ಸಿನಿ ಸುದ್ದಿ
“ಹೋದ ಉಸಿರು”ಬಹುಭಾಷೆಯ ಕಿರುಚಿತ್ರ ನೋಡಿ,ತಬ್ಬಲಿ ಜಾತಿಯ ಅಲೆಮಾರಿಯಾದ ಚಂದ್ರು ಯಡವಲ್ ರವರ ವಿಲನ್ ಪಾತ್ರವನ್ನು ನೋಡಿ ಅಭಿನಂದಿಸಿ ಪ್ರೋತ್ಸಾಹಿಸಿ..!
ಸಿನಿಮಾ ಅಂದರೆ ಸಾಕು ಎಲ್ಲ ಭಾಗದಿಂದಲೂ ಹೆಚ್ಚಾಗಿ ಕೇಳಿ ಬರುವ ಹೆಸರು ಬೆಂಗಳೂರು-ಮೈಸೂರಿನ ಮಂಡ್ಯ ಕಡೆಯವರು,ಬಲ್ಯಾಡರು,ದುಡ್ಡಿದ್ದ ಶ್ರೀಮಂತರೆ ಸಿನಿಮಾ ಮಾಡುತ್ತಾರೆ,ಅದರಲ್ಲೂ ಕಿರುಚಿತ್ರವೆಂದರೆ ಸಾಕು ಬೆಂಗಳೂರು-ಮೈಸೂರು,ಹುಬ್ಬಳ್ಳಿ-ಧಾರವಾಡದ ಜನತೆಯೆ ಮುಂದು ಹಾಗೂ ಪರಿಣಿತರೂ ಸಹ ಹೌದು ಎಂಬ ಭಾವನೆ ನಮ್ಮ ಭಾಗದವರ ಸರ್ವೇಸಾಮಾನ್ಯವಾದ ಮನೋಭಾವನೆ.ಆದರೆ ಇದರ ಮಧ್ಯೆಯೂ ಪಕ್ಕಾ ಅಲೆಮಾರಿಯೊಬ್ಬನ ಪ್ರತಿಭೆಯೊಂದು ಯಾವ ರಂಗಭೂಮಿಯ ತರಬೇತಿಯಿಲ್ಲದೆ
(ಒಂಥರಾ ಅಲೆಮಾರಿಗಳೆಲ್ಲ ಕಲಾವಿದರೇ)
ಇವರು ಚಿಕ್ಕಂದಿನಲ್ಲಿ ಹಗಲುವೇಷಗಾರನಾಗಿ ತಂದೆಯ ಜೊತೆ ಹಗಲುವೇಷಗಾರಿಕೆಯ ಪಾತ್ರದ ಮುಖಾಂತರ ತಮಿಳುನಾಡು,ಆಂಧ್ರಪ್ರದೇಶ,ಕರ್ನಾಟಕದ ಕೆಲವು ಭಾಗದಲ್ಲಿಯೂ ಕುಟುಂಬದ ಜೀವನೋಪಯಕ್ಕಾಗಿ ಹಿರಿಯರಿಂದ ಬಂದ ಬಳುವಳಿಯ ವೃತ್ತಿಯಾದ ವೇಷಗಾರಿಕೆಯನ್ನು ಮಾಡಿರುತ್ತಾರೆ.
ಆ ಹಗಲುವೇಷಗಾರಿಕೆ ಇಂದು ಕೈ ಹಿಡಿದಿದೆ ಅಂತಲೇ ಎನ್ನಬಹುದು ಮತ್ತು ಸರಿಯಾದ ಉನ್ನತ ವಿದ್ಯಾಭ್ಯಾಸವನ್ನು ಕಲಿಯದ ಬಡ ಅಲೆಮಾರಿ ಕುಟುಂಬದ ಹಿನ್ನೆಲೆಯಲ್ಲಿ ಬಂದಿರುವ ಹಾಗೂ *ಇಂದಿಗೂ ತನ್ನ ಬೇರೆ-ಬೇರೆ ವೃತ್ತಿ ಕಾಯಕದ ಜೊತೆಗೆ ಸಾಮಾಜಿಕ ಕಾರ್ಯದಲ್ಲಿ ತೊಡಗಿರುವ ರಾಯಚೂರು ಜಿಲ್ಲೆಯ ಮಾನ್ವಿ (ನೂತನ ಸಿರವಾರ) ತಾಲ್ಲೂಕಿನ ಕವಿತಾಳ ಎಂಬ ಪಟ್ಟಣದ ವ್ಯಕ್ತಿಯಾದ ನನ್ನ ಸಂಬಂಧಿಯಾದ(ಮಾವ),ಮಾರ್ಗದರ್ಶಿ,
ಹಿತೈಷಿ,ಅಲೆಮಾರಿಗಳ ಸಾಮಾಜಿಕ ಹೋರಾಟಗಾರ, ಅಲೆಮಾರಿಗಳ ಕಾಳಜಿಯುಳ್ಳ ಅಪ್ಪಟ ಅಲೆಮಾರಿಗಳ ಭಾವಿನಾಯಕ,ಅಲೆಮಾರಿ ಸಮಾಜದ ಹೆಮ್ಮೆಯ ಕುಡಿಯಾದ ನಮ್ಮ ನಿಮ್ಮೆಲ್ಲರ ನೆಚ್ಚಿನ ಆತ್ಮೀಯರಾದ,ಸಹೋದರ ಚಂದ್ರಶೇಖರ್ ಯಡವಲ್ ಎಂಬುವವರು ನಿಖಿತ್ ಪರಿಚಯಿಸುವ ಬಹುಭಾಷೆಯ ಕಿರುಚಿತ್ರವಾದ ಹೋದ ಉಸಿರು ಸಿನಿಮಾದಲ್ಲಿ ವಿಲನ್ ಪಾತ್ರದಲ್ಲಿ ಅಭಿನಯಿಸಿ, ನಿರ್ಮಾಪಕರಾಗಿಯೂ ಕೆಲಸ ಮಾಡಿರುತ್ತಾರೆ.
ಅವರು ವಿಲನ್ ಪಾತ್ರದಲ್ಲಿ ಅಭಿನಯಿಸಿರುವ ಚೊಚ್ಚಲ(ಮೊದಲ) ಸಿನಿಮಾ “ಹೋದ ಉಸಿರು” ಕಿರುಚಿತ್ರವು ಆರ್ ಪ್ರೊಡಕ್ಷನ್ ಅರ್ಪಿಸುವ ನಿದೇರ್ಶನ,
ಛಾಯಾಗ್ರಹಣರಾದ ರಾಕೇಶ್ ಆಚಾರ್ಯರವರ ಕಥೆ-ಚಿತ್ರಕಥೆ:-ಸಂಪತ್ ರಾಯ್ ನೇತೃತ್ವದಲ್ಲಿ ಮೂಡಿಬಂದಿದೆ. ಇದೊಂದು ಪಕ್ಕಾ ಹಳ್ಳಿಯ ನೈಜ ಘಟನಾಧಾರಿತವಾದ ಪ್ರೀತಿಯ ಬಲೆಗೆ ಬಿದ್ದು ಪ್ರೇಮಿ ಕೊಲೆಯಾಗುವ ಕಥೆಯಾಗಿದ್ದು,ಈ ಕಿರುಚಿತ್ರವು ರಾಜ್ಯಾದ್ಯಂತ ಏಕಕಾಲಕ್ಕೆ ಬಹುಭಾಷೆಯಲ್ಲಿ ಅಂದರೆ ಐದು ಭಾಷೆಯಲ್ಲಿ
(ಕನ್ನಡ,ತೆಲುಗು,
ತಮಿಳು,ಮಲಯಾಳಂ,ಹಿಂದಿ)
Youtube ಲಿ ಬಿಡುಗಡೆಗೊಳ್ಳಲಿದೆ ಮತ್ತು
ಮುಂದುವರೆದು ಚಿತ್ರಮಂದಿರಗಳಲ್ಲಿಯೂ ಪ್ರಸಾರವಾಗುವ ಸಾಧ್ಯತೆಗಳು ಹೆಚ್ಚಾಗಿವೆ.ಆದ್ದರಿಂದ ತಾವುಗಳು ಈ ಚಿತ್ರವನ್ನು ತಮ್ಮ ಸ್ನೇಹಿತರೊಂದಿಗೆ ಮತ್ತು ಬಂದು ಬಳಗದವರ ಜೊತೆ ಹಂಚಿಕೊಂಡು ಕಿರುಚಿತ್ರವನ್ನು ನೋಡುವುದರ ಮೂಲಕ ಈ ಕಿರುಚಿತ್ರದಲ್ಲಿ ಬಹುಭಾಷೆಯಲ್ಲಿ ವಿಲನ್ ಪಾತ್ರದಲ್ಲಿ ಕಾಣಿಸಿಕೊಂಡ ಈ ಭಾಗದ ಹಳ್ಳಿಯ, ಅಪ್ಪಟ್ಟ ಅಲೆಮಾರಿಯ ಯುವ ಪ್ರತಿಭೆಯಾದ ಚಂದ್ರಶೇಖರ್ ಯಡವಲ್ ಹಾಗೂ ಇನ್ನೊಬ್ಬ ನಾಯಕ-ನಟನಾದ ಸಂಪತ್ ರಾಯ್ ಇವರನ್ನು ಗುರುತಿಸಿ, ಪ್ರೋತ್ಸಾಹಿಸಿ,ಸಹಕರಿಸಿ ಆರ್ಶಿವಾದಿಸಬೇಕಾಗಿ ಸಕಲರಲ್ಲಿ ವಿನಂತಿ.
ಇನ್ನೂ ಅನೇಕ ಸಾಮಾಜಿಕ ಕಳಕಳಿಯುಳ್ಳ ಕಿರುಚಿತ್ರಗಳನ್ನು ನಿರ್ಮಾಣ ಮಾಡಿ ಜನಮನ್ನಣೆ ಪಡೆದು ಆದಷ್ಟು ಬೇಗನೆ ಚಿತ್ರರಂಗಕ್ಕೆ ಅಲೆಮಾರಿ ಬಂಧುವಾದ ಚಂದ್ರಶೇಖರ್ ಯಡವಲ್ ರವರು ಪಾದಾರ್ಪಣೆಯನ್ನು ಮಾಡಲೆಂದು,ಮುಂದಿನ ಚಿತ್ರರಂಗದ ಅವರ ಬದುಕು ಸುಗಮವಾಗಿ ಸಾಗಿ ಯಶಸ್ಸು ಲಭಿಸಲೆಂದೂ ಆ ದೇವರಲ್ಲಿ ಪ್ರಾರ್ಥಿಸುತ್ತೇನೆ.
–ಶಿವರಾಜ್ ಮೋತಿ ಹಟ್ಟಿ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
ಸುದ್ದಿದಿನ ಡೆಸ್ಕ್:ಆರಂಭಿಕ ಜೀವನ – 1978ರಲ್ಲಿ ಬೆಂಗಳೂರಿನಲ್ಲಿ ಜನಿಸಿದ ದಿಲೀಪ್ ರಾಜ್ ಅವರು ಕಾಲೇಜು ದಿನಗಳಿಂದಲೇ ಕಲೆಯತ್ತ ಒಲವು ಹೊಂದಿದ್ದರು.
ಚಲನಚಿತ್ರ ರಂಗ – 2005ರಲ್ಲಿ ‘ಬಾಯ್ ಫ್ರೆಂಡ್’ ಚಿತ್ರದ ಮೂಲಕ ಎಂಟ್ರಿ ಕೊಟ್ಟ ಅವರು, 2007ರಲ್ಲಿ ಪುನೀತ್ ರಾಜ್ಕುಮಾರ್ ಅವರ ‘ಮಿಲನ’ ಚಿತ್ರದಲ್ಲಿ ಹೇಮಂತ್ ಎಂಬ ವಿಲನ್ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದರು.
ಇತ್ತೀಚಿನ ಜನಪ್ರಿಯತೆ – ‘ಲವ್ ಮಾಕ್ಟೇಲ್’ ಸಿನಿಮಾ ಮತ್ತು ಕಿರುತೆರೆಯಲ್ಲಿ ನಟ-ನಿರ್ಮಾಪಕರಾಗಿ ದೊಡ್ಡ ಹೆಸರು ಮಾಡಿದ್ದರು.
ದಿಲೀಪ್ ರಾಜ್ ಅವರ ಸಾವು ಕೇವಲ ಒಂದು ಕುಟುಂಬಕ್ಕೆ ಮಾತ್ರವಲ್ಲದೆ ಇಡೀ ಚಿತ್ರರಂಗಕ್ಕೆ ದೊಡ್ಡ ನಷ್ಟ. ಇವರ ಈ ಹಠಾತ್ ನಿಧನವು ಒತ್ತಡದ ಜೀವನಶೈಲಿ ಮತ್ತು ಆರೋಗ್ಯದ ಕಡೆಗೆ ನಾವು ನೀಡಬೇಕಾದ ಹೆಚ್ಚಿನ ಗಮನದ ಬಗ್ಗೆ ಎಚ್ಚರಿಕೆ ನೀಡುವಂತಿದೆ.

ದಿನದ ಸುದ್ದಿ
ನಟ ದಿಲೀಪ್ ರಾಜ್ ಆ ಒಂದು ತಪ್ಪು ಪ್ರಾಣಕ್ಕೆ ಮುಳುವಾಯ್ತು
ಸುದ್ದಿದಿನಡೆಸ್ಕ್:ಕನ್ನಡ ಚಿತ್ರರಂಗದ ಖ್ಯಾತ ನಟ ದಿಲೀಪ್ ರಾಜ್ (47) ಅವರ ಅಕಾಲಿಕ ನಿಧನವು ಇಡೀ ಸ್ಯಾಂಡಲ್ವುಡ್ ಅನ್ನು ದಿಗ್ಭ್ರಮೆಗೊಳಿಸಿದೆ. ಕೇವಲ 47 ವರ್ಷ ವಯಸ್ಸಿನ ಈ ಪ್ರತಿಭಾನ್ವಿತ ಕಲಾವಿದ ಇಂದು ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ. ಆದರೆ ಅವರ ಈ ಸಾವಿನ ಹಿಂದೆ ಒಂದು ಬೇಸರದ ಸಂಗತಿಯೂ ಅಡಗಿದೆ, ಅದೇನೆಂದರೆ ಅವರ ಆರೋಗ್ಯದ ಕುರಿತು ತೋರಿದ ಒಂದು ನಿರ್ಲಕ್ಷ್ಯ!
ನಟ ನಿರ್ಮಾಪಕ ದಿಲೀಪ್ ರಾಜ್ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದು, ಇಡೀ ಸ್ಯಾಂಡಲ್ವುಡ್ ದಿಗ್ಭ್ರಮೆಗೊಂಡಿದೆ. ಕೆಲವು ದಿನಗಳ ಹಿಂದೆ ಗೋವಾ ಪ್ರವಾಸದಲ್ಲಿದ್ದಾಗಲೇ ಅವರಿಗೆ ಆಗಾಗ ಎದೆನೋವು ಕಾಣಿಸಿಕೊಂಡಿತ್ತು, ಆದರೆ ಪ್ರವಾಸದ ಖುಷಿಯಲ್ಲಿದ್ದ ಅವರು ಅದನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ.. ಬೆಂಗಳೂರಿಗೆ ಮರಳಿದ ನಂತರ ಇಂದು ವೈದ್ಯಕೀಯ ತಪಾಸಣೆಗೆ ಅಪಾಯಿಂಟ್ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು;
ತಪಾಸಣೆಗೆ ಹೋಗುವ ಮುನ್ನವೇ ರಾತ್ರಿ ತೀವ್ರ ಎದೆನೋವು ಕಾಣಿಸಿಕೊಂಡು ಕುಮಾರಸ್ವಾಮಿ ಲೇಔಟ್ನ ಅಪೋಲೋ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.ನೋವು ಕಾಣಿಸಿಕೊಂಡ ತಕ್ಷಣವೇ ಆಸ್ಪತ್ರೆಗೆ ದಾಖಲಾಗಿದ್ದರೆ ಇಂದು ಪರಿಸ್ಥಿತಿ ಬೇರೆಯೇ ಇರುತ್ತಿತ್ತು ಎಂದು ಅವರ ಕುಟುಂಬಸ್ಥರು ಮತ್ತು ಅಭಿಮಾನಿಗಳು ಕಣ್ಣೀರು ಹಾಕುತ್ತಿದ್ದಾರೆ.
ನಟ ದಿಲೀಪ್ ರಾಜ್ ಅವರು ಕೆಲವೇ ದಿನಗಳ ಹಿಂದೆ ಗೋವಾಗೆ ಪ್ರವಾಸ ತೆರಳಿದ್ದರು.
ಅಲ್ಲಿ ಗೆಳೆಯರೊಂದಿಗೆ ಕಾಲ ಕಳೆಯುವಾಗಲೇ ಅವರಿಗೆ ಎದೆ ನೋವು ಕಾಣಿಸಿಕೊಂಡಿತ್ತು ಎನ್ನಲಾಗುತ್ತಿದೆ. ಅಂದೇ ಹೃದಯವು ಅಪಾಯದ ಮುನ್ಸೂಚನೆ ನೀಡಿದ್ದರೂ, ದಿಲೀಪ್ ಅವರು ಅದನ್ನು ಗಂಭೀರವಾಗಿ ಪರಿಗಣಿಸದೆ ನಿರ್ಲಕ್ಷ್ಯ ತೋರಿದ್ದರು. ಗೋವಾ ಟ್ರಿಪ್ನಲ್ಲಿದ್ದಾಗಲೇ ಆಗಾಗ ನೋವು ಕಾಣಿಸಿಕೊಂಡರೂ, ಅವರು ಅದನ್ನು ಕೇರ್ ಮಾಡಿರಲಿಲ್ಲ.
ಬೆಂಗಳೂರಿಗೆ ಮರಳಿದ ನಂತರ ಅವರು ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಲು ನಿರ್ಧರಿಸಿದ್ದರು. ವಿಪರ್ಯಾಸವೆಂದರೆ, ಇಂದು ಅವರು ಆಸ್ಪತ್ರೆಗೆ ತೆರಳಿ ಹೃದಯ ತಪಾಸಣೆ ಮಾಡಿಸಿಕೊಳ್ಳಬೇಕಿತ್ತು ಮತ್ತು ಅದಕ್ಕಾಗಿ ವೈದ್ಯರ ಅಪಾಯಿಂಟ್ಮೆಂಟ್ ಕೂಡ ಫಿಕ್ಸ್ ಆಗಿತ್ತು. ಆದರೆ ವಿಧಿ ಆಟವೇ ಬೇರೆಯಾಗಿತ್ತು. ನಿನ್ನೆ ರಾತ್ರಿ ಕೂಡ ಧಾರಾವಾಹಿ ಕಲಾವಿದರ ಜೊತೆ ಫೋನ್ನಲ್ಲಿ ಆತ್ಮೀಯವಾಗಿ ಮಾತನಾಡಿದ್ದ ನಟನಿಗೆ, ಮಧ್ಯರಾತ್ರಿ ತೀವ್ರವಾದ ಎದೆನೋವು ಕಾಣಿಸಿಕೊಂಡಿದೆ. ಆಸ್ಪತ್ರೆಗೆ ತೆರಳುವ ಮುನ್ನವೇ ಅವರು ಏಕಾಏಕಿ ಕುಸಿದು ಬಿದ್ದು ಕೊನೆಯುಸಿರೆಳೆದಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ5 days agoನೀಟ್ ಸೃಷ್ಟಿಸಿದ ಅವಾಂತರಗಳು ಮತ್ತು ಅದರ ಬಹುಮುಖಿ ಬಿಕ್ಕಟ್ಟುಗಳು: ಒಂದು ವಿಮರ್ಶಾತ್ಮಕ ನೋಟ
-
ದಿನದ ಸುದ್ದಿ5 days agoಲಾರಿ, ಟ್ರಾಕ್ಟರ್ ಗಳಿಗೆ ಟ್ರಿಪ್ ಚೀಟಿ ಇಲ್ಲದೆ ಅಕ್ರಮ ಸಾಗಾಣಿಕೆ ; ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳೊಂದಿಗೆ ಶಾಮೀಲು..!?
-
ದಿನದ ಸುದ್ದಿ7 days ago‘ಹಿಟ್ಲರ್ ಕಲ್ಯಾಣ’ದ ನಾಯಕನ ಬದುಕಿನ ಪಯಣ ಹೀಗಿತ್ತು
-
ದಿನದ ಸುದ್ದಿ5 days agoಕೆ. ಶಿವರಾಜಕುಮಾರ್ ಅವರಿಗೆ ಪಿಎಚ್ ಡಿ ಪದವಿ
-
ದಿನದ ಸುದ್ದಿ4 days agoಶಿಕ್ಷಕರು, ವಾರ್ಡನ್ಗಳಿಗೆ ಪೋಕ್ಸೊ ಕಾಯ್ದೆ ತರಬೇತಿ ನೀಡಿ
-
ದಿನದ ಸುದ್ದಿ3 days agoಲೋಕಾಯುಕ್ತ ಪೋಲಿಸ್ ಇನ್ಸ್ಪೆಕ್ಟರ್ ಪ್ರಭು ಬಿ. ಸೂರಿನ ಅವರಿಂದ ಕಾನೂನು ಅರಿವು
-
ದಿನದ ಸುದ್ದಿ3 days agoತ್ಯಾವಣಿಗೆಯ ಪ್ರಸಿದ್ಧ ಐವಿನ್ ಕಂಪ್ಯೂಟರ್ ತರಬೇತಿ ಕೇಂದ್ರ ; ಸೃಜನಶೀಲ ಚಟುವಟಿಕೆಯೊಂದಿಗೆ ಕಂಪ್ಯೂಟರ್ ಕಲಿಸ್ತಾರೆ ಈ ಚೇತನ್
-
ದಿನದ ಸುದ್ದಿ3 days agoಸ್ವಾಮಿ ವಿವೇಕಾನಂದರ ಚಿಂತನೆಗಳಿಂದ ಯುವಜನತೆಗೆ ಪ್ರೇರಣೆ ; ವಿಶ್ವನಾಥ.ಡಿ. ಅರ್

