Connect with us

ದಿನದ ಸುದ್ದಿ

ಅಮೆರಿಕಾಕ್ಕೆ ‘ಹುವಾವೇ’ ಬಗ್ಗೆ ಯಾಕಿಷ್ಟು ಭಯ..?

Published

on

ಚೀನಾವು ತನ್ನ ದೇಶಿಯ ಮಾರುಕಟ್ಟೆಯನ್ನು ರಕ್ಷಿಸಲು ಮತ್ತು ಹುವಾವೇ ಯಂತಹ ತನ್ನ ‘ಚಾಂಪಿಯನ್ ಕಂಪನಿ’ ಗಳ ಬೆಳವಣಿಗೆಯನ್ನು ಪ್ರೋತ್ಸಾಹಿಸಲು, ಯುಎಸ್ ನ ಮತ್ತು ಅದರ ಮಿತ್ರರ ಆಕ್ರಮಣಗಳನ್ನು ಪ್ರತಿರೋಧಿಸಲು, ಶಕ್ತವಾಗುವ ತಾಂತ್ರಿಕ ಸಾರ್ವಭೌಮತ್ವವನ್ನು ಅಭಿವೃದ್ಧಿ ಪಡಿಸಿಕೊಂಡಿದೆ.

ಯುಎಸ್ ನ ಯಾವುದೇ ತಾಂತ್ರಿಕ ಸಮರವನ್ನು ಎದುರಿಸಲು, ಸಾಮ್ರಾಜ್ಯಶಾಹಿ ಅಜೆಂಡಾ ಹಾಗೂ ಯುಎಸ್ ನ ತಂತ್ರಜ್ಞಾನ ಅಧಿಪತ್ಯವನ್ನು ಹಿಮ್ಮೆಟ್ಟಿಸಲು ಚೀನಾವು ಸಜ್ಜಾಗುತ್ತಿದೆ. ಇದೇ ಯು.ಎಸ್. ಸರಕಾರ ಹುವಾವೇ ಬಗ್ಗೆ ಇಷ್ಟು ಆತಂಕಕ್ಕೆ ಕಾರಣ. ಅಮೆರಿಕದ ಜಾಗತಿಕ ಅಧಿಪತ್ಯದೊಂದಿಗೆ ಬಂಡವಾಳಶಾಹಿ ಮತ್ತು ಸಾಮ್ರಾಜ್ಯಶಾಹಿಯ ಅಧಿಪತ್ಯವೂ ತಳುಕು ಹಾಕಿಕೊಂಡಿದೆ

ತಂತ್ರಜ್ಞಾನ ಕ್ಷೇತ್ರದಲ್ಲಿ ಚೀನಾದ “ಹುವಾವೇ” ಎಂಬ ಟೆಲಿಕಾಂ ಕಂಪನಿಯು 5ಜಿ ನೆಟ್ವರ್ಕ್ ಕ್ಷೇತ್ರದಲ್ಲಿ ಪ್ರಮುಖ ಕಂಫನಿಯಾಗಿ ಹೊಮ್ಮಿದೆ. ಹುವಾವೇಯ 5ಜಿ ನೆಟ್ವರ್ಕ್ ಉಪಕರಣಗಳ ಜಾಗತಿಕ ಮಾರುಕಟ್ಟೆಗೆ ವಿಸ್ತರಣೆಯನ್ನು ನಿಬರ್ಂಧಿಸಲು ಅಮೆರಿಕಾವು ಅನೇಕ ಉಗ್ರ ಕ್ರಮಗಳನ್ನು ಇತ್ತೀಚೆಗೆ ಕೈಗೊಂಡಿದೆ. 5ಜಿ ನೆಟ್ವರ್ಕ್ ಉಪಕರಣಗಳ ತಯಾರಿಗೆ ಅಗತ್ಯವಾದ ಪ್ರಮುಖವಾದ ಬಿಡಿಭಾಗಗಳು ಮತ್ತು ಸಾಪ್ಟ್ವೇರ್ ಗಳನ್ನು ನಿರಾಕರಿಸುವ ಪ್ರಯತ್ನಗಳನ್ನು ಮಾಡುವ ಮೂಲಕ ಹುವಾವೇಯ ಮುಖ್ಯ ವ್ಯವಹಾರವನ್ನು ಪರಿಣಾಮಕಾರಿಯಾಗಿ ದುರ್ಬಲಗೊಳಿಸಲು ಅಮೆರಿಕಾ ಕಾರ್ಯ ಪ್ರವೃತ್ತವಾಗಿದೆ. ಹಿಂದೆನೂ ಹುವಾವೇ ವಿರುದ್ಧ ಹಲವು ಕ್ರಮಗಳನ್ನು ಕೈಗೊಂಡಿತ್ತು. ಅವು ಪ್ರಮುಖವಾಗಿ ವಿವಿಧ ದೇಶಗಳಲ್ಲಿ ಹುವಾವೇ ಪ್ರವೇಶವನ್ನು ನಿಬರ್ಂಧಿಸುವ ಗುರಿಯನ್ನು ಹೊಂದಿದ್ದವು. ಹುವಾವೇ ಕಂಪನಿಯ ವಿರುದ್ದ ಅಮೆರಿಕದ ಕ್ರಮಗಳಿಂದ ಚೀನಾದ ಮೇಲೆ ಅದು ತಾಂತ್ರಿಕ ಸಮರವನ್ನೇ ಸಾರಿದಂತಾಗಿದೆ.

ಹುವಾವೇ ವಿಶ್ವದಲ್ಲೇ ಅತಿ ದೊಡ್ಡ (ನಂಬರ್ 1) ಟೆಲಿಕಾಂ ಉಪಕರಣಗಳ ತಯಾರಕ ಮತ್ತು ಮೊಬೈಲ್ ಎರಡನೆಯ ಅತಿ ದೊಡ್ಡ ಮೊಬೈಲ್ ಪೋನ್ ಗಳ ತಯಾರಕ ಸಂಸ್ಥೆಯಾಗಿದೆ. ಇದು 5ಜಿ ತಂತ್ರಜ್ಞಾನದಲ್ಲಿ ಜಾಗತಿಕ ನಾಯಕ ಮತ್ತು ಟೆಕ್ ವಲಯದಲ್ಲಿ ಅಮೆರಿಕಾದ ಅಧಿಪತ್ಯಕ್ಕೆ ಗಮನಾರ್ಹ ಸವಾಲನ್ನು ಒಡ್ಡುವ ಸಂಸ್ಥೆಯಾಗಿ ಬೆಳೆದಿದೆ. ಆದ್ದರಿಂದಲೇ, ಇದನ್ನು ಅಮೆರಿಕಾಕ್ಕೆ ಸಹಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ.

ಏಕೆಂದರೆ, 5 ಜಿ ನೆಟ್ವರ್ಕ್ ಜಗತ್ತಿನ ಜನಜೀವನದ ಪ್ರತಿಯೊಂದು ವಿಚಾರ ಮತ್ತು ಅಂಶಗಳ ಮೇಲೂ ತನ್ನ ಅಪಾರ ಪ್ರಭಾವ ಬೀರಲಿದೆ. ಆದ್ದರಿಂದ ಈ ಕ್ಷೇತ್ರದಲ್ಲಿ ತನ್ನ ಪಾರಮ್ಯವನ್ನು ಸ್ಫಾಪಿಸುವುದು ಅದರ ಸಾಮ್ರಾಜ್ಯಶಾಹಿ ಕಾರ್ಯಸೂಚಿಯ ಅಗತ್ಯದ ಭಾಗವಾಗಿದೆ. ಅದಕ್ಕೆ ಹುವಾವೇ ಸಂಸ್ಥೆಯು ಈ ಕ್ಷೇತ್ರದಲ್ಲಿ ಅಡ್ಡವಾಗಿ ನಿಲ್ಲುತ್ತದೆ. ಹೀಗಾಗಿ ಚೀನಾದ ಈ ಹುವಾವೇ ಟೆಕ್ ದೈತ್ಯ ಸಂಸ್ಥೆಯ ಅಭಿವೃದ್ಧಿಯನ್ನು ಅಮೆರಿಕಾ ಎಂದಿಗೂ ಸಹಿಸುವುದಿಲ್ಲ. ಇದನ್ನು ನೆಲ ಸಮ ಮಾಡಲೇ ಬೇಕೆಂದು ಎಲ್ಲಾ ತರದ ಒಳಸಂಚುಗಳ ಸಮರವನ್ನು ನಡೆಸಲು ಆರಂಭಿಸಿದೆ.

