Connect with us

ದಿನದ ಸುದ್ದಿ

ಶಿವಮೊಗ್ಗ | ಸಹ್ಯಾದ್ರಿ ಉತ್ಸವಕ್ಕೆ ಸಂಭ್ರಮದ ಚಾಲನೆ

Published

on

ಸುದ್ದಿದಿನ,ಶಿವಮೊಗ್ಗ: ಸಾಂಸ್ಕøತಿಕ ಚಟುವಟಿಕೆಗಳಿಗೆ ಪ್ರಾಮುಖ್ಯತೆ ದೊರೆಯುವಂತಹ ಪಠ್ಯಕ್ರಮ ಮತ್ತು ಶಿಕ್ಷಣ ಪದ್ಧತಿಯನ್ನು ಭಾರತದಲ್ಲಿಯೂ ಆರಂಭಿಸಿದಲ್ಲಿ ನಮ್ಮ ಸ್ಥಳೀಯ ಸಂಸ್ಕøತಿ ಉಳಿಸಿ ಬೆಳಸಲು ಸಾಧ್ಯ ಎಂದು ನಟಿ ಮಾನ್ವಿತಾ ಕಾಮತ್ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ ಪಠ್ಯೇತರ ಚಟುವಟಿಕೆಗಳ ಘಟಕವು ಅಕ್ಟೋಬರ್ 03ರಿಂದ 5ರವರೆಗೆ ಮೂರು ದಿನಗಳ ಕಾಲ ಆಯೋಜಿಸಿರುವ ಅಂತರ್-ಕಾಲೇಜುಗಳ ಸಾಂಸ್ಕøತಿಕ ಸ್ಪರ್ಧೆ ಸಹ್ಯಾದ್ರಿ ಉತ್ಸವ 2019ನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತದಲ್ಲಿ ಕೇವಲ ಪಠ್ಯಾಧರಿತ ಶಿಕ್ಷಣವೇ ಮಹತ್ವ ಪಡೆಯುತ್ತಿದ್ದು, ನಮ್ಮ ನೆಲದ ಸಂಸ್ಕøತಿ ಉಳಿಸಲು ಇದು ಬದಲಾಗುವುದು ಅಗತ್ಯ ಎಂದರು.

ಪ್ರತಿಯೊಬ್ಬ ವ್ಯಕ್ತಿಯೂ ಸ್ವಂತ ಕನಸಿನ ಮೂಲಕ ಗುರಿ ನಿರ್ಧರಿಸಿಕೊಳ್ಳಬೇಕು. ದೃಡತೆಯೊಂದಿಗೆ ಈ ಹಾದಿಯಲ್ಲಿ ನಡೆಯುವಾಗ ಆಧುನಿಕ ಸವಲತ್ತುಗಳಾದ ಜಾಲತಾಣಗಳು, ಮೊಬೈಲ್‍ವ್ಯಸನ, ಪಬ್‍ಜಿಯಂತಹ ಅಲ್ಪಕಾಲದ ಆಕರ್ಷಣೆಗಳಿಂದ ವಿಚಲಿತರಾಗದೇ ಮುನ್ನಡೆದಲ್ಲಿ ಮಾತ್ರ ಗುರಿ ತಲುಪುವುದು ಸಾಧ್ಯ. ಎಂದು ವಿದ್ಯಾರ್ಥಿಗಳಿಗೆ ಸಲಹೆಯಿತ್ತರು.

ಮಲೆನಾಡಿನ ಸೊಗಡಿರುವ ಇಲ್ಲಿನ ವಿದ್ಯಾರ್ಥಿಗಳಲ್ಲಿ ನಗರದವರಿಗಿಂತ ಉತ್ತಮ ಸಂಸ್ಕøತಿ, ಸಾಂಸ್ಕøತಿಕ ಅರಿವು ಇದೆ ಹಾಗೂ ಸಾಧನೆಯ ಹಾದಿಯಲ್ಲಿ ಆಕರ್ಷಣೆಗಳ ಅಡ್ಡಿಗಳಿಲ್ಲದಿರುವುದು ಖುಷಿ ತರುವ ವಿಚಾರ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಮಾತನಾಡಿ, ಸಾಂಸ್ಕøತಿಕ ಚಟುವಟಿಕೆಗಳು ಪಠ್ಯ ಚಟುವಟಿಕೆಗಳಷ್ಟೇ ಮುಖ್ಯ. ಮಲೆನಾಡಿನ ಸಂಸ್ಕøತಿಯ ಅನಾವರಣಕ್ಕೆ ವಿದ್ಯಾರ್ಥಿಗಳಿಗೆ ಮಹತ್ತರ ವೇದಿಕೆಯಾಗಿ ಉತ್ಸವವು ಕಾರ್ಯನಿರ್ವಹಿಸುತ್ತದೆ. ಉತ್ತಮ ಧ್ಯೇಯೋದ್ದೇಶಗಳೊಂದಿಗೆ ಮುನ್ನಡೆವ ವಿದ್ಯಾರ್ಥಿಗಳಿಗೆ ವಿವಿ ಎಲ್ಲ ಸಹಕಾರ ನೀಡಲಿದೆ ಎಂದು ಅವರು ತಿಳಿಸಿದರು.

ಹಳೆಯ ಘಟಿಕೋತ್ಸವ ಸಭಾಂಗಣದಲ್ಲಿ ನಡೆದ ಔಪಚಾರಿಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಕುಲಸಚಿವ ಪ್ರೊ. ಎಸ್.ಎಸ್. ಪಾಟೀಲ್, ಪ್ರೊ. ವೆಂಕಟೇಶ್ವರುಲು, ಪ್ರೊ. ಹಿರೇಮಣಿನಾಯ್ಕ್, ಡಾ. ಮಂಜುನಾಥ್ ಹಾಗೂ ವಿವಿಧ ಕಾಲೇಜುಗಳ ಸಾವಿರಕ್ಕೂ ಅಧಿಕ ಸ್ಪರ್ಧಾಳುಗಳು ಹಾಜರಿದ್ದರು.

ಉತ್ಸವದಲ್ಲಿ ಸುಮಾರು 60 ಕಾಲೇಜುಗಳು ಭಾಗವಹಿಸಿದ್ದು, ಜಾನಪದ ನೃತ್ಯ, ಏಕಾಂಕ ನಾಟಕ, ಗಾಯನ, ಮಿಮಿಕ್ರಿ ಸೇರಿದಂತೆ 23 ವಿವಿಧ ಸಾಂಸ್ಕøತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಉತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದಾರೆ. ಇವರೆಲ್ಲರಿಗೂ ವಿಶೇಷ ಭೋಜನ ಹಾಗೂ ವಸತಿಯ ಸೌಲಭ್ಯವನ್ನು ವಿವಿಯು ಕಲ್ಪಿಸಿದೆ.

ಭಾಷೆ, ಸಂಸ್ಕøತಿ, ಸಮಸ್ಯೆಗಳನ್ನು ತೆರೆದಿಟ್ಟ ಪಥಸಂಚಲನ
ಕುವೆಂಪು ವಿಶ್ವವಿದ್ಯಾಲಯದ ಅಂತರಕಾಲೇಜುಗಳ ಸಾಂಸ್ಕøತಿಕ ಸ್ಪರ್ಧೆ ಸಹ್ಯಾದ್ರಿ ಉತ್ಸವ 2019ರ ಉದ್ಘಾಟನೆಗೂ ಮುನ್ನ ಭಾಗವಹಿಸಲು ಆಗಮಿಸಿದ ತಂಡಗಳ ಪಥಸಂಚಲನ ಜಾಥಾ ನಡೆದಿದ್ದು, ನಟಿ ಮಾನ್ವಿತಾ ಮತ್ತು ವಿವಿ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ಚಾಲನೆ ನೀಡಿದರು.

39 ಕಾಲೇಜುಗಳ ಪಾಲ್ಗೊಂಡ ಪಥಸಂಚಲನದಲ್ಲಿ ವೈವಿಧ್ಯಮಯ ವೇಷಭೂಷಣಗಳೊಂದಿಗೆ ಪಾಲ್ಗೊಂಡು ಉತ್ಸವಕ್ಕೆ ಮೆರಗು ನೀಡುವ ಜೊತೆಗೆ ಭಾಷೆ, ಮಲೆನಾಡ ಸಂಸ್ಕøತಿ, ಸೇನೆ ಹಾಗೂ ಸಾಮಾಜಿಕ ಸಮಸ್ಯೆಗಳನ್ನು ವಿದ್ಯಾರ್ಥಿಗಳು ಮತ್ತು ಶಂಕರಘಟ್ಟ, ತಾವರಘಟ್ಟ ಜನರೆದುರು ತೆರೆದಿಟ್ಟರು.

ದೇವರು: ವಿಶ್ವವಿದ್ಯಾಲಯ ಪದವಿ ಕಾಲೇಜಿನ ವಿದ್ಯಾರ್ಥಿನಿಯರು ನವದುರ್ಗೆಯ ವೇಷವನ್ನು ಧರಿಸಿ ನೆರೆದವರಲ್ಲಿ ಭಕ್ತಿರಸ ಮೂಡುವಂತೆ ಮಾಡಿದರೆ, ರಿಪ್ಪನ್‍ಪೇಟೆ ಜಿ.ಎಫ್.ಜಿ.ಸಿ. ವಿದ್ಯಾರ್ಥಿಗಳು ದೇವನೊಬ್ಬ ನಾಮಹಲವು ಎಂಬ ಸಂದೇಶ ಸಾರುವ ಚಿತ್ರ ಫಲಕಗಳನ್ನು ತೋರಿದರು. ಆಚಾರ್ಯ ತುಳಸಿ ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ಚಾಮುಂಡೇಶ್ವರಿ ತಾಯಿ ಮತ್ತು ಅಂಬಾರಿಯ ಪ್ರತಿಕೃತಿ ಪ್ರದರ್ಶಿಸಿ ಅದ್ಧೂರಿತನ ಮೆರೆದರು.

ಸಂಸ್ಕøತಿ: ಶಿಕಾರಿಪುರದ ಜಿ.ಎಫ್.ಜಿ.ಸಿ. ವಿದ್ಯಾರ್ಥಿಗಳು ವಿಶ್ವಮಾನವ ರಥದೊಂದಿಗೆ ಪೂರ್ಣಕುಂಭ ಮತ್ತು ಡೊಳ್ಳು ಕುಣಿತ ಪ್ರದರ್ಶನ ನೀಡಿದರು. ಶಿರಾಳಕೊಪ್ಪ ಜಿ.ಎಫ್.ಜಿ.ಸಿ. ವಿದ್ಯಾರ್ಥಿಗಳು ಕಾಡುಜನರ ವೇಷಭೂಷಣ ಮತ್ತು ಕೋಲ ನೃತ್ಯ ಪ್ರಸ್ತುತಪಡಿಸಿದರು. ವಿವಿಧತೆ ಮತ್ತು ಶಿವಮೊಗ್ಗದ ಡಿ.ವಿ.ಎಸ್ ಕಾಲೇಜು ವಿದ್ಯಾರ್ಥಿಗಳು ಭಾರತದ ಎಲ್ಲ ರಾಜ್ಯಗಳ ವೇಷಭೂಷಣದೊಂದೆಗೆ ವಿವಿಧತೆಯಲ್ಲಿ ಏಕತೆ ಎಂಬ ಭಾರತದ ಸಂದೇಶ ಸಾರಿದರು. ಸರ್ಕಾರಿ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಕಾಲೇಜು ಕೊಡಗಲಸರ ತಂಡದವರು ದಕ್ಷಿಣ ಕನ್ನಡ ಸಂಸ್ಕøತಿಯಾದ ಯಕ್ಷಗಾನ, ಕೋ¯, ಹುಲಿಕುಣಿತ, ಕೊರಗಜ್ಜ ನೃತ್ಯ ನೋಡುಗರ ಗಮನ ಸೆಳೆದರು.

ಕಳಸ ಪ್ರಥಮ ದರ್ಜೆ ಕಾಲೇಜಿನವರು ದೇಶ ಕಾಯುವ ಯೋಧರ ವೇಷಭೂಷಣ ಹಾಗೂ ಸೈನಿಕ ಆಭಿನಂದನ್‍ನೊಡನೆ ಯುದ್ಧ ವಿಮಾನದ ಮಾದರಿಯೊಂದಿಗೆ ಶಿಸ್ತಿನಿಂದ ಹೆಜ್ಜೆ ಹಾಕಿದ್ದು ಸೈನಿಕರ ಬಗ್ಗೆ ಗೌರವ ಭಾವವನ್ನು ತರಿಸುವಂತಿತ್ತು.

ಸುರಕ್ಷತೆ: ಶಿವಮೊಗ್ಗದ ಮೈತ್ರಿ ಕಾಲೇಜಿನ ವಿದ್ಯಾರ್ಥಿನಿಯರು ರಸ್ತೆ ಸುರಕ್ಷತೆ ಸಂಬಂಧಿ ಭಿತ್ತಿಚಿತ್ರ ಹಾಗೂ ಸುರಕ್ಷತಾ ಕ್ರಮಗಳ ಅಣಕು ಪ್ರದರ್ಶನ ನೀಡಿದರು. ಚಿಕ್ಕಮಗಳೂರಿನ ಸಂತ ಜೋಸೆಫರ ಕಾಲೇಜು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಿಂದ ಆಗುತ್ತಿರುವ ತೊಂದರೆ ಹಾಗೂ ಅಧ್ಯಯನ ಪ್ರವೃತ್ತಿ ಕೊರತೆ ಬಗ್ಗೆ ಫಲಕಗಳು ಹಾಗೂ ಪುಸ್ತಕದ ಶವಯಾತ್ರೆ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.

ರೈತ, ವಿದ್ಯಾರ್ಥಿ ಮತ್ತು ಭಾಷಾ ಸಮಸ್ಯೆ: ನೆರೆ-ಬರಗಳಿಂದಾಗಿ ರೊಸಿಹೋದ ರೈತ ಹೇಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ ಎಂಬ ವಿಷಯ ಕುರಿತು ರೈತನ ಅಣುಕು ಶವಯಾತ್ರೆಯನ್ನು ಪ್ರದರ್ಶಿಸಿ ಸಂಕಷ್ಟ ತಿಳಿಸಿದರು.

ಚಿಕ್ಕಮಗಳೂರಿನ ಸೆಂಟ್ ಜೋಸೆಫ್ ಕಾಲೇಜ್ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ಪುಸ್ತಕ ಸಂಸ್ಕøತಿ ಸಾಯುತ್ತಿದೆ ಎಂದು ಪುಸ್ತಕದ ಶವಯಾತ್ರೆ ಹಾಗೂ ಫಲಕಸಹಿತ ವೇಷಭೂಷಣಗಳನ್ನು ಧರಿಸಿ ಜಾಗೃತಿ ಮೂಡಿಸಿದರು.

ಕುವೆಂಪು ಶತಮಾನೋತ್ಸವ ಶಿವಮೊಗ್ಗದ ವಿದ್ಯಾರ್ಥಿಗಳು ಕನ್ನಡದ ಮೇಲೆ ಇತರೆ ಭಾಷೆ ಮತ್ತು ಸಂಸ್ಕøತಿಗಳಿಂದಾಗುತ್ತಿರುವ ದಬ್ಬಾಳಿಕೆ ಮತ್ತು ರಕ್ಷಣೆ ಕುರಿತು ಕನ್ನಡಾಂಬೆಯ ರಕ್ಷಣೆ ಹಾಗೂ ಅದರ ಪರಿಹಾರವಾಗಿ ಕರ್ನಾಟಕದ ಶಿಕ್ಷಣ ವ್ಯವಸ್ಥೆ, ಕಾಲೇಜು ಮತ್ತು ವಿವಿಗಳ ಮಾಹಿತಿ ಮತ್ತು ಚಿತ್ರಗಳನ್ನು ಪ್ರದರ್ಶಿಸಿದರು.

ಇದಲ್ಲದೇ ಪಥಸಂಚಲನದಲ್ಲಿ ಡೊಳ್ಳುಕುಣಿತ, ಹೆಣ್ಣುಮಕ್ಕಳ ವೀರಗಾಸೆ, ಕಾಡುಜನರ ನೃತ್ಯ, ಹಳ್ಳಿಜನರ ಕಂಬಳಿ ಸೊಬಗು, ಸ್ಮಶಾನ ಕಾಯುವ ವೇಷ, ಪ್ಲಾಸ್ಟಿಕ್ ನಿಷೇಧ ಸೇರಿದಂತೆ ಮುಂತಾದ ವಿಷಯಗಳನ್ನು ಪ್ರದರ್ಶಿಸಿ ವಿದ್ಯಾರ್ಥಿಗಳು ನೋಡುಗರಲ್ಲಿ ಸಂಸ್ಕøತಿ ಮತ್ತು ಸಮಸ್ಯೆಗಳೆರಡರ ಅರಿವು ಮೂಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

Published

on

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ 10:35 ಕ್ಕೆ ಅನಾರೋಗ್ಯದಿಂದ ನಿಧನರಾದರು.

ಮೃತರು ಪತ್ನಿ, ಸಹೋದರ, ಸಹೋದರಿಯರು ಸೇರಿದಂತೆ ಅಪಾರ ಬಂದು ಮಿತ್ರರನ್ನು ಅಗಲಿದ್ದಾರೆ. ಇವರ ಅಂತ್ಯ ಕ್ರಿಯೆಯನ್ನು ಹೊಳಲ್ಕೆರೆ ಸಮೀಪದ ನೆಹರು ಕಾಲೋನಿಯ ಜಮೀನಿನಲ್ಲಿ ಇಂದು (ಭಾನುವಾರ, ಜೂನ್ 07 ರಂದು ಮಧ್ಯಾಹ್ನ  2 ಗಂಟೆಗೆ) ನೆರವೇರಲಿದೆ ಎಂದು ಕುಟುಂಬದವರು ತಿಳಿಸಿದ್ದಾರೆ. ಸಂಪರ್ಕ ಮೊಬೈಲ್ ಸಂಖ್ಯೆ : 9740114246

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಆಶ್ರಯ ಯೋಜನೆ – ಆವಧಿ ವಿಸ್ತರಣೆ

Published

on

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30 ರವರೆಗೆ ಅವಧಿಯನ್ನು ವಿಸ್ತರಿಸಲಾಗಿದೆ.

ದಾವಣಗೆರೆ ಮಹಾ ನಗರಪಾಲಿಕೆ ವ್ಯಾಪ್ತಿಯಲ್ಲಿನ ಅರ್ಹ ನಿವೇಶನ ಹಾಗೂ ವಸತಿ ರಹಿತ ಅಂಗವಿಕಲರು, ಹಿರಿಯ ನಾಗರಿಕರು, ಒಂಟಿ ಮಹಿಳೆಯರು, ಪರಿಶಿಷ್ಟ ಜಾತಿ ಮತ್ತು ಪಂಗಡದವರು, ಹಿಂದುಳಿದ, ಅಲ್ಪಸಂಖ್ಯಾತ ವರ್ಗದವರು, ತೃತೀಯ ಲಿಂಗಿಗಳು, ಸ್ವಚ್ಛತಾ ಕಾರ್ಮಿಕರು, PM SVanidhi (ಪಿ ಎಂ -ಸ್ವ ನಿಧಿ )ಯೋಜನೆಯಡಿ ಗುರುತಿಸಲ್ಪಟ್ಟ ಬೀದಿ ವ್ಯಾಪಾರಿಗಳು ಮತ್ತು ಪ್ರಧಾನ ಮಂತ್ರಿ ವಿಶ್ವ ಕರ್ಮ ಯೋಜನೆಯಡಿ ಗುರುತಿಸಿದ ಕುಶಲ ಕರ್ಮಿಗಳು, ಅಂಗನವಾಡಿ ಕಾರ್ಯಕರ್ತರು, ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ವಲಸೆ ಬಂದ ಕುಟುಂಬದವರು ಅಗತ್ಯ ದಾಖಲೆಗಳೊಂದಿಗೆ ತಮ್ಮ ಅರ್ಜಿಗಳನ್ನು http://pmayurban.gov.in ಆನ್ಲೈನ್ ವೆಬ್ ಸೈಟ್ ನಲ್ಲಿ ಸಲ್ಲಿಸಬಹುದು ಅಥವಾ ಖುದ್ದಾಗಿ ಮಹಾನಗರ ಪಾಲಿಕೆಯ ಆಶ್ರಯ ಶಾಖೆಗೆ ಭೇಟಿ ನೀಡಿ ಮಾಹಿತಿಯನ್ನು ಪಡೆದು ನಿಗದಿತ ಅವಧಿಯೊಳಗೆ ಅರ್ಜಿ ಸಲ್ಲಿಸಬಹುದು ಎಂದು ದಾವಣಗೆರೆ ಮಹಾನಗರ ಪಾಲಿಕೆ ಆಯುಕ್ತರಾದ ಡಾ.ಮಹಾಂತೇಶ್‌ ಅವರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

Published

on

ಗಿರೀಶ್ ಮುತ್ತು

ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು ಸಹಾಯ ಮಾಡುತ್ತದೆ. ಇದು ಜ್ವರದಂತಹ ಸಮಸ್ಯೆಗಳ ನಿವಾರಣೆಗೆ ಸಹಾಯ ಮಾಡುತ್ತದೆ. ಹಾಗಾಗೊ ವಾರಕೊಮ್ಮೆ ಅಥವಾ ಹದಿನೈದು ದಿನಕ್ಕೊಮ್ಮೆ ಗರಿಕೆ ಹುಲ್ಲಿನ ರಸ ಅಥವಾ ಕಷಾಯದ ಸೇವನೆ ಮಾಡಬೇಕು

ನಾವು ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಲು ಹಲವಾರು ರೀತಿಯ ವ್ಯಾಯಾಮ ಮತ್ತು ಡಯಟ್ ಮಾಡುತ್ತೇವೆ. ಈ ಮಳೆಗಾಲದಲ್ಲಿ ಅನೇಕ ಜನರು ಆರೋಗ್ಯ ಸಮಸ್ಯೆಗಳಿಂದ ದೂರವಿರಲು ಹಲವು ಬಗೆಯ ಜ್ಯೂಸ್ ಕುಡಿಯುತ್ತಾರೆ. ಹಣ್ಣು, ತರಕಾರಿ ರಸ ಕುಡಿದು ಆರೋಗ್ಯವಾಗಿರಲು ಪ್ರಯತ್ನಿಸುತ್ತಾರೆ. ಆದರೆ ಈ ಒಂದು ಜ್ಯೂಸ್ ಅನ್ನು ನೀವು ಕುಡಿದರೆ ನಿಮ್ಮತ್ತ ಕಾಯಿಲೆಗಳು ಸುಳಿಯುವುದೇ ಇಲ್ಲ. ಅದುವೇ ಗರಿಕೆ ಹುಲ್ಲುನ ಜ್ಯೂಸ್.

ಹೌದು… ಆಯುರ್ವೇದ ವೈದ್ಯರು ಈ ಮೂಲಿಕೆಯು ಆರೋಗ್ಯಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿಯಾಗಿದೆ ಎನ್ನುತ್ತಾರೆ. ಇದನ್ನು ಸೇವಿಸುವುದರಿಂದ ದೇಹದಲ್ಲಿನ ಕ್ಯಾನ್ಸರ್ ಪ್ರಮಾಣವನ್ನು ಕಡಿಮೆ ಮಾಡಬಹುದು. ಅಲ್ಲದೆ ಈ ಹುಲ್ಲಿನ ರಸವನ್ನು ಕುಡಿಯುವುದರಿಂದ ರಕ್ತದಲ್ಲಿರುವ ಕ್ಯಾನ್ಸರ್ ಕೋಶಗಳು ಕಡಿಮೆಯಾಗುವುದು ಮಾತ್ರವಲ್ಲದೆ ರಕ್ತ ಶುದ್ಧವಾಗಿರುತ್ತದೆ.

ಈ ಗರಿಕೆ ಹುಲ್ಲಿನಲ್ಲಿ ವಿಟಮಿನ್ ಎ, ಕೆ, ಸಿ ಮತ್ತು ವಿಟಮಿನ್ ಇ ಗಳು ಸಮೃದ್ಧವಾಗಿದೆ. ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ರಕ್ತದೊತ್ತಡ, ರಕ್ತಹೀನತೆ ಮತ್ತು ರಕ್ತ ಸಂಬಂಧಿತ ಕಾಯಿಲೆಗಳನ್ನು ಗುಣಪಡಿಸುತ್ತದೆ. ಹಾಗಾದರೆ ಗರಿಕೆ ಹುಲ್ಲಿನ ಜ್ಯೂಸ್‌ನ ಇತರ ಆರೋಗ್ಯಕರ ಪ್ರಯೋಜನಗಳ ಬಗ್ಗೆ ತಿಳಿಯೋಣ.

ಗರಿಕೆ ರಸದ ಪ್ರಯೋಜನಗಳು

1. ಈ ಗರಿಕೆ ಹುಲ್ಲಿನ ಜ್ಯೂಸ್ ಎಲ್ಲಿಯೂ ಸಿಗುವುದಿಲ್ಲ. ಕೆಲವೆಡೆ ಮಾತ್ರ ಸಿಗುತ್ತದೆ. ಬೇರು ಮತ್ತು ಎಲೆಗಳು ಸೇರಿದಂತೆ ಗರಿಕೆ ಎಲ್ಲಾ ಭಾಗಗಳು ಔಷಧೀಯ ಗುಣಗಳನ್ನು ಹೊಂದಿದೆ. ಇದು ಕೆಲವು ಹಾನಿಕಾರಕ ವ್ಯಾಕ್ಸಿನಿಯಾ ವೈರಸ್ ಎಂಬ ಸೂಕ್ಷ್ಮಜೀವಿಯನ್ನು ನಾಶಪಡಿಸುವ ಗುಣವನ್ನು ಹೊಂದಿದೆ. ಹೀಗಾಗಿ ಈ ಜ್ಯೂಸ್ ಕುಡಿಯುವವರೂ ಇದು ಆರೋಗ್ಯಕ್ಕೆ ತುಂಬಾ ಒಳ್ಳೆಯದು ಎನ್ನುತ್ತಾರೆ.

2. ಮೂತ್ರಕೋಶದ ಕಲ್ಲುಗಳು, ದೇಹದ ಊತ, ಮಕ್ಕಳಲ್ಲಿ ದೀರ್ಘಕಾಲದ ನೆಗಡಿ, ಮೂಗು ಸೋರುವಿಕೆ, ನೆಗಡಿ, ಅತಿಸಾರ, ಕಣ್ಣಿನ ದೋಷಗಳು, ಮೆದುಳಿನ ರಕ್ತಸ್ರಾವದಂತಹ ಕಾಯಿಲೆಗಳಿಗೆ ಈ ರಸ ತುಂಬಾ ಒಳ್ಳೆಯದು.
3. ಅಲ್ಲದೆ ತೂಕ ನಷ್ಟ, ಕೊಲೆಸ್ಟ್ರಾಲ್ ಕಡಿತ, ನರರೋಗ, ರಕ್ತದ ಕ್ಯಾನ್ಸರ್ ಚಿಕಿತ್ಸೆ, ಕೆಮ್ಮು, ಹೊಟ್ಟೆ ನೋವು, ರಕ್ತಹೀನತೆ, ಸಂಧಿವಾತ, ಹೃದಯ ಅಸ್ವಸ್ಥತೆ, ಚರ್ಮ ರೋಗಗಳು ಇತ್ಯಾದಿಗಳಿಗೆ ಅತ್ಯುತ್ತಮ ಔಷಧವಾಗಿ ಕಾರ್ಯನಿರ್ವಹಿಸುತ್ತದೆ

4. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸಲು ಮತ್ತು ರಕ್ತದಿಂದ ವಿಷವನ್ನು ತೆಗೆದುಹಾಕುವಲ್ಲಿ ಗರಿಕೆ ರಸವು ಪರಿಣಾಮಕಾರಿಯಾಗಿದೆ.

5. ಗರಿಕೆ ಹುಲ್ಲಿನ ರಸ ಮತ್ತು ಕೊಬ್ಬರಿ ಎಣ್ಣೆಯನ್ನು ಸಮಪ್ರಮಾಣದಲ್ಲಿ ಬೆರೆಸಿ ಕುದಿಸಬೇಕು.. ನಂತರ ಚರ್ಮರೋಗಗಳಾದ ರಿಂಗ್‌ವರ್ಮ್ ಮತ್ತು ಒಣ ಚರ್ಮವನ್ನು ತ್ವರಿತವಾಗಿ ಗುಣ ಪಡಿಸುತ್ತದೆ.

6. ಗರಿಕೆ ಹುಲ್ಲು ಬೇಕಾದಷ್ಟು ಸಂಗ್ರಹಿಸಿ, ಸ್ವಲ್ಪ ಅರಿಶಿನವನ್ನು ಸೇರಿಸಿ ಪೇಸ್ಟ್ ಮಾಡಿ ದೇಹಕ್ಕೆ ಉಜ್ಜಿಕೊಂಡರೆ, ಒಂದು ಗಂಟೆ ಬಿಟ್ಟು ನಂತರ ಸ್ನಾನ ಮಾಡಿ. ಇದರಿಂದ ದೇಹದ ತುರಿಕೆ ನಿವಾರಣೆಯಾಗುತ್ತದೆ.

ಗರಿಕೆ ಹುಲ್ಲಿನ ರಸ ತಯಾರಿಸುವುದು ಹೇಗೆ?

*ತಾಜಾ ಗರಿಕೆ ಹುಲ್ಲು ಒಂದು ಹಿಡಿಯಷ್ಟು ತೆಗೆದುಕೊಂಡು ಸ್ವಚ್ಚವಾಗಿ ತೊಳೆದುಕೊಳ್ಳಿ.

* ಬಳಿಕ ಇದನ್ನು ಸಣ್ಣ ಸಣ್ಣ ತುಂಡುಗಳನ್ನಾಗಿ ಕತ್ತರಿಸಿಕೊಳ್ಳಿ.

* ಬಳಿಕ ಇದನ್ನು ಮಿಕ್ಸಿಗೆ ಹಾಕಿ ರುಬ್ಬಿಕೊಳ್ಳಬೇಕು.

* ಚೆನ್ನಾಗಿ ಪೇಸ್ಟ್ ಆದ ಬಳಿಕ ಇದನ್ನು ಸೋಸಿಕೊಳ್ಳಬೇಕು.

* ಬಳಿಕ ಇದನ್ನು ಕುಡಿಯಬೇಕು. ಆದರೆ ಇದು ತಕ್ಷಣದ ಮನೆಮದ್ದಾಗಿದೆ. ಆದರೆ ಯಾವುದೇ ಆರೋಗ್ಯ ಸಮಸ್ಯೆಗಳಿಗೆ ಇದು ಕೊನೆಯ ಮದ್ದು ಅಲ್ಲ. ಹೀಗಾಗಿ ಯಾವುದೇ ಆರೋಗ್ಯ ಸಮಸ್ಯೆಗಳು ಉಂಟಾದಾಗ ಮೊದಲು ವೈದ್ಯರನ್ನು ಸಂಪರ್ಕಿಸುವುದು ತುಂಬಾ ಅವಶ್ಯಕ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

 

Continue Reading
Advertisement

Title

ಅಂಕಣ4 hours ago

ಕವಿತೆ | ದೇವರ ಹೂವು

~ ಡಾ. ಸಿ.ಬಿ.ಐನಳ್ಳಿ ಊಟ ಮಾಟ ವೇಷ ಭಾಷೆ ಪ್ರಾರ್ಥನೆ ಬೇರೆ ಬೇರೆ ಪವಿತ್ರಪಠ್ಯ ಅವನದೊಂದು ನನ್ನದಿನ್ನೊಂದಂತೆ ನದಿ ದಂಡೆಯ ಮೇಲೆ ನೋಟ ಬೆರೆತು ಮಾತು ಮರೆತು...

ದಿನದ ಸುದ್ದಿ4 hours ago

ಹೊಳಲ್ಕೆರೆ | ಸ್ಪೀಚ್ ಸಂಸ್ಥೆ ಸಂಸ್ಥಾಪಕ ಹೆಚ್.ರಾಮಚಂದ್ರಪ್ಪ ನಿಧನ ; ಇಂದು ಅಂತ್ಯಕ್ರಿಯೆ

ಸುದ್ದಿದಿನ,ಚಿತ್ರದುರ್ಗ:ಜಿಲ್ಲೆಯ ಬ್ಯಾಂಕ್ ಕಾಲೋನಿಯ ಸ್ಪೀಚ್ ಸಂಸ್ಥೆಯ ಸಂಸ್ಥಾಪಕರು ಹಾಗೂ ಎರಡು ಅವಧಿಗೆ ಹೊಳಲ್ಕೆರೆ ತಾಲ್ಲೂಕಿನ ಅರೇಹಳ್ಳಿ ಗ್ರಾಮ ಪಂಚಾಯತ್ ಸದಸ್ಯರಾಗಿದ್ದ ಹೆಚ್.ರಾಮಚಂದ್ರಪ್ಪ (59 ವರ್ಷ) ಶನಿವಾರ ಬೆಳಗ್ಗೆ...

ದಿನದ ಸುದ್ದಿ11 hours ago

ಆಶ್ರಯ ಯೋಜನೆ – ಆವಧಿ ವಿಸ್ತರಣೆ

ಸುದ್ದಿದಿನ,ದಾವಣಗೆರೆ : 2025-26 ನೇ ಸಾಲಿನ ಪ್ರಧಾನ ಮಂತ್ರಿ ಆವಾಸ್ (ನಗರ) 2.0 ಯೋಜನೆಯಡಿ ನಿವೇಶನ ಮತ್ತು ವಸತಿ ರಹಿತ ಫಲಾನುಭವಿಗಳ ಅರ್ಜಿಗಳನ್ನು ಸಲ್ಲಿಸಲು ಜೂನ್‌ 30...

ದಿನದ ಸುದ್ದಿ2 days ago

ಗರಿಕೆ ಹುಲ್ಲಿನ ಜ್ಯೂಸ್‌ನಲ್ಲಿದೆ ರಕ್ತದ ಕ್ಯಾನ್ಸರ್ ಗುಣಪಡಿಸುವ ಶಕ್ತಿ

ಗಿರೀಶ್ ಮುತ್ತು ಗರಿಕೆ ಹುಲ್ಲಿನ ರಸದ ಸೇವನೆಯಿಂದ ದೇಹದಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚುತ್ತದೆ. ಸಿನೊಡಾನ್ ಡ್ಯಾಕ್ಟಿಲಾನ್ ಪ್ರೊಟೀನ್ ಎಂಬ ಅಂಶವಿದ್ದು, ಇದು ರೋಗನಿರೋಧಕ ಶಕ್ತಿ ಹೆಚ್ಚಲು...

ದಿನದ ಸುದ್ದಿ3 days ago

ಬಡವರ ಕಲ್ಯಾಣವೇ ನಮ್ಮ ಆಡಳಿತದ ಕೇಂದ್ರಬಿಂದು : ಸಿಎಂ ಡಿಕೆಶಿ

ಸುದ್ದಿದಿನ,ಬೆಂಗಳೂರು: ರಾಜ್ಯದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಬಳಿಕ ಜನಪರ ಆಡಳಿತಕ್ಕೆ ಆದ್ಯತೆ ನೀಡುವುದಾಗಿ ಘೋಷಿಸಿದ್ದು, ಯುವಕರು, ವಿದ್ಯಾರ್ಥಿಗಳು ಹಾಗೂ ಮೂಲಸೌಕರ್ಯ ಅಭಿವೃದ್ಧಿಗೆ...

ದಿನದ ಸುದ್ದಿ3 days ago

ಬಿ.ಕೆ. ಹರಿಪ್ರಸಾದ್ ಕೆಪಿಸಿಸಿ ಅಧ್ಯಕ್ಷರಾಗಿ ನೇಮಕ

ಸುದ್ದಿದಿನ,ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ)ಯ ನೂತನ ಅಧ್ಯಕ್ಷರಾಗಿ ಹಿರಿಯ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್ (B. K. Hariprasad) ಅವರನ್ನು ಅಖಿಲ ಭಾರತ ಕಾಂಗ್ರೆಸ್ ಸಮಿತಿ...

ಅಂಕಣ3 days ago

ಕೆಪಿಸಿಸಿಯ ನೂತನ ಸಾರಥಿ ಬಿ.ಕೆ. ಹರಿಪ್ರಸಾದ್ ರಾಜಕೀಯ ಪಯಣ

ಕರ್ನಾಟಕ ಕಾಂಗ್ರೆಸ್ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದಾಗಿ ಹಿರಿಯ ನಾಯಕ ಬಿ.ಕೆ. ಹರಿಪ್ರಸಾದ್ ಅವರನ್ನು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (KPCC) ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಮುಖ್ಯಮಂತ್ರಿ ಹುದ್ದೆಯನ್ನು...

ದಿನದ ಸುದ್ದಿ3 days ago

ಧನ್ಯವಾದಗಳು ಕರ್ನಾಟಕ : ಸಿಎಂ ಡಿಕೆ ಶಿವಕುಮಾರ್

ಸುದ್ದಿದಿನ ಡೆಸ್ಕ್:ಕರ್ನಾಟಕದ ನೂತನ ಮುಖ್ಯಮಂತ್ರಿಯಾಗಿ ನಾನು ಇಂದು ಪ್ರಮಾಣ ವಚನ ಸ್ವೀಕರಿಸಿದ್ದೇನೆ. ಮುಖ್ಯಮಂತ್ರಿಯಾಗಿ ರಾಜ್ಯದ ಏಳುಕೋಟಿ ಜನತೆಯ ಸೇವೆ ಮಾಡಲು ಒದಗಿ ಬಂದಿರುವ ಈ ಅವಕಾಶ ನನ್ನ...

ದಿನದ ಸುದ್ದಿ3 days ago

ಮೊದಲ ಸಂಪುಟ ಸಭೆಯಲ್ಲೇ ಮಹತ್ವದ 5 ಘೋಷಣೆ ಮಾಡಿದ ಸಿಎಂ ಡಿಕೆಶಿ

ಸುದ್ದಿದಿನ,ಬೆಂಗಳೂರು: ಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಗಳಲ್ಲಿ ರಾಜ್ಯದ ಜನತೆಗೆ ಹಲವು ಮಹತ್ವದ ಘೋಷಣೆಗಳನ್ನು ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಪ್ರಮಾಣವಚನ...

ದಿನದ ಸುದ್ದಿ5 days ago

ದಾವಣಗೆರೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ವಕೀಲ ಎಲ್.ಎಚ್.ಅರುಣಕುಮಾರ್ ಮನವಿ

ಸುದ್ದಿದಿನಡೆಸ್ಕ್:ದಾವಣಗೆರೆಮಹಾನಗರದಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ ಮಾಡುವ ಮುನ್ನ ಪೂರ್ವಭಾವಿಯಾಗಿ ಒಂದಿಷ್ಟು ಮಾಹಿತಿಯ ಅಗತ್ಯವಿದೆ. ದಾವಣಗೆರೆ ಅತ್ಯಂತ ನಿಖರವಾಗಿ ಕರ್ನಾಟಕದ ಮಧ್ಯಭಾಗದಲ್ಲಿದೆ. ಅದ್ದರಿಂದ ಈ ನಗರವನ್ನೇ...

Trending