ರಾಜಕೀಯ
ಸಮಾಜಶಕ್ತಿಗೆ ಭ್ರಮನಿರಸನ
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2019/03/Politics-suddidina-76.jpg&description=ಸಮಾಜಶಕ್ತಿಗೆ ಭ್ರಮನಿರಸನ', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2019/03/Politics-suddidina-76.jpg&description=ಸಮಾಜಶಕ್ತಿಗೆ ಭ್ರಮನಿರಸನ', 'pinterestShare', 'width=750,height=350'); return false;" title="Pin This Post">
ತುರ್ತು ಪರಿಸ್ಥಿತಿಯ ನಂತರದ ಚುನಾವಣೆಯಷ್ಟೇ ಮಹತ್ವದ ಚುನಾವಣೆ ಇದು ಕೆಲವರು ವಿಶ್ಲೇಷಿಸಿದ್ದರು. 2014 ರಿಂದ ಇಂದಿನವರೆಗೂ ದೇಶದಲ್ಲಿ ನಡೆದ ವಿದ್ಯಮಾನಗಳು ಮತ್ತು ಅವು ಎತ್ತಿದ ಪ್ರಶ್ನೆಗಳನ್ನು ತಿರುವಿ ಹಾಕಿದಾಗ ಅದು ನಿಜ ಎಂದೇ ಅನಿಸಿತ್ತು. ಹಾಗಿದ್ದ ಮೇಲೆ ಎಲ್ಲ ಪಕ್ಷಗಳೂ ಆ ಮಟ್ಟದ ಒಗ್ಗಟ್ಟಿನ ಹೋರಾಟಕ್ಕೆ ತಯಾರಾಗಿರಬೇಕಿತ್ತು.
ದೇಶದ ಬಿಜೆಪಿಯೇತರ ಎಲ್ಲ ನಾಯಕರುಗಳ ಹುಮ್ಮಸ್ಸು ಮೇಳೈಸಿ ದೇಶದ ಸಂಘಟಿತ ಪರ್ಯಾಯ ಶಕ್ತಿಗೆ ನಾಂದಿ ಆಯಿತು ಎನ್ನುವಂತೆ ಕುಮಾರಸ್ವಾಮಿಯವರ ಅಧಿಕಾರ ಸ್ವೀಕಾರ ವೇದಿಕೆಯಲ್ಲಿ ಸಂಭ್ರಮಿಸಲಾಯಿತು. ಆದರೆ ಆನಂತರ ಆದದ್ದು ನಾಯಿ ಬಾಲದ ಕಥೆಯೇ. ಬಿಜೆಪಿಯ ಬೆಂಬಲಿಗರು ಈಗ ಮೂರು ವರ್ಷಗಳಿಂದ ಒಂದು ಪ್ರಶ್ನೆಯನ್ನು ಕೇಳುತ್ತಲೇ ಇದ್ದರು: ‘ಮೋದಿಗೆ ಪರ್ಯಾಯ ಯಾರು? ಯಾರೂ ಇಲ್ಲವಲ್ಲಾ!’ ಎಂದು.
ಅದನ್ನು ಇಂದು ಸ್ಪಷ್ಟ ಗುರಿಯೇ ಇಲ್ಲದ, ಇದ್ದರೂ ಅದಕ್ಕೊಂದು ಅಜೆಂಡಾನೇ ಇಲ್ಲದ ಜಢತ್ವಕ್ಕೆ ಶರಣಗಿದ್ದ ಈ ಪಕ್ಷಗಳು ಒಪ್ಪಿಕೊಂಡಾಯಿತು. ಅದರ ನೈತಿಕ ಹೊಣೆಯನ್ನು ಈ ಪಕ್ಷಗಳು ಹೊರುವುದಿರಲಿ, ಅವು ದೇಶವನ್ನು ಎತ್ತ ತಳ್ಳಿದವು ಎನ್ನುವುದು ಅಕ್ಷಮ್ಯ. ಹಾಗೊಮ್ಮೆ ಬಿಜೆಪಿಯೇತರ ಸರ್ಕಾರ ರಚನೆಗೆ ಅವಕಾಶವಾಗುವಂತೆ ಫಲಿತಾಂಶ ಬಂದಿದ್ದರೂ ಅಂತಹ ಸರ್ಕಾರವನ್ನು ಈ ಪಕ್ಷಗಳು ಎಷ್ಟರ ಮಟ್ಟಿಗೆ ಸಧೃಢವಾಗಿ ನಡೆಸುತ್ತಿದ್ದವು ಎನ್ನುವ ಪ್ರಶ್ನೆ ದೊಡ್ಡದಾಗಿಯೇ ಇರುತ್ತಿತ್ತು. ಅದು ಇನ್ನೂ ಭಯಾನಕ. ಸಂಘ ಪರಿವಾರದ ಗುರಿ ಮಾತ್ರ ಸ್ವಾತಂತ್ರಪೂರ್ವದಿಂದಲೂ ಸ್ಪಷ್ಠವಾಗಿಯೇ ಇದೆ. ಹಂತಹಂತವಾಗಿ ಆ ಕಡೆಗೆ ಅದು ಸಾಗುತ್ತಲೇ ಇದೆ. ಇದು ಈ ದೇಶ-ಕಾಲದ ನಿಜ ಸ್ಥಿತಿ.
ಕರ್ನಾಟಕದಲ್ಲಿ ಮೈತ್ರಿ ಸರ್ಕಾರದ ಕಪಾಳಕ್ಕೆ ಹೊಡೆದಂತಾ ಈ ಫಲಿತಾಂಶಕ್ಕೆ ಇಲ್ಲಿ ನಡೆದ ಅಪ್ರಬುದ್ಧ ಅಥವಾ ಸ್ವಾರ್ಥ ತುಂಬಿದ ನಡೆಗಳೇ ಕಾರಣ. ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ರಚನೆ ಮಾಡಿಕೊಂಡಿದ್ದೇ ಈ ಲೋಕಸಭಾ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡು. ಯಾವುದೇ ಕಾರಣಕ್ಕೂ ಕೇಂದ್ರದಲ್ಲಿ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬಾರದು, ಬಿಜೆಪಿಯ ಅತ್ಯಂತ ಕಡಿಮೆ ಲೋಕಸಭಾ ಸದಸ್ಯರನ್ನು ಕರ್ನಾಟಕದಿಂದ ದೆಹಲಿಗೆ ಕಳಿಸುವಂತಾಗಬೇಕು ಎನ್ನುವ ದೃಷ್ಟಿ.
