Connect with us

ರಾಜಕೀಯ

ಬಲಪಂಥದತ್ತ ಜಾಗತಿಕ ಪಲ್ಲಟದ ಈ ಸಮಯ

Published

on

  • ಜಾಗತಿಕ ಅರ್ಥವ್ಯವಸ್ಥೆಯು ಬಿಕ್ಕಟ್ಟಿಗೆ ಒಳಗಾಗಿರುವ ಪರಿಸ್ಥಿತಿಯಲ್ಲಿ ಮತ್ತು ಅದರ ಪರಿಣಾಮವಾಗಿ ನಿರುದ್ಯೋಗವು ಉಲ್ಬಣಗೊಂಡ ಪರಿಸ್ಥಿತಿಯಲ್ಲಿ ಜಗತ್ತಿನಾದ್ಯಂತ ಬಲ ಪಂಥದತ್ತ ಪಲ್ಲಟ ಕಾಣುತ್ತಿದೆ. ಬಲಪಂಥದ ಬೆಳವಣಿಗೆಗೆ ಅದು ಆರ್ಥಿಕ ಬಿಕ್ಕಟ್ಟು ಮತ್ತು ನಿರುದ್ಯೋಗವನ್ನು ಗಮನಕ್ಕೆ ತಗೊಂಡಿರುವುದು ಮತ್ತು ಅಧಿಕಾರಸ್ಥರ ಪರವಾದ ರಾಜಕೀಯ ಪಕ್ಷಗಳು ಗಮನಕ್ಕೆ ತಗೊಂಡಿರದಿರುವುದೇ ಕಾರಣ ಎನ್ನಬಹುದು. ಭಾರತದಲ್ಲಿಯೂ ಸಹ ಅಭಿವೃದ್ಧಿ ಅಜೆಂಡಾದ ಮೂಲಕವೇ 2014ರಲ್ಲಿ ಮೋದಿ ಅಧಿಕಾರ ಹಿಡಿದದ್ದು. ನವ ಉದಾರವಾದವನ್ನು ಪ್ರತಿನಿಧಿಸುವ ಕಾಂಗ್ರೆಸ್‌ನಂತಹ ಒಂದು ಪಕ್ಷದಿಂದ ಬಿಜೆಪಿಯಂತಹ ಒಂದು ಬಲ ಪಂಥೀಯ ಪಕ್ಷದತ್ತ ಪಲ್ಲಟವು ಸಾಧ್ಯವಾಗಿರುವುದು ನವ-ಉದಾರವಾದದ ಬಿಕ್ಕಟ್ಟಿನಿಂದಾಗಿಯೇ ಎಂಬ ಸಂಗತಿಯಂತೂ ಸ್ಪಷ್ಟ.

ಮೋದಿಯವರ ಪುನರಾಯ್ಕೆಯು, ಜಗತ್ತು ಬಲ ಪಂಥಾಭಿಮುಖವಾಗಿ ಸರಿಯುತ್ತಿರುವ ವಿದ್ಯಮಾನದ ಒಂದು ಭಾಗವಾಗಿದೆ ಎಂಬ ಆಯಾಮವನ್ನು ನಾವು ಗಮನಿಸುವುದೇ ಇಲ್ಲ. ಹಾಗಾಗಿ, ಮೋದಿಯವರ ಪುನರಾಯ್ಕೆಯ ಬಗ್ಗೆ ನಾವು ಚರ್ಚಿಸುವಾಗ, ಇಡೀ ಜಗತ್ತೇ ಬಲಕ್ಕೆ ವಾಲುತ್ತಿದೆ ಎಂಬ ಅಂಶದ ಪ್ರಸ್ತಾಪ ನಮ್ಮ ಚರ್ಚೆಯಲ್ಲಿ ಬಹುತೇಕ ಇರುವುದಿಲ್ಲ. ಇಸ್ರೇಲ್‌ನಲ್ಲಿ ನೆತನ್ಯಾಹು ಪುನರಾಯ್ಕೆಗೊಂಡಿದ್ದಾರೆ. ಟರ್ಕಿಯಲ್ಲಿ ಎರ್ಡೊಗಾನ್ ಪ್ರಚಂಡ ಬಹುಮತದಿಂದ ಪುನರಾಯ್ಕೆಯಾಗಿದ್ದಾರೆ. ಚುನಾವಣೆಗೆ ಮುನ್ನ ಈ ಪಕ್ಷವು ಪುನರಾಯ್ಕೆ ಆಗುವುದೇ ಇಲ್ಲ ಎನ್ನುವ ಭವಿಷ್ಯ ನುಡಿಯನ್ನು ಸುಳ್ಳಾಗಿಸಿ, ಆಸ್ಟ್ರೇಲಿಯಾದಲ್ಲಿ ಕನ್ಸರ್ವೇಟಿವ್ ಪಕ್ಷವು ಅಧಿಕಾರಕ್ಕೆ ಮರಳಿದೆ.

ಎಡ ಪಂಥವು ಹಲವು ಹತ್ತು ದೇಶಗಳಲ್ಲಿ ಮರು ಹುಟ್ಟು ಪಡೆಯುವಂತಹ ಸ್ಪೂರ್ತಿ ತುಂಬುವ ಭರವಸೆ ಇತರರಲ್ಲಿ ಮೂಡಲು ಕಾರಣವಾಗಿದ್ದ ಎಡ ಪಕ್ಷಗಳು ಇತ್ತೀಚಿನವರೆಗೆ ಅಧಿಕಾರದಲ್ಲಿದ್ದ ಲ್ಯಾಟಿನ್ ಅಮೇರಿಕಾದಲ್ಲಿ, ಒಂದರ ನಂತರ ಮತ್ತೊಂದು ದೇಶದಲ್ಲಿ ಬಲ ಪಂಥೀಯ ಸರ್ಕಾರಗಳು ಅಧಿಕಾರಕ್ಕೆ ಬಂದಿವೆ. ಇಂತಹ ಬದಲಾವಣೆಗಳ ಪೈಕಿ, ಅತ್ಯಂತ ಮಹತ್ವದ್ದು ಮತ್ತು ಅದೇ ಸಮಯದಲ್ಲಿ ಕುಖ್ಯಾತ ಎನ್ನಬಹುದಾದ ಬದಲಾವಣೆ ಬ್ರೆಜಿಲ್‌ನಲ್ಲಿ ಆಗಿದೆ.

ಅಲ್ಲಿ ಹೊಸ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಜೇರ್ ಬೊಲ್ಸೊಮಾರೊ ಕೆಲ ವರ್ಷಗಳ ಹಿಂದೆ ಬ್ರೆಜಿಲ್‌ನಲ್ಲಿ ಅಧಿಕಾರದಲ್ಲಿದ್ದ ಮಿಲಿಟರಿ ಆಡಳಿತವನ್ನು ಹಾಡಿ ಹೊಗಳಿರುವುದೇ ಅಲ್ಲದೆ, ಮಿಲಿಟರಿಯು ಇನ್ನೂ ಹೆಚ್ಚು ಮಂದಿಯನ್ನು ಕೊಂದು ಹಾಕಿದ್ದರೆ ಒಳ್ಳೆಯದಿತ್ತು ಎಂದು ಹೇಳಿರುವುದು ದಾಖಲಾಗಿದೆ. ಈ ಎಲ್ಲವಕ್ಕೂ ಕಳಶವಿಟ್ಟಂತೆ, ಕಳೆದ ಭಾನುವಾರ ಯೂರೋಪಿಯನ್ ಒಕ್ಕೂಟದ 28ಸದಸ್ಯ ದೇಶಗಳಲ್ಲಿ ಯೂರೊ ಪಾರ್ಲಿಮೆಂಟಿಗೆ ನಡೆದ ಚುನಾವಣೆಗಳ ಫಲಿತಾಂಶವು ಯೂರೋಪಿನಲ್ಲಿ ಗಮನಾರ್ಹ ಸಂಖ್ಯೆಯ ಜನತೆಯ ಒಲವು ಬಲ ಪಂಥದತ್ತ ಸರಿಯುತ್ತಿರುವ ಅಂಶವನ್ನು ಸಾರುತ್ತದೆ.

ಫ್ರಾನ್ಸ್‌ನಲ್ಲಿ ಮುಂಬರುವ ಮಹಾ ಚುನಾವಣೆಯಲ್ಲಿ ಮರೀನ್ ಲೇ ಪೆನ್ ಅವರ ಉಗ್ರ ಬಲಪಂಥೀಯ ಪಕ್ಷವು, ಹಾಲಿ ಅಧ್ಯಕ್ಷ ಎಮ್ಯಾನ್ಯುಅಲ್ ಮೆಕ್ರಾನ್ ಅವರ ನಡು ಪಂಥೀಯ ಪಕ್ಷಗಳ ಮೈತ್ರಿಕೂಟವನ್ನು ಹಿಂದಿಕ್ಕಿ, ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಬಹುದೆಂದು ಈಗ ತೋರುತ್ತದೆ. ಇಟಲಿಯ ಉಪ ಪ್ರಧಾನ ಮಂತ್ರಿ ಮಾತ್ತಿಯೊ ಸಲ್ವಿನಿ ಅವರ ಉಗ್ರ ಬಲಪಂಥೀಯ ಪಕ್ಷವು ಇಟಲಿಯಲ್ಲಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮುವುದಷ್ಟೇ ಅಲ್ಲದೆ, ಯೂರೊ ಪಾರ್ಲಿಮೆಂಟಿನಲ್ಲಿ ಜರ್ಮನಿಯ ಛಾನ್ಸೆಲರ್ ಅಂಜೆಲಾ ಮರ್ಕೆಲ್ ಅವರ ಪಕ್ಷವನ್ನು ಹಿಂದಿಕ್ಕಿ ಅತಿ ದೊಡ್ಡ ಪಕ್ಷವಾಗಿ ಹೊರ ಹೊಮ್ಮಿದೆ. ಮರ್ಕೆಲ್ ಅವರ ಪಕ್ಷವು ಐದು ವರ್ಷಗಳ ಹಿಂದಿನ ಚುನಾವಣೆಯಲ್ಲಿ ಗಳಿಸಿದ್ದಕ್ಕಿಂತ 9% ಕಡಿಮೆ ಮತಗಳಿಸಿದೆ. ಅಷ್ಟೇ ಅಲ್ಲ, ಜರ್ಮನಿಯ ಆಲ್ಟರ್‌ನೆಟೀವ್ ಫಾರ್ ಜರ್ಮನಿ ಎಂಬ ಉಗ್ರ ಬಲಪಂಥೀಯ ಪಕ್ಷವು 10.೫% ಮತ ಹೆಚ್ಚಿಸಿಕೊಂಡಿದೆ. ಹಂಗೆರಿಯಲ್ಲಿ, ಅಧ್ಯಕ್ಷ ವಿಕ್ಟರ್ ಒರ್ಬಾನ್ ಅವರ ಬಲಪಂಥೀಯ ಪಕ್ಷವು ಮತ್ತೊಮ್ಮೆ ಪುನರಾಯ್ಕೆಗೊಳ್ಳುವ ಹಾದಿಯಲ್ಲಿದೆ.

