Connect with us

ಲೈಫ್ ಸ್ಟೈಲ್

ಕಸದಿಂದ ರಸ | ಪ್ಲಾಸ್ಟಿಕ್ ಬಾಟಲ್ ಗಳನ್ನು ಹೀಗೂ ಬಳಸಿಕೊಳ್ಳಬಹುದು..!

Published

on

ಬಸ್ಸ್ಟಾಂಡ್, ರಸ್ತೆಯ ಬದಿಯಲ್ಲಿ, ಕಸದ ತೊಟ್ಟಿಗಳಲ್ಲಿ ಎನ್ನದೆ ನಿರೂಪಯುಕ್ತ ಕುಡಿಯುವ ನೀರಿನ ಬಾಟಲಿಗಳು ಎಲ್ಲಂದರಲ್ಲಿ ಬಿದ್ದು ಉರುಳಾಡುತ್ತಿರುತ್ತವೆ. ಇಂತಹ ಬಾಟಲಿಗಳಲಿಂದ ಕೃಷಿಯಲ್ಲಿ ಒಂದು ವಿಭಿನ್ನವಾದ ರೀತಿಯಲ್ಲಿ ಹೊಸ ರೂಪವನ್ನ ನೀಡಿಬಹುದಾಗಿದೆ. ಇವುಗಳಲ್ಲಿ ದಿನನಿತ್ಯ ಜೀವನದಲ್ಲಿ ಬೇಕಾದ ಸೊಪ್ಪನ್ನು ಬೆಳೆಸಿ ಎಳೆ ಚಿಗುರನ್ನು ನೋಡುತ್ತಾ ಸಂಭ್ರಮವನ್ನು ಆನಂದಿಸಬಹುದಾಗಿದೆ.

ಅದೊಂದು ದಿನ ಹುಬ್ಬಳ್ಳಿಯಿಂದ ವಿಜಯಪುರಕ್ಕೆ ಬಸ್‍ನಲ್ಲಿ ಬರುವಾಗ ನಡೆದ ಘಟನೆಯಿದು. ನನ್ನ ಪಕ್ಕ ಸೀಟ್‍ನಲ್ಲಿ ಹಾಗೂ ನುಂದಿನ ಸೀಟ್‍ನಲ್ಲಿ ಕೆಲವು ಹುಡಗ ಹುಡುಗಿರ ಗುಂಪು ಕುತುಕೊಂಡು ಮಾತನಾಡುತ್ತಿದ್ದರು. ನಾನು ಪುಸ್ತಕ ಓದುತ್ತಿದೆ. ನನಗೆ ಅವರ ಚರ್ಚೆ ಪುಸ್ತಕ ಓದಲು ಅಡಚಣೆ ಮಾಡಿದರು ಕೂಡಾ ಆಸಕ್ತಿದಾಯವಾಗಿತ್ತು. ಅದೇನು ಅಂತಿರಾ ಹಾಗಾದರೆ ಮುಂದೆ ಓದಿ.

ನಾನು ಸುಮ್ಮನೆ ಕುಳಿತು ಅವರ ಮಾತುಗಳನ್ನು ಕೇಳಿಸಿಕೊಂಡೆ. ನಂತರ ನಾನು ಕೂಡಾ ಅವರೊಂದಿಗೆ ಮಾತು ಬೆಳೆಸಿದಾಗ ನನಗಂತ್ತು ಒಂದು ಅದ್ಬುತವಾದ ವಿಷಯ ತಿಳಿದುಕೊಂಡೆ. ಅದರಲ್ಲು ಪ್ಲಾಸ್ಟಿಕ್ ಬಳಕೆಯಿಂದ ಮತ್ತು ಅದರ ಬರುಬಳಕೆ ಹೇಗೆ ಮಾಡಬೇಕು ಎನ್ನುವುದನ್ನು ಅರಿತುಕೊಂಡೆ. ಅದನೆ ನನ್ನ ಅನುಭವನ್ನು ನಿಮ್ಮ ಜೊತೆಗೆ ಹಂಚಿಕೊಳ್ಳುತ್ತಿದ್ದೇನೆ.
ಪ್ಲಾಸ್ಟಿಕ್ ಬಕಳಕೆಯು ತುಂಬಾ ಅಪಾಯಕಾರಿಯಾಗಿದೆ. ಶಿರಸಿಯ ತೋಟಗಾರಿಕಾ ಕಾಲೇಜಿನ ವಿದ್ಯಾರ್ಥಿಗಳು ನಿರುಪಯುಕ್ತ ಪ್ಲಾಸ್ಟಿಕ್ ಬಾಟಲಿಗಳ ಮರುಬಳಕೆ ಮಾಡುತ್ತಿದ್ದಾರೆ. ಒಂದು ತಿಂಗಳು ಗಲ್ಲಿ ಗಲ್ಲಿ ಸುತ್ತಿ, ಹೋಟೆಲ್‍ಗಳು, ಅಂಗಡಿಗಳಿಂದ ನೀರು, ತಂಪು ಪಾನೀಯ ಕುಡಿದು ಎಸೆದ ಬಾಟಲಿಗಳನ್ನು ಸಂಗ್ರಹಿಸಿದರು. ನಂತರ ಸಗ್ರಹಿಸಿದ ಬಾಟಲಿಗಳಿಗೆ ಜೀವಕಳೆ ತುಂಬಿ, ಪರಿಸರ ಮಾಲಿನ್ಯ ತಡೆಗಟ್ಟಲು ವಿದ್ಯಾರ್ಥಿಗಳ ಪುಟ್ಟ ಪ್ರಯತ್ನನೊಂದಿಗೆ ಅಡಿಗಲ್ಲನ್ನು ಹಾಕಿದ್ದಾರೆ.

