Connect with us

ರಾಜಕೀಯ

ಸದನದಲ್ಲೇ ಬಿಜೆಪಿಯ ಇನ್ನೊಂದು ಕರಾಳ ಮುಖದ ಅನಾವರಣವಾಗಿದೆ‌ : ಸಿದ್ದರಾಮಯ್ಯ ಕಿಡಿ

Published

on

ಸುದ್ದಿದಿನ, ಬೆಂಗಳೂರು: ಈಗಾಗಲೇ ವಿಶ್ವಾಸ ಮತ ಮಂಡನೆಯ ನಿರ್ಣಯವನ್ನು ಸದನದಲ್ಲಿ ಮಂಡಿಸಲಾಗಿದೆ. ಹಾಗಾಗಿ ಈ ವಿಚಾರ ಸದನದ ಸ್ವತ್ತು. ಸದನಕ್ಕೆ ಸಂಬಂಧಿಸಿದ ವಿಚಾರದಲ್ಲಿ ಮಾನ್ಯ ಸಭಾಧ್ಯಕ್ಷರೇ ಸರ್ವೋಚ್ಚರು. ಚರ್ಚೆ ಮತ್ತು ಅಭಿಪ್ರಾಯ ಮಂಡನೆ ಸೇರಿದಂತೆ ಇತರೆ ವಿಚಾರಗಳಲ್ಲಿ ಸಭಾಧ್ಯಕ್ಷರಿಗೆ ಸೂಚನೆ ನೀಡುವ ಅಧಿಕಾರ ರಾಜ್ಯಪಾಲರಿಗಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

ನಂತರ ಟ್ವೀಟ್ ನಲ್ಲಿ, ಶಾಸಕಾಂಗ ಪಕ್ಷದ ನಾಯಕನಾದ ನನಗೆ ವಿಪ್ ಜಾರಿಗೊಳಿಸುವ ಅವಕಾಶ ಇದೆಯೇ? ಇಲ್ಲವೇ? ಎಂಬ ಬಗ್ಗೆ ಸಭಾಧ್ಯಕ್ಷರ‌ ತೀರ್ಮಾನ ಕೇಳಿದ್ದೇನೆ. ಅವರು ಅಡ್ವೊಕೇಟ್ ಜನರಲ್ ಅವರ ಜೊತೆ ಚರ್ಚಿಸಿ ನಿರ್ಣಯ ತಿಳಿಸುವುದಾಗಿ ಹೇಳಿದ್ದಾರೆ. ಇದು ಇತ್ಯರ್ಥವಾಗುವರೆಗೆ ಸರ್ವೋಚ್ಚ ನ್ಯಾಯಾಲಯದ ಮೊರೆಹೋಗುವ ಬಗ್ಗೆ ನಿರ್ಧರಿಸುವುದಿಲ್ಲ ಎಂದಿದ್ದಾರೆ.

ಬಿಜೆಪಿಯ ಅಶ್ವಥ್ ನಾರಾಯಣ್, ಮಾಜಿ ಶಾಸಕ ಯೋಗೀಶ್ವರ್ ಹಾಗೂ ವಿಶ್ವನಾಥ್ ಅವರು ರೂ.5 ಕೋಟಿಯನ್ನು ನನ್ನ ಮನೆಗೆ ತಂದಿದ್ದರು, ಕೊನೆಗೆ ನಾನೇ ಅವರೆಲ್ಲರಿಗೂ ಬೈದು ಕಳುಹಿಸಿದೆ ಎಂದು ಸ್ವತಃ ಶ್ರೀನಿವಾಸ್ ಗೌಡ ಅವರೇ ಹೇಳಿದ್ದಾರೆ. ಇದರಿಂದ ಸದನದಲ್ಲೇ ಬಿಜೆಪಿಯ ಇನ್ನೊಂದು ಕರಾಳ ಮುಖದ ಅನಾವರಣವಾಗಿದೆ‌ ಎಂದು ಕಿಡಿಕಾರಿದ್ದಾರೆ.

ದಿನದ ಸುದ್ದಿ

ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ ಸರಳವಾಗಿ ಆಚರಿಸಲು ಜಿಲ್ಲಾಡಳಿತ ನಿರ್ಧರಿಸಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಎಪ್ರಿಲ್‌ 14 ರಂದು ಮಂಗಳವಾರ ಬೆಳಿಗ್ಗೆ 9:00 ಗಂಟೆಗೆ ಡಾ|| ಬಿ.ಆರ್ ಅಂಬೇಡ್ಕರ್ ವೃತ್ತದಲ್ಲಿರುವ ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡಲಾಗುವುದು. ನಂತರ ಬೆಳಿಗ್ಗೆ 11:00 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿಯ “ತುಂಗಭದ್ರಾ” ಸಭಾಂಗಣದಲ್ಲಿ ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಮೆರವಣಿಗೆ ಮಾರ್ಗ

ಬೆಳಿಗ್ಗೆ 9:00 ಗಂಟೆಗೆ ಅಂಬೇಡ್ಕರ್ ವೃತ್ತದಿಂದ ಭಾವಚಿತ್ರದ ಮೆರವಣಿಗೆ ಆರಂಭವಾಗಲಿದ್ದು, ಹೈಸ್ಕೂಲ್ ಮೈದಾನ ಮಾರ್ಗವಾಗಿ ಮಹಾನಗರ ಪಾಲಿಕೆ, ಗಾಂಧಿ ವೃತ್ತ ಹಾಗೂ ಜಯದೇವ ವೃತ್ತದ ಮೂಲಕ ಸಾಗಿ ಪುನಃ ಅಂಬೇಡ್ಕರ್ ವೃತ್ತಕ್ಕೆ ತಲುಪಲಿದೆ.

ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳು, ದಾವಣಗೆರೆ ತಾಲ್ಲೂಕು ಮಟ್ಟದ ಅಧಿಕಾರಿಗಳು, ದಲಿತಪರ ಸಂಘಟನೆಯ ಮುಖಂಡರು, ಪ್ರಗತಿಪರ ಚಿಂತಕರು ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ರವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ

Published

on

ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್‌ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿದೆ.

ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಶೃಂಗೇರಿ ಶಾಸಕರಾದ ಟಿ.ಡಿ.ರಾಜೇಗೌಡ, ಕಡೂರು ಶಾಸಕರಾದ ಆನಂದ್, ತರೀಕೆರೆ ಶಾಸಕರಾದ ಶ್ರೀನಿವಾಸ್, ಮಾಗಡಿ ಶಾಸಕ‌ ಬಾಲಕೃಷ್ಣ ಸೇರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಹಾಗೂ ಸಂಪಾದಕರಾದ ವಿಶ್ವೇಶ್ವರ ಭಟ್, ಕೆ‌ಎಸ್‌ಟಿ‌ಡಿಸಿ ಅಧ್ಯಕ್ಷರಾದ ಸರೋವರ್ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

Published

on

ಸುದ್ದಿದಿನಡೆಸ್ಕ್:ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಇಂದು ಅವರು ಮಾತನಾಡಿದರು.

ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ‌ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಎಂದು ಪ್ರಶ್ನಿಸಿದರು.

ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ.‌ ಅದು ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದರು.

ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು.

ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ‌ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013 ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕು.

ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ‌ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿ ಬಿಡುತ್ತಾರೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ‌.

ಜನಸಾಮಾನ್ಯರು ಇನ್ನೂ ಪತ್ರಿಕೆಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನೂ ನಂಬಿಕೆ ಇಟ್ಟಿದ್ದೇನೆ.
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಸವಲತ್ತನ್ನು ಜಾರಿ ಮಾಡಿದ್ದೇ ನಾನು. ಇದರಲ್ಲಿನ ನಿಯಮಗಳಲ್ಲಿ ತೊಂದರೆ ಇದ್ದರೆ, ಆ ಬಗ್ಗೆ ಚರ್ಚಿಸಿ ನಿವಾರಣೆಗೊಳಿಸಲಾಗುವುದು ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading
Advertisement

Title

ದಿನದ ಸುದ್ದಿ4 hours ago

ಅಂಧ ಮಕ್ಕಳ ವಸತಿ ಶಾಲೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿಗೆ ಅಂಧ ಮಕ್ಕಳ ಸರ್ಕಾರಿ ಪಾಠಶಾಲೆ 1 ನೇ ತರಗತಿ (6ವರ್ಷ) ಯಿಂದ 10ನೇ ತರಗತಿ (16ವರ್ಷ) ವರೆಗೆ ಅಂಧ ಹೆಣ್ಣು ಮತ್ತು ಗಂಡು ಮಕ್ಕಳಿಗೆ...

ದಿನದ ಸುದ್ದಿ4 hours ago

ನಾಳೆ ಡಾ. ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿರುವ ಹಿನ್ನೆಲೆಯಲ್ಲಿ, ಈ ವರ್ಷದ ಡಾ|| ಬಿ.ಆರ್. ಅಂಬೇಡ್ಕರ್ ಅವರ 135 ನೇ ಜನ್ಮ ದಿನಾಚರಣೆಯನ್ನು ಅತ್ಯಂತ...

ದಿನದ ಸುದ್ದಿ11 hours ago

ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ

ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್‌ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ,...

ದಿನದ ಸುದ್ದಿ2 days ago

ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

ಸುದ್ದಿದಿನಡೆಸ್ಕ್:ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು...

ದಿನದ ಸುದ್ದಿ3 days ago

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ....

ದಿನದ ಸುದ್ದಿ3 days ago

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ. ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು...

ದಿನದ ಸುದ್ದಿ4 days ago

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು. ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ...

ದಿನದ ಸುದ್ದಿ5 days ago

ಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:2026-27ನೇ ಸಾಲಿನಲ್ಲಿ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರತಿಭಾವಂತ ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳನ್ನು 6ನೇ ತರಗತಿಗೆ ದಾಖಲಿಸುವ ಯೋಜನೆಯಡಿ ಪ್ರವೇಶಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿ̧ದೆ, ಅರ್ಜಿಗಳನ್ನು ಏಪ್ರಿಲ್‌...

ದಿನದ ಸುದ್ದಿ5 days ago

ಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ: ಭಾರತೀಯ ಸೇನೆಯಲ್ಲಿನ ಅಗ್ನಿವೀರ್ ಸೇರಿದಂತೆ ವಿವಿಧ ಹುದ್ದೆಗಳನ್ನು ಸೇರಲು ಆಸಕ್ತರು ಏಪ್ರಿಲ್‌ 10 ರೊಳಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ, ಆಸಕ್ತರು ಸೇನೆಯ ಅಧಿಕೃತ ವೆಬ್‌ಸೈಟ್ www.joinindianarmy.nic.in ಗೆ...

ದಿನದ ಸುದ್ದಿ6 days ago

ಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ

ಸುದ್ದಿದಿನ,ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಏಪ್ರಿಲ್ 9 ರಂದು ನಡೆಯಲಿರುವ ಮತದಾನಕ್ಕೆ ಸಂಬಂಧಿಸಿದಂತೆ ಜಿಲ್ಲಾಡಳಿತ ಮತ್ತು ಚುನಾವಣಾ ಆಯೋಗವು ಎಲ್ಲಾ ರೀತಿಯ ಸಿದ್ಧತೆಗಳನ್ನು ಪೂರ್ಣಗೊಳಿಸಿದೆ ಎಂದು...

Trending