ಮೋದಿಯವರ ಗೆಲುವು ದೇಶದಲ್ಲಿ ಜರುಗಿದ ಅನೇಕ ಬೆಳವಣಿಗೆಗಳಿಗೆ ಸಲ್ಲುತ್ತದೆ ಎಂಬುದು ಸ್ಪಷ್ಟವಿದ್ದರೂ ಸಹ, ಇಡೀ ವಿಶ್ವವೇ ಬಲ ಪಂಥಾಭಿಮುಖವಾಗಿ ದಾಪುಗಾಲು ಹಾಕುತ್ತಿರುವ ಈ ಸನ್ನಿವೇಶವನ್ನು ಮರೆಯಬಾರದು. ಬಲ ಪಂಥದ ಕಡೆಗೆ ಕೊಂಡೊಯ್ಯುವ ಉದ್ದೇಶಪೂರ್ವಕ ಪ್ರಯತ್ನಗಳು ಚಾಲನೆಯಲ್ಲಿರುವ ಈ ಸಂದರ್ಭದಲ್ಲಿ, ಇದು ಹೀಗೆಯೇ ಆಗುತ್ತಿರುವುದು ಏಕೆ? ಎಂಬ ಪ್ರಶ್ನೆಯನ್ನು ನಾವು ಕೇಳಬೇಕಾಗುತ್ತದೆ. ಉದಾರ ಮನೋಭಾವದ ಬೂರ್ಜ್ವಾ ವಿಶ್ಲೇಷಕರು, ಈ ಎಲ್ಲ ದೇಶಗಳ ಪಕ್ಷಗಳು ಮತ್ತು ಚಳವಳಿಗಳ ನಡುವೆ ಗೋಚರಿಸುವ ಒಂದು ಸಮಾನ ಅಂಶವನ್ನು ಕಾಣುವುದರ ಬದಲಾಗಿ, ಈ ವಾಸ್ತವದ ಚಿತ್ರವನ್ನು ತುಂಡರಿಸಿ ವಿಶ್ಲೇಷಿಸುವ ಪ್ರವೃತ್ತಿ ಬೆಳಸಿಕೊಂಡಿದ್ದಾರೆ: ಅವರು ಯೂರೋಪ್ ದೇಶದ ರಾಜಕೀಯ ಪಕ್ಷಗಳನ್ನು ಯೂರೋಪಿಯನ್ ಒಕ್ಕೂಟ ಪರ ಮತ್ತು ಯೂರೋಪಿಯನ್ ಒಕ್ಕೂಟ ವಿರೋಧಿ, ಅಥವಾ, ವಲಸೆ-ಪರ ಅಥವಾ ವಲಸೆ-ವಿರೋಧಿ ಎಂದೇ ವಿಭಜಿಸುತ್ತಾರೆ.

ಅದೇ ರೀತಿಯಲ್ಲಿ, ಬೂರ್ಜ್ವಾ ವಿಶ್ಲೇಷಕರು ಮೋದಿಯವರ ಗೆಲುವನ್ನು ಹಿಂದುತ್ವದೊಂದಿಗೆ ತಳುಕು ಹಾಕಿಕೊಂಡಿರುವ ಒಂದು ವಿದ್ಯಮಾನವಾಗಿ ನೋಡುತ್ತಾರೆಯೇ ಹೊರತು, ಯೂರೋಪಿನಲ್ಲಿ ಆಗುತ್ತಿರುವ ವಿದ್ಯಮಾನಕ್ಕೂ ಮತ್ತು ಭಾರತದ ಈ ವಿದ್ಯಮಾನಕ್ಕೂ ಒಂದಕ್ಕೊಂದು ಸಂಬಂಧವೇ ಇಲ್ಲ ಎಂಬಂತೆಯೇ ನೋಡುತ್ತಾರೆ. ಡೊನಾಲ್ಡ್ ಟ್ರಂಪ್ ಅವರ ಬಲಗೊಳ್ಳುತ್ತಿರುವ ಪುನರಾಯ್ಕೆಯನ್ನೂ ಸಹ ಈ ಬೆಳವಣಿಗೆಗಳಿಂದ ಪ್ರತ್ಯೇಕಿಸಿಯೇ ಕಾಣುತ್ತಾರೆ. ಆದರೆ, ಈ ರೀತಿ ಪ್ರತ್ಯೇಕಿಸಿ ನೋಡುವುದು ಮಾರ್ಕ್ಸ್‌ವಾದಿ ವಿಶ್ಲೇಷಣೆಗೆ ಸಲ್ಲುವಂತದ್ದಲ್ಲ. ಮಾರ್ಕ್ಸ್‌ವಾದಿ ವಿಶ್ಲೇಷಣೆ ಘಟನೆಗಳನ್ನು ಸಮಗ್ರವಾಗಿ ನೋಡುತ್ತದೆ, ಅನಾವರಣಗೊಳ್ಳುತ್ತಿರುವ ಘಟನಾವಳಿಗಳ ನಡುವೆ ಇರುವ ಸಮಾನ ರೂಪ, ಕ್ರಮ ಅಥವಾ ಏರ್ಪಾಡು ಮತ್ತು ಅದರ ವರ್ಗ ವಿನ್ಯಾಸವನ್ನು ಗುರುತಿಸುತ್ತದೆ. ಅಂತಾದರೆ, ಜಗತ್ತಿನಾದ್ಯಂತ ಬಲ ಪಂಥದತ್ತ ಸರಿಯುತ್ತಿರುವುದರ ಬಗ್ಗೆ ಮಾರ್ಕ್ಸ್‌ವಾದಿಗಳು ಏನು ಹೇಳಬಹುದು?

ಇದು ಸ್ಪಷ್ಟವಾಗಿ 2008ರಲ್ಲಿ ಆರಂಭವಾಗಿ ಇನ್ನೂ ಜಾಗತಿಕ ಅರ್ಥವ್ಯವಸ್ಥೆಯನ್ನು ಬಿಗಿದುಕೊಂಡಿರುವ ಆರ್ಥಿಕ ಬಿಕ್ಕಟ್ಟನ್ನು ವ್ಯಕ್ತಪಡಿಸುತ್ತದೆ. ಈ ಬಿಕ್ಕಟ್ಟಿನಿಂದ ಸ್ವಲ್ಪ ಚೇತರಿಕೆಯ ಲಕ್ಷಣಗಳು ಆಗೊಮ್ಮೆ ಈಗೊಮ್ಮೆ ಪ್ರಕಟಗೊಂಡಿವೆ. ಆದರೆ, ಚೇತರಿಕೆಯ ಲಕ್ಷಣಗಳು ಕಾಣಿಸಿಕೊಂಡ ಸ್ವಲ್ಪವೇ ಸಮಯದಲ್ಲಿ ಜಾಗತಿಕ ಅರ್ಥವ್ಯವಸ್ಥೆಯು ಮತ್ತೊಮ್ಮೆ ಬಿಕ್ಕಟ್ಟಿನಲ್ಲಿ ಮುಳುಗುತ್ತಿತ್ತು. ಒಂದು ಪುಟಿಯುವ ರಬ್ಬರ್ ಚೆಂಡಿನ ಉಪಮಾನವು ಜಾಗತಿಕ ಅರ್ಥವ್ಯವಸ್ಥೆಯ ಈ ಪರಿಸ್ಥಿತಿಗೆ ಸೊಗಸಾಗಿ ಹೋಲುತ್ತದೆ: ಚೆಂಡು ನೆಲದಿಂದ ಪುಟಿದ ಕೂಡಲೇ ಚೇತರಿಕೆಯ ಉತ್ಸಾಹ ಏರುತ್ತಿತ್ತು; ಪುಟಿದ ಚೆಂಡು ಮತ್ತೆ ನೆಲಕ್ಕೆ ಬಿದ್ದ ಕೂಡಲೇ ಆ ಉತ್ಸಾಹ ಇಳಿಯುತ್ತಿತ್ತು.

ಇಂತಹ ವಾದದ ಬಗ್ಗೆ ತಕರಾರು ಎತ್ತಬಹುದು. ಈ ತಕರಾರಿನ ಸಮರ್ಥನೆಯಾಗಿ ಅಮೇರಿಕಾದಲ್ಲಿ ನಿರುದ್ಯೋಗದ ದರವು ಹಿಂದಿನ ದಶಕಗಳಿಗಿಂತಲೂ ಕೆಳ ಮಟ್ಟಕ್ಕೆ ಈಗ ಇಳಿದಿದೆ ಎಂದು ಹೇಳಬಹುದು. ಆದರೆ, ಉದ್ಯೋಗದಲ್ಲಿ ಭಾಗವಹಿಸುವಿಕೆಯ ದರವು 2008ರಲ್ಲಿ ಇದ್ದದ್ದಕ್ಕಿಂತಲೂ ಕೆಳಗಿದೆ. ಉದ್ಯೋಗ ಭಾಗವಹಿಸುವಿಕೆಯ ದರವು ಈಗಲೂ 2008ರಲ್ಲಿ ಇದ್ದಷ್ಟೇ ಇದೆ ಎಂದು ಊಹಿಸಿಕೊಂಡರೆ, ಅಮೇರಿಕಾದ ಇಂದಿನ ನಿರುದ್ಯೋಗದ ದರ 8% ಆಗುತ್ತದೆ, ಅಧಿಕೃತ ಅಂಕಿಗಳು ಹೇಳುವ ಹಾಗೆ 4% ಅಲ್ಲ.

