Connect with us

ರಾಜಕೀಯ

ಮೋದಿ ಅಮೆರಿಕದ ಮುಂದೆ ತೆಪ್ಪಗೆ ತಲೆಬಾಗುತ್ತಿದ್ದಾರೆ

Published

on

  • ಮಹಾನ್ ರಾಷ್ಟ್ರೀಯವಾದಿ ಎಂದು ಬಿಂಬಿಸಲಾಗಿರುವ ನರೇಂದ್ರ ಮೋದಿ, ಒಂದಾದ ಮೇಲೆ ಒಂದರಂತೆ ಅಮೆರಿಕದ ಆದೇಶಗಳ ಎದುರು ಮಂಡಿಯೂರುತ್ತಿದ್ದಾರೆ.ಮೋದಿ ಸರಕಾರ ತನ್ನನ್ನು ಒಂದು ಅಡಿಯಾಳು ಮಿತ್ರನಾಗಿ ಕಟ್ಟಿಸಿಕೊಂಡಿರುವುದರಿಂದಾಗಿಯೇ ಅಮೆರಿಕವನ್ನು ಪ್ರತಿರೋಧಿಸಿ ನಿಲ್ಲಲು ಅಸಮರ್ಥವಾಗಿರುವುದು. ಟ್ರಂಪ್ ಆಡಳಿತದ ಭಂಡ ಆಗ್ರಹಗಳಿಗೆ ಮೋದಿ ಸರಕಾರದ ಹಲ್ಲುಗಿಂಜುವ ಇದುವರೆಗಿನ ಧೋರಣೆಯನ್ನು ಗಮನಿಸಿದರೆ ಅದು ಅಮೆರಿಕದ ಕಿರಿಯ ಮಿತ್ರನ ಪಾತ್ರ ವಹಿಸುವುದನ್ನು ಮುಂದುವರಿಸುತ್ತದೆ ಎಂಬುದು ಗೋಚರಿಸುತ್ತದೆ.ಭಾರತದ ರಾಷ್ಟ್ರೀಯ ಹಿತಗಳನ್ನು ಸಾಮ್ರಾಜ್ಯಶಾಹಿ ಸೂಪರ್ ಪವರ್‌ನ ಹಿತಾಸಕ್ತಿಗಳಿಗೆ ಒತ್ತೆಯಿಡಲಾಗುವುದು.

ಮೋದಿ ಸರಕಾರದ ಎರಡನೇ ಅವಧಿಯು ಅಮೆರಿಕದ ಕಿರಿಯ ಪಾಲುದಾರನಾಗಿ ಭಾರತದ ಪಾತ್ರವನ್ನು ಇನ್ನಷ್ಟು
ಗಟ್ಟಿಗೊಳಿಸುವಂತದ್ದಾಗುತ್ತದೆ ಎನ್ನುವುದಕ್ಕೆ ಆಗಲೇ ಎಲ್ಲ ಸುಳಿವುಗಳು ಸಿಕ್ಕಿವೆ. ಪರಿಣಾಮವಾಗಿ ಇದು ನವ-ಉದಾರವಾದಿ ಅಜೆಂಡಾದ ಅನುಷ್ಠಾನವನ್ನು ಇನ್ನಷ್ಟು ತ್ವರಿತಗೊಳಿಸುತ್ತದೆ, ಮತ್ತು ಅದರಿಂದಾಗಿ ಜನತೆಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ.

2014-2019ರ ಅವಧಿಯಲ್ಲಿ ಮೋದಿ ಸರಕಾರವು ಭಾರತವನ್ನು ಅಮೆರಿಕದೊಂದಿಗೆ ವ್ಯೂಹಾತ್ಮಕವಾಗಿಯೂ ಮತ್ತು ಮಿಲಿಟರಿ ಕ್ಷೇತ್ರದಲ್ಲಿ ಮತ್ತಷ್ಟು ಜೋಡಿಸಿಕೊಳ್ಳಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿತ್ತು. ಮಿಲಿಟರಿ ಸಾಗಾಣಿಕೆ ಬೆಂಬಲ ಮತ್ತು ಸೇನಾ ಸಂಪರ್ಕ ಸಾಧನಗಳನ್ನು ಸಮಗ್ರೀಕರಿಸುವ ಒಪ್ಪಂದಗಳಿಗೆ ಸಹಿ ಹಾಕಲಾಗಿತ್ತು. ಜಪಾನ್, ಆಸ್ಟ್ರೇಲಿಯಾ, ಭಾರತ ಮತ್ತು ಅಮೆರಿಕ ಒಳಗೊಂಡ ಚತುಷ್ಪಕ್ಷೀಯ ಮೈತ್ರಿಕೂಟ ಮಾಡಿಕೊಳ್ಳುವ ಬಗ್ಗೆ ಅಮೆರಿಕ ಮಾಡಿದ್ದ ಪ್ರಸ್ತಾವನೆಗೆ ಭಾರತವೂ ಕೈಜೋಡಿಸಿತ್ತು.

ಈ ವ್ಯೂಹಾತ್ಮಕ ಅಪ್ಪುಗೆಯು ಏಷ್ಯಾ-ಶಾಂತಸಾಗರ ವಲಯದಲ್ಲಿ ಅಮೆರಿಕದ ಭೌಗೋಳಿಕ-ರಾಜಕೀಯ ಹಿತಗಳಿಗೆ ಸಂಪೂರ್ಣವಾಗಿ ಅನುಕೂಲಕರವಾದ ಒಂದು ವಿದೇಶಾಂಗ ನೀತಿಯನ್ನು ಭಾರತವು ಅನುಸರಿಸುವಂತೆ ಮಾಡಿತು.

ಈ ಹಿಂದೆ ರಷ್ಯಾ ಭಾರತಕ್ಕೆ ಶಸ್ತ್ರಾಸ್ತ್ರಗಳ ಮತ್ತು ಸಾಧನಗಳ ಪ್ರಮುಖ ಪೂರೈಕೆದಾರನಾಗಿತ್ತು. ಈಗ ಅಮೆರಿಕದ ಒತ್ತಡಕ್ಕೆ ಮಣಿದು ರಷ್ಯಾವನ್ನು ಬಿಟ್ಟು ಅಮೆರಿಕದಿಂದ ಶಸ್ತ್ರಾಸ್ತ್ರ ಮತ್ತು ಉಪಕರಣಗಳನ್ನು ಖರೀದಿಸುವ ಪ್ರಕ್ರಿಯೆಗೆ ಭಾರತ ವೇಗವನ್ನು ನೀಡಿತು. ಆಂತರಿಕ ನೀತಿಗಳ ಬಗ್ಗೆ ಹೇಳುವುದಾದರೆ, ಮೋದಿ ಸರಕಾರವು ಅಮೆರಿಕದ ಬಹುರಾಷ್ಟ್ರೀಯ ಕಾರ್ಪೊರೇಟ್‌ಗಳು ಮತ್ತು ಹಣಕಾಸು ಹಿತಗಳಿಗೆ ನೆರವಾಗುವ ಅನೇಕ ಕ್ರಮಗಳನ್ನು ಕೈಗೊಂಡಿತು.

ಡೊನಾಲ್ಡ್ ಟ್ರಂಪ್ 2018ರ ಜನವರಿಯಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ ಟ್ರಂಪ್‌ರ ಅಮೆರಿಕ ಮೊದಲು ಹಾಗೂ ಸ್ವರಕ್ಷಣಾತ್ಮಕ ನೀತಿಗಳಿಗೆ ಅನುಗುಣವಾಗಿ ಭಾರತದ ಮೇಲೆ ಅನೇಕ ಒತ್ತಡಗಳನ್ನು ಹೇರಲಾಯಿತು.

250 ಬಿಲಿಯ ಡಾಲರ್ ಮೌಲ್ಯದ ವಸ್ತುಗಳ ಮೇಲೆ ಸುಂಕವನ್ನು ಹೆಚ್ಚಿಸುವ ಮೂಲಕ ಹಾಗೂ ಇನ್ನೂ 325 ಬಿಲಿಯ ಡಾಲರ್ ವಸ್ತುಗಳಿಗೆ ಹಾಗೇ ಮಾಡುವುದಾಗಿ ಬೆದರಿಸುವ ಮೂಲಕ ಚೀನಾದ ವಿರುದ್ಧ ಟ್ರಂಪ್ ವಾಣಿಜ್ಯ ಸಮರವನ್ನು ಸಾರಿದರು. ಚೀನಾದ ಮಾರುಕಟ್ಟೆಯಲ್ಲಿ ಹೆಚ್ಚು ಅವಕಾಶಗಳನ್ನು ನೀಡಬೇಕು ಹಾಗೂ ಅಮೆರಿಕದ ತಂತ್ರಜ್ಞಾನ ಮತ್ತು ಬೌದ್ಧಿಕ ಆಸ್ತಿ ಹಕ್ಕುಗಳಿಗೆ ರಕ್ಷಣೆಗಳನ್ನು ನೀಡಬೇಕು ಎಂದು ಅವರು ಆಗ್ರಹಿಸಿದರು.

ಟ್ರಂಪ್ ಭಾರತವನ್ನು ಕೂಡ ಬಿಡಲಿಲ್ಲ. ಭಾರತದೊಂದಿಗಿನ ವಾಣಿಜ್ಯ ಕೊರತೆಯನ್ನು ತಿರುಗು-ಮುರುಗು ಮಾಡಬೇಕು ಹಾಗೂ ಭಾರತವು ಸುಂಕಗಳನ್ನು ಇಳಿಸಬೇಕು ಮತ್ತು ಅಮೆರಿಕದ ವಸ್ತುಗಳನ್ನು ಹೆಚ್ಚಾಗಿ ಆಮದು ಮಾಡಿಕೊಳ್ಳಬೇಕು ಎಂಬುದು ಅವರ ಬೇಡಿಕೆಯಾಗಿತ್ತು. ಈ ವಿಷಯದಲ್ಲಿ ಮೊದಲ ಹೆಜ್ಜೆಯಾಗಿ ಅವರು ಅಮೆರಿಕ ಆಮದು ಮಾಡಿಕೊಳ್ಳುತ್ತಿದ್ದ ಭಾರತದ ಅಲ್ಯುಮಿನಿಯಮ್ ಮತ್ತು ಉಕ್ಕಿನ ಮೇಲಿನ ಸುಂಕಗಳನ್ನು ಹೆಚ್ಚಿಸಿದರು. ಅದರ ಬೆನ್ನಲ್ಲೇ ಸುಂಕಗಳಿಲ್ಲದೆ ಭಾರತವು ಅನೇಕ ವಸ್ತುಗಳನ್ನು ರಫ್ತು ಮಾಡಲು ಅವಕಾಶ ನೀಡುವ ಪ್ರಾಶಸ್ತ್ಯದ ವ್ಯಾಪಾರ ಎಂದು ಪರಿಗಣಿಸುವುದನ್ನು ಕೊನೆಗೊಳಿಸಲು ಅವರು ನಿರ್ಧರಿಸಿದರು. ಈ ವ್ಯವಸ್ಥೆಯನ್ನು ತೆಗೆದು ಹಾಕಿದ್ದರಿಂದ ಭಾರತದಿಂದ ರಫ್ತಾಗುವ 1900 ವಸ್ತುಗಳಿಗೆ ಈಗ ಕಸ್ಟಮ್ಸ್ ಸುಂಕ ತೆರಬೇಕಾಗಿದೆ.

ಮಾರ್ಚ್ ಆರಂಭದಲ್ಲಿ ಅಮೆರಿಕ ಈ ಪ್ರಕಟಣೆಯನ್ನು ಮಾಡಿತು ಹಾಗೂ 60 ದಿನಗಳ ನಂತರ ಇದು ಅನುಷ್ಠಾನಕ್ಕೆ ಬರಲಿದೆ ಎಂದು ಹೇಳಿತು ಎನ್ನುವುದನ್ನು ಇಲ್ಲಿ ಗಮನಿಸಬೇಕು. ಆದಾಗ್ಯೂ ಈ ಪ್ರತಿಕೂಲ ಕ್ರಮವನ್ನು ನಿಲ್ಲಿಸಲು ಮೋದಿ ಸರಕಾರ ಯಾವುದೇ ಕ್ರಮವನ್ನು ಕೈಗೊಳ್ಳಲಿಲ್ಲ. ಅಥವಾ ಪ್ರತಿ-ಕ್ರಮಗಳಿಗೂ ಮುಂದಾಗಲಿಲ್ಲ. ಸುಂಕ ಹೇರಿದ್ದನ್ನು ಚೀನಾ ಯಾವ ರೀತಿಯಲ್ಲಿ ನಿರ್ವಹಿಸಿತು ಎನ್ನುವುದಕ್ಕೆ ಪೂರ್ತಿ ವ್ಯತಿರಿಕ್ತವಾದ ನಡೆ ಭಾರತದ್ದಾಗಿದೆ. ಚೀನಾವನ್ನು ಪ್ರವೇಶಿಸುವ ಅಮೆರಿಕದ ವಸ್ತುಗಳ ಮೇಲೆ ಸುಂಕವನ್ನು ಹೇರುವ ಮೂಲಕ ಚೀನಾ ತಿರುಗೇಟು ನೀಡಿತು.

