ದಿನದ ಸುದ್ದಿ
‘ನ್ಯೂಸ್ನೇಶನ್’ ಸಂದರ್ಶನ : ‘ಅಚ್ಛೇ ದಿನ್’ ಗೆ ತಕ್ಕ ಸಮಾರೋಪ..!
ಮೇ 11 ರಂದು, ಈ ಬಾರಿಯ ಸಾರ್ವತ್ರಿಕ ಚುನಾವಣೆಗಳ 6ನೇ ಘಟ್ಟದಲ್ಲಿ ದೇಶದ ರಾಜಧಾನಿ ದಿಲ್ಲಿ ಮತ್ತು ಸುತ್ತಮುತ್ತಲಿನ ರಾಜ್ಯಗಳ ಮತದಾರರು ತಾವು ಮರುದಿನ ಯಾರಿಗೆ ಮತನೀಡಬೇಕು ಎಂದು ಯೋಚಿಸುತ್ತಿರುವ ಸಮಯದಲ್ಲಿ , ‘ನ್ಯೂಸ್ ನೇಶನ್’ ಎಂಬೊಂದು ಸುದ್ದಿ ವಾಹಿನಿ ಪ್ರಸಾರ ಮಾಡಿರುವ ಪ್ರಧಾನ ಮಂತ್ರಿಗಳ ಸಂದರ್ಶನ ಈಗ ಇಡೀ ದೇಶದ ಗಮನ ಸೆಳೆದಿದೆ-ಮುಖ್ಯವಾಗಿ ಬಾಲಾಕೋಟ್ ‘ವಾಯು ಪ್ರಹಾರ’ದ ಕೀರ್ತಿ ತನ್ನದಾಗಿಸಿಕೊಳ್ಳುವ ಭರದಲ್ಲಿ ಪ್ರಧಾನಿಗಳು ಪ್ರದರ್ಶಿಸಿದ ಮೋಡಗಳು ಮತ್ತು ರಾಡಾರ್ ಕುರಿತಂತೆ ‘ಪಂಡಿತರನ್ನು ಬೆರಗಾಗಿಸಿದ’ ತನ್ನ ‘ಕಚ್ಚಾ ಜಾಣ್ಮೆ’ಯಿಂದಾಗಿ.
ಆದರೆ ಈ ಸಂದರ್ಶನದ ಹೆಚ್ಚುಗಾರಿಕೆ ಅಷ್ಟೇ ಅಲ್ಲ, ಒಂದರ್ಥದಲ್ಲಿ, ಬಹಳ ಸಮಯದ ನಂತರ ಕೇಂದ್ರದಲ್ಲಿ, ಕೇವಲ 31% ಮತಗಳಿಂದಲೇ ಆದರೇನಂತೆ, ಸ್ಪಷ್ಟ ಬಹುಮತ ಪಡೆದ ಒಂದು ಪಕ್ಷದ ನೇತೃತ್ವದ ‘ಮಜಬೂತ್’ ಸರಕಾರದ ಐದು ವರ್ಷಗಳ ಆಳ್ವಿಕೆಯ ಒಂದು ಸಾರಾಂಶವನ್ನು ಈ ಸಂದರ್ಶನ ದೇಶದ ಮುಂದೆ ಇಟ್ಟಿದೆ ಎನ್ನಬಹುದು.
