ದಿನದ ಸುದ್ದಿ
ಹರಿಹರ ನಗರಸಭೆ ಚುನಾವಣೆ ಫಲಿತಾಂಶ ಅತಂತ್ರ
ಸುದ್ದಿದಿನ,ದಾವಣಗೆರೆ: ಮೇ 31 ರಂದು ನಡೆದ ಮತ ಎಣಿಕೆ ನಂತರ ಹರಿಹರ ನಗರಸಭೆ ಸಾರ್ವತ್ರಿಕ ಚುನಾವಣೆಯಲ್ಲಿ ಅತಂತ್ರ ಫಲಿತಾಂಶ ಬಂದಿದೆ.
ಮ್ಯಾಜಿಕ್ ನಂಬರ್ 16 ಪಡೆಯುವಲ್ಲಿ ಯಾವ ಪಕ್ಷವೂ ಸಫಲವಾಗಿಲ್ಲ. 14 ಸ್ಥಾನಗಳನ್ನು ಗೆಲ್ಲುವ ಮೂಲಕ ಜೆ.ಡಿ.ಎಸ್. ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, 10 ಸ್ಥಾನ ಗೆಲ್ಲುವ ಮೂಲಕ ಕಾಂಗ್ರೆಸ್ ಎರಡನೇ ಸ್ಥಾನ ಕಾಯ್ದುಕೊಂಡಿದೆ. ಭಾರತೀಯ ಜನತಾ ಪಕ್ಷ 5 ಸ್ಥಾನ ಪಡೆದರೆ ಈ ಮಧ್ಯೆ ಪಕ್ಷೇತರರಿಬ್ಬರು ಜಯಭೇರಿ ಬಾರಿಸಿದ್ದಾರೆ.
31 ವಾರ್ಡ್ಗಳಿಗೆ ಮೇ 29 ರಂದು ಮತದಾನ ನಡೆದಿದ್ದು, ಮೇ 31 ರಂದು ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯ ಆರಂಭವಾಗಿ, 11 ಗಂಟೆ ಸುಮಾರಿಗೆ ಪೂರ್ಣ ಚಿತ್ರಣ ಹೊರಬಂದಿತ್ತು. ಹರಿಹರ ನಗರಸಭೆಯ 1ನೇ ವಾರ್ಡ್ ಹರ್ಲಾಪುರದಿಂದ ಜನತದಾದಳ (ಜಾತ್ಯತೀತ) ಪಕ್ಷದ ಜಂಬಣ್ಣ 807 ಮತಗಳಿಂದ ಜಯ ಸಾಧಿಸಿದ್ದಾರೆ.
ಇವರ ಪ್ರತಿಸ್ಪರ್ಧಿ ಬಿಜೆಪಿ ಪಕ್ಷದ ಎಂ.ಮಂಜುನಾಥ, 2ನೇ ವಾರ್ಡ್ ಎ.ಕೆ ಕಾಲೋನಿಯಿಂದ ಜನತಾದಳ(ಜಾ) ಪಕ್ಷದ ಪಿ.ಎನ್ ವಿರುಪಾಕ್ಷ 533 ಮತಗಳನ್ನು ಪಡೆದು ಜಯಶಾಲಿಯಾಗಿದ್ದು, ಇವರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಎಸ್.ಎಸ್. ಆನಂದಕುಮಾರ್, 3ನೇ ವಾರ್ಡ್ ಆಶ್ರಯ ಕಾಲೋನಿಯಿಂದ ಬಿಜೆಪಿ ಪಕ್ಷದ ಆಟೋ ಹನುಮಂತಪ್ಪ 364 ಮತಗಳಿಂದ ಜಯಶಾಲಿಯಾಗಿದ್ದು, ಇವರ ಸಮೀಪ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಹನುಮಂತಪ್ಪ.
4ನೇ ವಾರ್ಡ್ ವಿಜಯನಗರ ಬಡಾವಣೆಯಿಂದ ಬಿಜೆಪಿ ಪಕ್ಷದ ಎನ್.ರಂಜಿನಿಕಾಂತ್ 616 ಮತ ಪಡೆಯುವುದರ ಮೂಲಕ ವಿಜಯಿಯಾಗಿದ್ದು, ಜನತಾದಳ(ಜಾ) ಪಕ್ಷದ ಸಮೀಪದ ಪ್ರತಿಸ್ಪರ್ಧಿ ಸದಾಶಿವ, 5ನೇ ವಾರ್ಡ್ ಕೆ.ಆರ್.ನಗರದಿಂದ 554 ಮತಗಳಿಂದ ಕಾಂಗ್ರೆಸ್ ಪಕ್ಷದಿಂದ ನಾಗರತ್ನಪ್ಪ ದೀಪ ಜಯಶೀಲರಾಗಿದ್ದು ಅವರ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಡಿ.ವೈ ಇಂದಿರಾ ಮಂಜುನಾಥ 6ನೇ ವಾರ್ಡ್ ಮಹಾಲಿಂಗಪ್ಪ ಬಡಾವಣೆಯಿಂದ 426 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಪಕ್ಷದ ಸೈಯದ್ ಅಬ್ದುಲ್ ಅಲೀಂ ಜಯಶಾಲಿಯಾಗಿದ್ದಾರೆ. ಇವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿ ಯ ಕೀರ್ತಿ ಕುಮಾರ್ ಹೆಚ್.ಸಿ ಆಗಿದ್ದರು.
