Connect with us

ದಿನದ ಸುದ್ದಿ

ಹರಿಹರ ನಗರಸಭೆ ಚುನಾವಣೆ ಫಲಿತಾಂಶ ಅತಂತ್ರ

Published

on

ಸುದ್ದಿದಿನ,ದಾವಣಗೆರೆ: ಮೇ 31 ರಂದು ನಡೆದ ಮತ ಎಣಿಕೆ ನಂತರ ಹರಿಹರ ನಗರಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಿದೆ.

ಮ್ಯಾಜಿಕ್ ನಂಬರ್ 16 ಪಡೆಯುವಲ್ಲಿ ಯಾವ ಪಕ್ಷವೂ ಸಫಲವಾಗಿಲ್ಲ. 14 ಸ್ಥಾನಗಳನ್ನು ಗೆಲ್ಲುವ ಮೂಲಕ ಜೆ.ಡಿ.ಎಸ್. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 10 ಸ್ಥಾನ ಗೆಲ್ಲುವ ಮೂಲಕ ಕಾಂಗ್ರೆಸ್ ಎರಡನೇ ಸ್ಥಾನ ಕಾಯ್ದುಕೊಂಡಿದೆ. ಭಾರತೀಯ ಜನತಾ ಪಕ್ಷ 5 ಸ್ಥಾನ ಪಡೆದರೆ ಈ ಮಧ್ಯೆ ಪಕ್ಷೇತರರಿಬ್ಬರು ಜಯಭೇರಿ ಬಾರಿಸಿದ್ದಾರೆ.

31 ವಾರ್ಡ್‌ಗಳಿಗೆ ಮೇ 29 ರಂದು ಮತದಾನ ನಡೆದಿದ್ದು, ಮೇ 31 ರಂದು ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಿ, 11 ಗಂಟೆ ಸುಮಾರಿಗೆ ಪೂರ್ಣ ಚಿತ್ರಣ ಹೊರಬಂದಿತ್ತು. ಹರಿಹರ ನಗರಸಭೆಯ 1ನೇ ವಾರ್ಡ್ ಹರ್ಲಾಪುರದಿಂದ ಜನತದಾದಳ (ಜಾತ್ಯತೀತ) ಪಕ್ಷದ ಜಂಬಣ್ಣ 807 ಮತಗಳಿಂದ ಜಯ ಸಾಧಿಸಿದ್ದಾರೆ.

ಇವರ ಪ್ರತಿಸ್ಪರ್ಧಿ ಬಿಜೆಪಿ ಪಕ್ಷದ ಎಂ.ಮಂಜುನಾಥ, 2ನೇ ವಾರ್ಡ್ ಎ.ಕೆ ಕಾಲೋನಿಯಿಂದ ಜನತಾದಳ(ಜಾ) ಪಕ್ಷದ ಪಿ.ಎನ್ ವಿರುಪಾಕ್ಷ 533 ಮತಗಳನ್ನು ಪಡೆದು ಜಯಶಾಲಿಯಾಗಿದ್ದು, ಇವರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಎಸ್.ಎಸ್. ಆನಂದಕುಮಾರ್, 3ನೇ ವಾರ್ಡ್ ಆಶ್ರಯ ಕಾಲೋನಿಯಿಂದ ಬಿಜೆಪಿ ಪಕ್ಷದ ಆಟೋ ಹನುಮಂತಪ್ಪ 364 ಮತಗಳಿಂದ ಜಯಶಾಲಿಯಾಗಿದ್ದು, ಇವರ ಸಮೀಪ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಹನುಮಂತಪ್ಪ.