ಅದಕ್ಕಾಗಿ ಕಾಂಗ್ರೆಸ್ ಮುಖ್ಯಮಂತ್ರಿ ಸ್ಥಾನವನ್ನೂ ಜೆಡಿಎಸ್ಸಿಗೆ ಕೊಟ್ಟುಬಿಟ್ಟಿತ್ತು. ರಾಷ್ಟ್ರಮಟ್ಟದಲ್ಲಿ ಬಿಜೆಪಿಯೇತರ ಪಕ್ಷಗಳು ಒಂದೇ ವೇದಿಕೆಯಲ್ಲಿ ಹೇಗೆ ಬರಲು ಸಾಧ್ಯವಾಗಲಿಲ್ಲವೋ ಹಾಗೆಯೇ ಕರ್ನಾಟಕದಲ್ಲೂ ಕೂಡ ಸೀಟು ಹಂಚಿಕೆ ವಿಚಾರದಲ್ಲಿ ಮಿತ್ರಪಕ್ಷಗಳು ಒಮ್ಮತಕ್ಕೆ ಬರಲು ಸಾಧ್ಯವೇ ಆಗಲಿಲ್ಲ. ಈ ರಾಜಕೀಯ ಆಟಗಳಿಂದ ಪ್ರಜಾಪ್ರಭುತ್ವಕ್ಕಾದ ಧಕ್ಕೆ ಅಷ್ಟಿಷ್ಟಲ್ಲ.
ದೇವೇಗೌಡರ ಎದೆಯಲ್ಲಿ ಬಿಜೆಪಿಯೇತರ ಸರ್ಕಾರದ ಉದ್ದೇಶ ಇದ್ದರೂ ಅವರು ತಮ್ಮ ಕುಟುಂಬಕ್ಕೆ ತಮ್ಮನ್ನು ಕಟ್ಟಿಹಾಕಿಕೊಳ್ಳುತ್ತಾರೆ. ಆ ಕುಟುಂಬದ ಮೂರನೇ ತಲೆಮಾರಿನ ನಿನ್ನೆಯ ಹುಡುಗರು ಇಂದು ಸ್ವಂತ ಕಾಲ ಮೇಲೆ ನಿಲ್ಲಬೇಕಾದ ಅನಿವಾರ್ಯಕ್ಕೆ ಸಿಕ್ಕಿರುವ ಯುವಕರಾಗಿಬಿಟ್ಟಿದ್ದಾರೆ. ಆ ಒಬ್ಬೊಬ್ಬರಿಗೂ ಒಂದೊಂದು ನೆಲೆ ದೊರಕಿಸುವುದು ಆ ಕುಟುಂಬದ ಜವಾಬ್ದಾರಿ. ಆ ಕುಟುಂಬಕ್ಕೆ ಗೊತ್ತಿರುವುದು, ಆಸರೆಯಾಗಿರುವುದು ರಾಜಕೀಯವೇ. ಹಾಗಾಗಿ ತನ್ನ ಹಾಸನ ಕ್ಷೇತ್ರವನ್ನೇ ಒಬ್ಬ ಮೊಮ್ಮಗನಿಗೆ ದಾನ ಮಾಡಿದ ದೇವೇಗೌಡರು ತುಮಕೂರಿಗೆ ನಡೆದರು. ಅಥವಾ ಮೊಮ್ಮಗನೇ ಕಿತ್ತುಕೊಂಡು ಕಳಿಸಿದ್ದ!
ಮತ್ತೊಬ್ಬ ಮೊಮ್ಮಗನಿಗೆ ತಾವು ಕೆಲವು ವರ್ಷಗಳಿಂದ ಅನುಕೂಲಕರ ವಾತಾವರಣ ನಿರ್ಮಿಸಿಕೊಂಡ ಹಾಗೂ ಸಧ್ಯಕ್ಕೆ ಪ್ರಬಲ ಸ್ಪರ್ಧೆಯೊಡ್ಡಬಹುದಾದ ಯಾವ ಆಕಾಂಕ್ಷಿ ಇಲ್ಲವೆಂದೇ ತಿಳಿದಿದ್ದ ಮಂಡ್ಯ ಕ್ಷೇತ್ರವನ್ನು ಆಯ್ದುಕೊಂಡರು. ಯಾವ ಮೂಲ ಉದ್ದೇಶಕ್ಕಾಗಿ ಮೈತ್ರಿ ರಾಜಕೀಯಕ್ಕೆ ಅವಕಾಶ ಮಾಡಿಕೊಂಡಿದ್ದರೋ ಆ ಉದ್ದೇಶವನ್ನು ಪಕ್ಕಕ್ಕೆ ಸರಿಸಲಾಯಿತು. ಅಥವಾ, ನಿಜಕ್ಕೂ ಮೂಲ ಉದ್ದೇಶ ಇದು ಅಲ್ಲವೇ ಅಲ್ಲ, ಅದು ಚುನಾವಣೆಯಿಂದ ಚುನಾವಣೆಗೆ ಜಹಗೀರು ವಿಸ್ತರಣೆಯೇ. ಮುಂದೊಂದು ದಿನ ಭಾರತದಲ್ಲಿ ಪ್ರಜಾಪ್ರಭುತ್ವ ಕಳಚಿಹೋಗಿ ಮತ್ತೆ ರಾಜಾಡಳಿತ ಬರುತ್ತದೇನೋ, ಹಾಗಾಗುವುದಾದರೆ ತಮ್ಮ ಕುಟುಂಬವೇ ಅರಸಾಗಲಿ ಎನ್ನುವ ಮುಂಗಾಣ್ಕೆಯೋ ಎನ್ನುವ ಹಾಗೆ! ಪರಿಣಾಮ ಎದುರಿಗೇ ಇದೆ.
ದೇವೇಗೌಡರ ಉದ್ದೇಶ ನಿಜಕ್ಕೂ ಜಾತ್ಯತೀತ ಮನಸ್ಸಿನ, ಸಂವಿಧಾನಬದ್ಧ ಪರ್ಯಾಯ ಶಕ್ತಿಯನ್ನು ಹುಟ್ಟಿಹಾಕುವುದೇ ಆಗಿದ್ದಿದ್ದರೆ, ಅವರು ಈಗ ನಡೆದುಕೊಂಡಂತೆ ನಡೆದುಕೊಳ್ಳುತ್ತಿರಲಿಲ್ಲ. ಅವರು ತಮ್ಮ ಮೊಮ್ಮಕ್ಕಳನ್ನು ಮುಂದೆ ತರುವ ಕೆಲಸವನ್ನು ಮುಂದಕ್ಕೆ ಹಾಕುತ್ತಿದ್ದರು. ಅದರಿಂದ ಅವರ ಕುಟುಂಬಕ್ಕೆ ತುಂಬಾ ದೊಡ್ಡ ನಷ್ಟವೇನೂ ಆಗುತ್ತಿರಲಿಲ್ಲ. ಬದಲಿಗೆ ದಕ್ಷ ಅಭ್ಯರ್ಥಿಗಳನ್ನು ಹುಡುಕಿ ಅವಕಾಶ ಕೊಟ್ಟಿದ್ದರೆ ತಮ್ಮ ಪಕ್ಷದ ವರ್ಚಸ್ಸು ಇನ್ನಷ್ಟು ಬೆಳೆಯುತ್ತಿತ್ತು.
