Connect with us

ದಿನದ ಸುದ್ದಿ

ಮೈ ಟಿಪ್ಪು ಸುಲ್ತಾನ್ ಭೋಲ್ ರಹಾ ಹೂಂ..!

Published

on

  • ವಿವೇಕಾನಂದ. ಹೆಚ್.ಕೆ.

ರೆ ಇಸ್ಕಿ, ರೀ ಸಾಮಿ,
ಇದು 2019,
ನಮ್ದುಕೆ ಸತ್ತಿದ್ದು 1799.

ಈಗ ನೀವು ನಂದು ಹೆಸರು ಹಿಡ್ಕೊಂಡು ಜಗಳ ಆಡ್ತಿದೀರೀ. ನಿಮ್ದುಕೆ ನಾಚ್ಕೆ ಆಗೋದಿಲ್ಲ. ಆವತ್ತು ನಾನು ನಮ್ನಪ್ಪ ಹೆಂಗೋ ನಮ್ಗೆ ಬೇಕಾದಂಗೆ ನಮ್ಗೆ ತಿಳ್ದಂಗೆ ಬದುಕುದ್ವೀ. ನಿಮ್ಮನ್ನ ಕೇಳಿ ಬದ್ಕೋಕೆ ಆಗುತ್ತೇ….

ನಾನು ಮುಸಲ್ಮಾನ್,
ಎಲ್ಲದೂ ಅಲ್ಲಾದು ಕೃಪೆ.ನಿಮ್ಗೆ ಇದ್ದಂಗೆ ನಂಗೂನು ಆಸೆ ಇರೋದಿಲ್ಲೇ. ನಂಗೂ ರಾಜ ಆಗ್ಬೇಕು ಅಂತ ಆಸೆ ಇತ್ತು. ಅದ್ಕೆ ನಾನು ನಮ್ಮಪ್ಪ ಪೈಟ್ ಮಾಡಿದ್ವಿ. ಅರೆ ಆವಾಗ ತಾಖತ್ ಇದ್ದವ್ರು ಎಲ್ರೂ ಹಂಗೆ ಮಾಡ್ತಿದ್ರು. ನಾವು ಮಾಡುದ್ವಿ.

ಅರೆ ಇಸ್ಕಿ, ಕ್ಯಾರೇ ಹೋ,
ಪ್ರಜಾಭುತ್ವಕೀ, ಡೆಮಾಕ್ರಸೀಕೀ, ಸಂಧಾನಾಕಿ ಸಂವಿಧಾನಾಕೀ ಅದೂ ಇರೋವಾಗ್ಲೇ ನಿಮ್ದು ಎಂಎಲ್ಏಗಳು ನಮಕ್ ಹರಾಮ್ ಕೆಲ್ಸ ಮಾಡ್ತಿಲ್ವೇ, ದುಡ್ಡು ಕೊಟ್ಟು ಹೆಂಡಾಕೆ ಕೊಟ್ಟು, ಸೀರೆ ಪಂಚೆ ಕೊಟ್ಟು ಓಟ್ ತಗಂಡ್ತಿಲ್ಲೇ, ಆ ಕಡೆ ಈ ಕಡೆ ಕೋತಿ ತರಾ ಜಂಪ್ ಮಾಡ್ತಿಲ್ಲೇ, ಜನಕ್ಕೆ ಮೋಸ ಮಾಡಿ ದುಡ್ಡು ನುಂಗ್ತಿಲ್ಲೇ, ಆಗ್ದೇ ಇರೋರ್ಗೆ ಹೊಡಿಸ್ತಿಲ್ಲೇ, ದುಡ್ಗೆ ತಗಂಡು ಸರ್ಕಾರ ಬೀಳಿಸ್ತಿಲ್ಲೇ…..

