ಬಹಿರಂಗ
ಮಹಿಷ ಅಸುರನಲ್ಲ, ಅವನು ‘ಮಹಿಷ ಮಂಡಲ’ದ ಒಬ್ಬ ನಾಯಕ..!
- ಹರ್ಷಕುಮಾರ್ ಕುಗ್ವೆ
ಮಹಿಷಾಸುರ ಎಂದು ಹೇಳುವಾಗ ಅದರಲ್ಲಿರುವ “ಅಸುರ” ಎಂಬ ಪದದ ಬಗ್ಗೆ ದ್ರಾವಿಡ ಯುವ ಚಿಂತಕರು ಎಚ್ಚರ ವಹಿಸುವ ಅಗತ್ಯವಿದೆ. ಕೆಲವು ಸ್ನೇಹಿತರು “ಅಸುರ” ಎಂಬ ಪದವನ್ನು ತಮ್ಮ ಸರ್ ನೇಮ್ ಆಗಿ ಇಟ್ಟುಕೊಂಡಿರುವವರನ್ನೂ ನೋಡಿದ್ದೇನೆ. ನನ್ನ ಅಭಿಪ್ರಾಯದಲ್ಲಿ ಇದು ತಪ್ಪು ಮಾತ್ರವಲ್ಲ ವೈದಿಕಶಾಹಿಗಳು ತೆಗೆದ ಗುಂಡಿಯಲ್ಲಿ ನಾವು ಬೀಳುವ ಪರಿ. ಮಹಿಷ ಮಂಡಲದ ಮಹಿಷನಿಗೆ “ಅಸುರ” ಎಂದು ಕರೆದಿದ್ದು ವೈದಿಕರು.
ಯಾಕೆಂದರೆ ಮಹಿಷಾಸುರನ ಕುರಿತು ಪುರಾಣ ಬರೆದಿದ್ದು ಅವರೇ. ಆದರೆ ಮೂಲತಃ ಮಹಿಷ ಎಂಬುವವ ವ್ಯಕ್ತಿ ಮಹಿಷ ಮಂಡಲದ ಒಬ್ಬ ನಾಯಕ ಎಂದು ಅವನ ಕುರಿತಾದ ಆಚರಣೆಗಳು, ದ್ರಾವಿಡ ಸಂಸ್ಕೃತಿಯಲ್ಲಿ ಹಾಸು ಹೊಕ್ಕಾಗಿರುವ ಸಂಗತಿಗಳು ಸಾರಿ ಹೇಳುತ್ತವೆ. ಎಮ್ಮೆಯನ್ನು ಸಂಕೇತಿಸುವ ಮಹಿಶನ ಸಮುದಾಯ ಆದಿಮ ದ್ರಾವಿಡ ಪಶುಪಾಲಕ ಸಮುದಾಯವೇ ಇರಬೇಕು. ಇಂದಿನ ಕರ್ನಾಟಕ, ಆಂಧ್ರ ಮತ್ತು ಮಹಾರಾಷ್ಟ್ರಗಳ ಬಹುಭಾಗವನ್ನು ವ್ಯಾಪಿಸಿಕೊಂಡಿದ್ದ ಮಹಿಷಮಂಡಲ ಪಶುಪಾಲಕ ದ್ರಾವಿಡ/ದಲಿತ ಸಮುದಾಯಗಳ ಪ್ರಾಭಾವದಲ್ಲಿದ್ದ ಕಾಲವಾಗಿದ್ದಿರಬಹುದು.
ಅದೇ ಸಮಯದಲ್ಲಿ ಮಾತೃ ಪ್ರಧಾನ ದ್ರಾವಿಡ ಬುಡಕಟ್ಟುಗಳೂ ಇದ್ದವು. ಈ ಸಮುದಾಯಗಳ ನಡುವೆ ಸಂಘರ್ಷವೂ ಸಹಜವಾಗಿ ನಡೆದಿರಬಹುದು. ಆದರೆ ನಂತರದಲ್ಲಿ ಈ ಪ್ರದೇಶಗಳಿಗೆ ಬಂದ ವೈದಿಕಶಾಹಿ ಪುರಾಣಗಳನ್ನು ಕಟ್ಟುವಾಗ ತನ್ನ ಹಿತಾಸಕ್ತಿಗೆ ತಕ್ಕಂತೆ ಮಹಿಷನನ್ನು ಅಸುರನೆಂದೂ, ಚಾಮುಂಡಿಯನ್ನು ವೈದಿಕ ದೇವತೆಯೆಂದೂ ಚಿತ್ರಿಸಿದ್ದಾರೆ. ಪುರಾತನ ವೈದಿಕ ಸಾಹಿತ್ಯದಲ್ಲಿ ಮಾತೃ ದೇವತೆಗಳ ಸಂಖ್ಯೆ ಇಲ್ಲವೇ ಇಲ್ಲ ಎನ್ನುಷ್ಟು ಅತಿ ವಿರಳ. ಕಾಲಕ್ರಮೇಣ ಎಲ್ಲಾ ದ್ರಾವಿಡ ಮಾತೃಬುಡಕಟ್ಟುಗಳನ್ನು ತನ್ನ ತೆಕ್ಕೆಗೆ ತೆಗೆದುಕೊಂಡ ವೈದಿಕಶಾಗಿ ಆ ಸಮುದಾಯಗಳ ಮಾತೃದೇವತೆಗಳನ್ನು ಬ್ರಾಹ್ಮಣೀಕರಿಸಿಕೊಂಡ ದೊಡ್ಡ ಚರಿತ್ರೆಯೇ ಇದೆ. ಎಲ್ಲಮ್ಮ ರೇಣುಕೆಯಾದದ್ದು. ಮಾರಮ್ಮ ಬ್ರಾಹ್ಮಣರ ಹೆಣ್ಣಾದದ್ದು ಉದಾಹರಣೆಗಳು.
ಇಂದು ನಾವು ವಾಗ್ವಾದದಲ್ಲಿ ತೊಡಗಿರುವುದು ವೈದಿಕರು ರಚಿಸಿರುವ ಸ್ವಹಿತಾಸಕ್ತಿಯ ಪುರಾಣದ ಆಧಾರದಲ್ಲಿಯೇ ವಿನಃ ವಾಸ್ತವಿಕ ಸಾಮಾಜಿಕ ಸಂಗತಿಗಳ ಆಧಾರದಲ್ಲಿ ಅಲ್ಲ. ವೈದಿಕರ ಪಠ್ಯಗಳ ಮೂಲಕ ನಮ್ಮ ಸಾಮಾಜಿಕ ಸಂಗತಿಗಳನ್ನು ಬಿಡಿಸುವ ಕೆಲಸವಾಗಬೇಕಿದೆ. ಇದಕ್ಕೆ ಅಕ್ಷರಶಃ ಪುರಾಣ ಕತೆಗಳನ್ನು ವ್ಯಕ್ತಿಗಳಾಗಿ ನೋಡಿದರೆ ನಾವು ಯಾವುದೇ ಖಚಿತ ತೀರ್ಮಾನಕ್ಕೆ ಬರುವುದು ಅಸಾಧ್ಯವೆನಿಸುತ್ತದೆ.
ನಾನು ಮಹಾರಾಷ್ಟ್ರ-ಆಂಧ್ರಗಳ ಕಡೆಯಿಂದ ಕರ್ನಾಟಕಕ್ಕೆ ನೂರು ವರ್ಷಗಳ ಹಿಂದೆ ವಲಸೆ ಬಂದಿರುವ ಮಾಂಗ್ ಗಾರುಡಿ ಅಲೆಮಾರಿ ಸಮುದಾಯದ ಅಧ್ಯಯನ ನಡೆಸುವಾಗ ಒಂದು ಕುತೂಹಲಕಾರಿ ಸಂಗತಿ ಕಂಡೆ. ಅದೇನೆಂದರೆ ಈ ಮಾಂಗ್ ಗಾರುಡಿ ಜನರು ಎಲ್ಲೇ ಹೋಗಿ ನೆಲೆಸಲಿ ಅಲ್ಲಿ ಅವರ ತಮ್ಮ ವಿವಿಧ ಮಾತೃ ದೈವಗಳ ಜೊತೆಗೆ ಒಬ್ಬ ಗಂಡುದೈವವನ್ನೂ ಇಡುತ್ತಾರೆ. ಬಹುತೇಕ ಕಡೆಗಳಲ್ಲಿ ಈ ದೈವಗಳೆಲ್ಲ ಗುಂಡಗಿನ ಕಲ್ಲುಗಳಷ್ಠೇ. ಈ ಗಂಡು ದೈವದ ಹೆಸರು ಮಶೋಬಾ. ಯಾರು ಈ ಮಶೋಭಾ ಎಂದು ಕೊಂಚ ಕೆದಕಿದಾಗ ಮಹಾರಾಷ್ಟ್ರದಲ್ಲಿ ಮಶೋಬಾ ದೇವಸ್ಥಾನವೇ ಇರುವುದು ಕಂಡು ಬಂತು. ಮಾತ್ರವಲ್ಲ ಮಶೋಬಾನಿಗೆ ಪ್ರತಿ ವರ್ಷ ಜಾತ್ರೆಯೂ ಆಗುತ್ತದೆ. ಮಶೋಭಾ ಬೇರಾರೂ ಅಲ್ಲದೇ ಮಹಿಷ ಮಂಡಲದ ಮಹಿಷನೇ ಎಂದು ಡಿಡಿ ಕೋಸಾಂಬಿಯವರೂ ದಾಖಲಿಸಿದ್ದಾರೆ.
ಮಾಂಗ್ ಜನರು ಮಶೋಬಾ ಅಥವಾ ಮಹಿಶ ತಮ್ಮ ಮಾತೃ ದೇವತೆ ಮರಗುಬಾಯಿಯ ಸೋದರನೆಂದೇ ತಿಳಿದಿದ್ದಾರೆ. ಹಾಗಾಗಿಯೇ ಮರಗುಬಾಯಿಯ ಗುಡಿ ಇದ್ದಲ್ಲೆಲ್ಲ ಮಶೋಬಾನೂ ಇರುತ್ತಾನೆ. ಆದಿಮ ದಲಿತ ಸಮುದಾಯಗಳು ಪಶುಪಾಲನೆ ಮತ್ತು ಕೃಷಿ ಎರಡರಲ್ಲೂ ತೊಡಗಿದ್ದನ್ನು ಈ ಎರಡು ದೈವಗಳು ಸಂಕೇತಿಸುವುದಿಲ್ಲವೇ? ಇವುಗಳ ನಡುವಿನ ಕಲಹವನ್ನೇ ವೈದಿಕರು ವಕ್ರಗೊಳಿಸಿ ಪುರಾಣ ರಚಿಸಿರಬಾರದೇಕೆ? ವೈದಿಕ ಪುರಾಣಗಳು ಮಹಿಶನನ್ನು “ಅಸುರ” ಎಂದು ಕರೆದಿದ್ದರೂ ನಮ್ಮ ಬುಡಕಟ್ಟು ದಲಿತರು ಅವನನ್ನು ತಮ್ಮ ದೈವ ಎಂದು ಪೂಜಿಸುವುದು ಏನನ್ನು ಸೂಚಿಸುತ್ತದೆ?
ಇನ್ನು ಈ ಅಸುರ ಎಂಬ ಪರಿಕಲ್ಪನೆ ಅಪ್ಪಟ ವೈದಿಕ ಮೂಲದ್ದು. ಈ ಪದವೂ ವೈದಿಕರದ್ದೇ.
ಹರಪ್ಪ ನಾಗರಿಕತೆಯ ಕಾಲದಲ್ಲಿ ಈ ಸುರ- ಅಸುರ- ದೇವ- ದೇವತೆಗಳ ಕಲ್ಪನೆಗಳು ದ್ರಾವಿಡ ಜನರಿಗೆ ಇರಲಿಲ್ಲ. ಹೆಚ್ಚೆಂದರೆ ನಿಸರ್ಗದ ವಿವಿಧ ಅಂಶಗಳನ್ನು ಇಲ್ಲವೇ ಪೂರ್ವಿಕ ಪಿತೃಗಳನ್ನು ನೆನೆಯುತ್ತಿದ್ದರು. ಮಾತೆಯರೇ ಮಾನಿನಿಯರಾಗಿದ್ದರು. ಕ್ರಿ.ಪೂ 1700ರ ಸುಮಾರಿಗೆ ಋಗ್ವೇದಿ ಆರ್ಯರು ಭಾರಕ್ಕೆ ಕಾಲಿಟ್ಟ ಮೇಲೆಯೇ ಅಸುರ-ದೇವ ಮುಂತಾದ ಪರಕಲ್ಪನೆಗಳು ಬಂದಿದ್ದು.
