Connect with us

ದಿನದ ಸುದ್ದಿ

ಪ್ರವಾಹ ವಿಚಾರದಲ್ಲಿ ರಾಜಕೀಯ ಮಾಡಲ್ಲ, ಜನರ ಸಮಸ್ಯೆ ಬಗೆಹರಿಸಲು ಸರ್ಕಾರಕ್ಕೆ ನಮ್ಮ ಬೆಂಬಲವಿದೆ : ಡಿ.ಕೆ. ಶಿವಕುಮಾರ್

Published

on

ಸುದ್ದಿದಿನ,ಹುಬ್ಬಳ್ಳಿ : ಪ್ರವಾಹ ಸಂತ್ರಸ್ತರ ಪರಿಹಾರ ವಿಚಾರದಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಈ ವಿಚಾರದಲ್ಲಿ ನಾವು ಪಕ್ಷಭೇದ ಮರೆತುಜನರ ನೋವಿಗೆ ಸ್ಪಂದಿಸಬೇಕಿದೆ. ಈ ಪ್ರವಾಹವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂದು ಕೇಂದ್ರಕ್ಕೆ ಮನವಿ ಮಾಡುತ್ತೇನೆ ಎಂದು ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಸಲುವಾಗಿ ಉತ್ತರ ಕರ್ನಾಟಕ ಜಿಲ್ಲೆಗಳ ಪ್ರವಾಸ ಕೈಗೊಂಡಿರುವ ಡಿಕೆ ಶಿವಕುಮಾರ್, ಸೋಮವಾರ ಹುಬ್ಬಳ್ಳಿಗೆ ಆಗಮಿಸಿದರು. ಇಲ್ಲಿನ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ಪರಿಸ್ಥಿತಿಯಲ್ಲಿ ನಾವು ರಾಜ್ಯ ಸರ್ಕಾರಕ್ಕೆ ಸಂಪೂರ್ಣ ಸಹಕಾರ ನೀಡುತ್ತೇವೆ ಎಂಬ ಭರವಸೆ ನೀಡಿದರು.

‘ಪಕ್ಷಬೇಧ ಮರೆತು ಜನರಿಗೆ ಸ್ಪಂಧಿಸುವ ಉದ್ದೇಶದೊಂದಿಗೆ ನಾನು ಆಗಮಿಸಿದ್ದೇನೆ. ಮೊದಲು ಕುಂದಗೋಳಕ್ಕೆ ಭೇಟಿ ನೀಡುತ್ತೇನೆ. ನಂತರ ಜಿಲ್ಲಾ ನಾಯಕರು ಎಲ್ಲಿ ಹೇಳುತ್ತಾರೋ ಅಲ್ಲಿ ಪ್ರವಾಸ ಮಾಡುತ್ತೇನೆ. ನಂತರ ಸಂಜೆ ಬೆಳಗಾವಿಗೆ ತೆರಳಿ ಅಲ್ಲಿನ ನಾಯಕರು ಯಾವ ಪ್ರದೇಶ ಸೂಚಿಸುತ್ತಾರೋ ಅಲ್ಲಿಗೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ’ ಎಂದರು.

ಕೆಲವು ಕಡೆ ಪ್ರವಾಹದಿಂದ 30 ಸಾವಿರ ಕೋಟಿ ನಷ್ಟ ಆಗಿದೆ ಎಂದರೆ ಮತ್ತೆ ಕೆಲವು ಕಡೆ 40 ಸಾವಿರ ಕೋಟಿ ನಷ್ಟ ಆಗಿದೆ ಎಂದು ಸರ್ಕಾರ ಹೇಳುತ್ತಿದೆ. ಹೀಗಾಗಿ ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು. ರಾಜ್ಯ ಮತ್ತು ಕೇಂದ್ರಗಳಲ್ಲಿ ಅವರದೇ ಸರ್ಕಾರ ಇದೆ. ಕೇಂದ್ರಗಳಲ್ಲಿ ಮಂತ್ರಿಗಳಿದ್ದಾರೆ. ಅವರೆಲ್ಲರೂ ಜನರಿಗೆ ಸೂಕ್ತ ಪರಿಹಾರ ನೀಡಬೇಕು. ಇದಕ್ಕೆ ಬೇಕಾದ ಸಹಕಾರವನ್ನು ನಾವು ನೀಡುತ್ತೇವೆ. ಸರ್ವಪಕ್ಷ ನಿಯೋಗ ಕರೆದರೆ ನಾವು ಕೂಡ ಬಂದು ಕೇಂದ್ರದ ಮೇಲೆ ಒತ್ತಡ ಹಾಕುತ್ತೇವೆ. ಅವರದು ಸಂಪೂರ್ಣ ಬಹುಮತ ಇರುವ ಶಕ್ತಿಶಾಲಿ ಸರ್ಕಾರ. ಹೀಗಾಗಿ ಅವರು ರಾಜ್ಯದ ಜನತೆಗೆ ಒಳ್ಳೆಯದು ಮಾಡಲಿ ನಾವು ಅದಕ್ಕೆ ಬೆಂಬಲ ನೀಡುತ್ತೇವೆ ಎಂದರು.