ನಂಗೆ ಮಾತ್ರ ನಮಕ್ ಹರಾಮ್ ಅಂತಿರೀ.
ಅಲ್ರೀ, ನಿಮ್ದುಕೆ ದೇವೇಗೌಡ, ಯಡಿಯೂರಪ್ಪ, ಸಿದ್ದರಾಮಯ್ಯ ಅವರ ಮಕ್ಕಳ್ಗೆ ರಾಜಕೀಯದಲ್ಲಿ ಮುಂದೆ ತಂದಿಲ್ಲೇ. ಕರ್ನಾಟಕದಲ್ಲಿ ಬೇರೆ ಯಾರೂ ಇಲ್ವಾ, ಎಲ್ಲಾ ಸತ್ತು ಹೋಗಿದಾರಾ…

ಅಪ್ಪ ಮಕ್ಕಳು ಅಳಿಯ ಸೊಸೆ ಮಾತ್ರ ರಾಜಕೀಯಕ್ಕೆ ಬರ್ಬೇಕು. ಇದೇನು ನಮ್ದು ಕಾಲ್ದಂಗೆ ತಾಖತ್ ಇರೋ ರಾಜರ್ದು ಆಡಳಿತಾ. ಮಾತ್ಗೆ ಹೇಳ್ದೆ ನೀವೇ ಯೋಚ್ನೆ ಮಾಡಿ.

ಅಲ್ರೀ ನಾನು ನಿಮ್ಮ ದೇವಸ್ಥಾನಕ್ಕೆ ಹೊಡ್ದೆ ನಿಜ, ಹಂಗೆ ಹೆಲ್ಪೂನು ಮಾಡಿದ್ದೀನಿ. ನೋಡ್ರಿ ನಮ್ದು ಇಸ್ಲಾಂ ಧರ್ಮ. ಅದಕ್ಕೆ ನಾನು ಸಪೋರ್ಟ್ ಮಾಡ್ದೆ. ಯಾಕೆ ಆ ಬಿಳಿ ಚರ್ಮದವರು ನಿಮ್ದು ಕಿತ್ತೂರು ಚೆನ್ನಮ್ಮ, ಲಕ್ಷೀಬಾಯಿ, ಆಜಾದ್, ಭಗತ್ ಸಿಂಗ್ ಎಲ್ರೂಗೂ ಸಾಯಿಸಿಲ್ವೇ, ಎಲ್ಲಿಂದಲೋ ಬಂದ ಆ ಕಳ್ನನ್ಮಮಕ್ಳು ನನ್ನೂ ಸಾಯಿಸಿದ್ರು, ನನ್ನ ಮಕ್ಕಳ್ಗೂ ಜೈಲಿಗೆ ಹಾಕಿದ್ರು.
ನೀವೂನು ನಮ್ದು ಮಸೀದಿಗೆ ಒಡ್ದಾಕ್ಜಿದ್ರಿ ಜ್ಞಾಪಕಕ್ಜೆ ಐತೆ, ಅಯೋದ್ಯಾದಾಗ. ಅಲ್ವಾ. ಹಂಗೆ ನಾನು ನನ್ಗೆ ಆಪೋಸ್ ಮಾಡ್ದೋರ್ಗೆ ಸಾಯುಸ್ದೆ. ಅದು ತಪ್ಪಾ….

ಇಂದ್ರಾಗಾಂಧಿ ಸತ್ತಾಗ ಸಿಖ್ಖರನ್ನ ಸಾಯಿಸಿಲ್ವ, ಗುಜರಾತಲ್ಲಿ ಸಾಬರನ್ನ ಸಾಯಿಸಿಲ್ವ, ಇಂಗ್ಲೀಷೋರು ಜಲಿಯನ್ ವಾಲಾಬಾಗ್ ನಲ್ಲಿ ಎಷ್ಟೊಂದು ಜನ್ರನ್ನ ಸಾಯಿಸಿಲ್ವಾ, ಹಂಗೇ ನೋಡ್ರಿ ಅವರವರ ಕಾಲದಲ್ಲಿ ಏನೇನೂ ಆಗಿರುತ್ತೆ. ಒಳ್ಳೇದು ಕೆಟ್ಟದ್ದು. ಅದೇ ಇತ್ಯಾಸ. ಅದನ್ನ ಹೆಂಗಿದೆಯೋ ಹಂಗೇ ಓದ್ಸಿ…

