Connect with us

ಲೈಫ್ ಸ್ಟೈಲ್

ಕಸದಿಂದ ರಸ | ಪ್ಲಾಸ್ಟಿಕ್ ಬಾಟಲ್ ಗಳನ್ನು ಹೀಗೂ ಬಳಸಿಕೊಳ್ಳಬಹುದು..!

Published

on

ಬಸ್ಸ್ಟಾಂಡ್, ರಸ್ತೆಯ ಬದಿಯಲ್ಲಿ, ಕಸದ ತೊಟ್ಟಿಗಳಲ್ಲಿ ಎನ್ನದೆ ನಿರೂಪಯುಕ್ತ ಕುಡಿಯುವ ನೀರಿನ ಬಾಟಲಿಗಳು ಎಲ್ಲಂದರಲ್ಲಿ ಬಿದ್ದು ಉರುಳಾಡುತ್ತಿರುತ್ತವೆ. ಇಂತಹ ಬಾಟಲಿಗಳಲಿಂದ ಕೃಷಿಯಲ್ಲಿ ಒಂದು ವಿಭಿನ್ನವಾದ ರೀತಿಯಲ್ಲಿ ಹೊಸ ರೂಪವನ್ನ ನೀಡಿಬಹುದಾಗಿದೆ. ಇವುಗಳಲ್ಲಿ ದಿನನಿತ್ಯ ಜೀವನದಲ್ಲಿ ಬೇಕಾದ ಸೊಪ್ಪನ್ನು ಬೆಳೆಸಿ ಎಳೆ ಚಿಗುರನ್ನು ನೋಡುತ್ತಾ ಸಂಭ್ರಮವನ್ನು ಆನಂದಿಸಬಹುದಾಗಿದೆ.

ಅದೊಂದು ದಿನ ಹುಬ್ಬಳ್ಳಿಯಿಂದ ವಿಜಯಪುರಕ್ಕೆ ಬಸ್‍ನಲ್ಲಿ ಬರುವಾಗ ನಡೆದ ಘಟನೆಯಿದು. ನನ್ನ ಪಕ್ಕ ಸೀಟ್‍ನಲ್ಲಿ ಹಾಗೂ ನುಂದಿನ ಸೀಟ್‍ನಲ್ಲಿ ಕೆಲವು ಹುಡಗ ಹುಡುಗಿರ ಗುಂಪು ಕುತುಕೊಂಡು ಮಾತನಾಡುತ್ತಿದ್ದರು. ನಾನು ಪುಸ್ತಕ ಓದುತ್ತಿದೆ. ನನಗೆ ಅವರ ಚರ್ಚೆ ಪುಸ್ತಕ ಓದಲು ಅಡಚಣೆ ಮಾಡಿದರು ಕೂಡಾ ಆಸಕ್ತಿದಾಯವಾಗಿತ್ತು. ಅದೇನು ಅಂತಿರಾ ಹಾಗಾದರೆ ಮುಂದೆ ಓದಿ.

