Connect with us

ದಿನದ ಸುದ್ದಿ

‘ನ್ಯೂಸ್ನೇಶನ್’ ಸಂದರ್ಶನ : ‘ಅಚ್ಛೇ ದಿನ್’ ಗೆ ತಕ್ಕ ಸಮಾರೋಪ..!

Published

on

ಮೇ 11 ರಂದು, ಈ ಬಾರಿಯ ಸಾರ್ವತ್ರಿಕ ಚುನಾವಣೆಗಳ 6ನೇ ಘಟ್ಟದಲ್ಲಿ ದೇಶದ ರಾಜಧಾನಿ ದಿಲ್ಲಿ ಮತ್ತು ಸುತ್ತಮುತ್ತಲಿನ ರಾಜ್ಯಗಳ ಮತದಾರರು ತಾವು ಮರುದಿನ ಯಾರಿಗೆ ಮತನೀಡಬೇಕು ಎಂದು ಯೋಚಿಸುತ್ತಿರುವ ಸಮಯದಲ್ಲಿ , ‘ನ್ಯೂಸ್ ನೇಶನ್’ ಎಂಬೊಂದು ಸುದ್ದಿ ವಾಹಿನಿ ಪ್ರಸಾರ ಮಾಡಿರುವ ಪ್ರಧಾನ ಮಂತ್ರಿಗಳ ಸಂದರ್ಶನ ಈಗ ಇಡೀ ದೇಶದ ಗಮನ ಸೆಳೆದಿದೆ-ಮುಖ್ಯವಾಗಿ ಬಾಲಾಕೋಟ್ ‘ವಾಯು ಪ್ರಹಾರ’ದ ಕೀರ್ತಿ ತನ್ನದಾಗಿಸಿಕೊಳ್ಳುವ ಭರದಲ್ಲಿ ಪ್ರಧಾನಿಗಳು ಪ್ರದರ್ಶಿಸಿದ ಮೋಡಗಳು ಮತ್ತು ರಾಡಾರ್ ಕುರಿತಂತೆ ‘ಪಂಡಿತರನ್ನು ಬೆರಗಾಗಿಸಿದ’ ತನ್ನ ‘ಕಚ್ಚಾ ಜಾಣ್ಮೆ’ಯಿಂದಾಗಿ.

ಆದರೆ ಈ ಸಂದರ್ಶನದ ಹೆಚ್ಚುಗಾರಿಕೆ ಅಷ್ಟೇ ಅಲ್ಲ, ಒಂದರ್ಥದಲ್ಲಿ, ಬಹಳ ಸಮಯದ ನಂತರ ಕೇಂದ್ರದಲ್ಲಿ, ಕೇವಲ 31% ಮತಗಳಿಂದಲೇ ಆದರೇನಂತೆ, ಸ್ಪಷ್ಟ ಬಹುಮತ ಪಡೆದ ಒಂದು ಪಕ್ಷದ ನೇತೃತ್ವದ ‘ಮಜಬೂತ್’ ಸರಕಾರದ ಐದು ವರ್ಷಗಳ ಆಳ್ವಿಕೆಯ ಒಂದು ಸಾರಾಂಶವನ್ನು ಈ ಸಂದರ್ಶನ ದೇಶದ ಮುಂದೆ ಇಟ್ಟಿದೆ ಎನ್ನಬಹುದು.

ರಾಡಾರ್ಗಳು ಮತ್ತು ಮೋಡಗಳು ಮಾತ್ರವೇ ಈ ‘ಐತಿಹಾಸಿಕ’ ಎನ್ನಬಹುದಾದ ಸಂದರ್ಶನದ ‘ಹೈಲೈಟ್’ ಅಲ್ಲ ಎಂಬುದು ಈಗ ಜನಜನಿತವಾಗಿದೆ. “ತಾವು ಹಣದ ಪರ್ಸ್ ಇಟ್ಟುಕೊಳ್ಳುತ್ತೀರಾ?” ಎಂಬ ಸಂದರ್ಶಕರುಗಳ ಅಮೋಘ ಪ್ರಶ್ನೆಯನ್ನು ಉತ್ತರಿಸುತ್ತ ಜೇಬಲ್ಲಿ ಹಣವೇ ಇಲ್ಲದಿರುವಾಗ ಪರ್ಸ್ ಏಕೆ ಎಂದರು. 2001ರಲ್ಲಿ ಗುಜರಾತಿನ ಮುಖ್ಯಮಂತ್ರಿಯಾಗಿ ಸರಕಾರವನ್ನು ಸೇರುವ ವರೆಗೆ, ಅಂದರೆ ಸುಮಾರು 50ವರ್ಷ ವಯಸ್ಸಿನ ವರೆಗೆ ಅವರಿಗೆ ಏನೇನೂ ಆದಾಯವಿರಲಿಲ್ಲವಂತೆ, ಸರಕಾರಕ್ಕೆ ಬಂದಾಗಲೇ ಅಧಿಕಾರಿಗಳು ಅವರ ಹೆಸರಲ್ಲಿ ಬ್ಯಾಂಕ್ ಖಾತೆ ತೆರೆದರಂತೆ. ಹಾಗಿದ್ದರೆ ಅದುವರೆಗೆ ಆರೆಸ್ಸೆಸ್ನ ಸಂಘಟನಾ ಕೆಲಸ ಮಾಡುತ್ತಿದ್ದ ಅವರಿಗೆ ಸಂಘಟನೆ ಏನೂ ಕೊಡುತ್ತಿರಲಿಲ್ಲವೇ ಎಂದು ಹಲವರು ಮೂಗಿನ ಮೇಲೆ ಬೆರಳಿಟ್ಟುಕೊಂಡಿದ್ದಾರೆ.