ನಾನು ತುಂಬಾ ಒಳ್ಳೆಯವನು ಅಂತಾ ಹೇಳ್ತಾ ಇಲ್ಲ. ನೀವೆಲ್ಲಾ ನಂಗೆ ನೆನಪ್ಸಕಳ್ಳಿ ಅಂತಾನೂ ಕೇಳ್ತಾ ಇಲ್ಲ. ಇವಾಗ ನನ್ದು ಹುಟ್ದಾಬ್ವಾನೋ ಸತ್ತಾಬ್ಬಾನೋ ಮಾಡಿದ್ರೆ ಏನ್ ಪ್ರಯೋಜನ. ಸಾಮಿ ನಾನು ನನ್ ಮಕ್ಳು ಮೊಮ್ಮಕ್ಳು ಎಲ್ಲಾ ಸತ್ತೋಗಿದೀವಿ.
ಈವಾಗ ನೀವು ಬದ್ಕಿರೋರು. ಏನೋ ಈವಾಗ ಇರೋರು ಭಾಳ ಬುದ್ದಿವಂತ್ರಂತೆ.
ಚೆನ್ನಾಗಿ ಬದ್ಕಿ.

ನೋಡಿ, ನೀವೇ ನಮ್ದುಕೆ ಹೆಸ್ರು ಹೇಳಿ ಕಿತ್ತಾಡ್ ಬ್ಯಾಡ್ರಿ. ಇಷ್ಟ ಇರೋರು ನೆನಪಿಸ್ಕಳ್ರಿ, ಇಲ್ದೇ ಇರೋರು ಬಿಟ್ಟಾಕಿ.
ಇತ್ಯಾಸ್ದಾಗ ಒಳ್ಳೇದು ಕೆಟ್ಟದ್ದು ಇನ್ನೂ ಏನೇನೋ ನೆಡ್ದೈತೆ. ಒಳ್ಳೇದು ಮಾತ್ರ ತಗಳ್ಳಿ. ನಿಮ್ಗೆ ಗೊತ್ತಿಲ್ದೆ ಮಣ್ಣಾಗಿ ಹೋಗಿರೋ ಎಷ್ಟೋ ಇಷ್ಯಾ ಐತೆ.
ಆ ಇಷ್ಯಾ ಯಾವೊತ್ತೋ ಆಚೆ ಬರೊಲ್ಲಾ..

ಅಂದಂಗೆ, ನಮ್ ರಾಜರ್ರು ಅದೇ ಒಡೆಯರ್ ಅವರಿಗೆ ಕೇಳ್ದೆ ಅಂತೇಳಿ. ಏನೋ ಆವಾಗ ನೆಡಿದಿದ್ದು ನಡೆದೋಯ್ತು. ಕ್ಷಮ್ಸಿಬಿಡಿ. ಹಳೇ ಕಾಲಕ್ಕಿಂತ ಹೊಸ ಕಾಲ ಚೆನ್ನಾಗಿರ್ಬೇಕು. ನಮ್ ಕಾಲ್ದಾಗ ಲೈಪ್ ಎಂಜಾಯ್ ಮಾಡಾಕೆ ಆಗ್ತಾ ಇರ್ಲಿಲ್ಲ. ಬರೀ ಯುದ್ಧ ಯುದ್ಧ ಯುದ್ಧ. ಆದ್ರೆ ಈಗ ನಿಮ್ಗೆ ಎಲ್ಲಾ ಸೌಕರ್ಯ ಐತೆ. ಖುಷಿ ಖುಷಿಯಾಗಿರ್ರಿ.