ಸರ್ಕಾರ ಅದು ಮಾಡಿಲ್ಲ ಇದು ಮಾಡಿಲ್ಲ, ಯಾರೂ ಇಲ್ಲ ಅಂತಾ ಮಾತನಾಡುವ ಸಂದರ್ಭ ಇದಲ್ಲ. ಸಮಯ ಬಂದಾಗ ನೀವು ಮಾತಾಡಿ, ನಾವು ಮಾತನಾಡುತ್ತೇವೆ. ಈಗಿನ ಪರಿಸ್ಥಿತಿಯಲ್ಲಿ ಪಕ್ಷಭೇದ ಮರೆತು ಸಂತ್ರಸ್ತರನ್ನು ಕಾಪಾಡಲು ಕೈಜೋಡಿಸಬೇಕು ಎಂದು ನಮ್ಮ ಕಾರ್ಯಕರ್ತರಿಗೂ ಸೂಚನೆ ನೀಡಿದ್ದೇವೆ. ರಾಜ್ಯ ಸಂಕಷ್ಟದಲ್ಲಿರುವ ಸಂದರ್ಭದಲ್ಲಿ ಸಾರ್ವಜನಿಕರು ಬಹಳ ಪ್ರಮಾಣದಲ್ಲಿ ಸಹಾಯ ಮಾಡುತ್ತಿದ್ದಾರೆ. ಮಾನವೀಯತೆಯಿಂದ ಸ್ಪಂದಿಸುತ್ತಿರುವ ಅವರೆಲ್ಲರಿಗೂ ವೈಯಕ್ತಿಕವಾಗಿ ಹಾಗೂ ಪಕ್ಷದ ಪರವಾಗಿ ಅವರಿಗೆ ನಾವು ಅಭಿನಂದಿಸುತ್ತೇನೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಯಡಿಯೂರಪ್ಪನವರಿಗೆ ನಾನು ಒಂದು ಕಿವಿ ಮಾತು ಹೇಳಲು ಬಯಸುತ್ತೇನೆ. ಸಂತ್ರಸ್ತರ ನೆರವಿನ ಹೆಸರು ಹೇಳಿಕೊಂಡು ಕೆಲವರು ಹಣ ದೇಣಿಗೆ ಪಡೆಯಲು ಡಬ್ಬ ಹಿಡಿದು ರಸ್ತೆಗೆ ಇಳಿದಿದ್ದಾರೆ. ನಿಜವಾಗಿಯೂ ಸಂತ್ರಸ್ತರಿಗೆ ಸಹಾಯ ಮಾಡಲು ಇಚ್ಛಿಸುವವರು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ನೋಂದಣಿ ಮಾಡಿ, ತಾಲೂಕು ಕಚೇರಿಯಲ್ಲಿ ಮಾಹಿತಿ ನೀಡಿ ಹಣ ಸಂಗ್ರಹಿಸುವಂತಾಗಬೇಕು. ಅನಗತ್ಯವಾಗಿ ಹಣ ವಸೂಲಿ ಮಾಡುವ ಕಾರ್ಯಕ್ಕೆ ಬ್ರೇಕ್ ಹಾಕಿ ಜನರು ಮಾಡುವ ಸಹಾಯ ನೇರವಾಗಿ ಅಗತ್ಯವಿರುವವರಿಗೆ ತಲುಪಬೇಕು. ಹೀಗಾಗಿ ಮುಖ್ಯಮಂತ್ರಿಗಳು ಈ ವಿಚಾರವಾಗಿ ಅಧಿಕಾರಿಗಳಿಗೆ ಸೂಚನೆ ನೀಡಿ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡುತ್ತೇನೆ.

ಇನ್ನು ಈ ಬಾರಿ ಸ್ವಾತಂತ್ರ್ಯ ದಿನಾಚರಣೆ ದಿನ ಅಧಿಕಾರಿಗಳೇ ಧ್ವಜಾರೋಹಣ ಮಾಡಲಿದ್ದಾರೆ ಎಂಬ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ‘ನಮ್ಮ ಹಿರಿಯರು ಹೋರಾಟ ಮಾಡಿ ನಮಗೆ ಸ್ವಾತಂತ್ರ ತಂದುಕೊಟ್ಟಿದ್ದಾರೆ. ಅದರ ಪ್ರತೀಕವಾಗಿ ನಾವು ನಮ್ಮ ತ್ರಿವರ್ಣ ಧ್ವಜವನ್ನು ಹಾರಿಸುತ್ತೇವೆ. ಕಳೆದ 70 ವರ್ಷಗಳಲ್ಲಿ ಜಿಲ್ಲಾ ಉಸ್ತುವಾರಿ ಸಚಿವರುಗಳು ಆಯಾ ಜಿಲ್ಲೆಗಳಲ್ಲಿ ಧ್ವಜಾರೋಹಣ ಮಾಡುತ್ತಿದ್ದರು. ಆದರೆ ಇದೇ ಮೊದಲ ಬಾರಿಗೆ ಇಂತಹ ಪರಿಸ್ಥಿತಿ ಬಂದಿದೆ. 16ನೇ ತಾರಿಕಿನ ನಂತರ ಸಂಪುಟ ರಚನೆ ಮಾಡುತ್ತೇವೆ ಎಂದು ಯಡಿಯೂರಪ್ಪನವರು ಹೇಳಿದ್ದಾರೆ. ನಾವು ಸರ್ಕಾರದ ವಿಚಾರದಲ್ಲಿ ರಾಜಕೀಯ ಮಾಡಲು ಇಷ್ಟವಿಲ್ಲ. ಆದರೆ ಮಾಧ್ಯಮದವರು ಪ್ರಶ್ನೆ ಕೇಳಿದ್ದಕ್ಕಾಗಿ ನಾನು ಉತ್ತರಿಸುತ್ತಿದ್ದೇನೆ’ ಎಂದರು.

ಪ್ರವಾಹ ವಿಚಾರದಲ್ಲಿ ರಾಜಕೀಯ ಮಾಡಲ್ಲ, ಜನರ ಸಮಸ್ಯೆ ಬಗೆಹರಿಸಲು ಸರ್ಕಾರಕ್ಕೆ ನಮ್ಮ ಬೆಂಬಲವಿದೆ: ಡಿಕೆ ಶಿವಕುಮಾರ್ಹುಬ್ಬಳ್ಳಿ:ಪ್ರವಾಹ…

Posted by Udayakala News on Monday, 12 August 2019

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ

Published

on

ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.

ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.

ವಿಭಾಗವಾರು ಫಲಿತಾಂಶದ ವಿಶ್ಲೇಷಣೆ

ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.

ವಾಣಿಜ್ಯ ವಿಭಾಗ (Commerce)

ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.

ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.

ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ

Published

on

ಸುದ್ದಿದಿನ,ದಾವಣಗೆರೆ:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರಕ್ಕೆ ಇಂದು ನಡೆದ ಉಪ ಚುನಾವಣೆಯು ಅತ್ಯಂತ ಶಾಂತಿಯುತವಾಗಿ ಮುಕ್ತಾಯಗೊಂಡಿದ್ದು, ಒಟ್ಟಾರೆ ಶೇ. 68.55ರಷ್ಟು ಮತದಾನ ದಾಖಲಾಗಿದೆ.

ಬೆಳಿಗ್ಗೆಯಿಂದಲೇ ಮತಗಟ್ಟೆಗಳ ಮುಂದೆ ಮತದಾರರು ಉತ್ಸಾಹದಿಂದ ಸರದಿಯಲ್ಲಿ ನಿಂತು ತಮ್ಮ ಹಕ್ಕನ್ನು ಚಲಾಯಿಸಿದರು. ಚುನಾವಣಾ ಆಯೋಗದ ಕಟ್ಟುನಿಟ್ಟಿನ ಕ್ರಮಗಳು ಹಾಗೂ ಪೊಲೀಸ್ ಬಂದೋಬಸ್ತ್ನಿಂದಾಗಿ ಯಾವುದೇ ಅಹಿತಕರ ಘಟನೆಗಳಿಲ್ಲದೆ ಮತದಾನ ಪ್ರಕ್ರಿಯೆ ಯಶಸ್ವಿಯಾಗಿ ನಡೆಯಿತು.

ಯುವಕರು ಹಾಗೂ ಹಿರಿಯ ನಾಗರಿಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಮತದಾನ ಮಾಡಿದ್ದು ಕಂಡುಬಂದಿತು. ಚುನಾವಣಾ ಸಿಬ್ಬಂದಿ ಹಾಗೂ ಭದ್ರತಾ ಪಡೆಯ ಸಹಕಾರದೊಂದಿಗೆ ಮತದಾನ ಪ್ರಕ್ರಿಯೆಯು ಸುಗಮವಾಗಿ ಜರುಗಿದೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ

Published

on

ಸುದ್ದಿದಿನಡೆಸ್ಕ್:ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಹದಡಿ ಗ್ರಾಮದ ಮತಗಟ್ಟೆಯಲ್ಲಿ ತೃತೀಯ ಲಿಂಗತ್ವ ಮತದಾರರು ಮತಗಟ್ಟೆಗೆ ಆಗಮಿಸಿ ಸಂತೋಷದಿಂದ ಮತ ಚಲಾಯಿಸಿದರು.

ಸಮಾಜದ ಪ್ರತಿಯೊಬ್ಬರಿಗೂ ಸಮಾನ ಹಕ್ಕು ಎಂಬ ಸಂದೇಶವನ್ನು ಸಾರಿದ ಕ್ಷಣ! ತಮ್ಮ ಅಮೂಲ್ಯ ಮತದಾನದ ಮೂಲಕ ಪ್ರಜಾಪ್ರಭುತ್ವವನ್ನು ಬಲಪಡಿಸಿದ ತೃತೀಯ ಲಿಂಗತ್ವ ಮತದಾರರಿಗೆ ಅಭಿನಂದನೆಗಳು ಎಂದು ಜಿಲ್ಲಾ ಪಂಚಾಯತ್ ಸಿಇಓ ತಿಳಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending