Connect with us

ಸಿನಿ ಸುದ್ದಿ

‘ಜೂನಿಯರ್ ರಾಜ್ ಕುಮಾರ್’ ಜಯಕುಮಾರ್ ಆಸ್ಪತ್ರೆ ಖರ್ಚಿಗೆ ನೆರವಾಗಿ ; ಪತ್ನಿ ಪದ್ಮಾವತಿ ಅಳಲು

Published

on

ವರೊಬ್ಬ ರಂಗಭೂಮಿಯ ಅಭಿಜಾತ ಕಲಾವಿದ. ಅವರೊಳಗೆ ವರನಟ ಡಾ. ರಾಜಕುಮಾರ್ ಅವರ ಪರಕಾಯ ಪ್ರವೇಶ. ಮತ್ತೆ ಮತ್ತೆ ರಾಜಕುಮಾರ್ ನಮ್ಮೆದುರು ಪ್ರತ್ಯಕ್ಷವಾಗಿಸುವ ಅಭಿನಯ ಚತುರತೆ ಅವರದು. ನಾಟಕ ಯಾವುದೇ ಇರಲಿ ಈ ಕಲಾವಿದನಿಗೆ ಹೀರೋ ಪಾತ್ರ ಮುಡಿಪು. ಅಲ್ಲಿ ಡಾ. ರಾಜ್ ಛಾಪು. ನೋಡಲು ವರನಟನ ತದ್ರೂಪು. ಹಾಗೆಂದು ಅನುಕರಣೀಯ ಪ್ರತಿಭೆ ಮಾತ್ರವಲ್ಲ, ಅವರೊಬ್ಬ ಅಪ್ರತಿಮನಟ. ಹೆಸರು ಜಯಕುಮಾರ್, ಊರು ಕೊಡಗನೂರು.

ಗುಬ್ಬಿ ಕಂಪನಿ ಸೇರಿದಂತೆ ಗುಡಗೇರಿ, ಕುಮಾರಸ್ವಾಮಿ, ಚಿಂದೋಡಿ… ಹೀಗೆ ಇಪ್ಪತ್ತಕ್ಕೂ ಹೆಚ್ಚು ನಾಟಕ ಕಂಪನಿಗಳಲ್ಲಿ ಕಳೆದ ಐವತ್ತು ವರ್ಷಗಳ ಕಾಲ ವೃತ್ತಿ ರಂಗಭೂಮಿಯ ನಿರಂತರ ರಂಗಸೇವೆ. ಈಗ್ಗೆ ತಿಂಗಳ ಹಿಂದೆಯಷ್ಟೇ ಕಲಬುರ್ಗಿಯಲ್ಲಿ ಖಾಯಂ ಮೊಕ್ಕಾಂ ಮಾಡಿರುವ ನಾಟಕ ಕಂಪನಿಯೊಂದರಲ್ಲಿ ಅಭಿನಯಿಸುತ್ತಿರುವಾಗ ಲಘು ಹೃದಯಾಘಾತ. ಸಕ್ಕರೆ ಕಾಯಿಲೆ ಆತನನ್ನು ಯಾಮಾರಿಸಿದೆ. ಎರಡನೇ ಬಾರಿಗೆ ಆದಾಗ, ಸೂಕ್ಷ್ಮವಾಗಿ ತಿಳಿದು ದಾವಣಗೆರೆಗೆ ಧಾವಿಸಿ ತಜ್ಞ ವೈದ್ಯಕೀಯ ಚಿಕಿತ್ಸೆ ಪಡೆದು ಹೃದಯ ನಾಳಗಳಿಗೆ ಎರಡು ಸ್ಟಂಟ್ ಅಳವಡಿಕೆ. ಆ ಸಂದರ್ಭದಲ್ಲಿ ಶಿವಸಂಚಾರದ ಶ್ರೀ ಪಂಡಿತಾರಾಧ್ಯಶ್ರೀಗಳು ಸಂಬಂಧಿಸಿದ ವೈದ್ಯರಿಗೆ ಫೋನ್ ಮೂಲಕ ಹೇಳಿ ನೆರವಾದರು. ಇನ್ನೇನು ಮನೆಗೆ ಕಳಿಸಬೇಕೆನ್ನುವಾಗ ಎರಡೂ ಕಿಡ್ನಿಗಳು ಕೈ ಕೊಡುವ ಸೂಚನೆಗಳು ಎದುರಾಗಿ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ್ ಆಸ್ಪತ್ರೆಗೆ ರೋಗಿಯ ಸ್ಥಳಾಂತರ.

ಕಳೆದ ಹದಿನೈದು ದಿನಗಳಿಂದ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗುಣಮುಖ ಆಗುವ ಎಲ್ಲ ಲಕ್ಷಣಗಳಿವೆ ಎಂದು ತಜ್ಞ ವೈದ್ಯರ ಅಂಬೋಣ. ಹೆಲ್ತ್ ಕಾರ್ಡಿನ ಸೌಲಭ್ಯಗಳು ಹೃದಯದ ರಕ್ತನಾಳಗಳಿಗೆ ಅಳವಡಿಸಿದ ಸ್ಟಂಟಗಳಿಗೆ ಕೊನೆಗೊಂಡಿತು. ಈಗ ಮಣಿಪಾಲ್ ಆಸ್ಪತ್ರೆಯಲ್ಲಿ ದೊರಕುವ ಎಲ್ಲ ಚಿಕಿತ್ಸೆಗೂ ಹಣ ಕಟ್ಟಲೇ ಬೇಕಿದೆ. ಒಂದು ಲಕ್ಷ ರುಪಾಯಿ ಮಿಕ್ಕ ಖರ್ಚು. ಕಲಾವಿದ ಜಯಕುಮಾರರ ಬಳಿ ಇರುವ ಹಣವೆಲ್ಲ ಖರ್ಚಾಗಿದೆ. ಆಸ್ಪತ್ರೆಯಲ್ಲಿರುವ ಜಯಕುಮಾರರ ಜತೆ ಅವರ ಪತ್ನಿ ಪದ್ಮಾವತಿ ಮಗ ಮಾರುತಿ‌ ಇದ್ದಾರೆ.

ಶಿವಣ್ಣನ ಜನುಮದ ಜೋಡಿ ಸೇರಿದಂತೆ, ಅಂಬರೀಶ್, ವಿಷ್ಣುವರ್ಧನ್, ದೇವರಾಜ್, ದರ್ಶನ್ ಅಂತಹ ಹೆಸರಾಂತ ನಟರ ಜತೆ, (ಬರಗೂರರ ನಾಕೈದು ಚಿತ್ರ ) ನೂರೈವತ್ತಕ್ಕೂ ಹೆಚ್ಚು ಚಲನಚಿತ್ರಗಳಲ್ಲಿ ಜಯಕುಮಾರ ನಟಿಸಿದ್ದಾರೆ. ಆತ ಅಭಿನಯಿಸಿದ ಕಿರುತೆರೆ ದಾರಾವಾಹಿಗಳು ಲೆಕ್ಕವಿಲ್ಲದಷ್ಟು. ಅಷ್ಟೇ ಪ್ರಮಾಣದ ವೃತ್ತಿ ರಂಗನಾಟಕಗಳು. ಹೀಗೆ ಅವಿರತವಾಗಿ ದುಡಿದ ಬಣ್ಣದಜೀವ ಹಾಸಿಗೆ ಹಿಡಿದಿದೆ. ಈಗ ಅಕ್ಷರಶಃ ಸಂಕಷ್ಟದಲ್ಲಿರುವ ಕೊಡಗನೂರು ಜಯಕುಮಾರರ ನೆರವಿಗಾಗಿ ಅವರ ಪತ್ನಿ ಶ್ರೀಮತಿ ಪದ್ಮಾವತಿ ಹಾಗೂ ಅವರ ಮಗ ಮಾರುತಿ ಮನವಿ ಮಾಡಿಕೊಂಡಿದ್ದಾರೆ.

ಜಯಕುಮಾರ್ ಅವರ ಬ್ಯಾಂಕ್ ಖಾತೆ ವಿವರ ಹೀಗಿದೆ

ಸಿಂಡಿಕೇಟ್ ಬ್ಯಾಂಕ್
ಮಲ್ಲೇಶ್ವರಮ್
ಕೆ.ಸಿ. ಜನರಲ್ ಆಸ್ಪತ್ರೆ ಶಾಖೆ :ಬೆಂ.
A/C : 04492010022368
IFSC code : SYNB 0000449

ಕಲಾವಿದನ ನೆರವಿನ ನಿರೀಕ್ಷೆ ಯಲ್ಲಿ
ಪದ್ಮಾವತಿ w/o ಜಯಕುಮಾರ
ಮಣಿಪಾಲ್ ಆಸ್ಪತ್ರೆ, ಮಣಿಪಾಲ್
ಮೊ: 99023 89044

ದಿನದ ಸುದ್ದಿ

ಸಾಗರ | ಇಂದು ‘ಆರು ಲಘು ನಾಟಕಗಳು’ ಮತ್ತು ‘ಗುಚ್ಛ’ ಪುಸ್ತಕಗಳ ಬಿಡುಗಡೆ

Published

on

ಸುದ್ದಿದಿನ,ಸಾಗರ : ಅ.ರಾ.ಶ್ರೀನಿವಾಸರು ಬರೆದ ‘ಆರು ಲಘು ನಾಟಕಗಳು’ ಮತ್ತು ‘ಗುಚ್ಛ’ ಈ ಎರಡು ಪುಸ್ತಕಗಳ ಬಿಡುಗಡೆ ಕಾರ್ಯಕ್ರಮವನ್ನು ಇಂದು ಸಂಜೆ ಪಟ್ಟಣದ ಸಿಜಿಕೆ ಸಭಾಭವನದಲ್ಲಿ ಅಂತರಂಗ ಪ್ರಕಾಶನ ಹಮ್ಮಿಕೊಂಡಿದೆ.

ಪುಸ್ತಕಗಳ ಬಿಡುಗಡೆಯನ್ನು ರಂಗಕರ್ಮಿ, ಸಾಮಾಜಿಕ ಕಾರ್ಯಕರ್ತೆ ಪ್ರತಿಭಾ ಎಂ.ವಿ ಮಾಡಲಿದ್ದು, ಅಧ್ಯಕ್ಷತೆಯನ್ನುನಿವೃತ್ತ ಪ್ರಾಂಶುಪಾಲರಾದ ಅ.ರಾ.ಲಂಬೋದರ ಅವರು ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ‘ಆರು ಲಘು ನಾಟಕಗಳು’ ಕುರಿತು ನಿವೃತ್ತ ಪ್ರಾಂಶುಪಾಲರು ಡಾ. ಜಯಪ್ರಕಾಶ್ ಮಾವಿನಕುಳಿ ಹಾಗೂ ‘ಗುಚ್ಛ’ ಕುರಿತು ಸಹಕಾರ ಸಂಘಗಳ ನಿವೃತ್ತ ಉಪ ನಿಬಂಧಕರು ಜಯಪ್ರಕಾಶ್ ತಲವಾಟ ಅವರು ಮಾತನಾಡಲಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್ ಇನ್ನಿಲ್ಲ

Published

on

ಸುದ್ದಿದಿನಡೆಸ್ಕ್: ಖ್ಯಾತ ಸರೋದ್ ವಾದಕ ಪಂಡಿತ್ ರಾಜೀವ ತಾರಾನಾಥ್(93) ಅವರು ಅನಾರೋಗ್ಯದಿಂದ ಮೈಸೂರಿನ ಮಣಿಪಾಲ್‌ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ಕಳೆದ ತಿಂಗಳಲ್ಲಿ ಕುಸಿದು ಬಿದ್ದಿರುವುದರಿಂದ ಅವರ ತೊಡೆ ಮೂಳೆ ಮುರಿದಿತ್ತು. ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಬೆಳಿಗ್ಗೆ ಸಾರ್ವಜನಿಕರಿಗೆ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ. ಶ್ರೇಷ್ಠ ಭಾರತೀಯ ಶಾಸ್ತ್ರೀಯ ಸಂಗೀತಗಾರ ಆಗಿರುವ ಅವರು ಸರೋದ್ ವಾದಕರೂ ಆಗಿದ್ದರು.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಕೊಲೆ ಕೇಸ್ ; ನಾಳೆ ಚಿತ್ರದುರ್ಗದಲ್ಲಿ ನಟ ದರ್ಶನ್ ವಿರುದ್ಧ ಪ್ರತಿಭಟನೆ

Published

on

ಸುದ್ದಿದಿನಡೆಸ್ಕ್: ಚಿತ್ರದುರ್ಗದ ಯುವಕ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡದ ಚಲನಚಿತ್ರ ನಟ ದರ್ಶನ್ ಅವರನ್ನು ಬಂಧಿಸಲಾಗಿದೆ.

ಈ ಸಂಬಂಧ ನಾಳೆ ಚಿತ್ರದುರ್ಗದಲ್ಲಿನ ವಿವಿಧ ಸಂಘಟನೆಗಳು ದರ್ಶನ್ ವಿರುದ್ಧ ಪ್ರತಿಭಟಿಸಿ ತನಿಖೆ ಪಾರದರ್ಶಕವಾಗಿರ ಬೇಕು ಹಾಗೂ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಬೇಕೆಂದು ಡಿಸಿಗೆ ಮನವಿಯನ್ನು ಸಲ್ಲಿಸಲಿದ್ದಾರೆ.

ಮೈಸೂರಿನ ದರ್ಶನ್ ಒಡೆತನದ ಫಾರ್ಮ್ ಹೌಸ್‌ನಲ್ಲಿ ೧೦ ಮಂದಿಯನ್ನು ಬಂಧಿಸಲಾಗಿದೆ ಎಂದು ಸುದ್ದಿಸಂಸ್ಥೆ ತಿಳಿಸಿವೆ. ಹೆಚ್ಚಿನ ವಿಚಾರಣೆಗಾಗಿ ದರ್ಶನ್ ಅವರನ್ನು ಬೆಂಗಳೂರಿಗೆ ಕರೆತರಲಾಗಿದ್ದು, ಅಜ್ಞಾತ ಸ್ಥಳದಲ್ಲಿ ವಿಚಾರಣೆ ನಡೆಸಲಾಗುತ್ತಿದೆ.

ಬೆಂಗಳೂರಿನ ಸುಮನಹಳ್ಳಿ ಬಳಿಯ ವೃಷಭಾವತಿ ನಾಲೆಯಲ್ಲಿ ಅಪಾರ್ಟ್‌ಮೆಂಟ್ ಕಟ್ಟಡದ ಮುಂಭಾಗದಲ್ಲಿ ರೇಣುಕಾಸ್ವಾಮಿಯ ಶವ ಪತ್ತೆಯಾಗಿತ್ತು. ದರ್ಶನ್ ಚಿತ್ರದುರ್ಗ ಅಭಿಮಾನಿಗಳ ಸಂಘದ ಅಧ್ಯಕ್ಷರಿಗೆ ಕರೆ ಮಾಡಿ ರೇಣುಕಾಸ್ವಾಮಿ ಎಲ್ಲಿದ್ದಾರೆ ಎಂಬುದನ್ನು ಪತ್ತೆಮಾಡಿ ಬೆಂಗಳೂರಿಗೆ ಕರೆತರುವಂತೆ ಹೇಳಿದ್ದರು ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading
Advertisement

Title

ದಿನದ ಸುದ್ದಿ2 hours ago

ವಿಶ್ವ ಮೊಸಳೆಗಳ ದಿನ ; ಮೊಸಳೆ ಬಗ್ಗೆ ನಿಮಗಿಷ್ಟು ತಿಳಿದಿರಲಿ

ಸಂಜಯ್ ಹೊಯ್ಸಳ ಪ್ರತಿ ವರ್ಷದ ಜೂನ್ 17 ನ್ನು ವಿಶ್ವ ಮೊಸಳೆ ದಿನವನ್ನಾಗಿ ಆಚರಿಸಲಾಗುತ್ತದೆ. ವಿಶ್ವದಲ್ಲಿ ಪ್ರಮುಖವಾಗಿ 24 ಜಾತಿಯ ಮೊಸಳೆಗಳಿದ್ದು, ಭಾರತದಲ್ಲಿ ಸದ್ಯಕ್ಕೆ 3 ಪ್ರಬೇಧದ...

ದಿನದ ಸುದ್ದಿ5 hours ago

ಜುಲೈ 1 ರಿಂದ ಹೊಸ ಕ್ರಿಮಿನಲ್ ಕಾನೂನು ಜಾರಿ

ಸುದ್ದಿದಿನಡೆಸ್ಕ್:ಹೊಸ ಕ್ರಿಮಿನಲ್ ಕಾನೂನುಗಳನ್ನು ಜಾರಿಗೆ ತರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಮರು ಪರಿಶೀಲಿಸುತ್ತಿಲ್ಲ ಎಂದು ಕೇಂದ್ರ ಕಾನೂನು ಮತ್ತು ನ್ಯಾಯ ಖಾತೆ ರಾಜ್ಯ ಸಚಿವ ಅರ್ಜುನ್ ರಾಮ್...

ದಿನದ ಸುದ್ದಿ5 hours ago

ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ; ವ್ಯಾಪಕ ಟೀಕೆ

ಸುದ್ದಿದಿನಡೆಸ್ಕ್: ಕರ್ನಾಟಕದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ಕ್ರಮವನ್ನು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಟೀಕಿಸಿದ್ದಾರೆ....

ದಿನದ ಸುದ್ದಿ20 hours ago

ವಿಷಹಾರ | ಹೋಟೆಲ್, ರೆಸ್ಟೋರೆಂಟ್ ತಪಾಸಣೆಗೆ ಕ್ರಮ

ಸುದ್ದಿದಿನಡೆಸ್ಕ್: ಸಾರ್ವಜನಿಕರ ಆರೋಗ್ಯದ ಹಿತದೃಷ್ಠಿಯಿಂದ ಉತ್ತಮ ಗುಣಮಟ್ಟ, ಸ್ವಚ್ಚತೆ ಕಾಪಾಡುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಹೋಟೇಲ್, ರೆಸ್ಟೋರೆಂಟ್ ಹಾಗೂ ಲಘು ಉಪಹಾರ ಕೇಂದ್ರಗಳಲ್ಲಿ The Food Safety and...

ದಿನದ ಸುದ್ದಿ21 hours ago

ವೆಂಕಟೇಶ್ ಜಿ.ಎಂ. ಅವರಿಗೆ ಪಿಎಚ್‌.ಡಿ ಪದವಿ

ಸುದ್ದಿದಿನ,ಬೆಂಗಳೂರು:ಗುಜ್ಜನಹಳ್ಳಿ ಗ್ರಾಮದ ವೆಂಕಟೇಶ್ ಜಿ.ಎಂ. ಅವರು ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ಎಸ್. ಪುಟ್ಟಸ್ವಾಮಯ್ಯ ರವರ ಮಾರ್ಗದರ್ಶನದಲ್ಲಿ ಮಂಡಿಸಿರುವ “ಆನ್ ಎಕನಾಮಿಕ್ ಅನಾಲಿಸಿಸ್ ಆಫ್ ಆಗ್ರೋ-ಬೇಸ್ಡ್ ಇಂಡಸ್ಟ್ರೀಸ್...

ದಿನದ ಸುದ್ದಿ21 hours ago

ರೇಣುಕಸ್ವಾಮಿ ಕೊಲೆಗೈದ ಆರೋಪಿಗಳಿಗೆ ಶಿಕ್ಷೆಯಾಗಲಿ : ಜಂಗಮ ಸಮಾಜ ಪ್ರತಿಭಟನೆ

ಸುದ್ದಿದಿನ,ಮಸ್ಕಿ:ಪಟ್ಟಣದ ಗಚ್ಚಿನ ಹಿರೇಮಠದಲ್ಲಿ ಮಸ್ಕಿ ಜಂಗಮ ಸಮಾಜ ವತಿಯಿಂದ ನಮ್ಮ ಸಮುದಾಯದ ಚಿತ್ರದುರ್ಗದ ರೇಣುಕ ಸ್ವಾಮಿಯನ್ನು ಕೊಲೆಗೈದ ಕೊಲೆಗಡಕರಿಗೆ ಉಗ್ರ ಶಿಕ್ಷೆ ನೀಡಬೇಕೆಂದು ಆಕ್ರೋಶ ವ್ಯಕ್ತಪಡಿಸಿದರು. ಗಚ್ಚಿನ...

ದಿನದ ಸುದ್ದಿ1 day ago

ಜಗಳೂರು | ವ್ಯಕ್ತಿ ಮೇಲೆ ನಾಲ್ಕು ಕರಡಿದಾಳಿ

ಸುದ್ದಿದಿನ,ಜಗಳೂರು : ಜಮೀನಿಗೆ ಹೋಗಿದ್ದ ವ್ಯಕ್ತಿ ಮೇಲೆ ನಾಲ್ಕು ಕರಡಿಗಳ ದಾಳಿ‌ ಮಾಡಿ ಹಿಗ್ಗಾಮುಗ್ಗಾ ಕಡಿದು ಗಂಭೀರ ಗಾಯಗೊಳಿಸಿರುವ ಘಟನೆ ಜಗಳೂರು ತಾಲೂಕಿನ ಬೈರನಾಯಕನಹಳ್ಳಿ ಗ್ರಾಮದಲ್ಲಿ ಶನಿವಾರ...

ದಿನದ ಸುದ್ದಿ1 day ago

ಶ್ರೀ ಉಚ್ಚಂಗೆಮ್ಮದೇವಿ ಸದ್ಭಕ್ತರಿಗೊಂದು ವಿಸ್ಮಯಕಾರಿ ಸುದ್ದಿ : ಉಚ್ಚಂಗಿದುರ್ಗ ಬೆಟ್ಟದ ಕುರಿತು ಹೊಸ ಹೊಳಹು ನೀಡಿದ ದಾವಣಗೆರೆ ಅರ್ಜುನ್

ಗಂಗಾಧರ ಬಿ ಎಲ್ ನಿಟ್ಟೂರ್ ಭಾರತ ದೇಶ ಹಲವು ಅಚ್ಚರಿ, ವಿಚಿತ್ರ, ವಿಸ್ಮಯಗಳ ತಾಣ. ಪ್ರಕೃತಿಯಲ್ಲಿ ಉಂಟಾಗುತ್ತಿರುವ ಬದಲಾವಣೆಯಿಂದ ಹಿಡಿದು, ಸೃಷ್ಟಿಕರ್ತನ ಕೈಚಳಕದ ಕುಲುಮೆಯಲ್ಲಿ ಅರಳಿರುವ ಹಲವು...

ಅಂತರಂಗ1 day ago

ಆತ್ಮಕತೆ | ಅಪ್ಪನ ಮೈಸೂರು ಭೇಟಿ ಸಾವು – ನೋವು

ರುದ್ರಪ್ಪ ಹನಗವಾಡಿ  ನಾನು ಮೈಸೂರಿನಲ್ಲಿ ಅಧ್ಯಾಪಕನಾಗಿ ಕೆಲಸ ನಿರ್ವಹಿಸುತ್ತಿರುವುದರ ಬಗ್ಗೆ ತಿಳಿದ ನಮ್ಮೂರಲ್ಲಿ ಎಲ್ಲರಿಗೂ ಸಂತೋಷವಾಗಿತ್ತು. ಅತ್ಯಂತ ಸಂತೋಷಗೊಂಡಿದ್ದ ಅಪ್ಪನನ್ನು ನಾನು ಮೈಸೂರಿಗೆ ಕರೆದುಕೊಂಡು ಬಂದು ಒಮ್ಮೆ...

ದಿನದ ಸುದ್ದಿ1 day ago

ಪಿಎಂ ಕಿಸಾನ್ ನಿಧಿ ಯೋಜನೆ | ರೈತರ ಖಾತೆಗಳಿಗೆ ಬರುವ ಮಂಗಳವಾರ ಹಣ ವರ್ಗಾವಣೆ

ಸುದ್ದಿದಿನಡೆಸ್ಕ್: ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬರುವ ಮಂಗಳವಾರ 18 ರಂದು ’ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ’ ಯೋಜನೆಯಡಿ 9 ಕೋಟಿ 3 ಲಕ್ಷ ರೈತರ ಖಾತೆಗೆ 20...

Trending