ಮೂರೂ ಕ್ಷೇತ್ರಗಳಲ್ಲಿ ಮೈತ್ರಿಯ ಅಭ್ಯರ್ಥಿಗಳೇ ಗೆಲ್ಲುತ್ತಿದ್ದರೇನೋ! ಇದನ್ನು ಬರೆಯುತ್ತಿರುವಾಗ ನನ್ನ ಬಗ್ಗೆ ನನಗೇ ನಗು ಬರುತ್ತದೆ. ಯಾವ ಆದರ್ಶವನ್ನು ಯಾರಿಂದ ನಿರೀಕ್ಷಿಸುತ್ತಿದ್ದೇವೆ ಎಂದು! ಬಿಜೆಪಿಯ ಸುಳಿವೇ ಇರದ ಮಂಡ್ಯವನ್ನು ಆ ಪಕ್ಷಕ್ಕೆ ಧಾರೆಯೆರೆದು ಕೊಟ್ಟಾಯಿತು. ಈ ರೀತಿಯ ಅಪ್ರಬುದ್ಧ, ಸ್ವಾರ್ಥ ರಾಜಕಾರಣದ ಚಾರಿತ್ರಿಕ ಪ್ರಮಾದಗಳೇ ಕರ್ನಾಟಕದಲ್ಲಿ ಬಿಜೆಪಿ ತಳವೂರಲು ಕಾರಣವಾಯ್ತು.
ಇನ್ನು ಕಾಂಗ್ರೆಸ್ಸಿಗೆ ಮತ್ತೆ ಬಿಜೆಪಿಗೆ ಅಧಿಕಾರ ಕೊಡಬಾರದು ಎನ್ನುವ ಛಲ ಮಾತಿನಲ್ಲಿ ಮಾತ್ರ ಕಂಡಿತು. ಕೃತಿಯಲ್ಲಿ ನಿರ್ಧಿಷ್ಠ ಗುರಿಯೇ ಇರಲಿಲ್ಲ ಎಂಬಂತೆ ತೋರಿತು. ಇಡೀ ದೇಶದಲ್ಲಿದ್ದ ಕಾಂಗ್ರೆಸ್ಸಿನ ಬಲಹೀನ ಸ್ಥಿತಿ ಕರ್ನಾಟಕ ಕಾಂಗ್ರೆಸ್ಸಿನ ಮೇಲೆ ಅಡ್ಡ ಪರಿಣಾಮ ಬೀರಿಯೇ ಇದ್ದಿತು. ಹೇಗಾದರೂ ಮಾಡಿ ಹಿಂದಿನ ಬಾರಿ ಗೆದ್ದ ಕ್ಷೇತ್ರಗಳನ್ನು ಉಳಿಸಿಕೊಂಡು ಲೋಕಸಭಾ ಚುನಾವಣೆಯೆಂಬ ದೈಯ್ಯವನ್ನು ಸಾಗಹಾಕುವ ಒಳಮನಸ್ಸೇ ಇಲ್ಲಿನ ಕಾಂಗ್ರೆಸ್ ನಾಯಕರಲ್ಲಿ ಕಂಡಿತು.ಈ ಮೈತ್ರಿ ಪಕ್ಷಗಳು ಮಾಡಿಕೊಂಡ ಗೊಂದಲ, ಅರಾಜಕತೆ ಮತ್ತು ಸ್ವಾರ್ಥಚಿಂತನೆಗಳಿಂದ ದೊಡ್ಡ ಲಾಭವಾಗಿದ್ದು, ಆಗುತ್ತಿರುವುದು ಬಿಜೆಪಿಗೆ. ದೊಡ್ಡ ನೈತಿಕ ನಷ್ಟವಾಗಿದ್ದು, ಆಗುವುದು ಈ ಮೈತ್ರಿ ಪಕ್ಷಗಳಿಗೆ.
ಎಲ್ಲಕ್ಕಿಂತ ಹೆಚ್ಚಾಗಿ ಈ ಮೈತ್ರಿ ಪಕ್ಷಗಳಿಂದ ದೊಡ್ಡ ಭ್ರಮನಿರಸನವಾಗಿದ್ದು ಕರ್ನಾಟಕದ ಪ್ರಗತಿಪರ ಯುವಶಕ್ತಿಗೆ ಮತ್ತು ಸಮಾಜಶಕ್ತಿಗೆ. ಕೋಮುವಾದೀ, ವಿಭಜಕ ಶಕ್ತಿಗಳು ಕರ್ನಾಟಕದಲ್ಲಿ ಬೆಳೆಯುವುದನ್ನು, ನೆಲೆಕಾಣುವುದನ್ನು ತಡೆಯಲು ಎಲ್ಲ ಪ್ರಜಾಪ್ರಭುತ್ವವಾದೀ ದಾರಿಗಳನ್ನೂ ಬಳಸಿಕೊಂಡು ಸ್ವಯಂಪ್ರೇರಿತವಾಗಿ ಸತತ ಹೋರಾಡುತ್ತಿವೆ ಈ ಶಕ್ತಿಗಳು. ಬಹುಶಃ ಈ ಮಟ್ಟಕ್ಕೆ ಟೊಂಕ ಕಟ್ಟಿ ಜನಪರವಾಗಿ, ಸಂವಿಧಾನದ ಪರವಾಗಿ ನಿಂತು ಪ್ರತಿರೋಧ ಒಡ್ಡುತ್ತಿರುವ ಕೆಲವೇ ರಾಜ್ಯಗಳಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ.
ಆ ಕಾರಣದಿಂದಲೇ ಇಲ್ಲಿ ಇಂದಿನ ಮೈತ್ರಿ ಸರ್ಕಾರಕ್ಕೂ ಅವಕಾಶವಾಯಿತು. ಇದನ್ನು ಈ ಮೈತ್ರಿಪಕ್ಷಗಳು ಮರೆಯಬಾರದು. ಆದರೆ ಇಂದು ತಮ್ಮ ನಡೆಗಳಿಂದ ಅವು ಈ ಶಕ್ತಿಗಳ ವಿಶ್ವಾಸವನ್ನು ಸಾಕಷ್ಟು ಕಳಕೊಂಡಿವೆ. ಈಗ ಈ ಮೈತ್ರಿ ಸರ್ಕಾರ ನಿಜಕ್ಕೂ ಉಳಿದುಕೊಂಡರೆ ತಾನು ಕಳಕೊಂಡ ಈ ಶಕ್ತಿಗಳ ವಿಶ್ವಾಸವನ್ನು ಮತ್ತೆ ಗಳಿಸಿಕೊಳ್ಳುವ ಪ್ರಯತ್ನ ಪಡಬೇಕು. ಮತ್ತು ಆ ಪ್ರಯತ್ನ ಪ್ರಾಮಾಣಿಕವಾಗಿರಬೇಕು, ಅಷ್ಟೇ.
– ಕೇಸರಿ ಹರವೂ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಸುಗಮ ಮತ ಎಣಿಕೆಗೆ ಸಜ್ಜು
ಸುದ್ದಿದಿನ,ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯನ್ನು ಸುಗಮ, ಪಾರದರ್ಶಕ ಮತ್ತು ಅತ್ಯಂತ ಸುರಕ್ಷಿತವಾಗಿ ನಡೆಸುವ ನಿಟ್ಟಿನಲ್ಲಿ ಎಲ್ಲಾ ಇಲಾಖಾ ಅಧಿಕಾರಿಗಳು ಸಮನ್ವಯದಿಂದ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ. ಅವರು ನಿರ್ದೇಶನ ನೀಡಿದರು.
ಅವರು ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆ ಕುರಿತು ಅಧಿಕಾರಿಗಳೊಂದಿಗೆ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ವಿಧಾನಸಭಾ ಉಪಚುನಾವಣೆಯ ಮತ ಎಣಿಕೆ ಕಾರ್ಯವು ಸುಗಮವಾಗಿ ಮತ್ತು ಶಾಂತಿಯುತವಾಗಿ ನಡೆಯುವ ದೃಷ್ಟಿಯಿಂದ, ಮತ ಎಣಿಕೆ ಕೇಂದ್ರದ ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು ‘ವಾಹನ ಮುಕ್ತ ವಲಯ’ ಎಂದು ಘೋಷಿಸಲಾಗಿದೆ, ಎಣಿಕೆ ಕೇಂದ್ರದ ಗೇಟ್ನಿಂದ ಸುತ್ತಲಿನ 100 ಮೀಟರ್ ವ್ಯಾಪ್ತಿಯನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಅಲ್ಲಿ ಸಿಆರ್ಪಿಸಿ ಕಲಂ 144ರ ಅನ್ವಯ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ. ಕೇಂದ್ರದ ಸುತ್ತಲೂ ಮೂರು ಹಂತದ ಸಮನ್ವಯ ಭದ್ರತಾ ವ್ಯವಸ್ಥೆಯನ್ನು (Three-tier coordinating security system) ಅಳವಡಿಸಲಾಗುವುದು. ಮತ ಎಣಿಕೆ ಪ್ರಕ್ರಿಯೆಗೆ ಯಾವುದೇ ಅಡ್ಡಿಯಾಗದಂತೆ ಮತ್ತು ಭದ್ರತಾ ದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು, ಸಂಬಂಧಪಟ್ಟ ಅಧಿಕಾರಿಗಳು ಮತ್ತು ಅನುಮತಿ ಪಡೆದ ವಾಹನಗಳನ್ನು ಹೊರತುಪಡಿಸಿ ಉಳಿದ ಯಾವುದೇ ಖಾಸಗಿ ವಾಹನಗಳ ಪ್ರವೇಶವನ್ನು ಈ ವಲಯದಲ್ಲಿ ಕಟ್ಟುನಿಟ್ಟಾಗಿ ನಿಷೇಧಿಸುವಂತೆ ಸೂಚನೆ ನೀಡಿದರು.
ಮತ ಎಣಿಕೆ ಕೇಂದ್ರದ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಮತ್ತು ಸಾರ್ವಜನಿಕರಿಗೆ ತೊಂದರೆಯಾಗದಂತೆ ಪೊಲೀಸ್ ಇಲಾಖೆಯ ವತಿಯಿಂದ ಪರ್ಯಾಯ ಸಂಚಾರ ಮಾರ್ಗಗಳನ್ನು ಗುರುತಿಸಲಾಗಿದೆ. ವಾಹನ ಸವಾರರು ಪೊಲೀಸ್ ಸಿಬ್ಬಂದಿಯ ಸೂಚನೆಗಳನ್ನು ಪಾಲಿಸಿ, ನಿಗದಿಪಡಿಸಿದ ಪರ್ಯಾಯ ರಸ್ತೆಗಳನ್ನು ಬಳಸುವ ಮೂಲಕ ಸಹಕರಿಸಬೇಕು ಎಂದು ಮನವಿ ಮಾಡಿದರು.
ಮತ ಎಣಿಕೆ ಸಿಬ್ಬಂದಿ ಮತ್ತು ಅಭ್ಯರ್ಥಿಗಳಿಗೆ ಪ್ರತ್ಯೇಕ ವಾಹನ ಪಾಸ್ಗಳನ್ನು ವಿತರಿಸಲಾಗುವುದು. ಎಪಿಎಂಸಿ ಆವರಣ ಹಾಗೂ ಬಿಆರ್ಸಿ ಕಾಲೇಜು ಮೈದಾನದಲ್ಲಿ ವ್ಯವಸ್ಥಿತ ಪಾರ್ಕಿಂಗ್ ಸೌಲಭ್ಯ ಕಲ್ಪಿಸಲು ಸೂಚಿಸಲಾಗಿದೆ. ಮತ ಎಣಿಕೆ ಕೇಂದ್ರದೊಳಗೆ ಮೊಬೈಲ್ ಫೋನ್ ಬಳಕೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಸಿಬ್ಬಂದಿಗಳ ಮೊಬೈಲ್ಗಳನ್ನು ಸುರಕ್ಷಿತವಾಗಿ ಇರಿಸಲು ಪ್ರತ್ಯೇಕ ಕೌಂಟರ್ ತೆರೆದು, ಟೋಕನ್ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.
