ರಾಜಕೀಯ
ಮೋದಿ ಅಮೆರಿಕದ ಮುಂದೆ ತೆಪ್ಪಗೆ ತಲೆಬಾಗುತ್ತಿದ್ದಾರೆ
- ಮಹಾನ್ ರಾಷ್ಟ್ರೀಯವಾದಿ ಎಂದು ಬಿಂಬಿಸಲಾಗಿರುವ ನರೇಂದ್ರ ಮೋದಿ, ಒಂದಾದ ಮೇಲೆ ಒಂದರಂತೆ ಅಮೆರಿಕದ ಆದೇಶಗಳ ಎದುರು ಮಂಡಿಯೂರುತ್ತಿದ್ದಾರೆ.ಮೋದಿ ಸರಕಾರ ತನ್ನನ್ನು ಒಂದು ಅಡಿಯಾಳು ಮಿತ್ರನಾಗಿ ಕಟ್ಟಿಸಿಕೊಂಡಿರುವುದರಿಂದಾಗಿಯೇ ಅಮೆರಿಕವನ್ನು ಪ್ರತಿರೋಧಿಸಿ ನಿಲ್ಲಲು ಅಸಮರ್ಥವಾಗಿರುವುದು. ಟ್ರಂಪ್ ಆಡಳಿತದ ಭಂಡ ಆಗ್ರಹಗಳಿಗೆ ಮೋದಿ ಸರಕಾರದ ಹಲ್ಲುಗಿಂಜುವ ಇದುವರೆಗಿನ ಧೋರಣೆಯನ್ನು ಗಮನಿಸಿದರೆ ಅದು ಅಮೆರಿಕದ ಕಿರಿಯ ಮಿತ್ರನ ಪಾತ್ರ ವಹಿಸುವುದನ್ನು ಮುಂದುವರಿಸುತ್ತದೆ ಎಂಬುದು ಗೋಚರಿಸುತ್ತದೆ.ಭಾರತದ ರಾಷ್ಟ್ರೀಯ ಹಿತಗಳನ್ನು ಸಾಮ್ರಾಜ್ಯಶಾಹಿ ಸೂಪರ್ ಪವರ್ನ ಹಿತಾಸಕ್ತಿಗಳಿಗೆ ಒತ್ತೆಯಿಡಲಾಗುವುದು.
ಮೋದಿ ಸರಕಾರದ ಎರಡನೇ ಅವಧಿಯು ಅಮೆರಿಕದ ಕಿರಿಯ ಪಾಲುದಾರನಾಗಿ ಭಾರತದ ಪಾತ್ರವನ್ನು ಇನ್ನಷ್ಟು
ಗಟ್ಟಿಗೊಳಿಸುವಂತದ್ದಾಗುತ್ತದೆ ಎನ್ನುವುದಕ್ಕೆ ಆಗಲೇ ಎಲ್ಲ ಸುಳಿವುಗಳು ಸಿಕ್ಕಿವೆ. ಪರಿಣಾಮವಾಗಿ ಇದು ನವ-ಉದಾರವಾದಿ ಅಜೆಂಡಾದ ಅನುಷ್ಠಾನವನ್ನು ಇನ್ನಷ್ಟು ತ್ವರಿತಗೊಳಿಸುತ್ತದೆ, ಮತ್ತು ಅದರಿಂದಾಗಿ ಜನತೆಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರಲಿದೆ.
2014-2019ರ ಅವಧಿಯಲ್ಲಿ ಮೋದಿ ಸರಕಾರವು ಭಾರತವನ್ನು ಅಮೆರಿಕದೊಂದಿಗೆ ವ್ಯೂಹಾತ್ಮಕವಾಗಿಯೂ ಮತ್ತು ಮಿಲಿಟರಿ ಕ್ಷೇತ್ರದಲ್ಲಿ ಮತ್ತಷ್ಟು ಜೋಡಿಸಿಕೊಳ್ಳಲು ಸಾಕಷ್ಟು ಕ್ರಮಗಳನ್ನು ಕೈಗೊಂಡಿತ್ತು. ಮಿಲಿಟರಿ ಸಾಗಾಣಿಕೆ ಬೆಂಬಲ ಮತ್ತು ಸೇನಾ ಸಂಪರ್ಕ ಸಾಧನಗಳನ್ನು ಸಮಗ್ರೀಕರಿಸುವ ಒಪ್ಪಂದಗಳಿಗೆ ಸಹಿ ಹಾಕಲಾಗಿತ್ತು. ಜಪಾನ್, ಆಸ್ಟ್ರೇಲಿಯಾ, ಭಾರತ ಮತ್ತು ಅಮೆರಿಕ ಒಳಗೊಂಡ ಚತುಷ್ಪಕ್ಷೀಯ ಮೈತ್ರಿಕೂಟ ಮಾಡಿಕೊಳ್ಳುವ ಬಗ್ಗೆ ಅಮೆರಿಕ ಮಾಡಿದ್ದ ಪ್ರಸ್ತಾವನೆಗೆ ಭಾರತವೂ ಕೈಜೋಡಿಸಿತ್ತು.
ಈ ವ್ಯೂಹಾತ್ಮಕ ಅಪ್ಪುಗೆಯು ಏಷ್ಯಾ-ಶಾಂತಸಾಗರ ವಲಯದಲ್ಲಿ ಅಮೆರಿಕದ ಭೌಗೋಳಿಕ-ರಾಜಕೀಯ ಹಿತಗಳಿಗೆ ಸಂಪೂರ್ಣವಾಗಿ ಅನುಕೂಲಕರವಾದ ಒಂದು ವಿದೇಶಾಂಗ ನೀತಿಯನ್ನು ಭಾರತವು ಅನುಸರಿಸುವಂತೆ ಮಾಡಿತು.
ಈ ಹಿಂದೆ ರಷ್ಯಾ ಭಾರತಕ್ಕೆ ಶಸ್ತ್ರಾಸ್ತ್ರಗಳ ಮತ್ತು ಸಾಧನಗಳ ಪ್ರಮುಖ ಪೂರೈಕೆದಾರನಾಗಿತ್ತು. ಈಗ ಅಮೆರಿಕದ ಒತ್ತಡಕ್ಕೆ ಮಣಿದು ರಷ್ಯಾವನ್ನು ಬಿಟ್ಟು ಅಮೆರಿಕದಿಂದ ಶಸ್ತ್ರಾಸ್ತ್ರ ಮತ್ತು ಉಪಕರಣಗಳನ್ನು ಖರೀದಿಸುವ ಪ್ರಕ್ರಿಯೆಗೆ ಭಾರತ ವೇಗವನ್ನು ನೀಡಿತು. ಆಂತರಿಕ ನೀತಿಗಳ ಬಗ್ಗೆ ಹೇಳುವುದಾದರೆ, ಮೋದಿ ಸರಕಾರವು ಅಮೆರಿಕದ ಬಹುರಾಷ್ಟ್ರೀಯ ಕಾರ್ಪೊರೇಟ್ಗಳು ಮತ್ತು ಹಣಕಾಸು ಹಿತಗಳಿಗೆ ನೆರವಾಗುವ ಅನೇಕ ಕ್ರಮಗಳನ್ನು ಕೈಗೊಂಡಿತು.