4ನೇ ವಾರ್ಡ್ ವಿಜಯನಗರ ಬಡಾವಣೆಯಿಂದ ಬಿಜೆಪಿ ಪಕ್ಷದ ಎನ್.ರಂಜಿನಿಕಾಂತ್ 616 ಮತ ಪಡೆಯುವುದರ ಮೂಲಕ ವಿಜಯಿಯಾಗಿದ್ದು, ಜನತಾದಳ(ಜಾ) ಪಕ್ಷದ ಸಮೀಪದ ಪ್ರತಿಸ್ಪರ್ಧಿ ಸದಾಶಿವ, 5ನೇ ವಾರ್ಡ್ ಕೆ.ಆರ್.ನಗರದಿಂದ 554 ಮತಗಳಿಂದ ಕಾಂಗ್ರೆಸ್ ಪಕ್ಷದಿಂದ ನಾಗರತ್ನಪ್ಪ ದೀಪ ಜಯಶೀಲರಾಗಿದ್ದು ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಡಿ.ವೈ ಇಂದಿರಾ ಮಂಜುನಾಥ 6ನೇ ವಾರ್ಡ್ ಮಹಾಲಿಂಗಪ್ಪ ಬಡಾವಣೆಯಿಂದ 426 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಪಕ್ಷದ ಸೈಯದ್ ಅಬ್ದುಲ್ ಅಲೀಂ ಜಯಶಾಲಿಯಾಗಿದ್ದಾರೆ. ಇವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಯ ಕೀರ್ತಿ ಕುಮಾರ್ ಹೆಚ್.ಸಿ ಆಗಿದ್ದರು.

7ನೇ ವಾರ್ಡ್ ಗಾಂಧಿನಗರದಿಂದ ಪೆಕ್ಷೇತರ ಅಭ್ಯರ್ಥಿ ಇಬ್ರಾಹಿಂ 869 ಮತಗಳನ್ನು ಪಡೆಯುವ ಮೂಲಕ ಜಯ ಪಡೆದಿದ್ದಾರೆ. ಇವರ ಸಮೀಪದ ಅಭ್ಯರ್ಥಿ ಕಾಂಗ್ರೆಸ್ ಪಕ್ಷದ ಬಿ.ಕೆ.ಸೈಯದ್ ಬಾಷಾ. 8ನೇ ವಾರ್ಡ್ ತೆಗ್ಗಿನಕೇರಿಯಿಂದ ಬಿಜೆಪಿ ಯ ಕೆ.ಜಿ.ಸಿದ್ದೇಶ್ 1221 ಮತಗಳನ್ನು ಪಡೆಯುವ ಮೂಲಕ ಜಯ ಸಾಧಿಸಿದ್ದಾರೆ. ಇವರ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ) ಪಕ್ಷದ ಶೇಖರ ಗೌಡ ಆಗಿದ್ದರು.

9ನೇ ವಾರ್ಡ್ ಭರಂಪುರದಿಂದ ಜನತಾದಳ(ಜಾ) ಪಕ್ಷದ ಮಹಿಳಾ ಅಭ್ಯರ್ಥಿ ನಿಂಬಕ್ಕ ಚಂಬಾಪುರ 1148 ಮತಗಳನ್ನು ಪಡೆದು ಜಯ ಸಾಧಿಸಿದ್ದು, ಇವರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಅಶ್ವಿನಿ ಗುತ್ಯಪ್ಪ ಆಗಿದ್ದರು. 10ನೇ ವಾರ್ಡ್ ಭಾರತ್ ಮಿಲ್ ಕಾಂಪೌಂಡ್‌ನಿಂದ ಜನತಾದಳ(ಜಾ) ಪಕ್ಷದಿಂದ ಎಂ.ಆರ್.ಮುಜಾಮಿಲ್ 626 ಮತಗಳನ್ನು ಪಡೆಯುವ ಮೂಲಕ ಜಯಶಾಲಿಯಾಗಿದ್ದು ಇವರ ಸಮೀಪದ ಪ್ರತಿಸ್ಫರ್ಧಿ ಬಿಜೆಪಿ ಮಾರುತಿ ಬಿ ಆಗಿದ್ದರು.

11 ನೇ ವಾರ್ಡ್ ಟಿಪ್ಪುನಗರದಿಂದ ಕಾಂಗ್ರೆಸ್ ಪಕ್ಷದ ಮಹಿಳಾ ಅಭ್ಯರ್ಥಿ ಸುಮಿತ್ರ ಕೆ.ಮರಿದೇವಪ್ಪ 943 ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿದ್ದು ಇವರ ಸಮೀಪದ ಪ್ರತಿಸ್ಪರ್ಧಿ ಜನತಾ ದಳ ಪಕ್ಷದ ಹೆಚ್.ಮಂಜುಳ. 12 ನೇ ವಾರ್ಡ್ ಅಮರಾವತಿಯಿಂದ ಬಿಜೆಪಿ ಪಕ್ಷದಿಂದ ಬಿ.ಎಂ ವಿಜಯಕುಮಾರ್ 669 ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿದ್ದು ಇವರ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ) ಪಕ್ಷದ ಕೆ.ಹೆಚ್.ಯೋಗೇಶಪ್ಪ ಆಗಿದ್ದರು.

13ನೇ ವಾರ್ಡ್ ಜೈಭೀಮನಗರ ಜನತಾದಳ(ಜಾ) ಪಕ್ಷದ ಆರ್.ದಿನೇಶ್ ಬಾಬು 673 ಮತಗಳಿಂದ ಜಯಶಾಲಿಯಾಗಿದ್ದು ಕಾಂಗ್ರೆಸ್ ಪಕ್ಷದ ರಾಘವೇಂದ್ರ ಅಶೋಕ್ ಓಲೇಕಾರ್ ಇವರು ಸಮೀಪದ ಪ್ರತಿಸ್ಪಧಿಯಾಗಿದ್ದರು. 14 ನೇ ವಾರ್ಡ್ ಕಾಳಿದಾಸನಗರ ಕಾಂಗ್ರೆಸ್ ಪಕ್ಷದಿಂದ ಮೆಹಬೂಬ್ ಬಾಷಾ ಆರ್ 533 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಸೈಯದ್ ಏಜಾಜ್ ವಿರುದ್ದ ಜಯ ಸಾಧಿಸಿದ್ದಾರೆ.

15 ನೇ ವಾರ್ಡ್ ಬಹಾರ್ ಮಖಾನ್‌ನಿಂದ ಜನತಾದಳ(ಜಾ) ಪಕ್ಷದ ಮಹಿಳಾ ಅಭ್ಯರ್ಥಿ ರೇಷ್ಮಾ ಬಾನು 610 ಮತಗಳನ್ನು ಪಡೆಯವ ಮೂಲಕ ಇವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಲತಾಶ್ರೀ ವೀರಾಚಾರ ವಿರುದ್ದ ಜಯ ಗಳಿಸಿದ್ದಾರೆ. 16 ನೇ ವಾರ್ಡಿನಿಂದ ಕಾಂಗ್ರೆಸ್ ಪಕ್ಷದ ಮಹಿಳಾ ಅಭ್ಯರ್ಥಿ ಫಕೀರಮ್ಮ 829 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಜನತಾ ದಳದ ಬಿ.ಐ ಮಮತಾ ಮುಂದೆ ಜಯ ಸಾಧಿಸಿದ್ದಾರೆ.

17ನೇ ವಾರ್ಡ್ ಹೊಸಪೇಟೆ ಬೀದಿಯಿಂದ ಜನತಾದಳ(ಜಾ)ದ ಲಕ್ಷ್ಮೀ ಮೋಹನ್ ದುರುಗೋಜಿ ಇವರು 741 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿ ಸ್ಪರ್ಧಿ ಕಾಂಗ್ರೆಸ್‌ನ ಸುನಂದ ಪಕ್ಕೀರಸಾ ಭೂತೆ ರ ವಿರುದ್ದ ಜಯಗಳಿಸಿದ್ದಾರೆ. 18 ನೇ ವಾರ್ಡ್ ಇಮಾಂ ಮೊಹಲ್ಲಾದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಂಕರ್ ಖಟಾವ್‌ಕರ್ 825 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ)ದ ಹೆಚ್.ಅಬ್ದುಲ್ ರೆಹಮಾನ್ ಖಾನ್ ರ ವಿರುದ್ದ ಜಯ ಸಾಧಿಸಿದ್ದಾರೆ.

19ನೇ ವಾರ್ಡ್ ಹಳ್ಳದಕೇರಿಯಿಂದ ಜನತಾದಳ(ಜಾ) ಪಕ್ಷದ ನೂರ್‌ಸಭಾ 834 ಮತಗಳನ್ನು ಪಡೆಯುವ ಮೂಲಕ ಬಿಜೆಪಿ ಪಕ್ಷದ ಆಶಾ ರವೀಂದ್ರ ವಿರುದ್ದ ಗೆಲುವು ಪಡೆದಿದ್ದಾರೆ. 20 ನೇ ವಾರ್ಡ್ ಕುಂಬಾರ ಓಣಿಯಿಂದ ಜನತಾದಳ(ಜಾ)(ಜಾ) ರತ್ನ ಡಿ.ಯು 779 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಬಿ ಸುಜಾತ ಇವರ ವಿರುದ್ದ ಜಯಶಾಲಿಯಾಗಿದ್ದಾರೆ.

21ನೇ ವಾರ್ಡ್ ಜೆಸಿಆರ್ ಬಡಾವಣೆ-1 ರಿಂದ ಬಿಜೆಪಿಯ ನೀತಾ ಇವರು 663 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಶಹಜಾದ್ ಎಸ್.ಕೆ ಇವರ ವಿರುದ್ದ ಗೆಲುವು ಸಾಧಿಸಿದ್ದಾರೆ. 22ನೇ ವಾರ್ಡ್ ಜೆಸಿಆರ್ ಬಡಾವಣೆ-2 ರಿಂದ ಜನತಾದಳ(ಜಾ)(ಜಾ)ದ ಜಮಾಲುದ್ದೀನ್ 660 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಹುಲಿಗೆಪ್ಪ ಸಿ ಎನ್ ಇವರ ವಿರುದ್ದ ಗೆಲುವು ಸಾಧಿಸಿದ್ದಾರೆ.

23ನೇ ವಾರ್ಡ್ ರಾಜಾರಾಂ ಕಾಲೋನಿಯಿಂದ ಕಾಂಗ್ರೆಸ್ ಪಕ್ಷದ ಎಂ.ಬಾಬುಲಾಲ್ 962 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ)(ಜಾ)ದ ಹಾಜೀ ಅಲಿ ಖಾನ್ ವಿರುದ್ದ ಜಯ ಗಳಿಸಿದ್ದಾರೆ. 24 ವಾರ್ಡ್ ಬೆಂಕಿನಗರದಿಂದ ಕಾಂಗ್ರೆಸ್ ಪಕ್ಷದ ಶಾಹಿನಾ ಬಾನು 554 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಸೈಯದಾ ಅನಿಸಾ ಇವರು ವಿರುದ್ದ ಗೆಲುವು ಸಾಧಿಸಿದ್ದಾರೆ.
25 ನೇ ವಾರ್ಡ್ ಪ್ರಶಾಂತ್ ನಗರದಿಂದ ಜನತಾದಳ(ಜಾ)(ಜಾ)ದ ದಾದಾ ಖಲಂದರ್ ಇವರು 776 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಸಂತೋಷ್‌ಕುಮಾರ್ ಎಂ ವಿರುದ್ದ ಗೆಲುವು ಸಾಧಿಸಿದ್ದಾರೆ. 26 ನೇ ವಾರ್ಡ್ ಜೆಸಿಆರ್ ಬಡಾವಣೆ -3 ರಿಂದ ಜನತಾದಳ(ಜಾ)(ಜಾ)ದ ವಾಮನಮೂರ್ತಿ ಎ ಇವರು 506 ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿದ್ದು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಅಜೀಜ್ ಮೇಸ್ತ್ರಿಯವರನ್ನು ಸೋಲಿಸಿದ್ದಾರೆ.

27ನೇ ವಾರ್ಡ್ ಜೆಸಿಆರ್ ಬಡಾವಣೆ-4 ರಿಂದ ಜನತಾದಳ(ಜಾ)(ಜಾ)ದ ಉಷಾ ಮಂಜುನಾಥ್ 544 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ರೋಹಿಣಿ ರಾಜು ಐರಣಿ ವಿರುದ್ದ ಜಯ ಗಳಿಸಿದ್ದಾರೆ. 28 ವಾರ್ಡ್ ಸುಣಗಾರ ಬೀದಿಯಿಂದ ಪಕ್ಷೇತರ ಅಭ್ಯರ್ಥಿ ಪಾರ್ವತಮ್ಮ ಐರಣಿ 582 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ನಾಗರತ್ನಮ್ಮರ ವಿರುದ್ದ ಗೆಲುವು ಸಾಧಿಸಿದ್ದಾರೆ.

29ನೇ ವಾರ್ಡ್ ಗಂಗಾನಗರದಿಂದ ಕಾಂಗ್ರೆಸ್ ಪಕ್ಷದ ಎಸ್.ಎಂ.ವಸಂತ್ 754 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಮೋಹನ್ ಹೆಚ್. ವಿರುದ್ದ ಜಯ ಗಳಿಸಿದ್ದಾರೆ. 30 ವಾರ್ಡ್ ವಿದ್ಯಾನಗರದಿಂದ ಬಿಜೆಪಿ ಪಕ್ಷದ ಮಹಿಳಾ ಅಭ್ಯರ್ಥಿ ಅಶ್ವಿನಿ ಕೃಷ್ಣ ಇವರು 530 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಗೀತಾ ವಿಶ್ವನಾಥ ಭೂತೆ ವಿರುದ್ದ ಗೆಲುವು ಸಾಧಿಸಿದ್ದಾರೆ. ಹಾಗೂ 31 ನೇ ವಾರ್ಡ್ ಇಂದಿರಾನಗರದಿಂದ ಜನತಾದಳ(ಜಾ)ಕವಿತಾ ಮಾರುತಿ ಬೇಡರ್ 807 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್‌ನ ಮಾಧವಿ ಉಮೇಶ್ ತುಂಬಿದಮನೆ ಇವರ ವಿರುದ್ದ ಗೆಲುವು ಸಾಧಿಸಿದ್ದಾರೆ.

ಅಂಚೆಮತಗಳು : 03 ಅಂಚೆ ಮತಗಳನ್ನು ಸ್ವೀಕರಿಸಲಾಗಿದ್ದು ಇವುಗಳಲ್ಲಿ 02 ಮಾತ್ರ ಕ್ರಮಬದ್ದವಾಗಿವೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.

ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.

ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ

Published

on

ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ ಪೊಲೀಸ್ ಪ್ರಕರಣ ದಾಖಲಾಗಿತು. ಅವರನ್ನು ಬಂಧಿಸಿ 19 ದಿನ ಜೈಲಿನಲ್ಲಿ ಇರಿಸಲಾಯಿತು.

ತಮ್ಮ ಬಂಧನ ಸರಿಯಲ್ಲ ಎಂದು ತನಕಾ ಮಾನವ ಹಕ್ಕುಗಳ ಆಯೋಗದ ಮೊರೆ ಹೋದರು. ವೀಸಾ ಅವಧಿ ಮುಗಿಯುತ್ತಿದ್ದಂತೆ, ಪ್ರಕರಣ ಮುಗಿಯುವವರೆಗೂ ಭಾರತದಲ್ಲೇ ಇರಲು ವಿಚಿತ್ರ ಪ್ರಯತ್ನವೂ ಮಾಡಿದರು. ಪೊಲೀಸ್ ಠಾಣೆಯಿಂದ ಪ್ಲಾಸ್ಟಿಕ್ ಕುರ್ಚಿಯೊಂದನ್ನು ತೆಗೆದುಕೊಂಡು ಹೋಗಿ, ಮತ್ತೆ ಬಂಧನಕ್ಕೊಳಗಾಗಲು ಪ್ರಯತ್ನಿಸಿದರು!

ಅದು ಆಗದೇ ಇದ್ದಾಗ ಜಪಾನ್ ಗೆ ಮರಳಿ . ಅಲ್ಲಿಂದಲೇ ತಮ್ಮ ಹೋರಾಟ ಮುಂದುವರಿಸಿದ ತನಕಾ ಅವರ ಹೋರಾಟಕ್ಕೆ ಜಯ ಸಿಕ್ಕಿದೆ ಸಿಕ್ಕಿದೆ. ಕರ್ನಾಟಕದಿಂದ 75,000 ಪರಿಹಾರವನ್ನು ಪಡೆದುಕೊಂಡಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಡಾಲಿಯ ಕನಸು ಒಂದೇ ಹೀರೋ ಆಗೋದು

Published

on

ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು!

ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು ಗುರಿಯ ಮೇಲೆ ಸಂಪೂರ್ಣ ಗಮನ ಹೊಂದಿದ್ದವರು. ಯಾವುದೇ ಡೈವರ್ಷನ್ ಇಲ್ಲ, ಸಿನಿಮಾ ಕನಸಿನ ಕಡೆ ಮಾತ್ರ ಗಮನ!

ಇಂದು ಬಹುಭಾಷಾ ನಟನಾಗಿ ದೊಡ್ಡ ಎತ್ತರಕ್ಕೇರಿದ್ದರೂ, ತಮ್ಮ ಬೇರುಗಳನ್ನು ಅವರು ಮರೆತಿಲ್ಲ. ಇಂದಿಗೂ ತಮ್ಮ ಹಳೆಯ ಸ್ನೇಹಿತರ ಜೊತೆಗೂಡಿ ಸಿನಿಮಾ ಕೆಲಸಗಳಲ್ಲಿ ತೊಡಗಿಸಿಕೊಂಡಿದ್ದಾರೆ. ನಿರ್ಮಾಪಕರಾಗಿಯೂ ಗುರುತಿಸಿಕೊಂಡಿರುವ ಅವರು, ಅನೇಕ ಹೊಸ ಪ್ರತಿಭೆಗಳಿಗೆ ಅವಕಾಶ ನೀಡಿದ್ದಾರೆ.

ಅಂದಿನ ಅದೇ ಸರಳತೆ, ಅದೇ ನಡವಳಿಕೆ ಇಂದಿಗೂ ಇದೆ!

ಒಬ್ಬ ಕಾಲೇಜು ಯುವಕನಿಂದ ಬಹುಭಾಷಾ ತಾರೆಯವರೆಗೆ—ಎಂತಹ ಸ್ಪೂರ್ತಿದಾಯಕ ಪಯಣ! ಹ್ಯಾಪಿ ಬರ್ತ್ಡೇ ಡಾಲಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ19 hours ago

ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು...

ದಿನದ ಸುದ್ದಿ19 hours ago

ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ

ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ...

ದಿನದ ಸುದ್ದಿ20 hours ago

ಡಾಲಿಯ ಕನಸು ಒಂದೇ ಹೀರೋ ಆಗೋದು

ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು! ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು...

ದಿನದ ಸುದ್ದಿ2 days ago

ಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ವಿವಿಧ ಯೋಜನೆಗಳಾದ ಸಾಫ್ಟ್ ಸೀಡ್ ಕ್ಯಾಪಿಟಲ್, ಶೇ.60 ರಷ್ಟು ಸಹಾಯಧನ ಸಾಲ ಶುಲ್ಕ ಮರುಪಾವತಿ ಮತ್ತು ವಿದ್ಯುಚ್ಚಕ್ತಿ ಸಹಾಯಧನ...

ದಿನದ ಸುದ್ದಿ2 days ago

ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ ಇಂಡಿಯಾ ಗೇಟ್‌ನಿಂದ ಪೊಲೀಸ್ ಕೇಂದ್ರ...

KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ
ದಿನದ ಸುದ್ದಿ2 days ago

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ 329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್ 658 OMR ಕಾರ್ಬನ್...

ದಿನದ ಸುದ್ದಿ2 days ago

ರಿಲೀಸ್‌ಗೂ ಮುನ್ನ ಧರ್ಮಸ್ಥಳದತ್ತ ರಾಕಿಂಗ್‌ ಸ್ಟಾರ್‌ ಯಶ್‌; ‘ಟಾಕ್ಸಿಕ್‌’ ಗೆಲುವಿಗಾಗಿ ವಿಶೇಷ ಪೂಜೆ

ಚೆನ್ನೈ ಪ್ರೀ-ರಿಲೀಸ್‌ ಕಾರ್ಯಕ್ರಮದ ಬಳಿಕ ನೇರವಾಗಿ ಧರ್ಮಸ್ಥಳಕ್ಕೆ ಆಗಮಿಸಿದ ಯಶ್‌; ಕೆಜಿಎಫ್‌-2 ಬಳಿಕ ಮತ್ತೊಮ್ಮೆ ಹಳೆಯ ಸಂಪ್ರದಾಯ ಮುಂದುವರಿಕೆ ಟಾಕ್ಸಿಕ್‌ ರಿಲೀಸ್‌ಗೂ ಮುನ್ನ ಧರ್ಮಸ್ಥಳದಲ್ಲಿ ಯಶ್‌! ಮಂಜುನಾಥನ...

₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ ₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
ದಿನದ ಸುದ್ದಿ2 days ago

₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ

ರಾಜಾಜಿನಗರದಲ್ಲಿ ಬಿಡಿಎ ಭರ್ಜರಿ ಕಾರ್ಯಾಚರಣೆ: 13,000 ಚದರ ಅಡಿ ಜಾಗ ವಶಕ್ಕೆ 13,000 ಚದರ ಅಡಿ ಪ್ರದೇಶ ತೆರವು; ಪೊಲೀಸ್ ಭದ್ರತೆಯಲ್ಲಿ ಬಿಡಿಎ ಕಾರ್ಯಾಚರಣೆ ನಿವೇಶನ 13...

‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ! ‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ!
ದಿನದ ಸುದ್ದಿ2 days ago

ಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!

‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ! ಗಡುವು ಮುಕ್ತಾಯ, ಇನ್ನು ಬಿ-ಖಾತೆಯಿಂದ ಎ-ಖಾತೆಗೆ...

ಇ-ಕಾಮರ್ಸ್‌ ತಾಣಗಳಲ್ಲಿ ದತ್ತೂರಿ ಹಣ್ಣು, ಬೀಜ ಮಾರಾಟಕ್ಕೆ ಕಡಿವಾಣ! ಇ-ಕಾಮರ್ಸ್‌ ತಾಣಗಳಲ್ಲಿ ದತ್ತೂರಿ ಹಣ್ಣು, ಬೀಜ ಮಾರಾಟಕ್ಕೆ ಕಡಿವಾಣ!
ದಿನದ ಸುದ್ದಿ2 days ago

ಆನ್‌ಲೈನ್‌ನಲ್ಲಿ ಮಾರಾಟವಾಗ್ತಿತ್ತು ‘ವಿಷದ ಹಣ್ಣು’! ಇ-ಕಾಮರ್ಸ್‌ ದೈತ್ಯರಿಗೆ ನೋಟಿಸ್‌

ಇ-ಕಾಮರ್ಸ್‌ ತಾಣಗಳಲ್ಲಿ ದತ್ತೂರಿ ಹಣ್ಣು, ಬೀಜ ಮಾರಾಟಕ್ಕೆ ಕಡಿವಾಣ! ಆನ್‌ಲೈನ್‌ನಲ್ಲಿ ‘ವಿಷದ ಹಣ್ಣು’ ಮಾರಾಟ ಅಮೆಜಾನ್‌, ಫ್ಲಿಪ್‌ಕಾರ್ಟ್‌, ಮಿನಿಟ್ಸ್‌ಗೆ ಸರ್ಕಾರದೊಂದ ನೋಟಿಸ್‌ ಈ ಹಣ್ಣು ಖರೀದಿಸಿದ್ರೆ ಅಪಾಯ,...

Trending