ರಾಡಾರ್ಗಳು ಮತ್ತು ಮೋಡಗಳು ಮಾತ್ರವೇ ಈ ‘ಐತಿಹಾಸಿಕ’ ಎನ್ನಬಹುದಾದ ಸಂದರ್ಶನದ ‘ಹೈಲೈಟ್’ ಅಲ್ಲ ಎಂಬುದು ಈಗ ಜನಜನಿತವಾಗಿದೆ. “ತಾವು ಹಣದ ಪರ್ಸ್ ಇಟ್ಟುಕೊಳ್ಳುತ್ತೀರಾ?” ಎಂಬ ಸಂದರ್ಶಕರುಗಳ ಅಮೋಘ ಪ್ರಶ್ನೆಯನ್ನು ಉತ್ತರಿಸುತ್ತ ಜೇಬಲ್ಲಿ ಹಣವೇ ಇಲ್ಲದಿರುವಾಗ ಪರ್ಸ್ ಏಕೆ ಎಂದರು. 2001ರಲ್ಲಿ ಗುಜರಾತಿನ ಮುಖ್ಯಮಂತ್ರಿಯಾಗಿ ಸರಕಾರವನ್ನು ಸೇರುವ ವರೆಗೆ, ಅಂದರೆ ಸುಮಾರು 50ವರ್ಷ ವಯಸ್ಸಿನ ವರೆಗೆ ಅವರಿಗೆ ಏನೇನೂ ಆದಾಯವಿರಲಿಲ್ಲವಂತೆ, ಸರಕಾರಕ್ಕೆ ಬಂದಾಗಲೇ ಅಧಿಕಾರಿಗಳು ಅವರ ಹೆಸರಲ್ಲಿ ಬ್ಯಾಂಕ್ ಖಾತೆ ತೆರೆದರಂತೆ. ಹಾಗಿದ್ದರೆ ಅದುವರೆಗೆ ಆರೆಸ್ಸೆಸ್ನ ಸಂಘಟನಾ ಕೆಲಸ ಮಾಡುತ್ತಿದ್ದ ಅವರಿಗೆ ಸಂಘಟನೆ ಏನೂ ಕೊಡುತ್ತಿರಲಿಲ್ಲವೇ ಎಂದು ಹಲವರು ಮೂಗಿನ ಮೇಲೆ ಬೆರಳಿಟ್ಟುಕೊಂಡಿದ್ದಾರೆ.
1988ರಲ್ಲೇ ಅವರು ಡಿಜಿಟಲ್ ಕ್ಯಾಮರಾ ಬಳಸಿದ್ದರು, ಟಚ್ ಸ್ಕರೀನ್ ಟ್ಯಾಬ್ಲೆಟ್ ಬಳಿಸಿದ್ದರು, ಇ ಮೇಲ್ ಕೂಡ ಬಳಸುತ್ತಿದ್ದರು ಎಂಬ ಸಂಗತಿಗಳ ಮೇಲೆ ಸಂದರ್ಶನದ ವೇಳೆಯಲ್ಲಿ ಅವರು ಬೆಳಕು ಚೆಲ್ಲಿದರು. ಆ ವೇಳೆಗೆ ಇವೆಲ್ಲ ಭಾರತದಲ್ಲಿ ಬಳಕೆಗೇ ಬಂದಿರಲಿಲ್ಲ ಎಂದು ಕೆಲವು ಪರಿಣಿತರು ಹೇಳುತ್ತಿದ್ದಾರೆ. 1988ರಲ್ಲಿ ಡಿಜಿಟಲ್ ಕ್ಯಾಮರಾದ ತಂತ್ರಜ್ಞಾನ ರೂಪುಗೊಂಡಿತ್ತಷ್ಟೇ, ಅದ್ದರಿಂದ ಅಂತಹ ಕ್ಯಾಮರಾಗಳು ಎಲ್ಲೋ ಕೆಲವು ಇದ್ದು ದುಬಾರಿಯಾಗಿದ್ದವು.10-15 ಲಕ್ಷ ರೂ.ಗಳಷ್ಟು. ಇ ಮೇಲ್ ಬಳಕೆಗೆ ಬಂದದ್ದು 1990ರ ದಶಕದ ನಂತರವೇ. ಚಿಕ್ಕಾಸೂ ಜೇಬಿನಲ್ಲಿರದ ಇವರು ಅದನ್ನೆಲ್ಲ ಹೇಗೆ ಪಡೆದಿರಬಹುದು ಎಂದು ಇನ್ನು ಕೆಲವರು ಬೆರಗಾಗಿದ್ದಾರೆ.
