ದಿನದ ಸುದ್ದಿ
ಕೇಂದ್ರ ಸರ್ಕಾರ ಕೂಡಲೇ 5 ಸಾವಿರ ಕೋಟಿ ನೆರವು ಘೋಷಿಸಬೇಕು : ಸಿದ್ದರಾಮಯ್ಯ
ಸುದ್ದಿದಿನ, ಬೆಂಗಳೂರು : ಅನ್ನಭಾಗ್ಯ ಯೋಜನೆಯ ಏಳು ಕೆ.ಜಿ. ಅಕ್ಕಿಯಲ್ಲಿ ಕಡಿತ ಮಾಡಿದರೆ ಸರ್ಕಾರ ಬಡವರ ಹೊಟ್ಟೆ ಮೇಲೆ ಹೊಡೆದಂತಾಗುತ್ತದೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರ ಈ ಪ್ರಸ್ತಾವನೆಯನ್ನು ಕಾಂಗ್ರೆಸ್ ಪಕ್ಷ ತೀವ್ರವಾಗಿ ವಿರೋಧಿಸುತ್ತದೆ. ಇದರ ವಿರುದ್ಧ ನಾವು ಬೀದಿಗಿಳಿದು ಹೋರಾಟ ಮಾಡುತ್ತೇವೆ. ಅಷ್ಟೇ ಅಲ್ಲ, ಸದನದ ಒಳಗೂ ಪ್ರತಿಭಟನೆ ಮಾಡುತ್ತೇವೆ ಎಂದು ಮಾಜಿ ಮುಖ್ಯಮಂತ್ರಿ, ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಪತ್ರಿಕಾಗೋಷ್ಠಿಯಲ್ಲಿ ಯಡಿಯೂರಪ್ಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ನಮ್ಮ ಸರ್ಕಾರ ರಾಜ್ಯದಲ್ಲಿ ಬಿಪಿಎಲ್ ಕಾರ್ಡು ಹೊಂದಿರುವ ನಾಲ್ಕು ಕೋಟಿ ಜನರಿಗೆ 7 ಕೆಜಿ ಅಕ್ಕಿಯನ್ನ ಉಚಿತವಾಗಿ ನೀಡುತ್ತಿತ್ತು. ಬಿಜೆಪಿ ಸರ್ಕಾರ ರಚನೆ ಆದ ಮೇಲೆ ಅನ್ನಭಾಗ್ಯ ಅಕ್ಕಿ ಕಡಿಮೆ ಮಾಡಲು ಚರ್ಚೆ ನಡೆದಿದೆಎಂಬ ಮಾಹಿತಿ ಬಂದಿದೆ. ಕಡಿತ ಮಾಡಿದ ಅಕ್ಕಿ ಹಣವನ್ನ ಕಿಸಾನ್ ಸಮ್ಮಾನ್ ಯೋಜನೆಗೆ ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ. ಈ ಯೋಜನೆಯಲ್ಲಿ ರೈತರಿಗೆ 4 ಸಾವಿರ ಕೊಡಲು ನಮ್ಮದೇನು ಅಡ್ಡಿ ಇಲ್ಲ. ಆದರೆ, ಬಡವರ ಅಕ್ಕಿ ಕಡಿತ ಮಾಡಿ ಹಣ ನೀಡ್ತೇವೆ ಅನ್ನೊದು ಬಡವರ ವಿರೋಧಿ ಧೋರಣೆ ಎಂದರು.
ಅನ್ನಭಾಗ್ಯ ಅಕ್ಕಿ ಕಡಿತ ಮಾಡುವ ಯೋಚನೆ ಸರ್ಕಾರದ ಮುಂದೆ ಇದ್ದರೆ ಅದನ್ನ ಕೂಡಲೇ ಕೈ ಬಿಡಬೇಕು.ಅನ್ನಭಾಗ್ಯ ಯೋಜನೆ ಜಾರಿಗೆ ಬಂದ ಮೇಲೆ ಗುಳೆ ಪದ್ಧತಿ ಕಡಿಮೆ ಆಗಿದೆ. ಬಡವರು ಎರಡು ಹೊತ್ತು ಊಟ ಮಾಡುತ್ತಿದ್ದಾರೆ. ಇದು ಇಡೀ ದೇಶದಲ್ಲಿ ಮೆಚ್ಚುಗೆ ಪಡೆದಿರುವ ಕಾರ್ಯಕ್ರಮ.
ಇಂದಿರಾ ಕ್ಯಾಂಟೀನ್ ಗೆ ಸರ್ಕಾರ ಹಣ ನೀಡುತ್ತಿಲ್ಲ. ಬಿಬಿಎಂಪಿಯವರೇ ನಿರ್ವಹಿಸ ಬೇಕು ಎಂದು ಸರ್ಕಾರ ಹೇಳುತ್ತಿದೆ. ಕ್ಯಾಂಟೀನ್ ನಿರಂತರವಾಗಿ ನಡೆಯಬೇಕಾದರೆ
ಅಲ್ಲಿ ಗುಣಮಟ್ಟದ ಆಹಾರ ಸಿಗಬೇಕಾದರೆ ಇಂದಿರಾ ಕ್ಯಾಂಟೀನ್ ವೆಚ್ಚವನ್ನ ರಾಜ್ಯ ಸರ್ಕಾರ ಭರಿಸಬೇಕು. ಬಡವರಿಗೆ ಕಡಿಮೆ ದರದಲ್ಲಿ ಪೌಷ್ಟಿಕ ಆಹಾರ ಸಿಗಬೇಕು ಅಂತ ಈ ಯೋಜನೆ ಮಾಡಲಾಗಿದೆ. ಇದು ನಮ್ಮ ಸರ್ಕಾರದ ಆದ್ಯತೆಯ ಕಾರ್ಯಕ್ರಮ ಎಂದು ಹೇಳಿದರು.
ಸಿಎಂ ಯಡಿಯೂರಪ್ಪ ಪ್ರಮಾಣ ವಚನ ಸ್ವೀಕರಿಸಿ 22 ದಿನ ಕಳೆದವು.ಆದರೆ, ಇನ್ನು ರಾಜ್ಯದಲ್ಲಿ ಸರ್ಕಾರ ಪೂರ್ಣ ಪ್ರಮಾಣದಲ್ಲಿ
ಇಲ್ಲ. ಒಂದೆಡೆ ಪ್ರವಾಹ, ಇನ್ನೊಂದೆಡೆ ಬರ ಎರಡೂ ಇದೆ. ಕೋಲಾರ, ಚಿಕ್ಕಬಳ್ಳಾಪುರ, ರಾಮ ನಗರ, ಬೆಂಗಳೂರು, ರಾಯಚೂರು, ಯಾದಗಿರಿ, ವಿಜಯಪುರ ಜಿಲ್ಲೆಗಳಲ್ಲಿ ಮಳೆ ಪ್ರಮಾಣ ವಾಡಿಕೆಗಿಂತ ಶೇ20 ಕಡಿಮೆ ಆಗಿದೆ.ಇವತ್ತಿನವರೆಗೆ ಬರ ಪೀಡಿತ ಪ್ರದೇಶಗಳ ಘೋಷಣೆ ಆಗಿಲ್ಲ. ಬರ ಪೀಡಿತ ಅಂತ ಘೋಷಣೆ ಮಾಡದೆ ಇದ್ದರೆ ಪರಿಹಾರ ಪಡೆಯಲು ಆಗಲ್ಲ ಎಂದು ಕಿಡಿಕಾರಿದರು.
ಮಳೆಯಾಗದೆ ಬಿತ್ತನೆ ಮಾಡಿರುವ ಬೆಳೆ ಹಾಳಾಗಿದೆ. ಕೆಲವೆಡೆ ಬಿತ್ತನೆ ಸಹ ಆಗ್ತಿಲ್ಲ. ಮಳೆ ಇಲ್ಲದೆ ಜಾನುವಾರುಗಳುಗೆ ಮೇವಿಲ್ಲದಂತಾಗಿದೆ.ಯಡಿಯೂರಪ್ಪ ಸಿಎಂ ಆಗಿ 22 ದಿನ ಆಯ್ತು. ದನಕರುಗಳಿಗೆ ಮೇವು ಕೊಡ್ತಿಲ್ಲ, ಯುವಕರಿಗೆ ಉದ್ಯೋಗ ಸಿಗ್ತಿಲ್ಲ. ಅವರು, ರೈತರಿಗೆ, ಬಡವರಿಗೆ ಸಹಾಯ ಮಾಡ್ತಿಲ್ಲ.ಹಾಗಿದ್ರೆ ಈ ಸರ್ಕಾರ ಯಾಕೆ ಇರಬೇಕು. ಸರ್ಕಾರ ಕೂಡಲೇ ಬರ ಪ್ರದೇಶಗಳನ್ನ ಘೋಷಿಸಬೇಕು ಎಂದರು.
ರಾಜ್ಯದ ಇತಿಹಾಸದಲ್ಲಿ ಮೊದಲ ಬಾರಿಗೆ ಜಿಲ್ಲಾ ಮಂತ್ರಿಗಳಿಲ್ಲದೆ ಸ್ವಾತಂತ್ರ್ಯ ದಿನಾಚರಣೆ ಮಾಡಲಾಗಿದೆ. ಪ್ರಜಾಪ್ರಭುತ್ವ ಇದ್ಯಾ, ಇದನ್ನೆ ಪ್ರಜಾಪ್ರಭುತ್ವ ಅಂತ ಕರೆಯೋದಾ. ಅಧಿಕಾರಿಗಳು ಧ್ವಜಾರೋಹಣ ಮಾಡಿದ್ದಾರೆ.ಯಡಿಯೂರಪ್ಪ ಬಹಳ ಮಾತಾಡ್ತಾರೆ, ಅವರು ಕೇಂದ್ರದ ಮೇಲೆ ಏಕೆ ಒತ್ತಡ ಹೇರುವುದಿಲ್ಲ. ಪ್ರವಾಹ ಪೀಡಿತ ಪ್ರದೇಶಗಳಿಗೆ ಕೇಂದ್ರದಿಂದ ಇವತ್ತಿನವರೆಗೂ ಒಂದು ರೂಪಾಯಿ ನೀಡಿಲ್ಲ. ಪ್ರಧಾನಿಗಳೇ ಸ್ವತಃ ರಾಜ್ಯಕ್ಕೆ ಭೇಟಿ ನೀಡಬೇಕಿತ್ತು. ಇಬ್ಬರು ಸಚಿವರನ್ನ ಕಳುಹಿಸಿದ್ದೇವೆ ಅಂತಾರೆ. ಅವರೇನಾದ್ರೂ ಪರಿಹಾರ ಘೋಷಿಸಿದ್ದಾರಾ. ಈವರೆಗೆ ಎಷ್ಟು ನಷ್ಟ ಆಗಿದೆ ಎಂಬ ವರದಿಯನ್ನೇ ತಯಾರಿಸಿಲ್ಲ.ಪ್ರವಾಹ, ಬರಪೀಡಿತ ಪ್ರದೇಶಗಳಲ್ಲಿ ಸೋಮವಾರದಿಂದ ಪ್ರವಾಸ ಕೈಗೊಳ್ಳುತ್ತೇನೆ. ಕೂಡಲೇ ಕೇಂದ್ರ ಸರ್ಕಾರ 5 ಸಾವಿರ ಕೋಟಿ ಬಿಡುಗಡೆ ಮಾಡಬೇಕು ಎಂದು ಕೇದ್ರಸರ್ಕಾಕ್ಕೆ ಒತ್ತಾಯಿಸಿದರು.
ಯಡಿಯೂರಪ್ಪ, ಪ್ರಧಾನ ಮಂತ್ರಿಗಳಿಗೆ ಏನಾದ್ರೂ ಹೆದರುತ್ತಾರೋ ಹೇಗೆ ? ಸರ್ವ ಪಕ್ಷ ನಿಯೋಗವನ್ನಾದ್ರು ಕರೆದುಕೊಂಡು ಹೋಗಿ ನಾವೇ ಮಾತಾಡ್ತೇವೆ. ಇಷ್ಟು ನಿರ್ಲಜ್ಜವಾದ ಸರ್ಕಾರವನ್ನ ನಾನು ನೋಡಿರಲಿಲ್ಲ.
ಇಷ್ಟೇಲ್ಲಾ ಆಗಿದೆ ಇದರ ಬಗ್ಗೆ ಚರ್ಚೆಗೆ ವಿಧಾನ ಮಂಡಲ ಅಧಿವೇಶನ ಕರೆಯಿರಿ ಎಂದು ಒತ್ತಾಯಿಸುತ್ತೇನೆ. ಪ್ರಜಾಪ್ರಭುತ್ವ ವಿರೋಧಿಯಾಗಿ ಸರ್ಕಾರ ರಚನೆ ಆಗಿದೆ. ಸರ್ಕಾರಕ್ಕೆ ಯಾವುದೇ ತತ್ವ ಸಿದ್ಧಾಂತಗಳಿಲ್ಲ. ಕಣ್ಣು, ಕಿವಿ ಇಲ್ಲದ ಇಂತಹ ಸರ್ಕಾರವನ್ನ ನಾನು ಎಂದಿಗೂ ನೋಡಿಲ್ಲ. ಪ್ರಧಾನ ಮಂತ್ರಿಗಳು ರಾಜ್ಯದ ಪ್ರವಾಹದ ಬಗ್ಗೆ ಒಂದೇ ಒಂದು ಮಾತನಾಡಿಲ್ಲ. 6 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬೆಳೆ ನಾಶ ಆಗಿದೆ. ಒಟ್ಟಾರೆ 1ಲಕ್ಷ ಕೋಟಿ ನಷ್ಟ ಆಗಿದೆ. ಕೇಂದ್ರ ಸರ್ಕಾರ ಕೂಡಲೇ 5 ಸಾವಿರ ಕೋಟಿ ರೂ.ಗಳ ನೆರವು ಘೋಷಿಸಬೇಕು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ
ಸುದ್ದಿದಿನ,ದೆಹಲಿ:2027ರ ಜನಗಣತಿಯನ್ನು ನಡೆಸಲು ಸಂಪುಟವು 11 ಸಾವಿರದ 718 ಕೋಟಿ ರೂಪಾಯಿಗಳ ಬಜೆಟ್ಅನ್ನು ಅಂಗೀಕರಿಸಿದೆ. ಈ ಕುರಿತು ಮಾಹಿತಿ ನೀಡಿದ ಸಚಿವರು, 2027ರ ಜನಗಣತಿಯನ್ನು ಎರಡು ಹಂತಗಳಲ್ಲಿ ನಡೆಸಲಾಗುವುದು ಎಂದು ಹೇಳಿದರು.
ಇದು ಮೊದಲ ಡಿಜಿಟಲ್ ಜನಗಣತಿಯಾಗಲಿದೆ. 2027 ರ ಜನಗಣತಿಯು ಒಟ್ಟಾರೆ 16ನೇ ಮತ್ತು ಸ್ವಾತಂತ್ರ್ಯದ ನಂತರದ 8 ನೇ ಜನಗಣತಿಯಾಗಲಿದೆ. ಭಾರತದ ಜನಗಣತಿಯನ್ನು ವಿಶ್ವದ ಅತಿದೊಡ್ಡ ಆಡಳಿತಾತ್ಮಕ ಮತ್ತು ಸಂಖ್ಯಾಶಾಸ್ತ್ರೀಯ ಕ್ರಮವೆಂದು ಪರಿಗಣಿಸಲಾಗಿದೆ ಎಂದು ಅವರು ತಿಳಿಸಿದರು.
ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು 2026ರ ಹಂಗಾಮಿಗೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆಗೆ ಅನುಮೋದನೆ ನೀಡಿದೆ. ಬೆಳೆಗಾರರಿಗೆ ಲಾಭದಾಯಕ ಬೆಲೆಗಳನ್ನು ಒದಗಿಸುವ ಸಲುವಾಗಿ, ಸರ್ಕಾರವು 2018-19 ರ ಕೇಂದ್ರ ಬಜೆಟ್ನಲ್ಲಿ ಎಲ್ಲಾ ಕಡ್ಡಾಯ ಬೆಳೆಗಳ ಎಂಎಸ್ಪಿ ಅನ್ನು ಅಖಿಲ ಭಾರತ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಠ 1.5 ಪಟ್ಟು ಮಟ್ಟದಲ್ಲಿ ನಿಗದಿಪಡಿಸಲಾಗುವುದು ಎಂದು ಘೋಷಿಸಿತ್ತು. ಮಿಲ್ಲಿಂಗ್ ಕೊಬ್ಬರಿಗೆ ಎಂಎಸ್ಪಿಯನ್ನು ಕ್ವಿಂಟಲ್ಗೆ 445 ರೂಪಾಯಿಗಳಿಂದ 12 ಸಾವಿರದ 27 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ ಮತ್ತು ಅದೇ ಅವಧಿಗೆ ಉಂಡೆ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 2026ರ ಹಂಗಾಮಿಗೆ ಕ್ವಿಂಟಲ್ಗೆ 400 ರೂಪಾಯಿಗಳಿಂದ 12 ಸಾವಿರದ 500 ರೂಪಾಯಿಗಳಿಗೆ ಹೆಚ್ಚಿಸಲಾಗಿದೆ.
ಹೆಚ್ಚಿನ ಕನಿಷ್ಠ ಬೆಂಬಲ ಬೆಲೆಯು ತೆಂಗಿನ ಬೆಳೆಗಾರರಿಗೆ ಉತ್ತಮ ಲಾಭದಾಯಕ ಆದಾಯವನ್ನು ಖಚಿತಪಡಿಸುವುದಲ್ಲದೆ, ದೇಶೀಯವಾಗಿ ಮತ್ತು ಅಂತಾರಾಷ್ಟ್ರೀಯವಾಗಿ ತೆಂಗಿನ ಉತ್ಪನ್ನಗಳಿಗೆ ಹೆಚ್ಚುತ್ತಿರುವ ಬೇಡಿಕೆಯನ್ನು ಪೂರೈಸಲು ಕೊಬ್ಬರಿ ಉತ್ಪಾದನೆಯನ್ನು ವಿಸ್ತರಿಸಲು ರೈತರನ್ನು ಪ್ರೋತ್ಸಾಹಿಸುತ್ತದೆ ಎಂದು ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
ಸುದ್ದಿದಿನ,ದೆಹಲಿ:ಕೇಂದ್ರ ಸರ್ಕಾರವು ’ಕೋಲ್ಸೇತು’ ನೀತಿಯನ್ನು ಅನುಮೋದಿಸಿದೆ. ಇದು ವಿವಿಧ ಕೈಗಾರಿಕಾ ಬಳಕೆಗಳು ಮತ್ತು ರಫ್ತಿಗೆ ಕಲ್ಲಿದ್ದಲು ಸಂಪರ್ಕಗಳ ಹರಾಜಿಗೆ ಹೊಸ ವ್ಯವಸ್ಥೆ ಸೃಷ್ಟಿಸುತ್ತದೆ, ಹಾಗೂ ಸಂಪನ್ಮೂಲಗಳ ನ್ಯಾಯಯುತ ಪ್ರವೇಶ ಮತ್ತು ಅತ್ಯುತ್ತಮ ಬಳಕೆಯನ್ನು ಖಚಿತಪಡಿಸುತ್ತದೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ಆರ್ಥಿಕ ವ್ಯವಹಾರಗಳ ಸಚಿವ ಸಂಪುಟ ಸಮಿತಿಯು ನಿನ್ನೆ ತಡೆರಹಿತ, ದಕ್ಷ ಮತ್ತು ಪಾರದರ್ಶಕ ಬಳಕೆಗಾಗಿ ಕಲ್ಲಿದ್ದಲು ಸಂಪರ್ಕದ ಹರಾಜು ನೀತಿಗೆ ಅನುಮೋದನೆ ನೀಡಿತು.
ನವದೆಹಲಿಯಲ್ಲಿ ನಿನ್ನೆ ಸಂಜೆ ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವ ಅಶ್ವಿನಿ ವೈಷ್ಣವ್, 2016ರ ಎನ್ಆರ್ಎಸ್ ನಿಯಂತ್ರಿತವಲ್ಲದ ವಲಯದ ಸಂಪರ್ಕ ಹರಾಜು ನೀತಿಯಲ್ಲಿ ’ಕೋಲ್ಸೇತು’ ಎಂಬ ಪ್ರತ್ಯೇಕ ವ್ಯವಸ್ಥೆಯನ್ನು ಸೇರಿಸುವ ಮೂಲಕ ಯಾವುದೇ ಕೈಗಾರಿಕಾ ಬಳಕೆ ಮತ್ತು ರಫ್ತಿಗೆ ದೀರ್ಘಾವಧಿಯವರೆಗೆ ಹರಾಜು ಆಧಾರದ ಮೇಲೆ ಕಲ್ಲಿದ್ದಲು ಸಂಪರ್ಕಗಳ ಹಂಚಿಕೆಗೆ ಈ ನೀತಿಯು ಅವಕಾಶ ನೀಡುತ್ತದೆ ಎಂದು ಹೇಳಿದರು.
ಕಲ್ಲಿದ್ದಲು ಅಗತ್ಯವಿರುವ ಯಾವುದೇ ದೇಶೀಯ ಖರೀದಿದಾರರು ಅಂತಿಮ ಬಳಕೆಯನ್ನು ಲೆಕ್ಕಿಸದೆ ಸಂಪರ್ಕ ಹರಾಜಿನಲ್ಲಿ ಭಾಗವಹಿಸಬಹುದು ಎಂದು ಅವರು ಹೇಳಿದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
ಸುದ್ದಿದಿನ,ದಾವಣಗೆರೆ: ಪ್ರಸಕ್ತ ಸಾಲಿಗೆ ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಉದ್ಯೋಗಿನಿ, ಚೇತನಾ, ಧನಶ್ರೀ, ಲಿಂಗತ್ವ ಅಲ್ಪ ಸಂಖ್ಯಾತರ ಪುನರ್ವಸತಿ ಯೋಜನೆ ಹಾಗೂ ಮಾಜಿ ದೇವದಾಸಿ ಮಹಿಳೆಯರ ಪುನರ್ ವಸತಿ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸುವ ಅವಧಿಯನ್ನು 15 ಜನವರಿ 2026 ರವರೆಗೆ ವಿಸ್ತರಿಸಲಾಗಿದೆ ಎಂದು ಇಲಾಖೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ6 days agoಯಮ ಸ್ವರೂಪಿ ಗ್ಯಾಸ್ ಗೀಸರ್ ಬಳಸೋ ಮುನ್ನ ಎಚ್ಚರ ; ಇವಿಷ್ಟನ್ನು ಪಾಲಿಸಿ ಅಪಾಯ ತಡೆಗಟ್ಟಿ
-
ದಿನದ ಸುದ್ದಿ5 days agoಬೆಂಬಲ ಬೆಲೆ | ಮೆಕ್ಕೆಜೋಳ ಖರೀದಿ ಪ್ರಕ್ರಿಯೆ ಪ್ರಾರಂಭ: ಡಿಸಿ ಗಂಗಾಧರಸ್ವಾಮಿ
-
ದಿನದ ಸುದ್ದಿ4 days agoಪತ್ರಿಕೋದ್ಯಮ ಪದವೀಧರರಿಗೆ ಸಿಹಿ ಸುದ್ದಿ | ವಾರ್ತಾ ಇಲಾಖೆಯಲ್ಲಿ ಅಪ್ರೆಂಟಿಸ್ ತರಬೇತಿ ; ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoಅಂಚೆ ಇಲಾಖೆಯಿಂದ ಸೆಲ್ಪ್ ಬುಕ್ಕಿಂಗ್ ಸೌಲಭ್ಯ
-
ದಿನದ ಸುದ್ದಿ2 days agoಮಹಿಳೆಯರ ಪುನರ್ ವಸತಿ ಯೋಜನೆ | ಅರ್ಜಿ ಆಹ್ವಾನ ; ಅವಧಿ ವಿಸ್ತರಣೆ
-
ದಿನದ ಸುದ್ದಿ2 days agoಕೋಲ್ಸೇತು ನೀತಿಗೆ ಕೇಂದ್ರ ಸಚಿವ ಸಂಪುಟ ಅನುಮೋದನೆ; ಸಂಪನ್ಮೂಲಗಳ ನ್ಯಾಯಯುತ ಬಳಕೆಗೆ ಒತ್ತು
-
ದಿನದ ಸುದ್ದಿ2 days ago2027ರ ಜನಗಣತಿ ನಡೆಸಲು ಬಜೆಟ್ ಅಂಗೀಕಾರ

