ರಾಜಕೀಯ
ಬಿಜೆಪಿಯೂ ಮತ್ತು ಭ್ರಷ್ಟಾಚಾರವೂ..!
- /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 27
https://suddidina.com/wp-content/uploads/2018/03/BJP-Logo-suddidina-900x600.jpg&description=ಬಿಜೆಪಿಯೂ ಮತ್ತು ಭ್ರಷ್ಟಾಚಾರವೂ..!', 'pinterestShare', 'width=750,height=350'); return false;" title="Pin This Post">
- Share
- Tweet /home/u584543641/domains/suddidina.com/public_html/wp-content/plugins/mvp-social-buttons/mvp-social-buttons.php on line 72
https://suddidina.com/wp-content/uploads/2018/03/BJP-Logo-suddidina-900x600.jpg&description=ಬಿಜೆಪಿಯೂ ಮತ್ತು ಭ್ರಷ್ಟಾಚಾರವೂ..!', 'pinterestShare', 'width=750,height=350'); return false;" title="Pin This Post">
- ಬಿಂದು ಗೌಡ
ಇತ್ತೀಚೆಗೆ ಕಾಂಗ್ರೆಸ್ ನಾಯಕರಾದ ಡಿ.ಕೆ. ಶಿವಕುಮಾರ್ ಅವರನ್ನು ರಾಜಕೀಯ ದ್ವೇಷದಿಂದ 4 ದಿನಗಳ ವಿಚಾರಣೆ ನಡೆಸಿದ ಇಡಿ ಸಂಸ್ಥೆ ಬಂಧಿಸಿತು. ರಾಜ್ಯಾದಾದ್ಯಂತ ಪ್ರತಿಕಾರದ ಬಂಧನವನ್ನು ಖಂಡಿಸಿ ಪ್ರತಿಭಟನೆ ನಡೆಯಿತು ಈಗಲೂ ಪ್ರತಿಭಟನೆ ಮುಂದುವರೆದಿದೆ. ಈ ಪ್ರತಿಭಟನೆಗಳ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹೆಣ್ಣು ಮಕ್ಕಳಿಗೆ ಅವಾಚ್ಯ, ಅವಹೇಳನಕಾರಿ ಪದಗಳಿಂದ ನಿಂದಿಸಲು ಪ್ರೋತ್ಸಾಹ ನೀಡುವ ತನ್ನ ಪವಿತ್ರವಾದ ವೃತ್ತಿಗೆ ಅವಮಾನ ಮಾಡುವ ಮಹಿಳೆಯೊಬ್ಬರು ವಿಡಿಯೋ ಒಂದನ್ನು ಮಾಡಿದ್ದಾರೆ. ಅವರಿಗೆ ತಾವು ಸಮರ್ಥಿಸುವ ಬಿಜೆಪಿ ಪಕ್ಷದ ಎಡಿಯೂರಪ್ಪ ಬಂಧನವಾಗಿದ್ದು ಲೋಕಾಯುಕ್ತ ನ್ಯಾಯಾಲಯದಲ್ಲಿ ವಕೀಲರೊಬ್ಬರು CRPC ಸೆಕ್ಷನ್ 200 ರ ಪ್ರಕಾರ ಸಲ್ಲಿಸಿದ ಖಾಸಗಿ ದೂರನ್ನ ಆಧರಿಸಿ ಅಕ್ರಮ ಡಿನೋಟಿಫಿಕೇಷನ್ ಆರೋಪದಲ್ಲಿ ಎಡಿಯೂರಪ್ಪನವರನ್ನು ಜೈಲಿಗೆ ಕಳುಹಿಸಿದ್ದು ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶರೇ ಹೊರತು ಆಗಿನ UPA ಸರ್ಕಾರ ಅಲ್ಲ.
ಇನ್ನು ಆಧುನಿಕ ಕೃಷ್ಣ ದೇವರಾಯನ ಹಾಗೆ ಬಿಂಬಿಸಿಕೊಳ್ಳುತ್ತಿದ್ದ ಜನಾರ್ಧನ ರೆಡ್ಡಿ ಜೈಲಿಗೆ ಹೋಗಲು ಕಾರಣ ಅಂದಿನ ಲೋಕಾಯುಕ್ತರಾಗಿದ್ದ ಸಂತೋಷ್ ಹೆಗ್ಡೆ ಹಾಗೂ ಪ್ರಾಮಾಣಿಕ ಅಧಿಕಾರಿ ಯು.ವಿ. ಸಿಂಗ್ ಅವರು ಅಕ್ರಮ ಗಣಿಗಾರಿಕೆ ವರದಿ ಆಧಾರದ ಮೇಲೆ ಲೋಕಾಯುಕ್ತ ಸಂಸ್ಥೆ ಪ್ರಕರಣ ದಾಖಲಿಸಿಕೊಂಡ ಕಾರಣ ರಾಜ್ಯದಲ್ಲಿ ಆಡಳಿತದಲ್ಲಿದ್ದಿದ್ದು ಬಿಜೆಪಿ ಸರ್ಕಾರ ಎಂಬುದನ್ನು ಮರೆಯಬೇಡಿ. ಇನ್ನೂ ಗಣಿಗಾರಿಕೆ ಕುರಿತು ವರದಿ ತಯಾರಿಸಲು ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಮತ್ತು ಯು.ವಿ ಸಿಂಗ್ ಇಬ್ಬರಿಗೂ ಅರಣ್ಯ ಭೂಮಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಗಣಿ ಪ್ರದೇಶಗಳಿಗೆ ತೆರಳದಂತೆ ರೆಡ್ಡಿ ಅಂಡ್ ಟೀಮ್ ಜೀವ ಬೆದರಿಕೆ ಹಾಕಿದ್ದನ್ನು ಮರೆತು ಬಿಟ್ರ ಕ್ರಿಮಿನಲ್ ಗಳ ಸಮರ್ಥಕಿ. ಬೇಲೆಕೇರಿ ಬಂದರಿನಲ್ಲಿ ಲೋಕಾಯುಕ್ತ
ಮುಟ್ಟುಗೋಲು ಹಾಕಿಕೊಂಡಿದ್ದ 5 ಲಕ್ಷ ಮೆಟ್ರಿಕ್ ಟನ್ ಅದಿರನ್ನ ರಾತ್ರೋರಾತ್ರಿ ವಿದೇಶಕ್ಕೆ ಮಾರಿದ ಲೂಟಿಕೊರ ರೆಡ್ಡಿ ಗ್ಯಾಂಗ್ ವಿರುದ್ಧ CBI ತನಿಖೆ ಮಾಡದೆ ನೀವು ಮಾನಸಿಕ ಅಸ್ವಸ್ಥರಿಗೆ ಮಾಡಿದಂತೆ ಕರೆದು ಸನ್ಮಾನ ಮಾಡಬೇಕಿತ್ತ ವಕೀಲರೆ?
ಡಿಕೆಶಿ ರವರ ಮೇಲೆ ರೆಡ್ಡಿ ಮೇಲಿರುವ ಅರಣ್ಯ ಭೂಮಿಯನ್ನು ಬಗೆದು ಸರ್ವನಾಶ ಮಾಡಿದ ಗಂಭೀರ ಆರೋಪ ಇಲ್ಲ. ಎಡಿಯೂರಪ್ಪ ಹಾಗೂ ಜನತಾ ಬಜಾರ್ ಸೋಮಣ್ಣರಂತೆ ಸರ್ಕಾರಿ ಭೂಮಿಗಳನ್ನು ಕಬಳಿಸಿ ಡಿನೋಟಿಫಿಕೇಷನ್ ಮಾಡಿ ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿದ ಆರೋಪ ಡಿಕೆಶಿ ಮೇಲೆ ಇಲ್ಲ.
ಅಂದು ಎಡ್ಡಿ , ರೆಡ್ಡಿ , ಸೋಮಣ್ಣ , KGF ಸಂಪಂಗಿ, ಕಟ್ಟ ಸುಬ್ರಮಣ್ಯ ನಾಯ್ಡು ಇವರೆಲ್ಲರನ್ನು ಕೇಂದ್ರದಲ್ಲಿ ಆಡಳಿತದಲ್ಲಿ ಇದ್ದ UPA ಸರ್ಕಾರ IT , ED , CBI ಸಂಸ್ಥೆಗಳನ್ನು ಈಗ ದುರುಪಯೋಗ ಮಾಡಿಕೊಂಡಂತೆ ಮಾಡಿ ಇವರನ್ನು ಜೈಲಿಗೆ ಪಾಲು ಮಾಡಿಲ್ಲ, ಬದಲಾಗಿ ನಮ್ಮ ರಾಜ್ಯದ ಪ್ರಾಮಾಣಿಕ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಮತ್ತು ಲೋಕಾಯುಕ್ತ ನ್ಯಾಯಾಲಯದ ನ್ಯಾಯಮೂರ್ತಿಗಳು ಈ ಭ್ರಷ್ಟರನ್ನು ಜೈಲಿಗೆ ಕಳಿಸಿದ್ದು.
ಸಂತೋಷ್ ಹೆಗ್ಡೆ ವಿರುದ್ಧ ಪ್ರತಿಭಟನೆ ಮಾಡುವ ನೈತಿಕತೆ ನಿಮ್ಮ ಬಿಜೆಪಿಗರಿಗೆ ಇದೆಯೇ ?
ಇವತ್ತು ಡಿಕೆಶಿ ಅವರ ವಿಚಾರದಲ್ಲಿ ಅವರು ಮಾಡಿದ ಘೋರ ಅಪರಾಧ ನಿಮ್ಮ ಡಿಸಿಎಂ ಕಾರಜೋಳ ಹೇಳಿದಂತೆ ಗುಜುರಾತ್ ಶಾಸಕರನ್ನ ರಾಜ್ಯ ಸಭಾ ಚುನಾವಣೆ ವೇಳೆ ಬೆಂಗಳೂರಿನಲ್ಲಿ ಮೋದಿ ಮತ್ತು ಅಮಿತ್ ಶಾ ರವರ ಒತ್ತಡದಿಂದ ಬಚಾವ್ ಮಾಡಿದ್ದು. ರಾಜ್ಯದ ಶಾಸಕರನ್ನು ಮುಂಬೈನಲ್ಲಿ ಬಚ್ಚಿಟ್ಟಿದ್ದರ ವಿರುದ್ಧ ಬಂಡೆಯಂತೆ ಅಡ್ಡ ನಿಂತಿದ್ದು. ದೇಶದ ಸಂವಿಧಾನದ ಪ್ರಕಾರ ಆಸ್ತಿ ಮಾಡುವುದು ತಪ್ಪಲ್ಲ , ಅದೇ ಬಿಜೆಪಿ ಯ ಎಡ್ಡಿ ರೆಡ್ಡಿ ಗ್ಯಾಂಗ್ಗಳು ಮಾಡಿದಂತೆ ಸರ್ಕಾರದ ಬೊಕ್ಕಸವನ್ನು, ನೆಲದ ಸಂಪತ್ತನ್ನು ಲೂಟಿ ಮಾಡುವುದು ಅಪರಾಧ.
ನಿಂಬೆ ಹಣ್ಣು ಮಾರುತ್ತಿದ್ದ ಎಡ್ಡಿ , LIC ಏಜೆಂಟ್ ಆಗಿದ್ದ ಶೋಭಾ ಕರಂದ್ಲಾಜೆ , ಜನತಾ ಬಜಾರ್ ನ D ಗ್ರೂಪ್ ನೌಕರ ಸೋಮಣ್ಣ , ಇವರೆಲ್ಲ ಇವತ್ತು ಶಿಕ್ಷಣ ಸಂಸ್ಥೆಗಳನ್ನು , ಕಾಫಿ ತೋಟವನ್ನು ಕಾನೂನು ಪ್ರಕಾರ ಸಂಪಾದಿಸಿದ್ದ? ಭ್ರಷ್ಟಾಚಾರಿಗಳು ಇವತ್ತು ಹಗಲು ದರೋಡೆ ಮೂಲಕ ಬೇರೆ ಪಕ್ಷದ ಶಾಸಕರನ್ನು ಖರೀದಿಸಿ ಅಧಿಕಾರ ಹಿಡಿದಿದ್ದಾರೆ, ಮಂತ್ರಿ ಪದವಿ ಸಿಗದ ಕಾರಣಕ್ಕೆ ಶ್ರೀರಾಮುಲು , ಜಗದೀಶ್ ಶೆಟ್ಟರ್ ಬೆಂಬಲಿಗರು ಸಾರ್ವಜನಿಕರ ಆಸ್ತಿಯನ್ನ ಸುಟ್ಟು ಹಾಕಿದಾಗ ತಾವ್ಯಾಕೆ ಮೌನವಾಗಿ ಇದ್ದಿರಿ? ಮಹದಾಯಿ , ಕಾವೇರಿ , ರೈತರ ಮತ್ತು ನೆರೆ ಸಂತ್ರಸ್ತರ ಪರವಾಗಿ ಹೋರಾಟ ಮಾಡಿರುವುದು ಕಾಂಗ್ರೆಸ್ ಪಕ್ಷ ಮತ್ತು ಆ ಹೋರಾಟಕ್ಕೆ ಬೆಂಬಲವಾಗಿ ನಿಂತಿದ್ದು ಇಲ್ಲಿನ ಪ್ರಾದೇಶಿಕ ಪಕ್ಷ JDS.
ಆದರೆ ಮಹದಾಯಿ ವಿಚಾರವನ್ನ ಮೋದಿ ಬಗೆಹರಿಸಲಿಲ್ಲ. ನೆರೆ ಸಂತ್ರಸ್ತರಿಗೆ ಪರಿಹಾರ ಕೊಡಲಿಲ್ಲ ಆದರೂ ತಾವೆಲ್ಲ ಮೋದಿ ಭಜನೆ ಮಾಡುವುದನ್ನ ನಿಲ್ಲಿಸಲಿಲ್ಲ, ರಾಜ್ಯದ ಹಿತಾಸಕ್ತಿಗೆ ಕಾಂಗ್ರೆಸ್ ಪಕ್ಷದ ಎಲ್ಲ ನಾಯಕರು ಸದಾಕಾಲ ಹೋರಾಟದಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಕೆಶಿ ಮೇಲೆ ಕೇಂದ್ರ ಸರ್ಕಾರ ದ್ವೇಷದಿಂದ IT ಮತ್ತು ED ಇಲಾಖೆಯನ್ನು ಬಳಸಿಕೊಳ್ಳುತ್ತಿದೆ. 8 ಕೋಟಿ ಸಿಕ್ಕಿದ್ರೆ ಅದರ ಆದಾಯದ ಮೂಲವನ್ನು ಪರಿಶೀಲಿಸಿ ಅಕ್ರಮ ಕಂಡು ಬಂದ್ರೆ ದಂಡ ವಿಧಿಸಬಹುದು, ಅದನ್ನ ಬಿಟ್ಟು ಜೈಲಲ್ಲಿ ಇಟ್ಟು ಮುಂಬರುವ ಉಪ ಚುನಾವಣೆಯಲ್ಲಿ ಅವರು ಪಕ್ಷದ ಪರ ಕೆಲಸ ಮಾಡಬಾರದೆನ್ನುವ ದುರುದ್ದೇಶ ಇದರ ಹಿಂದೆ ಇದೆ.
ಒಟ್ಟಾರೆ ಭ್ರಷ್ಟರಾದ ಬಿಜೆಪಿಯ ಬೆಂಬಲಿಗರೇ ಭ್ರಷ್ಟಾಚಾರದ ವಿರುದ್ಧ ಮಾತನಾಡುವುದು ಹಾಸ್ಯಾಸ್ಪದ. ಬ್ಲೂ ಫಿಲ್ಮ್ ನೋಡಿದವರು DCM , 800 ಕೋಟಿ ಬಿಬಿಎಂಪಿ ಹಗರಣ ಮಾಡಿದ ಅಶ್ವಥ್ ನಾರಾಯಣ್ ಮತ್ತೊಬ್ಬ ಡಿಸಿಎಂ , ಸರ್ಕಾರಿ ಜಮೀನು ಡಿನೋಟಿಫಿಕೇಷನ್ ಮೂಲಕ ಕಬಳಿಸಿದ ಮತ್ತೊಬ್ಬ ಮಹಾನ್ ಭ್ರಷ್ಟ ರಾಜ್ಯದ ಮುಖ್ಯಮಂತ್ರಿ ಇಂತವರನ್ನ ನಿಮ್ಮ ಮೋದಿ ಅಧಿಕಾರದಿಂದ ಹೊರ ಇಟ್ಟು ನೈತಿಕತೆ ತೋರಿಸಲಿ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಚಿಕ್ಕಮಗಳೂರು | ನೂತನ ಭದ್ರಾ ಸೇತುವೆ ಲೋಕಾರ್ಪಣೆಗೊಳಿಸಿ
ಸುದ್ದಿದಿನ,ಚಿಕ್ಕಮಗಳೂರು:ಜಿಲ್ಲೆಯ ಎನ್ಆರ್ ಪುರದಲ್ಲಿ ಇಂದುಆಯೋಜಿಸಿದ್ದ ಕಾರ್ಯಕ್ರಮದಲ್ಲಿ “ಹಂದೂರು ಗ್ರಾಮದಿಂದ ಎನ್.ಆರ್.ಪುರಕ್ಕೆ ಸಂಪರ್ಕಿಸುವ ನೂತನ ಭದ್ರಾ ಸೇತುವೆಯನ್ನು ಲೋಕಾರ್ಪಣೆಗೊಳಿಸಿ, ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿ, ವಿವಿಧ ಯೋಜನೆಗಳ ಫಲಾನುಭವಿಗಳಿಗೆ ಸರ್ಕಾರದ ಸವಲತ್ತುಗಳನ್ನು ವಿತರಿಸಿದೆ.
ಸಚಿವರಾದ ಸತೀಶ್ ಜಾರಕಿಹೊಳಿ, ಕೆ.ಜೆ.ಜಾರ್ಜ್, ಶೃಂಗೇರಿ ಶಾಸಕರಾದ ಟಿ.ಡಿ.ರಾಜೇಗೌಡ, ಕಡೂರು ಶಾಸಕರಾದ ಆನಂದ್, ತರೀಕೆರೆ ಶಾಸಕರಾದ ಶ್ರೀನಿವಾಸ್, ಮಾಗಡಿ ಶಾಸಕ ಬಾಲಕೃಷ್ಣ ಸೇರಿ ಜಿಲ್ಲೆಯ ಶಾಸಕರುಗಳು, ವಿಧಾನ ಪರಿಷತ್ ಸದಸ್ಯರು, ಮುಖಂಡರು ಹಾಗೂ ಸಂಪಾದಕರಾದ ವಿಶ್ವೇಶ್ವರ ಭಟ್, ಕೆಎಸ್ಟಿಡಿಸಿ ಅಧ್ಯಕ್ಷರಾದ ಸರೋವರ್ ಶ್ರೀನಿವಾಸ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ
ಸುದ್ದಿದಿನಡೆಸ್ಕ್:ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಬೀದರ್ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ ಆಯೋಜಿಸಿದ್ದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಇಂದು ಅವರು ಮಾತನಾಡಿದರು.
ಊಹಾ ಪತ್ರಿಕೋದ್ಯಮ ಅತ್ಯಂತ ಅಪಾಯಕಾರಿಯಾದದ್ದು. ಕ್ಷುಲ್ಲಕ ವಿಚಾರವನ್ನು ದಿನವಿಡೀ ತೋರಿಸುವವರು ಅದರ ಪರಿಣಾಮದ ಬಗ್ಗೆಯೂ ಯೋಚಿಸಬೇಕು. ಗಂಡ ಹೆಂಡತಿ ಜಗಳವನ್ನು ಇಡೀ ದಿನ ತೋರಿಸಿದರೆ ಅದರಿಂದ ಸಮಾಜಕ್ಕೆ ಏನು ಪ್ರಯೋಜನ? ಎಂದು ಪ್ರಶ್ನಿಸಿದರು.
ಅಂಬೇಡ್ಕರ್ ಮತ್ತು ಮಹಾತ್ಮ ಗಾಂಧಿ ಇಬ್ಬರೂ ಪತ್ರಕರ್ತರಾಗಿ ಧ್ವನಿ ಇಲ್ಲದವರ ಧ್ವನಿಯಾಗಿದ್ದರು. ಸಮಾಜದಲ್ಲಿರುವ ನ್ಯೂನ್ಯತೆಗಳನ್ನು ಹೋಗಲಾಡಿಸಿ ಸಮಾಜವನ್ನು ಕಟ್ಟುವ ಕಾಯಕವನ್ನು ಬಸವಾದಿ ಶರಣರು ಮಾಡಿದ್ದರು. ಶರಣರ ಆಶಯದ ಸಮಸಮಾಜ ಆಗದಿದ್ದರೆ ಅಸಮಾನತೆ ಮುಂದುವರೆಯುತ್ತದೆ. ಅದು ಮುಂದುವರೆಯಲಿ ಎನ್ನುವುದು ಪಟ್ಟಭದ್ರರ ಹಿತಾಸಕ್ತಿಯಾಗಿದೆ ಎಂದರು.
ಯಾವ ದೇವರೂ ಯಾರನ್ನೂ ಕೂಡ ಅವಿದ್ಯಾವಂತನಾಗು ಅಂತಾಗಲೀ, ಕೆಳ ಜಾತಿಯಲ್ಲೇ ಹುಟ್ಟು ಎಂದು ಬಯಸುವುದಿಲ್ಲ. ಈ ಅರಿವನ್ನು ಜನರಲ್ಲಿ ಹೆಚ್ಚಿಸುವ ಕೆಲಸ ಪತ್ರಕರ್ತರಿಂದ ಆಗಬೇಕು. ಪತ್ರಕರ್ತರು ಕೇವಲ ಮಾಹಿತಿ ಕೊಡುವವರಾಗದೆ, ಸಮಾಜ ಸುಧಾರಣೆಗೂ ಒತ್ತು ನೀಡಬೇಕು.
ಅಂಬೇಡ್ಕರ್ ಅವರ ಆಶಯದಂತೆ ಎಲ್ಲರಿಗೂ ಆರ್ಥಿಕ, ಸಾಮಾಜಿಕ ಶಕ್ತಿ ಕೊಡುವ ಕೆಲಸವನ್ನು ಕಾಂಗ್ರೆಸ್ ಸರ್ಕಾರ 2013 ರಲ್ಲೂ ಮಾಡಿತ್ತು. ಈಗಲೂ ಮುಂದುವರೆಸಿದೆ. ನಾವು ಬಡವರ ಪರವಾದ ಯೂನಿವರ್ಸಲ್ ಬೇಸಿಕ್ ಇನ್ ಕಂ ಆರ್ಥಿಕತೆಯನ್ನು ಪಾಲುಸುತ್ತಿದ್ದೇವೆ. ಇದನ್ನು ಪತ್ರಕರ್ತರು ಅರ್ಥ ಮಾಡಿಕೊಳ್ಳಬೇಕು.
ಕೆಲವು ಒಳ್ಳೆ ಪತ್ರಕರ್ತರೂ ಇದ್ದಾರೆ. ಆದರೆ ಬಹಳಷ್ಟು ಮಾಧ್ಯಮ ಸಂಸ್ಥೆಗಳು ಕಾರ್ಪೋರೇಟ್ ಹಿಡಿತಕ್ಕೆ ಒಳಪಟ್ಟಿವೆ. ಪತ್ರಕರ್ತರು ಸತ್ಯ ಬರೆದರೂ ಕೆಲವೊಮ್ಮೆ ಸಂಪಾದಕರುಗಳು ಮಾಲೀಕರ ಒತ್ತಡಕ್ಕೆ ಮಣಿದು ಬದಲಾಯಿಸಿ ಬಿಡುತ್ತಾರೆ. ನಾನು ಮಂತ್ರಿಯಾಗಿ 40 ವರ್ಷ ಆಯ್ತು. ನಮ್ಮ ಸರ್ಕಾರದ ಪರವಾಗಿ ಬರೆಯಿರಿ ಎಂದು ಇವತ್ತಿನವರೆಗೂ ನಾನು ಯಾರನ್ನೂ ಕೇಳಿಲ್ಲ.
ಜನಸಾಮಾನ್ಯರು ಇನ್ನೂ ಪತ್ರಿಕೆಗಳ ಮೇಲೆ ನಂಬಿಕೆ ಇಟ್ಟಿದ್ದಾರೆ. ನಾನೂ ನಂಬಿಕೆ ಇಟ್ಟಿದ್ದೇನೆ.
ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ನೀಡುವ ಸವಲತ್ತನ್ನು ಜಾರಿ ಮಾಡಿದ್ದೇ ನಾನು. ಇದರಲ್ಲಿನ ನಿಯಮಗಳಲ್ಲಿ ತೊಂದರೆ ಇದ್ದರೆ, ಆ ಬಗ್ಗೆ ಚರ್ಚಿಸಿ ನಿವಾರಣೆಗೊಳಿಸಲಾಗುವುದು ಎಂದರು.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
ಸುದ್ದಿದಿನ,ದಾವಣಗೆರೆ: ದಾವಣಗೆರೆ ಜಿಲ್ಲೆಯ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಯು ಒಟ್ಟಾರೆ ಶೇಕಡ 81.99 ರಷ್ಟು ಸಾಧನೆ ಮಾಡಿದ್ದು, ರಾಜ್ಯದಲ್ಲಿ 25 ನೇ ಸ್ಥಾನ ಪಡೆದಿದೆ. ಈ ಬಾರಿಯೂ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳು ಜಿಲ್ಲೆಯಲ್ಲಿ ಅತಿ ಹೆಚ್ಚು ಶೇಕಡ 90.91 ರಷ್ಟು ಫಲಿತಾಂಶ ಪಡೆದು ಮೇಲುಗೈ ಸಾಧಿಸಿದ್ದಾರೆ.
ಜಿಲ್ಲೆಯಲ್ಲಿ ಪರೀಕ್ಷೆಗೆ ಹಾಜರಾದ ಒಟ್ಟು 20,810 ವಿದ್ಯಾರ್ಥಿಗಳ ಪೈಕಿ 16,046 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದು ಶೇಕಡ 77.11 ರಷ್ಟು ಹಾಗೂ ಹೊಸದಾಗಿ ಪರೀಕ್ಷೆ ಬರೆದ (Freshers) 18,949 ವಿದ್ಯಾರ್ಥಿಗಳಲ್ಲಿ 15,540 ಮಂದಿ ಉತ್ತೀರ್ಣರಾಗಿದ್ದಾರೆ ಶೇಕಡ 82.01 ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.
ವಿಭಾಗವಾರು ಫಲಿತಾಂಶದ ವಿಶ್ಲೇಷಣೆ
ವಿಜ್ಞಾನ ವಿಭಾಗ (Science): ಜಿಲ್ಲೆಯಲ್ಲಿ ಅತಿ ಹೆಚ್ಚು ಸಾಧನೆ ಈ ವಿಭಾಗದಲ್ಲಿ ದಾಖಲಾಗಿದೆ. ಒಟ್ಟು 12,536 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,936 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 87.24). ಹೊಸ ವಿದ್ಯಾರ್ಥಿಗಳ ಪೈಕಿ 11,770 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 10,736 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 90.91 ರಷ್ಟು ಅದ್ಭುತ ಫಲಿತಾಂಶ ಬಂದಿದೆ.
ವಾಣಿಜ್ಯ ವಿಭಾಗ (Commerce)
ಈ ವಿಭಾಗದಲ್ಲಿ ಹಾಜರಾದ 4,295 ವಿದ್ಯಾರ್ಥಿಗಳಲ್ಲಿ 3,075 ಮಂದಿ ಉತ್ತೀರ್ಣರಾಗಿದ್ದಾರೆ (ಶೇ. 71.59). ಹೊಸ ವಿದ್ಯಾರ್ಥಿಗಳ ಪೈಕಿ 3858 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 2960 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 76.72 ರಷ್ಟು ಫಲಿತಾಂಶ ಬಂದಿದೆ.
ಕಲಾ ವಿಭಾಗ (Arts): ಕಲಾ ವಿಭಾಗದಲ್ಲಿ ಒಟ್ಟು 3,979 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, 2,035 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ (ಶೇ. 51.14). ಹೊಸ ವಿದ್ಯಾರ್ಥಿಗಳ ಪೈಕಿ 3321 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, 1880 ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ ಶೇ. 56.61 ರಷ್ಟು ಫಲಿತಾಂಶ ಬಂದಿದೆ.
ಜಿಲ್ಲೆಯ ಒಟ್ಟಾರೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗವು ಪ್ರಥಮ ಸ್ಥಾನದಲ್ಲಿದ್ದರೆ, ವಾಣಿಜ್ಯ ಮತ್ತು ಕಲಾ ವಿಭಾಗಗಳು ನಂತರದ ಸ್ಥಾನ ಪಡೆದಿವೆ ಎಂದು ಉಪ ನಿರ್ದೇಶಕ ಪಳಿನಿ ತಿಳಿಸಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ಅಂತರಂಗ6 days agoಸಂಪಾದಕೀಯ | ದಾವಣಗೆರೆ ದಕ್ಷಿಣ ಉಪಚುನಾವಣೆ: ಪ್ರತಿಷ್ಠೆಯ ಹೋರಾಟದಲ್ಲಿ ಜನರ ಧ್ವನಿ ಪ್ರಬಲವಾಗಲಿ
-
ದಿನದ ಸುದ್ದಿ4 days agoಸಮಾನತೆಯ ಸಂಭ್ರಮ | ಹದಡಿಯಲ್ಲಿ ತೃತೀಯ ಲಿಂಗತ್ವ ಮದಾರರಿಂದ ಮತಚಲಾವಣೆ
-
ದಿನದ ಸುದ್ದಿ6 days agoಸುಸೂತ್ರ ಮತದಾನಕ್ಕೆ ಜಿಲ್ಲಾಡಳಿತದ ಸಕಲ ಸಿದ್ಧತೆ
-
ದಿನದ ಸುದ್ದಿ5 days agoಅಗ್ನಿವೀರ್ ಹುದ್ದೆಗಳಿಗೆ ಅರ್ಜಿ ಆಹ್ವಾನ
-
ದಿನದ ಸುದ್ದಿ3 days agoದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ: ವಿಜ್ಞಾನ ವಿಭಾಗಕ್ಕೆ ಅಗ್ರಸ್ಥಾನ
-
ದಿನದ ಸುದ್ದಿ3 days agoದಾವಣಗೆರೆ ದಕ್ಷಿಣ ವಿಧಾನಸಭಾ ಉಪ ಚುನಾವಣೆ: ಶೇ. 68.55ರಷ್ಟು ಮತದಾನ
-
ದಿನದ ಸುದ್ದಿ5 days agoಪರಿಶಿಷ್ಟ ಪಂಗಡದ ಮಕ್ಕಳಿಗೆ ಪ್ರತಿಷ್ಠಿತ ಶಾಲೆಗಳಲ್ಲಿ ಪ್ರವೇಶ: ಅರ್ಜಿ ಆಹ್ವಾನ
-
ದಿನದ ಸುದ್ದಿ2 days agoಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ಪ್ರಶ್ನಿಸಿಕೊಳ್ಳಬೇಕು : ಸಿಎಂ ಸಿದ್ದರಾಮಯ್ಯ

