ದಿನದ ಸುದ್ದಿ
ಮೋದಿ ಸರ್ಕಾರದ ಮುಂದಿರುವ ಸವಾಲುಗಳು…!
ಸ್ನೇಹಿತರೆ,
ಕೇಂದ್ರದಲ್ಲಿ ಬಿಜೆಪಿಗೆ ಅಭೂತಪೂರ್ವ ಗೆಲುವು ಸಿಕ್ಕಿದ್ದು ಆಯ್ತು ಮೋದಿ ಎರಡನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ್ದು ಆಯಿತು. ಆದರೆ ಈ ಸರ್ಕಾರದ ಮುಂದಿರುವ ಸವಾಲುಗಳು ಆದರೂ ಏನು ಅನುವ ಬಗ್ಗೆ ಒಂದು ಸರಿ ಗಮನ ಹರಿಸೋಣ. ಅಂದಹಾಗೆ ಈ ವಿಷಯವನ್ನು ಓದುವಾಗ ನಿಮ್ಮ ಮನಸ್ಸು ಒಳಗಿನ ರಾಗದ್ವೇಷ ಭಕ್ತಿಭಾವಗಳನ್ನು ಒಂದು ಸ್ವಲ್ಪ ಪಕ್ಕಕ್ಕಿಟ್ಟು ಪ್ರಾಕ್ಟಿಕಲ್ ಆಗಿ ಯೋಚನೆ ಮಾಡುತ್ತ ಓದಿರಿ ಹಾಗು ಮಾಡೋದಕ್ಕೆ ಸಾಧ್ಯ ಆಗದೇ ಇದ್ದರೆ ದಯವಿಟ್ಟು ಈ ವಿಷಯವನ್ನು ಓದುವುದಕ್ಕೆ ಹೋಗಬೇಡಿ.
ಮೋದಿ ಸರ್ಕಾರ ಪೂರ್ಣ ಬಹುಮತದಿಂದ ಅಧಿಕಾರಕ್ಕೇರಿದ ನಂತರ ಜನರ ನಿರೀಕ್ಷೆಗಳು ಹೆಚ್ಚಾಗಿವೆ ಭಾರತದಲ್ಲಿನ ಎಲ್ಲಾ ಸಮಸ್ಯೆಗಳನ್ನು ಮೋದಿ ನಿವಾರಿಸಿ ಬಿಡುತ್ತಾರೆ ಅನ್ನೋ ಆಸೆ ನಿರೀಕ್ಷೆ ಕೋಟಿ ಕೋಟಿ ಜನರ ಮನಸ್ಸಲ್ಲಿದೆ.
ರಾಮಮಂದಿರ ನಿರ್ಮಾಣ, ಆರ್ಟಿಕಲ್ ತ್ರೀ ಸೆವೆಂಟಿ, ಸಮಾನ ನಾಗರಿಕ ಸಂಹಿತೆ, ಹಿಂದೂ ರಾಷ್ಟ್ರದ ನಿರ್ಮಾಣ, ಇವತ್ತು ಭಾರತ ಸರ್ಕಾರದ ಮುಂದಿನ ಆದ್ಯತೆಗಳೇನು ಮೋದಿ ಸಚಿವ ಸಂಪುಟದ ಎದುರು ಸವಾಲುಗಳೇನು ಅನ್ನೋದಷ್ಟೇ ನಾವು ಗಮನಿಸಿದರೆ ಮೊಟ್ಟಮೊದಲನೆಯದಾಗಿ ಮತ್ತು ಭಯಾನಕವಾಗಿ ಈ ದೇಶವನ್ನು ಕಾಡುತ್ತಿರುವ ನಿರುದ್ಯೋಗ ಸಮಸ್ಯೆ!
ಮುಂದಿನ 20 20 ರ ಹೊತ್ತಿಗೆ ಭಾರತದಲ್ಲಿನ ನಿರುದ್ಯೋಗಿಗಳ ಸಂಖ್ಯೆ 44% ಏರುತದ್ದೆ, ಇದು ವಿದ್ಯಾವಂತ ನಿರುದ್ಯೋಗಿಗಳ ಕಥೆ ಇನ್ನು ಗ್ರಾಮೀಣ ಭಾಗದಿಂದ ವಲಸೆ ಬರುತ್ತಿರುವ ಕೃಷಿ ನಿರಾಶ್ರಿತರನ್ನು ಸೇರಿಸಿಲ್ಲ ಅದು ಲೆಕ್ಕಕ್ಕೆ ಸಿಗುವುದಿಲ್ಲ. ಸರ್ಕಾರದ ಮುಂದಿರುವ ಚಾಲೆಂಜ್ ಗಳು ಅಂದರೆ ಗ್ರಾಮೀಣ ವಲಸೆಯನ್ನು ತಡೆದು ಕೃಷಿ ಹಾಗೂ ಕೃಷಿ ಆಧಾರಿತ ಕೈಗಾರಿಕೆ ಗಳನ್ನು ಉತ್ತೇಜಿಸುವ ಮೂಲಕ ಗ್ರಾಮೀಣ ಪ್ರದೇಶಗಳಲ್ಲಿ ಉದ್ಯೋಗ ಅವಕಾಶಗಳನ್ನು ಸೃಷ್ಟಿಸುವುದು ಜೊತೆಗೆ ಭಾರತದಲ್ಲಿ ಹೆಚ್ಚುತ್ತಿರುವ ಹಣದುಬ್ಬರವನ್ನು ತಗ್ಗಿಸಿ ಜಿಡಿಪಿಯನ್ನು ಹೆಚ್ಚಿಸಬೇಕು. ಜವಾಬ್ದಾರಿ ಸರ್ಕಾರದ ಮೇಲಿದೆ ಡಾಲರ್ ಎದುರು ರೂಪಾಯಿ ಬೆಲೆ ಕುಸಿದು ಹೋಗುತ್ತಿರುವುದು ನಮಗೂ ತಡೆಯಬೇಕಿದೆ .
ಇವತ್ತಿನವರೆಗೆ ಸೂಕ್ತ ಕ್ರಮಗಳನ್ನು ಕೈಗೊಳ್ಳುವುದಕ್ಕೆ ಸಾಧ್ಯವಾಗಿಲ್ಲ ಆದರೆ ಈ ಕೂಡಲೇ ಸರಿಪಡಿಸಬೇಕಿದೆ. ಭಾರತ ಕೃಷಿ ಪ್ರಧಾನ ದೇಶ ಆದರೆ ದುರಂತ ಅಂದ್ರೆ ಇಲ್ಲಿ ಅನ್ನ ಕೊಡುವ ರೈತನಿಗೆ ಹೊಟ್ಟೆ ತುಂಬಾ ಊಟ ಸಿಗದ ಪರಿಸ್ಥಿತಿ. ಇದು ಬಿಜೆಪಿ ಸರ್ಕಾರದ ವಿಷಯಕ್ಕೆ ಬರೋದಾದ್ರೆ, ಶ್ರೀಮಂತರು ಹಾಗೂ ಉದ್ಯಮಿಗಳ ಸರ್ಕಾರ ಅನ್ನೋ ಆರೋಪವೂ ಇದೆ.
ಮುಂದಿನ ಐದು ವರ್ಷಗಳಲ್ಲಿ ಕೃಷಿ ಕ್ಷೇತ್ರದ ಚೇತರಿಕೆಗೆ ಆದ್ಯತೆಯನ್ನು ಕೊಡಬೇಕು ಅದು ವರ್ಷಕ್ಕೆ rs.6000 ಕೊಡುವುದರಿಂದ ಅಥವಾ ಸಾಲಮನ್ನಾ ಮಾಡುವ ಘೋಷಣೆಗಳಿಂದ ಕೃಷಿಕ್ಷೇತ್ರ ಸುಧಾರಣೆ ಆಗೋದಿಲ್ಲ. ರೈತರಿಗೆ ಕರೆಂಟು ನೀರು ಸೂಕ್ತ ಬೆಳೆ ಕುರಿತಾದ ಮಾಹಿತಿ ತಂತ್ರಜ್ಞಾನ ಕೊಡಬೇಕಾಗಿದೆ .