7ನೇ ವಾರ್ಡ್ ಗಾಂಧಿನಗರದಿಂದ ಪೆಕ್ಷೇತರ ಅಭ್ಯರ್ಥಿ ಇಬ್ರಾಹಿಂ 869 ಮತಗಳನ್ನು ಪಡೆಯುವ ಮೂಲಕ ಜಯ ಪಡೆದಿದ್ದಾರೆ. ಇವರ ಸಮೀಪದ ಅಭ್ಯರ್ಥಿ ಕಾಂಗ್ರೆಸ್ ಪಕ್ಷದ ಬಿ.ಕೆ.ಸೈಯದ್ ಬಾಷಾ. 8ನೇ ವಾರ್ಡ್ ತೆಗ್ಗಿನಕೇರಿಯಿಂದ ಬಿಜೆಪಿ ಯ ಕೆ.ಜಿ.ಸಿದ್ದೇಶ್ 1221 ಮತಗಳನ್ನು ಪಡೆಯುವ ಮೂಲಕ ಜಯ ಸಾಧಿಸಿದ್ದಾರೆ. ಇವರ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ) ಪಕ್ಷದ ಶೇಖರ ಗೌಡ ಆಗಿದ್ದರು.
9ನೇ ವಾರ್ಡ್ ಭರಂಪುರದಿಂದ ಜನತಾದಳ(ಜಾ) ಪಕ್ಷದ ಮಹಿಳಾ ಅಭ್ಯರ್ಥಿ ನಿಂಬಕ್ಕ ಚಂಬಾಪುರ 1148 ಮತಗಳನ್ನು ಪಡೆದು ಜಯ ಸಾಧಿಸಿದ್ದು, ಇವರ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ನ ಅಶ್ವಿನಿ ಗುತ್ಯಪ್ಪ ಆಗಿದ್ದರು. 10ನೇ ವಾರ್ಡ್ ಭಾರತ್ ಮಿಲ್ ಕಾಂಪೌಂಡ್ನಿಂದ ಜನತಾದಳ(ಜಾ) ಪಕ್ಷದಿಂದ ಎಂ.ಆರ್.ಮುಜಾಮಿಲ್ 626 ಮತಗಳನ್ನು ಪಡೆಯುವ ಮೂಲಕ ಜಯಶಾಲಿಯಾಗಿದ್ದು ಇವರ ಸಮೀಪದ ಪ್ರತಿಸ್ಫರ್ಧಿ ಬಿಜೆಪಿ ಮಾರುತಿ ಬಿ ಆಗಿದ್ದರು.
11 ನೇ ವಾರ್ಡ್ ಟಿಪ್ಪುನಗರದಿಂದ ಕಾಂಗ್ರೆಸ್ ಪಕ್ಷದ ಮಹಿಳಾ ಅಭ್ಯರ್ಥಿ ಸುಮಿತ್ರ ಕೆ.ಮರಿದೇವಪ್ಪ 943 ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿದ್ದು ಇವರ ಸಮೀಪದ ಪ್ರತಿಸ್ಪರ್ಧಿ ಜನತಾ ದಳ ಪಕ್ಷದ ಹೆಚ್.ಮಂಜುಳ. 12 ನೇ ವಾರ್ಡ್ ಅಮರಾವತಿಯಿಂದ ಬಿಜೆಪಿ ಪಕ್ಷದಿಂದ ಬಿ.ಎಂ ವಿಜಯಕುಮಾರ್ 669 ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿದ್ದು ಇವರ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ) ಪಕ್ಷದ ಕೆ.ಹೆಚ್.ಯೋಗೇಶಪ್ಪ ಆಗಿದ್ದರು.
13ನೇ ವಾರ್ಡ್ ಜೈಭೀಮನಗರ ಜನತಾದಳ(ಜಾ) ಪಕ್ಷದ ಆರ್.ದಿನೇಶ್ ಬಾಬು 673 ಮತಗಳಿಂದ ಜಯಶಾಲಿಯಾಗಿದ್ದು ಕಾಂಗ್ರೆಸ್ ಪಕ್ಷದ ರಾಘವೇಂದ್ರ ಅಶೋಕ್ ಓಲೇಕಾರ್ ಇವರು ಸಮೀಪದ ಪ್ರತಿಸ್ಪಧಿಯಾಗಿದ್ದರು. 14 ನೇ ವಾರ್ಡ್ ಕಾಳಿದಾಸನಗರ ಕಾಂಗ್ರೆಸ್ ಪಕ್ಷದಿಂದ ಮೆಹಬೂಬ್ ಬಾಷಾ ಆರ್ 533 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಸೈಯದ್ ಏಜಾಜ್ ವಿರುದ್ದ ಜಯ ಸಾಧಿಸಿದ್ದಾರೆ.
15 ನೇ ವಾರ್ಡ್ ಬಹಾರ್ ಮಖಾನ್ನಿಂದ ಜನತಾದಳ(ಜಾ) ಪಕ್ಷದ ಮಹಿಳಾ ಅಭ್ಯರ್ಥಿ ರೇಷ್ಮಾ ಬಾನು 610 ಮತಗಳನ್ನು ಪಡೆಯವ ಮೂಲಕ ಇವರ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಲತಾಶ್ರೀ ವೀರಾಚಾರ ವಿರುದ್ದ ಜಯ ಗಳಿಸಿದ್ದಾರೆ. 16 ನೇ ವಾರ್ಡಿನಿಂದ ಕಾಂಗ್ರೆಸ್ ಪಕ್ಷದ ಮಹಿಳಾ ಅಭ್ಯರ್ಥಿ ಫಕೀರಮ್ಮ 829 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಜನತಾ ದಳದ ಬಿ.ಐ ಮಮತಾ ಮುಂದೆ ಜಯ ಸಾಧಿಸಿದ್ದಾರೆ.
17ನೇ ವಾರ್ಡ್ ಹೊಸಪೇಟೆ ಬೀದಿಯಿಂದ ಜನತಾದಳ(ಜಾ)ದ ಲಕ್ಷ್ಮೀ ಮೋಹನ್ ದುರುಗೋಜಿ ಇವರು 741 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿ ಸ್ಪರ್ಧಿ ಕಾಂಗ್ರೆಸ್ನ ಸುನಂದ ಪಕ್ಕೀರಸಾ ಭೂತೆ ರ ವಿರುದ್ದ ಜಯಗಳಿಸಿದ್ದಾರೆ. 18 ನೇ ವಾರ್ಡ್ ಇಮಾಂ ಮೊಹಲ್ಲಾದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಶಂಕರ್ ಖಟಾವ್ಕರ್ 825 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ)ದ ಹೆಚ್.ಅಬ್ದುಲ್ ರೆಹಮಾನ್ ಖಾನ್ ರ ವಿರುದ್ದ ಜಯ ಸಾಧಿಸಿದ್ದಾರೆ.
19ನೇ ವಾರ್ಡ್ ಹಳ್ಳದಕೇರಿಯಿಂದ ಜನತಾದಳ(ಜಾ) ಪಕ್ಷದ ನೂರ್ಸಭಾ 834 ಮತಗಳನ್ನು ಪಡೆಯುವ ಮೂಲಕ ಬಿಜೆಪಿ ಪಕ್ಷದ ಆಶಾ ರವೀಂದ್ರ ವಿರುದ್ದ ಗೆಲುವು ಪಡೆದಿದ್ದಾರೆ. 20 ನೇ ವಾರ್ಡ್ ಕುಂಬಾರ ಓಣಿಯಿಂದ ಜನತಾದಳ(ಜಾ)(ಜಾ) ರತ್ನ ಡಿ.ಯು 779 ಮತಗಳನ್ನು ಪಡೆಯುವ ಮೂಲಕ ಕಾಂಗ್ರೆಸ್ ಅಭ್ಯರ್ಥಿ ಬಿ ಸುಜಾತ ಇವರ ವಿರುದ್ದ ಜಯಶಾಲಿಯಾಗಿದ್ದಾರೆ.
21ನೇ ವಾರ್ಡ್ ಜೆಸಿಆರ್ ಬಡಾವಣೆ-1 ರಿಂದ ಬಿಜೆಪಿಯ ನೀತಾ ಇವರು 663 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ಶಹಜಾದ್ ಎಸ್.ಕೆ ಇವರ ವಿರುದ್ದ ಗೆಲುವು ಸಾಧಿಸಿದ್ದಾರೆ. 22ನೇ ವಾರ್ಡ್ ಜೆಸಿಆರ್ ಬಡಾವಣೆ-2 ರಿಂದ ಜನತಾದಳ(ಜಾ)(ಜಾ)ದ ಜಮಾಲುದ್ದೀನ್ 660 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ನ ಹುಲಿಗೆಪ್ಪ ಸಿ ಎನ್ ಇವರ ವಿರುದ್ದ ಗೆಲುವು ಸಾಧಿಸಿದ್ದಾರೆ.