ಮುಂದಿನ ಕೆಲವು ದಿನಗಳಲ್ಲಿ ಮಳೆಯಾಗುವ ಸಾಧ್ಯತೆ ಇರುವುದರಿಂದ, ಮತ ಎಣಿಕೆ ಕಾರ್ಯಕ್ಕೆ ಯಾವುದೇ ಅಡ್ಡಿಯಾಗದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಎಣಿಕೆ ಕೇಂದ್ರದ ಮೇಲ್ಛಾವಣಿ ಮತ್ತು ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಕೂಡಲೇ ಮರುಪರಿಶೀಲಿಸುವಂತೆ ಲೋಕೋಪಯೋಗಿ ಹಾಗೂ ಬೆಸ್ಕಾಂ ಇಲಾಖೆಯ ಕಾರ್ಯಪಾಲಕ ಅಭಿಯಂತರರಿಗೆ ಸೂಚನೆ ನೀಡಿದರು.
ಮಳೆಯಿಂದಾಗಿ ಎಣಿಕೆ ಕೇಂದ್ರದ ಒಳಗೆ ನೀರು ಸೋರದಂತೆ ಹಾಗೂ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸುವುದು ಅವಶ್ಯಕವಾಗಿದೆ. ಈ ನಿಟ್ಟಿನಲ್ಲಿ ಲೋಕೋಪಯೋಗಿ ಹಾಗೂ ಬೆಸ್ಕಾಂ ಇಲಾಖೆಯ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಿ, ವ್ಯವಸ್ಥೆ ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ತಿಳಿಸಿದರು.
ಮತ ಎಣಿಕೆಯು ಪಾರದರ್ಶಕತೆ ಮತ್ತು ಭದ್ರತೆಯ ದೃಷ್ಟಿಯಿಂದ ಕೇಂದ್ರದಾದ್ಯಂತ ಅಳವಡಿಸಲಾಗಿರುವ ಸಿಸಿಟಿವಿ ಕ್ಯಾಮೆರಾಗಳ ಕಾರ್ಯಕ್ಷಮತೆ ಹಾಗೂ ದೃಶ್ಯೀಕರಣ ವ್ಯಾಪ್ತಿಯನ್ನು ಅಧಿಕಾರಿಗಳು ಪರಿಶೀಲಿಸಿಕೊಂಡು ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಖಚಿತ ಪಡಿಸಿಕೊಳ್ಳಬೇಕು. ಪ್ರತಿಯೊಂದು ಎಣಿಕೆ ಟೇಬಲ್ ಹಾಗೂ ಮತಯಂತ್ರಗಳನ್ನು ತರುವ ಹಾದಿಯಲ್ಲಿ ಯಾವುದೇ ‘ಬ್ಲೈಂಡ್ ಸ್ಪಾಟ್’ ಇಲ್ಲದಂತೆ ಕ್ಯಾಮೆರಾಗಳ ಕವರೇಜ್ ಇರಬೇಕು. ಸಿಸಿಟಿವಿ ದೃಶ್ಯಾವಳಿಗಳು ಅಡೆತಡೆಯಿಲ್ಲದೆ ಚಿತ್ರೀಕರಣಗೊಳ್ಳುತ್ತಿರುವುದನ್ನು ತಾಂತ್ರಿಕ ತಂಡವು ದೃಢಪಡಿಸಿಕೊಳ್ಳಬೇಕು ಎಂದು ಅವರು ಸೂಚಿಸಿದರು.
ಮತ ಎಣಿಕೆ ಕೇಂದ್ರದಲ್ಲಿ ಕಾರ್ಯನಿರ್ವಹಿಸುವ ಸಿಬ್ಬಂದಿ ಹಾಗೂ ಅಭ್ಯರ್ಥಿಗಳ ಏಜೆಂಟರ ಆರೋಗ್ಯ ದೃಷ್ಟಿಯಿಂದ ಆರೋಗ್ಯ ಇಲಾಖೆಯ ವತಿಯಿಂದ ಒಬ್ಬ ನುರಿತ ವೈದ್ಯರನ್ನೊಳಗೊಂಡ ವೈದ್ಯಕೀಯ ತಂಡವನ್ನು ನಿಯೋಜಿಸಬೇಕು. ತುರ್ತು ಸಂದರ್ಭ ಎದುರಾದಲ್ಲಿ ತಕ್ಷಣದ ಚಿಕಿತ್ಸೆಗಾಗಿ ಅಗತ್ಯ ಔಷಧೋಪಚಾರಗಳೊಂದಿಗೆ ಸುಸಜ್ಜಿತ ಅಂಬುಲೆನ್ಸ್ ಸೇವೆಯನ್ನು ಸ್ಥಳದಲ್ಲಿ ಸದಾ ಸಿದ್ಧವಾಗಿರಿಸಬೇಕು ಎಂದು ತಿಳಿಸಿದರು.
ಅಗ್ನಿಶಾಮಕ ಇಲಾಖೆಯು ಮತ ಎಣಿಕೆ ಕೇಂದ್ರದ ಒಳಾಂಗಣ ಮತ್ತು ಹೊರಾಂಗಣವನ್ನು ಕೂಲಂಕಷವಾಗಿ ಪರಿಶೀಲಿಸಿ, ಯಾವುದೇ ಅಗ್ನಿ ಅವಘಡಗಳು ಸಂಭವಿಸದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮುನ್ನೆಚ್ಚರಿಕಾ ಕ್ರಮವಾಗಿ ಕೇಂದ್ರದ ಆವರಣದಲ್ಲಿ ಅಗ್ನಿಶಾಮಕ ವಾಹನಗಳನ್ನು (Fire Engines) ನಿಯೋಜಿಸಬೇಕು ಹಾಗೂ ಅಗ್ನಿಶಾಮಕ ಉಪಕರಣಗಳು ಸುಸ್ಥಿತಿಯಲ್ಲಿರುವುದನ್ನು ಖಚಿತಪಡಿಸಿಕೊಳ್ಳಬೇಕು ಎಂದು ಸೂಚನೆ ನೀಡಿದರು.
ಮತ ಎಣಿಕೆ ಪ್ರಕ್ರಿಯೆಯು ಪಾರದರ್ಶಕವಾಗಿ ಮತ್ತು ಶಾಂತಿಯುತವಾಗಿ ನಡೆಯಲು ಎಲ್ಲಾ ಇಲಾಖೆಗಳು ಸಮನ್ವಯದಿಂದ ಕೆಲಸ ಮಾಡುವಂತೆ ತಿಳಿಸಿದರು.
ಬಿಗಿ ಪೊಲೀಸ್ ಬಂದೋಬಸ್ತ್ ಮತ್ತು ಭದ್ರತೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೇಖರ್ ಹೆಚ್.ಟಿ. ಅವರು ಮಾತನಾಡಿ, ಮತ ಎಣಿಕೆ ಕೇಂದ್ರದ ಒಳಗೆ ಮತ್ತು ಹೊರಗೆ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ತಡೆಯಲು ವ್ಯಾಪಕ ಭದ್ರತಾ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಕೇಂದ್ರದ ಸುತ್ತಮುತ್ತ ಸಶಸ್ತ್ರ ಮೀಸಲು ಪಡೆ ಹಾಗೂ ಹೆಚ್ಚುವರಿ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದ್ದು, ಸಿಸಿಟಿವಿ ಕ್ಯಾಮೆರಾಗಳ ಮೂಲಕ ನಿರಂತರ ನಿಗಾ ವಹಿಸಲಾಗಿದೆ. ಮತ ಎಣಿಕೆ ಕೇಂದ್ರಕ್ಕೆ ಅನಧಿಕೃತ ಸಾರ್ವಜನಿಕರ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಉಪವಿಭಾಗಾಧಿಕಾರಿ ಮತ್ತು ದಾವಣಗೆರೆ ದಕ್ಷಿಣ ವಿಧಾನಸಭಾ ಚುನಾವಣಾಧಿಕಾರಿ ಸಂತೋಷ್ ಕುಮಾರ್, ಮಹಾನಗರ ಪಾಲಿಕೆ ಆಯುಕ್ತೆ ಹಾಗೂ ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಮಮತ ಗೌಡರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಷಣ್ಮುಖಪ್ಪ, ಮಹಾನಗರ ಪಾಲಿಕೆ ಕಾರ್ಯಪಾಲಕ ಅಭಿಯಂತರ ಉದಯ್ , ಬೆಸ್ಕಾಂ , ಕೆ.ಎಸ್.ಆರ್.ಟಿ.ಸಿ , ಆಗ್ನಿಶಾಮಕ ದಳ , ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕ್ಷೇತ್ರ ಪುನರ್ವಿಂಗಡಣೆ ಮಸೂದೆ ; ಬಿಜೆಪಿ ಷಡ್ಯಂತ್ರ ಬಯಲು : ಕವಿತಾ ಚಂದ್ರಶೇಖರ್ ಕಿಡಿ
ಸುದ್ದಿದಿನ,ದಾವಣಗೆರೆ: ಬಿಜೆಪಿಯು ಪಂಚರಾಜ್ಯಗಳ ಚುನಾವಣೆಗಮನದಲ್ಲಿಟ್ಟುಕೊಂಡು ತರಾತುರಿಯಲ್ಲಿ ಮಹಿಳಾ ಮೀಸಲಾತಿಯ ಹೆಸರಿನಲ್ಲಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಮಂಡನೆ ಮಾಡಲು ಹೋಗಿ ಮುಖಭಂಗಕ್ಕೀಡಾಗಿದೆ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಕಾರ್ಯದರ್ಶಿ ಕವಿತಾ ಚಂದ್ರಶೇಖರ್ ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೇಂದ್ರ ಸರ್ಕಾರದ ಹುನ್ನಾರ ದೇಶದ ಜನರ ಮುಂದೆ ಬಯಲಾಗಿದೆ. ರಾಜಕೀಯ ಬೇಳೆ ಬೇಯಿಸಿಕೊಳ್ಳಲು ಮಹಿಳಾ ಮೀಸಲಾತಿ ಮಸೂದೆಯನ್ನು ಕಾಂಗ್ರೆಸ್ ವಿರೋಧಿಸುತ್ತಿದೆ. ಮಹಿಳೆಯರ ವಿರೋಧಿ ಕಾಂಗ್ರೆಸ್ ಪಕ್ಷ ಎಂದು ಹೇಳುತ್ತಿರುವ ಬಿಜೆಪಿಯು ಮಹಿಳೆಯರ ಭಾವನೆ ಜೊತೆ ಚೆಲ್ಲಾಟ ಆಡುವುದು ಎಷ್ಟರ ಮಟ್ಟಿಗೆ ಸರಿ ಎಂದು ಅವರು ಸುದ್ದಿಗೋಷ್ಟಿಯಲ್ಲಿ ಪ್ರಶ್ನಿಸಿದ್ದಾರೆ.
ಪ್ರತಿಪಕ್ಷಗಳು ಡಿಲಿಮಿಟೇಶನ್ ಮಸೂದೆಗೆ ವಿರೋಧ ವ್ಯಕ್ತಪಡಿಸಿವೆಯೇ ವಿನಾಃ ಮಹಿಳಾ ಮೀಸಲಾತಿ ಮಸೂದೆಗಲ್ಲ. ಕೇಂದ್ರ ಸರ್ಕಾರವು ಪ್ರಾಮಾಣಿಕವಾಗಿದ್ದರೆ 2023 ರ ಕಾನೂನನ್ನು ಜಾರಿಗೆ ತರಬೇಕು.
ನಾರಿ ಶಕ್ತಿ ವಂದನ ಚೌಕಟ್ಟು ಎಂದು ವ್ಯಾಪಕವಾಗಿ ಕರೆಯಲ್ಪಡುವ 2023ರ ಕಾನೂನು, ಶಾಸಕಾಂಗಗಳಲ್ಲಿ ಮಹಿಳೆಯರಿಗೆ ಶೇಕಡಾ 33ರಷ್ಟು ಮೀಸಲಾತಿಯ ಅನುಷ್ಠಾನವನ್ನು ಹೊಸ ಜನಗಣತಿಯನ್ನು ಪೂರ್ಣಗೊಳಿಸಿ ನಂತರ ಡಿಲಿಮಿಟೇಶನ್ ಬಗ್ಗೆ ಚರ್ಚಿಸಿ
ಅನುಷ್ಠಾನಗೊಳಿಸಲಿ. ಅದನ್ನು ಬಿಟ್ಟು ವಿನಾಕಾರಣ ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳ ಮೇಲೆ ಗೂಬೆ ಕೂರಿಸುವುದು ಸರಿಯಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ.
ಕೇಂದ್ರ ಸರ್ಕಾರಕ್ಕೆ ಸೋಲಾಗಿರುವುದು “ಪ್ರಜಾಪ್ರಭುತ್ವದ ಗೆಲುವು. ಭಾರತದ ಒಕ್ಕೂಟ ರಚನೆ ಬದಲಾಯಿಸಲು ಮುಂದಾಗಿದ್ದಕ್ಕೆ ತಕ್ಕ ಶಾಸ್ತಿಯಾಗಿದೆ. ಪ್ರಜಾಪ್ರಭುತ್ವ ದುರ್ಬಲಗೊಳಿಸುವ ಕೇಂದ್ರ ಸರ್ಕಾರದ ಪಿತೂರಿಗೆ ತಕ್ಕ ಉತ್ತರ ನೀಡಲಾಗಿದೆ. ಇದು ಸಂವಿಧಾನಕ್ಕೆ ಸಿಕ್ಕ ಗೆಲುವು, ದೇಶಕ್ಕೆ, ವಿರೋಧ ಪಕ್ಷದ ಒಗ್ಗಟ್ಟಿಗೆ ಸಿಕ್ಕ ಗೆಲುವು.
ಉತ್ತರ ಭಾರತದಲ್ಲಿ ಹೆಚ್ಚು ಸ್ಥಾನಗಳನ್ನು ಸೃಷ್ಟಿಸಿ ಹೇಗಾದರೂ ಅಧಿಕಾರದಲ್ಲಿ ಉಳಿಯಬೇಕೆಂಬ ಬಿಜೆಪಿಯ ಪಿತೂರಿ ಜನರಿಗೆ ಅರ್ಥವಾಗಿದೆ. ದಕ್ಷಿಣ ಭಾರತದ ರಾಜ್ಯಗಳಲ್ಲಿ ಕಡಿಮೆ ಸ್ಥಾನ ಆಗುವ ಆತಂಕ ಇದೆ. ಯಾವುದೇ ರೀತಿಯಲ್ಲಿಯೂ ಚರ್ಚಿಸದೇ ಏಕಾಏಕಿ ಕ್ಷೇತ್ರ ಪುನರ್ವಿಂಗಡಣೆ ಮಸೂದೆ ಜಾರಿಗೆ ಮುಂದಾಗಿದ್ದೇಕೆ ಎಂದು ಕವಿತಾ ಚಂದ್ರಶೇಖರ್
ಪ್ರಶ್ನಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳಾ ಮತದಾರರನ್ನು ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವ ಬಿಜೆಪಿ ಕುತಂತ್ರ ವಿಫಲವಾಯಿತು : ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ
ಸುದ್ದಿದಿನ,ದಾವಣಗೆರೆ:ಬಿಜೆಪಿ ಮಹಿಳಾ ಮತದಾರರನ್ನು ಒಂದು ಪ್ರಬಲ ‘ವೋಟ್ ಬ್ಯಾಂಕ್’ ಆಗಿ ಪರಿವರ್ತಿಸುವಲ್ಲಿ ಪ್ರಯತ್ನಿಸಿತ್ತು. ‘ನಾರಿ ಶಕ್ತಿ’ ಎಂಬ ಬ್ರಾಂಡ್ ಅಡಿಯಲ್ಲಿ ಮಹಿಳೆಯರನ್ನು ನೇರವಾಗಿ ತಲುಪುವ ತಂತ್ರವನ್ನು ಬಿಜೆಪಿ ರೂಪಿಸಿತ್ತು. ಮಹಿಳಾ ಮೀಸಲಾತಿ ಮಸೂದೆಯನ್ನು ಈ ಬ್ರಾಂಡ್ನ ಸರ್ವೋಚ್ಚ ಸಾಧನೆಯಾಗಿ ಪ್ರಸ್ತುತಪಡಿಸಲಾಯಿತು. ಆದರೆ ಬಿಜೆಪಿ ಒಂದು ಅತ್ಯಂತ ವ್ಯವಸ್ಥಿತ ಮತ್ತು ಚಾಣಾಕ್ಷ ‘ಪಾಲಿಟಿಕಲ್ ಮಾರ್ಕೆಟಿಂಗ್’ ತಂತ್ರವಾಗಿ ಬಳಸಿಕೊಳ್ಳುವುದಕ್ಕೆಯತ್ನಿಸಿ ವಿಫಲವಾಗಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ ಹೇಳಿದರು.
ಗೃಹ ಕಚೇರಿಯಲ್ಲಿ ಇಂದು ಏರ್ಪಡಿಸಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಯನ್ನು ಕ್ಷೇತ್ರ ಪುನರ್ವಿಂಗಡಣೆಗೆ “ಬಲಿಪಶು” ಮಾಡುವುದು ಸರಿಯಲ್ಲ. ೨೦೨೩ರ ಕಾಯಿದೆಯಲ್ಲಿ ಜನಗಣತಿ ನಂತರ ಅನುಷ್ಠಾನ ಎಂದು ತಿಳಿಸಲಾಗಿದೆ. ಆದರೆ ಈಗ ೨೦೧೧ರ ಜನಗಣತಿ ಆಧಾರದಲ್ಲಿ ವೇಗಗೊಳಿಸುವುದು ಏಕೆ? ಜಾತಿ ಜನಗಣತಿಯನ್ನು ಸೇರಿಸದಿದ್ದರೆ ಪುನರ್ವಿಂಗಡಣೆಯು ಸಾಮಾಜಿಕ ನ್ಯಾಯಕ್ಕೆ ಹೊಂದುವುದಿಲ್ಲ. ದಕ್ಷಿಣ ರಾಜ್ಯಗಳಲ್ಲಿ ಕುಟುಂಬ ನಿಯಂತ್ರಣದ ಯಶಸ್ಸಿಗೆ ಶಿಕ್ಷೆ ನೀಡುವಂತಾಗಬಾರದು. ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಮಸೂದೆ ಜಾರಿಗಿದ್ದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗುತ್ತಿತ್ತು. ಬಿಜೆಪಿ ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಮೂರನೇ ಎರಡರಷ್ಟು ಬಹುಮತ ಸಿಗಲಿಲ್ಲ ಎಂದರು.
ಮಸೂದೆಯನ್ನು ವೋಟ್ ಬ್ಯಾಂಕ್ ಆಗಿ ಬಳಕೆ ಮಾಡಿಕೊಂಡು ಮಹಿಳೆಯರ ಭಾವನೆಗಳೊಂದಿಗೆ ಆಟವಾಡಲು ಹೋಯಿತು. ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯುವ ಹುನ್ನಾರ ಮಾಡಿತು. ಆದರೆ ಅದು ನಡೆಯಲಿಲ್ಲ. ನಮ್ಮ ವಿರೋಧವೇನಿದ್ದರು ಪುನರ್ ವಿಂಗಡಣೆ ಮಸೂದೆ ತಿರಸ್ಕರಿಸಿದೆ ಹೊರತು ಮಹಿಳಾ ಮೀಸಲು ಮಸೂದೆ ಅಲ್ಲ ಎಂದರು.
ಪಂಚ ರಾಜ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಯಿದ್ದರೂ ನರೇಂದ್ರ ಮೋದಿ ಅವರು ದೇಶವನ್ನು ಉದ್ದೇಶಿಸಿ ಮಾತನಾಡಿದ್ದು ಚುನಾವಣಾ ಆಯೋಗ ನಿರ್ಧಾರ ತೆಗೆದುಕೊಳ್ಳಬೇಕು. ಅವರು ಚುನಾವಣೆಯ ಸಂದರ್ಭದಲ್ಲಿ ದೇಶ ಉದ್ದೇಶಿಸಿ ಮಾಡಿದ ಭಾಷಣದಲ್ಲಿ ವಿರೋಧ ಪಕ್ಷಗಳನ್ನು ತೆಗಳಿಕೆ ಮಾಡಿದ್ದು ಸರಿಯಲ್ಲ. ಇದನ್ನು ಚುನಾವಣಾ ಆಯೋಗ ಗಂಭೀರವಾಗಿ ಪರಿಗಣಿಸಬೇಕು ಎಂದು ಮನವಿಮಾಡಿದರು.
ಮಸೂದೆ ಕುರಿತು ಸರ್ವ ಪಕ್ಷಗಳ ಸಭೆ ಕರೆಯುವಂತೆ ಮಾಡಿಕೊಂಡ ಮನವಿ ಉಪೇಕ್ಷೆ ಮಾಡಿತು ಕೇಂದ್ರ ಸರ್ಕಾರ. ಮಹಿಳಾ ಮೀಸಲಾತಿ ಮಸೂದೆ ಈಗಾಗಲೇ ಲೋಕಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಕ್ಷೇತ್ರ ಪುನರ್ ವಿಂಗಡಣೆ ಬಗ್ಗೆ ಆತಂಕ ಇದೆ. ಎಲ್ಲರ ಒಪ್ಪಿಗೆ ಪಡೆದು ಮುಂದುವರೆದಿದ್ದರೆ ಅನುಕೂಲ ಆಗುತ್ತಿತ್ತು. ೨೦೨೪ರಲ್ಲಿ ಮಹಿಳಾ ಮೀಸಲು ಜಾರಿಗೆ ತರುವ ಅವಕಾಶ ಇತ್ರು. ಇದನ್ನು ಮಾಡಲು ಮುಂದಾಗಲಿಲ್ಲ. ಕ್ಷೇತ್ರ ಪುನರ್ ವಿಂಗಡಣೆ ಜಮ್ಮು ಮತ್ತು ಕಾಶ್ಮೀರ ಹಾಗೂ ಅಸ್ಸಾಂ ದಲ್ಲಿ ತಮ್ಮ ಅನುಕೂಲ, ರಾಜಕೀಯ ಲಾಭಕ್ಕೆ ಅನುಗುಣವಾಗಿ ಮಾಡಿ ತೋರಿಸಿದ್ದಾರೆ. ಈ ಬಗ್ಗೆ ಹೆಚ್ಚು ಆತಂಕ ಇದೆ. ಆಡಳಿತ ಪಕ್ಷಕ್ಕೆ ಈ ಮಸೂದೆ ಜಾರಿಗೆ ತರುವ ಬದ್ದತೆ ಇದ್ದಿದ್ದರೆ ಸರ್ವ ಪಕ್ಷಗಳನ್ನು ವಿಶ್ವಾಸಕ್ಕೆ ಪಡೆಯುವ ಪ್ರಯತ್ನ ಮಾಡುತ್ತಿದ್ದರು. ರಾಜೀವ್ ಗಾಂಧಿ ಅವರು ಸ್ಥಳೀಯ ಸಂಸ್ಥೆಯಲ್ಲಿ ಶೇ ೫೦ ಜಾರಿಗೆ ತಂದಿದ್ದೇವೆ ಎಂದರು.
ಜನಸಂಖ್ಯೆ ನಿಯಂತ್ರಣ ಮಾಡಿದ್ದು ದಕ್ಷಣ ಭಾರತ. ಇದರ ಆಧಾರದ ಮೇರೆಗೆ ಜಾರಿಗೆ ತಂದರೆ ದಕ್ಷಿಣ ಭಾರತದ ರಾಜ್ಯಗಳಿಗೆ ಅನ್ಯಾಯ ಆಗಲಿದೆ. ಜನಗಣತಿಯಲ್ಲಿ ಜಾತಿ ಗಣತಿ ನಡೆಯುತ್ತಿದೆಯೇ ಎಂಹುದು ಇನ್ನೂ ಸ್ಪಷ್ಟವಾಗಿ ಹೇಳಿಲ್ಲ. ಉತ್ತರ ಪ್ರದೇಶ ಹಾಗೂ ಕರ್ನಾಟಕದ ಲೋಕಸಭಾ ಕ್ಷೇತ್ರಗಳ ನಡುವೆ ಇರುವ ವ್ಯತ್ಯಾಸ ದೊಡ್ಡದು. ಉತ್ತರ ಭಾರತೀಯ ರಾಜ್ಯಗಳು ಹೆಚ್ಚು ಪ್ರಾಬಲ್ಯ ಸಾಧಿಸಿದರೆ ದಕ್ಷಿಣ ಭಾರತಕ್ಕೆ ತೊಂದರೆ ಆಗುತ್ತದೆ. ಮಸೂದೆ ಮಂಡನೆಗೆ ಇನ್ನೂ ಎರಡು ವರ್ಷಗಳ ಕಾಲಾವಕಾಶ ಇದೆಯಾವುದು ಒಳಿತು ಎಂಬುದು ಮಹಿಳೆಯರು ಆಲೋಚನೆ ಮಾಡಲಿ ಎಂದರು.
ಸುದ್ದಿಗೋಷ್ಟಿಯಲ್ಲಿ ‘ಧೂಡಾ’ ಅಧ್ಯಕ್ಷ ದಿನೇಶ್ ಕೆ.ಶೆಟ್ಟಿ, ಕಾಂಗ್ರೆಸ್ ಮಹಿಳಾ ಜಿಲ್ಲಾ ಘಟಕದ ಅಧ್ಯಕ್ಷೆ ಅನಿತಾಬಾಯಿ, ಮುಖಂಡರಾದ ಶಿವಕುಮಾರ್, ಅಯೂಬ್ ಪೈಲ್ವಾನ್, ಎ.ನಾಗರಾಜ್ ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243