ನಂಗೇ ಸತ್ ಮ್ಯಾಲೆ ಗೊತ್ತಾಯ್ತು. ಹಿಂದೂ ಮುಸ್ಲಿಂ ಕ್ರಿಶ್ಚಿಯನ್ ಎಲ್ಲಾ ಸುಳ್ಳು. ಬದ್ಕಿರೋವಾಗ ನಾವೇ ಗಾಂಚಾಲಿ ಮಾಡ್ಕೊಂದು ಇದೆಲ್ಲಾ ಸ್ಪಷ್ಟಿ ಮಾಡ್ಕೊಂಡ್ವಿ. ಸತ್ ಮ್ಯಾಲೆ ಎಲ್ಲಾ ಒಂದೇ. ಮಣ್ಣಾಗೋದು.

ಇರ್ಲಿ, ನಿಮ್ಗೆ ಕೈ ಮುಗ್ದು ಕೇಳ್ಜೋತೀನಿ. ನನ್ ಹೆಸ್ರು ಹೇಳ್ಕೊಂಡು ರಾಜಕೀಯ ಮಾಡಬ್ಯಾಡ್ರಿ. ಉತ್ತರ ಕರ್ನಾಟಕದಾಗ ನೆರೆ ಹಾವಳಿ ಬಂದು ಜನ ತುಂಬಾ ಕಷ್ಟ ಪಡ್ತಿದಾರಂತೆ. ದಯಮಾಡಿ. ಅವರ ಕಡೆ ಗಮನ ಕೊಡಿ. ಸತ್ ಇರೋ ನನ್ನನ್ನ ಹಿಡ್ಕೊಂಡು ಯಾಕ್ ನೇತಾಡ್ತೀರೀ..

ಎಲ್ರಿಗೂ ಒಳ್ಳೇದಾಗ್ಲಿ, ನಾನು ಹೋಗ್ ಬತ್ತೀನಿ…

ಸುದ್ದಿದಿನ.ಕಾಂ|ವಾಟ್ಸಾಪ್|9980346243

ದಿನದ ಸುದ್ದಿ

ದಾವಣಗೆರೆ | ಇಂದು ಕರೆಂಟ್ ಇರಲ್ಲ

Published

on

ಸುದ್ದಿದಿನ,ದಾವಣಗೆರೆ:ಬೆಸ್ಕಾಂ ಜಗಳೂರು ಉಪವಿಭಾಗದ ವ್ಯಾಪ್ತಿಯಲ್ಲಿ ತುರ್ತು ಜಂಗಲ್ ಕಟಿಂಗ್ ಮತ್ತು ಫೀಡರ್‌ಗಳ ನಿರ್ವಹಣಾ ಕಾಮಗಾರಿಗಳನ್ನು ಹಮ್ಮಿಕೊಂಡಿರುವುದರಿಂದ ಮೇ 26 ರಂದು ಬೆಳಿಗ್ಗೆ 09-00 ರಿಂದ ಸಂಜೆ 05-00 ರವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.

