆಲವು ಎಡ ಪಂಥೀಯ ವಲಯಗಳಲ್ಲಿದೆ. ನೇರ ಹಣ ವರ್ಗಾವಣೆ ಅಥವಾ ಕಲ್ಯಾಣ ಕಾರ್ಯಕ್ರಮಗಳು ವ್ಯವಸ್ಥೆಯಲ್ಲಿ ಕಾರ್ಯಸಾಧ್ಯವಾದ ಕೇವಲ ಸುಧಾರಣಾ ಕ್ರಮಗಳು. ಅದಕ್ಕೆ ಪ್ರಶಂಸೆಯ ಅಗತ್ಯವಿಲ್ಲ ಎನ್ನುತ್ತಾರೆ ಅವರು.

ವ್ಯಂಗ್ಯದ ಸಂಗತಿಯೆಂದರೆ ಬಡವರಿಗೆ ನೆರವು ಒದಗಿಸುವ ಬಗ್ಗೆ ನವ ಉದಾರ ಬಂಡವಾಳಶಾಹಿಯ ಸಮರ್ಥಕರು ಹೊಂದಿರುವ ಅಭಿಪ್ರಾಯವೂ ಇದೇ ರೀತಿಯಲ್ಲಿದೆ. ಬಡವರಿಗೆ ನೆರವು ಒದಗಿಸಬಹುದಾದಷ್ಟು ಹೊಂದಿಕೆಯನ್ನು ಅದು ಮಾಡಿಕೊಳ್ಳಬಲ್ಲದು, ಅದರ ಅಂತರ್ಗತ ತರ್ಕವು ಇಂತಹ ನೆರವಿಗೆ ಅಡ್ಡಿಯಾಗುವುದಿಲ್ಲ ಎಂದು ಅವರು ವಾದಿಸುತ್ತಾರೆ.

ಶ್ರೀಮಂತರಿಗೆ ಮತ್ತು ಕಾರ್ಪೊರೇಟ್‌ಗಳಿಗೆ ತೆರಿಗೆ ಕಡಿತ ಮಾಡಿದರೆ ಅದರ ಫಲವು ಕೆಳಕ್ಕೆ ಜಿನುಗಿ ತಳಸ್ತರಗಳಿಗೂ ಪ್ರಯೋಜನ ಸಿಗುತ್ತದೆ ಎಂಬ ಜಿನುಗು ಸಿದ್ಧಾಂತವು ಅಪಹಾಸ್ಯಗೊಳಗಾಗಿದ್ದ ಸಂದರ್ಭದಲ್ಲಿ ನವ ಉದಾರ ಬಂಡವಾಳಶಾಹಿಯ ಹೊಸ ಸಮರ್ಥನೆಯಾಗಿ, ಹನ್ನೊಂದನೇ ಪಂಚವಾರ್ಷಿಕ ಯೋಜನೆಯ ದಸ್ತಾವೇಜಿನಲ್ಲಿ, ಜಿಡಿಪಿ ಉನ್ನತವಾಗಿ ಬೆಳೆದಾಗ ಮಾತ್ರ ಸರ್ಕಾರದ ಆದಾಯವೂ ವೇಗವಾಗಿ ಬೆಳೆದು ಬಡತನ ತೊಡೆದು ಹಾಕುವ ಕಲ್ಯಾಣ ಕಾರ್ಯಕ್ರಮಗಳಿಗೆ ಹೆಚ್ಚು ಹಣ ದೊರೆಯುತ್ತದೆ ಎಂಬುದಾಗಿ ಹೇಳಲಾಗಿತ್ತು. ಇದೊಂದು ಸೋಗು. ಬಡತನ ನಿವಾರಿಸುವ ಸಲುವಾಗಿ ಅಗತ್ಯ ಸಂಪನ್ಮೂಲಗಳ ಕ್ರೋಢೀಕರಣಕ್ಕೆ ನವ ಉದಾರ ಆಳ್ವಿಕೆಯು ಅಡ್ಡಿಪಡಿಸುವುದಿಲ್ಲ ಎಂದು ತೋರಿಸಲು ಈ ರೀತಿಯ ಸೋಗು ಹಾಕಲಾಗಿತ್ತು.

