ನಿತ್ಯ ಭವಿಷ್ಯ
ಈ ದೀಪಾವಳಿಯ ಲಕ್ಷ್ಮೀ ಕೃಪಾಕಟಾಕ್ಷ ನಿಮ್ಮ ಜೀವನದಲ್ಲಿ ಒಲಿಸಿಕೊಳ್ಳಲು ಕೂಡಲೇ ಈ ರಾಶಿ ಭವಿಷ್ಯವನ್ನು ಕ್ಲಿಕ್ ಮಾಡಿ ಲಾಭವನ್ನು ಪಡೆಯಿರಿ : 25/10/2019 ಶುಕ್ರವಾರ
ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಪರಿಹಾರ ವಶೀಕರಣ, ಲೈಂಗಿಕ ಬಾಧೆ, ಶತ್ರುಕಾಟ, ದುಷ್ಟಶಕ್ತಿ ಭಯಭೀತಿ, ಸಮಸ್ಯೆಗಳಿಗೆ ಶ್ರೀ ಮಹಾಕಾಳಿ ದೈವಿಕ ಮಾಂತ್ರಿಕ ಪೂಜಾಶಕ್ತಿಯಿಂದ ಶೀಘ್ರದಲ್ಲಿ ಪರಿಹಾರ ಮಾಡಿಕೊಡಲಾಗುತ್ತದೆ. PH:- 9945590266 ದೈವಜ್ಞ : ಶ್ರೀ ದೇವೇಂದ್ರನಾಥ್ ಭಟ್
ಮೇಷ ರಾಶಿ
ಉದ್ಯೋಗಿಗಳು ತಾವೇ ಒಂದು ಸರಿಯಾದ ನಿರ್ಧಾರ ತೆಗೆದುಕೊಳ್ಳಬೇಕು. ನಿಮ್ಮ ಭಾವನೆಗಳನ್ನು ನಿಯಂತ್ರಿಸಲು ನಿಮಗೆ ಕಷ್ಟವಾಗಬಹುದು. ಅಸಾಮಾನ್ಯ ವರ್ತನೆ ನಿಮ್ಮ ಸುತ್ತಲಿನ ಜನರನ್ನು ಗೊಂದಲದಲ್ಲಿ ಕೆಡವಬಹುದು ಮತ್ತು ನಿಮ್ಮನ್ನು ನಿರಾಸೆಗೊಳಿಸಬಹುದು. ಮನರಂಜನೆಗೆ ತುಂಬಾ ಖರ್ಚು ಮಾಡುವ ನಿಮ್ಮ ಪ್ರವೃತ್ತಿಗೆ ಕಡಿವಾಣ ಹಾಕಿ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:-9945590266
ವೃಷಭ ರಾಶಿ
ಮಕ್ಕಳು ಮತ್ತು ಕುಟುಂಬ ಸಮಸ್ಯೆಗಳಿಗೆ ಸಿಲುಕುತ್ತದೆ. ಇಂದು ನಿಮ್ಮ ಪ್ರಿಯತಮೆಯ ಜೊತೆಗಿನ ಸಂಬಂಧ ಹಾಳಾಗಬಹುದು. ನೀವು ಕೆಲಸ ಮಾಡಿಕೊಡುವ ಬಗ್ಗೆ ಯಾವ ಭರವಸೆಯನ್ನೂ ನೀಡಬೇಡಿ. ನಿಮ್ಮ ನೋಟವನ್ನು ವರ್ಧಿಸುವ ಮತ್ತು ಪ್ರಬಲ ಪಾಲುದಾರರನ್ನು ಆಕರ್ಷಿಸಲು ಬದಲಾವಣೆಗಳನ್ನು ಮಾಡಿ. ಬಹಳಷ್ಟು ವಿಷಯಗಳು ನೀವು ಬಯಸಿದಂತಿರುವ ಹಾಸ್ಯದಿಂದ ತುಂಬಿದ ಒಂದು ದಿನ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಮಿಥುನ ರಾಶಿ
ಆರ್ಥಿಕ ಸಮಸ್ಯೆ ರಚನಾತ್ಮಕವಾಗಿ ಯೋಚಿಸುವ ನಿಮ್ಮ ಸಾಮರ್ಥ್ಯವನ್ನು ಹಾಳುಮಾಡುತ್ತದೆ. ಒಂಟಿತನ ಮತ್ತು ಖಿನ್ನತೆಯ ಭಾವನೆ ಅಳಿಸಿಹಾಕಿ ತಾವು ಅಮೂಲ್ಯವೆಂದು ಭಾವನೆ ಬರುವ ಹಾಗೆ ಮೂಡಿಸಿದೆ . ಸ್ನೇಹ ಕಳೆದುಕೊಳ್ಳುವ ಸಾಧ್ಯತೆಗಳು ಇಂದು ಎಚ್ಚರಿಕೆಯಿಂದಿರಿ. ಸೃಜನಶೀಲ ಕ್ಷೇತ್ರಗಳಲ್ಲಿರುವವರು ಬಹಳ ದಿನಗಳಿಂದ ಕಾಯುತ್ತಿದ್ದು ಪ್ರಸಿದ್ಧಿ ಪಡೆಯುವ ಒಂದು ಯಶಸ್ವಿ ದಿನ. ನೀವು ಸಹಾಯಕ್ಕಾಗಿ ನಿಮ್ಮ ಬಳಿ ಬರುವ ಜನರಿಗೆ ಬರಿಗೈನಲ್ಲಿ ಕಳುಹಿಸಬಾರದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಕರ್ಕಾಟಕ ರಾಶಿ
ಉದ್ಯೋಗದಲ್ಲಿ ಹೊಸ ಸ್ತ್ತ್ರೀಯರ ಪರಿಚಯವಾಗುತ್ತದೆ. ಕುಟುಂಬದ ಮಾನಸಿಕ ತೊಂದರೆಗಳು ದೂರವಾಗುತ್ತವೆ. ಆರೋಗ್ಯದಲ್ಲಿ ಏರುಪೇರು ಉಂಟಾಗುತ್ತದೆ. ಪ್ರೇಮಿಗಳಲ್ಲಿ ಹೊಂದಾಣಿಕೆಯಿಂದ ಮನಸ್ಸಿಗೆ ನೆಮ್ಮದಿ. ಧೈರ್ಯದಿಂದ ಪರಿಶ್ರಮ ಪಟ್ಟು ಕೆಲಸಗಳನ್ನು ನಿರ್ವಹಿಸುವುದು. ಅಪರಿಚಿತ ವ್ಯಕ್ತಿಗಳೊಂದಿಗೆ ಹಣಕಾಸು ವ್ಯವಹಾರಗಳು ನಡೆಸಬಾರದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಸಿಂಹ ರಾಶಿ
ಉದ್ಯೋಗಸ್ಥರಿಗೆ ಕೆಲಸದಲ್ಲಿ ಪ್ರಯತ್ನದಿಂದ ಮಿಶ್ರ ಪ್ರತಿಕ್ರಿಯೆಗಳು ಬರುತ್ತವೆ. ಅಧಿಕ ಮಾತುಗಳಿಂದ ಕುಟುಂಬದಲ್ಲಿ ಅಶಾಂತಿ ಮೂಡುತ್ತದೆ. ದಾಂಪತ್ಯದಲ್ಲಿ ಸುಖ-ಸಂತೋಷದಿಂದ ಕಾಲ ಕಳೆಯುವುದು. ವಿದ್ಯಾರ್ಥಿಗಳಿಗೆ ಓದಿನಲ್ಲಿ ಮರೆಯುವ ಅಭ್ಯಾಸ ಕಂಡುಬರುತ್ತದೆ. ಧ್ಯಾನ ಯೋಗ ವ್ಯಾಯಾಮದಿಂದ ಆರೋಗ್ಯ ಸಮಸ್ಯೆಗಳು ಕಡಿಮೆ ಆಗಬಹುದು. ಹಣಕಾಸಿನಲ್ಲಿ ನಷ್ಟಗಳು ಸಂಭವಿಸುತ್ತದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಕನ್ಯಾ ರಾಶಿ
ವಿದ್ಯಾರ್ಥಿಗಳು ಅತಿಯಾದ ಬಾಹ್ಯಾ ಆಕರ್ಷಣೆಗೆ ತುತ್ತಾಗುವರು. ಉದ್ಯೋಗಸ್ಥರು ಉತ್ತಮ ಯಶಸ್ಸು ಗಳಿಸುತ್ತಾರೆ. ಖರ್ಚಿನ ಬಗ್ಗೆ ಗಮನವಿರಲಿ. ವಿವಾಹದಲ್ಲಿ ಯಶಸ್ಸು ತೋರಲಾರವು ಕೌಟುಂಬಿಕ ವಿಷಯದಲ್ಲಿ ತಪ್ಪು ನಿರ್ಧಾರಗಳಿಂದ ಮುಂಗೋಪ ಉಂಟಾಗುತ್ತದೆ. ಶೀತದ ಸಮಸ್ಯೆ ಆರೋಗ್ಯವನ್ನು ಹಾಳು ಮಾಡುತ್ತದೆ. ಹಣಕಾಸಿನ ವಿಚಾರದ ಬಗ್ಗೆ ಗಮನವಹಿಸಿ. ಬೇರೆಯವರ ವಿಷಯ ಕುರಿತು ಮನೆಯಲ್ಲಿ ಪ್ರಸ್ತಾಪ ನಡೆಯುವುದು.ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ತುಲಾ ರಾಶಿ
ವಿದ್ಯಾಭ್ಯಾಸದಲ್ಲಿ ವಿಘ್ನಗಳನ್ನು ಎದುರಿಸಬೇಕಾಗುತ್ತದೆ. ಶ್ರೀ ವರ ಮಹಾಗಣಪತಿ ಪೂಜೆ ಮಾಡಬೇಕು. ನೀವು ಉತ್ತಮ ಆರೋಗ್ಯ ಕಾಪಡುವಲ್ಲಿ ಕಷ್ಟ ಪಡಬೇಕಾಗುತ್ತದೆ. ಉದ್ಯೋಗಕ್ಕೆ ಕೆಲವು ಕುಟುಂಬ ಅಡಚಣೆ ಉಂಟಾಗಿದೆ ಆದ್ದರಿಂದ ಸಮಾಧಾನ ಮಾಡಿ ಕೆಲಸದಲ್ಲಿ ತೊಡಗಬೇಕು. ನಿಮ್ಮ ಚಂಚಲ ಮನಸ್ಸು ಸರಿಯಾದ ನಿರ್ಧಾರ ತೆಗೆದು ಕೊಳ್ಳಲು ಆಗುವುದಿಲ್ಲ. ಧ್ಯಾನ ಮನೆಯಲ್ಲಿ ಮಾಡಿ. ದಾಂಪತ್ಯ ನೆಮ್ಮದಿ ಅನಿಸುತ್ತದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ವೃಶ್ಚಿಕ ರಾಶಿ
ಹೊಸ ಉದ್ಯೋಗಿಗಳು ಹಿಂಜರಿಕೆ ಬಿಟ್ಟು ನಿರಾಂತಕವಾಗಿ ಶ್ರಮವಹಿಸಿ ಫಲ ದೊರೆಯುತ್ತದೆ. ಕೆಟ್ಟ ಸ್ತ್ರೀಯರ ಸಹವಾಸ ಬಿಡಬೇಕು. ಪತಿ ಪತ್ನಿ ಯರಲ್ಲಿ ಸಂತೋಷ ಸಿಗುತ್ತದೆ. ಹಣಕಾಸಿನಲ್ಲಿ ಉತ್ತಮ ಲಾಭವಿದೆ. ಆರೋಗ್ಯದಲ್ಲಿ ಮಾನಸಿಕವಾಗಿ ಚೈತನ್ಯ ಹೊಂದುವಿರಿ. ಕೀಲುನೋವು ಕಾಣಿಸಿಕೊಳ್ಳುತ್ತದೆ. ವಾಹನಗಳಲ್ಲಿ ಎಚ್ಚರ ವಹಿಸಬೇಕು. ವಿದ್ಯಾರ್ಥಿಗಳಿಗೆ ಅನುಕೂಲಕರ ದಿನವಾಗಿದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಧನಸ್ಸು ರಾಶಿ
ಸಂಶಯಾಸ್ಪದವಾದ ಹಣಕಾಸು ಯೋಜನೆಗಳನ್ನು ತಪ್ಪಿಸಿ. ನಿಮ್ಮ ಸುತ್ತಲಿನ ಜನರು ಇದು ತಮ್ಮ ವ್ಯವಹಾರ ಎಂದು ಭಾವಿಸಬಹುದು. ಸಂತೋಷಕ್ಕಾಗಿ ಹೊಸ ಸಂಬಂಧವನ್ನು ಎದುರುನೋಡಬಹುದು. ಕೆಲಸದ ನಿಧಾನಗತಿ ಸ್ವಲ್ಪ ಒತ್ತಡ ಕಾಣಿಸಿಕೊಳ್ಳುತ್ತದೆ. ಸಮಸ್ಯೆಗಳನ್ನು ಸಕಾರಾತ್ಮಕವಾಗಿ ಅಲೋಚಿಸಿ ಮತ್ತು ಇಂದೇ ಪ್ರಯತ್ನಗಳನ್ನು ಆರಂಭಿಸಿ. ಒಂದು ಸಾಮಾನ್ಯ ವೈವಾಹಿಕ ಜೀವನದಲ್ಲಿ, ಈ ದಿನ ಒಂದು ರುಚಿಕರವಾದ ಸಿಹಿಯಾಗಿ ಕೆಲಸ ಮಾಡುತ್ತದೆ.ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದಪರಿಹಾರ ಕಾಣಲು ಕರೆಮಾಡಿ. PH:- 9945590266
ಮಕರ ರಾಶಿ
ಇಂದು ನೀವು ಸಂಗತಿಗಳು ತಪ್ಪಾಗಬಹುದು. ಹಣವನ್ನು ಬುದ್ಧಿವಂತಿಕೆಯಿಂದ ಖರ್ಚುಮಾಡಿ. ನೀವು ಯಾರಿಗಾದರೂ ಸಾಲ ನೀಡುವುದರ ಬಗ್ಗೆ ಜಾಗರೂಕರಾಗಿರಿ. ನಿಮ್ಮ ಕಠಿಣ ಶ್ರಮವನ್ನು ಯಾರು ಗುರುತಿಸುವುದಿಲ್ಲ. ನಿಮ್ಮ ಅಸಡ್ಡೆಯ ವರ್ತನೆ ಅನೇಕ ವಿಷಯಗಳನ್ನು ಕೆಡಿಸುತ್ತದೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಕುಂಭ ರಾಶಿ
ಆರೋಗ್ಯದಲ್ಲಿನ ಸುಧಾರಣೆಯು ನಿಮಗೆ ಹೆಚ್ಚಿನ ಸಂತೋಷವನ್ನು ತಂದುಕೊಡುತ್ತದೆ. ಇಂದು ನೀವು ವಿಶ್ರಾಂತಿಯನ್ನು ಪಡೆಯಬಹುದು. ಉದ್ಯೋಗ ಕ್ಷೇತ್ರದಲ್ಲಿ ಪ್ರಮುಖ ಕೆಲಸವನ್ನು ನಿರ್ವಹಿಸುವ ಸಾಧ್ಯತೆಗಳಿವೆ. ಸಂವಹನಗಳ ತೊಂದರೆಯಿಂದಾಗಿ ನಿಮ್ಮ ಸಂಗಾತಿಯು ಬೇಸರಕ್ಕೆ ಒಳಗಾಗಬಹುದು. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆಮಾಡಿ. PH:- 9945590266
ಮೀನಾ ರಾಶಿ
ನೀವು ಆಸಕ್ತಿಗಳು ವಹಿಸಿ ವಿಷಯಗಳಲ್ಲಿ ತೊಡಗಿಕೊಳ್ಳಿ. ಮಕ್ಕಳಿಗೆ ಅವರ ಮನೆಗೆಲಸ ಪೂರ್ಣಗೊಳಿಸಲು ಸಹಾಯ ಮಾಡುವ ಸಮಯ. ಭಾವಪೂರ್ಣ ಪ್ರೀತಿಯ ಭಾವಪರವಶತೆಯನ್ನು ಇಂದು ಅನುಭವಿಸಬಹುದು. ಮದುವೆ ಕಾರ್ಯಗಳ ಉತ್ತಮ ಬದಲಾವಣೆಯನ್ನು ಅನುಭವಿಸಬಹುದು. ಯಾವುದಾದರೂ ಪ್ರಯಾಣದ ಯೋಜನೆಗಳಿದ್ದಲ್ಲಿ ನಡೆಸಬಹುದು. ನಿಮ್ಮ ಬದಲಾವಣೆಗಳಿಂದ ಕೆಲಸ ಮುಂದೂಡಲ್ಪಡುತ್ತವೆ. ನಿಮ್ಮ ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತವಾದ ಸೂಕ್ತವಾದ ಪರಿಹಾರ ಕಾಣಲು ಕರೆ ಮಾಡಿ. PH:- 9945590266

ಅಂಕಣ
ದೀಪಾವಳಿ ವಿಶೇಷಾಂಕ | ದೇವನಗರಿ ಸುದ್ದಿದಿನ ಪತ್ರಿಕೆಯಿಂದ ಕತೆ- ಕವಿತೆ- ಲೇಖನ- ರೂಪದರ್ಶಿ ಫೋಟೋ ಗಳಿಗೆ ಆಹ್ವಾನ
ಸುದ್ದಿದಿನ,ದಾವಣಗೆರೆ: ಪ್ರಿಯ ಓದುಗರೆ, ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ದೇವನಗರಿ ಸುದ್ದಿದಿನ – ಕನ್ನಡ ದಿನ ಪತ್ರಿಕೆ ಹಾಗೂ ಶ್ಯಾಮ್ ಪ್ರಕಾಶನದವತಿಯಿಂದ ‘ ದೀಪಾವಳಿ ವಿಶೇಷಾಂಕ’-2026ನ್ನು ತರಲಾಗುತ್ತಿದೆ.
ಈ ಹಿನ್ನೆಲೆಯಲ್ಲಿ ದೀಪಾವಳಿ ವಿಷೇಶಾಂಕ 2026ರ ವಿಭಾಗಕ್ಕೆ ಕತೆ, ಕವಿತೆ ಹಾಗೂ ಲೇಖನ ಹಾಗೂ ರೂಪದರ್ಶಿಗಳ ಛಾಯಾಚಿತ್ರಗಳನ್ನು ಆಹ್ವಾನಿಸಿದ್ದೇವೆ.
ಕತೆ – ಕವಿತೆಗಳನ್ನು ಕಳುಹಿಸಲು ಇರುವ ನಿಯಮಗಳು
ಕತೆ/ಕವಿತೆ ಸ್ವತಂತ್ರ ರಚನೆಯಾಗಿರಬೇಕು. ಈ ಮೊದಲು ಯಾವ ಮಾಧ್ಯಮಗಳಲ್ಲಿಯೂ ಪ್ರಕಟ ಅಥವಾ ಪ್ರಸಾರ ಆಗಿರಬಾರದು.
ಕತೆ 1500 ಸಾವಿರ ಪದಗಳ ಮಿತಿಯಲ್ಲಿರಲಿ. ಕವಿತೆಗೆ 40 ಸಾಲಿನ ಮಿತಿಯಿರಲಿ, ನುಡಿ ಅಥವಾ ಬರಹ ತಂತ್ರಾಂಶದಲ್ಲಿ ಇಲ್ಲವೆ ಯೂನಿಕೋಡ್ನಲ್ಲಿ ಇರಬೇಕು. ವಯಸ್ಸಿನ ಮಿತಿ ಇರುವುದಿಲ್ಲ.
ಕತೆ/ಕವಿತೆ ಇರುವ ಪುಟದಲ್ಲಿ ಹೆಸರು, ವಿವರ ಬರೆಯುವಂತಿಲ್ಲ. ಪ್ರತ್ಯೇಕ ಪುಟದಲ್ಲಿ ಹೆಸರು, ಅಂಚೆ ವಿಳಾಸ, ಮೊಬೈಲ್ ನಂಬರ್, ಇ-ಮೇಲ್ ವಿಳಾಸ ಒದಗಿಸಬೇಕು.
ಇತ್ತೀಚಿನ ಪಾಸ್ಪೋರ್ಟ್ ಅಳತೆಯ ವರ್ಣಮಯ ಭಾವಚಿತ್ರದೊಂದಿಗೆ 100 ಪದಗಳ ಒಳಗೆ ಕಿರು ಪರಿಚಯ ಕಳುಹಿಸಬೇಕು.
ಸ್ಪರ್ಧೆಗೆ ಕಳುಹಿಸಿರುವ ಬರಹಗಳನ್ನು ಹಿಂದಿರುಗಿಸುವುದಿಲ್ಲ. ಬರಹಗಳು ಕಡ್ಡಾಯವಾಗಿ ಎಂಎಸ್ ವರ್ಡ್ ಫೈಲ್ (MS word File) ನಲ್ಲಿರಲಿ.
ಬರಹ ಮತ್ತು ಫೋಟೋಗಳನ್ನು ಇ-ಮೇಲ್ ಮೂಲಕವಷ್ಟೇ ಕಳಿಸಿ.
ಲೇಖನಗಳಿಗೆ ಆಹ್ವಾನ : ವೈಚಾರಿಕತೆ, ವಿಮರ್ಶೆ, ಕಾನೂನು, ಸಾಹಿತ್ಯ, ತಂತ್ರಜ್ಞಾನ, ವಿಜ್ಞಾನ, ಡಿಜಿಟಲ್ ಮಾಧ್ಯಮ, ಸಿನೆಮಾ, ಪ್ರೇಮಪತ್ರ, ಕೃಷಿ, ರಾಜಕೀಯ, ಕಲೆ, ಆರೋಗ್ಯ, ಪ್ರವಾಸ, ಅಡುಗೆ, ಫೋಟೋಗ್ರಫಿ, ವೈಲ್ಡ್ ಲೈಫ್, ಹಾಸ್ಯ ಕುರಿತಾದ ಲೇಖನಗಳನ್ನು 450 ಪದಗಳನ್ನು ಮೀರದಂತೆ ಬರೆದು ಕಳುಹಿಸಿ.
ಹಾಗೆಯೇ, ವಿಶೇಷಾಂಕದ ಮುಖಪುಟದ ರೂಪದರ್ಶಿಯಾಗಲು ಅವಕಾಶವನ್ನು ಕಲ್ಪಸಿಲಾಗಿದೆ. ಆಸಕ್ತ ರೂಪದರ್ಶಿಗಳು ಸ್ಟುಡಿಯೋ ಅಥವಾ ಫೋಟೋಗ್ರಾಫರ್ ಮೂಲಕ ತೆಗೆದ ‘6*4 ಅಳತೆಯ ಮುದ್ರಿತ ಫೋಟೋ ಮತ್ತು ಇ-ಮೇಲ್ ಮೂಲಕವೂ ಕಳಿಸಬಹುದು. 80 ಪದಗಳಮಿತಿಯೊಳಗೆ ನಿಮ್ಮ ಪರಿಚಯದೊಂದಿಗೆ, ಒಬ್ಬರು 4 ಫೋಟೋ ಕಳುಹಿಸಬೇಕು. ವಯಸ್ಸಿನ ಮಿತಿಯಿಲ್ಲ ಇರುವುದಿಲ್ಲ.
ಕತೆಯ ವಿಜೇತರಿಗೆ ಪ್ರಥಮ ಬಹುಮಾನ : 10000, ದ್ವಿತೀಯ ಬಹುಮಾನ : 5000, ತೃತೀಯ ಬಹುಮಾನ : 3000 ಹಾಗೂ ಕವಿತೆ ಬಹುಮಾನ ವಿಜೇತರಿಗೆ ಪ್ರಥಮ ಬಹುಮಾನ : 5000 ದ್ವಿತೀಯ ಬಹುಮಾನ : 3000 ಹಾಗೂ ತೃತೀಯ ಬಹುಮಾನ : ₹2000 ಸಿಗಲಿದೆ.
ಆಗಸ್ಟ್ 30ರೊಳಗೆ ಬರಹಗಳನ್ನು ಇ-ಮೇಲ್: deepasuddidina@gmail.com ಗೆ ಕಳುಹಿಸಲು ತಿಳಿಸಿದೆ. ಈ ಕುರಿತು ಹೆಚ್ಚಿನ ಮಾಹಿತಿಗಾಗಿ :9980346243 ಹಾಗೂ visit: www.suddidina.com ಅನ್ನು ವೀಕ್ಷಿಸಬಹುದಾಗಿದೆ.
ಕಚೇರಿ ವಿಳಾಸ
ದೇವನಗರಿ ಸುದ್ದಿದಿನ- ಕನ್ನಡ ದಿನ ಪತ್ರಿಕೆ
ದೀಪಾವಳಿ ವಿಶೇಷಾಂಕ ವಿಭಾಗ
#3231/1, ಸಂಜೀವ ಸದನ, 11ನೇ ಮುಖ್ಯರಸ್ತೆ, 4 ನೇ ಅಡ್ಡರಸ್ತೆ, ಎಂಸಿಸಿ ಬಿ ಬ್ಲಾಕ್, ದಾವಣಗೆರೆ, 577004
ಸುದ್ದಿದಿನ.ಕಾಂ|ವಾಟ್ಸಾಪ್|9980346243

ಕ್ರೀಡೆ
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ ಹೆಚ್ಚಿನ ಅನುದಾನ ; ಇ-ಖಾತೆ ಅಭಿಯಾನ ಹಾಗೂ ಇತರೆ ಪ್ರಮುಖ ಸುದ್ದಿಗಳು
1. ಮುಖ್ಯಮಂತ್ರಿ ಸಿದ್ದರಾಮಯ್ಯ ನವದೆಹಲಿ ತಲುಪಿದ್ದಾರೆ. ಇಂದು ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿ, 5 ಪ್ರಮುಖ ಮಸೂದೆಗಳಿಗೆ ಅಂಗೀಕಾರ ನೀಡುವಂತೆ ಮನವಿ ಮಾಡಲಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ. ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ರಾಜ್ಯದ ವಿವಿಧ ನೀರಾವರಿ ಯೋಜನೆಗಳಿಗೆ, ಹೆಚ್ಚಿನ ಅನುದಾನ ಬಿಡುಗಡೆ ಮಾಡುವಂತೆ, ಕೇಂದ್ರದ ಜಲಶಕ್ತಿ ಖಾತೆ ಸಚಿವರನ್ನು ಕೋರುವುದಾಗಿ, ಇದೇ ವೇಳೆ ಸಾಮಾಜಿಕ ಜಾಲತಾಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.
2. ರಾಜ್ಯದ ಗ್ರಾಮ ಪಂಚಾಯ್ತಿಗಳ ಹಂತದಲ್ಲಿ ಜುಲೈ 15ರಿಂದ, ಸಾರ್ವಜನಿಕರ ಆಸ್ತಿಗಳ ಇ-ಖಾತೆ ರೂಪಿಸುವ ಅಭಿಯಾನವನ್ನು ಕಂದಾಯ ಇಲಾಖೆ ಆಯೋಜಿಸಲಿದೆ ಎಂದು ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
3. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಗೆ ಸಂಬಂಧಿಸಿ, ಇಲ್ಲಿಯವರೆಗೆ ಹೆಸರು ನೋಂದಾಯಿಸದವರು, ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ, ಈ ತಿಂಗಳ 30ರವರೆಗೆ ಮಾಹಿತಿ ನೀಡಲು ಅವಕಾಶವಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ.
4. ಕಾವೇರಿ ಜಲಾನಯನ ಪ್ರದೇಶದಲ್ಲಿ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯಿಂದ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲ್ಲೂಕಿನ ಕೆ.ಆರ್.ಎಸ್. ಅಣೆಕಟ್ಟೆ ಭಾಗಶ: ಭರ್ತಿಯಾಗಿದ್ದು, ಒಳ ಹರಿವು ಇನ್ನಷ್ಟು ಹೆಚ್ಚಾಗುವ ಸಾಧ್ಯತೆ ಇರುವುದರಿಂದ ಅಣೆಕಟ್ಟೆಯಿಂದ 5 ಸಾವಿರದಿಂದ 15 ಸಾವಿರ ಕ್ಯುಸೆಕ್ ನೀರನ್ನು ನದಿಗೆ ಹರಿಸಲಾಗಿದೆ.
5. ಕತಾರ್ನಲ್ಲಿರುವ ಅಲ್ ಉದೈದ್ ಅಮೇರಿಕ ವಾಯುನೆಲೆಯ ಮೇಲೆ ಇರಾನ್ ನಡೆಸಿದ ದಾಳಿಯ ನಂತರ ಜಾಗತಿಕ ತೈಲ ಬೆಲೆಗಳು ಐದು ವರ್ಷಗಳಲ್ಲಿ ನಿನ್ನೆ ಒಂದೇ ದಿನದಲ್ಲಿ ತೀವ್ರ ಕುಸಿತವನ್ನು ದಾಖಲಿಸಿದೆ.
6. ಕರ್ನಾಟಕ, ಮಧ್ಯಪ್ರದೇಶ, ಬಿಹಾರ, ಜಾಖಂಡ್, ಒಡಿಶಾ, ಛತ್ತೀಸ್ಗಢ, ಪಶ್ಚಿಮ ಬಂಗಾಳ, ಸಿಕ್ಕಿಂ, ಅರುಣಾಚಲ ಪ್ರದೇಶ, ಕೊಂಕಣ, ಗೋವಾ, ಮಹಾರಾಷ್ಟ್ರ, ಗುಜರಾತ್, ಹಿಮಾಚಲ ಪ್ರದೇಶ, ಉತ್ತರಾಖಂಡ, ಪಶ್ಚಿಮ ಉತ್ತರ ಪ್ರದೇಶ, ರಾಜಸ್ಥಾನ, ಕೇರಳದ ಕೆಲವು ಸ್ಥಳಗಳಲ್ಲಿ ಇಂದು ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
7. ಅಯೋವಾದಲ್ಲಿ ನಾಳೆ ಆರಂಭವಾಗಲಿರುವ ಯುಎಸ್ ಓಪನ್ 2025 ಬ್ಯಾಡ್ಮಿಂಟನ್ ಪಂದ್ಯಾವಳಿಯ ಪುರುಷರ ಡಬಲ್ಸ್ ವಿಭಾಗದಲ್ಲಿ ಹರಿಹರನ್ ಅಂಶಕರುಣನ್ ಮತ್ತು ರೂಬನ್ ಕುಮಾರ್ ರೆಥಿನಸಬಪತಿ, ಭಾರತವನ್ನು ಮುನ್ನಡೆಸಲಿದ್ದಾರೆ.
ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ
ಈರುಳ್ಳಿ ಕೇವಲ ತರಕಾರಿಯಲ್ಲ ; ಅದ್ಭುತ ಔಷಧ
ನಾವು ನಿತ್ಯವೂ ತಯಾರಿಸುವ ಅಡುಗೆ ಪದಾರ್ಥಗಳಿಗೆ ಈರುಳ್ಳಿಯನ್ನು ಹಾಕದಿದ್ದಾಗ ಒಂದು ರುಚಿಯಾದರೆ ಅದನ್ನು ಹಾಕಿದಾಗ ಆ ಪದಾರ್ಥದ ರುಚಿಯೇ ಬೇರೆಯಾಗುತ್ತದೆ. ನಾವು ಈರುಳ್ಳಿಯ ಗುಣಗಳು, ಅದರ ಉಪಯೋಗಗಳು ಮತ್ತು ಮನೆ ಮದ್ದುಗಳ ಬಗ್ಗೆ ತಿಳಿದುಕೊಳ್ಳೋಣ.
ಆಯುರ್ವೇದದಲ್ಲಿ ಈರುಳ್ಳಿಯ ಬಗ್ಗೆ ವಿಸ್ತೃತ ವಿವರಣೆ ಇದೆ. ಆಯುರ್ವೇದ ಗ್ರಂಥಗಳ ಪ್ರಕಾರ ಈರುಳ್ಳಿಗೆ ಬೆಳ್ಳುಳ್ಳಿಯ ಗುಣಗಳಿವೆ. ಆದರೆ ಬೆಳ್ಳುಳ್ಳಿಯಂತೆ ಇದು ಉಷ್ಣವಲ್ಲ. ಹಾಗಾಗಿ ಬೆಳ್ಳುಳ್ಳಿಯ ಅದ್ಭುತ ಗುಣಗಳನ್ನು ಪಡೆಯಬೇಕು ಎಂದಾದರೆ ಮತ್ತು ಬೆಳ್ಳುಳ್ಳಿಯನ್ನು ಸೇವಿಸಿದರೆ ಉಷ್ಣವಾಗುತ್ತದೆ ಎಂಬ ಯೋಚನೆ ಇದ್ದರೆ ಬದಲಿಗೆ ಈರುಳ್ಳಿಯನ್ನು ಬಳಸಬಹುದು.
ಭಾವ ಪ್ರಕಾಶ ನಿಘಂಟು ಎಂಬ ಗ್ರಂಥದಲ್ಲಿ “ಬಲವೀರ್ಯ ಕೈರೋ ಗುರುಃ” ಎಂದಿದ್ದಾರೆ. ಅಂದರೆ ಈರುಳ್ಳಿಯು ದೇಹದ ಬಲವನ್ನು, ವೀರ್ಯದ ಗುಣಮಟ್ಟವನ್ನು, ಲೈಂಗಿಕ ಶಕ್ತಿಯನ್ನು ಹೆಚ್ಚಿಸುತ್ತದೆ ಎಂದರ್ಥ. ಬಹುತೇಕ ಎಲ್ಲಾ ಆಯುರ್ವೇದ ಗ್ರಂಥಗಳಲ್ಲಿಯೂ ಈರುಳ್ಳಿಯಿಂದ ಲೈಂಗಿಕ ಶಕ್ತಿ ವೃದ್ಧಿಯಾಗುತ್ತದೆ ಎಂಬುದನ್ನು ಹೇಳಲಾಗಿದೆ. ಇದು ಚರ್ಮಕ್ಕೆ ಕೂಡ ಅತ್ಯಂತ ಅನುಕೂಲಕರವಾದದ್ದು. ಚರ್ಮವನ್ನು ಸ್ನಿಗ್ಧಗೊಳಿಸಿ ಒರಟುತನವನ್ನು ಹೋಗಲಾಡಿಸುತ್ತದೆ; ಚರ್ಮಕ್ಕೆ ಕಾಂತಿಯನ್ನು ಕೊಡುತ್ತದೆ; ಜೊತೆಗೆ ಚರ್ಮದ ಶುದ್ಧಿಯನ್ನೂ ಮಾಡುತ್ತದೆ ಎಂದು ವಿವರಿಸಲಾಗಿದೆ. ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ದೇಹದ ಬಾಹ್ಯ ಮತ್ತು ಆಂತರಿಕ ಕಾಂತಿ ಹೆಚ್ಚುತ್ತದೆ.
ಅಂದರೆ ಕೇವಲ ಸೌಂದರ್ಯವೃದ್ಧಿಯಷ್ಟೇ ಅಲ್ಲ ದೇಹದೊಳಗಿನ ರೋಗನಿರೋಧಕ ಶಕ್ತಿ ತುಂಬಾ ಚೆನ್ನಾಗಿ ಹೆಚ್ಚುತ್ತದೆ. ಈರುಳ್ಳಿಯು ಧ್ವನಿಗೆ ಸಂಬಂಧಿಸಿದ ಸಮಸ್ಯೆಗಳನ್ನು ಹೋಗಲಾಡಿಸಿ ಒಳ್ಳೆಯ ಧ್ವನಿಯನ್ನು ನೀಡುತ್ತದೆ ಎಂದು ವಿವರಿಸಲಾಗಿದೆ. ಹೀಗಾಗಿ ಹಾಡುಗಾರರು, ಅಧ್ಯಾಪಕರಂಥವರಿಗೆ ನಿಯಮಿತ ಈರುಳ್ಳಿ ಸೇವನೆ ಅನುಕೂಲಕರ. ಇದು ಕಣ್ಣಿನ ಆರೋಗ್ಯವನ್ನು ಹೆಚ್ಚಿಸುವುದರಿಂದ ಹತ್ತರಿಂದ ಹದಿನೈದು ಮಿಲೀ ಈರುಳ್ಳಿ ರಸವನ್ನು ಸುಮಾರು ಒಂದು ತಿಂಗಳು ದಿನಕ್ಕೊಮ್ಮೆ ಸೇವಿಸುವುದರಿಂದ ಚಿಕ್ಕಪುಟ್ಟ ಕಣ್ಣಿನ ತೊಂದರೆಗಳು ನಿವಾರಣೆಯಾಗುತ್ತವೆ. ಸ್ವಲ್ಪ ಸಿಹಿ ಇರುವ ಅಂದರೆ ಖಾರ ಕಡಿಮೆ ಇರುವ ಈರುಳ್ಳಿಯನ್ನು ಚಿಕ್ಕ ಚಿಕ್ಕ ತುಂಡುಗಳನ್ನಾಗಿ ಕತ್ತರಿಸಿ ತುಪ್ಪದಲ್ಲಿ ಹುರಿದು ನಿಯಮಿತವಾಗಿ ಸೇವಿಸಿದರೆ ಲೈಂಗಿಕ ಶಕ್ತಿಯ ವೃದ್ಧಿಯಾಗುತ್ತದೆ.
ಕೂದಲು ಉದುರುವುದನ್ನು ಕಡಿಮೆ ಮಾಡಲು ಈರುಳ್ಳಿಯು ಸಹಕಾರಿ. ಈರುಳ್ಳಿಯ ರಸ ತೆಗೆದು ತಲೆ ಸ್ನಾನ ಮಾಡುವ ಹತ್ತು ನಿಮಿಷ ಮೊದಲು ಕೂದಲಿನ ಬುಡಕ್ಕೆ ಹಚ್ಚಬೇಕು. ಇದರಿಂದ ಕೂದಲಿನ ಬೆಳವಣಿಗೆ ಚೆನ್ನಾಗಿ ಆಗಲು ಮತ್ತು ಕೂದಲು ಉದುರುವುದು ನಿಲ್ಲಲು ಸಹಾಯವಾಗುತ್ತದೆ. ಬೊಜ್ಜನ್ನು ಕಡಿಮೆ ಮಾಡಲು ಕೂಡ ಈರುಳ್ಳಿಯು ಸಹಕಾರಿ. ಬೆಳ್ಳುಳ್ಳಿಯ ಇನ್ನೊಂದು ಅದ್ಭುತ ಗುಣವೆಂದರೆ ಅದು ನರದ ಶಕ್ತಿಯನ್ನು ಹೆಚ್ಚಿಸುತ್ತದೆ. ಹಾಗಾಗಿ ಸಯಾಟಿಕಾದಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರಿಗೆ ಈರುಳ್ಳಿ ತುಂಬಾ ಲಾಭದಾಯಕ.
ಕಫದ ಸಮಸ್ಯೆಯಿಂದ ಬಳಲುತ್ತಿದ್ದು ಕಫ ಹೊರಗೆ ಬರುತ್ತಿಲ್ಲದಿದ್ದರೆ ಎರಡು ಚಮಚದಷ್ಟು ಈರುಳ್ಳಿ ರಸ, ಅರ್ಧ ಚಮಚದಷ್ಟು ಶುಂಠಿ ರಸ, ಅರ್ಧ ಚಮಚದಷ್ಟು ತುಳಸಿ ಎಲೆಗಳ ರಸ ಮತ್ತು ಒಂದು ಚಮಚ ಜೇನುತುಪ್ಪವನ್ನು ಸೇರಿಸಿ ದಿನಕ್ಕೆ ಒಂದು ಅಥವಾ ಎರಡು ಬಾರಿ ಸೇವಿಸಿದರೆ ಕಫ ಹೊರಗೆ ಬಂದು ಸಮಸ್ಯೆ ನಿವಾರಣೆಯಾಗುತ್ತದೆ.
ಈರುಳ್ಳಿ ಒಳ್ಳೆಯ ಜೀರ್ಣಕಾರಿಯೂ ಹೌದು ಹಾಗಾಗಿ ಅಜೀರ್ಣ ಇರುವವರಿಗೆ ಹೆಚ್ಚಿನ ಪ್ರಮಾಣದಲ್ಲಿ ಈರುಳ್ಳಿಯನ್ನು ಹಾಕಿ ಹೆಸರುಬೇಳೆಯ ತಿಳಿಸಾರು ಮಾಡಿ ಊಟಕ್ಕೆ ನೀಡಿದರೆ ಅಜೀರ್ಣದ ಸಮಸ್ಯೆ ತುಂಬಾ ಚೆನ್ನಾಗಿ ಹತೋಟಿಗೆ ಬರುತ್ತದೆ. ಜೊತೆಗೆ ಶಕ್ತಿ ವೃದ್ಧಿಯೂ ಆಗುತ್ತದೆ. ಒಟ್ಟಿನಲ್ಲಿ ಈರುಳ್ಳಿಯನ್ನು ಸರಿಯಾಗಿ ಬಳಸಿಕೊಂಡರೆ ಅದು ಕೇವಲ ತರಕಾರಿಯಲ್ಲ ಅದ್ಭುತ ಔಷಧ.(ಬರಹ-ಡಾ|| ವೆಂಕಟ್ರಮಣ ಹೆಗಡೆ
ವೇದ ವೆಲ್ನೆಸ್ ಸೆಂಟರ್, ನಿಸರ್ಗಮನೆ, ಶಿರಸಿ, ಉ.ಕನ್ನಡ)
ಸುದ್ದಿದಿನ.ಕಾಂ|ವಾಟ್ಸಾಪ್|9980346243

-
ದಿನದ ಸುದ್ದಿ7 days agoಮಾಯಕೊಂಡ ಶಾಸಕ ಕೆ.ಎಸ್. ಬಸವಂತಪ್ಪ ಸಚಿವರಾಗಿ ಆಯ್ಕೆ: ದಾವಣಗೆರೆಯಲ್ಲಿ ಸಂಭ್ರಮ ಆಚರಣೆ
-
ಅಂತರಂಗ3 days agoಪ್ರಪ್ರಥಮ ಮಹಿಳಾ ಸಾಹಿತ್ಯ ಸಮ್ಮೇಳನ : ಸರ್ವ ಕ್ಷೇತ್ರದಲ್ಲಿಯೂ ರಾರಾಜಿಸುವ ಶಿಖರ ಶಿರೋಮಣಿಗಳು
-
ದಿನದ ಸುದ್ದಿ3 days agoನಾನೇ ಮುಖ್ಯಮಂತ್ರಿ ಇದ್ದಂತೆ : ಶಾಸಕ ಶಿವಗಂಗಾ ಬಸವರಾಜ್
-
ದಿನದ ಸುದ್ದಿ4 days agoದಾವಣಗೆರೆ ವಿಶ್ವವಿದ್ಯಾಲಯ | ಗುಣಮಟ್ಟದ ಸಂಶೋಧನೆ ಶೈಕ್ಷಣಿಕ ಪ್ರಗತಿ – ಜಾಗತಿಕ ಮಾನ್ಯತೆಯ ಮೂಲಾಧಾರ : ಕುಲಪತಿ ಪ್ರೊ. ಬಿ. ಇ. ರಂಗಸ್ವಾಮಿ