ಮೋದಿ ಸರಕಾರ ತನ್ನನ್ನು ಒಂದು ಅಡಿಯಾಳು ವ್ಯೂಹಾತ್ಮಕ ಮಿತ್ರನಾಗಿ ಕಟ್ಟಿಸಿಕೊಂಡಿರುವುದರಿಂದಾಗಿಯೇ ಅಮೆರಿಕವನ್ನು ಪ್ರತಿರೋಧಿಸಿ ನಿಲ್ಲಲು ಅಸಮರ್ಥವಾಗಿರುವುದು.

ಮಹಾನ್ ರಾಷ್ಟ್ರೀಯವಾದಿ ಎಂದು ಬಿಂಬಿಸಲಾಗಿರುವ ನರೇಂದ್ರ ಮೋದಿ, ಒಂದಾದ ಮೇಲೆ ಒಂದರಂತೆ ಅಮೆರಿಕದ ಆದೇಶಗಳಿಗೆ ಮಂಡಿಯೂರುತ್ತಿದ್ದಾರೆ. ಇರಾನ್‌ನಿಂದ ತೈಲ ಆಮದು ಮಾಡಿಕೊಳ್ಳದಂತೆ ಭಾರತಕ್ಕೆ ಅಮೆರಿಕ ಆದೇಶಿಸಿತು. ಅದನ್ನು ಶಿರಸಾವಹಿಸಿ ಪಾಲಿಸಲಾಯಿತು. ಇದರಿಂದಾಗಿ ಭಾರತಕ್ಕೆ ತುಂಬಾ ನಷ್ಟವಾಗಲಿದೆ. ಯಾಕೆಂದರೆ ಅಂತಾರ್ರಾಷ್ಟ್ರೀಯ ಮಾರುಕಟ್ಟೆಗಿಂತ ಕಡಿಮೆ ಬೆಲೆಯಲ್ಲಿ ಇರಾನ್‌ನಿಂದ ಎಣ್ಣೆಯನ್ನು ತರಿಸಿಕೊಳ್ಳಲಾಗುತ್ತಿತ್ತು. ಅದಾದ ನಂತರ, ವೆನಿಜುವೆಲಾ ವಿರುದ್ಧದ ಆರ್ಥಿಕ ಸಮರದ ಭಾಗವಾಗಿ ಅಮೆರಿಕವು ವೆನಿಜುವೆಲಾದಿಂದ ತೈಲ ಆಮದು ನಿಲ್ಲಿಸುವಂತೆ ಭಾರತಕ್ಕೆ ಒತ್ತಾಯಿಸಿತು. ಮೋದಿ ಸರಕಾರ ಇದನ್ನು ಕೂಡ ತಡ ಮಾಡದೆ ಪಾಲಿಸಿತು.

ರಷ್ಯಾದ ಟ್ರೈಯಂಫ್ ಎಸ್-400 ಕ್ಷಿಪಣಿಗಳನ್ನು ಖರೀದಿಸಿದ್ದಕ್ಕೆ ದಿಗ್ಬಂಧನಗಳನ್ನು ಹೇರದಂತೆ ಅಮೆರಿಕಕ್ಕೆ ಭಾರತ ಅಂಗಲಾಚುತ್ತಿದೆ. ಆದರೆ ಭಾರತದ ವಿರುದ್ಧ ದಿಗ್ಬಂಧನ ವಿಧಿಸುವುದಾಗಿ ಅಮೆರಿಕ ಬೆದರಿಕೆ ಹಾಕುತ್ತಲೇ ಇದೆ. ಪರಿಹಾರವಾಗಿ ಅಮೆರಿಕದಿಂದ ಹೆಚ್ಚು ಶಸ್ತ್ರಾಸ್ತ್ರಗಳನ್ನು ಆಮದು ಮಾಡಿಕೊಳ್ಳುವಂತೆ ಒತ್ತಡ ಹೇರುವುದು ಇದರ ಉದ್ದೇಶವಾಗಿದೆ.

ಲಾಕ್‌ಹೀಡ್ ನಿರ್ಮಿತ ಎಫ್-21 ಯುದ್ಧ ವಿಮಾನಗಳನ್ನು ಖರೀದಿಸುವಂತೆ ಭಾರತದ ಮೇಲೆ ಅಪಾರ ಒತ್ತಡ ಹೇರಲಾಗುತ್ತಿದೆ. 110 ಯುದ್ಧ ವಿಮಾನಗಳ ಖರೀದಿಗೆ (ರಫೇಲ್ ಯುದ್ಧ ವಿಮಾನ ಖರೀದಿಯನ್ನು 36ಕ್ಕೆ ಇಳಿಸಿದ ನಂತರ) ಭಾರತದ ಒಂದು ಟೆಂಡರ್ ಪ್ರಕಟಿಸಿದೆ. ಬಿಲಿಯಗಟ್ಟಲೆ ಡಾಲರ್ ಮೌಲ್ಯದ ಈ ಗುತ್ತಿಗೆಯನ್ನು ಪಡೆಯಲು ಅಮೆರಿಕ ಭಾರತವನ್ನು ಪೀಡಿಸುತ್ತಿದೆ.

ಅಮೆರಿಕದ ವಿದೇಶ ಸಚಿವ ಮೈಕ್ ಪಾಂಪಿಯೊ ಜೂನ್ ಮೂರನೇ ವಾರದಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಮೋದಿ ಅಧಿಕಾರಕ್ಕೆ ಮರಳಿದ ನಂತರದ ಮೊದಲ ಭೇಟಿಯಿದು. ವಾಣಿಜ್ಯ ವಿಚಾರದಲ್ಲಿ ಕಠಿಣ ಮಾತು, ರಷ್ಯಾದ ಕ್ಷಿಪಣಿಗಳನ್ನು ಖರೀದಿಸಿದ್ದಕ್ಕೆ ಪರಿಹಾರವಾಗಿ ಅಮೆರಿಕದ ಹೆಚ್ಚು ಶಸ್ತ್ರಾಸ್ತ್ರಗಳನ್ನು ಖರೀದಿಸುವಂತೆ ಒತ್ತಾಯಿಸುವುದು, ಚೀನಾದ ಬೃಹತ್ ಕಂಪೆನಿಯಾದ ಹುವೈ ಭಾರತದಲ್ಲಿ ನಡೆಯುವ 5ಜಿ ಕಾರ್ಯಕ್ರಮದಲ್ಲಿ ಭಾಗವಹಿಸುವುದನ್ನು ನಿಷೇಧಿಸುವುದು- ಇವೆಲ್ಲ ಪಾಂಪಿಯೊ ಭೇಟಿ ವೇಳೆ ಇರಲಿರುವ ಕಾರ್ಯಸೂಚಿಯಾಗಿದೆ.

ಮಾಜಿ ವಿದೇಶಾಂಗ ಕಾರ್ಯದರ್ಶಿ ಎಸ್. ಜೈಶಂಕರ್ ಇದೀಗ ಮೋದಿ ಸರಕಾರದ ಹೊಸ ವಿದೇಶ ಸಚಿವರು. ಒಬ್ಬ ವೃತ್ತಿನಿರತ ರಾಜತಾಂತ್ರಿಕನನ್ನು ನೇರವಾಗಿ ಸಚಿವ ಸಂಪುಟಕ್ಕೆ ಬಡ್ತಿ ನೀಡಿದ್ದು ಇದೇ ಮೊದಲ ಸಲವಾಗಿದೆ. ಅಮೆರಿಕ-ಪರ ಚಟುವಟಿಕೆಗಳಿಗೆ ಜೈಶಂಕರ್ ಖ್ಯಾತರು. ವಿದೇಶ ವ್ಯವಹಾರಗಳ ಸಚಿವಾಲಯದಲ್ಲಿನ ಹಾಗೂ ವಿದೇಶಾಂಗ ಕಾರ್ಯದರ್ಶಿಯಾಗಿ ಅವರ ಕಾರ್ಯಗಳ ದಾಖಲೆಗಳು ಹೇಗೆ ಅವರು ಅಮೆರಿಕದೊಂದಿಗೆ ನಿಕಟ ವ್ಯೂಹಾತ್ಮಕ ಮೈತ್ರಿಗೆ ಒತ್ತು ನೀಡಿದ್ದರು ಎನ್ನುವುದನ್ನು ತೋರಿಸುತ್ತವೆ.

ಟ್ರಂಪ್ ಆಡಳಿತದ ಭಂಡ ಆಗ್ರಹಗಳಿಗೆ ಮೋದಿ ಸರಕಾರದ ಹಲ್ಲುಗಿಂಜುವ ಇದುವರೆಗಿನ ಧೋರಣೆಯನ್ನು ಗಮನಿಸಿದರೆ ಅದು ಅಮೆರಿಕದ ಕಿರಿಯ ಮಿತ್ರನ ಪಾತ್ರ ವಹಿಸುವುದನ್ನು ಮುಂದುವರಿಸುತ್ತದೆ ಎಂಬುದು ಗೋಚರಿಸುತ್ತದೆ. ಭಾರತದ ರಾಷ್ಟ್ರೀಯ ಹಿತಗಳನ್ನು ಸಾಮ್ರಾಜ್ಯಶಾಹಿ ಸೂಪರ್ ಪವರ್‌ನ ಹಿತಾಸಕ್ತಿಗಳಿಗೆ ಒತ್ತೆಯಿಡಲಾಗುವುದು.

ಇರಾನ್‌ನಿಂದ ತೈಲ ಆಮದು ಮಾಡಿಕೊಳ್ಳದಂತೆ ಭಾರತಕ್ಕೆ ಅಮೆರಿಕ ಆದೇಶಿಸಿತು. ಅದನ್ನು ,ದೇಶಕ್ಕೆತುಂಬಾನಷ್ಟವಾಗುತ್ತಿದ್ದರೂಶಿರಸಾವಹಿಸಿ ಪಾಲಿಸಲಾಯಿತು. ನಂತರ, ವೆನಿಜುವೆಲಾ ವಿರುದ್ಧದ ಆರ್ಥಿಕ ಸಮರದ ಭಾಗವಾಗಿ ಅಮೆರಿಕವು ವೆನಿಜುವೆಲಾದಿಂದ ತೈಲ ಆಮದು ನಿಲ್ಲಿಸುವಂತೆ ಭಾರತಕ್ಕೆ ಒತ್ತಾಯಿಸಿತು. ಮೋದಿ ಸರಕಾರ ಇದನ್ನು ಕೂಡ ತಡ ಮಾಡದೆ ಪಾಲಿಸಿತು. ರಷ್ಯಾದ ಟ್ರೈಯಂಫ್ ಎಸ್-೪೦೦ ಕ್ಷಿಪಣಿಗಳನ್ನು ಖರೀದಿಸಿದ್ದಕ್ಕೆ ದಿಗ್ಬಂಧನಗಳನ್ನು ಹೇರದಂತೆ ಅಮೆರಿಕಕ್ಕೆ ಭಾರತ ಅಂಗಲಾಚುತ್ತಿದೆ. ಆದರೆ ಭಾರತದ ವಿರುದ್ಧ ದಿಗ್ಬಂಧನ ವಿಧಿಸುವುದಾಗಿ ಅಮೆರಿಕ ಬೆದರಿಕೆ ಹಾಕುತ್ತಲೇ ಇದೆ. ಪರಿಹಾರವಾಗಿ ಅಮೆರಿಕದಿಂದ ಹೆಚ್ಚು ಶಸ್ತ್ರಾಸ್ತ್ರಗಳನ್ನು ಆಮದು ಮಾಡಿಕೊಳ್ಳುವಂತೆ ಒತ್ತಡ ಹೇರುವುದು ಇದರ ಉದ್ದೇಶವಾಗಿದೆ.

ಪ್ರಕಾಶ್ ಕಾರಟ್
ಅನು: ವಿಶ್ವ

(ಕೃಪೆ : ಜನಶಕ್ತಿ)

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

Published

on

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.

ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ  2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆಶ್ರಯ ಯೋಜನೆ – ಆವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್‌ ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ

Published

on

ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಲಾಗುವುದು ಎಂದು ತಿಳಿಸಿದ್ದಾರೆ.

ಮೊದಲ ಸಚಿವ ಸಂಪುಟ ಸಭೆಯ ಬಳಿಕ ಮಾತನಾಡಿದ ಅವರು, ರಾಜ್ಯದ ಸಮಗ್ರ ಅಭಿವೃದ್ಧಿ ಹಾಗೂ ಜನರ ಸಮಸ್ಯೆಗಳ ತ್ವರಿತ ಪರಿಹಾರವೇ ತಮ್ಮ ಸರ್ಕಾರದ ಪ್ರಮುಖ ಗುರಿಯಾಗಿದೆ ಎಂದು ಹೇಳಿದರು.

ರಾಜ್ಯದಾದ್ಯಂತ ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ಯೋಜನೆ ಜಾರಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ತಿಳಿಸಿದರು. ಜೊತೆಗೆ ಯುವಜನರಲ್ಲಿ ನಾಯಕತ್ವ ಗುಣಗಳನ್ನು ಬೆಳೆಸುವ ಉದ್ದೇಶದಿಂದ “ಭಾರತ್ ಜೋಡೋ ಯುವ ಸಂಘ”ಗಳ ರಚನೆಗೆ ಸರ್ಕಾರ ಮುಂದಾಗಲಿದೆ ಎಂದು ಹೇಳಿದರು. ಈ ಸಂಘಟನೆಗಳು ಸಾಮಾಜಿಕ ಸೌಹಾರ್ದತೆ ಮತ್ತು ಯುವಜನರ ಸಬಲೀಕರಣಕ್ಕೆ ನೆರವಾಗಲಿವೆ ಎಂದು ಅಭಿಪ್ರಾಯಪಟ್ಟರು.

ನಗರ ಹಾಗೂ ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಸುಧಾರಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದ ಮುಖ್ಯಮಂತ್ರಿ, ವಿಶೇಷವಾಗಿ ಬೆಂಗಳೂರಿನ ಹದಗೆಟ್ಟ ರಸ್ತೆಗಳ ದುರಸ್ತಿ ಮತ್ತು ಡಾಂಬರೀಕರಣ ಕಾರ್ಯಗಳನ್ನು ತ್ವರಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು. ಜನರು ಎದುರಿಸುತ್ತಿರುವ ನಾಗರಿಕ ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.

ಮನೆ ನಿರ್ಮಾಣ ಹಾಗೂ ಆಸ್ತಿ ದಾಖಲೆಗಳಿಗೆ ಸಂಬಂಧಿಸಿದ ಎ-ಖಾತಾ ಮತ್ತು ಬಿ-ಖಾತಾ ಸಮಸ್ಯೆಗಳ ಪರಿಹಾರಕ್ಕೂ ಸರ್ಕಾರ ಕ್ರಮ ಕೈಗೊಳ್ಳಲಿದೆ ಎಂದು ಡಿ.ಕೆ. ಶಿವಕುಮಾರ್ ತಿಳಿಸಿದರು. ಜನಸಾಮಾನ್ಯರ ಬದುಕಿಗೆ ನೇರವಾಗಿ ಸಂಬಂಧಿಸಿದ ವಿಷಯಗಳಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದು ಅವರು ಸ್ಪಷ್ಟಪಡಿಸಿದರು.

ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿರುವುದು ತಮ್ಮ ಜೀವನದ ಮಹತ್ವದ ಜವಾಬ್ದಾರಿಯಾಗಿದೆ ಎಂದು ಹೇಳಿದ ಅವರು, ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಂಡು ಎಲ್ಲ ವರ್ಗಗಳ ಅಭಿವೃದ್ಧಿಗೆ ಶ್ರಮಿಸುವುದಾಗಿ ಭರವಸೆ ನೀಡಿದರು. ರಾಜ್ಯದ ಅಭಿವೃದ್ಧಿಗೆ ಜನರ ಸಹಕಾರ ಅಗತ್ಯವಾಗಿದ್ದು, ಪಾರದರ್ಶಕ ಮತ್ತು ಉತ್ತರದಾಯಿ ಆಡಳಿತ ನೀಡುವುದು ತಮ್ಮ ಸಂಕಲ್ಪವಾಗಿದೆ ಎಂದು ಹೇಳಿದರು.

“ಜನರ ನಿರೀಕ್ಷೆಗಳಿಗೆ ತಕ್ಕಂತೆ ಕೆಲಸ ಮಾಡುವ ಸರ್ಕಾರವನ್ನು ನೀಡುತ್ತೇವೆ. ಯುವಕರು, ರೈತರು, ಮಹಿಳೆಯರು ಮತ್ತು ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದುವಾಗಿರುತ್ತದೆ” ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 days ago

ವಸತಿ ಯೋಜನೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ವಸತಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ.ಅರ್ಜಿ ಸಲ್ಲಿಸಲು ಜೂನ್ 12 ಕೊನೆಯ ದಿನವಾಗಿರುತ್ತದೆ. ಈ...

ದಿನದ ಸುದ್ದಿ2 days ago

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ...

ದಿನದ ಸುದ್ದಿ3 days ago

ರಾಷ್ಟ್ರೀಯ ಖಾದ್ಯ ತೈಲ ಅಭಿಯಾನ – ಎಣ್ಣೆಕಾಳು ಕಾರ್ಯಕ್ರಮದಡಿ ಸೌಲಭ್ಯ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಖಾದ್ಯ ತೈಲಗಳನ್ನು ಆಮದು ಮಾಡಿಕೊಳ್ಳುವಲ್ಲಿ ದೇಶದ ಅವಲಂಬನೆಯನ್ನು ಕಡಿಮೆ ಮಾಡಲು ಮತ್ತು ದೇಶಿಯ ಎಣ್ಣೆಕಾಳುಗಳ ಉತ್ಪಾದನೆಯನ್ನು ಹೆಚ್ಚಿಸುವ ಹಾಗೂ ರೈತರ ಆದಾಯವನ್ನು ಸುಧಾರಿಸಲು ಭಾರತ ಸರ್ಕಾರದ...

ದಿನದ ಸುದ್ದಿ3 days ago

ಉಚಿತ ಕೋಳಿ ಸಾಕಾಣಿಕೆ ತರಬೇತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್‌ಸೆಟ್ ಸಂಸ್ಥೆಯ ವತಿಯಿಂದ 12 ದಿನಗಳ ಉಚಿತ ಕೋಳಿ ಸಾಕಾಣಿಕೆ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ....

ದಿನದ ಸುದ್ದಿ3 days ago

ಕೃಷಿ ಪಂಡಿತ ಹಾಗೂ ಆತ್ಮ ಶ್ರೇಷ್ಠ ಕೃಷಿಕ ಪ್ರಶಸ್ತಿ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಕೃಷಿ ಇಲಾಖೆ ಹಾಗೂ ಆತ್ಮ (ATMA) ಯೋಜನೆಯಡಿ 2026-27ನೇ ಸಾಲಿನ ವಿವಿಧ ಕೃಷಿ ಪ್ರಶಸ್ತಿಗಳಿಗಾಗಿ ದಾವಣಗೆರೆ ಜಿಲ್ಲೆಯ ಅರ್ಹ ಹಾಗೂ ಆಸಕ್ತ ರೈತ ಮತ್ತು ರೈತ...

ಅಂಕಣ4 days ago

ಕವಿತೆ | ದೇವರ ಹೂವು

~ ಡಾ. ಸಿ.ಬಿ.ಐನಳ್ಳಿ ಊಟ ಮಾಟ ವೇಷ ಭಾಷೆ ಪ್ರಾರ್ಥನೆ ಬೇರೆ ಬೇರೆ ಪವಿತ್ರಪಠ್ಯ ಅವನದೊಂದು ನನ್ನದಿನ್ನೊಂದಂತೆ ನದಿ ದಂಡೆಯ ಮೇಲೆ ನೋಟ ಬೆರೆತು ಮಾತು ಮರೆತು...

ದಿನದ ಸುದ್ದಿ4 days ago

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ...

ದಿನದ ಸುದ್ದಿ5 days ago

ಆಶ್ರಯ ಯೋಜನೆ – ಆವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30...

ದಿನದ ಸುದ್ದಿ6 days ago

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

ಗಿರೀಶ್ ಮುತ್ತು ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು...

ದಿನದ ಸುದ್ದಿ1 week ago

ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ

ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ...

Trending