ಕೃಷಿ ಕ್ಷೇತ್ರದಲ್ಲಿ ಹೊಸ ಹೂಡಿಕೆಗಳು ಬೆಲೆ ನಿಯಂತ್ರಣ ಕೃಷಿ-ಆಧಾರಿತ ಉದ್ದಿಮೆಗಳು ಹೀಗೆ ಇನ್ನೇನೋ ಆಗಬೇಕಿದೆ. ಇವತ್ತು ಸೇನೆಯನ್ನು ಬಲಪಡಿಸಲು ಬೇಕಾಗಿರುವುದು ,ಭಾರತದಲ್ಲಿ ಶಸ್ತ್ರಾಸ್ತ್ರ ತಯಾರಿಕೆ ಘಟಕಗಳು ಸ್ಥಾಪನೆಗೊಳ್ಳಬೇಕಿದೆ. ಆ ಮೂಲಕ ಸ್ಥಳೀಯ ಯುವಕರಿಗೆ ಉದ್ಯೋಗ ಸಿಗುತ್ತೆ ಸಾಕಷ್ಟು ಚಿಕ್ಕ ಕೈಗಾರಿಕೆಗಳು ಹುಟ್ಟುವುದಕ್ಕೆ ಸಾಧ್ಯವಾಗುತ್ತೆ ನಿರುದ್ಯೋಗ ನಿವಾರಣೆಗೆ ಕೂಡ ಆಗುತ್ತೆ ಹಾಗೆ ಪೆಟ್ರೋಲಿಯಂ ಮೇಲಿನ ಅತಿಯಾದ ಆಮದು ಮಾಡುವುದನ್ನು ನಿಲ್ಲಿಸಿ
ಪರ್ಯಾಯ ಮಾರ್ಗ ಹುಡುಕ ಬೇಕಾದ ಅನಿವಾರ್ಯತೆ ಕೂಡ ಸರ್ಕಾರದ ಮೇಲಿದೆ.
ಆಂತರಿಕ ಭದ್ರತೆ ಹಾಗೂ ಬಾಹ್ಯ ಶಕ್ತಿಗಳ ನಿಯಂತ್ರಣ ಭಯೋತ್ಪಾದನೆ ನಿರ್ಮೂಲನೆ ಬಡತನದ ವಿರುದ್ಧ ಹೋರಾಟ ಕಡಿಮೆ ಏನು ?
ಅಮೇರಿಕಾ ಮೊನ್ನೆ ತಾನೇ ಭಾರತವನ್ನು ಅಭಿವೃದ್ಧಿ ರಾಷ್ಟ್ರಗಳ ಪಟ್ಟಿಯಿಂದ ತೆಗೆದುಹಾಕಿದೆ.
ಆದರಿಂದ ಭಾರತ ಅಮೇರಿಕಾದಿಂದ ಆಮದು ಮಾಡುತಿದ್ದ ಸುಮಾರು ೨೦೦೦ ವಸ್ತುಗಳ ಮೇಲೆ ತೆರಿಗೆ ಬೀಳಲಿದೆ, ಇದರಿಂದ ಭಾರತಕ್ಕೆ ಆಗುವ ನಷ್ಟ ಕಡಿಮೆ ಏನಿಲ್ಲ .
ನಾವು ಗಮನಿಸಿದರೆ ಭಾರತ ವಿದೇಶಾಂಗ ನೀತಿಯನ್ನು ರೂಪಿಸುವಾಗ ಎಚ್ಚರಿಕೆವಹಿಸಬೇಕಾಗಿದೆ ಅನ್ನೋದು ಸ್ಪಷ್ಟ. ಚೀನಾ ಹಾಗೂ ಪಾಕಿಸ್ತಾನಗಳ ಕಂಟ್ರೋಲ್ ಮಾಡಿದ ಮೋದಿ ಸರ್ಕಾರ ಈ ಬಾರಿನೂ ಅಷ್ಟೇ ಪ್ರಭಾವಿಯಾಗಿ ಚೀನಾ ಅನ್ನೋ ಶತ್ರುವನ್ನು ನಿಯಂತ್ರಿಸುತ್ತಾ ಅದನ್ನು ಮಾಡೋದಕ್ಕೆ ಅಮೆರಿಕಾದ ಬೆಂಬಲ ಬೇಕೇ ಬೇಕು ಅಂತ ಸ್ನೇಹವನ್ನ ಕಳೆದುಕೊಳ್ಳುವುದಕ್ಕೆ ಆಗೋದಿಲ್ಲ.
ಈಗಾಗಲೇ ಒಂದು ಸಮಸ್ಯೆ ಶುರುವಾಗಿದೆ,
ದೊಡ್ಡಣ್ಣನ ಸ್ನೇಹ ವಹಿಸುವುದಕ್ಕೆ ಭಾರತ ತನ್ನ ಹಳೆಯ ಮಿತ್ರ ದೇಶ ಇರಾನ್ ಜೊತೆಗಿನ ಪೆಟ್ರೋಲಿಯಂ ವ್ಯವಹಾರವನ್ನು ನಿಲ್ಲಿಸಿದೆ.
ಇದೀಗ ಭಾರತ ತನ್ನ ವಿದೇಶ ವ್ಯವಹಾರವನ್ನು ಯೋಚಿಸಿ ಹೆಜ್ಜೆಯಿಡ ಬೇಕಾಗಿದೆ.
ಈಗ ನಾವು ಕಾದು ನೋಡಬೇಕಿದೆ ರಾಮಮಂದಿರ ಅದನ್ನ ನ್ಯಾಯಾಲಯ ನಿರ್ಧಾರ ಮಾಡುತ್ತೆ ,ಆರ್ಟಿಕಲ್ 370, ಸಮಾನ ನಾಗರಿಕ ಸಂಹಿತೆ ಇದೆಲ್ಲ ಬಿಜೆಪಿಗೆ ಮತ ತಂದುಕೊಟ್ಟ ಅಂಶಗಳಾಗಿವೆ. ನಿರುದ್ಯೋಗ ಹಣದುಬ್ಬರ ಆರ್ಥಿಕ ಅಭಿವೃದ್ಧಿ ಇವುಗಳಿಗೆ ಹೋಲಿಸಿದರೆ ಮೋದಿ ಸರ್ಕಾರದ ಆದ್ಯತೆ ಸಶಕ್ತ ಭಾರತದ ನಿರ್ಮಾಣಕ್ಕಾಗಿ ಒಂದಾಗಿದೆ.
ಇದು ಮೋದಿ ಸರ್ಕಾರದ ಮುಂದಿರುವ ಪ್ರಮುಖ ಸವಾಲುಗಳು. ಇವೆಲ್ಲವನ್ನ ನರೇಂದ್ರ ಮೋದಿಯವರ ಸಚಿವ ಸಂಪುಟ ಹೇಗೆ ನಿಭಾಯಿಸುತ್ತದೆ ಎಂದು ಕಾದುನೋಡಬೇಕು.
ಜೈ ಹಿಂದ್ ಜೈ ಕರ್ನಾಟಕ
–ಮನನ್ ಜೈನ್
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ
ಸುದ್ದಿದಿನ,ದಾವಣಗೆರೆ:ಫೆಬ್ರವರಿ 23 ರಿಂದ 27 ರವರೆಗೆ ನಡೆಯುವ ದುರ್ಗಾಂಬಿಕಾದೇವಿ ಜಾತ್ರೆ ಪ್ರಯಕ್ತ ದೇವಾಲಯಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಶೌಚಾಲಯಗಳ ವ್ಯವಸ್ಥೆ ಕಲ್ಪಿಸಲಾಗಿದೆ.
ದೊಡ್ಡಪೇಟೆಯ ನಾಮದೇವ ಸಿಂಪಿ ಕಲ್ಯಾಣ ಮಂಟಪ, ವಿರಕ್ತಮಠ ಮತ್ತು ನಗರ ಕುಟುಂಬ ಕಲ್ಯಾಣ ಕೇಂದ್ರ-1, ಎಸ್.ಕೆ.ಪಿ ರಸ್ತೆಯ ಎಸ್.ವಿ.ಎಸ್.ಶಾಲೆ ಮತ್ತು ಕನ್ನಿಕಾಪರಮೇಶ್ವರಿ ದೇವಸ್ಥಾನ ಸಂಘ, ಮಾರ್ಕಂಡೇಶ್ವರ ಕಲ್ಯಾಣ ಮಂಟಪ, ಈ ಸ್ಥಳಗಳಲ್ಲಿರುವ ಶೌಚಾಲಯಗಳನ್ನು ಉಪಯೋಗಿಸುವ ಮೂಲಕ ದೇವಾಲಯದ ಸುತ್ತಮುತ್ತಲಿನ ಆವರಣವನ್ನು ಸ್ವಚ್ಚವಾಗಿಡಲು ಸಹಕರಿಸಬೇಕೆಂದು ಪಾಲಿಕೆ ಆಯುಕ್ತರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
ಸುದ್ದಿದಿನ,ದಾವಣಗೆರೆ : ಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ -2025ಕ್ಕೆ ಸಂಬಂಧಿಸಿದಂತೆ ಜಿಲ್ಲಾ ಮಟ್ಟದ ಮೇಲ್ವಿಚಾರಣೆ ಮತ್ತು ಮೌಲ್ಯಮಾಪನಗಳಿಗೆ ಆಕ್ಷೇಪಣೆ, ತಕರಾರು ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ತಿರಸ್ಕೃತಗೊಂಡ ಅರ್ಜಿಗಳ ಅಭ್ಯರ್ಥಿಗಳ ಆಕ್ಷೇಪಣೆಗಳಿದ್ದಲ್ಲಿ, ಮಾರ್ಚ್ 13 ರೊಳಗೆ ನಿಗದಿಪಡಿಸಿದ ದಿನಾಂಕದೊಳಗಾಗಿ ಪೂರಕ ದಾಖಲಾತಿಗಳನ್ನು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕೆಂದು ಜಿಲ್ಲಾಧಿಕಾರಿ ಗಂಗಾರ್ವಾಮಿ.ಜಿ.ಎಂ.ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ.
‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP)
AI ಕಲಿಯುವುದು ಅನಿವಾರ್ಯ: ಗೂಗಲ್ ಈಗ ಸಂಪೂರ್ಣವಾಗಿ ‘AI ಫಸ್ಟ್’ ಕಂಪನಿಯಾಗಿ ರೂಪಾಂತರಗೊಳ್ಳುತ್ತಿದೆ. ತಂತ್ರಜ್ಞಾನದ ವೇಗಕ್ಕೆ ಹೊಂದಿಕೊಳ್ಳಲು ಸಾಧ್ಯವಾಗದ ಅಥವಾ AI ಕಲಿಯಲು ಆಸಕ್ತಿ ಇಲ್ಲದ ಉದ್ಯೋಗಿಗಳಿಗೆ ಗೌರವಯುತವಾಗಿ ಉದ್ಯೋಗ ತೊರೆಯಲು ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಯನ್ನು ಜಾರಿಗೊಳಿಸಿದೆ.
ಯಾರಿಗೆ ಅನ್ವಯಿಸುತ್ತದೆ?: ಇದು ಮುಖ್ಯವಾಗಿ ಗೂಗಲ್ನ ಗ್ಲೋಬಲ್ ಬಿಸಿನೆಸ್ ಆರ್ಗನೈಸೇಷನ್ (GBO) ವಿಭಾಗದ ಉದ್ಯೋಗಿಗಳಿಗೆ (ಸೇಲ್ಸ್, ಕಾರ್ಪೊರೇಟ್ ಡೆವಲಪ್ಮೆಂಟ್ ಮತ್ತು ಸೊಲ್ಯೂಷನ್ಸ್ ಟೀಮ್) ಗೆ ಅನ್ವಯಿಸುತ್ತದೆ. ಆದರೆ, ಗ್ರಾಹಕರೊಂದಿಗೆ ನೇರ ಸಂಪರ್ಕ ಹೊಂದಿರುವ ತಂಡಗಳಿಗೆ ಇದರಿಂದ ವಿನಾಯಿತಿ ನೀಡಲಾಗಿದೆ.
ಇದು ಲೇ-ಆಫ್ ಅಲ್ಲ: ಇದು ಕಡ್ಡಾಯವಾಗಿ ಕೆಲಸದಿಂದ ತೆಗೆದುಹಾಕುವ ಪ್ರಕ್ರಿಯೆಯಲ್ಲ. ಬದಲಾಗಿ, ಸ್ವತಃ ಹೊರಹೋಗಲು ಬಯಸುವ ಉದ್ಯೋಗಿಗಳಿಗೆ ಉತ್ತಮ ಪರಿಹಾರ ಧನ (Severance Package) ಮತ್ತು ಇತರ ಸೌಲಭ್ಯಗಳನ್ನು ನೀಡಿ ಕಳುಹಿಸಿಕೊಡುವ ಯೋಜನೆಯಾಗಿದೆ.
ಕಾರಣವೇನು?: ತಂತ್ರಜ್ಞಾನ ಅತ್ಯಂತ ವೇಗವಾಗಿ ಬದಲಾಗುತ್ತಿದ್ದು, ಕಂಪನಿಗೆ AI ಮಿಷನ್ಗೆ ಸಂಪೂರ್ಣವಾಗಿ ಹೊಂದಿಕೊಳ್ಳುವ ಮತ್ತು ಕ್ರಿಯಾತ್ಮಕವಾಗಿ ಕೆಲಸ ಮಾಡುವ ಕಾರ್ಯಪಡೆಯ ಅಗತ್ಯವಿದೆ ಎಂದು ಗೂಗಲ್ನ ಚೀಫ್ ಬಿಸಿನೆಸ್ ಆಫೀಸರ್ ಫಿಲಿಪ್ ಶೆಡ್ಲರ್ ತಿಳಿಸಿದ್ದಾರೆ.
ಭವಿಷ್ಯದ ಮುನ್ಸೂಚನೆ: ಅಮೆಜಾನ್, ಮೆಟಾ ಮತ್ತು ಮೈಕ್ರೋಸಾಫ್ಟ್ನಂತಹ ಇತರ ಟೆಕ್ ದೈತ್ಯ ಕಂಪನಿಗಳು ಕೂಡ ಇದೇ ಹಾದಿಯಲ್ಲಿ ಸಾಗುವ ಸಾಧ್ಯತೆ ಇದೆ. 2026ರಲ್ಲಿ ಈ ನಾಲ್ಕು ಕಂಪನಿಗಳು AI ತಂತ್ರಜ್ಞಾನಕ್ಕಾಗಿ ಸುಮಾರು 58.92 ಲಕ್ಷ ಕೋಟಿ ರೂಪಾಯಿ ಹೂಡಿಕೆ ಮಾಡುವ ಅಂದಾಜಿದೆ.
ಒಟ್ಟಾರೆಯಾಗಿ, ಭವಿಷ್ಯದ ಉದ್ಯೋಗ ಮಾರುಕಟ್ಟೆಯಲ್ಲಿ AI ಕೌಶಲ್ಯ ಅತ್ಯಂತ ಅನಿವಾರ್ಯ ಎಂಬ ಎಚ್ಚರಿಕೆಯ ಸಂದೇಶವನ್ನು ಗೂಗಲ್ ಈ ಮೂಲಕ ನೀಡಿದೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ4 days agoಫೆ.14 ರಂದು ಸಂತ ಸೇವಾಲಾಲ್ರವರ 287ನೇ ಜಯಂತಿ ಕಾರ್ಯಕ್ರಮ
-
ದಿನದ ಸುದ್ದಿ3 days agoಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ
-
ದಿನದ ಸುದ್ದಿ5 days agoಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ
-
ದಿನದ ಸುದ್ದಿ3 days agoಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ
-
ದಿನದ ಸುದ್ದಿ9 hours agoಮಾಜಿ ದೇವದಾಸಿ ಮಹಿಳೆಯರ ಮರು ಸಮೀಕ್ಷೆ : ಆಕ್ಷೇಪಣೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ8 hours agoದುರ್ಗಾಂಬಿಕಾದೇವಿ ಜಾತ್ರೆ ; ಭಕ್ತಾದಿಗಳಿಗೆ ಶೌಚಾಲಯ ವ್ಯವಸ್ಥೆ