ಕಾಲೇಜಿನ ಎದುರು ಇರುವ ನಾಲ್ಕು ಕಂಬಗಳ ನಡುವೆ ವರ್ಟಿಕಲ್ ಗಾರ್ಡನ್ ನಿರ್ಮಿಸಿದ್ದಾರೆ. ಕಾಲೇಜಿಗೆ ಭೇಟಿ ನೀಡುವವರ ಗಮನವನ್ನು ಇಲ್ಲಿ ಜೋತಾಡುವ ದಾರಗಳ ನಡುವೆ ಪ್ಲಾಸ್ಟಿಕ್ ಬಾಟಲಿಗಳಲ್ಲಿ ಸೊಂಪಾಗಿ ಬೆಳೆದಿರುವ ಸೊಪ್ಪುಗಳು ಸೆಳೆಯುತ್ತವೆ. ಅರ್ಧ ಕಟ್ ಮಾಡಿರುವ ಬಾಟಲಿಗಳಲ್ಲಿ ಮೆಂತೆ, ಹರಿವೆ, ಪಾಲಕ್, ಸಬ್ಬಸಿಗೆ, ಈರುಳ್ಳಿ, ಕೊತ್ತಂಬರಿ ಬೀಜ ಬಿತ್ತಿ, ಸೊಪ್ಪು ಬೆಳೆಸುತ್ತಿದ್ದಾರೆ.

`ಇದಕ್ಕೇನು ಹೆಚ್ಚು ಶ್ರಮವಿಲ್ಲ. ಅಂಗಡಿ ಮುಂಗಟ್ಟುಗಳಿಂದ ಸಂಗ್ರಹಿಸಿ ತಂದಿದ್ದ ಪ್ಲಾಸ್ಟಿಕ್ ಬಾಟಲಿಗಳ ಹೊಟ್ಟೆ ಸಿಳಿ, ಅದರಲ್ಲಿ ತೆಂಗಿನ ನಾರಿನ ಪುಡಿ ತುಂಬಿ, ಬೀಜ ಬಿತ್ತನೆ ಮಾಡಬೇಕು. ನಾರಿನ ಪುಡಿಗೆ ತೇವಾಂಶ ಹಿಡಿದಿಟ್ಟುಕೊಳ್ಳುವ ಗುಣವಿದೆ. ಹೀಗಾಗಿ, ಎರಡು ದಿನಕ್ಕೊಮ್ಮೆ ನೀರು ಕೊಟ್ಟರೂ ಸಾಕು. ಬೀಜ ಹಾಕಿದ 8ರಿಂದ10 ದಿನಗಳಲ್ಲಿ ಸಸಿಗಳು ಮೇಲೇಳುತ್ತವೆ. ಎನ್‍ಪಿಕೆ ಗೊಬ್ಬರವನ್ನು (19:19:19) ಸಿಂಪಡಣೆ ಮಾಡಿದರೆ, ಸಸಿಗಳು ಆರೋಗ್ಯಕರವಾಗಿ ಬೆಳೆಯುತ್ತವೆ. ಇದು ಸುಲಭವಾಗಿ ನೀರಿನಲ್ಲಿ ಕರಗುತ್ತದೆ. ಹಾಗಾಗಿ ಸಿಂಪಡಣೆಯೂ ಸುಲಭ’ ಎಂದು ವಿದ್ಯಾರ್ಥಿಗಳು ಅಭಿಪ್ರಾಯ ಪಡುತ್ತಾರೆ.

ಬಾಟಲಿಯ ಪುನರ್ ಬಳಕೆಯ ವಿಚಾರ ಬಂದಿದ್ದು ಹೇಗೆ ಎಂಬ ಪ್ರಶ್ನೆಯನ್ನು ಮುಂದಿಟ್ಟಾಗ, ಇಸ್ರೇಲ್ ವಿಜ್ಞಾನ ಕೇಂದ್ರದಲ್ಲಿ ನೋಡಿದ್ದ ಬಾಟಲಿಯ ಮರು ಬಳಕೆಯ ಪ್ರಯೋಗವನ್ನು ಕಾಲೇಜಿನಲ್ಲಿ ಮಾಡೋಣವೆಂದು `ನಮ್ಮ ತರಕಾರಿ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಅವರು ನಮ್ಮನ್ನು ಹುರಿದುಂಬಿಸಿದರು ಎಂದು ಹೇಳಿದರು. ವಿದ್ಯಾರ್ಥಿಗಳೆಲ್ಲರು ಪ್ರತ್ಯೇಕವಾಗಿ ತಂಡ ಕಟ್ಟಿಕೊಂಡು ಬಾಟಲಿಗಳ ರಾಶಿ ತಂದು ಸುರಿದೆವು. ಈಗ ನೋಡಿ, ಅವೆಲ್ಲ ಶೋ ಪೀಸ್‍ಗಳಂತೆ ಕಾಣುತ್ತಿವೆ’ ಎಂದು ಅವರು ಕಾಲೇಜಿನ ಕಾರಿಡಾರ್ ಕಟ್ಟೆಯಂಚನ್ನು ಆವರಿಸಿಕೊಂಡಿದ್ದ ಬಾಟಲಿ ಪಾಟ್‍ನೆಡೆಗೆ ಕೈತೋರಿದರು ಎಂದು ಹೇಳಿದರು.

ಕೆಲವು ವರ್ಷಗಳ ಹಿಂದೆ ಅಂಗಳದಲ್ಲಿದ್ದ ಕೈತೋಟ್ (ಗಾರ್ಡನ್) ಈಗ ಮಹಡಿಯನ್ನೇರಿದೆ. ಕಾರಿಡಾರಿನ ಸುತ್ತ, ಟೆರೇಸ್ ಮೇಲಿನ ನೆರಳಿನ ಜಾಗದಲ್ಲೆಲ್ಲ ಜಲಪಾತದಂತೆ ಇಳಿಬಿದ್ದಿರುವ ಬಾಟಲಿಗಳು ಕಾಣುತ್ತವೆ.

ಮಳೆಗಾಲದಲ್ಲಿ ತೆರೆದ ಬಯಲಿನಲ್ಲಿ ತರಕಾರಿ, ಸೊಪ್ಪು ಬೆಳೆಸಿದರೆ, ಮಲೆನಾಡಿನ ಮಳೆಗೆ ಕೊಳೆಯುವ ಸಾಧ್ಯತೆ ಹೆಚ್ಚು. ಹಾಗೆಂದು, ಚಾವಣಿ ಕೆಳಗೆ ಸುಲಭದಲ್ಲಿ ಬೆಳೆಬಹುದು. ಬಾಟಲಿ ಗಟ್ಟಿಯಿದ್ದರೆ ಎರಡರಿಂದ ಮೂರು ಬೆಳೆಯನ್ನು ಆರಾಮವಾಗಿ ತೆಗೆಯಬಹುದು. ಇನ್ನೂ ಒಂದು ಹೆಜ್ಜೆ ಮುಂದಿಟ್ಟ ವಿದ್ಯಾರ್ಥಿಗಳು, ತೆಂಗಿನ ಚಿಪ್ಪಿನಲ್ಲೂ ಸಸಿ ಬೆಳೆಸಲು ತಯಾರಿ ನಡೆಸಿದ್ದಾರೆ. ತೆಂಗಿನ ಚಿಪ್ಪು ನೋಟದಲ್ಲೂ ಕಲಾತ್ಮಕ ಎಂದರು, ಅಲ್ಲಿನ ವಿದ್ಯಾರ್ಥಿಗಳು.

ಪೇಟೆಯಲ್ಲಿ ರಾಸಾಯನಿಕ ರಹಿತ ತರಕಾರಿ ಹುಡುಕುವುದೇ ಕಷ್ಟ. ರಾಸಾಯನಿಕ ಸಿಂಪಡಿಸಿದ ತರಕಾರಿ ಸೇವನೆ ಕ್ಯಾನ್ಸರ್‍ನಂತಹ ಗಂಭೀರ ಕಾಯಿಲೆಗೆ ಕಾರಣವಾಗಬಹುದು. ಸಾಧ್ಯವಾದಷ್ಟು ಮನೆಯಲ್ಲೇ ಬೆಳೆಸಿಕೊಂಡರೆ, ಸಾವಯವ ತರಕಾರಿ ತಿಂದ ಸಮಾಧಾನವೂ ಸಿಕ್ಕೀತು. ನಗರದಲ್ಲಿ ತರಕಾರಿ ಬೆಳೆಸಲು ಜಾಗ ಇಲ್ಲದಿದ್ದರೆ, ಪ್ಲಾಸ್ಟಿಕ್ ಬಾಟಲಿಯಲ್ಲಿ ಆಳ ಬೇರು ಬಿಡದಂತಹ ಸೊಪ್ಪು ಬೆಳೆಯಬಹುದು. ಎಣ್ಣೆ ಕ್ಯಾನ್, ಒಡೆದ ಬಕೆಟ್, ಪೇಂಟ್ ಡಬ್ಬ, ಸಿಮೆಂಟ್ ಚೀಲ ಹೀಗೆ ಎಸೆಯುವ ಪ್ಲಾಸ್ಟಿಕ್ ಅನ್ನು ಟೆರೇಸ್ ಮೇಲಿಟ್ಟು ತರಕಾರಿ ಗಿಡಗಳ ಬೆಳೆಸಬಹುದು ಎಂಬುದು ಅಲ್ಲಿನ ಪ್ರಾಧ್ಯಾಪಕರು ಸಲಹೆ ನೀಡುತ್ತಾರೆ.

ಹೀಗೆ ಬೆಳೆಯುವಾಗ ಮಣ್ಣನ್ನು ಉಪಯೋಗಿಸದಿರುವುದು ಲೇಸು. ತೆಂಗಿನ ನಾರಿನ ಪುಡಿ ಹಗುರ. ಇದು ಬಾಟಲಿಗೂ ಭಾರವಲ್ಲ, ಟೆರೇಸ್ ಮೇಲಿಟ್ಟರೂ ಬಾರಯಾಗುವುದಿಲ್ಲ ಜೊತೆಗೆ ದುಡ್ಡಿಗೂ ಕಷ್ಟವಿಲ್ಲ. ಮಾರ್ಕೆಟ್‍ನಲ್ಲಿ ಸುಲಭವಾಗಿ ಸಿಗುವ ನಾರಿನ ಪುಡಿ ಕೆ.ಜಿ.ಯೊಂದಕ್ಕೆ 10 ರೂಪಾಯಿಯಷ್ಟೇ, ಎಂದು ಹೇಳುವುದನ್ನು ಅವರು ಮರೆಯಲಿಲ್ಲ.

ಕಾಂಚನಾ. ಬಸವರಜ. ಪೂಜಾರಿ
3ನೇ ಸೆಮಿಸ್ಟರ್ ವಿದ್ಯಾರ್ಥಿನಿ
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ತೋರವಿ
ವಿಜಯಪುರ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ಅಂತರಂಗ

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

Published

on

250ಕ್ಕೂ ಹೆಚ್ಚು ಗಿಳಿಗಳ ನಿಗೂಢ ಸಾವು

ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆತಂಕ

ಬೆಂಗಳೂರು: ಮಧ್ಯಪ್ರದೇಶ ರಾಜ್ಯದ ಖಾರ್ಗೋನ್ ಜಿಲ್ಲೆಯಲ್ಲಿರುವ ನರ್ಮದಾ ನದಿ ತೀರದಲ್ಲಿ 250ಕ್ಕೂ ಹೆಚ್ಚು ಗಿಳಿಗಳು ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ ಸಾವನ್ನಪ್ಪಿರುವ ಪ್ರಕರಣ ಇಡೀ ದೇಶದಲ್ಲಿ ಇದೇ ಮೊದಲ ಬಾರಿಗೆ ನಡೆದ ದುರ್ಘಟನೆ ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ ಆತಂಕ ವ್ಯಕ್ತಪಡಿಸಿದ್ದಾರೆ.

ಕಳೆದ ಮೂರು ದಿನಗಳಲ್ಲಿ ನರ್ಮದಾ ನದಿ ತೀರದಲ್ಲಿ ಸುಮಾರು ಇನ್ನೂರಕ್ಕೂ ಅಧಿಕ ಗಿಳಿಗಳು ನಿಗೂಢವಾಗಿ ಸಾವನ್ನಪ್ಪಿದ್ದು ಆರಂಭದಲ್ಲಿ ಇದು ಹಕ್ಕಿ ಜ್ವರ ದಿಂದ ಸಾವನ್ನಪ್ಪಿರಬಹುದು ಎಂದು ಶಂಕಿಸಲಾಗಿತ್ತು ಆದರೆ ಪಶುವೈದ್ಯಕೀಯ ಅಧಿಕಾರಿ ಡಾ. ಸುರೇಶ್ ಬಫೇಲ್ ಅವರು ನೀಡಿದ ಮಾಹಿತಿ ಪ್ರಕಾರ ಹಕ್ಕಿಗಳ ಹೊಟ್ಟೆಯಲ್ಲಿ ಅಕ್ಕಿ ಕಾಳುಗಳು ಮತ್ತು ಸಣ್ಣ ಕಲ್ಲುಗಳು ಪತ್ತೆಯಾಗಿವೆ. ಅಲ್ಲದೆ ಕೃಷಿ ಭೂಮಿಯಲ್ಲಿ ಬಳಸುವ ಕೀಟನಾಶಕ ಮಿಶ್ರಿತ ಆಹಾರ ಅಥವಾ ನರ್ಮದಾ ನದಿಯ ಕಲುಷಿತ ನೀರು ಸೇವಿಸಿ 200 ರಿಂದ 50 ಕ್ಕೂ ಅಧಿಕ ಮೃತಪಟ್ಟಿರುವ ಸಾಧ್ಯತೆಗಳು ಹೆಚ್ಚಿವೆ ಎಂದು ಹೇಳಿದ್ದು ಇವರ ಮಾಹಿತಿಯನ್ನು ಆದರಿಸಿ ವಿಶೇಷ ತನಿಖೆ ಮಾಡಬೇಕು ಎಂದು ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ಆಗ್ರಹಿಸಿದೆ.

ಖರ್ಗೋನ್‌ ಜಿಲ್ಲೆಯ ಬದ್ವಾ ಪ್ರದೇಶದ ನರ್ಮದಾ ನದಿ ತೀರದಲ್ಲಿರುವ ಅಕ್ವೆಡಕ್ಟ್ ಸೇತುವೆಯ ಸಮೀಪ ಈ ಘಟನೆ ಬೆಳಕಿಗೆ ಬಂದಿದ್ದು ಅರಣ್ಯ ಇಲಾಖೆಯು ಸೇತುವೆಯ ಸುತ್ತಮುತ್ತ ಹಕ್ಕಿಗಳಿಗೆ ಆಹಾರ ನೀಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಿದೆ. ಸದ್ಯ ಹಕ್ಕಿಗಳ ಸಾವಿಗೆ ನಿಖರ ಕರಣ ತಿಳಿಯಲು ಹಕ್ಕಿಗಳ ಅವಶೇಷಗಳನ್ನು ಜಬಲ್ಪುರಕ್ಕೆ ಕಳುಹಿಸಲಾಗಿದೆ. ಸದ್ಯ ಅರಣ್ಯ ಇಲಾಖೆ ಮತ್ತು ಪಶುವೈದ್ಯಕೀಯ ತಂಡಗಳು ಸ್ಥಳದಲ್ಲೇ ಬೀಡುಬಿಟ್ಟಿದ್ದು, ಪರಿಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿವೆ.

ಇನ್ನೊಂದು ಮುಖ್ಯ ವಿಚಾರ ಏನೆಂದರೆ ಪಕ್ಷಿಗಳಿಗೆ ಮನುಷ್ಯರು ಸೇವಿಸುವ ಎಣ್ಣೆ ಪದಾರ್ಥ ಅಥವಾ ಬೇಯಿಸಿದ ಆಹಾರ ನೀಡುವುದು ಅವುಗಳ ಜೀರ್ಣಾಂಗ ವ್ಯವಸ್ಥೆಯ ಮೇಲೆ ಮಾರಕ ಪರಿಣಾಮ ಬೀರುತ್ತದೆ ಎಂದು ಪಶುವೈದ್ಯಕೀಯ ಅಧಿಕಾರಿ ಡಾ. ಮನಿಷಾ ಚೌಹಾಣ್ ಹೇಳಿದ್ದಾರೆ. ಏನೇ ಆದರೂ ನೂರಾರು ಗಿಳಿಗಳು ಸಾವನ್ನಪಿರುವುದು ಮಾತ್ರ ದುರಂತ.

ಈ ಸಂದರ್ಭದಲ್ಲಿ ಪರಿಸರ ಮತ್ತು ವನ್ಯಜೀವಿ ಸಂರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷರೂ ಹಾಗೂ ರಾಷ್ಟ್ರೀಯ ಸಮಿತಿ ನಿರ್ದೇಶಕರಾದ ಮಾಲತೇಶ್ ಅರಸ್ ಹರ್ತಿಕೋಟೆ, ಹಿರಿಯ ಉಪಾಧ್ಯಕ್ಷರಾದ ಗುರುರಾಜ್ ಹೂಗಾರ್, ಉಪಾಧ್ಯಕ್ಷರಾದ ಯೋಗೀಶ್ ಕುಮಾರ್, ರುದ್ರಮುನಿ, ಡಾ.ಸಿದ್ದಲಿಂಗಪ್ಪ, ಮತ್ತು ಪದಾಧಿಕಾರಿಗಳು ಆತಂಕ ವ್ಯಕ್ತಪಡಿಸಿದ್ದಾರೆ.

Continue Reading

ಅಂಕಣ

Indian birthwort: ಪರಮಾತ್ಮನ ಹೆಸರಲ್ಲೇ ಇರುವ ದಿವ್ಯೌಷದ ಈಶ್ವರ ಬಳ್ಳಿ ಬಗ್ಗೆ ಗೊತ್ತೇ?

Published

on

indian birthwort, Aristolochia tagala

‘ಈಶ್ವರ’ ಎಂದ ಕೂಡಲೇ ಪರಮಾತ್ಮನನ್ನೆ ನೆನಪಿಸಿಕೊಳ್ಳೋ ನಮಗೆ ಅದೇ ಹೆಸರಿನಲ್ಲಿ ದಿವ್ಯೌಷಧಿ ಇದೆ ಎಂಬುದು ಎಷ್ಟು ಜನರಿಗೆ ತಿಳಿದೀತು? ಹೌದು! ಪರಮಾತ್ಮನ ಹೆಸರಿನಲ್ಲೇ ಒಂದು ಗಿಡಮೂಲಿಕೆ ಇದೆ (Indian birthwort). ಇದರ ವಿಶೇಷತೆ ಏನು? ಅದರಿಂದಾಗುವ ಪ್ರಯೋಜನಗಳೇನು? ಆರೋಗ್ಯದ ಮೇಲೆ ಬೀರುವ ಪ್ರಬಾವಗಳೇನು? ಎಂಬುದನ್ನು ಈ ಲೇಖನದಲ್ಲಿ ತಿಳಿಯೋಣ.

ಈ ಬಳ್ಳಿಯನ್ನು ಹೆಚ್ಚಾಗಿ ಭಾರತ, ನೇಪಾಳ, ಶ್ರೀಲಂಕಾ ಮತ್ತು ಬಾಂಗ್ಲಾದೇಶಗಳಲ್ಲಿ ಕಾಣಬಹುದಾಗಿದೆ. ಇದರ ವೈಜ್ಞಾನಿಕ ಹೆಸರು ಅರಿಸ್ಟೋಲೋಚಿಯ ಇಂಡಿಕಾ. ಸಾಮಾನ್ಯವಾಗಿ ಮೂಲಿಕೆ ಮರಕ್ಕೆ ಸುತ್ತಿಕೊಂಡು ಬೆಳೆಯುವ ಕಪ್ಪು ಬಳ್ಳಿಯಾಗಿದ್ದು, ಇದರ ಎಲೆಗಳು ಉದ್ದವಾಗಿ, ತಳದಲ್ಲಿ ಅಗಲವಾಗಿ, ತುದಿಯಲ್ಲಿ ಮೊನಚಾಗಿ, ಮೃದುವಾಗಿರುತ್ತದೆ. ಇನ್ನೂ ಇದರ ಬೀಜಗಳು ಚಪ್ಪಟೆಯಾಗಿ, ಅಂಡಕಾರವಾಗಿದ್ದು ಪುಕ್ಕಗಳನ್ನು ಹೊಂದಿದೆ ಹಾಗು ಇದರ ಬೇರುಗಳಲ್ಲಿ ಸುಗಂಧ ತೈಲವಿರುತ್ತದೆ.

ಈಶ್ವರ ಬಳ್ಳಿ (Indian birthwort)ಯ ಪೌರಾಣಿಕ ಹಿನ್ನೆಲೆ:

ನಮ್ಮೆಲ್ಲರಿಗೂ ತಿಳಿದಂತೆ ಶಿವ ಸಮುದ್ರ ಮಂಥನ ಮಾಡುವಾಗ ಹಾಲಾಹಲ (ವಿಷ) ಉತ್ಪತ್ತಿಯಾಯಿತು. ಆ ವಿಷ ಯಾರಿಗೂ ತೊಂದರೆಯಾಗಬಾರದೆಂದು ತಾನೇ ಅದನ್ನು ಕುಡಿದ. ಇದನ್ನು ನೋಡಿದ ಪಾರ್ವತಿ ದೇವಿ ಆ ವಿಷ ತನ್ನ ಪತಿಯ ಹೊಟ್ಟೆ ಸೇರಬಾರದೆಂದು ಆತನ ಕುತ್ತಿಗೆಯನ್ನು ಒತ್ತಿ ಹಿಡಿದಳು. ವಿಷ ಒಳ ಹೋಗಲಿಲ್ಲ. ವಿಷದ ಪ್ರಭಾವದಿಂದ ಕುತ್ತಿಗೆ ನೀಲ ವರ್ಣವಾಯಿತು. ಶಿವ ನೀಲಕಂಠನಾದ. ಶಿವ ವಿಷ ಕುಡಿದರೂ ಶಿವನಿಗೆ ಏನೂ ಆಗಲಿಲ್ಲ. ವಿಷವನ್ನು ನಿರ್ವಿಷ ಮಾಡುವ ಗುಣ ಶಿವನಿಗಿದ್ದಂತೆ ಈ ಗಿಡಕ್ಕೂ ಇರುವ ಕಾರಣ ‘ಈಶ್ವರ’ ಎಂಬ ಹೆಸರು ಈ ವನಸ್ಪತಿಗೆ ಇಟ್ಟಿದ್ದಾರೆ.

ಇದನ್ನೂ ಓದಿ: ಓಂಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ

‘ಈಶ್ವರ’ ಬಳ್ಳಿ ಮತ್ತು ಅದರ ಫಲ ನೋಡಲು ಹೇಗಿರುತ್ತದೆ?

ಕೆಲ ‘ಈಶ್ವರ’ ಬಳ್ಳಿಯು ಮರದಂತೆ ಉದ್ದಕ್ಕೆ ಏರುತ್ತದೆ. ಮತ್ತಷ್ಟು ಬಳ್ಳಿಯು ಪೊದೆಯಾಗಿ ಆವರಿಸಿಕೊಳ್ಳುತ್ತದೆ. ಸ್ವಲ್ಪ ಉದ್ದ ಆಯತಾಕಾರದ ಎಲೆಗಳು. ಎಲೆಗಳು ಅಲ್ಲಾಡಿದರೆ ಪರಿಮಳ ಸೂಸುತ್ತದೆ. ಎಲೆಯನ್ನು ಕಿವಿಚಿದರೂ ಪರಿಮಳ ಬರುತ್ತದೆ. ಹೂಗಳು ಬಾಯಿ ತೆರೆದ ಹಕ್ಕಿಗಳಂತೆ ಕಂಡುಬರುತ್ತದೆ. ಫಲಗಳು ಉದ್ದ ಹಾಗೂ ಸ್ವಲ್ಪ ದುಂಡಾಗಿ ಇರುತ್ತದೆ. ಫಲ ಬೆಳೆದು ಒಡೆದಾಗ ತಲೆ ಕೆಳಗಾಗಿ ಬಿಡಿಸಿದ ಪ್ಯಾರಾಚೂಟ್‌ನಂತೆ ಕಾಣುತ್ತದೆ. ಅದರೊಳಗೆ ತೆಳುವಾದ ತ್ರಿಕೋಣಾಕಾರದ ಬೀಜಗಳು ಇರುತ್ತದೆ.

‘ಈಶ್ವರ’ ಬಳ್ಳಿ (Indian birthwort)ಯಿಂದ ಆಗುವ ಪ್ರಯೋಜನಗಳೇನು?

ಭಾರತದ ಎಲ್ಲಾ ಕಡೆ ಕಂಡು ಬರುವ ಈಶ್ವರ ಬಳ್ಳಿಯ ಬೇರು, ಎಲೆಗಳು ಔಷಧಿಗಾಗಿ ಉಪಯೋಗಿಸಲ್ಪಡುತ್ತದೆ. ಕ್ರಿಮಿ ಬಾಧೆ, ಕಫ ಬಾಧೆ, ಸ್ತ್ರೀಯರ ಕೆಲವು ತೊಂದರೆಗಳಲ್ಲಿ, ವಿಷ ಚಿಕಿತ್ಸೆಯಲ್ಲಿ ವಿಶೇಷವಾಗಿ ಇದನ್ನು ಉಪಯೋಗಿಸಲ್ಪಡುತ್ತದೆ.

ಜೇಡ, ಚೇಳು, ಇಲಿ ಕಚ್ಚಿದರೆ: ಇದರ 3ಗ್ರಾಂ ಬೇರನ್ನು ಅಕ್ಕಿ ತೊಳೆದ ನೀರಲ್ಲಿ ಕಲಸಿ ಕುಡಿಸಬೇಕು ಹಾಗೂ ಅದರ ಎಲೆಯನ್ನು ನೀರಲ್ಲಿ ಅರೆದು ಕಚ್ಚಿದಲ್ಲಿಗೆ ಲೇಪಿಸಬೇಕು.
ತಲೆ ನೋವಿಗೆ ರಾಮಬಾಣ: ಈಶ್ವರ ಬಳ್ಳಿಯ ಎಲೆಯಲ್ಲಿ 10 ಗ್ರಾಂ ರಸ ತೆಗೆದು, 3ಗ್ರಾಂ ಅರಿಶಿನ ಪುಡಿ ಸೇರಿಸಿ ಕುಡಿಯುವುದರಿಂದ ತಲೆನೋವು ಶೀಘ್ರವಾಗಿ ಕಡಿಮೆಯಾಗುತ್ತದೆ.
ಗಂಟುನೋವು, ಬಿಳಿ ಮಚ್ಚೆಗಳು: ಈ ಎಲೆಯನ್ನು ನೀರಲ್ಲಿ ಅರೆದು ಗಂಟುನೋವು ಅಥವಾ ಬಿಳಿ ಮಚ್ಚೆಗಳ ಮೇಲೆ ಹಚ್ಚುತ್ತ ಬಂದರೆ ಕ್ರಮೇಣ ವಾಸಿಯಾಗುತ್ತದೆ.
ಕೆಮ್ಮು ಕಫಕ್ಕೆ ಔಷಧಿ: ಇದರ ಎಲೆಯ ಜ್ಯೂಸ್ ತೆಗೆದು 15 ಎಂಎಲ್ ನಷ್ಟು ಕುಡಿಸುವುದರಿಂದ ಕಡಿಮೆಯಾಗುವುದು. ಕೆಲವೊಮ್ಮೆ ಈ ಎಲೆಯ ಜ್ಯೂಸ್ ಕುಡಿದ ಸ್ವಲ್ಪ ಹೊತ್ತಿನಲ್ಲಿ ಕಫ ವಾಂತಿಯಾಗಿ ಕರಗಿ ಹೋಗುತ್ತದೆ. ಕಫ ಜಾಸ್ತಿ ಇರುವಾಗ ಸಾಮಾನ್ಯವಾಗಿ ಅಮೃತಾಂಜನ, ವಿಕ್ಸ್ ಎದೆಗೆ ಹಚ್ಚುತ್ತಾರೆ. ಅದೇ ರೀತಿ ಎಲೆಯನ್ನು ಅರೆದು ಎದೆಗೆ ಹಚ್ಚಬಹುದು.
ಮುಟ್ಟಿನ ದೋಷ ನಿವಾರಣೆ: ಹೆಣ್ಣುಮಕ್ಕಳ ಋತುಚಕ್ರದ ವೇಳೆ ಕಾಣಿಸಿಕೊಳ್ಳುವ ಹೊಟ್ಟೆನೋವಿಗೆ 10ಗ್ರಾಂ ಈಶ್ವರ ಬೇರಿನ ಕಷಾಯ ಮಾಡಿ (30 ರಿಂದ 40 ಎಂ.ಎಲ್) ಕುಡಿಸಬೇಕು.
ಹೊಟ್ಟೆ ಕ್ರಿಮಿ ಬಾಧೆ: 5-10 ಮಿಲಿ ಎಲೆರಸವನ್ನು 3 ದಿನ ಕುಡಿಯುವುದರಿಂದ ಕಡಿಮೆಯಾಗುವುದು.
ಜ್ವರಕ್ಕೆ ದಿವ್ಯೌಷಧಿ: 5 ಗ್ರಾಂ ಈಶ್ವರ ಬೇರನ್ನು ಕಷಾಯ ಮಾಡಿ ಅದಕ್ಕೆ 1/2 ಚಮಚ ಕಾಳು ಮೆಣಸು ಪುಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು. ಶರೀರ ಬಿಸಿ ಆಗಿ ಚಳಿಯಿಂದ ಕೂಡಿದ ಜ್ವರವಿದ್ದರೆ ಈಶ್ವರ ಬೇರಿನ ಕಷಾಯದೊಂದಿಗೆ ಈಶ್ವರ ಬೇರಿನ ಎಲೆ ರಸಕ್ಕೆ ಹಿಪ್ಪಿಯನ್ನು ಪುಡಿಮಾಡಿ ಸೇರಿಸಿ ಕುಡಿಯುವುದರಿಂದ ಕಡಿಮೆಯಾಗುವುದು.
ಸರ್ಪ ಸುತ್ತಿಗೆ ರಾಮಬಾಣ: ಇತ್ತೀಚೆಗೆ ಸರ್ಪ ಸುತ್ತಿಗೆ ಅನೇಕ ಔಷಧಿಗಳಿದ್ದರು ಈಶ್ವರ ಬೇರು ಮತ್ತು ನೀಲಿ ಸೊಪ್ಪನ್ನು ಸೇರಿಸಿ ಅರೆದು ಹಚ್ಚುವುದರಿಂದ ಉರಿ ನೋವು ಕಡಿಮೆಯಾಗುವುದು.
ದೃಷ್ಟಿ ದೋಷ ನಿವಾರಣೆ: ಇದರ ಬೇರನ್ನು ನಯವಾಗಿ ಚೂರ್ಣಮಾಡಿ ಅದಕ್ಕೆ ಅಪ್ಪಟ ಗೋರೋಜನ ಮತ್ತು ಚಂದನ ಸೇರಿಸಿ ತಿಲಕವಿಟ್ಟರೆ ದೃಷ್ಟಿ ದೋಷ ಪರಿಹಾರವಾಗುತ್ತದೆ.
ಮಲಬದ್ಧತೆ ಮತ್ತು ಮೂಲವ್ಯಾಧಿ ನಿವಾರಣೆ: ಈಶ್ವರಿಬೇರು, ಹಾವು ಮೆಕ್ಕೆ ಬೇರು ದಂತಿ, ತಿಗಡೆ ಕೊಮ್ಮೆ ಬೇರು, ಅಳಲೆಕಾಯಿ ಸಿಪ್ಪೆ, ಹಿಪ್ಪಲಿ ಇವುಗಳೆಲ್ಲವನ್ನು ಸಮತೂಕದಲ್ಲಿ ನಯವಾಗಿ ಚೂರ್ಣಿಸಬೇಕು. ನಂತರ 2 ರಿಂದ 2.5 ಗ್ರಾಂ ಚೂರ್ಣವನ್ನು ಸೇವಿಸಿ ಬಿಸಿನೀರು ಕುಡಿದರೆ ಮಲಬದ್ಧತೆ ಮತ್ತು ಮೂಲವ್ಯಾದಿ ನಿವಾರಣೆಯಾಗುತ್ತದೆ.

ಹೀಗೆ ಈಶ್ವರ ಬೇರು (Indian birthwort) ಮತ್ತು ಅದರ ಎಲೆಯಲ್ಲಿ ಅಡಗಿರುವ ದಿವ್ಯೌಷಧಿ ಅಪಾರ. ಅದರಲ್ಲಿ ತೀಕ್ಷ ಗುಣಗಳುಳ್ಳ ಮದ್ದಾಗಿದ್ದು, ಅನೇಕ ಕಾಯಿಲೆಗಳಿಗೆ ರಾಮಬಾಣವಾಗಿದೆ. ಯಾವುದೇ ಔಷಧಿಯಾದರು ಉಪಯೋಗಿಸು ಮುನ್ನ ಒಮ್ಮೆ ತಜ್ಞ ವೈದ್ಯರ ಸಲಹೆ ಪಡೆಯುವುದು ಸೂಕ್ತ.

Continue Reading

ದಿನದ ಸುದ್ದಿ

ಗೃಹಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಬದಲಾವಣೆ ಇಲ್ಲ

Published

on

ಸುದ್ದಿದಿನಡೆಸ್ಕ್:ಗೃಹಬಳಕೆಯ ಎಲ್‌ಪಿಜಿ ಸಿಲೆಂಡರ್ ಬೆಲೆಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯ ಸ್ಪಷ್ಟಪಡಿಸಿದೆ.

ಗೃಹ ಬಳಕೆ ಎಲ್‌ಪಿಜಿ ಸಿಲೆಂಡರ್ ಬೆಲೆಯನ್ನು 111 ರೂಪಾಯಿಗಳಷ್ಟು ಹೆಚ್ಚಿಸಲಾಗಿದೆ ಎಂಬ ಮಾಧ್ಯಮ ವರದಿಗಳನ್ನು ತಳ್ಳಿ ಹಾಕಿರುವ ಸಚಿವಾಲಯ, ವಾಣಿಜ್ಯ ಸಿಲೆಂಡರ್ ಬೆಲೆಯು ಅಂತಾರಾಷ್ಟ್ರೀಯ ಕಚ್ಚಾ ಅನಿಲ ಮತ್ತು ಸಂಬAಧಿತ ದರಗಳ ಮೇಲೆ ಅವಲಂಬಿತವಾಗಿದ್ದು, ಆಗಾಗ್ಗೆ ಮಾರುಕಟ್ಟೆಯ ದರಗಳು ಬದಲಾಗುತ್ತವೆ. ಆದರೆ, ಗೃಹ ಬಳಕೆಯ ಸಿಲೆಂಡರ್ ದರದಲ್ಲಿ ಯಾವುದೇ ವ್ಯತ್ಯಾಸವಿಲ್ಲ ಎಂದು ತಿಳಿಸಿದೆ.

ದೆಹಲಿಯಲ್ಲಿ 14.2 ಕೆಜಿ ಗೃಹ ಬಳಕೆ ಅಡುಗೆ ಅನಿಲ ಸಿಲೆಂಡರ್ ಬೆಲೆ 950 ರೂಪಾಯಿಯಾಗಿದ್ದು, ಪ್ರಧಾನಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಇದು 553 ರೂಪಾಯಿ ಬೆಲೆಯಲ್ಲಿ ಲಭ್ಯವಿದೆ. ಇದು ಆಗಸ್ಟ್ 2023 ರಿಂದ ನವೆಂಬರ್ 2025ರವರೆಗೆ ಹೋಲಿಸಿದರೆ, ಶೇಕಡಾ 39 ರಷ್ಟು ದರ ಕಡಿತವನ್ನು ಸೂಚಿಸುತ್ತದೆ. ಜನರಿಗೆ ಸುಸ್ಥಿರ ಇಂಧನ ಪೂರೈಕೆಗೆ ಒತ್ತು ನೀಡಲಾಗಿದ್ದು, ದರ ಬದಲಾವಣೆ ಇಲ್ಲ ಎಂದು ಸಚಿವಾಲಯ ಮಾಹಿತಿ ನೀಡಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending