Connect with us

ದಿನದ ಸುದ್ದಿ

ದಾವಣಗೆರೆ |ಕರ್ನಾಟಕ ರಾಜ್ಯ ಕ್ರೈಸ್ ವಸತಿ ಶಾಲೆಗಳ ಅತಿಥಿ ಶಿಕ್ಷಕರ ಸಂಘದಿಂದ ಅನಿರ್ಧಿಷ್ಟಾವಧಿ ಪ್ರತಿಭಟನೆ

Published

on

ಸಾಂದರ್ಭಿಕ ಚಿತ್ರ

ರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಶಾಲೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಅತಿಥಿ ಶಿಕ್ಷಕರ ಈ ಕೆಳಕಂಡ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ದಿನಾಂಕ : 26-08-2019 ಸೋಮವಾರದಿಂದ ದಾವಣಗೆರೆ ನಗರದ ಉಪವಿಭಾಗಾಧಿಕಾರಿ (ಎ.ಸಿ) ಕಛೇರಿ ಮುಂದೆ ಅನಿರ್ಧಿಷ್ಟಾವಧಿಯ ಕಾಲ ಬೇಡಿಕೆ ಈಡೇರುವವರೆಗೂ ಮುಷ್ಕರ ಹಮ್ಮಿಕೊಳ್ಳಲಾಗಿದೆ.

1) ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ, (ಪ.ಜಾ)-836, ಅಣಜಿ, ದಾವಣಗೆರೆ ತಾ., ಜಿಲ್ಲೆ. ಇಲ್ಲಿ 10-06-2017ರಿಂದ ಸದರಿ ದಿನಾಂಕದವರೆಗೆ ಅತಿಥಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ಕನ್ನಡ ಅತಿಥಿ ಶಿಕ್ಷಕರಾದ ನಿಂಗಪ್ಪ ಬಿ., ಆಂಗ್ಲ ಭಾಷಾ ಶಿಕ್ಷಕರಾದ ದೊಡ್ಡಪ್ಪ ಆರ್., ಹಿಂದಿ ಭಾಷಾ ಶಿಕ್ಷಕರಾದ ಗಂಗಾಧರ ಬಿ.ಎಲ್. ಹಾಗೂ ಗಣಿತ ಶಿಕ್ಷಕರಾದ ವೀರೇಂದ್ರ ಪಟೇಲ್ ಜಿ. ಇವರು ತಮ್ಮನ್ನು ಖಾಯಂಗೊಳಿಸಲು ಕರ್ನಾಟಕ ರಾಜ್ಯ ಉಚ್ಚನ್ಯಾಯಾಲಯ ಬೆಂಗಳೂರು ಇವರ ಮೊರೆ ಹೋಗಿದ್ದು, ಇವರ ಉಚ್ಛ ನ್ಯಾಯಾಲಯದ ಆದೇಶ ಸಂಖ್ಯೆ : ಅಪೀಲು ಸಂಖ್ಯೆ I : wp/12562-12564/2018,(S-DIS) II : wp/45714-45716/2018, (S-RES) ಆಗಿದೆ. ಇವರಿಗೆ ಕರ್ನಾಟಕ ರಾಜ್ಯ ಉಚ್ಚನ್ಯಾಯಾಲಯವು ಮಧ್ಯಂತರ ತಡೆಯಾಜ್ಞೆ ನೀಡಿರುತ್ತದೆ. ಈ ತಡೆಯಾಜ್ಞೆಯು ಪ್ರಸ್ತುತ ಜಾರಿಯಲ್ಲಿರುತ್ತದೆ.

ಇದರ ಅನ್ವಯ ಅಂತಿಮ ತೀರ್ಪು ಹೊರ ಬೀಳುವವರೆಗೂ ಸದರಿ ಶಿಕ್ಷಕರುಗಳು ಶ್ರೀಮತಿ ಇಂದಿರಾಗಾಂಧಿ ವಸತಿ ಶಾಲೆ, (ಪ.ಜಾ)-836, ಅಣಜಿ, ದಾವಣಗೆರೆ ತಾ., ಜಿಲ್ಲೆ. ಇಲ್ಲಿ ಸೇವೆಯಲ್ಲಿ ಮುಂದುವರೆಯುವ ಹಕ್ಕನ್ನು ಹೊಂದಿದ್ದಾರೆ. ಆದರೆ ಸದರಿ ವಸತಿ ಶಾಲೆಯ ಪ್ರಬಾರಿ ಪ್ರಾಂಶುಪಾಲರಾದ ಶ್ರೀ ವಿ.ಸಿ. ಅಂಜಿನಪ್ಪ ಹಾಗೂ ದಾವಣಗೆರೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರಾದ ಶ್ರೀ ಶಿವಾನಂದ ಕುಂಬಾರ ಇವರು ಯಾವುದೇ ನೋಟಿಸ್ ಅಥವಾ ಕರ್ತವ್ಯದಿಂದ ಬಿಡುಗಡೆಗೊಳಿಸುವ ಪತ್ರವನ್ನು ನೀಡದೆ ಏಕಾಏಕಿ ಮೇಲ್ಕಂಡ ವಿಷಯಗಳ ಅತಿಥಿ ಶಿಕ್ಷಕರ ಜಾಗಕ್ಕೆ ವರ್ಗಾವಣೆಗೊಂಡ ಖಾಯಂ ಶಿಕ್ಷಕರನ್ನು ಕರ್ತವ್ಯಕ್ಕೆ ಹಾಜರುಪಡಿಸಿಕೊಂಡು ಮೌಖಿಕವಾಗಿ ಹೊರಹೋಗುವಂತೆ ಸೂಚಿಸಿದ್ದಾರೆ. ಯಾವುದೇ ಕಾರಣಕ್ಕೂ ಕರ್ತವ್ಯಕ್ಕೆ ಹಾಜರಾಗದಂತೆ ಒತ್ತಡ ಹೇರಿ ಮಾನಸಿಕ ಹಿಂಸೆ ನೀಡಿರುತ್ತಾರೆ. ಅಲ್ಲದೆ ಕರ್ನಾಟಕ ರಾಜ್ಯ ಉಚ್ಚನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ಸದರಿ ಅತಿಥಿ ಶಿಕ್ಷಕರುಗಳಿಗೆ ಅನ್ಯಾಯವೆಸಗಿದ್ದಾರೆ.

ಇದರಿಂದಾಗಿ ಇದೇ ವೃತ್ತಿಯನ್ನು ಅವಲಂಬಿಸಿರುವ ಅತಿಥಿ ಶಿಕ್ಷಕರುಗಳ ಮಾನವ ಸಂಪನ್ಮೂಲವನ್ನುದುರುಪಯೋಗಪಡಿಸಿಕೊಂಡಂತಾಗಿದೆ. ಆದ್ದರಿಂದ ಘನ ಉಚ್ಚನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆಯನ್ನು ಗೌರವಿಸಿ ಈ ಕೂಡಲೇ ರಾಜ್ಯ ಉಚ್ಚನ್ಯಾಯಾಲಯದ ಅಂತಿಮ ತೀರ್ಪು ಹೊರ ಬೀಳುವವರೆಗೂ ಸದರಿ ವಸತಿ ಶಾಲೆಯಲ್ಲಿಯೇ ಮುಂದುವರೆಸಬೇಕು.
ಈ ಸಂಬಂಧ ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಉಪಾಧ್ಯಕ್ಷರು ಮತ್ತು ರಾಜ್ಯ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಅಧೀನ ಕಾರ್ಯದರ್ಶಿಯವರು, ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘ (ರಿ.) ಬೆಂಗಳೂರು ಇದರ ಕಾರ್ಯನಿರ್ವಾಹಕ ಅಧಿಕಾರಿಗಳು ಹಾಗೂ ದಾವಣಗೆರೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕರು ಅತಿಥಿ ಶಿಕ್ಷಕರುಗಳ ಹೆಸರಿನಲ್ಲಿ ಆದೇಶ ನೀಡಬೇಕಾಗಿ ಆಗ್ರಹ.

2) ಅದೇ ರೀತಿ wp/45714-45716/2018,(S-RES))ರ ಅನ್ವಯ ರಾಜ್ಯ ಉಚ್ಚನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆಯಲ್ಲಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ, (ಪ.ಜಾ)-836, ಅಣಜಿ, ದಾವಣಗೆರೆ ತಾ., ಜಿಲ್ಲೆ. ಇಲ್ಲಿ ಅತಿಥಿ ಶಿಕ್ಷಕರುಗಳಾಗಿ ಸೇವೆ ಸಲ್ಲಿಸುತ್ತಿರುವ ದೈಹಿಕ ಶಿಕ್ಷಣ ಶಿಕ್ಷಕರಾದ ತಿಮ್ಮಪ್ಪ ಕೆ.ಜೆ., ವಿಜ್ಞಾನ ಶಿಕ್ಷಕಿಯಾದ ಮಧುಮತಿ ಎಂ., ಹಾಗೂ ಹರಪನಹಳ್ಳಿ ತಾ. ಬಳ್ಳಾರಿ ಜಿಲ್ಲೆ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆ, (ಪ.ಜಾ)-509, ಇಲ್ಲಿ ಆಂಗ್ಲಭಾಷಾ ಅತಿಥಿ ಶಿಕ್ಷಕರಾದ ಕೃಷ್ಣಮೂರ್ತಿ ಬಿ. ಇವರ ಜಾಗಕ್ಕೂ ಸಹ ಖಾಯಂ ಶಿಕ್ಷಕರ ವರ್ಗಾವಣೆ ಆಗಲಿದೆ ಎಂದು ಆಯಾ ಶಾಲೆಗಳ ಪ್ರಾಂಶುಪಾಲರುಗಳು ಹೇಳಿರುವುದಾಗಿ ತಿಳಿದುಬಂದಿದೆ. ಆದ್ದರಿಂದ ಇವರಿಗೆ ಯಾವುದೇ ತೊಂದರೆ ಮಾಡದಂತೆ ಸದರಿ ಸ್ಥಳದಲ್ಲಿಯೇ ಮುಂದುವರೆಸಬೇಕಾಗಿ ಕೋರಿಕೆ.

3) ಇದೇ ರೀತಿ ರಾಜ್ಯಾದ್ಯಂತ ಉಚ್ಚನ್ಯಾಯಾಲಯದ ಮಧ್ಯಂತರ ತಡೆಯಾಜ್ಞೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅತಿಥಿ ಶಿಕ್ಷಕರುಗಳಿಗೆ ಆಯಾ ಸ್ಥಳದಲ್ಲಿಯೇ ಮುಂದುವರೆಸಬೇಕಾಗಿ ವಿನಂತಿ.

4) ಈಗಾಗಲೇ ಸಂದರ್ಶನ ಪ್ರಕ್ರಿಯೆಯಲ್ಲಿ ಅರ್ಹತೆ ಹಾಗೂ ಪ್ರತಿಭೆಯ ಮಾನದಂಡದ ಆಧಾರದ ಮೇಲೆಯೇ ಆಯ್ಕೆಯಾಗಿ ಅತ್ಯಂತ ಕಡಿಮೆ ವೇತನದಲ್ಲಿ ಸೇವೆ ಸಲ್ಲಿಸುತ್ತಾ ಸರ್ಕಾರದ ಆರ್ಥಿಕ ಉಳಿತಾಯಕ್ಕೂ ಕಾರಣರಾಗಿರುವ ಮತ್ತು ಸೇವಾ ನಿಷ್ಠೆಯಿಂದ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗಾಗಿ ತಮ್ಮ ಮಾನವ ಸಂಪನ್ಮೂಲದ ಸದ್ಬಳಕೆ ಮಾಡುತ್ತಿರುವ ರಾಜ್ಯದ ಎಲ್ಲಾ ಕ್ರೈಸ್ ವಸತಿ ಶಾಲೆಗಳ ಅತಿಥಿ ಶಿಕ್ಷಕರನ್ನು ನೇರವಾಗಿ ಖಾಯಂಗೊಳಿಸಬೇಕಾಗಿ ಆಗ್ರಹ. ಇದರಲ್ಲಿ ವಯೋಮಿತಿ ಮೀರಿರುವ ಅನೇಕ ಅತಿಥಿ ಶಿಕ್ಷಕರಿದ್ದಾರೆ. ಅಲ್ಲದೆ ಬಹುಪಾಲು ಶಿಕ್ಷಕರು ಆರ್ಥಿಕವಾಗಿ ಹಿಂದುಳಿದವರಾಗಿದ್ದಾರೆ. ಆದ್ದರಿಂದ ಪ್ರಸ್ತುತ ಕರ್ತವ್ಯ ನಿರ್ವಹಿಸುತ್ತಿರುವ ರಾಜ್ಯದ ಎಲ್ಲಾ ಅತಿಥಿ ಶಿಕ್ಷಕರುಗಳ ಸೇವೆಯನ್ನು ಪರಿಗಣಿಸಿ ಖಾಯಂಗೊಳಿಸಬೇಕಾಗಿ ಸಂಘದ ವತಿಯಿಂದ ಕಳಕಳಿಯ ಮನವಿ.

5) ದಸರಾ ರಜೆ ಮತ್ತು ಬೇಸಿಗೆಯ ರಜೆ ಅವಧಿಯಲ್ಲಿಯೂ ಅತಿಥಿ ಶಿಕ್ಷಕರುಗಳಿಗೆ ಪೂರ್ಣವೇತನ ನೀಡಬೇಕು.

6) ಅತಿಥಿ ಶಿಕ್ಷಕರನ್ನು ಖಾಯಂಗೊಳಿಸುವವರೆಗೂ ಕೇಂದ್ರ ಸರ್ಕಾರದ ಆದೇಶದಂತೆ ಕನಿಷ್ಠ ಮೂಲ ವೇತನ ಸೌಲಭ್ಯ, ಪಿ.ಎಫ್, ಇ.ಎಸ್.ಐ., ಇನ್ನಿತರೆ ಸೌಲಭ್ಯಗಳನ್ನು ನೀಡಬೇಕು.

ಈ ಮೇಲ್ಕಂಡ ಬೇಡಿಕೆಗಳ ಈಡೇರಿಕೆಗಾಗಿ ಆಗ್ರಹಿಸಿ ನಮ್ಮ ಸದರಿ ಸಂಘದ ವತಿಯಿಂದ ಬೇಡಿಕೆ ಈಡೇರುವವರೆಗೂ ಅನಿರ್ಧಿಷ್ಟಾವಧಿ ಕಾಲ ಹಮ್ಮಿಕೊಂಡಿರುವ ಈ ಮುಷ್ಕರಕ್ಕೆ ದಾವಣಗೆರೆ ಜಿಲ್ಲೆಯ ಹಾಗೂ ಒಟ್ಟಾರೆ ರಾಜ್ಯದ ಯಾವುದೇ ಸಂಘ ಸಂಸ್ಥೆಗಳು ಬೆಂಬಲ ನೀಡಿ ನೊಂದ ಅತಿಥಿ ಶಿಕ್ಷಕರುಗಳಿಗೆ ನ್ಯಾಯ ಸಿಗಲು ಸಹಕರಿಸಬೇಕಾಗಿಯೂ ಕೋರುತ್ತೇವೆ.

ವಂದನೆಗಳೊಂದಿಗೆ
ತಮ್ಮ ವಿಶ್ವಾಸಿಗಳು
ಕರ್ನಾಟಕ ರಾಜ್ಯ ಕ್ರೈಸ್ ವಸತಿ ಶಾಲೆಗಳ ಅತಿಥಿ ಶಿಕ್ಷಕರ ಸಂಘ (ರಿ.) ರಾಜ್ಯ ಘಟಕ,

ದಿನದ ಸುದ್ದಿ

ದಾವಣಗೆರೆ | ಪೌರಕಾರ್ಮಿಕ ಹುದ್ದೆಗಳಿಗೆ ಅರ್ಜಿ ಆಹ್ವಾನ

Published

on

ಸುದ್ದಿದಿನ,ದಾವಣಗೆರೆ:ಹರಿಹರ ನಗರಸಭೆಯು 04 ಸಂಖ್ಯಾತಿರಿಕ್ತ ಪೌರಕಾರ್ಮಿಕರ ಹುದ್ದೆಗಳನ್ನು ವಿಶೇಷ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.

ಪ್ರಸ್ತುತ ಹರಿಹರ ನಗರಸಭೆಯಲ್ಲಿ ಕೆಲಸ ನಿರ್ವಹಿಸುತ್ತಿರುವವರು ಹಾಗೂ ಈ ನಿಯಮ ಜಾರಿಗೆ ಬಂದ ದಿನಾಂಕದಲ್ಲಿಯೂ ಸದರಿ ಹುದ್ದೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರಾಗಿರುತ್ತಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಮಾರ್ಚ್ 11 ರಿಂದ ಅರ್ಜಿಗಳನ್ನು ಪಡೆದುಕೊಳ್ಳಬಹುದು.

ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 10 ಕಡೆಯ ದಿನಾಂಕವಾಗಿದೆ. ಅಭ್ಯರ್ಥಿಗಳು ಅರ್ಜಿಗಳನ್ನು ಹರಿಹರ ನಗರಸಭೆ ಕಚೇರಿಯಿಂದ ಮಾತ್ರ ಪಡೆದುಕೊಳ್ಳಬೇಕು. ಹುದ್ದೆಗಳ ವರ್ಗೀಕರಣ, ಷರತ್ತುಗಳು, ವಯೋಮಿತಿ ಮತ್ತು ಅಗತ್ಯ ಅರ್ಹತೆಗಳ ಕುರಿತಾದ ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಕಚೇರಿ ಸಮಯದಲ್ಲಿ ಹರಿಹರ ನಗರಸಭೆ ಕಚೇರಿಯನ್ನು ಸಂಪರ್ಕಿಸಬಹುದಾಗಿದೆ ಎಂದು ದಾವಣಗೆರೆಯ ಜಿಲ್ಲಾಧಿಕಾರಿಗಳು ಹಾಗೂ ಆಯ್ಕೆ ಮತ್ತು ನೇರ ನೇಮಕಾತಿ ಪ್ರಾಧಿಕಾರದ ಅಧ್ಯಕ್ಷರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕ ರಮೇಶ್ ದೇಸಾಯಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಪ್ರಾಚಾರ್ಯರು ಹಾಗೂ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರ ಸಹಿಯನ್ನು ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದ ಹುಬ್ಬಳ್ಳಿಯ ಕೌಶಲ್ಯ ಅಭಿವೃದ್ಧಿ ಮತ್ತು ಉದ್ಯೋಗ ಇಲಾಖೆಯ ಜಂಟಿ ನಿರ್ದೇಶಕರಾದ ರಮೇಶ್ ದೇಸಾಯಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇಲ್ಲಿ ಅಧ್ಯಯನ ಮಾಡಿದ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಹಾಗೂ ಸರ್ಕಾರದಿಂದ ವಿತರಣೆಯಾದ ಟೂಲ್‌ಕಿಟ್‌ಗಳನ್ನು ನಿಯಮಾನುಸಾರ ವಿತರಣೆ ಮಾಡದೆ ವಂಚಿಸಿರುವ ಅಧಿಕೃತ ಮಾಹಿತಿಯ ಆಧಾರದ ಮೇಲೆ ಸಾರ್ವಜನಿಕ ಮಾಹಿತಿ ಅಧಿಕಾರಿಗಳು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರಿಗೆ ಮಾಹಿತಿಹಕ್ಕು ಅರ್ಜಿ ಸಲ್ಲಿಸಿ, ಮಾಹಿತಿ ಕೋರಲಾಗಿತ್ತು.

ಪ್ರಾಚಾರ್ಯರು, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿ ಫಾರ್ ಸಹಿಯೊಂದಿಗೆ ಹಿಂಬರಹ ನೀಡಲಾಗಿರುತ್ತದೆ. ಮಾಹಿತಿ ಅಧಿಕಾರಿ, ಶ್ರೀ ಅನ್ನದಾನೇಶ್ವರ ಅನುದಾನಿತ ಕೈಗಾರಿಕಾ ತರಬೇತಿ ಸಂಸ್ಥೆ, ಗಜೇಂದ್ರಗಡ ಇವರು ನೀಡಿರುವ ಪತ್ರದಲ್ಲಿರುವ ಫಾರ್ ಸಹಿಯೇ ಪ್ರಾಚಾರ್ಯರ ಹೆಸರಿನ ಪತ್ರದಲ್ಲಿ ನಮೂದಾಗಿರುತ್ತದೆ. ಸದರಿ ಸಂಸ್ಥೆಯ ಸಾರ್ವಜನಿಕ ಮಾಹಿತಿ ಅಧಿಕಾರಿ ಪ್ರಾಚಾರ್ಯರೇ ಆಗಿರುತ್ತಾರೆ.

ಹೀಗಿರುವಾಗ ಪಾಚಾರ್ಯರ ಮುದ್ರೆ ಇರುವಲ್ಲಿ ಫಾರ್ ಎಂಬುದಾಗಿ ನಮೂದಿಸಿ ಸಹಿ ಮಾಡಿ, ಮಾಹಿತಿ ಅಧಿಕಾರಿ ಎಂಬ ಮುದ್ರೆಗೆ ಫಾರ್ ಬಳಸದೆ ಸಹಿ ಮಾಡಿರುವುದು ಹಲವು ಅನುಮಾನಕ್ಕೆ ಕಾರಣವಾಗಿ ಈ ಬಗ್ಗೆ ತನಿಖೆ ನಡೆಸುವಂತೆ ಜಂಟಿ ನಿರ್ದೇಶಕರಿಗೆ ದೂರು ನೀಡಲಾಗಿತ್ತು.

ಆದರೆ ಜಂಟಿ ನಿರ್ದೇಶಕರು, ಕೌಶಲ್ಯ ಅಭಿವೃದ್ದಿ ಮತ್ತು ಉದ್ಯೋಗ ಇಲಾಖೆ, ಹುಬ್ಬಳ್ಳಿ ಇವರಿಗೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ದೂರು ಅರ್ಜಿಗೆ ಸಂಬಂಧಿಸಿದಂತೆ ಯಾವುದೇ ಕ್ರಮ ಕೈಗೊಂಡ ಮಾಹಿತಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ನೀಡಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಚಿತ್ರದುರ್ಗ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಇಂಜಿನಿಯರ್ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ: 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಚಿತ್ರದುರ್ಗ ಜಿಲ್ಲೆಯ 6 ತಾಲ್ಲೂಕುಗಳಿಗೆ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿ 3 ತಿಂಗಳು ಕಳೆಯುತ್ತ ಬಂದರೂ ಇಲಾಖಾ ತನಿಖೆ ನಡೆಸದೆ ಕಾಲ ವಿಳಂಬ ಮಾಡುತ್ತಿರುವ ಚಿತ್ರದುರ್ಗ ಜಿಲ್ಲಾ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರಿಗೆ 06 ಅರ್ಜಿ ಸಲ್ಲಿಸಿ, ಚಿತ್ರದುರ್ಗ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಉಪವಿಭಾಗಗಳಿಗೆ ಬಿಡುಗಡೆಯಾದ 2023-24 ಮತ್ತು 2024-25ನೇ ಸಾಲಿನಲ್ಲಿ ತುರ್ತು ಕುಡಿಯುವ ನೀರಿನ ಯೋಜನೆ ಅಡಿಯಲ್ಲಿ ಬಿಡುಗಡೆಯಾದ ಅನುದಾನಕ್ಕೆ ಸಂಬಂಧಿಸಿದ ಕಾಮಗಾರಿಗಳನ್ನು ಇಲಾಖಾ ತನಿಖೆಗೆ ಒಳಪಡಿಸುವಂತೆ ದೂರು ನೀಡಿದ್ದರು.

ಅಧೀಕ್ಷಕರ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವೃತ್ತ, ದಾವಣಗೆರೆ ಇವರು ಸದರಿ ಪ್ರಕರಣವನ್ನು ಕಾರ್ಯಪಾಲಕ ಅಭಿಯಂತರರು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗ, ಚಿತ್ರದುರ್ಗ ಇವರಿಗೆ ವರ್ಗಾಹಿಸಿದ್ದರು.

ನಿಯಮಾನುಸಾರ ಇಲಾಖೆ ತನಿಖೆ ನಡೆಸದೆ ಕಾಲ ವಿಳಂಬ ಮಾಡುವ ಉದ್ದೇಶದಿಂದ 6 ತಾಲ್ಲೂಕು ಉಪ ವಿಭಾಗಗಳಿಗೆ ಭೇಟಿ ನೀಡಿ ಮಾಹಿತಿ ಪಡೆಯುವಂತೆ ಆದೇಶ ಹೊರಡಿದ್ದು, ಇದರಂತೆ ವಕೀಲ ಡಾ.ಕೆ.ಎ.ಓಬಳಪ್ಪ ಇವರು ಎಲ್ಲಾ ಉಪವಿಭಾಗಗಳಿಗೆ ಭೇಟಿ ನೀಡಿ ದಾಖಲೆ ಪರಿಶೀಲನೆ ಮಾಡಿದಾಗ ದಾಖಲೆಗಳು ಕಛೇರಿಯಲ್ಲಿ ಲಭ್ಯವಿರುವುದಿಲ್ಲ.

ಈ ಬಗ್ಗೆ ಕಾರ್ಯಪಾಲಕ ಅಭಿಯಂತರರಿಗೆ ದೂರು ನೀಡಿದರೂ ನಿರ್ಲಕ್ಷö್ಯ ತೋರಿದ ಕಾರಣ, ಕರ್ತವ್ಯ ಲೋಪದ ಅಡಿಯಲ್ಲಿ ಕಾರ್ಯಪಾಲಕ ಅಭಿಯಂತರರಾದ ಅಮರ್‌ನಾಥ್ ಜೈನ್ ವಿರುದ್ಧ ಲೋಕಾಯುಕ್ತದಲ್ಲಿ ಪ್ರಕರಣ ದಾಖಲಿಸಿರುವುದಾಗಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending