ದಿನದ ಸುದ್ದಿ
ದಾವಣಗೆರೆ | ಪ್ರತಿ ತಾಲೂಕಿನಲ್ಲಿ ಗೋಶಾಲೆ ತೆರೆಯಿರಿ : ಎಸ್.ಆರ್. ಉಮಾಶಂಕರ್
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2019/08/Davangere-suddidina-65.jpg&description=ದಾವಣಗೆರೆ | ಪ್ರತಿ ತಾಲೂಕಿನಲ್ಲಿ ಗೋಶಾಲೆ ತೆರೆಯಿರಿ : ಎಸ್.ಆರ್. ಉಮಾಶಂಕರ್', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2019/08/Davangere-suddidina-65.jpg&description=ದಾವಣಗೆರೆ | ಪ್ರತಿ ತಾಲೂಕಿನಲ್ಲಿ ಗೋಶಾಲೆ ತೆರೆಯಿರಿ : ಎಸ್.ಆರ್. ಉಮಾಶಂಕರ್', 'pinterestShare', 'width=750,height=350'); return false;" title="Pin This Post">
ಸುದ್ದಿದಿನ,ದಾವಣಗೆರೆ : ಬರಪೀಡಿತ ತಾಲೂಕುಗಳೆಂದು ಗುರುತಿಸಿರುವ ಎಲ್ಲಾ ತಾಲೂಕುಗಳಲ್ಲಿ ಗೋಶಾಲೆ ತೆರೆಯಲು ಹೈಕೋರ್ಟ್ ಆದೇಶಿಸಿದ್ದು, ಅದರಂತೆ ಜಿಲ್ಲೆಯ ಜಗಳೂರು ತಾಲೂಕು ಹೊರತುಪಡಿಸಿ ಉಳಿದ ಎಲ್ಲಾ ತಾಲೂಕುಗಳಲ್ಲಿ ಸೂಕ್ತ ಸ್ಥಳಗಳನ್ನು ಗುರುತಿಸಿ ಒಂದೊಂದು ಗೋಶಾಲೆ ತೆರೆಯುವಂತೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್ ಉಮಾಶಂಕರ್ ಅಧಿಕಾರಿಗಳಿಗೆ ಸೂಚಿಸಿದರು.
ಸೋಮವಾರ ಜಿಲ್ಲಾಡಳಿತ ಕಚೇರಿಯಲ್ಲಿ ಆಯೋಜಿಸಿಲಾಗಿದ್ದ ಬರ ನಿರ್ವಹಣೆಯ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಗಳೂರು ತಾಲ್ಲೂಕಿನಲ್ಲಿ ಈಗಾಗಲೇ ಗೋಶಾಲೆ ತೆರೆಯಲಾಗಿದೆ. ಜಿಲ್ಲೆಯಲ್ಲಿ ವಾಡಿಕೆಯಷ್ಟು ಮಳೆಯಾಗದೆ, ಇತರೆ ತಾಲೂಕಗಳಲ್ಲಿ ಮೇವಿನ ಕೊರತೆಯಾಗಿರಬಹುದು. ಅಧಿಕಾರಿಗಳು ನೇರವಾಗಿ ಗ್ರಾಮಗಳಿಗೆ ಭೇಟಿ ನೀಡಿ ರೈತರೊಂದಿಗೆ ಚರ್ಚಿಸಿ ಮೇವಿನ ಕೊರೆತಯ ಬಗ್ಗೆ ಮಾಹಿತಿ ಪಡೆದು ಮೇವು ಒದಗಿಸುವ ಕಾರ್ಯ ಮಾಡಬೇಕು ಎಂದರು.
ಹೈಕೋರ್ಟ್ ಆದೇಶದಂತೆ ಜಿಲ್ಲೆಯ ಉಳಿದ ಎಲ್ಲಾ ತಾಲೂಕುಗಳಲ್ಲಿ ಗೋಶಾಲೆಗಳನ್ನು ತೆರೆದು, ಎರಡು ಲೋಡ್ಗಳಷ್ಟು ಮೇವು ಸ್ಟಾಕ್ ಮಾಡಬೇಕು. ಎರಡು ವಾರಗಳ ಕಾಲ ಕಾಯಿರಿ. ರೈತರು ಗೋಶಾಲೆಗೆ ಬಂದು ಮೇವು ತೆಗೆದುಕೊಂಡು ಹೋದರೆ ಸರಿ ಇಲ್ಲವಾದಲ್ಲಿ ಜಿಲ್ಲಾಡಳಿತಕ್ಕೆ ಮಾಹಿತಿ ನೀಡಿ. ಗೋಶಾಲೆ ಅವಶ್ಯಕತೆ ಇಲ್ಲದಿದ್ದಲ್ಲಿ ಮುಚ್ಚುವ ಕೆಲಸ ಮಾಡಬೇಕು ಎಂದರು.
ಜಗಳೂರು ತಾಲೂಕಿನ ತಹಶೀಲ್ದಾರ್ ತಿಮ್ಮಣ್ಣ ಮಾತನಾಡಿ, ತಾಲೂಕಿನಲ್ಲಿ ಮೇವಿನ ಕೊರತೆ ಹೆಚ್ಚಿರುವ ಮೂರು ಪ್ರದೇಶಗಳಲ್ಲಿ ಗೋಶಾಲೆ ತೆರೆಯಲಾಗಿದೆ. ಇನ್ನುಳಿದ ಎರಡು ಕಡೆಗಳಲ್ಲಿ ಮೇವಿನಬ್ಯಾಂಕ್ ತೆರೆದು ಮೇವಿನ ಕೊರತೆಯನ್ನು ನೀಗಿಸಲಾಗುತ್ತಿದೆ. ಬಳ್ಳಾರಿ, ಕೊಪ್ಪಳ, ರಾಯದುರ್ಗ ಪ್ರದೇಶಗಳಿಂದ ಸಜ್ಜೆ, ಮೆಕ್ಕೆಜೋಳ ಸಪ್ಪೆಯ ಹಸಿ ಮೇವನ್ನು ಪೂರೈಸಲಾಗುತ್ತಿದೆ. ತಾಲೂಕಿನಲ್ಲಿ ಮುಂದಿನ 08 ವಾರಗಳಿಗೆ ಆಗುವಷ್ಟು ಮೇವಿದ್ದು, ಮಳೆ ಬಂದು ಅಲ್ಲಲ್ಲಿ ಮೇವು ಚಿಗುರುತ್ತಿರುವ ಪರಿಣಾಮ ಮುಂದಿನ ದಿನಗಳಲ್ಲಿ ಮೇವಿನ ಕೊರತೆ ಆಗುವ ಸಂಭವವಿಲ್ಲ ಎಂದರು.
ಅಗತ್ಯವಿದ್ದರೆ ಜಗಳೂರು ತಾಲೂಕಿನಲ್ಲಿ ಇನ್ನೊಂದು ಮೇವಿನ ಬ್ಯಾಂಕ್ ತೆರೆದು ರೈತರಿಗೆ ಮೇವು ನೀಡಿ. ಅನುದಾನಕ್ಕಂತೂ ಕೊರತೆಯಿಲ್ಲ. ಎಲ್ಲಾ ತಾಲೂಕುಗಳಲ್ಲಿ ಗೋಶಾಲೆ ತೆರಯಲು ಕೂಡಲೇ ಅನುದಾನ ಬಿಡುಗಡೆ ಮಾಡಲಾಗುವುದು. ಮುಂಜಾಗ್ರತ ಕ್ರಮವಾಗಿ ಒಂದು ಅಥವಾ ಎರಡು ಟನ್ಗಳಷ್ಟು ಮೇವು ಸಂಗ್ರಹಿಸಿ ಎರಡು ಸಿಬ್ಬಂದಿಗಳನ್ನು ನಿಯೋಜಿಸಿ ರೈತರು ಬಂದರೆ ಮೇವು ನೀಡಿ. ರೈತರು ಬಾರದಿದ್ದಲ್ಲಿ ಜಿಲ್ಲಾಡಳಿತ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಜಿಲ್ಲಾಧಿಕಾರಿ ಜಿ.ಎನ್.ಶಿವಮೂರ್ತಿ ತಿಳಿಸಿದರು.
ಪ್ರತಿ ತಾಲೂಕಿನ ಇಓ ಮತ್ತು ತಹಶೀಲ್ದಾರ್ಗಳು ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಮೇವಿನ ಕೊರೆತೆ-ಲಭ್ಯತೆ ಕುರಿತು ಪರಿಶೀಲಿಸಿ. ಮೇವು ಬೇಕು ಎನ್ನುವ ರೈತರ ಹೆಸರು ನೊಂದಾಯಿಸಿಕೊಂಡು ಮೊಬೈಲ್ಬ್ಯಾಂಕ್ ಮೂಲಕ ಮೇವು ಒದಗಿಸಿ. ಅಲ್ಲದೇ ಅಲ್ಲಿಯ ರೈತರೊಂದಿಗೆ ಮಿನಿಕಿಟ್ನ ಮಾಹಿತಿ ನೀಡಿ, ಮಿನಿಕಿಟ್ಗಳನ್ನು ವಿತರಿಸಿ. ಮುಂದಿನ ದಿನಗಳಲ್ಲಿ ಅಲ್ಲಿನ ರೈತರಿಂದಲೇ ಮೇವು ಖರೀದಿಸುವ ವ್ಯವಸ್ಥೆ ಮಾಡಿಕೊಳ್ಳಿ. ಇದರಿಂದ ಹಣವು ಉಳಿತಾಯವಾಗಲಿದೆ ಎಂದು ಉಮಾಶಂಕರ್ ಸಲಹೆ ನೀಡಿದರು.
ಜಿಲ್ಲಾ ಕೃಷಿ ಜಂಟಿ ನಿರ್ದೇಶಕ ಶರಣಪ್ಪ ಬಿ ಮುದುಗಲ್ ಮಾತನಾಡಿ, ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಯ ಮಳೆಗಿಂತ ಶೇ.34 ರಷ್ಟು ಮಳೆ ಕಡಿಮೆಯಾಗಿದೆ. ಜಿಲ್ಲೆಯಾದ್ಯಂತ ನೀರಾವರಿ ಪ್ರದೇಶದಲ್ಲಿ ಶೇ.5 ಹಾಗೂ ಬೆದ್ದಲು ಪ್ರದೇಶದಲ್ಲಿ ಶೇ.86 ರಷ್ಟು ಬಿತ್ತನೆಯಾಗಿದೆ. ಕಳೆದ ಬಾರಿಗಿಂತ ಈ ಬಾರಿಯು ಮುಸುಕಿನ ಜೋಳ ಹೆಚ್ಚಿನ ಪ್ರದೇಶದಲ್ಲಿ ಬಿತ್ತನೆಯಾಗಿದೆ ನಂತರ ಭತ್ತ, ತೋಟಗಾರಿಕೆಯಲ್ಲಿ ತೆಂಗು ಮತ್ತು ಅಡಿಕೆ ಹೆಚ್ಚಿನ ಬಿತ್ತನೆಯಾಗಿದೆ. ಎಂದು ಸಭೆಯಲ್ಲಿ ಮಾಹಿತಿ ನೀಡಿದರು.
ಬೆಳೆವಿಮೆ ಯೋಜನೆಯಡಿ ಈ ಬಾರಿ ಜಿಲ್ಲೆಯಲ್ಲಿ 28 ಸಾವಿರ ರೈತರು ನೊಂದಾಯಿಸಿದ್ದಾರೆ. ಹಿಂದಿನ ವರ್ಷಗಳ ಬೆಳೆವಿಮೆಯ ಮಾಹಿತಿ ಹಾಗೂ ಬಾಕಿ ಹಣದ ಮಾಹಿತಿ ಮತ್ತು ಕಿಸಾನ್ ಸಮ್ಮಾನ್ ಯೋಜನೆ ಕುರಿತು ಮಾಹಿತಿಯನ್ನು ಸಭೆಯಲ್ಲಿ ತಿಳಿಸಿದರು.
ನಗರ ಪ್ರದೇಶಗಳ ಕುಡಿಯುವ ನೀರು ಸರಬರಾಜು ಕುರಿತು ಮಾಹಿತಿ ನೀಡಿದ ಡಿ.ಯು.ಡಿ.ಸಿಯ ಯೋಜನಾ ನಿರ್ದೇಶಕಿ ನಜ್ಮಾ, ನಗರ ಪ್ರದೇಶಗಳಲ್ಲಿ ಎಲ್ಲಿಯೂ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತ್ತಿಲ್ಲ. ಸದ್ಯಕ್ಕೆ ದಾವಣಗೆರೆ ನಗರದಲ್ಲಿ 41 ವಾರ್ಡ್ಗಳಿಗೆ ವಾರಕೊಮ್ಮೆ ನೀರು ಸರಬರಾಜು ಮಾಡಲಾಗುತ್ತಿದೆ. ಇನ್ನುಳಿದ ಪ್ರದೇಶಗಳಲ್ಲಿ 5 ದಿನಗಳಿಗೊಮ್ಮೆ ನೀರು ಪೂರೈಸಲಾಗುತ್ತಿದೆ. ನಗರ ಪ್ರದೇಶಗಳಲ್ಲಿ ನೀರಿನ ಹಾಹಾಕಾರವಂತೂ ಇಲ್ಲ ಎಂದರು.
ಜಗಳೂರು ತಾಲೂಕಿನಲ್ಲಿ ಇಂದಿಗೂ 77 ಗ್ರಾಮಗಳಲ್ಲಿ ಟ್ಯಾಂಕರ್ ಮೂಲಕವೇ ನೀರು ಸರಬರಾಜು ಮಾಡಲಾಗುತ್ತಿದೆ. ದಾವಣಗೆರೆ ಗ್ರಾಮಾಂತರ ಪ್ರದೇಶಗಳಲ್ಲಿ ಚಾನೆಲ್ಗಳಿಗೆ ಭದ್ರಾ ಜಲಾಶಯದ ನೀರು ಬಿಡದ ಪರಿಣಾಮ 27 ಪ್ರದೇಶಗಳಲ್ಲಿ (ಅಣಜಿ, ಆನಗೋಡು, ಮಾಯಕೊಂಡ ಇತರೆ ಪ್ರದೇಶಗಳಲ್ಲಿ) ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಲಾಗುತಿತ್ತು. ಕೆಲವು ಪ್ರದೇಶಗಳಲ್ಲಿ ಬೋರ್ವೆಲ್ ಕೊರಸಲಾಗಿದ್ದು, ನೀರು ಸಿಕ್ಕಿದ ತಕ್ಷಣ ಪೈಪ್ಲೈನ್ ಮೂಲಕ ಸರಬರಾಜು ಮಾಡುವ ವ್ಯವಸ್ಥೆ ಮಾಡಲಾಗುವುದು ಎಂದರು.
ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡಿದ ಬಿಲ್ ಪಾವತಿಯಾಗಿದೆ. ಕೆಲವು ಜಿ.ಪಿ.ಎಸ್ ಸರಿಯಾಗಿ ಇಲ್ಲದಿರುವ ಕಡೆ ಹಣ ಮಂಜೂರು ಮಾಡಿಲ್ಲ. ಈಗಾಗಲೇ ಜಿಲ್ಲಾಡಳಿತ ತಂಡದಿಂದ ಪರಿಶೀಲನೆ ನಡೆಸಿದ್ದು ಮತ್ತೋಮ್ಮೆ ಪುನಃ ಪರಿಶೀಲಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ತಹಶೀಲ್ದಾರ್ ತಿಮ್ಮಣ್ಣ ತಿಳಿಸಿದರು.
ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಮಾಹಿತಿ ಕೇಳಿದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳಿಗೆ ಮಾಹಿತಿ ನೀಡಿದ ಅಧಿಕಾರಿಗಳು, ಪ್ರತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಪಿಂಚಣಿ ಅದಾಲತ್ ನಡೆಸಿ ಸರ್ಕಾರಿ ಯೋಜನೆಗಳ ಮಾಹಿತಿ ಮತ್ತು ಸೌಲಭ್ಯವನ್ನು ಒದಗಿಸುವ ಕಾರ್ಯ ಮಾಡಲಾಗುತ್ತಿದೆ ಎಂದರು.
ಜಗಳೂರು ತಾಲೂಕಿನಲ್ಲಿ ಗ್ರಾಮಭೇಟಿ ಕಾರ್ಯಕ್ರಮದ ಮೂಲಕ ಅಧಿಕಾರಿಗಳ ನಡೆ ಹಳ್ಳಿಯ ಕಡೆ ಎನ್ನುವ ಮೂಲಕ ಪ್ರತಿ ಗ್ರಾಮಗಳಿಗೆ ಭೇಟಿ ನೀಡಿ ಅವಹಾಲು ಸ್ವೀಕರಿಸಿ ಅವುಗಳಿಗೆ ಪರಿಹಾರವನ್ನು ವಾರದಲ್ಲಿಯೇ ಒದಗಿಸುವ ಪ್ರಯತ್ನ ಮಾಡಲಾಗಿತ್ತು. ಅಂದಿನ ದಿನಕ್ಕೆ ಕುಡಿಯುವ ನೀರು, ಜಾನುವಾರುಗಳಿಗೆ ಮೇವು ಹಾಗೂ ಉದ್ಯೋಗಕ್ಕೆ ಹೆಚ್ಚಿನ ಬೇಡಿಕೆ ಇರುವುದರಿಂದ ಹೆಚ್ಚಿನ ಗಮನಹರಿಸಿ ಸಮಸ್ಯೆಯನ್ನು ಬಗೆಹರಿಸಲಾಯಿತು. ಮುಂದಿನ ದಿನಗಳಲ್ಲಿ ಇನ್ನುಳಿದ ತಾಲೂಕುಗಳಿಗೂ ಭೇಟಿ ನೀಡಿ ಸಮಸ್ಯೆಗಳನ್ನು ಆಲಿಸುವ ಚಿಂತನೆ ನಡೆಸಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಜಿಲ್ಲೆಯಲ್ಲಿ ಜಲಶಕ್ತಿ ಮತ್ತು ಜಲಾಮೃತ ಕಾರ್ಯಕ್ರಮಗಳಡಿಯಲ್ಲಿ ಶಾಲೆ, ಹಾಸ್ಟೆಲ್ ಹಾಗೂ ಸಾರ್ವಜನಿಕರಿಗೆ ಹೆಚ್ಚು ಅರಿವು ಮೂಡಿಸಿ ಜಿಲ್ಲೆಯ ಹಸಿರೀಕರಣಕ್ಕೆ ಒತ್ತು ನೀಡಿ. ಜಲಾಮೃತ ಕಾರ್ಯಕ್ರಮದಡಿಯಲ್ಲಿ ಮುಂದಿನ ದಿನಗಳಲ್ಲಿ ಪ್ರತಿ ಶಾಲೆಗೆ 5000 ಅನುದಾನ ನೀಡಲಿದ್ದು, ಈ ಅನುದಾನದಲ್ಲಿ ಕಿಚನ್ಗಾರ್ಡ್ನ್ನು ನಿರ್ಮಿಸಿ ಅಲ್ಲಿನ ಮಕ್ಕಳಿಗೆ ಅನುಕೂಲವಾಗುವಂತೆ ಪಪ್ಪಾಯ, ನುಗ್ಗೆಕಾಯಿ, ಸಫೋಟ, ಮಾವು, ಹುಣಸೆ, ನೇರಳೆ ಮರಗಳನ್ನು ಬೆಳೆಯಬೇಕು. ಈ ಕುರಿತು ಕೃಷಿ ಹಾಗೂ ತೋಟಗಾರಿಕೆ ಇಲಾಖೆಯ ಸಹಕಾರದೊಂದಿಗೆ ಕ್ರಿಯಾಯೋಜನೆ ರೂಪಿಸಿಕೊಳ್ಳಬೇಕು ಎಂದು ಡಿ.ಡಿ.ಪಿ.ಐ ಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲಹೆ ನೀಡಿದರು.
ಜಿಲ್ಲೆಯಲ್ಲಿ ಹಿಂದಿನ ದಿನಗಳಲ್ಲಿ ಬರ ನಿರ್ವಹಣೆಯನ್ನು ನಿರ್ವಹಿಸಿದ ರೀತಿಯಲ್ಲೇ ಮುಂದಿನ ದಿನಗಳಲ್ಲಿ ಇನ್ನು ಉತ್ತಮವಾಗಿ ಮತ್ತು ಸಮರ್ಪಕವಾಗಿ ಕಾರ್ಯನಿರ್ವಹಿಸುವಂತೆ ಸಭೆಯಲಿದ್ದ ಅಧಿಕಾರಿಗಳಿಗೆ ತಿಳಿಸಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಪದ್ಮ ಬಸವಂತಪ್ಪ, ಜಿಲ್ಲಾ ಸ್ಮಾರ್ಟ್ಸಿಟಿ ಲಿಮಿಟೆಡ್ನ ವ್ಯವಸ್ಥಾಪಕ ಷರೀಫ್, ಡಿಡಿಪಿಐ ಸಿ.ಆರ್. ಪರಮೇಶ್ವರಪ್ಪ, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಜಂಟಿ ನಿರ್ದೇಶಕ ಮಂಟೇಸ್ವಾಮಿ, ಜಿಲ್ಲಾ ಸಂಖ್ಯಾಧಿಕಾರಿ ರಾಜೇಶ್ವರಿ ಸೇರಿದಂತೆ ವಿವಿಧ ತಾಲೂಕಿನ ತಹಶೀಲ್ದಾರ್ಗಳು ಇತರೆ ಅಧಿಕಾರಿಗಳು ಹಾಜರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
ಸುದ್ದಿದಿನ,ದಾವಣಗೆರೆ:ಕೆ. ಬೇವಿನಹಳ್ಳಿಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಆಯೋಜಿಸಲಾದ ರಕ್ತದಾನ ಶಿಬಿರದಲ್ಲಿ 21 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಇದೇ ವೇಳೆ ಸಾಲಕಟ್ಟೆ ಗ್ರಾಮದಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹರಿಹರ ಇವರ ಸಂಯುಕ್ತ ಆಶ್ರಯದಲ್ಲಿ 11 ಯೂನಿಟ್ ರಕ್ತವನ್ನು ಸಂಗ್ರಹಿಸಲಾಯಿತು.
ಶಿಬಿರದಲ್ಲಿ ಸತ್ಯನಾರಾಯಣ ಕ್ಯಾಂಪ್ನ ಡಾ. ರಾಮಾಂಜನೇಯ ಸ್ವಾಮಿ ಅವರು ಇದುವರೆಗೆ 110 ಬಾರಿ ರಕ್ತದಾನ ಮಾಡಿರುವುದು ವಿಶೇಷವಾಗಿದ್ದು, ಈ ಬಾರಿ ತಮ್ಮ ಮಗನೊಂದಿಗೆ ರಕ್ತದಾನ ಮಾಡಿ ಇತರರಿಗೆ ಮಾದರಿಯಾಗಿದ್ದಾರೆ. ಅಲ್ಲದೆ ವಿರೂಪಾಕ್ಷಪ್ಪ ಬಿ.ಕೆ. (ವಿ.ಆರ್.ಡಬ್ಲ್ಯೂ) ಎಂಬ ವಿಶೇಷ ಚೇತನರು 5ನೇ ಬಾರಿ ರಕ್ತದಾನ ಮಾಡಿ ಗಮನಾರ್ಹರಾಗಿದ್ದಾರೆ.
ಕಾರ್ಯಕ್ರಮದಲ್ಲಿ ತಾಲ್ಲೂಕು ಆರೋಗ್ಯಾಧಿಕಾರಿ (ಟಿ.ಎಚ್.ಒ) ಉಮಣ್ಣ ಅವರು ಮಾತನಾಡಿ, ರಕ್ತವನ್ನು ಕೃತಕವಾಗಿ ಉತ್ಪಾದಿಸಲು ಸಾಧ್ಯವಿಲ್ಲವಾದುದರಿಂದ ರಕ್ತದಾನದ ಮಹತ್ವ ಅತ್ಯಂತ ಮಹತ್ತರವಾಗಿದೆ ಎಂದು ತಿಳಿಸಿದರು.
ವೈದ್ಯಾಧಿಕಾರಿಗಳಾದ ಡಾ. ರೇವತಿ ಎಚ್ ಬುಟ್ಟೆ ಅವರು ಮಾತನಾಡಿ, ಗ್ರಾಮದ ಜನರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿರುವುದು ಸಂತೋಷದ ಸಂಗತಿ. ಅತಿ ತುರ್ತು ಪರಿಸ್ಥಿತಿಗಳಲ್ಲಿ ರಕ್ತದಾನವು ಅನೇಕ ರೋಗಿಗಳ ಜೀವ ಉಳಿಸಲು ಸಹಾಯಕವಾಗುತ್ತದೆ ಎಂದು ಹೇಳಿದರು. ದಾವಣಗೆರೆ ಕೇಂದ್ರ ರಕ್ತ ನಿಧಿಯ ಡಾ. ಗೀತಾ ಡಿ.ಎಚ್. ಹಾಗೂ ಸಿಬ್ಬಂದಿಗಳು ರಕ್ತವನ್ನು ಸಂಗ್ರಹಿಸಿದರು.
ಈ ಕಾರ್ಯಕ್ರಮದಲ್ಲಿ ಆರೋಗ್ಯ ನಿರೀಕ್ಷಕರಾದ ಉಮೇಶ್ ಎಂ.ಆರ್.ಆರೋಗ್ಯ ಇಲಾಖೆಯ ಸಿಬ್ಬಂದಿಗಳು, ಆಶಾ ಕಾರ್ಯಕರ್ತರು ಹಾಗೂ ಗ್ರಾಮಸ್ಥರಾದ ವಿಶ್ವನಾಥ್ ಡಿ.ಆರ್. (ಉಪನ್ಯಾಸಕರು), ವಿಶ್ವನಾಥ್ ಎ.ಎಸ್., ಬನ್ನಿಕೋಡು ಸುರೇಶ್, ರೇವಣಸಿದ್ದಪ್ಪ, ಕೆ.ಜಿ. ಸಂತೋಷ್, ಜಿ.ಎಂ. ಮುರುಗೇಶ್ ಸೇರಿದಂತೆ ಹಲವರು ಭಾಗವಹಿಸಿದ್ದರು.
ಕೆ. ಬೇವಿನಹಳ್ಳಿ ಮತ್ತು ಸಾಲಕಟ್ಟೆ ಗ್ರಾಮಸ್ಥರ ಸಹಕಾರದಿಂದ ರಕ್ತದಾನ ಶಿಬಿರ ಯಶಸ್ವಿಯಾಗಿ ನೆರವೇರಿತು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
ಸುದ್ದಿದಿನ,ದಾವಣಗೆರೆ: ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡರು ಹಾಗೂ ಮುಸ್ಲಿಂ ಸಮಾಜದ ನಾಯಕರಾಗಿದ್ದ ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸೈಫುಲ್ಲಾ ಸಾಬ್ (79ವರ್ಷ) ಅವರು ಇಂದು ನಿಧನರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರು ದಾವಣಗೆರೆಯ ನಂಜಪ್ಪ ಆಸ್ಪತ್ರೆಯಲ್ಲಿ ದಾಖಲಾಗಿದ್ದರು . ಮೃತರ ನಿಧನಕ್ಕೆ ಮುಸ್ಲಿಂ ಸಮುದಾಯದ ಮುಖಂಡರು, ವಿವಿಧ ಪಕ್ಷಗಳ ನಾಯಕರು ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.
ಕರೆಕಟ್ಟೆಜನಾಬ್ ಸೈಯದ್ ಸೈಫುಲ್ಲ ಸಾಬ್ಮಿ ಲ್ಲತ್ ವಿದ್ಯಾ ಸಂಸ್ಥೆಗಳ ಸಂಸ್ಥಾಪಕರೂ ಆಗಿದ್ದರು. ಕಾಂಗ್ರೆಸ್ ಪಕ್ಷದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿದ್ದ ಸೈಯದ್ ಸೈಫುಲ್ಲಾ ಸಾಬ್ ಅವರು ಸಿಎಂ ಸಿದ್ದರಾಮಯ್ಯ, ಸಚಿವ ಎಸ್. ಎಸ್. ಮಲ್ಲಿಕಾರ್ಜುನ್ ಸೇರಿದಂತೆ ಕಾಂಗ್ರೆಸ್ ಹಿರಿಯ ನಾಯಕರ ಆಪ್ತರಾಗಿದ್ದರು.
ಅಖಿಲ ಭಾರತ ರಾಷ್ಟ್ರೀಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸೈಯದ್ ಖಾಲಿದ್ ಅಹ್ಮದ್ ಅವರನ್ನು ಸೇರಿದಂತೆ ಕುಟುಂಬಸ್ಥರು, ಅಪಾರ ಬಂಧುಬಳಗದವರನ್ನು ಸೈಯದ್ ಕೆರೆಕಟ್ಟೆ ಸೈಫುಲ್ಲಾ ಸಾಬ್ ಅವರು ಅಗಲಿದ್ದಾರೆ.
2013ರಲ್ಲಿ ಕಾಂಗ್ರೆಸ್ ಟಿಕೆಟ್ ಸಿಗದ ಕಾರಣ ಜೆಡಿಎಸ್ ಸೇರಿ ಈ ಪಕ್ಷದಿಂದ ಸ್ಪರ್ಧಿಸಿ 26 ಸಾವಿರಕ್ಕೂ ಹೆಚ್ಚು ಮತಗಳನ್ನು ಪಡೆದಿದ್ದರು. ಕಾಂಗ್ರೆಸ್ ನಿಂದ ಸ್ಪರ್ಧಿಸಿದ್ದ ಶಾಮನೂರು ಶಿವಶಂಕರಪ್ಪರ ವಿರುದ್ಧ ಸೋತರೂ ಎರಡನೇ ಸ್ಥಾನ ಪಡೆದಿದ್ದರು. ಆಗ ಬಿಜೆಪಿ ಮೂರನೇ ಸ್ಥಾನಕ್ಕೆ ಹೋಗಿತ್ತು. ಮತ್ತೆ ಕಾಂಗ್ರೆಸ್ ಪಕ್ಷ ಸೇರಿದ್ದ ಅವರು, ಸಿದ್ದರಾಮಯ್ಯರ ಜೊತೆ ಉತ್ತಮ ಒಡನಾಟ ಹೊಂದಿದ್ದರು. ಅವರು ಸ್ನಾತಕೋತ್ತರ ವೃತ್ತಿಪರ ಬಿಎಸ್ಸಿ ಅನ್ನು ಮೈಸೂರು ವಿಶ್ವವಿದ್ಯಾಲಯದಿಂದ ಪಡೆದಿದ್ದರು. ದಾವಣಗೆರೆಯ ಡಿಆರ್ ಎಂ ಕಾಲೇಜಿನಲ್ಲಿ ಬಿ. ಎಡ್ ವ್ಯಾಸಂಗ ಮಾಡಿದ್ದರು. ಎಂ. ಎಂ. ಬಸಪ್ಪ ಶಿಕ್ಷಣ ಸಂಘದ ಕಾಲೇಜಿನಲ್ಲಿ ಪದವಿ ಪೂರೈಸಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ
ಸುದ್ದಿದಿನ,ದಾವಣಗೆರೆ:ಈ ವರ್ಷ ಬರಗಾಲದ ಲಕ್ಷಣಗಳಿರುವುದರಿಂದ ಜಲಚರಗಳ ರಕ್ಷಣೆ ಹಾಗೂ ಕುಡಿಯುವ ನೀರಿನ ಲಭ್ಯತೆಗೆ ಮೊದಲ ಆದ್ಯತೆ ನೀಡಬೇಕು. ಜಿಲ್ಲೆಯ ಕೆರೆಗಳಲ್ಲಿರುವ ನೀರಿನ ಪ್ರಮಾಣದ ಬಗ್ಗೆ ನಿಖರವಾದ ಅಧ್ಯಯನ ನಡೆಸಿ ವರದಿ ನೀಡುವಂತೆ , ಜಿಲ್ಲೆಯ ಕೆರೆಗಳ ಸಂರಕ್ಷಣೆ ಹಾಗೂ ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ತಹಶೀಲ್ದಾರರುಗಳಿಗೆ ಜಿಲ್ಲಾಧಿಕಾರಿಗಳಾದ ಗಂಗಾಧರಸ್ವಾಮಿ ಜಿ.ಎಂ ಅವರು ಸೂಚನೆ ನೀಡಿದರು.
ಅವರು (ಏ.15) ಕೆರೆಗಳ ಸಂರಕ್ಷಣೆ, ಒತ್ತುವರಿ ತೆರವು ಹಾಗೂ ಮುಂಬರುವ ಬೇಸಿಗೆಯ ಕುಡಿಯುವ ನೀರಿನ ನಿರ್ವಹಣೆ ಕುರಿತು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಜಿಲ್ಲೆಯ ಒಟ್ಟು 533 ಕೆರೆಗಳ ಪೈಕಿ ಇನ್ನೂ 20 ಕೆರೆಗಳ ಒತ್ತುವರಿ ತೆರವು ಕಾರ್ಯ ಬಾಕಿ ಇದೆ. ಚನ್ನಗಿರಿ ತಾಲ್ಲೂಕಿನ 5 ಕೆರೆಗಳಾದ ಹರೇಗಂಗೂರು, ಸಾಗರಪೇಟೆ, ದಾಗಿನಕಟ್ಟೆ, ತ್ಯಾವಣಿಗ ಮತ್ತು ಸೂಳೆಕೆರೆ; ಹರಿಹರ ತಾಲ್ಲೂಕಿನ 7 ಕೆರೆಗಳಾದ ಹಿಂಡಸಗಟ್ಟ, ಜಿಗಳಿ, ಹಾಲಿವಾಣ, ಕಮಲಾಪುರ, ಗುಡ್ಡದತುಮ್ಮಿನಕಟ್ಟೆ, ಕುಂಬಳೂರು, ಯಲವಟ್ಟಿ; ದಾವಣಗೆರೆ ತಾಲ್ಲೂಕಿನ ಹೊನ್ನೂರು, ಹದಡಿ, ಮಾಳಗೊಂಡನಹಳ್ಳಿಯ 3 ಕೆರೆಗಳು ಹಾಗೂ ಹೊನ್ನಾಳಿ ತಾಲ್ಲೂಕಿನ ನೆಲಹೊನ್ನೆ, ಬನ್ನಿಕೊಡು, ಕುಂಬಳೂರು, ಸಾಸ್ವೆಹಳ್ಳಿ ಮತ್ತು ಬಲಮುರಿ ಕೆರೆಗಳನ್ನು ಶೀಘ್ರವಾಗಿ ಗುರುತಿಸಿ ತೆರವುಗೊಳಿಸಲು ಕ್ರಮವಹಿಸಬೇಕು. ತೆರವು ಕಾರ್ಯಾಚರಣೆಯನ್ನು ಛಾಯಾಚಿತ್ರ ಮತ್ತು ವಿಡಿಯೋ ಚಿತ್ರೀಕರಣದೊಂದಿಗೆ ಪಾರದರ್ಶಕವಾಗಿ ನಡೆಸಿ ಗ್ರಾಮ ಪಂಚಾಯತಿಗಳಿಗೆ ಅಧಿಕೃತವಾಗಿ ಹಸ್ತಾಂತರಿಸಬೇಕು ಎಂದು ತಿಳಿಸಿದರು.
ಚನ್ನಗಿರಿ ಹಾಗೂ ದಾವಣಗೆರೆ ತಾಲ್ಲೂಕಿನ ಹಲವು ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವ ಬಗ್ಗೆ ದೂರುಗಳು ಕೇಳಿಬಂದಿವೆ. ಈ ಹಿನ್ನೆಲೆಯಲ್ಲಿ ಕುಡಿಯುವ ನೀರಿನ ಉದ್ದೇಶಕ್ಕೆ ಬಳಸುವ ಕೆರೆಗಳ ನೀರಿನ ಮಾದರಿಯನ್ನು ಪ್ರತಿ ತಿಂಗಳು ಪ್ರಯೋಗಾಲಯದಲ್ಲಿ ಪರೀಕ್ಷಿಸಿ ವರದಿ ಸಲ್ಲಿಸಬೇಕು. ಯೋಗ್ಯವಾಗಿದ್ದರೆ ಮಾತ್ರ ಕುಡಿಯಲು ಬಳಸಬೇಕು ಎಂದರು.
ಕೆರೆಗಳಲ್ಲಿ ಹೂಳೆತ್ತುವ ಕಾರ್ಯವನ್ನು ಕೇವಲ ರೈತರಿಗೆ ಮಾತ್ರ ಸೀಮಿತಗೊಳಿಸಬೇಕು. ಅಕ್ರಮ ಮಣ್ಣು ಸಾಗಾಟಕ್ಕೆ ಆಸ್ಪದ ನೀಡದಂತೆ ಭೂ-ವಿಜ್ಞಾನ ಇಲಾಖೆ ಹಾಗೂ ನೀರಾವರಿ ಇಲಾಖೆಯ ಅಧಿಕಾರಿಗಳ ಸಮನ್ವಯದೊಂದಿಗೆ ಕಾರ್ಯನಿರ್ವಹಿಸಲು ಹಾಗೂ ಮಣ್ಣಿನ ಮೂಲ ಪದರ ಹಾನಿಯಾಗದಂತೆ ಕ್ರಮವಹಿಸಬೇಕೆಂದು ಸಭೆಯಲ್ಲಿ ಹಾಜರಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಕೆರೆಗಳನ್ನು ಒತ್ತುವರಿಯಿಂದ ಶಾಶ್ವತವಾಗಿ ಮುಕ್ತಗೊಳಿಸಲು ಅರಣ್ಯ ಇಲಾಖೆಯ ಸಹಯೋಗದೊಂದಿಗೆ ಕೆರೆಗಳ ಬಫರ್ ವಲಯದಲ್ಲಿ ಸಸಿಗಳನ್ನು ನೆಟ್ಟು ಜೈವಿಕ ಬೇಲಿ ನಿರ್ಮಿಸಲು ಯೋಜನೆ ರೂಪಿಸಲಾಗಿದೆ. ಮುಂಬರುವ ಮಳೆಗಾಲದ ವೇಳೆಗೆ ಸಸಿಗಳನ್ನು ನೆಡಲು ಸಿದ್ಧತೆ ಮಾಡಿಕೊಳ್ಳುವಂತೆ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲೆಯ ವ್ಯಾಪ್ತಿಯಲ್ಲಿ ಕೆರೆಗಳ ನೀರಿನ ಸಂಗ್ರಹಣಾ ಮಟ್ಟದ ಕುರಿತು ವಿವರ (ಮಾರ್ಚ್ 31 ಅಂತ್ಯಕ್ಕೆ)
ಪೂರ್ಣ ತುಂಬಿದ ಕೆರೆಗಳು: ಜಿಲ್ಲೆಯ ಒಟ್ಟು 08 ಕೆರೆಗಳು ಶೇ. 100 ರಷ್ಟು ಭರ್ತಿಯಾಗಿವೆ.
ಶೇ. 51 ರಿಂದ ಶೇ. 99 ರಷ್ಟು: ಒಟ್ಟು 47 ಕೆರೆಗಳಲ್ಲಿ ಉತ್ತಮ ನೀರಿನ ಸಂಗ್ರಹವಿದೆ.
ಶೇ. 31 ರಿಂದ ಶೇ. 50 ರಷ್ಟು: ಸುಮಾರು 164 ಕೆರೆಗಳು ಅರ್ಧದಷ್ಟು ನೀರಿನ ಮಟ್ಟವನ್ನು ಹೊಂದಿವೆ.
ಶೇ. 1 ರಿಂದ ಶೇ. 30 ರಷ್ಟು: ಜಿಲ್ಲೆಯ ಗರಿಷ್ಠ ಅಂದರೆ 250 ಕೆರೆಗಳಲ್ಲಿ ಕನಿಷ್ಠ ಪ್ರಮಾಣದ ನೀರು ಸಂಗ್ರಹವಾಗಿದೆ.
ಶೂನ್ಯ ಮಟ್ಟ (ತುಂಬಿರದ ಕೆರೆಗಳು): ಪ್ರಸ್ತುತ ಜಿಲ್ಲೆಯ 64 ಕೆರೆಗಳಲ್ಲಿ ನೀರಿನ ಸಂಗ್ರಹವಿಲ್ಲದೆ ಖಾಲಿಯಾಗಿವೆ.
ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಮಹಾವೀರ ಕರಣ್ಣನವರ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಉಪ ವಿಭಾಗಾಧಿಕಾರಿಗಳು, ತಹಶೀಲ್ದಾರುಗಳು, ಬೃಹತ್ ಮತ್ತು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳು , ಉಪ ಅರಣ್ಯ ಸಂರಕ್ಷಣಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ5 days agoವಯೋವೃದ್ಧರ ಸಾಮಾಜಿಕ ಆರ್ಥಿಕ ಸ್ಥಿತಿಗತಿ ಅಧ್ಯಯನ
-
ದಿನದ ಸುದ್ದಿ7 days agoಸಮಾನತೆಯ ಸಮಾಜ ನಿರ್ಮಾಣಕ್ಕೆ ಸಂವಿಧಾನವೇ ಭದ್ರ ಬುನಾದಿ: ಗಂಗಾಧರಸ್ವಾಮಿ ಜಿ.ಎಂ
-
ದಿನದ ಸುದ್ದಿ3 days agoದಾವಣಗೆರೆ | ಕಾಂಗ್ರೆಸ್ ನ ಹಿರಿಯ ಮುಖಂಡ ಕೆರೆಕಟ್ಟೆ ಸೈಯದ್ ಸೈಫುಲ್ಲಾ ನಿಧನ
-
ದಿನದ ಸುದ್ದಿ3 days agoಕೆ. ಬೇವಿನಹಳ್ಳಿ, ಸಾಲಕಟ್ಟೆ ಗ್ರಾಮದಲ್ಲಿ ರಕ್ತದಾನ ಶಿಬಿರ
-
ದಿನದ ಸುದ್ದಿ5 days agoದಾವಣಗೆರೆ | ಕೆರೆಗಳ ಸಂರಕ್ಷಣೆ; ಒತ್ತುವರಿ ತೆರವಿಗೆ ಕಟ್ಟುನಿಟ್ಟಿನ ಕ್ರಮ : ಡಿಸಿ ಗಂಗಾಧರಸ್ವಾಮಿ ಜಿ.ಎಂ