ಬಹುಶಃ ಇವೆಲ್ಲದಕ್ಕೂ ಉತ್ತರದ ಹೊಳಹು ಸಿಕ್ಕಿದ್ದು ಸಂದರ್ಶಕರು ‘ತಾವು ಕಳೆದ ಐದು ವರ್ಷಗಳಲ್ಲಿ ಏನಾದರೂ ಬರೆದಿದ್ದೀರಾ’, ಅಂದರೆ ಕವನ ಬರೆದಿದ್ದೀರಾ ಎಂದು ಕೇಳಿದಾಗ. ಹೌದು, ಇವತ್ತಷ್ಟೇ ಒಂದು ಕವನವನ್ನು ಬರೆದಿದ್ದೇನೆ ಎಂದರು ಮಾನ್ಯ ಪ್ರಧಾನಿಗಳು. ಹಿಂದಿನ ಬಿಜೆಪಿ ಪ್ರಧಾನಿಗಳಂತೆ ಇವರೂ ಕವನ ಬರೆಯುತ್ತಾರೆ ಎಂಬುದು ಬಹಳಷ್ಟು ಮಂದಿಗೆ ಆಶ್ಚರ್ಯವಾದ್ದು ಆಗಲೇ. ಮತ್ತು ಈ ಸಂದರ್ಶನದ ನಿಜ ಚಿತ್ರದ ಆ ಹೊಳಹು ಸಿಕ್ಕಿದ್ದು ಕೂಡ ಆಗಲೇ.
ಕವನ ಓದಿ ಎಂದು ಸಂದರ್ಶಕರು ಹೇಳಿದಾಗ ಪ್ರಧಾನಿಗಳು ಅಲ್ಲಿದ್ದ ಸೇವಕರಿಂದ ತನ್ನ ಫೈಲ್ ಕೇಳಿ ಪಡೆಯುತ್ತಾರೆ, ಒಂದು ಕಾಗದವನ್ನು ಎತ್ತಿಕೊಳ್ಳುತ್ತಾರೆ, ಅದನ್ನು ತೋರಿಸಿ ಎನ್ನುತ್ತಾರೆ ಸಂದರ್ಶಕರು, ಇಲ್ಲ ಅದು ಕೈಬರಹದಲ್ಲಿದೆ, ತನ್ನ ಕೈಬರಹ ಸೊಟ್ಟ-ಸೊಟ್ಟಗಾಗಿದೆ ಎನ್ನುತ್ತಾರೆ. ಈ ವೇಳೆಗೆ ಅವರು ನೋಡುತ್ತಿದ್ದ ಕಾಗದದ ದೃಶ್ಯ ಸಂದರ್ಶನ ನೋಡುತ್ತಿರುವವರಿಗೂ ಕಾಣುತ್ತದೆ. ಆದರೆ ಅಲ್ಲಿ ಕಾಣಿಸುವುದು ಕೈಬರಹದ ಕವನವಲ್ಲ, ಮುದ್ರಿತ ಕವನ, ಅಲ್ಲದೆ ಸಂದರ್ಶಕರು ಕೇಳಿದ ಪ್ರಶ್ನೆಯೂ ಅಲ್ಲಿ ಕಾಣುತ್ತದೆ. ಅದರ ಮುಂದೆ 27 ಎಂದಿದೆ. ಅಂದರೆ 27ನೇ ಪ್ರಶ್ನೆ.
ಈ ಐದು ವರ್ಷಗಳಲ್ಲಿ ಎಂದೂ ಪತ್ರಿಕಾ ಸಮ್ಮೇಳನ ನಡೆಸಿಯೇ ಇರದ ದಾಖಲೆ ನಿರ್ಮಿಸಿರುವ ಈ ಪ್ರಧಾನಿಗಳ ಸಂದರ್ಶನಗಳು ಅಲ್ಲೋ-ಇಲ್ಲೋ ನಡೆದಿವೆ. ಚುನಾವಣೆಗಳು ಹತ್ತಿರ ಬಂದ ಮೇಲೆ ತುಸು ಹೆಚ್ಚಾಗಿವೆ. ಆದರೆ ಇವೆಲ್ಲವೂ ಸಹಾನುಭೂತಿಪರ ಸಂದರ್ಶಕರು ನಡೆಸಿದ್ದು, ಅಂದರೆ ಪ್ರಧಾನ ಮಂತ್ರಿಗಳಿಗೆ ಇಷ್ಟವಾಗುವ ಪ್ರಶ್ನೆಗಳನ್ನು ಮಾತ್ರ ಕೇಳುವ ‘ಸಹೃದಯ’ ಪತ್ರಕರ್ತರದ್ದು. ಅವೆಲ್ಲವೂ ‘ಸ್ಕ್ರಿಪ್ಟೆಡ್’ ಸಂದರ್ಶನಗಳು ಎನ್ನಲಾಗುತ್ತಿತ್ತು. ಅಂದರೆ ಅವರು ಮೊದಲೇ ಪ್ರಶ್ನೆಗಳನ್ನು ಕಳಿಸುತ್ತಾರೆ, ಪ್ರಧಾನಿಗಳ ಕಚೇರಿ ಅವುಗಳಲ್ಲಿ ಉತ್ತರಿಸುವ ಪ್ರಶ್ನೆಗಳನ್ನು ಆಯ್ದು ಕಳಿಸುತ್ತದೆ, ಪತ್ರಕರ್ತರು ಅವನ್ನೇ ಕೇಳುತ್ತಾರೆ. ಆದರೆ ಇದು ಕೇವಲ ಊಹೆಯಾಗಿರುತ್ತಿತ್ತು, ಪ್ರಧಾನಿಗಳ ಬಗ್ಗೆ ಅಸೂಯೆ ಇರುವವರ ಅಪಪ್ರಚಾರ ಇರಬಹುದು ಎಂದೂ ಭಾವಿಸಲಾಗಿತ್ತು.
ಆದರೆ ಈ ಸಂದರ್ಶನ ಅದನ್ನು ದೃಢಪಡಿಸಿದೆ ಎಂದು ಬಹಳಷ್ಟು ರಾಜಕೀಯ ವೀಕ್ಷಕರು ಹೇಳುತ್ತಿದ್ದಾರೆ. ಅದೇನೇ ಇರಲಿ, ಬಾಲಾಕೋಟ್ ವಿಮಾನ ದಾಳಿಯ ಬಗ್ಗೆ ಹೇಳಿದ್ದು ಚುನಾವಣೆಯ ಸಂದರ್ಭದಲ್ಲಿ ಅರ್ಥವಾಗುತ್ತದೆ, ಆದರೆ ಉಳಿದವುಗಳು- ಪರ್ಸ್ ಇಲ್ಲದಿರುವುದು, ಡಿಜಿಟಲ್ ಕ್ಯಾಮರಾ, ಇ-ಮೇಲ್, ಟ್ಯಾಬ್ಲೆಟ್ ಮತ್ತು ಈ ಮುದ್ರಿತ ಕವನ, ಈ ಮೇಲ್ನೋಟಕ್ಕೆ ಸುಳ್ಳಿರಬಹುದು ಎಂದೇ ಸಂದೇಹ ಮೂಡಿಸುವ ವಿಚಾರಗಳು ಯಾಕೆ ಬೇಕಿತ್ತು ಎಂಬ ಪ್ರಶ್ನೆ ಹಲವರಲ್ಲಿ ಎದ್ದಿದೆ.
ಆದರೆ ಕಳೆದ ಐದು ವರ್ಷಗಳಲ್ಲಿ ಒಂದೊಂದಾಗಿ ಆಶ್ವಾಸನೆಗಳು ಜುಮ್ಲಾಗಳಾಗಿ ಬಿಟ್ಟದ್ದು, ಮತ್ತು ನಡುನಡುವೆ ಸಮಾರಂಭಗಳಲ್ಲಿ, ಪ್ರತಿಪಕ್ಷಗಳನ್ನು ಟೀಕಿಸುವ ಸಂದರ್ಭಗಳಲ್ಲಿ, ವಿಶೇಷವಾಗಿ ಚುನಾವಣೆಗಳ ಸಂದರ್ಭದಲ್ಲಿ, ಹೊಮ್ಮಿ ಬಂದು ಆಮೇಲೆ ಶುದ್ಧ ಸುಳ್ಳುಗಳು ಒಂದು ದೃಢಪಟ್ಟಿದ್ದು(ಉದಾ: ಯಾವ ಕಾಂಗ್ರೆಸ್ ಮುಖಂಡರೂ ಭಗತ್ ಸಿಂಗ್ರನ್ನು ಜೈಲಿನಲ್ಲಿ ಭೇಟಿಯಾಗಿರಲಿಲ್ಲ!) ನೆನಪಿರುವವರಿಗೆ ಇದರಿಂದ ಆಶ್ಚರ್ಯವಾಗಲಿಕ್ಕಿಲ್ಲ.
ಆದರೂ, ಬಾಲಾಕೋಟ್ ವಾಯುದಾಳಿಗೆ ಆದೇಶ ನೀಡಿದ ಪರಿಯ ಬಗ್ಗೆ ಅವರು ಹೇಳಿರುವುದು ನಿಜವೇನು, ನಿಜವಾಗಿದ್ದರೆ ಪರಿಣಿತರಾರೂ ಅದು ತಪ್ಪು ಎಂದು ಹೇಳುವ ಧೈರ್ಯ ತೋರಲಿಲ್ಲವೇ, ದೇಶದ ಭದ್ರತೆಯಂತಹ ಗಹನವಾದ ಪ್ರಶ್ನೆಗಳಲ್ಲಿ ಇಂತಹ ‘ಕಚ್ಚಾ ಜಾಣ್ಮೆ’ ಮತ್ತು ಪರಿಣಿತರ ಮೌನ ಅಪಾಯಕಾರಿಯಲ್ಲವೇ ಎಂದು ಹಲವರಿಗೆ ಆತಂಕ ಉಂಟಾಗಿದೆ. ನೋಟುರದ್ಧತಿಯ ಅನುಭವ ನಮ್ಮ ಮುಂದಿದೆ ಎನ್ನುತ್ತಾರೆ ಅವರು. ಈ ಬಾಲಾಕೋಟ್ ವಾಯುದಾಳಿಯನ್ನು ಮಳೆ ಸುರಿಯುತ್ತಿದ್ದಾಗ ಮಾಡಿದ್ದರಿಂದಲೇ ನಮ್ಮ ಯುದ್ಧವಿಮಾನಗಳು ಹೊತ್ತಿದ್ದ ಒಂದು ಕ್ಷಿಪಣಿ ಕೆಲಸ ಮಾಡದೆ ಈ ದಾಳಿಯ ನಿಜವಾದ ಫಲಿತಾಂಶ ನಮಗೆ ತಿಳಿಯದಂತೆ ಆಗಿರಬಹುದೇ ಎಂದೂ ಕೆಲವು ರಕ್ಷಣಾ ಪರಿಣಿತರು ಊಹಿಸುತ್ತಿದ್ದಾರೆ ಎಂಬುದನ್ನು ಇಲ್ಲಿ ಗಮನಿಸಬಹುದು.
( ಈ ವಾರದ ಜನಶಕ್ತಿ ವಾರ ಪತ್ರಿಕೆಯಲ್ಲಿ ಪ್ರಕಟವಾದ ಲೇಖನ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು.
ಚಲನಚಿತ್ರ ರಂಗ – 2005ರಲ್ಲಿ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ಎಂಟ್ರಿ ಕೊಟ್ಟ ಅವರು, 2007ರಲ್ಲಿ ಪುನೀತ್ ರಾಜ್ಕುಮಾರ್ ಅವರ ‘ಮಿಲನ’ ಚಿತ್ರದಲ್ಲಿ ಹೇಮಂತ್ ಎಂಬ ವಿಲನ್ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದರು.
ಇತ್ತೀಚಿನ ಜನಪ್ರಿಯತೆ – ‘ಲವ್ ಮಾಕ್ಟೇಲ್’ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟ-ನಿರ್ಮಾಪಕರಾಗಿ ದೊಡ್ಡ ಹೆಸರು ಮಾಡಿದ್ದರು.
ದಿಲೀಪ್ ರಾಜ್ ಅವರ ಸಾವು ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಚಿತ್ರರಂಗಕ್ಕೆ ದೊಡ್ಡ ನಷ್ಟ. ಇವರ ಈ ಹಠಾತ್ ನಿಧನವು ಒತ್ತಡದ ಜೀವನಶೈಲಿ ಮತ್ತು ಆರೋಗ್ಯದ ಕಡೆಗೆ ನಾವು ನೀಡಬೇಕಾದ ಹೆಚ್ಚಿನ ಗಮನದ ಬಗ್ಗೆ ಎಚ್ಚರಿಕೆ ನೀಡುವಂತಿದೆ.