ಸರ್ಕಾರದ ಈ ಅಭಿಪ್ರಾಯ ಸರಿಯೇ ಇದ್ದರೆ, ನವ ಉದಾರ ಆಳ್ವಿಕೆಯಲ್ಲಿ ಉನ್ನತವಾಗಿ ಜಿಡಿಪಿ ಬೆಳೆದದ್ದರ ಜೊತೆಯಲ್ಲೇ ಬಡತನವೂ ಅಗಾಧವಾಗಿ ಬೆಳೆಯುತ್ತಿರಲಿಲ್ಲ. ಹಸಿವೆಯ ಹಾಹಾಕಾರ ತೀವ್ರಗೊಳ್ಳುತ್ತಿರಲಿಲ್ಲ. ನಿರುದ್ಯೋಗ ಬೃಹದಾಕಾರವಾಗಿ ಬೆಳೆಯುತ್ತಿರಲಿಲ್ಲ. ದುಡಿಯುವ ಜನತೆಯ ತಲಾ ವರಮಾನವು ಉದಾರೀಕರಣ ಪೂರ್ವದಲ್ಲಿ ಇದ್ದುದಕ್ಕಿಂತಲೂ ಕೆಳಗೆ ಇಳಿಯುವ ಮಟ್ಟಿಗೆ ಅವರನ್ನು ಹಿಂಡುತ್ತಿರಲಿಲ್ಲ. ಇವೆಲ್ಲವೂ ಅಲ್ಲಗಳೆಯಲಾಗದ ವಾಸ್ತವ ಸಂಗತಿಗಳು.

ಸ್ವಲ್ಪವೂ ಜಗ್ಗದ ನವ ಉದಾರ ಬಂಡವಾಳಶಾಹಿಯ ವರ್ತನೆಯಿಂದಾಗಿಯೇ ಇವೆಲ್ಲವೂ ಘಟಿಸಿವೆ. ಜೊತೆಯಲ್ಲಿ, ಅದರ ಅಂತರ್ಗತ ತರ್ಕದ ಅಗತ್ಯವಾಗಿ ಒಂದು ಧೃವದಲ್ಲಿ ಬೆಳೆಯುತ್ತಲೇ ಹೋಗುವ ಐಶ್ವರ್ಯವನ್ನೂ, ಇನ್ನೊಂದು ಧೃವದಲ್ಲಿ ಹೆಚ್ಚುತ್ತಲೇ ಹೋಗುವ ಬಡತನವನ್ನೂ ಹುಟ್ಟಿಸಿದೆ. ಇಂತಹ ಒಂದು ವ್ಯವಸ್ಥೆಯೊಳಗೆ ಬಡತನ ನಿವಾರಣೆ ಸಾಧ್ಯವೇ ಇಲ್ಲ. ಬಡತನ ನಿವಾರಣೆ ಸಾಧ್ಯವಾಗಬೇಕು ಎಂದಾದರೆ ನವ ಉದಾರ ಆಳ್ವಿಕೆಯ ಏರ್ಪಾಡನ್ನು ಮೀರಲೇಬೇಕಾಗುತ್ತದೆ.

ಕರಾರುವಾಕ್ಕಾಗಿ ಇದೇ ಕಾರಣದಿಂದಾಗಿ, ಬಡವರಿಗೆ ಪರಿಹಾರ ದೊರಕಿಸುವ ಆಶ್ವಾಸನೆಯಿಂದ ಕೂಡಿದ ಕ್ರಮಗಳನ್ನು ಕೈಗೊಳ್ಳಲು ನವ ಉದಾರವಾದದಿಂದ ಆಚೆ ನೋಡಲಾಗದ ರಾಜಕೀಯ ಪಡೆಗಳು ಮುಂದಾದಾಗ ಎಡ ಪಂಥೀಯರು ಅದನ್ನು ಸ್ವಾಗತಿಸಬೇಕು. ಏಕೆಂದರೆ, ನವ ಉದಾರವಾದದ ತರ್ಕ ಮತ್ತು ಚಾಳಿಯಿಂದಾಗಿ ಒಂದೋ ಈ ಆಶ್ವಾಸನೆ ಕೊಟ್ಟವರು ಅದನ್ನು ಮುರಿಯುತ್ತಾರೆ, ಆಗ ಎಡ ಶಕ್ತಿಗಳು ಅದನ್ನು ಎತ್ತಿ ತೋರಿಸಿ ಅದರ ವಿರುದ್ಧ ಹೋರಾಡಬೇಕಾಗುತ್ತದೆ, ಇಲ್ಲವೇ ನವ ಉದಾರ ವ್ಯವಸ್ಥೆಯನ್ನು ಮೀರಲು ಆರಂಭಗೊಳ್ಳುವ ಒಂದು ಗತಿತಾರ್ಕಿಕ ಪ್ರಕ್ರಿಯೆಯನ್ನು ಎಡ ಶಕ್ತಿಗಳು ಉದ್ದೀಪಿಸಬಹುದು.

ನವ ಉದಾರವಾದಿ ಬಂಡವಾಳಶಾಹಿಯ ಬಿಕ್ಕಟ್ಟಿನ ಸಮಯದಲ್ಲಿ ಮತ್ತು ಅದರ ಪರಿಣಾಮವಾಗಿ ಜನತೆ ಜರ್ಜರಿತರಾಗಿದ್ದಾರೆ. ಅವರ ಆಕ್ರೋಶವನ್ನು ಬೇರೆಡೆಗೆ ತಿರುಗಿಸುವ ಉದ್ದೇಶದಿಂದ ಕಾರ್ಪೊರೇಟ್-ಹಣಕಾಸು ಕುಳಗಳು ಕೋಮುವಾದಿ ಮತ್ತು ಛಿದ್ರಕಾರಿ ಅಜೆಂಡಾ ಹೊಂದಿರುವ ಶಕ್ತಿಗಳನ್ನು ಪ್ರೋತ್ಸಾಹಿಸುವ ಪ್ರವೃತ್ತಿ ಬೆಳೆಸಿಕೊಂಡಿರುವ ಸನ್ನಿವೇಶದಲ್ಲಿ, ಜನ ಜೀವನದ ದೈಹಿಕ ಸ್ಥಿತಿ-ಗತಿಗಳ ಬಗ್ಗೆ ಗಮನವನ್ನು ಕೇಂದ್ರೀಕರಿಸಿ ಅವರ ಸ್ಥಿತಿ-ಗತಿಗಳನ್ನು ಸುಧಾರಿಸುವ ಯಾವುದೇ ಕಾರ್ಯಕ್ರಮವು ಆ ಕಾರಣದಿಂದಾಗಿಯೇ ಕಾರ್ಪೊರೇಟ್-ಕೋಮುವಾದಿ ಮೈತ್ರಿಗೆ ಎದುರಾಗುವ ಒಂದು ಪ್ರಗತಿಪರ ಪ್ರತಿ-ಶಕ್ತಿಯಾಗುತ್ತದೆ. ಜನರ ಜೀವನ, ಅವರ ಸ್ಥಿತಿ-ಗತಿಗಳನ್ನು ಸುಧಾರಿಸುವ ಕಾರ್ಯಕ್ರಮ ಮತ್ತು ನವ ಉದಾರವಾದಿ ಬಂಡವಾಳಶಾಹಿಯ ತರ್ಕ ಇವುಗಳ ನಡುವೆ ಇರುವ ವೈರುಧ್ಯದ ಅರಿವಿಲ್ಲದ ಬೂರ್ಜ್ವಾ ರಾಜಕೀಯ ಪಡೆಗಳು ಜನರ ಸ್ಥಿತಿ-ಗತಿಗಳು ಸುಧಾರಿಸಬೇಕೆಂದು ಸಮರ್ಥಿಸುವುದು ಅಷ್ಟರಮಟ್ಟಿಗೆ ಒಳ್ಳೆಯದೇ.

-ಪ್ರೊ. ಪ್ರಭಾತ್ಪಟ್ನಾಯಕ್
ಅನು: ಕೆ.ಎಂ.ನಾಗರಾಜ್

( ಈ ವಾರದ ಜನಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ಲೇಖನ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

Published

on

ಗಿರೀಶ್ ಮುತ್ತು

ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು

ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.

ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.

ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್‌ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.

ಗರಿಕೆ ರಸದ ಪ್ರಯೋಜನಗಳು

1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.

2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ

4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.

5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್‌ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.

6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.

ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?

*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.

* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.

* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.

* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.

* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ

Published

on

ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮೊದಲ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ತ್ವರಿತ ಪರಿಹಾರವೇ ತಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.

ರಾಜ್ಯದಾದ್ಯಂತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಜೊತೆಗೆ ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ “ಭಾರತ್ ಜೋಡೋ ಯುವ ಸಂಘ”ಗಳ ರಚನೆಗೆ ಸರ್ಕಾರ ಮುಂದಾಗಲಿದೆ ಎಂದು ಹೇಳಿದರು. ಈ ಸಂಘಟನೆಗಳು ಸಾಮಾಜಿಕ ಸೌಹಾರ್ದತೆ ಮತ್ತು ಯುವಜನರ ಸಬಲೀಕರಣಕ್ಕೆ ನೆರವಾಗಲಿವೆ ಎಂದು ಅಭಿಪ್ರಾಯಪಟ್ಟರು.

ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದ ಮುಖ್ಯಮಂತ್ರಿ, ವಿಶೇಷವಾಗಿ ಬೆಂಗಳೂರಿನ ಹದಗೆಟ್ಟ ರಸ್ತೆಗಳ ದುರಸ್ತಿ ಮತ್ತು ಡಾಂಬರೀಕರಣ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಜನರು ಎದುರಿಸುತ್ತಿರುವ ನಾಗರಿಕ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.

ಮನೆ ನಿರ್ಮಾಣ ಹಾಗೂ ಆಸ್ತಿ ದಾಖಲೆಗಳಿಗೆ ಸಂಬಂಧಿಸಿದ ಎ-ಖಾತಾ ಮತ್ತು ಬಿ-ಖಾತಾ ಸಮಸ್ಯೆಗಳ ಪರಿಹಾರಕ್ಕೂ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಜನಸಾಮಾನ್ಯರ ಬದುಕಿಗೆ ನೇರವಾಗಿ ಸಂಬಂಧಿಸಿದ ವಿಷಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ತಮ್ಮ ಜೀವನದ ಮಹತ್ವದ ಜವಾಬ್ದಾರಿಯಾಗಿದೆ ಎಂದು ಹೇಳಿದ ಅವರು, ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡು ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ರಾಜ್ಯದ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯವಾಗಿದ್ದು, ಪಾರದರ್ಶಕ ಮತ್ತು ಉತ್ತರದಾಯಿ ಆಡಳಿತ ನೀಡುವುದು ತಮ್ಮ ಸಂಕಲ್ಪವಾಗಿದೆ ಎಂದು ಹೇಳಿದರು.

“ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರವನ್ನು ನೀಡುತ್ತೇವೆ. ಯುವಕರು, ರೈತರು, ಮಹಿಳೆಯರು ಮತ್ತು ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದುವಾಗಿರುತ್ತದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ

Published

on

ಸುದ್ದಿದಿನ,ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಯ ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ (B. K. Hariprasad) ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ನೇಮಕ ಮಾಡಿದೆ. ಈ ಕುರಿತು ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅಧಿಕೃತ ಆದೇಶ ಹೊರಡಿಸಿದ್ದು, ನೇಮಕಾತಿ ತಕ್ಷಣದಿಂದಲೇ ಜಾರಿಗೆ ಬಂದಿದೆ.

ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ಕೆ. ಶಿಬಕುಮಾರ್ (D. K. Shivakumar) ಅವರು ‘ಒಬ್ಬ ವ್ಯಕ್ತಿಗೆ ಒಂದೇ ಹುದ್ದೆ’ ಎಂಬ ಪಕ್ಷದ ನೀತಿಯ ಹಿನ್ನೆಲೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ ಈ ಮಹತ್ವದ ಬದಲಾವಣೆ ನಡೆದಿದೆ. ಪಕ್ಷ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ಉದ್ದೇಶದಿಂದ ಅನುಭವಿ ನಾಯಕ ಹರಿಪ್ರಸಾದ್ ಅವರಿಗೆ ಹೈಕಮಾಂಡ್ ಹೊಣೆಗಾರಿಕೆ ನೀಡಿದೆ.

ದೀರ್ಘಕಾಲ ಕಾಂಗ್ರೆಸ್ ಸಂಘಟನೆಯಲ್ಲಿ ವಿವಿಧ ಹುದ್ದೆಗಳನ್ನು ನಿರ್ವಹಿಸಿರುವ ಹರಿಪ್ರಸಾದ್ ಅವರು ರಾಜ್ಯ ಹಾಗೂ ರಾಷ್ಟ್ರ ರಾಜಕಾರಣದಲ್ಲಿ ಪ್ರಭಾವಿ ನಾಯಕರಾಗಿ ಗುರುತಿಸಿಕೊಂಡಿದ್ದಾರೆ. ಮಾಜಿ ರಾಜ್ಯಸಭಾ ಸದಸ್ಯರಾಗಿರುವ ಅವರು ಹಲವು ರಾಜ್ಯಗಳ ಪಕ್ಷದ ಉಸ್ತುವಾರಿ ಜವಾಬ್ದಾರಿಗಳನ್ನೂ ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಪಕ್ಷದ ಸಂಘಟನಾ ಅನುಭವ ಮತ್ತು ಹೈಕಮಾಂಡ್‌ನೊಂದಿಗೆ ಹೊಂದಿರುವ ಉತ್ತಮ ಬಾಂಧವ್ಯ ಅವರ ನೇಮಕಾತಿಗೆ ಪ್ರಮುಖ ಕಾರಣವೆಂದು ಕಾಂಗ್ರೆಸ್ ವಲಯಗಳಲ್ಲಿ ವಿಶ್ಲೇಷಿಸಲಾಗಿದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಸಚಿವರಾದ ಸತೀಶ್ ಜಾರಕಿಹೊಳಿ ಹಾಗೂ ಈಶ್ವರ ಖಂಡ್ರೆ ಸೇರಿದಂತೆ ಹಲವು ನಾಯಕರ ಹೆಸರುಗಳು ಕೇಳಿಬಂದಿದ್ದರೂ, ಅಂತಿಮವಾಗಿ ಹೈಕಮಾಂಡ್ ಹರಿಪ್ರಸಾದ್ ಅವರ ಮೇಲೆ ವಿಶ್ವಾಸ ವ್ಯಕ್ತಪಡಿಸಿದೆ. ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿರುವ ಸಂದರ್ಭದಲ್ಲಿ ಸಂಘಟನೆ ಮತ್ತು ಸರ್ಕಾರದ ನಡುವೆ ಸಮನ್ವಯ ಸಾಧಿಸುವ ಮಹತ್ವದ ಜವಾಬ್ದಾರಿ ಇದೀಗ ಅವರ ಹೆಗಲಿಗೆ ಬಂದಿದೆ.

ಹರಿಪ್ರಸಾದ್ ಅವರ ನೇಮಕಾತಿಯಿಂದ ರಾಜ್ಯ ಕಾಂಗ್ರೆಸ್ ಸಂಘಟನೆಯಲ್ಲಿ ಹೊಸ ಚೈತನ್ಯ ಮೂಡಲಿದ್ದು, ಮುಂದಿನ ಸ್ಥಳೀಯ ಸಂಸ್ಥೆ ಹಾಗೂ ವಿಧಾನ ಪರಿಷತ್ ಚುನಾವಣೆಗಳ ಸಿದ್ಧತೆಯಲ್ಲಿ ಪಕ್ಷಕ್ಕೆ ಹೊಸ ದಿಕ್ಕು ದೊರೆಯುವ ನಿರೀಕ್ಷೆ ವ್ಯಕ್ತವಾಗಿದೆ.

Continue Reading
Advertisement

Title

ದಿನದ ಸುದ್ದಿ1 day ago

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

ಗಿರೀಶ್ ಮುತ್ತು ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು...

ದಿನದ ಸುದ್ದಿ2 days ago

ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ

ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ...

ದಿನದ ಸುದ್ದಿ2 days ago

ಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ

ಸುದ್ದಿದಿನ,ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಯ ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ (B. K. Hariprasad) ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ...

ಅಂಕಣ2 days ago

ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ

ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು...

ದಿನದ ಸುದ್ದಿ2 days ago

ಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್

ಸುದ್ದಿದಿನ ಡೆಸ್ಕ್:ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನಾನು ಇಂದು ಪ್ರಮಾಣ ವಚನ ಸ್ವೀಕರಿಸಿದ್ದೇನೆ. ಮುಖ್ಯಮಂತ್ರಿಯಾಗಿ ರಾಜ್ಯದ ಏಳುಕೋಟಿ ಜನತೆಯ ಸೇವೆ ಮಾಡಲು ಒದಗಿ ಬಂದಿರುವ ಈ ಅವಕಾಶ ನನ್ನ...

ದಿನದ ಸುದ್ದಿ2 days ago

ಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ

ಸುದ್ದಿದಿನ,ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ರಾಜ್ಯದ ಜನತೆಗೆ ಹಲವು ಮಹತ್ವದ ಘೋಷಣೆಗಳನ್ನು ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮಾಣವಚನ...

ದಿನದ ಸುದ್ದಿ4 days ago

ದಾವಣಗೆರೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲ ಎಲ್.ಎಚ್.ಅರುಣಕುಮಾರ್ ಮನವಿ

ಸುದ್ದಿದಿನಡೆಸ್ಕ್:ದಾವಣಗೆರೆಮಹಾನಗರದಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ ಮಾಡುವ ಮುನ್ನ ಪೂರ್ವಭಾವಿಯಾಗಿ ಒಂದಿಷ್ಟು ಮಾಹಿತಿಯ ಅಗತ್ಯವಿದೆ. ದಾವಣಗೆರೆ ಅತ್ಯಂತ ನಿಖರವಾಗಿ ಕರ್ನಾಟಕದ ಮಧ್ಯಭಾಗದಲ್ಲಿದೆ. ಅದ್ದರಿಂದ ಈ ನಗರವನ್ನೇ...

ದಿನದ ಸುದ್ದಿ4 days ago

ಕುಂಬಳಕಾಯಿ ಬೀಜದಲ್ಲಿ ‘ ಜೀವ ಸಂಜೀವಿನಿ’ : ಮಿಸ್ ಮಾಡ್ದೆ ಓದಿ ; ಆರೋಗ್ಯದ ಗುಟ್ಟು ತಿಳಿಯಿರಿ

ಕುಂಬಳಕಾಯಿ ಬೀಜಗಳು ಖಾದ್ಯ ಬೀಜಗಳಾಗಿವೆ, ಅವುಗಳು ಹೆಚ್ಚಿನ ಪೌಷ್ಟಿಕಾಂಶದ ಮೌಲ್ಯಕ್ಕಾಗಿ ಶತಮಾನಗಳಿಂದ ತಿಳಿದುಬಂದಿದೆ. ಕುಂಬಳಕಾಯಿ ಸಸ್ಯದ ಈ ಚಪ್ಪಟೆ ಮತ್ತು ಬಿಳಿ ಬೀಜಗಳನ್ನು ಸರಿಯಾಗಿ “ಶಕ್ತಿ ಕೇಂದ್ರ”...

ದಿನದ ಸುದ್ದಿ5 days ago

ದಾವಣಗೆರೆ ವಿಶ್ವವಿದ್ಯಾಲಯ | ಜೂನ್ 2 ರಿಂದ 4 ರವರೆಗೆ ‘ಭಾಷಾಂತರ ಕೌಶಲ್ಯ ತರಬೇತಿ ಶಿಬಿರ’

ಸುದ್ದಿದಿನ,ದಾವಣಗೆರೆ:ಕನ್ನಡ, ತೆಲುಗು, ಉರ್ದು ಸೇರಿದಂತೆ ಭಾರತೀಯ ಭಾಷೆಗಳ ಭಾಷಾಂತರ ಕೌಶಲ್ಯ ತರಬೇತಿ ಶಿಬಿರವನ್ನು ದಾವಣಗೆರೆಯ ವಿಶ್ವವಿದ್ಯಾನಿಲಯದ ಇಂಗ್ಲಿಷ್ ಅಧ್ಯಯನ ವಿಭಾಗ ಹಾಗೂ ಭಾರತೀಯ ಭಾಷಾ ಕೇಂದ್ರದ ಸಂಯುಕ್ತಾಶ್ರಯದಲ್ಲಿ...

ದಿನದ ಸುದ್ದಿ1 week ago

‘ಮತದಾರ ದೇವರು’ ಎಂದ‌ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ನಾನು ಸಲ್ಲಿಸಿರುವ ರಾಜೀನಾಮೆ ಪತ್ರವನ್ನು ಘನತೆವೆತ್ತ ರಾಜ್ಯಪಾಲರಿಗೆ ನೀಡಿ ಬಂದಿದ್ದೇನೆ. ಸಾಂವಿಧಾನಿಕ ವಿಧಿ-ವಿಧಾನಗಳ ಮೂಲಕ ರಾಜ್ಯಪಾಲರು ಕ್ರಮಕೈಗೊಳ್ಳುತ್ತಾರೆ. ಶೀಘ್ರದಲ್ಲಿಯೇ ನೂತನ ಮುಖ್ಯಮಂತ್ರಿಯನ್ನು ರಾಜ್ಯದ...

Trending