1988ರಲ್ಲೇ ಅವರು ಡಿಜಿಟಲ್ ಕ್ಯಾಮರಾ ಬಳಸಿದ್ದರು, ಟಚ್ ಸ್ಕರೀನ್ ಟ್ಯಾಬ್ಲೆಟ್ ಬಳಿಸಿದ್ದರು, ಇ ಮೇಲ್ ಕೂಡ ಬಳಸುತ್ತಿದ್ದರು ಎಂಬ ಸಂಗತಿಗಳ ಮೇಲೆ ಸಂದರ್ಶನದ ವೇಳೆಯಲ್ಲಿ ಅವರು ಬೆಳಕು ಚೆಲ್ಲಿದರು. ಆ ವೇಳೆಗೆ ಇವೆಲ್ಲ ಭಾರತದಲ್ಲಿ ಬಳಕೆಗೇ ಬಂದಿರಲಿಲ್ಲ ಎಂದು ಕೆಲವು ಪರಿಣಿತರು ಹೇಳುತ್ತಿದ್ದಾರೆ. 1988ರಲ್ಲಿ ಡಿಜಿಟಲ್ ಕ್ಯಾಮರಾದ ತಂತ್ರಜ್ಞಾನ ರೂಪುಗೊಂಡಿತ್ತಷ್ಟೇ, ಅದ್ದರಿಂದ ಅಂತಹ ಕ್ಯಾಮರಾಗಳು ಎಲ್ಲೋ ಕೆಲವು ಇದ್ದು ದುಬಾರಿಯಾಗಿದ್ದವು.10-15 ಲಕ್ಷ ರೂ.ಗಳಷ್ಟು. ಇ ಮೇಲ್ ಬಳಕೆಗೆ ಬಂದದ್ದು 1990ರ ದಶಕದ ನಂತರವೇ. ಚಿಕ್ಕಾಸೂ ಜೇಬಿನಲ್ಲಿರದ ಇವರು ಅದನ್ನೆಲ್ಲ ಹೇಗೆ ಪಡೆದಿರಬಹುದು ಎಂದು ಇನ್ನು ಕೆಲವರು ಬೆರಗಾಗಿದ್ದಾರೆ.

ಬಹುಶಃ ಇವೆಲ್ಲದಕ್ಕೂ ಉತ್ತರದ ಹೊಳಹು ಸಿಕ್ಕಿದ್ದು ಸಂದರ್ಶಕರು ‘ತಾವು ಕಳೆದ ಐದು ವರ್ಷಗಳಲ್ಲಿ ಏನಾದರೂ ಬರೆದಿದ್ದೀರಾ’, ಅಂದರೆ ಕವನ ಬರೆದಿದ್ದೀರಾ ಎಂದು ಕೇಳಿದಾಗ. ಹೌದು, ಇವತ್ತಷ್ಟೇ ಒಂದು ಕವನವನ್ನು ಬರೆದಿದ್ದೇನೆ ಎಂದರು ಮಾನ್ಯ ಪ್ರಧಾನಿಗಳು. ಹಿಂದಿನ ಬಿಜೆಪಿ ಪ್ರಧಾನಿಗಳಂತೆ ಇವರೂ ಕವನ ಬರೆಯುತ್ತಾರೆ ಎಂಬುದು ಬಹಳಷ್ಟು ಮಂದಿಗೆ ಆಶ್ಚರ್ಯವಾದ್ದು ಆಗಲೇ. ಮತ್ತು ಈ ಸಂದರ್ಶನದ ನಿಜ ಚಿತ್ರದ ಆ ಹೊಳಹು ಸಿಕ್ಕಿದ್ದು ಕೂಡ ಆಗಲೇ.