ಡೊನಾಲ್ಡ್ ಟ್ರಂಪ್ 2018ರ ಜನವರಿಯಲ್ಲಿ ಅಧಿಕಾರ ವಹಿಸಿಕೊಂಡಾಗಿನಿಂದ ಟ್ರಂಪ್ರ ಅಮೆರಿಕ ಮೊದಲು ಹಾಗೂ ಸ್ವರಕ್ಷಣಾತ್ಮಕ ನೀತಿಗಳಿಗೆ ಅನುಗುಣವಾಗಿ ಭಾರತದ ಮೇಲೆ ಅನೇಕ ಒತ್ತಡಗಳನ್ನು ಹೇರಲಾಯಿತು.
250 ಬಿಲಿಯ ಡಾಲರ್ ಮೌಲ್ಯದ ವಸ್ತುಗಳ ಮೇಲೆ ಸುಂಕವನ್ನು ಹೆಚ್ಚಿಸುವ ಮೂಲಕ ಹಾಗೂ ಇನ್ನೂ 325 ಬಿಲಿಯ ಡಾಲರ್ ವಸ್ತುಗಳಿಗೆ ಹಾಗೇ ಮಾಡುವುದಾಗಿ ಬೆದರಿಸುವ ಮೂಲಕ ಚೀನಾದ ವಿರುದ್ಧ ಟ್ರಂಪ್ ವಾಣಿಜ್ಯ ಸಮರವನ್ನು ಸಾರಿದರು. ಚೀನಾದ ಮಾರುಕಟ್ಟೆಯಲ್ಲಿ ಹೆಚ್ಚು ಅವಕಾಶಗಳನ್ನು ನೀಡಬೇಕು ಹಾಗೂ ಅಮೆರಿಕದ ತಂತ್ರಜ್ಞಾನ ಮತ್ತು ಬೌದ್ಧಿಕ ಆಸ್ತಿ ಹಕ್ಕುಗಳಿಗೆ ರಕ್ಷಣೆಗಳನ್ನು ನೀಡಬೇಕು ಎಂದು ಅವರು ಆಗ್ರಹಿಸಿದರು.
ಟ್ರಂಪ್ ಭಾರತವನ್ನು ಕೂಡ ಬಿಡಲಿಲ್ಲ. ಭಾರತದೊಂದಿಗಿನ ವಾಣಿಜ್ಯ ಕೊರತೆಯನ್ನು ತಿರುಗು-ಮುರುಗು ಮಾಡಬೇಕು ಹಾಗೂ ಭಾರತವು ಸುಂಕಗಳನ್ನು ಇಳಿಸಬೇಕು ಮತ್ತು ಅಮೆರಿಕದ ವಸ್ತುಗಳನ್ನು ಹೆಚ್ಚಾಗಿ ಆಮದು ಮಾಡಿಕೊಳ್ಳಬೇಕು ಎಂಬುದು ಅವರ ಬೇಡಿಕೆಯಾಗಿತ್ತು. ಈ ವಿಷಯದಲ್ಲಿ ಮೊದಲ ಹೆಜ್ಜೆಯಾಗಿ ಅವರು ಅಮೆರಿಕ ಆಮದು ಮಾಡಿಕೊಳ್ಳುತ್ತಿದ್ದ ಭಾರತದ ಅಲ್ಯುಮಿನಿಯಮ್ ಮತ್ತು ಉಕ್ಕಿನ ಮೇಲಿನ ಸುಂಕಗಳನ್ನು ಹೆಚ್ಚಿಸಿದರು. ಅದರ ಬೆನ್ನಲ್ಲೇ ಸುಂಕಗಳಿಲ್ಲದೆ ಭಾರತವು ಅನೇಕ ವಸ್ತುಗಳನ್ನು ರಫ್ತು ಮಾಡಲು ಅವಕಾಶ ನೀಡುವ ಪ್ರಾಶಸ್ತ್ಯದ ವ್ಯಾಪಾರ ಎಂದು ಪರಿಗಣಿಸುವುದನ್ನು ಕೊನೆಗೊಳಿಸಲು ಅವರು ನಿರ್ಧರಿಸಿದರು. ಈ ವ್ಯವಸ್ಥೆಯನ್ನು ತೆಗೆದು ಹಾಕಿದ್ದರಿಂದ ಭಾರತದಿಂದ ರಫ್ತಾಗುವ 1900 ವಸ್ತುಗಳಿಗೆ ಈಗ ಕಸ್ಟಮ್ಸ್ ಸುಂಕ ತೆರಬೇಕಾಗಿದೆ.
ಮಾರ್ಚ್ ಆರಂಭದಲ್ಲಿ ಅಮೆರಿಕ ಈ ಪ್ರಕಟಣೆಯನ್ನು ಮಾಡಿತು ಹಾಗೂ 60 ದಿನಗಳ ನಂತರ ಇದು ಅನುಷ್ಠಾನಕ್ಕೆ ಬರಲಿದೆ ಎಂದು ಹೇಳಿತು ಎನ್ನುವುದನ್ನು ಇಲ್ಲಿ ಗಮನಿಸಬೇಕು. ಆದಾಗ್ಯೂ ಈ ಪ್ರತಿಕೂಲ ಕ್ರಮವನ್ನು ನಿಲ್ಲಿಸಲು ಮೋದಿ ಸರಕಾರ ಯಾವುದೇ ಕ್ರಮವನ್ನು ಕೈಗೊಳ್ಳಲಿಲ್ಲ. ಅಥವಾ ಪ್ರತಿ-ಕ್ರಮಗಳಿಗೂ ಮುಂದಾಗಲಿಲ್ಲ. ಸುಂಕ ಹೇರಿದ್ದನ್ನು ಚೀನಾ ಯಾವ ರೀತಿಯಲ್ಲಿ ನಿರ್ವಹಿಸಿತು ಎನ್ನುವುದಕ್ಕೆ ಪೂರ್ತಿ ವ್ಯತಿರಿಕ್ತವಾದ ನಡೆ ಭಾರತದ್ದಾಗಿದೆ. ಚೀನಾವನ್ನು ಪ್ರವೇಶಿಸುವ ಅಮೆರಿಕದ ವಸ್ತುಗಳ ಮೇಲೆ ಸುಂಕವನ್ನು ಹೇರುವ ಮೂಲಕ ಚೀನಾ ತಿರುಗೇಟು ನೀಡಿತು.
ಮೋದಿ ಸರಕಾರ ತನ್ನನ್ನು ಒಂದು ಅಡಿಯಾಳು ವ್ಯೂಹಾತ್ಮಕ ಮಿತ್ರನಾಗಿ ಕಟ್ಟಿಸಿಕೊಂಡಿರುವುದರಿಂದಾಗಿಯೇ ಅಮೆರಿಕವನ್ನು ಪ್ರತಿರೋಧಿಸಿ ನಿಲ್ಲಲು ಅಸಮರ್ಥವಾಗಿರುವುದು.