ಕೊರಚರ ಹಟ್ಟಿ ಸರ್ಕಲ್, ಅಂಜನೆಯ ಬಡಾವಣೆ, ಶಕ್ತಿ ನಗರ, ಭಗೀರಥ ಲೇಔಟ್ ಸರ್ಕಲ್, ಕೊಟ್ಟುರೇಶ್ವರ ಬಡಾವಣೆ, , ಡಿ.ಸಿ.ಎಂ ಎಬಿಸಿ ಬ್ಲಾಕ್, ರಾಜೇಂದ್ರ ಬಡಾವಣೆ, ಭೂಮಿಕಾ ನಗರ, ಎಸ್.ಎಸ್ ಹೈ-ಟೆಕ್ ಮೇನ್ ರೋಡ್, ಶೇಶಾಂ ಲೇಔಟ್, ಹೊಂ ಟೈಲಾರ್ ರೋಡ್, ಬನಶಂಕರಿ ದೇವಸ್ಥಾನ, ಶ್ರೀರಾಮ್ ಬಡಾವಣೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳು, ಎಮ್.ಸಿ.ಸಿ. ಎ ಬ್ಲಾಕ್, ನಿಜಲಿಂಗಪ್ಪ ಲೇಔಟ್, ಅಶ್ವಿನಿ ಆರ್ಯುವೇಧಿಕ್ ಆಸ್ಪತ್ರೆ, ಜೊಲ್ಲಿಗುರು ಕಾಂಪೌಡ್, ಮುದ್ದೊಳ್ಳಿ ತೋಟ, ನರಹರಿಶೇಟ ಕಲ್ಯಾಣ ಮಂದಿರ, ಪೊಲೀಸ್ ಹಳೆಯ ವಸತಿ ಗೃಹಗಳು, ವಿನೋಬ ನಗರ 1ನೇ ಮತ್ತು 2ನೇಯ ಮುಖ್ಯ ರಸ್ತೆ ಚರ್ಚ್ ರಸ್ತೆ ಹಾಗೂ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ಹಾಗೂ ಬೆಳಗ್ಗೆ 10:00 ಗಂಟೆಯಿಂದ ಸಂಜೆ 5:00 ಗಂಟೆಯವರೆಗೆ ಬಿದರಕೆರೆ ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಎಫ್- ಕಟ್ಟಿಗೆಹಳ್ಳಿ, ಎನ್‌ಜೆವೈ (NJY) ಜಗಳೂರು ವಿದ್ಯುತ್ ವಿತರಣಾ ಕೇಂದ್ರಕ್ಕೆ ಒಳಪಡುವ ಅರಿಶಿನಗುಂಡಿ ಹಾಗೂ ಜ್ಯೋತಿಪುರ ಎನ್‌ಜೆವೈ (NJY) 11ಕೆವಿ ಮಾರ್ಗಗಳು ಸೇರಿದಂತೆ ವಿವಿಧ ಗ್ರಾಮಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಅಲ್ಪಸಂಖ್ಯಾತರ ಇಲಾಖೆ ನಿರ್ದೇಶಕ ಜಿಲಾನಿ ಎಚ್. ಮೊಕಾಶಿ ವಿರುದ್ಧ ಲೋಕಾಗೆ ದೂರು

Published

on

ಸುದ್ದಿದಿನ,ದಾವಣಗೆರೆ:ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ದೂರು ನೀಡಿ ನಿಗಧಿತ ಅವಧಿ ಮುಕ್ತಾಯವಾದರೂ ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರಿದ ಅಲ್ಪಸಂಖ್ಯಾತರ ನಿರ್ದೇಶನಾಲಯದ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರ ವಿರುದ್ಧ ಕರ್ತವ್ಯ ಲೋಪದ ಅಡಿಯಲ್ಲಿ ಪ್ರಕರಣ ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ವಿದ್ಯಾರ್ಥಿಗಳ ಪ್ರತಿದಿನದ ಹಾಜರಾತಿಯನ್ನು ಬಯೋಮೆಟ್ರಿಕ್ ಹಾಜರಾತಿ ವ್ಯವಸ್ಥೆಯ ಮೂಲಕ ಕಡ್ಡಾಯವಾಗಿ ನಿರ್ವಹಿಸಲು ದಿನಾಂಕ: 12-07-2022 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರು ಸುತ್ತೋಲೆ ಹೊರಡಿಸಿದ್ದಾರೆ.

ಸದರಿ ಸುತ್ತೋಲೆಯಲ್ಲಿ ‘ಎಲ್ಲಾ ನಿಲಯಪಾಲಕರು/ ಮೇಲ್ವಿಚಾರಕರು ಬೆಲಗ್ಗೆ ತಿಂಡಿ ಸಮಯದಲ್ಲಿ ಹಾಗೂ ರಾತ್ರಿ ಊಟದ ಸಮಯದಲ್ಲಿ ವಸತಿ ಶಾಲೆ/ಕಾಲೇಜು ಹಾಗೂ ವಿದ್ಯಾರ್ಥಿ ನಿಲಯಗಳಲ್ಲಿ ಕಡ್ಡಾಯವಾಗಿ ಹಾಜರಿದ್ದು, ವಿದ್ಯಾರ್ಥಿಗಳ ಬಯೋಮೆಟ್ರಿಕ್ ಹಾಜರಾತಿಯನ್ನು ಪಡೆಯತಕ್ಕದ್ದು’ ಎಂಬುದಾಗಿ ಸೂಚಿಸಲಾಗಿದೆ.