ಕವನ ಓದಿ ಎಂದು ಸಂದರ್ಶಕರು ಹೇಳಿದಾಗ ಪ್ರಧಾನಿಗಳು ಅಲ್ಲಿದ್ದ ಸೇವಕರಿಂದ ತನ್ನ ಫೈಲ್ ಕೇಳಿ ಪಡೆಯುತ್ತಾರೆ, ಒಂದು ಕಾಗದವನ್ನು ಎತ್ತಿಕೊಳ್ಳುತ್ತಾರೆ, ಅದನ್ನು ತೋರಿಸಿ ಎನ್ನುತ್ತಾರೆ ಸಂದರ್ಶಕರು, ಇಲ್ಲ ಅದು ಕೈಬರಹದಲ್ಲಿದೆ, ತನ್ನ ಕೈಬರಹ ಸೊಟ್ಟ-ಸೊಟ್ಟಗಾಗಿದೆ ಎನ್ನುತ್ತಾರೆ. ಈ ವೇಳೆಗೆ ಅವರು ನೋಡುತ್ತಿದ್ದ ಕಾಗದದ ದೃಶ್ಯ ಸಂದರ್ಶನ ನೋಡುತ್ತಿರುವವರಿಗೂ ಕಾಣುತ್ತದೆ. ಆದರೆ ಅಲ್ಲಿ ಕಾಣಿಸುವುದು ಕೈಬರಹದ ಕವನವಲ್ಲ, ಮುದ್ರಿತ ಕವನ, ಅಲ್ಲದೆ ಸಂದರ್ಶಕರು ಕೇಳಿದ ಪ್ರಶ್ನೆಯೂ ಅಲ್ಲಿ ಕಾಣುತ್ತದೆ. ಅದರ ಮುಂದೆ 27 ಎಂದಿದೆ. ಅಂದರೆ 27ನೇ ಪ್ರಶ್ನೆ.

ಈ ಐದು ವರ್ಷಗಳಲ್ಲಿ ಎಂದೂ ಪತ್ರಿಕಾ ಸಮ್ಮೇಳನ ನಡೆಸಿಯೇ ಇರದ ದಾಖಲೆ ನಿರ್ಮಿಸಿರುವ ಈ ಪ್ರಧಾನಿಗಳ ಸಂದರ್ಶನಗಳು ಅಲ್ಲೋ-ಇಲ್ಲೋ ನಡೆದಿವೆ. ಚುನಾವಣೆಗಳು ಹತ್ತಿರ ಬಂದ ಮೇಲೆ ತುಸು ಹೆಚ್ಚಾಗಿವೆ. ಆದರೆ ಇವೆಲ್ಲವೂ ಸಹಾನುಭೂತಿಪರ ಸಂದರ್ಶಕರು ನಡೆಸಿದ್ದು, ಅಂದರೆ ಪ್ರಧಾನ ಮಂತ್ರಿಗಳಿಗೆ ಇಷ್ಟವಾಗುವ ಪ್ರಶ್ನೆಗಳನ್ನು ಮಾತ್ರ ಕೇಳುವ ‘ಸಹೃದಯ’ ಪತ್ರಕರ್ತರದ್ದು. ಅವೆಲ್ಲವೂ ‘ಸ್ಕ್ರಿಪ್ಟೆಡ್’ ಸಂದರ್ಶನಗಳು ಎನ್ನಲಾಗುತ್ತಿತ್ತು. ಅಂದರೆ ಅವರು ಮೊದಲೇ ಪ್ರಶ್ನೆಗಳನ್ನು ಕಳಿಸುತ್ತಾರೆ, ಪ್ರಧಾನಿಗಳ ಕಚೇರಿ ಅವುಗಳಲ್ಲಿ ಉತ್ತರಿಸುವ ಪ್ರಶ್ನೆಗಳನ್ನು ಆಯ್ದು ಕಳಿಸುತ್ತದೆ, ಪತ್ರಕರ್ತರು ಅವನ್ನೇ ಕೇಳುತ್ತಾರೆ. ಆದರೆ ಇದು ಕೇವಲ ಊಹೆಯಾಗಿರುತ್ತಿತ್ತು, ಪ್ರಧಾನಿಗಳ ಬಗ್ಗೆ ಅಸೂಯೆ ಇರುವವರ ಅಪಪ್ರಚಾರ ಇರಬಹುದು ಎಂದೂ ಭಾವಿಸಲಾಗಿತ್ತು.

ಆದರೆ ಈ ಸಂದರ್ಶನ ಅದನ್ನು ದೃಢಪಡಿಸಿದೆ ಎಂದು ಬಹಳಷ್ಟು ರಾಜಕೀಯ ವೀಕ್ಷಕರು ಹೇಳುತ್ತಿದ್ದಾರೆ. ಅದೇನೇ ಇರಲಿ, ಬಾಲಾಕೋಟ್ ವಿಮಾನ ದಾಳಿಯ ಬಗ್ಗೆ ಹೇಳಿದ್ದು ಚುನಾವಣೆಯ ಸಂದರ್ಭದಲ್ಲಿ ಅರ್ಥವಾಗುತ್ತದೆ, ಆದರೆ ಉಳಿದವುಗಳು- ಪರ್ಸ್ ಇಲ್ಲದಿರುವುದು, ಡಿಜಿಟಲ್ ಕ್ಯಾಮರಾ, ಇ-ಮೇಲ್, ಟ್ಯಾಬ್ಲೆಟ್ ಮತ್ತು ಈ ಮುದ್ರಿತ ಕವನ, ಈ ಮೇಲ್ನೋಟಕ್ಕೆ ಸುಳ್ಳಿರಬಹುದು ಎಂದೇ ಸಂದೇಹ ಮೂಡಿಸುವ ವಿಚಾರಗಳು ಯಾಕೆ ಬೇಕಿತ್ತು ಎಂಬ ಪ್ರಶ್ನೆ ಹಲವರಲ್ಲಿ ಎದ್ದಿದೆ.

ಆದರೆ ಕಳೆದ ಐದು ವರ್ಷಗಳಲ್ಲಿ ಒಂದೊಂದಾಗಿ ಆಶ್ವಾಸನೆಗಳು ಜುಮ್ಲಾಗಳಾಗಿ ಬಿಟ್ಟದ್ದು, ಮತ್ತು ನಡುನಡುವೆ ಸಮಾರಂಭಗಳಲ್ಲಿ, ಪ್ರತಿಪಕ್ಷಗಳನ್ನು ಟೀಕಿಸುವ ಸಂದರ್ಭಗಳಲ್ಲಿ, ವಿಶೇಷವಾಗಿ ಚುನಾವಣೆಗಳ ಸಂದರ್ಭದಲ್ಲಿ, ಹೊಮ್ಮಿ ಬಂದು ಆಮೇಲೆ ಶುದ್ಧ ಸುಳ್ಳುಗಳು ಒಂದು ದೃಢಪಟ್ಟಿದ್ದು(ಉದಾ: ಯಾವ ಕಾಂಗ್ರೆಸ್ ಮುಖಂಡರೂ ಭಗತ್ ಸಿಂಗ್ರನ್ನು ಜೈಲಿನಲ್ಲಿ ಭೇಟಿಯಾಗಿರಲಿಲ್ಲ!) ನೆನಪಿರುವವರಿಗೆ ಇದರಿಂದ ಆಶ್ಚರ್ಯವಾಗಲಿಕ್ಕಿಲ್ಲ.

ಆದರೂ, ಬಾಲಾಕೋಟ್ ವಾಯುದಾಳಿಗೆ ಆದೇಶ ನೀಡಿದ ಪರಿಯ ಬಗ್ಗೆ ಅವರು ಹೇಳಿರುವುದು ನಿಜವೇನು, ನಿಜವಾಗಿದ್ದರೆ ಪರಿಣಿತರಾರೂ ಅದು ತಪ್ಪು ಎಂದು ಹೇಳುವ ಧೈರ್ಯ ತೋರಲಿಲ್ಲವೇ, ದೇಶದ ಭದ್ರತೆಯಂತಹ ಗಹನವಾದ ಪ್ರಶ್ನೆಗಳಲ್ಲಿ ಇಂತಹ ‘ಕಚ್ಚಾ ಜಾಣ್ಮೆ’ ಮತ್ತು ಪರಿಣಿತರ ಮೌನ ಅಪಾಯಕಾರಿಯಲ್ಲವೇ ಎಂದು ಹಲವರಿಗೆ ಆತಂಕ ಉಂಟಾಗಿದೆ. ನೋಟುರದ್ಧತಿಯ ಅನುಭವ ನಮ್ಮ ಮುಂದಿದೆ ಎನ್ನುತ್ತಾರೆ ಅವರು. ಈ ಬಾಲಾಕೋಟ್ ವಾಯುದಾಳಿಯನ್ನು ಮಳೆ ಸುರಿಯುತ್ತಿದ್ದಾಗ ಮಾಡಿದ್ದರಿಂದಲೇ ನಮ್ಮ ಯುದ್ಧವಿಮಾನಗಳು ಹೊತ್ತಿದ್ದ ಒಂದು ಕ್ಷಿಪಣಿ ಕೆಲಸ ಮಾಡದೆ ಈ ದಾಳಿಯ ನಿಜವಾದ ಫಲಿತಾಂಶ ನಮಗೆ ತಿಳಿಯದಂತೆ ಆಗಿರಬಹುದೇ ಎಂದೂ ಕೆಲವು ರಕ್ಷಣಾ ಪರಿಣಿತರು ಊಹಿಸುತ್ತಿದ್ದಾರೆ ಎಂಬುದನ್ನು ಇಲ್ಲಿ ಗಮನಿಸಬಹುದು.

( ಈ ವಾರದ ಜನಶಕ್ತಿ ವಾರ ಪತ್ರಿಕೆಯಲ್ಲಿ ಪ್ರಕಟವಾದ ಲೇಖನ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

Published

on

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪೈಪ್‌ಲೈನ್ ರಸ್ತೆಯಲ್ಲಿ ನಡೆದಿದೆ.

23 ವರ್ಷದ ಅಂಜಲಿ ಕೊಲೆಯಾದ ಯುವತಿಯಾಗಿದ್ದು, ರಾಜೀವ್ ಬಂಧಿತ ಆರೋಪಿ. ಕಳೆದ ಮೂರು-ನಾಲ್ಕು ವರ್ಷಗಳಿಂದ ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಈ ಹಿಂದೆ ಕೆಲಸ ಮಾಡುತ್ತಿದ್ದ ಸ್ಥಳದಲ್ಲೇ ಪರಿಚಯವಾಗಿ ಸ್ನೇಹ ಬೆಳೆದು, ಬಳಿಕ ಅದು ಪ್ರೀತಿಗೆ ತಿರುಗಿತ್ತು.

ಆದರೆ ರಾಜೀವ್‌ಗೆ ಕ್ರಿಮಿನಲ್ ಹಿನ್ನೆಲೆ ಇದ್ದ ಕಾರಣ ಅಂಜಲಿ ಕುಟುಂಬಸ್ಥರು ಈ ಮದುವೆಗೆ ವಿರೋಧ ವ್ಯಕ್ತಪಡಿಸಿದ್ದರು. ಹಲವು ಬಾರಿ ಕುಟುಂಬಸ್ಥರನ್ನು ಒಪ್ಪಿಸಲು ರಾಜೀವ್ ಪ್ರಯತ್ನಿಸಿದ್ದರೂ ಫಲಿಸಿರಲಿಲ್ಲ. ಇತ್ತೀಚೆಗೆ ಪೋಷಕರ ಒತ್ತಾಯಕ್ಕೆ ಮಣಿದ ಅಂಜಲಿ ರಾಜೀವ್‌ನಿಂದ ದೂರವಾಗಲು ಆರಂಭಿಸಿದ್ದಳು. ಇಂದು ಸಂಜೆ ಅಂಜಲಿಯನ್ನು ಊಟದ ನೆಪದಲ್ಲಿ ಕರೆಸಿಕೊಂಡಿದ್ದ ರಾಜೀವ್, ಮತ್ತೊಮ್ಮೆ ಮದುವೆ ವಿಚಾರ ಪ್ರಸ್ತಾಪಿಸಿದ್ದಾನೆ. ಈ ವೇಳೆ ಇಬ್ಬರ ನಡುವೆ ಮಾತಿನ ಚಕಮಕಿ ನಡೆದು, ಕೋಪಗೊಂಡ ರಾಜೀವ್ ಚಾಕುವಿನಿಂದ ಅಂಜಲಿಯ ಕುತ್ತಿಗೆಗೆ ಇರಿದಿದ್ದಾನೆ.

ರಕ್ತದ ಮಡುವಿನಲ್ಲಿ ಬಿದ್ದಿದ್ದ ಅಂಜಲಿಯನ್ನು ಸ್ಥಳೀಯರು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ, ಚಿಕಿತ್ಸೆ ಫಲಕಾರಿಯಾಗದೆ ಆಕೆ ಮೃ*ತಪಟ್ಟಿದ್ದಾಳೆ. ಘಟನೆ ಕುರಿತು ಮಾಹಿತಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪರಿಶೀಲನೆ ನಡೆಸಿ, ಕೆಲವೇ ನಿಮಿಷಗಳಲ್ಲಿ ಆರೋಪಿ ರಾಜೀವ್‌ನನ್ನು ಬಂಧಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಎಂ.ಎಸ್. ರಾಮಯ್ಯ ಆಸ್ಪತ್ರೆಗೆ ರವಾನಿಸಲಾಗಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ತನಿಖೆ ಮುಂದುವರಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

Published

on

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ.

ಈ ಸೋಲನ್ನು ಹಿಂದಕ್ಕೆ ಹಾಕಿ, ಪ್ರಿಯಾ ಸುದೀಪ್‍ ಇನ್ನಷ್ಟು ಹೊಸ ಕಥೆಗಳನ್ನು ತೆರೆಗೆ ತರುವುದಕ್ಕೆ, ಹೊಸ ಚಿತ್ರಗಳನ್ನು ನಿರ್ಮಿಸುವುದಕ್ಕೆ ಮುಂದಾಗಿದ್ದಾರೆ. ಕಥೆಗಾರರಿಗೆ ಆಹ್ವಾನ ನೀಡಿದ್ದಾರೆ. ‘ನಾವು ಹುಡುಕುತ್ತಿರುವುದು ಕೇವಲ ಕಥೆಗಳಲ್ಲ. ಮನಸ್ಸುಗಳನ್ನು ಮುಟ್ಟುವ ಭಾವನೆಗಳು, ಚಿಂತನೆಗೆ ಹಚ್ಚುವ ವಿಚಾರಗಳು ಮತ್ತು ಪರದೆಯ ಮೇಲೆ ಹೊಸ ಇತಿಹಾಸ ಬರೆಯುವ ಕಲ್ಪನೆಗಳು.

ನಿಮ್ಮ ಬಳಿ ಮೌಲಿಕ ಕಥೆ-ಚಿತ್ರಕಥೆ ಇದ್ದರೆ ಅಥವಾ ವಿಶಿಷ್ಟ ಕಥಾ ಪರಿಕಲ್ಪನೆ ಇದ್ದರೆ, ಅದನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ತಮ್ಮದೇ ಆದ ವಿಶಿಷ್ಟ ದೃಷ್ಟಿಕೋನ ಮತ್ತು ಸೃಜನಾತ್ಮಕತೆಯನ್ನು ಹೊಂದಿರುವ ಲೇಖಕರು, ಕಥೆಗಾರರು ಮತ್ತು ಸೃಜನಶೀಲ ಮನಸ್ಸುಗಳನ್ನು ನಾವು ಸ್ವಾಗತಿಸುತ್ತೇವೆ. ಎಲ್ಲಾ ಪ್ರಕಾರಗಳು ಮತ್ತು ಎಲ್ಲಾ ಮಾದರಿಗಳಲ್ಲಿನ ಕಥಾ ಸಲ್ಲಿಕೆಗಳನ್ನು ನಾವು ಸ್ವಾಗತಿಸುತ್ತೇವೆ. ನಿಮ್ಮ ಕಥೆಯೇ ಮುಂದಿನ ದೊಡ್ಡ ಪ್ರಯಾಣದ ಆರಂಭವಾಗಬಹುದು’ ಎಂದು ಪ್ರಿಯಾ ಸುದೀಪ್‍, ಸೋಷಿಯಲ್‍ ಮೀಡಿಯಾದಲ್ಲಿ ಬರೆದುಕೊಂಡಿದ್ದಾರೆ.

ಜೊತೆಗೆ ಒಂದು ಮೊಬೈಲ್‍ ಸಂಖ್ಯೆಯನ್ನು ಸಹ ಹಂಚಿಕೊಂಡಿದ್ದಾರೆ. ಆದರೆ, ಕರೆ ಮಾಡುವಂತಿಲ್ಲ. ಚಾಟ್‍ ಮಾತ್ರ ಮಾಡಬಹುದು. ಕಥೆಗಳಿದ್ದರೆ 6663307434 ಸಂಖ್ಯೆಯನ್ನು ಸಂಪರ್ಕಿಸಬಹುದು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

Published

on

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ.

ಮೃತರನ್ನು ದೇವದುರ್ಗ ತಾಲೂಕಿನ ಸಮುದ್ರ ಗ್ರಾಮದ ರವಿಚಂದ್ರ (35), ಕ್ಯಾದಿಗೆರಾ ಗ್ರಾಮದ ನಾಗರಾಜ್ (30) ಹಾಗೂ ಕೊತ್ತಿಗುಡ್ಡದ ಅರ್ಜುನ್ (21) ಎಂದು ಗುರುತಿಸಲಾಗಿದೆ.

ಕಟ್ಟಡದ ಅವಶೇಷಗಳಡಿ ಸಿಲುಕಿ ರವಿಚಂದ್ರ ಹಾಗೂ ನಾಗರಾಜ ಸ್ಥಳದಲ್ಲೇ ಮೃತಪಟ್ಟಿದ್ದರು. ಗಂಭೀರವಾಗಿ ಗಾಯಗೊಂಡಿದ್ದ ಅರ್ಜುನ್‌ ಅವರನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಅವರೂ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದರು ಎಂದು ಪೊಲೀಸರು ತಿಳಿಸಿದ್ದಾರೆ.

ಮಾಹಿತಿಯ ಪ್ರಕಾರ, ಯುವಕರು ತಾವೇ ನಿರ್ಮಿಸಿದ್ದ ‘ಅಂತ್ಯವಾಯ್ತು’ ಎಂಬ ಕಿರುಚಿತ್ರದ ಪೋಸ್ಟರ್ ಅಂಟಿಸಲು ಕಟ್ಟಡದ ಬಳಿ ತೆರಳಿದ್ದ ವೇಳೆ ಈ ದುರಂತ ಸಂಭವಿಸಿದೆ.

ಕಟ್ಟಡದ ಮೇಲ್ಛಾವಣಿಯ ಒಂದು ಭಾಗವು, ಅದಕ್ಕೆ ಜೋಡಣೆಯಾಗಿದ್ದ ಕಬ್ಬಿಣದ ಮೆಟ್ಟಿಲುಗಳ ಸಹಿತ ಕುಸಿದು ಬಿದ್ದಿದೆ. ಘಟನೆಯಲ್ಲಿ ಉಮೇಶ್, ಪ್ರಭು ಹಾಗೂ ಅಭಿಷೇಕ್ ಎಂಬವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಘಟನಾ ಸ್ಥಳಕ್ಕೆ ದೇವದುರ್ಗ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯ ನಂತರ ನಿಖರ ಕಾರಣ ತಿಳಿಯಲಿದೆ. ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ದೇವದುರ್ಗ ಶಾಸಕಿ ಕರೆಮ್ಮ ನಾಯಕ ಭೇಟಿ ನೀಡಿ, ಸಂಬಂಧಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ16 hours ago

ಭೀಕರ | ಪ್ರಿಯಕರನಿಂದ ಪ್ರೇಯಸಿಯ ಬರ್ಬರ ಹತ್ಯೆ

ಸುದ್ದಿದಿನ ಡೆಸ್ಕ್:ಬೆಂಗಳೂರಿನಲ್ಲಿ ಪ್ರೀತಿಯೊಂದು ರಕ್ತಸಿಕ್ತ ಅಂತ್ಯ ಕಂಡಿದೆ. ಮದುವೆಗೆ ನಿರಾಕರಿಸಿದ ಪ್ರೇಯಸಿಯನ್ನು ಪ್ರಿಯಕರನೇ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಮಹಾಲಕ್ಷ್ಮಿ ಲೇಔಟ್ ಪೊಲೀಸ್ ಠಾಣೆ...

ದಿನದ ಸುದ್ದಿ19 hours ago

ನಿಮ್ಮ ಕಥೆಗೆ ಹೊಸ ವೇದಿಕೆ ; ಕಥೆಗಾರರಿಗೆ ಪ್ರಿಯಾ ಸುದೀಪ್‍ ಆಹ್ವಾನ

ಸುದ್ದಿದಿನ ಡೆಸ್ಕ್:ಸುಪ್ರಿಯಾನ್ವಿ ಪ್ರೊಡಕ್ಷನ್ಸ್ ಸಂಸ್ಥೆಯಡಿ ಪ್ರಿಯಾ ಸುದೀಪ್‍ ನಿರ್ಮಿಸಿದ ಮೊದಲ ಚಿತ್ರ ‘ಮ್ಯಾಂಗೋ ಪಚ್ಚ’. ಸಂಚಿತ್‍ ಸಂಜೀವ್‍ ಅಭಿನಯದ ಈ ಚಿತ್ರ ಹೆಚ್ಚು ಸದ್ದು ಮಾಡಲಿಲ್ಲ. ಈ...

ದಿನದ ಸುದ್ದಿ1 day ago

ದುರಂತ | ಮೇಲ್ಛಾವಣಿ ಕುಸಿದು ಮೂವರು ಸಾವು

ಸುದ್ದಿದಿನ,ರಾಯಚೂರು: ಕಟ್ಟಡದ ಮೇಲ್ಛಾವಣಿಯ ಸಜ್ಜಾ ಏಕಾಏಕಿ ಕುಸಿದು ಬಿದ್ದು ಮೂವರು ಯುವಕರು ಮೃತಪಟ್ಟ ದುರ್ಘಟನೆ ಭಾನುವಾರ ಜಿಲ್ಲೆಯ ದೇವದುರ್ಗ ಪಟ್ಟಣದ ಹೊಸ ಬಸ್ ನಿಲ್ದಾಣದ ಸಮೀಪ ಸಂಭವಿಸಿದೆ....

ದಿನದ ಸುದ್ದಿ1 day ago

ಪಲ್ಸ್ ಪೋಲಿಯೋದಿಂದ ಯಾವುದೇ ಮಗು ವಂಚಿತವಾಗದಂತೆ ಕ್ರಮವಹಿಸಿ: ಜಿ.ಪಂ. ಸಿಇಒ ಗಿತ್ತೆ ಮಾಧವ ವಿಠ್ಠಲರಾವ್

ಜಿಲ್ಲೆಯಲ್ಲಿ 1.37 ಲಕ್ಷ ಮಕ್ಕಳಿಗೆ ಲಸಿಕೆ ಹಾಕುವ ಗುರಿ: ಡಿಎಚ್ಒ ಡಾ. ಷಣ್ಮುಖಪ್ಪ ಸುದ್ದಿದಿನ,ದಾವಣಗೆರೆ: ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಪಲ್ಸ್ ಪೋಲಿಯೋ ವಿಶೇಷ ಅಭಿಯಾನದಲ್ಲಿ ಯಾವುದೇ ಒಂದು ಮಗುವೂ...

ದಿನದ ಸುದ್ದಿ1 week ago

ದಾವಣಗೆರೆ | ನಾಳೆ ವಿವಿಧೆಡೆ ವಿದ್ಯುತ್ ವ್ಯತ್ಯಯ

ಸುದ್ದಿದಿನ,ದಾವಣಗೆರೆ : 66/11 ಕೆ.ವಿ. ವಿದ್ಯುತ್ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿಗಳ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಜೂನ್ 23 ರಂದು ಬೆಳಿಗ್ಗೆ 10 ರಿಂದ...

ದಿನದ ಸುದ್ದಿ1 week ago

ವಿದ್ಯಾರ್ಥಿಗಳು ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು: ಹೆಚ್ ಎನ್ ಶಿವಕುಮಾರ್

ಸುದ್ದಿದಿನ,ರಾಣೇಬೆನ್ನೂರ: ಸಾಮಾಜಿಕ ಹಾಗೂ ಶೈಕ್ಷಣಿಕ ಜವಾಬ್ದಾರಿಗಳ ಅಗತ್ಯವು ವಿದ್ಯಾರ್ಥಿಗಳಿಗೆ ಅವಶ್ಯಕವಾಗಿದೆ. ವಿದ್ಯಾರ್ಥಿಗಳು ತಮಗೆ ದೊರೆತ ಅವಕಾಶಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು.ಸದಾಕಾಲ ಜ್ಞಾನವನ್ನು ಪಡೆಯುವ ತನಕ ಹೊಂದಿ ಜ್ಞಾನಿಗಳಾಗುವ ಗುರಿ...

ದಿನದ ಸುದ್ದಿ1 week ago

ಪಿಂಚಣಿ ದಾರರು ಸಕಾಲದಲ್ಲಿ ಜೀವಂತ ಪ್ರಮಾಣ ಪತ್ರ ಸಲ್ಲಿಸಿ

ಸುದ್ದಿದಿನ,ದಾವಣಗೆರೆ: ಪಿಂಚಣಿ ಪಡೆಯಲು ಜೀವಂತ ಸದಸ್ಯರ ಪ್ರಮಾಣ ಪತ್ರಗಳು ಕಡ್ಡಾಯವಾಗಿರುವುದರಿಂದ ಸಕಾಲಕ್ಕೆ ಸೂಕ್ತ ದಾಖಲಾತಿಗಳನ್ನು ನೀಡುವ ಮೂಲಕ ಸಹಕರಿಸಿ ಎಂದು ಉಪ ಮಹಾಲೇಖಪಾಲರಾದ ಸಚ್ಚಿನ್ ಕೃಷ್ಣ ಕೌಶಿಕ್...

ದಿನದ ಸುದ್ದಿ2 weeks ago

ಗವಿಸಿದ್ಧ ಎನ್. ಬಳ್ಳಾರಿ ಕಾವ್ಯ ಪ್ರಶಸ್ತಿಗೆ ದಾವಣಗೆರೆಯ ಪಾಪು ಗುರು ಆಯ್ಕೆ

ಸುದ್ದಿದಿನ,ದಾವಣಗೆರೆ: ಕವಿ ಗವಿಸಿದ್ಧ ಎನ್. ಬಳ್ಳಾರಿ ವೇದಿಕೆ ಹಾಗೂ ಗವಿಸಿದ್ಧ ಎನ್. ಬಳ್ಳಾರಿ ಸಾಂಸ್ಕೃತಿಕ, ಕಲಾ, ಶಿಕ್ಷಣ ಮತ್ತು ಗ್ರಾಮೀಣಾಭಿವೃದ್ಧಿ ಸೇವಾ ಸಂಸ್ಥೆ, ಕೊಪ್ಪಳ ವತಿಯಿಂದ ನೀಡಲಾಗುವ...

ದಿನದ ಸುದ್ದಿ2 weeks ago

ಆಯುರ್ವೇದ ಆರೋಗ್ಯಕರ ಜೀವನ ಶೈಲಿ

ಸುದ್ದಿದಿನ,ದಾವಣಗೆರೆ:ಭಾರತದ ವೈದ್ಯಕೀಯ ಪರಂಪರೆಯು ಅತ್ಯಂತ ಪ್ರಾಚೀನ ಹಾಗೂ ಸಮೃದ್ಧವಾದುದಾಗಿದೆ. ಆಯುರ್ವೇದವು ಕೇವಲ ರೋಗಗಳಿಗೆ ಚಿಕಿತ್ಸೆ ನೀಡುವ ವಿಜ್ಞಾನವಲ್ಲ, ಅದೊಂದು ಆರೋಗ್ಯಕರ ಜೀವನ ಶೈಲಿಯಾಗಿದೆ ಎಂದು ಘನವೆತ್ತ ರಾಜ್ಯಪಾಲರಾದ...

ದಿನದ ಸುದ್ದಿ2 weeks ago

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ. ಆಸಕ್ತ...

Trending