ದಿನದ ಸುದ್ದಿ
ಬ್ಯಾಕ್ಲಾಗ್ ನಿಯಮಾವಳಿ ಉಲ್ಲಂಘನೆ ; ಶಾಲಾ ಶಿಕ್ಷಣ ಇಲಾಖೆ ನಿರ್ದೇಶಕ ಕರಿಚಣ್ಣನವರ್ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬಾ ಬಸವಾರ್ಯ ಪ್ರೌಢಶಾಲೆಯ ಕನ್ನಡ ಶಿಕ್ಷಕರ ಬ್ಯಾಕ್ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯಲ್ಲಿನ ಅಕ್ರಮಗಳನ್ನು ತನಿಖೆಗೆ ಒಳಪಡಿಸಿ ಆಡಳಿತ ಮಂಡಳಿ ಹಾಗೂ ಸಂಬಂಧಿಸಿದ ಅಧಿಕಾರಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ನೀಡಿ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಶ್ರೀ ಕೃಷ್ಣಾಜಿ ಎಸ್. ಕರಿಚಣ್ಣನವರ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲಾ ಹರಿಹರ ನಗರದ ಮಾತೃಶ್ರೀ ರುದ್ರಮಾಂಬ ಬಸವಾರ್ಯ ಪ್ರೌಢಶಾಲೆಯಲ್ಲಿನ ಕನ್ನಡ ಶಿಕ್ಷಕರ ಬ್ಯಾಕ್ಲಾಗ್ (ಪರಿಶಿಷ್ಟ ಜಾತಿ) ನೇಮಕಾತಿಯು ನಿಯಮಬಾಹಿರವಾಗಿ ನಡೆದಿರುವ ಮಾಹಿತಿಯ ಆಧಾರದ ಮೇಲೆ ಆಯುಕ್ತರು ಹಾಗೂ ನಿರ್ದೇಶಕರು, ಶಾಲಾ ಶಿಕ್ಷಣ ಇಲಾಖೆ, ಆಯುಕ್ತರ ಕಛೇರಿ, ಬೆಂಗಳೂರು ಇವರಿಗೆ ದೂರು ನೀಡಿ, ಬ್ಯಾಕ್ಲಾಗ್ ನಿಯಮಕ್ಕೆ ವಿರುದ್ಧವಾಗಿ ಸಂದರ್ಶನ ನಡೆಸಿ, ನೇಮಕಾತಿ ಪ್ರಕ್ರಿಯೆಗೆ ಮುಂದಾಗಿರುವ ಉಪನಿರ್ದೇಶಕರು, ಕ್ಷೇತ್ರ ಶಿಕ್ಷಣಾಧಿಕಾರಿಗಳು, ಮೂಖ್ಯೋಪಧ್ಯಾಯರು, ವಿಷಯ ಪರಿವೀಕ್ಷಕರು, ವಿಷಯ ತಜ್ಞರು ಹಾಗೂ ಆಡಳಿತ ಮಂಡಳಿಯ ಸದಸ್ಯರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ದೂರು ಅರ್ಜಿ ತಲುಪಿದ ಒಂದು ತಿಂಗಳ ಒಳಗಾಗಿ ನೀಡುವಂತೆ ಮನವಿ ಮಾಡಲಾಗಿತ್ತು. ಆದರೆ ವರ್ಷಗಳೇ ಕಳೆದರೂ ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ವಯಸ್ಸು ಮತ್ತು ಮೆರಿಟ್ ಆಧಾರದಲ್ಲಿ ನೇಮಕಾತಿ ನಡೆಸದೆ ಸಂದರ್ಶನ ನಡೆಸಿ ಬ್ಯಾಕ್ಲಾಗ್ ನಿಯಮವನ್ನು ಉಲ್ಲಂಘನೆ ಮಾಡಿರುವುದು ತನಿಖೆಯಲ್ಲಿ ಕಂಡುಬAದಿರುತ್ತದೆ. ಆದರೆ ತಪ್ಪಿತಸ್ಥ ಅಧಿಕಾರಿಗಳು ಹಾಗೂ ಆಡಳಿತ ಮಂಡಳಿಯ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕಾರಣ ಶಾಲಾ ಶಿಕ್ಷಣ ಇಲಾಖೆಯ ನಿರ್ದೇಶಕರಾದ ಕೃಷ್ಣಾಜಿ ಎಸ್. ಕರಿಚಣ್ಣನವರ್ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತದಲ್ಲಿ ದೂರು ದಾಖಲಿಸಿ, ಬ್ಯಾಕ್ಲಾಗ್ ನಿಯಮಗಳನ್ನು ಉಲ್ಲಂಘಿಸಿ ಸಂದರ್ಶನ ನಡೆಸಲು ಕಾರಣರಾದವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರಿಗೆ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿಗಳ ಅವ್ಯವಹಾರ ನಡೆಸಿರುವ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇಲ್ಲಿನ ಪ್ರಾಂಶುಪಾಲರಾದ ನಾಗರಾಜ ಜಿ.ಎಂ ಇವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಅಲ್ಪಸಂಖ್ಯಾತರ ವಸತಿ ಶಾಲೆಗಳಲ್ಲಿ ನಕಲಿ ಬಿಲ್ಲುಗಳ ಮೂಲಕ ಸರ್ಕಾರದ ಅನುದಾನವನ್ನು ವಂಚಿಸುತ್ತಿರುವ ವಿಷಯ ತಿಳಿದು ಪ್ರಾಂಶುಪಾಲರು, ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕೊಡಚಗೊಂಡನಹಳ್ಳಿ, ನ್ಯಾಮತಿ ತಾಲ್ಲೂಕು ಇವರು ನೀಡಿರುವ 37 ಬಿಲ್ಲುಗಳನ್ನು ಪರಿಶೀಲನೆ ಮಾಡಿದಾಗ, ಇವುಗಳಲ್ಲಿನ ಬಹುತೇಕ ಜಿ.ಎಸ್.ಟಿ ಬಿಲ್ಲುಗಳಲ್ಲಿ ದಿನಾಂಕವೇ ಇರುವುದಿಲ್ಲ.
ಇನ್ನೂ ಕೆಲವು ಬಿಲ್ಲುಗಳನ್ನು ಹೊರ ರಾಜ್ಯದಿಂದ ಪಡೆಯಲಾಗಿರುತ್ತದೆ. ಆದ್ದರಿಂದ ಮರು ಲೆಕ್ಕಪರಿಶೋಧನೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಲೋಕಾಯಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ4 days ago2.5 ಕೋಟಿ ಖರೀದಿಯಲ್ಲಿ ಅವ್ಯವಹಾರ ; ಆಯುಕ್ತೆ ಮಂಜುಶ್ರೀ ಸೇರಿ 6 ಅಧಿಕಾರಿಗಳ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoದಾವಣಗೆರೆ | ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಸಮಾರೋಪ ಸಮಾರಂಭ
-
ಅಂಕಣ3 days agoಪ್ರಜಾಪ್ರಭುತ್ವ: ಸಮಾನತೆ, ಸಾಮಾಜಿಕ ನ್ಯಾಯ ಮತ್ತು ನೈತಿಕ ಹೊಣೆಗಾರಿಕೆ
-
ದಿನದ ಸುದ್ದಿ13 hours agoನಕಲಿ ಬಿಲ್ಲುಗಳ ಮೂಲಕ ಲಕ್ಷಾಂತರ ರೂಪಾಯಿ ಅವ್ಯವಹಾರ | ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ ಪ್ರಾಂಶುಪಾಲ ನಾಗರಾಜ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoದಾವಣಗೆರೆ| ಅಪರಿಚಿತರು ನೀಡಿದ ಟೆಲಿಗ್ರಾಮ್ ಲಿಂಕ್ ಕ್ಲಿಕ್ ಮಾಡಿ 14 ಲಕ್ಷ ಕಳೆದುಕೊಂಡ ಉಪನ್ಯಾಸಕ
-
ದಿನದ ಸುದ್ದಿ2 days agoನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
-
ದಿನದ ಸುದ್ದಿ4 days agoಮಾನಸಿಕ ಆರೋಗ್ಯ ಅರಿವು ಅಗತ್ಯ : ಡಾ. ಪ್ರಭು ಎಂ. ಬಿಸ್ಲೇರಿ
-
ದಿನದ ಸುದ್ದಿ2 days agoಸಾವಿನಲ್ಲೂ ಒಂದಾದ ಪ್ರೇಮಿಗಳು: ಪ್ರೇಮಿಯ ಪಕ್ಕದಲ್ಲೇ ಪ್ರೇಯಸಿಯ ಅಂತ್ಯಸಂಸ್ಕಾರ!