ಪ್ರಮುಖ ವಾಗಿ ಹುವಾವೇ ವಿರುದ್ದ ಎರಡು ರೀತಿಯಲ್ಲಿ ತನ್ನ ಆಕ್ರಮಣವನ್ನು ನಡೆಸಲು ಸಜ್ಜಾಗಿದೆ. ಇತ್ತೀಚೆಗೆ, ಅಮೆರಿಕಾದ ವಾಣಿಜ್ಯ ಇಲಾಖೆಯು ಎರಡು ಬಗೆಯ ಉಗ್ರವಾದ ನಿಬರ್ಂಧ ಕ್ರಮಗಳನ್ನು ಹುವಾವೇ ವಿರುದ್ದ ಘೋಷಿಸಿದೆ.

ಅದರಲ್ಲಿ, ಮೊದಲನೆಯದು, ಹುವಾವೇ ತಯಾರು ಮಾಡುವ ಮೊಬೈಲ್ ಗಳು ಮತ್ತು 5ಜಿ ನೆಟ್ ವರ್ಕ್ ಉಪಕರಣಗಳಿಗೆ, ಯುಎಸ್ ನ ಟೆಕ್ ಸಂಸ್ಥೆ ಗಳು ಸರಬರಾಜು ಮಾಡುವ ಎಲ್ಲಾ ಬಗೆಯ ಬಿಡಿ ಭಾಗಗಳನ್ನು (ಮೂಲ ‘ಚಿಪ್ ಸೆಟ್’ ಗಳು ಮತ್ತಿತರ ಹಾರ್ಡ್ವೇರ್, ಸಾಫ್ಟ್ ವೇರ್) ತಡೆಗಟ್ಟುವುದು. ಎರಡನೆಯದು, ಕೆಲವು ದಿನಗಳ ಹಿಂದೆಯಷ್ಟೇ, ಆಂಡ್ರಾಯ್ಡ್ ಸಾಫ್ಟ್ವೇರ್ ಮತ್ತು ಇದಕ್ಕೆ ಸಂಬಂಧಿಸಿದ ಮತ್ತಿತರ ಗೂಗಲ್ ಸೇವೆಗಳನ್ನು ಹುವಾವೇ ಮೊಬೈಲುಗಳಲ್ಲಿ ಬಳಸಲು ನಿಬರ್ಂಧಗಳನ್ನು ಹೇರುವ ಘೋಷಣೆಯನ್ನು ಗೂಗಲ್ ಮೂಲಕ ಮಾಡಿರುವುದು. ಇದರಿಂದಾಗಿ, ಆಂಡ್ರಾಯ್ಡ್ ಮತ್ತು ಇತರ ಗೂಗಲ್ ಸೇವೆಗಳಿಗೆ ಪರ್ಯಾಯ ಪರಿಸರ ವ್ಯವಸ್ಥೆಯನ್ನು ಹುವಾವೇ ಮಾಡಿಕೊಳ್ಳಬೇಕಾಗಿದೆ. ಈ ಎರಡೂ ಕ್ರಮಗಳು ಹುವಾವೇ ಮೊಬೈಲ್ ಗಳು ಮತ್ತು 5ಜಿ ನೆಟ್ ವರ್ಕ್ ಉಪಕರಣಗಳ ಉತ್ಪಾದನೆ, ಪೂರೈಕೆ ಮತ್ತು ಮಾರುಕಟ್ಟೆ ವಿಸ್ತರಣೆಗೆ ತೀವ್ರ ಸವಾಲೊಡ್ಡಲಿವೆ.

ಕಳೆದ ಡಿಸೆಂಬರ್ ನಲ್ಲಿ ಹುವಾವೇ ಸಿ.ಎಫ್.ಒ. ಮೆಂಗ್ ವನ್ಝೌ ರನ್ನು ಯುಎಸ್ ಅಧಿಕಾರಿಗಳ ಆಜ್ಞೆಯ ಮೇರೆಗೆ ಕೆನಡಾದಲ್ಲಿ ಬಂಧಿಸಲಾಗಿತ್ತು. ಇರಾನ್ ಮೇಲೆ ಇತ್ತೀಚೆಗೆ ಯು.ಎಸ್. ತೆಗೆದು ಕೊಂಡ ನಿಬರ್ಂಧಗಳನ್ನು ಪಾಲಿಸದಿರುವ ಹಿನ್ನೆಲೆಯಲ್ಲಿ ಚೀನಾದ ಮೇಲೆ ಒತ್ತಡ ಹೇರಲು ಅಮೆರಿಕಾ ಕೈಗೊಂಡಿರುವ ಕ್ರಮ ಇದಾಗಿರಬಹುದೆಂದು ಅನೇಕ ವಿಶ್ಲೇಷಕರ ಅಭಿಪ್ರಾಯವಾಗಿತ್ತು.

ಆದಾಗ್ಯೂ, ಹುವಾವೇ ಮತ್ತು ಚೀನಾದ ಇನ್ನಿತರೆ ಟೆಲಿಕಾಂ ಕಂಪನಿಗಳ ವಿರುದ್ದ ಯುಎಸ್ ನ ನಿಬರ್ಂಧಗಳು, ಡೊನಾಲ್ಡ್ ಟ್ರಂಪ್ ನ ಇರಾನ್ ಮೇಲಿನ ನ್ಯೂಕ್ಲಿಯರ್ ಒಪ್ಪಂದ ದಿಂದ ಹೊರ ಬರುವ ನಿರ್ಧಾರದ ಬಹಳ ಮೊದಲೇ ಆರಂಭವಾಗಿವೆ. ಅನೇಕ ವರ್ಷಗಳಿಂದ, ಟೆಲಿಕಾಂ ಕ್ಷೇತ್ರದಲ್ಲಿ, ವಿಶೇಷವಾಗಿ 5ಜಿ ನೆಟ್ವರ್ಕ್ ತಂತ್ರಜ್ಞಾನದಲ್ಲಿ, ಹುವಾವೇ ಯುಎಸ್ ಕಂಪನಿಗಳಿಗಿಂತ ಮುಂದೆ ಇದ್ದವು. ಈ ಹಿಂದೆ, ಅಮೆರಿಕದ ಒತ್ತಡಕ್ಕೆ ಮಣಿದು, ಆಸ್ಟ್ರೇಲಿಯಾ ಮತ್ತು ನ್ಯೂಜಿಲೆಂಡ್ ದೇಶಗಳು ಹುವಾವೇ ಯನ್ನು 5ಜಿ ನೆಟ್ವರ್ಕ್ ಉಪಕರಣಗಳ ಪ್ರವೇಶವನ್ನು ನಿಬರ್ಂಧಿಸಲಾಗಿದ್ದನ್ನು ಇಲ್ಲಿ ನೆನಪು ಮಾಡಿಕೊಳ್ಳಬೇಕು. ಆದಾಗ್ಯೂ, ಇದೀಗ ಚೀನಾದ ಈ ದೈತ್ಯ ಹುವಾವೇ ಯ ತಂತ್ರಜ್ಞಾನ ಜಗತ್ತಿನಲ್ಲಿ ಹರಡುತ್ತಿರುವುದು ಅಮೆರಿಕಾದ ಆಂತಕಕ್ಕೆ ಮೂಲ ಕಾರಣವಾಗಿದೆ.

ಹುವಾವೇ ತಂತ್ರಜ್ಞಾನವು “ಭದ್ರತಾ ದೃಷ್ಟಿಯಿಂದ ಅಪಾಯಕಾರಿ” ಎಂದು ಯುಎಸ್ ವಾದಿಸುತ್ತದೆ.. ಆದರೆ ಸಿಸ್ಕೊ ನಂತಹ ಯು.ಎಸ್. ಕಂಪನಿಗಳು ತಯಾರಿಸಿದ ನೆಟ್ವರ್ಕ್ ಉಪಕರಣಗಳ ಹಿಂಬಾಗಿಲಿನಿಂದ, ನಿರಂತರವಾಗಿ ಅಮೆರಿಕ ಗುಪ್ತ ಮಾಹಿತಿಗಳನ್ನು ಪಡೆಯುತ್ತಿತ್ತು ಎಂದು ಎಡ್ವರ್ಡ್ ಸ್ನೋಡೆನ್ನ್ ಬಯಲು ಮಾಡಿದ್ದು ಇಲ್ಲಿ ನೆನಪಿಸಿಕೊಂಡರೆ, ಅಮೆರಿಕ ಈ ಬಗ್ಗೆ ದೂರುವುದು ಜೋಕ್ ಎನ್ನಬಹುದು.

ಹುವಾವೇ ಪ್ರಾಬಲ್ಯವನ್ನು ತಡೆಹಿಡಿಯುವ ಯುಎಸ್ ಯೋಜಿಸಿರುವ ನಿಬರ್ಂಧಗಳಿಂದ, ಅದರ ಚಿಪ್ ತಯಾರಿಕಾ ಮತ್ತು ಇತರ ಕಂಪನಿಗಳಿಗೆ ವಾರ್ಷಿಕವಾಗಿ ರಫ್ತು ಆದಾಯದಲ್ಲಿ 11 ಬಿಲಿಯನ್ ಡಾಲರ್ ನಷ್ಟು ನಷ್ಟ ಉಂಟಾಗುತ್ತದೆ ಎಂದು ಅಂದಾಜಿಸಲಾಗಿದೆ.

ಇದು ಪ್ರಪಂಚದಾದ್ಯಂತ 5 ಜಿ ನೆಟ್ ವರ್ಕ್ ನ ತಂತ್ರಜ್ಞಾ£ದ ಒಟ್ಟಾರೆ ಅಭಿವೃದ್ಧಿಯ ಮೇಲೆ ಅಗಾಧವಾದ ದುಷ್ಪರಿಣಾಮ ಬೀರುತ್ತದೆ. ಆದಾಗ್ಯೂ, ತನ್ನ ಮಿತ್ರ ರಾಷ್ಟಗಳ ಮಾರುಕಟ್ಟೆಗಳಲ್ಲಿ, ಪ್ರಮುಖವಾಗಿ ಯುರೋಪಿಯನ್ ಒಕ್ಕೂಟದ ರಾಷ್ಟ್ರಗಳಲ್ಲಿ, ಹುವಾವೇಯ ಉತ್ಕøಷ್ಟ 5ಜಿ ತಂತ್ರಜ್ಞಾನದ ಬೇರೂರುವ ಸಾದ್ಯತೆಯ ಬಗ್ಗೆ ಯುಎಸ್ ಹೆಚ್ಚು ಚಿಂತಿತ ಗೊಂಡಿದೆ. ಪಶ್ಚಿಮ ರಾಷ್ಟ್ರಗಳು ತಮ್ಮತಮ್ಮ ಆರ್ಥಿಕ ಹಿತಾಸಕ್ತಿಗಳನ್ನು ರಕ್ಷಿಸಿಕೊಳ್ಳಲು, ಬಡ ರಾಷ್ಟಗಳಿಗೆ ಮಾತ್ರ ಬೋಧಿಸುವ ತಮ್ಮ ಮುಕ್ತ ವ್ಯಾಪಾರ ನಿಯಮಗಳನ್ನು ಉಲ್ಲಂಘನೆ ಮಾಡಲು ಹಿಂಜರಿಯುವುದಿಲ್ಲ ಎಂಬುದನ್ನು ಮತ್ತೆ ಇಲ್ಲಿ ಯುಎಸ್ ಸಾಬೀತು ಪಡಿಸುತ್ತಿದೆ.

ಆದರೆ, ಇತ್ತೀಚಿನ ಗೂಗಲ್ ಕ್ರಮಗಳಿಗೂ “ರಾಷ್ಟ್ರೀಯ ಭದ್ರತಾ” ಅಂಶಗಳಿಗೂ ಯಾವುದೇ ಸಂಬಂಧವಿರುವುದಿಲ್ಲ. ಆದರೆ, ಹುವಾವೇ ಸಂಸ್ಥೆಯಲ್ಲಿ ತಯಾರಿಸಿದ ಮೊಬೈಲ್ ಪೋನ್ಗಳನ್ನು ಇನ್ನಿತರೆ ದೇಶಗಳಲ್ಲಿ ದುರ್ಬಲಗೊಳಿಸುವ ಸಲುವಾಗಿಯೇ, ಗೂಗಲ್ ಕ್ರಮಗಳ ಮೂಲಕ ಯುಎಸ್ ಪ್ರಯತ್ನ ಮಾಡುತ್ತಿದೆ.

ಗೂಗಲ್ ಕ್ರಮಗಳು ಎಂದರೆ, ಹುವಾವೇ ಪೋನ್ ಗಳನ್ನು ಖರೀದಿಸುವ ವರು ಮತ್ತು ಪ್ರಸ್ತುತ ಮಾಲೀಕರು ಸಹಾ, ಗೂಗಲ್ ನ ಉತ್ಪನ್ನಗಳು ಮತ್ತು ಭದ್ರತಾ ನವೀಕರಣಗಳಿಗೆ ಪ್ರವೇಶವನ್ನು ನಿರಾಕರಿಸಲು ಅಮೆರಿಕಾ ಒತ್ತಾಯ ಹೇರುತ್ತಿದೆ. ಇದರಿಂದಾಗಿ ಆಂಡ್ರಾಯ್ಡ್ ಓಎಸ್, ಜಿ-ಮೇಲ್ ಮತ್ತು ಗೂಗಲ್ ಸ್ಟೋರ್ ನಂತಹ ಉತ್ಪನ್ನ ಗಳ ಮೂಲಕ, ಪ್ರಪಂಚದಾದ್ಯಂತ ಇರುವ ಗೂಗಲ್ ನ ಲಕ್ಷಾಂತರ ಬಳಕೆದಾರ ಹೊಂದಿರುವ ವ್ಯಾಪ್ತಿ ಮತ್ತು ಈ ಹಂತದ ಬೆಳವಣಿಗೆಯಲ್ಲಿ ಹುವಾವೇ ಮೊಬೈಲ್ ಪೋನ್ ವ್ಯವಹಾರಕ್ಕೆ ಭಾರಿ ಹಿನ್ನಡೆಯಾಗುವಂತೆ ಮಾಡುವುದು ಅದರ ಉದ್ದೇಶ.

ಹುವಾವೇ ಸವಾಲುಗಳನ್ನು ಎದುರಿಸಲು ಸಿದ್ದವಾಗಿದೆ. ಕಂಪನಿಯ ಸಂಸ್ಥಾಪಕ ರೆನ್ ಝೆಂಗ್ಛೀ ಯವರು ನಿಬರ್ಂಧಗಳು ಕಂಪನಿಯ ಮುಖ್ಯ ವ್ಯವಹಾರದ ಮೇಲೆ ಪರಿಣಾಮ ಬೀರುವುದಿಲ್ಲ ಎಂಬ ವಿಶ್ವಾಸ ಹೊಂದಿದ್ದಾರೆ. ನಮ್ಮ ಉತ್ಪನ್ನಗಳನ್ನು ಮತ್ತು ಸೇವೆಗಳನ್ನು ಮುಂದುವರಿಸಲು ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ. ಚಿಪ್ ಸೆಟ್ ಗಳನ್ಜು ಈಗಾಗಲೇ ಸಾಕಷ್ಟು ಸಂಗ್ರಹಿಸಲಾಗಿದೆ. ಹಾಗೆಯೇ, ಗೂಗಲ್ ಪರಿಸರ ವ್ಯವಸ್ಥೆಗೆ ಪರ್ಯಾಯ ಉತ್ಪನ್ನ ಗಳನ್ನು ಅಭಿವೃದ್ಧಿಪಡಿಸುವ ಯೋಜನೆಯಲ್ಲಿ ಹೊಸ ಹೂಡಿಕೆಗಳನ್ನು ಮಾಡಲಾಗುತ್ತಿದೆ. ಆದಾಗ್ಯೂ, ಈಗಿರುವ ಬಳಕೆದಾರರ ಮೂಲವನ್ನು ಉಳಿಸಿಕೊಳ್ಳಲು ಹುವಾವೇ ಕಾರ್ಯತಂತ್ರಗಳನ್ನು ನಿಯೋಜಿಸಲು ಪ್ರಯತ್ನಗಳನ್ನು ಕೈಗೊಂಡಿದೆ. ಇದು ಹುವಾವೇ

ವಾಣಿಜ್ಯದ ಮೇಲೆ ಯು.ಎಸ್ ಮತ್ತು ಚೀನಾ ಒಪ್ಪಂದದ ಭಾಗವಾಗಿ, ಹುವಾವೇ ವಿರುದ್ದದ ನಿಬರ್ಂಧ ಕ್ರಮಗಳನ್ನು ಅಮೆರಿಕಾ ಹಿಂಪಡೆಯಬಹುದು ಅಥವಾ ಮುಂದೂಡಬಹುದು ಎಂಬ ಸಾಧ್ಯತೆಗಳು ಇವೆಯಾದಾರೂ ಖಂಡಿತವಾಗಿಯೂ ಇವೆರಡೂ ರಾಷ್ಟಗಳ ನಡುವಿನ ವಾಣಿಜ್ಯ ಸಮರವಂತೂ ನಿಲ್ಲುವುದಿಲ್ಲ ಎನ್ನಲಾಗಿದೆ.

ಪ್ರಸ್ತುತ ಮುಖಾಮುಖಿ ಯಲ್ಲಿ ಇಬ್ಬರು ಹಲವಾರು ಪಾಠಗಳನ್ನು ಕಲಿಯ ಬೇಕಾಗಿದೆಯಾದರೂ,. ಮೊದಲಿಗೆ, ಅಮೆರಿಕಾದ ಆರ್ಥಿಕತೆಯ ಮೇಲೆ ಹಾನಿ ಉಂಟಾಗುವ ಸಾಧ್ಯತೆಯನ್ನು ತಳ್ಳಿ ಹಾಕುವಂತಿಲ್ಲ. ಏಕೆಂದರೆ, ಚೀನಾವು ಹುವಾವೇ ಟೆಲಿಕಾಂ ತಂತ್ರಜ್ಞಾನದಲ್ಲಿ ಅಮೆರಿಕಾಕ್ಕೆ ಬೆದರಿಕೆಯನ್ನು ಒಡ್ಡಿದೆ ಎಂಬುದು ಸ್ಪಷ್ಟಗೊಂಡಿದೆ. 5ಜಿ ತಂತ್ರಜ್ಞಾನದ ಜೊತೆಗೆ ಆರ್ಟಿಫಿಶಿಲ್ ಇಂಟಲಿಜೆನ್ಸ್ ನಂತಹ ಕ್ಷೇತ್ರಗಳಲ್ಲೂ ಚೀನಾವು ಅಮೆರಿಕಾಕ್ಕಿಂತ ಹೆಚ್ಚಿನ ಮುನ್ನಡೆ ಸಾಧಿಸುವ ಸಾಧ್ಯತೆಯಿದೆ. ಇದು ಅಮೆರಿಕಾದ ಆತಂಕವನ್ನು ಹೆಚ್ಚಿಸಿದೆ. ಚೀನಾ ಈ ತಂರ್ರಜ್ಞಾನದ ಮುನ್ನಡೆ ಹಾಗೂ ಬೆಲ್ಟ್ ಮತ್ತು ರೋಡ್ ಪೋರಂ ಬಳಸಿ ವ್ಯಾಪಾರ ಪಾಲುದಾರಿಕೆಯನ್ನು ಹೆಚ್ಚಿಸುತ್ತಿರುವುದು ಅಮೆರಿಕಾಕ್ಕೆ ಮತ್ತೊಂದು ಆತಂಕ..

ಚೀನಾವು ತನ್ನ ದೇಶಿಯ ಮಾರುಕಟ್ಟೆಯನ್ನು ರಕ್ಷಿಸಲು ಮತ್ತು ಹುವಾವೇ ಯಂತಹ ತನ್ನ ‘ಚಾಂಪಿಯನ್ ಕಂಪನಿ’ ಗಳ ಬೆಳವಣಿಗೆಯನ್ನು ಪ್ರೋತ್ಸಾಹಿಸಲು, ಯುಎಸ್ ನ ಮತ್ತು ಅದರ ಮಿತ್ರರ ಆಕ್ರಮಣಗಳನ್ನು ಪ್ರತಿರೋಧಿಸಲು, ಶಕ್ತವಾಗುವ ತಾಂತ್ರಿಕ ಸಾರ್ವಭೌಮತ್ವವನ್ನು ಅಭಿವೃದ್ಧಿ ಪಡಿಸಿಕೊಂಡಿದೆ. ಯುಎಸ್ ನ ಯಾವುದೇ ತಾಂತ್ರಿಕ ಸಮರವನ್ನು ಎದುರಿಸಲು, ಸಾಮ್ರಾಜ್ಯಶಾಹಿ ಅಜೆಂಡಾ ಹಾಗೂ ಯುಎಸ್ ನ ತಂತ್ರಜ್ಞಾನ ಅಧಿಪತ್ಯವನ್ನು ಹಿಮ್ಮೆಟ್ಟಿಸಲು ಚೀನಾವು ಸಜ್ಜಾಗುತ್ತಿದೆ.

ಇದೇ ಯು.ಎಸ್. ಸರಕಾರ ಹುವಾವೇ ಬಗ್ಗೆ ಇಷ್ಟು ಆತಂಕಕ್ಕೆ ಕಾರಣ. ಅಮೆರಿಕದ ಜಾಗತಿಕ ಅಧಿಪತ್ಯದೊಂದಿಗೆ ಬಂಡವಾಳಶಾಹಿ ಮತ್ತು ಸಾಮ್ರಾಜ್ಯಶಾಹಿಯ ಅಧಿಪತ್ಯವೂ ತಳುಕು ಹಾಕಿಕೊಂಡಿದೆ. ಗೂಗಲ್, ಆಪಲ್, ಫೇಸ್ ಬುಕ್ ನಂತಹ ಕಂಪನಿಗಳ ಮೂಲಕ ಇಂಟರ್ನೆಟ್ ಮತ್ತು ಆ ಮೂಲಕ ಇಡೀ ಜಗತ್ತಿನ ಮಾಹಿತಿ ಮತ್ತು ಆರ್ಥಿಕದ ಜಾಲವನ್ನು ನಿಯಂತ್ರಣದಲ್ಲಿಟ್ಟಿರುವ ಅದರ ಯೋಜನೆಗೂ ಚೀನಾದಿಂದ ಸವಾಲು ಬರಬಹುದು ಎಂಬ ಆತಂಕದಿಂದಾಗಿಯೇ ಗೂಗಲ್ ಸಹ ಯು.ಎಸ್. ಸರಕಾರದ ಈ ನಿರ್ಧಾರದೊಂದಿಗೆ ಇಷ್ಟು ಆಸಕ್ತಿಯಿಂದ ತೊಡಗಿಸಿಕೊಂಡಿದೆ.

ಚೀನಾದ ತಂತ್ರಜ್ಞಾನದ ಸಾರ್ವಭೌಮತೆಯ ಸ್ವಾವಲಂಬನೆಯ ಪರಿಕಲ್ಪನೆ ಭಾರತಕ್ಕೂ ಮಾದರಿಯಾಗಬೇಕು.

(ಈ ವಾರದ ಜನಶಕ್ತಿ ವಾರಪತ್ರಿಕೆಯಲ್ಲಿ ಪ್ರಕಟವಾದ ಲೇಖನ)

ನಾಗರಾಜ ನಂಜುಂಡಯ್ಯ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

Published

on

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ

ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ ಗೂಡು ಸಾಹಿತ್ಯ ಕಲಾರಸಿಕರ ಬೀಡು. ವಿವಿಧ ಖಾದ್ಯಗಳ ರಸದೌತಣದ ನಾಡು,ಸರಸ್ವತಿ ನೆಲೆಸಿದ ನಾಡು ದಾವಣಗೆರೆ.

ಎಲ್ಲ ಕ್ಷೇತ್ರದಲ್ಲೂ ಮುಂಚೂಣಿಯಲ್ಲಿರುವ ಬಹು ತಾಳ್ಮೆಯ ಕುಟುಂಬವನ್ನು ನಿರ್ವಹಿಸಿಕೊಂಡು ಸಂಸಾರದ ನೌಕೆಯನ್ನು ಸಾಗಿಸುತ್ತಾ ಅದರ ಜೊತೆಗೆ ತಮ್ಮ ಮನೋರಂಜನೆ ಸಾಹಿತ್ಯ ಸಮಾಜ ಜ್ಞಾನ ವಿಜ್ಞಾನಗಳ ಸಕಲ ಕಲಾವಿದ್ಯೆಗಳಲ್ಲಿ ತೊಡಗಿಸಿಕೊಂಡಿರುವ ನಮ್ಮೆಲ್ಲರ ಮಹಿಳೆಯರ ಪರವಾಗಿ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ಒಂದು ಅತ್ಯದ್ಭುತವಾದ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.

ಕನ್ನಡ ಸಾಹಿತ್ಯ ಪರಿಷತ್ ಶ್ರೀ ಬಿ ವಾಮದೇವಪ್ಪ ತೊಗಲೇರಿ ಅಧ್ಯಕ್ಷರ ಸಮ್ಮುಖದಲ್ಲಿ ಈ ಮಹಿಳಾ ಸಾಹಿತ್ಯ ಸಮ್ಮೇಳನ ನಡೆಯುತ್ತಿದ್ದು . ಸಮ್ಮೇಳನದ ಅಧ್ಯಕ್ಷರು ಮಹಾಪೋಷಕರು ಡಾಕ್ಟರ್ ಪ್ರಭಾ ಮಲ್ಲಿಕಾರ್ಜುನ್, ಹಾಗೆಯೇ ಉದ್ಘಾಟಕರಾಗಿ ಮಹಿಳಾ ಆಯೋಗದ ಡಾಕ್ಟರ್ ನಾಗಲಕ್ಷ್ಮಿ ಚೌದರಿ, ಪ್ರಧಾನ ಸಂಚಾಲಕರು ರಾಜ ಯೋಗಿನಿ ಬ್ರಹ್ಮಕುಮಾರಿ ನೀಲಾಜಿ ಅವರೆಲ್ಲರಿಗೂ ಸ್ವಾಗತವನ್ನು ಬಯಸುತ್ತಾ ,
ಸ್ವಾಗತ ಸಮಿತಿ, ಹಣಕಾಸು ಸಮಿತಿ ,ಸಾಹಿತ್ಯ ಸಮಿತಿ, ಆಹಾರ ಸಮಿತಿ ,ಸಾಂಸ್ಕೃತಿಕ ಸಮಿತಿ ,ವೇದಿಕೆ ಸಮಿತಿ, ಸ್ಮರಣ ಸಂಚಿಕೆ ಸಮಿತಿ, ಪ್ರಚಾರ ಸಮಿತಿ, ಶಿಸ್ತು ಸಮಿತಿ ಮೆರವಣಿಗೆ ಸಮಿತಿ,ಪುಸ್ತಕ ಮಳಿಗೆ ಸಮಿತಿ ,ಅತಿಥಿ ಸತ್ಕಾರ ಸಮಿತಿ, ಸ್ಪರ್ಧಾ ಸಮಿತಿ, ಎಲ್ಲದಕ್ಕೂ ಸಹಕಾರ ಕೊಟ್ಟಂತಹ ಶ್ರೀ ಸಮರ್ಥ್ ಶಾಮನೂರ್ ಮಲ್ಲಿಕಾರ್ಜುನ್ ಶಾಸಕರು ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ಶ್ರೀ ಸೋಮೇಶ್ವರ ಸಮೂಹ ಸಂಸ್ಥೆಗಳು.

 

ಎಲ್ಲ ಕಾರ್ಯಕ್ರಮಗಳನ್ನು ಸುಸಜ್ಜಿತವಾಗಿ ನಡೆಸಿ ಕೊಡುತ್ತಿರುವ ಶ್ರೀಮತಿ ಸುಮತಿ ಜಯಪ್ಪ, ಶ್ರೀಮತಿ ಯಶಾ ದಿನೇಶ್ ,ಶ್ರೀಮತಿ ವೀಣಾ ಕೃಷ್ಣಮೂರ್ತಿ , ಶ್ರೀಮತಿ ಸತ್ಯಭಾಮ ಮಂಜುನಾಥ್, ಶ್ರೀಮತಿ ಮಲ್ಲಮ್ಮ ಎಂ ಎಸ್ ,ಶ್ರೀಮತಿ ನೀಲಗುಂದ ಜಯಮ್ಮ, ಶ್ರೀಮತಿ ಜಯಲಕ್ಷ್ಮಿ ಮಹೇಶ್, ಶ್ರೀಮತಿ ಪ್ರೇಮ ಸೋಮಶೇಖರ್ ಹೇಮ ಗಣೇಶ್ ಶೇಟ್, ಸುನಿತಾ ಪ್ರಕಾಶ್, ವರದಿಗಾರರಾದ ಭಾರತಿ ಎಚ್ ,ಹಾಗೆ ಎ ಬಿ ರುದ್ರಮ್ಮ, ಆಮಂತ್ರಣ ಪತ್ರಿಕೆ ಎಲ್ಲಾ ಗೆಳತಿಯರು ಇವರೊೊಂದಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಕೊಡುತ್ತಿರುವ ಎಲ್ಲ ಪ್ರತಿಭೆಗಳಿಗೂ ಹಾಗೂ ಕವಿಗೋಷ್ಠಿ ಕವಿತೆಗಳನ್ನು ವಾಚಿಸುವವರೆಗೂ ಹಾಗೆಯೇ ಸಾಹಿತ್ಯ ರತ್ನ ಪ್ರಶಸ್ತಿ ಪ್ರಧಾನ, ಪಡೆಯುತ್ತಿರುವ ಎಲ್ಲ ಸಹೋದರಿಯರಿಗೂ ಅಭಿನಂದನೆಗಳು ಹಾಗೆ ಎಲ್ಲ ಮಹಿಳಾ ಮಣಿಗಳ ಆಗಮನಕ್ಕೆ ಶುಭವನ್ನು ಕೋರುತ್ತಿರುವ ಶ್ರೀಮತಿ ವೀಣಾ ಮಹಂತೇಶ್ ಬಿ ಎಮ್ ದಾವಣಗೆರೆ.

ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ.

Continue Reading

ದಿನದ ಸುದ್ದಿ

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

Published

on

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು.

ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್ ಶಾಸಕ ಶಿವಗಂಗಾ ಬಸವರಾಜ್ ಅವರು, ನಾನು ಡಿ.ಕೆ ಶಿವಕುಮಾರ್‌ ಅವರ ಮನೆಮಗ, ಶಿವನ ಮುಂದೆ ಇರುವ ಬಸವ ನಾನು. ನಾನೇ ಮುಖ್ಯಮಂತ್ರಿ ಇದ್ದಂತೆ, ಮನೆ ಮಗನಿಗೆ ಯಾವಾಗಲೂ ಅವರ ಆಶೀರ್ವಾದ ಇದ್ದೇ ಇರುತ್ತದೆ ಎಂದಿದ್ದಾರೆ.

ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ ಹಾಗೂ ಸಾರ್ವಜನಿಕರ ಅಹವಾಲು ಸ್ವೀಕರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜನರು ತಮ್ಮ ಮೇಲೆ ಇಟ್ಟಿರುವ ವಿಶ್ವಾಸಕ್ಕೆ ತಕ್ಕಂತೆ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ ಎಂದು ತಿಳಿಸಿದರು.

“ನಾನು ಮುಖ್ಯಮಂತ್ರಿ ಅಲ್ಲ. ಆದರೆ ನನ್ನ ಕ್ಷೇತ್ರದ ಅಭಿವೃದ್ಧಿ ವಿಚಾರ ಬಂದಾಗ ಮುಖ್ಯಮಂತ್ರಿಯಂತೆ ಜವಾಬ್ದಾರಿ ಹೊತ್ತು ಕೆಲಸ ಮಾಡುತ್ತಿದ್ದೇನೆ. ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದು ನನ್ನ ಮೊದಲ ಕರ್ತವ್ಯವಾಗಿದೆ. ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಹಾಗೂ ಮೂಲಸೌಕರ್ಯಗಳ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡಲಾಗಿದೆ,” ಎಂದು ಅವರು ಹೇಳಿದರು.

ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾಮಗಾರಿಗಳು ಈಗಾಗಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳು ಪ್ರಗತಿಯಲ್ಲಿವೆ ಎಂದು ತಿಳಿಸಿದ ಅವರು, ಸರ್ಕಾರದ ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ನಿರಂತರ ಸಮನ್ವಯ ಸಾಧಿಸಿ ಜನರ ಸಮಸ್ಯೆಗಳಿಗೆ ಪರಿಹಾರ ಒದಗಿಸಲಾಗುತ್ತಿದೆ ಎಂದರು.

“ಜನಪ್ರತಿನಿಧಿಯಾಗಿ ಚುನಾಯಿತರಾದ ಬಳಿಕ ಕ್ಷೇತ್ರದ ಪ್ರತಿಯೊಂದು ಹಳ್ಳಿಗೂ ಭೇಟಿ ನೀಡಿ ಅಲ್ಲಿನ ಜನರ ಸಮಸ್ಯೆಗಳನ್ನು ಆಲಿಸಿದ್ದೇನೆ. ಗ್ರಾಮಗಳ ಮೂಲಭೂತ ಸೌಕರ್ಯಗಳನ್ನು ಅಭಿವೃದ್ಧಿಪಡಿಸಲು ಅಗತ್ಯ ಅನುದಾನ ತರುವ ಪ್ರಯತ್ನ ಮಾಡಲಾಗಿದೆ. ಕುಡಿಯುವ ನೀರಿನ ಯೋಜನೆಗಳು, ರಸ್ತೆ ಅಭಿವೃದ್ಧಿ, ಶಾಲೆಗಳ ಮೂಲಸೌಕರ್ಯ ಸುಧಾರಣೆ ಸೇರಿದಂತೆ ಹಲವು ಕಾಮಗಾರಿಗಳಿಗೆ ವೇಗ ನೀಡಲಾಗಿದೆ,” ಎಂದು ಹೇಳಿದರು.

ಕ್ಷೇತ್ರದ ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸುವ ನಿಟ್ಟಿನಲ್ಲಿ ಕೈಗಾರಿಕೆಗಳನ್ನು ಆಕರ್ಷಿಸುವ ಪ್ರಯತ್ನ ನಡೆಯುತ್ತಿದೆ. ಕೃಷಿ ಕ್ಷೇತ್ರಕ್ಕೆ ಅಗತ್ಯವಾದ ನೀರಾವರಿ ಹಾಗೂ ರೈತರಿಗೆ ಅನುಕೂಲಕರ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ಅವರು ಹೇಳಿದರು.

ಸರ್ಕಾರದ ಅಭಿವೃದ್ಧಿ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅರ್ಹ ವ್ಯಕ್ತಿ ಯೋಜನೆಯಿಂದ ವಂಚಿತರಾಗಬಾರದು ಎಂಬುದು ತಮ್ಮ ಉದ್ದೇಶವಾಗಿದೆ ಎಂದು ಶಾಸಕರು ತಿಳಿಸಿದರು.

ವಿರೋಧ ಪಕ್ಷಗಳ ಟೀಕೆ ಕುರಿತು ಪ್ರತಿಕ್ರಿಯಿಸಿದ ಅವರು, “ಟೀಕೆಗಳು ಪ್ರಜಾಪ್ರಭುತ್ವದ ಭಾಗ. ಆದರೆ ಅಭಿವೃದ್ಧಿಯೇ ನಮ್ಮ ಉತ್ತರ. ಜನರ ಸಮಸ್ಯೆಗಳಿಗೆ ಪರಿಹಾರ ನೀಡುವುದು ಹಾಗೂ ಕ್ಷೇತ್ರವನ್ನು ಮಾದರಿ ಕ್ಷೇತ್ರವನ್ನಾಗಿ ರೂಪಿಸುವುದೇ ನಮ್ಮ ಗುರಿಯಾಗಿದೆ,” ಎಂದರು.

ಕ್ಷೇತ್ರದ ಜನರು ಅಭಿವೃದ್ಧಿಗೆ ಸಹಕಾರ ನೀಡುತ್ತಿರುವುದಕ್ಕೆ ಕೃತಜ್ಞತೆ ಸಲ್ಲಿಸಿದ ಅವರು, ಸಾರ್ವಜನಿಕರು ಯಾವುದೇ ಸಮಸ್ಯೆಗಳಿದ್ದರೂ ನೇರವಾಗಿ ಸಂಪರ್ಕಿಸಬಹುದು. ಜನಸೇವೆಗಾಗಿ ತಮ್ಮ ಕಚೇರಿ ಸದಾ ತೆರೆದಿರುತ್ತದೆ ಎಂದು ಹೇಳಿದರು.

ಮುಂದಿನ ದಿನಗಳಲ್ಲಿ ಮತ್ತಷ್ಟು ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಶಿಕ್ಷಣ, ಆರೋಗ್ಯ, ಕುಡಿಯುವ ನೀರು, ರಸ್ತೆ, ಗ್ರಾಮೀಣ ಅಭಿವೃದ್ಧಿ ಸೇರಿದಂತೆ ವಿವಿಧ ಕ್ಷೇತ್ರಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಅವರು ತಿಳಿಸಿದರು.

ಈ ಸಂದರ್ಭದಲ್ಲಿ ಪಕ್ಷದ ಮುಖಂಡರು, ಸ್ಥಳೀಯ ಜನಪ್ರತಿನಿಧಿಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

ದಿನದ ಸುದ್ದಿ

ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ ವಿಧಾನಗಳು, ಹೊಸ ಸಂಶೋಧನಾ ಕಲ್ಪನೆಗಳ ಸೃಷ್ಟಿ ಹಾಗೂ ಟೈಯರ್-1 ಸಂಶೋಧನಾ ಲೇಖನಗಳ ಬರಹದ ಪ್ರಮುಖ ಅಂಶಗಳು” ಎಂಬ ವಿಷಯದ ಕುರಿತು ಒಂದು ದಿನದ ರಾಷ್ಟ್ರೀಯ ಮಟ್ಟದ ಕಾರ್ಯಾಗಾರ ಯಶಸ್ವಿಯಾಗಿ ನಡೆಯಿತು.

ಕಾರ್ಯಾಗಾರವನ್ನು ಉದ್ಘಾಟಿಸಿ ಮಾತನಾಡಿದ ದಾವಣಗೆರೆ ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ, ಗುಣಮಟ್ಟದ ಸಂಶೋಧನೆಯೇ ವಿಶ್ವವಿದ್ಯಾಲಯಗಳ ಶೈಕ್ಷಣಿಕ ಪ್ರಗತಿ ಮತ್ತು ಜಾಗತಿಕ ಮಾನ್ಯತೆಯ ಮೂಲಾಧಾರವಾಗಿದೆ ಎಂದು ಹೇಳಿದರು.

ಸಂಶೋಧನೆ ಕೇವಲ ಪದವಿ ಪಡೆಯುವ ಪ್ರಕ್ರಿಯೆಯಾಗಬಾರದು, ಅದು ಸಮಾಜದ ಸಮಸ್ಯೆಗಳಿಗೆ ಪರಿಹಾರ ನೀಡುವ ದಿಕ್ಕಿನಲ್ಲಿ ಸಾಗಬೇಕು. ಅಂತರರಾಷ್ಟ್ರೀಯ ಮಟ್ಟದಲ್ಲಿ ಗುಣಮಟ್ಟದ ಪ್ರಕಟಣೆಗಳು ವಿಶ್ವವಿದ್ಯಾಲಯದ ಸಂಶೋಧನಾ ಸಾಮರ್ಥ್ಯವನ್ನು ಪ್ರತಿಬಿಂಬಿಸುತ್ತವೆ ಎಂದು ಅಭಿಪ್ರಾಯಪಟ್ಟರು.

ಮುಖ್ಯ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದ ಯು ಕೆ ಮಾಂಚೆಸ್ಟರ್‌ನ ‘ಯೂನಿವರ್ಸಿಟಿ ಆಫ್ ಸ್ಯಾಲ್‌ಫೋರ್ಡ್’ನ ಕಂಪ್ಯೂಟರ್ ಸೈನ್ಸ್ ಪ್ರಾಧ್ಯಾಪಕ ಡಾ. ಶಿವಕುಮಾರ ಪಿ. ಮಾತನಾಡಿ, ಸಂಶೋಧನಾ ಸಮಸ್ಯೆ ಗುರುತಿಸುವಿಕೆ, ಸಂಶೋಧನಾ ಅಂತರ (Research Gap) ಪತ್ತೆ, ಸಾಹಿತ್ಯ ಸಮೀಕ್ಷೆ, ಪ್ರಯೋಗಾತ್ಮಕ ವಿನ್ಯಾಸ (Experimental Design), ಟೈಯರ್-1 ಜರ್ನಲ್ ಲೇಖನ ಬರಹ, ಪ್ರಕಟಣಾ ನೈತಿಕತೆ ಹಾಗೂ ವಿಮರ್ಶಕರ ಅಭಿಪ್ರಾಯಗಳಿಗೆ ಪರಿಣಾಮಕಾರಿಯಾಗಿ ಪ್ರತಿಕ್ರಿಯಿಸುವ ವಿಧಾನಗಳ ಕುರಿತು ಸಮಗ್ರ ಮಾಹಿತಿ ನೀಡಿದರು.

“ಒಂದು ಉತ್ತಮ ಸಂಶೋಧನಾ ಲೇಖನದ ಯಶಸ್ಸು ಅದರ ಹೊಸತನ, ವೈಜ್ಞಾನಿಕ ವಿಧಾನ ಮತ್ತು ಸ್ಪಷ್ಟವಾದ ಪ್ರಸ್ತುತೀಕರಣದಲ್ಲಿ ಅಡಗಿದೆ. ಸಂಶೋಧಕರು ಗುಣಮಟ್ಟದ ಸಮಸ್ಯೆಗಳನ್ನು ಆಯ್ಕೆ ಮಾಡಿಕೊಂಡು ಅಂತರರಾಷ್ಟ್ರೀಯ ಮಟ್ಟದ ಪ್ರಕಟಣೆಗೆ ಸಿದ್ಧರಾಗಬೇಕು,” ಎಂದು ಅವರು ಕರೆ ನೀಡಿದರು.

ಕಾರ್ಯಾಗಾರದಲ್ಲಿ 250ಕ್ಕೂ ಹೆಚ್ಚು ಸಂಶೋಧನಾ ವಿದ್ಯಾರ್ಥಿಗಳು, ಸ್ನಾತಕೋತ್ತರ ವಿದ್ಯಾರ್ಥಿಗಳು ಹಾಗೂ ವಿವಿಧ ವಿಭಾಗಗಳ ಅಧ್ಯಾಪಕರು ಭಾಗವಹಿಸಿದ್ದರು. ಪೋಸ್ಟರ್ ಪ್ರಸೆಂಟೇಷನ್‌ಗಳು, ಸಂವಾದಾತ್ಮಕ ಚರ್ಚೆಗಳು ಮತ್ತು ಸಂಶೋಧನಾ ಲೇಖನ ಬರಹದ ಪ್ರಾಯೋಗಿಕ ಮಾರ್ಗದರ್ಶನ ಕಾರ್ಯಕ್ರಮದ ವಿಶೇಷ ಆಕರ್ಷಣೆಯಾಗಿತ್ತು. ಭವಿಷ್ಯದಲ್ಲೂ ಇಂತಹ ಕಾರ್ಯಾಗಾರಗಳ ಸರಣಿಯನ್ನು ಆಯೋಜಿಸಲು ವಿಶ್ವವಿದ್ಯಾಲಯ ನಿರ್ಧರಿಸಿದೆ. ಭಾಗವಹಿಸಿದ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರಗಳನ್ನು ವಿತರಿಸಲಾಯಿತು.

ಕಾರ್ಯಕ್ರಮದಲ್ಲಿ ಕುಲಸಚಿವ ಶ್ರೀ ಎಸ್. ಬಿ. ಗಂಟಿ, ಪರೀಕ್ಷಾಂಗ ಕುಲಸಚಿವ ಡಾ. ಸಿ. ಕೆ. ರಮೇಶ್, ಡಾ. ಬಸವಣ್ಣ ಎಮ್. ಅಧ್ಯಕ್ಷರು, ಎಮ್.ಸಿ.ಎ ವಿಭಾಗ, ಡಾ. ಚಂದ್ರಕಾಂತ ಎನ್. ಅಧ್ಯಕ್ಷರು, ಕಂಪ್ಯೂಟರ್ ಸೈನ್ಸ್ ವಿಭಾಗ, ಹಣಕಾಸು ಅಧಿಕಾರಿ ಡಾ. ಆರ್. ಶಶಿಧರ್ ಹಾಗೂ ವಿವಿಧ ವಿಭಾಗಗಳ ಅಧ್ಯಕ್ಷರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ಅಂತರಂಗ2 days ago

ಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು

~ಶ್ರೀಮತಿ ವೀಣಾ ಮಹಾಂತೇಶ್ ಬಿ ಎಂ ಲೇಖಕಿ ಆಪ್ತ ಸಮಾಲೋಚಕಿ. ದಾವಣಗೆರೆ ಆಗಸ್ಟ್ ದಿನಾಂಕ 8 ಮತ್ತು 9ನೇ ತಾರೀಕು,ಸಾಹಿತ್ಯದ ಬೃಹತ್ ಹಡಗೊಂದು ಶ್ರೀಮಂತನಗರಿ ದಾವಣಗೆರೆ. ಜ್ಞಾನದ...

ದಿನದ ಸುದ್ದಿ3 days ago

ನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್

ಸುದ್ದಿದಿನ,ದಾವಣಗೆರೆ: “ತಮ್ಮ ಕ್ಷೇತ್ರದ ಅಭಿವೃದ್ಧಿ ವಿಚಾರದಲ್ಲಿ ತಾವು ಮುಖ್ಯಮಂತ್ರಿಯಂತೆ ಜವಾಬ್ದಾರಿಯಿಂದ ಕೆಲಸ ಮಾಡುತ್ತಿದ್ದೇನೆ” ಎಂದು ಶಾಸಕ ಶಿವಗಂಗಾ ಬಸವರಾಜ್ ಹೇಳಿದರು. ದಾವಣಗೆರೆಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಕಾಂಗ್ರೆಸ್...

ದಿನದ ಸುದ್ದಿ4 days ago

ದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ

ಸುದ್ದಿದಿನ,ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯದ ಶಿವಗಂಗೋತ್ರಿಯ ನೂತನ ವಿಜ್ಞಾನ ಸಭಾಂಗಣದಲ್ಲಿ ಕಂಪ್ಯೂಟರ್ ಅಪ್ಲಿಕೇಷನ್ಸ್ (ಎಮ್.ಸಿ.ಎ) ಹಾಗೂ ಕಂಪ್ಯೂಟರ್ ಸೈನ್ಸ್ (ಎಮ್.ಎಸ್ಸಿ) ವಿಭಾಗಗಳ ಸಂಯುಕ್ತಾಶ್ರಯದಲ್ಲಿ “ಸಂಶೋಧನಾ ಸಮಸ್ಯೆಯನ್ನು ಗುರುತಿಸುವ ವಿವಿಧ...

ದಿನದ ಸುದ್ದಿ6 days ago

ಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ

ಸುದ್ದಿದಿನ,ದಾವಣಗೆರೆ: ರಾಜ್ಯ ಸಚಿವ ಸಂಪುಟ ವಿಸ್ತರಣೆಯಲ್ಲಿ ಮಾಯಕೊಂಡ ವಿಧಾನಸಭಾ ಕ್ಷೇತ್ರದ ಶಾಸಕ ಕೆ.ಎಸ್. ಬಸವಂತಪ್ಪ ಅವರಿಗೆ ಸಚಿವ ಸ್ಥಾನ ದೊರೆತಿರುವುದು ದಾವಣಗೆರೆ ಜಿಲ್ಲೆಯ ರಾಜಕೀಯ ಇತಿಹಾಸದಲ್ಲಿ ಮಹತ್ವದ...

ದಿನದ ಸುದ್ದಿ1 week ago

ಡಾ. ಪ್ರೀತಿ ಅವರಿಗೆ ‘ಪರಮ್ ಭೂಷಣ್ ನ್ಯಾಷನಲ್ ಎಕ್ಸಲೆನ್ಸ್ ಅವಾರ್ಡ್

ಸುದ್ದಿದಿನ,ದಾವಣಗೆರೆ: ದಾವಣಗೆರೆಯ ಹೆಮ್ಮೆಯ ಶಿಕ್ಷಣ ತಜ್ಞೆ, ಉದ್ಯಮಿ ಹಾಗೂ Parvatha Global Ventures LLP ಸಂಸ್ಥೆಯ ಸಂಸ್ಥಾಪಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (Founder & CEO)...

ದಿನದ ಸುದ್ದಿ2 weeks ago

ಸುಶೋಭನ್ ಸೋನು ರಾಯ್ ಬೆಳ್ಳಿತೆರೆಗೆ

ಸುದ್ದಿದಿನ ಡೆಸ್ಕ್:ಹಲವಾರು ವರ್ಷಗಳ ಕಾಲ ಬಂಗಾಳಿ ಟೆಲಿವಿಷನ್ನಲ್ಲಿ ಕೆಲಸ ಮಾಡಿದ ನಂತರ ಮತ್ತು ನಂತರ ಮಾಡೆಲಿಂಗ್ ಮೂಲಕ ತಮ್ಮ ವೃತ್ತಿಜೀವನವನ್ನು ವಿಸ್ತರಿಸಿದ ನಂತರ, ಅಭಿನೇತಾ ಸುಶೋಭನ್ ಸೋನು...

ದಿನದ ಸುದ್ದಿ2 weeks ago

ತುರ್ತು ಕುಡಿಯುವ ನೀರಿನ ಯೋಜನೆ ; 7 ಕೋಟಿ ಅನುದಾನದಲ್ಲಿ ಅವ್ಯವಹಾರ : ತನಿಖೆಗೆ ಆದೇಶಿಸಿ ವಕೀಲ ಡಾ‌.ಕೆ.ಎ.ಓಬಳಪ್ಪ ಲೋಕಾಗೆ ದೂರು

ಸುದ್ದಿದಿನ, ಚಿತ್ರದುರ್ಗ: ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗಗಳಲ್ಲಿ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆಗೆ ಬಿಡುಗಡೆಯಾಗಿರುವ ಅಂದಾಜು 7...

ದಿನದ ಸುದ್ದಿ2 weeks ago

ಅನುದಾನ ದುರುಪಯೋಗ | ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ನಿರ್ದೇಶಕ ಡಾ. ಅಶೋಕ್ ಡಿ.ಆರ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ, ಮೈಸೂರು ಇವರಿಗೆ ರಾಜ್ಯಾದ್ಯಂತ ಅರಿವು ಮೂಡಿಸುವ ಕಾರ್ಯಕ್ರಮಕ್ಕೆ ಬಿಡುಗಡೆಯಾದ ರೂ. 695 ಲಕ್ಷಗಳ ಅನುದಾನದ ಖರ್ಚು ವೆಚ್ಚವನ್ನು ಇಲಾಖಾ...

ದಿನದ ಸುದ್ದಿ3 weeks ago

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,...

ದಿನದ ಸುದ್ದಿ3 weeks ago

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ....

Trending