Connect with us

ದಿನದ ಸುದ್ದಿ

ಶಿವಮೊಗ್ಗ | ಸಹ್ಯಾದ್ರಿ ಉತ್ಸವಕ್ಕೆ ಸಂಭ್ರಮದ ಚಾಲನೆ

Published

on

ಸುದ್ದಿದಿನ,ಶಿವಮೊಗ್ಗ: ಸಾಂಸ್ಕøತಿಕ ಚಟುವಟಿಕೆಗಳಿಗೆ ಪ್ರಾಮುಖ್ಯತೆ ದೊರೆಯುವಂತಹ ಪಠ್ಯಕ್ರಮ ಮತ್ತು ಶಿಕ್ಷಣ ಪದ್ಧತಿಯನ್ನು ಭಾರತದಲ್ಲಿಯೂ ಆರಂಭಿಸಿದಲ್ಲಿ ನಮ್ಮ ಸ್ಥಳೀಯ ಸಂಸ್ಕøತಿ ಉಳಿಸಿ ಬೆಳಸಲು ಸಾಧ್ಯ ಎಂದು ನಟಿ ಮಾನ್ವಿತಾ ಕಾಮತ್ ಅಭಿಪ್ರಾಯಪಟ್ಟರು.

ಕುವೆಂಪು ವಿಶ್ವವಿದ್ಯಾಲಯದ ಪಠ್ಯೇತರ ಚಟುವಟಿಕೆಗಳ ಘಟಕವು ಅಕ್ಟೋಬರ್ 03ರಿಂದ 5ರವರೆಗೆ ಮೂರು ದಿನಗಳ ಕಾಲ ಆಯೋಜಿಸಿರುವ ಅಂತರ್-ಕಾಲೇಜುಗಳ ಸಾಂಸ್ಕøತಿಕ ಸ್ಪರ್ಧೆ ಸಹ್ಯಾದ್ರಿ ಉತ್ಸವ 2019ನ್ನು ಉದ್ಘಾಟಿಸಿ ಅವರು ಮಾತನಾಡಿದರು. ಭಾರತದಲ್ಲಿ ಕೇವಲ ಪಠ್ಯಾಧರಿತ ಶಿಕ್ಷಣವೇ ಮಹತ್ವ ಪಡೆಯುತ್ತಿದ್ದು, ನಮ್ಮ ನೆಲದ ಸಂಸ್ಕøತಿ ಉಳಿಸಲು ಇದು ಬದಲಾಗುವುದು ಅಗತ್ಯ ಎಂದರು.

ಪ್ರತಿಯೊಬ್ಬ ವ್ಯಕ್ತಿಯೂ ಸ್ವಂತ ಕನಸಿನ ಮೂಲಕ ಗುರಿ ನಿರ್ಧರಿಸಿಕೊಳ್ಳಬೇಕು. ದೃಡತೆಯೊಂದಿಗೆ ಈ ಹಾದಿಯಲ್ಲಿ ನಡೆಯುವಾಗ ಆಧುನಿಕ ಸವಲತ್ತುಗಳಾದ ಜಾಲತಾಣಗಳು, ಮೊಬೈಲ್‍ವ್ಯಸನ, ಪಬ್‍ಜಿಯಂತಹ ಅಲ್ಪಕಾಲದ ಆಕರ್ಷಣೆಗಳಿಂದ ವಿಚಲಿತರಾಗದೇ ಮುನ್ನಡೆದಲ್ಲಿ ಮಾತ್ರ ಗುರಿ ತಲುಪುವುದು ಸಾಧ್ಯ. ಎಂದು ವಿದ್ಯಾರ್ಥಿಗಳಿಗೆ ಸಲಹೆಯಿತ್ತರು.

ಮಲೆನಾಡಿನ ಸೊಗಡಿರುವ ಇಲ್ಲಿನ ವಿದ್ಯಾರ್ಥಿಗಳಲ್ಲಿ ನಗರದವರಿಗಿಂತ ಉತ್ತಮ ಸಂಸ್ಕøತಿ, ಸಾಂಸ್ಕøತಿಕ ಅರಿವು ಇದೆ ಹಾಗೂ ಸಾಧನೆಯ ಹಾದಿಯಲ್ಲಿ ಆಕರ್ಷಣೆಗಳ ಅಡ್ಡಿಗಳಿಲ್ಲದಿರುವುದು ಖುಷಿ ತರುವ ವಿಚಾರ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಕುಲಪತಿ ಪ್ರೊ. ಬಿ.ಪಿ.ವೀರಭದ್ರಪ್ಪ ಮಾತನಾಡಿ, ಸಾಂಸ್ಕøತಿಕ ಚಟುವಟಿಕೆಗಳು ಪಠ್ಯ ಚಟುವಟಿಕೆಗಳಷ್ಟೇ ಮುಖ್ಯ. ಮಲೆನಾಡಿನ ಸಂಸ್ಕøತಿಯ ಅನಾವರಣಕ್ಕೆ ವಿದ್ಯಾರ್ಥಿಗಳಿಗೆ ಮಹತ್ತರ ವೇದಿಕೆಯಾಗಿ ಉತ್ಸವವು ಕಾರ್ಯನಿರ್ವಹಿಸುತ್ತದೆ. ಉತ್ತಮ ಧ್ಯೇಯೋದ್ದೇಶಗಳೊಂದಿಗೆ ಮುನ್ನಡೆವ ವಿದ್ಯಾರ್ಥಿಗಳಿಗೆ ವಿವಿ ಎಲ್ಲ ಸಹಕಾರ ನೀಡಲಿದೆ ಎಂದು ಅವರು ತಿಳಿಸಿದರು.

ಹಳೆಯ ಘಟಿಕೋತ್ಸವ ಸಭಾಂಗಣದಲ್ಲಿ ನಡೆದ ಔಪಚಾರಿಕ ಉದ್ಘಾಟನಾ ಕಾರ್ಯಕ್ರಮದಲ್ಲಿ ಕುಲಸಚಿವ ಪ್ರೊ. ಎಸ್.ಎಸ್. ಪಾಟೀಲ್, ಪ್ರೊ. ವೆಂಕಟೇಶ್ವರುಲು, ಪ್ರೊ. ಹಿರೇಮಣಿನಾಯ್ಕ್, ಡಾ. ಮಂಜುನಾಥ್ ಹಾಗೂ ವಿವಿಧ ಕಾಲೇಜುಗಳ ಸಾವಿರಕ್ಕೂ ಅಧಿಕ ಸ್ಪರ್ಧಾಳುಗಳು ಹಾಜರಿದ್ದರು.

ಉತ್ಸವದಲ್ಲಿ ಸುಮಾರು 60 ಕಾಲೇಜುಗಳು ಭಾಗವಹಿಸಿದ್ದು, ಜಾನಪದ ನೃತ್ಯ, ಏಕಾಂಕ ನಾಟಕ, ಗಾಯನ, ಮಿಮಿಕ್ರಿ ಸೇರಿದಂತೆ 23 ವಿವಿಧ ಸಾಂಸ್ಕøತಿಕ ಸ್ಪರ್ಧೆಗಳನ್ನು ಏರ್ಪಡಿಸಲಾಗಿದೆ. ಸಾವಿರಕ್ಕೂ ಅಧಿಕ ವಿದ್ಯಾರ್ಥಿಗಳು ಉತ್ಸವದಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದಾರೆ. ಇವರೆಲ್ಲರಿಗೂ ವಿಶೇಷ ಭೋಜನ ಹಾಗೂ ವಸತಿಯ ಸೌಲಭ್ಯವನ್ನು ವಿವಿಯು ಕಲ್ಪಿಸಿದೆ.

ಭಾಷೆ, ಸಂಸ್ಕøತಿ, ಸಮಸ್ಯೆಗಳನ್ನು ತೆರೆದಿಟ್ಟ ಪಥಸಂಚಲನ
ಕುವೆಂಪು ವಿಶ್ವವಿದ್ಯಾಲಯದ ಅಂತರಕಾಲೇಜುಗಳ ಸಾಂಸ್ಕøತಿಕ ಸ್ಪರ್ಧೆ ಸಹ್ಯಾದ್ರಿ ಉತ್ಸವ 2019ರ ಉದ್ಘಾಟನೆಗೂ ಮುನ್ನ ಭಾಗವಹಿಸಲು ಆಗಮಿಸಿದ ತಂಡಗಳ ಪಥಸಂಚಲನ ಜಾಥಾ ನಡೆದಿದ್ದು, ನಟಿ ಮಾನ್ವಿತಾ ಮತ್ತು ವಿವಿ ಕುಲಪತಿ ಪ್ರೊ. ಬಿ.ಪಿ. ವೀರಭದ್ರಪ್ಪ ಚಾಲನೆ ನೀಡಿದರು.

39 ಕಾಲೇಜುಗಳ ಪಾಲ್ಗೊಂಡ ಪಥಸಂಚಲನದಲ್ಲಿ ವೈವಿಧ್ಯಮಯ ವೇಷಭೂಷಣಗಳೊಂದಿಗೆ ಪಾಲ್ಗೊಂಡು ಉತ್ಸವಕ್ಕೆ ಮೆರಗು ನೀಡುವ ಜೊತೆಗೆ ಭಾಷೆ, ಮಲೆನಾಡ ಸಂಸ್ಕøತಿ, ಸೇನೆ ಹಾಗೂ ಸಾಮಾಜಿಕ ಸಮಸ್ಯೆಗಳನ್ನು ವಿದ್ಯಾರ್ಥಿಗಳು ಮತ್ತು ಶಂಕರಘಟ್ಟ, ತಾವರಘಟ್ಟ ಜನರೆದುರು ತೆರೆದಿಟ್ಟರು.

ದೇವರು: ವಿಶ್ವವಿದ್ಯಾಲಯ ಪದವಿ ಕಾಲೇಜಿನ ವಿದ್ಯಾರ್ಥಿನಿಯರು ನವದುರ್ಗೆಯ ವೇಷವನ್ನು ಧರಿಸಿ ನೆರೆದವರಲ್ಲಿ ಭಕ್ತಿರಸ ಮೂಡುವಂತೆ ಮಾಡಿದರೆ, ರಿಪ್ಪನ್‍ಪೇಟೆ ಜಿ.ಎಫ್.ಜಿ.ಸಿ. ವಿದ್ಯಾರ್ಥಿಗಳು ದೇವನೊಬ್ಬ ನಾಮಹಲವು ಎಂಬ ಸಂದೇಶ ಸಾರುವ ಚಿತ್ರ ಫಲಕಗಳನ್ನು ತೋರಿದರು. ಆಚಾರ್ಯ ತುಳಸಿ ವಾಣಿಜ್ಯ ಕಾಲೇಜಿನ ವಿದ್ಯಾರ್ಥಿಗಳು ಚಾಮುಂಡೇಶ್ವರಿ ತಾಯಿ ಮತ್ತು ಅಂಬಾರಿಯ ಪ್ರತಿಕೃತಿ ಪ್ರದರ್ಶಿಸಿ ಅದ್ಧೂರಿತನ ಮೆರೆದರು.

ಸಂಸ್ಕøತಿ: ಶಿಕಾರಿಪುರದ ಜಿ.ಎಫ್.ಜಿ.ಸಿ. ವಿದ್ಯಾರ್ಥಿಗಳು ವಿಶ್ವಮಾನವ ರಥದೊಂದಿಗೆ ಪೂರ್ಣಕುಂಭ ಮತ್ತು ಡೊಳ್ಳು ಕುಣಿತ ಪ್ರದರ್ಶನ ನೀಡಿದರು. ಶಿರಾಳಕೊಪ್ಪ ಜಿ.ಎಫ್.ಜಿ.ಸಿ. ವಿದ್ಯಾರ್ಥಿಗಳು ಕಾಡುಜನರ ವೇಷಭೂಷಣ ಮತ್ತು ಕೋಲ ನೃತ್ಯ ಪ್ರಸ್ತುತಪಡಿಸಿದರು. ವಿವಿಧತೆ ಮತ್ತು ಶಿವಮೊಗ್ಗದ ಡಿ.ವಿ.ಎಸ್ ಕಾಲೇಜು ವಿದ್ಯಾರ್ಥಿಗಳು ಭಾರತದ ಎಲ್ಲ ರಾಜ್ಯಗಳ ವೇಷಭೂಷಣದೊಂದೆಗೆ ವಿವಿಧತೆಯಲ್ಲಿ ಏಕತೆ ಎಂಬ ಭಾರತದ ಸಂದೇಶ ಸಾರಿದರು. ಸರ್ಕಾರಿ ಪ್ರಥಮ ದರ್ಜೆ ಕಲಾ ಮತ್ತು ವಾಣಿಜ್ಯ ಕಾಲೇಜು ಕೊಡಗಲಸರ ತಂಡದವರು ದಕ್ಷಿಣ ಕನ್ನಡ ಸಂಸ್ಕøತಿಯಾದ ಯಕ್ಷಗಾನ, ಕೋ¯, ಹುಲಿಕುಣಿತ, ಕೊರಗಜ್ಜ ನೃತ್ಯ ನೋಡುಗರ ಗಮನ ಸೆಳೆದರು.

ಕಳಸ ಪ್ರಥಮ ದರ್ಜೆ ಕಾಲೇಜಿನವರು ದೇಶ ಕಾಯುವ ಯೋಧರ ವೇಷಭೂಷಣ ಹಾಗೂ ಸೈನಿಕ ಆಭಿನಂದನ್‍ನೊಡನೆ ಯುದ್ಧ ವಿಮಾನದ ಮಾದರಿಯೊಂದಿಗೆ ಶಿಸ್ತಿನಿಂದ ಹೆಜ್ಜೆ ಹಾಕಿದ್ದು ಸೈನಿಕರ ಬಗ್ಗೆ ಗೌರವ ಭಾವವನ್ನು ತರಿಸುವಂತಿತ್ತು.

ಸುರಕ್ಷತೆ: ಶಿವಮೊಗ್ಗದ ಮೈತ್ರಿ ಕಾಲೇಜಿನ ವಿದ್ಯಾರ್ಥಿನಿಯರು ರಸ್ತೆ ಸುರಕ್ಷತೆ ಸಂಬಂಧಿ ಭಿತ್ತಿಚಿತ್ರ ಹಾಗೂ ಸುರಕ್ಷತಾ ಕ್ರಮಗಳ ಅಣಕು ಪ್ರದರ್ಶನ ನೀಡಿದರು. ಚಿಕ್ಕಮಗಳೂರಿನ ಸಂತ ಜೋಸೆಫರ ಕಾಲೇಜು ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಿಂದ ಆಗುತ್ತಿರುವ ತೊಂದರೆ ಹಾಗೂ ಅಧ್ಯಯನ ಪ್ರವೃತ್ತಿ ಕೊರತೆ ಬಗ್ಗೆ ಫಲಕಗಳು ಹಾಗೂ ಪುಸ್ತಕದ ಶವಯಾತ್ರೆ ಮೂಲಕ ವಿದ್ಯಾರ್ಥಿಗಳಲ್ಲಿ ಜಾಗೃತಿ ಮೂಡಿಸಿದರು.

ರೈತ, ವಿದ್ಯಾರ್ಥಿ ಮತ್ತು ಭಾಷಾ ಸಮಸ್ಯೆ: ನೆರೆ-ಬರಗಳಿಂದಾಗಿ ರೊಸಿಹೋದ ರೈತ ಹೇಗೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾನೆ ಎಂಬ ವಿಷಯ ಕುರಿತು ರೈತನ ಅಣುಕು ಶವಯಾತ್ರೆಯನ್ನು ಪ್ರದರ್ಶಿಸಿ ಸಂಕಷ್ಟ ತಿಳಿಸಿದರು.

ಚಿಕ್ಕಮಗಳೂರಿನ ಸೆಂಟ್ ಜೋಸೆಫ್ ಕಾಲೇಜ್ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳ ಪ್ರಭಾವದಿಂದ ಪುಸ್ತಕ ಸಂಸ್ಕøತಿ ಸಾಯುತ್ತಿದೆ ಎಂದು ಪುಸ್ತಕದ ಶವಯಾತ್ರೆ ಹಾಗೂ ಫಲಕಸಹಿತ ವೇಷಭೂಷಣಗಳನ್ನು ಧರಿಸಿ ಜಾಗೃತಿ ಮೂಡಿಸಿದರು.

ಕುವೆಂಪು ಶತಮಾನೋತ್ಸವ ಶಿವಮೊಗ್ಗದ ವಿದ್ಯಾರ್ಥಿಗಳು ಕನ್ನಡದ ಮೇಲೆ ಇತರೆ ಭಾಷೆ ಮತ್ತು ಸಂಸ್ಕøತಿಗಳಿಂದಾಗುತ್ತಿರುವ ದಬ್ಬಾಳಿಕೆ ಮತ್ತು ರಕ್ಷಣೆ ಕುರಿತು ಕನ್ನಡಾಂಬೆಯ ರಕ್ಷಣೆ ಹಾಗೂ ಅದರ ಪರಿಹಾರವಾಗಿ ಕರ್ನಾಟಕದ ಶಿಕ್ಷಣ ವ್ಯವಸ್ಥೆ, ಕಾಲೇಜು ಮತ್ತು ವಿವಿಗಳ ಮಾಹಿತಿ ಮತ್ತು ಚಿತ್ರಗಳನ್ನು ಪ್ರದರ್ಶಿಸಿದರು.

ಇದಲ್ಲದೇ ಪಥಸಂಚಲನದಲ್ಲಿ ಡೊಳ್ಳುಕುಣಿತ, ಹೆಣ್ಣುಮಕ್ಕಳ ವೀರಗಾಸೆ, ಕಾಡುಜನರ ನೃತ್ಯ, ಹಳ್ಳಿಜನರ ಕಂಬಳಿ ಸೊಬಗು, ಸ್ಮಶಾನ ಕಾಯುವ ವೇಷ, ಪ್ಲಾಸ್ಟಿಕ್ ನಿಷೇಧ ಸೇರಿದಂತೆ ಮುಂತಾದ ವಿಷಯಗಳನ್ನು ಪ್ರದರ್ಶಿಸಿ ವಿದ್ಯಾರ್ಥಿಗಳು ನೋಡುಗರಲ್ಲಿ ಸಂಸ್ಕøತಿ ಮತ್ತು ಸಮಸ್ಯೆಗಳೆರಡರ ಅರಿವು ಮೂಡಿಸಿದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

Published

on

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ನಂತರ 23ಕ್ಕೆ ಹೆಚ್ಚು ವಿದ್ಯಾರ್ಥಿನಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ, ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು ಮತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ ರಾಜೀನಾಮೆ ನೀಡಬೇಕು ಎಂದು ಯುವ ಕಾಂಗ್ರೆಸ್ ಪ್ರದಾನ ಕಾರ್ಯದರ್ಶಿ *ಮಹಬೂಬ್ ಭಾಷಾ* ಆಗ್ರಹಿಸಿದ್ದಾರೆ ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ ಯುವಜನರು ಹಾಗೂ ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು, ಸಂವಿಧಾನ ವಿರೋಧಿ ನಡೆ ಹಾಗೂ ಹೋರಾಟವನ್ನು ಹತ್ತಿಕ್ಕು ಹೊನ್ನಾರವಾಗಿದೆ.

ನೀಟ್ ಹಗರಣ ಮತ್ತು ವಿದ್ಯಾರ್ಥಿಗಳ ಆತ್ಮಹತ್ಯೆ ಕಾರ್ಪೊರೇಟರ್ ಶಿಕ್ಷಣ ನೀತಿಗಳ ಕಾರಣ, ಪರೀಕ್ಷೆಯ ಅಕ್ರಮ ವಿರುದ್ಧ ಹೋರಾಟ ಎರಡನೇ ಸ್ವತಂತ್ರ ಸಂಗ್ರಾಯದ ರೀತಿಯಲ್ಲಿ ದೇಶದಿಂದ ವ್ಯಾಪಿಸುತ್ತಿದ್ದು, ಆಳುವ ಸರ್ಕಾರ ರಾಷ್ಟ್ರದ ಭವಿಷ್ಯ ವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದೆಂದು ಹೇಳಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ತಕ್ಷಣವೇ ಸರಿಪಡಿಸಬೇಕು ಹಾಗೂ ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸುದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕೆಂದು ಒತ್ತಾಯಿಸುತ್ತಿದ್ದೇನೆ ಎಂದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

Published

on

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಕೂಡಲೇ

ರಾಜಿನಾಮೆ ನೀಡಬೇಕು. ವಿದ್ಯಾರ್ಥಿಗಳನ್ನು ಕೊಲ್ಲುವ ಭ್ರಷ್ಟ ಆಡಳಿತ ವ್ಯವಸ್ಥೆ ಕೊನೆಯಾಗಬೇಕು’ ಎಂದು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ನೀತಿ ,ಸಂಶೋಧನೆ ಮತ್ತು ತರಬೇತಿ ವಿಭಾಗದ ರಾಜ್ಯ ಸಂಚಾಲಕರಾದ ವಿನಾಯಕ ಬಿ.ಎನ್ ಪತ್ರಿಕಾ ಪ್ರಕಟಣೆಯಲ್ಲಿ ಆಗ್ರಹ ಮಾಡಿದ್ದಾರೆ.

ಸಂವಿಧಾನ ವಿರೋಧಿ ಆಡಳಿತಕ್ಕೆ ಕಡಿವಾಣ ಹಾಕಲು ದೇಶದ
ಯುವಜನರು, ವಿದ್ಯಾರ್ಥಿಗಳು ಎಚ್ಚೆತ್ತುಕೊಳ್ಳಬೇಕು. ಸೊನಮ್ ವಾಂಗ್ಟಕ್ ಅವರನ್ನು ಏಕಾಏಕಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಇದು ಸಂವಿಧಾನವಿರೋಧಿ ನಡೆ, ಹೋರಾಟ ಹತ್ತಿಕ್ಕುವ ಹುನ್ನಾರ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ನೀಟ್ ಹಗರಣ, ವಿದ್ಯಾರ್ಥಿಗಳ ಆತ್ಮ ಹತ್ಯೆಗೆ ಕಾರ್ಪೊರೇಟ್ ಶಿಕ್ಷಣ ನೀತಿಗಳು ಕಾರಣ. ನೀಟ್ ಪರೀಕ್ಷೆ ಅಕ್ರಮದ ವಿರುದ್ಧದ ಹೋರಾಟ ಎರಡನೇ ಸ್ವಾತಂತ್ರ್ಯ ಸಂಗ್ರಾಮದ ರೀತಿಯಲ್ಲಿ ದೇಶದಾದ್ಯಂತ ವ್ಯಾಪಿಸುತ್ತಿದೆ. ಆಳುವ ಸರ್ಕಾರ ರಾಷ್ಟ್ರದ ಭವಿಷ್ಯವಾಗಿರುವ ಯುವ ಸಮೂಹದ ಕನಸುಗಳನ್ನು ಹೊಸಕಿ ಹಾಕಬಾರದು’.ಎಂದು ತಿಳಿಸಿದ್ದಾರೆ.

ಪರೀಕ್ಷಾ ವ್ಯವಸ್ಥೆಯ ಲೋಪದೋಷಗಳನ್ನು ಸರಿಪಡಿಸಬೇಕು ಮತ್ತು ಭವಿಷ್ಯದಲ್ಲಿ ಇಂತಹ ಅಕ್ರಮಗಳು ಮರುಕಳಿಸದಂತೆ ಕಠಿಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.
ವಂದನೆಗಳೊಂದಿಗೆ

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

Published

on

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು ಡಿಜಿಟಲೀಕರಣ ಸಾಧನೆ ಮಾಡಲಾಗಿರುವುದರಿಂದ, ಪ್ರಗತಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನ ಪಡೆದುಕೊಂಡಿದೆ ಎಂದು 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿ ಹಾಗೂ ದಾವಣಗೆರೆ ಉಪವಿಭಾಗಾಧಿಕಾರಿ ಸಂತೋಷ್ ಕುಮಾರ್ ಅವರು ತಿಳಿಸಿದರು.

ಅವರು ಮಂಗಳವಾರ ದಾವಣಗೆರೆ ತಾಲ್ಲೂಕು ಕಚೇರಿಯಲ್ಲಿ ದಾವಣಗೆರೆ ಜಿಲ್ಲೆಯ 108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕುರಿತು ಏರ್ಪಡಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.

108-ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಒಟ್ಟು 1,97,048 ಮತದಾರರನ್ನು ಹೊಂದಿದ್ದು ಎಲ್ಲಾ 1,97,048 ಗಣತಿ ನಮೂನೆಗಳನ್ನು ಹಂಚಿಕೆ ಮಾಡಲಾಗಿದೆ ಇದುವರೆಗೆ ಒಟ್ಟು 1,81,890 ಗಣತಿ ನಮೂನೆಗಳನ್ನು ಡಿಜಿಟಲೀಕರಿಸಲಾಗಿದ್ದು, ಶೇಕಡಾ 92.31 ರಷ್ಟು ಗುರಿಯನ್ನು ತಲುಪಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (SIR) ಪ್ರಕ್ರಿಯೆಯಲ್ಲಿ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ ಗಣತಿ ನಮೂನೆಗಳ ಹಂಚಿಕೆ ಹಾಗೂ ಡಿಜಿಟಲೀಕರಣ ಪ್ರಕ್ರಿಯೆಯು ಬಿರುಸಿನಿಂದ ಸಾಗಿದ್ದು, ಇನ್ನು ಕೇವಲ 4,165 ಫಾರ್ಮ್‌ಗಳು (ಶೇಕಡಾ 2.11) ಮಾತ್ರ ಡಿಜಿಟಲೀಕರಣಕ್ಕೆ ಬಾಕಿ ಇವೆ ಕ್ಷೇತ್ರದಲ್ಲಿ ಯಾವುದೇ ಹಂಚಿಕೆಯಾಗದ ಫಾರ್ಮ್‌ಗಳು ಬಾಕಿ ಉಳಿದಿಲ್ಲ, ಬಾಕಿ ಉಳಿದಿರುವ ಗಣತಿ ನಮೂನೆಗಳ ಗಣಕೀಕರಣ ಶೀಘ್ರವಾಗಿ ಪೂರ್ಣಗೊಳಿಸಲಾಗುವುದು ಎಂದರು.

ಮನೆ ಮನೆ ಭೇಟಿ ಸಂದರ್ಭದಲ್ಲಿ ಇಂದಿನವರೆಗೆ ಮಾಯಾಕೊಂಡ ವಿಧಾನಸಭಾ ಕ್ಷೇತ್ರದಲ್ಲಿ ಒಟ್ಟು 10,993 ಮತದಾರರನ್ನು ಸ್ಥಳಾಂತರ, ವಲಸೆ, ಮರಣ, ದ್ವಿಪತಿ (ಡೂಪ್ಲಿಕೇಟ್) ಸೇರಿದಂತೆ ಇತರೆ ಕಾರಣಗಳಿಗಾಗಿ ಗುರುತಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ 193 ನಮೂನೆಗಳು ಸಂಗ್ರಹವಾಗದೆ ಉಳಿದಿದ್ದು, 5059 ಶಾಶ್ವತ ವಲಸೆ, 3951 ಮರಣ ಪ್ರಕರಣ, 1760 ದ್ವಿಪ್ರತಿ ನಮೂನೆಗಳು ಹಾಗೂ 30 ಇತರೆ ಪ್ರಕರಣಗಳನ್ನು ಪತ್ತೆ ಹಚ್ಚಲಾಗಿದೆ ಎಂದು ತಿಳಿಸಿದರು.

ದಾವಣಗೆರೆ ತಾಲ್ಲೂಕು ತಹಶೀಲ್ದಾರ್‌ ರಾಜೇಶ್‌ ಕುಮಾರ್‌ ಸಿ ಅವರು ಉಪಸ್ಥಿತರಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ3 days ago

ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಬಾಷಾ ಒತ್ತಾಯ

ಸುದ್ದಿದಿನ,ದಾವಣಗೆರೆ:ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದ್ದು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಕಗ್ಗೊಲೆ ಮಾಡುತ್ತಿದ್ದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮಹಬೂಬ್ ಭಾಷಾ ಆಕ್ರೋಶ ವ್ಯಕ್ತಪಡಿಸಿದ್ದಾರೆ,...

ದಿನದ ಸುದ್ದಿ4 days ago

ನೀಟ್ ಪ್ರಶ್ನೆಪತ್ರಿಕೆ ಸೋರಿಕೆ; ವಿದ್ಯಾರ್ಥಿಗಳ ಆತ್ಮಹತ್ಯೆ: ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ವಿನಾಯಕ ಬಿ. ಎನ್ ಆಗ್ರಹ

ಸುದ್ದಿದಿನ,ದಾವಣಗೆರೆ :ವಿದ್ಯಾರ್ಥಿಗಳ ಭವಿಷ್ಯದ ಜತೆಗೆ ಕೇಂದ್ರ ಸರ್ಕಾರ ಚೆಲ್ಲಾಟವಾಡುತ್ತಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ನಂತರ20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ದೆಹಲಿಯಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಹೋರಾಟ ನಡೆಸುತ್ತಿದ್ದಾರೆ....

ದಿನದ ಸುದ್ದಿ4 days ago

ಎಸ್ ಐ ಆರ್ | ರಾಜ್ಯದಲ್ಲೇ ಮಾಯಾಕೊಂಡ ಕ್ಷೇತ್ರಕ್ಕೆ ಪ್ರಥಮ ಸ್ಥಾನ

ಸುದ್ದಿದಿನ,ದಾವಣಗೆರೆ‌ : ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ ಕಾರ್ಯದಲ್ಲಿ ಮಾಯಾಕೊಂಡ ಕ್ಷೇತ್ರವು ನಿಗದಿತ ಅವಧಿಗಿಂತ ಮೊದಲೇ ಗಣತಿ ನಮೂನೆಗಳ ಹಂಚಿಕೆಯನ್ನು ಪೂರ್ಣಗೊಳಿಸಿರುವುದರಿಂದ ಮತ್ತು ಶೇ. 92.31 ರಷ್ಟು...

ದಿನದ ಸುದ್ದಿ1 week ago

ಸ್ಟಾರ್ ಹೆಲ್ತ್ ಉಚಿತ ವೈದ್ಯಕೀಯ ಸಲಹೆ

ಸುದ್ದಿದಿನ,ದಾವಣಗೆರೆ: ದೇಶದ ಪ್ರಮುಖ ಆರೋಗ್ಯ ವಿಮೆ ಸಂಸ್ಥೆಗಳಲ್ಲಿ ಒಂದಾಗಿರುವ ಸ್ಟಾರ್ ಹೆಲ್ತ್ ಅಂಡ್ ಅಲೈಡ್ ಇನ್ಶುರನ್ಸ್ ಕಂಪನಿ ಲಿಮಿಟೆಡ್, ಕರ್ನಾಟಕದಲ್ಲಿ ಮಳೆಗಾಲದಲ್ಲಿ ಜನರನ್ನು ಕಾಡುವ ವಿವಿಧ ಬಗೆಯ...

ದಿನದ ಸುದ್ದಿ2 weeks ago

ಎಸ್.ಐ.ಆರ್ ಮತದಾರರ ಪಟ್ಟಿಯ ಡಿಜಿಟಲೀಕರಣ ಶೇ. 56 ರಷ್ಟು ಪೂರ್ಣ

ಸುದ್ದಿದಿನ,ದಾವಣಗೆರೆ : ಜಿಲ್ಲೆಯಲ್ಲಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ ಶೇ. 56 ರಷ್ಟು ಗಣತಿ ನಮೂನೆಗಳನ್ನು ಡಿಜಿಟಲ್ ರೂಪದಲ್ಲಿ ದಾಖಲಿಸಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಗಂಗಾಧರಸ್ವಾಮಿ...

ದಿನದ ಸುದ್ದಿ2 weeks ago

ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕ ರಾಜೇಶ್‌ಗೌಡ ವಿರುದ್ಧ ಲೋಕಾಗೆ ದೂರು

ಸುದ್ದಿದಿನ,ದಾವಣಗೆರೆ: ಜಿಲ್ಲಾ ಕರ್ನಾಟಕ ಗ್ರಾಮೀಣ ಮೂಲಭೂತ ಸೌಕರ್ಯ ಅಭಿವೃದ್ಧಿ ನಿಯಮಿತ, ವಿಭಾಗ-2ರ ವ್ಯಾಪ್ತಿಗೆ 2023-24 ರಿಂದ 2025-26 ರವರೆಗೆ ಸ್ಥಳೀಯ ಶಾಸಕರ ಅನುದಾನದ ಅಡಿಯಲ್ಲಿ ಬಿಡುಗಡೆಯಾದ ಅನುದಾನಗಳ...

ದಿನದ ಸುದ್ದಿ2 weeks ago

ಮಾಜಿ ರಾಜ್ಯಸಭಾ ಸದಸ್ಯ ಹೆಚ್ ಹನುಮಂತಪ್ಪ ನಿಧನ

ಸುದ್ದಿದಿನ,ಚಿತ್ರದುರ್ಗ:ಮಾಜಿ ರಾಜ್ಯಸಭಾ ಸದಸ್ಯರು ಹೆಚ್ ಹನುಮಂತಪ್ಪನವರು (95ವರ್ಷ) ವಯೋಸಹಜ ಅನಾರೋಗ್ಯದಿಂದ ದೈವಧೀನರಾಗಿದ್ದಾರೆ ಎಂದು ಪುತ್ರ ಜಿಲ್ಲಾ ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಹೆಚ್ ಮೋಹನ್ ಅವರು  ತಿಳಿಸಿದ್ದಾರೆ. ಅಂತ್ಯಕ್ರಿಯೆಯನ್ನು...

ಅಂಕಣ2 weeks ago

ಭಾಷೆ ಗಡಿಗಳ ಮೀರಿ ಮೊಳಗಿದ ಧ್ವನಿ ; ಗಾನಕೋಗಿಲೆ ಎಸ್. ಜಾನಕಿ ನಿರ್ಗಮನ

ಭಾರತೀಯ ಚಿತ್ರಸಂಗೀತದ ಇತಿಹಾಸದಲ್ಲಿ ಕೆಲವೇ ಕೆಲವು ಧ್ವನಿಗಳು ಕಾಲವನ್ನು ಮೀರಿ ಅಮರತ್ವ ಪಡೆದಿವೆ. ಅಂತಹ ಅಮರ ಸ್ವರಗಳಲ್ಲಿ ಅತ್ಯಂತ ಪ್ರಕಾಶಮಾನವಾದ ಹೆಸರು ಎಸ್. ಜಾನಕಿ. ತಮ್ಮ ಅಪೂರ್ವ...

ದಿನದ ಸುದ್ದಿ2 weeks ago

ಮಾಠಾಧೀಶರ ಮೇಲೆ ಹಲ್ಲೆ ; ನಿರ್ಲಕ್ಷಿಸಿದರೆ ದುಷ್ಕೃತ್ಯ ಹೆಚ್ಚಳ ಸಂಭವ; ಕಠಿಣ ಕ್ರಮಕ್ಕೆ ಎಚ್.ಆಂಜನೇಯ ಆಗ್ರಹ

ಸುದ್ದಿದಿನ,ಚಿತ್ರದುರ್ಗ: ಹರಳಯ್ಯ ಮಠದ ಸ್ವಾಮೀಜಿ ಮೇಲೆ ಮಾರಾಣಾಂತಿಕ ಹಲ್ಲೆಯನ್ನು ನಿರ್ಲಕ್ಷ್ಯ ವಹಿಸಿದರೆ ಮುಂದಿನ ದಿನಗಳಲ್ಲಿ ಮಠಾಧೀಶರ ಮೇಲೆ ಇಂತಹ ದುಷ್ಕೃತ್ಯ ಹೆಚ್ಚಾಗಬಹುದು ಎಂದು ಮಾಜಿ ಸಚಿವ ಎಚ್.ಆಂಜನೇಯ...

ದಿನದ ಸುದ್ದಿ2 weeks ago

ದಾವಣಗೆರೆ | ತಾಪಂ ಅನುದಾನ ದುರುಪಯೋಗ: ಮೂವರು ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ತನಿಖೆ ಚುರುಕು

ಮುಖ್ಯಾಂಶಗಳು ​ ಟೆಂಡರ್ ಇಲ್ಲದೆ ಸಾಮಗ್ರಿ ಖರೀದಿ ಆರೋಪ ​ಜುಲೈ 10ರ ವರೆಗೆ ಸ್ಥಳ ಪರಿಶೀಲನೆ, ದಾಖಲೆಗಳ ತಪಾಸಣೆ ತನಿಖಾಧಿಕಾರಿಗಳ ಮುಂದೆ ಹಾಜರಾಗಲು ದೂರುದಾರರಿಗೆ ನೋಟಿಸ್ ಸುದ್ದಿದಿನ,​ದಾವಣಗೆರೆ:...

Trending