ರಾಜಕೀಯ
ಬಿಜೆಪಿಯೂ ಮತ್ತು ಭ್ರಷ್ಟಾಚಾರವೂ..!
- ಬಿಂದು ಗೌಡ
ಇತ್ತೀಚೆಗೆ ಕಾಂಗ್ರೆಸ್ ನಾಯಕರಾದ ಡಿ.ಕೆ. ಶಿವಕುಮಾರ್ ಅವರನ್ನು ರಾಜಕೀಯ ದ್ವೇಷದಿಂದ 4 ದಿನಗಳ ವಿಚಾರಣೆ ನಡೆಸಿದ ಇಡಿ ಸಂಸ್ಥೆ ಬಂಧಿಸಿತು. ರಾಜ್ಯಾದಾದ್ಯಂತ ಪ್ರತಿಕಾರದ ಬಂಧನವನ್ನು ಖಂಡಿಸಿ ಪ್ರತಿಭಟನೆ ನಡೆಯಿತು ಈಗಲೂ ಪ್ರತಿಭಟನೆ ಮುಂದುವರೆದಿದೆ. ಈ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹೆಣ್ಣು ಮಕ್ಕಳಿಗೆ ಅವಾಚ್ಯ, ಅವಹೇಳನಕಾರಿ ಪದಗಳಿಂದ ನಿಂದಿಸಲು ಪ್ರೋತ್ಸಾಹ ನೀಡುವ ತನ್ನ ಪವಿತ್ರವಾದ ವೃತ್ತಿಗೆ ಅವಮಾನ ಮಾಡುವ ಮಹಿಳೆಯೊಬ್ಬರು ವಿಡಿಯೋ ಒಂದನ್ನು ಮಾಡಿದ್ದಾರೆ. ಅವರಿಗೆ ತಾವು ಸಮರ್ಥಿಸುವ ಬಿಜೆಪಿ ಪಕ್ಷದ ಎಡಿಯೂರಪ್ಪ ಬಂಧನವಾಗಿದ್ದು ಲೋಕಾಯುಕ್ತ ನ್ಯಾಯಾಲಯದಲ್ಲಿ ವಕೀಲರೊಬ್ಬರು CRPC ಸೆಕ್ಷನ್ 200 ರ ಪ್ರಕಾರ ಸಲ್ಲಿಸಿದ ಖಾಸಗಿ ದೂರನ್ನ ಆಧರಿಸಿ ಅಕ್ರಮ ಡಿನೋಟಿಫಿಕೇಷನ್ ಆರೋಪದಲ್ಲಿ ಎಡಿಯೂರಪ್ಪನವರನ್ನು ಜೈಲಿಗೆ ಕಳುಹಿಸಿದ್ದು ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರೇ ಹೊರತು ಆಗಿನ UPA ಸರ್ಕಾರ ಅಲ್ಲ.
ಇನ್ನು ಆಧುನಿಕ ಕೃಷ್ಣ ದೇವರಾಯನ ಹಾಗೆ ಬಿಂಬಿಸಿಕೊಳ್ಳುತ್ತಿದ್ದ ಜನಾರ್ಧನ ರೆಡ್ಡಿ ಜೈಲಿಗೆ ಹೋಗಲು ಕಾರಣ ಅಂದಿನ ಲೋಕಾಯುಕ್ತರಾಗಿದ್ದ ಸಂತೋಷ್ ಹೆಗ್ಡೆ ಹಾಗೂ ಪ್ರಾಮಾಣಿಕ ಅಧಿಕಾರಿ ಯು.ವಿ. ಸಿಂಗ್ ಅವರು ಅಕ್ರಮ ಗಣಿಗಾರಿಕೆ ವರದಿ ಆಧಾರದ ಮೇಲೆ ಲೋಕಾಯುಕ್ತ ಸಂಸ್ಥೆ ಪ್ರಕರಣ ದಾಖಲಿಸಿಕೊಂಡ ಕಾರಣ ರಾಜ್ಯದಲ್ಲಿ ಆಡಳಿತದಲ್ಲಿದ್ದಿದ್ದು ಬಿಜೆಪಿ ಸರ್ಕಾರ ಎಂಬುದನ್ನು ಮರೆಯಬೇಡಿ. ಇನ್ನೂ ಗಣಿಗಾರಿಕೆ ಕುರಿತು ವರದಿ ತಯಾರಿಸಲು ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಮತ್ತು ಯು.ವಿ ಸಿಂಗ್ ಇಬ್ಬರಿಗೂ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗಣಿ ಪ್ರದೇಶಗಳಿಗೆ ತೆರಳದಂತೆ ರೆಡ್ಡಿ ಅಂಡ್ ಟೀಮ್ ಜೀವ ಬೆದರಿಕೆ ಹಾಕಿದ್ದನ್ನು ಮರೆತು ಬಿಟ್ರ ಕ್ರಿಮಿನಲ್ ಗಳ ಸಮರ್ಥಕಿ. ಬೇಲೆಕೇರಿ ಬಂದರಿನಲ್ಲಿ ಲೋಕಾಯುಕ್ತ
ಮುಟ್ಟುಗೋಲು ಹಾಕಿಕೊಂಡಿದ್ದ 5 ಲಕ್ಷ ಮೆಟ್ರಿಕ್ ಟನ್ ಅದಿರನ್ನ ರಾತ್ರೋರಾತ್ರಿ ವಿದೇಶಕ್ಕೆ ಮಾರಿದ ಲೂಟಿಕೊರ ರೆಡ್ಡಿ ಗ್ಯಾಂಗ್ ವಿರುದ್ಧ CBI ತನಿಖೆ ಮಾಡದೆ ನೀವು ಮಾನಸಿಕ ಅಸ್ವಸ್ಥರಿಗೆ ಮಾಡಿದಂತೆ ಕರೆದು ಸನ್ಮಾನ ಮಾಡಬೇಕಿತ್ತ ವಕೀಲರೆ?
ಡಿಕೆಶಿ ರವರ ಮೇಲೆ ರೆಡ್ಡಿ ಮೇಲಿರುವ ಅರಣ್ಯ ಭೂಮಿಯನ್ನು ಬಗೆದು ಸರ್ವನಾಶ ಮಾಡಿದ ಗಂಭೀರ ಆರೋಪ ಇಲ್ಲ. ಎಡಿಯೂರಪ್ಪ ಹಾಗೂ ಜನತಾ ಬಜಾರ್ ಸೋಮಣ್ಣರಂತೆ ಸರ್ಕಾರಿ ಭೂಮಿಗಳನ್ನು ಕಬಳಿಸಿ ಡಿನೋಟಿಫಿಕೇಷನ್ ಮಾಡಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ ಆರೋಪ ಡಿಕೆಶಿ ಮೇಲೆ ಇಲ್ಲ.
ಅಂದು ಎಡ್ಡಿ , ರೆಡ್ಡಿ , ಸೋಮಣ್ಣ , KGF ಸಂಪಂಗಿ, ಕಟ್ಟ ಸುಬ್ರಮಣ್ಯ ನಾಯ್ಡು ಇವರೆಲ್ಲರನ್ನು ಕೇಂದ್ರದಲ್ಲಿ ಆಡಳಿತದಲ್ಲಿ ಇದ್ದ UPA ಸರ್ಕಾರ IT , ED , CBI ಸಂಸ್ಥೆಗಳನ್ನು ಈಗ ದುರುಪಯೋಗ ಮಾಡಿಕೊಂಡಂತೆ ಮಾಡಿ ಇವರನ್ನು ಜೈಲಿಗೆ ಪಾಲು ಮಾಡಿಲ್ಲ, ಬದಲಾಗಿ ನಮ್ಮ ರಾಜ್ಯದ ಪ್ರಾಮಾಣಿಕ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಮತ್ತು ಲೋಕಾಯುಕ್ತ ನ್ಯಾಯಾಲಯದ ನ್ಯಾಯಮೂರ್ತಿಗಳು ಈ ಭ್ರಷ್ಟರನ್ನು ಜೈಲಿಗೆ ಕಳಿಸಿದ್ದು.
ಸಂತೋಷ್ ಹೆಗ್ಡೆ ವಿರುದ್ಧ ಪ್ರತಿಭಟನೆ ಮಾಡುವ ನೈತಿಕತೆ ನಿಮ್ಮ ಬಿಜೆಪಿಗರಿಗೆ ಇದೆಯೇ ?
ಇವತ್ತು ಡಿಕೆಶಿ ಅವರ ವಿಚಾರದಲ್ಲಿ ಅವರು ಮಾಡಿದ ಘೋರ ಅಪರಾಧ ನಿಮ್ಮ ಡಿಸಿಎಂ ಕಾರಜೋಳ ಹೇಳಿದಂತೆ ಗುಜುರಾತ್ ಶಾಸಕರನ್ನ ರಾಜ್ಯ ಸಭಾ ಚುನಾವಣೆ ವೇಳೆ ಬೆಂಗಳೂರಿನಲ್ಲಿ ಮೋದಿ ಮತ್ತು ಅಮಿತ್ ಶಾ ರವರ ಒತ್ತಡದಿಂದ ಬಚಾವ್ ಮಾಡಿದ್ದು. ರಾಜ್ಯದ ಶಾಸಕರನ್ನು ಮುಂಬೈನಲ್ಲಿ ಬಚ್ಚಿಟ್ಟಿದ್ದರ ವಿರುದ್ಧ ಬಂಡೆಯಂತೆ ಅಡ್ಡ ನಿಂತಿದ್ದು. ದೇಶದ ಸಂವಿಧಾನದ ಪ್ರಕಾರ ಆಸ್ತಿ ಮಾಡುವುದು ತಪ್ಪಲ್ಲ , ಅದೇ ಬಿಜೆಪಿ ಯ ಎಡ್ಡಿ ರೆಡ್ಡಿ ಗ್ಯಾಂಗ್ಗಳು ಮಾಡಿದಂತೆ ಸರ್ಕಾರದ ಬೊಕ್ಕಸವನ್ನು, ನೆಲದ ಸಂಪತ್ತನ್ನು ಲೂಟಿ ಮಾಡುವುದು ಅಪರಾಧ.
ನಿಂಬೆ ಹಣ್ಣು ಮಾರುತ್ತಿದ್ದ ಎಡ್ಡಿ , LIC ಏಜೆಂಟ್ ಆಗಿದ್ದ ಶೋಭಾ ಕರಂದ್ಲಾಜೆ , ಜನತಾ ಬಜಾರ್ ನ D ಗ್ರೂಪ್ ನೌಕರ ಸೋಮಣ್ಣ , ಇವರೆಲ್ಲ ಇವತ್ತು ಶಿಕ್ಷಣ ಸಂಸ್ಥೆಗಳನ್ನು , ಕಾಫಿ ತೋಟವನ್ನು ಕಾನೂನು ಪ್ರಕಾರ ಸಂಪಾದಿಸಿದ್ದ? ಭ್ರಷ್ಟಾಚಾರಿಗಳು ಇವತ್ತು ಹಗಲು ದರೋಡೆ ಮೂಲಕ ಬೇರೆ ಪಕ್ಷದ ಶಾಸಕರನ್ನು ಖರೀದಿಸಿ ಅಧಿಕಾರ ಹಿಡಿದಿದ್ದಾರೆ, ಮಂತ್ರಿ ಪದವಿ ಸಿಗದ ಕಾರಣಕ್ಕೆ ಶ್ರೀರಾಮುಲು , ಜಗದೀಶ್ ಶೆಟ್ಟರ್ ಬೆಂಬಲಿಗರು ಸಾರ್ವಜನಿಕರ ಆಸ್ತಿಯನ್ನ ಸುಟ್ಟು ಹಾಕಿದಾಗ ತಾವ್ಯಾಕೆ ಮೌನವಾಗಿ ಇದ್ದಿರಿ? ಮಹದಾಯಿ , ಕಾವೇರಿ , ರೈತರ ಮತ್ತು ನೆರೆ ಸಂತ್ರಸ್ತರ ಪರವಾಗಿ ಹೋರಾಟ ಮಾಡಿರುವುದು ಕಾಂಗ್ರೆಸ್ ಪಕ್ಷ ಮತ್ತು ಆ ಹೋರಾಟಕ್ಕೆ ಬೆಂಬಲವಾಗಿ ನಿಂತಿದ್ದು ಇಲ್ಲಿನ ಪ್ರಾದೇಶಿಕ ಪಕ್ಷ JDS.
ಆದರೆ ಮಹದಾಯಿ ವಿಚಾರವನ್ನ ಮೋದಿ ಬಗೆಹರಿಸಲಿಲ್ಲ. ನೆರೆ ಸಂತ್ರಸ್ತರಿಗೆ ಪರಿಹಾರ ಕೊಡಲಿಲ್ಲ ಆದರೂ ತಾವೆಲ್ಲ ಮೋದಿ ಭಜನೆ ಮಾಡುವುದನ್ನ ನಿಲ್ಲಿಸಲಿಲ್ಲ, ರಾಜ್ಯದ ಹಿತಾಸಕ್ತಿಗೆ ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಸದಾಕಾಲ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಕೆಶಿ ಮೇಲೆ ಕೇಂದ್ರ ಸರ್ಕಾರ ದ್ವೇಷದಿಂದ IT ಮತ್ತು ED ಇಲಾಖೆಯನ್ನು ಬಳಸಿಕೊಳ್ಳುತ್ತಿದೆ. 8 ಕೋಟಿ ಸಿಕ್ಕಿದ್ರೆ ಅದರ ಆದಾಯದ ಮೂಲವನ್ನು ಪರಿಶೀಲಿಸಿ ಅಕ್ರಮ ಕಂಡು ಬಂದ್ರೆ ದಂಡ ವಿಧಿಸಬಹುದು, ಅದನ್ನ ಬಿಟ್ಟು ಜೈಲಲ್ಲಿ ಇಟ್ಟು ಮುಂಬರುವ ಉಪ ಚುನಾವಣೆಯಲ್ಲಿ ಅವರು ಪಕ್ಷದ ಪರ ಕೆಲಸ ಮಾಡಬಾರದೆನ್ನುವ ದುರುದ್ದೇಶ ಇದರ ಹಿಂದೆ ಇದೆ.
ಒಟ್ಟಾರೆ ಭ್ರಷ್ಟರಾದ ಬಿಜೆಪಿಯ ಬೆಂಬಲಿಗರೇ ಭ್ರಷ್ಟಾಚಾರದ ವಿರುದ್ಧ ಮಾತನಾಡುವುದು ಹಾಸ್ಯಾಸ್ಪದ. ಬ್ಲೂ ಫಿಲ್ಮ್ ನೋಡಿದವರು DCM , 800 ಕೋಟಿ ಬಿಬಿಎಂಪಿ ಹಗರಣ ಮಾಡಿದ ಅಶ್ವಥ್ ನಾರಾಯಣ್ ಮತ್ತೊಬ್ಬ ಡಿಸಿಎಂ , ಸರ್ಕಾರಿ ಜಮೀನು ಡಿನೋಟಿಫಿಕೇಷನ್ ಮೂಲಕ ಕಬಳಿಸಿದ ಮತ್ತೊಬ್ಬ ಮಹಾನ್ ಭ್ರಷ್ಟ ರಾಜ್ಯದ ಮುಖ್ಯಮಂತ್ರಿ ಇಂತವರನ್ನ ನಿಮ್ಮ ಮೋದಿ ಅಧಿಕಾರದಿಂದ ಹೊರ ಇಟ್ಟು ನೈತಿಕತೆ ತೋರಿಸಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ ಜಿ.ಎಂ ಅವರು ತಿಳಿಸಿದರು.
ಅವರು ಮಂಗಳವಾರ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಎಸ್.ಐ.ಆರ್.ಕುರಿತು ಮಾಹಿತಿ ನೀಡಲು ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಜಿಲ್ಲೆಯ ಎಲ್ಲಾ ಬಿಎಲ್ಒಗಳು ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಅರ್ಜಿಗಳನ್ನು ವಿತರಿಸಿ, ಸ್ವೀಕರಿಸುತ್ತಿದ್ದಾರೆ. ಶೇ. 91 ರಷ್ಟು ಜನರಿಗೆ ಫಾರಂ ಭರ್ತಿ ಮಾಡಲು ತಿಳಿಯದ ಕಾರಣ ಬಿಎಲ್ಒಗಳೇ ಸಾರ್ವಜನಿಕರಿಗೆ ಸಹಾಯ ಮಾಡುತ್ತಿದ್ದಾರೆ ಎಂದರು.
ಸಾರ್ವಜನಿಕರ ಅನುಕೂಲಕ್ಕಾಗಿ ದಾವಣಗೆರೆ ನಗರದಲ್ಲಿ 45 ಕೇಂದ್ರಗಳು ಸೇರಿದಂತೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತ್ ಹಾಗೂ ತಾಲೂಕು ಕಚೇರಿಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಲಾಗಿದೆ. ಯಾವುದೇ ಅನುಮಾನಗಳಿದ್ದಲ್ಲಿ ಸಾರ್ವಜನಿಕರು ಬಿಎಲ್ಒಗಳನ್ನು ಅಥವಾ ಚುನಾವಣಾ ವೆಬ್ಸೈಟ್ನಲ್ಲಿ ಲಭ್ಯವಿರುವ ನೋಡಲ್ ಅಧಿಕಾರಿಗಳು ಮತ್ತು ಸೂಪರ್ವೈಸರ್ಗಳನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದರು.
ಸದ್ಯಕ್ಕೆ ಸಾರ್ವಜನಿಕರಿಂದ ಯಾವುದೇ ದಾಖಲೆಗಳನ್ನು ಸಂಗ್ರಹಿಸುತ್ತಿಲ್ಲ. ಆಗಸ್ಟ್ 7 ರ ನಂತರ ಯಾರು ಯಾವ ದಾಖಲೆಗಳನ್ನು ನೀಡಬೇಕು ಎಂಬುದನ್ನು ಸ್ಪಷ್ಟಪಡಿಸಲಾಗುವುದು. ಅಲ್ಲಿಯವರೆಗೆ ಸಾರ್ವಜನಿಕರು ಯಾವುದೇ ಆತಂಕ ಪಡುವ ಅಗತ್ಯವಿಲ್ಲ ಎಂದರು.
ವಿವಿಧ ತಾಂತ್ರಿಕ ಹಾಗೂ ನೈಜ ಕಾರಣಗಳಿಂದಾಗಿ ಒಟ್ಟು 17,499 ಮತದಾರರ ಗಣತಿ ನಮೂನೆಗಳು ವಾಪಸ್ ಬಂದಿಲ್ಲ. ಇದರಲ್ಲಿ ಪ್ರಮುಖವಾಗಿ 7,487 ಮರಣ ಪ್ರಕರಣಗಳು , 263 ವಿಳಾಸ ಪತ್ತೆಯಾಗದವರು , 6,677 ಶಾಶ್ವತವಾಗಿ ಸ್ಥಳಾಂತರಗೊಂಡವರು , 2,994 ದ್ವಿಪ್ರತಿ ದಾಖಲಾತಿ (Double Entry) ಹಾಗೂ 78 ಇತರೆ ಕಾರಣ ಎಂದು ತಿಳಿಸಿದರು.
1,200 ಕ್ಕಿಂತ ಹೆಚ್ಚು ಮತದಾರರಿರುವ ಮತಗಟ್ಟೆಗಳನ್ನು ಗುರುತಿಸಿ, ಅಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸಲು ಕ್ರಮ ಕೈಗೊಳ್ಳಲಾಗುತ್ತಿದೆ. ಮತದಾರರ ಪರಿಷ್ಕರಣೆಯ ಕಾರ್ಯವಿಧಾನದ ಕುರಿತು ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆ ಯಲ್ಲಿ ಚರ್ಚಿಸಿದ್ದು, ಮುಂದಿನ ದಿನಗಳಲ್ಲಿ ಹೊಸ ಮತಗಟ್ಟೆಗಳನ್ನು ಸ್ಥಾಪಿಸುವ ಕುರಿತು ಮಾಹಿತಿ ನೀಡಲಾಗುವುದು ಎಂದು ತಿಳಿಸಿದರು.
ಜುಲೈ 29ರ ವರೆಗೆ ಮಾತ್ರ ಕಾಲಾವಕಾಶ ಇರುವುದರಿಂದ ಬಿಎಲ್ಒಗಳು ಸಾಕಷ್ಟು ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ. ಆದ್ದರಿಂದ ಸಾರ್ವಜನಿಕರು ಅವರೊಂದಿಗೆ ಶಾಂತಿಯುತವಾಗಿ ವರ್ತಿಸಿ, ಸೂಕ್ತ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಒಂದು ವೇಳೆ ದ್ವಿಪ್ರತಿ (Double Entry) ಸೇರಿದಂತೆ ಯಾವುದೇ ತಪ್ಪು ಮಾಹಿತಿಗಳನ್ನು ಉದ್ದೇಶಪೂರ್ವಕವಾಗಿ ನೀಡಿದಲ್ಲಿ, ಅಂತವರ ವಿರುದ್ಧ ಎಫ್ಐಆರ್ ದಾಖಲಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್, ಮಹಾನಗರ ಪಾಲಿಕೆ ಆಯುಕ್ತ ಡಾ.ಮಹಾಂತೇಶ್ ಚುನಾವಣಾ ಶಾಖೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆ ನಡೆಸುವಂತೆ ದೂರು ನೀಡಿ 5 ತಿಂಗಳು ಕಳೆಯುತ್ತ ಬಂದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿ, ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ವಕೀಲ ಡಾ.ಕೆ.ಎ.ಓಬಳಪ್ಪ ಲೋಕಾಯುಕ್ತಾಗೆ ದೂರು ಸಲ್ಲಿಸಿದ್ದಾರೆ.
ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ (ಕೆ.ಆರ್.ಐ.ಡಿ.ಎಲ್) ವಿಭಾಗ-2 ರ ವ್ಯಾಪ್ತಿಗೆ ಒಳಪಡುವ ಮಾಯಕೊಂಡ, ಹೊನ್ನಾಳಿ, ಚನ್ನಗಿರಿ ಉಪ ವಿಭಾಗಗಳು ಹಾಗೂ ವಿಭಾಗ-2ರ ಕಛೇರಿಯ ವ್ಯಾಪ್ತಿಗೆ 2023-24 ರಿಂದ 2025-26ನೇ ಸಾಲಿನ ಅವಧಿಯಲ್ಲಿ ಬಿಡುಗಡೆಯಾಗಿರುವ ಸ್ಥಳೀಯ ಶಾಸಕರ ಅನುದಾನದಲ್ಲಿ ಪ್ರತಿ ತಿಂಗಳು ಲಕ್ಷಾಂತರ ರೂಪಾಯಿ ಹಣವನ್ನು ಇಲಾಖೆಯ ವಾಹನಗಳ ಇಂಧನ ವೆಚ್ಚಕ್ಕೆಂದು ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡಿರುವುದು ಮಾತ್ರವಲ್ಲದೆ, ಬಹುತೇಕ ಕಡೆಗಳಲ್ಲಿ ಯಾವುದೇ ಕಾಮಗಾರಿ ನಡೆಸದೆ ನಕಲಿ ಕಡತ ಸೃಷ್ಟಿಸಿ ಸ್ಥಳೀಯ ಶಾಸಕರ ಅನುದಾನವನ್ನು ದುರುಪಯೋಗಪಡಿಸಿಕೊಂಡಿರುವ ವಿಷಯವು ಅಧಿಕೃತ ಮೂಲಗಳಿಂದ ತಿಳಿದು ಬಂದ ಕಾರಣ ಮಾಹಿತಿಹಕ್ಕು ಅಡಿಯಲ್ಲಿ ಹಲವಾರು ಭಾರಿ ಅರ್ಜಿ ಸಲ್ಲಿಸಿ, ಮಾಹಿತಿ ಕೋರಿದಾಗಲೂ ನಿಯಮಬಾಹಿರವಾಗಿ ಹಿಂಬರಹ ನೀಡುತ್ತ ಬಂದಿರುತ್ತಾರೆ.
ಆದ ಕಾರಣ ದಾವಣಗೆರೆ ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ ಖರ್ಚು-ವೆಚ್ಚವನ್ನು ಇಲಾಖಾ ತನಿಖೆಗೆ ಒಳಪಡಿಸಿ, ಕೈಗೊಂಡ ಕ್ರಮದ ವರದಿಯನ್ನು ನೀಡುವಂತೆ ವ್ಯವಸ್ಥಾಪಕ ನಿರ್ದೇಶಕರು, ಕೆ.ಆರ್.ಐ.ಡಿ.ಎಲ್, ಬೆಂಗಳೂರು ಇವರಿಗೆ ದಿನಾಂಕ: 06-02-2026 ರಂದು ದೂರು ನೀಡಲಾಗಿತ್ತು. ಆದರೆ ದೂರು ನೀಡಿ 2 ತಿಂಗಳು ಕಳೆದರೂ ಯಾವುದೇ ತನಿಖಾ ವರದಿಯನ್ನಾಗಲಿ ಅಥವಾ ಹಿಂಬರಹವನ್ನಾಗಲಿ ನೀಡದ ಕಾರಣ ದಿನಾಂಕ: 21-04-2026 ರಂದು ಜ್ಞಾಪನ ನೀಡಲಾಗಿತ್ತು. ಆದರೆ ಜ್ಞಾಪನ ನೀಡಿ 2 ತಿಂಗಳು ಕಳೆದರೂ ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರು ಇದುವರೆಗೂ ಯಾವುದೇ ಕ್ರಮ ಕೈಗೊಂಡಿರುವುದಿಲ್ಲ.
ಆದ ಕಾರಣ ನಿರ್ಲಕ್ಷö್ಯ ತೋರಿದ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ ಇದರ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀ ರಾಜೇಶ್ಗೌಡ ಎಂ.ಬಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಲೋಕಾಯುಕ್ತ ಕಾಯ್ದೆಯ ಅನುಸಾರ ಪ್ರಕರಣ ದಾಖಲಿಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ದೂರು ಸಲ್ಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು ತಿಳಿಸಿದ್ದಾರೆ.
ಅಂತ್ಯಕ್ರಿಯೆಯನ್ನು ನಾಳೆ (ಸೋಮವಾರ) ಮಧ್ಯಾಹ್ನ 4:00 ಗಂಟೆಗೆ ಚಿತ್ರದುರ್ಗ ನಗರದ ಜೋಗಿಮಟ್ಟಿ ರಸ್ತೆ ಮುಕ್ತಿದಾಮದಲ್ಲಿ ನೆರವೇರಿಸಲಿದ್ದೇವೆ ಎಂದು ಮಾಹಿತಿ ನೀಡಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂಕಣ6 days agoಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ
-
ದಿನದ ಸುದ್ದಿ5 days agoಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ
-
ದಿನದ ಸುದ್ದಿ3 days agoಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್ಗೌಡ ವಿರುದ್ಧ ಲೋಕಾಗೆ ದೂರು
-
ದಿನದ ಸುದ್ದಿ3 days agoಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ
-
ದಿನದ ಸುದ್ದಿ1 day agoಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

