Connect with us

ಲೈಫ್ ಸ್ಟೈಲ್

ಪ್ರವಾಸ ಕಥನ | ಗೋಕಾಕ್ ನಲ್ಲೊಂದು ಸುತ್ತು..!

Published

on

Õಪ್ರವಾಸ ಎಂದರೆ ಯಾರಿಗೆ ತಾನೆ ಇಷ್ಟವಿಲ್ಲ ಹೇಳಿ? ಮಗುವಿನಿಂದ ಹಿಡಿದು ಮುದುಕರವರೆಗೆ ಎಲ್ಲರೂ ಪ್ರವಾಸವನ್ನು ಆನಂದಿಸುವವರೇ ಹೆಚ್ಚು. ಅದರಲ್ಲೂ ನಾನು ಒಬ್ಳು ಪ್ರವಾಸ ಪ್ರೇಮಿ. ಪ್ರವಾಸ ಕಥನಗಳೆಂದರೆ ಅಚ್ಚುಮೆಚ್ಚು. ಹಾಗಂತ ನಾ ಏನು ಹೆಚ್ಚು ಪ್ರವಾಸ ಮಾಡಿಲ್ಲ. ನನಗೆ ಪ್ರಕೃತಿಯ ಸೊಬಗು ಹಾಗೂ ಹಳ್ಳಿಯ ಸೊಬಗನ್ನು ಸಂಪೂರ್ಣವಾಗಿ ಅನುಭವಿಸ್ಬೇಕು ಎಂಬ ಮಹಾದಾಸೆ. ನಾ ಹೋಗುವ ಪ್ರವಾಸಕ್ಕೆ ಇಂಥದ್ದೇ ಜಾಗವಾಗಬೇಕು ಎಂಬ ಅಭಿಲಾಶೆ ಏನಿಲ್ಲ. ಬಂಧುಗಳ ಮನೆಗಳನ್ನ ಹೊರತು ಪಡಿಸಿ ಕಾಡಿನ ಬುಡಕಟ್ಟು ಜನಾಂಗ, ಶೋಷಿತರ, ದಲಿತರ ಮನೆಗಳಿಗೆ ಹೋಗಿ ಅವರ ಜೀವನವನ್ನು ಗಮನಿಸುವುದರಲ್ಲಿ ನನಗದು ಹೆಚ್ಚು ಖುಷಿ.

ಆದರೆ ನಗರ ವಾಸಿಯಾದ ನನಗೆ ಹಳ್ಳಿಯ ಸೊಬಗನಾಗಲಿ ಪ್ರಕೃತಿಯ ಸೊಬಗನ್ನಾಗಲಿ ಅನುಭವಿಸುವುದಕ್ಕೆ ಅವಕಾಶಗಳು ದೊರೆಯಲೇ ಇಲ್ಲ. ಪುಸ್ತಕ ಪ್ರೇಮಿಯಾದ ನನಗೆ ಹಳ್ಳಿಯ ವಾತಾವರಣ, ಬಡವರ ಬವಣೆ, ಶೋಷಿತರ ಜೀವನದ ಕುರಿತ ಕಲ್ಪನೆಗಳು ನನಗಿವೆ. ಹೀಗಿರುವಾಗ ನಾನು ವಿಮಾನದಲ್ಲಿ ಹಾರುವುದು ಬಿಡಿ ಅದನ್ನ ಹತ್ತಿರದಿಂದಲೂ ಒಮ್ಮೆಯೂ ನೋಡಿಲ್ಲ; ವೋಲ್ವೋ ಬಸ್ಸಲ್ಲೂ ಕೂತಿಲ್ಲ. ಸ್ಲೀಪಿಂಗ್ ಕೋಚ್ ಬಸ್ಸಿನ ಮೆತ್ತನೆ ಹಾಸಿಗೆಯಲ್ಲೂ ನಿದ್ರಾ ಸುಖ ಅನುಭವಿಸಿಲ್ಲ. ಆದರೆ ಸಾಕಷ್ಟು ಬಾರಿ ರೈಲು ಪ್ರಯಾಣ ಮಾಡಿದ್ದೇನೆ ಅಷ್ಟೇ.

ಅಂತದ್ದೇ ಒಂದು ರೈಲು ಪ್ರಯಾಣ ಮತ್ತೊಮ್ಮೆ ದೊರಕಿತು. ಇಲ್ಲಿಯವರೆಗೂ ಅಪ್ಪ ಅಮ್ಮನನ್ನು ಬಿಟ್ಟು ದೂರದೂರಿಗೆ ಎಲ್ಲಿಯೂ ಹೋಗದ ನಾನು ಮೊದಲ ಬಾರಿಗೆ ಸ್ನೇಹಿತರೊಡನೆ ಕೂಡಿ ಗೋಕಾಕ್ ಕಡೆ ಪ್ರವಾಸ ಹೋಗುತ್ತಿರುವುದು ಮನಸಿಗೆ ಹೆಚ್ಚು ಖುಷಿ ನೀಡಿತು. ಕಾಯುತ್ತಿದ್ದ ಆ ದಿನವೂ ಬಂತು. ಅಪ್ಪ ಅಮ್ಮನಿಗೆ ಟಾಟಾ ಹೇಳಿ ಆಶೀರ್ವಾದವನ್ನು ಪಡೆದುಕೊಂಡು ಮಧ್ಯರಾತ್ರಿ 1.30ಕ್ಕೆ 7 ಜನರ ತಂಡ ಮನೆ ಬಿಟ್ಟೆವೂ. ಅದರಲ್ಲಿ ಶರತ್,ಶಿವರಾಜ್, ಚಂದ್ರಶೇಖರ್ ದೊಡ್ಡಮನಿ, ಗುರುಸ್ವಾಮಿ, ಗೌತಮಿ ಸೇರಿದಂತೆ ಇವರೆಲ್ಲಾ ನನ್ನ ಸೀನಿಯರ್ಸ್ ಆಗಿದ್ದರು. ವಿಶೇಷ ಅಂದ್ರೆ ನಮ್ಮೊಂದಿಗೆ ನನ್ನ ತಂಗಿ ಯುಗಶ್ರೀಯು ಬಂದಿದ್ದಳು. ಟ್ರೈನ್ ತುಂಬಾ ರೆಷ್ ಆಗಿದ್ದರಿಂದ ನಮಗೆ ಕುಳಿತುಕೊಳ್ಳಲು ಸ್ಥಳ ಸಿಗಲಿಲ್ಲ. ಕೊನೆಯ ಭೋಗಿಯಲ್ಲಿ ಸ್ಥಳ ಸಿಕ್ಕಿತು. ಇನ್ನೆನ್ನೂ ನಿದ್ದೆ ಜೋಂಪಿಗೆ ಹೋದ ನಮಗೆ ಯಾರೋ ಬಂದು ಹೊಡೆದು ಎಬ್ಬಿಸಿದ ಹಾಗಾಯ್ತು. ಕಣ್ಣು ಬಿಟ್ಟು ನೋಡಿದರೆ ನಾವು ಹುಬ್ಬಳ್ಳಿಯಲ್ಲಿ ಇದ್ದೆವು.

ರೈಲು ತನ್ನ ಕೊನೆ ಭೋಗಿಯನ್ನ ಕಳಚುವುದರ ಪರಿಣಾಮ ಆ ಭೋಗಿಯನ್ನು ಬಿಟ್ಟು ಬೇರೆಯ ಕಡೆ ಹೋಗಬೇಕಾಯ್ತು ಆದರೆ ಕುಳಿತುಕೊಳ್ಳಲು ಸ್ಥಳ ಸಿಗದೆ ಹೇಗೋ ನಾವು ಮುಂಜಾನೆ 10 ಗಂಟೆಗೆ ಗೋಕಾಕ್ ಸ್ಥಳಕ್ಕೆ ಬಂದಿಳಿದ್ದೆವು. ಕರ್ನಾಟಕದ ಹಲವೆಡೆ ಓಡಾಡಿದ್ದರೂ ಬೆಳಗಾವಿ ಜಿಲ್ಲೆಗೆ ಬಂದದ್ದು ಇದೇ ಮೊದಲು. ಬೆಳಗಾವಿ ಜಿಲ್ಲೆಯಲ್ಲಿ ಎರಡನೇ ಅತೀ ದೊಡ್ಡ ನಗರವಾದ ಗೋಕಾಕ್ ಪಶ್ಚಿಮ ಘಟ್ಟಗಳಿಂದ ಸುತ್ತುವರೆದಿದೆ. ಹಚ್ಚ ಹಸಿರು ವಾತಾವರಣ ಹಾಗೂ ಏಸಿಯ ಹಾಗೆ ಸದಾ ಕೂಲ್ ಅಗಿರುವಂತಹ ಸ್ಥಳಕ್ಕೆ ನಮ್ಮನ್ನ ನಾವು ಮೈಗೂಡಿಸಿಕೊಂಡು ನಡೆಯಲಾರಂಭಿಸಿದೇವು.ಗೋಕಾಕ್‍ದಲ್ಲಿಯೂ ಹಳದಿ ಕೆಂಪು ತೋರಣಗಳು, ಬಾವುಟಗಳು ನಮಗೆ ಸ್ವಾಗತ ಕೋರಿದವು.

ತುಂಬಾ ಹಸಿದಿದ್ದ ನಾವು ಅಲ್ಲೇ ಒಂದು ಅಂಗಡಿಯಲ್ಲಿ ಮೆಣಸಿನಕಾಯಿ ಬಜ್ಜಿ, ಪೂರಿ, ಪಲಾವ್ ತಿಂದು ಟೀ ಕುಡಿದು ಗೋಕಾಕ್ ಅರಬ್ಬಿಯ ಕಡೆಗೆ ನಡೆದೆವು. ನಮ್ಮ ರಾಜ್ಯ ಜಲಪಾತಗಳ ತವರೂರು. ಸಿರಿ ಸೌಂದರ್ಯದ ರುದ್ರರಮಣೀಯ ಖಣಜಗಳು ಎಂದರೆ ಇಲ್ಲಿನ ಫಾಲ್ಸ್. ನಿಸರ್ಗ ಪ್ರಿಯರ ಆಕರ್ಷಣಿಯ ಕೇಂದ್ರ ಬಿಂದುವೂ ಹೌದು. ಪ್ರಕೃತಿಯ ಸುಂದರ ತಾಣಗಳಲ್ಲಿ ಒಂದಾದ ಹಾಗೂ ಮಳೆಗಾಲದಲ್ಲಿ ಮೈದುಂಬಿ ಹರಿಯುವುದು ಗೋಕಾಕ್ ಜಲಪಾತದ ವಿಶೇಷ. ಮಳೆಗಾಲ ಇದೀಗ ಪ್ರಾರಂಭವಾದರಿಂದ ನೀರು ತೀರಾ ಕಡಿಮೆ ಇತ್ತು.

ಗೋಕಾಕ್ ಜಲಪಾತವನ್ನು ಪ್ರವೇಶಿಸುತ್ತಿದ್ದಾಗೆ ನಮ್ಮ ಕಣ್ಣಿಗೆ ಕಂಡದ್ದು ಹಳೆಕಾಲದ ಕಾಟನ್ ಮಿಲ್ ಅದು ನೋಡುವುದ್ದಕ್ಕೆ ಡಿಟೋ ಇಂಡಿಯನ್ ಆಕ್ಸ್‍ಫಾರ್ಡ್ ವಿಶ್ವವಿದ್ಯಾನಿಲಯದ ತರನೆ ಇತ್ತು. ಅಲ್ಲಿಂದ ಕೆಳಗಿಳಿದು ಹೋದರೆ ನಮ್ಮ ಕಣ್ಣಿಗೆ ಕಾಣಸಿಗುವುದು ತೂಗು ಸೇತುವೆ.

ಅಪರೂಪದ ತೂಗು ಸೇತುವೆ

ಪೂರ್ವಭಿಮುಖವಾಗಿ ಹರಿಯುವ ಘಟಪ್ರಭೆಗೆ, ದಕ್ಷಿಣೋತ್ತರವಾಗಿ ತಂತಿಯ ತೂಗು ಸೇತುವೆಯನ್ನು ನಿರ್ಮಿಸಲಾಗಿದೆ. ಅಪರೂಪದ ತೂಗುವ ತಂತಿಯ ಸೇತುವೆ ಕರ್ನಾಟಕದಲ್ಲಿ ಬೇರಾವ ನದಿಗೂ ನಿರ್ಮಿಸಿಲ್ಲ. ಇದರ ಮೇಲೆ ನಿಂತು ನದಿಯ ಅಂದವನ್ನು ವೀಕ್ಷಿಸುವುದೇ ಒಂದು ಭಾಗ್ಯ. ಈ ಸೇತುವೆಯ ಮೇಲೆ ನಡೆದಾಡುವುದರೊಂದಿಗೆ ಪುಳಕಗೊಳ್ಳುವ ಅವಕಾಶ ಇರುವುದು ಗೋಕಾಕ್ ಜಲಪಾತದಲ್ಲಿ ಮಾತ್ರ.

1 ಮೀ ಅಗಲ, 210ಮೀ (659 ಅಡಿ) ಉದ್ದವಿರುವ ಅಪರೂಪದ ಈ ತಂತಿ ಸೇತುವೆ ಅದ್ಭುತವಾಗಿದೆ. ನದಿಯ ಒಂದು ದಂಡೆಯಿಂದ ಇನ್ನೊಂದು ದಂಡೆಗೆ ಕಾಲ್ನಡಿಗೆಯಲ್ಲಿ ತಲುಪಲು ಈ ತೂಗುಸೇತುವೆ ಸರಳ ದಾರಿಯಾಗಿದೆ. ನದಿಯ ಕಲ್ಲುಬಂಡೆ ಹಾಸಿಗೆಯಿಂದ 14ಮೀ (46 ಅಡಿ) ಎತ್ತರದಲ್ಲಿ ಈ ತೂಗು ಸೇತುವೆ ನಿರ್ಮಿಸಲಾಗಿದ್ದು, ನದಿಯಲ್ಲಿ ಭರ್ತಿ ನೀರು ಬಂದಾಗ ಸೇತುವೆ ಮೇಲಿಂದ ಅಡ್ಡಾಡುವುದೇ ಒಂದು ರಸಘಳಿಗೆ. ಇದರ ಮೇಲೆ ಚಲಿಸುವಾಗ ಹೊಸಬರಾದ ನಮಗೆ ಭಯವಾದದ್ದು ಸಹಜ. ಕೆಳಗೆ ರಭಸದಿಂದ ಹರಿಯುವ ಕತ್ತಿ(ನೀರು ಅತ್ಯಂತ ರಭಸವಾಗಿ ಹರಿಯುವುದರಿಂದ ಕತ್ತಿ ನದಿಯೆಂಬ ಹೆಸರು ಬಂದಿದೆ) ನದಿಯ ಮೇಲಿನ ನಾವೆಯಲ್ಲಿ ಕುಳಿತು ಪ್ರಯಾಣಿಸಿದ ಅನುಭವವಾಗುತ್ತದೆ.

ಇಂತಹ ಸೇತುವೆ ಮೇಲೆ ನಡೆದಾಡುವುದೇ ಒಂದು ಥ್ರಿಲ್. ಇದರ ಮೇಲೆ ನಡೆದುಕೊಂಡು ಹೋಗುವಾಗ ವಾಯುದೇವನೂ ಕೂಡಾ ಒಂದು ಕ್ಷಣ ಎಂತಹ ಮನಸುಗಳಲ್ಲೂ ಭಯದ ವಾತವರಣವನ್ನು ಸೃಷ್ಟಿಸಿಬಿಡುತ್ತಾನೆ. ರಭಸವಾಗಿ ಗಾಳಿ ಬೀಸಿದರೆ ಸಾಕು ಆಯ ತಪ್ಪಿ ಎಲ್ಲಿ ನಾವೇ ಗಾಳಿಯೊಂದಿಗೆ ತೇಲಿಹೋಗುತ್ತೇವೆಯೋ ಎಂಬ ಭಯದಲ್ಲೊಮ್ಮೆ ಚಿಟಾರನೆ ಚಿರುವುಂತಹ ಘಳಿಗೆ ರಸದೌತಣವಾಗಿರುತ್ತದೆ. ಕತ್ತಿಹೊಳೆಯೆಂದೆ ಖ್ಯಾತಿಪಡೆದ ಘಟಪ್ರಭೆ ಬೆಳಗಾವಿ ಜಿಲ್ಲೆಯಲ್ಲಿ ಎರಡನೇ ಅತೀ ದೊಡ್ಡ ನಗರವಾಗಿದ್ದು ಪಶ್ಚಿಮ ಘಟ್ಟಗಳಿಂದ ಸುತ್ತುವರೆದಿದೆ. ಘಟಪ್ರಭಾ ನದಿಗೆ ಕತ್ತಿಹೊಳೆ ಎಂದು ಕರೆಯುತ್ತಾರೆ. ತಾಮ್ರಪರ್ಣಿ ಮತ್ತು ಹಿರಣ್ಯಕೇಶಿ ನದಿಗಳು ಘಟಪ್ರಭೆಯನ್ನು ಸೇರುತ್ತವೆ. ಮಳೆಗಾಲದಲ್ಲಿ ಕಾಫಿ ಚಹಾ ವರ್ಣಕ್ಕೆ ತಿರುಗುತ್ತವೆ. ಶ್ವೇತವರ್ಣದಲ್ಲು ತಿಳಿಗೊಂಡು ಹಾಲಿನಂತೆ ನೊರೆ ನೊರೆಯಾಗಿ ಹರಿಯುತ್ತದೆ. ಇದರ ಸೊಬಗನ್ನು ನೋಡಲು ಕಣ್ಣೆರಡು ಸಾಲದು. ನೀರಿನ ರಭಸ, ಹಾಲ್ನೊರೆಯಂತಹ ಬಣ್ಣ, ಗಂಭೀರವಾದಂತಹ ಸದ್ದು, ಹತ್ತಿರದ ಸ್ಥಳಗಳಲ್ಲಿ ತಂಪಾದ ನೀರಿನ ಚಿಕ್ಕ ಚಿಕ್ಕ ಹನಿಗಳ ಸಿಂಚನ ಇವೆಲ್ಲವೂ ಸೇರಿ ನಮ್ಮ ಮನದಲ್ಲಿ ರೋಮಾಂಚನದೊಂದಿಗೆ ತಾಜತನದ ಅನುಭವವನ್ನು ನೀಡುತ್ತಿತ್ತು.

ಇದರ ಸುಂದರತೆ ಮತ್ತು ರಮಣೀಯತೆಯನ್ನು ಅತೀ ಸಮೀಪದಿಂದ ಸವಿಯುವಂತಹ ವಾತವರಣವಿದ್ದು, ಧಬಧಬ ಧರೆಗಿಳಿಯುವ ಭಯಂಕರ ಪ್ರವಾಹದಂತೆ ಘಟಪ್ರಭೆ 84 ಅಡಿ ಎತ್ತರದಿಂದ ಧುಮ್ಮಿಕ್ಕುವ ದೃಶ್ಯವನ್ನು ನೋಡಿಯೇ ಸವಿಯಬಹುದು. ಘಟಪ್ರಭೆ ಭಾರಿ ರಭಸದಿಂದ ಪ್ರಪಾತಕ್ಕೆ ಧುಮುಕುವಾಗ, ಸಿಡಿ ಮದ್ದು ಸಿಡಿದಂತೆ ನೀರು ಝಲ್ಲೆಂದು ಪುಟಿದೇಳುತ್ತದೆ. ಪ್ರಕೃತಿಯ ಆ ಅಗಾಧ ಸೌಂದರ್ಯವನ್ನು ಕಣ್ಣಿಂದ ಕಾಣಬೇಕು ಮತ್ತು ಇಂಪಾದ ಸದ್ದನ್ನು ಕಿವಿಂದ ಆಲಿಸಬೇಕು. ಪ್ರವಾಹದಂತೆ ಧುಮುಕುವ ಘಟಪ್ರಭೆ ನಂತರ ಮಂದಗಮನೆಯಾಗಿ ಮೆಲ್ಲನೆ ಚಲಿಸುವ ಈಕೆಯ ಸೌಂದರ್ಯ ನೋಡುವುದೇ ಸಂಭ್ರಮ.
ಭಾರತದ ನಯಾಗರ ಫಾಲ್ಸ್ ಎಂಬ ಹೆಗ್ಗಳಿಕೆ
ಘಟಪ್ರಭೆಯ ಸುತ್ತಲೂ ಎಲ್ಲಿ ನೋಡಿದರೂ ಹಚ್ಚ ಹಸಿರು. ಬೆಟ್ಟ ಗುಡ್ಡಗಳದ್ದೇ ಕಾರುಬಾರು.

ಇಲ್ಲಿಗೆ ಬರುವ ಪ್ರವಾಸಿಗರನ್ನು ಹಸಿರು ದೇವತೆ ಪ್ರೀತಿಸುವ ಬಗೆಯನ್ನು ಕಂಡು ಇಲ್ಲಿಂದ ಹೊರಡಲು ಮನಸ್ಸಾಗದಷ್ಟು ರಮಣೀಯತೆ ಇಲ್ಲಿದೆ. ನಿಸರ್ಗದ ಸಂಧರತೆಯನ್ನು ಸವಿಯುವುದರೊಂದಿಗೆ ಇಲ್ಲಿ ಐತಿಹಾಸಿಕ ಮಹಾಲಿಂಗೇಶ್ವರನ ದೇವಾಲಯವಿದೆ.
177 ಮೀಟರ್ (581 ಅಡಿ) ಅಗಲದ ಬಂಡೆಗಳಲ್ಲಿ ಮೇಲಿಂದ 52 ಮೀಟರ್ (171 ಅಡಿ) ಆಳದ ಕಂದಕಕ್ಕೆ ಘಟಪ್ರಭಾ ನದಿಯ ನೀರು ಧುಮ್ಮಿಕ್ಕುವುದು ಗೋಕಾಕ್ ಜಲಪಾತದ ವೈಶಿಷ್ಟ್ಯ. ವಿಶಾಲ ಬಂಡೆಗಲ್ಲಿನ ಮೇಲಿಂದ ನೀರು ಧುಮ್ಮಿಕ್ಕುವುದರಿಂದ ಈ ಜಲಪಾತವನ್ನು “ಮಿನಿ ನಯಾಗರಾ” ಎಂದು ಕರೆಯಲಾಗುತ್ತದೆ.

ಮೊದಲ ಬಾರಿಗೆ ವಿದ್ಯುತ್ ಉತ್ಪಾದಿಸಿದ ಕೇಂದ್ರ
ನೀರು ಧುಮ್ಮಿಕ್ಕುವ ಕಂದಕದ ಬಳಿ ಇರುವ ವಿದ್ಯುತ್ ಉತ್ಪಾದನೆ ಕೇಂದ್ರವನ್ನು ಬ್ರಿಟೀಷ್ ಕಾಲದಲ್ಲೇ ನಿರ್ಮಿಸಲಾಗಿದೆ. 1887ರಲ್ಲಿ ಕಾರ್ಯರಂಭ ಮಾಡಿದ್ದು, ರಾಜ್ಯದಲ್ಲೇ ಮೊದಲ ಬಾರಿ ವಿದ್ಯುತ್ ಉತ್ಪಾದಿಸಿದ ಕೇಂದ್ರ ಎಂಬ ಹೆಗ್ಗಳಿಕೆ ಪಡೆದಿದೆ. ತದನಂತರ ಬೆಂಗಳೂರಿನಲ್ಲಿ ಆರಂಭಿಸಲಾಯಿತು.ಮಹಾಲಿಂಗೇಶ್ವರ ದೇವಾಸ್ಥಾನ ಇನ್ನೂ ಈ ಸ್ಥಳದ ಕುತೂಹಲಕಾರಿ ಅಂಶವೆಂದರೆ ಚಾಲುಕ್ಯರ ಕಾಲಕ್ಕೆ ಸೇರಿದ ಸ್ಮಾರಕಗಳು ಇಲ್ಲಿನ ಕಲ್ಲಿನ ಕಣಿವೆಯ ಎರಡೂ ದಂಡೆಗಳಲ್ಲಿ ದೊರೆತಿರುವುದು. ಈ ಸ್ಥಳದ ಮತ್ತೊಂದು ಆಕರ್ಷಣೆ ಎಂದರೆ ಚಾಲುಕ್ಯ ವಾಸ್ತುಶೈಲಿಯಲ್ಲಿ ನಿರ್ಮಿಸಲಾದ ಮಹಾಲಿಂಗೇಶ್ವರನ ದೇವಾಸ್ಥಾನ.

ಟ್ರೆಕ್ಕಿಂಗ್ ಗೆ ಹೇಳಿಮಾಡಿಸಿದ ಸ್ಥಳ

ಗೋಕಾಕ್ ಫಾಲ್ಸ್ ಧುಮ್ಮಿಕ್ಕುವುದ್ದನ್ನು ಕೆಳಗಿನಿಂದ ನೋಡಬೇಕೆಂದರೆ ಸುಮಾರು 2 ರಿಂದ 3 ಕಿ.ಮೀ ಕೆಳಗೆ ನಡೆದುಹೋಗಬೇಕು. ಕರ್ನಾಟಕದ ಕರಾವಳಿ ಮತ್ತು ಮಲೆನಾಡಲ್ಲಿ ಧೋ ಧೋ ಎಂದು ಮಳೆಯಾಗಿ ಒಂದು ಹಂತಕ್ಕೆ ಬಂದು ನಿಂತ ಮೇಲೆ ಟ್ರೆಕ್ಕಿಂಗ್‍ಗೆ ಅಣಿಯಾಗುವಂತಹ ಸಾಹಸಿಗರಿಗೆ ಗೋಕಾಕ್ ಜಲಪಾತ ಹೇಳಿಮಾಡಿಸಿದಂತಹ ಸ್ಥಳವಾಗಿದೆ. ಇಲ್ಲಿ ನಡೆಯುತ್ತ ಹೋದರೆ ಡಿಟೋ 6-5=2 ಮೂವೀಯಲ್ಲಿ ಇರುವಂತಹ ಟ್ರೆಕ್ಕಿಂಗ್‍ನ ಅನುಭವ ನೀಡುತ್ತದೆ. ಆದರೆ ಅಲ್ಲಿ ದೆವ್ವ ಇರುತ್ತೆ ಇಲ್ಲಿ ನಾವೇ ದೆವ್ವಗಳಾಗಿರುತ್ತವೆ. ದೊಡ್ಡ ದೊಡ್ಡ ಬಂಡೆಗಳು, ಜಾರುವಂತಹ ಕಲ್ಲುಗಳು, ತೊರೆಗಳು, ಗಿಡ ಮರಗಳು, ನಮ್ಮ ಧ್ವನಿ ನಮಗೆ ಪಿಸುಗುಡುವಂತಹ ನಿಶಬ್ಧ ವಾತವರಣ ಹೀಗೆ ಇವೆಲ್ಲಾ ಸೇರಿ ಎಂತಹವರಿಗೂ ಪ್ರಕೃತಿ ಮೇಲೆ ಲವ್ ಆಗಿಬಿಡುತ್ತದೆ.