ಇನ್ನೂ ಯೂರೇಶಿಯಾದಿಂದ ಭಾರತದ ಕಡೆಗೆ ಹೊರಡುವ ಮೊದಲೇ ಒಂದಾಗಿದ್ದ ವೈದಿಕರು ಮತ್ತು ಜೊರಾಷ್ಟ್ರಿಯನ್ನರು (ಪಾರ್ಸಿ ಧರ್ಮೀಯರು) ಒಟ್ಟಾಗಿದ್ದಾಲೇ ಈ ಆರ್ಯ- ಅಸುರ- ಇತ್ಯಾದಿ ಪದಗಳನ್ನು ಬಳಸುತ್ತಿದ್ದರು. ನಂತರವ ಇವರಿಬ್ಬರ ನಡುವೆ ದಾಯಾದಿ ಕಲಹ ಏರ್ಪಡುತ್ತದೆ. ನಂತರ ಪಾರ್ಸಿಗಳು ಪೂಜಿಸುವ ದೇವರು ಅಹುರ ಮಜ್ದಾ ಋಉಗ್ವೇದಿ ಆರ್ಯರಿಗೆ “ಅಸುರ”ನಾಗುತ್ತಾನೆ. ಹಾಗೆಯೇ ಆರ್ಯರು ಪೂಜಿಸುವ ದೇವ (ದೇಏವ) ಪಾರ್ಸಿಗಳಿಗೆ ದುಷ್ಟ ನಾಗುತ್ತಾನೆ.
ಋಗ್ವೇದವನ್ನೂ ಮತ್ತು ಪಾರ್ಸಿಗಳ ಧರ್ಮ ಗ್ರಂಥವಾದ ಜೆಂಡ್ ಅವೆಸ್ತಾ (ಕ್ರಿ.ಪೂ 2500ರ ಸುಮಾರಿಗೆ ರಚಿತವಾದದ್ದು) ಎರಡನ್ನೂ ಹೋಲಿಸಿ ಎರಡಲ್ಲಿ ದೇವ ಮತ್ತು ಅಸುರ ಎಂಬ ಪದ ಬಳಕೆ ಹೇಗೆ ಆಗಿದೆ ಎಂಬುದನ್ನು ಗಮನಿಸಿದಾಗ ಈ ಮೇಲಿನ ಸಂಗತಿ ತಿಳಿದು ಬರುತ್ತದೆ. ಬಹಳ ಮುಖ್ಯವಾಗಿ ಋಗ್ವೇದದ ಮೊದಲ ಭಾಗಗಳಳು ಮತ್ತು ಪಾರ್ಸಿಗಳ ಅವೆಸ್ತಾ ಎರಡೂ ಒಂದೇ ಭೂಗೋಳಿಕ ಪ್ರದೇಶದಲ್ಲಿ ರಚನೆಯಾಗಿರುವುದು ಎನ್ನುವುದಕ್ಕೆ ಅವುಗಳಲ್ಲಿ ಹೇರಳವಾದ ಉದಾಹರಣೆಗಳಿವೆ. ಈ ಕುರಿತು ಹೆಚ್ಚಿನ ವಿವರ ಮತ್ತು ಆಳವಾದ ವಿಶ್ಲೇಶಣೆಗೆ ಸಂಸ್ಕೃತಿ ಚಿಂತಕರಾದ ಲಕ್ಷ್ಮೀಪತಿ ಕೋಲಾರ ಅವರು ಪ್ರಾಜಾವಾಣಿಗೆ ಬರೆದಿದ್ದ “ಧರ್ಮಸಂಕಟ ಸೃಷ್ಟಿಸಿರುವ ಮಾದಕ ಸೋಮ” ಎಂಬ ಲೇಖನವನ್ನು ಓದಿ. ಹಾಗೂ ಪ್ರಖ್ಯಾತ ಇತಿಹಾಸಕಾರ ರಾಜೇಶ್ ಕೊಚ್ಚಾರ್ ಅವರು ವೈದಿಕ ಸಂಸ್ಕೃತಿ ಕುರಿತು ಬರೆದ ಗ್ರಂಥದಲ್ಲಿ ಆರ್ಯ ವೈದಿಕರ ಋಗ್ವೇದ ಮತ್ತು ಪಾರ್ಸಿಗಳ ಜೆಂಡ್ ಅವೆಸ್ತಾಗಳಲ್ಲಿ ಅಡಕವಾಗಿರುವ ಸಂಗತಿಗಳನ್ನು ಎಳೆಎಳೆಯಾಗಿ ಬಿಡಿಸಿಟ್ಟಿದ್ದಾರೆ.
(ಇಲ್ಲಿರುವ ಫೋಟೋಗಳು ಒಂದು ಮೈಸೂರಿನ ಮಹಿಷನಾದರೆ ಮಿಕ್ಕಿದ್ದು ಮಾಂಗ್ ಜನರ ಆರಾಧ್ಯ ದೈವ ಮಶೋಬ (ಮಹಿಷ)ನವು. ಫೋಟೋ ತೆಗೆದವರು ನವ್ಯ ಕಡಮೆ (Navya Kadame))
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
Mysuru Dasara Elephants: ದಸರಾ ಗಜಪಡೆಯ ತೂಕ ಪರೀಕ್ಷೆ: ಶ್ರೀಕಂಠ ಭಾರೀ ಗಜ, ಏಕಲವ್ಯಕ್ಕೆ 2ನೇ ಸ್ಥಾನ; ಅಂಬಾರಿ ಆನೆ ಆಯ್ಕೆ ಇನ್ನೂ ಬಾಕಿ
ಸುದ್ದಿದಿನ,ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಿದ್ಧತೆಗಳು ಆರಂಭವಾಗಿದ್ದು, ಮೊದಲ ಹಂತದಲ್ಲಿ ಆಗಮಿಸಿರುವ 9 ಆನೆಗಳಿಗೆ ಸಾಂಪ್ರದಾಯಿಕ ತೂಕ ಪರೀಕ್ಷೆ ನಡೆಸಲಾಗಿದೆ. ಈ ಬಾರಿ ಮತ್ತಿಗೋಡು ಶಿಬಿರದ 57 ವರ್ಷದ ಶ್ರೀಕಂಠ 5,790 ಕೆಜಿ ತೂಕದೊಂದಿಗೆ ಗಜಪಡೆಯಲ್ಲೇ ಅತ್ಯಂತ ಭಾರವಾದ ಆನೆಯಾಗಿ ಮೊದಲ ಸ್ಥಾನ ಪಡೆದುಕೊಂಡಿದ್ದಾನೆ. ಭೀಮನಕಟ್ಟೆ ಶಿಬಿರದ 41 ವರ್ಷದ ಏಕಲವ್ಯ 5,600 ಕೆಜಿ ತೂಗಿ ಎರಡನೇ ಸ್ಥಾನದಲ್ಲಿದ್ದಾನೆ.
ನಗರದ ಧನ್ವಂತರಿ ರಸ್ತೆಯಲ್ಲಿರುವ ಎಲೆಕ್ಟ್ರಾನಿಕ್ ವೇ ಬ್ರಿಡ್ಜ್ನಲ್ಲಿ ಭಾನುವಾರ ಬೆಳಗ್ಗೆ ಎಲ್ಲ 9 ಆನೆಗಳ ತೂಕ ಪರೀಕ್ಷೆ ನಡೆಸಲಾಯಿತು. ಕಳೆದ ವರ್ಷ ಭೀಮ ಮತ್ತು ಅಭಿಮನ್ಯು ಕ್ರಮವಾಗಿ ಮೊದಲ ಎರಡು ಸ್ಥಾನದಲ್ಲಿದ್ದರು. ಆದರೆ ಈ ಬಾರಿ ಇವರಿಬ್ಬರನ್ನೂ ದಸರಾಗೆ ಕರೆತಂದಿಲ್ಲ. ಹೀಗಾಗಿ ಶ್ರೀಕಂಠನ ತೂಕವೇ ಈ ವರ್ಷದ ಗಜಪಡೆಯ ಗಮನ ಸೆಳೆದಿದೆ.
ಹೈಲೈಟ್ಸ್: 57 ವರ್ಷದ ಶ್ರೀಕಂಠನೇ ಗಜಪಡೆಯ ತೂಕದ ಬಾದ್ಷಾ |
|
http://Visit : www.suddidina.com
ಗಂಡಾನೆಗಳ ತೂಕ 5 ಸಾವಿರ ಕೆಜಿಗೂ ಅಧಿಕ
ಈ ಬಾರಿಯ ಮೊದಲ ಹಂತದ ಗಜಪಡೆಯ ವಿಶೇಷತೆಯೆಂದರೆ ಬಹುತೇಕ ಗಂಡಾನೆಗಳು 5 ಸಾವಿರ ಕೆಜಿಗೂ ಹೆಚ್ಚು ತೂಕ ಹೊಂದಿರುವುದು. ಆದರೆ ಆನೆಗಳ ತೂಕ ಹೆಚ್ಚಿಸುವುದೇ ಅರಣ್ಯ ಇಲಾಖೆಯ ಮುಖ್ಯ ಗುರಿಯಲ್ಲ. ಬದಲಿಗೆ ಅವುಗಳ ಆರೋಗ್ಯ, ದೈಹಿಕ ಸಾಮರ್ಥ್ಯ ಮತ್ತು ತಾಲೀಮಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದೆ.
ಡಿಸಿಎಫ್ ಡಾ. ಐ.ಬಿ. ಪ್ರಭುಗೌಡ ಅವರ ಪ್ರಕಾರ, ಆನೆಗಳ ತೂಕದ ಆಧಾರದ ಮೇಲೆ ಅವುಗಳಿಗೆ ನೀಡಬೇಕಾದ ಆಹಾರದ ಪ್ರಮಾಣ ಮತ್ತು ಪೌಷ್ಟಿಕ ಆಹಾರವನ್ನು ನಿರ್ಧರಿಸಲಾಗುತ್ತದೆ. ಪ್ರತಿಯೊಂದು ಆನೆಯ ದೈಹಿಕ ಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ತಾಲೀಮು ರೂಪಿಸಲಾಗುತ್ತದೆ.
9 ಆನೆಗಳ ತೂಕದ ಆಧಾರದಲ್ಲೇ ಆಹಾರ
ದಸರಾ ಗಜಪಡೆಯಲ್ಲಿರುವ ಆನೆಗಳ ಆರೋಗ್ಯ ಕಾಪಾಡುವುದು ಪ್ರಮುಖ ಆದ್ಯತೆಯಾಗಿದೆ. ತೂಕ ಪರೀಕ್ಷೆಯ ಮೂಲಕ ಆನೆಗಳ ದೈಹಿಕ ಸ್ಥಿತಿಯ ಬಗ್ಗೆ ಅಗತ್ಯ ಮಾಹಿತಿ ಪಡೆಯಲಾಗುತ್ತದೆ. ಅದರ ಆಧಾರದ ಮೇಲೆ ಪೌಷ್ಟಿಕ ಆಹಾರ, ದಿನನಿತ್ಯದ ಚಟುವಟಿಕೆ ಹಾಗೂ ತಾಲೀಮಿನಲ್ಲಿ ಅಗತ್ಯ ಬದಲಾವಣೆ ಮಾಡಲಾಗುತ್ತದೆ.
ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಈಗಿರುವ ಎಲ್ಲ ಆನೆಗಳೂ ಅಂಬಾರಿ ಹೊರುವ ಸಾಮರ್ಥ್ಯ ಹೊಂದಿವೆ. ಅನುಭವಿ ಆನೆಗಳಾಗಿರುವುದರಿಂದ ಅಂತಿಮ ತಾಲೀಮು ಅತ್ಯಂತ ಮಹತ್ವ ಪಡೆಯಲಿದೆ.
ಅಂಬಾರಿ ಆನೆ ಯಾರು? ಕುತೂಹಲ
ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ಚಿನ್ನದ ಅಂಬಾರಿ ಹೊರುವ ಆನೆ ಯಾರು ಎಂಬ ಕುತೂಹಲ ಈಗಾಗಲೇ ಹೆಚ್ಚಾಗಿದೆ. ಕೇವಲ ತೂಕದ ಆಧಾರದ ಮೇಲೆ ಅಂಬಾರಿ ಆನೆಯನ್ನು ಆಯ್ಕೆ ಮಾಡುವುದಿಲ್ಲ. ಆನೆಯ ಆರೋಗ್ಯ, ಸಾಮರ್ಥ್ಯ, ಅನುಭವ, ತಾಲೀಮು ಮತ್ತು ಅಂತಿಮ ಹಂತದ ಪ್ರದರ್ಶನವನ್ನು ಪರಿಗಣಿಸಿ ಆಯ್ಕೆ ಮಾಡಲಾಗುತ್ತದೆ.
ಮೊದಲ ಹಂತದ ತಾಲೀಮು ಮುಗಿದ ಬಳಿಕ ನಡೆಯುವ ಅಂತಿಮ ತಾಲೀಮಿನ ನಂತರವೇ ಚಿನ್ನದ ಅಂಬಾರಿ ಹೊರುವ ಆನೆಯನ್ನು ಅಂತಿಮಗೊಳಿಸಲಾಗುತ್ತದೆ. ಹೀಗಾಗಿ ಶ್ರೀಕಂಠ ತೂಕದಲ್ಲಿ ನಂಬರ್ 1 ಆಗಿದ್ದರೂ, ಅಂಬಾರಿ ವಿಚಾರದಲ್ಲಿ ಅಂತಿಮ ನಿರ್ಧಾರ ಇನ್ನೂ ಬಾಕಿಯಿದೆ.
ಆನೆಗಳ ಬಳಿ ಸಾರ್ವಜನಿಕರಿಗೆ ನಿರ್ಬಂಧ
ದಸರಾ ಆನೆಗಳ ವೀಕ್ಷಣೆಗೆ ಯಾವುದೇ ಟಿಕೆಟ್ ವ್ಯವಸ್ಥೆ ಮಾಡಿಲ್ಲ ಎಂದು ಡಿಸಿಎಫ್ ಸ್ಪಷ್ಟಪಡಿಸಿದ್ದಾರೆ. ಸಾರ್ವಜನಿಕರು ಆನೆಗಳ ಬಳಿ ತೆರಳದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ದಸರಾ ಆನೆಗಳ ಕುರಿತು ಸುಳ್ಳು ಮಾಹಿತಿ ಹರಡಿದರೆ ಕ್ರಮ ಕೈಗೊಳ್ಳುವುದಾಗಿಯೂ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದೆ.
“ಆನೆಗಳಿಗೆ ಹಂತ ಹಂತವಾಗಿ ತಾಲೀಮು ಮಾಡಲಾಗುತ್ತದೆ. ಸದ್ಯಕ್ಕೆ ಎಲ್ಲ ಆನೆಗಳ ಆರೋಗ್ಯ ಚೆನ್ನಾಗಿದೆ. ಅಂತಿಮ ಹಂತದ ತಾಲೀಮಿನ ಬಳಿಕ ಅಂಬಾರಿ ಹೊರುವ ಆನೆ ಆಯ್ಕೆ ಮಾಡಲಾಗುವುದು.”
– ಡಾ.ಐ.ಬಿ.ಪ್ರಭುಗೌಡ, ಡಿಸಿಎಫ್
ದಸರಾ ಗಜಪಡೆಯ ತೂಕದ ವಿವರ
- ಶ್ರೀಕಂಠ: 5,790 ಕೆಜಿ
- ಏಕಲವ್ಯ: 5,600 ಕೆಜಿ
- ಧನಂಜಯ: 5,530 ಕೆಜಿ
- ಮಹೇಂದ್ರ: 5,490 ಕೆಜಿ
- ಪ್ರಶಾಂತ: 5,205 ಕೆಜಿ
- ಗೋಪಿ: 5,170 ಕೆಜಿ
- ಶ್ರೀರಾಮ: 4,820 ಕೆಜಿ
- ಲಕ್ಷ್ಮೀ: 3,990 ಕೆಜಿ
- ಕಾವೇರಿ: 3,075 ಕೆಜಿ

ದಿನದ ಸುದ್ದಿ
ಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
ಕೂಡ್ಲುಗೇಟ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಸಂಕೀರ್ಣದ 49 ಫ್ಲ್ಯಾಟ್ಗಳ ತೆರವು; ₹200 ಕೋಟಿ ವೆಚ್ಚದ ಕಟ್ಟಡಕ್ಕೆ ಹೊಸ ರೂಪ
ಸುದ್ದಿದಿನ,ಬೆಂಗಳೂರು: ನಗರದ ಪ್ರಮುಖ ವಸತಿ ಯೋಜನೆಗಳಲ್ಲಿ ಒಂದಾಗಿರುವ ಕೂಡ್ಲುಗೇಟ್ನ ಎಸ್ಎನ್ಎನ್ ಎಸ್ಟೇಟ್ ಒಡೆತನದ 18 ಅಂತಸ್ತಿನ ಕಟ್ಟಡದ ತೆರವು ಕಾರ್ಯಾಚರಣೆ ಶುಕ್ರವಾರದಿಂದ ಆರಂಭವಾಗಿದೆ. ಬೆಂಗಳೂರಿನ ಗಮನ ಸೆಳೆದಿದ್ದ ಈ ಪ್ರಕರಣದಲ್ಲಿ ಎಸ್ಎನ್ಎನ್ ರಾಜ್ ಕಾರ್ಪ್ ಸಂಸ್ಥೆಯು ಎಚ್ಎಸ್ಆರ್ ಲೇಔಟ್ನಲ್ಲಿರುವ ತನ್ನ ಎಸ್ಎನ್ಎನ್ ರಾಜ್ ಎಟರ್ನಿಯಾ ಪ್ರೀಮಿಯಂ ವಸತಿ ಸಂಕೀರ್ಣದ 49 ಅಪಾರ್ಟ್ಮೆಂಟ್ ಘಟಕಗಳನ್ನು ನಿಯಂತ್ರಿತ ರೀತಿಯಲ್ಲಿ ಕೆಡವುವ ಪ್ರಕ್ರಿಯೆಗೆ ಚಾಲನೆ ನೀಡಿದೆ.
ಒಟ್ಟು 972 ಮನೆಗಳನ್ನು ಹೊಂದಿರುವ ಈ ವಸತಿ ಯೋಜನೆಯಲ್ಲಿನ 49 ಘಟಕಗಳ ತೆರವು ಈಗ ಭಾರಿ ಕುತೂಹಲ ಮೂಡಿಸಿದೆ. ಕಟ್ಟಡದ ಸುರಕ್ಷತೆ ಕುರಿತು ತಾಂತ್ರಿಕ ಪರಿಶೀಲನೆ ನಡೆಸಿದ ಬಳಿಕ ಈ ಕ್ರಮಕ್ಕೆ ಮುಂದಾಗಲಾಗಿದೆ.
₹200 ಕೋಟಿ ವೆಚ್ಚದ ಕಟ್ಟಡದಲ್ಲಿ ದೋಷ ಪತ್ತೆ
ಸುಮಾರು ₹200 ಕೋಟಿ ವೆಚ್ಚದಲ್ಲಿ ನಿರ್ಮಿಸಲಾದ ಕಟ್ಟಡ ಇದಾಗಿದೆ. ತಾಂತ್ರಿಕ ಪರಿಶೀಲನೆ ವೇಳೆ ಕಟ್ಟಡದ ರಚನೆಯಲ್ಲಿ ಹಾನಿಯಾಗಿರುವುದು ಹಾಗೂ ಕಟ್ಟಡ ವಾಲಿರುವುದು ಬೆಳಕಿಗೆ ಬಂದಿತ್ತು. ಈ ಹಿನ್ನೆಲೆಯಲ್ಲಿ ನಿವಾಸಿಗಳ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಕಟ್ಟಡದ ನಿರ್ದಿಷ್ಟ ಭಾಗಗಳನ್ನು ತೆರವುಗೊಳಿಸುವ ನಿರ್ಧಾರ ಕೈಗೊಳ್ಳಲಾಗಿದೆ.
ತೆರವು ಕಾರ್ಯಾಚರಣೆಯನ್ನು ಯಾವುದೇ ರೀತಿಯ ಆತಂಕ ಅಥವಾ ಅಪಾಯ ಉಂಟಾಗದಂತೆ ಅತ್ಯಂತ ನಿಯಂತ್ರಿತ ರೀತಿಯಲ್ಲಿ ನಡೆಸಲಾಗುತ್ತಿದೆ. ಕಟ್ಟಡ ತೆರವು ಸಂದರ್ಭದಲ್ಲಿ ಸುತ್ತಮುತ್ತಲಿನ ಪ್ರದೇಶಕ್ಕೂ ಸಮಸ್ಯೆಯಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ.
ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ
ತೆರವು ಕಾರ್ಯವನ್ನು ಮುಂಬೈ ಮೂಲದ ಖಾಸಗಿ ಕಂಪನಿಗೆ ಗುತ್ತಿಗೆ ನೀಡಲಾಗಿದೆ ಎಂದು ಎಸ್ಎನ್ಎನ್ ಅಪಾರ್ಟ್ಮೆಂಟ್ ನಿರ್ದೇಶಕ ಅನೂಜ್ ತಿಳಿಸಿದ್ದಾರೆ. ಫ್ಲ್ಯಾಟ್ಗಳನ್ನು ಹಂತ ಹಂತವಾಗಿ ತೆರವುಗೊಳಿಸುವ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ.
ಈ ಕುರಿತು ಮಾತನಾಡಿರುವ ಅವರು, ಬಿಬಿಎಂಪಿಗೂ ಸಂಸ್ಥೆಯ ವತಿಯಿಂದ ಪತ್ರ ಬರೆಯಲಾಗಿದೆ ಎಂದು ತಿಳಿಸಿದ್ದಾರೆ. ಯಾವುದೇ ರೀತಿಯ ಸಮಸ್ಯೆ ಉಂಟಾಗದಂತೆ ತೆರವು ಕಾರ್ಯ ನಡೆಸಲಾಗುವುದು ಎಂಬ ಭರವಸೆಯನ್ನೂ ನೀಡಿದ್ದಾರೆ.
ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಾಣ
ಪ್ರಸ್ತುತ ಕಟ್ಟಡದ ತೆರವು ಕಾರ್ಯ ಪೂರ್ಣಗೊಂಡ ಬಳಿಕ ಅದೇ ಜಾಗದಲ್ಲಿ ಹೊಸ ಅಪಾರ್ಟ್ಮೆಂಟ್ ನಿರ್ಮಿಸುವ ಯೋಜನೆ ಇದೆ ಎಂದು ಸಂಸ್ಥೆ ತಿಳಿಸಿದೆ. ಈಗಾಗಲೇ ಕೆಲವು ಫ್ಲ್ಯಾಟ್ಗಳು ಮುಂಗಡವಾಗಿ ಬುಕ್ ಆಗಿದ್ದ ಹಿನ್ನೆಲೆಯಲ್ಲಿ ಖರೀದಿದಾರರೊಂದಿಗೆ ಮಾತುಕತೆ ನಡೆಸಿ ಸಮಸ್ಯೆ ಪರಿಹರಿಸುವುದಾಗಿ ಸಂಸ್ಥೆ ಹೇಳಿದೆ.
ಯಾರಿಗೂ ತೊಂದರೆಯಾಗದಂತೆ ಸಂಪೂರ್ಣ ಪ್ರಕ್ರಿಯೆ ನಡೆಸುವುದಾಗಿ ಸ್ಪಷ್ಟಪಡಿಸಿರುವ ಸಂಸ್ಥೆ, ನಿವಾಸಿಗಳು ಹಾಗೂ ಖರೀದಿದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಂದಿನ ಕ್ರಮ ಕೈಗೊಳ್ಳಲಿದೆ.

ದಿನದ ಸುದ್ದಿ
ಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ
ಸುದ್ದಿದಿನ,ಜಮ್ಮುಕಾಶ್ಮೀರ: ಜಮ್ಮು-ಕಾಶ್ಮೀರದ ಗಡಿ ಪ್ರದೇಶದಲ್ಲಿ ಮತ್ತೆ ಡ್ರೋನ್ ಹಾರಾಟದ ಆತಂಕ ಎದುರಾಗಿದೆ. ಪೂಂಚ್ ಜಿಲ್ಲೆಯ ಮೆಂಧರ್ ಸೆಕ್ಟರ್ನಲ್ಲಿ ಪಾಕಿಸ್ತಾನ ಮೂಲದ್ದೆಂದು ಶಂಕಿಸಲಾದ ಡ್ರೋನ್ವೊಂದು ಕಾಣಿಸಿಕೊಂಡಿರುವುದು ಭದ್ರತಾ ಪಡೆಗಳನ್ನು ಅಲರ್ಟ್ ಮಾಡಿದೆ. ಗಡಿಯಾಚೆಯಿಂದ ನಡೆಯಬಹುದಾದ ಯಾವುದೇ ಅನುಮಾನಾಸ್ಪದ ಚಟುವಟಿಕೆಗಳನ್ನು ತಡೆಯಲು ಸೇನೆ ಹಾಗೂ ಭದ್ರತಾ ಪಡೆಗಳು ನಿಗಾ ಮತ್ತಷ್ಟು ಬಿಗಿಗೊಳಿಸಿವೆ.
ಹೈಲೈಟ್ಸ್ |
|
http://Visit : www.suddidina.com
ಬೆಹ್ರೂಟಿ ಗ್ರಾಮದ ಬಳಿ ಕಾಣಿಸಿಕೊಂಡ ಶಂಕಿತ ಡ್ರೋನ್
ಶುಕ್ರವಾರ ಸಂಜೆ ಬಾಲಕೋಟೆ ಪ್ರದೇಶದ ಬೆಹ್ರೂಟಿ ಗ್ರಾಮದ ಸಮೀಪ ಆಕಾಶದಲ್ಲಿ ಶಂಕಿತ ಡ್ರೋನ್ ಹಾರಾಟ ನಡೆಸಿರುವುದು ಸ್ಥಳೀಯರ ಹಾಗೂ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ. ಬಳಿಕ ಅದು ಮಂಗಲ್ನಾರ್-ದಬ್ರೋಟ್ ಪ್ರದೇಶದತ್ತ, ಅಂದರೆ ಗಡಿ ಪ್ರದೇಶದ ಸಮೀಪಕ್ಕೆ ತೆರಳಿ ಪಾಕಿಸ್ತಾನದ ದಿಕ್ಕಿನಲ್ಲಿ ವಾಪಸ್ ಹೋಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಡ್ರೋನ್ ಕಾಣಿಸಿಕೊಂಡ ಮಾಹಿತಿ ಸಿಗುತ್ತಿದ್ದಂತೆ LoC ವ್ಯಾಪ್ತಿಯಲ್ಲಿ ಭದ್ರತಾ ಕ್ರಮಗಳನ್ನು ತೀವ್ರಗೊಳಿಸಲಾಗಿದೆ. ಬೆಳಗ್ಗೆಯಿಂದಲೇ ಸರ್ಚ್ ಆಪರೇಷನ್ ಆರಂಭಿಸಲಾಗಿದ್ದು, ಡ್ರೋನ್ ಮೂಲಕ ಯಾವುದೇ ವಸ್ತು, ಶಸ್ತ್ರಾಸ್ತ್ರ ಅಥವಾ ಅನುಮಾನಾಸ್ಪದ ಸಾಮಗ್ರಿಗಳನ್ನು ಕೆಳಗೆ ಇಳಿಸಲಾಗಿದೆಯೇ ಎಂಬುದರ ಕುರಿತು ಪರಿಶೀಲನೆ ನಡೆಸಲಾಗುತ್ತಿದೆ.
3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಶೋಧ
ಡ್ರೋನ್ ಆತಂಕದ ನಡುವೆಯೇ ಜಮ್ಮು-ಕಾಶ್ಮೀರದ ಉಧಂಪುರ, ಕಥುವಾ ಮತ್ತು ರಾಜೌರಿ ಜಿಲ್ಲೆಗಳ ವಿಶಾಲ ಅರಣ್ಯ ಪ್ರದೇಶಗಳಲ್ಲೂ ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ತೀವ್ರಗೊಳಿಸಿವೆ.
ಉಧಂಪುರ-ಕಥುವಾ ಅರಣ್ಯ ಪ್ರದೇಶದ ಖುಬನ್, ನಾಗೈನ್, ಖ್ಟ್ರೈಲ್, ಗೋಡು ಫಲಾಲ್, ಪದೇತಾರ್, ಚೋರ್ ಮೊಟ್ಟು, ಕಿಯಾ, ಖೇಬಾ, ಭೇದ್, ಮಾರ್ತಾ ಹಾಗೂ ಜೋಫರ್ ಸೇರಿದಂತೆ ಹಲವು ಪ್ರದೇಶಗಳಲ್ಲಿ ಪೊಲೀಸರು, ಸೇನೆ ಮತ್ತು ಅರೆಸೇನಾ ಪಡೆಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸುತ್ತಿವೆ.
ರಾಜೌರಿಯಲ್ಲಿ ಶಸ್ತ್ರಸಜ್ಜಿತರ ಶಂಕೆ
ರಾಜೌರಿ ಜಿಲ್ಲೆಯ ಗೈಬಾಸ್, ಮಿಥಿಯಾನಿ, ಮೊಗ್ಲಾ ಮತ್ತು ನಾರ್ಲಾ ಪ್ರದೇಶಗಳಲ್ಲೂ ಪ್ರತ್ಯೇಕ ಸರ್ಚ್ ಆಪರೇಷನ್ ಕೈಗೊಳ್ಳಲಾಗಿದೆ. ಇಬ್ಬರು ಶಸ್ತ್ರಸಜ್ಜಿತ ವ್ಯಕ್ತಿಗಳು ಸಂಚರಿಸುತ್ತಿರುವುದನ್ನು ಗ್ರಾಮಸ್ಥರು ಗಮನಿಸಿ ಭದ್ರತಾ ಪಡೆಗಳಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.
ಮಾಹಿತಿ ಆಧರಿಸಿ ಭದ್ರತಾ ಪಡೆಗಳು ವ್ಯಾಪಕ ಶೋಧ ನಡೆಸಿದರೂ, ಇದುವರೆಗೆ ಯಾವುದೇ ಶಂಕಿತ ವ್ಯಕ್ತಿಗಳು ಪತ್ತೆಯಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಗಡಿಯಲ್ಲಿ ಹೆಚ್ಚಿದ ಕಣ್ಗಾವಲು
ಡ್ರೋನ್ ಹಾರಾಟ ಹಾಗೂ ಅರಣ್ಯ ಪ್ರದೇಶಗಳಲ್ಲಿ ಶಂಕಿತ ವ್ಯಕ್ತಿಗಳ ಚಲನವಲನದ ಮಾಹಿತಿ ಹಿನ್ನೆಲೆಯಲ್ಲಿ ಗಡಿ ಪ್ರದೇಶದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದರೂ ತಕ್ಷಣ ಮಾಹಿತಿ ನೀಡುವಂತೆ ಸ್ಥಳೀಯರಿಗೂ ಸೂಚನೆ ನೀಡಲಾಗಿದೆ.
ಪ್ರಸ್ತುತ ಕಾರ್ಯಾಚರಣೆಯ ಪ್ರಮುಖ ಉದ್ದೇಶ ಗಡಿಯಾಚೆಯಿಂದ ಸಂಭವಿಸಬಹುದಾದ ಒಳನುಸುಳುವಿಕೆ ಅಥವಾ ಅನುಮಾನಾಸ್ಪದ ಸಾಗಾಟವನ್ನು ತಡೆಯುವುದು ಮತ್ತು ಪ್ರದೇಶದಲ್ಲಿ ಭದ್ರತೆಯನ್ನು ಖಚಿತಪಡಿಸಿಕೊಳ್ಳುವುದಾಗಿದೆ.

-
ದಿನದ ಸುದ್ದಿ6 days agoಜನರ ಸಮಸ್ಯೆಗಳಿಗೆ ಸ್ಪಂದಿಸಲು ಸಚಿವರಿಗೆ ಜಿಲ್ಲೆಗಳ ಜವಾಬ್ದಾರಿ: ಪ್ರತಿ ತಿಂಗಳು ಎರಡು ದಿನ ಪ್ರವಾಸ
-
ದಿನದ ಸುದ್ದಿ6 days agoಶ್ರೀಮಂತಿಕೆಯ ನಡುವೆ ಸರಳ ಬದುಕು: 50 ರೂ. ಹೇರ್ಕಟ್ ಹೇಳಿದ ಡಿಕೆಶಿ
-
ದಿನದ ಸುದ್ದಿ4 days agoಬೆಂಗಳೂರು ಕಟ್ಟಡ ತೆರವು ಕಾರ್ಯಾಚರಣೆ: 18 ಅಂತಸ್ತಿನ ಅಪಾರ್ಟ್ಮೆಂಟ್ಗೆ ‘ಡೆಮಾಲಿಷನ್’ ಶುರು!
-
ದಿನದ ಸುದ್ದಿ4 days agoಕಲಬುರಗಿ ಪಾಲಿಕೆಯಲ್ಲಿ ಮತ್ತೆ ಕಾಂಗ್ರೆಸ್ ಮೇಲುಗೈ: ಮೇಯರ್-ಉಪ ಮೇಯರ್ ಸ್ಥಾನವೂ ‘ಕೈ’ ತೆಕ್ಕೆಗೆ!
-
ದಿನದ ಸುದ್ದಿ4 days agoವಾಲ್ಮೀಕಿ ಹಗರಣದ ಕಿಡಿ ಮತ್ತೆ ಬಳ್ಳಾರಿಯಲ್ಲಿ: ನಾಗೇಂದ್ರ ವಿರುದ್ಧ ಜನಾರ್ಧನ ರೆಡ್ಡಿ ವಾಗ್ದಾಳಿ, ಕಾಂಗ್ರೆಸ್ಗೆ ರಾಜೀನಾಮೆ ಸವಾಲು!
-
ದಿನದ ಸುದ್ದಿ4 days agoವೈದ್ಯಕೀಯ ಕಾಲೇಜುಗಳ ಹಾಸ್ಟೆಲ್ ಕ್ಯಾಂಟೀನ್ಗಳಿಗೆ ಅಧಿಕಾರಿಗಳ ಶಾಕ್! 34 ಕ್ಯಾಂಟೀನ್ ಪರಿಶೀಲನೆ, 5ಕ್ಕೆ ನೋಟಿಸ್
-
ದಿನದ ಸುದ್ದಿ4 days agoTrump Oil Deal: ವೆನೆಜುವೆಲಾದ 65 ಬಿಲಿಯನ್ ಬ್ಯಾರೆಲ್ ತೈಲದ ಮೇಲೆ ಅಮೆರಿಕದ ಕಣ್ಣು; ಇದು ವಿಶ್ವದ ಅತಿದೊಡ್ಡ ಡೀಲ್ನಾ?
-
ದಿನದ ಸುದ್ದಿ4 days agoಪಾಕ್ ಗಡಿಯಿಂದ ಡ್ರೋನ್ ಎಂಟ್ರಿ ಶಂಕೆ: ಪೂಂಚ್ನಲ್ಲಿ ಹೈ ಅಲರ್ಟ್, 3 ಜಿಲ್ಲೆಗಳಲ್ಲಿ ಭದ್ರತಾ ಪಡೆಗಳ ಬೃಹತ್ ಬೇಟೆ