ನಾನು ಸುಮ್ಮನೆ ಕುಳಿತು ಅವರ ಮಾತುಗಳನ್ನು ಕೇಳಿಸಿಕೊಂಡೆ. ನಂತರ ನಾನು ಕೂಡಾ ಅವರೊಂದಿಗೆ ಮಾತು ಬೆಳೆಸಿದಾಗ ನನಗಂತ್ತು ಒಂದು ಅದ್ಬುತವಾದ ವಿಷಯ ತಿಳಿದುಕೊಂಡೆ. ಅದರಲ್ಲು ಪ್ಲಾಸ್ಟಿಕ್ ಬಳಕೆಯಿಂದ ಮತ್ತು ಅದರ ಬರುಬಳಕೆ ಹೇಗೆ ಮಾಡಬೇಕು ಎನ್ನುವುದನ್ನು ಅರಿತುಕೊಂಡೆ. ಅದನೆ ನನ್ನ ಅನುಭವನ್ನು ನಿಮ್ಮ ಜೊತೆಗೆ ಹಂಚಿಕೊಳ್ಳುತ್ತಿದ್ದೇನೆ.
ಪ್ಲಾಸ್ಟಿಕ್ ಬಕಳಕೆಯು ತುಂಬಾ ಅಪಾಯಕಾರಿಯಾಗಿದೆ. ಶಿರಸಿಯ ತೋಟಗಾರಿಕಾ ಕಾಲೇಜಿನ ವಿದ್ಯಾರ್ಥಿಗಳು ನಿರುಪಯುಕ್ತ ಪ್ಲಾಸ್ಟಿಕ್ ಬಾಟಲಿಗಳ ಮರುಬಳಕೆ ಮಾಡುತ್ತಿದ್ದಾರೆ. ಒಂದು ತಿಂಗಳು ಗಲ್ಲಿ ಗಲ್ಲಿ ಸುತ್ತಿ, ಹೋಟೆಲ್‍ಗಳು, ಅಂಗಡಿಗಳಿಂದ ನೀರು, ತಂಪು ಪಾನೀಯ ಕುಡಿದು ಎಸೆದ ಬಾಟಲಿಗಳನ್ನು ಸಂಗ್ರಹಿಸಿದರು. ನಂತರ ಸಗ್ರಹಿಸಿದ ಬಾಟಲಿಗಳಿಗೆ ಜೀವಕಳೆ ತುಂಬಿ, ಪರಿಸರ ಮಾಲಿನ್ಯ ತಡೆಗಟ್ಟಲು ವಿದ್ಯಾರ್ಥಿಗಳ ಪುಟ್ಟ ಪ್ರಯತ್ನನೊಂದಿಗೆ ಅಡಿಗಲ್ಲನ್ನು ಹಾಕಿದ್ದಾರೆ.

ಕಾಲೇಜಿನ ಎದುರು ಇರುವ ನಾಲ್ಕು ಕಂಬಗಳ ನಡುವೆ ವರ್ಟಿಕಲ್ ಗಾರ್ಡನ್ ನಿರ್ಮಿಸಿದ್ದಾರೆ. ಕಾಲೇಜಿಗೆ ಭೇಟಿ ನೀಡುವವರ ಗಮನವನ್ನು ಇಲ್ಲಿ ಜೋತಾಡುವ ದಾರಗಳ ನಡುವೆ ಪ್ಲಾಸ್ಟಿಕ್ ಬಾಟಲಿಗಳಲ್ಲಿ ಸೊಂಪಾಗಿ ಬೆಳೆದಿರುವ ಸೊಪ್ಪುಗಳು ಸೆಳೆಯುತ್ತವೆ. ಅರ್ಧ ಕಟ್ ಮಾಡಿರುವ ಬಾಟಲಿಗಳಲ್ಲಿ ಮೆಂತೆ, ಹರಿವೆ, ಪಾಲಕ್, ಸಬ್ಬಸಿಗೆ, ಈರುಳ್ಳಿ, ಕೊತ್ತಂಬರಿ ಬೀಜ ಬಿತ್ತಿ, ಸೊಪ್ಪು ಬೆಳೆಸುತ್ತಿದ್ದಾರೆ.

`ಇದಕ್ಕೇನು ಹೆಚ್ಚು ಶ್ರಮವಿಲ್ಲ. ಅಂಗಡಿ ಮುಂಗಟ್ಟುಗಳಿಂದ ಸಂಗ್ರಹಿಸಿ ತಂದಿದ್ದ ಪ್ಲಾಸ್ಟಿಕ್ ಬಾಟಲಿಗಳ ಹೊಟ್ಟೆ ಸಿಳಿ, ಅದರಲ್ಲಿ ತೆಂಗಿನ ನಾರಿನ ಪುಡಿ ತುಂಬಿ, ಬೀಜ ಬಿತ್ತನೆ ಮಾಡಬೇಕು. ನಾರಿನ ಪುಡಿಗೆ ತೇವಾಂಶ ಹಿಡಿದಿಟ್ಟುಕೊಳ್ಳುವ ಗುಣವಿದೆ. ಹೀಗಾಗಿ, ಎರಡು ದಿನಕ್ಕೊಮ್ಮೆ ನೀರು ಕೊಟ್ಟರೂ ಸಾಕು. ಬೀಜ ಹಾಕಿದ 8ರಿಂದ10 ದಿನಗಳಲ್ಲಿ ಸಸಿಗಳು ಮೇಲೇಳುತ್ತವೆ. ಎನ್‍ಪಿಕೆ ಗೊಬ್ಬರವನ್ನು (19:19:19) ಸಿಂಪಡಣೆ ಮಾಡಿದರೆ, ಸಸಿಗಳು ಆರೋಗ್ಯಕರವಾಗಿ ಬೆಳೆಯುತ್ತವೆ. ಇದು ಸುಲಭವಾಗಿ ನೀರಿನಲ್ಲಿ ಕರಗುತ್ತದೆ. ಹಾಗಾಗಿ ಸಿಂಪಡಣೆಯೂ ಸುಲಭ’ ಎಂದು ವಿದ್ಯಾರ್ಥಿಗಳು ಅಭಿಪ್ರಾಯ ಪಡುತ್ತಾರೆ.

ಬಾಟಲಿಯ ಪುನರ್ ಬಳಕೆಯ ವಿಚಾರ ಬಂದಿದ್ದು ಹೇಗೆ ಎಂಬ ಪ್ರಶ್ನೆಯನ್ನು ಮುಂದಿಟ್ಟಾಗ, ಇಸ್ರೇಲ್ ವಿಜ್ಞಾನ ಕೇಂದ್ರದಲ್ಲಿ ನೋಡಿದ್ದ ಬಾಟಲಿಯ ಮರು ಬಳಕೆಯ ಪ್ರಯೋಗವನ್ನು ಕಾಲೇಜಿನಲ್ಲಿ ಮಾಡೋಣವೆಂದು `ನಮ್ಮ ತರಕಾರಿ ವಿಜ್ಞಾನ ವಿಭಾಗದ ಸಹಾಯಕ ಪ್ರಾಧ್ಯಾಪಕ ಅವರು ನಮ್ಮನ್ನು ಹುರಿದುಂಬಿಸಿದರು ಎಂದು ಹೇಳಿದರು. ವಿದ್ಯಾರ್ಥಿಗಳೆಲ್ಲರು ಪ್ರತ್ಯೇಕವಾಗಿ ತಂಡ ಕಟ್ಟಿಕೊಂಡು ಬಾಟಲಿಗಳ ರಾಶಿ ತಂದು ಸುರಿದೆವು. ಈಗ ನೋಡಿ, ಅವೆಲ್ಲ ಶೋ ಪೀಸ್‍ಗಳಂತೆ ಕಾಣುತ್ತಿವೆ’ ಎಂದು ಅವರು ಕಾಲೇಜಿನ ಕಾರಿಡಾರ್ ಕಟ್ಟೆಯಂಚನ್ನು ಆವರಿಸಿಕೊಂಡಿದ್ದ ಬಾಟಲಿ ಪಾಟ್‍ನೆಡೆಗೆ ಕೈತೋರಿದರು ಎಂದು ಹೇಳಿದರು.

ಕೆಲವು ವರ್ಷಗಳ ಹಿಂದೆ ಅಂಗಳದಲ್ಲಿದ್ದ ಕೈತೋಟ್ (ಗಾರ್ಡನ್) ಈಗ ಮಹಡಿಯನ್ನೇರಿದೆ. ಕಾರಿಡಾರಿನ ಸುತ್ತ, ಟೆರೇಸ್ ಮೇಲಿನ ನೆರಳಿನ ಜಾಗದಲ್ಲೆಲ್ಲ ಜಲಪಾತದಂತೆ ಇಳಿಬಿದ್ದಿರುವ ಬಾಟಲಿಗಳು ಕಾಣುತ್ತವೆ.

ಮಳೆಗಾಲದಲ್ಲಿ ತೆರೆದ ಬಯಲಿನಲ್ಲಿ ತರಕಾರಿ, ಸೊಪ್ಪು ಬೆಳೆಸಿದರೆ, ಮಲೆನಾಡಿನ ಮಳೆಗೆ ಕೊಳೆಯುವ ಸಾಧ್ಯತೆ ಹೆಚ್ಚು. ಹಾಗೆಂದು, ಚಾವಣಿ ಕೆಳಗೆ ಸುಲಭದಲ್ಲಿ ಬೆಳೆಬಹುದು. ಬಾಟಲಿ ಗಟ್ಟಿಯಿದ್ದರೆ ಎರಡರಿಂದ ಮೂರು ಬೆಳೆಯನ್ನು ಆರಾಮವಾಗಿ ತೆಗೆಯಬಹುದು. ಇನ್ನೂ ಒಂದು ಹೆಜ್ಜೆ ಮುಂದಿಟ್ಟ ವಿದ್ಯಾರ್ಥಿಗಳು, ತೆಂಗಿನ ಚಿಪ್ಪಿನಲ್ಲೂ ಸಸಿ ಬೆಳೆಸಲು ತಯಾರಿ ನಡೆಸಿದ್ದಾರೆ. ತೆಂಗಿನ ಚಿಪ್ಪು ನೋಟದಲ್ಲೂ ಕಲಾತ್ಮಕ ಎಂದರು, ಅಲ್ಲಿನ ವಿದ್ಯಾರ್ಥಿಗಳು.

ಪೇಟೆಯಲ್ಲಿ ರಾಸಾಯನಿಕ ರಹಿತ ತರಕಾರಿ ಹುಡುಕುವುದೇ ಕಷ್ಟ. ರಾಸಾಯನಿಕ ಸಿಂಪಡಿಸಿದ ತರಕಾರಿ ಸೇವನೆ ಕ್ಯಾನ್ಸರ್‍ನಂತಹ ಗಂಭೀರ ಕಾಯಿಲೆಗೆ ಕಾರಣವಾಗಬಹುದು. ಸಾಧ್ಯವಾದಷ್ಟು ಮನೆಯಲ್ಲೇ ಬೆಳೆಸಿಕೊಂಡರೆ, ಸಾವಯವ ತರಕಾರಿ ತಿಂದ ಸಮಾಧಾನವೂ ಸಿಕ್ಕೀತು. ನಗರದಲ್ಲಿ ತರಕಾರಿ ಬೆಳೆಸಲು ಜಾಗ ಇಲ್ಲದಿದ್ದರೆ, ಪ್ಲಾಸ್ಟಿಕ್ ಬಾಟಲಿಯಲ್ಲಿ ಆಳ ಬೇರು ಬಿಡದಂತಹ ಸೊಪ್ಪು ಬೆಳೆಯಬಹುದು. ಎಣ್ಣೆ ಕ್ಯಾನ್, ಒಡೆದ ಬಕೆಟ್, ಪೇಂಟ್ ಡಬ್ಬ, ಸಿಮೆಂಟ್ ಚೀಲ ಹೀಗೆ ಎಸೆಯುವ ಪ್ಲಾಸ್ಟಿಕ್ ಅನ್ನು ಟೆರೇಸ್ ಮೇಲಿಟ್ಟು ತರಕಾರಿ ಗಿಡಗಳ ಬೆಳೆಸಬಹುದು ಎಂಬುದು ಅಲ್ಲಿನ ಪ್ರಾಧ್ಯಾಪಕರು ಸಲಹೆ ನೀಡುತ್ತಾರೆ.

ಹೀಗೆ ಬೆಳೆಯುವಾಗ ಮಣ್ಣನ್ನು ಉಪಯೋಗಿಸದಿರುವುದು ಲೇಸು. ತೆಂಗಿನ ನಾರಿನ ಪುಡಿ ಹಗುರ. ಇದು ಬಾಟಲಿಗೂ ಭಾರವಲ್ಲ, ಟೆರೇಸ್ ಮೇಲಿಟ್ಟರೂ ಬಾರಯಾಗುವುದಿಲ್ಲ ಜೊತೆಗೆ ದುಡ್ಡಿಗೂ ಕಷ್ಟವಿಲ್ಲ. ಮಾರ್ಕೆಟ್‍ನಲ್ಲಿ ಸುಲಭವಾಗಿ ಸಿಗುವ ನಾರಿನ ಪುಡಿ ಕೆ.ಜಿ.ಯೊಂದಕ್ಕೆ 10 ರೂಪಾಯಿಯಷ್ಟೇ, ಎಂದು ಹೇಳುವುದನ್ನು ಅವರು ಮರೆಯಲಿಲ್ಲ.

ಕಾಂಚನಾ. ಬಸವರಜ. ಪೂಜಾರಿ
3ನೇ ಸೆಮಿಸ್ಟರ್ ವಿದ್ಯಾರ್ಥಿನಿ
ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ
ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯ, ತೋರವಿ
ವಿಜಯಪುರ

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಆಧುನಿಕ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜೂನ್ 15 ಮತ್ತು 16 ರಂದು ಆಯೋಜಿಸಲಾಗಿದೆ.

ಆಸಕ್ತ ರೈತರು ಆಧಾರ್ ಕಾರ್ಡ್ ಜೆರಾಕ್ಸ್, 2 ಪಾಸ್ ಪೋರ್ಟ್ ಸೈಜ್ ಪೋಟೋ ಮತ್ತು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರು ಜಾತಿ ಪ್ರಮಾಣ ಪತ್ರದ ಜೆರಾಕ್ಸ್ ಪ್ರತಿಯೊಂದಿಗೆ ಹಾಜರಾಗಬೇಕು. ತರಬೇತಿ ಕಾರ್ಯಕ್ರಮಕ್ಕೆ ಯಾವುದೇ ಪ್ರೋತ್ಸಾಹಧನ ಮತ್ತು ಭತ್ಯೆಗಳನ್ನು ನೀಡಲಾಗುವುದಿಲ್ಲ.

ಹೆಚ್ಚಿನ ಮಾಹಿತಿಗಾಗಿ ಪಶುಪಾಲನಾ ಮತ್ತು ಪಶು ವೈದ್ಯಕೀಯ ತರಬೇತಿ ಕೇಂದ್ರ, ದಾವಣಗೆರೆ ಕಚೇರಿ ದೂ.ಸಂ: 08192-233787 ಸಂಪರ್ಕಿಸಿ ಮಾಹಿತಿ ಪಡೆದುಕೊಳ್ಳಬಹುದು ಎಂದು ಪಶುವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

10 ಮುಖ್ಯ ಅಂಶಗಳನ್ನು ಪಾಲಿಸಿ ; ಸಕ್ಕರೆ ಕಾಯಿಲೆಗೆ ಗುಡ್ ಬೈ ಹೇಳಿ..

Published

on

1. ಸಮತೋಲಿತ ಆಹಾರ (Balanced Diet): ನಿಮ್ಮ ಆಹಾರದಲ್ಲಿ ಹೆಚ್ಚು ನಾರಿನಂಶವಿರುವ (fiber) ತರಕಾರಿ, ಸೊಪ್ಪು, ಮೊಳಕೆ ಬರಿಸಿದ ಕಾಳುಗಳು ಮತ್ತು ಸಿರಿಧಾನ್ಯಗಳನ್ನು ಬಳಸಿ. ಕಾರ್ಬೋಹೈಡ್ರೇಟ್ ಹಾಗೂ ಎಣ್ಣೆಯಂಶವಿರುವ ಆಹಾರವನ್ನು ಕಡಿಮೆ ಮಾಡಿ.

2. ಸಿಹಿ ಪದಾರ್ಥಗಳ ನಿಯಂತ್ರಣ (Avoid Sweets): ಸಕ್ಕರೆ, ಬೆಲ್ಲ, ಬೇಕರಿ ತಿಂಡಿಗಳು, ಐಸ್‌ಕ್ರೀಮ್ ಮತ್ತು ಕೃತಕ ಸಕ್ಕರೆ ಇರುವ ತಂಪು ಪಾನೀಯಗಳ ಬಳಕೆಯನ್ನು ಸಂಪೂರ್ಣವಾಗಿ ಕಡಿಮೆ ಮಾಡಿ ಅಥವಾ ದೂರವಿಡಿ.

3. ದಿನನಿತ್ಯದ ವ್ಯಾಯಾಮ (Regular Exercise): ಪ್ರತಿದಿನ ಕನಿಷ್ಠ 30 ರಿಂದ 45 ನಿಮಿಷಗಳ ಕಾಲ ವೇಗದ ನಡಿಗೆ (brisk walking), ಸೈಕ್ಲಿಂಗ್, ಈಜು ಅಥವಾ ಯೋಗ ಮಾಡುವುದರಿಂದ ರಕ್ತದಲ್ಲಿನ ಸಕ್ಕರೆ ಮಟ್ಟ ನಿಯಂತ್ರಣಕ್ಕೆ ಬರುತ್ತದೆ.

4. ದೇಹದ ತೂಕದ ನಿರ್ವಹಣೆ (Weight Management): ಅತಿಯಾದ ದೇಹದ ತೂಕವು ಇನ್ಸುಲಿನ್ ಕಾರ್ಯಕ್ಷಮತೆಯನ್ನು ಕುಂಠಿತಗೊಳಿಸುತ್ತದೆ. ಆದ್ದರಿಂದ ತೂಕವನ್ನು ಆರೋಗ್ಯಕರ ಮಿತಿಯಲ್ಲಿ ಇಟ್ಟುಕೊಳ್ಳುವುದು ಅತ್ಯಗತ್ಯ.

5. ನಿಯಮಿತ ರಕ್ತದ ಪರೀಕ್ಷೆ (Regular Blood Sugar Check): ವೈದ್ಯರ ಸಲಹೆಯಂತೆ ಕಾಲಕಾಲಕ್ಕೆ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು (Fasting ಮತ್ತು Post Prandial) ಹಾಗೂ ಮೂರು ತಿಂಗಳ ಸರಾಸರಿ ತಿಳಿಸುವ HbA1c ಪರೀಕ್ಷೆಯನ್ನು ಮಾಡಿಸಿಕೊಳ್ಳಿ.

6. ಸಮಯಕ್ಕೆ ಸರಿಯಾಗಿ ಔಷಧಿ ಸೇವನೆ (Timely Medication): ವೈದ್ಯರು ಸೂಚಿಸಿದ ಮಾತ್ರೆಗಳನ್ನು ಅಥವಾ ಇನ್ಸುಲಿನ್ ಅನ್ನು ನಿಗದಿತ ಸಮಯಕ್ಕೆ ತೆಗೆದುಕೊಳ್ಳಿ. ಸ್ವಂತ ನಿರ್ಧಾರದಿಂದ ಔಷಧಿಯನ್ನು ನಿಲ್ಲಿಸಬೇಡಿ.

7. ಮಾನಸಿಕ ಒತ್ತಡದ ನಿರ್ವಹಣೆ (Stress Management): ಅತಿಯಾದ ಮಾನಸಿಕ ಒತ್ತಡವು ದೇಹದಲ್ಲಿ ಸಕ್ಕರೆ ಮಟ್ಟವನ್ನು ಹೆಚ್ಚಿಸುವ ಹಾರ್ಮೋನ್‌ಗಳನ್ನು ಬಿಡುಗಡೆ ಮಾಡುತ್ತದೆ. ಒತ್ತಡ ಕಡಿಮೆ ಮಾಡಿಕೊಳ್ಳಲು ಧ್ಯಾನ (Meditation) ಅಥವಾ ಹವ್ಯಾಸಗಳಲ್ಲಿ ತೊಡಗಿಕೊಳ್ಳಿ.

8. ಪೂರಕ ನೀರು ಕುಡಿಯುವುದು (Stay Hydrated): ದಿನವಿಡೀ ಸಾಕಷ್ಟು ಪ್ರಮಾಣದಲ್ಲಿ ನೀರು ಕುಡಿಯಿರಿ. ಇದು ದೇಹದಲ್ಲಿರುವ ಹೆಚ್ಚುವರಿ ಗ್ಲೂಕೋಸ್ ಮೂತ್ರದ ಮೂಲಕ ಹೊರಹೋಗಲು ಸಹಾಯ ಮಾಡುತ್ತದೆ.

9. ಉತ್ತಮ ನಿದ್ರೆ (Good Sleep): ಪ್ರತಿದಿನ ರಾತ್ರಿ 7 ರಿಂದ 8 ಗಂಟೆಗಳ ಕಾಲ ಶಾಂತಿಯುತವಾದ ನಿದ್ರೆ ಮಾಡುವುದು ದೇಹದ ಚಯಾಪಚಯ ಕ್ರಿಯೆ (Metabolism) ಮತ್ತು ಹಾರ್ಮೋನ್‌ಗಳ ಸಮತೋಲನಕ್ಕೆ ಬಹಳ ಮುಖ್ಯ.

10. ದುರಭ್ಯಾಸಗಳಿಂದ ದೂರವಿರಿ (Avoid Smoking and Alcohol): ಧೂಮಪಾನ ಮತ್ತು ಮದ್ಯಪಾನವು ಸಕ್ಕರೆ ಕಾಯಿಲೆಯ ತೊಂದರೆಗಳನ್ನು (ಹೃದಯ ಮತ್ತು ನರಗಳ ಸಮಸ್ಯೆ) ಮತ್ತಷ್ಟು ಹೆಚ್ಚು ಮಾಡುವುದರಿಂದ ಇವುಗಳಿಂದ ದೂರವಿರುವುದು ಒಳ್ಳೆಯದು.

ಗಮನಿಸಿ: ಈ ಮೇಲಿನ ಮಾಹಿತಿ ರೋಗದ ನಿರ್ವಹಣೆಗೆ ಸಾಮಾನ್ಯ ಮಾರ್ಗದರ್ಶನವಾಗಿದೆ. ಪ್ರತಿಯೊಬ್ಬರ ದೇಹ ಪ್ರಕೃತಿ ವಿಭಿನ್ನವಾಗಿರುವುದರಿಂದ, ನಿಮ್ಮ ವೈದ್ಯರ ವೈಯಕ್ತಿಕ ಸಲಹೆ ಮತ್ತು ಚಿಕಿತ್ಸೆಯ ಕ್ರಮವೇ ಅಂತಿಮ ಹಾಗೂ ಸುರಕ್ಷಿತ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

Published

on

ಗಿರೀಶ್ ಮುತ್ತು

ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು

ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.

ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.

ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್‌ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.

ಗರಿಕೆ ರಸದ ಪ್ರಯೋಜನಗಳು

1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.

2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ

4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.

5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್‌ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.

6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.

ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?

*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.

* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.

* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.

* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.

* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading

Trending