ಗೋಕಾಕ್ ಸ್ಪೇಷಲ್ ಕರದಂಟು

ಗೋಕಾಕ್ ಬಗ್ಗೆ ಇಷ್ಟೇಲ್ಲಾ ಹೇಳಿ ಕರದಂಟನ್ನು ಮರೆಯಲು ಸಾಧ್ಯವೇ? ಬೆಳಗಾವಿಯತ್ತ ಪ್ರಯಾಣ ಬೆಳೆಸಿದರೆ ಅಲ್ಲಿಯ ಕುಂದ ಹಾಗೂ ಗೋಕಾಕ್‍ನ ಕರದಂಟು ಅಥವಾ ಅಂಟುಹುಂಡೆಯನ್ನು ಸವಿಯದೆ ಬಂದವರೆ ಇಲ್ಲ. ಅಂಟು ಹಾಕಿ ತಯಾರಿಸುವ ಈ ಉಂಡೆಯನ್ನು ಕರ(ಕೈ)ದಲ್ಲಿ ಉಂಡೆ ಕಟ್ಟುವುದರಿಂದ ಈ ಹೆಸರು ಬಂದಿರಲೂಬಹುದು ಅಲ್ವಾ? ಅದೇನೆ ಇರಲಿ, ಖರ್ಜೂರ, ಬಾದಾಮಿ, ಗೋಡಂಬಿ, ದ್ರಾಕ್ಷಿ, ಒಣ ಕೊಬ್ಬರಿ ತುರಿ, ಗಸಗಸೆ, ಅಂಟು, ಬೆಲ್ಲ, ತುಪ್ಪ ಹೀಗೆ ಇವೆಲ್ಲವನ್ನು ಹಾಕಿ ಮಾಡಿದಂತಹ ಕರದಂಟು ಆರೋಗ್ಯಕರವಾದಂತಹ ತಿನಿಸಾಗಿದೆ. ಈ ಗಿರಮಿಟ್ ಜತೆ ಗೋಕಾಕ್‍ನ ಕರದಂಟನ್ನು ಮೆಲ್ಲುತ್ತ ಭೋರ್ಗರೆಯುವ ಜಲಪಾತ ನೋಡುತ್ತಿದ್ದಾರೆ ನಮ್ಮ ಕಣ್ಣಿಗೆ ಹಬ್ಬವಾಗುವುದರೊಂದಿಗೆ ಬಾಯಿಗೆ ಸಿಹಿಯೂ ಆಗುವುದರಲ್ಲಿ ಸಂಶಯವೇ ಇಲ್ಲ!

ಪ್ರವಾಸಿಗರ ತಾಣ

ನೋಡುಗರ ಆಕರ್ಷಣೀಯ ಕೇಂದ್ರ ಬಿಂದುವಾದ ಗೋಕಾಕ್ ಫಾಲ್ಸ್ ಅನ್ನು ನೋಡಲು ಪಕ್ಕದ ಮಹಾರಾಷ್ಟ್ರ, ಗೋವಾ, ಆಂಧ್ರಪ್ರದೇಶ, ತೆಲಂಗಾಣ ಹಾಗೂ ದೂರದೂರದ ಊರಿಂದ ಪ್ರವಾಸಿಗರು ಈ ಸೌಂದರ್ಯವನ್ನು ಸವಿಯಲು ಬರುತ್ತಾರೆ. ಸೆಲ್ಫೀ, ಫೋಟೋ ತೆಗೆಸಿಕೊಳ್ಳುವುದರೊಂದಿಗೆ ಬೆಟ್ಟದ ಇಕ್ಕೆಲ್ಲಗಳಲ್ಲಿ ಜೋಡಿಸಿರುವ ತೂಗು ಸೇತುವೆಯಲ್ಲಿ ಕೇಕೆ ಹೊಡೆದು ಕುಣಿದು ಕುಪ್ಪಳಿಸುತ್ತಾರೆ. ಒಟ್ಟಾರೆಯಾಗಿ ಈ ಸಮಯವೂ ಪ್ರವಾಸಿಗರಿಗೆ ಪ್ರವಾಸ ಮಾಡಲು ಹೇಳಿಮಾಡಿಸಿದಂತಹ ಸ್ಥಳವಾಗಿದೆ.

ಮಾರ್ಗ

ಗೋಕಾಕ್ ಜಲಪಾತ ಬೆಳಗಾವಿಯಿಂದ 58 ಕಿ.ಮೀ. ಹಾಗೂ ಗೋಕಾಕ್ ಪಟ್ಟಣದಿಂದ 6 ಕಿ.ಮೀ ದೂರದಲ್ಲಿದೆ. ಈ ಜಲಪಾತ ಕೊಲ್ಲಾಪುರದಿಂದ 100 ಕಿ.ಮೀ., ಸಾಂಗ್ಲಿಯಿಂದ 66 ಕಿ.ಮೀ ಪಣಜಿಯಿಂದ 140 ಕಿ.ಮೀ ದೂರದಲ್ಲಿದೆ. ಗೋಕಾಕ್ ರೋಡ್ ಮತ್ತು ಘಟಪ್ರಭಾ ರೈಲ್ವೆ ನಿಲ್ದಾಣಗಳು ಜಲಪಾತದಿಂದ 10 ಕಿ.ಮೀ ಅಂತರದಲ್ಲಿದೆ. ಬೆಳಗಾವಿ, ಗೋಕಾಕ್ ಮತ್ತು ನಗರ ಪ್ರದೇಶಗಳಿಂದ ಜಲಪಾತಕ್ಕೆ ಸಾರಿಗೆ ಸಂಸ್ಥೆಯ ಬಸ್ ಸೌಕರ್ಯ ಇದೆ. ಖಾಸಾಗಿ ವಾಹನಗಳ ಮೂಲಕವೂ ಗೋಕಾಕ್ ಜಲಪಾತದ ಸ್ಥಳ ತಲುಪಬಹುದು.

ಪ್ರೀತಿ.ಟಿ.ಎಸ್
ಪತ್ರಿಕೋದ್ಯಮ ವಿದ್ಯಾರ್ಥಿನಿ
3ನೇ ಸೆಮಿಸ್ಟರ್
ದಾವಣಗೆರೆ ವಿಶ್ವವಿದ್ಯಾನಿಲಯ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Suddidina.com Kannada online news portal. Its providing Kannada news, film news Kannada, sports news Kannada, political NeWS in Kannada and more.

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

ಅಂಕಣ

Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?

Published

on

indian birthwort, Aristolochia tagala

‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.

ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.

ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:

ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.

ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ

‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?

ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್‌ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.

‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?

ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.

ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.

ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

Continue Reading

ದಿನದ ಸುದ್ದಿ

ಗೃಹಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ

Published

on

ಸುದ್ದಿದಿನಡೆಸ್ಕ್:ಗೃಹಬಳಕೆಯ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.

ಗೃಹ ಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯನ್ನು 111 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಸಚಿವಾಲಯ, ವಾಣಿಜ್ಯ ಸಿಲೆಂಡರ್ ಬೆಲೆಯು ಅಂತಾರಾಷ್ಟ್ರೀಯ ಕಚ್ಚಾ ಅನಿಲ ಮತ್ತು ಸಂಬAಧಿತ ದರಗಳ ಮೇಲೆ ಅವಲಂಬಿತವಾಗಿದ್ದು, ಆಗಾಗ್ಗೆ ಮಾರುಕಟ್ಟೆಯ ದರಗಳು ಬದಲಾಗುತ್ತವೆ. ಆದರೆ, ಗೃಹ ಬಳಕೆಯ ಸಿಲೆಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತಿಳಿಸಿದೆ.

ದೆಹಲಿಯಲ್ಲಿ 14.2 ಕೆಜಿ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್ ಬೆಲೆ 950 ರೂಪಾಯಿಯಾಗಿದ್ದು, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇದು 553 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ. ಇದು ಆಗಸ್ಟ್ 2023 ರಿಂದ ನವೆಂಬರ್ 2025ರವರೆಗೆ ಹೋಲಿಸಿದರೆ, ಶೇಕಡಾ 39 ರಷ್ಟು ದರ ಕಡಿತವನ್ನು ಸೂಚಿಸುತ್ತದೆ. ಜನರಿಗೆ ಸುಸ್ಥಿರ ಇಂಧನ ಪೂರೈಕೆಗೆ ಒತ್ತು ನೀಡಲಾಗಿದ್ದು, ದರ ಬದಲಾವಣೆ ಇಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ3 days ago

ಉದ್ಯೋಗಿಗಳಿಗೆ ಗೂಗಲ್ ಶಾಕ್..! AI ಕಲಿಯದಿದ್ದರೆ ಉದ್ಯೋಗ ತೊರೆಯಿರಿ

ಸುದ್ದಿದಿನ,ಬೆಂಗಳೂರು: ಜಗತ್ತಿನ ಟೆಕ್ ದೈತ್ಯ ಕಂಪನಿ ಗೂಗಲ್ ತನ್ನ ಉದ್ಯೋಗಿಗಳಿಗೆ ಶಾಕ್ ನೀಡಿದೆ. AI ಕಲಿಯದಿದ್ದರೆ ಉದ್ಯೋಗ ತೊರೆಯುವಂತೆ ಸೂಚಿಸಿದ್ದು, ‘ವಾಲಂಟರಿ ಎಕ್ಸಿಟ್ ಪ್ರೋಗ್ರಾಮ್’ (VEP) ಘೋಷಿಸಿದೆ....

ದಿನದ ಸುದ್ದಿ3 days ago

ಎಸ್.ಎಸ್.ಎಲ್.ಸಿ ಫಲಿತಾಂಶ ಹೆಚ್ಚಿಸಲು ಕ್ರಮವಹಿಸಿ : ಶಿಕ್ಷಕರಿಗೆ ಡಿಸಿ ಗಂಗಾಧರಸ್ವಾಮಿ ಸೂಚನೆ

ಸುದ್ದಿದಿನ,ದಾವಣಗೆರೆ:ಮಾರ್ಚ್ 18 ರಿಂದ ಪ್ರಾರಂಭವಾಗುವ ಎಸ್.ಎಸ್.ಎಲ್.ಸಿ ಫಲಿತಾಂಶವನ್ನು ಹೆಚ್ಚಿಸಲು ಶಿಕ್ಷಕರು ಮತ್ತು ಮುಖ್ಯೋಪಾಧ್ಯಾಯರು ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದರು. ಅವರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ತುಂಗಭದ್ರಾ...

ದಿನದ ಸುದ್ದಿ4 days ago

ಫೆ.14 ರಂದು ಸಂತ ಸೇವಾಲಾಲ್‌ರವರ 287ನೇ ಜಯಂತಿ ಕಾರ್ಯಕ್ರಮ

ಸುದ್ದಿದಿನ,ದಾವಣಗೆರೆ:ಸಂತ ಸೇವಾಲಾಲ್‌ರವರ 287ನೇ ಜಯಂತ್ಸೋವ ಕಾರ್ಯಕ್ರಮವು ಫೆ. 14 ರಂದು ಮಧ್ಯಾಹ್ನ 2 ಗಂಟೆಗೆ ನ್ಯಾಮತಿ ತಾಲ್ಲೂಕಿನ ಭಾಯಾಗಡ್-ಸೂರಗೊಂಡನಕೊಪ್ಪದಲ್ಲಿ ನಡೆಯಲಿದೆ. ಜಿಲ್ಲಾಡಳಿತ, ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ...

ದಿನದ ಸುದ್ದಿ5 days ago

ಕನ್ನಡಭಾಷೆಯಲ್ಲಿ ನಾಮಫಲಕ ಕಡ್ಡಾಯ : ಆಯುಕ್ತೆ ರೇಣುಕಾ ಆದೇಶ

ಸುದ್ದಿದಿನ,ದಾವಣಗೆರೆ:ಮಹಾನಗರಪಾಲಿಕೆ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಉದ್ದಿಮೆ ಮಳಿಗೆಗಳು ಕಡ್ಡಾಯವಾಗಿ ಶೇ.60 ರಷ್ಟು ಕನ್ನಡ ಭಾಷೆಯಲ್ಲಿ ನಾಮಫಲಕವನ್ನು ಅಳವಡಿಸಬೇಕು ಎಂದು ಮಹಾನಗರ ಪಾಲಿಕೆ ಆಯುಕ್ತೆ ರೇಣುಕಾ ತಿಳಿಸಿದ್ದಾರೆ. ಒಂದು...

ದಿನದ ಸುದ್ದಿ5 days ago

ದಾವಣಗೆರೆ | ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೊಟ್ರೇಶ್ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ:ದಾವಣಗೆರೆ ತಾಲ್ಲೂಕಿನ ಕಂದಗಲ್ಲು ಗ್ರಾಮದಲ್ಲಿ ಕಾರ್ಯನಿರ್ವಹಿಸುತ್ತಿರುವ ಶ್ರೀ ಲಿಂಗೇಶ್ವರ ಹಿರಿಯ ಪ್ರಾಥಮಿಕ ಅನುದಾನಿತ ಶಾಲೆಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಆಡಳಿತಕ್ಕೆ ಒಳಪಟ್ಟಿದೆ. ನಿಯಮಬಾಹಿರವಾಗಿ ಸಾಮಾನ್ಯ...

ದಿನದ ಸುದ್ದಿ1 week ago

ಕಾಲೇಜು ಶಿಕ್ಷಣ ಇಲಾಖೆ ಪ್ರಾದೇಶಿಕ ಜಂಟಿ ನಿರ್ದೇಶಕ ಹೆಚ್. ಕೇಶವ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ಶಿವಮೊಗ್ಗ:ಎಸ್.ಜೆ.ಎಂ ವಿದ್ಯಾಪೀಠ (ರಿ), ಚಿತ್ರದುರ್ಗ ಇಲ್ಲಿ ಬ್ಯಾಕ್‌ಲಾಗ್ ಅಡಿಯಲ್ಲಿ ನೇಮಕ ಮಾಡಿಕೊಳ್ಳಲಾದ ಹುದ್ದೆಗಳನ್ನು ಇಲಾಖಾ ತನಿಖೆ ನಡೆಸುವಂತೆ ಕೋರಿ ಅರ್ಜಿ ಸಲ್ಲಿಸಿ 2 ತಿಂಗಳು ಕಳೆದರೂ ಯಾವುದೇ...

ದಿನದ ಸುದ್ದಿ2 weeks ago

ದೇವದಾಸಿ ಪುನರ್‍ವಸತಿ ಕಚೇರಿಯಲ್ಲಿ ಖಾಲಿ ಇರುವ ಹುದ್ದೆಗೆ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ದೇವದಾಸಿ ಪುನರ್‍ವಸತಿ ಯೋಜನೆಯಡಿ ತಾತ್ಕಾಲಿಕವಾಗಿ ಖಾಲಿ ಇರುವ ಹುದ್ದೆಗೆ ನೇರ ತಾತ್ಕಾಲಿಕ ನೇಮಕಾತಿಗೆ ಅರ್ಜಿ ಆಹ್ವಾನಿಸಲಾಗಿದೆ. ಅಭ್ಯರ್ಥಿಗಳು ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ,...

ದಿನದ ಸುದ್ದಿ2 weeks ago

ಭರತ ಹುಣ್ಣಿಮೆ ಪ್ರಯುಕ್ತ 25 ಹೆಚ್ಚುವರಿ ವಿಶೇಷ ವಾಹನ

ಸುದ್ದಿದಿನ,ದಾವಣಗೆರೆ : ಜನವರಿ 31 ರಿಂದ ಫೆಬ್ರವರಿ 2 ರವರೆಗೆ ಹರಪನಹಳ್ಳಿ ತಾಲ್ಲೂಕು ಉಚ್ಚಂಗಿದುರ್ಗದಲ್ಲಿ ಜರುಗಲಿರುವ  ಭಾರತ ಹುಣ್ಣಿಮೆಗಾಗಿ ರಾಜ್ಯ ರಸ್ತೆ ಸಾರಿಗೆ ನಿಗಮ, ದಾವಣಗೆರೆ ವಿಭಾಗದ...

ದಿನದ ಸುದ್ದಿ2 weeks ago

ಕಾಗದ ರಹಿತ ನೋಂದಣಿ ವ್ಯವಸ್ಥೆಯ ತರಬೇತಿ

ಸುದ್ದಿದಿನ,ದಾವಣಗೆರೆ:ಕಾಗದ ರಹಿತ ನೋಂದಣಿ ವ್ಯವಸ್ಥೆಯನ್ನು ಜಾರಿಗೊಳಿಸಿದ್ದು, ಜಿಲ್ಲಾ ನೋಂದಣಿ ಕಚೇರಿ ವ್ಯಾಪ್ತಿಗೆ ಬರುವ ದಸ್ತಾವೇಜು ಬರಹಗಾರರು, ವಕೀಲರು, ಕರ್ನಾಟಕ ಒನ್, ದಾವಣಗೆರೆ ಒನ್, ಗ್ರಾಮ ಒನ್ ಮತ್ತು...

ದಿನದ ಸುದ್ದಿ2 weeks ago

ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ ಪುಸ್ತಕ ಚಂದಿರ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

ಸುದ್ದಿದಿನ,ದಾವಣಗೆರೆ:ಪ್ರಸಕ್ತ ಸಾಲಿನ ಕರ್ನಾಟಕ ಬಾಲವಿಕಾಸ ಅಕಾಡೆಮಿಯಿಂದ ರಾಜ್ಯ, ರಾಷ್ಟ್ರ ಮತ್ತು ಅಂತರ ರಾಷ್ಟ ಮಟ್ಟದಲ್ಲಿ ವಿಶೇಷ ಸಾಧನೆಗೈದ 18 ವರ್ಷದ ಮಕ್ಕಳಿಗೆ ಬಾಲಗೌರವ ಪ್ರಶಸ್ತಿ ಹಾಗೂ ಮಕ್ಕಳ...

Trending