ಜಾಗತಿಕ ಅರ್ಥವ್ಯವಸ್ಥೆಯು ಬಿಕ್ಕಟ್ಟಿಗೆ ಒಳಗಾಗಿರುವ ಪರಿಸ್ಥಿತಿಯಲ್ಲಿ ಮತ್ತು ಅದರ ಪರಿಣಾಮವಾಗಿ ನಿರುದ್ಯೋಗವು ಉಲ್ಬಣಗೊಂಡ ಪರಿಸ್ಥಿತಿಯಲ್ಲಿ ಜಗತ್ತಿನಾದ್ಯಂತ ಬಲ ಪಂಥದತ್ತ ಪಲ್ಲಟ ಕಾಣುತ್ತಿದೆ. ಅರ್ಥವ್ಯವಸ್ಥೆಯ ಬಿಕ್ಕಟ್ಟು ಮತ್ತು ನಿರುದ್ಯೋಗದ ಪ್ರಶ್ನೆ ಬಂದಾಗ, ಉದಾರವಾದೀ ಬೂರ್ಜ್ವಾ ಪಕ್ಷಗಳು ಸಾಮಾನ್ಯವಾಗಿ ನಿರಾಕರಣೆಯ ಧೋರಣೆ ತಳೆಯುತ್ತವೆ. ನಿರುದ್ಯೋಗ ಉಂಟಾಗುವುದಕ್ಕೆ ವ್ಯವಸ್ಥೆ ಕಾರಣವಲ್ಲ; ವಲಸಿಗರೇ ಕಾರಣ; ಆದುದರಿಂದ ವಲಸೆಯನ್ನು ತಡೆಯಬೇಕು ಎಂದು ಪ್ರತಿಪಾದಿಸುವ ಬಲ ಪಂಥವು, ಕೊನೆಯ ಪಕ್ಷ, ನಿರುದ್ಯೋಗವು ಉಂಟುಮಾಡುವ ಯಾತನೆಯನ್ನು ಗುರುತಿಸುತ್ತದೆ.

ಯೂರೋಪಿಯನ್ ಒಕ್ಕೂಟ ವ್ಯವಸ್ಥೆಯಲ್ಲಿ, ಅದರ ದುಡಿಮೆಗಾರರು ಒಕ್ಕೂಟದ 28 ಸದಸ್ಯ ದೇಶಗಳಲ್ಲಿ ಯಾವುದೇ ದೇಶಕ್ಕೆ ವಲಸೆ ಹೋಗುವ ಅವಕಾಶವು ಮುಕ್ತವಾಗಿರುವುದರಿಂದ, ಕೆಲವು ಬಲ ಪಂಥೀಯ ಪಕ್ಷಗಳು ಯೂರೋಪಿಯನ್ ಒಕ್ಕೂಟದ ವಿರೋಧಿಗಳೂ ಆಗಿದ್ದಾರೆ. ಆಡಳಿತದಲ್ಲಿರುವ ಮತ್ತು ಅವರಿಗೆ ವಿರೋಧವಿರುವ ಉದಾರವಾದೀ ಬೂರ್ಜ್ವಾ ಪಕ್ಷಗಳು ಬಿಕ್ಕಟ್ಟು ಇದೆಯೆನ್ನುವುದನ್ನೇ ಒಪ್ಪಿಕೊಳ್ಳದ ಪರಿಸ್ಥಿತಿಯಲ್ಲಿ ಮತ್ತು ಎಡ ಪಂಥವು ಈ ಬಿಕ್ಕಟ್ಟಿನಿಂದ ಹೊರಬರುವ ಒಂದು ಪರ್ಯಾಯ ಅಜೆಂಡಾವನ್ನು ಜನತೆಯ ಮುಂದಿಡುವಲ್ಲಿ ನಿಧಾನವಾಗಿರುವ ಪರಿಸ್ಥಿತಿಯಲ್ಲಿ, ಇಂತಹ ಪರಿಸ್ಥಿತಿ ನಿರ್ಮಾಣವಾಗುವುದನ್ನೇ ಕಾಯುತ್ತಿದ್ದ ಬಲ ಪಂಥವು ಕಿಂದರಿಜೋಗಿಯಂತೆ ರಂಗ ಪ್ರವೇಶಿಸಿ ನಿರುದ್ಯೋಗ ಪರಿಹರಿಸುವ ಕಿಂದರಿ ಬಾರಿಸಿತು. ಒಂದು ವಲಸೆ-ವಿರೋಧಿ ಅಜೆಂಡಾವನ್ನು ಜನತೆಯ ಮುಂದಿಡುವ ಮೂಲಕ ಬಲ ಪಂಥವು ತನ್ನ ಚಟುವಟಿಕೆಗಳಿಗೆ ಚಾಲನೆ ಕೊಟ್ಟಿದೆ. ಹೀಗೆ ಜಗತ್ತಿನ ಉದ್ದಗಲದಲ್ಲೂ ಅದರ ಬೆಳವಣಿಗೆಗೆ ಅದು ಬಿಕ್ಕಟ್ಟು ಮತ್ತು ನಿರುದ್ಯೋಗವನ್ನು ಗಮನಕ್ಕೆ ತಗೊಂಡಿರುವುದು ಮತ್ತು ಅಧಿಕಾರಸ್ಥರ ಪರವಾದ ರಾಜಕೀಯ ಪಕ್ಷಗಳು ಗಮನಕ್ಕೆ ತಗೊಂಡಿರದಿರುವುದೇ ಕಾರಣ ಎನ್ನಬಹುದು.

ಹಾಗಾದರೆ, ಭಾರತದಲ್ಲಿನ ಕತೆ ಈ ವಿವರಣೆಯ ಚೌಕಟ್ಟಿಗೆ ಹೊಂದಿಕೊಳ್ಳುತ್ತದೆಯೇ? ಭಾರತದಲ್ಲಿಯೂ ಸಹ ಅಭಿವೃದ್ಧಿ ಅಜೆಂಡಾದ ಮೂಲಕವೇ 2014ರಲ್ಲಿ ಮೋದಿ ಅಧಿಕಾರ ಹಿಡಿದದ್ದು. ಅದಕ್ಕೂ ಮುನ್ನವೇ ಯುಪಿಎ-2 (2009-14) ಅವಧಿಯಲ್ಲಿ ಆರ್ಥಿಕ ಬೆಳವಣಿಗೆ ದರ ಇಳಿಮುಖವಾಗಿತ್ತು. ಹಾಗಾಗಿ, ಪ್ರತಿಯೊಬ್ಬರ ಅದೃಷ್ಟ ಖುಲಾಯಿಸುವ ನವ ಉದಾರವಾದದ ಭರವಸೆ ಮಬ್ಬಾಗಲಾರಂಭಿಸಿತ್ತು. ಜನತೆಗೆ ಕೊಟ್ಟಿದ್ದ ಅಭಿವೃದ್ಧಿ ಅಥವಾ ವಿಕಾಸ ಭರವಸೆಯನ್ನು ಈಡೇರಿಸಲು ಮೋದಿ ಸರ್ಕಾರವು ಅಧಿಕಾರದ ಅವಧಿಯಲ್ಲಿ(2014-19) ಅಕ್ಷರಷಃ ಏನನ್ನೂ ಮಾಡಲಿಲ್ಲ.

ಆ ಕಾರಣದಿಂದಾಗಿಯೇ ಈಗ ತಾನೇ ಮುಗಿದ ಚುನಾವಣೆಯಲ್ಲಿ ಅಭಿವೃದ್ಧಿ ಅಥವಾ ವಿಕಾಸದ ಬಗ್ಗೆ ಮೋದಿಯವರು ಒಂದೇ ಒಂದು ಶಬ್ದವನ್ನೂ ಉಚ್ಛರಿಸಲಿಲ್ಲ. ಆದರೆ, ಭಯೋತ್ಪಾದನೆ ವಿರುದ್ಧ ಹೋರಾಡುವೆ, ರಾಷ್ಟ್ರವನ್ನು ರಕ್ಷಿಸುವೆ, ಪಾಕೀಸ್ತಾನಕ್ಕೆ ಪಾಠ ಕಲಿಸುವೆ ಮತ್ತು ಹಿಂದುತ್ವ ಪ್ರತಿಷ್ಠಾಪನೆಯಂತಹ ಮಾತುಗಳ ಮೂಲಕ ಇಡೀ ಚರ್ಚೆಯ ದಿಕ್ಕನ್ನೇ ಮೋದಿ ಬದಲಿಸಿದರು. ಈ ತಂತ್ರಗಾರಿಕೆಯ ಮಾತುಗಳ ಮೂಲಕ, ಅಧಿಕಾರದ ಅವಧಿಯಲ್ಲಿ ಅಭಿವೃದ್ಧಿ ಸಾಧಿಸಲು ತಮ್ಮ ಸರ್ಕಾರ ಮಾಡಿದ್ದೇನು ಎಂಬುದರ ಕುರಿತು ಎದುರಾಗುವ ಇರುಸು ಮುರುಸಿನ ಪ್ರಶ್ನೆಗಳನ್ನು ನಿರಾಯಾಸವಾಗಿ ತಪ್ಪಿಸಿಕೊಂಡರು. ಅದರಿಂದ ಅವರಿಗೆ ಭರ್ಜರಿ ಅನುಕೂಲವೇ ಆಯ್ತು.

ನವ ಉದಾರವಾದವನ್ನು ಪ್ರತಿನಿಧಿಸುವ ಕಾಂಗ್ರೆಸ್‌ನಂತಹ ಒಂದು ಪಕ್ಷದಿಂದ ಬಿಜೆಪಿಯಂತಹ ಒಂದು ಬಲ ಪಂಥೀಯ ಪಕ್ಷದತ್ತ ಪಲ್ಲಟವು ಸಾಧ್ಯವಾಗಿರುವುದು ನವ ಉದಾರವಾದದ ಬಿಕ್ಕಟ್ಟಿನಿಂದಾಗಿಯೇ ಎಂಬ ಸಂಗತಿಯಂತೂ ಉಳಿದೇ ಉಳಿಯುತ್ತದೆ. ನವ ಉದಾರವಾದವು ಅಭಿವೃದ್ಧಿ ತರುತ್ತದೆ ಎಂಬುದಾಗಿ ಸೋಗುಹಾಕುವುದು ಕಾಗ್ರೆಸ್ ಪಕ್ಷಕ್ಕೆ ಇನ್ನೆಷ್ಟೂ ಸಾಧ್ಯವಿರಲಿಲ್ಲ. ಬಿಜೆಪಿಯಂತೂ ಅಭಿವೃದ್ಧಿಯ ಬಗ್ಗೆ ಮಾತಾಡಲೇ ಇಲ್ಲ. ಆದರೆ, ಕಥನ-ಪ್ರವಚನದ ದಿಕ್ಕನ್ನೇ ಬದಲಿಸಿತು. ಅದು ಕಾರ್ಪೊರೇಟ್-ಹಣಕಾಸು ಕುಳಗಳಿಗೆ ಹಿಡಿಸಿತು ಕೂಡ (ಅದೆಷ್ಟು ಅಂದರೆ, ಬಿಜೆಪಿ ಗೆಲ್ಲುತ್ತದೆಂದು ಎಕ್ಸಿಟ್ ಪೋಲ್‌ಗಳು ಭವಿಷ್ಯ ನುಡಿದ ಕೂಡಲೇ ಷೇರು ಪೇಟೆ ಸೂಚ್ಯಂಕ ಸರ್ರನೆ ಏರಿತು).

ಬದಲಾದ ಇಂತಹ ಸಂವಾದ-ಕಥನಗಳ ಪ್ರಭಾವ ತಾತ್ಕಾಲಿಕ. ನವ ಉದಾರವಾದವು ಸಿಕ್ಕಿಹಾಕಿಕೊಂಡಿರುವ ಬಿಕ್ಕಟ್ಟಿನಿಂದ ಹೊರಬರುವುದು ಹೇಗೆ ಎಂಬುದರ ಬಗ್ಗೆ ಯಾವ ಸುಳಿವೂ ಕಾಂಗ್ರೆಸ್‌ಗೂ ಇಲ್ಲ, ಬಿಜೆಪಿಗೂ ಇಲ್ಲ. ಆದ್ದರಿಂದ, ಕೋಟ್ಯಂತರ ನಿರುದ್ಯೋಗಿಗಳಿಗೆ ಅವರು ಉದ್ಯೋಗ ಒದಗಿಸಲಾರರು. ಹಾಗೆ ಹೇಳುವುದಾದರೆ, ಕಾಂಗ್ರೆಸ್ ಪಕ್ಷದ ಕೆಲವರಿಗೆ ನವ ಉದಾರವಾದದ ಹಾದಿಯಲ್ಲಿ ಮುಂದೆ ಹೋಗುವುದು ಅದೆಷ್ಟು ಕಷ್ಟ ಎಂಬುದರ ಅರಿವಿತ್ತು. ಹಾಗಾಗಿಯೇ, ಕಾಂಗ್ರೆಸ್ ಪಕ್ಷವು ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಐದು ಕೋಟಿ ಕಡು ಬಡ ಕುಟುಂಬಗಳಿಗೆ ವಾರ್ಷಿಕ 72,000 ರೂ ಹಣ ವರ್ಗಾಯಿಸುವ ನ್ಯಾಯ ಯೋಜನೆಯ ಘೋಷಣೆ ಕೊಟ್ಟಿತ್ತು. ಮಾಮೂಲು ಪರಿಸ್ಥಿತಿಯಲ್ಲಿ ಸಾಕಷ್ಟು ಉತ್ಸಾಹ ತುಂಬುವ ಸಾಧ್ಯತೆ ಹೊಂದಿದ್ದ ಮತ್ತು ಪಕ್ಷದ ಪಾಲಿಗೆ ಅಧಿಕಾರ ತಂದುಕೊಡುವಂತಹ ಒಂದು ಯೋಜನೆಯೇ ಠುಸ್ ಪಟಾಕಿಯಂತಾಯಿತು. ಏಕೆಂದರೆ, ಅದಕ್ಕೆ ಬೇಕಾಗುವ ಹಣ ಯಾವ ಮೂಲದಿಂದ ಬರುತ್ತದೆ ಎಂಬುದನ್ನು ಕಾಂಗ್ರೆಸ್ ಪಕ್ಷವು ಹೇಳದೇ ಇದ್ದುದರಿಂದ ಅದು ಜನರ ವಿಶ್ವಾಸ ಗಳಿಸಲಿಲ್ಲ. ಇದೊಂದು ಚುನಾವಣಾ ಭರವಸೆ, ಚುನಾವಣೆಯ ಮರು ದಿನವೇ ಅದನ್ನು ಮುರಿಯಲಾಗುತ್ತದೆ ಎಂದೇ ಜನ ಸಹಜವಾಗಿ ಭಾವಿಸಿದರು.

ಅರ್ಥವ್ಯವಸ್ಥೆಯನ್ನು ಮುನ್ನೆಡೆಸುವುದು ಹೇಗೆ ಎಂಬುದರ ಬಗ್ಗೆ ಮಧ್ಯಮಾರ್ಗಿ, ಉದಾರವಾದೀ ಬೂರ್ಜ್ವಾ ಪಕ್ಷವಾದ ಕಾಂಗ್ರೆಸ್‌ಗೆ ಒಂದು ಸ್ಪಷ್ಟ ಕಲ್ಪನೆಯೇ ಇಲ್ಲ. ಆ ಪಕ್ಷಕ್ಕೆ ಸರಿಸಮನಾಗಿ ಬಿಜೆಪಿಗೂ ಅದರ ಬಗ್ಗೆ ಯಾವುದೇ ಸುಳಿವೂ ಇಲ್ಲ. ಬಿಜೆಪಿಯ ಅತಿರೇಕದ ರಾಷ್ಟ್ರವಾದವು ಬಹಳ ಬೇಗನೇ ತೆಳುವಾಗುತ್ತದೆ. ಹಸಿವು ಮತ್ತು ನಿರುದ್ಯೋಗದಿಂದ ನರಳುತ್ತಿರುವ ಜನತೆಯನ್ನು ಗಾಳಕ್ಕೆ ಸಿಕ್ಕಿಸಿದ ಹುಳ ತಿನ್ನುವ ಮೀನುಗಳೆಂದು ಭಾವಿಸಿ, ಅವರಿಗೆ ದಿನನಿತ್ಯವೂ ಪಾಕೀಸ್ತಾನ-ವಿರೋಧೀ ಮತ್ತು ಮುಸ್ಲಿಂ-ವಿರೋಧೀ ಮಾತುಗಳನ್ನೇ ಉಣಬಡಿಸುವ ಆಟ ಬಹಳ ಕಾಲ ನಡೆಯುವುದಿಲ್ಲ. ಅಲ್ಲದೆ, ಆರ್ಥಿಕ ಪರಿಸ್ಥಿತಿ ನಿಂತಲ್ಲೇ ನಿಶ್ಚಲವಾಗಿ ಉಳಿಯುವುದಿಲ್ಲ.

ಮೋದಿ ಸರ್ಕಾರವು ಆರ್ಥಿಕ ವಲಯದತ್ತ ತಲೆ ಹಾಕಿ ಮಲಗದೇ ಇದ್ದರೂ ಸಹ, ಅರ್ಥವ್ಯವಸ್ಥೆಯು ಮೋದಿಯವರನ್ನು ಅವರಷ್ಟಕ್ಕೆ ಅವರು ಇರಲು ಬಿಡುವುದಿಲ್ಲ, ಬೆನ್ನು ಹತ್ತಿದ ಬೇತಾಳನಂತೆ ಕಾಡುತ್ತದೆ. ಕಾಲಕ್ರಮೇಣ, ಆರ್ಥಿಕ ಚಟುವಟಿಕೆಗಳ ಹಿಂಜರಿತ ಮತ್ತು ವಿದೇಶ ವ್ಯಾಪಾರದ ಬಾಕಿ ಚುಕ್ತಾ ಮಾಡುವುದೇ ಒಂದು ಸಮಸ್ಯೆಯಾದಾಗ, ಆರ್ಥಿಕ ಬಿಕ್ಕಟ್ಟು ಉಲ್ಬಣಗೊಳ್ಳುತ್ತದೆ. ಆಗ, ಉತ್ತರ ಕೊಡಲು ಮೋದಿ ಸರ್ಕಾರದ ಬಳಿ ಹೇಳಿಕೊಳ್ಳುವ ಸಮರ್ಥನೆಗಳಿರುವುದಿಲ್ಲ. ಮತ್ತು, ಬಿಕ್ಕಟ್ಟಿನಿಂದ ಅರ್ಥವ್ಯವಸ್ಥೆಯನ್ನು ಪಾರುಮಾಡುವುದು ಆ ವೇಳೆಗಾಗಲೇ ಇನ್ನೂ ಹೆಚ್ಚು ಕಷ್ಟಕರವಾಗುತ್ತದೆ.

ಜನತೆಯ ದಿನನಿತ್ಯದ ಬದುಕಿನ ಜ್ವಲಂತ ಸಮಸ್ಯೆಗಳನ್ನು ಪರಿಹರಿಸಲು ನವ ಉದಾರವಾದದ ಎರಡೂ ಪಡೆಗಳು (ಕಾಂಗ್ರೆಸ್ ಮತ್ತು ಬಿಜೆಪಿ) ಅಸಮರ್ಥವಾಗಿವೆ. ಈ ಪರಿಸ್ಥಿತಿಯಲ್ಲಿ, ಅರ್ಥವ್ಯವಸ್ಥೆಯನ್ನು ಬಿಕ್ಕಟ್ಟಿನಿಂದ ಹೊರ ಬರುವ ಮಾರ್ಗದರ್ಶನವನ್ನು ಎಡ ಪಂಥ ಮಾತ್ರ ಒದಗಿಸಬಲ್ಲದು. ಎಡ ಪಂಥದ ಈ ಮಾರ್ಗವು ನಮ್ಮನ್ನು ಬಂಡವಾಳಶಾಹಿಯಿಂದ ಆಚೆಗೆ ಕೊಂಡೊಯ್ಯಬಲ್ಲದು. ನವ ಉದಾರ ಬಂಡವಾಳಶಾಹಿ ದಿಗಂತದಿಂದ ಆಚೆಗಿನ ಕಣ್ಣೋಟ ಹೊಂದಿರುವುದು ಎಡ ಪಂಥ ಮಾತ್ರ. ಆದ್ದರಿಂದ, ಎಡ ಪರ್ಯಾಯ ಭಾರತಕ್ಕೆ ಮಾತ್ರವಲ್ಲ, ಇಡೀ ವಿಶ್ವಕ್ಕೇ ಸಲ್ಲುತ್ತದೆ.

ಸಂಕ್ಷಿಪ್ತವಾಗಿ, ನಾವೀಗ ಒಂದು ಚಾರಿತ್ರಿಕ ಪರ್ವಕಾಲವನ್ನು ನೋಡುತ್ತಿದ್ದೇವೆ. ಈ ಸನ್ನಿವೇಶದಲ್ಲಿ, ಬಲಪಂಥವು ಒಂದು ಹುಸಿ ಅಥವಾ ವಿಭಜನಕಾರೀ ಅಜೆಂಡಾದ ಸುತ್ತ ಜನರನ್ನು ಅಲ್ಪ ಕಾಲದಲ್ಲೇ ಅಣಿನೆರೆಸುವಲ್ಲಿ ಎಷ್ಡೇ ಯಶಸ್ವಿಯಾಗಿದ್ದರೂ ಸಹ, ನಿರುದ್ಯೋಗ ಮತ್ತು ಹತಾಶೆಯ ಪರಿಸ್ಥಿತಿಗೆ ಒಳಗಾಗಿರುವ ಆ ಜನರನ್ನು ಆ ಪರಿಸ್ಥಿತಿಯಿಂದ ಹೊರತರುವ ಮಾರ್ಗ ತೋರಲು ಬಲ ಪಂಥವು ಮೂಲಭೂತವಾಗಿ ಅಸಮರ್ಥವಾಗಿದೆ.

ಒಂದು ರಾಷ್ಟ್ರದ ಚರಿತ್ರೆಯಲ್ಲಿ, ಅಸ್ತಿತ್ವದಲ್ಲಿರುವ ವ್ಯವಸ್ಥೆಯು ಸ್ಥಿರವಾಗಿ ಮತ್ತು ದೀರ್ಘವಾಗಿ ಬಾಳುವ ಸಾಮರ್ಥ್ಯವುಳ್ಳದ್ದೆಂದು ತೋರುವ ಕ್ಷಣಗಳಿರುತ್ತವೆ. ಆದರೆ, ಇವೆಲ್ಲವೂ ಕ್ಷಿಪ್ರವಾಗಿ ಬದಲಾಗುತ್ತವೆ, ಹಿಂದಿನಂತೆಯೆ ಸಾಗುವುದು ಇನ್ನು ಸಾಧ್ಯವಿಲ್ಲವೆಂಬ ಪರಿಸ್ಥಿತಿಯಲ್ಲಿ ಹೊಸ ಕ್ಷಣಗಳು ಕಾಣಿಸಿಕೊಳ್ಳುತ್ತವೆ. ಅಂತಹ ಒಂದು ಕ್ಷಣ ಬಂಡವಾಳಶಾಹಿಗೆ ಈಗ ಬಂದಿದೆ, ಭಾರತದಲ್ಲಿ ಮಾತ್ರವಲ್ಲ ವಿಶ್ವದ ಎಲ್ಲೆಡೆಯಲ್ಲೂ. ಭಾರತದಲ್ಲಿ ಮತ್ತು ಬೇರೆ ಹಲವು ದೇಶಗಳಲ್ಲಿ ಬಲಪಂಥವು ಎಷ್ಡೇ ಚುನಾವಣಾ ಯಶಸ್ಸು ಗಳಿಸಿದರೂ, ಅದು ಈ ಮೂಲಭೂತ ಅಂಶವನ್ನು ಮಾರ್ಪಡಿಸಲಾರದು.

ಪ್ರೊ.ಪ್ರಭಾತ್ ಪಟ್ನಾಯಕ್
ಅನು: ಕೆ.ಎಂ.ನಾಗರಾಜ್

ಕೃಪೆ : ಜನಶಕ್ತಿ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು ನಕಲಿ ಕಾಮಗಾರಿಗಳನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 6 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಟಿ. ಸೋಮ್ಲನಾಯ್ಕ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ದಾವಣಗೆರೆ ಜಿಲ್ಲಾ ವ್ಯಾಪ್ತಿಯಲ್ಲಿ 2023-24 ಮತ್ತು 2024-25ನೇ ಸಾಲಿನ ತುರ್ತು ಕುಡಿಯುವ ನೀರಿನ ಯೋಜನೆಗೆ ಸಂಬAಧಿಸಿದ ಕಾಮಗಾರಿಗಳಿಗೆ ಸಂಬAಧಿಸಿದAತೆ ಹೊನ್ನಾಳಿ ಉಪವಿಭಾಗದ ಅಡಿಯಲ್ಲಿ ನಡೆದಿರುವ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ನಾಲ್ಕು ಹಂತದ ತುರ್ತು ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳ ಸಂಪೂರ್ಣ ಕಡತವನ್ನು ಪಡೆದು ಪರಿಶೀಲನೆ ಮಾಡಿದಾಗ, ಇಲ್ಲಿ ಸಾಕಷ್ಟು ಅವ್ಯವಹಾರ ಹಾಗೂ ಲೋಪಗಳು ಕಂಡುಬAದಿರುತ್ತವೆ. ಅಂತಹ ಪ್ರಮುಖ ಲೋಪಗಳನ್ನು ಉಲ್ಲೇಖಿಸಿ ಸೂಕ್ತ ತನಿಖೆಗೆ ಒಳಪಡಿಸುವಂತೆ ದಿನಾಂಕ: 01-12-2025 ರಂದು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರಿಗೆ ದೂರು ನೀಡಲಾಗಿತ್ತು.

ಈ ದೂರು ಅರ್ಜಿಗೆ ಸಂಬಂಧಿಸಿದಂತೆ ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು 2 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಕಾರಣ ದಿನಾಂಕ: 27-01-2026 ರಂದು ಜ್ಞಾಪನವನ್ನು ನೀಡಲಾಗಿರುತ್ತದೆ. ಆದರೆ ಜ್ಞಾಪನ ನೀಡಿ 6 ತಿಂಗಳು ಕಳೆಯುತ್ತ ಬಂದರೂ ಈ ದೂರು ಅರ್ಜಿಗೆ ಸಂಬAಧಿಸಿದAತೆ ಕಾರ್ಯಪಾಲಕ ಅಭಿಯಂತರರು (ಪ್ರಭಾರ), ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇವರು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿರುತ್ತಾರೆ.

ಈ ದೂರು ಅರ್ಜಿಯನ್ನು ತನಿಖೆಗೆ ಒಳಪಡಿಸುವಲ್ಲಿ ತೋರಿದ ನಿರ್ಲಕ್ಷö್ಯಕ್ಕೆ ಪ್ರಮುಖ ಕಾರಣವೆಂದರೆ, ಹೊನ್ನಾಳಿ ಉಪವಿಭಾಗದ ಸಹಾಯಕ ಕಾರ್ಯಪಾಲಕ ಅಭಿಯಂತರರೇ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ದಾವಣಗೆರೆ ಇಲ್ಲಿನ ಪ್ರಭಾರ ಕಾರ್ಯಪಾಲಕ ಅಭಿಯಂತರರಾಗಿ ಕಾರ್ಯನಿರ್ವಹಿಸಿರುತ್ತಾರೆ. ಈ ಕಾರಣಕ್ಕಾಗಿ ತನ್ನ ಮೇಲಿನ ಆರೋಪವನ್ನು ತನಿಖೆಗೆ ಒಳಪಡಿಸುವಲ್ಲಿ ನಿರ್ಲಕ್ಷö್ಯ ತೋರಿ, ಈ ದೂರು ಅರ್ಜಿಯನ್ನು ಮೂಲೆ ಗುಂಪಾಗಿಸಿರುತ್ತಾರೆ. ಆದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಭಾರ ಕಾರ್ಯಪಾಲಕ ಅಭಿಯಂತರರಾದ ಸೋಮ್ಲನಾಯ್ಕ ವಿರುದ್ಧ ಲೋಕಾಯುಕ್ತದಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!

Published

on

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

  • ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ
  • ಇಂಡಿಯಾ ಗೇಟ್‌ನಿಂದ ಪೊಲೀಸ್ ಕೇಂದ್ರ ಕಚೇರಿವರೆಗೆ ಮೆರವಣಿಗೆ
  • NEET ಅಭ್ಯರ್ಥಿಗಳ ಕುಟುಂಬಸ್ಥರು, ಪೊಲೀಸ್ ದೌರ್ಜನ್ಯ ಸಂತ್ರಸ್ತರು ಮುಂಚೂಣಿಯಲ್ಲಿ
  • “ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ” ಎಂದ CJP 

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಸುದ್ದಿದಿನ,ನವದೆಹಲಿ: ದೇಶದ ಯುವಜನರಿಗೆ ನೀಡಿರುವ ಭರವಸೆಗಳನ್ನು ಸರ್ಕಾರ ಈಡೇರಿಸಿಲ್ಲ ಎಂಬ ಆರೋಪದ ಹಿನ್ನೆಲೆಯಲ್ಲಿ ಕಾಕ್‌ರೋಚ್ ಜನತಾ ಪಾರ್ಟಿ (CJP) ಸೆಪ್ಟೆಂಬರ್ 5ರಂದು ನವದೆಹಲಿಯಲ್ಲಿ ಶಾಂತಿಯುತ ಪ್ರತಿಭಟನಾ ಮೆರವಣಿಗೆ ನಡೆಸಲು ಕರೆ ನೀಡಿದೆ. ಜುಲೈ 25ರಂದು ಸಾರ್ವಜನಿಕವಾಗಿ ನೀಡಲಾಗಿದ್ದ ಭರವಸೆಗಳಿಗೆ ಒಂದು ತಿಂಗಳು ಕಳೆದರೂ ಅವುಗಳ ಅನುಷ್ಠಾನಕ್ಕೆ ಸ್ಪಷ್ಟ ಕ್ರಮಗಳು ಗೋಚರಿಸುತ್ತಿಲ್ಲ ಎಂಬುದು CJPಯ ಪ್ರಮುಖ ಆರೋಪವಾಗಿದೆ.

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಸಲಾಗಿದ್ದು, ಸರ್ಕಾರ ಹಾಗೂ ಬಿಜೆಪಿ-ಎನ್‌ಡಿಎ ಆಡಳಿತದ ರಾಜ್ಯಗಳು ಯುವಜನರಿಗೆ ನೀಡಿದ್ದ ಭರವಸೆಗಳ ಅನುಷ್ಠಾನವನ್ನು ಪರಿಶೀಲಿಸಿದ ಬಳಿಕ ಪ್ರತಿಭಟನೆ ನಡೆಸುವ ನಿರ್ಧಾರವನ್ನು ಸರ್ವಾನುಮತದಿಂದ ಕೈಗೊಳ್ಳಲಾಗಿದೆ ಎಂದು ಪಕ್ಷ ತಿಳಿಸಿದೆ.

http://Visit : www.suddidina.com

ಇಂಡಿಯಾ ಗೇಟ್‌ನಿಂದ ಮೆರವಣಿಗೆ

ಸೆಪ್ಟೆಂಬರ್ 5ರಂದು ಇಂಡಿಯಾ ಗೇಟ್‌ನಿಂದ ಪ್ರತಿಭಟನಾ ಮೆರವಣಿಗೆ ಆರಂಭವಾಗಿ ನವದೆಹಲಿ ಪೊಲೀಸ್ ಕೇಂದ್ರ ಕಚೇರಿಯತ್ತ ಸಾಗಲಿದೆ. ಮೃತ NEET ಅಭ್ಯರ್ಥಿಗಳ ಕುಟುಂಬಸ್ಥರು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರು ಮೆರವಣಿಗೆಯ ಮುಂಚೂಣಿಯಲ್ಲಿ ಸಾಗಲಿದ್ದಾರೆ ಎಂದು CJP ಹೇಳಿದೆ.

ದೇಶದ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು, ಯುವ ಸಂಘಟನೆಗಳ ಪ್ರತಿನಿಧಿಗಳು ಮತ್ತು ಯುವಜನರು ಪ್ರತಿಭಟನೆಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಸರ್ಕಾರ ನೀಡಿದ್ದ ಭರವಸೆಗಳನ್ನು ಜಾರಿಗೆ ತರಬೇಕು ಎಂಬ ಒಂದೇ ಪ್ರಮುಖ ಬೇಡಿಕೆಯೊಂದಿಗೆ ಯುವಜನರು ಶಾಂತಿಯುತವಾಗಿ ಧ್ವನಿ ಎತ್ತಲಿದ್ದಾರೆ ಎಂದು ಪಕ್ಷ ಹೇಳಿದೆ.

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ

‘ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ’

ಜುಲೈ 25ರಂದು ನೀಡಿದ ಭರವಸೆಗಳನ್ನು ನಂಬಿ ದೇಶಾದ್ಯಂತ ನಡೆದಿದ್ದ ಪ್ರತಿಭಟನೆಗಳನ್ನು ಯುವಜನರು ಉತ್ತಮ ನಂಬಿಕೆಯಿಂದ ಹಿಂಪಡೆದಿದ್ದರು. ಆದರೆ, ಭರವಸೆಗಳ ಅನುಷ್ಠಾನದಲ್ಲಿ ವಿಳಂಬವಾಗುತ್ತಿರುವುದು ಯುವಜನರಲ್ಲಿ ಮತ್ತೆ ಅಸಮಾಧಾನ ಮೂಡಿಸಿದೆ ಎಂದು CJP ಆರೋಪಿಸಿದೆ.

“ನಮ್ಮ ತಾಳ್ಮೆಯನ್ನು ದೌರ್ಬಲ್ಯವೆಂದು ಭಾವಿಸಬೇಡಿ. ನಮ್ಮ ಸದುದ್ದೇಶವನ್ನು ಸರ್ಕಾರ ಯುವಜನರಿಗೆ ದ್ರೋಹ ಮಾಡುವ ಅವಕಾಶವಾಗಿ ಬಳಸಿಕೊಳ್ಳಬಾರದು” ಎಂದು CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಎಚ್ಚರಿಕೆ ನೀಡಿದೆ.

“ಭರವಸೆಗಳನ್ನು ಜಾರಿಗೆ ತರುವ ಬದಲು ಕೇಂದ್ರ ಸರ್ಕಾರ ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ” 

  • CJP ಆರೋಪ

ಮಾತಿನಿಂದ ಹಿಂದೆ ಸರಿಯಲು ಸಾಧ್ಯವಿಲ್ಲ

ಜುಲೈ 25ರಂದು ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಸಾರ್ವಜನಿಕವಾಗಿ ನೀಡಿದ್ದ ಭರವಸೆಗಳನ್ನು ಸರ್ಕಾರ ಈಡೇರಿಸಬೇಕು ಎಂಬುದು CJPಯ ಆಗ್ರಹ. ಮಕ್ಕಳನ್ನು ಕಳೆದುಕೊಂಡ ಕುಟುಂಬಗಳು ಹಾಗೂ ಪೊಲೀಸ್ ದೌರ್ಜನ್ಯಕ್ಕೆ ಒಳಗಾದವರ ನೋವಿನ ನಡುವೆ ನಡೆಯಲಿರುವ ಈ ಮೆರವಣಿಗೆ, ಯುವಜನರ ವಿಶ್ವಾಸ ಮತ್ತು ಸರ್ಕಾರದ ಹೊಣೆಗಾರಿಕೆಯ ಪ್ರಶ್ನೆಯನ್ನು ಮುನ್ನೆಲೆಗೆ ತರುವ ಪ್ರಯತ್ನವಾಗಿದೆ.

ಕೇಂದ್ರ ಸರ್ಕಾರ ಭರವಸೆಗಳನ್ನು ಜಾರಿಗೆ ತರುವ ಬದಲು ಕ್ರಮ ಕೈಗೊಳ್ಳುವುದನ್ನು ವಿಳಂಬಿಸುತ್ತಿದೆ, ತಾಂತ್ರಿಕ ಕಾರಣಗಳ ಹಿಂದೆ ಅಡಗಿಕೊಳ್ಳುತ್ತಿದೆ ಹಾಗೂ ಸುಪ್ರೀಂ ಕೋರ್ಟ್‌ನ ಮುಂದೆಯೂ ಸ್ಪಷ್ಟ ಭರವಸೆ ನೀಡುವುದನ್ನು ತಪ್ಪಿಸುತ್ತಿದೆ ಎಂದು CJP ಆರೋಪಿಸಿದೆ.

ಸೆಪ್ಟೆಂಬರ್ 5ರಂದು ಹೆಚ್ಚಿನ ಸಂಖ್ಯೆಯಲ್ಲಿ ಇಂಡಿಯಾ ಗೇಟ್‌ನಲ್ಲಿ ಸೇರಿ ಶಾಂತಿಯುತ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವಂತೆ ಯುವಜನರು, ವಿದ್ಯಾರ್ಥಿಗಳು ಹಾಗೂ ಯುವ ಸಂಘಟನೆಗಳಿಗೆ CJP ಮನವಿ ಮಾಡಿದೆ. ಪ್ರತಿಭಟನೆ ಸಂಪೂರ್ಣವಾಗಿ ಶಾಂತಿಯುತ ಮತ್ತು ಪ್ರಜಾಸತ್ತಾತ್ಮಕ ರೀತಿಯಲ್ಲಿ ನಡೆಯಲಿದೆ ಎಂದು ಅದು ಪುನರುಚ್ಚರಿಸಿದೆ.

Continue Reading

ದಿನದ ಸುದ್ದಿ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

Published

on

KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ
KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

  • 329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್

  • 658 OMR ಕಾರ್ಬನ್ ಶೀಟ್‌ಗಳು FSLಗೆ

  • IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ವಿರುದ್ಧ ED ಗಂಭೀರ ಆರೋಪ

  • ₹70–80 ಲಕ್ಷ ಲಂಚದ ಆರೋಪವೂ ತನಿಖೆಯಲ್ಲಿದೆ

  • ಪ್ರಶ್ನೆಪತ್ರ ಸಿದ್ಧತೆ, ಮುದ್ರಣದ CCTV ದೃಶ್ಯಗಳ ಬಗ್ಗೆಯೂ ಅನುಮಾನ 

ಸುದ್ದಿದಿನ,ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದ (KPSC) ಪಶುವೈದ್ಯಾಧಿಕಾರಿ ನೇಮಕಾತಿ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮದ ತನಿಖೆ ದಿನದಿಂದ ದಿನಕ್ಕೆ ಹೊಸ ತಿರುವು ಪಡೆಯುತ್ತಿದೆ. ಈಗಾಗಲೇ ಜಾರಿ ನಿರ್ದೇಶನಾಲಯ (ED) ರಾಜ್ಯದ ವಿವಿಧೆಡೆ 21ಕ್ಕೂ ಹೆಚ್ಚು ಸ್ಥಳಗಳಲ್ಲಿ ಶೋಧ ನಡೆಸಿದ್ದು, ಅದರ ಬೆನ್ನಲ್ಲೇ ಅಪರಾಧ ತನಿಖಾ ಇಲಾಖೆ (CID) ಎಲ್ಲಾ 329 ಅಭ್ಯರ್ಥಿಗಳಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದೆ.

http://Visit : www.suddidina.com

329 ಅಭ್ಯರ್ಥಿಗಳಿಗೆ ನೋಟಿಸ್ ಏಕೆ?

ಪರೀಕ್ಷಾ ಅಕ್ರಮಕ್ಕೆ ಸಂಬಂಧಿಸಿದಂತೆ ಅಭ್ಯರ್ಥಿಗಳಿಂದ ಈಗಾಗಲೇ 658 OMR ಕಾರ್ಬನ್ ಶೀಟ್‌ಗಳನ್ನು ವಶಕ್ಕೆ ಪಡೆಯಲಾಗಿದೆ. ಅವುಗಳನ್ನು ಮೂಲ OMR ಉತ್ತರ ಪತ್ರಿಕೆಗಳೊಂದಿಗೆ ಹೋಲಿಕೆ ಮಾಡಲು ವಿಧಿವಿಜ್ಞಾನ ಪ್ರಯೋಗಾಲಯಕ್ಕೆ (FSL) ಕಳುಹಿಸಲಾಗಿದೆ. ಅಭ್ಯರ್ಥಿಗಳು ಗುರುತಿಸಿದ್ದ ಉತ್ತರಗಳ ಕಾರ್ಬನ್ ಪ್ರತಿಯಲ್ಲಿ ಮತ್ತು ಮೂಲ OMRನಲ್ಲಿ ವ್ಯತ್ಯಾಸವಿದೆಯೇ ಎಂಬುದನ್ನು ಪರಿಶೀಲಿಸುವುದು ತನಿಖೆಯ ಪ್ರಮುಖ ಭಾಗವಾಗಿದೆ.

ಇದೀಗ 329 ಅಭ್ಯರ್ಥಿಗಳನ್ನೂ ವಿಚಾರಣೆಗೆ ಒಳಪಡಿಸುವ CID ಕ್ರಮ ಪ್ರಕರಣದ ವ್ಯಾಪ್ತಿಯನ್ನು ಮತ್ತಷ್ಟು ವಿಸ್ತರಿಸಿದೆ. ಈ ವಿಚಾರಣೆಯ ಮೂಲಕ ಪರೀಕ್ಷಾ ಪ್ರಕ್ರಿಯೆಯಲ್ಲಿ ಯಾವುದೇ ಅಕ್ರಮ ನಡೆದಿದೆಯೇ, ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ಅಥವಾ ಉತ್ತರಗಳ ಮಾಹಿತಿ ಮುಂಚಿತವಾಗಿ ಸಿಕ್ಕಿತೇ, OMR ಉತ್ತರ ಪತ್ರಿಕೆಗಳಲ್ಲಿ ತಿದ್ದುಪಡಿ ನಡೆದಿದೆಯೇ ಎಂಬುದರ ಬಗ್ಗೆ ತನಿಖಾಧಿಕಾರಿಗಳು ಮಾಹಿತಿ ಕಲೆಹಾಕುತ್ತಿದ್ದಾರೆ.

IAS ಅಧಿಕಾರಿಯತ್ತ ತನಿಖೆಯ ಚಿತ್ತ

ಈ ಪ್ರಕರಣದಲ್ಲಿ IAS ಅಧಿಕಾರಿ ಜ್ಞಾನೇಂದ್ರ ಕುಮಾರ್ ಗಂಗ್ವಾರ್ ಅವರ ಹೆಸರು ಪ್ರಮುಖವಾಗಿ ಕೇಳಿಬಂದಿದೆ. ಅವರು ಫೆಬ್ರವರಿ 2024ರಿಂದ ಮಾರ್ಚ್ 2026ರವರೆಗೆ KPSCಯ ಪರೀಕ್ಷಾ ನಿಯಂತ್ರಕರಾಗಿ ಕಾರ್ಯನಿರ್ವಹಿಸಿದ್ದರು. ಪ್ರಸ್ತುತ ಅವರು ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯಲ್ಲಿ MSME ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಅವರ ಬೆಂಗಳೂರಿನ ನಿವಾಸ ಸೇರಿದಂತೆ ಉತ್ತರ ಪ್ರದೇಶದ ಬರೇಲಿಯಲ್ಲಿರುವ ನಿವಾಸದ ಮೇಲೂ ED ಶೋಧ ನಡೆಸಿದೆ.

ED ಆರೋಪದ ಪ್ರಕಾರ, ಗಂಗ್ವಾರ್ ಅವರು ತಮ್ಮ ಇಬ್ಬರು ಪುತ್ರರಿಗೆ KPSC ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಹೆಚ್ಚಿನ ಅಂಕಗಳನ್ನು ದೊರಕಿಸಿಕೊಡಲು ವ್ಯಕ್ತಿಯೊಬ್ಬರಿಂದ ಸುಮಾರು ₹1.1 ಕೋಟಿ ಪಡೆದಿದ್ದಾರೆ ಎನ್ನಲಾಗಿದೆ. ಈ ಆರೋಪ ಇನ್ನೂ ತನಿಖೆಯ ಹಂತದಲ್ಲಿದ್ದು, ಆರೋಪ ಸಾಬೀತಾಗಿಲ್ಲ.

ಪ್ರಶ್ನೆಪತ್ರಿಕೆ ಸಿದ್ಧತೆಯಲ್ಲೂ ಅನುಮಾನ

ಪರೀಕ್ಷಾ ನಿಯಂತ್ರಕರಾಗಿದ್ದ ಅವಧಿಯಲ್ಲಿ ಪ್ರಶ್ನೆಪತ್ರಿಕೆ ಸಿದ್ಧಪಡಿಸುವ ಮತ್ತು ಮುದ್ರಿಸುವ ಪ್ರಕ್ರಿಯೆಗೆ ಸಂಬಂಧಿಸಿದ CCTV ದೃಶ್ಯಾವಳಿಗಳ ಅನುಪಸ್ಥಿತಿಯನ್ನೂ ED ಅಧಿಕಾರಿಗಳು ಪ್ರಶ್ನಿಸಿದ್ದಾರೆ ಎನ್ನಲಾಗಿದೆ. ಇಂತಹ ಪ್ರಕ್ರಿಯೆಯಲ್ಲಿ CCTV ದಾಖಲೆಗಳು ಪ್ರಮುಖ ಭದ್ರತಾ ಕ್ರಮವಾಗಿರುವುದರಿಂದ, ಅವುಗಳ ಲಭ್ಯತೆ ಮತ್ತು ನಿರ್ವಹಣೆಯೂ ತನಿಖೆಯ ಪ್ರಮುಖ ಅಂಶವಾಗಿದೆ.

ಇದರ ಜೊತೆಗೆ, ಪಶುವೈದ್ಯಾಧಿಕಾರಿ ನೇಮಕಾತಿಯಲ್ಲಿ ಅಭ್ಯರ್ಥಿಗಳಿಂದ ₹70–80 ಲಕ್ಷದವರೆಗೆ ಲಂಚ ಕೇಳಲಾಗಿದೆ ಎಂಬ ಆರೋಪಗಳೂ ತನಿಖೆಯಲ್ಲಿವೆ. ಪ್ರಶ್ನೆಪತ್ರಿಕೆ ಸೋರಿಕೆ, OMR ತಿದ್ದುಪಡಿ ಮತ್ತು ನೇಮಕಾತಿ ಪ್ರಕ್ರಿಯೆಯ ಮೇಲೆ ಪ್ರಭಾವ ಬೀರಿದ ಆರೋಪಗಳ ಕುರಿತು ತನಿಖೆ ಮುಂದುವರಿದಿದೆ.

KPSCಯಂತಹ ನೇಮಕಾತಿ ಸಂಸ್ಥೆಯ ಮೇಲಿನ ವಿಶ್ವಾಸಕ್ಕೆ ಧಕ್ಕೆ ತರುವ ಆರೋಪಗಳಾಗಿರುವುದರಿಂದ, CID ಮತ್ತು ED ತನಿಖೆಯ ಮುಂದಿನ ಹಂತಗಳು ಮಹತ್ವ ಪಡೆದುಕೊಂಡಿವೆ. 329 ಅಭ್ಯರ್ಥಿಗಳ ವಿಚಾರಣೆ, OMR ಕಾರ್ಬನ್ ಶೀಟ್‌ಗಳ FSL ವರದಿ ಹಾಗೂ ಹಣಕಾಸು ವ್ಯವಹಾರಗಳ ಪರಿಶೀಲನೆಯ ಬಳಿಕ ಪ್ರಕರಣದ ನಿಜವಾದ ಚಿತ್ರಣ ಇನ್ನಷ್ಟು ಸ್ಪಷ್ಟವಾಗುವ ನಿರೀಕ್ಷೆಯಿದೆ.

ಮೇಲಿನ ಹಣ, ಅಕ್ರಮ ಮತ್ತು ಅಧಿಕಾರಿಯ ವಿರುದ್ಧದ ಆರೋಪಗಳು ತನಿಖಾ ಸಂಸ್ಥೆಗಳು ಮುಂದಿಟ್ಟಿರುವ ಆರೋಪಗಳಾಗಿದ್ದು, ನ್ಯಾಯಾಲಯದಲ್ಲಿ ಸಾಬೀತಾಗುವವರೆಗೆ ಆರೋಪಗಳೆಂದೇ ಪರಿಗಣಿಸಬೇಕೆಂದು ಕೋರ್ಟ್ ತಿಳಿಸಿದೆ.

 

Continue Reading
Advertisement

Title

ದಿನದ ಸುದ್ದಿ5 hours ago

ವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ಹೊನ್ನಾಳಿ ಮತ್ತು ನ್ಯಾಮತಿ ತಾಲ್ಲೂಕುಗಳಲ್ಲಿ ಬರುವ ಸಮಸ್ಯಾತ್ಮಕ ಗ್ರಾಮಗಳಲ್ಲಿ 4215 ತುರ್ತು ಕುಡಿಯುವ ನೀರಿನ ಕಾಮಗಾರಿಯಲ್ಲಿ ನಡೆದಿರುವ ಅವ್ಯವಹಾರ ಮತ್ತು...

ದಿನದ ಸುದ್ದಿ6 hours ago

ಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ

ಸುದ್ದಿದಿನಡೆಸ್ಕ್:ಜಪಾನ್‌ನ ಹಿರೋತೋಷಿ ತನಕಾ ಇಂಗ್ಲಿಷ್ ಕಲಿಯಲು ಬೆಂಗಳೂರಿಗೆ ಬಂದಿದ್ದರು. ಆದರೆ ಇಂಗ್ಲಿಷ್ ಅಕಾಡೆಮಿಯಲ್ಲಿ ಸರಿಯಾಗಿ ಇಂಗ್ಲೀಷ್ ಕಲಿಸುತ್ತಿಲ್ಲವೆಂದು ಅಕಾಡೆಮಿ ಮುಖ್ಯಸ್ಥರೊಂದಿಗೆ ಜಗಳ ನಡೆದ ಬಳಿಕ ತನಕಾ ವಿರುದ್ಧ...

ದಿನದ ಸುದ್ದಿ6 hours ago

ಡಾಲಿಯ ಕನಸು ಒಂದೇ ಹೀರೋ ಆಗೋದು

ಮೈಸೂರಿನ ರಂಗಾಯಣದಲ್ಲಿ ನಾಟಕ ತಂಡಗಳಲ್ಲಿ ಗುರುತಿಸಿಕೊಂಡ ದಿನಗಳಿಂದಲೇ ಡಾಲಿ ಧನಂಜಯ್ ಅವರದ್ದು ಒಂದೇ ಕನಸು—ಸಿನಿಮಾ ಹೀರೋ ಆಗಬೇಕು! ಕಾಲೇಜು ಯುವಕರಾಗಿದ್ದಾಗಲೂ ಮೌನ ಸ್ವಭಾವದ, ವಿಧೇಯ, ಪರಿಶ್ರಮಿ ಮತ್ತು...

ದಿನದ ಸುದ್ದಿ24 hours ago

ಉದ್ದಿಮೆದಾರರಿಗೆ ನೆರವು ಯೋಜನೆ; ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ವಿಶೇಷ ಘಟಕ ಯೋಜನೆ, ಗಿರಿಜನ ಉಪ ಯೋಜನೆಯಡಿ ವಿವಿಧ ಯೋಜನೆಗಳಾದ ಸಾಫ್ಟ್ ಸೀಡ್ ಕ್ಯಾಪಿಟಲ್, ಶೇ.60 ರಷ್ಟು ಸಹಾಯಧನ ಸಾಲ ಶುಲ್ಕ ಮರುಪಾವತಿ ಮತ್ತು ವಿದ್ಯುಚ್ಚಕ್ತಿ ಸಹಾಯಧನ...

ದಿನದ ಸುದ್ದಿ24 hours ago

ಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!

ಯುವಜನರ ಭರವಸೆ ಈಡೇರಿಲ್ಲವೆ? ಸೆ.5ರಂದು ದೆಹಲಿಯಲ್ಲಿ CJP ಶಾಂತಿಯುತ ಪ್ರತಿಭಟನೆ ಜುಲೈ 25ರ ಭರವಸೆ ಜಾರಿಗೆ ವಿಳಂಬ: CJP ತೀವ್ರ ಆಕ್ರೋಶ ಇಂಡಿಯಾ ಗೇಟ್‌ನಿಂದ ಪೊಲೀಸ್ ಕೇಂದ್ರ...

KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ KPSC ಹಗರಣಕ್ಕೆ ಬಿಗ್ ಟ್ವಿಸ್ಟ್! 329 ಅಭ್ಯರ್ಥಿಗಳಿಗೆ CID ನೋಟಿಸ್; IAS ಅಧಿಕಾರಿ ವಿರುದ್ಧ ₹1.1 ಕೋಟಿ ಆರೋಪ
ದಿನದ ಸುದ್ದಿ24 hours ago

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ

KPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ 329 ಅಭ್ಯರ್ಥಿಗಳಿಗೆ ಏಕಕಾಲದಲ್ಲಿ ವಿಚಾರಣಾ ನೋಟಿಸ್ 658 OMR ಕಾರ್ಬನ್...

ದಿನದ ಸುದ್ದಿ1 day ago

ರಿಲೀಸ್‌ಗೂ ಮುನ್ನ ಧರ್ಮಸ್ಥಳದತ್ತ ರಾಕಿಂಗ್‌ ಸ್ಟಾರ್‌ ಯಶ್‌; ‘ಟಾಕ್ಸಿಕ್‌’ ಗೆಲುವಿಗಾಗಿ ವಿಶೇಷ ಪೂಜೆ

ಚೆನ್ನೈ ಪ್ರೀ-ರಿಲೀಸ್‌ ಕಾರ್ಯಕ್ರಮದ ಬಳಿಕ ನೇರವಾಗಿ ಧರ್ಮಸ್ಥಳಕ್ಕೆ ಆಗಮಿಸಿದ ಯಶ್‌; ಕೆಜಿಎಫ್‌-2 ಬಳಿಕ ಮತ್ತೊಮ್ಮೆ ಹಳೆಯ ಸಂಪ್ರದಾಯ ಮುಂದುವರಿಕೆ ಟಾಕ್ಸಿಕ್‌ ರಿಲೀಸ್‌ಗೂ ಮುನ್ನ ಧರ್ಮಸ್ಥಳದಲ್ಲಿ ಯಶ್‌! ಮಂಜುನಾಥನ...

₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ ₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
ದಿನದ ಸುದ್ದಿ1 day ago

₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ

ರಾಜಾಜಿನಗರದಲ್ಲಿ ಬಿಡಿಎ ಭರ್ಜರಿ ಕಾರ್ಯಾಚರಣೆ: 13,000 ಚದರ ಅಡಿ ಜಾಗ ವಶಕ್ಕೆ 13,000 ಚದರ ಅಡಿ ಪ್ರದೇಶ ತೆರವು; ಪೊಲೀಸ್ ಭದ್ರತೆಯಲ್ಲಿ ಬಿಡಿಎ ಕಾರ್ಯಾಚರಣೆ ನಿವೇಶನ 13...

‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ! ‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ!
ದಿನದ ಸುದ್ದಿ1 day ago

ಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!

‘ನನ್ನ ಖಾತಾ ನನ್ನ ಹಕ್ಕು’ ಮುಗಿದರೂ ಸಂಕಷ್ಟ ಮುಗಿಯಲಿಲ್ಲ: 7.50 ಲಕ್ಷ ಆಸ್ತಿಗಳಲ್ಲಿ ಎ-ಖಾತೆ ಸಿಕ್ಕಿದ್ದು 20 ಸಾವಿರಕ್ಕೆ ಮಾತ್ರ! ಗಡುವು ಮುಕ್ತಾಯ, ಇನ್ನು ಬಿ-ಖಾತೆಯಿಂದ ಎ-ಖಾತೆಗೆ...

ಇ-ಕಾಮರ್ಸ್‌ ತಾಣಗಳಲ್ಲಿ ದತ್ತೂರಿ ಹಣ್ಣು, ಬೀಜ ಮಾರಾಟಕ್ಕೆ ಕಡಿವಾಣ! ಇ-ಕಾಮರ್ಸ್‌ ತಾಣಗಳಲ್ಲಿ ದತ್ತೂರಿ ಹಣ್ಣು, ಬೀಜ ಮಾರಾಟಕ್ಕೆ ಕಡಿವಾಣ!
ದಿನದ ಸುದ್ದಿ1 day ago

ಆನ್‌ಲೈನ್‌ನಲ್ಲಿ ಮಾರಾಟವಾಗ್ತಿತ್ತು ‘ವಿಷದ ಹಣ್ಣು’! ಇ-ಕಾಮರ್ಸ್‌ ದೈತ್ಯರಿಗೆ ನೋಟಿಸ್‌

ಇ-ಕಾಮರ್ಸ್‌ ತಾಣಗಳಲ್ಲಿ ದತ್ತೂರಿ ಹಣ್ಣು, ಬೀಜ ಮಾರಾಟಕ್ಕೆ ಕಡಿವಾಣ! ಆನ್‌ಲೈನ್‌ನಲ್ಲಿ ‘ವಿಷದ ಹಣ್ಣು’ ಮಾರಾಟ ಅಮೆಜಾನ್‌, ಫ್ಲಿಪ್‌ಕಾರ್ಟ್‌, ಮಿನಿಟ್ಸ್‌ಗೆ ಸರ್ಕಾರದೊಂದ ನೋಟಿಸ್‌ ಈ ಹಣ್ಣು ಖರೀದಿಸಿದ್ರೆ ಅಪಾಯ,...

Trending