ರಾಜಕೀಯ
ಸ್ವಾತಂತ್ರ್ಯದ ಮೇಲೆ ಪ್ರಹಾರಗಳು- ಈ ಆಗಸ್ಟ್ 15 ರಂದುಮೋದಿ-ಷಾ ಜೋಡಿಯ ಕಾಶ್ಮೀರ ಅತ್ಯಾಚಾರದ ಸಂದೇಶ
- ಮೋದಿ ಸರಕಾರ ಭಾರತದೊಂದಿಗೆ “ಜಮ್ಮು ಮತ್ತು ಕಾಶ್ಮೀರವನ್ನು ಸಮಗ್ರೀಕರಿಸಿರುವುದು” ತಮ್ಮ ಮಹಾಸಾಧನೆ ಎಂದು ಡಂಗುರ ಹೊಡೆಯುತ್ತಿದ್ದರೆ, ಅತ್ತ ಕಾಶ್ಮೀರದ ಜನತೆ, ಭಾರತದ ಇತರರೊಂದಿಗೆ ಹೋಲಿಸಿದರೆ ಸ್ವಾತಂತ್ರ್ಯದ ಅರ್ಥವಾದರೂ ಏನು ಎಂದು ಆಶ್ಚರ್ಯ ಪಡುವಂತಹ ವೈದೃಶ್ಯ ಕಣ್ಣಿಗೆ ರಾಚುತ್ತಿದೆ. ಸ್ವಾತಂತ್ರ್ಯ ಮತ್ತು ಗಣತಂತ್ರ ಸಂವಿಧಾನದೊಂದಿಗೆ ಬಂದಿರುವ ಸ್ವಾತಂತ್ರ್ಯಗಳು ಅಪಾಯದಲ್ಲಿವೆ. ಇದೀಗ ಮೋದಿ-ಷಾ ದ್ವಯರು ನಡೆಸಿರುವ ಕಾಶ್ಮೀರ ಅತ್ಯಾಚಾರ ನೀಡುತ್ತಿರುವ ಸಂದೇಶ. ಪ್ರಜಾಪ್ರಭುತ್ವ ಮತ್ತು ಒಕ್ಕೂಟ ತತ್ವದ ಮೇಲಿನ ಈ ಕ್ರೂರ ಪ್ರಹಾರವನ್ನು ಉಪೇಕ್ಷಿಸಿದರೆ ಅದರಿಂದ ದೇಶದ ಇತರ ಭಾಗಗಳಿಗೂ ಕೇಡು ಸಂಭವಿಸುತ್ತದೆ. ಸರ್ವಾಧಿಕಾರಶಾಹಿ ಆಳ್ವಿಕೆ ಯಾರನ್ನೂ ಬಿಡುವುದಿಲ್ಲ. ಇಂತಹ ಒಂದು ಸನ್ನಿವೇಶದಲ್ಲಿ, ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಣೆಯನ್ನು, ಹೆಚ್ಚೆಚ್ಚು ಜನಗಳನ್ನು ಅಣಿನೆರೆಸುವ ಮೂಲಕ ಮತ್ತು ಐಕ್ಯ ಜನಾಂದೋಲನಗಳ ಮೂಲಕ ಸಾಧಿಸಬೇಕಾಗಿದೆ. ಆಗಸ್ಟ್ 15, ಎಲ್ಲ ಎಡ ಮತ್ತು ಪ್ರಜಾಪ್ರಭುತ್ವವಾದಿ ಶಕ್ತಿಗಳನ್ನು ಒಗ್ಗೂಡಿಸಿ ಈ ಸಾವು-ಬದುಕಿನ ಸಾಹಸಕಾರ್ಯವನ್ನು ಕೈಗೆತ್ತಿಕೊಳ್ಳುವ ದೃಢನಿರ್ಧಾರ ಮಾಡುವ ದಿನವಾಗಿದೆ.
ಈ ವರ್ಷ ಸ್ವಾತಂತ್ರ್ಯ ದಿನಾಚರಣೆ ಜಮ್ಮು ಮತ್ತು ಕಾಶ್ಮೀರ ರಾಜ್ಯವನ್ನು ಚಿಂದಿ ಮಾಡಿರುವ, ಬೃಹತ್ ಪ್ರಮಾಣದಲ್ಲಿ ಕಣಿವೆಯ ಜನಗಳಿಗೆ ಬೀಗ ಜಡಿದಿರುವ ಮಬ್ಬಿನಲ್ಲಿ ನಡೆಯುತ್ತಿದೆ. ಕೆಂಪುಕೋಟೆಯಲ್ಲಿ ಈ ಆಗಸ್ಟ್ 15ರಂದು ನರೇಂದ್ರ ಮೋದಿ ತ್ರಿವರ್ಣ ಧ್ವಜವನ್ನು ಆರೋಹಿಸುವಾಗ, ಅತ್ತ ಲಕ್ಷಾಂತರ ಕಾಶ್ಮೀರಿಗಳು ಸತತವಾಗಿ ಹನ್ನೊಂದನೇ ದಿನ ತಮ್ಮ ಸ್ವಾತಂತ್ರ್ಯ ಮತ್ತು ಮೂಲಭೂತ ಹಕ್ಕುಗಳಿಂದ ವಂಚಿತರಾಗಿದ್ದಾರೆ. ಸಂಚರಿಸುವ, ತಮಗೆ ಬೇಕಾದವರನ್ನು ಸಂಪರ್ಕಿಸುವ, ಬದುಕು ನಡೆಸಲು ಕೆಲಸ ಮಾಡುವ, ಶಾಲೆಗೆ ಹೋಗುವ, ಆರೋಗ್ಯಪಾಲನೆ ಮತ್ತು ಔಷಧಿಗಳನ್ನು ಪಡೆಯುವ ಅವರ ಹಕ್ಕನ್ನು ಕಳಚಿ ಹಾಕಲಾಗಿದೆ. ಇವೆಲ್ಲವೂ ಸ್ವತಂತ್ರ ಭಾರತದ ನಾಗರಿಕರಾಗಿ ಇರುವ ಮೂಲಭೂತ ಹಕ್ಕುಗಳು.
ನೂರಾರು ಕಾಶ್ಮೀರಿ ರಾಜಕಾರಣಿಗಳು ಮತ್ತು ಕಾರ್ಯಕರ್ತರುಗಳು ಜೈಲುಗಳಲ್ಲಿದ್ದಾರೆ ಅಥವ ಗುಪ್ತಸ್ಥಳಗಳಲ್ಲಿ ಸ್ಥಾನಬದ್ಧತೆಯಲ್ಲಿದ್ದಾರೆ. ಹಲವರನ್ನು ಹೊರಗೊಯ್ದು ಆಗ್ರಾ, ಬರೇಲಿ, ಲಕ್ನೌ ಮುಂತಾದೆಡೆಗಳಲ್ಲಿ ಜೈಲುಗಳಲ್ಲಿ ಇಡಲಾಗಿದೆ. ಅವರೆಲ್ಲಿದ್ದಾರೆ ಎಂಬುದು ಯಾರಿಗೂ ತಿಳಿದಿಲ್ಲ, ಅವರ ಕುಟುಂಬದವರು, ಸಂಬಂಧಿಕರು ಅವರನ್ನು ಭೇಟಿ ಮಾಡಲು ಸಾಧ್ಯವಿಲ್ಲವಾಗಿದೆ. ಮೋದಿ ಸರಕಾರ ಭಾರತದೊಂದಿಗೆ “ಜಮ್ಮು ಮತ್ತು ಕಾಶ್ಮೀರವನ್ನು ಸಮಗ್ರೀಕರಿಸಿರುವುದು” ತಮ್ಮ ಮಹಾಸಾಧನೆ ಎಂದು ಡಂಗುರ ಹೊಡೆಯುತ್ತಿದ್ದರೆ, ಅತ್ತ ಕಾಶ್ಮೀರದ ಜನತೆ, ಭಾರತದ ಇತರರೊಂದಿಗೆ ಹೋಲಿಸಿದರೆ ಸ್ವಾತಂತ್ರ್ಯದ ಅರ್ಥವಾದರೂ ಏನು ಎಂದು ಆಶ್ಚರ್ಯ ಪಡುವಂತಹ ವೈದೃಶ್ಯ ಕಣ್ಣಿಗೆ ರಾಚುತ್ತಿದೆ.
ಕಾಶ್ಮೀರಿಗಳಿಗೆ ಎಂತಹ ಅವಮಾನ ಮಾಡಲಾಗಿದೆ ಎಂಬುದು ಅವರನ್ನು ರಾಜಕೀಯ ಹಕ್ಕುಗಳನ್ನು ಕಸಿದುಕೊಂಡಿರುವ ರೀತಿಯಲ್ಲಿ ವ್ಯಕ್ತವಾಗುತ್ತದೆ. ಜಮ್ಮು ಮತ್ತು ಕಾಶ್ಮೀರವನ್ನು ಕೇಂದ್ರಾಡಳಿತ ಪ್ರದೇಶದ ಮಟ್ಟಕ್ಕೆ ಇಳಿಸಿದ ನಂತರ, ಹೊಸ ವಿಧಾನಸಭೆ ಪುದುಚೇರಿಯ ಮಾದರಿಯಲ್ಲಿ ಇರುತ್ತದೆ, ಉಪರಾಜ್ಯಪಾಲರೆಂಬವರು ಹೇಳಿದ್ದೇ ಆಳ್ವಿಕೆಯಾಗುತ್ತದೆ. ಈ ಮೊಟಕುಗೊಳಿಸಿದ ವಿಧಾನ ಸಭೆಯ ಸಂಯೋಜನೆ ಕೂಡ ಬದಲಾಗಲಿದೆ. ಜಮ್ಮ ಮತ್ತು ಕಾಶ್ಮೀರ ಮರುಸಂಘಟನೆಯ ಮಸೂದೆ ಮತಕ್ಷೇತ್ರಗಳ ಮರುವಿಂಗಡಣೆಗೆ ಅವಕಾಶ ಕಲ್ಪಿಸಿದೆ. ಇದನ್ನು ಚುನಾವಣಾ ಆಯೋಗ ಮಾಡುತ್ತದೆ.
ಹಿಂದಿನ ವಿಧಾನಸಭೆಯ ಬಲ ಜಮ್ಮು ಮತ್ತು ಕಾಶ್ಮೀರ ವಿಭಾಗಗಳಿಂದ 83ಆಗಿತ್ತು. ಅದನ್ನು90ಕ್ಕೆ ಏರಿಸಲಾಗುತ್ತದೆ. ಈ ಮರುವಿಂಗಡಣೆಯ ಕಸರತ್ತಿನಲ್ಲಿ ಜಮ್ಮು ಭಾಗದ ಸೀಟುಗಳ ಸಂಖ್ಯೆ ಏರಲಿದೆ. ಹಿಂದಿನ ವಿಧಾನಸಭೆಯಲ್ಲಿ ಅದು37 ಇತ್ತು. ಪರಿಶಿಷ್ಟ ಜಾತಿಗಳು ಮತ್ತು ಬುಡಕಟ್ಟುಗಳ ಸೀಟುಗಳನ್ನು ಪತ್ರ್ಯೇಕಿಸಿದಾಗ, ಕಾಶ್ಮೀರ ಕಣಿವೆಗೆ ಉಳಿಯುವ ಸೀಟುಗಳ ಸಂಖ್ಯೆಯಲ್ಲಿ (ಇದುವರೆಗೆ 46) ಕಡಿತವಾಗುತ್ತದೆ. ಈ ಮೂಲಕ ವಿಧಾನಸಭೆಯಲ್ಲಿ ಬಿಜೆಪಿಗೆ ಬಹುಮತದ ಆಶ್ವಾಸನೆ ಸಿಗುವಂತಾಗುತ್ತದೆ. ಉಪರಾಜ್ಯಪಾಲರು ಇಬ್ಬರು ಮಹಿಳಾ ಸದಸ್ಯರನ್ನು ನೇಮಿಸಲು ಅವಕಾಶ ಇರುವುದು ಅದನ್ನು ಇನ್ನಷ್ಟು ಖಾತ್ರಿಗೊಳಿಸುತ್ತದೆ.
ಇನ್ನೊಂದು ಕುಟಿಲ ನಡೆಯೆಂದರೆ, ಕಾಶ್ಮೀರ ಕಣಿವೆಯಲ್ಲಿ ಜನಸಂಖ್ಯಾ ಸಂಯೋಜನೆಯಲ್ಲಿ ಒಂದು ಬದಲಾವಣೆ ತರುವುದು. ಆರ್ಥಿಕ ಅಭಿವೃದ್ಧಿ ಮತ್ತು ಹೂಡಿಕೆಯ ಹೆಸರಲ್ಲಿ, ಜಮ್ಮು ಮತ್ತು ಕಾಶ್ಮೀರದ ಹೊರಗೆ ಇರುವ ಜನಗಳು ಕಣಿವೆ ಪ್ರದೇಶಕ್ಕೆ ಬಂದು ಭೂಮಿ ಖರೀದಿಸಲು ಮತ್ತು ನೆಲೆಸಲು ಉತ್ತೇಜನೆ ನೀಡಲಾಗುವುದು. ಅದಾಗಲೇ 2016ರಲ್ಲಿ ಪಿಡಿಪಿ-ಬಿಜೆಪಿ ಸಮ್ಮಿಶ್ರ ಸರಕಾರದ ಅವಧಿಯಲ್ಲಿ ಮಾಜಿ ಯೋಧರನ್ನು ವಸತಿ ಕಾಲೊನಿಗಳಲ್ಲಿ ನೆಲೆಗೊಳಿಸುವ ಒಂದು ಪ್ರಸ್ತಾವ ಇತ್ತು. ಅದಕ್ಕೆ ಭೂಮಿ ನೀಡುವ ಮಾತೂ ಇತ್ತು. ಕಾಶ್ಮೀರದ ಜನಸಂಖ್ಯಾ ಸಂಯೋಜನೆಯನ್ನು ಬದಲಾಯಿಸುವುದು ಅಥವ ಕಾಶ್ಮೀರಿ ಜನಗಳ ಅಸ್ಮಿತೆಯನ್ನು ದುರ್ಬಲಗೊಳಿಸುವುದು ಇದರ ಗುರಿ.
ಬಹಳ ಕಾಲದಿಂದ ಕಾಶ್ಮೀರಿ ಜನಗಳ ನಾಗರಿಕ ಸ್ವಾತಂತ್ರ್ಯಗಳ ದಮನ ಮತ್ತು ಪ್ರಭುತ್ವದ ದಬ್ಬಾಳಿಕೆ ರೂಢಿಯಾಗಿ ಬಿಟ್ಟಿರುವ ದೇಶದ ಇತರ ಭಾಗಗಳ ಜನರಿಗೆ ಜಮ್ಮು ಮತ್ತು ಕಾಶ್ಮೀರದಲ್ಲಿನ ಸನ್ನಿವೇಶ ಹದಗೆಡುತ್ತಿರುವ ಸನ್ನಿವೇಶದ ಮತ್ತೊಂದು ಅಧ್ಯಾಯ ಮಾತ್ರ, ಅದನ್ನು ಕೇಂದ್ರ ಸರಕಾರ ದೃಢವಾಗಿ ನಿಭಾಯಿಸುತ್ತಿದೆ ಎಂದು ಕಾಣಬಹುದು.
ಆದರೆ ಹೀಗೆ ಭಾವಿಸುವುದು ಒಂದು ಪ್ರಮಾದವಾಗುತ್ತದೆ. ಪ್ರಜಾಪ್ರಭುತ್ವ ಮತ್ತು ಒಕ್ಕೂಟ ತತ್ವದ ಮೇಲಿನ ಈ ಕ್ರೂರ ಪ್ರಹಾರವನ್ನು ಉಪೇಕ್ಷಿಸಿದರೆ ಅದರಿಂದ ದೇಶದ ಇತರ ಭಾಗಗಳಿಗೂ ಕೇಡು ಸಂಭವಿಸುತ್ತದೆ. ಸರ್ವಾಧಿಕಾರಶಾಹಿ ಆಳ್ವಿಕೆ ಯಾರನ್ನೂ ಬಿಡುವುದಿಲ್ಲ-ಭಿನ್ನ ಅಭಿಪ್ರಾಯ ಇರುವವರನ್ನು, ಪ್ರತಿಪಕ್ಷಗಳಿಲ್ಲಿ ಇರುವವರನ್ನು, ಮತ್ತು ತಮ್ಮ ಪ್ರಜಾಪ್ರಭುತ್ವ ಹಕ್ಕುಗಳನ್ನು ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಚಲಾಯಿಸುವ ಯಾರನ್ನೂ. ಸ್ವಾತಂತ್ರ್ಯ ಮತ್ತು ಗಣತಂತ್ರ ಸಂವಿಧಾನದೊಂದಿಗೆ ಬಂದಿರುವ ಸ್ವಾತಂತ್ರ್ಯಗಳು ಅಪಾಯದಲ್ಲಿವೆ. ಇದೀಗ ಮೊದಿ-ಷಾ ದ್ವಯರು ನಡೆಸಿರುವ ಕಾಶ್ಮೀರ ಅತ್ಯಾಚಾರ ನೀಡುತ್ತಿರುವ ಸಂದೇಶ.
ಸ್ವಾತಂತ್ರ್ಯ ದಿನದಂದು, ಕಳೆದ ಐದು ವರ್ಷಗಳ ಸರ್ವಾಧಿಕಾರಶಾಹಿ ಆಳ್ವಿಕೆ ಸಂವಿಧಾನದ ಅಡಿಯಲ್ಲಿರುವ ಎಲ್ಲ ಸಂಸ್ಥೆಗಳನ್ನು ಶಿಥಿಲಗೊಳಿಸುವ ದಾರಿಯಲ್ಲಿ ಸಾಗಿದೆ ಎಂಬುದನ್ನು ವೀಕ್ಷಿಸುವುದು ಕೂಡ ಉಚಿತವಾಗಿದೆ. ಇದರ ಒಂದು ಸಣ್ಣ ಉದಾಹರಣೆಯೆಂದರೆ, ಸುಪ್ರಿಂ ಕೋರ್ಟಿನ ಮೂವರು ನ್ಯಾಯಾಧೀಶರ ಪೀಠ ಜಮ್ಮು ಮತ್ತು ಕಾಶ್ಮೀರದಲ್ಲಿ ನಾಗರಿಕರ ಸ್ವಾತಂತ್ರ್ಯಗಳ ಮತ್ತು ಮೂಲಭೂತ ಹಕ್ಕುಗಳ ವ್ಯಾಪಕ ಪ್ರಮಾಣದ ಉಲ್ಲಂಘನೆಗಳನ್ನು ನಿಲ್ಲಿಸಲು ಮಧ್ಯಪ್ರವೇಶಿಸಲು ನಿರಾಕರಿಸಿರುವುದು.
ಇಂತಹ ಒಂದು ಸನ್ನಿವೇಶದಲ್ಲಿ, ಪ್ರಜಾಪ್ರಭುತ್ವ, ಜಾತ್ಯತೀತತೆ ಮತ್ತು ಜೀವನಾಧಾರದ ಹಕ್ಕೂ ಸೇರಿದಂತೆ ನಾಗರಿಕರ ಮೂಲಭೂತ ಹಕ್ಕುಗಳ ರಕ್ಷಣೆಯನ್ನು, ಹೆಚ್ಚೆಚ್ಚು ಜನಗಳನ್ನು ಅಣಿನೆರೆಸುವ ಮೂಲಕ ಮತ್ತು ಐಕ್ಯ ಜನಾಂದೋಲನಗಳ ಮೂಲಕ ಸಾಧಿಸಬೇಕಾಗಿದೆ. ಆಗಸ್ಟ್ 15, ಎಲ್ಲ ಎಡ ಮತ್ತು ಪ್ರಜಾಪ್ರಭುತ್ವವಾದಿ ಶಕ್ತಿಗಳನ್ನು ಒಗ್ಗೂಡಿಸಿ ಈ ಸಾವು-ಬದುಕಿನ ಸಾಹಸಕಾರ್ಯವನ್ನು ಕೈಗೆತ್ತಿಕೊಳುವ್ಳ ದೃಢನಿರ್ಧಾರ ಮಾಡುವ ದಿನವಾಗಿದೆ.
–ಪ್ರಕಾಶ ಕಾರಟ್
- ಕೃಪೆ : ಈ ವಾರದ ಜನಶಕ್ತಿ ವಾರ ಪತ್ರಿಕೆಯಲ್ಲಿ ಪ್ರಕಟವಾದ ಲೇಖನ
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕುಂದುಕೊರತೆಗಳಿಗೆ ತ್ವರಿತ ಪರಿಹಾರ ನೀಡಲು ಏಕೀಕೃತ ವ್ಯವಸ್ಥೆ; ಶನಿವಾರ ಜನಸಂಪರ್ಕ, ಬುಧವಾರ ಮೂರು ಹಂತದ ಪರಿಶೀಲನೆ
ಬೆಂಗಳೂರು: ಸರ್ಕಾರಿ ಸೇವೆ ಪಡೆಯಲು ಕಚೇರಿಯಿಂದ ಕಚೇರಿಗೆ ಅಲೆಯಬೇಕಾದ ದಿನಗಳಿಗೆ ಕಡಿವಾಣ ಹಾಕುವ ಉದ್ದೇಶದಿಂದ ಕರ್ನಾಟಕ ಸರ್ಕಾರ ‘ಪ್ರಜಾಸೇವಾ ಅಭಿಯಾನ’ಕ್ಕೆ ಚಾಲನೆ ನೀಡಲು ಸಜ್ಜಾಗಿದೆ. ಸೆಪ್ಟೆಂಬರ್ 5ರಂದು ವಿಜಯನಗರ ಜಿಲ್ಲೆಯ ಕೂಡ್ಲಿಗಿ ಹೋಬಳಿಯಿಂದ ಅಭಿಯಾನ ಆರಂಭವಾಗಲಿದ್ದು, ಸಾರ್ವಜನಿಕರ ಕುಂದುಕೊರತೆಗಳನ್ನು ನೇರವಾಗಿ ಆಲಿಸಿ, ಸಾಧ್ಯವಾದಷ್ಟು ಸ್ಥಳದಲ್ಲೇ ಅಥವಾ ನಿಗದಿತ ಕಾಲಮಿತಿಯಲ್ಲಿ ಪರಿಹರಿಸುವ ವ್ಯವಸ್ಥೆ ರೂಪಿಸಲಾಗಿದೆ.
ಇದುವರೆಗೆ ವಿವಿಧ ಇಲಾಖೆ, ಯೋಜನೆ ಅಥವಾ ಸರ್ಕಾರಿ ಸೇವೆಗಳಿಗೆ ಸಂಬಂಧಿಸಿದ ಸಮಸ್ಯೆ ಎದುರಾದಾಗ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳನ್ನು ಸಂಪರ್ಕಿಸಲು ಜನರು ಹಲವು ಬಾರಿ ಕಚೇರಿಗಳಿಗೆ ತೆರಳಬೇಕಾಗುತ್ತಿತ್ತು. ಇದೀಗ ಈ ಅಲೆದಾಟ ಕಡಿಮೆ ಮಾಡಿ ಜನರ ಮನೆ ಬಾಗಿಲಿಗೆ ಆಡಳಿತವನ್ನು ಕೊಂಡೊಯ್ಯುವುದು ಪ್ರಜಾಸೇವೆಯ ಪ್ರಮುಖ ಉದ್ದೇಶವಾಗಿದೆ.
ಹೈಲೈಟ್ಸ್: ಸೆ.5ರಿಂದ ಹೊಸ ಆಡಳಿತ ವ್ಯವಸ್ಥೆಗೆ ಚಾಲನೆ |
|
http://Visit : www.suddidina.com
ಪ್ರತಿ ಶನಿವಾರ ಜನರೊಂದಿಗೆ ನೇರ ಸಂಪರ್ಕ
ಪ್ರತಿ ಶನಿವಾರ ತಾಲ್ಲೂಕು ಅಥವಾ ಹೋಬಳಿ ಮಟ್ಟದಲ್ಲಿ ಪ್ರಜಾಸೇವಾ ಸಭೆಗಳನ್ನು ಪರ್ಯಾಯವಾಗಿ ನಡೆಸಲು ನಿರ್ಧರಿಸಲಾಗಿದೆ. ತಿಂಗಳ ಮೊದಲ ಮತ್ತು ಮೂರನೇ ಶನಿವಾರ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಕೇಂದ್ರದಲ್ಲಿ ಸಭೆ ನಡೆಯಲಿದೆ. ಎರಡನೇ ಮತ್ತು ನಾಲ್ಕನೇ ಶನಿವಾರ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ತಾಲ್ಲೂಕು ಅಥವಾ ಹೋಬಳಿ ಮಟ್ಟದಲ್ಲಿ ಸಭೆ ಆಯೋಜಿಸಲಾಗುತ್ತದೆ.
ಸಭೆಗಳ ಕುರಿತು ಸಾರ್ವಜನಿಕರಿಗೆ ಕನಿಷ್ಠ 15 ದಿನಗಳ ಮುಂಚಿತವಾಗಿ ಮಾಹಿತಿ ನೀಡಲಾಗುತ್ತದೆ. ಮನೆ-ಮನೆಗೆ ಕರಪತ್ರ ವಿತರಿಸುವುದರ ಜತೆಗೆ AI ಆಧಾರಿತ ಕಾಲ್ ಸೆಂಟರ್ ಮೂಲಕ ಸಭೆಯ ದಿನಾಂಕ, ಸ್ಥಳ ಹಾಗೂ ಸಮಯದ ಕುರಿತು ಮಾಹಿತಿ ನೀಡಲಾಗುತ್ತದೆ.
ಗ್ರಾಮ ಒನ್ನಲ್ಲೇ ಅರ್ಜಿ ಸಲ್ಲಿಕೆ
ಜನರು ತಮ್ಮ ಅರ್ಜಿ ಹಾಗೂ ಅಹವಾಲುಗಳನ್ನು ಮುಂಚಿತವಾಗಿ ಗ್ರಾಮ ಒನ್ ಕೇಂದ್ರದಲ್ಲಿ ಸಲ್ಲಿಸಬಹುದು. ಸಭಾ ಸ್ಥಳದಲ್ಲಿಯೂ ಗ್ರಾಮ ಒನ್ ಮಳಿಗೆ ಸ್ಥಾಪಿಸಿ ಕಂಪ್ಯೂಟರ್, ಪ್ರಿಂಟರ್ ಮತ್ತು ಇಂಟರ್ನೆಟ್ ಸೌಲಭ್ಯ ಕಲ್ಪಿಸಲಾಗುತ್ತದೆ.
ಈ ಸಭೆಗಳಲ್ಲಿ ಹೊಸ ಅಹವಾಲುಗಳು ಮತ್ತು ಈಗಾಗಲೇ ದೂರು ದಾಖಲಿಸಿದ್ದರೂ ಪರಿಹಾರವಾಗದ ಅಹವಾಲುಗಳಿಗೆ ಪ್ರತ್ಯೇಕ ವ್ಯವಸ್ಥೆ ಇರಲಿದೆ. 21 ದಿನಗಳ ಬಳಿಕವೂ ಸಮರ್ಪಕ ಪರಿಹಾರ ಸಿಗದ ಪ್ರಕರಣಗಳನ್ನೂ ಆದ್ಯತೆಯಿಂದ ಪರಿಗಣಿಸಲಾಗುತ್ತದೆ.
ಬುಧವಾರ ಮೂರು ಹಂತದ ಪರಿಶೀಲನೆ
ಪ್ರಜಾಸೇವಾ ಸಭೆಗಳಲ್ಲಿ ಸ್ವೀಕರಿಸಿದ ಅರ್ಜಿ ಮತ್ತು ಅಹವಾಲುಗಳ ಮೇಲೆ ಪ್ರತಿ ಬುಧವಾರ ಮೂರು ಹಂತದ ಪರಿಶೀಲನೆ ನಡೆಯಲಿದೆ. ಬೆಳಗ್ಗೆ 9ರಿಂದ 11ರವರೆಗೆ ತಾಲ್ಲೂಕು ಮಟ್ಟದಲ್ಲಿ, 11ರಿಂದ ಮಧ್ಯಾಹ್ನ 1ರವರೆಗೆ ಉಪವಿಭಾಗ ಮಟ್ಟದಲ್ಲಿ ಹಾಗೂ ಮಧ್ಯಾಹ್ನ 3ರಿಂದ ಸಂಜೆ 5ರವರೆಗೆ ಜಿಲ್ಲಾ ಮಟ್ಟದಲ್ಲಿ ಪರಿಶೀಲನೆ ನಡೆಯಲಿದೆ.
ತಾಲ್ಲೂಕಿನಲ್ಲಿ ಬಗೆಹರಿಯದ ಸಮಸ್ಯೆಗಳು ಉಪವಿಭಾಗಾಧಿಕಾರಿಗೆ, ಅಲ್ಲಿಂದ ಜಿಲ್ಲಾಧಿಕಾರಿಗೆ ಮೇಲ್ದರ್ಜೆಗೆ ವರ್ಗಾವಣೆಯಾಗಲಿವೆ. ನಿಗದಿತ ಅವಧಿಯಲ್ಲಿ ಪರಿಹಾರವಾಗದ ಪ್ರಕರಣಗಳು ಸಂಬಂಧಿಸಿದ ಇಲಾಖೆಯ ಮುಖ್ಯಸ್ಥರ ಮಟ್ಟಕ್ಕೂ ಸ್ವಯಂಚಾಲಿತವಾಗಿ ಎಸ್ಕಲೇಷನ್ ಆಗುವ ವ್ಯವಸ್ಥೆ ಇರಲಿದೆ.
ಸ್ಥಳದಲ್ಲೇ ಮಂಜೂರಾತಿ, ಆನ್ಲೈನ್ನಲ್ಲಿ ಸ್ಥಿತಿ
ಅರ್ಹ ಫಲಾನುಭವಿಗಳಿಗೆ ಕೆಲವು ಯೋಜನೆಗಳ ಮಂಜೂರಾತಿ ಪತ್ರವನ್ನು ಸ್ಥಳದಲ್ಲೇ ನೀಡಲು ಅವಕಾಶವಿದೆ. ಅರ್ಜಿ ಅಥವಾ ದೂರು ಯಾವ ಹಂತದಲ್ಲಿದೆ ಎಂಬುದನ್ನು ಸಾರ್ವಜನಿಕರು ನೈಜ-ಸಮಯದ ಸ್ಥಿತಿ ಪರಿಶೀಲನಾ ವ್ಯವಸ್ಥೆಯ ಮೂಲಕ ತಿಳಿದುಕೊಳ್ಳಬಹುದು.
ಇದಲ್ಲದೆ, ಪ್ರತಿ ಸಭೆಯ ಸಂಪೂರ್ಣ ವಿವರ, ಛಾಯಾಚಿತ್ರ, ವೀಡಿಯೋ ಹಾಗೂ ಫಲಾನುಭವಿಗಳ ಅಭಿಪ್ರಾಯಗಳನ್ನು ಪೋರ್ಟಲ್ನಲ್ಲಿ ದಾಖಲಿಸಲಾಗುತ್ತದೆ. ಸಾರ್ವಜನಿಕರು 1902 ಸಹಾಯವಾಣಿ ಅಥವಾ ಅಧಿಕೃತ IPGRS ಪೋರ್ಟಲ್ ಮೂಲಕವೂ ಕುಂದುಕೊರತೆ ದಾಖಲಿಸಬಹುದು.
ಆಡಳಿತಕ್ಕೆ ಹೊಣೆಗಾರಿಕೆ, ಜನರಿಗೆ ಉತ್ತರ
ಪ್ರಜಾಸೇವಾ ಅಭಿಯಾನದ ಯಶಸ್ಸು ಕೇವಲ ಸಭೆ ನಡೆಸುವುದರಲ್ಲಿ ಇಲ್ಲ; ದೂರು ಸ್ವೀಕರಿಸಿ, ಕಾಲಮಿತಿಯಲ್ಲಿ ಪರಿಹರಿಸಿ, ಅದರ ಹೊಣೆಗಾರಿಕೆಯನ್ನು ನಿಗದಿಪಡಿಸುವುದರಲ್ಲಿ ಇದೆ. ಜಿಲ್ಲಾಉಸ್ತುವಾರಿ ಕಾರ್ಯದರ್ಶಿಗಳು, ಅಧಿಕಾರಿಗಳು, ಸಚಿವರು ಹಾಗೂ ಜನಪ್ರತಿನಿಧಿಗಳ ನಿರಂತರ ಮೇಲ್ವಿಚಾರಣೆಯ ಮೂಲಕ ಬಾಕಿ ಪ್ರಕರಣಗಳ ವಿಲೇವಾರಿಗೆ ಒತ್ತು ನೀಡಲಾಗಿದೆ. ಜನರ ಸಮಸ್ಯೆಗಳಿಗೆ ತ್ವರಿತ ಸ್ಪಂದನೆ, ಪಾರದರ್ಶಕತೆ ಮತ್ತು ಉತ್ತರದಾಯಿತ್ವ ಹೆಚ್ಚಿಸುವ ಈ ವ್ಯವಸ್ಥೆ ಆಡಳಿತದ ಹೊಸ ಮಾದರಿಯಾಗುವ ನಿರೀಕ್ಷೆ ಮೂಡಿಸಿದೆ.

ದಿನದ ಸುದ್ದಿ
ಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
ಸುದ್ದಿದಿನ,ಕಲಬುರಗಿ: ಇಲ್ಲಿನ ಮಹಾನಗರ ಪಾಲಿಕೆಯ 24ನೇ ಅವಧಿಯ ಮೇಯರ್ ಹಾಗೂ ಉಪ ಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮೇಲುಗೈ ಸಾಧಿಸಿದೆ. ತೀವ್ರ ಕುತೂಹಲ ಕೆರಳಿಸಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು 35 ಮತಗಳನ್ನು ಪಡೆಯುವ ಮೂಲಕ ಜಯಗಳಿಸಿದ್ದು, ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ಮತ್ತೊಮ್ಮೆ ತನ್ನದಾಗಿಸಿಕೊಂಡಿದ್ದಾರೆ. ಬಿಜೆಪಿಯ ಅಭ್ಯರ್ಥಿಗಳು 29 ಮತಗಳನ್ನು ಪಡೆದು ಹಿನ್ನಡೆ ಅನುಭವಿಸಿದ್ದಾರೆ.
ಈ ಫಲಿತಾಂಶದೊಂದಿಗೆ ಕಲಬುರಗಿ ಮಹಾನಗರ ಪಾಲಿಕೆಯ ರಾಜಕೀಯದಲ್ಲಿ ಕಾಂಗ್ರೆಸ್ ತನ್ನ ಪ್ರಾಬಲ್ಯವನ್ನು ಮುಂದುವರಿಸಿದೆ. ಚುನಾವಣೆಯ ಫಲಿತಾಂಶ ಹೊರಬೀಳುತ್ತಿದ್ದಂತೆ ಕಾಂಗ್ರೆಸ್ ಪಾಳಯದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣಗೊಂಡಿದೆ.
ಮೇಯರ್ ಸ್ಥಾನಕ್ಕೆ ಅಜಿಲ್ ಅಹಮದ್ ಗೋಲಾ
ಈ ಚುನಾವಣೆಯಲ್ಲಿ 21ನೇ ವಾರ್ಡ್ನ ಕಾಂಗ್ರೆಸ್ ಸದಸ್ಯ ಅಜಿಲ್ ಅಹಮದ್ ಗೋಲಾ ಅವರು ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಮತದಾನದ ಬಳಿಕ ಕಾಂಗ್ರೆಸ್ ಅಭ್ಯರ್ಥಿಗೆ ಬಹುಮತ ದೊರೆತಿದ್ದು, ಅವರು ಮೇಯರ್ ಸ್ಥಾನವನ್ನು ಅಲಂಕರಿಸಿದ್ದಾರೆ.
ಪಾಲಿಕೆಯ ಮುಂದಿನ ಆಡಳಿತದಲ್ಲಿ ಮೇಯರ್ ಸ್ಥಾನ ಪ್ರಮುಖವಾಗಿರುವ ಹಿನ್ನೆಲೆಯಲ್ಲಿ ಅಜಿಲ್ ಅಹಮದ್ ಗೋಲಾ ಅವರ ಆಯ್ಕೆ ಇದೀಗ ಗಮನ ಸೆಳೆದಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ 35 ಮತಗಳು ದೊರೆತಿರುವುದು ಚುನಾವಣೆಯಲ್ಲಿ ಪಕ್ಷದ ಬಲವನ್ನು ತೋರಿಸಿದೆ.
ಉಪ ಮೇಯರ್ ಸ್ಥಾನವೂ ಕಾಂಗ್ರೆಸ್ ಪಾಲು
20ನೇ ವಾರ್ಡ್ನ ಕಾಂಗ್ರೆಸ್ ಸದಸ್ಯೆ ಫಹಾನಾ ಖಮ್ರೋ ಜಗೀರ್ದಾರ್ ಅವರು ಉಪ ಮೇಯರ್ ಸ್ಥಾನಕ್ಕೆ ನಾಮಪತ್ರ ಸಲ್ಲಿಸಿದ್ದರು. ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಿಗೆ ದೊರೆತ ಬಹುಮತದ ಹಿನ್ನೆಲೆಯಲ್ಲಿ ಫಹಾನಾ ಖಮ್ರೋ ಜಗೀರ್ದಾರ್ ಅವರು ಉಪ ಮೇಯರ್ ಆಗಿ ಆಯ್ಕೆಯಾಗಿದ್ದಾರೆ.
ಮೇಯರ್ ಹಾಗೂ ಉಪ ಮೇಯರ್ ಎರಡೂ ಸ್ಥಾನಗಳು ಕಾಂಗ್ರೆಸ್ ಪಾಲಾಗಿರುವುದರಿಂದ ಪಾಲಿಕೆಯ ಆಡಳಿತದ ಮೇಲೆ ಪಕ್ಷದ ಹಿಡಿತ ಮತ್ತಷ್ಟು ಬಲಗೊಂಡಿದೆ.
ಆಗಸ್ಟ್ 7ರಿಂದ ಆಗಸ್ಟ್ 29ಕ್ಕೆ ಮುಂದೂಡಿಕೆ
ಆರಂಭದಲ್ಲಿ ಈ ಚುನಾವಣೆ ಆಗಸ್ಟ್ 7ರಂದು ನಡೆಯಬೇಕಿತ್ತು. ಆದರೆ ಕೆಲವು ಅನಿವಾರ್ಯ ಕಾರಣಗಳಿಂದ ಚುನಾವಣೆ ಮುಂದೂಡಲ್ಪಟ್ಟಿತ್ತು. ಬಳಿಕ ಪ್ರಾದೇಶಿಕ ಆಯುಕ್ತರ ಆದೇಶದ ನಂತರ ಪರಿಷ್ಕೃತ ದಿನಾಂಕ ನಿಗದಿಪಡಿಸಿ ಆಗಸ್ಟ್ 29ರಂದು ಚುನಾವಣೆ ನಡೆಸಲಾಯಿತು.
ಅದರಂತೆ ಶನಿವಾರ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಮೇಯರ್ ಹಾಗೂ ಉಪ ಮೇಯರ್ ಸ್ಥಾನಗಳನ್ನು ಗೆದ್ದುಕೊಂಡಿದ್ದಾರೆ. ಒಟ್ಟು ಮತಗಳ ಲೆಕ್ಕಾಚಾರದಲ್ಲಿ ಕಾಂಗ್ರೆಸ್ 35 ಮತಗಳನ್ನು ಪಡೆದರೆ, ಬಿಜೆಪಿ 29 ಮತಗಳಿಗೆ ಸೀಮಿತವಾಯಿತು.
ಈ ಮೂಲಕ ಕಲಬುರಗಿ ಮಹಾನಗರ ಪಾಲಿಕೆಯ 24ನೇ ಅವಧಿಯ ಆಡಳಿತದ ಚುಕ್ಕಾಣಿ ಮತ್ತೊಮ್ಮೆ ಕಾಂಗ್ರೆಸ್ ಕೈಗೆ ಬಂದಂತಾಗಿದೆ. ಮುಂದಿನ ದಿನಗಳಲ್ಲಿ ಪಾಲಿಕೆಯ ಅಭಿವೃದ್ಧಿ ಹಾಗೂ ಆಡಳಿತಾತ್ಮಕ ವಿಚಾರಗಳಲ್ಲಿ ಹೊಸ ಮೇಯರ್ ಮತ್ತು ಉಪ ಮೇಯರ್ ಅವರ ಕಾರ್ಯವೈಖರಿ ಹೇಗಿರಲಿದೆ ಎಂಬುದು ಇದೀಗ ಕುತೂಹಲ ಮೂಡಿಸಿದೆ.

ದಿನದ ಸುದ್ದಿ
ವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್ಗೆ ರಾಜೀನಾಮೆ ಸವಾಲು!
ಸುದ್ದಿದಿನ, ಬಳ್ಳಾರಿ: ಬಳ್ಳಾರಿಯಲ್ಲಿ ರಾಜಕೀಯ ವಾಕ್ಸಮರ ಮತ್ತೊಮ್ಮೆ ತೀವ್ರಗೊಂಡಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣವನ್ನು ಮುಂದಿಟ್ಟುಕೊಂಡು ಮಾಜಿ ಸಚಿವ ಬಿ. ನಾಗೇಂದ್ರ ವಿರುದ್ಧ ಮಾಜಿ ಸಚಿವ ಜನಾರ್ಧನ ರೆಡ್ಡಿ ತೀವ್ರ ವಾಗ್ದಾಳಿ ನಡೆಸಿದ್ದಾರೆ. ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ನಿಗಮದ ಹಣ ದುರ್ಬಳಕೆ ಹಾಗೂ ಚಂದ್ರಶೇಖರ್ ಸಾವಿನ ವಿಚಾರವನ್ನು ಪ್ರಸ್ತಾಪಿಸಿ ನಾಗೇಂದ್ರ ವಿರುದ್ಧ ಹಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ.
ಹೈಲೈಟ್ಸ್ |
|
ನಾಗೇಂದ್ರ ಅವರು ಕಣ್ಣೀರು ಹಾಕುವ ಮೂಲಕ ತಮ್ಮ ಮೇಲಿನ ಆರೋಪಗಳನ್ನು ಮುಚ್ಚಿಹಾಕಲು ಪ್ರಯತ್ನಿಸುತ್ತಿದ್ದಾರೆ ಎಂದು ರೆಡ್ಡಿ ಟೀಕಿಸಿದ್ದಾರೆ. ಚಂದ್ರಶೇಖರ್ ಸಾವಿಗೆ ಸಂಬಂಧಿಸಿದಂತೆ ನಾಗೇಂದ್ರ ಅವರ ವಿರುದ್ಧ ನೇರ ಆರೋಪದ ಧಾಟಿಯಲ್ಲಿ ಮಾತನಾಡಿದ ಅವರು, ಈ ಪ್ರಕರಣದ ಸಂಪೂರ್ಣ ಸತ್ಯ ಹೊರಬರಬೇಕಿದೆ ಎಂದು ಹೇಳಿದ್ದಾರೆ.

http://Visit : www.suddidina.com
₹187 ಕೋಟಿ ಹಗರಣದ ಆರೋಪ ಮತ್ತೆ ಮುನ್ನೆಲೆಗೆ
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ಅಕ್ರಮವಾಗಿ ವರ್ಗಾವಣೆಯಾಗಿದೆ ಎಂಬ ಆರೋಪವನ್ನು ಪುನರುಚ್ಚರಿಸಿದ ಜನಾರ್ಧನ ರೆಡ್ಡಿ, ಪ್ರಕರಣದಲ್ಲಿ ಹಲವು ವ್ಯಕ್ತಿಗಳು ಮತ್ತು ನೂರಾರು ಬ್ಯಾಂಕ್ ಖಾತೆಗಳ ಬಳಕೆಯಾಗಿದೆ ಎಂದು ಹೇಳಿದ್ದಾರೆ. ತಮ್ಮ ಹೇಳಿಕೆಯಲ್ಲಿ ಕೆಲವರ ಖಾತೆಗಳಿಗೆ ₹6.50 ಕೋಟಿ ವರ್ಗಾವಣೆಯಾಗಿದೆ ಎಂದು ಉಲ್ಲೇಖಿಸಿದ ಅವರು, ನಗದು ಹಾಗೂ ಚಿನ್ನಾಭರಣ ಖರೀದಿಯ ಬಗ್ಗೆಯೂ ಆರೋಪ ಮಾಡಿದ್ದಾರೆ.
ಹಗರಣದಲ್ಲಿ ನಾಗೇಂದ್ರ ಅವರ ಪಾತ್ರವಿದೆ ಎಂಬುದು ಸ್ಪಷ್ಟ ಎಂದು ರೆಡ್ಡಿ ಆರೋಪಿಸಿದ್ದು, ತಪ್ಪು ಮಾಡಿಲ್ಲ ಎನ್ನುವ ನಾಗೇಂದ್ರ ಅವರಿಗೆ ಕಾಂಗ್ರೆಸ್ ಪಕ್ಷ ಏಕೆ ಸಚಿವ ಸ್ಥಾನದಿಂದ ರಾಜೀನಾಮೆ ಪಡೆಯಿತು ಎಂಬ ಪ್ರಶ್ನೆಯನ್ನೂ ಮುಂದಿಟ್ಟಿದ್ದಾರೆ.
ರಾಜಕೀಯ ಹಿನ್ನೆಲೆ ಕೆದಕಿದ ರೆಡ್ಡಿ
ನಾಗೇಂದ್ರ ಅವರ ರಾಜಕೀಯ ಬೆಳವಣಿಗೆಯಲ್ಲಿ ಬಿಜೆಪಿಯ ಪಾತ್ರವಿತ್ತು ಎಂದು ಹೇಳಿದ ರೆಡ್ಡಿ, ಬಿಜೆಪಿ ವಿರುದ್ಧ ಮಾತನಾಡುವ ಮೊದಲು ತಮ್ಮ ರಾಜಕೀಯ ಆರಂಭವನ್ನು ನೆನಪಿಸಿಕೊಳ್ಳಬೇಕು ಎಂದು ಟಾಂಗ್ ನೀಡಿದ್ದಾರೆ. ಮನुस್ಮೃತಿ, ಬಿಜೆಪಿ ಹಾಗೂ ವಾಲ್ಮೀಕಿ ಸಮುದಾಯದ ವಿಚಾರದಲ್ಲಿ ನಾಗೇಂದ್ರ ನೀಡಿರುವ ಹೇಳಿಕೆಗಳಿಗೂ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಇದೇ ವೇಳೆ, ಕಾಂಗ್ರೆಸ್ ನಾಯಕರು ಚುನಾವಣೆಯಲ್ಲಿ ಸೋಲು-ಗೆಲುವು ಕಂಡಿರುವುದನ್ನು ಉಲ್ಲೇಖಿಸಿದ ರೆಡ್ಡಿ, ಶ್ರೀರಾಮುಲು ಅವರನ್ನು ‘ರಿಜೆಕ್ಟೆಡ್ ಪೀಸ್’ ಎಂದು ಟೀಕಿಸಿದ್ದ ನಾಗೇಂದ್ರ ಅವರ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
10 ಕ್ಷೇತ್ರಗಳಿಗೆ ರಾಜೀನಾಮೆ ನೀಡಿ ಚುನಾವಣೆ ಎದುರಿಸುವಂತೆ ಸವಾಲು
ಅಖಂಡ ಬಳ್ಳಾರಿ ಜಿಲ್ಲೆಯ 10 ವಿಧಾನಸಭಾ ಕ್ಷೇತ್ರಗಳ ಶಾಸಕರು ಹಾಗೂ ಸಂಸದರು ರಾಜೀನಾಮೆ ನೀಡಿ ಮತ್ತೆ ಚುನಾವಣೆಗೆ ಬಂದರೆ ಬಿಜೆಪಿ ಸಿದ್ಧವಿದೆ ಎಂದು ಜನಾರ್ಧನ ರೆಡ್ಡಿ ಸವಾಲು ಹಾಕಿದ್ದಾರೆ. ಹತ್ತು ಕ್ಷೇತ್ರಗಳಲ್ಲೂ ಬಿಜೆಪಿ ಗೆಲ್ಲಿಸುವ ಮೂಲಕ ತಮ್ಮ ರಾಜಕೀಯ ಶಕ್ತಿ ಪ್ರದರ್ಶಿಸುವುದಾಗಿ ಅವರು ಹೇಳಿದ್ದಾರೆ.
ನಾಗೇಂದ್ರ ರಾಜೀನಾಮೆ ನೀಡಿದ್ದರೂ ಉತ್ತರ ಕರ್ನಾಟಕದ ಸಮಸ್ಯೆಗಳನ್ನು ಮುಂದಿಟ್ಟುಕೊಂಡು ಬಿಜೆಪಿ ಹೋರಾಟ ಮುಂದುವರಿಸಲಿದೆ ಎಂದು ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ತುಕಾರಾಂ ರಾಜೀನಾಮೆಗೂ ಆಗ್ರಹ
ವಾಲ್ಮೀಕಿ ಹಗರಣದ ಹಣದ ಪ್ರಭಾವದಿಂದಲೇ ತುಕಾರಾಂ ಸಂಸದರಾಗಿದ್ದಾರೆ ಎಂದು ಆರೋಪಿಸಿದ ಜನಾರ್ಧನ ರೆಡ್ಡಿ, ಮೊದಲು ಕಾಂಗ್ರೆಸ್ ತುಕಾರಾಂ ಅವರ ರಾಜೀನಾಮೆ ಪಡೆಯಬೇಕು ಎಂದು ಆಗ್ರಹಿಸಿದ್ದಾರೆ. ಈ ಆರೋಪಗಳು ರಾಜಕೀಯ ವಲಯದಲ್ಲಿ ಮತ್ತಷ್ಟು ಚರ್ಚೆಗೆ ಕಾರಣವಾಗುವ ಸಾಧ್ಯತೆ ಇದೆ.

-
ದಿನದ ಸುದ್ದಿ5 days agoವಂಚನೆ | ಪ್ರಭಾರ ಕಾರ್ಯಪಾಲಕ ಅಭಿಯಂತರ ಸೋಮ್ಲನಾಯ್ಕ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ6 days agoಭರವಸೆ ಕೊಟ್ಟು ಯುವಜನರನ್ನು ಮನೆಗೆ ಕಳುಹಿಸಿದ ಸರ್ಕಾರಕ್ಕೆ ಈಗ ಪ್ರತಿಭಟನೆಯ ಬಿಸಿ: ಸೆ.5ಕ್ಕೆ ದೆಹಲಿಯಲ್ಲಿ CJP ಬೃಹತ್ ಮೆರವಣಿಗೆ!
-
ದಿನದ ಸುದ್ದಿ6 days agoKPSC ಪರೀಕ್ಷಾ ಹಗರಣ: 329 ಅಭ್ಯರ್ಥಿಗಳಿಗೆ CID ನೋಟಿಸ್, IAS ಅಧಿಕಾರಿ ವಿರುದ್ಧ ED ಆರೋಪ
-
ದಿನದ ಸುದ್ದಿ5 days agoಇಂಗ್ಲಿಷ್ ಕಲಿಯಲು ಬಂದ ಜಪಾನ್ ಯುವಕ ಜೈಲು ಸೇರಿದ ; 75000 ಪರಿಹಾರ ಪಡೆದ
-
ದಿನದ ಸುದ್ದಿ6 days agoಸರ್ವರ್ ಡೌನ್, ಅಧಿಕಾರಿಗಳ ವಿಳಂಬ: ‘ಎ-ಖಾತೆ’ಗಾಗಿ ಕಾದು ಕುಳಿತ 60 ಸಾವಿರಕ್ಕೂ ಹೆಚ್ಚು ಅರ್ಜಿದಾರರು!
-
ದಿನದ ಸುದ್ದಿ6 days ago₹25 ಕೋಟಿ ಮೌಲ್ಯದ ಬಿಡಿಎ ಆಸ್ತಿ ವಶಕ್ಕೆ: ರಾಜಾಜಿನಗರ ಬಡಾವಣೆಯಲ್ಲಿ ಅನಧಿಕೃತ ನಿರ್ಮಾಣಕ್ಕೆ ಬಿತ್ತು ಬೀಗ
-
ದಿನದ ಸುದ್ದಿ5 days agoಡಾಲಿಯ ಕನಸು ಒಂದೇ ಹೀರೋ ಆಗೋದು
-
ದಿನದ ಸುದ್ದಿ6 days agoತುಂಗಭದ್ರಾದಲ್ಲಿ ನೀರಿನ ಹರಿವು ಕುಸಿತ: ಹರಿಹರದ 24×7 ‘ಜಲಸಿರಿ’ಗೆ ಬ್ರೇಕ್, ನೀರು ಪೂರೈಕೆ ಸಮಯ ಕಡಿತ