ಮಹಾನ್ ರಾಷ್ಟ್ರೀಯವಾದಿ ಎಂದು ಬಿಂಬಿಸಲಾಗಿರುವ ನರೇಂದ್ರ ಮೋದಿ, ಒಂದಾದ ಮೇಲೆ ಒಂದರಂತೆ ಅಮೆರಿಕದ ಆದೇಶಗಳಿಗೆ ಮಂಡಿಯೂರುತ್ತಿದ್ದಾರೆ. ಇರಾನ್ನಿಂದ ತೈಲ ಆಮದು ಮಾಡಿಕೊಳ್ಳದಂತೆ ಭಾರತಕ್ಕೆ ಅಮೆರಿಕ ಆದೇಶಿಸಿತು. ಅದನ್ನು ಶಿರಸಾವಹಿಸಿ ಪಾಲಿಸಲಾಯಿತು. ಇದರಿಂದಾಗಿ ಭಾರತಕ್ಕೆ ತುಂಬಾ ನಷ್ಟವಾಗಲಿದೆ. ಯಾಕೆಂದರೆ ಅಂತಾರ್ರಾಷ್ಟ್ರೀಯ ಮಾರುಕಟ್ಟೆಗಿಂತ ಕಡಿಮೆ ಬೆಲೆಯಲ್ಲಿ ಇರಾನ್ನಿಂದ ಎಣ್ಣೆಯನ್ನು ತರಿಸಿಕೊಳ್ಳಲಾಗುತ್ತಿತ್ತು. ಅದಾದ ನಂತರ, ವೆನಿಜುವೆಲಾ ವಿರುದ್ಧದ ಆರ್ಥಿಕ ಸಮರದ ಭಾಗವಾಗಿ ಅಮೆರಿಕವು ವೆನಿಜುವೆಲಾದಿಂದ ತೈಲ ಆಮದು ನಿಲ್ಲಿಸುವಂತೆ ಭಾರತಕ್ಕೆ ಒತ್ತಾಯಿಸಿತು. ಮೋದಿ ಸರಕಾರ ಇದನ್ನು ಕೂಡ ತಡ ಮಾಡದೆ ಪಾಲಿಸಿತು.
ರಷ್ಯಾದ ಟ್ರೈಯಂಫ್ ಎಸ್-400 ಕ್ಷಿಪಣಿಗಳನ್ನು ಖರೀದಿಸಿದ್ದಕ್ಕೆ ದಿಗ್ಬಂಧನಗಳನ್ನು ಹೇರದಂತೆ ಅಮೆರಿಕಕ್ಕೆ ಭಾರತ ಅಂಗಲಾಚುತ್ತಿದೆ. ಆದರೆ ಭಾರತದ ವಿರುದ್ಧ ದಿಗ್ಬಂಧನ ವಿಧಿಸುವುದಾಗಿ ಅಮೆರಿಕ ಬೆದರಿಕೆ ಹಾಕುತ್ತಲೇ ಇದೆ. ಪರಿಹಾರವಾಗಿ ಅಮೆರಿಕದಿಂದ ಹೆಚ್ಚು ಶಸ್ತ್ರಾಸ್ತ್ರಗಳನ್ನು ಆಮದು ಮಾಡಿಕೊಳ್ಳುವಂತೆ ಒತ್ತಡ ಹೇರುವುದು ಇದರ ಉದ್ದೇಶವಾಗಿದೆ.
ಲಾಕ್ಹೀಡ್ ನಿರ್ಮಿತ ಎಫ್-21 ಯುದ್ಧ ವಿಮಾನಗಳನ್ನು ಖರೀದಿಸುವಂತೆ ಭಾರತದ ಮೇಲೆ ಅಪಾರ ಒತ್ತಡ ಹೇರಲಾಗುತ್ತಿದೆ. 110 ಯುದ್ಧ ವಿಮಾನಗಳ ಖರೀದಿಗೆ (ರಫೇಲ್ ಯುದ್ಧ ವಿಮಾನ ಖರೀದಿಯನ್ನು 36ಕ್ಕೆ ಇಳಿಸಿದ ನಂತರ) ಭಾರತದ ಒಂದು ಟೆಂಡರ್ ಪ್ರಕಟಿಸಿದೆ. ಬಿಲಿಯಗಟ್ಟಲೆ ಡಾಲರ್ ಮೌಲ್ಯದ ಈ ಗುತ್ತಿಗೆಯನ್ನು ಪಡೆಯಲು ಅಮೆರಿಕ ಭಾರತವನ್ನು ಪೀಡಿಸುತ್ತಿದೆ.
ಅಮೆರಿಕದ ವಿದೇಶ ಸಚಿವ ಮೈಕ್ ಪಾಂಪಿಯೊ ಜೂನ್ ಮೂರನೇ ವಾರದಲ್ಲಿ ಭಾರತಕ್ಕೆ ಭೇಟಿ ನೀಡಲಿದ್ದಾರೆ. ಮೋದಿ ಅಧಿಕಾರಕ್ಕೆ ಮರಳಿದ ನಂತರದ ಮೊದಲ ಭೇಟಿಯಿದು. ವಾಣಿಜ್ಯ ವಿಚಾರದಲ್ಲಿ ಕಠಿಣ ಮಾತು, ರಷ್ಯಾದ ಕ್ಷಿಪಣಿಗಳನ್ನು ಖರೀದಿಸಿದ್ದಕ್ಕೆ ಪರಿಹಾರವಾಗಿ ಅಮೆರಿಕದ ಹೆಚ್ಚು ಶಸ್ತ್ರಾಸ್ತ್ರಗಳನ್ನು ಖರೀದಿಸುವಂತೆ ಒತ್ತಾಯಿಸುವುದು, ಚೀನಾದ ಬೃಹತ್ ಕಂಪೆನಿಯಾದ ಹುವೈ ಭಾರತದಲ್ಲಿ ನಡೆಯುವ 5ಜಿ ಕಾರ್ಯಕ್ರಮದಲ್ಲಿ ಭಾಗವಹಿಸುವುದನ್ನು ನಿಷೇಧಿಸುವುದು- ಇವೆಲ್ಲ ಪಾಂಪಿಯೊ ಭೇಟಿ ವೇಳೆ ಇರಲಿರುವ ಕಾರ್ಯಸೂಚಿಯಾಗಿದೆ.
ಮಾಜಿ ವಿದೇಶಾಂಗ ಕಾರ್ಯದರ್ಶಿ ಎಸ್. ಜೈಶಂಕರ್ ಇದೀಗ ಮೋದಿ ಸರಕಾರದ ಹೊಸ ವಿದೇಶ ಸಚಿವರು. ಒಬ್ಬ ವೃತ್ತಿನಿರತ ರಾಜತಾಂತ್ರಿಕನನ್ನು ನೇರವಾಗಿ ಸಚಿವ ಸಂಪುಟಕ್ಕೆ ಬಡ್ತಿ ನೀಡಿದ್ದು ಇದೇ ಮೊದಲ ಸಲವಾಗಿದೆ. ಅಮೆರಿಕ-ಪರ ಚಟುವಟಿಕೆಗಳಿಗೆ ಜೈಶಂಕರ್ ಖ್ಯಾತರು. ವಿದೇಶ ವ್ಯವಹಾರಗಳ ಸಚಿವಾಲಯದಲ್ಲಿನ ಹಾಗೂ ವಿದೇಶಾಂಗ ಕಾರ್ಯದರ್ಶಿಯಾಗಿ ಅವರ ಕಾರ್ಯಗಳ ದಾಖಲೆಗಳು ಹೇಗೆ ಅವರು ಅಮೆರಿಕದೊಂದಿಗೆ ನಿಕಟ ವ್ಯೂಹಾತ್ಮಕ ಮೈತ್ರಿಗೆ ಒತ್ತು ನೀಡಿದ್ದರು ಎನ್ನುವುದನ್ನು ತೋರಿಸುತ್ತವೆ.
ಟ್ರಂಪ್ ಆಡಳಿತದ ಭಂಡ ಆಗ್ರಹಗಳಿಗೆ ಮೋದಿ ಸರಕಾರದ ಹಲ್ಲುಗಿಂಜುವ ಇದುವರೆಗಿನ ಧೋರಣೆಯನ್ನು ಗಮನಿಸಿದರೆ ಅದು ಅಮೆರಿಕದ ಕಿರಿಯ ಮಿತ್ರನ ಪಾತ್ರ ವಹಿಸುವುದನ್ನು ಮುಂದುವರಿಸುತ್ತದೆ ಎಂಬುದು ಗೋಚರಿಸುತ್ತದೆ. ಭಾರತದ ರಾಷ್ಟ್ರೀಯ ಹಿತಗಳನ್ನು ಸಾಮ್ರಾಜ್ಯಶಾಹಿ ಸೂಪರ್ ಪವರ್ನ ಹಿತಾಸಕ್ತಿಗಳಿಗೆ ಒತ್ತೆಯಿಡಲಾಗುವುದು.
ಇರಾನ್ನಿಂದ ತೈಲ ಆಮದು ಮಾಡಿಕೊಳ್ಳದಂತೆ ಭಾರತಕ್ಕೆ ಅಮೆರಿಕ ಆದೇಶಿಸಿತು. ಅದನ್ನು ,ದೇಶಕ್ಕೆತುಂಬಾನಷ್ಟವಾಗುತ್ತಿದ್ದರೂಶಿರಸಾವಹಿಸಿ ಪಾಲಿಸಲಾಯಿತು. ನಂತರ, ವೆನಿಜುವೆಲಾ ವಿರುದ್ಧದ ಆರ್ಥಿಕ ಸಮರದ ಭಾಗವಾಗಿ ಅಮೆರಿಕವು ವೆನಿಜುವೆಲಾದಿಂದ ತೈಲ ಆಮದು ನಿಲ್ಲಿಸುವಂತೆ ಭಾರತಕ್ಕೆ ಒತ್ತಾಯಿಸಿತು. ಮೋದಿ ಸರಕಾರ ಇದನ್ನು ಕೂಡ ತಡ ಮಾಡದೆ ಪಾಲಿಸಿತು. ರಷ್ಯಾದ ಟ್ರೈಯಂಫ್ ಎಸ್-೪೦೦ ಕ್ಷಿಪಣಿಗಳನ್ನು ಖರೀದಿಸಿದ್ದಕ್ಕೆ ದಿಗ್ಬಂಧನಗಳನ್ನು ಹೇರದಂತೆ ಅಮೆರಿಕಕ್ಕೆ ಭಾರತ ಅಂಗಲಾಚುತ್ತಿದೆ. ಆದರೆ ಭಾರತದ ವಿರುದ್ಧ ದಿಗ್ಬಂಧನ ವಿಧಿಸುವುದಾಗಿ ಅಮೆರಿಕ ಬೆದರಿಕೆ ಹಾಕುತ್ತಲೇ ಇದೆ. ಪರಿಹಾರವಾಗಿ ಅಮೆರಿಕದಿಂದ ಹೆಚ್ಚು ಶಸ್ತ್ರಾಸ್ತ್ರಗಳನ್ನು ಆಮದು ಮಾಡಿಕೊಳ್ಳುವಂತೆ ಒತ್ತಡ ಹೇರುವುದು ಇದರ ಉದ್ದೇಶವಾಗಿದೆ.
–ಪ್ರಕಾಶ್ ಕಾರಟ್
ಅನು: ವಿಶ್ವ
(ಕೃಪೆ : ಜನಶಕ್ತಿ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
ಸುದ್ದಿದಿನ, ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹ ಜ್ಯೋತಿ ಯೋಜನೆ ತನ್ನ 3 ವರ್ಷಗಳ ಸಾರ್ಥಕ ಪಯಣವನ್ನು ಪೂರ್ಣಗೊಳಿಸಿದೆ. `ಕುಟುಂಬಗಳ ಆರ್ಥಿಕ ಸಬಲೀಕರಣಕ್ಕೆ ಸಹಕಾರ’ ಎಂಬ ಧ್ಯೇಯದೊಂದಿಗೆ ಆರಂಭವಾದ ಈ ಯೋಜನೆ ಇಂದು ಕೋಟ್ಯಂತರ ಕುಟುಂಬಗಳ ಬದುಕಿಗೆ ಬೆಳಕಾಗಿದೆ.
ಹೌದು! 2023ರ ಆಗಸ್ಟ್ನಲ್ಲಿ ಜಾರಿಗೆ ಬಂದ ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಕುಟುಂಬಕ್ಕೂ ಪ್ರತಿ ತಿಂಗಳು 200 ಯೂನಿಟ್ಗಳವರೆಗೆ ಉಚಿತ ವಿದ್ಯುತ್ ನೀಡಲಾಗುತ್ತಿದ್ದು, ಬಡ ಮತ್ತು ಮಧ್ಯಮ ವರ್ಗದ ಕುಟುಂಬಗಳ ಮಾಸಿಕ ಬಜೆಟ್ಗೆ ದೊಡ್ಡ ಆಸರೆಯಾಗಿದೆ ಎಂದೇ ಹೇಳಬಹುದು.
http://Visit : www.suddidina.com
ಗೃಹಜ್ಯೋತಿ ಯೋಜನೆಯ ಸಾಧನೆಯ ಗಿರಿ:
ಇಂಧನ ಇಲಾಖೆ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ, ರಾಜ್ಯದ್ಯಂತ ಬರೋಬ್ಬರಿ 1.65 ಕೋಟಿ. ಫಲಾನುಭವಿಗಳು ಕುಟುಂಬಗಳು ಯೋಜನೆಯ ಪ್ರಯೋಜನ ಪಡೆದುಕೊಳ್ಳುತ್ತಿದ್ದರೆ, ಸೇವಾಸಿಂಧು ಪೋರ್ಟಲ್ನಲ್ಲಿ ಒಟ್ಟು 1,76,69,368 ಜನರು ನೋಂದಾಯಿಸಿಕೊಂಡಿದ್ದರೆ. ಒಟ್ಟು 2,06,65,451 ಗೃಹಬಳಕೆ ವಿದ್ಯುತ್ ಗ್ರಾಹಕರಿದ್ದಾರೆ. ಅಂದರೆ ಶೇ.85ಕ್ಕಿಂತ ಹೆಚ್ಚು ಗ್ರಾಹಕರು ಈ ಯೋಜನೆಯಡಿ ನೋಂದಾಯಿಸಿಕೊಂಡು ಲಾಭ ಪಡೆಯುತ್ತಿದ್ದಾರೆ.
ಆರ್ಥಿಕವಾಗಿ ನೋಡುವುದಾದರೆ, 2023ರ ಆಗಸ್ಟ್ನಿಂದ 2026ರ ಜುಲೈ ವರೆಗೆ, ಕಳೆದ ಮೂರು ವರ್ಷಗಳಲ್ಲಿ ಸರ್ಕಾರವು ಫಲಾನುಭವಿಗಳಿಗೆ ಒಟ್ಟು ₹28,759.54 ಕೋಟಿ ರೂಪಾಯಿ ಸಬ್ಸಿಡಿ ಬಿಡುಗಡೆ ಮಾಡಿದೆ. ಇದು ಸರ್ಕಾರದ ಬದ್ಧತೆ ಮತ್ತು ಜನಪರ ಕಾಳಜಿಗೆ ಹಿಡಿದ ಕನ್ನಡಿಯಾಗಿದೆ.
ಕುಟುಂಬದ ಬಜೆಟ್ಗೆ ಆಸರೆ, ಉಜ್ವಲ ಭವಿಷ್ಯಕ್ಕೆ ಬುನಾದಿ:
ಪ್ರತಿ ತಿಂಗಳು 1000 ದಿಂದ 1500 ರೂಪಾಯಿಗಳವರೆಗೆ ವಿದ್ಯುತ್ ಬಿಲ್ ಕಟ್ಟುತ್ತಿದ್ದ ಸಾಮಾನ್ಯ ಕುಟುಂಬಗಳಿಗೆ ಈಗ ಆ ಹಣ ಸಂಪೂರ್ಣವಾಗಿ ಉಳಿತಾಯವಾಗುತ್ತಿದೆ. ಈ ಉಳಿತಾಯದ ಹಣವನ್ನು ಅವರು ಮಕ್ಕಳ ಶಿಕ್ಷಣ, ಆರೋಗ್ಯ ಮತ್ತು ಇತರ ಅಗತ್ಯಗಳಿಗೆ ಬಳಸಿಕೊಳ್ಳುತ್ತಿದ್ದಾರೆ. ವಿಶೇಷವಾಗಿ ಗೃಹಿಣಿಯರಿಗೆ ಇದು ಆರ್ಥಿಕವಾಗಿ ದೊಡ್ಡ ನೆರವಾಗಿದೆ.
ಕೇವಲ ಉಚಿತ ವಿದ್ಯುತ್ ನೀಡುವುದಷ್ಟೇ ಅಲ್ಲ, ಜನರನ್ನು ಆರ್ಥಿಕವಾಗಿ ಸಬಲರನ್ನಾಗಿ ಮಾಡುವುದೇ ಈ ಯೋಜನೆಯ ಮುಖ್ಯ ಗುರಿಯಾಗಿದ್ದು, ರಾಜ್ಯದ ಜನರ ಜೀವನಮಟ್ಟ ಸುಧಾರಿಸಿದೆ. ಗೃಹ ಜ್ಯೋತಿ ಯೋಜನೆಯು ಕೇವಲ ಒಂದು ಯೋಜನೆಯಾಗಿ ಉಳಿಯದೆ, ಕರ್ನಾಟಕದ ಸಾಮಾಜಿಕ ಮತ್ತು ಆರ್ಥಿಕ ಪರಿವರ್ತನೆಯಲ್ಲಿ ಮಹತ್ವದ ಮೈಲಿಗಲ್ಲಾಗಿದೆ. ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಕುಟುಂಬಗಳನ್ನು ಈ ಯೋಜನೆಯಡಿ ತರಲು ಇಂಧನ ಇಲಾಖೆ ಕ್ರಮ ಕೈಗೊಳ್ಳುತ್ತಿದೆ.

ದಿನದ ಸುದ್ದಿ
ರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
ಸುದ್ದಿದಿನ, ಹೊಸದಿಲ್ಲಿ: ದೇಶದ ರೈಲ್ವೆ ಮೂಲಸೌಕರ್ಯಕ್ಕೆ ಬೃಹತ್ ಉತ್ತೇಜನ ನೀಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಕರ್ನಾಟಕ ಸೇರಿದಂತೆ ಒಂಬತ್ತು ರಾಜ್ಯಗಳ 20ಕ್ಕೂ ಹೆಚ್ಚು ಜಿಲ್ಲೆಗಳನ್ನು ಸಂಪರ್ಕಿಸುವ 20,000 ಕೋಟಿ ರೂಪಾಯಿಗೂ ಅಧಿಕ ಮೊತ್ತದ 8 ಬಹು ಟ್ರ್ಯಾಕಿಂಗ್ (Multi-Tracking) ರೈಲು ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಬುಧವಾರ (ಸೆ.09) ನಡೆದ ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಈ ಯೋಜನೆಗಳು ಪಿಎಂ-ಗತಿ ಶಕ್ತಿ ರಾಷ್ಟ್ರೀಯ ಮಾಸ್ಟರ್ ಪ್ಲಾನ್ ಅಡಿಯಲ್ಲಿ ಅನುಷ್ಠಾನಗೊಳ್ಳಲಿವೆ.
http://Visit : www.suddidina.com
ಈ ಯೋಜನೆಗಳಿಂದ ಭಾರತೀಯ ರೈಲ್ವೆಯ ಅಸ್ತಿತ್ವದಲ್ಲಿರುವ ಜಾಲವು ಬರೋಬ್ಬರಿ 1,200 ಕಿಲೋಮೀಟರ್ಗಳಷ್ಟು ವಿಸ್ತರಣೆಯಾಗಲಿದೆ. ಇದರಿಂದ 6,900ಕ್ಕೂ ಹೆಚ್ಚು ಗ್ರಾಮಗಳಿಗೆ ಸುಧಾರಿತ ಸಂಪರ್ಕ ಸಿಗಲಿದ್ದು, ರೈಲುಗಳ ಕಾರ್ಯಾಚರಣೆಯ ದಕ್ಷತೆ ಮತ್ತು ಸೇವಾ ವಿಶ್ವಾಸಾರ್ಹತೆ ಗಣನೀಯವಾಗಿ ಹೆಚ್ಚಾಗಲಿದೆ.
ಯಾವೆಲ್ಲ ಯೋಜನೆಗಳಿಗೆ ಅನುಮೋದನೆ?
ಸಂಪುಟ ಸಭೆಯಲ್ಲಿ ಅನುಮೋದನೆ ಪಡೆದ ಪ್ರಮುಖ ಯೋಜನೆಗಳು ಹೀಗಿವೆ:
1. ಅರಾಕೋಣಂ-ರೇಣಿಗುಂಟಾ ಮತ್ತು ವೈಟ್ಫೀಲ್ಡ್-ಬಂಗಾರಪೇಟೆ ನಡುವೆ 3 ಮತ್ತು 4ನೇ ಮಾರ್ಗ: ಇದು ಕರ್ನಾಟಕ ಮತ್ತು ತಮಿಳುನಾಡು, ಆಂಧ್ರಪ್ರದೇಶಕ್ಕೆ ಅತ್ಯಂತ ಮಹತ್ವದ ಯೋಜನೆಯಾಗಿದೆ.
2. ಸಿಕಂದರಾಬಾದ್-ಕಾಜಿಪೇಟೆ ನಡುವೆ ಮಲ್ಟಿ ಟ್ರ್ಯಾಕಿಂಗ್: ತೆಲಂಗಾಣದ ಪ್ರಮುಖ ಮಾರ್ಗದ ದಟ್ಟಣೆ ಕಡಿಮೆ ಮಾಡಲಿದೆ.
3. ಹೊಸೂರು-ಓಮಲೂರು, ಸೇಲಂ-ಕರೂರ್-ದಿಂಡಿಗಲ್ ಜೋಡಿ ಹಳಿ ಯೋಜನೆ: ತಮಿಳುನಾಡು ಮತ್ತು ಕರ್ನಾಟಕದ ಗಡಿ ಭಾಗದ ಸಂಪರ್ಕವನ್ನು ಬಲಪಡಿಸಲಿದೆ.
4. ಖರಗ್ಪುರ-ಝಾರ್ಸುಗುಡ ಮತ್ತು ಕತ್ನಿ-ಪೆಂದ್ರ ರಸ್ತೆ ನಡುವೆ 4ನೇ ಮಾರ್ಗ ಮತ್ತು ಬಿಲಾಸ್ಪುರ್-ಪೆಂದ್ರ ರಸ್ತೆ ನಡುವೆ 3ನೇ ಮಾರ್ಗ: ಛತ್ತೀಸ್ಗಢ, ಒಡಿಶಾ, ಮಧ್ಯಪ್ರದೇಶದ ಕಲ್ಲಿದ್ದಲು ಮತ್ತು ಖನಿಜ ಸಾಗಣೆಗೆ ಸಹಕಾರಿಯಾಗಲಿದೆ.
ಈ ಎಲ್ಲಾ ಯೋಜನೆಗಳು ಕರ್ನಾಟಕ, ಪಶ್ಚಿಮ ಬಂಗಾಳ, ಜಾರ್ಖಂಡ್, ಒಡಿಶಾ, ಮಧ್ಯಪ್ರದೇಶ, ಛತ್ತೀಸ್ಗಢ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣ ರಾಜ್ಯಗಳನ್ನು ಒಳಗೊಳ್ಳಲಿವೆ.
ಕರ್ನಾಟಕಕ್ಕೆ ಏನು ಲಾಭ?
ಈ ಬಹು ಟ್ರ್ಯಾಕಿಂಗ್ ಯೋಜನೆಗಳಿಂದ ಕರ್ನಾಟಕಕ್ಕೆ ಹಲವು ರೀತಿಯಲ್ಲಿ ಅನುಕೂಲವಾಗಲಿದೆ.ಕೈಗಾರಿಕೆಗಳಿಗೆ ಅನುಕೂಲ: ರಾಜ್ಯದ ಉಕ್ಕು ಕಾರ್ಖಾನೆಗಳಿಗೆ ಕಚ್ಚಾ ವಸ್ತುಗಳಾದ ಖನಿಜ ಸಾಗಿಸಲು ವಾಡಿ-ತಂದೂರು, ಮೋಟುಮಾರಿ-ವಿಷ್ಣುಪುರಂ ಮಾರ್ಗದಲ್ಲಿನ ಅಭಿವೃದ್ಧಿಯಿಂದ ಹೆಚ್ಚಿನ ಅನುಕೂಲವಾಗಲಿದೆ. ಹೂಟಗಿ, ಕೂಡಗಿ, ಯಾದ್ಲಾಪುರ, ಬಳ್ಳಾರಿ ಮತ್ತು ಯರಮರಸ್ನಲ್ಲಿರುವ ಉಷ್ಣ ವಿದ್ಯುತ್ ಸ್ಥಾವರಗಳಿಗೆ ಕಲ್ಲಿದ್ದಲು ಸಾಗಣೆ ಇನ್ನಷ್ಟು ವೇಗ ಮತ್ತು ಸುಲಭವಾಗಲಿದೆ.
ಬೆಂಗಳೂರು-ಚೆನ್ನೈ ಮಾರ್ಗದಲ್ಲಿ ದಟ್ಟಣೆ ಕಡಿಮೆ: ವೈಟ್ಫೀಲ್ಡ್-ಬಂಗಾರಪೇಟೆ ನಡುವಿನ 47 ಕಿ.ಮೀ ಉದ್ದದ 3 ಮತ್ತು 4ನೇ ಮಾರ್ಗವು ಅತ್ಯಂತ ದಟ್ಟಣೆಯ ಮನ್ಮಾಡ-ಹುಬ್ಬಳ್ಳಿ-ಬೆಂಗಳೂರು-ಜೋಳರಪೇಟೆ ವಿಭಾಗದಡಿ ಬರುತ್ತದೆ. ಇದು ಬೆಂಗಳೂರು-ಚೆನ್ನೈ ನಡುವಿನ ರೈಲು ಸಂಚಾರ ದಟ್ಟಣೆಯನ್ನು ಗಣನೀಯವಾಗಿ ಕಡಿಮೆ ಮಾಡಿ, ಹೆಚ್ಚಿನ ರೈಲುಗಳ ಸಂಚಾರಕ್ಕೆ ಅವಕಾಶ ಮಾಡಿಕೊಡಲಿದೆ.
ಪ್ರವಾಸೋದ್ಯಮ ಮತ್ತು ಸರಕು ಸಾಗಣೆಗೆ ಉತ್ತೇಜನ: ಹೊಸೂರು-ಓಮಲೂರು ಜೋಡಿ ಹಳಿ ಮಾರ್ಗದಿಂದ ಕನ್ಯಾಕುಮಾರಿ, ರಾಮೇಶ್ವರಂನಂತಹ ಪುಣ್ಯಕ್ಷೇತ್ರಗಳಿಗೆ ತೆರಳುವ ಲಕ್ಷಾಂತರ ಯಾತ್ರಿಕರಿಗೆ ಅನುಕೂಲವಾಗಲಿದೆ. ಜೊತೆಗೆ ಬೆಂಗಳೂರು ಸುತ್ತಮುತ್ತಲಿನ ಕೈಗಾರಿಕಾ ಪ್ರದೇಶಗಳಿಗೆ ಸರಕು ಸಾಗಣೆಯೂ ವೇಗವಾಗಲಿದೆ.ಒಟ್ಟಾರೆಯಾಗಿ, ಈ ಯೋಜನೆಗಳು ಕೇವಲ ರೈಲು ಮಾರ್ಗಗಳ ವಿಸ್ತರಣೆಯಷ್ಟೇ ಅಲ್ಲ, ದೇಶದ ಆರ್ಥಿಕ ಬೆಳವಣಿಗೆ, ಉದ್ಯೋಗ ಸೃಷ್ಟಿ ಮತ್ತು ಪ್ರಾದೇಶಿಕ ಸಂಪರ್ಕಕ್ಕೆ ಹೊಸ ಶಕ್ತಿ ತುಂಬಲಿವೆ ಎಂದು ಕೇಂದ್ರ ಸರ್ಕಾರ ಹೇಳಿದೆ.

ದಿನದ ಸುದ್ದಿ
ಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
ಸುದ್ದಿದಿನ, ಬೆಂಗಳೂರು: ಕರ್ನಾಟಕ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದ ಕಾಂಗ್ರೆಸ್ ಸರ್ಕಾರವು ತನ್ನ ಆಡಳಿತದ 100 ದಿನಗಳನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ಈ ಶತಕದ ಸಂಭ್ರಮವನ್ನು ಆಚರಿಸಲು ರಾಜ್ಯ ಸರ್ಕಾರವು `ದೃಢ ಕರ್ನಾಟಕದ ಸಂಕಲ್ಪ – ಶತಕದ ಪಥ, ಪ್ರಗತಿಯ ರಥ’ ಎಂಬ ವಿಶೇಷ ಮತ್ತು ಅದ್ಧೂರಿ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ.
ಈ ಕಾರ್ಯಕ್ರಮವು ನಾಳೆ ಅಂದರೆ 2026ನೇ ಸೆಪ್ಟೆಂಬರ್ 10ರ ಗುರುವಾರ ಬೆಳಿಗ್ಗೆ 10 ಗಂಟೆಗೆ ವಿಧಾನಸೌಧದ ಪ್ರತಿಷ್ಠಿತ ಬ್ಯಾಂಕ್ವೇಟ್ ಸಭಾಂಗಣದಲ್ಲಿ ನಡೆಯಲಿದೆ. ಸರ್ಕಾರದ ನೂರು ದಿನಗಳ ಸಾಧನೆ, ಜನಪರ ಯೋಜನೆಗಳ ಅನುಷ್ಠಾನ ಮತ್ತು ಮುಂದಿನ ಅಭಿವೃದ್ಧಿಯ ದೂರದೃಷ್ಟಿಯನ್ನು ಜನರ ಮುಂದಿಡುವುದು ಈ ಕಾರ್ಯಕ್ರಮದ ಮುಖ್ಯ ಉದ್ದೇಶವಾಗಿದೆ.
ಗಣ್ಯರ ದಂಡು, ಸಿದ್ದರಾಮಯ್ಯರಿಂದ ಉದ್ಘಾಟನೆ:
ಈ ಶತದಿನೋತ್ಸವ ಕಾರ್ಯಕ್ರಮಕ್ಕೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಲಿದ್ದು, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಇದು ಕಾಂಗ್ರೆಸ್ ಪಕ್ಷದಲ್ಲಿನ ಒಗ್ಗಟ್ಟು ಮತ್ತು ನಾಯಕತ್ವದ ನಿರಂತರತೆಯನ್ನು ಸಂಕೇತಿಸುತ್ತದೆ.
ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಹಾಗೂ ಕಂದಾಯ ಮತ್ತು ಕ್ರೀಡಾ ಇಲಾಖೆ ಸಚಿವ ಡಾ.ಜಿ. ಪರಮೇಶ್ವರ್, ರಾಜ್ಯ ಸಂಪುಟದ ಎಲ್ಲಾ ಸಚಿವರು, ಎಲ್ಲಾ ಶಾಸಕರು, ವಿಧಾನ ಪರಿಷತ್ ಸದಸ್ಯರು, ರಾಜ್ಯದ ಲೋಕಸಭಾ ಮತ್ತು ರಾಜ್ಯಸಭಾ ಸದಸ್ಯರು ಭಾಗವಹಿಸಲಿದ್ದಾರೆ. ಇದರ ಜೊತೆಗೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಸೇರಿದಂತೆ ಸರ್ಕಾರದ ಎಲ್ಲಾ ಇಲಾಖೆಗಳ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಮತ್ತು ಹಿರಿಯ ಅಧಿಕಾರಿಗಳು ಉಪಸ್ಥಿತರಿರಲಿದ್ದಾರೆ.
http://Visit : www.suddidina.com
ಫಲಾನುಭವಿಗಳೊಂದಿಗೆ ನೇರ ಸಂವಾದ – ಕಾರ್ಯಕ್ರಮದ ಪ್ರಮುಖ ಆಕರ್ಷಣೆ
ಈ ಕಾರ್ಯಕ್ರಮದ ಅತ್ಯಂತ ಪ್ರಮುಖ ಆಕರ್ಷಣೆ ಎಂದರೆ ಮುಖ್ಯಮಂತ್ರಿಗಳೊಂದಿಗೆ ಫಲಾನುಭವಿಗಳ ನೇರ ಸಂವಾದ. ಸರ್ಕಾರದ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಾದ ಅನ್ನಭಾಗ್ಯ, ಗೃಹಲಕ್ಷ್ಮಿ, ಶಕ್ತಿ, ಯುವನಿಧಿ ಮತ್ತು ಗೃಹಜ್ಯೋತಿ ಯೋಜನೆಗಳ ಫಲಾನುಭವಿಗಳು ಈ ವೇದಿಕೆಯಲ್ಲಿ ತಮ್ಮ ಅನುಭವಗಳನ್ನು ಹಂಚಿಕೊಳ್ಳಲಿದ್ದಾರೆ.
ದೃಢ ಕರ್ನಾಟಕದ ಸಂಕಲ್ಪ
ಶತಕದ ಪಥ – ಪ್ರಗತಿಯ ರಥ100 ದಿನಗಳು.. ಇದು ಕೇವಲ ಆರಂಭವಷ್ಟೇ. ಜನರ ಆಶಯಗಳಿಗೆ ಸ್ಪಂದಿಸಿ, ರಾಜ್ಯದ ಸಮಗ್ರ ಅಭಿವೃದ್ಧಿಗೆ ವೇಗ ನೀಡುವ ಸಂಕಲ್ಪದೊಂದಿಗೆ ಕಳೆದ 100 ದಿನಗಳಲ್ಲಿ ಹಲವು ಮಹತ್ವದ ಹೆಜ್ಜೆಗಳನ್ನು ಇಡಲಾಗಿದೆ. ಮುಂದಿನ ದಿನಗಳಲ್ಲಿ ಅಭಿವೃದ್ಧಿ, ಉದ್ಯೋಗ, ತಂತ್ರಜ್ಞಾನ, ಮೂಲಸೌಕರ್ಯ, ಶಿಕ್ಷಣ, ಕೃಷಿ ಹಾಗೂ… pic.twitter.com/NDViSWw6LV
— DK Shivakumar (@DKShivakumar) September 10, 2026
ಕೇವಲ ಗ್ಯಾರಂಟಿ ಯೋಜನೆಗಳಷ್ಟೇ ಅಲ್ಲದೆ, ಸಮಾಜದ ವಿವಿಧ ವರ್ಗಗಳ ಶ್ರಮಿಕರು ಮತ್ತು ಕಾರ್ಮಿಕರು ಕೂಡ ಈ ಸಂವಾದದಲ್ಲಿ ಪಾಲ್ಗೊಳ್ಳಲಿದ್ದಾರೆ. ಕೃಷಿಕರು, ಆಟೋ ಚಾಲಕರು, ಹಮಾಲಿಗಳು, ಗಿಗ್ ಕಾರ್ಮಿಕರು, ಬೀದಿ ಬದಿ ವ್ಯಾಪಾರಿಗಳು, ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಪೌರಕಾರ್ಮಿಕರು ತಮ್ಮ ಬದುಕಿನಲ್ಲಿ ಸರ್ಕಾರದ ಯೋಜನೆಗಳಿಂದ ಆಗಿರುವ ಬದಲಾವಣೆಗಳ ಕುರಿತು ಮುಖ್ಯಮಂತ್ರಿಗಳೊಂದಿಗೆ ಮುಕ್ತವಾಗಿ ಮಾತನಾಡಲಿದ್ದಾರೆ.
100 ದಿನಗಳಲ್ಲಿ ಸರ್ಕಾರವು ಕೈಗೊಂಡಿರುವ ಜನಪರ ನಿರ್ಧಾರಗಳು, ಅಭಿವೃದ್ಧಿ ಕಾಮಗಾರಿಗಳು ಮತ್ತು ಆಡಳಿತದಲ್ಲಿ ತಂದಿರುವ ಪಾರದರ್ಶಕತೆಯ ಬಗ್ಗೆ ಈ ವೇದಿಕೆಯಲ್ಲಿ ಚರ್ಚೆ ನಡೆಯಲಿದೆ. ಸರ್ಕಾರದ ಸಾಧನೆಗಳನ್ನು ಕೇವಲ ಭಾಷಣದ ಮೂಲಕವಲ್ಲ, ಬದಲಾಗಿ ಫಲಾನುಭವಿಗಳ ಬಾಯಿಂದಲೇ ಜನರಿಗೆ ತಲುಪಿಸುವುದು ಈ ಕಾರ್ಯಕ್ರಮದ ಉದ್ದೇಶವಾಗಿದೆ ಎಂದು ಮೂಲಗಳು ತಿಳಿಸಿವೆ.
ಮುಂದಿನ ದಿನಗಳಲ್ಲಿ ದೃಢ ಕರ್ನಾಟಕ’ ನಿರ್ಮಾಣದ ನಿಟ್ಟಿನಲ್ಲಿ ಸರ್ಕಾರದ ಮುಂದಿನ 5 ವರ್ಷಗಳ ಕಾರ್ಯಯೋಜನೆ ಮತ್ತು ರೂಪುರೇಷೆಗಳನ್ನು ಈ ಸಮಾರಂಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಪ್ರಕಟಿಸಲಿದ್ದಾರೆ ಎಂದು ನಿರೀಕ್ಷಿಸಲಾಗಿದೆ.

-
ದಿನದ ಸುದ್ದಿ3 days agoಬರ ನಿರ್ವಹಣೆಗೆ ಸಚಿವ ಸಂಪುಟ ಉಪಸಮಿತಿ ಸಭೆ – ದಾವಣಗೆರೆಯಲ್ಲಿ ಕುಡಿಯುವ ನೀರು, ಮೇವು ಕೊರತೆ ಬಗ್ಗೆ ಸಚಿವ ಮಲ್ಲಿಕಾರ್ಜುನ್ ಪ್ರಸ್ತಾಪ
-
ದಿನದ ಸುದ್ದಿ3 days agoರೈಲ್ವೆ ಪ್ರಯಾಣಿಕರಿಗೆ ಭರ್ಜರಿ ಗುಡ್ ನ್ಯೂಸ್ – 20 ಸಾವಿರ ಕೋಟಿ ರೂ. ವೆಚ್ಚದ 8 ಬಹು ಟ್ರ್ಯಾಕಿಂಗ್ ಯೋಜನೆಗಳಿಗೆ ಕೇಂದ್ರದ ಅಸ್ತು!
-
ದಿನದ ಸುದ್ದಿ3 days agoಡಿಕೆಶಿ ಸರ್ಕಾರಕ್ಕೆ 100 ದಿನಗಳ ಸಂಭ್ರಮ – `ದೃಢ ಕರ್ನಾಟಕದ ಸಂಕಲ್ಪ’ ಕಾರ್ಯಕ್ರಮಕ್ಕೆ ವಿಧಾನಸೌಧ ಸಜ್ಜು
-
ದಿನದ ಸುದ್ದಿ3 days agoಗೃಹ ಜ್ಯೋತಿ ಯೋಜನೆಗೆ 3 ವರ್ಷಗಳ ಸಂಭ್ರಮ – 1.65 ಕೋಟಿ ಕುಟುಂಬಗಳ ಬದುಕಿಗೆ ಬೆಳಕು!
-
ದಿನದ ಸುದ್ದಿ3 days agoಬಿಎಂಟಿಸಿ ಪ್ರಯಾಣಿಕರಿಗೆ ಗುಡ್ ನ್ಯೂಸ್ – ಇನ್ಮುಂದೆ ಓಲಾ, ಉಬರ್ ಆ್ಯಪ್ನಲ್ಲೇ ಬಿಎಂಟಿಸಿ ಬಸ್ ಟ್ರ್ಯಾಕಿಂಗ್ ಮತ್ತು ಟಿಕೆಟ್ ಬುಕಿಂಗ್!
-
ದಿನದ ಸುದ್ದಿ3 days ago5 ವರ್ಷದಿಂದ PFಗೆ ಹಣ ಜಮಾ ಮಾಡಿಲ್ಲ, ಬಡ್ಡಿ ಸಿಗುತ್ತಾ? ಇಲ್ಲಿದೆ EPFO ನಿಯಮದ ಸ್ಪಷ್ಟ ಮಾಹಿತಿ!
-
ದಿನದ ಸುದ್ದಿ3 days agoವಿಶೇಷ ಚೇತನ ಮಕ್ಕಳು ದೇವರ ಮಕ್ಕಳು – ವಿಧಾನ ಪರಿಷತ್ ಸದಸ್ಯ ಕೆ.ಎಸ್. ನವೀನ್
-
ದಿನದ ಸುದ್ದಿ3 days agoಭದ್ರೆ ಆಗಮನದಿಂದ ರೈತರಲ್ಲಿ ಹೊಸ ಭರವಸೆ – ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ



