Connect with us

ಭಾವ ಭೈರಾಗಿ

ನನ್ನವ್ವ ನೆನಪಾಗುತ್ತಾಳೆ..!

Published

on

ಮೊನ್ನೆ ಮೊನ್ನೆ ತಾನೆ ಇಂಗ್ಲೀಷಿನ ಮದರ್ಸ್ ಡೇ ಎಂಬ ತೋರಿಕೆಯ ಹಬ್ಬವನ್ನು ಜಗತ್ತಿನ ತುಂಬಾ ಆಚರಿಸಲಾಯಿತು. ಈ ಹಬ್ಬ ಬಂದಾಗಲೆಲ್ಲಾ ಪ್ರತಿಯೊಬ್ಬರೂ ತಮ್ಮ ತಮ್ಮ ತಾಯಂದಿರನ್ನು ಬಹಳ ಗೌರವಯುತವಾಗಿ ವರ್ಣಿಸಿ ಫೇಸ್ ಬುಕ್ ಮತ್ತು ವಾಟ್ಸ್ ಆಪ್ ಗಳಲ್ಲಿ ಅವರ ಫೋಟೋಗಳನ್ನ ಹಾಕಿಕೊಂಡು ಅವರ ಪ್ರೀತಿಯನ್ನು ಮೆರೆದರು. ನಿಜ ಅಮ್ಮ ಎಂದರೆ ಈ ಜಗತ್ತು. ಸಾರಿ…ನಾನು ಒಬ್ಬ ಹಳ್ಳಿಯನಾದ್ದರಿಂದ ಈ ಅಮ್ಮಾ ಎಂಬ ಪದವು ನನಗೆ ನಗರಗಳ ಅಜ್ಜಿಯನ್ನು ನೆನಪಿಸುತ್ತದೆ. ಅಚ್ಚ ಕನ್ನಡದಲ್ಲಿ ಅವ್ವ ಎಂದು ಕರೆದರೆ ನನಗೆ ಮೃಷ್ಠಾನ್ನ ಸವಿದಂತಾಗುತ್ತದೆ.

ಈ ಮದರ್ಸ್ ಡೇ ಯ ಬಗ್ಗೆ ನನಗೆ ಎಳ್ಳಷ್ಟೂ ಆಸಕ್ತಿ ಇಲ್ಲ. ಏಕೆಂದರೆ ನಾವು ಚಿಕ್ಕಂದಿನಿಂದಲೂ ಹಳ್ಳಿಯಲ್ಲೇ ಬೆಳೆದುದ್ದರಿಂದ ಅದರ ಗಾಳಿ ಗಂಧವೂ ನಮಗೆ ಸೋಕಿರಲಿಲ್ಲ. ಇತ್ತೀಚಿಗೆ ನಗರಕ್ಕೆ ಬಂದ ಮೇಲೆ ಅದರ ಹೆಸರನ್ನು ಕೇಳಿದ್ದು. ಹಾಗೆ ಕೇಳಿದಾಗಲೆಲ್ಲಾ ನನಗೆ ಮುಜುಗರವಾಗುತ್ತದೆ. ತಾಯಂದಿರ ದಿನ ಅಂತ ಏತಕ್ಕಾಗಿ ಮಾಡಬೇಕು..? ಎನಿಸುತ್ತದೆ. ಏಕೆಂದರೆ ಯಾರದೋ ಜಯಂತಿಯನ್ನು ಆಚರಿಸುವ ರೀತಿಯಲ್ಲಿ ಸಂಭ್ರಮಿಸುತ್ತಾರೆ.ಅದು ತಪ್ಪು, ಅವ್ವನನ್ನು ಪ್ರತಿ ದಿನವೂ ಪೂಜಿಸಬೇಕು , ಪ್ರತಿ ಕ್ಷಣವೂ ಪ್ರೀತಿಸಬೇಕು ಹಾಗಾದಾಗ ಮಾತ್ರ ನಾವು ನಮ್ಮವ್ವನಿಗೆ ಗೌರವಕೊಟ್ಟಂತಾಗುತ್ತದೆ. ಅವಳ ತ್ಯಾಗ ಅನನ್ಯ. ಮಕ್ಕಳ ಮತ್ತು ಗಂಡನ ಒಳಿತಿಗಾಗಿ ತನ್ನ ಸರ್ವಸ್ವವನ್ನೇ ಧಾರೆ ಎರೆದ ಮಹಾಮಾಯಿ.ಅಂತಹವಳನ್ನು ವರ್ಷಕ್ಕೆ ಒಮ್ಮೆ ನೆನಪಿಸಿಕೊಂಡರೆ ಅವಳಿಗೆ ಬೆಲೆ ಕಡಿಮೆಯಾದಂತಾಗುತ್ತದೆ. ಅವ್ವ ಅಥವಾ ಹೆಣ್ಣು ದೇವರ ಸೃಷ್ಟಿಯಲ್ಲಿ ಎಷ್ಟು ಸಹನಾಮೂರ್ತಿ ಎಂಬುದಕ್ಕೆ ಒಂದು ಕಿರು ಕಥೆಯನ್ನು ಹೇಳಲು ಬಯಸುತ್ತೇನೆ.

ಒಮ್ಮೆ ತನ್ನ ತಾಯಿ ಅಳುತ್ತಿದ್ದನ್ನ ನೋಡಿದ ಒಬ್ಬ ಪುಟ್ಟ ಹುಡುಗ ” ಅಮ್ಮ ಯಾಕಮ್ಮ ಅಳುತ್ತಿದ್ದೀಯ” ಎಂದು ಕೇಳಿದಾಗ ತಾಯಿಯು “ನಾನು ಹೆಣ್ಣಾಗಿ ಹುಟ್ಟಿದ ತಪ್ಪಿಗೆ ಎಂದು ಹೇಳುತ್ತಾಳೆ. ಆ ಮಗುವಿಗೆ ಸರಿಯಾದ ಉತ್ತರ ಸಿಗದೆ ಅಲ್ಲೇ ಕುಳಿತಿದ್ದ ತನ್ನ ತಂದೆಯನ್ನು “ಅಪ್ಪಾ ಅಮ್ಮ ಏಕೆ ಅಳುತ್ತಿದ್ದಾಳೆ ” ತಂದೆಯೂ ಕೂಡ ” ಅವಳು ಹೆಣ್ಣಾಗಿ ಹುಟ್ಟಿರುವುದರಿಂದ “. ಆ ಹುಡುಗನಿಗೆ ಅಪ್ಪನಿಂದಲೂ ಸರಿಯಾದ ಉತ್ತರ ಸಿಗದ ಕಾರಣ ದೇವರನ್ನೇ ಕೇಳೋಣವೆಂದು ದೇವರಿಗೆ ಕರೆ ಮಾಡುತ್ತಾನೆ. ಕರೆಯನ್ನು ಸ್ವೀಕರಿಸಿದ ದೇವರು ” ಮಗು ಏನು ನಿನ್ನ ಪ್ರಶ್ನೆ ನನಗೆ ಕರೆ ಮಾಡಿದ ಉದ್ದೇಶವೇನು” ಎಂಬ ಪ್ರೀತಿಯ ಮಾತಿಗೆ ಆ ಹುಡುಗನು ” ದೇವರೇ ನನ್ನ ಅಮ್ಮ ಅಳುತ್ತಿದ್ದಳು ಏಕೆ ಎಂದು ಕೇಳಿದರೆ ಹೆಣ್ಣಾಗಿ ಹುಟ್ಟಿದ ತಪ್ಪಿಗೆ ಎಂಬ ಉತ್ತರ ನನಗೆ ಸಮಾಧಾನ ತರದ ನಿಮಿತ್ತ ನಿನ್ನಿಂದ ಆ ಉತ್ತರವನ್ನು ನಿರೀಕ್ಷಿಸುವೆ” ಹುಡುಗನ ಆ ಮುಗ್ಧ ಮಾತಿಗೆ ದೇವರು ನಗುತ್ತ ” ನೋಡು ಮಗು ನಾನು ಹೆಣ್ಣನ್ನು ವಿಶಿಷ್ಟವಾಗಿ ಸೃಷ್ಟಿಸಿದೆ.

ಲೋಕದ ಭಾರವನ್ನು ಹೊರಲು ಆಕೆಯ ಭುಜಗಳನ್ನು ಬಲಗೊಳಿಸಿದೆ. ಅಂತೆಯೇ ಸಮಾಧಾನವನ್ನು ಕೊಡಲು ಸೌಮ್ಯತೆಯನ್ನು ಕೊಟ್ಟೆ. ಮಗುವಿನ ಜನನದ ನೋವನ್ನು ತಾಳಲು ಅದರಂತೆ, ಮಕ್ಕಳಿಂದ ಹಲವಾರು ಬಾರಿ ಬಾರಿ ತಿರಸ್ಕಾರಗಳನ್ನು ಸಹಿಸಿಕೊಳ್ಳಲು ಆಂತರಿಕ ಶಕ್ತಿಯನ್ನು ತುಂಬಿದೆ. ಕುಟುಂಬದಲ್ಲಿ ಎಂತಹ ನೋವು ದುಃಖಗಳಿದ್ದರೂ ಎಲ್ಲವನ್ನೂ ತಾಳಿಕೊಂಡು ಮುನ್ನಡೆಯಲು ಸ್ಥಿರಮನಸ್ಸನ್ನು ಕೊಟ್ಟೆನು. ಯಾವುದೇ ಪರಿಸ್ಥಿತಿಯಲ್ಲಾದರೂ ಸ್ವಂತ ಮಕ್ಕಳು ಕಷ್ಟವನ್ನು ಕೊಟ್ಟರೂ, ಯಾವುದನ್ನು ಯೋಚಿಸದೆ ಅವರನ್ನು ಇನ್ನೂ ಹೆಚ್ಚಾಗಿ ಪ್ರೀತಿಸಲು ಸೂಕ್ಷ್ಮತೆಯನ್ನು ಕೊಟ್ಟೆನು. ಅಷ್ಟೇ ಅಲ್ಲದೆ ತನ್ನ ಗಂಡನಿಗೆ ಸಹಕಾರಿಯಾಗಿ ಅದರಂತೆ ಅವನ ತಪ್ಪುಗಳನ್ನು ಕ್ಷಮಿಸಿ, ಅವನ ಹೃದಯವನ್ನು ಕಾಪಾಡಲು ಫಲವನ್ನು ಕೊಟ್ಟೆನು. ಕೊನೆಯದಾಗಿ ಕಣ್ಣೀರನ್ನು ಅಳಲು ಕೊಟ್ಟೆನು ” ಈ ವಿಸ್ತಾರವಾದ ನುಡಿಗಳನ್ನು ಅಸಲಿಸಿದ ಹುಡುಗ ಧನ್ಯನೆಂಬಂತೆ ಪ್ರಣಾಮಗಳನ್ನು ಮಾಡಿದನು.

ಈ ಕಥೆಯಲ್ಲಿ ದೇವರು ಹೇಳಿದ ಮಾತುಗಳು ಎಷ್ಟು ಸತ್ಯವಲ್ಲವೇ..?. ಗಂಡಿಗಿಂತ ಹೆಚ್ಚು ಬಲಶಾಲಿ ಹೆಣ್ಣೇ ಅಲ್ಲವೇ..?. ಅವಳ ಅಃತಕರಣ, ಕರುಣೆಗೆ ಬೆಲೆ ಇರುವುದೇ. ಪ್ರಪಂಚದ ಯಾವುದೇ ದೇಶದಲ್ಲಿ ಸಿಗದ ಅತ್ಯುನ್ನತ ಸ್ಥಾನ ನಮ್ಮ ಭಾರತ ದೇಶದ ನಾರಿಯರಿಗೆ ಸಿಕ್ಕಿದೆ. ಇಲ್ಲಿ ಅವರನ್ನು ವಿಶೇಷ ಗೌರವದಿಂದ ಕಾಣುತ್ತಾರೆ. ತಾಯಿಯನ್ನು ನಾವು ದೇವರೆಂದು ಪೂಜಿಸುತ್ತೇವೆ. ದೊಡ್ಡವರು ಹೇಳುವಂತೆ ” ದೇವರು ಎಲ್ಲ ಕಡೆ ಇರಲಾಗುವುದಿಲ್ಲವೆಂದು ತಾಯಿಯನ್ನು ಸೃಷ್ಠಿ ಮಾಡಿದನಂತೆ “. ಹೌದು ನಮಗೆ ಬೇಕು ಬೇಡಗಳನ್ನು ಅರ್ಥಮಾಡಿಕೊಂಡು ನಾವು ಬೇಕು ಎನ್ನುವ ಮೊದಲೇ ನೀಡಿರುತ್ತಾಳೆ. ಮಕ್ಕಳಿಗಾಗಿ ತನ್ನ ಆಸೆಗಳನ್ನೆಲ್ಲಾ ತ್ಯಾಗಮಾಡಿ, ತನ್ನ ಸ್ವಾರ್ಥಗಳನ್ನ ಅಡಗಿಸಿಕೊಂಡು ಜೀವನವನ್ನು ಮೀಸಲಿಡುತ್ತಾಳೆ. ಮನೆಯೇ ಮೊದಲ ಪಾಠಶಾಲೆ ಅಮ್ಮನೇ ಮೊದಲ ಗುರು ಎಂಬ ಮಾತನ್ನು ನಾವು ಕೇಳುತ್ತಲೇ ಬೆಳೆದಿದ್ದೇವೆ. ಸಾವಿರ ಗುರುಗಳಿಗೆ ಒಬ್ಬ ತಾಯಿ ಸಮಾನಳು. ತಿಳಿದವರು ಹೇಳುತ್ತಾರೆ ನೂಲಿನಂತೆ ಸೀರೆ ತಾಯಿಯಂತೆ ಮಗಳು. ಈ ಗಾದೆ ಎಷ್ಟು ಸಮಂಜಸವಾಗಿದೆಯಲ್ಲವೇ.

ಮನೆಯಲ್ಲಿ ಕಲಿತ ವಿನಯ ವಿದ್ಯೆ ಯಾವ ವಿಶ್ವವಿದ್ಯಾನಿಲಯದಿಂದಲೂ ಕಲಿಯಲು ಸಾಧ್ಯವಿಲ್ಲ. ಅಮ್ಮ ಎನ್ನುವವಳು ಕೂಲಿ ಇಲ್ಲದ ಕೆಲಸದಂತವಳಾಗಿದ್ದಾಳೆ. ಬೆಳಿಗ್ಗೆಯಿಂದ ಸಂಜೆವರೆಗೆ ಮನೆಗಾಗಿ, ಮಕ್ಕಳಿಗಾಗಿ, ಗಂಡನಿಗಾಗಿ ದುಡಿದು ದಣಿವಾಗಿದ್ದರೂ, ಶಾಲೆಯಿಂದ ಬಂದ ಮಕ್ಕಳನ್ನ ಮತ್ತು ಕೆಲಸದಿಂದ ಬಂದ ಗಂಡನ ಮುಖವನ್ನು ನೋಡಿದ ಕೂಡಲೇ ತನ್ನ ಆಯಾಸವನ್ನೆಲ್ಲಾ ಮರೆತು ಬಿಡುತ್ತಾಳೆ. ಮಗಳು ಎದೆಯತ್ತರಕ್ಕೆ ಬೆಳೆದು ಜಡೆಯನ್ನು ಕಟ್ಟಿಕೊಳ್ಳಲು ಪ್ರಾರಂಭಿಸಿದ ದಿನದಿಂದ ಅವಳು ತನ್ನ ಆಸೆ ಆಕಾಂಕ್ಷೆಗಳನ್ನು ಬದಿಗಿರಿಸಿ ಮಗಳ ಬೆಳವಣಿಗೆಯ ಬಗ್ಗೆ ಅವಳ ಇಷ್ಟಕಷ್ಟದ ಬಗ್ಗೆ ಗಮನ ಹರಿಸುತ್ತಾಳೆ. ಅವಳ ಅಲಂಕಾರದ ಬಗ್ಗೆ ಚಿಂತಿಸುತ್ತಾಳೆ. ತಾನು ಹೂವನ್ನು ಮುಡಿಯುತ್ತಿದ್ದನ್ನು ನಿಲ್ಲಿಸಿ ಮಗಳಿಗೇ ಮುಡಿಸಿ ಸಂತಸ ಪಡುತ್ತಾಳೆ. ಕೂಲಿ ನಾಲಿಗೆ ಹೋದಾಗ ಒಡತಿಯರು ತಿಂಡಿ, ಊಟ, ಹಣ್ಣುಹಂಪಲು ಕೊಟ್ಟರೆ ತಾನು ತಿನ್ನದೆ ಸೆರಗಲ್ಲಿ ಬಚ್ಚಿಟ್ಟು ತಂದು ಮಕ್ಕಳಿಗೆ ತಿನಿಸುತ್ತಾಳೆ. ಇದೇ ಕಾರಣಕ್ಕೆ ನನ್ನವ್ವ ನನಗೆ ನೆನಪಾಗುತ್ತಾಳೆ.

ಇದೇ ಜೂನ್ 3 ನೇ ತಾರೀಖಿಗೆ ನನ್ನವ್ವನ ಪರಿನಿರ್ವಾಣವಾಗಿ ಸಪ್ತ ಸಂವತ್ಸರಗಳು ಕಳೆಯುತ್ತದೆ. ಹೀಗ್ಗೆ ಹತ್ತು ವರ್ಷಗಳ ಹಿಂದೆ ನನ್ನ ಮದುವೆ ವಿಚಾರವಾಗಿ ನನಗೂ ನನ್ನವ್ವನಿಗೂ ಒಂದು ಸಣ್ಣ ಜಗಳ ಆಗುತ್ತದೆ. ಆಗ ನನಗೆ ಇಪ್ಪತ್ತೆಂಟರ ಹರೆಯ. ಮದುವೆ ಆಗುವ ವಯಸ್ಸು. ಮನೆಯಲ್ಲಿ ನಾನು ನನ್ಮವ್ವ ಇಬ್ಬರೇ ಇದ್ದದ್ದು. ನಾನು ಕೆಲಸ ಅರಸಿ ಬೆಂಗಳೂರಿಗೆ ಬಂದಿದ್ದೆ. ಊರಲ್ಲಿ ಒಬ್ಬಳೇ ಇದ್ದ ಕಾರಣ ಮದುವೆ ಮಾಡಿಕೋ ಎಂದು ಒತ್ತಾಯ ಮಾಡುತ್ತಿದ್ದಳು. ಏಕೆಂದರೆ ನನ್ನಣ್ಣಂದಿರಿಬ್ಬರಿಗೆ ಇಪ್ಪತ್ತೈನೆಯ ವಯಸ್ಸಿಗೆ ಮದುವೆ ಮಾಡಿ ಮುಗಿಸಿದ್ದಳು. ಒಂಟಿ ಹೆಂಗಸು ಗಂಡನ ಕಳೆದುಕೊಂಡು ಕೂಲಿ ನಾಲಿ ಮಾಡಿ ಸಮಾಜದಲ್ಲಿ ಎಲ್ಲರಂತೆ ಬದುಕಬೇಕು ಎಂದು ಸ್ವಾಭಿಮಾನದಿಂದ ಜೀವಿಸುತ್ತಿದ್ದಳು. ನನ್ನ ಅಪ್ಪ ನಾನು ಒಂದು ವರ್ಷದ ಮಗುವಾಗಿದ್ದಾಗ ತೀರಿಕೊಂಡರಂತೆ.

ಅವರ ಮುಖದ ಛಾಯೆಯನ್ನೇ ನಾನು ಗಮನಿಸಿರಲಿಲ್ಲ. ನನ್ನವ್ವನೇ ಗಂಡಸಿನಂತೆ ನಿಂತು ಎಲ್ಲವನ್ನೂ ನಿಭಾಯಿಸುತ್ತಿದ್ದಳು. ಆಗಲೇ ವಯಸ್ಸು ಅರವತ್ತರ ಆಸುಪಾಸಿನಲ್ಲಿತ್ತು. ಅದೇ ಕಾರಣಕ್ಕೆ ನಾನಿರುವಾಗಲೇ ನಿನಗೂ ಮದುವೆ ಮಾಡಿ ಕಣ್ತುಂಬಿಕೊಳ್ಳುವೆ ಎಂದು ಒತ್ತಾಯಿಸತೊಡಗಿದಳು. ನಾನೋ ನನ್ನವ್ವನಿಗೆ ” ಅವ್ವ ನನಗೆ ಇನ್ನೂ ಸ್ವಲ್ಪ ದಿವಸಗಳ ಕಾಲ ಮದುವೆ ಬೇಡ ಚನ್ನಾಗಿರುವ ಹುಡುಗಿ ಸಿಕ್ಕ ಮೇಲೆ ಆಗುತ್ತೇನೆ ” ಎನ್ನುತ್ತಿದ್ದಾಗ ” ಅಲ್ಲಕಡ ಕೂಸೆ ಅಂದ ಚಂದ ಕಟ್ಕಂಡು ಯಾನ್ ಮಾಡಿಯಾ ಕೊಳ್ಬ ಊದಕ್ಕ ಎರಡು ತುಟಿ ಇದ್ರ ಸಾಕಾಲ್ವ ಅವ್ಳೇನ ಕುಂಡುಸ್ಕಂಡು ನೆಕ್ಕಿಯಾ. ಇಲ್ಲಾ ನಾ ಸತ್ತ ಮೇಲ ಯಾನಾದರೂ ಮದುವೆ ಆದಯಾ “. ಈ ಮಾತು ಆ ದಿವಸಗಳಲ್ಲಿ ನನಗೆ ತಮಾಷೆ ಎನಿಸಿದ್ದರೂ ಪ್ರತಿವರ್ಷದ ಅವಳ ಪರಿನಿರ್ವಾಣದ ದಿನದಂದು ದುಃಖ ಉಕ್ಕುಕ್ಕಿ ಬರುತ್ತದೆ. ಯಾಕೆಂದರೆ ಅದಾವ ಘಳಿಗೆಯಲ್ಲಿ ಹೇಳಿದಳೋ ನಾ ಸತ್ತ ಮೇಲೆ ಮದುವೆ ಆಗುತ್ತೀಯ ಎಂದು ಹಾಗೇ ಆಗಿಹೋಯಿತು. ನನ್ನ ಮದುವೆಗೆ ಇನ್ನೂ ಹದಿನೈದು ದಿನಗಳು ಬಾಕಿ ಇರುವಾಗಲೇ ನನ್ನವ್ವ ನನ್ನನ್ನು ಬಿಟ್ಟು ಇಹಲೋಹ ತ್ಯಜಿಸಿದಳು.

ಕಿರಿ ಮಗನ ಕಂಡರೆ ಬಲು ಪ್ರೀತಿ ಎಂದು ಎಲ್ಲರೂ ಹೇಳುತ್ತಿದ್ದರು. ಅದರಂತೆಯೇ ನನ್ನವ್ವ ನನ್ನ ಇಷ್ಟಕಷ್ಟವನ್ನೆಲ್ಲಾ ತಿಳಿದುಕೊಂಡು ನಾನೇನು ಯೋಚಿಸುತ್ತೇನೆ ಎಂಬುದನ್ನು ಆಲೋಚಿಸಿಬಿಡುತ್ತಿದ್ದಳು. ನನ್ನ ಮದುವೆಗೆ ಹುಡುಗಿ ನೋಡಿ ಬಂದು ನನಗೆ ಒಪ್ಪಿಗೆ ಎಂದು ಹೇಳಿದಾಗ ಬಹಳ ಹರ್ಷ ವ್ಯಕ್ತಪಡಿಸಿದಳು. ಹೂ ಮುಡಿಸುವ ಶಾಸ್ತ್ರದ ದಿನ ಮೆಚ್ಚಿ ಭಾವಿ ಸೊಸೆಗೆ ಅವಳ ಕೈಯಿಂದ ಇನ್ನೂರು ರೂಪಾಯಿಗಳನ್ನು ಪ್ರೀತಿಯಿಂದ ನೀಡಿದಳು. ಅದನ್ನು ಈಗಲೂ ನನ್ನ ಮಡದಿ ಅತ್ತೆಯ ನೆನಪಿಗೆ ಜೋಪಾನವಾಗಿ ಇಟ್ಟುಕೊಂಡಿದ್ದಾಳೆ. ನಾನು ನಾಲ್ಕು ವರ್ಷದವನಿದ್ದಾಗ ತುಂಬಾ ತುಂಟ ಮತ್ತು ಹಠಮಾರಿಯಂತೆ. ಆದರೆ ಊಟದ ವಿಷಯದಲ್ಲಿ ಏನೋ ಕೊಟ್ಟರೂ ಬೇಡ ಎನ್ನುತ್ತಿರಲಿಲ್ಲ ಎಂದು ಆಗಾಗ ನನ್ನವ್ವ ಹೇಳುತ್ತಿದ್ದಳು. ಬಹುಶಃ ಈಗಲೂ ಹಾಗೆಯೇ ಊಟದ ವಿಷಯದಲ್ಲಿ ಯಾವುದೇ ಭೇದಬಾವಲಿಲ್ಲ.

ಆದರೆ ಹಠಮಾರಿತನ ಮತ್ತು ತುಂಟುತನ ಮಾತ್ರ ಇಲ್ಲ. ನಮ್ಮ ಸಂಬಂಧಿಕರ ಮಕ್ಕಳು ತಿಂಡಿಯನ್ನು ತಿನ್ನುತ್ತಿದ್ದರೆ ನನಗೂ ಬೇಕು ಎಂದು ನನ್ನವ್ವನಿಗೆ ದಂಬಾಲು ಬೀಳುತ್ತಿದ್ದೆ. ಪಾಪ ಅವಳೋ ಬಡವಿ ಬಡತನದಲ್ಲಿ ಬೇಯತ್ತಿದ್ದಳು. ಎಲ್ಲಿಂದ ತಿಂಡಿಗಳನ್ನು ನನಗೆ ಕೊಡಿಸಲು ಸಾಧ್ಯ. ಅಡುಗೆ ಮಾಡುವಾಗ ಅವಳ ಕೊರಳುಗಳನ್ನು ಬಳಸಿ ಅಳುತ್ತಿದ್ದ ನೋಡಿ ರಾಗಿ ಮುದ್ದೆಯನ್ನು ಒಂದಿಸುವಾಗ ಬಿಸಿ ಬಿಸಿಯಾಗಿ ತೆಗೆದು ಚಿಕ್ಕ ಗೊಂಬೆಯಂತೆ ಮಾಡಿ ಅದಕ್ಕೆ ಹರಳು ಉಪ್ಪನ್ನು ಬೆರೆಸಿ ಮಿದ್ದಿಸಿ ಕೊಟ್ಟು ಬಿಡುತ್ತಿದ್ದಳು. ಅದೇ ನನಗೆ ತಿಂಡಿ ತೀರ್ಥ, ಹಣ್ಣು ಹಂಪಲುಗಳು. ಆ ಚಿಕ್ಕಗೊಂಬೆಯಂಥ ರಾಗಿ ಮುದ್ದೆಯನ್ನು ಕಡಿಯುತ್ತ ಸಂತೋಷಪಡುತ್ತಿದ್ದೆ. ಅದೇ ತಾಯಿಯ ಪ್ರೀತಿ, ಮಮತೆ. ಮಕ್ಕಳನ್ನು ಹೇಗೆ ನಿಭಾಯಿಸಬೇಕು ಎಂದು ಅವಳಿಗೆ ತಿಳಿದಿರುತ್ತದೆ.

ನನಗೆ ಹತ್ತು ವರ್ಷಗಳು ಇರಬಹುದು ಒಮ್ಮೆ ನನ್ನವ್ವ ನಮ್ಮ ಊರಿಂದ ಸ್ವಲ್ಪ ದೂರದಲ್ಲೇ ಇದ್ದ ನಮ್ಮ ಗದ್ದೆಗೆ ನೀರು ಬಿಡಲೆಂದು ರಾತ್ರಿಯ ವೇಳೆ ನನ್ನನ್ನು ಕರೆದುಕೊಂಡು ಹೋದಳು. ನೀರು ಕಡಲಿನ ತುಂಬ ಹರಿಯುತ್ತ ಗದ್ದೆಗೆ ನುಗ್ಗುತ್ತಿತ್ತು.ರಾತ್ರಿ ಸುಮಾರು ಹನ್ನೊಂದು ಗಂಟೆಯ ಸಮಯ. ನನಗೆ ನಿದ್ರೆಯ ಮಂಪರು ತೂಕಡಿಕೆ ಬರುತ್ತಿತ್ತು. ನೀರು ಬಿಡುವ ಆತುರದಲ್ಲಿದ್ದ ನನ್ನವ್ವ ನನ್ನ ಕಷ್ಟವನ್ನು ನೋಡಿ ಅಲ್ಲೇ ಸ್ವಲ್ಪ ಅಗಲವಾದ ಕಟ್ಟೆಯ ಮೇಲೆ ಮಲಗಿಸಿದಳು. ನಿದಿರೆಯಲ್ಲಿ ನೀರಿನ ಚಿಕ್ಕ ಕಾಲುವೆಯೊಳಗೆ ಉರುಳಿಬಿಟ್ಟಿದ್ದೆ.ಮೈತುಂಬಾ ಕಂಬಳಿ ಹೊದಿಸಿದ್ದರಿಂದ ನನಗೆ ನೀರಿಗೆ ಉರುಳಿದ್ದು ಗೊತ್ತಾಗಿರಲಿಲ್ಲ. ನನ್ನ ಅದೃಷ್ಟ ಅಷ್ಟರೊಳಗೆ ನನ್ನವ್ವ ಅದೇ ಸಮಯಕ್ಕೆ ಬಂದು ನೋಡಿದ್ದಾಳೆ ನಾನು ಕಾಣದ ಭಯದಲ್ಲಿ ಕಡಲನ್ನು ನೋಡಿದ್ದಾಳೆ ಏನೋ ತೇಲುತ್ತಿದೆ ಎಂದು ಮುಂದೆ ಬಂದು ನೋಡಿ ಗಾಬರಿಯಿಂದ ಎತ್ತಿಕೊಂಡು ಗೊಳೋ ಅಂತ ಅಳುತ್ತಿದ್ದಳು.

ಅದೇ ಕೊನೆ ಇನ್ನೆಂದೂ ನನ್ನನ್ನು ಕರೆದುಕೊಂಡು ಹೋಗಲಿಲ್ಲ. ಇಲ್ಲಿ ನನ್ನವ್ವನ ಎದೆಗಾರಿಕೆ ಮತ್ತು ಧೈರ್ಯವನ್ನು ಅನಾವರಣಗೊಳಿಸಲು ಹೇಳಿದಂತದ್ದು. ಹೆಣ್ಣಾಗಿದ್ದರೂ ಗಂಡಸಿನಂತೆ ಹಗಲು ರಾತ್ರಿಗಳೆನ್ನದೆ ದುಡಿದು ನಮ್ಮನ್ನು ಈ ಸ್ಥಾನಕ್ಕೆ ತಂದಿದ್ದಾಳೆ. ಆದರೆ ಈ ಸಮಯದಲ್ಲಿ ನಮ್ಮ ಜೊತೆ ಇದ್ದು ಸಂತೋಷ ಪಡಲು ಅವಳಿಲ್ಲ ಅವಳು ಈಗ ಬರೀ ನೆನಪು ಮಾತ್ರ. ಈಗ ನನ್ನ ಮಡದಿ ತುಂಬು ಗರ್ಭಿಣಿ ಅವಳ ಹಾರೈಕೆಗೆ ಯಾರ ಒತ್ತಾಸೆಯೂ ನಮಗೆ ಸರಿಯಾಗಿ ಸಿಗುತ್ತಿಲ್ಲ. ಅದೇ ನನ್ನವ್ವ ಇದ್ದರೆ ಎಷ್ಟು ಪ್ರೀತಿಯಿಂದ ಸೊಸೆ ಮತ್ತು ಮೊಮ್ಮಗುವನ್ನು ಹಾರೈಕೆ ಮಾಡುತ್ತಿದ್ದಳೋ…? ನಮಗೆ ಆ ಅದೃಷ್ಟವಿಲ್ಲ. ಅಮ್ಮ ಇರುವಾಗ ಅವಳ ಬೆಲೆ ತಿಳಿಯುವುದಿಲ್ಲ. ಇಲ್ಲದಾಗ ಬಹಳ ಕಾಡುತ್ತಾಳೆ.

ಮಹದೇವ್ ಬಿಳುಗಲಿ
9611339024

ಸುದ್ದಿದಿನ.ಕಾಂ|ವಾಟ್ಸಾಪ್|9980346243

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ಅಂಕಣ

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

Published

on

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ ಕಂಠಸಿರಿಯಿಂದ ಆರು ದಶಕಗಳಿಗೂ ಹೆಚ್ಚು ಕಾಲ ಕೋಟ್ಯಂತರ ಸಂಗೀತಾಭಿಮಾನಿಗಳ ಹೃದಯವನ್ನು ಗೆದ್ದಿದ್ದ ಈ ಮಹಾನ್ ಹಿನ್ನೆಲೆ ಗಾಯಕಿ ಇಹಲೋಕ ತ್ಯಜಿಸಿದ್ದಾರೆ. ಅವರ ನಿಧನವು ಕೇವಲ ಒಬ್ಬ ಗಾಯಕಿಯ ಅಗಲಿಕೆಯಲ್ಲ; ಭಾರತೀಯ ಸಂಗೀತ ಪರಂಪರೆಯ ಒಂದು ಮಹತ್ತರ ಯುಗದ ಅಂತ್ಯವಾಗಿದೆ.

ಸಂಗೀತವು ಭಾಷೆಯ ಎಲ್ಲೆಗಳನ್ನು ಮೀರಿ ಹೃದಯವನ್ನು ತಲುಪುವ ಮಾಧ್ಯಮ. ಆ ಸತ್ಯವನ್ನು ತಮ್ಮ ಗಾಯನದ ಮೂಲಕ ಸಾಬೀತುಪಡಿಸಿದ ಕಲಾವಿದೆ ಎಸ್. ಜಾನಕಿ. ಅವರು ಹಾಡಿದ ಸಾವಿರಾರು ಗೀತೆಗಳು ಇಂದಿಗೂ ಪ್ರೀತಿ, ವಿರಹ, ಭಕ್ತಿ, ಮಾತೃತ್ವ, ಸಂತೋಷ ಮತ್ತು ಬದುಕಿನ ಸೂಕ್ಷ್ಮ ಭಾವನೆಗಳಿಗೆ ಧ್ವನಿಯಾಗಿವೆ. ಅವರ ಕಂಠ ಕೇಳಿದ ಕ್ಷಣವೇ ಹಾಡಿನ ಪಾತ್ರ ಜೀವಂತವಾಗಿ ಕಣ್ಣೆದುರು ಮೂಡುತ್ತಿತ್ತು. ಅದೇ ಅವರ ಗಾಯನದ ಮಹತ್ವ.

ಸಾಮಾನ್ಯ ಕುಟುಂಬದಿಂದ ಸಂಗೀತ ಸಾಮ್ರಾಜ್ಯದವರೆಗೆ

1938ರ ಏಪ್ರಿಲ್ 23ರಂದು ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯ ರೆಪಲ್ಲೆ ಸಮೀಪ ಜನಿಸಿದ ಜಾನಕಿ, ಬಾಲ್ಯದಿಂದಲೇ ಸಂಗೀತದತ್ತ ಅತೀವ ಆಸಕ್ತಿ ಹೊಂದಿದ್ದರು. ಮನೆಯಲ್ಲಿದ್ದ ಸಂಗೀತದ ವಾತಾವರಣವೇ ಅವರ ಪ್ರತಿಭೆಗೆ ಮೊದಲ ಪ್ರೇರಣೆ. ಸಂಪ್ರದಾಯಬದ್ಧ ಸಂಗೀತ ಶಿಕ್ಷಣ ಸೀಮಿತವಾಗಿದ್ದರೂ, ದೇವರು ನೀಡಿದ ಸಹಜ ಕಂಠವೇ ಅವರನ್ನು ಅಪರೂಪದ ಗಾಯಕಿಯನ್ನಾಗಿ ರೂಪಿಸಿತು.

ಕುಟುಂಬದ ಬೆಂಬಲದೊಂದಿಗೆ ಅವರು ಆಗಿನ ಮದ್ರಾಸಿಗೆ ತೆರಳಿ ಹಿನ್ನೆಲೆ ಗಾಯನದಲ್ಲಿ ಅವಕಾಶ ಹುಡುಕಿದರು. ಆರಂಭದ ದಿನಗಳು ಸುಲಭವಾಗಿರಲಿಲ್ಲ. ಆದರೆ ಪ್ರತಿಭೆ, ಶ್ರಮ ಮತ್ತು ಸಂಗೀತದ ಮೇಲಿನ ಅಚಲ ನಿಷ್ಠೆ ಅವರನ್ನು ಬೇಗನೇ ಸಂಗೀತ ನಿರ್ದೇಶಕರ ಗಮನಕ್ಕೆ ತಂದಿತು. 1957ರಲ್ಲಿ ಆರಂಭವಾದ ಅವರ ಗಾಯನಯಾನ, ನಂತರ ಭಾರತದ ಸಂಗೀತ ಇತಿಹಾಸದಲ್ಲೇ ಅತ್ಯಂತ ದೀರ್ಘ ಹಾಗೂ ಯಶಸ್ವಿ ಪಯಣಗಳಲ್ಲಿ ಒಂದಾಗಿ ಬೆಳೆಯಿತು.

ಭಾಷೆಗಳ ಗಡಿಗಳನ್ನು ಮೀರಿ ಮೊಳಗಿದ ಧ್ವನಿ

ತೆಲುಗು, ಕನ್ನಡ, ತಮಿಳು, ಮಲಯಾಳಂ, ಹಿಂದಿ, ಒಡಿಯಾ, ತುಳು, ಕೊಂಕಣಿ ಸೇರಿದಂತೆ ಅನೇಕ ಭಾರತೀಯ ಭಾಷೆಗಳಲ್ಲಿ ಅವರು ಸಾವಿರಾರು ಹಾಡುಗಳನ್ನು ಹಾಡಿದರು. ವಿವಿಧ ಮೂಲಗಳ ಪ್ರಕಾರ ಅವರು 40 ಸಾವಿರಕ್ಕೂ ಅಧಿಕ ಗೀತೆಗಳಿಗೆ ಧ್ವನಿಯಾಗಿದ್ದಾರೆ.

ಪ್ರತಿ ಭಾಷೆಯ ಉಚ್ಚಾರಣೆಯನ್ನು ಅತ್ಯಂತ ಶ್ರದ್ಧೆಯಿಂದ ಕಲಿತು, ಆ ಭಾಷೆಯವರೇ ಹಾಡಿದಂತೆ ಹಾಡುವುದು ಅವರ ವಿಶೇಷತೆ. ಅದಕ್ಕಾಗಿಯೇ ಅವರು ಹಾಡಿದ ಗೀತೆಗಳನ್ನು ಯಾವ ರಾಜ್ಯದ ಜನರೂ ತಮ್ಮದೇ ಭಾಷೆಯ ಹಾಡುಗಳೆಂದು ಪ್ರೀತಿಸಿದರು. ಒಬ್ಬ ಗಾಯಕಿಗೆ ಇದಕ್ಕಿಂತ ದೊಡ್ಡ ಗೌರವ ಮತ್ತೊಂದಿಲ್ಲ.

ಕನ್ನಡಿಗರ ಮನದ ಜಾನಕಿ

ಕರ್ನಾಟಕದ ಸಂಗೀತಾಸಕ್ತರಿಗೆ ಎಸ್. ಜಾನಕಿ ಎಂದರೆ ವಿಶೇಷವಾದ ಭಾವನಾತ್ಮಕ ಬಂಧ. ಕನ್ನಡ ಚಿತ್ರರಂಗದ ಸುವರ್ಣಯುಗದ ನೂರಾರು ಅಮರಗೀತೆಗಳಿಗೆ ಅವರು ಜೀವ ತುಂಬಿದ್ದಾರೆ.

ಡಾ. ರಾಜ್‌ಕುಮಾರ್, ವಿಷ್ಣುವರ್ಧನ್, ಅಂಬರೀಷ್, ಶಂಕರ್ ನಾಗ್, ಅನಂತ್ ನಾಗ್, ರಮೇಶ್ ಅರವಿಂದ್ ಸೇರಿದಂತೆ ಹಲವು ತಲೆಮಾರಿನ ನಟ–ನಟಿಯರ ಭಾವನೆಗಳಿಗೆ ಅವರ ಧ್ವನಿಯೇ ಆತ್ಮವಾಗಿತ್ತು.

ವಿಜಯಭಾಸ್ಕರ್, ಜಿ.ಕೆ. ವೆಂಕಟೇಶ್, ರಾಜನ್–ನಾಗೇಂದ್ರ, ಉಪೇಂದ್ರ ಕುಮಾರ್, ಹಂಸಲೇಖ ಸೇರಿದಂತೆ ಕನ್ನಡದ ಶ್ರೇಷ್ಠ ಸಂಗೀತ ನಿರ್ದೇಶಕರೊಂದಿಗೆ ಅವರು ನೀಡಿದ ಹಾಡುಗಳು ಇಂದಿಗೂ ಸಂಗೀತಾಸಕ್ತರ ತುಟಿಗಳಲ್ಲಿ ಜೀವಂತವಾಗಿವೆ.

ಪ್ರೇಮಗೀತೆಗಳಾಗಲಿ, ಭಕ್ತಿಗೀತೆಗಳಾಗಲಿ, ಜಾನಪದ ಸೊಗಡಿನ ಹಾಡುಗಳಾಗಲಿ ಅಥವಾ ವಿರಹದ ಮೌನವನ್ನು ಹೇಳುವ ಮಧುರಗೀತೆಗಳಾಗಲಿ—ಜಾನಕಿ ಅವರ ಧ್ವನಿ ಪ್ರತಿಯೊಂದು ಭಾವಕ್ಕೂ ಹೊಸ ಅರ್ಥ ನೀಡುತ್ತಿತ್ತು.

ಇಳಯರಾಜಾ–ಜಾನಕಿ: ಸಂಗೀತದ ಅದ್ಭುತ ಜೋಡಿ

ತಮಿಳು ಚಿತ್ರರಂಗದಲ್ಲಿ ಸಂಗೀತ ನಿರ್ದೇಶಕ ಇಳಯರಾಜಾ ಮತ್ತು ಎಸ್. ಜಾನಕಿ ಅವರ ಸಂಗಮ ಭಾರತೀಯ ಚಿತ್ರಸಂಗೀತದ ಅತ್ಯಂತ ಯಶಸ್ವಿ ಜೋಡಿಗಳಲ್ಲಿ ಒಂದು.

ಇಳಯರಾಜಾ ಅವರ ಸಂಗೀತದ ಸೂಕ್ಷ್ಮ ಭಾವಗಳನ್ನು ಜಾನಕಿ ತಮ್ಮ ಧ್ವನಿಯಲ್ಲಿ ಜೀವಂತಗೊಳಿಸುತ್ತಿದ್ದರು. ಈ ಜೋಡಿಯ ಅನೇಕ ಗೀತೆಗಳು ಇಂದಿಗೂ ದಕ್ಷಿಣ ಭಾರತದ ಸಂಗೀತಾಭಿಮಾನಿಗಳ ನಿತ್ಯ ಸಂಗಾತಿಗಳಾಗಿವೆ.

ಅದೇ ರೀತಿ ಎಂ.ಎಸ್. ವಿಶ್ವನಾಥನ್, ಕೆ.ವಿ. ಮಹಾದೇವನ್, ಚಕ್ರವರ್ತಿ, ಹಂಸಲೇಖ, ರಾಜನ್–ನಾಗೇಂದ್ರ, ವಿಜಯಭಾಸ್ಕರ್ ಮೊದಲಾದ ದಿಗ್ಗಜರ ಸಂಗೀತಕ್ಕೂ ಅವರು ವಿಶಿಷ್ಟ ಕಂಠಸಿರಿ ನೀಡಿದ್ದಾರೆ.

ಧ್ವನಿಯೊಳಗಿದ್ದ ಸಾವಿರ ರೂಪಗಳು

ಎಸ್. ಜಾನಕಿ ಅವರ ಗಾಯನದ ಅತ್ಯಂತ ದೊಡ್ಡ ವೈಶಿಷ್ಟ್ಯವೆಂದರೆ ಧ್ವನಿಯ ರೂಪಾಂತರ. ಒಂದು ಹಾಡಿನಲ್ಲಿ ಮಗು ಮಾತನಾಡಿದಂತೆ ಹಾಡಬಲ್ಲರು; ಮತ್ತೊಂದು ಹಾಡಿನಲ್ಲಿ ವಯಸ್ಸಾದ ಮಹಿಳೆಯ ಭಾವನೆ ಮೂಡಿಸುತ್ತಿದ್ದರು. ಕೆಲವೊಮ್ಮೆ ಗ್ರಾಮೀಣ ಹುಡುಗಿಯ ಮುಗ್ಧತೆ, ಮತ್ತೊಮ್ಮೆ ನಗರ ಮಹಿಳೆಯ ಆತ್ಮವಿಶ್ವಾಸ, ಇನ್ನೊಮ್ಮೆ ತಾಯಿಯ ಮಮತೆ, ಮತ್ತೆ ಭಕ್ತೆಯ ಪ್ರಾರ್ಥನೆ—ಪ್ರತಿ ಭಾವಕ್ಕೂ ಬೇರೆ ಧ್ವನಿಯನ್ನು ನೀಡುವ ಸಾಮರ್ಥ್ಯ ಅವರಿಗೆ ಮಾತ್ರ ಸಾಧ್ಯವಾಗಿತ್ತು. ಅವರ ಧ್ವನಿ ಕೇವಲ ಸಂಗೀತವಲ್ಲ; ಅದು ಅಭಿನಯವೂ ಆಗಿತ್ತು.

ಶ್ರಮ, ಶಿಸ್ತು ಮತ್ತು ಪರಿಪೂರ್ಣತೆಯ ಪ್ರತೀಕ

ಒಂದು ಹಾಡನ್ನು ಹಾಡುವ ಮೊದಲು ಅದರ ಸಾಹಿತ್ಯವನ್ನು ಸಂಪೂರ್ಣ ಅರ್ಥೈಸಿಕೊಳ್ಳುವುದು ಅವರ ಅಭ್ಯಾಸ. ಉಚ್ಚಾರಣೆಯಲ್ಲಿ ಯಾವುದೇ ತಪ್ಪು ಆಗಬಾರದು ಎಂಬ ಕಾರಣಕ್ಕೆ ಹೊಸ ಭಾಷೆಗಳನ್ನು ಸಹ ಕಲಿಯುತ್ತಿದ್ದರು.

ರೆಕಾರ್ಡಿಂಗ್ ಸ್ಟುಡಿಯೋದಲ್ಲಿ ಸಮಯಪಾಲನೆ, ಶಿಸ್ತು ಹಾಗೂ ಸಂಗೀತದ ಮೇಲಿನ ಅಪಾರ ಗೌರವದಿಂದ ಅವರು ಎಲ್ಲರ ಪ್ರೀತಿಗೆ ಪಾತ್ರರಾಗಿದ್ದರು.

ಸಂಗೀತ ನಿರ್ದೇಶಕರು ಅನೇಕ ಬಾರಿ ಹೇಳಿದ್ದೇನಂದರೆ, ಜಾನಕಿ ಹಾಡನ್ನು ಒಮ್ಮೆ ಅರ್ಥ ಮಾಡಿಕೊಂಡರೆ ಅದನ್ನು ಮತ್ತೆ ವಿವರಿಸುವ ಅಗತ್ಯವೇ ಇರಲಿಲ್ಲ.

ಪ್ರಶಸ್ತಿಗಳಿಗಿಂತ ದೊಡ್ಡದು ಜನರ ಪ್ರೀತಿ

ಎಸ್. ಜಾನಕಿ ಅವರು ನಾಲ್ಕು ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳನ್ನು ಪಡೆದಿದ್ದಾರೆ. ವಿವಿಧ ರಾಜ್ಯ ಸರ್ಕಾರಗಳಿಂದ ಮೂವತ್ತಕ್ಕೂ ಅಧಿಕ ಅತ್ಯುತ್ತಮ ಹಿನ್ನೆಲೆ ಗಾಯಕಿ ಪ್ರಶಸ್ತಿಗಳು ಅವರಿಗೆ ಸಂದಿವೆ. ಆದರೆ ಅವರು ಎಂದಿಗೂ ಪ್ರಶಸ್ತಿಗಳಿಗಾಗಿ ಹಾಡಲಿಲ್ಲ. ಸಂಗೀತವೇ ಅವರ ಧ್ಯಾನ, ಗಾಯನವೇ ಅವರ ಪೂಜೆ.

ಪದ್ಮಭೂಷಣ ಪ್ರಶಸ್ತಿಯನ್ನು ಅವರು ವಿನಯಪೂರ್ವಕವಾಗಿ ನಿರಾಕರಿಸಿದ್ದು ದೇಶಾದ್ಯಂತ ಚರ್ಚೆಗೆ ಕಾರಣವಾಗಿತ್ತು. ತಮ್ಮ ಸಾಧನೆಗೆ ತಡವಾಗಿ ಗೌರವ ನೀಡಲಾಗಿದೆ ಎಂಬ ಭಾವನೆಯನ್ನು ಅವರು ಅತ್ಯಂತ ಗೌರವಯುತವಾಗಿ ವ್ಯಕ್ತಪಡಿಸಿದ್ದರು.

ಎಸ್.ಪಿ.ಬಿ.–ಜಾನಕಿ: ಮರೆಯಲಾಗದ ಸಂಗೀತಯಾನ

ಎಸ್.ಪಿ. ಬಾಲಸುಬ್ರಹ್ಮಣ್ಯಂ ಮತ್ತು ಎಸ್. ಜಾನಕಿ ಅವರ ಜೋಡಿ ಭಾರತೀಯ ಚಿತ್ರಸಂಗೀತದ ಅತ್ಯಂತ ಜನಪ್ರಿಯ ಗಾಯನ ಜೋಡಿಗಳಲ್ಲಿ ಒಂದು.

ಅವರಿಬ್ಬರು ಹಾಡಿದ ಸಾವಿರಾರು ಯುಗಲಗೀತೆಗಳು ಇಂದಿಗೂ ರೇಡಿಯೋಗಳಲ್ಲಿ, ಸಂಗೀತ ಕಾರ್ಯಕ್ರಮಗಳಲ್ಲಿ ಮತ್ತು ಅಭಿಮಾನಿಗಳ ನೆನಪುಗಳಲ್ಲಿ ಸದಾ ಕೇಳಿಸುತ್ತಿವೆ.ಇವರ ಗಾಯನದಲ್ಲಿ ಸ್ಪರ್ಧೆಯಿರಲಿಲ್ಲ; ಪರಸ್ಪರ ಪೂರಕವಾದ ಸಂಗೀತ ಮಾತ್ರ ಇತ್ತು.

ಸರಳತೆಯೇ ಅವರ ಅಲಂಕಾರ

ಅಸಂಖ್ಯಾತ ಪ್ರಶಸ್ತಿಗಳು, ಲಕ್ಷಾಂತರ ಅಭಿಮಾನಿಗಳು, ದೇಶವ್ಯಾಪಿ ಖ್ಯಾತಿ—ಇವೆಲ್ಲ ಇದ್ದರೂ ಎಸ್. ಜಾನಕಿ ಅತ್ಯಂತ ಸರಳ ಜೀವನ ನಡೆಸಿದರು.ವೇದಿಕೆಯಲ್ಲಿ ಎಂದಿಗೂ ಆಡಂಬರ ತೋರಲಿಲ್ಲ. ಸಂದರ್ಶನಗಳಲ್ಲಿಯೂ ತಮ್ಮ ಸಾಧನೆಗಿಂತ ಸಂಗೀತದ ಮಹತ್ವದ ಬಗ್ಗೆ ಹೆಚ್ಚು ಮಾತನಾಡುತ್ತಿದ್ದರು.ಹೊಸ ಗಾಯಕರಿಗೆ ಪ್ರೋತ್ಸಾಹ ನೀಡುವುದು, ಅವರನ್ನು ಮೆಚ್ಚುವುದು ಮತ್ತು ಸಂಗೀತವನ್ನು ಗೌರವಿಸುವಂತೆ ಸಲಹೆ ನೀಡುವುದು ಅವರ ಸ್ವಭಾವವಾಗಿತ್ತು.

ಹೊಸ ತಲೆಮಾರಿನಲ್ಲೂ ಜೀವಂತ ಧ್ವನಿ

ಡಿಜಿಟಲ್ ಸಂಗೀತದ ಯುಗದಲ್ಲಿಯೂ ಎಸ್. ಜಾನಕಿ ಅವರ ಹಾಡುಗಳ ಜನಪ್ರಿಯತೆ ಕಡಿಮೆಯಾಗಲಿಲ್ಲ. ಯೂಟ್ಯೂಬ್, ಸಂಗೀತ ಆ್ಯಪ್‌ಗಳು, ರಿಯಾಲಿಟಿ ಶೋಗಳು, ಸಾಮಾಜಿಕ ಜಾಲತಾಣಗಳು—ಎಲ್ಲೆಡೆ ಅವರ ಹಾಡುಗಳು ಹೊಸ ತಲೆಮಾರಿನ ಕಿವಿಗಳಿಗೆ ತಲುಪುತ್ತಲೇ ಇವೆ. ಇಂದಿನ ಅನೇಕ ಯುವ ಗಾಯಕ–ಗಾಯಕಿಯರು ತಮ್ಮ ಸಂಗೀತಯಾನದ ಪ್ರೇರಣೆಯಾಗಿ ಜಾನಕಿ ಅವರನ್ನು ಉಲ್ಲೇಖಿಸುತ್ತಾರೆ.

ಸಂಗೀತ ಲೋಕದ ಕಂಬನಿ

ಅವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ದೇಶದಾದ್ಯಂತ ಸಂಗೀತ ಲೋಕದಲ್ಲಿ ಶೋಕದ ಛಾಯೆ ಆವರಿಸಿತು. ಚಿತ್ರರಂಗದ ಗಣ್ಯರು, ಸಂಗೀತ ನಿರ್ದೇಶಕರು, ಗಾಯಕ–ಗಾಯಕಿಯರು, ಸಾಹಿತ್ಯಿಕರು, ರಾಜಕೀಯ ನಾಯಕರು ಹಾಗೂ ಲಕ್ಷಾಂತರ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳ ಮೂಲಕ ಭಾವಪೂರ್ಣ ನಮನ ಸಲ್ಲಿಸಿದರು.

“ಒಂದು ಯುಗ ಮುಗಿಯಿತು”, “ಗಾನಕೋಗಿಲೆಯ ಧ್ವನಿ ಎಂದೆಂದಿಗೂ ಜೀವಂತ”, “ನಮ್ಮ ಜೀವನದ ನೆನಪುಗಳಿಗೆ ಹಿನ್ನೆಲೆ ಸಂಗೀತ ನೀಡಿದ ಧ್ವನಿ” ಎಂಬ ಮಾತುಗಳು ಎಲ್ಲೆಡೆ ಕೇಳಿಬಂದವು.

ಕನ್ನಡಿಗರ ನೆನಪಿನಲ್ಲಿ ಎಂದೆಂದಿಗೂ

ಕರ್ನಾಟಕದ ಮನೆಮನೆಗಳಲ್ಲೂ ಎಸ್. ಜಾನಕಿ ಅವರ ಹಾಡುಗಳು ಇಂದಿಗೂ ಬೆಳಗಿನ ಭಕ್ತಿಗೀತೆಗಳಾಗಿ, ಪ್ರೇಮಗೀತೆಗಳಾಗಿ, ಹಬ್ಬದ ಸಂಭ್ರಮವಾಗಿ, ಬದುಕಿನ ನೆನಪುಗಳಾಗಿ ಮೊಳಗುತ್ತಿವೆ.

ಅವರ ಧ್ವನಿ ಅನೇಕ ಕುಟುಂಬಗಳ ಭಾವನೆಗಳ ಒಂದು ಭಾಗವಾಗಿದೆ. ತಾಯಿಯ ನೆನಪಿನಲ್ಲಿ, ಪ್ರೀತಿಯ ನೆನಪಿನಲ್ಲಿ, ಬಾಲ್ಯದ ನೆನಪಿನಲ್ಲಿ, ಹಬ್ಬದ ಸಂಭ್ರಮದಲ್ಲಿ—ಎಲ್ಲೆಲ್ಲೂ ಜಾನಕಿ ಅವರ ಹಾಡುಗಳಿವೆ.

ಸ್ವರ ಮೌನವಾದರೂ…

ಕಾಲ ಬದಲಾಗಬಹುದು. ಸಂಗೀತದ ಶೈಲಿಗಳು ಬದಲಾಗಬಹುದು. ಹೊಸ ತಂತ್ರಜ್ಞಾನಗಳು ಬರಬಹುದು. ಆದರೆ ಭಾವನೆಗೆ ಜೀವ ತುಂಬುವ ಧ್ವನಿಗಳು ಅಪರೂಪ.

ಎಸ್. ಜಾನಕಿ ಅಂತಹ ಅಪರೂಪದ ಧ್ವನಿ. ಅವರ ದೇಹ ನಮ್ಮೊಂದಿಗಿಲ್ಲ. ಆದರೆ ಅವರು ಹಾಡಿದ ಪ್ರತಿಯೊಂದು ಗೀತೆ ಮುಂದಿನ ಹಲವು ತಲೆಮಾರುಗಳಿಗೂ ಬದುಕಿನ ಸಂಗಾತಿಯಾಗಿರುತ್ತದೆ. ಸಂಗೀತ ಇತಿಹಾಸವನ್ನು ಬರೆಯುವಾಗ ಅವರ ಹೆಸರನ್ನು ಬಿಟ್ಟು ಮುಂದೆ ಸಾಗುವುದು ಅಸಾಧ್ಯ. ಮರಣವು ಒಬ್ಬ ವ್ಯಕ್ತಿಯನ್ನು ಮಾತ್ರ ಕಸಿದುಕೊಳ್ಳಬಹುದು; ಅವರು ಸೃಷ್ಟಿಸಿದ ಕಲೆಯನ್ನು ಅಲ್ಲ.

ಎಸ್. ಜಾನಕಿ ಅವರ ಸ್ವರ ಇಂದು ಮೌನವಾಗಿದೆ. ಆದರೆ ಅವರು ಹಾಡಿದ ಸಾವಿರಾರು ಗೀತೆಗಳು ಭಾರತೀಯ ಸಂಗೀತಾಕಾಶದಲ್ಲಿ ಶಾಶ್ವತವಾಗಿ ಪ್ರತಿಧ್ವನಿಸುತ್ತಲೇ ಇರುತ್ತವೆ.
ಅವರ ಕಂಠಸಿರಿ ಕಾಲವನ್ನು ಮೀರಿದೆ.
ಅವರ ಸಂಗೀತ ತಲೆಮಾರುಗಳನ್ನು ಮೀರಿದೆ.
ಅವರ ನೆನಪು ಎಂದಿಗೂ ಅಳಿಯದು.

ಸ್ವರ ಮೌನವಾಗಿದೆ… ಆದರೆ ಸಂಗೀತ ಅಮರವಾಗಿದೆ. ಅದೇ ಎಸ್. ಜಾನಕಿ ಅವರ ಶಾಶ್ವತ ಪರಂಪರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.

ಈ‌ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.

ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು

ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.

ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್‌ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.

ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.

ಇತ್ತೀಚಿನ ಪಾಸ್‌ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.

ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.

ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.

ತೀರ್ಪುಗಾರರ ತೀರ್ಮಾನವೇ ಅಂತಿಮ.

ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.

ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.

ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.

ಆಗಸ್ಟ್‌ 30ರೊಳಗೆ ಬರಹಗಳನ್ನು ಇ-ಮೇಲ್‌: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.

ಕಚೇರಿ ವಿಳಾಸ 

ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ಅಂಕಣ

ಕವಿತೆ | ದೇವರ ಹೂವು

Published

on

~ ಡಾ. ಸಿ.ಬಿ.ಐನಳ್ಳಿ

ಊಟ ಮಾಟ ವೇಷ ಭಾಷೆ
ಪ್ರಾರ್ಥನೆ ಬೇರೆ ಬೇರೆ
ಪವಿತ್ರಪಠ್ಯ ಅವನದೊಂದು
ನನ್ನದಿನ್ನೊಂದಂತೆ

ನದಿ ದಂಡೆಯ ಮೇಲೆ
ನೋಟ ಬೆರೆತು ಮಾತು ಮರೆತು
ಮೈತ್ರಿ ಮೊಳೆಯಿತು
ಎಷ್ಟು ಬಿಗಿದಪ್ಪಿಕೊಂಡರೂ
ಉಳಿಯುತ್ತಿತ್ತು ನಡುವೆ ಸಣ್ಣ ಪೊಳ್ದಾಣ

ಹೂದೋಟದ ದುಂಬಿ ಸತತ ಮೂರು
ವಸಂತದ ಗಾಳಿ ಅಣಕಿಸಿದಾಗ
ಪರಾಗಸ್ಪರ್ಶಕೆ ಹೊಸ ಹೂವೊಂದು
ಅರಳಿ ನಿಂತಿತು
ಪೊಳ್ಳಿನ ನೆನಪೇ ಮಾಯವಾಗಿದೆ

ಎಳೆ ಹೂವು ಮೈಮರೆತು
ಹಾಡಿ ಓಡಿ ನಲಿಯುತಿದೆ
ಧರ್ಮ ನನ್ನ ಕಣ್ಣೊಳಗೆ ಜಿನುಗಿ
ಹನಿಯಾಗಿ ಜಾರುತಿದೆ

ಕವಿ ಪರಿಚಯ : ಡಾ. ಸಿ.ಬಿ.ಐನಳ್ಳಿ, ಸಹಾಯಕ ಪ್ರಾಧ್ಯಾಪಕರು, ಇಂಗ್ಲೀಷ್ ವಿಭಾಗ, ಕರ್ನಾಟಕ ಕಲಾ ಮಹಾವಿದ್ಯಾಲಯ, ಧಾರವಾಡ

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading
Advertisement

Title

ದಿನದ ಸುದ್ದಿ3 days ago

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,...

ದಿನದ ಸುದ್ದಿ4 days ago

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ....

ದಿನದ ಸುದ್ದಿ4 days ago

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು...

ದಿನದ ಸುದ್ದಿ1 week ago

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ...

ದಿನದ ಸುದ್ದಿ2 weeks ago

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ...

ದಿನದ ಸುದ್ದಿ2 weeks ago

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ...

ದಿನದ ಸುದ್ದಿ2 weeks ago

ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ

ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು  ತಿಳಿಸಿದ್ದಾರೆ. ಅಂತ್ಯಕ್ರಿಯೆಯನ್ನು...

ಅಂಕಣ2 weeks ago

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ...

ದಿನದ ಸುದ್ದಿ2 weeks ago

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ...

ದಿನದ ಸುದ್ದಿ2 weeks ago

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

ಮುಖ್ಯಾಂಶಗಳು ​ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ ​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್ ಸುದ್ದಿದಿನ,​ದಾವಣಗೆರೆ:...

Trending