‘ಬಯೋಮೆಟ್ರಿಕ್ ಹಾಜರಾತಿ ಪಡೆಯದೆ ಆಹಾರ ವೆಚ್ಚ ಭರಿಸಿದ್ದಲ್ಲಿ ಸಂಬAಧಪಟ್ಟ ನಿಲಯಪಾಲಕರು, ಅಲ್ಪಸಂಖ್ಯಾತರ ತಾಲ್ಲೂಕು ವಿಸ್ತರಣಾಧಿಕಾರಿಗಳು/ ಪ್ರಾಂಶುಪಾಲರು, ಜಿಲ್ಲಾ ಅಧಿಕಾರಿಗಳನ್ನು ನೇರವಾಗಿ ಹೊಣೆಗಾರರನ್ನಾಗಿ ಮಾಡಿ ಅವರ ಮೇಲೆ ಶಿಸ್ತಿನ ಕ್ರಮ ಜರುಗಿಸಲಾಗುವುದು’ ಎಂಬುದಾಗಿ ಕಟ್ಟುನಿಟ್ಟಿನ ಆದೇಶ ಹೊರಡಿಸಲಾಗಿರುತ್ತದೆ.

ಆದರೆ ದಾವಣಗೆರೆ ಜಿಲ್ಲೆಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆಗಳಲ್ಲಿ ಬಯೋಮೆಟ್ರಿಕ್ ವ್ಯವಸ್ಥೆಯನ್ನು ಅಳವಡಿಸಿಕೊಳ್ಳದೆ ಸರ್ಕಾರದ ಆದೇಶವನ್ನು ಉಲ್ಲಂಘನೆ ಮಾಡಿರುವ ಮಾಹಿತಿ ಆಧಾರದಲ್ಲಿ ದಿನಾಂಕ: 28-11-2025 ರಂದು ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರಿಗೆ ದಿನಾಂಕ: 28-11-2025 ರಂದು ದೂರು ನೀಡಿ ‘ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಅಳವಡಿಸಿರುವ ಬಯೋಮೆಟ್ರಿಕ್ ಹಾಜರಾತಿ ನಿರ್ವಹಣೆಯನ್ನು ತನಿಖೆಗೆ ಒಳಪಡಿಸುವಂತೆ’ ಕೋರಲಾಗಿತ್ತು.

ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ದಾವಣಗೆರೆ ಇವರು ನೀಡಿದ ಹಿಂಬರಹದಲ್ಲಿ ‘ಈ ಸಂಬAಧ ಜಿಲ್ಲೆಯ ಕೆಲವು ವಸತಿ ನಿಲಯಗಳಲ್ಲಿ ಬಯೋಮೆಟ್ರಿಕ್ ಯಂತ್ರದಲ್ಲಿನ ತಾಂತ್ರಿಕ ದೋಷದಿಂದ ವಿದ್ಯಾರ್ಥಿಗಳ ಹಾಜರಾತಿಯನ್ನು ದಾಖಲಿಸಲು ಸಾಧ್ಯವಾಗಿರುವುದಿಲ್ಲವೆಂದು ಹಾಗೂ ಮತ್ತೆ ಕೆಲವು ವಸತಿ ಶಾಲೆ ಮತ್ತು ವಸತಿ ನಿಲಯಗಳಿಗೆ ಹೊಸ ಬಯೋಮೆಟ್ರಿಕ್ ಯಂತ್ರವನ್ನು ಪೂರೈಕೆ ಮಾಡುವಂತೆ ಪ್ರಾಂಶುಪಾಲರುಗಳು ಮತ್ತು ತಾಲ್ಲೂಕು ವಿಸ್ತರಣಾಧಿಕಾರಿಗಳು ಕೋರಿರುವ ಪತ್ರವನ್ನು ಲಗತ್ತಿಸಿ’ ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶಕರು, ಬೆಂಗಳೂರು ಇವರಿಗೆ ಪತ್ರ ಬರೆಯಲಾಗಿದೆ ಎಂಬುದಾಗಿ ತಿಳಿಸಿರುತ್ತಾರೆ.

ಆದ ಕಾರಣ ದಿನಾಂಕ: 17-02-2026 ರಂದು ನಿರ್ದೇಶಕರು, ಅಲ್ಪಸಂಖ್ಯಾತರ ನಿರ್ದೇಶನಾಲಯ, ಬೆಂಗಳೂರು ಇವರಿಗೆ ದೂರು ನೀಡಿ ದಾವಣಗೆರೆ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಸತಿ ಶಾಲೆ ಹಾಗೂ ವಸತಿ ನಿಲಯಗಳಲ್ಲಿ ಇಲಾಖೆಯ ನಿಯಮಾನುಸಾರ ಬಯೋಟ್ರಿಕ್ ಹಾಜರಾತಿ ಅಳವಡಿಸಿಕೊಳ್ಳದೆ ಸರ್ಕಾರಕ್ಕೆ ವಂಚಿಸಿರುವ ಬಗ್ಗೆ ಸೂಕ್ತ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಂಡು, ಕೈಗೊಂಡ ಕ್ರಮದ ವರದಿಯನ್ನು ಒಂದು ತಿಂಗಳ ಒಳಗಾಗಿ ನೀಡುವಂತೆ ಸಾರ್ವಜನಿಕ ಹಿತಾಸಕ್ತಿ ಅಡಿಯಲ್ಲಿ ಕೋರಲಾಗಿತ್ತು. ಆದರೆ ದೂರು ನೀಡಿ 3 ತಿಂಗಳು ಕಳೆದರೂ ಅಲ್ಪಸಂಖ್ಯಾತರ ನಿರ್ದೇಶನಾಲಯ ನಿರ್ದೇಶಕರಾದ ಜಿಲಾನಿ ಎಚ್. ಮೊಕಾಶಿ ಇವರು ಯಾವುದೇ ಕ್ರಮ ಕೈಗೊಳ್ಳದ ಕಾರಣ ಕರ್ತವ್ಯ ಲೋಪದ ಅಡಿಯಲ್ಲಿ ದೂರು ದಾಖಲಿಸಿರುವುದಾಗಿ ವಕೀಲ ಡಾ.ಕೆ.ಎ.ಓಬಳಪ್ಪ ತಿಳಿಸಿದ್ದಾರೆ.

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

ದಿನದ ಸುದ್ದಿ

ಬಳ್ಳಾರಿ ಗಾಂಧಿನಗರ ಠಾಣೆಯ ವ್ಯಾಪ್ತಿ ಜೂಜಾಟ | ಠಾಣೆಯ ಅಧಿಕಾರಿಗಳು ಮೌನ ; ಕ್ರಮ ಕೈಗೊಳ್ತಾರಾ ಎಸ್ ಪಿ..?

Published

on

ಗಿರೀಶ್ ಬಳ್ಳಾರಿ

ಸುದ್ದಿದಿನ,ಬಳ್ಳಾರಿ:ನಗರದ ಗಾಂಧಿ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ರಾತ್ರಿ 10 ಗಂಟೆಯ ನಂತರ ಕೊಂಡಯ್ಯ ಫ್ಯಾಕ್ಟರಿಯ ಹುಸೇನ್ ನಗರದ ಜಾಲಿ ಬೇಲಿಯ ಒಳಭಾಗದಲ್ಲಿ ಅಕ್ರಮವಾಗಿ ಇಸ್ಪೀಟ್ ಆಡುತ್ತಿದ್ದಾರೆ ಜೊತೆಗೆ ಆ ಪ್ರದೇಶಕ್ಕೆ ಹೋಗುವ ಈ ಜೂಜಾಟ ಆಡುವವರು ಬೈಕ್ ಗಳ ಶಬ್ದ ಮಾಡಿಕೊಂಡು, ಮನೆಗಳಲ್ಲಿ ಇರುವ ಮಹಿಳೆಯರಿಗೆ ತೊಂದರೆ ಉಂಟು ಮಾಡುತ್ತಿದ್ದಾರೆ ಎನ್ನುವ ಆರೋಪ ಸ್ಥಳೀಯ ನಿವಾಸಿಗಳಿಂದ ಕೇಳಿ ಬಂದಿದೆ.

ಇನ್ನು ಈ ಇಸ್ಪೀಟ್ ಜೂಜಾಟ ಆಡಿಸುತ್ತಿರುವ ವ್ಯಕ್ತಿಗಳು ದುಬ್ಬ ರಾಜು, ದಾದು ಮತ್ತು ಜಾನಿ, ರಘು ಎಂದು ತಿಳಿದು ಬಂದಿದೆ. ಇನ್ನು ಗಾಂಧಿನಗರ ಠಾಣೆಯ ಸಿಪಿಐ ಮತ್ತು ಪಿ.ಎಸ್.ಐ ಮತ್ತು ಕ್ರೈಂ ಸಿಬ್ಬಂದಿಗಳಿಗೆ ಮಾಹಿತಿ ಇದ್ದರು ಅವರಿಂದ ಹಣ ಪಡೆದುಕೊಂಡು ಈ ಜೂಜಾಟ ಆಡಿಸುತ್ತಿರುವ ಮಾಹಿತಿ ಸಹ ಲಭ್ಯವಾಗಿದೆ.

ಸಾಧಿಕ್ ಪೊಲೀಸರಿಗೆ ಸಾಥ್

ಇನ್ನು ಸಾಧಿಕ್ ಎನ್ನುವ ವ್ಯಕ್ತಿ ಗಾಂಧಿನಗರ ಠಾಣೆಯ ಅನೇಕ ಪೊಲೀಸರಿಗೆ ಪರಿಚಯ ಇದ್ದಾನೆ ಅಂತ ಹೇಳಿ ಜನ ಸಾಮಾನ್ಯರ ಮೇಲೆ ದೌರ್ಜನ್ಯ, ದಬ್ಬಾಳಿಕೆ ಮಾಡಿ ಅವರ ವಿರುದ್ಧ ಠಾಣೆಯಲ್ಲಿ ಕೇಸ್ ಹಾಕಿಸುತ್ತೇನೆ ಎಂದು ಹಣ ವಸೂಲಿ ಸಹ ಮಾಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ.

ಇನ್ನು ಬಳ್ಳಾರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ನ ಪನ್ನಿಕರ್ ಪೊಲೀಸ್ ಠಾಣೆಯ ಸಿಪಿಐ ಮತ್ತು ಪಿಎಸ್ಐ ಮತ್ತು ಸಿಬ್ಬಂದಿಗಳ ವಿರುದ್ಧ ಕ್ರಮ ತೆಗೆದುಕೊಳ್ಳುತ್ತಾರೋ ಕಾದು ನೋಡಬೇಕಿದೆ. ಇನ್ನು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರಿಗೆ ದೂರವಾಣಿ ಮೂಲಕ ಸಂಪರ್ಕಿಸಿದಾಗ ಅವರು ಕರೆಯನ್ನು ಸ್ವೀಕರಿಸಿಲಿಲ್ಲ.

“ಇನ್ನು ಗಾಂಧಿನಗರ ಪೊಲೀಸ್ ಠಾಣೆಯ ಪೊಲೀಸ್ ಸಬ್ ಇನ್ಸ್ಪೆಕ್ಟರ್ ರವಿಚಂದ್ರ ಅವರಿಗೆ ದೂರವಾಣಿ ಮೂಲಕ ಮಾತನಾಡಿಸಿದಾಗ ನಮ್ಮ ಗಮನಕ್ಕೆ ಇಲ್ಲ, ಗೋತ್ತಾದ್ರೆ ರೈಡ್ ಮಾಡುತ್ತೇವೆ ಎಂದರು.”

ಸುದ್ದಿದಿನ.ಕಾಂ|ವಾಟ್ಸಾಪ್|9980346243

Continue Reading

Trending