23ನೇ ವಾರ್ಡ್ ರಾಜಾರಾಂ ಕಾಲೋನಿಯಿಂದ ಕಾಂಗ್ರೆಸ್ ಪಕ್ಷದ ಎಂ.ಬಾಬುಲಾಲ್ 962 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಜನತಾದಳ(ಜಾ)(ಜಾ)ದ ಹಾಜೀ ಅಲಿ ಖಾನ್ ವಿರುದ್ದ ಜಯ ಗಳಿಸಿದ್ದಾರೆ. 24 ವಾರ್ಡ್ ಬೆಂಕಿನಗರದಿಂದ ಕಾಂಗ್ರೆಸ್ ಪಕ್ಷದ ಶಾಹಿನಾ ಬಾನು 554 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಸೈಯದಾ ಅನಿಸಾ ಇವರು ವಿರುದ್ದ ಗೆಲುವು ಸಾಧಿಸಿದ್ದಾರೆ.
25 ನೇ ವಾರ್ಡ್ ಪ್ರಶಾಂತ್ ನಗರದಿಂದ ಜನತಾದಳ(ಜಾ)(ಜಾ)ದ ದಾದಾ ಖಲಂದರ್ ಇವರು 776 ಮತಗಳನ್ನು ಪಡೆದು ತಮ್ಮ ಪ್ರತಿಸ್ಪರ್ಧಿ ಬಿಜೆಪಿಯ ಸಂತೋಷ್ಕುಮಾರ್ ಎಂ ವಿರುದ್ದ ಗೆಲುವು ಸಾಧಿಸಿದ್ದಾರೆ. 26 ನೇ ವಾರ್ಡ್ ಜೆಸಿಆರ್ ಬಡಾವಣೆ -3 ರಿಂದ ಜನತಾದಳ(ಜಾ)(ಜಾ)ದ ವಾಮನಮೂರ್ತಿ ಎ ಇವರು 506 ಮತಗಳನ್ನು ಪಡೆಯುವ ಮೂಲಕ ವಿಜಯಶಾಲಿಯಾಗಿದ್ದು ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ನ ಅಜೀಜ್ ಮೇಸ್ತ್ರಿಯವರನ್ನು ಸೋಲಿಸಿದ್ದಾರೆ.
27ನೇ ವಾರ್ಡ್ ಜೆಸಿಆರ್ ಬಡಾವಣೆ-4 ರಿಂದ ಜನತಾದಳ(ಜಾ)(ಜಾ)ದ ಉಷಾ ಮಂಜುನಾಥ್ 544 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ರೋಹಿಣಿ ರಾಜು ಐರಣಿ ವಿರುದ್ದ ಜಯ ಗಳಿಸಿದ್ದಾರೆ. 28 ವಾರ್ಡ್ ಸುಣಗಾರ ಬೀದಿಯಿಂದ ಪಕ್ಷೇತರ ಅಭ್ಯರ್ಥಿ ಪಾರ್ವತಮ್ಮ ಐರಣಿ 582 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಕಾಂಗ್ರೆಸ್ ಪಕ್ಷದ ನಾಗರತ್ನಮ್ಮರ ವಿರುದ್ದ ಗೆಲುವು ಸಾಧಿಸಿದ್ದಾರೆ.
29ನೇ ವಾರ್ಡ್ ಗಂಗಾನಗರದಿಂದ ಕಾಂಗ್ರೆಸ್ ಪಕ್ಷದ ಎಸ್.ಎಂ.ವಸಂತ್ 754 ಮತಗಳನ್ನು ಪಡೆದು ತಮ್ಮ ಸಮೀಪದ ಪ್ರತಿಸ್ಪರ್ಧಿ ಬಿಜೆಪಿಯ ಮೋಹನ್ ಹೆಚ್. ವಿರುದ್ದ ಜಯ ಗಳಿಸಿದ್ದಾರೆ. 30 ವಾರ್ಡ್ ವಿದ್ಯಾನಗರದಿಂದ ಬಿಜೆಪಿ ಪಕ್ಷದ ಮಹಿಳಾ ಅಭ್ಯರ್ಥಿ ಅಶ್ವಿನಿ ಕೃಷ್ಣ ಇವರು 530 ಮತಗಳನ್ನು ಪಡೆಯುವ ಮೂಲಕ ತಮ್ಮ ಪ್ರತಿಸ್ಪರ್ಧಿ ಪಕ್ಷೇತರ ಅಭ್ಯರ್ಥಿ ಗೀತಾ ವಿಶ್ವನಾಥ ಭೂತೆ ವಿರುದ್ದ ಗೆಲುವು ಸಾಧಿಸಿದ್ದಾರೆ. ಹಾಗೂ 31 ನೇ ವಾರ್ಡ್ ಇಂದಿರಾನಗರದಿಂದ ಜನತಾದಳ(ಜಾ)ಕವಿತಾ ಮಾರುತಿ ಬೇಡರ್ 807 ಮತಗಳನ್ನು ಪಡೆಯುವ ಮೂಲಕ ತಮ್ಮ ಸಮೀಪದ ಪ್ರತಿಸ್ಪರ್ಧಿ ಕಾಂಗ್ರೆಸ್ನ ಮಾಧವಿ ಉಮೇಶ್ ತುಂಬಿದಮನೆ ಇವರ ವಿರುದ್ದ ಗೆಲುವು ಸಾಧಿಸಿದ್ದಾರೆ.
ಅಂಚೆಮತಗಳು : 03 ಅಂಚೆ ಮತಗಳನ್ನು ಸ್ವೀಕರಿಸಲಾಗಿದ್ದು ಇವುಗಳಲ್ಲಿ 02 ಮಾತ್ರ ಕ್ರಮಬದ್ದವಾಗಿವೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು.
ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ ಸಭಾಂಗಣದಲ್ಲಿ ಎಸ್.ಎಸ್.ಎಲ್.ಸಿ ಫಲಿತಾಂಶ ಸುಧಾರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರದಲ್ಲಿ ಜಿಲ್ಲಾ ಪ್ರೌಢಶಾಲೆಯ ಮುಖ್ಯ ಶಿಕ್ಷಕರು ಮತ್ತು ಉಪ ಪ್ರಾಂಶುಪಾಲರನ್ನು ಉದ್ದೇಶಿಸಿ ಮಾತನಾಡಿದರು.
ಪ್ರಸ್ತುತ ಎಸ್.ಎಸ್.ಎಲ್.ಸಿ ಎರಡು ಪೂರ್ವಭಾವಿ ಪರೀಕ್ಷೆಗಳು ನಡೆದಿದ್ದು ಶೇ. 18 ಕ್ಕಿಂತ ಕಡಿಮೆ ಫಲಿತಾಂಶ ಪಡೆದ ಶಾಲೆಗಳಿಗೆ ನೋಟಿಸ್ ನೀಡಿ ವಿವರಣೆಯನ್ನು ಪಡೆಯಬೇಕು, ಎಸ್.ಎಸ್.ಎಲ್.ಸಿ ಗೆ ಪ್ರವೇಶ ಪಡೆದು ಪರೀಕ್ಷೆಗೆ ಗೈರಾಗಿರುವ ಮಕ್ಕಳ ಬಗ್ಗೆ ಮಾಹಿತಿಯನ್ನು ಕಲೆಹಾಕಿ ಮನೆಮನೆ ಭೇಟಿ, ಅವರನ್ನು ಮತ್ತೇ ಶಾಲೆಗೆ ಕರೆತರಲು ಕ್ರಮವಹಿಸಬೇಕು ಎಂದು ತಿಳಿಸಿದರು.
ಡಿಡಿಪಿಐ ಕೊಟ್ರೇಶ್ ಅವರು ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 21,863 ವಿದ್ಯಾರ್ಥಿಗಳು ಎಸ್.ಎಸ್.ಎಲ್.ಸಿ ಪ್ರವೇಶ ಪಡೆದಿದ್ದಾರೆ, ವಿವಿಧ ಕಾರಣಗಳಿಂದ 378 ವಿದ್ಯಾರ್ಥಿಗಳು ಪರೀಕ್ಷೆಗೆ ನೋಂದಣಿ ಮಾಡಿಕೊಂಡಿಲ್ಲ. ಅಂತಿಮವಾಗಿ 21,400 ವಿದ್ಯಾರ್ಥಿಗಳು ಪರೀಕ್ಷೆಗೆ ದಾಖಲಾಗಿದ್ದಾರೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಗೆ 20,129 ವಿದ್ಯಾರ್ಥಿಗಳು ಹಾಜರಾಗಿದ್ದು, 1,353 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು.
ಕಡಿಮೆ ಹಾಜರಾತಿ (75% ಕ್ಕಿಂತ ಕಡಿಮೆ) ಮತ್ತು ಪರೀಕ್ಷೆಯ ಬಗ್ಗೆ ಆಸಕ್ತಿ ಇಲ್ಲದಿರುವುದು ಗೈರುಹಾಜರಿಗೆ ಮುಖ್ಯ ಕಾರಣಗಳಾಗಿವೆ. ಮೊದಲ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಜಿಲ್ಲೆಯ ಒಟ್ಟು ಫಲಿತಾಂಶ 49% ಬಂದಿದೆ. ಎರಡನೇ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಫಲಿತಾಂಶ 68% ಕ್ಕೆ ಏರಿಕೆಯಾಗಿದೆ, ಆದರೆ 1,460 ವಿದ್ಯಾರ್ಥಿಗಳು ಗೈರುಹಾಜರಾಗಿದ್ದರು. ಗೈರುಹಾಜರಾದ ವಿದ್ಯಾರ್ಥಿಗಳ ಮನೆಗೆ ಭೇಟಿ ನೀಡಿ, ಪೋಷಕರ ಮನವೊಲಿಸಿ ಅವರನ್ನು ಶಾಲೆಗೆ ಕರೆತರುವಂತೆ ಕ್ರಮವಹಿಸಲಾಗಿದೆ, ವಿದ್ಯಾರ್ಥಿಗಳ ಸಂದೇಹಗಳನ್ನು ಪರಿಹರಿಸುವುದು ಮತ್ತು ಪರೀಕ್ಷಾ ವಿಧಾನಗಳ ಬಗ್ಗೆ ತಿಳಿಸಿಕೊಡುವುದು.
ಮಂಡಳಿಯಿAದ ನೀಡಲಾದ 4 ಮಾದರಿ ಪ್ರಶ್ನೆ ಪತ್ರಿಕೆಗಳು ಮತ್ತು 2 ಪೂರ್ವಸಿದ್ಧತಾ ಪರೀಕ್ಷಾ ಪತ್ರಿಕೆಗಳು ಸೇರಿದಂತೆ ಒಟ್ಟು 6 ಪ್ರಶ್ನೆ ಪತ್ರಿಕೆಗಳನ್ನು ಪದೇ ಪದೇ ಬಿಡಿಸುವ ಮೂಲಕ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ತುಂಬುವುದು. ಅನುತ್ತೀರ್ಣರಾಗುವ ಸಾಧ್ಯತೆ ಇರುವ ಸುಮಾರು 1,400 ವಿದ್ಯಾರ್ಥಿಗಳ ಮೇಲೆ ಹೆಚ್ಚಿನ ಗಮನ ಹರಿಸಿ ಅವರು ತೇರ್ಗಡೆಯಾಗುವಂತೆ ನೋಡಿಕೊಳ್ಳಲು ಕ್ರಮವಹಿಸಲಾಗಿದೆ ಎಂದು ಸಭೆಗೆ ತಿಳಿಸಿದರು.
ಶಿಕ್ಷಕರು ಅತಿ ಮುಖ್ಯವಾಗಿ ಗೈರುಹಾಜರಾಗಿರೋ ಮಕ್ಕಳನ್ನ ಶಾಲೆಗೆ ಕರೆತರಬೇಕು, ಮನೆ ಮನೆ ಭೇಟಿ ಮಾಡಿ ಪಾಲಕ ಪೋಷಕರಿಗೆ ಮನವೊಲಿಸಿ, ಶಿಕ್ಷಣ ಇಲಾಖೆ ನೀಡಿರುವ ಬ್ಲೂಪ್ರಿಂಟ್ ಪ್ರಕಾರ ಮಕ್ಕಳನ್ನು ಸಿದ್ದಗೊಳಿಸಿ, ಪ್ರಶ್ನೆ ಪತ್ರಿಕೆಗಳನ್ನ ಪದೇ ಪದೇ ಬಿಡಿಸೋದರ ಮೂಲಕ ಮಕ್ಕಳಲ್ಲಿ ಒಂದು ಆತ್ಮವಿಶ್ವಾಸ ತುಂಬಬೇಕು , ಗೈರಾಗಿರುವ ವಿದ್ಯಾರ್ಥಿಗಳ ಸಂಖ್ಯೆ 1,400 ಇದೆ, ಆ ವಿದ್ಯಾರ್ಥಿಗಳು ಉತ್ತೀರ್ಣರಾದರೆ ಒಂದು ಉತ್ತಮ ಫಲಿತಾಂಶವನ್ನ ನಿರೀಕ್ಷೆ ಮಾಡಬಹುದು, ಮಕ್ಕಳಿಗೆ ಪಾಠದ ಜೊತೆಗೆ ಆಟಕ್ಕೂ ಅವಕಾಶ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಸಿಇಒ ಗಿತ್ತೇ ಮಾಧವ ವಿಠಲ್ ರಾವ್, ಡಯಟ್ ಪ್ರಾಂಶುಪಾಲರಾದ ಗೀತಾ, ಜಿಲ್ಲೆಯ ಎಲ್ಲಾ ಕ್ಷೇತ್ರಶಿಕ್ಷಣಾಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ.
ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ತಾಂಡಾ ಅಭಿವೃದ್ದಿ ನಿಗಮ ನಿಯಮಿತ, ಸಂತ ಸೇವಾಲಾಲ್ ಕ್ಷೇತ್ರ ಅಭಿವೃದ್ದಿ ಮತ್ತು ನಿರ್ವಾಹಣಾ ಪ್ರತಿಷ್ಠಾನ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಭಾಯ್ಗಡ್, ಸೂರಗೊಂಡನಕೊಪ್ಪ ಇವರ ಸಹಯೋಗದಲ್ಲಿ ಜರುಗಲಿರುವ ಕಾರ್ಯಕ್ರಮವನ್ನು ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಉದ್ಘಾಟಿಸುವರು.ಹೊನ್ನಾಳಿ ಕ್ಷೇತ್ರದ ಶಾಸಕರಾದ ಡಿ.ಜಿ.ಶಾಂತನಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ಗಣಿ ಮತ್ತು ಭೂವಿಜ್ಞಾನ, ತೋಟಗಾರಿಕೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್ ಸಂತಸೇವಾಲಾಲ್ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವರು. ಸಮಾಜ ಕಲ್ಯಾಣ ಸಚಿವರಾದ ಡಾ.ಹೆಚ್.ಸಿ.ಮಹಾದೇವಪ್ಪ ಇವರು ವಲಸೆ ಮಕ್ಕಳ ವಸತಿ ಶಾಲೆಯ ಶಂಕುಸ್ಥಾಪನೆಯನ್ನು ಉದ್ಘಾಟಿಸುವರು.
ಕೇಂದ್ರ ಬೃಹತ್ ಕೈಗಾರಿಕಾ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ, ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಜಲಶಕ್ತಿ ಹಾಗೂ ರೈಲ್ವೆ ಖಾತೆಗಳ ರಾಜ್ಯ ಸಚಿವರಾದ ವಿ.ಸೋಮಣ್ಣ ಘನ ಉಪಸ್ಥಿತರಾಗಿರುವರು.
ಮುಖ್ಯ ಅತಿಥಿಗಳಾಗಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಗೃಹಮಂತ್ರಿಗಳಾದ ಡಾ.ಜಿ.ಪರಮೇಶ್ವರ, ಲೋಕೋಪಯೋಗಿ ಸಚಿವರಾದ ಸತೀಶ್ ಜಾರಕಿಹೊಳಿ, ಕಂದಾಯ ಸಚಿವರಾದ ಕೃಷ್ಣ ಭೈರೇಗೌಡ, ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ, ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪ, ವಿರೋಧಪಕ್ಷದ ನಾಯಕರಾದ ಆರ್.ಅಶೋಕ, ಮತ್ತು ಛಲವಾದಿ ನಾರಾಯಣಸ್ವಾಮಿ, ಉಚ್ಚ ನ್ಯಾಯಾಲಯದ ನ್ಯಾಯಾಧೀಶರಾದ ವೆಂಕಟೇಶ್ ನಾಯ್ಕ.ಟಿ, ವಿಧಾನಸಭೆಯ ಉಪಸಭಾಪತಿ ಹಾಗೂ ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿಯ ಅಧ್ಯಕ್ಷರಾದ ರುದ್ರಪ್ಪ ಮಾನಪ್ಪ ಲಮಾಣಿ, ಮಹಾರಾಷ್ಟ್ರ ಸರ್ಕಾರದ ಮಣ್ಣು ಮತ್ತು ಜಲ ಸಂರಕ್ಷಣಾ ಸಚಿವರಾದ ಸಂಜಯ್ ಡಿ.ರಾಥೋಡ್, ಮಹಾರಾಷ್ಟ್ರ ಸರ್ಕಾರದ ಪ್ರವಾಸೋದ್ಯಮ, ಲೋಕೋಪಯೋಗಿ, ಕೈಗಾರಿಕೆ ಉನ್ನತ ಹಾಗೂ ತಾಂತ್ರಿಕ ಶಿಕ್ಷಣ ಸಚಿವರಾದ ಇಂದ್ರನಿಲ್ ಮನೋಹರ್ ನಾಯ್ಕ್, ತೆಲಂಗಾಣ ರಾಜ್ಯದ ಮಹಬೂಬಬಾದ್ ಕ್ಷೇತ್ರದ ಸಂಸದರಾದ ಬಲರಾಮ ನಾಯ್ಕ, ಭಾಗವಹಿಸುವರು.
ಸಂಸದರಾದ ಡಾ.ಪ್ರಭಾ ಮಲ್ಲಿಕಾರ್ಜುನ್, ಶಾಸಕರುಗಳಾದ ಕೆ.ಎಸ್.ಬಸವಂತಪ್ಪ, ಬಿ.ದೇವೇಂದ್ರಪ್ಪ, ಬಸವರಾಜು ವಿ.ಶಿವಗಂಗಾ, ಬಿ.ಪಿ ಹರೀಶ್, ಜೆ.ಡಿ.ಎಸ್ ಶಾಸಕಾಂಗ ಪಕ್ಷದ ಉಪನಾಯಕರು ಹಾಗೂ ಶಾಸಕರಾದ ಶಾರದಾ ಪೂರ್ಯಾನಾಯ್ಕ, ಕರ್ನಾಟಕ ಮರಾಠ ಸಮುದಾಯಗಳ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಜಿ.ಹೆಚ್ ಮರಿಯೋಜಿರಾವ್, ಕರ್ನಾಟಕ ಜೀವ ವೈವಿಧ್ಯ ಮಂಡಳಿಯ ಅಧ್ಯಕ್ಷರಾದ ವಡ್ನಾಳ್ ಜಗದೀಶ್, ಬಯಲುಸೀಮೆ ಪ್ರದ್ರೇಶಾಭಿವೃದ್ದಿ ಮಂಡಳಿಯ ಹೆಚ್.ಬಿ.ಮಂಜಪ್ಪ, ಬ್ರಾಹ್ಮಣ ಅಭಿವೃದ್ದಿ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ, ಕರ್ನಾಟಕ ತಾಂಡಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಎನ್. ಜಯದೇವನಾಯ್ಕ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ಎಲ್.ಭೋಜೇಗೌಡ, ಡಿ.ಎಸ್.ಅರುಣ್, ಕೆ.ಅಬ್ದುಲ್ ಜಬ್ಬಾರ್, ಡಿ.ಟಿ.ಶ್ರೀನಿವಾಸ್, ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಾ.ಧನಂಜಯ್ ಸರ್ಜಿ, ಕರ್ನಾಟಕ ಕೌಶಲ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರಾದ ಕಾಂತಾನಾಯಕ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರಾದ ಶಾಮನೂರು.ಟಿ.ಬಸವರಾಜ್,ಲೋಕಸೇವಾ ಆಯೋಗದ ಸದಸ್ಯರಾದ ಭೋಜ್ಯಾನಾಯ್ಕ, ಅಚ್ಚುಕಟ್ಟು ಪ್ರದೇಶಾಭಿವೃದ್ದಿ ಪ್ರಾಧಿಕಾರ ಕೃಷ್ಣಾ ಮೇಲ್ದಂಡೆ ಯೋಜನೆಯ ಅಧ್ಯಕ್ಷರಾದ ಬಾಬು ಹೊನ್ನನಾಯಕ್, ಬಂಜಾರ ಸಂಸ್ಕೃತಿ ಹಾಗೂ ಭಾಷಾ ಅಕಾಡೆಮಿಯ ಅಧ್ಯಕ್ಷರಾದ ಡಾ. ಮೋತಿಲಾಲ್ ಚವ್ಹಾಣ್, ವಿಧಾನಸಭಾ ಕ್ಷೇತ್ರದ ಶಾಸಕರಾದ ಪ್ರಭು ಬಿ ಚವ್ಹಾಣ್, ಡಾ.ಅವಿನಾಶ್ ಜಾಧವ್, ನೇಮಿರಾಜ್ ನಾಯ್ಕ್, ಕೃಷ್ಣನಾಯ್ಕ, ಡಾ.ಚಂದ್ರ ಲಮಾಣಿ, ಭಾಯ್ಗಡ್ ಉನ್ನತಮಟ್ಟದ ಸಲಹಾ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಪಿ.ಟಿ ಪರಮೇಶ್ವರ್ನಾಯ್ಕ್.
ಸಮಾಜ ಕಲ್ಯಾಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ರಂದೀಪ್.ಡಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆ, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ದಿ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಸಮಾಜ ಕಲ್ಯಾಣ ಇಲಾಖೆಯ ಆಯುಕ್ತರಾದ ಡಾ.ರಾಕೇಶ್ ಕುಮಾರ್.ಕೆ, ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ, ಜಿ.ಪಂ ಮುಖ್ಯಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ್ ವಿಠ್ಠಲ್ ರಾವ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶೇಖರ್.ಹೆಚ್ ತೆಕ್ಕಣ್ಣನವರ್, ಸಮಾಜ ಕಲ್ಯಾಣ ಇಲಾಖೆಯ ನೋಡೆಲ್ ಎಜೆನ್ಸಿ ಸಲಹೆಗಾರರಾದ ಡಾ.ಇ ವೆಂಕಯ್ಯ, ಕ.ತಾ.ಅ.ನಿ.ನಿ ವ್ಯವಸ್ಥಾಪಕ ನಿರ್ದೇಶಕರಾದ ಎನ್.ರಾಜು, ಸಂತ ಸೇವಾಲಾಲ್ ಜನ್ಮಸ್ಥಾನ ಮಹಾಮಠ ಸಮಿತಿ(ರಿ) ಪ್ರಧಾನ ಧರ್ಮದರ್ಶಿ ಬಿ. ಹೀರಾನಾಯ್ಕ, ಮಹಾಮಠ ನಿರ್ವಹಣಾ ಸಮಿತಿಯ ಅಧ್ಯಕ್ಷರಾದ ಹನುಮಂತನಾಯ್ಕ, ಸಮಿತಿಯ ಪ್ರಧಾನ ಕಾರ್ಯದರ್ಶಿ ಎನ್.ಅರುಣ್ ಕುಮಾರ್ ಭಾಗವಹಿಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ3 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ2 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ22 hours agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ21 hours agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

